Tag: Karnataka Elections 2018

  • ಅನಂತ್‍ಕುಮಾರ್, ಸಂತೋಷ್ ವಿರುದ್ಧ ಗರಂ – ಬಳ್ಳಾರಿ ಟೂರ್ ಕೈಬಿಟ್ಟ ಅಮಿತ್ ಶಾ

    ಅನಂತ್‍ಕುಮಾರ್, ಸಂತೋಷ್ ವಿರುದ್ಧ ಗರಂ – ಬಳ್ಳಾರಿ ಟೂರ್ ಕೈಬಿಟ್ಟ ಅಮಿತ್ ಶಾ

    ಬೆಂಗಳೂರು: ಕರ್ನಾಟಕ ಕುರುಕ್ಷೇತ್ರದ ಕಡೆ ಗಳಿಗೆಯಲ್ಲಿ ಪಕ್ಷದೊಳಗೆ ಭಿನ್ನಮತ ಭುಗಿಲೆದ್ದಿರೋ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗರಂ ಆಗಿದ್ದಾರೆ.

    ರಾತ್ರಿ ಬೆಂಗಳೂರಿನ ಚಾಲುಕ್ಯ ವೃತ್ತದಲ್ಲಿರೋ ನಿವಾಸದಲ್ಲಿ 2 ಗಂಟೆ ನಡೆದ ಸಭೆಯಲ್ಲಿ, ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಸಂಘಟನಾ ಕಾರ್ಯದರ್ಶಿ ಸಂತೋಷ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ವಿಶೇಷ ಅಂದ್ರೆ ನಿನ್ನೆ ಬೆಂಗಳೂರಲ್ಲೇ ಇದ್ರೂ ಯಡಿಯೂರಪ್ಪ ಮಾತ್ರ ಶಾ ಭೇಟಿಯಾಗಲು ಬರಲೇ ಇಲ್ಲ. ಉಸ್ತುವಾರಿ ಮುರಳೀಧರ್ ರಾವ್, ಚುನಾವಣಾ ಉಸ್ತುವಾರಿಗಳಾದ ಪಿಯೂಷ್ ಗೋಯಲ್, ಪ್ರಕಾಶ್ ಜಾವ್ಡೇಕರ್ ಜೊತೆಗಿದ್ರು.

    ಇಂದು ಬೆಂಗಳೂರಿನ ಚಾಲುಕ್ಯ ವೃತ್ತದಲ್ಲಿ ಶಾ ನಿವಾಸದಲ್ಲಿ ಇಬ್ಬರ ಜೊತೆಗೂ ಪ್ರತ್ಯೇಕ ಸಭೆ, ಸಂಧಾನ ನಡೆಸ್ತಾರೆ. ವರುಣಾದಲ್ಲಿ ತಮ್ಮ ಮಗನಿಗೆ ಟಿಕೆಟ್ ತಪ್ಪಲು ಅನಂತ್‍ಕುಮಾರ್ ಕಾರಣ ಅನ್ನೋ ಸಿಟ್ಟು ತಣ್ಣಾಗಾಗಿಲ್ಲ. ಇದೇ ಕಾರಣಕ್ಕೆ ಯಡಿಯೂರಪ್ಪ ಪ್ರಚಾರದಿಂದಲೂ ದೂರ ಉಳಿದಿದ್ದು, ಇಂದು ಹಾಸನ ಜಿಲ್ಲೆ ಮತ್ತು ಬೆಂಗಳೂರಲ್ಲಿ ನಿಗದಿಯಾಗಿರೋ ಪ್ರಚಾರದಲ್ಲಿ ಭಾಗಿಯಾಗ್ತಾರ ಇಲ್ವೋ ಅನ್ನೋದು ಸಸ್ಪೆನ್ಸ್ ಆಗಿಯೇ ಉಳಿದಿದೆ. ಇದನ್ನೂ ಓದಿ: ಕರ್ನಾಟಕದ ಅಭಿವೃದ್ಧಿಯೇ ಬಿಜೆಪಿ ಅಜೆಂಡಾ -ಅಭ್ಯರ್ಥಿಗಳಿಗೆ ಮೋದಿ ಪ್ರಚಾರ ಪಾಠ

    ಇತ್ತ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಪ್ರಯೋಗಿಸ್ತಿರೋ ರೆಡ್ಡಿ ಬ್ರದರ್ಸ್ ಅಸ್ತ್ರಕ್ಕೆ ಅಮಿತ್ ಶಾ ಅಂಜಿದಂತಿದೆ. ಇಂದು ನಿಗದಿಯಾಗಿದ್ದ ಬಳ್ಳಾರಿ ಪ್ರವಾಸವನ್ನು ಕೊನೆ ಕ್ಷಣದಲ್ಲಿ ಶಾ ರದ್ದುಪಡಿಸಿದ್ದಾರೆ. ಬಿಜೆಪಿಗೂ ರೆಡ್ಡಿಗೂ ಸಂಬಂಧವಿಲ್ಲವೆಂದು ಶಾ ಹೇಳಿದ್ದರೂ ಗಣಿಧಣಿಯ ಸಹೋದರರು ಸೇರಿ 6 ಮಂದಿಗೆ ಬಿಜೆಪಿ ಟಿಕೆಟ್ ನೀಡಿದೆ. ಒಂದು ವೇಳೆ ಗಣಿನಾಡಿಗೆ ಹೋದ್ರೆ ರೆಡ್ಡಿಗಳೊಂದಿಗಿನ ನಂಟನ್ನು ಒಪ್ಪಿಕೊಂಡಂತಾಗುತ್ತೆ ಅನ್ನೋದು ಶಾ ಆತಂಕವಾಗಿದ್ದು, ಇಂದು ಕೊಪ್ಪಳ ಜಿಲ್ಲೆಗಷ್ಟೇ ಶಾ ಹೋಗ್ತಾರೆ ಅನ್ನೂ ಮಾಹಿತಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.

    ಚುನಾವಣೆಗಾಗಿಯೇ ಶಾ ಕರೆಸಿಕೊಂಡಿರುವ ಉತ್ತರ ಭಾರತದ ಬಿಜೆಪಿ ನಾಯಕರು ಗಂಟು ಮೂಟೆ ಸಮೇತ ಆಗಮಿಸಿದ್ದಾರೆ. ಎಲೆಕ್ಷನ್ ಮುಗಿಯೋವರೆಗೆ ಕರ್ನಾಟಕದಲ್ಲೇ ಠಿಕಾಣಿ ಹೂಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

  • ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಕಾರ್ಯಕರ್ತ ನಾಪತ್ತೆ-ಸಿಸಿಟಿವಿಯಲ್ಲಿ ಸೆರೆಯಾಯ್ತು ಹೈ ಡ್ರಾಮಾ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಕಾರ್ಯಕರ್ತ ನಾಪತ್ತೆ-ಸಿಸಿಟಿವಿಯಲ್ಲಿ ಸೆರೆಯಾಯ್ತು ಹೈ ಡ್ರಾಮಾ

    ಬೆಂಗಳೂರು: ಬ್ಯಾಟರಾಯನಪುರದ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತ ಭರತ್ ಭಾನುವಾರ ಕಾಂಗ್ರಸ್ ಪಕ್ಷಕ್ಕೆ ಸೇರಿದ್ದು ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಈ ವೇಳೆ ಭರತ್ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಅಂತಾನೂ ಹೇಳಲಾಗುತ್ತಿತ್ತು. ಆದ್ರೆ ಸ್ವತಃ ಭರತ್ ಕಾರಿಗೆ ಬೆಂಕಿ ಹಚ್ಚುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

    ಸೋಮವಾರ ಜಕ್ಕೂರಿನ ಕಾರ್ಪೋರೆಟರ್ ಮುನಿಂದ್ರ ಅವ್ರ ಮನೆಯ ಮುಂದೆ ತನ್ನ ಕಾರನಲ್ಲಿ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಭರತ್ ಓಡಿಹೋಗಿದ್ದಾರೆ. ಇಷ್ಟೆಲ್ಲ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಿಜೆಪಿಯಿಂದ ಕಾಂಗ್ರಸ್ ಪಕ್ಷಕ್ಕೆ ಸೇರಿದ್ದಕ್ಕಾಗಿ ಬಿಜೆಪಿ ಅವ್ರು ಈ ರೀತಿ ಮಾಡಿದ್ದಾರೆ ಅಂತಾ ಸುಳ್ಳು ಸುದ್ದಿ ಹಬ್ಬಿಸಲು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಅದ್ರೆ ಅಲ್ಲಿದ್ದ ಸಿಸಿಟಿವಿ ಭರತ್ ಕುತಂತ್ರ ಬಯಲಾಗಿದೆ.

    ಇದೇ ರೀತಿ ಜನರಿಗೆ ಸುಳ್ಳು ಹೇಳಿಕೊಂಡೆ ಕಾಂಗ್ರೆಸ್ ನವರು ಇಲ್ಲಿ ಗೆದ್ದಿರೋದು. ಅಲಿ ಸಿಸಿಟಿವಿ ಇಲ್ಲ ಅಂದಿದ್ರೆ ನಮ್ಮ ಮೇಲೆ ಕಾಂಗ್ರಸ್ ಪಕ್ಷದವರು ಅಪಪ್ರಚಾರ ಮಾಡುತ್ತಿದ್ರು. ನಾವೇ ಪೊಲೀಸ್ ಕಂಪ್ಲೇಂಟ್ ಕೊಡಲಾಗಿದ್ದು, ಘಟನೆ ಬಳಿಕ ಭರತ್ ನಾಪತ್ತೆಯಾಗಿದ್ದನೆ.. ಇದು ಕಾಂಗ್ರೆಸ್‍ನವ್ರ ದೊಡ್ಡ ಕುತಂತ್ರ ಅಂತಾ ಬಿಜೆಪಿಯ ಅಭ್ಯರ್ಥಿ ಎ ರವಿ ಆರೋಪಿಸಿದ್ದಾರೆ.

    https://youtu.be/zuqIq7lIiaM

  • ಯಡಿಯೂರಪ್ಪ ನನ್ನ ಮನೆಗೆ ಬರುವುದೇ ಬೇಡ-ಕೊನೆಗೂ ಮೌನ ಮುರಿದ ಸೊಗಡು ಶಿವಣ್ಣ

    ಯಡಿಯೂರಪ್ಪ ನನ್ನ ಮನೆಗೆ ಬರುವುದೇ ಬೇಡ-ಕೊನೆಗೂ ಮೌನ ಮುರಿದ ಸೊಗಡು ಶಿವಣ್ಣ

    ತುಮಕೂರು: ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಮೌನಕ್ಕೆ ಶರಣಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಕೊನೆಗೂ ಮೌನ ಮುರಿದಿದ್ದಾರೆ. ಟಿಕೆಟ್ ಸಿಗದ ಬಳಿಕ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡದೇ ಶಿವಣ್ಣ ದೂರ ಉಳಿದಿದ್ರು.

    ಇಂದು ಸುದ್ದಿಗೋಷ್ಠಿ ಕರೆದು ಮಾತನಾಡಿದ ಸೊಗಡು ಶಿವಣ್ಣ, ಯಾವ ನಾಯಕರೂ ನನ್ನ ಮನವೊಲಿಸುವ ಪ್ರಯತ್ನ ಮಾಡೋದು ಬೇಡ. ಸದ್ಯ ನಾನು ತಟಸ್ಥನಾಗಿರುತ್ತೇನೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಯವಿಟ್ಟು ನನ್ನ ಮನೆಗೆ ಬರುವುದು ಬೇಡ. ಚುನಾವಣೆ ಮುಗಿದ ಬಳಿಕ ನಾನೇ ಅವರ ಮನೆಗೆ ಹೋಗಿ ಮಾತಾಡುತ್ತೇನೆ ಎಂದು ಕೈ ಮುಗಿದು ಕೇಳಿಕೊಂಡರು.

    ಈ ಬಾರಿಯ ಚುನಾವಣೆಯಲ್ಲಿ ತಟಸ್ಥವಾಗಿರಲು ನಿರ್ಧರಿಸಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಯಲ್ಲಿ ಸಕ್ರಿಯನಾಗುತ್ತೇನೆ. ಮಾಜಿ ಸಂಸದ ಜಿ.ಎಸ್.ಬಸವರಾಜು ಹಾಗೂ ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ ಕೊಟ್ಟಿರುವ ಹಿಂಸೆಗೆ ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕಿತ್ತು. ಆದ್ರೆ ಧೈರ್ಯದಿಂದ ಧೃತಿಗೆಡದೇ ಪರಿಸ್ಥಿತಿ ಎದುರಿಸಿದ್ದೇನೆ ಎಂದು ಮಾಜಿ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದರು.

    ಸೊಗಡು ಶಿವಣ್ಣ ಈ ಬಾರಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ರು. ಆದ್ರೆ ಹೈಕಮಾಂಡ್ ಜ್ಯೋತಿ ಗಣೇಶ್ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದರಿಂದ ಸೊಗಡು ಶಿವಣ್ಣ ಸಹಜವಾಗಿಯೆ ಅಸಮಾಧಾನಗೊಂಡಿದ್ರು.

  • ನಾಮಪತ್ರ ಸಲ್ಲಿಸಿ ಪ್ರಚಾರದ ಬ್ಯುಸಿಯಲ್ಲಿರುವಾಗಲೇ ಕಾಗೋಡು, ಪದ್ಮಾವತಿಗೆ ಬಿಗ್ ಶಾಕ್

    ನಾಮಪತ್ರ ಸಲ್ಲಿಸಿ ಪ್ರಚಾರದ ಬ್ಯುಸಿಯಲ್ಲಿರುವಾಗಲೇ ಕಾಗೋಡು, ಪದ್ಮಾವತಿಗೆ ಬಿಗ್ ಶಾಕ್

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮಂಗಳವಾರವಷ್ಟೇ ಅಭ್ಯರ್ಥಿಗಳೆಲ್ಲಾ ನಾಮಪತ್ರ ಸಲ್ಲಿಸಿ ಪ್ರಚಾರದ ಬ್ಯುಸಿಯಲ್ಲಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿಗ್ ಶಾಕ್ ಆಗಿದೆ.

    ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ವೇಳೆ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕೆಲ ಅಭ್ಯರ್ಥಿಗಳ ನಾಮಪತ್ರ ರದ್ದಾಗುವ ಸಾಧ್ಯತೆ ಇದೆ. ಸಾಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಗೋಡು ತಿಮ್ಮಪ್ಪ ನಾಮಪತ್ರದಲ್ಲಿ ಪತ್ನಿ ಮತ್ತು ಅವಲಂಬಿತರ ಮಾಹಿತಿ, ಚಿನ್ನಾಭರಣ ವಿವರ, ಶೈಕ್ಷಣಿಕ ವಿವರವನ್ನೂ ಸಮರ್ಪಕವಾಗಿ ನಮೂದಿಸಿಲ್ಲ ಹೀಗಾಗಿ ನಾಮಪತ್ರ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

    ಬೆಂಗಳೂರಿನ ರಾಜಾಜಿನಗರದ ಅಭ್ಯರ್ಥಿ ಪದ್ಮಾವತಿಯವರು ಮತ್ತು ಅವರ ಪುತ್ರ ಬ್ಯಾಂಕ್ ಸಾಲ ಪಡೆದು ವಂಚನೆ ಪ್ರಕರಣ ಇರುವುದರಿಂದ ನಾಮಪತ್ರ ಪರಿಶೀಲನೆಗೆ ಚುನಾವಣಾ ಆಯೋಗ ತಡೆ ಹಿಡಿದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ಶಾಸಕ ಹಾಗೂ ಮುಳಬಾಗಿಲು ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಜಿ.ಮಂಜುನಾಥ್ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಾಮಪತ್ರ ಅಸಿಂಧು ಮಾಡಲಾಗಿದೆ.

  • ಬದಾಮಿಯಲ್ಲಿ ಶ್ರೀರಾಮುಲುಗೆ ಟಾಂಗ್ ಕೊಡಲು ಸಿಎಂ ಮಾಸ್ಟರ್ ಪ್ಲಾನ್

    ಬದಾಮಿಯಲ್ಲಿ ಶ್ರೀರಾಮುಲುಗೆ ಟಾಂಗ್ ಕೊಡಲು ಸಿಎಂ ಮಾಸ್ಟರ್ ಪ್ಲಾನ್

    ಬಾಗಲಕೋಟೆ: ಮೊದಲ ಬಾರಿಗೆ ಉತ್ತರ ಕರ್ನಾಟಕದ ಬದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿಎಂ ಸಿದ್ದರಾಮಯ್ಯ ಹೇಗಾದ್ರೂ ಮಾಡಿ ಗೆಲುವು ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮ ಎದುರಾಳಿ ಬಿಜೆಪಿಯ ಶ್ರೀರಾಮುಲು ಅವರನ್ನು ಅಧಿಕ ಮತಗಳ ಅಂತರದಿಂದ ಸೋಲಿಸಲು ಸಹ ಸಿಎಂ ರಾಜ್ಯ ನಾಯಕರ ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಬದಾಮಿಯಲ್ಲೂ ಗೆಲುವು ಅಷ್ಟೊಂದು ಸುಲಭವಲ್ಲ ಅನ್ನೋ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ 30 ಸಾವಿರಕ್ಕೂ ಅಧಿಕ ನಾಯಕ ಸಮುದಾಯ ಮತಗಳಿರುವ ಕ್ಷೇತ್ರದ ಜವಾಬ್ದಾರಿಯನ್ನು ಸತೀಶ್ ಜಾರಕಿಹೊಳಿ ಅವರಿಗೆ ನೀಡಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.

    ನಾಯಕರ ಮತಗಳು ಶ್ರೀರಾಮಲುಗೆ ಸಾಲಿಡ್ ಆಗಬಹುದು ಎನ್ನುವ ಕಾರಣದಿಂದ ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕರಾದ ಸತೀಶ್ ಜಾರಕಿಹೊಳಿಗೆ ಕ್ಷೇತ್ರ ಜವಾಬ್ದಾರಿ ನೀಡುವ ಮೂಲಕ ತಿರುಗೇಟು ಕೊಡಲು ಸಿಎಂ ಪ್ಲಾನ್ ಮಾಡಿದ್ದಾರೆ. ಕುರುಬ ಮತ್ತು ನಾಯಕರ ಮತಗಳು ಹೆಚ್ಚು ಪಡೆದ್ರೆ ಗೆಲುವು ಸುಲುಭವಾಗಬಹುದು ಎಂಬುವುದು ಸಿಎಂ ಲೆಕ್ಕಾಚಾರ ಎನ್ನಲಾಗಿದೆ. ಈ ಸಂಬಂಧ ಮಂಗಳವಾರ ರಾತ್ರಿ ಬದಾಮಿ ಪಟ್ಟಣದ ಹೊರವಲಯದಲ್ಲಿರುವ ಕೃಷ್ಣ ಹೆರಿಟೇಜ್‍ನಲ್ಲಿ ಸತೀಶ್ ಜಾರಕಿಹೊಳಿ ಜೊತೆ ಸಿಎಂ ಮಾತುಕತೆ ಮಾಡಿದ್ದಾರೆ.

    ಸಿಎಂ ಪ್ಲಸ್, ಮೈನಸ್ ಏನು?
    ಬಾದಾಮಿಯಲ್ಲಿ ಕುರುಬ ಸಮುದಾಯದ 46 ಸಾವಿರ ಮತದಾರರು ಇದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಸಹಾಯ ಆಗಬಹುದು. ಸಿದ್ದರಾಮಯ್ಯ ಕಾಂಗ್ರೆಸ್‍ನ ನೇತೃತ್ವ ವಹಿಸಿ ಮುಖ್ಯಮಂತ್ರಿ ಅಭ್ಯರ್ಥಿ ಆಗಿರುವುದು.

    ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ ಮತಗಳು ಕೂಡ ನಿರ್ಣಾಯಕವಾಗಿವೆ. ಕಾಂಗ್ರೆಸ್‍ನಲ್ಲಿ ಇಬ್ಬರು ಟಿಕೆಟ್ ಆಕಾಂಕ್ಷಿಗಳ ಆಂತರಿಕ ಕಲಹ. ಬದಾಮಿ ಸ್ಪರ್ಧೆ ಬಗ್ಗೆ ಕಡೆ ಕ್ಷಣದವರೆಗೂ ಗೊಂದಲ ಸೃಷ್ಟಿಯಾಗಿದ್ದು ಸ್ವಲ್ಪ ಹಿನ್ನಡೆಯಾಗಬಹುದು.

    ಶ್ರೀರಾಮುಲು ಪ್ಲಸ್, ಮೈನಸ್ ಏನು?
    ವಾಲ್ಮೀಕಿ ಸಮುದಾಯದ 13 ಸಾವಿರ ಮತಗಳು, ಎಸ್ ಟಿ ಸಮುದಾಯದ 25,000 ಮತಗಳು ನಿರ್ಣಾಯಕವಾಗಿವೆ. ಪ್ರತ್ಯೇಕ ಲಿಂಗಾಯತ ಧರ್ಮ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಪ್ರಬಲವಾಗಿರುವ ಕಾರಣ ಶ್ರೀರಾಮುಲು ಅವರಿಗೆ ಸಹಾಯವಾಗಬಹುದು.

    ಸಿದ್ದರಾಮಯ್ಯ ಮುಖ್ಯಮಂತ್ರಿ ಅಭ್ಯರ್ಥಿ ಜೊತೆಗೆ ಕುರುಬ ಸಮುದಾಯದ ಮತದಾರರು ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಿಜೆಪಿಯಲ್ಲಿ ಕಡೆ ಕ್ಷಣದವರೆಗೂ ಆಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಮೂಡಿದ್ದು ಹಿನ್ನಡೆಯಾಗಬಹುದು.

  • ಪಾಪ ಜನರಿಗೆ ನ್ಯಾಯ ದೊರಕಿಸಿಕೊಡಲು ಆಗಲ್ಲ ಅಂತ ಹಿಂದೆ ಸರಿದಿದ್ದಾರೆ- ಅಂಬಿಯನ್ನು ಹಾಡಿಹೊಗಳಿದ ಡಿಕೆಶಿ

    ಪಾಪ ಜನರಿಗೆ ನ್ಯಾಯ ದೊರಕಿಸಿಕೊಡಲು ಆಗಲ್ಲ ಅಂತ ಹಿಂದೆ ಸರಿದಿದ್ದಾರೆ- ಅಂಬಿಯನ್ನು ಹಾಡಿಹೊಗಳಿದ ಡಿಕೆಶಿ

    ಮಂಡ್ಯ: ಜನರಿಗೆ ನ್ಯಾಯ ದೊರಕಿಸಿಕೊಡಲು ಆಗಲ್ಲ ಎಂಬ ದೃಷ್ಠಿಯಿಂದ ಅಂಬರೀಶ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಅವರ ತ್ಯಾಗವನ್ನು ನಾವು ಎಂದಿಗೂ ಮರೆಯಲ್ಲ ಎಂದು ಇಂಧನ ಸಚಿವ ಡಿಕೆ.ಶಿವಕುಮಾರ್ ಹಾಡಿ ಹೊಗಳಿದ್ದಾರೆ.

    ಮಂಡ್ಯದ ಮಳವಳ್ಳಿಯಲ್ಲಿ ಶಾಸಕ ನರೇಂದ್ರಸ್ವಾಮಿ ಪರ ಪ್ರಚಾರ ಭಾಷಣ ಮಾಡಿದ ನಂತರ ಮಾತನಾಡಿದ ಅವರು, ಅಂಬರೀಶ್ ಅವರ ಗುಣಗಾನ ಮಾಡಿದ್ದಾರೆ. ಅಂಬರೀಶ್ ಅವರಿಗೆ ಆರೋಗ್ಯ ಸರಿಯಿದ್ದಿದ್ದರೆ ಖಂಡಿತ ಚುನಾವಣೆಗೆ ಸ್ಪರ್ಧಿಸುತ್ತಿದ್ದರು. ಪಾಪ ಜನರಿಗೆ ನ್ಯಾಯ ದೊರಕಿಸಿಕೊಡಲು ಆಗಲ್ಲ ಎಂಬ ದೃಷ್ಠಿಯಿಂದ ಹಿಂದೆ ಸರಿದಿದ್ದಾರೆ. ಅವರು ಈ ರಾಜ್ಯಕ್ಕೆ ಸಾಕಷ್ಟು ಸೇವೆಮಾಡಿದ್ದಾರೆ. ನಾವೆಲ್ಲರೂ ಅವರ ಮನವೊಲಿಸುವ ಪ್ರಯತ್ನ ಮಾಡಿದೆವು. ಭಗವಂತ ಅವರನ್ನ ಆರೋಗ್ಯವಾಗಿಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಯಾವತ್ತಿದ್ರೂ ಸ್ಟಾರ್, ರಾಜಕೀಯ, ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ಚಿರಋಣಿ: ಅಂಬರೀಶ್

    ಆರೋಗ್ಯ ಸರಿಯಾಗಿ ಮತ್ತೆ ಬಂದರೆ ಕಾಂಗ್ರೆಸ್ ಪಕ್ಷದಲ್ಲಿ ಅವಕಾಶ ಇದೆ. ಅವರ ತ್ಯಾಗವನ್ನು ನಾವು ಮರೆಯಲ್ಲ. ಅವರೊಬ್ಬ ಸ್ನೇಹ ಜೀವಿ. ಹೃದಯ ಶ್ರೀಮಂತಿಕೆ ಇರುವ ವ್ಯಕ್ತಿ ಎಂದು ಅಂಬರೀಶ್ ಅವರನ್ನು ಹಾಡಿ ಹೊಗಳಿದ್ದಾರೆ.

    ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಆಗೋದಿಲ್ಲ. ಇದು ಬಿಜೆಪಿಯವರು ಮಾಡಿಸಿರುವ ಸಮೀಕ್ಷೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಡಿಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ರು.

  • ನಾನು ಯಾವತ್ತಿದ್ರೂ ಸ್ಟಾರ್, ರಾಜಕೀಯ, ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ಚಿರಋಣಿ: ಅಂಬರೀಶ್

    ನಾನು ಯಾವತ್ತಿದ್ರೂ ಸ್ಟಾರ್, ರಾಜಕೀಯ, ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ಚಿರಋಣಿ: ಅಂಬರೀಶ್

    ಬೆಂಗಳೂರು: ಈ ಬಾರಿ ಚುನಾವಣೆಗೆ ಮಂಡ್ಯದ ಗಂಡು, ರೆಬಲ್ ಸ್ಟಾರ್ ಅಂಬರೀಶ್ ಸ್ಪರ್ಧೆ ಮಾಡ್ತಾರಾ ಅಥವಾ ರಾಜಕೀಯ ನಿವೃತ್ತಿ ಪಡೆಯುತ್ತಾರಾ ಎಂಬ ಪ್ರಶ್ನೆಗಳಿಗೆ ಉತ್ತರ ಹೇಳುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

    ಬೆಂಗಳೂರಿನ ನಿವಾಸದಲ್ಲಿ ಸುದಿಗೋಷ್ಠಿ ನಡೆಸಿ ಮಾತನಾಡಿದ ಅಂಬಿ, ನಾನು ಯಾವತ್ತಿದ್ರೂ ಸ್ಟಾರ್. ರಾಜಕೀಯ ಮತ್ತು ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ನಾನು ಯಾವತ್ತೂ ಚಿರಋಣಿ. ನನ್ನ ಪ್ರೋತ್ಸಾಹಿಸಿದ ಕನ್ನಡದ ಜನತೆಗೆ ಧನ್ಯವಾದಗಳು. ನನ್ನ ಮೇಲೆ ವಿಶ್ವಾಸ ಪ್ರೀತಿ ಇಟ್ಟ ಎಲ್ಲ ಜನತೆಗೂ ಕೃತಘ್ನತೆಗಳು ಅಂತ ಹೇಳಿದ್ದಾರೆ.


    ನಾನು ಯಾರ ಪರ ಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಪ್ರಚಾರಕ್ಕೆ ಹೋಗೋದಾದ್ರೆ ನಾನೇ ಸ್ಪರ್ಧೆ ಮಾಡುತ್ತಿದ್ದೆ. ನನಗೂ ವಯಸ್ಸಾಗ್ತಿದೆ, ಆಸಕ್ತಿ- ಶಕ್ತಿ ಕುಗ್ಗುತ್ತೆ ಅಲ್ವಾ? ಸಚಿವ ಸ್ಥಾನದಿಂದ ತೆಗೆದ್ರು ಅಂದ್ರೆ ನನಗೆ ಶಕ್ತಿ ಇಲ್ಲಾ ಅಂತ ಆಯ್ತಲ್ಲ. ನನ್ನ ಸಿದ್ಧಾಂತಗಳಿಗೆ ಅಲ್ಲ. ನನಗೆ ಮತ ಕೇಳಕ್ಕೂ, ಇವರಿಗೆ ಮತ ಹಾಕಿ ಅಂತ ಹೇಳುವುದಕ್ಕೆ ಬಹಳ ವ್ಯತ್ಯಾಸ ಇದೆ. ಮಂಡ್ಯದಿಂದ ಗೆದ್ದರೂ ಬರೀ ಶಾಸಕ ಆಗ್ತಿದ್ದೆ ಮತ್ಯಾಕೆ ನಿಲ್ಲಬೇಕು ಎಂದು ಪ್ರಶ್ನಿಸಿದರು. ಮಂಡ್ಯದಿಂದ ಯಾರಿಗಾದ್ರೂ ಟಿಕೆಟ್ ಕೊಡಲಿ, ಅವರು ಗೆಲ್ಲಲಿ, ನಾನು ಹೋಗಲ್ಲ. ಒಟ್ಟಿನಲ್ಲಿ ಯಾರ ಪರವಾಗಿಯೂ ಪ್ರಚಾರಕ್ಕೆ ಹೋಗಲ್ಲ ಸ್ಪಷ್ಟನೆ ನೀಡಿದ್ರು. ಇದನ್ನೂ ಓದಿ: ಅಮರಾವತಿಗೆ ಅಂಬರೀಷ್ ಮಂಗಳಾರತಿ!

    ಆರು ತಿಂಗಳಿಂದ ನನ್ನ ಸಂಪರ್ಕದಲ್ಲಿ ಬೇರೆ ಪಕ್ಷದವರು ಇದ್ದಾರೆ. 3 ತಿಂಗಳಿಂದ ನನ್ನನ್ನು ಬೇರೆ ಪಕ್ಷದವರು ಕರೆಯುತ್ತಿದ್ದಾರೆ. ಆದ್ರೆ ನಾನು ಎಲ್ಲೂ ಹೋಗಲ್ಲ. ನಾನು ಪ್ರಚಾರ ಸಮಿತಿ ಸ್ಟಾರ್ ಅಲ್ಲಾ. ಸಿದ್ದರಾಮಯ್ಯ ಸಿಎಂ ಆಗೋಕೆ ನನ್ನ ಪಾತ್ರವೂ ಇದೆ. ಕನಕದಾಸರನ್ನ ಕನಕರಾಜ ಮಾಡಿ ಅಂದಿದ್ದು ನಾನು. ವಲಸಿಗರಿಗೆ ಬೆಂಬಲ ಕೊಟ್ಟೆ ಅಂದ್ರು. ಆದರೆ ಅವರು ಮುಖ್ಯಮಂತ್ರಿ ಆದ ಮೇಲೆ ಬ್ಯುಸಿ ಆದ್ರು ಬಿಡಿ ಅಂತ ತಿಳಿಸಿದ್ದಾರೆ.

    ಕೊನೆಯ ಕ್ಷಣದವರೆಗೂ ಬಿಫಾರಂ ನನಗೆ ಇಟ್ಟಿದ್ದರಿಂದ ಅವರಿಗೂ ಧನ್ಯವಾದಗಳು. ರಾಜಕೀಯ ಮತ್ತು ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ಋಣಿಯಾಗಿದ್ದೇನೆ. ನನ್ನ ಕೈಯಲ್ಲಿ ಆಗುತ್ತಿಲ್ಲ ಹೀಗಾಗಿ ಬೇಡವಾಗಿದ್ದೇನೆ. ವಯಸ್ಸಾಯಿತು ಹೀಗಾಗಿ ಕೆಲಸ ಮಾಡಕ್ಕೆ ಆಗಲ್ಲ. ಜನರ ಆಸೆ ತಿರಿಸಕ್ಕೆ ಆಗಲ್ಲ. ಸಂಪುಟ ಪುನರ್ ರಚನೆಯಲ್ಲಿ ತೆಗೆದಾಗ್ಲೆ ನನ್ನ ಕ್ಯಾಪಸಿಟಿ ಗೊತ್ತಾಯಿತು. ನಾನು ಮೊದಲೇ ಈ ನಿರ್ಧಾರ ಮಾಡಿದ್ದೆ. ಮುಖ್ಯಮಂತ್ರಿ ಆದಾಗಲೇ ಬಂದಿದ್ದರು. ಮುಖ್ಯಮಂತ್ರಿ ಆಗದೇ ಇದ್ದಗಲೂ ಬಂದಿದ್ದರು ಅಂದ್ರು.

    ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನಮ್ಮ ಮನೆಗೆ ಬಂದಿದ್ದರು. ಮಂಡ್ಯದಲ್ಲಿ ವಾತಾವರಣ ಸರಿ ಇಲ್ಲಾ ಎಂದಿದ್ದರು. ಅದು ಬೇಸರ ತರಿಸಿತ್ತು. 224 ಕ್ಷೇತ್ರದಲ್ಲಿ ಟಿಕೆಟ್ ಕೊಡ್ತಾರೆ ಎಲ್ಲಾ ಗೆಲ್ತಾರಾ? ನಾನು ಸೋಲ್ತೀನಿ ಅಂದ್ರೆ ಏನರ್ಥ? ಸೋನಿಯಾ ಗಾಂಧಿ ಇಂದ ಹಿಡಿದು ಎಲ್ಲರೂ ನನಗೆ ಗೊತ್ತು. ನಾನು ಏನ್ ಬೇಕಾದ್ರು ಮಾಡಬಹುದಿತ್ತು. ಇಂದಿಗೂ ನನ್ನ ಸಂಪರ್ಕದಲ್ಲಿ ಜೆಡಿಎಸ್ ನಾಯಕರು ಇದ್ದಾರೆ. ಜೆಡಿಎಸ್ ಇಂದ ಬಂದು ಮಂಡ್ಯದಲ್ಲಿ ಕಾಂಗ್ರೆಸ್ ಕಟ್ಟಿದವನು. ನನಗೆ ಗೊತ್ತಿಲ್ಲವಾ ರಾಜಕಾರಣ. ಆದ್ರೆ ಬೇಡ ಅಂತ ನಿರ್ಧಾರ ಮಾಡಿದ್ದೇನೆ ಅಂತ ಅಂಬಿ ಬೇಸರ ವ್ಯಕ್ತಪಡಿಸಿದ್ದಾರೆ.

    ಇತ್ತ ಅಂಬರೀಶ್ ರಾಜಕೀಯ ಬಿಟ್ಟು ಚಿತ್ರರಂಗ ಹಾಗೂ ಅಭಿಮಾನಿಗಳ ಕೈಗೆ ಸಿಗುವಂತಾಗಿದೆ ಎಂದು ಅಂಬರೀಶ್ ನಿವಾಸದ ಬಳಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಅಂಬರೀಶ್ ಗೆ ಸಿಹಿ ತಿನ್ನಿಸಿ ಸಿಹಿ ಹಂಚಿ ಘೋಷಣೆ ಕೂಗುತ್ತಿದ್ದಾರೆ.

    https://www.youtube.com/watch?v=j5sNdOb1D40

  • ರಾಘವೇಂದ್ರ ಯಾರ ಮಗ? ಬಿಎಸ್‍ವೈ ಗೆ ಸಿಎಂ ಪ್ರಶ್ನೆ

    ರಾಘವೇಂದ್ರ ಯಾರ ಮಗ? ಬಿಎಸ್‍ವೈ ಗೆ ಸಿಎಂ ಪ್ರಶ್ನೆ

    ಮೈಸೂರು: ರಾಘವೇಂದ್ರ ಯಾರ ಮಗ? ಒಂದು ಬಾರಿ ಸಂಸದ ಆಗಿಲ್ವಾ. ಆತ ಯಡಿಯೂರಪ್ಪನ ಮಗನಾ ಅಥವಾ ಅವರ ಅಮ್ಮನ ಮಗನಾ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ವಂಶ ಪಾರಂಪರ್ಯ ರಾಜಕೀಯ ಮಾಡಲ್ಲ ಎಂಬ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆಗೆ ಟಾಂಗ್ ನೀಡಿದ್ರು. ವರುಣಾದ ಬಿಜೆಪಿ ಅಭ್ಯರ್ಥಿ ಬಗ್ಗೆ ಮಾತಾಡೋಕೆ ನಾನು ಬಿಜೆಪಿ ವಕ್ತಾರ ಅಲ್ಲ. ವರುಣಾದಲ್ಲಿ ಯಾವ ಬಿಜೆಪಿ ಅಭ್ಯರ್ಥಿಯನ್ನೂ ನಿಲ್ಲಿಸಿದ್ರು ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ. ಮಗನಿಗೆ ಟಿಕೆಟ್ ಕೊಡಿಸುವ ವಿಚಾರದಲ್ಲಿ ಯಡಿಯೂರಪ್ಪ ವೀಕ್ ಆಗಿಲ್ಲ. ಯಡಿಯೂರಪ್ಪ ಯಾವಾಗಲೂ ವೀಕ್. ಕಳಂಕಿತ ವ್ಯಕ್ತಿಯಾಗಿರೋ ಅವರಿಗೆ ಸಾರ್ವಜನಿಕ ಮೌಲ್ಯಗಳಿಲ್ಲ. ಹೀಗಾಗಿ ಯಾವಾಗಲೂ ವೀಕ್ ಆಗಿಯೇ ಇದ್ದಾರೆ ಅಂತ ಅವರು ಲೇವಡಿ ಮಾಡಿದ್ರು. ಇದನ್ನೂ ಓದಿ: ಯಡಿಯೂರಪ್ಪನವರೇ ದಯವಿಟ್ಟು ನನಗೆ ಮೋಸ ಮಾಡ್ಬೇಡಿ, ನಿಮ್ಮ ಕಾಲಿಗೆ ಬೇಕಾದರೂ ಬೀಳ್ತೇನೆ- ಬಿಜೆಪಿ ಅಭ್ಯರ್ಥಿ ಮನವಿ

    ಚಾಮುಂಡೇಶ್ವರಿ ತಿರಸ್ಕರಿಸಿದ್ದಾಳೆ, ಬನಶಂಕರಿಯೂ ತಿರಸ್ಕರಿಸುತ್ತಾಳೆ ಎಂಬ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಶ್ರೀರಾಮುಲು ಯಾರ್ ರೀ? ಅವರಿಗೆ ನನ್ನ ರಾಜಕೀಯ ಇತಿಹಾಸ ಗೊತ್ತಿಲ್ಲ. ಶ್ರೀರಾಮುಲು ಶಾಸಕನಾಗಿದ್ದೇ 2004ರಲ್ಲಿ. ನಾನು 1983ರಲ್ಲೇ ಚಾಮುಂಡೇಶ್ವರಿಯಲ್ಲಿ ಶಾಸಕನಾಗಿದ್ದೆ. ನನ್ನ ಬಗ್ಗೆ ಅವರೇನು ಮಾತನಾಡುತ್ತಾರೆ. ನಾನು ಸಮೀಕ್ಷೆಗಳನ್ನು ನಂಬಲ್ಲ. ಆದ್ರೆ ಜನ ಸಮೀಕ್ಷೆಯಲ್ಲಿ ನಾನು ಮುಖ್ಯಮಂತ್ರಿಯಾಗಲಿ ಅನ್ನೋದೇ ಜಾಸ್ತಿ ಅಂದ್ರು. ಇದನ್ನೂ ಓದಿ: ಇಂದು ಸಿದ್ದರಾಮಯ್ಯ, ಸಂಸದ ಶ್ರೀರಾಮುಲು ನಾಮಪತ್ರ ಸಲ್ಲಿಕೆ

    ನಾನು ಇಂದು ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ಮಧ್ಯಾಹ್ನ ಎರಡು ಗಂಟೆ ವೇಳೆಗೆ ನಾಮಪತ್ರ ಸಲ್ಲಿಸುತ್ತೇನೆ. ಅಂಬರೀಶ್ ನಾಮಪತ್ರ ಸಲ್ಲಿಸೋದು ಹೈಕಮಾಂಡ್ ಗೆ ಬಿಟ್ಟಿದ್ದು. ಅದು ನಂಗೆ ಗೊತ್ತಿಲ್ಲ ಅಂತ ಅವರು ಹೇಳಿದ್ರು.

  • ಮದ್ಯಪ್ರಿಯರ ಕನಸನ್ನ ಭಗ್ನಗೊಳಿಸಿದ ಚುನಾವಣಾ ಆಯೋಗ!

    ಮದ್ಯಪ್ರಿಯರ ಕನಸನ್ನ ಭಗ್ನಗೊಳಿಸಿದ ಚುನಾವಣಾ ಆಯೋಗ!

    ಬೆಂಗಳೂರು: ಚುನಾವಣಾ ದಿನಾಂಕ ಘೋಷಣೆ ಆಗುತ್ತಿದಂತೆ ಮುಂದಿನ ಕೆಲವು ದಿನ ಪುಕ್ಕಟ್ಟೆಯಾಗಿ ಸಾರಾಯಿ ಸಿಗುತ್ತೆ ಅಂತಾ ಖುಷಿಯಲ್ಲಿದ್ದ ಮದ್ಯ ಪ್ರಿಯರ ಕನಸನ್ನು ಚುನಾವಣಾ ಆಯೋಗ ಭಗ್ನಗೊಳಿಸಿದೆ.

    ಚುನಾವಣೆ ಸಮಯದಲ್ಲಿ ಮತದಾರರನ್ನು ಸೆಳೆಯಲು ಕೆಲ ರಾಜಕಾರಣಿಗಳು ಮದ್ಯ ಹಂಚಲು ಮುಂದಾಗುತ್ತಾರೆ. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಆದಾಗಿನಿಂದ ಪ್ರತಿನಿತ್ಯ ರಾಜ್ಯಾದ್ಯಂತ ಅಧಿಕಾರಿಗಳು ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಅಕ್ರಮ ಮದ್ಯ ಸಾಗಾಟ ನಿಯಂತ್ರಿಸಲು ಚುನಾವಣಾ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಅಕ್ರಮ ಬಾರ್ ಗಳಿಗೆ ಬೀಗ ಹಾಕಿದ್ದಾರೆ.

    ಪರವಾನಿಗೆಯನ್ನು ನವೀಕರಣ ಮಾಡಿಕೊಳ್ಳದ ಬಾರ್‍ಗಳನ್ನು ಸಹ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಟೋಕನ್ ಗಳ ಮೂಲಕ ಮತದಾರರಿಗೆ ಮದ್ಯ ಹಂಚಲಾಗುತ್ತಿದೆ ಎಂಬ ಮಾತುಗಳು ಕೇಳಿಬರತೊಡಗಿದ್ದವು. ಈ ಹಿನ್ನೆಲೆಯಲ್ಲಿ ಲೈಸನ್ಸ್ ಪಡೆಯದೇ ತೆರೆದಿರುವ ಬಾರ್‍ಗಳನ್ನು ಗುರುತಿಸಿ, ಅವುಗಳಿಗೆ ಬೀಗ ಹಾಕಲಾಗಿದೆ.

    ಕರ್ನಾಟಕದಾದ್ಯಂತ ಒಟ್ಟು 508 ಅಕ್ರಮ ಬಾರ್ ಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ 245 ಬೆಂಗಳೂರು ನಗರದಲ್ಲಿವೆ. ಮತದಾರರಿಗೆ ಮದ್ಯ ಹಂಚುವ ಮೂಲಕ ವೋಟ್ ಪಡೆಯಲು ಮುಂದಾಗಿದ್ದವರಿಗೆ ಚುನಾವಣಾ ಆಯೋಗ ಸರಿಯಾಗಿಯೇ ಬಿಸಿ ಮುಟ್ಟಿಸಿದೆ.

    ಬೆಂಗಳೂರು ನಗರದಲ್ಲಿ ಮುಚ್ಚಲ್ಪಟ್ಟ ಬಾರ್ ಗಳ ಪಟ್ಟಿ ಹೀಗಿದೆ:
    ಬೆಂಗಳೂರು ಪೂರ್ವ ವಿಭಾಗ- 123
    ಬೆಂಗಳೂರು ದಕ್ಷಿಣ ವಿಭಾಗ- 62
    ಬೆಂಗಳೂರು ಪೂರ್ವ ವಿಭಾಗ- 56
    ಬೆಂಗಳೂರು ಪಶ್ಚಿಮ ವಿಭಾಗ- 4