Tag: Karnataka Elections 2018

  • ಖರ್ಗೆ, ಪರಮೇಶ್ವರ್, ಸಿಎಂ ಮೂವರು ಒಂದೇ ಕಡೆ ಪ್ರಚಾರ ನಡೆಸಲಿ: ಸಂವಾದದಲ್ಲಿ ಬಿಎಸ್‍ವೈ ಸವಾಲು

    ಖರ್ಗೆ, ಪರಮೇಶ್ವರ್, ಸಿಎಂ ಮೂವರು ಒಂದೇ ಕಡೆ ಪ್ರಚಾರ ನಡೆಸಲಿ: ಸಂವಾದದಲ್ಲಿ ಬಿಎಸ್‍ವೈ ಸವಾಲು

    ಬೆಂಗಳೂರು: 224 ಕ್ಷೇತ್ರಗಳನ್ನು ಸುತ್ತಿ ಬಂದಿದ್ದು, ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜತೆ ಇಂದು ನಗರದ ಪ್ರೆಸ್ ಕ್ಲಬ್ ನಲ್ಲಿ ಸಂವಾದ ನಡೆಯಿತು.

    ಅಂಬೇಡ್ಕರ್ ಜಯಂತಿಯಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡಿದೆ. ಸುಮಾರು 3 ಬಾರಿ ನಾನು ರಾಜ್ಯ ಸುತ್ತಿದ್ದೇನೆ. 224 ಕ್ಷೇತ್ರಗಳನ್ನು ಸುತ್ತಿ ಬಂದಿದ್ದೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಮ್ಮಿಂದ 3 ಸರ್ವೇಗಳನ್ನು ಮಾಡಿಸಿದ್ದಾರೆ. ನಾನು ಕೊಟ್ಟ ಅಭ್ಯರ್ಥಿಗಳ ಲಿಸ್ಟ್ 95% ಭಾಗ ಕೂಡ ಒಂದೇ ಆಗಿತ್ತು. ಹಾಗಾಗಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ ಆಗಲಿಲ್ಲ ಎಂದು ತಿಳಿಸಿದರು.

    ಸಂವಾದಲ್ಲಿ ಬಿಎಸ್‍ವೈ ಹೇಳಿದ್ದು ಹೀಗೆ
    ಎಲ್ಲರೂ ಒಂದೇ ಕಡೆ ಪ್ರಚಾರ ಮಾಡುವುದಕ್ಕಿಂತ ಬೇರೆ ಬೇರೆ ಕಡೆ ಮಾಡಬೇಕು ಅನ್ನೋ ಉದ್ದೇಶ ಇದೆ ಅಷ್ಟೇ. ರಾಜ್ಯವನ್ನ ಮಾದರಿ ರಾಜ್ಯವನ್ನಾಗಿ ಮಾಡಬೇಕೆಂಬ ಕನಸಿದೆ. ಇದೇ 17 ಕ್ಕೆ ನಾನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ. ನನ್ನ ಜೀವನವನ್ನೇ ರೈತರಿಗಾಗಿ ಮುಡುಪಾಗಿಟ್ಟವನು ನಾನು. ಈಗ ಬೆಂಗಳೂರು ರೇಪ್, ಗಾರ್ಬೇಜ್ ಸಿಟಿ ಆಗಿದೆ. ಎಲ್ಲವನ್ನು ಸರಿ ಮಾಡುತ್ತೇವೆ.

    ಬೆಂಗಳೂರನ್ನ ಮಾದರಿ ಸಿಟಿಯನ್ನಾಗಿ ಮಾಡುತ್ತೇನೆ. ನಾನು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ರಾಷ್ಟ್ರೀಕೃತ ಬ್ಯಾಂಕ್ ನಲ್ಲಿರುವ ರೈತರ ಒಂದು ಲಕ್ಷ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ಸಾಲವನ್ನ ಮನ್ನಾ ಮಾಡುತ್ತೇನೆ.

    ಇನ್ನು ನೀರಾವರಿಗೆ 1.5 ಲಕ್ಷ ಕೋಟಿ ತೆಗೆದಿಡುವ ನಿರ್ಧಾರ ಮಾಡಿದ್ದೇವೆ. ಭಾಗ್ಯಲಕ್ಷ್ಮಿ ಯೋಜನೆಗೆ ಎರಡು ಲಕ್ಷದವರೆಗೆ ಡೆಪಾಸಿಟ್ ಇಡುವ ನಿರ್ಧಾರ ಕೈಗೊಂಡಿದ್ದೇವೆ. ಅಷ್ಟೇ ಅಲ್ಲದೇ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ಕೊಡಲಿದ್ದೇವೆ. ಕೃಷಿಕರಿಗೆ ಅನೇಕ ಯೋಜನೆಗಳನ್ನು ರೂಪಿಸುತ್ತೇವೆ. ಸ್ತ್ರೀ ಶಕ್ತಿ ಸಂಘಗಳ ಬಲಪಡಿಸುವ ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಕಾಂಗ್ರೆಸ್ ನಲ್ಲಿ ಮೂರು ಭಾಗ ಆಗಿದೆ. ಸಿದ್ದರಾಮಯ್ಯ ಒಂದು ಕಡೆ, ಪರಮೇಶ್ವರ್ ಒಂದು ಕಡೆ, ಮಲ್ಲಿಕಾರ್ಜುನ ಖರ್ಗೆ ಒಂದು ಕಡೆ. ಅವರು ಮೂರು ಜನ ಒಟ್ಟಿಗೆ ಪ್ರಚಾರ ಮಾಡಲಿ ನೋಡೋಣ.

    ಆನಂದ್ ಸಿಂಗ್, ನಾಗೇಂದ್ರ ಯಾರು? ಗಣಿ ಅಕ್ರಮದ ಆರೋಪ ಅವರ ಮೇಲಿಲ್ಲವೇ..? ಭ್ರಷ್ಟಾಚಾರದ ಬಗ್ಗೆ ಮಾತನಾಡುವವರಿಗೆ ಸಿದ್ದರಾಮಯ್ಯ ಟಿಕೆಟ್ ಹೇಗೆ ಕೊಟ್ರು? ಕಾಲು ಹಿಡಿದು, ಕಾಲಿಗೆ ಮುಗಿದು ವೋಟು ಕೇಳಿ ಅಂತೇಳಿರೋದು ಅದು. ಇದು ನಮ್ಮ ಪಾರ್ಟಿಯ ಸಿದ್ಧಾಂತ. ಕಾಲು ಕಟ್ಟಿ, ಕೈಗೆ ಹಗ್ಗ ಕಟ್ಟಿ ವೋಟ್ ಕೇಳಿ ಅಂತ ಹೇಳಿಲ್ಲ.

    ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧಿಸಿರುವುದು ಯಾಕೆ? ಸೋಲಿನ ಭಯದಿಂದ ಎರಡು ಕಡೆ ನಿಂತಿದ್ದಾರೆ. ಖರ್ಗೆ, ಪರಂ ಕೂಡ ಇದನ್ನ ವಿರೋಧಿಸಿದ್ದರು. ಆದರೂ ಪಟ್ಟು ಹಿಡಿದು ದೆಹಲಿಯಲ್ಲಿ ಬದಾಮಿ, ಚಾಮುಂಡೇಶ್ವರಿಯಲ್ಲಿ ಸೀಟು ಗಿಟ್ಟಿಸಿಕೊಂಡಿದ್ದಾರೆ. ಬಳ್ಳಾರಿಯಲ್ಲಿ ಇಬ್ಬರು ಹೋದರೂ ರಾಮುಲು ಸೇರಿ ಉಳಿದವರು ಇದ್ದಾರೆ. ಅವರಿಗೆ ಟಿಕೆಟ್ ನೀಡಿದ್ದೇವೆ. ಅವರು ಗೆಲ್ಲಲಿದ್ದಾರೆ. ಜನಾರ್ದನ ರೆಡ್ಡಿ ಚುನಾವಣೆ ಟಿಕೆಟ್ ಕೇಳಲಿಲ್ಲ. ಅವರೇ ಬಂದು ಪ್ರಚಾರ ಮಾಡುತ್ತಿದ್ದಾರೆ. ನಾವು ವಿರೋಧಿಗಳ ಮನೆಗೂ ಮತ ಕೇಳಲು ಹೋಗುತ್ತೇವೆ. ಹಳೆಯದು ಮರೆತು ಹೋಗುತ್ತಿದ್ದೇವೆ.

    ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿಲ್ಲ. ನಾವು ಯಾಕೆ ಅವರ ಜೊತೆ ಮೈತ್ರಿಯಾಗಬೇಕು. ನಮ್ಮದೇ ಗುಡ್ ಮೆಜಾರಿಟಿ ಬರುತ್ತದೆ ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ್ದು ಸಿದ್ದರಾಮಯ್ಯ. ಎಲ್ಲರೂ ಉಗಿದ ಮೇಲೆ ಈ ವಿಚಾರದಲ್ಲಿ ತಟಸ್ಥರಾಗಿದ್ದಾರೆ. ಅದಕ್ಕೆ ಮೂರು ತಿಂಗಳಿಂದ ಸಿಎಂ ಬಾಯಿ ಮುಚ್ಚಿಕೊಂಡಿದ್ದಾರೆ.

    ಸಂಸ್ಕೃತಿ, ಆಚಾರ, ವಿಚಾರ, ನಡೆ, ನುಡಿಯ ಬಗ್ಗೆ ಯಾರಿಂದಲೂ ನಾವು ಪಾಠ ಮಾಡಿಸಿಕೊಳ್ಳಬೇಕಿಲ್ಲ. ದಲಿತರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸಿಗಿಲ್ಲ ಎಂದಿದ್ದಾರೆ. ಸಂವಿಧಾನ ಬದಲಾವಣೆ ವಿಚಾರದಲ್ಲಿ ಅನಂತಕುಮಾರ್ ಹೆಗಡೆ ಕ್ಷಮೆ ಕೇಳಿದ್ದಾರೆ.

    2004 ರಲ್ಲಿ ಸಿದ್ದರಾಮಯ್ಯ ಬಿಜೆಪಿ ಸೇರುವ ಪ್ರಯತ್ನ ಮಾಡಿದ್ರಾ? ಅನ್ನೋ ಪ್ರಶ್ನೆಗೆ, ಸಿದ್ದರಾಮಯ್ಯ ಬಿಜೆಪಿಗೆ ಬರ್ತೀನಿ ಅಂದರೂ ಸೇರಿಸಿಕೊಳ್ಳಲ್ಲ. ಅಂದು ಸಿದ್ದರಾಮಯ್ಯ ಬಿಜೆಪಿ ಸೇರಲು ಹೋಗಿದ್ದರು ಅಂತಾ ಯಾರು ಹೇಳಿದ್ದಾರೋ ಅವರಿಗೆ ಸಿದ್ದರಾಮಯ್ಯ ಉತ್ತರ ನೀಡಲಿ. ಆ ಬಗ್ಗೆ ನಾನೇನೂ ಹೇಳಲ್ಲ. ನಮ್ಮ ಸರ್ಕಾರ ಬಂದ ಮೇಲೆ ಕಾಂಗ್ರೆಸ್ ಸರ್ಕಾರದ ಒಳ್ಳೆಯ ಯೋಜನೆಗಳನ್ನು ಮುಂದುವರಿಸುತ್ತೇವೆ. ಹೆಸರು ಬದಲಾಗಬಹುದು, ಯೋಜನೆಗಳು ಬದಲಾಗಲ್ಲ. ಅವರಂತೂ ನಮ್ಮ ಯೋಜನೆಗಳನ್ನು ಮುನ್ನಡೆಸಲಿಲ್ಲ. ಆದ್ರೆ ನಾವು ಅವರ ಯೋಜನೆಯನ್ನು ಮುಂದುವರಿಸುತ್ತೇವೆ.

  • ಕಾಂಗ್ರೆಸ್ ಮುಖಂಡ ಸೇರಿ ಜಿಲ್ಲಾ, ತಾಲೂಕು ಪಂಚಾಯ್ತಿ ಸದಸ್ಯರು ಜೆಡಿಎಸ್ ಗೆ ಸೇರ್ಪಡೆ!

    ಕಾಂಗ್ರೆಸ್ ಮುಖಂಡ ಸೇರಿ ಜಿಲ್ಲಾ, ತಾಲೂಕು ಪಂಚಾಯ್ತಿ ಸದಸ್ಯರು ಜೆಡಿಎಸ್ ಗೆ ಸೇರ್ಪಡೆ!

    ಕೋಲಾರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಪ್ರಭಾವಿ ಕಾಂಗ್ರೆಸ್ ಮುಖಂಡ ಕಲ್ಲಪಲ್ಲಿ ಪ್ರಕಾಶ್ ಸೇರಿದಂತೆ ಜಿಲ್ಲಾಪಂಚಾಯ್ತಿ, ತಾಲೂಕು ಪಂಚಾಯ್ತಿ ಸದಸ್ಯರು ಇಂದು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ್ರು.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ನಿಂತಿದ್ದ ಮುಖಂಡರು ಈ ಬಾರಿ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದರು. ಇದನ್ನೂ ಓದಿ: ಮುಳುಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ!

    ಈ ವೇಳೆ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದ ಮುಖಂಡರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡ್ರು. ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅಧಿಕೃತ ಅಭ್ಯರ್ಥಿ ಇಲ್ಲದೆ ಪಕ್ಷದಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಿರುವ ಹಿನ್ನೆಲೆಯಲ್ಲಿ ಮುಖಂಡರುಗಳು ಈ ನಿರ್ಧಾರಕ್ಕೆ ಬಂದು ಜೆಡಿಎಸ್‍ಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಹೊಸ ಮುಖಗಳಿಗೆ ಸಿಕ್ತು ಕೈ ಟಿಕೆಟ್: 2013ರಲ್ಲಿ ಇಲ್ಲಿ ಗೆದ್ದವರು ಯಾರು?

  • ರೆಬೆಲ್ ಸ್ಟಾರ್ ಅಂಬರೀಶ್ ಭೇಟಿ ಬಗ್ಗೆ ಹೆಚ್‍ಡಿಕೆ ಪ್ರತಿಕ್ರಿಯೆ

    ರೆಬೆಲ್ ಸ್ಟಾರ್ ಅಂಬರೀಶ್ ಭೇಟಿ ಬಗ್ಗೆ ಹೆಚ್‍ಡಿಕೆ ಪ್ರತಿಕ್ರಿಯೆ

    ಹಾಸನ: ರೆಬೆಲ್ ಸ್ಟಾರ್ ಅಂಬರೀಶ್ ನಮ್ಮ ಪಕ್ಷದಲ್ಲಿದ್ದವರು. ಅವರ ಮೇಲೆ ಅಭಿಮಾನ ಇಟ್ಟಿರುವೆ. ಅವರ ರಾಜಕೀಯ ಆರಂಭದಲ್ಲಿ ನಮ್ಮ ಪಕ್ಷ ಅವರೊಂದಿಗೆ ಇತ್ತು ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರಿಗೆ ದೇವೇಗೌಡರು ಮತ್ತು ನಮ್ಮ ಬಗ್ಗೆ ಅಭಿಮಾನ ಇದೆ. ನಿನ್ನೆ ಭೇಟಿ ಮಾಡಿ ಚರ್ಚಿಸಿದ್ದೇನೆ. ನನ್ನನ್ನು ತಮ್ಮನಿಗಿಂತಲೂ ಹೆಚ್ಚಾಗಿ ಪ್ರೀತಿಸುತ್ತಾರೆ. ಜನಹಿತಕ್ಕಾಗಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎನ್ನುವುದು ಅವರ ಅಭಿಲಾಷೆ. ರಾಜ್ಯದಲ್ಲಿಯ ರಾಜಕೀಯ ಆಗುಹೋಗು ಗಮನಿಸಿ ಸೂಕ್ತ ತೀರ್ಮಾನಕೈಗೊಳ್ಳುತ್ತಾರೆ ಎನ್ನುವ ಭರವಸೆ ಇದೆ. ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎನ್ನುವ ಭಾವನೆ ಅವರ ಮನಸ್ಸಿನಲ್ಲಿದೆ ಅಂತ ಹೇಳಿದ್ರು. ಇದನ್ನೂ ಓದಿ: ಕಾಂಗ್ರೆಸ್ ನಿಂದ ದೂರ ಉಳಿದಿರೋ ಅಂಬರೀಶ್ ಜೆಡಿಎಸ್ ಸೇರ್ತಾರಾ?

    ಇದೇ ವೇಳೆ ಅಂಬರೀಶ್ ಭೇಟಿ ಕುರಿತು ಸಿಎಂ ವ್ಯಂಗ್ಯಕ್ಕೆ ಪ್ರತಿಕ್ರಿಯಿಸಿದ ಹೆಚ್‍ಡಿಕೆ, ಅವರಲ್ಲಿ ಈಗ ವ್ಯಂಗ್ಯ, ಕೋಪ, ಆಕ್ರೋಶ ಎಲ್ಲವೂ ಎದ್ದು ಕಾಣುತ್ತಿದೆ. ಜನ ಈಗಾಗಲೇ ಸಿದ್ದರಾಮಯ್ಯ ಬಗ್ಗೆ ತೀರ್ಮಾನ ಮಾಡಿದ್ದಾರೆ. ಅಂಬರೀಶ್ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಆದ್ರೆ 2007ರಲ್ಲಿ ಚಾಮುಂಡೇಶ್ವರಿ ಬೈ ಎಲೆಕ್ಷನ್‍ನಲ್ಲಿ ಸಿಎಂ ಪರ ಪ್ರಚಾರಕ್ಕೆ ಅಂಬರೀಶ್ ಹೋಗದಿದ್ದರೆ 10 ಸಾವಿರ ಮತಗಳಿಂದ ಸೋಲುತ್ತಿದ್ದರು. ಅಂಬರೀಶ್ ನಿಂದ ಸಿಎಂ ಚುನಾವಣೆಯಲ್ಲಿ ಮರುಜೀವ ಪಡೆದ್ರು. ಆದ್ರೆ ಅವರನ್ನು ಮಂತ್ರಿ ಸ್ಥಾನದಿಂದ ತೆಗೆದಿದ್ದು ಅವರಿಗೆ ನೋವಾಗಿದೆ. ಆ ಭಾವನೆ ಅವರಲ್ಲಿ ಇನ್ನೂ ಇದೆ. ನನ್ನ ಅಂಬರೀಶ್ ಭೇಟಿಗೆ ಸಿಎಂ ವ್ಯಂಗ್ಯಕ್ಕೆ ಮುಖ್ಯಮಂತ್ರಿ ತಕ್ಕದಾದ ಬೆಲೆ ತೆರಲಿದ್ದಾರೆ ಅಂತ ಸಿಎಂ ವಿರುದ್ಧ ಗುಡುಗಿದರು. ಇದನ್ನೂ ಓದಿ: ಅಂಬಿ-ಹೆಚ್‍ಡಿಕೆ ಭೇಟಿ: ಪಾಪ ಮೀಟ್ ಆಗ್ಲಿ ಬಿಡಿ ಬೇಡ ಅಂದೋರು ಯಾರು?-ಸಿಎಂ

  • ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಪಕ್ಷೇತರ ಅಭ್ಯರ್ಥಿ ಬೆಂಬಲಿಗರಿಗೆ ಚಾಕು ಇರಿತ!

    ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಪಕ್ಷೇತರ ಅಭ್ಯರ್ಥಿ ಬೆಂಬಲಿಗರಿಗೆ ಚಾಕು ಇರಿತ!

    ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ಹೋದಾಗ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಡುವೆ ಗಲಾಟೆ ನಡೆದು ಓರ್ವ ಕಾರ್ಯಕರ್ತನಿಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಹೊರವಲಯದ ಮಹದೇವಪುರದಲ್ಲಿ ನಡೆದಿದೆ.

    ಶನಿವಾರ ರಾತ್ರಿ ಪೊಲೀಸರ ಸಮ್ಮುಖದಲ್ಲಿ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಡುವೆ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದ್ದು, ಸ್ಥಳೀಯರ ಗುಂಪಿನಿಂದ ಪಕ್ಷೇತರ ಅಭ್ಯರ್ಥಿ ನಲ್ಲೂರಹಳ್ಳಿ ನಾಗೇಶ್ ಬೆಂಬಲಿಗರ ಮೇಲೆ ಹಲ್ಲೆ ಮಾಡಿದ್ದಾರೆ.

    ತಮ್ಮ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮಹದೇವಪುರ ಪಕ್ಷೇತರ ಅಭ್ಯರ್ಥಿ ನಲ್ಲೂರಹಳ್ಳಿ ನಾಗೇಶ್ ಶನಿವಾರ ರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ರಾತ್ರಿ 10.30ರ ಸುಮಾರಿಗೆ ಮಹದೇವಪುರದ ಭೈರತಿ ಬಳಿ ಪ್ರಚಾರದ ವೇಳೆ ಗಲಾಟೆ ನಡೆದಿದ್ದು, ತಮ್ಮ ಬೆಂಬಲಿಗ ಮಾರುತೇಶ್‍ಗೆ ಕಾಂಗ್ರೆಸ್ ಕಾರ್ಯಕರ್ತರು ಚೂರಿ ಇರಿದಿದ್ದಾರೆ ಅಂತ ನಾಗೇಶ್ ಆರೋಪಿಸಿದ್ದಾರೆ.

    ನನ್ನ ಏಳಿಗೆ ಸಹಿಸದ ಈ ರೀತಿ ಮಾಡಿದ್ದು, ಕೂಡಲೇ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಿ ಪ್ರತಿಭಟನೆ ನಡೆಸಿದ್ದಾರೆ. ಗಾಯಾಳುಗಳನ್ನ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಸದ್ಯ ಕೊತ್ತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ಕ್ರೈಂ ಸಿಟಿ ಅಂದ ಪ್ರಧಾನಿಗೆ ರಮ್ಯಾ ಗುದ್ದು – ವಾರಣಾಸಿ, ಗೋರಖ್‍ಪುರಕ್ಕಿಂತ ಬೆಂಗ್ಳೂರೇ ಉತ್ತಮ ಅಂದ್ರು ಮಾಜಿ ಸಂಸದೆ

    ಕ್ರೈಂ ಸಿಟಿ ಅಂದ ಪ್ರಧಾನಿಗೆ ರಮ್ಯಾ ಗುದ್ದು – ವಾರಣಾಸಿ, ಗೋರಖ್‍ಪುರಕ್ಕಿಂತ ಬೆಂಗ್ಳೂರೇ ಉತ್ತಮ ಅಂದ್ರು ಮಾಜಿ ಸಂಸದೆ

    ಬೆಂಗಳೂರು: ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಮತ್ತೆ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.

    ಬೆಂಗಳೂರನ್ನು ಕ್ರೈಂ ಸಿಟಿ, ಗೂಂಡಾ ಸಿಟಿ, ಗಾರ್ಬೆಜ್ ಸಿಟಿ ಅಂತೆಲ್ಲಾ ಕರೆದಿದ್ದ ಮೋದಿಗೆ ನಿಮ್ಮ ವಾರಣಾಸಿ, ಗೋರಖ್‍ಪುರ, ಲಖನೌ ನಗರಗಳಿಗಿಂತ ಬೆಂಗಳೂರು ಬಹುಪಾಲು ಉತ್ತಮ ಎಂದು ಫೇಸ್‍ಬುಕ್‍ನಲ್ಲಿ ಕಾಲೆಳೆದಿದ್ದಾರೆ. ಇದನ್ನೂ ಓದಿ: Steel ಬ್ರಿಡ್ಜ್ ಅಲ್ಲ, ಅದು Steal ಬ್ರಿಡ್ಜ್- ಕೈ ಸರ್ಕಾರದಿಂದ ಬೆಂಗ್ಳೂರಿಗೆ 5 ಕೊಡುಗೆ: ಮೋದಿ

    ಅಲ್ಲದೇ `ನಮ್ಮ ಬೆಂಗಳೂರು ನಮ್ಮ ಹೆಮ್ಮೆ’ ಅಂತ ವಿಡಿಯೋವೊಂದನ್ನು ಅಪ್‍ಲೋಡ್ ಮಾಡಿ ತಿರುಗೇಟು ನೀಡಿದ್ದಾರೆ.

    ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಪ್ರವಾಸಕ್ಕೆ ಆಗಮಿಸುತ್ತಿರುವ ಮೋದಿ ಇತ್ತೀಚೆಗೆ ಬೆಂಗಳೂರಿಎ ಬಂದು ಸಮಾವೇಶದಲ್ಲಿ ಮಾತನಾಡಿದ್ದರು. ಈ ವೇಳೆ ಬೆಂಗಳೂರು ಸಿಟಿ ಕ್ರೈಂ ಸಿಟಿಯಾಗಿದೆ ಎಂದು ಹೇಳಿಕೆ ನೀಡಿದ್ದರು.

    https://www.youtube.com/watch?v=C7RVNlHe930

  • ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮೋದಿ ಮಹದಾಯಿ ಹೇಳಿಕೆ ನೀಡಿದ್ದಾರೆ: ಸಿಎಂ ತಿರುಗೇಟು

    ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮೋದಿ ಮಹದಾಯಿ ಹೇಳಿಕೆ ನೀಡಿದ್ದಾರೆ: ಸಿಎಂ ತಿರುಗೇಟು

    ಬಾಗಲಕೋಟೆ: ಇಂದು ಗದಗನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಮಹದಾಯಿ ವಿಚಾರದಲ್ಲಿ ರಾಜಕೀಯ ಮಾಡ್ತಿದೆ ಅಂತಾ ಆರೋಪಿಸಿದ್ದರು. ಪಿಎಂ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಈ ರೀತಿಯ ಹೇಳಿಕೆಗಳನ್ನು ಕೊಡ್ತಿದ್ದಾರೆ ಅಂತಾ ತಿರುಗೇಟು ನೀಡಿದ್ರು.

    ಜಿಲ್ಲೆಯ ಬಾದಾಮಿ ತಾಲೂಕಿನ ನಂದಕೇಶ್ವರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಮಹದಾಯಿ ನದಿ ಜೋಡಣೆ ಸಮಸ್ಯೆಯನ್ನ ಬಗೆಹರಿಸುವ ಮನಸ್ಸಿಲ್ಲ. ಈ ದೇಶದ ಪ್ರಧಾನಿ ಯಾರು? ರೈತರ ಹೋರಾಟ ನಡೆಯುತ್ತಿರುವುದು ನಾಲ್ಕು ವರ್ಷಗಳಿಂದ. ಆದರೆ ಈ ಸಮಸ್ಯೆ ಬಗೆಹರಿಸುವಲ್ಲಿ ಮೋದಿ ವಿಫಲರಾಗಿ ಕನ್ನಡಿಗರಿಗೆ ದ್ರೋಹ ಮಾಡಿದ್ದಾರೆ. ಜನರು ಅವರಿಗೆ ಬಯ್ಯುತ್ತಿದ್ದರು. ಆದ್ದರಿಂದ ಮೋದಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಈ ರೀತಿಯ ಹೇಳಿಕೆ ನೀಡಿದ್ದಾರೆ. ಮೋದಿಯವರು ಮಹದಾಯಿ ವಿಚಾರದಲ್ಲಿ ಮಧ್ಯಪ್ರವೇಶ ವಹಿಸದೇ ರಾಜ್ಯಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ ಎಂದು ಮಹಾದಾಯಿ ನದಿ ಜೋಡಣೆ ವಿಚಾರವಾಗಿ ಪ್ರಧಾನಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನೀರು ಪ್ರತಿಯೊಬ್ಬರ ಹಕ್ಕು, ಮಹದಾಯಿ ಸಮಸ್ಯೆ ಬಗೆಹರಿಸುವ ಸಂಕಲ್ಪ ಮಾಡ್ತಿದ್ದೇನೆ: ಮೋದಿ

    ನಾನು ಎಲ್ಲ ಪ್ರಯತ್ನಗಳನ್ನು ಮಾಡಿದ್ದೀನಿ. ಪ್ರಧಾನಿ ಸೇರಿದಂತೆ ಎಲ್ಲ ರಾಜ್ಯದ ಸಿಎಂಗಳ ಜೊತೆ ಮಾತನಾಡಿದೆ. ಅವರಿದ್ದಲ್ಲೇ ಹೋಗಿ ಮಾತನಾಡಲು ಸಿದ್ದವಾಗಿದ್ದೆ. ಈ ಸಮಸ್ಯೆಯನ್ನು ಬಗೆಹರಿಸುವ ಶಕ್ತಿ ಪ್ರಧಾನಿ ಮೋದಿಗಿತ್ತು. ನಾನು ಸಾಕಷ್ಟು ಬಾರಿ ಪ್ರಧಾನಿಗೂ ಪತ್ರ ಬರೆದಿದ್ದೆ. ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಇತ್ತು. ಅಲ್ಲದೆ ಕೇಂದ್ರದಲ್ಲೂ ಅವರ ಸರ್ಕಾರ ಇತ್ತು. ಆದ್ದರಿಂದ ಈ ಸಮಸ್ಯೆಯನ್ನು ಬಗೆಹರಿಸಬಹುದಿತ್ತು. ಆದರೆ ಪ್ರಧಾನಿ ಮೋದಿ ಈ ಸಮಸ್ಯೆಯನ್ನ ಬಗೆಹರಿಸುವ ಕೆಲಸ ಮಾಡಲಿಲ್ಲ ಎಂದ್ರು.

  • ಸಚಿವ ರಾಜ್‍ನಾಥ್ ಸಿಂಗ್ ಸಮ್ಮುಖದಲ್ಲೇ ಅಡ್ಡ ಬಿದ್ದು ಬಿಜೆಪಿ ಅಭ್ಯರ್ಥಿ ಕಣ್ಣೀರು!

    ಸಚಿವ ರಾಜ್‍ನಾಥ್ ಸಿಂಗ್ ಸಮ್ಮುಖದಲ್ಲೇ ಅಡ್ಡ ಬಿದ್ದು ಬಿಜೆಪಿ ಅಭ್ಯರ್ಥಿ ಕಣ್ಣೀರು!

    ಕಲಬುರಗಿ: ನಾನು ಮೂರು ಬಾರಿ ಸೋತಿದ್ದೇನೆ. ಹೀಗಾಗಿ ಈ ಬಾರಿಯಾದ್ರೂ ನನಗೆ ಆಶೀರ್ವಾದ ಮಾಡಿ ಅಂತಾ ಕೇಂದ್ರ ಸಚಿವ ರಾಜ್‍ನಾಥ್ ಸಿಂಗ್ ಸಮ್ಮುಖದಲ್ಲೇ ಸೇಡಂ ಬಿಜೆಪಿ ಅಭ್ಯರ್ಥಿ ರಾಜಕುಮಾರ್ ಪಾಟೀಲ್ ತೆಲ್ಕೂರ್ ಕಣ್ಣೀರು ಹಾಕಿದ್ದಾರೆ.

    ಈ ಘಟನೆ ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮಾತೃಛಾಯ ಶಾಲಾ ಆವರಣದಲ್ಲಿಂದು ಆಯೋಜಿಸಲಾಗಿದ್ದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡುವಾಗ, ನಾನು ಮೂರು ಬಾರಿ ಕಡಿಮೆ ಅಂತರ ಮತಗಳಿಂದ ಸೋತಿದ್ದೇನೆ. ಈ ಬಾರಿಯಾದರು ನನಗೆ ವಿಧಾನಸಭೆಗೆ ಕಳುಹಿಸಿಕೊಡಿ ಅಂತಾ ರಾಜ್‍ನಾಥ್ ಸಿಂಗ್ ಎದುರೇ ವೇದಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ ಹಾಕುವ ಮೂಲಕ ಭಾವುಕರಾಗಿ, ನನ್ನ ಗೆಲ್ಲಿಸಿ ಅಂತಾ ಮನವಿ ಮಾಡಿದ್ದಾರೆ.

    ಇನ್ನು ಇದೇ ವೇಳೆ ಸಮಾವೇಶದ ನಂತರ, ಖ್ಯಾತ ಕನ್ನಡ ಚಿತ್ರ ನಟಿ ಶೃತಿ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು, ಕಾರ್ಯಕರ್ತರಲ್ಲದೆ ಕೆಲ ಮಹಿಳಾ ಪೊಲೀಸ್ ಸಿಬ್ಬಂದಿಗಳು ಸಹ ಮುಗಿಬಿದ್ದಿದ್ದರು. ಅಭಿಮಾನಿಗಳ ಆಸೆಗೆ ಬೇಸರಗೊಳ್ಳದೆ ತಾಳ್ಮೆಯಿಂದ ಸೆಲ್ಫಿ ತೆಗೆದುಕೊಂಡು ಕೆಲ ಕಾಲ ಅವರೊಂದಿಗೆ ಶೃತಿ ಬೆರೆತರು.

  • ನೀರು ಪ್ರತಿಯೊಬ್ಬರ ಹಕ್ಕು, ಮಹದಾಯಿ ಸಮಸ್ಯೆ ಬಗೆಹರಿಸುವ ಸಂಕಲ್ಪ ಮಾಡ್ತಿದ್ದೇನೆ: ಮೋದಿ

    ನೀರು ಪ್ರತಿಯೊಬ್ಬರ ಹಕ್ಕು, ಮಹದಾಯಿ ಸಮಸ್ಯೆ ಬಗೆಹರಿಸುವ ಸಂಕಲ್ಪ ಮಾಡ್ತಿದ್ದೇನೆ: ಮೋದಿ

    ಗದಗ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಪ್ರಯುಕ್ತ ಪಕ್ಷದ ಪರ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಇಂದು ಗದಗ ನಗರದ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜ್ ಪಕ್ಕದ ಜಮೀನಿನಲ್ಲಿ ನಡೆದ ಪ್ರಚಾರ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ರು.

    2007 ರಲ್ಲಿ ಗೋವಾ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕರ್ನಾಟಕಕ್ಕೆ ಮಹದಾಯಿ ನೀರನ್ನು ಕೊಡುವುದಿಲ್ಲ ಎಂದಿದ್ದರು. ಗೋವಾದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದ್ದು, ಕರ್ನಾಟಕದಲ್ಲಿ ಬಂದು ಸಮಸ್ಯೆ ಸೃಷ್ಟಿ ಮಾಡಿದ್ದಾರೆ. ಮಹದಾಯಿ ಸಮಸ್ಯೆಯನ್ನ ಮುಂದೆ ಹಾಕುವ ಪ್ರವೃತ್ತಿ ನಮ್ಮದಲ್ಲ. ನೀರು ಪ್ರತಿಯೊಬ್ಬರ ಹಕ್ಕು, ಮಹದಾಯಿ ಸಮಸ್ಯೆ ಬಗೆಹರಿಸುವ ಸಂಕಲ್ಪ ಮಾಡ್ತಿದ್ದೇನೆ ಅಂದ್ರು.

    2007ರಲ್ಲಿ ಸೋನಿಯಾ ಗಾಂಧಿ ಏನು ಹೇಳಿದ್ರು ಅಂತಾ ಸಿಎಂ ಸಿದ್ದರಾಮಯ್ಯರಿಗೆ ಗೊತ್ತಿಲ್ಲ. ಕಾರಣ ಸಿಎಂ ಕಾಂಗ್ರೆಸ್‍ನಲ್ಲಿ ಇರಲಿಲ್ಲ, ಆದ್ರೆ ಯಾವ ದಳದಲ್ಲಿ ಇದ್ರೆಂಬುದು ಅವರಿಗೂ ನೆನಪಿರಲಿಕ್ಕಿಲ್ಲ. ಯಾಕಂದ್ರೆ ಪಕ್ಷ ಬದಲಿಸೋದು ಸಿದ್ದರಾಮಯ್ಯರ ರೂಢಿಯಾಗಿದೆ ಅಂತಾ ವಾಗ್ದಾಳಿ ನಡೆಸಿದ್ರು.

    ಈ ಹಿಂದೆ ಕರ್ನಾಟಕ, ಗೋವಾ ಮತ್ತು ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರಗಳಿದ್ದರೂ, ಮಹದಾಯಿ ಸಮಸ್ಯೆಯನ್ನು ಬಗೆಹರಿಸಲಿಲ್ಲ. ಮಹದಾಯಿ ವಿಷಯವನ್ನು ರಾಜಕೀಯವಾಗಿ ಬಳಸಿಕೊಂಡು ಅದನ್ನು ಟ್ರಿಬ್ಯೂನಲ್ ಗೆ ಹಾಕಲಾಯಿತು. ಈ ಸಮಸ್ಯೆ ಮುಂದಿನ ನಿಮ್ಮ ಪೀಳಿಗೆಗೂ ಮುಂದುವರೆಯಬಾರದು ಅಂತಾ ನಾನು ಆಶಿಸುತ್ತೇನೆ ಅಂತಾ ತಿಳಿಸಿದ್ರು.

  • ಚಾಮುಂಡೇಶ್ವರಿಯಲ್ಲೂ ಸಿಎಂಗೆ ಎದುರಾಯ್ತು ಸಂಕಷ್ಟ!

    ಚಾಮುಂಡೇಶ್ವರಿಯಲ್ಲೂ ಸಿಎಂಗೆ ಎದುರಾಯ್ತು ಸಂಕಷ್ಟ!

    ಮೈಸೂರು: ಈ ಬಾರಿಯ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರ ಮೊರೆ ಹೋಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ.

    ಈಗಾಗಲೇ ಸಿದ್ದರಾಮಯ್ಯ ಅವರ ಪರ ನಟಿ ಜಯಮಾಲಾ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಬಾಲಿವುಡ್ ನಟ ರಾಜ್ ಬಬ್ಬರ್ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಪ್ರಚಾರ ಕಣಕ್ಕೆ ಇಳಿಯುತ್ತಿದ್ದರು.

    ಆದ್ರೆ ಇದೀಗ ಸಿದ್ದರಾಮಯ್ಯ ಪರ ದರ್ಶನ್ ಪ್ರಚಾರಕ್ಕೆ ವಿರೋಧ ವ್ಯಕ್ತವಾಗಿದ್ದು, ನಾಗನಹಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರು ದರ್ಶನ್ ಗೆ ಧಿಕ್ಕಾರ ಹಾಕುತ್ತಿದ್ದಾರೆ. ದರ್ಶಶ್ ಸಿದ್ದರಾಮಯ್ಯ ಪರ ಪ್ರಚಾರ ಮಾಡಲು ಗ್ರಾಮಕ್ಕೆ ಆಗಮಿಸದಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಸಿಎಂಗೆ ಬಿಗ್ ಶಾಕ್ ನೀಡಿದ ನಟ ಕಿಚ್ಚ ಸುದೀಪ್!

    ಕಳೆದ 12 ವರ್ಷದಿಂದ ಸಿಎಂ ಸಿದ್ದರಾಮಯ್ಯ ರೈತರ ಪರ ಕೆಲಸ ಮಾಡಿಲ್ಲ. 12 ವರ್ಷ ನಮ್ಮ ಕ್ಷೇತ್ರವನ್ನು ಮರೆತಿದ್ದಾರೆ. ಅಣ್ಣಾ ಅಂಬರೀಶ್ ಅವರನ್ನು ಕಾಂಗ್ರೆಸ್ ನಿಂದ ದೂರ ಮಾಡಿದ್ದಾರೆ. ಹಾಗಾಗಿ ದರ್ಶನ ಯಾವುದೇ ಕಾರಣಕ್ಕೂ ಪ್ರಚಾರ ಮಾಡಬಾರದು ಎಂದು ರೈತ ವಿರೋಧಿ ದರ್ಶನ ಎಂದು ಪ್ರತಿಭಟನಕಾರರು ಕೂಗುತ್ತಿದ್ದಾರೆ. ಆದ್ದರಿಂದ ಅನಿವಾರ್ಯವಾಗಿ ನಟ ದರ್ಶನ್ ಪ್ರಚಾರವನ್ನು ಕಳಸ್ತವಾಡಿ ಗೆ ಶಿಫ್ಟ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪ್ರಚಾರಕ್ಕೆ ಬದಾಮಿ ಕ್ಷೇತ್ರಕ್ಕೆ ಹೋಗಲ್ಲ ಅಂದ್ರು ಯಶ್!

    ಮೂಲತಃ ದರ್ಶನ್ ಮೈಸೂರಿನವರಾಗಿದ್ದು, ಅವರ ತಾಯಿ ಮೀನಾ ತೂಗುದೀಪ ಅವರು ಕಾಂಗ್ರೆಸ್ ಮುಖಂಡರು. ಹೀಗಾಗಿ ದರ್ಶನ್ ಸಿಎಂ ಪರ ಪ್ರಚಾರಕ್ಕೆ ಇಳಿಯುತ್ತಿದ್ದಾರೆ. ಕ್ಷೇತ್ರದ ಒಟ್ಟು 33 ಹಳ್ಳಿಗಳಲ್ಲಿ ದರ್ಶನ್ ರೋಡ್ ಶೋ ನಡೆಸಿ ಪ್ರಚಾರ ನಡೆಸಲಿದ್ದಾರೆ.

  • ರಸ್ತೆ ಮಧ್ಯೆಯೇ ಶಾಸಕ ವರ್ತೂರ್ ಪ್ರಕಾಶ್ ಚಳಿಬಿಡಿಸಿದ ಮಹಿಳೆಯರು!

    ರಸ್ತೆ ಮಧ್ಯೆಯೇ ಶಾಸಕ ವರ್ತೂರ್ ಪ್ರಕಾಶ್ ಚಳಿಬಿಡಿಸಿದ ಮಹಿಳೆಯರು!

    ಕೋಲಾರ: ಶಾಸಕ ವರ್ತೂರ್ ಪ್ರಕಾಶ್ ಅವರನ್ನು ಚಲುವನಹಳ್ಳಿ ಗ್ರಾಮದ ಮಹಿಳೆಯರು ಇಂದು ತರಾಟೆಗೆ ತೆಗೆದುಕೊಂಡಿದ್ದಾರೆ.

    ಶಾಸಕರು ಇಂದು ಚಲುವನಹಳ್ಳಿಯಲ್ಲಿ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಲ ಮಹಿಳೆಯರು ಸೇರಿ ರಸ್ತೆ ಮಧ್ಯೆ ಶಾಸಕರನ್ನು ತಡೆದು ವಾಗ್ದಾಳಿ ನಡೆಸಿದ್ದಾರೆ.


    ಇಷ್ಟು ದಿನದಿಂದ ಏನು ಮಾಡಿದ್ದೀರಿ? ನಮ್ಮ ಊರಿಗೆ 2 ತಿಂಗಳಿನಿಂದ ನೀರಿಗಾಗಿ ಪರದಾಡಿದ್ದರೂ ಕ್ಯಾರೇ ಎಂದಿಲ್ಲ. ನೀರು ಕೊಡಲಿಲ್ಲ ಎಂದು ವರ್ತೂರ್ ಪ್ರಕಾಶ್‍ನ ಅಡ್ಡಗಟ್ಟಿ ಮಹಿಳೆಯರು ದಬಾಯಿಸಿದ್ದಾರೆ.

    ಈ ವೇಳೆ ಅಡ್ಡಿಪಡಿಸಲು ಬಂದ ವರ್ತೂರ್ ಬೆಂಬಲಿಗರ ಮೇಲೂ ಮಹಿಳೆಯರು ಆಕ್ರೋಶಗೊಂಡರು. ಇವತ್ತು ಬಂದು ಹೋದ್ರೆ ಮತ್ತೇ ಬರೋದು ಯಾವಾಗ ನಮ್ಮ ಸಮಸ್ಯೆ ಕೇಳೋರು ಯಾರೂ ಎಂದು ಪ್ರಶ್ನಿಸಿದ್ದಾರೆ.