Tag: Karnataka Election

  • ಸಿಎಂ ಜೊತೆ ಮಾತಿನ ಜಟಾಪಟಿ ನಡೆಸಿದ್ದ ಮರಿಸ್ವಾಮಿಗೆ ಎಚ್‍ಡಿಕೆಯಿಂದ ಸನ್ಮಾನ

    ಸಿಎಂ ಜೊತೆ ಮಾತಿನ ಜಟಾಪಟಿ ನಡೆಸಿದ್ದ ಮರಿಸ್ವಾಮಿಗೆ ಎಚ್‍ಡಿಕೆಯಿಂದ ಸನ್ಮಾನ

    ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದ ವೇಳೆ ಸಿಎಂ ಸಿದ್ದರಾಮಯ್ಯನವರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದ ಪಕ್ಷದ ಕಾರ್ಯಕರ್ತ ಮರಿಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಸನ್ಮಾನಿಸಿದ್ದಾರೆ.

    ತಾವು ತಂಗಿದ್ದ ಖಾಸಗಿ ರೆಸಾರ್ಟ್ ಗೆ ಕರೆಸಿಕೊಂಡು ಎಚ್‍ಡಿ ಕುಮಾರಸ್ವಾಮಿ ಅವರು ಹಳೆಕೆಸರೆ ಗ್ರಾಮದ ಗ್ರಾ.ಪಂ. ಸದಸ್ಯ ಮರಿಸ್ವಾಮಿ ಅವರನ್ನು ಸನ್ಮಾನಿಸಿದ್ದಾರೆ.

    ವರುಣಾ ಮತ್ತು ಟಿ.ನರಸೀಪುರ ನಡೆದಿರುವಷ್ಟು ಅಕ್ರಮಗಳು ಇನ್ನೆಲ್ಲೂ ನಡೆದಿಲ್ಲ. ಯಾವುದೇ ಕಾರಣಕ್ಕೂ ಸಚಿವ ಹೆಚ್.ಸಿ.ಮಹದೇವಪ್ಪ ಅವರಿಗೆ ದೇವೇಗೌಡರ ಆಶೀರ್ವಾದ ಇಲ್ಲ. ಅಕ್ರಮ ಮಾಡಿರುವವರಿಗೆ ನಾವು ಯಾಕೆ ಆಶೀರ್ವಾದ ಮಾಡಬೇಕು? ದೇವೇಗೌಡರ ಆಶೀರ್ವಾದ ತಮಗೆ ಇದೆ ಎಂದು ಸುಳ್ಳು ಹೇಳಿ ಮಹಾದೇವಪ್ಪ ತಿರುಗುತ್ತಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

    ಬುಧವಾರ ಹಳೆಕೆಸರೆ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದಾಗ ಗ್ರಾಮ ಪಂಚಾಯಿತಿಯ ಜೆಡಿಎಸ್ ಸದಸ್ಯ ಮರಿಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಮಾತಿನ ಜಟಾಪಟಿ ನಡೆದಿತ್ತು.

    ಏ ಮರಿಸ್ವಾಮಿ… ನೀ ನನ್ನ ಜೊತೆ ಇದ್ದಲ್ಲಯ್ಯ ಬಾ ಅಂತ ಸಿಎಂ ಕರೆದ್ರು. ಆಗ ಮರಿಸ್ವಾಮಿ, ನಾನು ಜೆಡಿಎಸ್‍ನಲ್ಲಿದ್ದೇನೆ ಬರೋಲ್ಲ ಎಂದರು. ಆಗ ಸಿದ್ದರಾಮಯ್ಯ, ಆಯ್ತು ನೀ ಬರಬೇಡ ವೋಟು ಹಾಕು ಅಂದ್ರು. ಇದಕ್ಕೆ ಮರಿಸ್ವಾಮಿ, ನಾ ಬರೋದು ಇಲ್ಲ, ವೋಟು ಹಾಕೋಲ್ಲ ಎಂದ್ರು. ಅದಕ್ಕೆ ಸಿಎಂ ಆಯ್ತು ಬರಬೇಡ ಹೋಗು ಎಂದರು.

    ಸಿಎಂ ಮಾತಿನಿಂದ ಗರಂ ಆದ ಮರಿಸ್ವಾಮಿ, ನೀವು ನಮ್ಮ ಊರಿನಲ್ಲಿ ಇರೋದು. ಮೊದ್ಲು ನೀವೇ ಹೋಗಿ. ನಿಮ್ಮನ್ನ ಉಪಮುಖ್ಯಮಂತ್ರಿ ಮಾಡಿದ ಮಹಾಸ್ವಾಮಿಗೆ ದೊಡ್ಡ ನಮಸ್ಕಾರ ಎಂದು ತಿರುಗೇಟು ನೀಡಿದ್ದರು.

  • ವಿಜಯೇಂದ್ರಗೆ ಟಿಕೆಟ್ ತಪ್ಪಿದ ಎಫೆಕ್ಟ್-ನೋಟಾ ಚಲಾವಣೆ ಅಭಿಯಾನದ ಕರಪತ್ರ ಫುಲ್ ವೈರಲ್

    ವಿಜಯೇಂದ್ರಗೆ ಟಿಕೆಟ್ ತಪ್ಪಿದ ಎಫೆಕ್ಟ್-ನೋಟಾ ಚಲಾವಣೆ ಅಭಿಯಾನದ ಕರಪತ್ರ ಫುಲ್ ವೈರಲ್

    ಮೈಸೂರು: ವರುಣಾದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಮಗ ವಿಜಯೇಂದ್ರಗೆ ಟಿಕೆಟ್ ತಪ್ಪಿಸಿದ್ರಿಂದ ಬಿಜೆಪಿ ಕಾರ್ಯಕರ್ತರಲ್ಲಿ ಭುಗಿಲೆದ್ದಿರೋ ಸಿಟ್ಟು ಶಮನವಾಗಿಲ್ಲ. ಪ್ರತೀಕಾರವಾಗಿ ಪಕ್ಷದ ಅಧಿಕೃತ ಅಭ್ಯರ್ಥಿ ಬಸವರಾಜ್‍ರನ್ನೇ ಸೋಲಿಸಿ ಮರು ಚುನಾವಣೆ ನಡೆಸೋ ಸಲುವಾಗಿ ನೋಟಾ ಚಲಾಯಿಸಬೇಕೆಂಬ ಅಭಿಯಾನ ಶುರುವಾಗಿದೆ. ಇದನ್ನೂ ಓದಿ: ಇದೊಂದು ಧರ್ಮಯುದ್ದ ಇದ್ದಂತೆ, ಪಕ್ಷಾತೀತವಾಗಿ ವಿಜಯೇಂದ್ರ ಬೆಂಬಲಿಸಿ:ಜಿಟಿ ದೇವೇಗೌಡ

    ವಿಜಯೇಂದ್ರ ಅವರು ನಾಮಪತ್ರ ಸಲ್ಲಿಸುವಾಗ 40 ರಿಂದ 50 ಸಾವಿರ ಜನರಿದ್ದರು. ಆದ್ರೆ ಅನಂತ್‍ಕುಮಾರ್, ಸಂತೋಷ್ ಕಡೆಯ ಅಭ್ಯರ್ಥಿ ಉಮೇದುವಾರಿಕೆ ಸಲ್ಲಿಸುವಾಗ ಕೇವಲ 6 ಜನರಿದ್ದರು. ಇವರಿಬ್ಬರ ಗರ್ವಭಂಗ ಆಗ್ಬೇಕು. ವೀರಶೈವ-ಲಿಂಗಾಯತರ ಸ್ವಾಭಿಮಾನವನ್ನ ನೋಟಾ ಮೂಲಕ ತೋರಿಸಬೇಕಿದ್ದು, ಅವರ ಸ್ವಾಭಿಮಾನಕ್ಕೆ ಪೆಟ್ಟು ಕೊಡ್ಬೇಕಾದ್ರೆ ಬಿಜೆಪಿ ನೂರು ಸಲ ಯೋಚಿಸಬೇಕು. ವರುಣಾದಲ್ಲಿ ವಿಜಯೇಂದ್ರಗೆ ಟಿಕೆಟ್ ತಪ್ಪಿಸೋದ್ರಿಂದ ಚಾಮರಾಜನಗರ ಮತ್ತು ಮೈಸೂರಿನ 9 ಕ್ಷೇತ್ರಗಳಲ್ಲಿ ಗೆಲುವಿಗೆ ಭಂಗ ಆಗುತ್ತದೆ ಅಂತ ಅನಂತ್‍ಕುಮಾರ್, ಸಂತೋಷ್ ನಿಮಗೆ ಗೊತ್ತಿಲ್ವೆ ಎಂದು ಪ್ರಶ್ನಿಸಿರೋ ಕರಪತ್ರ ವೈರಲ್ ಆಗಿದೆ. ಇದನ್ನೂ ಓದಿ: ಟಿಕೆಟ್ ಮಿಸ್ ಬೆನ್ನಲ್ಲೇ ವಾಪಸ್ ಬರ್ತೀನಿ ಅಂತ ಮೈಸೂರಿಗೆ ಬಾಯ್.. ಬಾಯ್.. ಅಂದ್ರು ಬಿಎಸ್‍ವೈ ಪುತ್ರ ವಿಜಯೇಂದ್ರ!

    ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧವೇ 25 ಸಾವಿರಕ್ಕಿಂತ ಹೆಚ್ಚು ನೋಟಾ ವೋಟ್ ಚಲಾಯಿಸುವಂತೆ ಪಕ್ಷದ ಕಾರ್ಯಕರ್ತರೇ ವಾಟ್ಸಾಪ್‍ನಲ್ಲಿ ಪ್ರಚಾರ ಮಾಡ್ತಿದ್ದಾರೆ. ಆದ್ರೆ, ಒಟ್ಟು ಮತಗಳ ಅರ್ಧಕ್ಕಿಂತಲೂ ಹೆಚ್ಚು ನೋಟಾ ಚಲಾಯಿಸಿದ್ರೂ ಮರು ಚುನಾವಣೆ ನಡೆಯಲ್ಲ. ಇದನ್ನೂ ಓದಿ:  ವಿಜಯೇಂದ್ರ ಕ್ಷೇತ್ರಕ್ಕೆ ಬಂದು 20 ದಿನ ಆಯ್ತು, ನಾನು 37 ವರ್ಷಗಳಿಂದ ಬಿಜೆಪಿಗೆ ದುಡಿದಿದ್ದೇನೆ: ವರುಣಾ ಬಿಜೆಪಿ ಅಭ್ಯರ್ಥಿ ಬಸವರಾಜು

  • ಪ್ರತ್ಯಂಗಿರಾ ಹೋಮದ ಮೊರೆ ಹೋದ ರಾಜಕೀಯ ಕಲಿಗಳು

    ಪ್ರತ್ಯಂಗಿರಾ ಹೋಮದ ಮೊರೆ ಹೋದ ರಾಜಕೀಯ ಕಲಿಗಳು

    ಬೆಂಗಳೂರು: ಚುನಾವಣೆ ಹೊಸ್ತಿಲಿನಲ್ಲಿ ರಾಜಕೀಯ ನಾಯಕರು ಹೋಮ ಹವನ ಮಾಡಿಸಲು ನಾ ಮುಂದೆ ತಾ ಮುಂದೆ ಎಂದು ಮುಗಿ ಬೀಳುತ್ತಿದ್ದಾರೆ. ಚುನಾವಣೆ ಎದುರಿಸಲು ರಾಜಕೀಯ ನಾಯಕರುಗಳು ಪ್ರತ್ಯಂಗಿರಾ ಹೋಮ ಹವನದ ಮೊರೆ ಹೋಗುತ್ತಿದ್ದಾರೆ.

    ರಾಜಕೀಯ ಜೀವನದಲ್ಲಿ ಅಡ್ಡಿಯಾಗುವ ಶತ್ರುಗಳನ್ನ ಸಂಹಾರ ಮಾಡಿಸಲು ಪ್ರತ್ಯಂಗಿರಾ ಹೋಮವನ್ನ ರಾಜಕೀಯ ನಾಯಕರು ಮಾಡುತ್ತಿದ್ದಾರೆ. ಪವರ್ ಮಿನಿಸ್ಟರ್ ಡಿ.ಕೆ ಶಿವಕುಮಾರ್ ಬುಧವಾರ ಬೆಳಗ್ಗೆ ಬೆಂಗಳೂರಿನ ಉತ್ತರಹಳ್ಳಿಯ ತುರಹಳ್ಳಿಯಲ್ಲಿರುವ ಪ್ರತ್ಯಂಗಿರಾ ದೇವಸ್ಥಾನದಲ್ಲಿ ಹೋಮ ಮಾಡಿಸಿದ್ದಾರೆ.

    ಸಂಜೆ ಸುಮಾರು ಏಳು ಗಂಟೆಗೆ ಶಾಸಕ ಅಖಂಡ ಶ್ರೀನಿವಾಸ್ ಕೂಡ ಪ್ರತ್ಯಂಗಿರಾ ಹೋಮ ಮಾಡಿಸಿದ್ದಾರೆ. ರಾಜಕೀಯ ಶತ್ರುಗಳನ್ನ ಮಟ್ಟ ಹಾಕಲು ಪ್ರತ್ಯಂಗಿರಾ ಹೋಮ ರಾಮಬಾಣವಾಗಿರುವುದರಿಂದ ಸಿಎಂ ಪಿಎ ವೆಂಕಟೇಶ್ ಕೂಡ ಪ್ರತ್ಯಂಗಿರಾ ಹೋಮ ಮಾಡಿಸಲು ಅನುಮತಿ ಕೇಳಿದ್ದಾರಂತೆ.

    ಇನ್ನು ಕೆಲ ಬಿಜೆಪಿ ನಾಯಕರು ಕೂಡ ಪ್ರತ್ಯಂಗಿರಾ ಹೋಮ ಮಾಡಿಕೊಡುವಂತೆ ದೇವಸ್ಥಾನದ ಅರ್ಚಕರಿಗೆ ದುಂಬಾಲು ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

  • ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದೇ ತಪ್ಪಾ: ಮರಿಸ್ವಾಮಿ ಮೇಲೆ ಮುಗಿಬಿದ್ದ ಸಿಎಂ ಬೆಂಬಲಿಗರು

    ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದೇ ತಪ್ಪಾ: ಮರಿಸ್ವಾಮಿ ಮೇಲೆ ಮುಗಿಬಿದ್ದ ಸಿಎಂ ಬೆಂಬಲಿಗರು

    ಮೈಸೂರು: ಮುಖ್ಯಮಂತ್ರಿಗಳ ವಿರುದ್ಧ ಮಾತನಾಡಿದ್ದಕ್ಕೆ ಪಬ್ಲಿಕ್ ಟಿವಿಯ ಸಂದರ್ಶನ ಕಾರ್ಯಕ್ರಮದಲ್ಲಿ ಮರಿಸ್ವಾಮಿ ಮೇಲೆ ಸಿಎಂ ಬೆಂಬಲಿಗರು ಮುಗಿಬಿದ್ದಿದ್ದಾರೆ.

    ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಹಳೆಕೆಸರೆ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದಾಗ ಗ್ರಾಮ ಪಂಚಾಯಿತಿಯ ಜೆಡಿಎಸ್ ಸದಸ್ಯ ಮರಿಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಮಾತಿನ ಜಟಾಪಟಿ ನಡೆಯಿತು.

    ಒಂದು ಕಾಲದಲ್ಲಿ ಸಿಎಂ ಅವರ ಆಪ್ತನಾಗಿದ್ದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಮರಿಸ್ವಾಮಿ ಅವರ ಜೊತೆ ಮಧ್ಯಾಹ್ನ ಸಂದರ್ಶನ ನಡೆಸುತಿತ್ತು. ಈ ವೇಳೆ ಸಂದರ್ಶನ ನಡೆಯುತ್ತಿದ್ದ ಸ್ಥಳದಲ್ಲಿ ಸಿಎಂ ಬೆಂಬಲಿಗರು ದರ್ಬಾರ್ ನಡೆಸಿದ್ದಾರೆ. ಕಿವಿಗೆ ಹಾಕಿದ್ದ ಇಯರ್ ಫೋನ್ ಕಿತ್ತಾಕಿ ಸಂದರ್ಶನಕ್ಕೆ ಅಡ್ಡಿ ಪಡಿಸಿದ್ದಾರೆ. ಇದನ್ನೂ ಓದಿ: ನಿಮ್ ಜೊತೆ ಬರಲ್ಲ, ವೋಟು ಹಾಕಲ್ಲ- ಪ್ರಚಾರದ ವೇಳೆ ಸಿದ್ದು ಮರಿಸ್ವಾಮಿ ಮಾತಿನ ಜಟಾಪಟಿ

    ಪಬ್ಲಿಕ್ ಟಿವಿಯ ಮೈಕ್ ಕೂಡ ಕಿತ್ತೆಸೆದ ಬೆಂಬಲಿಗರು ಸಂದರ್ಶನ ನೀಡುತ್ತಿದ್ದ ಮರಿಸ್ವಾಮಿಯನ್ನು ಕರೆದೊಯ್ದಿದ್ದಾರೆ.

     

  • ಸಿದ್ದರಾಮಯ್ಯನಂತಿರುವ ರಾವಣನ ಸಂಹಾರಕ್ಕೆ ಶ್ರೀರಾಮುಲು ಸದಾ ಸಿದ್ಧ: ಜನಾರ್ದನ ರೆಡ್ಡಿ

    ಸಿದ್ದರಾಮಯ್ಯನಂತಿರುವ ರಾವಣನ ಸಂಹಾರಕ್ಕೆ ಶ್ರೀರಾಮುಲು ಸದಾ ಸಿದ್ಧ: ಜನಾರ್ದನ ರೆಡ್ಡಿ

    ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಮೋಸಗಾರ, ಸುಳ್ಳುಗಾರ. ಸಿದ್ದರಾಮಯ್ಯನಂತಿರುವ ರಾವಣನ ಸಂಹಾರಕ್ಕೆ ರಾಮನಂತಿರುವ ಶ್ರೀರಾಮಲು ಬಂದಿದ್ದಾರೆಂದು ಮೊಣಕಾಲ್ಮೂರು ಕ್ಷೇತ್ರದ ಕೋನಾಪುರದಲ್ಲಿ ಪ್ರಚಾರದ ವೇಳೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.

    ಸಿಎಂ ಸುಳ್ಳು ಹೇಳಿ ಅಧಿಕಾರಕ್ಕೆ ಬಂದರು. ನಿಮಗೆ ಚಾಮುಂಡೇಶ್ವರಿ ಅಥವಾ ಬನಶಂಕರಿ ತಾಯಿಯ ಇಬ್ಬರ ಆಶೀರ್ವಾದ ಮಾಡಲ್ಲ. ನಿಮ್ಮ ಸಂಹಾರಕ್ಕೆ ಶ್ರೀರಾಮುಲು ಬಂದಿದ್ದಾರೆ. ಬದಾಮಿ ವಿಧಾನಸಭಾ ಕ್ಷೇತ್ರದ ಜನರು ಶ್ರೀರಾಮುಲು ಅವರನ್ನು ಬಹುಮತಗಳ ಅಂತರದಿಂದ ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಅಂತಾ ಅಂದ್ರು.

    ಜನಾರ್ದನ ರೆಡ್ಡಿ 1 ಲಕ್ಷ ಕೋಟಿ ಲೂಟಿ ಮಾಡಿದ್ದಾನೆ ಅಂತಾ ಸುಳ್ಳು ಹೇಳಿ ಪ್ರಚಾರ ಮಾಡಿದ ಸಿಎಂಗೆ, ನನ್ನಿಂದ 1 ರೂಪಾಯಿಯನ್ನು ವಸೂಲಿ ಮಾಡಲು ಆಗಲಿಲ್ಲ. ಬಿ.ಎಸ್.ಯಡಿಯೂರಪ್ಪ ಅವರಿಗೆ ಶ್ರೀರಾಮುಲು ಮತ್ತು ವಿಜಯೇಂದ್ರ ಇಬ್ಬರು ಮಕ್ಕಳಿದ್ದಂತೆ. ನನ್ನ ಸ್ನೇಹಿತನಿಗಾಗಿ ಏನು ಬೇಕಾದರು ಮಾಡಲು ನಾನು ಸಿದ್ಧ ಎಂದು ರೆಡ್ಡಿ ಅಂತಾ ಹೇಳಿದ್ರು.

  • ಬದಾಮಿಯಲ್ಲಿ ಶ್ರೀರಾಮುಲುಗೆ ಟಾಂಗ್ ಕೊಡಲು ಸಿಎಂ ಮಾಸ್ಟರ್ ಪ್ಲಾನ್

    ಬದಾಮಿಯಲ್ಲಿ ಶ್ರೀರಾಮುಲುಗೆ ಟಾಂಗ್ ಕೊಡಲು ಸಿಎಂ ಮಾಸ್ಟರ್ ಪ್ಲಾನ್

    ಬಾಗಲಕೋಟೆ: ಮೊದಲ ಬಾರಿಗೆ ಉತ್ತರ ಕರ್ನಾಟಕದ ಬದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿಎಂ ಸಿದ್ದರಾಮಯ್ಯ ಹೇಗಾದ್ರೂ ಮಾಡಿ ಗೆಲುವು ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮ ಎದುರಾಳಿ ಬಿಜೆಪಿಯ ಶ್ರೀರಾಮುಲು ಅವರನ್ನು ಅಧಿಕ ಮತಗಳ ಅಂತರದಿಂದ ಸೋಲಿಸಲು ಸಹ ಸಿಎಂ ರಾಜ್ಯ ನಾಯಕರ ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಬದಾಮಿಯಲ್ಲೂ ಗೆಲುವು ಅಷ್ಟೊಂದು ಸುಲಭವಲ್ಲ ಅನ್ನೋ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ 30 ಸಾವಿರಕ್ಕೂ ಅಧಿಕ ನಾಯಕ ಸಮುದಾಯ ಮತಗಳಿರುವ ಕ್ಷೇತ್ರದ ಜವಾಬ್ದಾರಿಯನ್ನು ಸತೀಶ್ ಜಾರಕಿಹೊಳಿ ಅವರಿಗೆ ನೀಡಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.

    ನಾಯಕರ ಮತಗಳು ಶ್ರೀರಾಮಲುಗೆ ಸಾಲಿಡ್ ಆಗಬಹುದು ಎನ್ನುವ ಕಾರಣದಿಂದ ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕರಾದ ಸತೀಶ್ ಜಾರಕಿಹೊಳಿಗೆ ಕ್ಷೇತ್ರ ಜವಾಬ್ದಾರಿ ನೀಡುವ ಮೂಲಕ ತಿರುಗೇಟು ಕೊಡಲು ಸಿಎಂ ಪ್ಲಾನ್ ಮಾಡಿದ್ದಾರೆ. ಕುರುಬ ಮತ್ತು ನಾಯಕರ ಮತಗಳು ಹೆಚ್ಚು ಪಡೆದ್ರೆ ಗೆಲುವು ಸುಲುಭವಾಗಬಹುದು ಎಂಬುವುದು ಸಿಎಂ ಲೆಕ್ಕಾಚಾರ ಎನ್ನಲಾಗಿದೆ. ಈ ಸಂಬಂಧ ಮಂಗಳವಾರ ರಾತ್ರಿ ಬದಾಮಿ ಪಟ್ಟಣದ ಹೊರವಲಯದಲ್ಲಿರುವ ಕೃಷ್ಣ ಹೆರಿಟೇಜ್‍ನಲ್ಲಿ ಸತೀಶ್ ಜಾರಕಿಹೊಳಿ ಜೊತೆ ಸಿಎಂ ಮಾತುಕತೆ ಮಾಡಿದ್ದಾರೆ.

    ಸಿಎಂ ಪ್ಲಸ್, ಮೈನಸ್ ಏನು?
    ಬಾದಾಮಿಯಲ್ಲಿ ಕುರುಬ ಸಮುದಾಯದ 46 ಸಾವಿರ ಮತದಾರರು ಇದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಸಹಾಯ ಆಗಬಹುದು. ಸಿದ್ದರಾಮಯ್ಯ ಕಾಂಗ್ರೆಸ್‍ನ ನೇತೃತ್ವ ವಹಿಸಿ ಮುಖ್ಯಮಂತ್ರಿ ಅಭ್ಯರ್ಥಿ ಆಗಿರುವುದು.

    ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ ಮತಗಳು ಕೂಡ ನಿರ್ಣಾಯಕವಾಗಿವೆ. ಕಾಂಗ್ರೆಸ್‍ನಲ್ಲಿ ಇಬ್ಬರು ಟಿಕೆಟ್ ಆಕಾಂಕ್ಷಿಗಳ ಆಂತರಿಕ ಕಲಹ. ಬದಾಮಿ ಸ್ಪರ್ಧೆ ಬಗ್ಗೆ ಕಡೆ ಕ್ಷಣದವರೆಗೂ ಗೊಂದಲ ಸೃಷ್ಟಿಯಾಗಿದ್ದು ಸ್ವಲ್ಪ ಹಿನ್ನಡೆಯಾಗಬಹುದು.

    ಶ್ರೀರಾಮುಲು ಪ್ಲಸ್, ಮೈನಸ್ ಏನು?
    ವಾಲ್ಮೀಕಿ ಸಮುದಾಯದ 13 ಸಾವಿರ ಮತಗಳು, ಎಸ್ ಟಿ ಸಮುದಾಯದ 25,000 ಮತಗಳು ನಿರ್ಣಾಯಕವಾಗಿವೆ. ಪ್ರತ್ಯೇಕ ಲಿಂಗಾಯತ ಧರ್ಮ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಪ್ರಬಲವಾಗಿರುವ ಕಾರಣ ಶ್ರೀರಾಮುಲು ಅವರಿಗೆ ಸಹಾಯವಾಗಬಹುದು.

    ಸಿದ್ದರಾಮಯ್ಯ ಮುಖ್ಯಮಂತ್ರಿ ಅಭ್ಯರ್ಥಿ ಜೊತೆಗೆ ಕುರುಬ ಸಮುದಾಯದ ಮತದಾರರು ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಿಜೆಪಿಯಲ್ಲಿ ಕಡೆ ಕ್ಷಣದವರೆಗೂ ಆಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಮೂಡಿದ್ದು ಹಿನ್ನಡೆಯಾಗಬಹುದು.

  • ಅಧಿಕಾರ ಇಲ್ಲದಾಗ ಅಲ್ಲೋಗಿ ಹರಿತೀನಿ ಅಂತಿದ್ದಾರೆ- ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

    ಅಧಿಕಾರ ಇಲ್ಲದಾಗ ಅಲ್ಲೋಗಿ ಹರಿತೀನಿ ಅಂತಿದ್ದಾರೆ- ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

    ಚಿತ್ರದುರ್ಗ: ಅಧಿಕಾರ ಇದ್ದಾಗ ಬಿಜೆಪಿಯವರು ಸಾಧನೆ ಮಾಡಲಿಲ್ಲ. ಅಧಿಕಾರ ಇದ್ದಾಗ ಶ್ರೀರಾಮುಲು ಏನು ಮಾಡಲಿಲ್ಲ, ಶಾಸಕ ಎನ್.ವೈ.ಗೋಪಾಲಕೃಷ್ಣ ಏನು ಮಾಡಲಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

    ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಯೊಗೀಶ್ ಬಾಬು ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುವ ವೇಳೆ ಬಿಜೆಪಿ ವಿರುದ್ಧ ಡಿಕೆಶಿ ಗುಡುಗಿದ್ದು, ಬಿಜೆಪಿ ಅಧಿಕಾರದಲ್ಲಿದ್ದಾಗ ಶ್ರೀರಾಮುಲು ಅವರಿಗೆ ಏನು ಮಾಡಲು ಆಗಲಿಲ್ಲ ಎಂದು ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಶಾಸಕ ಎನ್.ವೈ.ಗೋಪಾಲಕೃಷ್ಣ ಕೂಡ ಅಧಿಕಾರ ಸಿಕ್ಕಾಗ ಏನು ಮಾಡಲಿಲ್ಲ. ಇನ್ನು ಅಧಿಕಾರ ಇಲ್ಲದ ವೇಳೆ ಅಲ್ಲೋಗಿ ಹರಿತೀನಿ, ಹರಿತೀನಿ ಅಂತಿದ್ದಾರೆ. `ಕೊಟ್ಟ ಕುದುರೆಯನೇರಲು ಅರಿಯದವರು ಮತ್ತೊಂದು ಕುದುರೆಯನ್ನೇರಲು ಬಯಸುವವನು ವೀರನೂ ಅಲ್ಲ, ಶೂರನು ಅಲ್ಲ’ ಎನ್ನುವ ವಚನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

    ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಅಂತೆ ಬಿಎಸ್‍ವೈ ಗೆ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಸಾಧ್ಯವಾಗಿಲ್ಲ ಅಂತ ವ್ಯಂಗ್ಯವಾಡಿದ್ರು.

  • 5 ಕೋಟಿ ದಾಟಿದ ಮತದಾರರ ಸಂಖ್ಯೆ, 2924 ನಾಮಪತ್ರ ಸಲ್ಲಿಕೆ: ನಗದು ಸಿಕ್ಕಿದ್ದು ಎಷ್ಟು? ಕೇಸ್ ಎಷ್ಟು ಬಿದ್ದಿದೆ?

    5 ಕೋಟಿ ದಾಟಿದ ಮತದಾರರ ಸಂಖ್ಯೆ, 2924 ನಾಮಪತ್ರ ಸಲ್ಲಿಕೆ: ನಗದು ಸಿಕ್ಕಿದ್ದು ಎಷ್ಟು? ಕೇಸ್ ಎಷ್ಟು ಬಿದ್ದಿದೆ?

    ಬೆಂಗಳೂರು: ರಾಜ್ಯದ ಮತದಾರರ ಸಂಖ್ಯೆ 5 ಕೋಟಿ ದಾಟಿದೆ. ಈ ಚುನಾವಣೆಗೆ 5,10,39,107 ಮಂದಿ ಮತದಾರರಿದ್ದಾರೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಸಂಜೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ನಿಗದಿಯಾಗಿದ್ದ ಅವಧಿ ಮುಕ್ತಾಯಗೊಂಡಿದೆ. ಇದೂವರೆಗೂ ಮಂಗಳವಾರ ಸಂಜೆ 6:30ರ ವೇಳೆಗೆ 2,924 ನಾಮಪತ್ರಗಳು ಸಲ್ಲಿಕೆಯಾಗಿದ್ದು 16 ವಿಧಾನಸಭಾ ಕ್ಷೇತ್ರಗಳಲ್ಲಿ 16ಕ್ಕಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಧ್ಯರಾತ್ರಿ ನಂತರ ಪೂರ್ಣ ಮಾಹಿತಿ ಲಭ್ಯವಾಗುತ್ತದೆ ಎಂದು ಮಾಹಿತಿ ನೀಡಿದರು.

    ಈವರೆಗೂ 19.62 ಕೋಟಿ ರೂ. ಮೌಲ್ಯದ 4,09,099 ಲೀಟರ್ ಮದ್ಯವನ್ನು ವಶ ಪಡಿಸಿದ್ದು, 20.88 ಕೋಟಿ ರೂ. ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 31,476 ಜಾಮೀನು ರಹಿತ ಪ್ರಕರಣ ದಾಖಲಾಗಿದ್ದು, 72,435 ಗೂಂಡಾ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

    ಪಕ್ಷದ ಕಾರ್ಯಕ್ರಮಗಳಲ್ಲಿ ಊಟೋಪಚಾರ ನಡೆಸುವ ವಿಚಾರದ ಬಗ್ಗೆ ಸಾಕಷ್ಟು ಅನುಮಾನಗಳಿವೆ. ಪಕ್ಷಕ್ಕೆ ದುಡಿಯುವವರಿಗೆ ಊಟ ಮಾಡಿಸಬಹುದು. ಆದರೆ ಬೇರೆಯವರಿಗೆ ಊಟ ನೀಡಿದರೆ ಅದು ಆಮಿಷ ಎಂದು ಪರಿಗಣಿಸಲಾಗುತ್ತದೆ. ಅದಕ್ಕೆ ಅವಕಾಶ ನೀಡುವುದಿಲ್ಲ ಎಂದರು.

    ಚುನಾವಣಾ ಆಯೋಗ ಯಾವುದೇ ಬಾರ್ ಲೈಸೆನ್ಸ್ ರದ್ದು ಮಾಡಿಲ್ಲ. ಆದರೆ ಆದರೆ ನೀತಿ ಸಂಹಿತೆ ಉಲ್ಲಂಘಿಸುವ ಬಾರ್ ಗಳ ಮೇಲೆ ಅಬಕಾರಿ ಆಯುಕ್ತರು ಕ್ರಮ ಜರುಗಿಸುತ್ತಾರೆ. ಬೆಂಗಳೂರು ನಗರದಲ್ಲಿ ರಾಜಕೀಯ ಪಕ್ಷಗಳ ಹೋಲ್ಡಿಂಗ್ ಗಳಿಗೆ ಅನುಮತಿ ನೀಡಲು ಚುನಾವಣಾ ಆಯೋಗ ಮಾರ್ಗಸೂಚಿ ರಚಿಸಿದೆ. ಬಿಬಿಎಂಪಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದರು.

    ಆಯೋಗದ ಆನ್ ಲೈನ್ ದೂರು ಸ್ವೀಕಾರ ವ್ಯವಸ್ಥೆ `ಸುವಿಧಾ’ದಲ್ಲಿ ಸ್ವೀಕಾರವಾದ ದೂರುಗಳಿಗೆ 24 ತಾಸುಗಳಲ್ಲಿ ಪರಿಹಾರ ಸೂಚಿಸಲಾಗುತ್ತದೆ. ಅಗ್ನಿಶಾಮಕ ದಳದಿಂದ ಪೂರ್ವಾನುಮತಿ ಪಡೆದಿರುವ ಕಡೆಗಳಲ್ಲಿ ಹೆಲಿಕಾಪ್ಟರ್ ಬಳಕೆಗೆ ಒಂದು ಗಂಟೆಯಲ್ಲಿ ಅನುಮತಿ ನೀಡಬಹುದು ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದರು.

    ಈ ವೇಳೆ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೊದಲ ಬಾರಿ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು. ಅದಕ್ಕೆ ಆಯೋಗ ಆಕ್ಷೇಪ ವ್ಯಕ್ತಪಡಿಸಿತ್ತು. ಎರಡನೇ ಬಾರಿ ನಡೆದ ವರ್ಗಾವಣೆ ಪ್ರಕ್ರಿಯೆಯಲ್ಲಿ ಆಯೋಗದ ಪಾತ್ರವಿಲ್ಲ. ಡಿಪಿಎಆರ್ ಕಾನೂನಿನಂತೆ ಸರ್ಕಾರ ವರ್ಗಾವಣೆ ನಡೆಸಿದೆ ಎಂದು ಅವರು ಹೇಳಿದರು.

    ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು 2054
    ಒಟ್ಟು ಪುರುಷ ಅಭ್ಯರ್ಥಿಗಳು – 1920
    ಒಟ್ಟು ಮಹಿಳಾ ಅಭ್ಯರ್ಥಿಗಳು – 134
    ಒಟ್ಟು ಪಕ್ಷೇತರ ಅಭ್ಯರ್ಥಿಗಳು – 885
    ಕಾಂಗ್ರೆಸ್ ಮಹಿಳಾ ಅಭ್ಯರ್ಥಿಗಳು – 15
    ಬಿಜೆಪಿ ಮಹಿಳಾ ಅಭ್ಯರ್ಥಿಗಳು – 13
    ಜೆಡಿಎಸ್ ಮಹಿಳಾ ಅಭ್ಯರ್ಥಿಗಳು – 11
    ಎಂಇಪಿ ಮಹಿಳಾ ಅಭ್ಯರ್ಥಿಗಳು – 12

  • ಇಮೇಜ್ ವೃದ್ಧಿಗೆ ಹೊಸ, ಹೊಸ ಪ್ರಚಾರ ತಂತ್ರದ ಮೊರೆ ಹೋದ ಬಿಜೆಪಿ

    ಇಮೇಜ್ ವೃದ್ಧಿಗೆ ಹೊಸ, ಹೊಸ ಪ್ರಚಾರ ತಂತ್ರದ ಮೊರೆ ಹೋದ ಬಿಜೆಪಿ

    ಬೆಂಗಳೂರು: ನಾಮಪತ್ರ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಟ್ಟುನಿಟ್ಟಿನ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಹೊಸ ಹೊಸ ಪ್ರಚಾರ ತಂತ್ರ ಅಳವಡಿಸಿಕೊಂಡು ಪಕ್ಷದ ಇಮೇಜ್ ವೃದ್ಧಿಸಲು ಬಿಜೆಪಿ ಪ್ಲಾನ್ ಮಾಡಿದೆ.

    ಈಗ ಪ್ರಚಾರ ಚಾಣಕ್ಯ ರಾಮ್ ಮಾಧವ್ ಸೂಚನೆ ಹಿನ್ನೆಲೆಯಲ್ಲಿ, “ನಮ್ಮ ಮನೆ ಬಿಜೆಪಿ ಮನೆ” ಮೂಲಕ ಪ್ರಚಾರಕ್ಕೆ ಬಿಜೆಪಿ ಮುಂದಾಗಿದೆ.

    ಏಪ್ರಿಲ್ 25 ರಂದು ರಾಜ್ಯದ 224 ಕ್ಷೇತ್ರಗಳಲ್ಲಿ ನಮ್ಮ ಮನೆ ಬಿಜೆಪಿ ಮನೆ ಆಚರಿಸಲು ಸೂಚನೆ ನೀಡಲಾಗಿದೆ. ಒಂದು ಕ್ಷೇತ್ರದಲ್ಲಿ ಕನಿಷ್ಟ 5 ಸಾವಿರ ಬಿಜೆಪಿ ಕಾರ್ಯಕರ್ತರ ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಿಸುವಂತೆ ಸೂಚನೆ ನೀಡಲಾಗಿದೆ.

    ರಾಜ್ಯಾದ್ಯಂತ 11,20,000 ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸಬೇಕು. ಮನೆ ಮೇಲೆ ಹಾರಿಸಲಾದ ಧ್ವಜದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ.

    ಅಭ್ಯರ್ಥಿಗಳ ಜೊತೆ ಮಾತು:
    ರಾಜ್ಯದ ಎಲ್ಲ 224 ಕ್ಷೇತ್ರಗಳ ಮೇಲೆ ಪ್ರಧಾನಿ ಮೋದಿ ಕಣ್ಣು ಹಾಕಿದ್ದು, ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಜೊತೆ ಏಪ್ರಿಲ್ 26 ರಂದು ಟೆಲಿಕಾನ್ಫರೆನ್ಸ್ ಮೂಲಕ ಮೋದಿ ಮಾತನಾಡಲಿದ್ದಾರೆ. ಏಪ್ರಿಲ್ 26 ರಂದು ಬೆಳಿಗ್ಗೆ 9 ರಿಂದ 10 ಗಂಟೆಯ ಅವಧಿಯಲ್ಲಿ 30 ನಿಮಿಷಗಳ ಕಾಲ ಚುನಾವಣೆ ಸಿದ್ಧತೆ, ಬೂತ್ ಸಶಕ್ತೀಕರಣ ನಡೆಸುವುದು ಹೇಗೆ ಎನ್ನುವ ಬಗ್ಗೆ ಮಾತನಾಡಲಿದ್ದಾರೆ. 224 ಕ್ಷೇತ್ರದ ಬಗ್ಗೆಯೂ ಮೋದಿ ಸಂಪೂರ್ಣ ಮಾಹಿತಿ ಹಿಡಿದುಕೊಂಡು ಮಾತನಾಡಲಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ.