Tag: Karnataka Election 2018

  • ಹ್ಯಾಟ್ರಿಕ್ ಠೇವಣಿ ಕಳೆದುಕೊಂಡ ಕನ್ನಡ ಹೋರಾಟಗಾರ ವಾಟಾಳ್!

    ಹ್ಯಾಟ್ರಿಕ್ ಠೇವಣಿ ಕಳೆದುಕೊಂಡ ಕನ್ನಡ ಹೋರಾಟಗಾರ ವಾಟಾಳ್!

    ಚಾಮರಾಜನಗರ: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಮ್ಮ ಠೇವಣಿ ಕಳೆದುಕೊಂಡಿದ್ದಾರೆ.

    ವಾಟಾಳ್ ನಾಗರಾಜ್ ಚಾಮರಾಜನಗರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಈಗ ವಾಟಾಳ್ ತಮ್ಮ ಹ್ಯಾಟ್ರಿಕ್ ಠೇವಣಿ ಕಳೆದುಕೊಂಡಿದ್ದಾರೆ.

    ಈ ಬಾರಿಯ ಚುನಾವಣೆಯಲ್ಲಿ ವಾಟಾಳ್ ನಾಗರಾಜ್ 5977 ಮತ ಪಡೆದಿದ್ದು, ಕಳೆದ ಎರಡು ಚುನಾವಣೆಯಲ್ಲೂ ಠೇವಣಿ ಕಳೆದುಕೊಂಡಿದ್ದರು.

  • ಕರುನಾಡ ತೀರ್ಪು: ಮತ ಎಣಿಕೆ ಲೈವ್ ಬ್ಲಾಗ್

    ಕರುನಾಡ ತೀರ್ಪು: ಮತ ಎಣಿಕೆ ಲೈವ್ ಬ್ಲಾಗ್

    ಬೆಂಗಳೂರು: ಇವತ್ತು ಕರ್ನಾಟಕದ ಪಾಲಿಗೆ ನಿರ್ಣಾಯಕ ದಿನ. ಮುಂದಿನ ಸರ್ಕಾರ ಯಾರದ್ದು ಎಂದು ಗೊತ್ತಾಗಲಿರುವ ಮಹತ್ವದ ದಿನ. ಸಿಎಂ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿ ಹಲವು ಘಟಾನುಘಟಿ ರಾಜಕಾರಣಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರ ಆಗಲಿದೆ.

    ಬೆಳಗ್ಗೆ 8 ಗಂಟೆಯಿಂದ ರಾಜ್ಯದ 38 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಶುರುವಾಗಿದ್ದು, ಬೆಳಗ್ಗೆ 11 ಗಂಟೆ ಹೊತ್ತಿಗೆ ಸ್ಪಷ್ಟ ಫಲಿತಾಂಶ ಲಭ್ಯವಾಗಲಿದೆ. ಹೀಗಾಗಿ ಕರ್ನಾಟಕ ಚುನಾವಣೆಗೆ ಸಂಬಂಧಿಸಿದ ಲೈವ್ ಮಾಹಿತಿ ಇಲ್ಲಿದೆ.

    ಬೆಳಗ್ಗೆ 8.40: ಬೀದರ್ ದಕ್ಷಿಣದಲ್ಲಿ ಅಶೋಕ್ ಖೇಣಿಗ ಹಿನ್ನಡೆ

    ಬೆಳಗ್ಗೆ 8.35: ದಕ್ಷಿಣ ಕನ್ನಡದ 5 ಜಿಲ್ಲೆಗಳಲ್ಲಿ ಬಿಜೆಪಿಗೆ ಮುನ್ನಡೆ

    ಬೆಳಗ್ಗೆ 8.33: 4ರಲ್ಲಿ ಜೆಡಿಎಸ್, 2ರಲ್ಲಿ ಕಾಂಗ್ರೆಸ್, 1ರಲ್ಲಿ ಬಿಜೆಪಿಗೆ ಮುನ್ನಡೆ

    ಬೆಳಗ್ಗೆ 8.20: ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯನವರಿಗೆ 3479 ಮತಗಳಿಂದ ಹಿನ್ನಡೆ

    ಬೆಳಗ್ಗೆ 8.14: ದಕ್ಷಿಣ ಕನ್ನಡದಲ್ಲಿ ಬಿಜೆಪಿ-2, ಮೂರರಲ್ಲಿ ಕಾಂಗ್ರೆಸ್ ಗೆ ಮುನ್ನಡೆ

    ಬೆಳಗ್ಗೆ 8.12: ಉಡುಪಿಯ 5 ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ

    ಬೆಳಗ್ಗೆ 8.05: ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯನವರಿಗೆ ಆರಂಭಿಕ ಹಿನ್ನಡೆ – ಜಿ. ಟಿ ದೇವೇ ಗೌಡರಿಗೆ ಮುನ್ನಡೆ

    ಬೆಳಗ್ಗೆ 8.05: ಬೆಂಗಳೂರಿನಲ್ಲಿ ಶಾಂತಿನಗರದ ಹ್ಯಾರಿಸ್ ಗೆ ಮುನ್ನಡೆ, ಮಂಗಳೂರಿನಲ್ಲಿ ರಮಾನಾಥ್ ರೈಗೆ ಮುನ್ನಡೆ

    ಬೆಳಗ್ಗೆ 7.52: ಕಾಂಗ್ರೆಸ್-08, ಬಿಜೆಪಿ-07, ಜೆಡಿಎಸ್-01 ಅಂಚೆ ಮತಗಳಲ್ಲಿ ಮುನ್ನಡೆಯನ್ನು ಸಾಧಿಸಿವೆ.

    ಬೆಳಗ್ಗೆ 744: ದೆಹಲಿಯ ಎಐಸಿಸಿ ಕಚೇರಿಯಲ್ಲಿ ಹೋಮ-ಹವನ

    ಬೆಳಗ್ಗೆ 7.41: ಇವಿಎಂಗೂ ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ಮಂಗಳೂರಲ್ಲಿ ಆರಂಭ, ರಾಜ್ಯಾದ್ಯಂತ ಅಂಚೆ ಮತಗಳ ಎಣಿಕೆ ಕಾರ್ಯ ಪ್ರಾರಂಭ

    ಬೆಳಗ್ಗೆ 7.35: ಮುಖ್ಯಮಂತ್ರಿಗಳ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸ್ಟ್ರಾಂಗ್ ರೂಂ ಓಪನ್

    ಬೆಳಗ್ಗೆ 7.31: ಕಾರವಾರದಲ್ಲಿ ಅರ್ಧ ಗಂಟೆಗೂ ಮೊದಲೇ ಮತ ಎಣಿಕೆ ಆರಂಭ, ಜೆಡಿಎಸ್ ನ ಆನಂದ್ ಅಸ್ನೋಟಿಕರ್, ಭಟ್ಕಳದಲ್ಲಿ ಕಾಂಗ್ರೆಸ್ ಗೆ ಮುನ್ನಡೆ

    ಬೆಳಗ್ಗೆ 7.14: ಕರ್ನಾಟಕ ಫಲಿತಾಂಶ- ಎಣಿಕೆ ಕೇಂದ್ರಗಳತ್ತ ಅಭ್ಯರ್ಥಿಗಳು

    ಬೆಳಗ್ಗೆ  6:40 -ಮತ ಎಣಿಕೆ ಕಾರ್ಯಕ್ಕಾಗಿ ಸುಮಾರು 16,662 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಪೈಕಿ 3,410 ಮತ ಎಣಿಕೆ ಮೆಲ್ವೀಚಾರಕರು, 3,410 ಎಣಿಕೆ ಸಹಾಯಕರು ಮತ್ತು 3,410 ಮೈಕ್ರೋ ಅಬ್ಸರ್‍ವರ್ ಗಳು ಇರಲಿದ್ದಾರೆ. ಸುಮಾರು 888 ಮಂದಿ ಅಂಚೆ ಮತಪತ್ರಗಳನ್ನು ಎಣಿಸಲಿದ್ದಾರೆ. ಇವರುಗಳ ಜೊತೆಗೆ ಹೆಚ್ಚುವರಿಯಾಗಿ 5,544 ಮಂದಿ ಭದ್ರತಾ ಕೊಠಡಿಯಿಂದ ಇವಿಎಂಗಳನ್ನು ಮತ ಎಣಿಕೆ ಕೇಂದ್ರಕ್ಕೆ ತರಲು ನಿಯೋಜಿಸಲಾಗಿದೆ.

    ಬೆಳಗ್ಗೆ  6:37  – 222 ಮತಕ್ಷೇತ್ರಗಳ ಮತ ಎಣಿಕೆಗಾಗಿ ರಾಜ್ಯಾದ್ಯಂತ 38 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 5 ಕಡೆ, ತುಮಕೂರಿನಲ್ಲಿ 3 ಕಡೆ ಹಾಗೂ ಚಿತ್ರದುರ್ಗ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಲ್ಲಿ ತಲಾ 2 ಕಡೆಗಳಲ್ಲಿ ಹಾಗೂ ಇನ್ನುಳಿದ ಜಿಲ್ಲೆಗಳಲ್ಲಿ ತಲಾ ಒಂದೊಂದು ಕಡೆ ಮತ ಎಣಿಕೆ ಕಾರ್ಯ ನಡೆಯಲಿದೆ.

  • ಬಿಎಸ್‍ವೈ ಸೇರಿ ರಾಜ್ಯ ನಾಯಕರಿಗೆ ಹೈಕಮಾಂಡ್ ನಿಂದ ಕಟ್ಟುನಿಟ್ಟಿನ ಆದೇಶ!

    ಬಿಎಸ್‍ವೈ ಸೇರಿ ರಾಜ್ಯ ನಾಯಕರಿಗೆ ಹೈಕಮಾಂಡ್ ನಿಂದ ಕಟ್ಟುನಿಟ್ಟಿನ ಆದೇಶ!

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಕಟ್ಟು ನಿಟ್ಟಿನ ಆದೇಶವನ್ನು ರವಾನಿಸಿದೆ.

    ಮೈತ್ರಿ ಬಗ್ಗೆ ಯಾರು ಮಾತನಾಡಬೇಡಿ ಮತ್ತು ತಲೆಕೆಡಿಸಿಕೊಳ್ಳಬೇಡಿ. ಸರ್ಕಾರ ರಚನೆಗೆ ಸಂಬಂಧಿಸಿದಂತೆ ಬಹಿರಂಗವಾಗಿ ಎಲ್ಲಿಯೂ ಗೊಂದಲದ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದ ಮಾಸ್ಟರ್ ಪ್ಲಾನ್‍ಗೆ ಡ್ಯಾಮೇಜ್ ಮಾಡಬೇಡಿ ಅಂತಾ ಖಡಕ್ ಸೂಚನೆಯನ್ನು ಹೈಕಮಾಂಡ್ ರವಾನಿಸಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಒಂದು ವೇಳೆ ಅನಿವಾರ್ಯತೆ ಎದುರಾದ್ರೆ ಮಾತ್ರ ಜೆಡಿಎಸ್ ಜೊತೆಗೆ ಮೈತ್ರಿ. ಡಿಸಿಎಂ ವಿಚಾರದ ಬಗ್ಗೆಯೂ ಯಾರೂ ಪ್ರಸ್ತಾಪಿಸಬಾರದು. ಫಲಿತಾಂಶದ ಬಳಿಕವಷ್ಟೇ ಮುಂದಿನ ನಿರ್ಧಾರಗಳ ಬಗ್ಗೆ ಪಕ್ಷದಲ್ಲಿ ಚರ್ಚೆ ಆಗಲಿದೆ ಅಂತಾ ಸಂದೇಶದಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ.

    ಶನಿವಾರ(ಮೇ 12) ರಾಜ್ಯಾದ್ಯಂತ ಮತದಾನವಾಗಿದ್ದು, ರಾಜಕೀಯ ವಲಯದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈಗಾಗಲೇ 5 ರಾಷ್ಟ್ರೀಯ ಸುದ್ದಿವಾಹಿನಿಗಳು ಚುನಾವಣೋತ್ತರ ಸಮೀಕ್ಷೆಯ ಬಹಿರಂಗಗೊಳಿಸಿವೆ. ಮೂರು ಸಮೀಕ್ಷೆಗಳು ಬಿಜೆಪಿಗೆ ಮುನ್ನಡೆ ಅಂತಾ ಹೇಳಿದ್ರೆ, ಎರಡು ಕಾಂಗ್ರೆಸ್ ಮುನ್ನಡೆ ಎಂದು ತಿಳಿಸಿವೆ. ಆದ್ರೆ ಯಾವ ಪಕ್ಷಕ್ಕೂ ಮ್ಯಾಜಿಕ್ ನಂಬರ್ ಸಿಕ್ಕಿಲ್ಲ, ಆದ್ದರಿಂದ ಮೈತ್ರಿ ಅನಿವಾರ್ಯ ಎಂದು ಭವಿಷ್ಯ ನುಡಿದಿವೆ.

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನ 144 ಸೆಕ್ಷನ್ ಜಾರಿ!

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನ 144 ಸೆಕ್ಷನ್ ಜಾರಿ!

    ಮಂಗಳೂರು: ನಾಳೆ ಚುನಾವಣಾ ಮತ ಎಣಿಕೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಯಾಗಿದೆ.

    ನಗರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾನೂನು ಉಲ್ಲಂಘಿಸಿದ್ರೆ ಅಥವಾ ವಿಜಯೋತ್ಸವ ಮಾಡಿದರೆ ಮುಲಾಜಿಲ್ಲದೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ಇಂದು ಮಧ್ಯರಾತ್ರಿಯಿಂದ 16ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಾಗಿದ್ದು, ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಾಗಲಿದೆ. ಜಿಲ್ಲೆಯಲ್ಲಿ ಇಂದು ಮಧ್ಯ ರಾತ್ರಿಯಿಂದ ನಾಳೆ ಮಧ್ಯರಾತ್ರಿ ವರೆಗೂ ಮದ್ಯಮಾರಾಟವನ್ನು ಕೂಡ ನಿಷೇಧವಾಗಲಿದೆ ಅಂದ್ರು.

    ಮತ ಎಣಿಕೆ ಕಾರ್ಯ ಕ್ರಮಬದ್ಧವಾಗಿರುತ್ತೆ. ನಿಧಾನವಾದರೂ ಗೊಂದಲಕ್ಕೆ ಅವಕಾಶ ಇರೋದಿಲ್ಲ. ಸ್ಟ್ರಾಂಗ್ ರೂಂಗೆ ಮೂರು ಹಂತದ ಭದ್ರತೆ ಮಾಡಲಾಗಿದೆ ಅಂತ ಅವರು ವಿವರಿಸಿದ್ದಾರೆ.

  • ಗುಪ್ತಚರ ವರದಿಯಲ್ಲಿ ಕಾಂಗ್ರೆಸ್‍ಗೆ ಮೇಲುಗೈ – ಎರಡೂ ಕ್ಷೇತ್ರದಲ್ಲಿ ಗೆಲ್ತಾರಂತೆ ಸಿದ್ದರಾಮಯ್ಯ!

    ಗುಪ್ತಚರ ವರದಿಯಲ್ಲಿ ಕಾಂಗ್ರೆಸ್‍ಗೆ ಮೇಲುಗೈ – ಎರಡೂ ಕ್ಷೇತ್ರದಲ್ಲಿ ಗೆಲ್ತಾರಂತೆ ಸಿದ್ದರಾಮಯ್ಯ!

    ಬೆಂಗಳೂರು: ಕರ್ನಾಟಕ ರಾಜಕೀಯ ಭವಿಷ್ಯ ನಾಳೆ ಬಯಲಾಗಲಿದ್ದು, ಈಗಾಗಲೇ ಬಂದಿರೋ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದಿವೆ. ಇತ್ತ ಕೇಂದ್ರ ಮತ್ತು ರಾಜ್ಯ ಗುಪ್ತಚರ ವರದಿಯಲ್ಲಿ ಕಾಂಗ್ರೆಸ್ ಜಯದ ಪತಾಕೆ ಹಾರಿಸಲಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಕೇಂದ್ರ ಗುಪ್ತಚರ ವರದಿಯಲ್ಲಿ ಕಾಂಗ್ರೆಸ್ 95 ರಿಂದ 102 ಸ್ಥಾನಗಳನ್ನು ಗೆಲ್ಲೋ ನಿರೀಕ್ಷೆ ಇದ್ಯಂತೆ. ಬಿಜೆಪಿಗೆ 80 ರಿಂದ 85 ಸ್ಥಾನಗಳು ಸಿಗಲಿದ್ಯಂತೆ. ಜೆಡಿಎಸ್ 35 ರಿಂದ 40 ಸೀಟುಗಳಲ್ಲಿ ಜಯಿಸಲಿದೆ ಅಂತಾ ಊಹಿಸಲಾಗಿದೆ.

    ರಾಜ್ಯ ಗುಪ್ತಚರ ವರದಿಯಲ್ಲಿ ಕಾಂಗ್ರೆಸ್‍ಗೆ 102 ಸ್ಥಾನ, ಬಿಜೆಪಿ 70, ಜೆಡಿಎಸ್‍ಗೆ 28 ಸ್ಥಾನ ಸಿಗಲಿದೆ. 20 ಕ್ಷೇತ್ರಗಳಲ್ಲಿ 10ರಲ್ಲಿ ಜೆಡಿಎಸ್, 10 ಕ್ಷೇತ್ರಗಳಲ್ಲಿ ಬಿಜೆಪಿ ನಡುವೆ ಕಾಂಗ್ರೆಸ್‍ಗೆ ನೇರ ಹಣಾಹಣಿ ನಡೆಯುವ ಸಾಧ್ಯತೆಗಳಿವೆ. 30 ಕ್ಷೇತ್ರಗಳಲ್ಲಿ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಇದೆ ಎಂದು ಗುಪ್ತಚರ ವರದಿಯಲ್ಲಿ ತಿಳಿಸಲಾಗಿದೆ.

    ಈ ಬಾರಿ ಬದಾಮಿ ಹಾಗು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಗಳಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದು, ಎರಡೂ ಕ್ಷೇತ್ರಗಳಲ್ಲಿ ಸಿಎಂ ಗೆಲ್ಲಲಿದ್ದಾರೆ ಅಂತಾ ವರದಿಗಳು ಹೇಳ್ತಿವೆ. ಚಾಮುಂಡೇಶ್ವರಿಯಲ್ಲಿ ಕಡಿಮೆ ಮತಗಳ ಅಂತರದಿಂದ ಜಯ ಸಾಧಿಸಿದ್ರೆ, ಬದಾಮಿಯಲ್ಲಿ ಬಹುಮತಗಳ ಅಂತರದಿಂದ ಸಿಎಂ ಜಯ ಸಾಧಿಸಲಿದ್ದಾರೆ ಅಂತಾ ಕೇಂದ್ರ ಮತ್ತು ರಾಜ್ಯ ಗುಪ್ತಚರ ವರದಿಗಳು ಭವಿಷ್ಯ ನುಡಿದಿವೆ.

  • ಇಂದು ಲೊಟ್ಟೆಗೊಲ್ಲಹಳ್ಳಿ, ಮನ್ನೇರಾಳದಲ್ಲಿ ಮರು ಮತದಾನ- ಮತ ಎಣಿಕೆಗೆ ಆಯೋಗದಿಂದ ಸಕಲ ಸಿದ್ಧತೆ

    ಇಂದು ಲೊಟ್ಟೆಗೊಲ್ಲಹಳ್ಳಿ, ಮನ್ನೇರಾಳದಲ್ಲಿ ಮರು ಮತದಾನ- ಮತ ಎಣಿಕೆಗೆ ಆಯೋಗದಿಂದ ಸಕಲ ಸಿದ್ಧತೆ

    ಬೆಂಗಳೂರು: ತಾಂತ್ರಿಕ ದೋಷದಿಂದಾಗಿ ಸ್ಥಗಿತ ಗೊಂಡಿದ್ದ ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿ ಹಾಗು ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಇಂದು ಮರು ಮತದಾನ ನಡೆಯಲಿದೆ.

    ಮೇ 12ರಂದು ಲೊಟ್ಟೆಗೊಲ್ಲಹಳ್ಳಿಯ ಪೊಲಿಂಗ್ ಬೂತ್ 2ರಲ್ಲಿನ ಮತಯಂತ್ರದಲ್ಲಿ ತಾಂತ್ರಿಕ ದೋಷ ಉಂಟಾಗಿದರಿಂದ ಮತದಾನವನ್ನು ಸ್ಥಗಿತ ಮಾಡಲಾಗಿತ್ತು. ಅಲ್ಲದೆ ಕುಷ್ಟಗಿಯ ಬೂತ್ ನಂಬರ್ 20ರಲ್ಲಿ ಮತಗಟ್ಟೆ ಕೇಂದ್ರ ಬದಲಾಗಿದರಿಂದ ಅಲ್ಲಿನ 21 ಮತಗಟ್ಟೆಯ ಮತದಾರರು 20 ನಂಬರಿನ ಮತಗಟ್ಟೆಯಲ್ಲಿ ಮತದಾನ ಮಾಡಿದ್ರು. ಇದರಿಂದ ಈ ಮತಗಟ್ಟೆ ಕೇಂದ್ರದಲ್ಲಿನ ಮತದಾನವನ್ನು ಸ್ಥಗಿತ ಮಾಡಲಾಗಿತ್ತು.

    ಎರಡು ಮತಗಟ್ಟೆ ಕೇಂದ್ರಗಳಲ್ಲೂ ಇಂದು ಮರು ಮತದಾನ ನಡೆಸುವುದಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿರುವ ಅವರು, ತಾಂತ್ರಿಕ ದೋಷಗಳಿಂದಾಗಿ ಸ್ಥಗಿತಗೊಂಡಿರುವ ಲೊಟ್ಟೆಗೊಲ್ಲಹಳ್ಳಿಯ ಬೂತ್ ನಂಬರ್ 2 ಹಾಗು ಕೊಪ್ಪಳದ ಕುಷ್ಟಗಿಯ 21 ನಂಬರಿನ ಮತಗಟ್ಟೆ ಕೇಂದ್ರದಲ್ಲಿ ಇಂದು ಮರು ಮತದಾನ ನಡೆಸಲು ತೀರ್ಮಾನಿಸಲಾಗಿದೆ ಅಂತಾ ತಿಳಿಸಿದ್ರು.

    ಇಂದು ನಡೆಯುವ ಮರು ಮತದಾನಕ್ಕೆ ಎಲ್ಲಾ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು, ಮರು ಮತದಾನ ಮಾಡುವರಿಗೆ ಎಡಗೈ ತೋರುಬೆರಳು ಬದಲು ಮಧ್ಯದ ಬೆರಳಿಗೆ ಶಾಹಿಯನ್ನು ಹಾಕಲಾಗುವುದು. ಇನ್ನು ಕುಷ್ಟಗಿಯ ಮತಗಟ್ಟೆ ಕೇಂದ್ರಗಳಲ್ಲಿ ಉದ್ದೇಶಪೂರ್ವಕಾಗಿ ಅಧಿಕಾರಿಗಳು ತಪ್ಪು ಎಸಗಿದ್ರೆ ಅವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಇಂದು ಮರುಮತದಾನ ನಡೆಯುವ ಸರ್ಕಾರಿ ಹಾಗು ಖಾಸಗಿ ಕಂಪನಿಯ ನೌಕರರಿಗೆ ರಜೆ ಕೊಡಲಾಗಿದ್ದು, ತಪ್ಪದೇ ಮತದಾನ ಮಾಡುವಂತೆ ಸಂಜೀವ್ ಕುಮಾರ್ ಹೇಳಿದ್ದಾರೆ.

    ರಾಜ್ಯದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯದ ಸಕಲ ಸಿದ್ದತೆ ಮುಗಿದಿದ್ದು, ಪ್ರತಿಯೊಂದು ಜಿಲ್ಲೆಯಲ್ಲೂ ಮತ ಎಣಿಕೆ ಕೇಂದ್ರ ಮಾಡಲಾಗಿದೆ. ಚಿತ್ರದುರ್ಗ -2, ದಕ್ಷಿಣ ಕನ್ನಡ – 2, ಮೈಸೂರು – 2, ತುಮಕೂರಿನಲ್ಲಿ -3ಕಡೆ ಮತ್ತು ಬೆಂಗಳೂರಲ್ಲಿ ನಾಲ್ಕು ಕಡೆ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ 11,160 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ರಾಜ್ಯದಲ್ಲಿ ಶನಿವಾರ ನಡೆದ ಮತದಾನದಲ್ಲಿ ಶೇ 72.13 ರಷ್ಟು ದಾಖಲೆಯ ಮತದಾನವಾಗಿದ್ದು, ಹೋಸಕೊಟೆಯಲ್ಲಿ ಅತಿಹೆಚ್ಚು ಅಂದ್ರೇ ಶೇ.89 ರಷ್ಟು ಮತದಾನವಾಗಿದ್ದು, ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ.

  • ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

    ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

    ಕಾರವಾರ: ಒಂದೆಡೆ ಅಬ್ಬರದ ಪ್ರಚಾರ, ಸದಾ ತುಂಬಿ ತುಳುಕುತಿದ್ದ ಜನರ ಸಂತೆ, ಟೀಕೆ ಟಿಪ್ಪಣಿಗಳ ನಡುವೆ ತಾನು ಗೆಲ್ಲಬೇಕೆಂಬ ಹಂಬಲದಲ್ಲಿ ವಿಧಾನಸಭಾ ಚುನಾವಣೆಯ ರಂಗಿನ ರಣರಂಗದಲ್ಲಿ ಸದಾ ಬಿಸಿಯಾಗಿದ್ದ ಪ್ರತಿಷ್ಠಿತ ಕಣವಾದ ಕಾರವಾರ ವಿಧಾನಸಭಾ ಕ್ಷೇತ್ರದ ಮೂರು ಪಕ್ಷದ ನಾಯಕರು ಈಗ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ.

    ಸದಾ ಜನರ ಮಧ್ಯೆ ಇರುವ ನಾಯಕರು ತಮ್ಮ ವೈಯಕ್ತಿಕ ಬದುಕಿಗೆ ಸಮಯ ಕೊಟ್ಟದ್ದು ಅಲ್ಪ ಸಮಯ. ಇದೇ ತಿಂಗಳ 15 ರಂದು ಫಲಿತಾಂಶದ ನಿರೀಕ್ಷೆಯಲ್ಲಿರುವ ಈ ನಾಯಕರು ಇಂದು ತಮ್ಮ ಒತ್ತಡವನ್ನು ಕಮ್ಮಿ ಮಾಡಿಕೊಳ್ಳಲು ಅಡುಗೆ ಮಾಡಿ ಕುಟುಂಬವರಿಗೆ ಬಡಿಸಿದ್ದಾರೆ.

    ಕಳೆದ ಎರಡು ತಿಂಗಳ ಚುನಾವಣಾ ಕುರುಕ್ಷೇತ್ರಕ್ಕೆ ಪೂರ್ಣ ವಿರಾಮ ಬಿದ್ದಿದೆ. ಇನ್ನು 15ನೇ ದಿನಾಂಕದಂದು ಜನರ ನಿರ್ಧಾರದ ಫಲಿತಾಂಶ ಬರಬೇಕಿದೆ. ತಾವು ಪಟ್ಟ ಶ್ರಮದ ನಿರೀಕ್ಷೆಯಲ್ಲಿ ನಾಯಕರು ಒತ್ತಡದಲ್ಲಿ ಇರೋದು ಸಹಜವಾಗಿದೆ. ತ್ರಿಕೋನ ಸ್ಪರ್ಧೆ ಇರುವ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್, ಜೆಡಿಎಸ್ ನಿಂದ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಮತ್ತು ಬಿಜೆಪಿಯಿಂದ ರೂಪಾಲಿ ನಾಯ್ಕ ಸ್ಪರ್ಧಿಸಿದ್ದರು.

    ಸದ್ಯ ಇಂದು ಮತ್ತು ನಾಳೆ ಮನಸ್ಸಿನಲ್ಲಿ ಅಳುಕು ಮತ್ತು ಒತ್ತಡ ಇದ್ದರು ಮೂವರು ಅಭ್ಯರ್ಥಿಗಳು ಈ ಒತ್ತಡ ಮರೆಯಲು ಹರಸಾಹಸ ಪಡುತಿದ್ದಾರೆ. ಕಳೆದ ಎರಡು ತಿಂಗಳಿಂದ ಕ್ಷೇತ್ರ ಸುತ್ತಿ ಪ್ರಚಾರ ನಡೆಸಿ ದಣಿದಿರುವ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಗೋವಾಕ್ಕೆ ತೆರಳಿ ರಿಲ್ಯಾಕ್ಸ್ ಮಾಡುತ್ತಿದ್ದು, ಅವರ ಅಧಿಕೃತ ನಿವಾಸ ಜನರಿಲ್ಲದೇ ಬಿಕೋ ಎನ್ನುತಿತ್ತು. ಒತ್ತಡ ಮರೆಯಲು ಜನರಿಂದ ದೂರ ವಿರಲು ಬಯಸಿರುವ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಕಾರವಾರದ ಸೋನಾರವಾಡದಲ್ಲಿರುವ ಮನೆಯ ಮುಂಭಾಗಕ್ಕೆ ಬೀಗ ಹಾಕಿ ಒಳ ಸೇರಿದ್ದಾರೆ. ಮನೆಯ ಬಳಿ ಬಂದ ಜನರ ಸಂಪರ್ಕಕ್ಕೆ ಸಿಗಲಿಲ್ಲ.

    ಇನ್ನು ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್ ರವರ ಮಾಜಾಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಮನೆ ಕೂಡ ಯಾವುದೇ ಕಾರ್ಯಕರ್ತರ ಸದ್ದಿಲ್ಲದೇ ತಟಸ್ಥವಾಗಿತ್ತು. ಶಾಂತವಾಗಿದ್ದ ಮನೆಯಲ್ಲಿ ಸತೀಶ್ ಸೈಲ್ ಪತ್ನಿ ಕಲ್ಪನಾರೊಂದಿಗೆ ಅಡುಗೆ ಮನೆ ಸೇರಿ ಮಧ್ಯಾಹ್ನದ ಊಟಕ್ಕಾಗಿ ಚಿಕನ್ ತಯಾರಿಸಿದ್ದಾರೆ. ಅವರ ಕುಷಲೋಪರಿ ವಿಚಾರಿಸಲು ಬಂದವರಿಗೆ ತಮ್ಮ ಕೈಯಾರೆ ಟೀ ಮಾಡಿ ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ರಾಜಕೀಯ ಕ್ಷೇತ್ರಕ್ಕೆ ಬಂದಾಗಿನಿಂದ ಸಂಸಾರಕ್ಕೆ ಹೆಚ್ಚು ಸಮಯ ಕೊಡಲಾಗುತಿಲ್ಲ. ಮಕ್ಕಳೊಂದಿಗೆ ಬೆರೆಯದೇ ಎಷ್ಟೂ ದಿನಗಳಾಗಿವೆ. ಒಂದು ದಿನವಾದರೂ ನನ್ನ ಒತ್ತಡ ಮರೆತು ಮಕ್ಕಳು ಸಂಸಾರದೊಂದಿಗೆ ಬೆರೆಯಬೇಕೆಂದು ತೀರ್ಮಾನಿಸಿ ಜಂಜಾಟದಿಂದ ರಿಲಾಕ್ಸ್ ಮಾಡುತ್ತಿದ್ದೇನೆ ಎಂದು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

    ನನ್ನ ತಂದೆ ಕ್ಯಾನ್ಸರ್ ನಿಂದ ತೀರಿಕೊಂಡರು. ಆಗ ಅವರಿಗೆ ಕ್ಯಾನ್ಸರ್ ಇದೇ ಎಂದು ತಿಳಿದುಕೊಳ್ಳವ ವೇಳೆ ಅವರು ನಮ್ಮನ್ನು ಅಗಲಿದ್ದರು. ಕಾರವಾರ ಕ್ಷೇತ್ರದಲ್ಲಿ ಕೈಗಾ ಅಣು ಸ್ಥಾವರ, ಆದಿತ್ಯ ಬಿರ್ಲಾ ಕೆಮಿಕಲ್ ಕಾರ್ಖಾನೆಗಳಿವೆ. ಇವುಗಳಿಂದ ಸಾಕಷ್ಟು ಜನರಿಗೆ ಕ್ಯಾನ್ಸರ್ ನಂತಹ ರೋಗಗಳು ಬಂದಿವೆ. ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆ ವ್ಯವಸ್ಥೆ ಸರಿಯಾಗಿ ಇಲ್ಲ. ನನ್ನ ಅವಧಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಮಾಡಿಸುವ ಪ್ರಯತ್ನ ಮಾಡಿದ್ದೇನೆ. ಈಗ ಅದು ಸಫಲವಾಗಿದೆ ಎಂದು ತಮ್ಮ ತಂದೆಯನ್ನು ನೆನೆದು ಭಾವುಕರಾದ್ರು.

    ನನ್ನ ಕ್ಷೇತ್ರದ ಜನರಿಗೆ ಉದ್ಯೋಗ ಇಲ್ಲಿಯೇ ಸಿಗುವಂತೆ ಮಾಡಬೇಕು. ಅದಕ್ಕಾಗಿ ಈ ಬಾರಿ ಚುನಾವಣಾ ಕಣದಲ್ಲಿದ್ದೇನೆ. ನನ್ನ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿರುವೆ ಎಂದು ನಾಲ್ಕು ವರ್ಷದ ತಮ್ಮ ಸಾಧನೆಯ ಬಗ್ಗೆ ಮನದ ಮಾತು ಹಂಚಿಕೊಂಡ್ರು. ಕಾರವಾರ ಕ್ಷೇತ್ರದ ಮೂರು ಪಕ್ಷದ ಅಭ್ಯರ್ಥಿಗಳು ಇಂದು ಜನರ, ಕಾರ್ಯಕರ್ತರ ಜಂಜಾಟದಿಂದ ದೂರ ಉಳಿದು ತಮ್ಮ ದಣಿವನ್ನು ನೀಗಿಸಿಕೊಂಡಿದ್ದು, 15ರ ಅಗ್ನಿ ಪರೀಕ್ಷೆಗೆ ರಿಫ್ರೆಶ್ ಆಗುತ್ತಿದ್ದಾರೆ.