Tag: Karnataka Election

  • ಬಹುಮತ ಹೇಗೆ ಸಾಬೀತು ಮಾಡ್ತೀರಾ ಪ್ರಶ್ನೆಗೆ ಶೋಭಾ ಕರಂದ್ಲಾಜೆ ಉತ್ತರ

    ಬಹುಮತ ಹೇಗೆ ಸಾಬೀತು ಮಾಡ್ತೀರಾ ಪ್ರಶ್ನೆಗೆ ಶೋಭಾ ಕರಂದ್ಲಾಜೆ ಉತ್ತರ

    ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಯಾರಿಗೂ ಬಹುಮತ ಸಿಕ್ಕಿಲ್ಲ. ಆದ್ರೂ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಅನುಮತಿ ನೀಡಿದ್ದಾರೆ.

    ರಾಜಭವನದ ಗಾಜಿನ ಮನೆಯಲ್ಲಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡುವ ಮೊದಲು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಅನುಮತಿ ನೀಡಿದ್ದಾರೆ. ಯಡಿಯೂರಪ್ಪವರು ಪ್ರಮಾಣ ವಚನ ಸ್ವೀಕಾರ ಮಾಡುತ್ತೀರೊದು ಸಂತೋಷವನ್ನು ತಂದಿದೆ ಅಂತಾ ಹೇಳಿದ್ರು.

    ಇದೇ ವೇಳೆ ಮಧ್ಯಾಹ್ನದೊಳಗೆ ಹೇಗೆ ಬಹುಮತ ಹೇಗೆ ಸಾಬೀತು ಮಾಡ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಯಡಿಯೂರಪ್ಪ ಸಿಎಂ ಆಗ್ತೀರೋದು ಖುಷಿ ತಂದಿದೆ. ಬಹುಮತ ಸಾಬೀತು ಹೇಗೆ ಮಾಡುತ್ತೇವೆ ಎಂಬುದನ್ನು ಮಾಧ್ಯಮಗಳಿಗೆ ಹೇಳಲಿಕ್ಕೆ ಬರಲ್ಲ. ಅದು ಪಕ್ಷದ ಆಂತರಿಕ ವಿಚಾರ ಎಂದು ತಿಳಿಸಿ ಕಾರ್ಯಕ್ರಮದತ್ತ ತೆರಳಿದ್ರು.

  • ಸತತ 4 ಗಂಟೆ ವಿಚಾರಣೆಯ ಬಳಿಕ ಸುಪ್ರೀಂಕೋರ್ಟ್ ನಿಂದ ಮಹತ್ವದ ಆದೇಶ

    ಸತತ 4 ಗಂಟೆ ವಿಚಾರಣೆಯ ಬಳಿಕ ಸುಪ್ರೀಂಕೋರ್ಟ್ ನಿಂದ ಮಹತ್ವದ ಆದೇಶ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪ್ರಮಾಣ ವಚನಕ್ಕೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‍ನಲ್ಲಿ ಕಾಂಗ್ರೆಸ್- ಜೆಡಿಎಸ್‍ಗೆ ಭಾರೀ ಹಿನ್ನಡೆ ಆಗಿದೆ.

    ರಾಜ್ಯಪಾಲರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತುಪಡಿಸಲು 15 ದಿನದ ಕಾಲಾವಕಾಶ ನೀಡಲಾಗಿತ್ತು. ಆದ್ರೆ ಸತತ 4 ಗಂಟೆಯ ವಿಚಾರಣೆ ನಡೆಸಿದ ಬಳಿಕ ಸುಪ್ರೀಂ ಕೋರ್ಟ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇಂದು ಮಧ್ಯಾಹ್ನದೊಳಗೆ ಬಹುಮತ ಪತ್ರ ಸಲ್ಲಿಸುವುದು ಕಡ್ಡಾಯ ಅಂತಾ ಆದೇಶ ಹೊರಡಿಸಿದೆ.

    ಒಂದು ವೇಳೆ ಬಹುಮತ ಸಾಬೀತುಪಡಿಸುವಲ್ಲಿ ಹೊಸ ಸರ್ಕಾರವನ್ನೇ ವಜಾ ಮಾಡೋದಾಗಿ ಅಂತಾ ಮೂವರು ನ್ಯಾಯಮೂರ್ತಿಗಳಿದ್ದ ಪೀಠದಿಂದ ಮಹತ್ವದ ಆದೇಶ ಹೊರಬಂದಿದೆ. ಈ ಸಂಬಂಧ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

  • ಇಂದು ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ

    ಇಂದು ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ

    ಬೆಂಗಳೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯದ 27ನೇ ಮುಖ್ಯಮಂತ್ರಿಯಾಗಿ ಬೆಳಗ್ಗೆ 9 ಗಂಟೆಗೆ ರಾಜಭವನದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.

    ಬುಧವಾರ ಇಡೀ ದಿನ ಹೈಡ್ರಾಮಾದ ಬಳಿಕ ಕೇಂದ್ರ ಅಟಾರ್ನಿ ಜನರಲ್ ರೋಹಟಗಿ ಅಭಿಪ್ರಾಯ ಸಂಗ್ರಹಿಸಿ ರಾತ್ರಿ 8.05ರ ಹೊತ್ತಿಗೆ ರಾಜಭವನದಿಂದ ಅಧಿಕೃತ ಪ್ರಕಟಣೆ ಹೊರಬಿತ್ತು. ಇನ್ನು ಬಹುಮತ ಸಾಬೀತಿಗೆ 15 ದಿನಗಳ ಅವಕಾಶವನ್ನು ರಾಜ್ಯಪಾಲರು ಕೊಟ್ಟಿದ್ದಾರೆ. ಇದನ್ನೂ ಓದಿ: ಕೆಲ ದಿನ ಮಾತ್ರ ಬಿಜೆಪಿಯವರಿಗೆ ಸಂತೋಷ: ಎಚ್‍ಡಿಕೆ

    ಬಿ.ಎಸ್.ಯಡಿಯೂರಪ್ಪ ಜೊತೆಗೆ 4 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶ್ರೀರಾಮುಲು, ಗೋವಿಂದ ಕಾರಜೋಳ, ಈಶ್ವರಪ್ಪ, ಆರ್.ಅಶೋಕ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇದನ್ನೂ ಓದಿ: ಸರ್ಕಾರ ರಚನೆಗೂ ಮೊದಲೇ ಉಗ್ರ ‘ಪ್ರತಾಪ’ ತೋರಿದ ‘ಸಿಂಹ’

    ಸರ್ಕಾರ ರಚನೆಗೆ ರಾಜ್ಯಪಾಲರು ನೀಡಿದ್ದ ಆಹ್ವಾನಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಪ್ರಜಾಪ್ರಭುತ್ವ ಭಾರತದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ರಚನೆ ಬಗ್ಗೆ ಮಧ್ಯರಾತ್ರಿ 2 ಗಂಟೆಗೆ ಶುರುವಾದ ವಾದ-ಪ್ರತಿವಾದ ತೀರ್ಪು ನಸುಕಿನ ಜಾವ 5.40ಕ್ಕೆ ಹೊರಬಿತ್ತು. ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸಮಾರಂಭಕ್ಕೆ ತಡೆಯಾಜ್ಞೆ ನೀಡಲು ಕೋರ್ಟ್ ನಿರಾಕರಿಸಿತು.

  • ಸರ್ಕಾರ ರಚನೆಗೂ ಮೊದಲೇ ಉಗ್ರ ‘ಪ್ರತಾಪ’ ತೋರಿದ ‘ಸಿಂಹ’

    ಸರ್ಕಾರ ರಚನೆಗೂ ಮೊದಲೇ ಉಗ್ರ ‘ಪ್ರತಾಪ’ ತೋರಿದ ‘ಸಿಂಹ’

    ಬೆಂಗಳೂರು: ಇಂದು ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರ ರಚನೆಗೂ ಮೊದಲೇ ಸಂಸದ ಪ್ರತಾಪ ಸಿಂಹ ಟ್ವಟ್ಟರ್ ನಲ್ಲಿ ಗುಡುಗಿದ್ದಾರೆ.

    ನಮ್ಮ ಕಾರ್ಯಕರ್ತರನ್ನು ಮುಟ್ಟಿದ್ರೆ ಜೋಕೆ!! 24 ಜನರನ್ನು ಕಳೆದುಕೊಂಡ ನೋವಿಗೆ ಅಂತಿಮ ತೆರೆ ಬೀಳಲಿದೆ ಅಂತಾ ಸಂಸದ ಪ್ರತಾಪ್ ಸಿಂಹ ಅಂತಾ ಟ್ವಿಟ್ಟರ್‍ನಲ್ಲಿ ಗುಡುಗಿದ್ದಾರೆ. ಪ್ರತಾಪ್ ಸಿಂಜ ಟ್ವೀಟ್ ಮಾಡುತ್ತಿದ್ದಂತೆ ಸಾಮಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಇದನ್ನೂ ಓದಿ: ಯಡಿಯೂರಪ್ಪ ಪ್ರಮಾಣವಚನಕ್ಕಿಲ್ಲ ತಡೆ- ಸುಪ್ರೀಂಕೋರ್ಟ್ ನಲ್ಲೂ ಕಾಂಗ್ರೆಸ್, ಜೆಡಿಎಸ್‍ಗೆ ಹಿನ್ನಡೆ

    27ನೇ ಮುಖ್ಯಮಂತ್ರಿಯಾಗಿ ಬೆಳಗ್ಗೆ 9 ಗಂಟೆಗೆ ಯಡಿಯೂರಪ್ಪ ರಾಜಭವನದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಬುಧವಾರ ಇಡೀ ದಿನ ಹೈಡ್ರಾಮಾದ ಬಳಿಕ ಕೇಂದ್ರ ಅಟಾರ್ನಿ ಜನರಲ್ ರೋಹಟಗಿ ಅಭಿಪ್ರಾಯ ಸಂಗ್ರಹಿಸಿ ರಾತ್ರಿ 8.05ರ ಹೊತ್ತಿಗೆ ರಾಜಭವನದಿಂದ ಅಧಿಕೃತ ಪ್ರಕಟಣೆ ಹೊರಬಿತ್ತು. ಇನ್ನು ಬಹುಮತ ಸಾಬೀತಿಗೆ 15 ದಿನಗಳ ಅವಕಾಶವನ್ನು ರಾಜ್ಯಪಾಲರು ಕೊಟ್ಟಿದ್ದಾರೆ. ಇನ್ನು ಬಿ.ಎಸ್.ಯಡಿಯೂರಪ್ಪ ಜೊತೆಗೆ 4 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶ್ರೀರಾಮುಲು, ಗೋವಿಂದ ಕಾರಜೋಳ, ಈಶ್ವರಪ್ಪ, ಆರ್.ಅಶೋಕ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

  • ಯಡಿಯೂರಪ್ಪ ಪ್ರಮಾಣವಚನಕ್ಕಿಲ್ಲ ತಡೆ- ಸುಪ್ರೀಂಕೋರ್ಟ್ ನಲ್ಲೂ ಕಾಂಗ್ರೆಸ್, ಜೆಡಿಎಸ್‍ಗೆ ಹಿನ್ನಡೆ

    ಯಡಿಯೂರಪ್ಪ ಪ್ರಮಾಣವಚನಕ್ಕಿಲ್ಲ ತಡೆ- ಸುಪ್ರೀಂಕೋರ್ಟ್ ನಲ್ಲೂ ಕಾಂಗ್ರೆಸ್, ಜೆಡಿಎಸ್‍ಗೆ ಹಿನ್ನಡೆ

    ಬೆಂಗಳೂರು: ಎಲೆಕ್ಷನ್ ಮುಗಿದು ರಿಸಲ್ಟ್ ಬಂದ್ರು ಕರ್ನಾಟಕ ಕುರುಕ್ಷೇತ್ರದಲ್ಲಿ ಯುದ್ಧ ಮಾತ್ರ ಮುಗಿದಂತೆ ಕಾಣ್ತಿಲ್ಲ. ರಾತ್ರೋರಾತ್ರಿ ರಾಜ್ಯ ರಾಜಕಾರಣದ ಹೈಡ್ರಾಮಾ ಸುಪ್ರೀಂಕೋರ್ಟ್ ಮುಂದೆಯೂ ನಡೆಯಿತು. ಬಿಎಸ್ ಯಡಿಯೂರಪ್ಪ ಪ್ರಮಾಣ ವಚನಕ್ಕೆ ತಡೆ ನೀಡುವಂತೆ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ರಾತ್ರೋರಾತ್ರಿ ವಿಚಾರಣೆಗೆ ಸಮ್ಮತಿಸಿತು.

    ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ನ್ಯಾಯಮೂರ್ತಿಗಳಾದ ಎ.ಕೆಎಸ್.ಸಿಕ್ರಿ, ಅಶೋಕ್ ಭೂಷಣ್, ಎಸ್.ಎ.ಬೊಬ್ಡೆ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಇನ್ನು ಕಾಂಗ್ರೆಸ್ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದ್ರೆ ಕೇಂದ್ರದ ಪರ ಅಟಾರ್ನಿ ಜನರಲ್ ವೇಣುಗೋಪಾಲ್ ವಾದ ಮಂಡಿಸಿದ್ರು

    ಹಾಗಾದ್ರೆ ಕೋರ್ಟ್ ಒಳಗೆ ನಡೆದ ಬಿರುಸಿನ ವಾದ ಪ್ರತಿವಾದದ ಡೀಟೈಲ್ಸ್ ಇಲ್ಲಿದೆ.

    ಸಿಂಘ್ವಿ- ನ್ಯಾಯಮೂರ್ತಿಗಳ ವಾದ ಪ್ರತಿವಾದ

    ಅಭಿಷೇಕ್ ಮನು ಸಿಂಘ್ವಿ- ಮೇ 15ರಂದು 3 ಗಂಟೆಗೆ ಕೆಪಿಸಿಸಿ ಅಧ್ಯಕ್ಷರು ಬೆಂಬಲ ಪತ್ರ ಬರೆದಿದ್ದಾರೆ. ಅಂದೇ 6 ಗಂಟೆಗೆ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ನಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕು. 104 ಶಾಸಕರನ್ನು ಹೊಂದಿರುವ ಬಿಜೆಪಿಗೆ ಅವಕಾಶ ಕೊಟ್ಟಿದ್ದು ತಪ್ಪು. ಹೆಚ್ಚು ಕಾಲಾವಕಾಶ ನೀಡಿರುವುದರಿಂದ ಶಾಸಕರ ವ್ಯಾಪರಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿದ್ದರೂ ಬೆಂಬಲಕ್ಕೆ ಬೇರೆ ಶಾಸಕರಿಲ್ಲ.
    ನ್ಯಾಯಮೂರ್ತಿ- ಯಡಿಯೂರಪ್ಪ ಅವರಿಗೆ ಬೆಂಬಲ ಇಲ್ಲ ಅಂತಾ ನಿಮಗೆ ಹೇಗೆ ಗೊತ್ತು..?

    ಅಭಿಷೇಕ್ ಮನು ಸಿಂಘ್ವಿ- ಬೇರೆ ಶಾಸಕರ ಬೆಂಬಲ ಇದೆ ಅಂತಾ ಬಿಜೆಪಿ ಹೇಳಿಲ್ಲ. ಯಾವುದೇ ಶಾಸಕರ ಹೆಸರು ಮತ್ತು ಸಹಿಯನ್ನು ರಾಜ್ಯಪಾಲರಿಗೆ ನೀಡಿಲ್ಲ. ಹಾಗಾಗಿ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಿ.
    ನ್ಯಾಯಮೂರ್ತಿ- ರಾಜ್ಯಪಾಲರ ಆದೇಶಕ್ಕೆ ತಡೆ ನೀಡಿದರೆ ಆಡಳಿತ ಯಂತ್ರವೇ ಇಲ್ಲದಂತೆ ಆಗುವುದಿಲ್ಲವೇ..? ರಾಜ್ಯದಲ್ಲಿ ಈಗ ಯಾರ ಸರ್ಕಾರ ಇದೆ ..?

    ಅಭಿಷೇಕ್ ಮನು ಸಿಂಘ್ವಿ- ಹಂಗಾಮಿ ಸರ್ಕಾರ ಇದೆ. ಬೇರೆಯವರ ಪ್ರಮಾಣವಚನ ಆಗುವವರೆಗೆ ಉಸ್ತುವಾರಿ ಸರ್ಕಾರವೇ ಇರಲಿದೆ. ಆದರೂ ಸುಪ್ರೀಂಕೋರ್ಟ್ ರಾಜ್ಯಪಾಲರ ಆದೇಶ ಪರಿಶೀಲಿಸಬಹುದು.
    ನ್ಯಾಯಮೂರ್ತಿ- ನಮ್ಮ ಸಮಸ್ಯೆ ಆದೇಶ ಪರಿಶೀಲನೆ ನಡೆಸುವುದಲ್ಲ. ರಾಜ್ಯಪಾಲರ ಆದೇಶಕ್ಕೆ ತಡೆ ನೀಡುವುದೇ ತೊಡಕು.

    ಅಭಿಷೇಕ್ ಮನು ಸಿಂಘ್ವಿ- ನ್ಯಾಯಾಂಗದ ಹಸ್ತಕ್ಷೇಪದಿಂದ ರಾಜ್ಯಪಾಲರ ಘನತೆಗೆ ಧಕ್ಕೆ ಆಗುವುದಿಲ್ಲ. ಮುಖ್ಯಮಂತ್ರಿಯ ಪ್ರಮಾಣ ವಚನಕ್ಕಾದರೂ 2 ದಿನಗಳ ಮಟ್ಟಿಗೆ ತಡೆ ನೀಡಿ.
    ನ್ಯಾಯಮೂರ್ತಿ- ಬಿಜೆಪಿಗೆ ಸಂಖ್ಯಾಬಲ ಇದೆಯೇ..? ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಪಟ್ಟಿ ನೀಡಿದೆ. ಆದರೂ ಯಡಿಯೂರಪ್ಪ ಬಹುಮತ ಪಡೆಯಲು ಹೇಗೆ ಸಾಧ್ಯ..?

    ಅಟಾರ್ನಿ ಜನರಲ್- ಮೈತ್ರಿಕೂಟದ ಶಾಸಕರು ಹೆಸರನ್ನು ನೀಡಿರಬಹುದು. ಆದರೆ ಬಹುಮತ ಸಾಬೀತಾಗೋದು ವಿಧಾನಸಭೆಯಲ್ಲಿ. ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಎಲ್ಲಾ ಶಾಸಕರ ಸಹಿ ಅಸಲಿಯೇ..?
    ನ್ಯಾಯಮೂರ್ತಿ- ಹಾಗಾದರೆ ವಿಧಾನಸಭೆಯಲ್ಲಿ ಯಡಿಯೂರಪ್ಪ ಬಹುಮತ ಸಾಬೀತು ಪಡಿಸುತ್ತಾರಾ..?

    ಅಟಾರ್ನಿ ಜನರಲ್- ಗೊತ್ತಿಲ್ಲ. ಬಹುಮತ ಸಾಬೀತು ಪಡಿಸದಿದ್ದರೆ ಮುಂದಿನ ನಡೆ ಕಡೆ ನೋಡಬಹುದು.
    ನ್ಯಾಯಮೂರ್ತಿ- ಬಹುಮತ ಸಾಬೀತು ಪಡಿಸಲು 15 ದಿನ ಏಕೆ ಬೇಕು..? ರಾಜ್ಯಪಾಲರ ಆದೇಶವನ್ನು ಮಾರ್ಪಾಟು ಮಾಡಬಹುದಾ…?

    ಅಟಾರ್ನಿ ಜನರಲ್- 7 ದಿನಗಳ ಒಳಗೆ ಬಹುಮತ ಸಾಬೀತು ಪಡಿಸಲು ನಾವು ಸಿದ್ಧ.
    ಅಭಿಷೇಕ್ ಮನು ಸಿಂಘ್ವಿ- ನಾಳೆ ಸಂಜೆಗೆ ಪ್ರಮಾಣ ವಚನವನ್ನು ಸಂಜೆ 4.30ಕ್ಕೆ ಮುಂದೂಡಿ.
    ನ್ಯಾಯಮೂರ್ತಿಗಳು- ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ. ಅವರ ಆದೇಶದ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಲ್ಲ. ಯಡಿಯೂರಪ್ಪ ಪ್ರಮಾಣವಚನಕ್ಕೆ ತಡೆ ನೀಡಲು ಸಾಧ್ಯವಿಲ್ಲ.

  • ದೇಶದ ಪ್ರಧಾನಿಗಳು ಸಂವಿಧಾನ ಬಾಹಿರ ಹೇಳಿಕೆಯನ್ನ ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

    ದೇಶದ ಪ್ರಧಾನಿಗಳು ಸಂವಿಧಾನ ಬಾಹಿರ ಹೇಳಿಕೆಯನ್ನ ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ನಮ್ಮಲ್ಲಿ (ಕಾಂಗ್ರೆಸ್+ಜೆಡಿಎಸ್) 117 ಶಾಸಕರಿದ್ದಾರೆ. ಹಾಗೆಯೇ ಬಿಜೆಪಿಯಲ್ಲಿ 104 ಶಾಸಕರು ಇರೋದು ಗೊತ್ತಿದ್ರೂ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾವೇ ಸರ್ಕಾರ ರಚನೆ ಮಾಡ್ತೀವಿ ಅಂತಾ ಸಂವಿಧಾನ ಬಾಹಿರವಾದ ಹೇಳಿಕೆಯನ್ನ ನೀಡುತ್ತಿದ್ದಾರೆ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪ್ರಧಾನಿ ಅವರ ಮಾತಿನ ಅರ್ಥ ಕುದುರೆ ವ್ಯಾಪಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಮೋದಿಯವರೇ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗ್ತಿದ್ದಾರೆ. ನಾವು ಈಗಾಗಲೇ ಜೆಡಿಎಸ್ ಗೆ ಷರತ್ತು ರಹಿತವಾಗಿ ಬೆಂಬಲ ನೀಡಿದ್ದೇವೆ. ರಾಜ್ಯಪಾಲರು ನಮಗೆ ಸರ್ಕಾರ ರಚಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿಕೊಂಡಿದ್ದೇವೆ ಅಂತಾ ತಿಳಿಸಿದ್ರು.

    ಇದೇ ವೇಳೆ ಆಪರೇಷನ್ ಕಮಲದ ಬಗ್ಗೆ ಮಾತನಾಡಿದ ಸಿಎಂ, ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ. ಹಾಗಾಗಿ ಆಪರೇಷನ್ ಕಮಲ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಒಂದು ವೇಳೆ ಅಗತ್ಯ ಬಿದ್ದರೆ ರೆಸಾರ್ಟ್ ಗೆ ಹೋಗುತ್ತೇವೆ. ಆಪರೇಷನ್ ಕಮಲದಿಂದ ರೆಸಾರ್ಟ್ ಗೆ ಹೋಗಲ್ಲ, ಬಿಜೆಪಿ ಅವರ ಕಿರುಕುಳ ತಪ್ಪಿಸಿಕೊಳ್ಳಲು ಹೋಗ್ತಿವಿ. ಬಿಜೆಪಿಯವರು ನಮ್ಮ ಶಾಸಕರಿಗೆ ಹಣ, ಸಚಿವ ಸ್ಥಾನ ನೀಡುತ್ತೇವೆ ಅಂತಾ ಕಿರುಕುಳ ಕೊಡುತ್ತಾರೆ. ಹಾಗಾಗಿ ರೆಸಾರ್ಟ್ ಗೆ ತೆರಳಿ ಒಂದೇ ಕಡೆ ಉಳಿದುಕೊಳ್ಳುತ್ತೇವೆ ಅಂತಾ ಸ್ಪಷ್ಟಪಡಿಸಿದ್ರು.

  • ಗ್ರಾಮೀಣ ಭಾಗದಲ್ಲಿ ಬಿಜೆಪಿ ಕಮಾಲ್: ನಗರ, ಗ್ರಾಮೀಣದಲ್ಲಿ ಯಾರು ಎಷ್ಟು ಸ್ಥಾನ ಗೆದ್ದಿದ್ದಾರೆ?

    ಗ್ರಾಮೀಣ ಭಾಗದಲ್ಲಿ ಬಿಜೆಪಿ ಕಮಾಲ್: ನಗರ, ಗ್ರಾಮೀಣದಲ್ಲಿ ಯಾರು ಎಷ್ಟು ಸ್ಥಾನ ಗೆದ್ದಿದ್ದಾರೆ?

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಭಾರತೀಯ ಜನತಾ ಪಕ್ಷ ಕೇವಲ ನಗರದ ಪ್ರದೇಶದಲ್ಲಿ ಹೆಚ್ಚಿನ ಸ್ಥಾನಗಳಿಸುವುದರ ಜೊತೆಗೆ ಗ್ರಾಮೀಣ ಭಾಗದಲ್ಲೂ ತನ್ನ ಸಾಮರ್ಥ್ಯವನ್ನು ವೃದ್ಧಿಸಿದೆ.

    ಬಿಜೆಪಿಯನ್ನು ನಗರದ ಜನತೆ ಜಾಸ್ತಿ ಬೆಂಬಲಿಸಿದರೆ, ಗ್ರಾಮೀಣ ಭಾಗದ ಜನತೆ ಕಾಂಗ್ರೆಸ್ ಬೆಂಬಲಿಸುತ್ತಾರೆ ಎನ್ನುವ ಮಾತಿದೆ. ಗುಜರಾತ್ ಚುನಾವಣೆಯಲ್ಲಿ ಇದು ಸಾಬೀತಾಗಿತ್ತು. ಹೀಗಾಗಿ ಈ ಬಾರಿ ಗ್ರಾಮೀಣ ಭಾಗದಲ್ಲಿ ಹೆಚ್ಚು ಮತದಾನವಾಗಿರುವ ಕಾರಣ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಬಹುದು ಎನ್ನುವ ಲೆಕ್ಕಾಚಾರವನ್ನು ರಾಜಕೀಯ ಪಂಡಿತರು ಮುಂದಿಟ್ಟಿದ್ದರು. ಆದರೆ ಈ ಲೆಕ್ಕಾಚಾರ ತಲೆಕೆಳಗಾಗಿದ್ದು ಗ್ರಾಮೀಣ ಭಾಗದಲ್ಲೂ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನವನ್ನು ಗೆದ್ದುಕೊಂಡಿದೆ.

    ಈ ಬಾರಿ ಎಷ್ಟು ಏರಿಕೆಯಾಗಿದೆ?
    ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಗ್ರಾಮೀಣ ಭಾಗದಲ್ಲಿ 82, ನಗರದಲ್ಲಿ 40 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ ಗ್ರಾಮೀಣ ಭಾಗದಲ್ಲಿ 51 ಸ್ಥಾನ, ನಗರಗಳಲ್ಲಿ 27 ಸ್ಥಾನಗಳನ್ನು ಗೆದ್ದುಕೊಂಡಿದೆ.

    2013ರಲ್ಲಿ ಗ್ರಾಮೀಣದಲ್ಲಿ 22, ನಗರದಲ್ಲಿ 18 ಸ್ಥಾನ ಗೆದ್ದಿದ್ದ ಬಿಜೆಪಿ, ಈ ಬಾರಿ ಗ್ರಾಮೀಣ ಭಾಗದಲ್ಲಿ ಗೆದ್ದ ಸ್ಥಾನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಗ್ರಾಮೀಣ ಭಾಗದಲ್ಲಿ 69, ನಗರದಲ್ಲಿ 35 ಸ್ಥಾನಗಳನ್ನು ಬುಟ್ಟಿಗೆ ಹಾಕಿಕೊಂಡಿದೆ.

    ಜನತಾ ದಳ ಸ್ಥಾನದ ಪ್ರಮಾಣದಲ್ಲಿ ನಿಖರತೆಯನ್ನು ಮುಂದುವರೆಸಿದ್ದು, 2013 ರಲ್ಲಿ ಗ್ರಾಮೀಣದಲ್ಲಿ 30, ನಗರದಲ್ಲಿ 10 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ ಗ್ರಾಮೀಣ ಭಾಗದಲ್ಲಿ 2 ಕ್ಷೇತ್ರ ಕಳೆದುಕೊಂಡು 28 ಸ್ಥಾನ ಗೆದ್ದರೆ, ನಗರ ಭಾಗದಲ್ಲಿ ಒಟ್ಟು 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

    ಈ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಬಿಜೆಪಿ ಗೆದ್ದರೂ ಶೇಖಡವಾರು ಮತಗಳಿಕೆಯ ಪ್ರಮಾಣದಲ್ಲಿ ಕಾಂಗ್ರೆಸ್ ಮುಂದಿದೆ. 2013 ರಲ್ಲಿ ಕಾಂಗ್ರೆಸ್ 36.6% ಮತ ಪಡೆದಿದ್ದರೆ, ಈ ಬಾರಿ 38% ಮತ ಪ್ರಮಾಣ ಪಡೆದಿದೆ. ಬಿಜೆಪಿ 2013 ರಲ್ಲಿ ಕೇವಲ 19.9% ಮತಗಳನ್ನು ಪಡೆದಿದ್ದರೆ, ಈ ಬಾರಿ 36.2% ರಷ್ಟು ಮತ ಪಡೆದಿದೆ. ಉಳಿದಂತೆ ಜೆಡಿಎಸ್ 2013ರಲ್ಲಿ 20.2% ಮತ ಪಡೆದಿದ್ದರೆ, ಈ ಬಾರಿ 18.4% ರಷ್ಟು ಮತ ಪಡೆಯುವಲ್ಲಿ ಯಶಸ್ವಿಯಾಗಿದೆ.

  • ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿಎಂ ಕಣ್ಣೀರು!

    ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿಎಂ ಕಣ್ಣೀರು!

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‍ಗೆ ಬಹುಮತ ತರುವಲ್ಲಿ ವಿಫಲವಾಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಣ್ಣೀರು ಹಾಕಿದ್ದಾರೆ ಅಂತಾ ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

    ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗದ ಸಭೆಯಲ್ಲಿ ಸಿಎಂ ಕಣ್ಣೀರು ಹಾಕಿದ್ದಾರೆ ಅಂತಾ ಹೇಳಲಾಗುತ್ತಿದೆ. ಸರ್ಕಾರ 5 ವರ್ಷ ಉತ್ತಮ ಆಡಳಿತ ನೀಡಿದ್ರೂ, ಜನರ ಬೆಂಬಲ ಸಿಗಲಿಲ್ಲ ಅಂತಾ ದುಃಖದಿಂದ ಅತ್ತಿದ್ದಾರೆ. ಈ ವೇಳೆ ಸಿಎಂ ಜೊತೆ ಎಂಎಲ್‍ಸಿ ಸೇರಿ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

    ಸಚಿವ ರಾಮಲಿಂಗಾ ರೆಡ್ಡಿ ಕೆಪಿಸಿಸಿ ಕಚೇರಿಯ ಮುಂಭಾಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡುವಾಗ, ಶಾಸಕಾಂಗದ ಸಭೆಯಲ್ಲಿ ಸಿಎಂ ಕಣ್ಣೀರು ಹಾಕಿಲ್ಲ ಅಂತಾ ಸ್ಪಷ್ಟಪಡಿಸಿದ್ರು. ಬಿಜೆಪಿಯವರು ನಮ್ಮ ಕೆಲ ಶಾಸಕರನ್ನು ಸಂಪರ್ಕ ಮಾಡಿದ್ದಾರೆ. ಆದ್ರೆ ಯಾವ ಶಾಸಕರು ಬಿಜೆಪಿಗೆ ಬೆಂಬಲ ನೀಡಲ್ಲ. ಇನ್ನೂ ಕೆಲವು ಶಾಸಕರು ಮಾರ್ಗ ಮಧ್ಯೆದಲ್ಲಿದ್ದು, ಆದಷ್ಟು ಬೇಗ ಬೆಂಗಳೂರಿಗೆ ಬರುತ್ತಿದ್ದಾರೆ ಅಂತಾ ಹೇಳಿದ್ರು.

    ಈಗಾಗಲೇ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ರಾಜಭವನಕ್ಕೆ ತೆರಳಿ ಸರ್ಕಾರ ರಚಿಸಲು ಅನುಮತಿ ನೀಡಬೇಕೆಂದು ರಾಜ್ಯಪಾಲರಲ್ಲಿ ಮನವಿ ಮಾಡಿಕೊಂಡಿದ್ದಾರೆ.

  • ಹೈಜಾಕ್ ಆಗಲಿ, ಏನೇ ಆಗಲಿ ಕುಮಾರಸ್ವಾಮಿಯೇ ಸಿಎಂ-  ಹೆಚ್.ಡಿ.ರೇವಣ್ಣ

    ಹೈಜಾಕ್ ಆಗಲಿ, ಏನೇ ಆಗಲಿ ಕುಮಾರಸ್ವಾಮಿಯೇ ಸಿಎಂ- ಹೆಚ್.ಡಿ.ರೇವಣ್ಣ

    ಬೆಂಗಳೂರು: ಯಾವುದೇ ಹೈಜಾಕ್ ಆಗಲಿ ಏನೇ ಆಗಲಿ, ಎಚ್.ಡಿ.ಕುಮಾರಸ್ವಾಮಿ ಹೇಳಿದಂತೆ ಸರ್ಕಾರ ರಚನೆಯಾಗುತ್ತದೆ. ಅವರೇ ಸಿಎಂ ಆಗುವುದು ನಿಶ್ಚಿತ ಎಂದು ಜೆಡಿಎಸ್ ಮುಖಂಡ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

    ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈ ಬಾರಿ ನಮ್ಮ ಪಕ್ಷದಿಂದ ಆಯ್ಕೆಯಾದ 38 ಶಾಸಕರು ಎಲ್ಲಿಯೂ ಹೋಗುವುದಿಲ್ಲ. ನಿಷ್ಠೆಯಿಂದ ಪಕ್ಷದ ಜೊತೆಗಿರುತ್ತಾರೆ. ಕುಮಾರಸ್ವಾಮಿ ಸಿಎಂ ಆಗೋದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದ ಕಡೆಗೆ ಎಲ್ಲರ ಚಿತ್ತ ಹರೆದಿದ್ದು, ಎಚ್.ಡಿ.ರೇವಣ್ಣ ಅವರು ದೇವರ ಪ್ರಸಾದ ಹಿಡಿದು ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ದಾಸರಹಳ್ಳಿ ಶಾಸಕ ಮಂಜುನಾಥ್, ಡಿ.ಸಿ.ತಮ್ಮಣ್ಣ, ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಹಾಜರಿದ್ದರು.

    ದೇವೇಗೌಡರು ಈಗಾಗಲೇ ಜೆಡಿಎಸ್ ಶಾಸಕರ ಜವಾಬ್ದಾರಿಯನ್ನು ಹೇಗೆ ನಿರ್ವಹಿಸಬೇಕು ಎಂದು ಶ್ರೀಕಂಠೇಗೌಡರಿಗೆ ನಿರ್ದೇಶನ ನೀಡಿದ್ದಾರೆ. ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕೇಳಿಬಂದಿದೆ.

    ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಂಶೆಂಪುರ್ ಮತ್ತು ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

  • ನಾಳೆಯೇ ಪ್ರಮಾಣ ವಚನ ಸ್ವೀಕಾರ ಮಾಡ್ತೀನಿ: ಬಿ.ಎಸ್.ಯಡಿಯೂರಪ್ಪ

    ನಾಳೆಯೇ ಪ್ರಮಾಣ ವಚನ ಸ್ವೀಕಾರ ಮಾಡ್ತೀನಿ: ಬಿ.ಎಸ್.ಯಡಿಯೂರಪ್ಪ

    ಬೆಂಗಳೂರು: ಬಿಜೆಪಿ ಈ ಬಾರಿ ಚುನಾವಣೆಯಲ್ಲಿ 104 ಸೀಟ್ ಪಡೆದ್ರೂ ಸರ್ಕಾರ ರಚನೆಗೆ ಸಾಧ್ಯವಾಗಿಲ್ಲ. ಆದ್ರೂ ನಾಳೆಯೇ ಪ್ರಮಾಣ ವಚನ ಸ್ವೀಕರಿಸಲು ಕಾಲಾವಕಾಶ ನೀಡುವಂತೆ ರಾಜ್ಯಪಾಲರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಅಂತಾ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಎಲ್ಲರ ಸಮ್ಮುಖದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಶಾಸಕಾಂಗದ ನಾಯಕನಾಗಿ ಆಯ್ಕೆಯಾದ ಬಳಿಕ ನೇರವಾಗಿ ರಾಜಭವನಕ್ಕೆ ಹೋಗುತ್ತೇವೆ. ರಾಜ್ಯಪಾಲರನ್ನು ಭೇಟಿ ಮಾಡಿ ನಮ್ಮ ಬೇಡಿಕೆಯನ್ನು ಸಲ್ಲಿಸುತ್ತೇವೆ. ಕಾಂಗ್ರೆಸ್‍ನ್ನು ಜನರು ತಿರಸ್ಕರಿಸಿದ್ರೂ ಹಿಂಬಾಗಿಲಿನಿಂದ ಬರಲು ಪ್ರಯತ್ನ ಮಾಡುತ್ತಿದೆ ಅಂತಾ ಗರಂ ಆದ್ರು.

    ಬೆಳಗ್ಗೆ 8ಗಂಟೆಯಿಂದಲೂ ಯಡಿಯೂರಪ್ಪರ ನಿವಾಸಕ್ಕೆ ಸಾಲು ಸಾಲು ನಾಯಕರು ಭೇಟಿ ನೀಡುತ್ತಿದ್ದಾರೆ. ಕೆ.ಎಸ್.ಈಶ್ವರಪ್ಪ, ಗೋವಿಂದ್ ಕಾರಜೋಳ, ಸಿಎಂ ಉದಾಸಿ, ಜಿ.ಎಂ.ಸಿದ್ದೇಶ್ವರ, ಅರಗ ಜ್ಞಾನೇಂದ್ರ, ಕನನಗಿರಿ ಬಸವರಾಜ ಮತ್ತಿತರ ನಾಯಕರು ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸುತ್ತಿದ್ದಾರೆ.

    ಇದೇ ವೇಳೆ ಮಾತನಾಡಿದ ಶಾಸಕ ಗೋವಿಂದ ಕಾರಜೋಳ, ಬಿಜೆಪಿ ಪಕ್ಷವನ್ನ ಬೆಂಬಲಿಸಿದ್ದಕ್ಕೆ ನಾಡಿನ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಸಂವಿಧಾನ ಬದ್ಧವಾಗಿ ನಾವೇ ಸರ್ಕಾರ ರಚನೆ ಮಾಡ್ತೀವಿ ಅಂತಾ ಹೇಳಿದ್ರು.