Tag: karnataka election result

  • ಸೋಮವಾರ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ?

    ಸೋಮವಾರ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ?

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದಲ್ಲಿ ಕಾಂಗ್ರೆಸ್ (Congress) ಗೆದ್ದು ಬೀಗಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ಸೋಮವಾರ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

    ಹೌದು. ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಹಿನ್ನೆಲೆಯಲ್ಲಿ ಕಟೀಲ್ (Nalin Kumar Kateel) ನೈತಿಕ ಹೊಣೆ ಹೊತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಸೋಮವಾರ) ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಕಟೀಲ್ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿ ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ: ಬೊಮ್ಮಾಯಿ

    ರಾಜೀನಾಮೆ ನೀಡೋ ಬಗ್ಗೆ ಕಟೀಲ್ ಈಗಾಗಲೇ ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಾರೆ ಎಂಬ ಮಾಹಿತಿ ಕೂಡ ಸಿಕ್ಕಿದೆ. 2019 ರ ಆಗಸ್ಟ್ 20 ರಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅವರ ಸ್ಥಾನಕ್ಕೆ ಕಟೀಲ್ ರನ್ನು ಕರ್ನಾಟಕ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ 6ರಲ್ಲಿ ಜಯ – 2ರಲ್ಲಿ ಕಾಂಗ್ರೆಸ್ ಗೆಲುವು

  • ಗದಗದಲ್ಲಿ ಬಿಜೆಪಿಗೆ ನವಚೈತನ್ಯ ನೀಡಿದ ಜಯ: ಸಚಿವ ಸಿ. ಸಿ.ಪಾಟೀಲ್

    ಗದಗದಲ್ಲಿ ಬಿಜೆಪಿಗೆ ನವಚೈತನ್ಯ ನೀಡಿದ ಜಯ: ಸಚಿವ ಸಿ. ಸಿ.ಪಾಟೀಲ್

    ಗದಗ: ದಶಕದ ಬಳಿಕ ಗದಗ-ಬೆಟಗೇರಿ ನಗರಸಭೆಯಲ್ಲಿ ಬಿಜೆಪಿಯ ಜಯಭೇರಿಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಜಯಭೇರಿ ಬಾರಿಸಿ ಬಹುಮತದಿಂದ ಅಧಿಕಾರಕ್ಕೆ ಏರುತ್ತಿರುವುದು ಸಂತೋಷದ ಸಂಗತಿಯಾಗಿದೆ. ಪಕ್ಷದ ಎಲ್ಲಾ ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು.

    ಸಿ.ಸಿ.ಪಾಟೀಲ್‌ ಹೇಳಿದ್ದೇನು..?:‌ ದಶಕದ ಬಳಿಕ ಗದಗ-ಬೆಟಗೇರಿ ನಗರಸಭೆಯಲ್ಲಿ ಬಿಜೆಪಿಯು ಜಯಭೇರಿ ಬಾರಿಸಿ ಬಹುಮತದಿಂದ ಅಧಿಕಾರಕ್ಕೆ ಏರುತ್ತಿರುವುದು ಸಂತೋಷದ ಸಂಗತಿಯಾಗಿದೆ. ಈ ಬಗ್ಗೆ ನಮ್ಮ ಪಕ್ಷದ ಎಲ್ಲಾ ವಿಜಯಿ ಅಭ್ಯರ್ಥಿಗಳಿಗೆ ನನ್ನ ಹಾರ್ದಿಕ ಅಭಿನಂದನೆಗಳು. ಇದನ್ನೂ ಓದಿ: ನಾಳೆ ಬಂದ್ ಇಲ್ಲ – ವ್ಯಾಪಾರ, ವ್ಯವಹಾರ ನಡೆಸಬಹುದು: ಬೊಮ್ಮಾಯಿ

    ಒಗ್ಗಟ್ಟಿನಲ್ಲಿ ಬಲವಿದೆ ಎಂಬುದಕ್ಕೆ ಗದಗ-ಬೆಟಗೇರಿ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ. ಈ ಅಭೂತಪೂರ್ವ ವಿಜಯಕ್ಕೆ ಕಾರಣೀಕರ್ತರಾದ ಮತದಾರ ಪ್ರಭುಗಳಿಗೆ, ಬಿಜೆಪಿಯ ಗದಗ್ ಜಿಲ್ಲೆಯ ಶಾಸಕರಿಗೆ, ವಿಧಾನಪರಿಷತ್ ಸದಸ್ಯರಿಗೆ, ಸಂಸದರಿಗೆ, ಪಕ್ಷದ ಅಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳಿಗೆ, ಹಿತೈಷಿಗಳಿಗೆ, ಪಕ್ಷದ ಸರ್ವ ನಾಯಕರಿಗೆ ನನ್ನ ಹೃದಯಪೂರ್ವಕ ವಂದನೆಗಳು. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್

    ಈ ಜಯವು ನಮ್ಮ ಜಿಲ್ಲೆಯಲ್ಲಿ ಬಿಜೆಪಿಗೆ ಮತ್ತಷ್ಟು ಹೊಸ ಚೈತನ್ಯ ಮೂಡಿಸಲಿದೆ ಮತ್ತು ಬಿಜೆಪಿಯು ತಳಮಟ್ಟದಿಂದ ಕೇಂದ್ರದವರೆಗೆ ಎಷ್ಟೊಂದು ಸುಭದ್ರವಾಗಿದೆ ಎಂಬುದಕ್ಕೆ ಇದು ನಿದರ್ಶನವಾಗಿದೆ. ನಮ್ಮ ನೂತನ ಜನಪ್ರತಿನಿಧಿಗಳು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಿ, ಜನಪರವಾಗಿ ಸ್ಪಂದಿಸುತ್ತಾ ಬಿಜೆಪಿಯ ವರ್ಚಸ್ಸನ್ನು ಎತ್ತಿಹಿಡಿಯುತ್ತಾರೆ ಎಂಬ ವಿಶ್ವಾಸ ನನಗಿದೆ. ಈ ನಿಟ್ಟಿನಲ್ಲಿ ಅವರು ಸಂಪೂರ್ಣವಾಗಿ ಯಶಸ್ವಿಯಾಗಲಿ ಎಂದು ನಾನು ಮತ್ತೊಮ್ಮೆ ಹಾರೈಸುತ್ತೇನೆ ಎಂದು ಅವರು ಹೇಳಿದ್ದಾರೆ.

  • ನಮ್ಮನ್ನು ಕಟ್ಟಿ ಹಾಕಿ ಚುನಾವಣೆ ಮಾಡಿದಂತಿತ್ತು- ರಮಾನಾಥ ರೈ

    ನಮ್ಮನ್ನು ಕಟ್ಟಿ ಹಾಕಿ ಚುನಾವಣೆ ಮಾಡಿದಂತಿತ್ತು- ರಮಾನಾಥ ರೈ

    ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಕೊಟ್ಟ ಭರವಸೆಯನ್ನು ಈಡೇರಿಸುವ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮಾಡುವುದೇ ಪ್ರಮುಖವಾಗಿರುತ್ತದೆ. ಚುನಾವಣೆ ಅಂದ್ರೆ ನಾವು ಕೆಲಸ ಮಾಡಿದ್ದಕ್ಕೆ ಮೌಲ್ಯಮಾಪನವಾಗಿರುತ್ತದೆ ಅಂತ ಸಚಿವ ರಮಾನಾಥ ರೈ ತಿಳಿಸಿದ್ದಾರೆ.

    ಚುನಾವಣಾ ಫಲಿತಾಂಶದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇಂದು ಯಾವ ಕಾರಣಕ್ಕೆ ಸೋಲಾಗಿದೆ ಎಂಬುದು ಗೊತ್ತಾಗ್ತಿಲ್ಲ. ಆದ್ರೆ ನಾವು ಇಲ್ಲಿಯವರೆಗೆ ಮಾಡುತ್ತಿದ್ದಂತಹ ಸಮಸ್ಯೆಯನ್ನೇ ಮುಂದುವರೆಸಿಕೊಂಡು ಹೋಗ್ತಾ ಇದ್ದೇವೆ. ಇವಿಎಂ ಮೆಷಿನ್ ಬಗ್ಗೆಯೂ ನಮಗೆ ಸ್ವಲ್ಪ ಸಂಶಯವಿದೆ ಅಂದ್ರು.

    ಚುನಾವಣೆ ನಡೆಯುತ್ತಿದ್ದಾಗ ಕೆಲವು ಅಭ್ಯರ್ಥಿಗಳ ಮನೆ ಮೇಲೆ ಐಟಿ ದಾಳಿ ಮಾಡಲಾಗಿದೆ. ನಾನು ನನ್ನ ಜೀವಮಾನದಲ್ಲಿ ಎಷ್ಟೋ ಚುನಾವಣೆಯಲ್ಲಿ ಸ್ಫರ್ಧಿಸಿದ್ದೇನೆ. ಆದ್ರೆ ಅಭ್ಯರ್ಥಿಗಳ ಮನೆ ಮೇಲೆ ಐಟಿ ದಾಳಿ ಮಾಡುವುದನ್ನು ನೋಡಿರಲಿಲ್ಲ. ಒಟ್ಟಿನಲ್ಲಿ ಈ ಮೂಲಕ ನಮ್ಮನ್ನು ಕಟ್ಟಿ ಹಾಕಿ ಚುನಾವಣೆ ಮಾಡಿದಂತಾಗಿದೆ ಅಂತ ಅವರು ಹೇಳಿದ್ರು.

    ಬಂಟ್ವಾಳದಲ್ಲಿ ಹಲವರ ಮೇಲೆ ಹಲ್ಲೆಯಾಗಿದೆ. ಹರೀಶ್ ಪೂಜಾರಿ ಎಂಬ ಹಿಂದೂ ಯುವಕನ ಮೇಲೆಯೂ ಸಂಘಪರಿವಾರದವರು ಹಲ್ಲೆ, ಹತ್ಯೆ ಮಾಡಿದ್ದಾರೆ. ಅಲ್ಲದೇ ಕೆಲವರ ಹತ್ಯೆಯಾಗಿದೆ. ಇದಕ್ಕೆ ಕಾಂಗ್ರೆಸ್ಸಿನವರು ಕಾರಣರಲ್ಲ. ಅಪಪ್ರಚಾರ ಮಾಡುತ್ತಾರೆ ಅದಕ್ಕೇನೂ ಮಾಡಕ್ಕಾಗಲ್ಲ. ಹತ್ಯೆ ಪ್ರಕರಣಗಳಲ್ಲಿ ಸಂಘಪರಿವಾರದವರು ಮತ್ತು ಎಸ್‍ಡಿಪಿಐಯವರು ಇದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷದ ಸದಸ್ಯರು ಯಾರು ಇಲ್ಲ. ಒಟ್ಟಿನಲ್ಲಿ ನಮ್ಮ ಕಡೆ ಬೆರಳು ತೋರಿಸುವಂತದ್ದು ಸಮಂಜಸವಲ್ಲ ಅಂತ ಹಿಂದೂಗಳ ಮೇಲಿನ ಹಲ್ಲೆ ಹಾಗೂ ಕೊಲೆಯೇ ಸೋಲಿಗೆ ಕಾರಣ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ್ರು.

    ಈ ಬಾರಿಯ ಚುನಾವಣೆಯಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದ್ದ ಬಂಟ್ವಾಳ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ರಮಾನಾಥ ರೈ ಹಿನ್ನಡೆ ಸಾಧಿಸಿದ್ದಾರೆ. ಇವರು ಬಿಜೆಪಿಯ ಯು.ರಾಜೇಶ್ ನಾಯ್ಕ್ ವಿರುದ್ಧ ಸ್ಪರ್ಧಿಸಿದ್ದರು.