Tag: Karnataka Election

  • ರಾಹುಲ್ ಗಾಂಧಿ ದೇವೇಗೌಡರ ಮಗನ ಸಮಾನ: ಡಿ.ಕೆ. ಶಿವಕುಮಾರ್

    ರಾಹುಲ್ ಗಾಂಧಿ ದೇವೇಗೌಡರ ಮಗನ ಸಮಾನ: ಡಿ.ಕೆ. ಶಿವಕುಮಾರ್

    -ಬುಲೆಟ್ ಬೈಕ್‍ನಲ್ಲಿ ಸಚಿವ ಡಿಕೆಶಿ ರ‍್ಯಾಲಿ

    ಚಿಕ್ಕಮಗಳೂರು: ಮೂಡಿಗೆರೆ ಕಾಂಗ್ರೆಸ್ ಅಭ್ಯರ್ಥಿ ಪರ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಬೈಕ್ ರ‍್ಯಾಲಿಗೆ ಚಾಲನೆ ನೀಡಿದ್ದಾರೆ.

    ಡಿ.ಕೆ.ಶಿವಕುಮಾರ್ ಮೂಡಿಗೆರೆ ನಗರದ ಪ್ರಮುಖ ರಸ್ತೆಗಳಲ್ಲಿ ಬುಲೆಟ್ ಬೈಕ್ ಏರಿ, ಹೆಲ್ಮೆಟ್ ಧರಿಸಿ ತಾವೇ ಬೈಕ್ ಓಡಿಸಿ ರ‍್ಯಾಲಿ ಮಾಡಿದ್ದು, ತಮ್ಮ ಅಭ್ಯರ್ಥಿ ಪರ ಮತಬೇಟೆಯಾಡಿದ್ದಾರೆ. ಡಿಕೆಶಿಯ ಬೈಕ್ ರ‍್ಯಾಲಿಗೆ ಸಾವಿರಾರು ಯುವಕರು ಭಾಗಿಯಾಗಿದ್ದು, ಸಾಥ್ ನೀಡಿದ್ದಾರೆ. ಹೊಯ್ಸಳ ಮೈದಾನದಿಂದ ಅಡ್ಯಂತಾಯ ರಂಗ ಮಂದಿರದ ವರೆಗೆ ಡಿ.ಕೆ.ಶಿವಕುಮಾರ್ ಬೈಕ್ ರ‍್ಯಾಲಿ ಮಾಡಿದ್ದಾರೆ.

    ಇದೇ ವೇಳೆ ರಾಹುಲ್ ರಾಜ್ಯಕ್ಕೆ ಬಂದ ಕೂಡಲೇ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದಿದ್ದ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ ದೇವೇಗೌಡರ ಮಗನ ಸಮಾನ. ದೇವೇಗೌಡರು ಮೊದಲಿಂದಲೂ ಪಕ್ಷದ ಅಧ್ಯಕ್ಷರಾಗಿದ್ದಾರೆ. ರಾಜಕಾರಣದಲ್ಲಿ ಅನುಭವಿಯಾಗಿದ್ದಾರೆ ಎಂದು ಹೇಳಿದ್ದಾರೆ.

    ಗಾಂಧೀ ಕುಟುಂಬ ದೇಶದ ಹಿತಕ್ಕೊಸ್ಕರ ದೊಡ್ಡ ತ್ಯಾಗ ಮಾಡಿದ ಕುಟುಂಬವಾಗಿದೆ. ಆ ಕುಟುಂಬದ ಕುಡಿ ರಾಹುಲ್ ಗಾಂಧಿ. ಅವರಿಗೆ ಜನ ತೋರಿಸುತ್ತಿರುವ ಅಭಿಮಾನ ಮತ್ತು ಪ್ರೀತಿ ನಮಗೆ ಗೊತ್ತಿದೆ. ದೇವೇಗೌಡರು ತುಂಬಾ ಹಿರಿಯರು, ಅವರು ಏನಾದರೂ ಹೇಳಿಕೊಳ್ಳಲಿ ನಮಗೇನೂ ತೊಂದರೆ ಇಲ್ಲ ಎಂದ್ರು.

  • ನಾವು ರಾಹುಲ್ ಬಾಬಾಗೆ ಏಕೆ ಹೇಳ್ಬೇಕು?: ಅಮಿತ್ ಶಾ

    ನಾವು ರಾಹುಲ್ ಬಾಬಾಗೆ ಏಕೆ ಹೇಳ್ಬೇಕು?: ಅಮಿತ್ ಶಾ

    ವಿಜಯಪುರ: ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರ 216 ರೈತಪರ ಯೋಜನೆಗಳ ಮೂಲಕ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಜಾರಿಗೆ ತಂದಿದೆ. ಆದರೆ ರಾಹುಲ್ ಬಾಬಾ ನಾಲ್ಕು ವರ್ಷಗಳಲ್ಲಿ ಮೋದಿ ಅವರ ಕೊಡುಗೆ ಏನು ಎಂದು ಕೇಳ್ತಾರೆ, ನಾವು ರಾಹುಲ್ ಬಾಬಾಗೆ ಏಕೆ ಹೇಳ್ಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

    ಜಿಲ್ಲೆಯ ಬಬಲೇಶ್ವರ ಮತ ಕ್ಷೇತ್ರದ ತಿಕೋಟಾದಲ್ಲಿ ಪಕ್ಷದ ಅಭ್ಯರ್ಥಿ ಪರ ಮತಯಾಚನೆ ಮಾಡಿದ ಅಮಿತ್ ಶಾ, ರಾಜ್ಯದಲ್ಲಿ ಬಿಜೆಪಿ ಅಲೆ ನಿರ್ಮಾಣವಾಗಿತ್ತು. ಈಗ ಅದು ಸುನಾಮಿಯಾಗಿದೆ. ಇದು ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೆಸೆಯಲಿದೆ. ರಾಹುಲ್ ಬಾಬಾ ಅವರು 1 ರಿಂದ ಅಂಕಿ ಎಣಿಸಿ ದೇಶದಲ್ಲಿ ಎಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ. ಸಿದ್ದರಾಮಯ್ಯ ಎಲ್ಲೆಡೆ ನಿದ್ರೆ ಮಾಡುವ ಕೆಲಸ ಮಾಡುತ್ತಾರೆ. ರಾಜ್ಯದ ಮುಖ್ಯ ಮಂತ್ರಿಗಳು ನಿದ್ರೆ ಮಾಡಿದರೆ ಎಲ್ಲಿ ಅಭಿವೃದ್ಧಿಯಾಗುತ್ತದೆ ಎಂದು ರಾಹುಲ್ ಬಾಬಾರನ್ನು ಕೇಳಿ ಎಂದು ಅಮಿತ್ ಶಾ ಲೇವಡಿ ಮಾಡಿದ್ದಾರೆ.

    2014 ನಂತರ 15 ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿ ಕೂಡ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ನಿಮಗೆ ಕಮಿಟೆಡ್ ಸರ್ಕಾರ ಬೇಕಾ, ಕಮಿಷನ್ ಸರ್ಕಾರ ಬೇಕಾ. ಕಮಿಟೆಡ್ ಸರ್ಕಾರ ಬೇಕಿದ್ದರೆ ಬಿಜೆಪಿಯನ್ನು ಬೆಂಬಲಿಸಿ. ರಾಜ್ಯದಲ್ಲಿ ಕಾಂಗ್ರೆಸ್ ರೈತರಿಗೆ ಅನ್ಯಾಯ ಮಾಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಈ ಸರ್ಕಾರ ಅವಧಿಯಲ್ಲಿ 24 ಅಧಿಕಾರಿಗಳನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.

    ರಾಹುಲ್ ಬಾಬಾ ರೈತರ ಬಗ್ಗೆ ಟಿವಿಯಲ್ಲಿ ಕಾಳಜಿ ತೋರಿ ಮೋದಿ ಸರ್ಕಾರ ರೈತರಿಗೆ 4 ವರ್ಷದಲ್ಲಿ ಏನು ಮಾಡಿದೆ ಎಂದು ಪ್ರಶ್ನಿಸುತ್ತಾರೆ. ಆದರೆ ಕೇಂದ್ರ ಸರ್ಕಾರ 37 ಸಾವಿರ ಕೋಟಿ ರೂ. ಮುದ್ರಾ ಯೋಜನೆ ಅಡಿ ಬ್ಯಾಂಕ್‍ನಿಂದ ರೈತರಿಗೆ ನೀಡಿದೆ ಅಂತಾ ತಿಳಿಸಿದ್ರು.

  • ವಯಸ್ಸಾದ ಯಡಿಯೂರಪ್ಪ ಯಾಕೆ ಸಿಎಂ ಅಭ್ಯರ್ಥಿ? ಸಂವಾದದಲ್ಲಿ ಸ್ಮೃತಿ ಇರಾನಿಗೆ ಯುವತಿ ಪ್ರಶ್ನೆ

    ವಯಸ್ಸಾದ ಯಡಿಯೂರಪ್ಪ ಯಾಕೆ ಸಿಎಂ ಅಭ್ಯರ್ಥಿ? ಸಂವಾದದಲ್ಲಿ ಸ್ಮೃತಿ ಇರಾನಿಗೆ ಯುವತಿ ಪ್ರಶ್ನೆ

    ಬೆಳಗಾವಿ: ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತದೆ. ಆದರೇ ಬಿಜೆಪಿ ಯಾಕೆ ವಯಸ್ಸಾದ ಯಡಿಯೂರಪ್ಪ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ ಎಂದು ಯುವತಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಪ್ರಶ್ನೆ ಮಾಡಿದ್ದಾರೆ.

    ನಗರದ ಕೆಎಲ್‍ಇ ಜಿರಿಗೆ ಭವವನದಲ್ಲಿ ನಡೆದ ಕರುನಾಡ ಜಾಗೃತಿ ಮಹಿಳಾ ಸಂವಾದದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಇಂತಹದೊಂದು ಪ್ರಶ್ನೆಯನ್ನು ಕೇಳಲಾಗಿದೆ. ಪ್ರಶ್ನೆಗೆ ಉತ್ತರಿಸಿದ ಸ್ಮೃತಿ ಇರಾನಿ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಉದಾಹರಣೆ ನೀಡಿ ವಯಸ್ಸಿಗಿಂತ ಅನುಭವ ಮುಖ್ಯ ಅಂದ್ರು.

    ಇದೇ ಸಂವಾದ ಕಾರ್ಯಕ್ರಮದಲ್ಲಿ ದೇಶದಲ್ಲಿ ಡಿಜಿಟಲ್ ಇಂಡಿಯಾದ ಬಗ್ಗೆ ಮಾತನಾಡುತ್ತೀರಿ ಆದರೇ ಎಂಟಿಎಂ ನಲ್ಲಿ ಹಣ ಕೊರತೆ ಉಂಟಾಗಿದೆ ಅಲ್ಲ ಇದಕ್ಕೆ ಎನಂತಿರಿ ಅಂತಾ ಪ್ರಶ್ನೆ ಕೇಳಲಾಯಿತು. ಎಟಿಎಂಗಳಲ್ಲಿ ಹಣವಿದ್ದು, ನೋಟ್ ಅಮಾನೀಕರಣದ ವೇಳೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಇನ್ನೂ ಕೆಲವರು ಕೃತಕ ಅಭಾವ ಸೃಷ್ಠಿಸಲು ಹೊರಟ್ಟಿದ್ದಾರೆ. ರಾಜಕಾರಣಿಗಳು ಹಣ ಹಂಚಿಕೆ ಮಾಡಲು ಹಣ ಸಂಗ್ರಹ ಮಾಡಿರುವ ಅನುಮಾನವಿದೆ ಅಂತಾ ತಿಳಿಸಿದ್ರು.

  • ಕನ್ನಡದ ಕಂದ ಸಿದ್ದರಾಮಯ್ಯ ಮರಾಠಿ ಜಪ – ಬೆಳಗಾವಿಯಲ್ಲಿ ಭಾಷೆ ಬರಲ್ಲ ಎಂದು ಕ್ಷಮೆಯಾಚನೆ

    ಕನ್ನಡದ ಕಂದ ಸಿದ್ದರಾಮಯ್ಯ ಮರಾಠಿ ಜಪ – ಬೆಳಗಾವಿಯಲ್ಲಿ ಭಾಷೆ ಬರಲ್ಲ ಎಂದು ಕ್ಷಮೆಯಾಚನೆ

    ಬೆಳಗಾವಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ತನಗೆ ಮರಾಠಿ ಮಾತನಾಡಲು ಬರಲ್ಲ ಅದ್ದರಿಂದ ಕ್ಷಮಿಸಿ ಎಂದು ಹೇಳಿದ್ದಾರೆ.

    ಬೆಳಗಾವಿಯ ಚಿಕ್ಕೋಡಿ ಹಾಗೂ ನಿಪ್ಪಾಣಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದರು, ಈ ವೇಳೆ ಕಾರ್ಯಕ್ರಮಕ್ಕೆ 3 ಗಂಟೆ ತಡವಾಗಿ ಬಂದ ಅವರು ವೇದಿಕೆಗೆ ಆಗಮಿಸಿ ಕ್ಷಮೆ ಕೋರಿದರು. ಆದರೆ ಮಹಾರಾಷ್ಟ್ರ ಗಡಿ ಪ್ರದೇಶವಾದ ಕಾರಣ ಅವರು ಮತ್ತೆ ತನಗೆ ಮರಾಠಿ ಭಾಷೆ ಬರಲ್ಲ ಎಂದು ಕ್ಷಮೆ ಕೇಳಿದರು.

    ಈ ಹಿಂದೆ ಬಿಜೆಪಿ ಕೇಂದ್ರ ನಾಯಕರ ವಿರುದ್ಧ ಕನ್ನಡ ಭಾಷೆಯ ಅಸ್ತ್ರ ಪ್ರಯೋಗಿಸಿ ತನಗೆ ಹಿಂದಿ ಭಾಷೆ ಬರಲ್ಲ ಎಂದು ಕಾಳೆಲೆದಿದ್ದರು. ಆದರೆ ಇಂದು ನಿಪ್ಪಾಣಿ ಕ್ಷೇತ್ರದಲ್ಲಿ ಮರಾಠಿ ಭಾಷಿಕರ ಮನವೊಲಿಸಲು ಕ್ಷಮೆ ಕೇಳಿದ್ದಾರೆ.

    ಬಳಿಕ ಸಮಾವೇಶದಲ್ಲಿ ಮಾತನಾಡಿದ ಅವರು ವಿರೋಧಿ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ, ಜೆಡಿಎಸ್ ಅವರಪ್ಪನ ಆಣೆ ಅಧಿಕಾರಕ್ಕೆ ಬರುವುದಿಲ್ಲ ಎಂದರು. ಇದೇ ವೇಳೆ ತಾವು ಅಧಿಕಾರಕ್ಕೆ ಬಂದರೆ ಕುರಿಗಾಹಿಗಳ ಎಲ್ಲ ಸಾಲ ಮನ್ನಾ ಮಾಡಲು ತೀರ್ಮಾನಿಸಿದ್ದೇವೆ ಎಂದು ಘೋಷಿಸಿದರು.

    https://www.youtube.com/watch?v=mOOgdKVxZZg

  • ಕಾಂಗ್ರೆಸ್‍ನಿಂದ ಬೆಂಗಳೂರು ವಿಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ

    ಕಾಂಗ್ರೆಸ್‍ನಿಂದ ಬೆಂಗಳೂರು ವಿಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ

    ಬೆಂಗಳೂರು: ಶುಕ್ರವಾರ ಮಂಗಳೂರಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ರು. ಆದ್ರೆ ಇಂದು ಬೆಂಗಳೂರು ವಲಕ್ಕೆ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.

    ಪ್ರತ್ಯೇಕ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನಗರಕ್ಕೆ ಸಾಕಷ್ಟು ಭರವಸೆಗಳನ್ನು ನೀಡಿದೆ. ನಗರದ ಜ್ಞಾನ ಜ್ಯೋತಿ ಸಂಭಾಗಣದಲ್ಲಿ ವೀರಪ್ಪ ಮೊಯ್ಲಿ, ಬಿಕೆ ಹರಿಪ್ರಸಾದ್, ಮಾಜಿ ಪ್ರಧಾನಿಗಳ ಸಲಹೆಗಾರ ಶ್ಯಾಮ್ ಪೀತ್ರೋಡ್, ಕೆಜೆ ಜಾರ್ಜ್, ದಿನೇಶ್ ಗೂಂಡುರಾವ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ರು.

    ಪ್ರಣಾಳಿಕೆಯ ಪ್ರಮುಖ ಭರವಸೆಗಳು ಹೀಗಿವೆ.
    * ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯಕ್ಕೆ ಒಂದು ಲಕ್ಷ ಕೋಟಿ ವಿಶೇಷ ಪ್ಯಾಕೇಜ್.
    * ಟೆಂಡರ್ ಶ್ಯೂರ್ ರಸ್ತೆಗಳ ವ್ಯಾಪ್ತಿ ವಿಸ್ತರಣೆ.
    * ಮೆಟ್ರೊ ಸೌಲಭ್ಯ ವಿಸ್ತರಣೆ.
    * ಜನದಟ್ಟಣೆ ಪ್ರದೇಶದಲ್ಲಿ ಸ್ಕೈವಾಕ್ ನಿರ್ಮಾಣ.
    * ಹಸಿರು ಮನೆಗಳ ಉತ್ತೇಜನಕ್ಕೆ ಉದ್ಯಾನವನಗಳ ನವೀಕರಣ.
    * ಲಕ್ಷ್ಮಣರಾವ್ ವರದಿ ಪ್ರಕಾರ ಕೆರೆಗಳ ಜೀರ್ಣೋದ್ಧಾರ
    * ನಗರ ಪ್ರಮುಖ ರಸ್ತೆಗಳಲ್ಲಿ ವೈಟ್ ಟ್ಯಾಪಿಂಗ್ ಪೂರ್ಣ.
    * ಬೆಂಗಳೂರಿನ ಪಕ್ಕದ ಜಿಲ್ಲೆಗಳಿಗೆ ಮೆಟ್ರೊ ವಿಸ್ತರಣೆ.
    * ಖಾಸಗಿ ಬಸ್‍ಗಳು ನಗರ ಪ್ರವೇಶಿಸದಂತೆ ನಿರ್ಬಂಧ.
    * ಬೆಂಗಳೂರು ಹೊರವಲಯದಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ.
    * ಡೆಲ್ಲಿ ಮೆಟ್ರೊ ಅಂಡರ್ ಗ್ರೌಂಡ್  ಮಾದರಿಯಲ್ಲಿ ಅಂಡರ್ ಗ್ರೌಂಡ್  ಪಥ ನಿರ್ಮಾಣ.
    * ಎಲ್ಲಾ ಪ್ರಮುಖ ಜಂಕ್ಷನ್‍ಗಳಲ್ಲಿ ಸಿಸಿಟಿವಿ.
    * ಆಂಬ್ಯುಲೆನ್ಸ್, ಅಗ್ನಿಶಾಮಕ ವಾಹನಗಳಿಗೆ ಪ್ರತ್ಯೇಕ ಪಥ.
    * ಘನತ್ಯಾಜ್ಯ ಬೇರ್ಪಡಿಸುವಿಕೆ ಕಡ್ಡಾಯ.
    * ಮೇಕೆದಾಟು ಅಣೆಕಟ್ಟು ನಿರ್ಮಾಣ – ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ.
    * ಬೆಂಗಳೂರು ಅಭಿವೃದ್ಧಿಗಾಗಿ ಮೆಟ್ರೊಪಾಲಿಟಿನ್ ಯೋಜನೆ.
    * ಪ್ರತಿ ಮನೆಗಳಿಗೆ 125 ಎಮ್‍ಎಲ್‍ಡಿ ನೀರು ನೀಡುವುದು.
    * ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಸೋಲಾರ್ ಪ್ಯಾನಲ್ ಅಳವಡಿಕೆ.
    * ಸಾರಿಗೆ ಅನೂಕಲಕ್ಕೆ ಹೆಚ್ಚಿನ ಫ್ಲೈ ಓವರ್ ನಿರ್ಮಾಣ.
    * ಹೆಚ್ಚಿನ ತಂತ್ರಜ್ಞಾನದ ಒಳಚರಂಡಿ, ನೀರು ಶುದ್ದೀಕರಣ ಘಟಕ, ಕೆರೆಗಳ ಅಭಿವೃದ್ಧಿ.

    ಒಟ್ಟಿನಲ್ಲಿ ಕಾಂಗ್ರೆಸ್ ಬೆಂಗಳೂರಿನ ಎಲ್ಲಾ ಕ್ಷೇತ್ರಗಳನ್ನು ಪಾರುಪತ್ಯ ಸಾಧಿಸಲು ಭರಪೂರ ಭರವಸೆಗಳನ್ನ ನೀಡಿದೆ.

  • ದೈವದ ನುಡಿಗೆ ತಲೆಬಾಗಿ ಚುನಾವಣಾ ಕಣದಿಂದ ಹಿಂದೆ ಸರಿದ ಶೀರೂರು ಸ್ವಾಮೀಜಿ

    ದೈವದ ನುಡಿಗೆ ತಲೆಬಾಗಿ ಚುನಾವಣಾ ಕಣದಿಂದ ಹಿಂದೆ ಸರಿದ ಶೀರೂರು ಸ್ವಾಮೀಜಿ

    ಉಡುಪಿ: ಇಲ್ಲಿನ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಈ ಬಾರಿ ಚುನಾವಣಾ ಕಣಕ್ಕೆ ಇಳಿದಿದ್ದು ದೊಡ್ಡ ಸುದ್ದಿಯಾಗಿತ್ತು. ಬಿಜೆಪಿ-ಕಾಂಗ್ರೆಸ್ ಗೆ ಸ್ವಾಮೀಜಿ ಸ್ಪರ್ಧೆ ಕೊಂಚ ಆತಂಕವನ್ನು ಸೃಷ್ಟಿಸಿತ್ತು. ಇದೀಗ ಶೀರೂರು ಸ್ವಾಮೀಜಿ ಕಣದಿಂದ ಹಿಂದೆ ಸರಿದಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಬೆಂಬಲ ಕೊಡಲು ನಾಮಪತ್ರ ವಾಪಾಸ್ ಪಡೆದಿರುವುದಾಗಿ ಉಡುಪಿ ಶೀರೂರು ಸ್ವಾಮೀಜಿ ಹೇಳಿಕೊಂಡಿದ್ದರು. ಆದರೆ ಸ್ವಾಮೀಜಿ ಚುನಾವಣಾ ಕಣದಿಂದ ಹಿಂದೆ ಸರಿಯಲು ಕಾರಣ ಸ್ವಾಮೀಜಿಗೆ ದೈವ ಕೊಟ್ಟ ನುಡಿ ಎಂದು ತಿಳಿದುಬಂದಿದೆ.

    ಕೊಡಮಣಿತ್ತಾಯ, ರಾಜನ್ ದೈವ, ಬ್ರಹ್ಮ ಬೈದರ್ಕಳ ದೈವಕ್ಕೆ ನರ್ತನ ಸೇವೆ ನೀಡಿದ್ದರು. ಕೋಲ ಸೇವೆಯ ಕೊನೆಗೆ ಯಜಮಾನನ ಮುಂದೆ ನುಡಿ ಕೊಡುವುದು ಸಂಪ್ರದಾಯ. ಕೋಲ ಮಾಡಿಸಿದ ವ್ಯಕ್ತಿ, ಊರಿನ ಜನರು ಮನಸ್ಸಿನ ಇಷ್ಟಾರ್ಥಗಳನ್ನು ಪ್ರಶ್ನೆ ರೂಪದಲ್ಲಿ ಇಡುತ್ತಾರೆ. ಇದಕ್ಕೆ ದೈವದಿಂದ ಉತ್ತರ ರೂಪದ ಪರಿಹಾರ ಕೇಳುತ್ತಾರೆ. ಸ್ವಾಮೀಜಿ ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನಿನ್ನ ಮನಸ್ಸಿನ ಇಚ್ಛೆ ಏನು ಎಂದು ಕೇಳಿದ್ದಾರೆ. ಈ ಸಂದರ್ಭದಲ್ಲಿ ದೈವ ಸಕಾರಾತ್ಮಕ ಉತ್ತರ ನೀಡಿಲ್ಲ. ಆದ್ದರಿಂದ ಆಶೀರ್ವದಿಸುವ ಕೈ ಜನರ ಮುಂದೆ ಯಾಚನೆ ಮಾಡಬಾರದು. ಇದು ಶೋಭೆಯಲ್ಲ ಅಂತ ದೈವ ನುಡಿ ಕೊಟ್ಟಿದೆ. ಅದರಂತೆ ಸ್ವಾಮೀಜಿ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

    ಇದರ ಜೊತೆ ಪ್ರಧಾನಿ ಮೋದಿಯವರ ಚಿಂತನೆ ಬೆಂಬಲಿಸುವ ಶ್ರೀಗಳು ಕಣದಿಂದ ಒಂದು ಕಾಲು ಹಿಂದಿಟ್ಟಿದ್ದಾರೆ. ದೈವದ ನುಡಿಯನ್ನು ಕರಾವಳಿಯಲ್ಲಿ ಯಾರೂ ಮೀರುವುದಿಲ್ಲ. ಶೀರೂರು ಸ್ವಾಮೀಜಿಗೂ ದೈವ-ದೇವರ ಮೇಲೆ ಅಪಾರ ನಂಬಿಕೆಯಿದೆ. ಹೀಗಾಗಿ ಸ್ವಾಮೀಜಿ ಚುನಾವಣೆಗೆ ಮುನ್ನ ಬ್ರಹ್ಮ ಬೈದರ್ಕಳ ದೈವದ ಕೋಲ ಸೇವೆ ಮಾಡಿಸಿ ನುಡಿಯನ್ನು ಅಪೇಕ್ಷಿಸಿದ್ದಾರೆ. ಈ ಸ್ವಾರಸ್ಯಕರ ಕಾರಣ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

    ಶೀರೂರು ಶ್ರೀಗಳು ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಅವರು ನಂಬುವ ದೈವಗಳೂ ಕೂಡ ಬೇಡ ಎಂದಿದ್ದವು ಎಂಬ ಕುತೂಹಲಕಾರಿ ಅಂಶ ಈಗ ಬೆಳಕಿಗೆ ಬಂದಿದೆ. ಶೀರೂರು ಶ್ರೀಗಳು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ ನಂತರ, ತಮ್ಮ ಮಠದಲ್ಲಿ 3 ದಿನಗಳ ದೈವಗಳ ಕೋಲವನ್ನು ವಿಜೃಂಭಣೆಯಿಂದ ಆಯೋಜಿಸಿದ್ದರು.

    ಈ ಸಂದರ್ಭದಲ್ಲಿ ಸ್ವಾಮೀಜಿ, ತಾವು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇವೆ. ತಮ್ಮನ್ನು ಗೆಲ್ಲಿಸಿಕೊಡುತ್ತೀರಾ ಎಂದು ದೈವಗಳನ್ನು ಕೇಳಿದ್ದರು. ಅದಕ್ಕೆ ದೈವಗಳು ನೀಡಿದ ಉತ್ತರ ಅಷ್ಟೇನೂ ಆಶಾದಾಯಕವಾಗಿರಲಿಲ್ಲ. ಸ್ವಾಮಿಗಳೇ ನೀವು ದೇವರಿಗಿಂತ ಒಂದು ಪಟ್ಟ ಕೆಳಗಿದ್ದೀರಿ, ಮಠಾಧೀಶರ ಪಟ್ಟ ಶ್ರೇಷ್ಟವಾದ ಪಟ್ಟ. ಅದನ್ನು ಬಿಟ್ಟು ನಿಮ್ಮನ್ನು ಇನ್ನೂ ಕೆಳಗಿನ ಪಟ್ಟದಲ್ಲಿ ನೋಡುವುದಕ್ಕೆ ನಾವು ಇಷ್ಟಪಡುವುದಿಲ್ಲ. ನೀವು ಈಗಿರುವ ಪಟ್ಟವನ್ನು ಬಿಟ್ಟು ಕೆಳಗಿನ ಪಟ್ಟಕ್ಕೆ ಇಳಿಯುವುದಕ್ಕೆ ಹೊರಟರೆ ನಾವು ನಿಮಗೆ ಬೆಂಬಲ ಕೊಡುವುದಿಲ್ಲ ಎಂದು ದೈವ ಹೇಳಿತ್ತು ಎಂದು ಕೋಲದ ಸಂದರ್ಭದಲ್ಲಿ ಉಪಸ್ಥಿತರಿದ್ದವರು ಮಾತಾಡಿಕೊಳ್ಳುತ್ತಿದ್ದಾರೆ.

  • ಬಿಜೆಪಿ ಹೈಕಮಾಂಡ್‍ನಿಂದ ಅನಂತ್‍ಕುಮಾರ್, ಅಶೋಕ್‍ಗೆ ಅಗ್ನಿಪರೀಕ್ಷೆ!

    ಬಿಜೆಪಿ ಹೈಕಮಾಂಡ್‍ನಿಂದ ಅನಂತ್‍ಕುಮಾರ್, ಅಶೋಕ್‍ಗೆ ಅಗ್ನಿಪರೀಕ್ಷೆ!

    ಬೆಂಗಳೂರು: ಬಿಜೆಪಿ ಕರ್ನಾಟಕದಲ್ಲಿ ಅಧಿಕಾರ ಹಿಡಿಯಬೇಕೆಂದು ಪ್ರಯತ್ನ ಮಾಡುತ್ತಿದೆ. ಹೀಗಾಗಿ ಅಷ್ಟೇ ಚುರುಕಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹ ಹೊಸ ಲೆಕ್ಕಾಚಾರಗಳ ಮೂಲಕ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗ್ತಿದ್ದಾರೆ.

    ಬೆಂಗಳೂರು ಗೆಲ್ಲಲು ಅಮಿತ್ ಶಾ ಪ್ಲಾನ್ ಮಾಡಿಕೊಂಡಿದ್ದು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಎರಡು ಸಮಾವೇಶಗಳನ್ನು ಆಯೋಜನೆ ಮಾಡಲಾಗಿದೆ. ಮೇ 3 ಮತ್ತು 8 ರಂದು ಮೋದಿ ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಎರಡು ಸಮಾವೇಶಗಳ ಮೂಲಕ ಬೆಂಗಳೂರಿನಲ್ಲಿ 20 ಕ್ಷೇತ್ರಗಳನ್ನು ಗೆಲ್ಲುವುದು ಅಮಿತ್ ಶಾ ಪ್ಲಾನ್ ಆಗಿದೆ. ಇದನ್ನೂ ಓದಿ: ಕೊಪ್ಪಳದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಮಿತ್ ಶಾ ಫುಲ್ ಕ್ಲಾಸ್

    ಬೆಂಗಳೂರಿನಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಗುರಿಯನ್ನು ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಮಾಜಿ ಡಿಸಿಎಂ ಆರ್. ಅಶೋಕ್ ಅವರಿಗೆ ನೀಡಲಾಗಿದೆ. ಬೆಂಗಳೂರಿನಲ್ಲಿ 20 ಸೀಟ್ ಗಳನ್ನು ಗೆಲ್ಲಿಸುವುದಕ್ಕಾಗಿ ಅನಂತ್ ಕುಮಾರ್, ಅಶೋಕ್ ಇಬ್ಬರಿಗೂ ಅಮಿತ್ ಶಾ ಕಟ್ಟಾಜ್ಞೆ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಮಾವೇಶ 2, ಸೀಟು 20 ಅಮಿತ್ ಶಾ ಮಾಸ್ಟರ್ ಪ್ಲಾನ್!

  • ಹೆಲ್ಮೆಟ್ ಹಾಕಿದ್ರೆ ತಲೆ ಉಳಿಯುತ್ತೆ, ಮತ ಹಾಕಿದ್ರೆ ದೇಶ ಉಳಿಯುತ್ತೆ- ಸಿದ್ದಗಂಗಾ ಕಿರಿಯ ಶ್ರೀಗಳಿಂದ ಮತದಾನದ ಜಾಗೃತಿ

    ಹೆಲ್ಮೆಟ್ ಹಾಕಿದ್ರೆ ತಲೆ ಉಳಿಯುತ್ತೆ, ಮತ ಹಾಕಿದ್ರೆ ದೇಶ ಉಳಿಯುತ್ತೆ- ಸಿದ್ದಗಂಗಾ ಕಿರಿಯ ಶ್ರೀಗಳಿಂದ ಮತದಾನದ ಜಾಗೃತಿ

    ತುಮಕೂರು: ಮತದಾನ ನಮ್ಮ ಸಂವಿಧಾನ ನಮಗೆ ಕೊಟ್ಟಿರುವ ಹಕ್ಕು. ಅದನ್ನು ಯಾವುದೇ ಕಾರಣದಿಂದ ಕಳೆದುಕೊಳ್ಳಬಾರದು. ಮತದ ಪಾವಿತ್ರತೆಯನ್ನು ಕಾಪಾಡಿಕೊಳ್ಳಿ ಎಂದು ಸಿದ್ದಗಂಗಾ ಕಿರಿಯ ಶ್ರೀಗಳು ಸಾರ್ವಜನಿಕರಲ್ಲಿ ಮನವಿ ಮಾಡುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

    ಕುಣಿಗಲ್ ನ ಕೆಂಪನಹಳ್ಳಿಯಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ದಯವಿಟ್ಟು ಯಾರೂ ಮನೆಯಲ್ಲಿ ಕೂರದೇ ಕಡ್ಡಾಯವಾಗಿ ಮತಗಟ್ಟೆಗೆ ಹೋಗಿ ತಮಗೆ ಇಚ್ಛೆ ಬಂದ ಅಭ್ಯರ್ಥಿಗೆ ಮತದಾನ ಮಾಡಿ. ಉತ್ತಮ ನಾಯಕನನ್ನು ಆಯ್ಕೆ ಮಾಡುವುದು ಪ್ರಜೆಗಳಾಗಿ ನಮ್ಮ ಮೇಲೆ ಇರುವ ಜವಾಬ್ದಾರಿ ಎಂದು ಭಕ್ತರಲ್ಲಿ ವಿನಂತಿ ಮಾಡಿಕೊಂಡರು.

    ಹೆಲ್ಮೆಟ್ ಹಾಕಿದರೆ ತಲೆ ಉಳಿಯುತ್ತೆ ಮತ ಹಾಕಿದರೆ ದೇಶ ಉಳಿಯುತ್ತೆ ಎಂದು ಹೇಳುತ್ತಾರೆ. ಉತ್ತಮ ನಾಯಕನನ್ನು ಆಯ್ಕೆ ಮಾಡುವುದು ಪ್ರಜೆಗಳಾದ ನಮ್ಮ ಮೇಲೆ ಇರುವ ಜವಾಬ್ದಾರಿ. ಮತದಾನ ಮಾಡುವಂತೆ ಎಲ್ಲರನ್ನೂ ಪ್ರೋತ್ಸಾಹಿಸಿ ಎಂದು ಹೇಳಿದರು.

    ತಾನೂ ಪ್ರತೀ ನಿತ್ಯ ಬಾಗಿಯಾಗುವ ಎಲ್ಲಾ ವೇದಿಕೆಯಲ್ಲಿ ಸಿದ್ದಲಿಂಗಸ್ವಾಮಿಗಳು ಮತದಾನದ ಮಹತ್ವದ ಕುರಿತು ಅರಿವು ಮೂಡಿಸುತಿದ್ದಾರೆ.

  • ಕೊನೆಗೂ ಹುಚ್ಚ ವೆಂಕಟ್ ಗೆ `ಎಕ್ಕಡ’ ದಯಪಾಲಿಸಿದ ಚುನಾವಣಾ ಆಯೋಗ!

    ಕೊನೆಗೂ ಹುಚ್ಚ ವೆಂಕಟ್ ಗೆ `ಎಕ್ಕಡ’ ದಯಪಾಲಿಸಿದ ಚುನಾವಣಾ ಆಯೋಗ!

    ಬೆಂಗಳೂರು: ನನ್ ಮಗಂದ್ ನನ್ ಎಕ್ಕಡ ಅಂತಾ ತಲೆ ತುಂಬಾ ಇರುವ ಕೂದಲನ್ನು ಕೆದರಿಸಿ ಕೆದರಿಸಿ ಹೇಳುವ ಹುಚ್ಚಾ ವೆಂಕಟ್ ಗೆ ಕೊನೆಗೂ ಚುನಾವಣಾ ಆಯೋಗ ಎಕ್ಕಡವನ್ನು ದಯಪಾಲಿಸಿದೆ.

    ನಟ, ನಿರ್ದೇಶಕ ಹುಚ್ಚ ವೆಂಕಟ್ ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಎಲ್ಲಾ ಪಕ್ಷದವರು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈಗಾಗಲೇ ಚುನಾವಣೆ ಪ್ರಚಾರವನ್ನು ಶುರು ಮಾಡಿದ್ದಾರೆ.

    ಹುಚ್ಚ ವೆಂಕಟ್ ಆರ್ ಆರ್ ನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಚುನಾವಣೆ ಆಯೋಗವು ಅಭ್ಯರ್ಥಿಗಳ ಗುರುತನ್ನ, ಚಿಹ್ನೆಯನ್ನು ಘೋಷಣೆ ಮಾಡಿದೆ. ಆದರೆ ನಿಮ್ಮಪ್ಪನ ಚಪ್ಪಲಿ ಸೈಜ್ ಗೊತ್ತಾ, ಅಪ್ಪಂಗೆ ಯಾವತ್ತಾದ್ದರೂ ಚಪ್ಪಲಿ ಕೊಡಿಸಿದ್ದೀರಾ ಅಂತಾ ಪದೇ ಪದೇ ಟಿವಿಯೆದುರು ಕುಂತಾಗ ಸೆಂಟಿಮೆಂಟ್ ಡೈಲಾಗ್ ಹೇಳುವ ವೆಂಕಟ್ ಗೆ ಚಿಹ್ನೆಯಾಗಿ ಎಕ್ಕಡವೆ ತನ್ನ ಗುರುತಾಗಿ ಸಿಕ್ಕಿದೆ.

    ಎಕ್ಕಡನಾ ಕಾಡಿಬೇಡಿ ವೆಂಕಟ್ ಪಡೆದುಕೊಂಡರೋ ಅಥವಾ ಚುನಾವಣಾಧಿಕಾರಿಗಳೇ ವೆಂಕಟ್ ಎಕ್ಕಡಾ ಡೈಲಾಗ್ ಗೆ ಫಿದಾ ಆಗಿ ಇದೇ ಚಿಹ್ನೆ ಕೊಟ್ಟರೋ ಗೊತ್ತಿಲ್ಲ. ಆದರೆ ಎಕ್ಕಡದೊಂದಿಗೆ ಕಣಕ್ಕಿಳಿದಿರುವ ವೆಂಕಟ್ ಆರ್ ಆರ್ ನಗರದಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ.