Tag: Karnataka Election

  • ರಾಜ್ಯ ಚುನಾವಣೆ ಗೆಲ್ಲಲು ‘ವಾರ್ ಡೇಸ್’ ಘೋಷಿಸಿದ ಬಿಜೆಪಿ

    ರಾಜ್ಯ ಚುನಾವಣೆ ಗೆಲ್ಲಲು ‘ವಾರ್ ಡೇಸ್’ ಘೋಷಿಸಿದ ಬಿಜೆಪಿ

    ಬೆಂಗಳೂರು: ಶತಾಗತಯ ಕರ್ನಾಟಕದಲ್ಲಿ ಕಮಲ ಬಾವುಟ ಹಾರಿಸಲು ಪಣತೊಟ್ಟಿರುವ ಬಿಜೆಪಿ ವಾರ್ ಡೇಸ್ ಘೋಷಣೆ ಮಾಡಲಾಗಿದೆ. ಮೇ 1ರಿಂದ 9ರವರೆಗಿನ ಒಂಬತ್ತು ದಿನಗಳನ್ನು ‘ನವದಿನ ಯುದ್ಧ’ವಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.

    ಈ ಒಂಬತ್ತು ದಿನಗಳಂದು ಕೇಂದ್ರ ನಾಯಕರು ರಾಜ್ಯದಲ್ಲಿ ಠಿಕಾಣಿ ಹೂಡಲಿದ್ದಾರೆ. ಇತ್ತ ಬಿಜೆಪಿ ಅಧಿಕಾರದಲಿರುವ ನಾಲ್ಕು ರಾಜ್ಯಗಳ ಸಿಎಂಗಳು ಕೂಡ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅಮಿತ್ ಶಾ, ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರು ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದಲ್ಲಿಯೇ ಉಳಿದುಕೊಳ್ಳಲಿದ್ದಾರೆ.

    ಮೇ 1 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, 5 ದಿನ ವಿವಿಧ ಜಿಲ್ಲೆಗಳಲ್ಲಿ ನಡೆಯುವ 15 ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ವಿಶೇಷ ಏನೆಂದರೆ ಬೆಂಗಳೂರಿನಲ್ಲಿ ಎರಡು ಬೃಹತ್ ರ್ಯಾಲಿಗಳಲ್ಲಿ ಮೋದಿ ಭಾಗಿಯಾಗಲಿದ್ದಾರೆ.

    ಯಾವ ದಿನ? ಎಲ್ಲಿ ಕಾರ್ಯಕ್ರಮ?
    ಮೇ 01- ಚಾಮರಾಜನಗರ, ಉಡುಪಿ, ಬೆಳಗಾವಿ
    ಮೇ 03- ಕಲಬುರಗಿ, ಬಳ್ಳಾರಿ, ಬೆಂಗಳೂರು
    ಮೇ 05 – ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ
    ಮೇ 07 – ರಾಯಚೂರು, ಚಿತ್ರದುರ್ಗ, ಕೋಲಾರ
    ಮೇ 08 – ಬಿಜಾಪುರ, ಮಂಗಳೂರು, ಬೆಂಗಳೂರು

  • ಅಂಬರೀಶ್ ಸ್ಥಾನಕ್ಕೆ ಎಂಟ್ರಿ ಕೊಡ್ತಿರೋ ವ್ಯಕ್ತಿ ಯಾರು?

    ಅಂಬರೀಶ್ ಸ್ಥಾನಕ್ಕೆ ಎಂಟ್ರಿ ಕೊಡ್ತಿರೋ ವ್ಯಕ್ತಿ ಯಾರು?

    ಬೆಂಗಳೂರು: ಮಾಜಿ ಸಚಿವ, ಶಾಸಕ ಅಂಬರೀಶ್ ಗೆ ಕಾಂಗ್ರೆಸ್‍ನ ಬಿ ಫಾರಂ ಸಿಕ್ಕರೂ ಅದನ್ನು ಸ್ವೀಕರಿಸದೇ ಪಕ್ಷಕ್ಕೆ ರೆಬಲ್ ಆಗಿ ಉಳಿದುಕೊಂಡಿದ್ದಾರೆ. ಅಂಬರೀಶ್ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಅನುಮಾನ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಂಬರೀಶ್ ಸ್ಥಾನಕ್ಕೆ ಯಾರು ಬರುತ್ತಾರೆಂದು ಮಂಡ್ಯದ ಜನರಲ್ಲಿ ತೀವ್ರ ಕೂತುಹೂಲ ಹುಟ್ಟುಹಾಕಿದೆ.

    ಸಿಎಂ ಸಿದ್ದರಾಮಯ್ಯ ಸಹ ಅಂಬರೀಶ್ ಜೊತೆ ಮಾತನಾಡಲು ಮುಂದಾಗದೆ ಮಂಡ್ಯದಲ್ಲಿ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದ್ದಾರಂತೆ. ಮಾಜಿ ಸಚಿವ ಜಯರಾಂ ಪುತ್ರ ಅಶೋಕ್ ಜಯರಾಂ ಅವರನ್ನ ಜೆಡಿಎಸ್ ನಿಂದ ಪಕ್ಷಕ್ಕೆ ಕರೆ ತಂದು ಅಖಾಡಕ್ಕೆ ಇಳಿಸಲು ಕಾಂಗ್ರೆಸ್ ನಾಯಕರುಗಳು ಸಿದ್ಧತೆ ಆರಂಭಿಸಿದ್ದಾರೆ. ಆದ್ರೆ ಅಶೋಕ್ ಜಯರಾಂ ಇನ್ನು ತಮ್ಮ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿಲ್ಲ.

    ಅಶೋಕ್ ಜಯರಾಂ ಜೊತೆಗೆ ಉಳಿದ ಇಬ್ಬರು ನಾಯಕರ ಜೊತೆ ನೇರವಾಗಿ ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯ ಸಂಪರ್ಕದಲ್ಲಿದ್ದಾರೆ. ಇದೀಗ ಮಂಡ್ಯದಲ್ಲಿ ಅಂಬರೀಶ್ ಇಲ್ಲದಿದ್ದರೆ ಈ ಮೂವರಲ್ಲಿ ಒಬ್ಬರನ್ನ ಅಭ್ಯರ್ಥಿಯಾಗಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಅಂಬಿ ಹೇಳಿದ್ದು ಏನು?
    ಈ ಬಾರಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ಸ್ಪರ್ಧೆ ಬೇಡ ಎಂದು ನಿರ್ಧಾರಕ್ಕೆ ಬಂದಿದ್ದು, ಇಂದು ಸಂಜೆ ವೇಳೆ ಅಧಿಕೃತವಾಗಿ ಈ ವಿಚಾರಕ್ಕೆ ಸ್ಪಷ್ಟನೆ ನೀಡುತ್ತೇನೆ. ನಾನು ಯಾರ ಪರವಾಗಿ ಟಿಕೆಟ್ ಕೇಳುವುದಿಲ್ಲ. ಕೇಳಿದರೆ ಅವರನ್ನು ಗೆಲ್ಲಿಸುವ ಜವಾಬ್ದಾರಿ ನನ್ನದೇ ಆಗುತ್ತದೆ. ಯಾರ ಪರವಾಗಿಯೂ ಪ್ರಚಾರ ಮಾಡುವುದಿಲ್ಲ. ಇನ್ನು, ನಾನು ಪಕ್ಷ ಬಿಡಲ್ಲ. ಯಾವುದೇ ಪಕ್ಷ ಸೇರುವುದಿಲ್ಲ. ಸಿಎಂ ಅವರನ್ನು ಭೇಟಿ ಮಾಡಲು ಆಗುವುದಿಲ್ಲ ಎಂದು ಹೇಳಿ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ಹೋಟೆಲ್ ನಲ್ಲಿ ನಡೆದ ಮಾತುಕತೆಯ ಸಾರವನ್ನು ಸಂದೇಶ್ ನಾಗರಾಜ್ ಅವರು ಮಾಧ್ಯಮಗಳಿಗೆ ತಿಳಿಸಿದರು.

    ಈ ಎಲ್ಲಾ ವಿದ್ಯಮಾನಗಳ ಮಧ್ಯೆ, ಅಂಬರೀಶ್ ಅವರೇ ಸ್ಪರ್ಧೆ ಮಾಡಬೇಕು. ಒಂದು ವೇಳೆ ಅಂಬರೀಶ್ ಒಪ್ಪದೇ ಇದ್ದರೆ ಅವರ ಸೂಚನೆಯಂತೆ ನಾನೇ ಸ್ಪರ್ಧೆ ಮಾಡ್ತೇನೆ ಎಂದು ಅಂಬಿ ಆಪ್ತ ಅಮರಾವತಿ ಚಂದ್ರಶೇಖರ್ ತಿಳಿಸಿದ್ದಾರೆ.

  • ಸಿಎಂ ಅರ್ಧಗಂಟೆ ಕಾದರೂ ಅಂಬಿ ಬರಲೇ ಇಲ್ಲ- ಕಾಂಗ್ರೆಸ್‍ಗೆ ರೆಬೆಲ್ ಆಗೇ ಉಳಿದ ರೆಬೆಲ್‍ಸ್ಟಾರ್!

    ಸಿಎಂ ಅರ್ಧಗಂಟೆ ಕಾದರೂ ಅಂಬಿ ಬರಲೇ ಇಲ್ಲ- ಕಾಂಗ್ರೆಸ್‍ಗೆ ರೆಬೆಲ್ ಆಗೇ ಉಳಿದ ರೆಬೆಲ್‍ಸ್ಟಾರ್!

    ಬೆಂಗಳೂರು: ಮಂಡ್ಯದ ಪ್ರಭಾವಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಬರೀಶ್ ಅವರು ರಾಜಕೀಯ ನಿವೃತ್ತಿ ಪಡೆದಂತಿದೆ. ಸಚಿವ ಸ್ಥಾನದಿಂದ ಕೈಬಿಟ್ಟ ಸಿಎಂ ಸಿದ್ದರಾಮಯ್ಯ ಜೊತೆಗಿನ ಮುನಿಸಿನಿಂದ ಕಾಂಗ್ರೆಸ್ ಪಕ್ಷವನ್ನು ಕೊನೇ ಕ್ಷಣದವರೆಗೂ ರೆಬೆಲ್ ಆಗಿಯೇ ಅಂಬರೀಶ್ ಕಾಡುತ್ತಿದ್ದಾರಾ ಎನ್ನುವ ಪ್ರಶ್ನೆ ಮತ್ತೆ  ಎದ್ದಿದೆ.

    ಮಂಡ್ಯದ ಅಭ್ಯರ್ಥಿಯಾಗಿ ಬಿ-ಫಾರ್ಮ್ ಕೊಟ್ಟರೂ ಸ್ವೀಕರಿಸದ ಅಂಬರೀಶ್ ಕಣದಿಂದ ಹಿಂದೆ ಸರಿಯೋ ಲಕ್ಷಣಗಳು ಗೋಚರಿಸಿವೆ. ಆದರೂ, ನಾಳೆ ಸಂಜೆವರೆಗೆ ಕ್ಲೈಮಾಕ್ಸ್ ಕಾದಿರಿಸಿದ್ದಾರೆ.

    ಬೆಂಗಳೂರಿನಲ್ಲಿ ಕೆಜೆ ಜಾರ್ಜ್ ನಡೆಸಿದ ಸಂಧಾನಕ್ಕೆ ಬಗ್ಗದ ಅಂಬರೀಶ್ ಇವತ್ತು ಸಿಎಂ ಸಿದ್ದರಾಮಯ್ಯನವರಿಗೆ ಬೆಲೆ ಕೊಟ್ಟಿಲ್ಲ. ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್‍ನಲ್ಲಿ ಅಂಬರೀಶ್-ಸಿದ್ದರಾಮಯ್ಯ ಭೇಟಿಗೆ ವೇದಿಕೆ ಸಿದ್ಧವಾಗಿತ್ತು. ಆದರೆ ಅಂಬರೀಶ್ ಈ ಭೇಟಿಗೆ ಸೊಪ್ಪು ಹಾಕದೇ ಹೋಟೆಲ್ ಮಾಲೀಕ, ಆಪ್ತ ಸ್ನೇಹಿತ, ಎಂಎಲ್‍ಸಿ ಸಂದೇಶ್ ನಾಗರಾಜ್ ಜೊತೆ ತಮ್ಮ ನಿರ್ಧಾರವನ್ನು ಹೇಳಿದ್ದಾರೆ.

    ಅಂಬಿ ಹೇಳಿದ್ದು ಏನು?
    ಈ ಬಾರಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ಸ್ಪರ್ಧೆ ಬೇಡ ಎಂದು ನಿರ್ಧಾರಕ್ಕೆ ಬಂದಿದ್ದು, ನಾಳೆ ಸಂಜೆ ವೇಳೆ ಅಧಿಕೃತವಾಗಿ ಈ ವಿಚಾರಕ್ಕೆ ಸ್ಪಷ್ಟನೆ ನೀಡುತ್ತೇನೆ. ನಾನು ಯಾರ ಪರವಾಗಿ ಟಿಕೆಟ್ ಕೇಳುವುದಿಲ್ಲ. ಕೇಳಿದರೆ ಅವರನ್ನು ಗೆಲ್ಲಿಸುವ ಜವಾಬ್ದಾರಿ ನನ್ನದೇ ಆಗುತ್ತದೆ. ಯಾರ ಪರವಾಗಿಯೂ ಪ್ರಚಾರ ಮಾಡುವುದಿಲ್ಲ. ಇನ್ನು, ನಾನು ಪಕ್ಷ ಬಿಡಲ್ಲ. ಯಾವುದೇ ಪಕ್ಷ ಸೇರುವುದಿಲ್ಲ. ಸಿಎಂ ಅವರನ್ನು ಭೇಟಿ ಮಾಡಲು ಆಗುವುದಿಲ್ಲ ಎಂದು ಹೇಳಿ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ಹೋಟೆಲ್ ನಲ್ಲಿ ನಡೆದ ಮಾತುಕತೆಯ ಸಾರವನ್ನು ಸಂದೇಶ್ ನಾಗರಾಜ್ ಅವರು ಮಾಧ್ಯಮಗಳಿಗೆ ತಿಳಿಸಿದರು.

    ಇದಕ್ಕೂ ಮುನ್ನ ಅಂಬರೀಶ್ ಬರುತ್ತಾರೆ ಎಂದು ಮೈಸೂರಿನ ಶಾರಾದಾದೇವಿ ನಗರದ ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅರ್ಧ ತಾಸು ಕಾದು ಕುಳಿತಿದ್ದರು. ಆದರೆ ಅರ್ಧಗಂಟೆ, ಮುಕ್ಕಾಲು ಗಂಟೆಯಾದರೂ ಅಂಬರೀಶ್ ಸುಳಿವೇ ಇರಲಿಲ್ಲ. ರೋಸಿ ಹೋದ ಸಿಎಂ ಪ್ರಚಾರಕ್ಕೆ ಎದ್ದು ಹೊರ ನಡೆದರು. ಮಾಧ್ಯಮಗಳ ಪ್ರಶ್ನೆಗೆ, ಇನ್ನುಮುಂದೆ ಅಂಬರೀಶ್ ತಾನಾಗಿ ಬಂದರೆ ಮಾತನಾಡುತ್ತೇನೆ. ನಾನಾಗಿ ಹೋಗುವುದಿಲ್ಲ. ಸ್ಪರ್ಧಿಸುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

    ಈ ಎಲ್ಲಾ ವಿದ್ಯಮಾನಗಳ ಮಧ್ಯೆ, ಅಂಬರೀಶ್ ಅವರೇ ಸ್ಪರ್ಧೆ ಮಾಡಬೇಕು. ಒಂದು ವೇಳೆ ಅಂಬರೀಷ್ ಒಪ್ಪದೇ ಇದ್ದರೆ ಅವರ ಸೂಚನೆಯಂತೆ ನಾನೇ ಸ್ಪರ್ಧೆ ಮಾಡ್ತೇನೆ ಎಂದು ಅಂಬಿ ಆಪ್ತ ಅಮರಾವತಿ ಚಂದ್ರಶೇಖರ್ ತಿಳಿಸಿದ್ದಾರೆ.

    ಮಂಡ್ಯದ ಬೆಂಬಲಿಗರು ಎಂಟು ಕಾರುಗಳಲ್ಲಿ ಮೈಸೂರಿಗೆ ತೆರಳಿ ಹಲವು ಹೊಟೇಲ್‍ಗಳಲ್ಲಿ ಅಂಬರೀಶ್ ಅವರಿಗಾಗಿ ಶೋಧ ನಡೆಸಿದರು.. ಆದರೂ ಅವರಾರಿಗೂ ಅಂಬರೀಶ್ ಸುಳಿವು ಸಿಗಲಿಲ್ಲ. ಒಟ್ಟಿನಲ್ಲಿ ಅಂಬರೀಶ್ ಯಾರ ಕೈಗೂ ಸಿಗದೇ ಹೆಸರಿಗೆ ತಕ್ಕಂಥೆ ರೆಬೆಲ್ ಆಗಿಬಿಟ್ಟಿದ್ದರು.

     

  • ಕಾಂಗ್ರೆಸ್ ಕೊನೆಯ ಪಟ್ಟಿ ಔಟ್: ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ?

    ಕಾಂಗ್ರೆಸ್ ಕೊನೆಯ ಪಟ್ಟಿ ಔಟ್: ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ?

    ಬೆಂಗಳೂರು: ಕಾಂಗ್ರೆಸ್ ಕೊನೆಯ ಪಟ್ಟಿ ಬಿಡುಗಡೆಯಾಗಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಬಾದಾಮಿ ಟಿಕೆಟ್ ಸಿಕ್ಕಿದರೆ, ಹ್ಯಾರಿಸ್ ಅವರಿಗೆ ಶಾಂತಿನಗರದ ಟಿಕೆಟ್ ಸಿಕ್ಕಿದೆ.

    ಈ ಪಟ್ಟಿಯಲ್ಲಿ ಜಗಳೂರು, ತಿಪಟೂರು, ಮಲ್ಲೇಶ್ವರಂ, ಮಡಿಕೇರಿ, ಬೆಂಗಳೂರಿನ ಪದ್ಮನಾಭಗರದ ಅಭ್ಯರ್ಥಿಗಳು ಬದಲಾವಣೆ ಮಾಡಲಾಗಿದೆ.

    ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ?
    ಕಿತ್ತೂರು -ಡಿ.ಬಿ ಇನಾಂದರ್
    ನಾಗಠಾಣ- ವಿಠಲ್ ಕಟಕದೊಂಡ
    ಸಿಂಧಗಿ – ಎಂ ಎನ್ ಸಾಲಿ

    ರಾಯಚೂರು – ಸೈಯದ್ ಯಾಸೀನ್
    ಜಗಳೂರು – ಎಚ್. ಪಿ. ರಾಜೇಶ್
    ತಿಪಟೂರು – ಷಡಕ್ಷರಿ

    ಮಲ್ಲೇಶ್ವರಂ – ಶ್ರೀ ಪಾದ ರೇಣು
    ಪದ್ಮನಾಭನಗರ – ಎಂ ಶ್ರೀನಿವಾಸ್
    ಮಡಿಕೇರಿ – ಕೆ.ಪಿ ಚಂದ್ರಕಲಾ

  • ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

    ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

    ಬೆಂಗಳೂರು: ಕೆಲವು ಗಂಟೆಗಳ ಮುಂಚೆ ಕಾಂಗ್ರೆಸ್ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡುವ ಸ್ಟಾರ್ ಪ್ರಚಾಕರ ಹೆಸರಿನ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ ಬಿಜೆಪಿ ಸಹ ತನ್ನ ಪರವಾಗಿ ಪ್ರಚಾರ ಮಾಡಲಿರುವ ಸ್ಟಾರ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಪ್ರಧಾನಿ ನರೇಂದ್ರ ಮೋದಿ ಮೊದಲ ಸ್ಥಾನದಲ್ಲಿದ್ದು, ಅಮಿತ್ ಶಾ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಸಿಎಂ ಅಭ್ಯರ್ಥಿಯಾಗಿರುವ ಬಿ.ಎಸ್.ಯಡಿಯೂರಪ್ಪ ಮೂರನೇ ಸ್ಥಾನದಲ್ಲಿದ್ದಾರೆ. ಬಿಜೆಪಿ ನಾಯಕರು ಹಾಗು ಕೇಂದ್ರ ಸಚಿವರು ಸಹ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹೆಸರನ್ನು ಹೊಂದಿದ್ದಾರೆ.

    ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಸದಾನಂದ ಗೌಡ, ಅನಂತ್ ಕುಮಾರ್, ನಿರ್ಮಲ ಸೀತಾರಾಮನ್, ಪ್ರಕಾಶ್ ಜಾವ್ಡೇಕರ್, ಪಿಯೂಷ್ ಗೋಯೆಲ್, ಯೋಗಿ ಆದಿತ್ಯನಾಥ್, ಶಿವರಾಜ್ ಸಿಂಗ್ ಚೌಹಾಣ್, ದೇವೇಂದ್ರ ಫಡ್ನವೀಸ್, ರವಿಶಂಕರ್ ಪ್ರಸಾದ್, ರಾಮ್ ಲಾಲ್, ಮುರುಳೀಧರ್ ರಾವ್, ಪುರಂದರೇಶ್ವರಿ, ಬಿ ಎಲ್ ಸಂತೋಷ್, ಅರುಣ್ ಕುಮಾರ್, ಸ್ಮೃತಿ ಇರಾನಿ, ತಾವರ್ ಚಂದ್ ಗೆಹ್ಲೋಟ್, ಸಾಧ್ವಿ ನಿರಂಜನ ಜ್ಯೋತಿ, ಎನ್.ರವಿಕುಮಾರ್, ಮನೋಜ್ ತಿವಾರಿ, ಹೇಮಾಮಾಲಿನಿ, ಇವರೆಲ್ಲರೂ ಕರ್ನಾಟಕ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.

    ಇತ್ತ ರಾಜ್ಯ ನಾಯಕರುಗಳಾದ ಮಾಜಿ ಸಿಎಂ ಎಸ್.ಎಂ.ಕೃಷ್ಣ, ಪ್ರಹ್ಲಾದ್ ಜೋಷಿ, ಶ್ರೀ ರಾಮುಲು, ಪಿ.ಸಿ.ಮೋಹನ್, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಶೋಭ ಕರಂದ್ಲಾಜೆ, ಬಿ ಜೆ ಪುಟ್ಟಸ್ವಾಮಿ, ಡಿ ಎಸ್ ವೀರಯ್ಯ, ತಾರಾ ಅನುರಾಧ, ಶೃತಿ ಸಹ ಸ್ಟಾರ್ ಕ್ಯಾಂಪೇನ್ ಲಿಸ್ಟ್ ನಲ್ಲಿದ್ದಾರೆ.

    ನಟಿ ಹಾಗು ಬಿಜೆಪಿ ವಕ್ತಾರೆಯಾದ ಮಾಳವೀಕಾ ಅವಿನಾಶ್ ಮತ್ತು ನಟ ಗಣೇಶ್ ಪತ್ನಿ ಶಿಲ್ಪಾರ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ನಮೂದಿಸಲಾಗಿಲ್ಲ.

     

  • ನಾನು ಗೆದ್ದರೆ ಮೋದಿಯನ್ನು ಬೆಂಬಲಿಸುತ್ತೇನೆ- ಶಿರೂರು ಸ್ವಾಮೀಜಿ

    ನಾನು ಗೆದ್ದರೆ ಮೋದಿಯನ್ನು ಬೆಂಬಲಿಸುತ್ತೇನೆ- ಶಿರೂರು ಸ್ವಾಮೀಜಿ

    ಉಡುಪಿ: ಪಕ್ಷೇತರ ಅಭ್ಯರ್ಥಿಯಾಗಿ ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ಕಣಕ್ಕಿಳಿದು ಉಡುಪಿ ವಿಧಾನಸಭೆ ಕ್ಷೇತ್ರಕ್ಕೆ ರಂಗು ಹಚ್ಚಿದ್ದಾರೆ. ಇವತ್ತು ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಗಳು ಉಮೇದುವಾರಿಕೆ ಸಲ್ಲಿಸಿದ್ರು. ಪಜೇರೋ ಸ್ಪೋರ್ಟ್ಸ್ ಕಾರಲ್ಲಿ ಬಂದು ಸ್ವಾಮೀಜಿ ನಾಮಪತ್ರ ಸಲ್ಲಿಸಿದರು.

    ಶಿರೂರು ಸ್ವಾಮೀಜಿ ಚುನಾವಣಾ ಅಖಾಡಕ್ಕೆ ಇಳಿಯುವ ಮೂಲಕ ಕಣ ಈ ಬಾರಿ ರಂಗೇರಿದೆ. ಮಧ್ಯಾಹ್ನ ಹನ್ನೆರಡೂವರೆ ಗಂಟೆ ಸುಮಾರಿಗೆ ತಾಲೂಕು ಕಚೇರಿಗೆ ಆಗಮಿಸಿದ ಶ್ರೀಗಳು ಚುನಾವಾಧಿಕಾರಿಗಳಿಗೆ ನಾಮಪತ್ರ ನೀಡಿದರು. ಇದಕ್ಕೂ ಮುನ್ನ ಶ್ರೀಗಳು ಕಡಿಯಾಳಿಯ ಮಹಿಷಮರ್ಧಿನಿ ದೇವಸ್ಥಾನಕ್ಕೆ ಭೇಟಿ ಕೊಟ್ರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

    ಶಿರೂರು ಶ್ರೀ ,ಅಲ್ಲಿಂದ ನೇರ ಕಾರು ಹತ್ತಿ ತಾಲೂಕು ಕಚೇರಿಗೆ ಬಂದರು. ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿ ಕಚೇರಿಗೆ ಪಜೇರೋ ಸ್ಪೋರ್ಟ್ಸ್  ಕಾರಿನಲ್ಲಿ ಆಗಮಿಸಿದ್ರು. ಈ ಸಂದರ್ಭ ಸ್ವಾಮೀಜಿ ಕೆಲಕಾಲ ಅಸ್ವಸ್ಥರಾದರು. ನಿರ್ಜಲೀಕರ ಶ್ರೀಗಳನ್ನು ಬಾಧಿಸಿತ್ತು.

    ಸುಮಾರು ಐದು ಎಳನೀರು ನೀಡಿ ಸ್ವಾಮೀಜಿಯವರ ಆರೋಗ್ಯ ಸ್ಥಿತಿಯನ್ನು ಶಿಷ್ಯರು ಹತೋಟಿಗೆ ತಂದರು. ಅಸ್ವಸ್ಥರಾಗಿದ್ದರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಕೊಂಚ ವಿಳಂಬವಾಯ್ತು.

    ಈ ವೇಳೆ ಮಾತನಾಡಿದ ಅವರು ,ನಾನು ಪಕ್ಷೇತರನಾಗಿ ನಾಮಪಪತ್ರ ಸಲ್ಲಿಸ್ತಿದ್ದೇನೆ. ಈಗಾಗಲೇ ಪ್ರಚಾರ ಶುರು ಮಾಡಿದ್ದು, ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಅಂದ್ರು. ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲ ಅಂತ ಹೇಳಿದರು.

    ಮೋದಿ ಅಥವಾ ಅಮಿತ್ ಶಾ ಮನವೊಲಿಸಿದ್ರೆ ಈ ಕುರಿತು ಚಿಂತನೆ ನಡೆಸುತ್ತೇನೆ. ಪಕ್ಷೇತರನಾಗಿ ಗೆದ್ದರೆ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡ್ತೇನೆ ಅಂತ ಪ್ರತಿಕ್ರಿಯೆ ನೀಡಿದ್ರು. ಉಡುಪಿ ಬಿಜೆಪಿ ಸರಿಯಿಲ್ಲ, ಅದನ್ನು ಸರಿಮಾಡಬೇಕು ಎಂಬ ಇಚ್ಚೆಯೇ ರಾಜಕೀಯ ಪ್ರವೇಶಕ್ಕೆ ಕಾರಣ ಅಂತ ಹೇಳಿದರು.

    ನಾನು 40 ವರ್ಷದ ಬಿಜೆಪಿ ವೋಟರ್. ಎರಡು ಬಾರಿ ಕಾಂಗ್ರೆಸ್ ನ ಬೈಕ್ ರ‍್ಯಾಲಿಯನ್ನು ಉದ್ಘಾಟಿಸಿದ್ದು ಬಿಟ್ಟರೆ, ಮತ್ತೆಂದೂ ಕಾಂಗ್ರೆಸ್ ಕಡೆ ಮುಖ ಹಾಕಿಲ್ಲ ಅಂತ ಹೇಳಿದರು. ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್, ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ಬಗ್ಗೆ ಮಾತನಾಡಲ್ಲ ಅಂತ ಹೇಳಿದರು.

  • ಕಾಂಗ್ರೆಸ್ ಸ್ಟಾರ್ ಕ್ಯಾಂಪೇನರ್ ಗಳ ಪಟ್ಟಿ ಬಿಡುಗಡೆ

    ಕಾಂಗ್ರೆಸ್ ಸ್ಟಾರ್ ಕ್ಯಾಂಪೇನರ್ ಗಳ ಪಟ್ಟಿ ಬಿಡುಗಡೆ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ರಾಷ್ಟ್ರೀಯ ಪಕ್ಷಗಳು ತಮ್ಮ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಸಿನಿಮಾ ನಟ, ನಟಿಯರು, ಪ್ರಚಲಿತ ನಾಯಕರನ್ನು ಕರೆತರುತ್ತಿದ್ದಾರೆ.

    ಕಾಂಗ್ರೆಸ್ ಇಂದು ಕಾಂಗ್ರೆಸ್ ಪರವಾಗಿ ಕ್ಯಾಂಪೇನ್ ಮಾಡುವವರ ಪಟ್ಟಿಯನ್ನು ಪ್ರಕಟ ಮಾಡಿದೆ. ಒಟ್ಟು 40 ಸ್ಟಾರ್ ಗಳು ಈ ಪಟ್ಟಿಯಲ್ಲಿದ್ದಾರೆ. ಗುಲಾಂ ನಬಿ ಆಜಾದ್, ಸುಶೀಲ್ ಕುಮಾರ್ ಶಿಂಧೆ, ಸಚಿನ್ ಪೈಲಟ್, ಚಿರಂಜೀವಿ, ಖುಷ್ಬು, ನವಜೋತ್ ಸಿಂಗ್ ಸಿದ್ದು, ಅಶೋಕ್ ಚೌಹಾಣ್, ಮೊಹಮ್ಮದ್ ಅಜರುದ್ದೀನ್, ಅಶೋಕ್ ಗೆಹ್ಲೋಟ್, ನಗ್ಮಾ, ಪ್ರಿಯಾ ದತ್, ಜ್ಯೋತಿರಾದಿತ್ಯ, ಸುಷ್ಮಿತ್ ದೇವ್, ರೇಣುಕಾ ಚೌಧರಿ, ರಣದೀಪ್ ಸುರ್ಜೆವಾಲಾ, ಒಮ್ಮನ್ ಚಾಂಡಿ, ಅಮಿತ್ ದೇಶ್‍ಮುಖ್, ಧೀರಜ್ ದೇಶ್‍ಮುಖ್, ರಾಜ್ ಬಬ್ಬರ್, ಶಶಿತರೂರ್ ಸ್ಟಾರ್ ಪ್ರಚಾರಕಾರಗಿ ಕರ್ನಾಟಕ ಚುನಾವಣ ರಣರಂಗಕ್ಕೆ ಎಂಟ್ರಿ ಕೊಡಲಿದ್ದಾರೆ.

    ಇವರೆಲ್ಲ ಜೊತೆ ನಟಿ ಖುಷ್ಬೂ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ತೆಲುಗು ನಟ ಚಿರಂಜೀವಿ, ನಟಿ ಮಾಲಾಶ್ರೀ, ಅಂಬರೀಶ್ ಮತ್ತು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಸಹ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ.

  • ಪಬ್ಲಿಕ್ ಟಿವಿ ಸಂದರ್ಶನದಲ್ಲಿ ರಾಜಕೀಯ ರಹಸ್ಯ ಬಿಚ್ಚಿಟ್ಟ ಬಿಎಸ್‍ವೈ

    ಪಬ್ಲಿಕ್ ಟಿವಿ ಸಂದರ್ಶನದಲ್ಲಿ ರಾಜಕೀಯ ರಹಸ್ಯ ಬಿಚ್ಚಿಟ್ಟ ಬಿಎಸ್‍ವೈ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಬ್ಲಿಕ್ ಟಿವಿಗೆ ವಿಶೇಷ ಸಂದರ್ಶನ ನೀಡಿದ್ದು, ಹಲವು ರಾಜಕೀಯ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ಕೇಳಿದ ನೇರಾ-ನೇರ ಪ್ರಶ್ನೆಗಳಿಗೆ ಯಡಿಯೂರಪ್ಪ ಉತ್ತರ ನೀಡಿದ್ದಾರೆ.

    ಪ್ರಶ್ನೆ: ಯಡಿಯೂರಪ್ಪ ಬದಲಾಗಿದ್ದಾರೆ?
    ಬಿಎಸ್‍ವೈ: ಇವತ್ತಿನ ಕಾಲಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕಾಗಿದ್ದರಿಂದ ಕೋಪವನ್ನು ತೊರೆದು ಶಾಂತ ಸ್ವಭಾವ ಬೆಳಸಿಕೊಂಡಿದ್ದೇನೆ. ನನ್ನ ಸ್ವಭಾವ ಮುಂದಿನ ದಿನಗಳಲ್ಲಿ ಒಳಿತು ಮಾಡಲಿದೆ.

    ಪ್ರಶ್ನೆ: 2013ರ ಚುನಾವಣೆಯ ನೆನಪುಗಳನ್ನು ಮರೆತು ಮತ್ತೆ ಪಕ್ಷಕ್ಕೆ ಯಡಿಯೂರಪ್ಪ ಒಗ್ಗಿಕೊಂಡ್ರಾ?
    ಬಿಎಸ್‍ವೈ: 2013ರಲ್ಲಿ ಐದು ವರ್ಷದ ನಂತರ ಇಂದು ಯಡಿಯೂರಪ್ಪ ಹೀಗೆ ಇರ್ತಾರಾ ಅಂತಾ ಖುದ್ದು ನಾನೇ ಕಲ್ಪನೆ ಮಾಡಿಕೊಂಡಿರಲಿಲ್ಲ. ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನನ್ನ ಮೇಲೆ ಅದಮ್ಯವಾದ ವಿಶ್ವಾಸವನ್ನಿಟ್ಟು ಪಕ್ಷದ ಅಧ್ಯಕ್ಷ ಮತ್ತು ಸಿಎಂ ಅಭ್ಯರ್ಥಿ ಅಂತಾ ಘೋಷಣೆ ಮಾಡಿದ್ರು. ಇಂದು ನಾನು ಅವರ ನಂಬಿಕೆಯನ್ನು ಸತ್ಯಮಾಡಲು ಹೊರಟಿದ್ದೇನೆ.

    ಪ್ರಶ್ನೆ: ಇಂದು ಟಿಕೆಟ್ ಸಿಗದೇ ಅಸಮಾಧಾನಗೊಂಡ ಅಭ್ಯರ್ಥಿಗಳಿಗೆ ನಿಮ್ಮ ಉತ್ತರವೇನು?
    ಬಿಎಸ್‍ವೈ: ಕೆಜೆಪಿ ಬಗ್ಗೆ ಪ್ರಶ್ನೆ ಇಂದು ಹುಟ್ಟಿಕೊಳ್ಳುವುದಿಲ್ಲ. ಕೆಜೆಪಿಯಲ್ಲಿ ಇದ್ದವನಿಗೆ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮಾಡಿದ್ದರಿಂದ ಈ ಪ್ರಶ್ನೆ ಬರಲ್ಲ. ಈ ಬಾರಿ ವಿಶೇಷವಾಗಿ ಎರಡ್ಮೂರು ಸಮೀಕ್ಷೆಗಳನ್ನು ನಡೆಸಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ನಾನು ಯೋಚನೆ ಮಾಡಿದ ಹಾಗೆ ಶೇ.90ರಷ್ಟು ಅಭ್ಯರ್ಥಿಗಳ ಹೆಸರು ಪಟ್ಟಿಯಲ್ಲಿದೆ.

    ಪ್ರಶ್ನೆ: ಇತ್ತೀಚೆಗೆ ಕೆಲವು ಸಮೀಕ್ಷೆಗಳ ಪ್ರಕಾರ ಬಿಜೆಪಿ ನೂರರ ಗಡಿ ದಾಟ್ತಿಲ್ಲ ಯಾಕೆ?
    ಬಿಎಸ್‍ವೈ: ಇಂದು ನಾನು ಹೇಳುತ್ತಿದ್ದೇನೆ ನಮ್ಮದು ಮಿಷನ್ 150. ಈವಾಗ್ಲೂ ನಾವು 150 ಸೀಟ್ ಗೆಲ್ಲುತ್ತೇವೆ. ಇನ್ನೂ ಅಭ್ಯರ್ಥಿಗಳ ಘೋಷಣೆಯಾಗದೇ ಇರುವ ಸ್ಥಿತಿಯಲ್ಲಿ ಸಮೀಕ್ಷೆಗಳು ನಡೆದಿವೆ. ಇದಕ್ಕೆ ಉತ್ತರ ಮೇ 15ರಂದು ಸಿಗಲಿದೆ.

    ಪ್ರಶ್ನೆ: ಈ ಬಾರಿ ಜನರು ಯಡಿಯೂರಪ್ಪ ಅವರಿಗೆ ಮತ ಏಕೆ ನೀಡ್ಬೇಕು?
    ಬಿಎಸ್‍ವೈ: ನಾವು ಅಧಿಕಾರ ಬಂದ ಮೇಲೆ ನಮ್ಮ ಮೊದಲ ಆದ್ಯತೆ ನಾಡಿನ ರೈತರು ಮತ್ತು ನೀರಾವರಿ ಅಭಿವೃದ್ಧಿ. ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವುದು, ರೈತರ ಜಮೀನಿಗೆ ನೀರಿನ ಸೌಲಭ್ಯ ಒದಗಿಸುವುದು. ಕೈಗಾರಿಕೆಗಳಿಗೆ ವಿದ್ಯುತ್ ಕಡಿಮೆಯಾದ್ರೆ, ರೈತರಿಗೆ 12 ಗಂಟೆ ವಿದ್ಯುತ್ ನೀಡುವುದು ನನ್ನ ಸಂಕಲ್ಪ. ರಾಜ್ಯದ ಜನರು ಸಿದ್ದರಾಮಯ್ಯರ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಕಾಂಗ್ರೆಸ್ ನಾಯಕರಲ್ಲಿಯೇ ಹೊಂದಾಣಿಕೆ ಇಲ್ಲ. ಆದ್ರೆ ಸಿಎಂ ಸಿದ್ದರಾಮಯ್ಯ ಎಲ್ಲೆ ನಿಂತ್ರೂ ಸೋಲುವುದು ಗ್ಯಾರಂಟಿ ಅಂದ್ರು.

    ಪ್ರಶ್ನೆ: ವೀರಶೈವ ಲಿಂಗಾಯತ ವಿವಾದ ಬಿಜೆಪಿಗೆ ತಿರುಗು ಬಾಣವಾಗುವ ಸಾಧ್ಯತೆ ಇದೆನಾ?
    ಬಿಎಸ್‍ವೈ: ಇದೂವರೆಗೂ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ಇದೂವರೆಗೂ ಯಾರು ಸಹ ಲಿಂಗಾಯತ ಧರ್ಮದ ಬಗ್ಗೆ ಪ್ರಶ್ನೆ ಕೇಳಿಲ್ಲ. ಆದ್ರೆ ಕಾಂಗ್ರೆಸ್ 55 ರಿಂದ 60 ಸೀಟ್ ಮಾತ್ರ ಗೆಲ್ಲಲಿದೆ.

    ಪ್ರಶ್ನೆ: ಜೆಡಿಎಸ್ ಬಗ್ಗೆ ಬಿಜೆಪಿಗೆ ಸಾಫ್ಟ್ ಕಾರ್ನರ್ ಇದೆನಾ?
    ಬಿಎಸ್‍ವೈ: ನಮಗೂ ಜೆಡಿಎಸ್ ಗೂ ಯಾವುದೇ ಸಂಬಂಧವಿಲ್ಲ. ಇತ್ತೀಚೆಗೆ ರಾಹುಲ್ ಗಾಂಧಿ ಜೆಡಿಎಸ್ ಬಗ್ಗೆ ಮಾತನಾಡಿ ಇರುವ ಅಲ್ಪ ಸ್ವಲ್ಪ ಗೌಡ ಸಮುದಾಯದ ಮತಗಳನ್ನು ಕಳೆದುಕೊಂಡಿದ್ದಾರೆ. ಈ ಎರಡು ತಿಂಗಳ ಹಿಂದೆ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ನನ್ನ ಬಗ್ಗೆ ಏನೇ ಮಾತನಾಡಿದ್ರು ನಾನು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಪ್ರಶ್ನೆ: ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದ್ರೆ ಏನಾಗುತ್ತದೆ?
    ಬಿಎಸ್‍ವೈ: ಇಂದಿನ ಯುವ ಜನತೆ ಪ್ರಧಾನಿಗಳ ಬಗ್ಗೆ ಕ್ರೇಜ್ ಹೊಂದಿದ್ದಾರೆ. ಸಹಜವಾಗಿಯೇ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದೆ. ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದಷ್ಟು ನಮಗೆ ಲಾಭವಾಗಲಿದೆ. ಮೋದಿ ಪ್ರವಾಸದಿಂದ ಗೆಲ್ಲುವ ಸೀಟುಗಳ ಸಂಖ್ಯೆ ಹೆಚ್ಚಾಗಲಿದೆ.

    ಪ್ರಶ್ನೆ: ವಿಧಾನಸಭಾ ಚುನಾವಣೆಗೆ ಶೋಭಾ ಕರಂದ್ಲಾಜೆ ಸ್ಪರ್ಧೆ ಮಾಡ್ತಾರಾ?
    ಬಿಎಸ್‍ವೈ: ಶೋಭಾ ಕರಂದ್ಲಾಜೆ ಸಂಸದೆಯಾಗಿದ್ದು, ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಈ ಬಾರಿ ಕೇವಲ ಸಂಸದರಾಗಿರುವ ನನಗೆ ಮತ್ತು ಶ್ರೀರಾಮುಲು ಅವರಿಗೆ ಮಾತ್ರ ಹೈಕಮಾಂಡ್ ಟಿಕೆಟ್ ನೀಡಿದೆ ಅಂದ್ರು.

  • ಅಂಬರೀಶ್‌ಗೆ ಟಿಕೆಟ್ ಕೊಟ್ಟಿದ್ದೀವಿ, ಅವರು ನಿಂತ್ಕೋಬೇಕು ಅಷ್ಟೇ: ಸಿಎಂ ಸಿದ್ದರಾಮಯ್ಯ

    ಅಂಬರೀಶ್‌ಗೆ ಟಿಕೆಟ್ ಕೊಟ್ಟಿದ್ದೀವಿ, ಅವರು ನಿಂತ್ಕೋಬೇಕು ಅಷ್ಟೇ: ಸಿಎಂ ಸಿದ್ದರಾಮಯ್ಯ

    ಮೈಸೂರು: ನಾನು ಅಂಬರೀಶ್ ಅವರನ್ನು ಭೇಟಿ ಮಾಡುವುದಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ರೆಬಲ್ ಸ್ಟಾರ್ ಅಂಬರೀಶ್‍ಗೆ ಮಂಡ್ಯದ ಬಿ ಫಾರಂ ಕೊಟ್ಟಿದ್ದೀವಿ. ಅವರು ನಿಂತುಕೊಳ್ಳಬೇಕು ಅಷ್ಟೇ. ಅಲ್ಲದೇ ಸ್ಪರ್ಧಿಸೋದು ಬಿಡೋದು ಅವರಿಗೆ ಬಿಟ್ಟಿದ್ದು. ಅಂಬರೀಶ್ ಬಿ ಫಾರಂ ರಿಸೀವ್ ಮಾಡ್ತಿಲ್ಲ ಎಂಬ ವಿಚಾರ ನನಗೆ ಗೊತ್ತಿಲ್ಲ. ಪಕ್ಷದ ಅಧ್ಯಕ್ಷರು ಬಿ ಫಾರಂ ಕೊಡ್ತಾರೆ ಹೊರತು ನಾನಲ್ಲ ಅಂತಾ ಅಂದ್ರು.

    ಇದೇ ವೇಳೆ ಅಂಬರೀಶ್‍ರನ್ನು ಭೇಟಿ ಮಾಡುತ್ತೀರಿ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಅಂಬರೀಶ್ ಭೇಟಿ ಮಾಡುವುದಿಲ್ಲ. ಯಾರೋ ತಪ್ಪಾಗಿ ಮಾಹಿತಿ ನೀಡಿದ್ದಾರೆ ಎಂದು ಕೋಪದಿಂದ ಹೇಳಿದ್ರು.