Tag: Karnataka Election

  • ಅಂಬರೀಶ್ ಅವರನ್ನು ನಾನು ನಂಬಿದ್ದೆ, ಆದ್ರೂ ಟಿಕೆಟ್ ತಪ್ತು: ಭಾವುಕರಾದ ಅಮರಾವತಿ ಚಂದ್ರಶೇಖರ್

    ಅಂಬರೀಶ್ ಅವರನ್ನು ನಾನು ನಂಬಿದ್ದೆ, ಆದ್ರೂ ಟಿಕೆಟ್ ತಪ್ತು: ಭಾವುಕರಾದ ಅಮರಾವತಿ ಚಂದ್ರಶೇಖರ್

    ಮಂಡ್ಯ: ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದ್ದ ಮಂಡ್ಯ ವಿಧಾನಸಭಾ ಕ್ಷೇತ್ರದ ಸ್ಪರ್ಧೆಯಿಂದ ಶಾಸಕ ಅಂಬರೀಶ್ ಹಿಂದೆ ಸರಿದಿದ್ದು, ರವಿಕುಮಾರ್ ಅವರಿಗೆ ಟಿಕೆಟ್ ಸಿಕ್ಕಿದೆ.

    ಬೆಂಗಳೂರಿನ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಂಬರೀಶ್, ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ ಹಾಗೂ ಯಾರ ಹೆಸರನ್ನು ನಾನು ಶಿಫಾರಸು ಮಾಡಲ್ಲ. ಹಾಗಾಗಿ ಹೈಕಮಾಂಡ್ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ ಅಂತಾ ಸ್ಪಷ್ಟಪಡಿಸಿದ್ರು.

    ಇಂದು ಕಾಂಗ್ರೆಸ್ ನಾಯಕರ ಜೊತೆ ನಡೆದ ಮಾತುಕತೆಯಲ್ಲಿ ನನ್ನ ಹೆಸರನ್ನು ಅಂಬರೀಶ್ ಶಿಫಾರಸ್ಸು ಮಾಡಲಿಲ್ಲ. ಒಂದು ವೇಳೆ ಅಭ್ಯರ್ಥಿಯನ್ನು ಸೂಚಿಸಿದ್ರೆ, ಅವರನ್ನು ಗೆಲ್ಲಸಿಕೊಂಡು ಬರುವ ಜವಾಬ್ದಾರಿ ನನ್ನ ಮೇಲಿರುತ್ತದೆ. ಬೇರೆಯವರಿಗೆ ಟಿಕೆಟ್ ಕೊಡಿಸಿದ್ರೆ ನಾನೇ ಪ್ರಚಾರ ಮಾಡಬೇಕಾಗುತ್ತದೆ. ಪ್ರಚಾರ ಮಾಡುವುದಿದ್ದರೆ ನಾನೇ ಸ್ಪರ್ಧೆ ಮಾಡಬಹುದು ಎಂದು ಹೇಳುವ ಮೂಲಕ ನನ್ನನ್ನು ಬೇರೆಯವನ ರೀತಿ ನೋಡಿದ್ರು ಅಂತಾ ಅಮರಾವತಿ ಚಂದ್ರೇಖರ್ ಹೇಳಿದ್ದಾರೆ. ಇದನ್ನೂ ಓದಿ: ನಾನು ಯಾವತ್ತಿದ್ರೂ ಸ್ಟಾರ್, ರಾಜಕೀಯ, ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ಚಿರಋಣಿ: ಅಂಬರೀಶ್

    ಈ ಹಿಂದೆ ನಾನು ಚುನಾವಣೆಗೆ ನಿಲ್ಲಲ್ಲ, ನೀನೇ ನಿಲ್ಲು ಅಂತಾ ಹಲವು ಬಾರಿ ಅಂಬರೀಶ್ ಹೇಳುತ್ತಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ನಮ್ಮ ಹಿತೈಷಿಗಳು ಮಾಡಿದ ಪಿತೂರಿನಿಂದ ನನಗೆ ಟಿಕೆಟ್ ತಪ್ಪಿರುವ ಸಾಧ್ಯತೆಗಳಿವೆ. ಜನರ ಬೆಂಬಲದಿಂದಲೇ ಮಂಡ್ಯದಲ್ಲಿ ಆರು ಚುನಾವಣೆಗಳನ್ನು ಮಾಡಿ ಅವುಗಳಲ್ಲಿ ಯಶಸ್ವಿಯಾಗಿದ್ದೇನೆ. ನಾನು ಇಂದು ಬೆಳಗ್ಗೆವರೆಗೂ ಅಂಬರೀಶ್ ಅವರೇ ಚುನಾವಣೆಗೆ ಸ್ಪರ್ಧಿಸಬೇಕೆಂದು ಹೇಳುತ್ತಾ ಬಂದಿದ್ದೆ, ನಾನು ಎಂದು ಅವರ ವಿರುದ್ಧ ನಿಲ್ಲಬೇಕೆಂದು ಪಿತೂರಿ ಮಾಡಿದವನಲ್ಲ ಅಂತಾ ಭಾವುಕರಾದ್ರು. ಇದನ್ನು ಓದಿ: ಅಮರಾವತಿಗೆ ಅಂಬರೀಷ್ ಮಂಗಳಾರತಿ!

    ಸೋಮವಾರ ಅಂಬರೀಶ್ ಚುನಾವಣೆಯಿಂದ ಸ್ಪರ್ಧೆ ಮಾಡುತ್ತಿಲ್ಲ. ಹಾಗಾಗಿ ನಾನೇ ಚುನಾವಣೆಗೆ ಸ್ಪರ್ಧೆ ಮಾಡಲಿದ್ದೇನೆ ಅಂತಾ ಅಂಬಿ ಆಪ್ತ ಅಮರಾವತಿ ಚಂದ್ರಶೇಖರ್ ಹೇಳಿದ್ದರು.

    https://youtu.be/j5sNdOb1D40

  • ಮೈಸೂರು, ಬೆಂಗಳೂರಿನಲ್ಲಿ ಪಿಡಬ್ಲ್ಯೂಡಿ ಕಂಟ್ರಾಕ್ಟರ್ ನಿವಾಸಗಳ ಮೇಲೆ ಐಟಿ ದಾಳಿ

    ಮೈಸೂರು, ಬೆಂಗಳೂರಿನಲ್ಲಿ ಪಿಡಬ್ಲ್ಯೂಡಿ ಕಂಟ್ರಾಕ್ಟರ್ ನಿವಾಸಗಳ ಮೇಲೆ ಐಟಿ ದಾಳಿ

    ಬೆಂಗಳೂರು: ಬೆಳ್ಳಂಬೆಳಗ್ಗೆ ಮೈಸೂರಿನ 10 ಕಡೆ, ಬೆಂಗಳೂರಿನ 10 ಕಡೆ ಐಟಿ ದಾಳಿ ನಡೆದಿದೆ.
    ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸ, ಪಿಡಬ್ಲ್ಯೂಡಿ ಕಂಟ್ರಾಕ್ಟರ್ ಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ.
    ಆರಂಭದಲ್ಲಿ ಮಹಾದೇವಪ್ಪನವರ ನಿವಾಸದ ಮೇಲೆ ದಾಳಿ ನಡೆದಿದೆ ಎನ್ನುವ ಸುದ್ದಿ ಪ್ರಕಟವಾಗಿತ್ತು. ಆದರೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಹಾದೇವಪ್ಪ ಅವರ ನಿವಾಸದ ಮೇಲೆ ಯಾವುದೇ ದಾಳಿ ನಡೆಸಿಲ್ಲ ಎಂದು ತಿಳಿಸಿದ್ದಾರೆ.
  • ವರುಣಾ ಕ್ಷೇತ್ರದಿಂದ ವಿಜಯೇಂದ್ರಗೆ ಬಿಜೆಪಿ ಟಿಕೆಟ್ ಇಲ್ಲ

    ವರುಣಾ ಕ್ಷೇತ್ರದಿಂದ ವಿಜಯೇಂದ್ರಗೆ ಬಿಜೆಪಿ ಟಿಕೆಟ್ ಇಲ್ಲ

    ಮೈಸೂರು: ಕೊನೆಗೂ ವರಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದ್ದು, ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಿಲ್ಲ ಎಂದು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೇ ಹೇಳಿದ್ದಾರೆ.

    ವಿಜಯೇಂದ್ರಗೆ ಟಿಕೆಟ್ ನಿರಾಕರಣೆ ಹಿನ್ನೆಲೆಯಲ್ಲಿ ಬಿಎಸ್‍ವೈ ಜೊತೆ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳಿಧರ್ ರಾವ್ ಹಾಗೂ ಪ್ರಕಾಶ್ ಜಾವ್ಡೇಕರ್ ಅವರು ಒಂದು ಸುತ್ತಿನ ಮಾತುಕತೆ ಮುಕ್ತಾಯಗೊಂಡಿದೆ. ಆದರೆ ಮತ್ತೆ ಮೈಸೂರು ಮತ್ತು ಚಾಮರಾಜನಗರ ಅಭ್ಯರ್ಥಿಗಳ ಜೊತೆಯಲ್ಲೂ ರಾಷ್ಟ್ರೀಯ ನಾಯಕರು ಸಭೆ ನಡೆಸಿದ್ದಾರೆ.

    ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್‍ವೈ, ಬೆಳಗ್ಗೆಯಿಂದ ಸತತ ಎರಡು ಗಂಟೆಯ ಕಾಲ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಮ್ಮ ಅಭ್ಯರ್ಥಿಗಳು ಮತ್ತು ಮುಖಂಡರನ್ನ ಕರೆದು ಸಮಾಲೋಚನೆ ಮಾಡಲಾಗಿದೆ. ಇವತ್ತು ಬೇರೆ ಬೇರೆ ವಿಚಾರಗಳಿಂದಾಗಿ ವರುಣಾ ಕ್ಷೇತ್ರದಿಂದ ಬೇರೆ ಅವರನ್ನು ಸ್ಪರ್ಧೆ ಮಾಡಲು ಹೇಳಿದ್ದೇವೆ. ಮತ್ತೆ ವಿಜಯೇಂದ್ರ 20 ದಿನ ಇಲ್ಲೆ ಇದ್ದು ಮೈಸೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಪ್ರವಾಸ ಮಾಡುತ್ತಾರೆ ಅಂತಾ ತಿಳಿಸಿದ್ರು.

    ನಾನೇದರೂ ತಪ್ಪು ಮಾಡಿದ್ದರೆ ಕ್ಷಮಿಸಿ. ಆದರೆ ಯಾವುದೇ ಬಿಜೆಪಿ ಅಭ್ಯರ್ಥಿ ಇರಲಿ, ಇಲ್ಲೆ ಇದ್ದು ಅವರನ್ನು ಗೆಲ್ಲಿಸಲು ಕೆಲಸ ಮಾಡುತ್ತೇನೆ ಎಂದು ವಿಜಯೇಂದ್ರ ಒಪ್ಪಿಕೊಂಡಿದ್ದಾರೆ. ಅವರ ಕಡೆಯಿಂದ ಏನು ಗೊಂದಲವಿಲ್ಲ. ಆದ್ದರಿಂದ ನಮ್ಮ ಮತದಾರರು ಕೇಂದ್ರದ ತೀರ್ಮಾನವನ್ನು ಒಪ್ಪಿಕೊಳ್ಳಬೇಕು ಎಂದು ಯಡಿಯೂರಪ್ಪ ಕೈ ಮುಗಿದು ಮನವಿ ಮಾಡಿಕೊಂಡ್ರು.

    ಈ ವೇಳೆ ಮುರುಳಿಧರ್ ರಾವ್ ಮಾತನಾಡಿ, ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಐತಿಹಾಸಿಕ ತಿರ್ಮಾನವನ್ನು ನಾವು ಒಪ್ಪಿಕೊಂಡಿದ್ದೇವೆ. ವಿಜಯೇಂದ್ರ ಅವರಿಗೆ ಬಿಜೆಪಿಯ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಇನ್ನು ಮುಂದಿನ 20 ದಿನಗಳ ಕಾಲ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡು ಪ್ರಚಾರ ಮಾಡುತ್ತಾರೆ ಎಂದು ತಿಳಿಸಿದರು.

  • ರಾಜ್ಯದಲ್ಲೇ ಮೊದಲು- ಮೋದಿ ಭಾವಚಿತ್ರವನ್ನು ಬೆನ್ನ ಮೇಲೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ!

    ರಾಜ್ಯದಲ್ಲೇ ಮೊದಲು- ಮೋದಿ ಭಾವಚಿತ್ರವನ್ನು ಬೆನ್ನ ಮೇಲೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ!

    ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗ್ತಿದೆ. ರಾಷ್ಟ್ರೀಯ ಪಕ್ಷದ ನಾಯಕರು ರಾಜ್ಯದ ಕಡೆ ಮುಖ ಮಾಡಿದ್ದಾರೆ. ಈ ಮಧ್ಯೆ ಅಭಿಮಾನಿಯೊಬ್ಬರು ಮೋದಿ ಮೇಲಿನ ಅಭಿಮಾನವನ್ನು ತೋರಿಸಲು ರೆಡಿಯಾಗಿದ್ದು, ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿಯವರನ್ನು ವಿಭಿನ್ನವಾಗಿ ಸ್ವಾಗತಿಸಲು ಸಿದ್ಧರಾಗಿದ್ದಾರೆ.

    ಇಲ್ಲಿಯವರೆಗೂ ತಮ್ಮ ನೆಚ್ಚಿನ ಫಿಲ್ಮ್ ಹೀರೋ ಅಥವಾ ಕ್ರಿಕೆಟ್ ತಾರೆಯರ ಟ್ಯಾಟೂವನ್ನು ಹಾಕಿಸಿಕೊಂಡಿರೋದನ್ನು ಕೇಳಿದ್ದೀರಿ, ನೋಡಿದ್ದೀರಿ. ಆದರೆ ಈ ವ್ಯಕ್ತಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಟ್ಯಾಟೂವನ್ನು ಬೆನ್ನಮೇಲೆ ಹಾಕಿಸಿಕೊಂಡಿದ್ದಾರೆ. ಇದು ರಾಜ್ಯದಲ್ಲಿಯೇ ಮೊದಲ ಬಾರಿಗೆ ಮೋದಿ ಅವರ ಭಾವಚಿತ್ರವನ್ನ ಬೆನ್ನ ಮೇಲೆ ಹಾಕಿಸಿಕೊಳ್ಳುತ್ತಿರೋದಂತೆ.

    ಮೂಲತಃ ರಾಯಚೂರಿನ ದೇವರಾಯದುರ್ಗದ ನಿವಾಸಿಯಾಗಿರೋ ಬಸವರಾಜ್ ಮಡಿವಾಳ ಅವರು ಈ ರೀತಿ ಮೋದಿ ಅವರ ಟ್ಯಾಟೂವನ್ನು ಹಾಕಿಸಿಕೊಂಡಿರೋ ಅಭಿಮಾನಿ. ಕಲಾವಿದ ಶಂಕರ್ ಸತತ 15 ತಾಸು ಈ ಮೋದಿ ಟ್ಯಾಟೂವನ್ನು ಬಿಡಿಸಲು ತೆಗೆದುಕೊಂಡಿದ್ದಾರೆ. ಅವರು ಮೋದಿ ಪ್ರಧಾನಿಯಾದ ಮೇಲೆ ನಮ್ಮ ದೇಶದ ಭದ್ರತೆ ಹೆಚ್ಚಾಗಿದ್ದು, ಜೊತೆಗೆ ಇಡೀ ವಿಶ್ವ ನಮ್ಮ ದೇಶದ ಕಡೆ ತಿರುಗಿ ನೋಡುವಂತೆ ಮಾಡಿದ ಪ್ರಧಾನಿ ನಮ್ಮ ಮೋದಿ. ಅದಕ್ಕಾಗಿ ಅವರ ಟ್ಯಾಟೂವನ್ನು ಹಾಕಿಸಿಕೊಂಡಿದ್ದೇನೆ ಎಂದು ಬಸವರಾಜ್ ತಿಳಿಸಿದ್ದಾರೆ.

    ಮೋದಿ ರಾಜ್ಯದಲ್ಲಿ ಚುನಾವಣಾ ಪ್ರಚಾರ ಮಾಡಲು ಯಾವೆಲ್ಲಾ ಜಿಲ್ಲೆಗಳಿಗೆ ಹೋಗುತ್ತಾರೋ ಆ ಎಲ್ಲ ಜಿಲ್ಲೆಗಳಿಗೆ ನಾನು ಹೋಗಿ ನನ್ನ ಟ್ಯಾಟೂವನ್ನು ಜನರಿಗೆ ತೋರಿಸಿ ಮೋದಿ ಹಾಗೂ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ. ನಾನು ನನ್ನ ಟ್ಯಾಟೂವನ್ನು ಮೋದಿಗೆ ತೋರಿಸಬೇಕು ಅವರನ್ನು ಒಮ್ಮೆ ಭೇಟಿಯಾಗಬೇಕು ಎನ್ನುವ ಆಸೆ ಇದೆ ಎಂದು ಅಂತ ಅವರು ಆಶಯ ವ್ಯಕ್ತಪಡಿಸಿದ್ದಾರೆ.

    ಈಗ ಚುನಾವಣೆ ಹತ್ತಿರ ಆಗುತ್ತಿರೋದ್ರಿಂದ ರಾಜಕೀಯ ನಾಯಕರ ಅಭಿಮಾನಿಗಳು ಟ್ಯಾಟೂ ಹಾಕಿಸಿಕೊಳ್ಳೋಕೆ ಬರುತ್ತಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಮೋದಿ ಅವರ ಟ್ಯಾಟೂವನ್ನು ಬೆನ್ನ ಮೇಲೆ ಹಾಕುತ್ತಿರೋದು. ನನಗೂ ಬಹಳ ಸಂತೋಷವಾಗ್ತಿದೆ ಅಂತಾ ಟ್ಯಾಟೂ ಶಂಕರ್ ತಮ್ಮ ಸಂತಸವನ್ನು ಹೊರಹಾಕಿದ್ದಾರೆ.

    ಸದ್ಯ ಚುನಾವಣೆ ಸಮೀಪವಾಗುತ್ತಿದಂತೆ ಪ್ರಚಾರ ಕಾರ್ಯನೂ ಜೋರಾಗುತ್ತಿದ್ದು, ಮೋದಿ ರಾಜ್ಯಕ್ಕೆ ಬಂದಾಗ ತನ್ನ ಟ್ಯಾಟೂ ಮೂಲಕ ಜನರನ್ನು ಸೆಳೆಯಲು ಬಸವರಾಜ್ ರೆಡಿಯಾಗಿದ್ದಾರೆ.

  • ಹ್ಯಾರಿಸ್ ಮೇಲೆ ಬಿತ್ತು ಮೊದಲ ಕೇಸ್: ಶಾಸಕರ ಅಹಂಕಾರ ಇಳಿಸಿದ ಆರ್ ಓ ನಂದಿನಿ

    ಹ್ಯಾರಿಸ್ ಮೇಲೆ ಬಿತ್ತು ಮೊದಲ ಕೇಸ್: ಶಾಸಕರ ಅಹಂಕಾರ ಇಳಿಸಿದ ಆರ್ ಓ ನಂದಿನಿ

    ಬೆಂಗಳೂರು: ಕೊನೆ ಕ್ಷಣದಲ್ಲಿ ಟಿಕೆಟ್ ಗಿಟ್ಟಿಸಿಕೊಂಡಿದ್ದ ಶಾಂತಿನಗರ ಶಾಸಕ ಹ್ಯಾರಿಸ್ ಮೇಲೆ ಇಂದು ಕೇಸ್ ಬಿದ್ದಿದೆ.

    ಶಾಂತಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹ್ಯಾರಿಸ್ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ಇಂದು ಮೇಯೋ ಹಾಲ್‍ನ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

    ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಆಸ್ಟಿನ್ ಟೌನ್ ಸರ್ಕಲ್ ನಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. 3 ಗಂಟೆಗೆ ನಾಮಪತ್ರ ಸಲ್ಲಿಕೆಯ ಅವಧಿ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಅವಧಿ ಮುಕ್ತಾಯಕ್ಕೆ 10 ನಿಮಿಷ ಬಾಕಿ ಇರುವಾಗ ಹ್ಯಾರಿಸ್ ನಾಮಪತ್ರ ಸಲ್ಲಿಸಿದರು.

    ಮಾಧ್ಯಮದವರ ಜೊತೆ ಮಾತನಾಡುವಾಗ ಮಗನ ವಿಚಾರ ಕೇಳಿದ್ದಕ್ಕೆ ಹ್ಯಾರಿಸ್, ನಮ್ಮ ತಾಯಿಗೆ ಹುಚ್ಚು ಹಿಡಿದಿದ್ದನ್ನು ಕೇಳಬಹುದು, ನಿಮ್ಮ ತಾಯಿಗೆ ಹುಚ್ಚು ಹಿಡಿದರೆ ಹೀಗೆ ಕೇಳುತ್ತಿರಾ ಎಂದು ಅಹಂಕಾರದಿಂದ ಪ್ರಶ್ನಿಸಿ ರೋಡ್ ಶೋ ಮಾಡಲು ಮುಂದಾದರು.

    ದರ್ಪದ ಉತ್ತರ ನೀಡಿ ರೋಡ್ ಶೋ ಮಾಡುತ್ತಿದ್ದ ಹ್ಯಾರಿಸ್ ಅವರಿಗೆ ಆರ್ ಓ ನಂದಿನಿ ಸರಿಯಾಗಿಯೇ ಶಾಕ್ ನೀಡಿದರು. ಟೆಂಪೋ ಮೇಲೆ ಏರಿ ಗಟ್ಟಿ ಧ್ವನಿವರ್ಧಕ ಬಳಸಿ ಭಾಷಣ ಮಾಡುತ್ತಿದ್ದ ಹ್ಯಾರಿಸ್‍ರನ್ನು ಚುನಾವಣಾಧಿಕಾರಿ ನಂದಿನಿ ಅವರು ಕೆಳಗಿಳಿಸಿ ವಾಹನವನ್ನು ಸೀಜ್ ಮಾಡಿದರು. ವಾಹನ ಸೀಜ್ ಆದ ಬಳಿಕ ಹ್ಯಾರಿಸ್ ನಡೆದುಕೊಂಡು ಹೋದರು.

    ಈ ರೀತಿಯಾಗಿ ಕಾನೂನು ಉಲ್ಲಂಘನೆ ಆಗುತ್ತಿದ್ದರೂ ಕೈ ಕಟ್ಟಿ ನಿಂತಿದ್ದು ಯಾಕೆ? 100 ಮೀಟರ್ ಒಳಗಡೆ ಐದು ಜನ ಮಾತ್ರ ಬರಬೇಕು ಎಂದು ನಿಯಮ ಇದ್ದರೂ ಐವತ್ತು ಜನರನ್ನು ಬಿಟ್ಟಿದ್ದು ಯಾಕೆ? ಕಾನೂನಿಗೆ ನಿಮ್ಮ ಬಳಿ ಗೌರವ ಇಲ್ವಾ? ಮುಖ್ಯ ಚುನಾವಣಾಧಿಕಾರಿಗೆ ನಿಮ್ಮ ವಿರುದ್ಧ ದೂರು ನೀಡುತ್ತೇನೆ ಎಂದು ಪೊಲೀಸರನ್ನು ಅಧಿಕಾರಿ ನಂದಿನಿಯವರು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

  • ಅಮರಾವತಿಗೆ ಅಂಬರೀಷ್ ಮಂಗಳಾರತಿ!

    ಅಮರಾವತಿಗೆ ಅಂಬರೀಷ್ ಮಂಗಳಾರತಿ!

    ಬೆಂಗಳೂರು: ಮಂಡ್ಯ ಟಿಕೆಟ್ ವಿಚಾರದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಸಸ್ಪೆನ್ಸ್ ಇಂದು ಕೂಡಾ ಮುಂದುವರೆದಿದೆ. ಇದೇ ವೇಳೆ ತಮ್ಮ ಆಪ್ತ ಅಮರಾವತಿ ಚಂದ್ರಶೇಖರ್ ವಿರುದ್ಧ ಅಂಬಿ ಫುಲ್ ಗರಂ ಆಗಿದ್ದಾರೆ. ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಅಂಬರೀಷ್ ಮಂಗಳವಾರ ಬೆಳಗ್ಗೆ 10.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ. ಗಾಲ್ಫ್ ಕೋರ್ಸ್ ರಸ್ತೆಯಲ್ಲಿರುವ ನಿವಾಸದಲ್ಲಿ ಅಂಬರೀಷ್ ತಮ್ಮ ಮುಂದಿನ ರಾಜಕೀಯ ನಿಲುವಿನ ಬಗ್ಗೆ ಸ್ಪಷ್ಟನೆ ನೀಡಲಿದ್ದಾರೆ ಎನ್ನಲಾಗಿದೆ.

    ಇಂದೇನಾಯ್ತು?: ಬೆಳಗ್ಗೆಯೇ ಅಂಬರೀಷ್ ಮನವೊಲಿಕೆಗೆ ಬೆಂಬಲಿಗರು ಮಂಡ್ಯದಿಂದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿರುವ ನಿವಾಸಕ್ಕೆ ಆಗಮಿಸಿದರು. ಅದರಲ್ಲೂ ಅಮರಾವತಿ ಚಂದ್ರಶೇಖರ್ ಮಂಡ್ಯ ಟಿಕೆಟ್ ನನಗೇ ಕೊಡಿಸಿ ಎಂದು ಅಂಬರೀಷ್ ಗೆ ದುಂಬಾಲು ಬಿದ್ದಿದ್ದರು. ನಿನಗೆ ಟಿಕೆಟ್ ಕೊಡಿಸೋಕೆ ನಾನ್ಯಾರು ಎಂದಿರುವ ಅಂಬಿ, ಅಮರಾವತಿ ಮನವಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಇಲ್ಲಿಯವರೆಗೆ ಯಾರ ಪರವೂ ಬ್ಯಾಟ್ ಬೀಸದ ಅಂಬರೀಷ್, ನಾಳೆ ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದಾಗಿ ತಮ್ಮ ಬೆಂಬಲಿಗರ ಮೂಲಕ ಮಾಹಿತಿ ನೀಡಿದ್ದಾರೆ. ಯಾರನ್ನು ನಿಲ್ಲಿಸಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ. ಇಂತವರಿಗೇ ಕೊಡಿ ಅಂತ ನಾನ್ಯಾಕೆ ಹೇಳಲಿ ಎಂದು ಅಂಬರೀಷ್ ಆಪ್ತರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

    ನಾನ್ಯಾವಾಗ ಹೇಳ್ದೆ?: ಅಂಬಿಯನ್ನು ಭೇಟಿಯಾದ ಅಮರಾವತಿ ಚಂದ್ರಶೇಖರ್, ಅಣ್ಣ ನಿನಗಾಗಿ ಕ್ಷೇತ್ರದಲ್ಲಿ ಸಾಕಷ್ಟು ಕಷ್ಟಪಟ್ಟಿದ್ದೇವೆ. ನೀನೇ ಬಂದು ಸ್ಪರ್ಧೆ ಮಾಡು, ಇಲ್ಲಾ ನಮ್ಮಲ್ಲಿ ಯಾರ ಹೆಸರು ಹೇಳ್ತೀಯೋ ಅವರು ಸ್ಪರ್ಧೆ ಮಾಡ್ತಾರೆ. ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.

    ಇದಕ್ಕೆ ಅಂಬರೀಷ್, ನಾನು ಯಾರಿಗೂ ಹೇಳಲ್ಲ. ಊರು ತುಂಬ ಅಂಬರೀಶ್ ನನ್ನನ್ನು ಎಲೆಕ್ಷನ್ ಗೆ ನಿಲ್ಲೋಕೆ ಹೇಳಿದ್ದಾರೆ ಅಂತ ಹೇಳಿಕೊಂಡು ಬಂದಿದೀಯಾ. ಬೆಳಗ್ಗೆ ಕೊರಟಗೆರೆಗೆ ಹೋಗಿ ಪರಮೇಶ್ವರ್ ಹತ್ರ ಅಣ್ಣ ಹೇಳಿದ್ದಾರೆ ನಾನೇ ನಿಲ್ತೀನಿ ಅಂತ ಟಿಕೆಟ್ ಕೇಳಿದ್ದೀಯಾ. ಡಿ.ಕೆ.ಶಿವಕುಮಾರ್ ಬಳಿ ಹೋಗಿ ಅಣ್ಣ ನನಗೆ ಸ್ಪರ್ಧೆ ಮಾಡೋಕೆ ಹೇಳಿದ್ದಾರೆ ಎಂದು ಟಿಕೆಟ್ ಕೊಡಿಸಿ ಅಂದಿದ್ದೀಯಾ. ನಾನು ಯಾವಾಗ ನಿನಗೆ ಚುನಾವಣೆಗೆ ನಿಲ್ಲೋಕೆ ಹೇಳಿದ್ದೀನಿ, ಹೋಗು ಹೋಗು ಅಂತ ಹಿಗ್ಗಾ ಮುಗ್ಗಾ ಬೈದಿದ್ದಾರೆ. ಹೀಗಾಗಿ ಅಂಬಿ ಮನೆಯಿಂದ ಹೊರಬಂದ ಅಮರಾವತಿ ಚಂದ್ರಶೇಖರ್, ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

  • 5 ರೂಪಾಯಿ ಡಾಕ್ಟ್ರು 5 ರೂ. ಕಾಯಿನ್ ಗಳನ್ನು ಕೊಟ್ಟು ನಾಮಪತ್ರ ಸಲ್ಲಿಸಿದ್ರು!

    5 ರೂಪಾಯಿ ಡಾಕ್ಟ್ರು 5 ರೂ. ಕಾಯಿನ್ ಗಳನ್ನು ಕೊಟ್ಟು ನಾಮಪತ್ರ ಸಲ್ಲಿಸಿದ್ರು!

    ಮಂಡ್ಯ: ಜಿಲ್ಲೆಯಲ್ಲಿ 5 ರೂಪಾಯಿ ಡಾಕ್ಟರ್ ಎಂದೇ ಪ್ರಸಿದ್ಧಿ ಪಡೆದಿರುವ ಮಂಡ್ಯದ ಡಾಕ್ಟರ್ ಶಂಕರೇಗೌಡರು ಕರ್ನಾಟಕ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದಾರೆ.

    ಡಾಕ್ಟರ್ ಶಂಕರೇಗೌಡ ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಹಿಂದೆ ಜೆಡಿಎಸ್ ಪಕ್ಷದಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿಯೂ ಶಂಕರೇಗೌಡ ಆಯ್ಕೆಯಾಗಿದ್ದರು. ಆದರೆ ಜೆಡಿಎಸ್ ಟಿಕೆಟ್ ಕೈ ತಪ್ಪಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

    ಪತ್ನಿ ರುಕ್ಮಿಣಿ, ಪುತ್ರಿ ಉಜ್ವಲ, ವಕೀಲ ಕೇಶವಮೂರ್ತಿ ಹಾಗೂ ಬೆಂಬಲಿಗರ ಜೊತೆ ಆಗಮಿಸಿದ ವೈದ್ಯರು ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಪಕ್ಷೇತರರಾಗಿ ಚುನಾವಣಾ ಕಣಕ್ಕಿಳಿದಿರುವ ಅವರು ಠೇವಣಿ ಕಟ್ಟಲು 5 ರೂಪಾಯಿ ಕಾಯಿನ್ ಗಳನ್ನು ಪ್ಲಾಸ್ಟಿಕ್ ಕವರ್ ನಲ್ಲಿ ತೆಗೆದುಕೊಂಡು ಬಂದಿದ್ದು ವಿಶೇಷವಾಗಿತ್ತು.

  • ‘ಇದು ಹಿಂದೂ ಮನೆ, ಕಾಂಗ್ರೆಸ್ಸಿಗರಿಗೆ ಮತವಿಲ್ಲ’- ಮನೆಗಳ ಮುಂದೆ ಬೋರ್ಡ್ ಹಾಕಿಕೊಂಡ ಗ್ರಾಮಸ್ಥರು

    ‘ಇದು ಹಿಂದೂ ಮನೆ, ಕಾಂಗ್ರೆಸ್ಸಿಗರಿಗೆ ಮತವಿಲ್ಲ’- ಮನೆಗಳ ಮುಂದೆ ಬೋರ್ಡ್ ಹಾಕಿಕೊಂಡ ಗ್ರಾಮಸ್ಥರು

    ಮಂಗಳೂರು: ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತಕ್ಕಾಗಿ ಏನೆಲ್ಲ ಕಸರತ್ತು ಮಾಡೋದನ್ನು ನೋಡಿದ್ದೀವಿ. ಆದರೆ ಇಲ್ಲೊಂದು ಗ್ರಾಮದಲ್ಲಿ ಊರಿನ ಜನರೇ ಒಂದು ಪಕ್ಷದ ನಾಯಕರಿಗೆ ಬಹಿಷ್ಕಾರ ಹಾಕಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ 200ಕ್ಕಿಂತಲೂ ಹೆಚ್ಚು ಹಿಂದೂಗಳ ಮನೆಯ ಗೋಡೆ ಮೇಲೆ ಕಾಂಗ್ರೆಸ್ ನಾಯಕರಿಗೆ ಪ್ರವೇಶವಿಲ್ಲ ಅನ್ನುವ ವಿಚಿತ್ರ ಬೋರ್ಡ್ ಹಾಕಲಾಗಿದೆ.

    ಬೋರ್ಡ್ ನಲ್ಲಿ ಏನು ಬರೆಯಲಾಗಿದೆ?: ಇದು ಹಿಂದೂಗಳ ಮನೆ, ಗಣ್ಯಶ್ರೀ ಎಂಬ ಹೆಣ್ಮಗಳನ್ನು ಕಪಟ ಪ್ರೇಮದಿಂದ ಮತಾಂತರ ಮಾಡಲು ಬೆಂಬಲಿಸಿದ ಕಾಂಗ್ರೆಸಿಗರಿಗೆ ಈ ಮನೆಗೆ ಪ್ರವೇಶವಿಲ್ಲ. ನಮ್ಮ ಮನೆಯಲ್ಲೂ ಹೆಣ್ಣು ಮಕ್ಕಳಿದ್ದಾರೆ ಎಂಬ ಎಚ್ಚರಿಕೆಯ ಫಲಕವನ್ನು ಮನೆ ಮುಂದಿನ ಗೋಡೆಯಲ್ಲಿ ನೇತು ಹಾಕಲಾಗಿದೆ.

    ಒಂದು ವರ್ಷದ ಹಿಂದೆ ಗಣ್ಯಶ್ರೀ ಎಂಬ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಅನ್ಯಮತೀಯ ಯುವಕನೊಬ್ಬ ಕೊನೆಗೆ ಮತಾಂತರ ಮಾಡಿದ್ದ. ಈ ಪ್ರಕರಣದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಯುವಕನಿಗೆ ಸಹಾಯ ಮಾಡಿದ್ದರೆನ್ನಲಾಗಿದ್ದು, ಇದೀಗ ಚುನಾವಣೆ ಸಂದರ್ಭದಲ್ಲಿ ಸ್ಥಳೀಯ ಹಿಂದೂ ಕುಟುಂಬಗಳು ಕಾಂಗ್ರೆಸ್ ನಾಯಕರಿಗೆ ಪಾಠ ಕಲಿಸಲು ಮುಂದಾಗಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ಕೇರಳದಲ್ಲಿರೋ ಮನೆಗಳಲ್ಲಿ ‘ನಮ್ಮ ಮನೆಗಳಲ್ಲಿ ಹೆಣ್ಮಕ್ಕಳಿದ್ದಾರೆ, ಬಿಜೆಪಿ ನಾಯಕರಿಗೆ ಪ್ರವೇಶ ಇಲ್ಲ’ ಅನ್ನೋ ಪತ್ರ ಅಂಟಿಸಿದ್ದು ವೈರಲ್ ಆಗಿತ್ತು. ಈಗ ಹಿಂದೂಗಳ ಮನೆಗೆ ಕಾಂಗ್ರೆಸ್ ನಾಯಕರು ಬರುವಂತಿಲ್ಲ ಅನ್ನುವ ಎಚ್ಚರಿಕೆ ನೋಟಿಸ್ ಅಂಟಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.

  • ಬಿಜೆಪಿಗೆ ಶಾಕ್ ನೀಡಿದ ಹಿಂದೂ ಸಂಘಟನೆಗಳು

    ಬಿಜೆಪಿಗೆ ಶಾಕ್ ನೀಡಿದ ಹಿಂದೂ ಸಂಘಟನೆಗಳು

    ದಾವಣಗೆರೆ: ಹಿಂದೂ ಮಹಾಸಭಾ ಸೇರಿದಂತೆ ವಿವಿಧ ಸಂಘಟನೆಗಳು ಬಿಜೆಪಿಗೆ ಸೆಡ್ಡು ಹೊಡೆದಿವೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು 90ರಿಂದ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಅಂತಾ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ರಾಜು ಹೇಳಿದ್ದಾರೆ.

    ಈಗಾಗಲೇ ಎಲ್ಲ ಹಿಂದೂ ಸಂಘಟನೆಗಳಿಂದ 90 ರಿಂದ 100 ಜನ ಅಭ್ಯರ್ಥಿಗಳು ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಈ ಹಿಂದಿನ ಚುನಾವಣೆಯಲ್ಲಿ ಎಲ್ಲ ಹಿಂದೂ ಸಂಘಟನೆಗಳು ಬಿಜೆಪಿಗೆ ಬೆಂಬಲ ನೀಡಿದ್ದವು. ಇಂದು ಕೇಂದ್ರದಲ್ಲಿ ಬಿಜೆಪಿ ಬರೋದಕ್ಕೆ ನಮ್ಮೆಲ್ಲರ ಶ್ರಮವಿದೆ. ಆ ಶ್ರಮಕ್ಕೆ ತಕ್ಕ ಪ್ರತಿಫಲ ಮಾತ್ರ ದೊರೆತಿಲ್ಲ. ನಾಡಿನ ಜನತೆಗೆ ಒಂದು ಒಳ್ಳೆಯ ಆಡಳಿತ ನೀಡುವಲ್ಲಿ ಬಿಜೆಪಿ ಇಂದು ವಿಫಲವಾಗಿದೆ. ಕರ್ನಾಟಕ ಚುನಾವಣೆಯಲ್ಲಿ ಭ್ರಷ್ಟ ಮುಖ್ಯಮಂತ್ರಿ ಸೇರಿದಂತೆ ಹಲವು ಮಾಜಿ ಸಚಿವರಿಗೆ ಬಿಜೆಪಿ ಟಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಹಿಂದೂ ಸಂಘಟನೆಗಳು ಜೊತೆಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ ಅಂತಾ ಸುಬ್ರಹ್ಮಣ್ಯ ರಾಜು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.

    ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ರಾಜು

    ಈ ಬಾರಿ ಚುನಾವಣೆಯಲ್ಲಿ ನಮಗೆ ಬಹುಮತ ಸಿಗುತ್ತೆ ಎಂಬ ನಂಬಿಕೆಯನ್ನು ಹೊಂದಿದ್ದೇವೆ. ನಮ್ಮ ಸ್ಪರ್ಧೆಯಿಂದ ಬಿಜೆಪಿಗೆ ನಷ್ಟವಾದ್ರೆ, ಅವರು ಮಾಡಿದ ಪಾಪಕ್ಕೆ ಫಲ ಅನುಭವಿಸಿದಂತಾಗುತ್ತದೆ. ನಮ್ಮ ಹೋರಾಟ ಇರೋದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ಧ. ರಾಷ್ಟ್ರೀಯ ಪಕ್ಷಗಳ ನಾಯಕರ ನಡವಳಿಕೆಗಳು ಮತ್ತು ಅಪರಾಧಗಳ ವಿರುದ್ಧ ನಮ್ಮ ಹೋರಾಟ ನಡೆಯಲಿದೆ ಅಂತಾ ಅಂದ್ರು.