Tag: Karnataka Election

  • ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಐಟಿ ಶಾಕ್

    ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಐಟಿ ಶಾಕ್

    ಬೆಳಗಾವಿ: ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ಮಾಡುವ ಮೂಲಕ ಶಾಕ್ ಕೊಟ್ಟಿದ್ದಾರೆ.

    ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಸೀರ ಭಾಗವಾನ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಖಾನಾಪುರ ತಾಲೂಕಿನ ಗಂದಿಗವಾಡ ಗ್ರಾಮದಲ್ಲಿ ಇರುವ ಮನೆ ಮತ್ತು ಹುಬ್ಬಳ್ಳಿಯಲ್ಲಿರುವ ಮನೆಯ ಮೇಲೂ 13 ಮಂದಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

    ನಾಸೀರ ಭಾಗವಾನ್ ಕರ್ನಾಟಕ ಚುನಾವಣೆ ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಸುಮಾರು 191 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಣೆ ಮಾಡಿದ್ದರು. ಅಷ್ಟೇ ಅಲ್ಲದೇ ತಮ್ಮ ಬಳಿ ಯಾವುದೇ ವಾಹನ ಇಲ್ಲ ಎಂದು ಹೇಳಿದ್ದರು. ಅಂದು ಹೇಳಿದ್ದ ಹೇಳಿಕೆಯೇ ಇಂದು ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

    ಆದ್ರೆ ಇತ್ತ ಅಧಿಕಾರಿಗಳು ಮಾತ್ರ ಇನ್ನು ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಲಿಲ್ಲ.

  • ಪರಿಶೀಲನೆಯ ನೆಪದಲ್ಲಿ ವ್ಯಾಪಾರಸ್ಥರಿಂದ 8 ಸಾವಿರ ರೂ. ಲಪಟಾಯಿಸಿದ್ರಾ ಚುನಾವಣಾಧಿಕಾರಿ?

    ಪರಿಶೀಲನೆಯ ನೆಪದಲ್ಲಿ ವ್ಯಾಪಾರಸ್ಥರಿಂದ 8 ಸಾವಿರ ರೂ. ಲಪಟಾಯಿಸಿದ್ರಾ ಚುನಾವಣಾಧಿಕಾರಿ?

    ದಾವಣಗೆರೆ: ವ್ಯಾಪಾರಿಗಳಿಂದ ಹಣವನ್ನು ಚುನಾವಣಾ ಅಧಿಕಾರಿಗಳು ಲಪಟಾಯಿಸಿದ್ದಾರೆ ಎಂದು ಆರೋಪವೊಂದು ಜಿಲ್ಲೆಯಲ್ಲಿ ಕೇಳಿಬಂದಿದೆ.

    ಶಾಬೂ ಹಾಗೂ ತಾಜ್ ಎಂಬಿಬ್ಬರು ವ್ಯಾಪಾರಿಗಳು ಹಾವೇರಿ ಜಿಲ್ಲೆಯ ಮಾರುಕಟ್ಟೆಗೆ ಮೆಕ್ಕೆಜೋಳ ವ್ಯಾಪಾರ ಮಾಡಿ ದಾವಣಗೆರೆಗೆ ವಾಪಸ್ ಆಗುತ್ತಿರುವಾಗ ಕುಂದವಾಡದ ಬಳಿ ಇರುವ ಚೆಕ್ ಪೋಸ್ಟ್ ಬಳಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿ ಶಿವಕುಮಾರ್ ಎಂಬವರು ಮೆಕ್ಕೆಜೋಳ ವ್ಯಾಪಾರ ಮಾಡಿ ಬಂದಿದ್ದ 48 ಸಾವಿರ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

    ವ್ಯಾಪಾರಸ್ಥರ ಬಳಿ ದಾಖಲೆಗಳು ಸರಿ ಇದ್ದ ಕಾರಣ ಹಣ ವಾಪಸ್ ಕೊಡುವಾಗ ಕೇವಲ 40 ಸಾವಿರ ಮಾತ್ರ ಕೊಟ್ಟು, ಉಳಿದ 8 ಸಾವಿರವನ್ನು ಅಧಿಕಾರಿ ಶಿವಕುಮಾರ್ ಲಪಟಾಯಿಸಿದ್ದಾರೆ ಎಂದು ವ್ಯಾಪಾರಸ್ಥರು ಅರೋಪ ಮಾಡುತ್ತಿದ್ದಾರೆ.

    ಚುನಾವಣಾ ಅಧಿಕಾರಿಗಳು ಮಾತ್ರ ನಾವು ಹಣ ಲಪಟಾಯಿಸಿಲ್ಲ ಸುಮ್ಮನೆ ನಮ್ಮ ಮೇಲೆ ವ್ಯಾಪಾರಸ್ಥರು ಅರೋಪ ಮಾಡುತ್ತಿದ್ದಾರೆ. ನಾವು ಪರಿಶೀಲನೆ ಮಾಡಿ ಹಾಗೇ ವಾಪಸ್ ಕಳಿಸಿದ್ದೇವೆ. ಬೇಕಾದರೆ ಸಿಸಿ ಕ್ಯಾಮೆರಾಗಳು ಇವೆ ಪರಿಶೀಲನೆ ನಡೆಸಲಿ ಎಂದು ಚುನಾವಣಾ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ವ್ಯಾಪಾರಸ್ಥರು ಮಾತ್ರ ತಮ್ಮ ಹಣವನ್ನು ಚುನಾವಣಾ ಅಧಿಕಾರಿಗಳೇ ಲಪಟಾಯಿಸಿದ್ದಾರೆ ಎಂದು ಅರೋಪ ಮಾಡುತ್ತಿದ್ದಾರೆ.

    ಇನ್ನು ಘಟನೆ ನಡೆದ ಸ್ಥಳಕ್ಕೆ ಚುನಾವಣಾ ಹಿರಿಯ ಅಧಿಕಾರಿಗಳು ಹಾಗೂ ವಿದ್ಯಾನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿ ತನಿಖೆ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

  • ಬಂಟ್ವಾಳದಲ್ಲಿ ರಾಹುಲ್ ಗಾಂಧಿ, ಸಿಎಂಗಿಂತ ಪೂಜಾರಿಗೆ ಹೆಚ್ಚು ಜೈಕಾರ!

    ಬಂಟ್ವಾಳದಲ್ಲಿ ರಾಹುಲ್ ಗಾಂಧಿ, ಸಿಎಂಗಿಂತ ಪೂಜಾರಿಗೆ ಹೆಚ್ಚು ಜೈಕಾರ!

    ಮಂಗಳೂರು: ರಾಹುಲ್ ಗಾಂಧಿ ಕಳೆದ ಎರಡು ದಿನದಿಂದ ಕರಾವಳಿ ಪ್ರವಾಸದಲ್ಲಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಬೃಹತ್ ಸಮಾವೇಶ ಮಾಡಿದ್ದಾರೆ. ಆದರೆ ಸಮಾವೇಶದಲ್ಲಿ ಶೈನ್ ಆಗಿದ್ದು ಸಿಎಂ ಅಲ್ಲ, ರಾಗಾ ಅಲ್ಲ ಬದಲಾಗಿ ಜನಾರ್ದನ ಪೂಜಾರಿ.

    ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರ ಮನೆಯ ವಠಾರದಲ್ಲೇ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಅನಾರೋಗ್ಯದಿಂದಾಗ ಪೂಜಾರಿ ಸಮಾವೇಶಕ್ಕೆ ಬರ್ತಾರೋ ಇಲ್ವೋ ಎಂಬ ಸಂಶಯ ಇತ್ತು. ಆದರೆ ರಾಹುಲ್ ಭಾಷಣ ಮುಗಿಯುತ್ತಿದ್ದಂತೆ, ಅನಾರೋಗ್ಯದ ಹೊರತಾಗಿಯೂ ಪೂಜಾರಿ ನಿಧಾನವಾಗಿ ನಡೆದು ಬಂದು ವೇದಿಕೆ ಹತ್ತಿದರು.

    ಈ ವೇಳೆ ಕೇಳಿ ಬಂದ ಜಯಘೋಷಕ್ಕೆ ಸಿಎಂ ಸಿದ್ದರಾಮಯ್ಯ ಕೆಲಕಾಲ ಭಾಷಣ ಸ್ಥಗಿತಗೊಳಿಸಬೇಕಾಯ್ತು. ಸಿಎಂ , ರಾಹುಲ್ ಗಾಂಧಿ ಗಿಂತ ಜಾಸ್ತಿ ಜನಾರ್ದನ ಪೂಜಾರಿಗೆ ಬಂಟ್ವಾಳದಲ್ಲಿ ಜೈಕಾರ ಬಿದ್ದಿದೆ. ಪೂಜಾರಿಗೆ ವ್ಯಕ್ತವಾದ ಜನಬೆಂಬಲಕ್ಕೆ ಕೆಲಕಾಲ ಸಿಎಂ ಕೂಡಾ ಕಕ್ಕಾಬಿಕ್ಕಿಯಾದರು.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ರಾಹುಲ್ ಪ್ರವಾಸ ನಮಾಜ್ ವಿಚಾರಕ್ಕೂ ಗಮನ ಸೆಳೆಯಿತು. ಅತೀ ಹೆಚ್ಚು ಮುಸ್ಲಿಂ ಮತದಾರರನ್ನು ಹೊಂದಿರುವ ಈ ಕ್ಷೇತ್ರದಲ್ಲಿ ಶುಕ್ರವಾರದ ದಿನ ಸಮಾವೇಶ ಹಮ್ಮಿಕೊಂಡ ಕಾರಣ ಕಾಂಗ್ರೇಸ್ ಪಕ್ಷ ತರಾತುರಿಯ ಕಾರ್ಯಕ್ರಮ ನಡೆಸಿತು.

    ಸರಿಯಾದ ಸಮಯಕ್ಕ ಆರಂಭವಾದ ಸಮಾವೇಶದಲ್ಲಿ ವೇದಿಕೆ ಏರುತ್ತಿದ್ದಂತೆ ರಾಹುಲ್ ಗಾಂಧಿ ಭಾಷಣ ಆರಂಭಿಸಿದರು. ಈ ಮೂಲಕ ಮಧ್ಯಾಹ್ನದ ನಮಾಝ್ ಗೂ ಮುನ್ನ ಸಮಾವೇಶ ಮುಗಿಸಲು ಪ್ರಯತ್ನಿಸಲಾಯ್ತು. ಸಿಎಂ ಸಿದ್ದರಾಮಯ್ಯ ಕೂಡಾ ತಮ್ಮ ಭಾಷಣಕ್ಕೂ ಮುನ್ನ, ನಮಾಜ್ ಗೆ ಅಡ್ಡಿಯಾಗದಂತೆ ಶೀಘ್ರ ಭಾಷಣೆ ಮುಗಿಸುವ ಭರವಸೆ ನೀಡಿ ಭಾಷಣ ಮುಗಿಸಿದರು.

  • ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 58 ಕೆಜಿ ಚಿನ್ನಾಭರಣ ವಶ!

    ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 58 ಕೆಜಿ ಚಿನ್ನಾಭರಣ ವಶ!

    ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಸಾಗಾಣಿಕೆ ಮಾಡುತ್ತಿದ್ದ 58 ಕೆಜಿ ತೂಕದ ಚಿನ್ನಾಭರಣ ವಶಕ್ಕೆ ಪಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಬಾಲೇಪುರ ಗ್ರಾಮದ ಚೆಕ್‍ಪೋಸ್ಟ್ ಬಳಿ ನಡೆದಿದೆ.

    ದೇವನಹಳ್ಳಿ ಮಾರ್ಗದಿಂದ ಹೊಸಕೋಟೆ ಕಡೆಗೆ ತೆರಳುತ್ತಿದ್ದ ಬೊಲೇರೋ ವಾಹನ ತಪಾಸಣೆ ವೇಳೆ ಚಿನ್ನ ಪತ್ತೆಯಾಗಿದೆ. ಬಾಲೇಪುರ ಚೆಕ್‍ಪೋಸ್ಟ್ ಬಳಿ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ತೀವ್ರ ತಪಾಸಣೆಗೆ ಒಳಪಡಿಸಿದ ಸಂದರ್ಭದಲ್ಲಿ ಭಾರೀ ಪ್ರಮಾಣದ ಚಿನ್ನ ಪತ್ತೆಯಾಗಿದೆ.

    ಹೆಚ್ಚಿನ ಪ್ರಮಾಣದ ಚಿನ್ನವನ್ನು ವಿಮಾನ ನಿಲ್ದಾಣದಿಂದ ಬೇರೆಡೆಗೆ ಸಾಗಾಣಿಕೆ ಮಾಡುತ್ತಿದ್ದರು ಎನ್ನಲಾಗಿದ್ದು, ಇವುಗಳಿಗೆ ಸೂಕ್ತ ದಾಖಲೆಗಳನ್ನು ನೀಡದ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ವಶಕ್ಕೆ ಪಡೆಯಲಾಗಿರುವ ಚಿನ್ನ ಮೌಲ್ಯ ಸುಮಾರು 15 ಕೋಟಿ ರೂ. ಆಗಿದೆ.

    ಘಟನೆಗೆ ಸಂಬಂಧಿಸಿದಂತೆ ಆಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ಓರ್ವ ವ್ಯಕ್ತಿಯನ್ನ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಕಸ್ಟಮ್ಸ್ ಹಾಗೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಚೆನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಈ ಬಾರಿ ಉಡುಪಿ – ಮಂಗಳೂರಲ್ಲಿ ಬಿಜೆಪಿ ಒಂದೂ ಸೀಟ್ ಗೆಲ್ಲಲ್ಲ: ಸಿಎಂ

    ಈ ಬಾರಿ ಉಡುಪಿ – ಮಂಗಳೂರಲ್ಲಿ ಬಿಜೆಪಿ ಒಂದೂ ಸೀಟ್ ಗೆಲ್ಲಲ್ಲ: ಸಿಎಂ

    ಮಂಗಳೂರು: ಈ ಬಾರಿ ಉಡುಪಿ, ಮಂಗಳೂರಲ್ಲಿ ಬಿಜೆಪಿಗೆ ಒಂದೂ ಸೀಟು ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರಾವಳಿ ಬಿಜೆಪಿಯ ಕೋಮುವಾದವನ್ನು ಮೆಟ್ಟಿ ನಿಂತಿದ್ದು ಇಲ್ಲಿಯ ಜನ ಮತ್ತೊಮ್ಮೆ ನಮ್ಮ ಕೈ ಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬಿಜೆಪಿ ನಾಯಕರಿಗೆ ಮೂರು ಕಾಸಿನ ಮಾನ ಮರ್ಯಾದೆ ಇಲ್ಲ. ಚುನಾವಣೆ ಘೋಷಣೆಯಾದ ಕೂಡಲೇ 2008 ರ ಲೂಟಿ ಕೋರರು ಮತ್ತೆ ಒಂದಾಗಿದ್ದಾರೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಟೀಂ ವಿರುದ್ಧ ಸಿಎಂ ಆಕ್ರೋಷ ವ್ಯಕ್ತಪಡಿಸಿದರು.

    ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಕರುಣಾಕರ್ ರೆಡ್ಡಿ, ಶ್ರೀರಾಮುಲು, ಬಿಎಸ್‍ವೈ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಶೋಭಾ ಕರಂದ್ಲಾಜೆ ದೊಡ್ಡ ಲೂಟಿಕೋರರು. 5 ವರ್ಷದಲ್ಲಿ 1 ಲಕ್ಷ ಕೋಟಿ ಲೂಟಿಯಾಗಿದೆ ಎಂದು ಸಿಎಂ ಗಂಭೀರ ಆರೋಪ ಮಾಡಿದರು.

    ಬಳ್ಳಾರಿಯ ಭಯದ ವಾತಾವರಣ ಮತ್ತೆ ಈಗ ಒಂದಾಗಿದೆ. ರಿಪಬ್ಲಿಕ್ ಆಫ್ ಬಳ್ಳಾರಿ ಅಂತ ಲೋಕಾಯುಕ್ತ ಸಂತೋಷ್ ಹೆಗ್ಡೆ ಕರೆದಿದ್ದರು. ನಾನು ಒಬ್ಬಂಟಿಯಾಗಿ ರೆಡ್ಡಿಯ ರಿಪಬ್ಲಿಕ್ ಆಫ್ ಬಳ್ಳಾರಿಗೆ ಹೋಗಿದ್ದೇನೆ. ರೆಡ್ಡಿ ಬ್ರದರ್ಸ್ ದು ಗೂಂಡಾ ಗ್ಯಾಂಗ್, ಆಗ ಜೈಲಿಗೆ ಹೋದವರೆಲ್ಲಾ ಈಗ ಬೇಲ್ ಹಿಡಿದುಕೊಂಡು ತಿರುಗಾಡುತ್ತಿದ್ದಾರೆ ಎಂದು ಸಿಎಂ ಟಾಂಗ್ ಕೊಟ್ಟರು.

  • ಬಿಎಸ್‍ವೈ ಸಿಎಂ ಆಗೋದಕ್ಕೆ ತ್ರಿಮೂರ್ತಿಗಳು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್

    ಬಿಎಸ್‍ವೈ ಸಿಎಂ ಆಗೋದಕ್ಕೆ ತ್ರಿಮೂರ್ತಿಗಳು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್

    ವಿಜಯಪುರ: ಯಾವುದೇ ಕಾಲಕ್ಕೂ ಯಡಿಯೂರಪ್ಪ ಮುಖ್ಯಮಂತ್ರಿ ಆಗಲ್ಲ. ಅವರ ಆಗಬೇಕೆಂದರೂ ತ್ರಿಮೂರ್ತಿಗಳಾದ ಅನಂತಕುಮಾರ್ ಹೆಗ್ಡೆ, ಅನಂತಕುಮಾರ್ ಮತ್ತು ಸಂತೋಷ್ ಬಿಡಲ್ಲ ಎಂದು ಪಕ್ಷದ ಆಂತರಿಕ ಒಳಜಗಳವನ್ನು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಟೀಕಿಸಿದ್ರು.

    ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಚಿವರು, ಸಿಎಂ ಸಿದ್ದರಾಮಯ್ಯ ಮೂರ್ಖರು ಅಲ್ಲ, ಯಡಿಯೂರಪ್ಪರ ಹೇಳಿಕೆ ಮೂರ್ಖತನವಾದದ್ದು. ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಮುಖ್ಯಮಂತ್ರಿ ಆಗಲ್ಲ. ಅವರ ಮಗನಿಗೂ ಟಿಕೆಟ್ ಸಿಕ್ಕಿಲ್ಲ, ಪಕ್ಷದಲ್ಲಿ ತಮ್ಮ ಸ್ಥಾನ ಏನು ಎನ್ನುವುದು ಅವರಿಗೆ ಗೊತ್ತಾಗಿದೆ ಅಂತಾ ವ್ಯಂಗ್ಯ ಮಾಡಿದ್ರು.

    ಬಿಜೆಪಿ ಸಿಎಂ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸಾಯ್ತು. ಅವರಂತೂ ಮುಖ್ಯಮಂತ್ರಿ ಆಗಲ್ಲ, ಆದ್ರೆ ಅವರನ್ನ ಏನು ಮಾಡ್ಬೇಕು ಎನ್ನುವುದು ಆರ್‍ಎಸ್‍ಎಸ್ ಗೊತ್ತಿದೆ ಅಂತಾ ಲೇವಡಿ ಮಾಡಿದ್ದಾರೆ.

    ಬದಾಮಿ ಕ್ಷೇತ್ರದಲ್ಲಿ ಬಿಎಸ್‍ವೈ ಮತದಾರರನ್ನು ಗುತ್ತಿಗೆ ತೆಗೆದುಕೊಂಡಿಲ್ಲ. ಅಲ್ಲಿಯ ಜನತೆಯ ಆರ್ಶಿರ್ವಾದ ಸಿದ್ದರಾಮಯ್ಯ ಅವರಿಗಿದ್ದು, ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸಲಿದ್ದಾರೆ. ಇತ್ತ ನನಗೂ ಬಬಲೇಶ್ವರ ಕ್ಷೇತ್ರದ ಜನತೆಯ ಆಶೀರ್ವಾದವಿದೆ ಗೆಲುವು ನನ್ನದೇ ಅಂತ ವಿಶ್ವಾಸ ವ್ಯಕ್ತಪಡಿಸಿದ್ರು.

  • ಶಾ ಸೂಚನೆ ಮೇರೆಗೆ ಕೈ ನಾಯಕರ ಫೋನ್ ಕದ್ದಾಲಿಕೆ: ರಾಮಲಿಂಗಾರೆಡ್ಡಿ ಆರೋಪ

    ಶಾ ಸೂಚನೆ ಮೇರೆಗೆ ಕೈ ನಾಯಕರ ಫೋನ್ ಕದ್ದಾಲಿಕೆ: ರಾಮಲಿಂಗಾರೆಡ್ಡಿ ಆರೋಪ

    ಬೆಂಗಳೂರು: ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆಯಾಗುತ್ತಿದೆ. ಅಮಿತ್ ಶಾ ಸೂಚನೆ ಮೇರೆಗೆ ಕದ್ದಾಲಿಕೆ ನಡೆಯುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪ ಮಾಡಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕಳೆದ 15 ದಿನದಿಂದ ಕದ್ದಾಲಿಕೆ ನಡೆಯುತ್ತಿದ್ದು ದೆಹಲಿ, ಗುಜರಾತ್, ಜೈಪುರ ತಂಡದಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ. ನಮ್ಮ ಚುನಾವಣಾ ತಂತ್ರಗಳನ್ನು ಕದ್ದಿಯುತ್ತಿದ್ದಾರೆ. ಕನ್ನಡದಲ್ಲಿ ಮಾತನಾಡಿದ್ದನ್ನ ಹಿಂದಿ, ಇಂಗ್ಗೀಷ್ ನಲ್ಲಿ ಟ್ರಾನ್ಸ್ ಲೇಟ್ ಮಾಡಲಾಗುತ್ತಿದೆ. ಕಳೆದ ಆರು ತಿಂಗಳ ಹಿಂದೆಯೂ ನಾನು ಇದನ್ನು ಹೇಳಿದ್ದೆ ಎಂದು ತಿಳಿಸಿದರು.

    ಗುಪ್ತಚರ ಇಲಾಖೆಯಿಂದ ನಮಗೆ ಮಾಹಿತಿ ಸಿಕ್ಕಿದೆ ಸುಮಾರು 100ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಆಗುತ್ತಿದೆ. ಈ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ತನಿಖೆ ನಡೆಸುವಂತೆ ಆಗ್ರಹ ಮಾಡಿದ್ದೇವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಕಾಂಗ್ರೆಸ್ ನಾಯಕರುಗಳನ್ನ ಟಾರ್ಗೆಟ್ ಮಾಡಿ ಐಟಿ ರೇಡ್ ಮಾಡಿಸಲಾಗುತ್ತಿದೆ. ಕಾಂಗ್ರೆಸ್ ಜೊತೆ ಉತ್ತಮ ಸಂಬಂಧ ಹೊಂದಿರುವ ಉದ್ಯಮಿಗಳನ್ನ ಟಾರ್ಗೆಟ್ ಮಾಡಿ ಬಿಜೆಪಿ ಬೆಂಬಲಿಸಿಬೇಕು ಎಂದು ಪರೋಕ್ಷವಾಗಿ ಬೆದರಿಸಲಾಗುತ್ತಿದೆ. ಕೇಂದ್ರದ ತನಿಖಾ ಸಂಸ್ಥೆಗಳನ್ನ ಬಳಸಿಕೊಂಡು ಕಿರುಕುಳ ಕೊಡಲು ಫೋನ್ ಕದ್ದಾಲಿಕೆ ನಡೆಯುತ್ತಿದೆ. ಕಳೆದ 15 ದಿನಗಳಿಂದ 16 ಗಂಟೆ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ಬಿಜೆಪಿ ನಾಯಕರ ಮೇಲೆ ಗಂಭೀರ ಆರೋಪ ಮಾಡಿದರು.

    ಮಾಧ್ಯಮಗಳಲ್ಲಿ ಬಿಜೆಪಿ ಜಾಹೀರಾತು ಕುರಿತು ಮಾತನಾಡಿದ ಸಚಿವರು ನೂರಕ್ಕೆ ನೂರರಷ್ಟು ಹಸಿ ಸುಳ್ಳಿನ ಜಾಹೀರಾತು ನೀಡಲಾಗುತ್ತಿದೆ. ಯಾವುದೇ ಸಾಕ್ಷ್ಯಾಧಾರವಿಲ್ಲದೇ ಸುಳ್ಳು ಜಾಹೀರಾತು ನೀಡುತ್ತಿದ್ದಾರೆ. ಯಡಿಯೂರಪ್ಪ ಜೈಲಿಗೆ ಹೋದ ವಿಚಾರ, ಬಿಜೆಪಿ ಸರ್ಕಾರದಲ್ಲಿನ ಮೂವರು ಸಿಎಂ ಆದ ಕುರಿತು, ಸದನದ ಒಳಗೆ ಬ್ಲೂ ಫಿಲ್ಮ್ ನೋಡಿದ್ದು, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಪ್ರತಿಯೊಬ್ಬರ ಅಕೌಂಟ್ ಗೆ 15 ಲಕ್ಷ ಹಾಕಲಾಗುವುದು ಎಂದಿದ್ದ ಮೋದಿ ಭರವಸೆ, ಬೆಂಗಳೂರು ಗಾರ್ಬೆಜ್ ಸಿಟಿ ಮಾಡಿದ್ದರ ಬಗ್ಗೆ ಜಾಹೀರಾತು ನೀಡಲಿ ಎಂದು ವ್ಯಂಗ್ಯವಾಡಿದರು.

    ಕ್ರೈಂ ರೇಟ್ ಬಿಜೆಪಿ ಅವಧಿಗಿಂತಲೂ ನಮ್ಮ ಅವಧಿಯಲ್ಲಿ ಕಡಿಮೆಯಾಗಿದೆ. ಮಾಧ್ಯಮಗಳನ್ನ ಬಿಜೆಪಿ ದುರಪಯೋಗಪಡಿಸಿಕೊಳ್ಳುತ್ತಿದೆ. ಸುಳ್ಳು ಜಾಹೀರಾತು ಬಗ್ಗೆ ಬಿಜೆಪಿ ಮೇಲೆ ಕ್ರಿಮಿನಲ್ ಕೇಸ್ ಹಾಕುತ್ತೇವೆ ಎಂದು ಸಚಿವರು ತಿಳಿಸಿದರು.

  • ಕೈ ಹಿರಿಯ ನಾಯಕರು ಅಪ್ರಬುದ್ಧ ಅಧ್ಯಕ್ಷರಿಗೆ ಪಾಠಮಾಡಬೇಕಿದೆ: ಬಿಎಸ್‍ವೈ

    ಕೈ ಹಿರಿಯ ನಾಯಕರು ಅಪ್ರಬುದ್ಧ ಅಧ್ಯಕ್ಷರಿಗೆ ಪಾಠಮಾಡಬೇಕಿದೆ: ಬಿಎಸ್‍ವೈ

    ಬೆಂಗಳೂರು: ಕಾಂಗ್ರೆಸ್‍ನ ಹಿರಿಯ ಮುಖಂಡರು ತಮ್ಮ ಅಪ್ರಬುದ್ಧ ಅಧ್ಯಕ್ಷರಿಗೆ ಈ ಕುರಿತು ಪಾಠ ಮಾಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

    ರಾಹುಲ್ ಆರೋಪಗಳಿಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರು ತಮ್ಮ ಅಪ್ರಬುದ್ಧತೆಯನ್ನು ಪದೇಪದೆ ಸಾಬೀತು ಪಡಿಸುತ್ತಲೇ ಇದ್ದಾರೆ. ಬೇರೆ ರಾಜ್ಯಗಳಂತೆ ಕರ್ನಾಟಕವೂ ಕಾಂಗ್ರೆಸ್ ಮುಕ್ತವಾಗುವ ಭಯದಲ್ಲಿರುವ ಅವರು ಪೂರ್ವಾಪರ ತಿಳಿಯದೇ ಬಾಲಿಶವಾಗಿ ಹೇಳಿಕೆ ನೀಡಿದ್ದಾರೆ. ಜಾಮೀನಿನ ಮೇಲೆ ಹೊರಗಿರುವ ಅವರು ನನ್ನ ವಿರುದ್ಧ ಮನಬಂದಂತೆ ಮಾತನಾಡುತ್ತಿರುವುದು ವಿಪರ್ಯಾಸವೇ ಸರಿ ಎಂದು ಕಿಡಿಕಾರಿದ್ದಾರೆ.

    ನ್ಯಾಯಾಲಯವೇ ನನ್ನನ್ನು ದೋಷಮುಕ್ತಗೊಳಿಸಿದ್ದರೂ, ಸುಳ್ಳು ಮಾಹಿತಿಯೊಂದಿಗೆ ಹಗುರವಾಗಿ ಮಾತನಾಡುವುದು ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಿಗೆ ಗೌರವ ತರುವಂಥದ್ದಲ್ಲ. ಅದು ನ್ಯಾಯಾಲಯಕ್ಕೆ ಅಗೌರವ ತೋರಿದಂತಾಗುತ್ತದೆ ಎಂದು ರಾಹುಲ್ ಅರ್ಥ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

    ರಾಜಕೀಯದ ಬಗ್ಗೆ ಏನೂ ತಿಳಿಯದೇ, ಯಾರೋ ಬರೆದುಕೊಟ್ಟಿದ್ದನ್ನು ಓದುವ ರಾಹುಲ್ ಮಾತುಗಳನ್ನು ಜನರು ಗಂಭೀರವಾಗಿ ಸ್ವೀಕರಿಸುವುದಿಲ್ಲ. ತಾವು ಮಾಡುವ ಸುಳ್ಳು ಆರೋಪಗಳನ್ನು ಕರ್ನಾಟಕದ ಜನ ನಂಬುತ್ತಾರೆಂಬ ಭ್ರಮೆಯಿಂದ ಅವರು ಹೊರಬರಲಿ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುವ ಪ್ರಜ್ಞಾವಂತರು ಕಾಂಗ್ರೆಸ್‍ಗೆ ಈ ಸಲ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದಿದ್ದಾರೆ.

    ತಮ್ಮ ಹುಳುಕನ್ನು ಮುಚ್ಚಿಡಲು ಇನ್ನೊಬ್ಬರತ್ತ ಬೆಟ್ಟು ತೋರಿಸುವ ಕಾಂಗ್ರೆಸ್ ನಾಯಕರ ಚಾಳಿಯನ್ನೇ ರಾಹುಲ್ ಗಾಂಧಿಯವರೂ ಅನುಸರಿಸುತ್ತಿದ್ದಾರೆ. ರಾಜ್ಯ ಸರಕಾರದ ವೈಫಲ್ಯಗಳನ್ನು ಮುಚ್ಚಿಡಲು ನ್ಯಾಯಾಲಯ ಇತ್ಯರ್ಥಗೊಳಿಸಿದ ವಿಚಾರವನ್ನು ಕೆದಕುತ್ತಿದ್ದಾರೆ. ರಾಹುಲ್ ಗಾಂಧಿಯವರು ಏನೇ ಮಾಡಿದರೂ ಕಾಂಗ್ರೆಸ್‍ನ ದುರಾಡಳಿತವನ್ನು ನಮ್ಮ ಜನ ಮರೆಯುವುದಿಲ್ಲ ಎಂದು ಬರೆದು ಬಿಎಸ್‍ವೈ ವಾಗ್ದಾಳಿ ನಡೆಸಿದ್ದಾರೆ.

     

  • ಕನ್ನಡಿಗರ ಸಂಪತ್ತನ್ನು ಲೂಟಿ ಹೊಡೆದವರನ್ನ ಕ್ಷಮಿಸಿದ್ದೀರಾ: ಬಿಎಸ್‍ವೈಗೆ ಸಿಎಂ ಪ್ರಶ್ನೆ

    ಕನ್ನಡಿಗರ ಸಂಪತ್ತನ್ನು ಲೂಟಿ ಹೊಡೆದವರನ್ನ ಕ್ಷಮಿಸಿದ್ದೀರಾ: ಬಿಎಸ್‍ವೈಗೆ ಸಿಎಂ ಪ್ರಶ್ನೆ

    ಬೆಂಗಳೂರು: ಕರ್ನಾಟಕ ರಾಜ್ಯದ ಹಿತಕ್ಕಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಕ್ಷಮಿಸಿದ್ದೇನೆ ಎಂದು ಮಾಜಿ ಸಿಎಂ ಸಿಎಂ ಬಿ.ಎಸ್.ಯಡಿಯೂರಪ್ಪ ಸಂದರ್ಶನದಲ್ಲಿ ಹೇಳಿದ್ದನ್ನು ಸಿಎ ಸಿದ್ದರಾಮಯ್ಯ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಇಂಗ್ಲಿಷ್ ಪತ್ರಿಕೆಗೆ ನೀಡಿದ್ದ ಸಂದರ್ಶದನಲ್ಲಿ ಯಡಿಯೂರಪ್ಪ, ನಾನು ಸಿಎಂ ಆಗಿದ್ದಾಗ ರೆಡ್ಡಿ ಸಂಕಷ್ಟದಲ್ಲಿದ್ದರು. ಈಗ ರಾಜ್ಯದ ಹಿತಕ್ಕಾಗಿ ಎಲ್ಲವನ್ನು ಮರೆತು ಕ್ಷಮಿಸಿದ್ದೇವೆ. ರೆಡ್ಡಿ ಒಬ್ಬರೇ ಅಲ್ಲ, ಬಹಳ ಜನರು ಸಂಕಷ್ಟದಲ್ಲಿದ್ದರು. ಎಲ್ಲರನ್ನು ಕ್ಷಮಿಸಿದ್ದೇವೆ. ಇನ್ನೂ ಸಂಸದ ಶ್ರೀ ರಾಮುಲು ಒಬ್ಬ ಎಸ್‍ಟಿ ಸಮುದಾಯದ ಪ್ರಬಲ ನಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಶ್ರೀರಾಮುಲುರನ್ನು ಡಿಸಿಎಂ ಮಾಡೋ ಸುದ್ದಿ ಕೇವಲ ಊಹಾಪೋಹ ಎಂದು ತಿಳಿಸಿದ್ದರು.

    ಬಿಎಸ್‍ವೈ ನೀಡಿದ ಸಂದರ್ಶನವನ್ನೇ ಟಾರ್ಗೆಟ್ ಮಾಡಿಕೊಂಡ ಸಿಎಂ ಸಿದ್ದರಾಮಯ್ಯ, ಯಾವ ಕಾರಣಕ್ಕೆ ರೆಡ್ಡಿಯನ್ನ ಕ್ಷಮಿಸಿದ್ದೀರಿ? ಕನ್ನಡಿಗರ ಸಂಪತ್ತನ್ನು ಲೂಟಿ ಹೊಡೆದವರನ್ನ ಕ್ಷಮಿಸಿದ್ದೀರಾ? ಪ್ರಧಾನಿ ನರೇಂದ್ರ ಮೋದಿ ಕೂಡ ಸಿಬಿಐಗೆ ನಿರ್ದೇಶನ ನೀಡಿ ರೆಡ್ಡಿಯನ್ನ ಕ್ಷಮಿಸಿದ್ದಾರಾ ಎಂದು ಪ್ರಶ್ನೆಯನ್ನು ಟ್ವಿಟ್ಟರ್ ನಲ್ಲಿ ಕೇಳಿ ತರಾಟೆಗೆ ತೆಗೆದುಕೊಂಡಿದ್ದಾರೆ.

  • ಕಾಂಗ್ರೆಸ್‍ನಿಂದ ಚುನಾವಣಾ ಪ್ರಣಾಳಿಕೆ ರಿಲೀಸ್ – ರಾಜ್ಯದ ಜನತೆಗೆ ಭರವಸೆಗಳ ಮಹಾಪೂರ

    ಕಾಂಗ್ರೆಸ್‍ನಿಂದ ಚುನಾವಣಾ ಪ್ರಣಾಳಿಕೆ ರಿಲೀಸ್ – ರಾಜ್ಯದ ಜನತೆಗೆ ಭರವಸೆಗಳ ಮಹಾಪೂರ

    ಮಂಗಳೂರು: ಮುಂದಿನ ಐದು ವರ್ಷಗಳಿಗೆ ಕಾಂಗ್ರೆಸ್ ನ ಭರವಸೆ ಮತ್ತು ಮುನ್ನೋಟಗಳನ್ನು ಇಂದು ನಗರದ ಟಿಎಂಎಪೈ ಹಾಲ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕರು ಸೇರಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರು.
    2013ರ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿದ ಶೇಕಡಾ 95ರಷ್ಟು ಕೆಲಸಗಳನ್ನು ಮಾಡಿದ್ದೇವೆ. ಎಲ್ಲ ಪಕ್ಷಗಳು ಕೂಡ ಚುನಾವಣೆ ಪೂರ್ವ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತವೆ. ಆದ್ರೆ ಎಲ್ಲ ಪಕ್ಷಗಳಿಗಿಂತೂ ಕಾಂಗ್ರೆಸ್ ಸಂಪೂರ್ಣ ಭಿನ್ನವಾಗಿದೆ. ನಾವು ಬಜೆಟ್ ಮಂಡಿಸುವಾಗ ಪ್ರಣಾಳಿಕೆಯನ್ನು ಪಕ್ಕದಲ್ಲಿಟ್ಟುಕೊಂಡು ರಚಿಸುತ್ತೇವೆ. ಬೇರೆ ಪಕ್ಷಗಳು ಅಧಿಕಾರಕ್ಕೆ ಬಂದ ಮೇಲೆ ಪ್ರಣಾಳಿಕೆಯನ್ನು ಕಸದ ಬುಟ್ಟಿಗೆ ಹಾಕುತ್ತವೆ ಅಂತಹ ಘಟನೆಗಳನ್ನು ನಾನು ನೋಡಿದ್ದೇನೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ರು.
    ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳು:
    1. ಪ್ರತಿ ಮೂರು ಜಿಲ್ಲೆಗೂಂದು  ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
    2. ಮುಂದಿನ 5 ವರ್ಷಗಳಲ್ಲಿ ಕೃಷಿಗೆ 1.25 ಕೋಟಿ ಹಣ ಮೀಸಲು.
    3. ಹುಬ್ಬಳ್ಳಿ-ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ.
    4. 75 ಟಿಎಂಸಿ ಕಾವೇರಿ ನೀರು ಸದ್ಬಳಕೆಗೆ ನೀಲ ನಕ್ಷೆ ರಚನೆ.
    5. ಭದ್ರ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಒತ್ತು.
     6. 2 ಸಾವಿರ ಜನಸಂಖ್ಯೆಯುಳ್ಳ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ.
    7. ತಾಲೂಕು, ಗ್ರಾಮ ಪಂಚಾಯತ್ ಅಭಿವೃದ್ಧಿಗೆ ಮುಂದಿನ ಬಜೆಟ್‍ನಲಿ ಹೆಚ್ಚಿನ ಅನುದಾನ ಮೀಸಲು.
    8. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಇತರೆ ಜಿಲ್ಲೆಗಳಿಗೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ.
    9. ಪ್ರತಿ ಹಳ್ಳಿಗೂ 24 ಗಂಟೆ ವಿದ್ಯುತ್ ಪೂರೈಕೆಯ ಭರವಸೆ.
     10. ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ,ಪುನರ್ವಸತಿ ಭರವಸೆ.
    11. ಮುಂದಿನ 10 ವರ್ಷಗಳಲ್ಲಿ ಗ್ರಾಮೀಣ ಭಾಗಗಳಲ್ಲಿ 10 ಲಕ್ಷ ಮನೆಗಳ ನಿರ್ಮಾಣದ ಗುರಿ.
    12. 2025ರೊಳಗೆ ನವಕರ್ನಾಟಕ ನಿರ್ಮಾಣಕ್ಕೆ ಒತ್ತು.
    13. ತಮಿಳುನಾಡು ಮಾದರಿಯಲ್ಲಿಯೇ ಕನ್ನಡಿಗರಿಗೆ ಉಚಿತ ಮಾಂಗಲ್ಯ ಭಾಗ್ಯ.
    14. ಚುನಾವಣೆಯಲ್ಲಿ ಗೆದ್ದರೆ 18 ವರ್ಷಗಳ ಕಾಲ ಉಚಿತ ಶಿಕ್ಷಣ ಭಾಗ್ಯ, ಈ ಮೊದಲು 10 ವರ್ಷಗಳಿಗೆ ಮಾತ್ರ ಆಗಿತ್ತು.
    15. ರಾಜ್ಯದಲ್ಲಿ  ಕೃಷಿ ಕಾರಿಡಾರ್ ನಿರ್ಮಾಣ