Tag: karnataka elections

  • ಮೋದಿಯವರು ಹೇಳಿದಂತೆ ಸಿದ್ದರಾಮಯ್ಯ ಪಕ್ಷಾಂತರಿ ಸಿಎಂ: ಕುಮಾರಸ್ವಾಮಿ

    ಮೋದಿಯವರು ಹೇಳಿದಂತೆ ಸಿದ್ದರಾಮಯ್ಯ ಪಕ್ಷಾಂತರಿ ಸಿಎಂ: ಕುಮಾರಸ್ವಾಮಿ

    ವಿಜಯಪುರ: ಬಳ್ಳಾರಿ ರೆಡ್ಡಿ ಬ್ರದರ್ಸ್ ಗಳ ಬಗ್ಗೆ ಸಮರ್ಥನೆ ಮಾಡಿಕೊಂಡ ಪ್ರಧಾನಿ ಮೋದಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

    ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಜೆಡಿಎಸ್ ಸಮಾವೇಶದ ಬಳಿಕ ಮಾತನಾಡಿದ ಹೆಚ್‍ಡಿಕೆ, ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ನಡೆದ ಕಳ್ಳ ಸಾಗಾಣಿಕೆ ಹಾಗೂ ಅಲ್ಲಿಯ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಪ್ರಧಾನಿ ಮೋದಿ ಅವರ ನೈತಿಕತೆ ಉಳಿಸಿಕೊಂಡಿಲ್ಲವೆಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಹೊರತಾಗಿಲ್ಲ. ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ ಸಿದ್ದರಾಮಯ್ಯ, ಪಾದಯಾತ್ರೆ ಹೆಸರಲ್ಲಿ ಅಧಿಕಾರ ಪಡೆದಿದ್ದಾರೆ. ಆದರೆ ಬಳ್ಳಾರಿ ಜನರನ್ನು ಬಡತನದಲ್ಲಿ ಇಟ್ಟಿದ್ದಾರೆಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರ 5 ವರ್ಷದ ಆಡಳಿತದಲ್ಲಿ ಅಕ್ರಮ ಗಣಿಗಾರಿಕೆ ವಿಚಾರವಾಗಿ ಯಾರ ಮೇಲೆ ಕ್ರಮಕೈಗೊಂಡಿದೆ ತೋರಿಸಲಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಈ ಸಲ ಕಪ್ ನಮ್ದೆ, ಸಮ್ಮಿಶ್ರ ಸರ್ಕಾರ ಇಲ್ಲ: ಎಚ್‍ಡಿಕೆ

    ಪ್ರಧಾನಿ ಮೋದಿ ಅವರು ಹೇಳಿದ ಹಾಗೆ ಸಿದ್ದರಾಮಯ್ಯ ಪಕ್ಷಾಂತರಿ ಸಿಎಂ. ನಾಳೆ ಬಿಜೆಪಿಗೆ ಹೋದರೂ ಆಶ್ಚರ್ಯ ಪಡುವ ಹಾಗಿಲ್ಲ ಎಂದಿದ್ದಾರೆ. ಚುನಾವಣಾ ಫಲಿತಾಂಶದಲ್ಲಿ ಅತಂತ್ರ ಬಂದರೆ. ಇದೇ ಸಿದ್ದರಾಮಯ್ಯ ನೇತೃತ್ವದಲ್ಲಿ 50-60 ಜನ ಶಾಸಕರ ಜೊತೆ ಬಿಜೆಪಿ ಬಾಗಿಲು ತಟ್ಟಿದರೂ ಆಶ್ಚರ್ಯಪಡುವ ಹಾಗಿಲ್ಲವೆಂದು ಸಿದ್ದು ವಿರುದ್ಧ ಹೆಚ್‍ಡಿಕೆ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿಯವರು ನನಗೆ ಬೌಲಿಂಗ್ ಮಾಡೋಕೆ ಆಗಲ್ಲ: ಮೋದಿಗೆ ಕುಮಾರಸ್ವಾಮಿ ಟಾಂಗ್

  • ಮೋದಿಗೆ ರಾಜ್ ಆತ್ಮ ಚರಿತ್ರೆಯನ್ನು ನೀಡಿದ ಪುನೀತ್ ದಂಪತಿ

    ಮೋದಿಗೆ ರಾಜ್ ಆತ್ಮ ಚರಿತ್ರೆಯನ್ನು ನೀಡಿದ ಪುನೀತ್ ದಂಪತಿ

    ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಇಂದು ನಗರದ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಟ ಪುನೀತ್ ರಾಜ್‍ಕುಮಾರ್ ದಂಪತಿ ಸ್ವಾಗತಿಸಿದರು.

    ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಪುನೀತ್ ರಾಜ್‍ಕುಮಾರ್ ದಂಪತಿ ಸ್ವಾಗತ ಕೋರಿಸಿ ಡಾ.ರಾಜಕುಮಾರ್ ಆತ್ಮಚರಿತ್ರೆಯನ್ನು ಕಾಣಿಕೆಯಾಗಿ ನೀಡಿದರು.

    ಪಕ್ಷದ ಪರ ಮೇ 1 ರಿಂದ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ಪ್ರಧಾನಿ ಮೋದಿ ಅವರು ಇಂದು ಕಲಬುರುಗಿ ಹಾಗೂ ಬಳ್ಳಾರಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಬಳಿಕ ಸಂಜೆ ವೇಳೆಗೆ ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದರು.

    ಸಮಾವೇಶದಲ್ಲಿ ಕನ್ನಡದಲ್ಲೇ ಭಾಷಣ ಆರಂಭ ಮಾಡಿದ ಮೋದಿ, ನಾಡಪ್ರಭು ಕೆಂಪೇಗೌಡ, ಡಾ. ರಾಜಕುಮಾರ್, ಸಿವಿ ರಾಮನ್, ವಿಶ್ವೇಶ್ವರಯ್ಯನವರ ನೆನೆದು ಹೊಗಳಿದ್ದರು. ಅಲ್ಲದೇ ಕ್ರೀಡಾರಂಗದಲ್ಲಿ ದೇಶಕ್ಕೆ ಕೀರ್ತಿ ತಂದ ಬೆಂಗಳೂರಿನ ಕ್ರೀಡಾಪಟುಗಳಿಗೆ ನನ್ನ ನಮನಗಳು ಎಂದು ಹೇಳಿ ಭಾಷಣ ಆರಂಭಿಸಿದರು.

  • ಲಘು ಹೃದಯಾಘಾತ – ಬಿಜೆಪಿ ಶಾಸಕ ವಿಜಯಕುಮಾರ್ ಆಸ್ಪತ್ರೆಗೆ ದಾಖಲು

    ಲಘು ಹೃದಯಾಘಾತ – ಬಿಜೆಪಿ ಶಾಸಕ ವಿಜಯಕುಮಾರ್ ಆಸ್ಪತ್ರೆಗೆ ದಾಖಲು

    ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ವೇಳೆ ವಿಜಯ್ ಕುಮಾರ್ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತರು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಚುನಾವಣೆಗೆ ಕೆಲ ದಿನಗಳು ಬಾಕಿ ಇರುವ ವೇಳೆಯಲ್ಲಿ ವಿಜಯ್ ಕುಮಾರ್ ಅವರು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಎದೆ ನೋವು ಕಾಣಿಸಿಕೊಂಡಿತ್ತು.

  • ಕಾಂಗ್ರೆಸ್ ವಿರುದ್ಧ ರಾಷ್ಟ್ರೀಯತೆಯ ಬಣ ಪ್ರಯೋಗಿಸಿದ ಮೋದಿ

    ಕಾಂಗ್ರೆಸ್ ವಿರುದ್ಧ ರಾಷ್ಟ್ರೀಯತೆಯ ಬಣ ಪ್ರಯೋಗಿಸಿದ ಮೋದಿ

    ಕಲಬುರಗಿ: ಕರ್ನಾಟಕ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ರಾಷ್ಟ್ರೀಯತೆಯ ಬಣ ಪ್ರಯೋಗಿಸಿದ್ದಾರೆ.

    ಕಲಬುರಗಿ ನಗರದ ಎನ್‍ವಿ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಸೇನೆ ಹಾಗೂ ಯೋಧರ ಬಗ್ಗೆ ಗೌರವ ಇಲ್ಲದ ಕಾಂಗ್ರೆಸ್ ನಿಂದ ದೇಶಕ್ಕೆ ಗೌರವ ನೀಡುವುದನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕಲಬುರಗಿ ಜಿಲ್ಲೆ ಶರಣರು ಸಂತರು ನಡೆದಾಡಿದ ಪುಣ್ಯ ಭೂಮಿ. ಅನೇಕ ಮಹಾಪುರಷರು ನಡೆದಾಡಿದ ಈ ನೆಲಕ್ಕೆ ಜನರಿಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು ಎಂದು ಭಾಷಣ ಆರಂಭಿಸಿದ ಅವರು, ಇಂತಹ ಉರಿ ಬಿಸಿಲಲ್ಲೂ ಇಷ್ಟೊಂದು ಜನ ಸಮಾವೇಶದಲ್ಲಿ ಭಾಗವಹಿಸಿರುವುದನ್ನು ಗಮನಿಸಿದರೆ ದೇಶದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ಇದು ಸಕಾಲ ಎಂದೇನಿಸುತ್ತಿದೆ. ಇದು ಕಾಂಗ್ರೆಸ್‍ಗೆ ಎಚ್ಚರಿಕೆಯ ಗಂಟೆ. ಹಲವು ಚುನಾವಣೆಗಳು ಈ ಹಿಂದೆ ಬಂದಿದೆ ಹೋಗಿದೆ. ಆದ್ರೆ ಕರ್ನಾಟಕದ ಜನತೆ ಈ ಬಾರಿ ಸರ್ಕಾರ ಬದಲಿಸುವ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದ ನಾಲ್ಕು ಮೂಲೆಗಳಲ್ಲಿ ಕೇಸರಿ ಬಾವುಟ ಹಾರಿಸಲಿದ್ದೇವೆ. ಕರ್ನಾಟಕವನ್ನು ಲೂಟಿ ಹೊಡೆಯಲು ಬಿಡುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿಯಿಂದ ಜನರಲ್ಲಿ ಹೊಸ ವಿಶ್ವಾಸ ಮೂಡಿದೆ. ಈ ಚುನಾವಣೆ ಕರ್ನಾಟಕದ ಯುವಜನತೆಯ ಭವಿಷ್ಯ ನಿರ್ಧರಿಸಲಿದೆ. ಇಲ್ಲಿಯ ಯುವಕರಿಗೆ ತಮ್ಮ ಹಕ್ಕು ದೊರೆಯಬೇಕಾಗಿದೆ. ಕರ್ನಾಟಕದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ನೀಡಿ ಮನವಿ ಮಾಡಿದರು.

    ಕಲಬುರಗಿ ಭಾರತ ಐಕ್ಯತೆಯ ಸಂಕೇತ: ಕಲಬುರಗಿಯೊಂದಿಗೆ ದೇಶದ ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಅವರಿಗೆ ವಿಶೇಷವಾದ ನಂಟಿದೆ. ಸ್ವಾತಂತ್ರ್ಯ ನಂತರ ಹೈದರಾಬಾದ್ ನಿಜಾಮರು ಭಾರತದೊಂದಿಗೆ ವಿಲೀನಗೊಳ್ಳಲು ನಿರಾಕರಿಸಿದ್ದರು. ಈ ವೇಳೆ ಪಟೇಲರು ನಿಜಾಮ ಸೆದೆಬಡಿದು ಕಲಬುರಗಿಯನ್ನು ಭಾರತದೊಳಗೆ ವಿಲೀನಗೊಳಿಸಿದರು. ಕಲಬುರುಗಿ ವಿಲೀನ ನಂತರವೂ ನಿಜಾಮರು ಇಲ್ಲಿ ಹಿಂಸಾಚಾರ ನಡೆಸಿದ್ದರು. ಈ ವೇಳೆ ಹಲವು ಯೋಧರು ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ಇದನ್ನು ನೆನೆಯಲು ಕಾಂಗ್ರೆಸ್ ಸರ್ಕಾರಕ್ಕೆ ಅವಕಾಶವಿತ್ತು, ಆದ್ರೆ ಇದನ್ನು ಕಾಂಗ್ರೆಸ್ ಮಾಡಿಲ್ಲ. ದೇಶದ ಯೋಧರಿಗೆ ಕಾಂಗ್ರೆಸ್ ಅಗೌರವ ಸೂಚಿಸಿದೆ. ಸರ್ಜಿಕಲ್ ಸ್ಟ್ರೈಕ್ ವೇಳೆ ಸಾಕ್ಷ್ಯ ಕೇಳಿದರು. ಯೋಧರು ವಿರೋಧಿಗಳ ಮೇಲೆ ದಾಳಿ ನಡೆಸುವ ವೇಳೆ ಕ್ಯಾಮೆರಾ ತೆಗೆದುಕೊಂಡು ಹೋಗಬೇಕಾ ಅಥವಾ ಬಂದುಕು ತೆಗೆದುಕೊಂಡು ಹೋಗ ಬೇಕಾ ಎಂದು ಮೋದಿ ಪ್ರಶ್ನಿಸಿದರು.

    ಪಾಟೇಲ್ ಅವರ ಹೆಸರು ಕೇಳಿದರೆ ಕಾಂಗ್ರೆಸ್ ಒಂದು ಪರಿವಾರಕ್ಕೆ ನಿದ್ದೆ ಬರುವುದಿಲ್ಲ. ಕಾಂಗ್ರೆಸ್ ಗೆ ಕರ್ನಾಟಕದ ಶ್ರೇಷ್ಠ ಸೇನಾ ಅಧಿಕಾರಿಗಳಾದ ಜನರಲ್ ತಿಮ್ಮಯ್ಯ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಬಗ್ಗೆಯೂ ಗೌರವವಿಲ್ಲ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ಕಾಂಗ್ರೆಸ್ ಗೆ ದೇಶ ಪ್ರೇಮದ ಅರ್ಥ ಎನ್ ಗೊತ್ತು ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

    ಖರ್ಗೆ ಸಿಎಂ ಸ್ಥಾನ : ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಂಪತ್ತು ಎಷ್ಟಿದೆ ನಿಮಗೊತ್ತಾ ಎಂದು ಪ್ರಶ್ನಿಸಿರುವ ಮೂಲಕ ಪ್ರಧಾನಿ ಮೋದಿ ಖರ್ಗೆಗೆ ಟಾಂಗ್ ನೀಡಿದರು. ಈ ಹಿಂದೆ ಚುನಾವಣೆಯಲ್ಲಿ ದಲಿತರ ಕಲ್ಯಾಣ ಮಾಡುತ್ತೇವೆ ಎಂದು ಹೇಳಿ ಖರ್ಗೆ ಅವರನ್ನು ಸಿಎಂ ಮಾಡುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ ಅಧಿಕಾರ ಬಂದ ಮೇಲೆ ಗುಪ್ತ ಮತದಾನದ ಹೆಸರಿನಲ್ಲಿ ಖರ್ಗೆಯವರನ್ನು ಸಿಎಂ ಮಾಡದೇ ಕಾಂಗ್ರೆಸ್ ದಲಿತರಿಗೆ ಮೋಸ ಮಾಡಿದೆ. ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಕಮಲ ಅರಳುತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅವರ ಕುಟುಂಬ ಅರಳುತ್ತೆ ಎಂದು ಟಾಂಗ್ ನೀಡಿದರು.

  • ಪ್ರಧಾನಿ ಮೋದಿಗೆ 3 ಸವಾಲೆಸೆದ ರಾಹುಲ್ ಗಾಂಧಿ!

    ಪ್ರಧಾನಿ ಮೋದಿಗೆ 3 ಸವಾಲೆಸೆದ ರಾಹುಲ್ ಗಾಂಧಿ!

    ಬೀದರ್: ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು 15 ನಿಮಿಷ ಯಾವುದೇ ನೋಟ್ಸ್ ಸಹಾಯವಿಲ್ಲದೇ ಮಾತನಾಡುವಂತೆ ಸವಾಲು ಎಸೆದಿದ್ದ ಪ್ರಧಾನಿ ನರೇಂದ್ರ ಮೋದಿಗೆ ಮೂರು ಪ್ರಶ್ನೆ ಗಳನ್ನು ಕೇಳುವ ಮೂಲಕ ರಾಹುಲ್ ಗಾಂಧಿ ಟಾಂಗ್ ನೀಡಿದ್ದಾರೆ.

    ಜಿಲ್ಲೆಯ ಔರಾದದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ರೈತರ ಬಗ್ಗೆ ಕಳಾಜಿ ಇಲ್ಲ. ಸುಳ್ಳು ಹೇಳುವ ಮೂಲಕ ಜನರನ್ನು ಹೆದರಿಸುವ ಕಾರ್ಯಮಾಡುತ್ತಿದ್ದಾರೆ. ನಾನು ಮೋದಿ ಅವರನ್ನು ಎಂದು ವೈಯಕ್ತಿಕವಾಗಿ ಟೀಕೆ ಮಾಡಿಲ್ಲ. ಆದ್ರೆ ಮೋದಿ ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಇವರಿಗೆ ತಾನು 3 ಪ್ರಶ್ನೆಗಳನ್ನು ಕೇಳುತ್ತೇನೆ ಉತ್ತರಿಸಲಿ ಎಂದು ಸವಾಲು ಎಸೆದರು.

    ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ಅವರು ಭ್ರಷ್ಟಾಚಾರದ ಆರೋಪ ಮಾಡುತ್ತಾರೆ. ಆದರೆ ಅವರು ನೀರವ್ ಮೋದಿಯನ್ನು ದೇಶ ಬಿಟ್ಟು ಹೋಗಲು ಅವಕಾಶ ನೀಡಿದ್ದು ಯಾಕೆ? ಭ್ರಷ್ಟಾಚಾರ ಆರೋಪದಲ್ಲಿ ಜೈಲಿಗೆ ಹೋಗಿ ಬಂದಿದ್ದ ಯರಿಯೂರಪ್ಪ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡಿದ್ದು ಯಾಕೆ? ಭ್ರಷ್ಟಾಚಾರ ಆರೋಪ ಹೊಂದಿರುವ ಅಮಿತ್ ಶಾ ಪುತ್ರನ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಯಾಕೆ? ಈ ನನ್ನ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಹೇಳಿದರು.

    ಬಿಜೆಪಿ ನಾಯಕರು ಆರ್ ಎಸ್‍ಎಸ್ ಸಿದ್ಧಾಂತವನ್ನು ದೇಶದಲ್ಲಿ ಜಾರಿಗೆ ತರಲು ಮುಂದಾಗಿದ್ದಾರೆ. ಬಸವಣ್ಣನವರ ಬಗ್ಗೆ ಮೋದಿ ಅವರು ಮಾತನಾಡುತ್ತಾರೆ. ಆದರೆ ಬಸವಣ್ಣನವರ ನುಡಿದಂತೆ ನಡೆಯಬೇಕು ಎಂಬ ತತ್ವವನ್ನು ಅನುಸರಿಸುವುದಿಲ್ಲ. ಭ್ರಷ್ಟಾಚಾರ ನಡೆಸಿ ಜೈಲು ಸೇರಿದ್ದ ಜನಾರ್ದನ ರೆಡ್ಡಿರನ್ನು ಮತ್ತೆ ವಿಧಾನಸೌದಕ್ಕೆ ತರಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದು ಆರೋಪಿಸಿದರು.

  • ಈ ಸಲ ಕಪ್ ನಮ್ದೆ, ಸಮ್ಮಿಶ್ರ ಸರ್ಕಾರ ಇಲ್ಲ: ಎಚ್‍ಡಿಕೆ

    ಈ ಸಲ ಕಪ್ ನಮ್ದೆ, ಸಮ್ಮಿಶ್ರ ಸರ್ಕಾರ ಇಲ್ಲ: ಎಚ್‍ಡಿಕೆ

    ವಿಜಯಪುರ: ರಾಜ್ಯ ವಿಧಾನಸಭಾ ಸಭೆ ಚುನಾವಣೆಯಲ್ಲಿ ಈ ಬಾರಿ ಅತಂತ್ರ ಸ್ಥಿತಿ ನಿರ್ಮಾಣವಾಗುತ್ತದೆ ಎಂಬ ಮಾಧ್ಯಮ ಸಮೀಕ್ಷೆಗಳನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ತಿರಸ್ಕರಿಸಿದ್ದು, ಈ ಬಾರಿ ಕಪ್ ನಮ್ದೆ ಎಂದು ಹೇಳಿದ್ದಾರೆ.

    ಜಿಲ್ಲೆಯ ಚಡಚಣದಲ್ಲಿ ಜೆಡಿಎಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಎಚ್‍ಡಿಕೆ, ಚುನಾವಣೆಯಲ್ಲಿ ರಾಜ್ಯದ ಜನತೆ ಜೆಡಿಎಸ್ ಗೆ ಸ್ಪಷ್ಟ ಬಹುಮತ ನೀಡಲಿದ್ದು, ಯಾವುದೇ ಕಾರಣಕ್ಕೂ 50/50 ಎನ್ನುವ ಮಾತು ಬರುವುದಿಲ್ಲ ಎಂದರು.

    ಇದೇ ವೇಳೆ ಸಿದ್ದರಾಮಯ್ಯ ಅವರ ಅವಕಾಶವಾದಿ ಹೇಳಿಕೆಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಅವರು ಜಾತಿವಾದಿ, ಕುರುಬ ಜನಾಂಗ ಮತ ಪಡೆಯುವ ಕಾರಣಕ್ಕೆ ಬಾದಾಮಿಗೆ ಅರ್ಜಿ ಹಾಕಿದ್ದಾರೆ. ಇದು ಅವರ ಸಂಕುಚಿತ ಮನೋಭಾವಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಇಂತಹವರಿಂದ ತಾನು ಪಾಠ ಕಲಿಯಬೇಕಿಲ್ಲ ಎಂದು ಕಿಡಿಕಾರಿದರು.

    ರಾಜ್ಯ ದಲ್ಲಿ ಸಿದ್ದರಾಮಯ್ಯ ಅವರು ಮುಸ್ಲಿಂ ಮತ ಪಡೆಯಲು ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಅದ್ದರಿಂದಲೇ ಬಿಜೆಪಿ ಹಾಗೂ ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿದೆ ಎಂಬ ವದಂತಿ ಹಬ್ಬಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಾಡುತ್ತಿರುವುದು ಕೀಳು ಮಟ್ಟದ ರಾಜಕೀಯ, ಜೆಡಿಎಸ್ ಕಾಂಗ್ರೆಸ್ ಪರವೂ ಇಲ್ಲ, ಬಿಜೆಪಿ ಪರವೂ ಇಲ್ಲ. ಜೆಡಿಎಸ್ ಕನ್ನಡಿಗರ ಪರವಿದೆ ಎಂದರು.

    ಕಾವೇರಿ ವಿಚಾರವಾಗಿ ಸದ್ಯ ಯಾವುದೇ ಹೇಳಿಕೆ ನೀಡುವುದಿಲ್ಲ. ಕಾವೇರಿ ವಿವಾದ ಇನ್ನು ಬಗೆ ಹರಿದಿಲ್ಲ. ಅದು ಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಆದರೆ ಈ ವಿಚಾರದಲ್ಲಿ ಕಾಂಗ್ರೆಸ್ ನವರು ಸಾಧನೆ ಮಾಡಿರುವ ರೀತಿ ಹೇಳಿಕೊಳ್ಳುತ್ತಿದ್ದಾರೆ. ಕಾವೇರಿಗಾಗಿ ನಮ್ಮ ಹೋರಾಟ ಮುಂದುವರೆಯುತ್ತದೆ. ಸೂಕ್ತ ಸಂದರ್ಭದಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಂಡು ಹೋರಾಟ ಮಾಡುತ್ತೇವೆ ಎಂದರು.

  • ಮೊಳಕಾಲ್ಮೂರು ಶಾಸಕ ಎಸ್ ತಿಪ್ಪೇಸ್ವಾಮಿಯಿಂದ ಹೊಸ ಬಾಂಬ್!

    ಮೊಳಕಾಲ್ಮೂರು ಶಾಸಕ ಎಸ್ ತಿಪ್ಪೇಸ್ವಾಮಿಯಿಂದ ಹೊಸ ಬಾಂಬ್!

    ಚಿತ್ರದುರ್ಗ: ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಹಾಲಿ ಶಾಸಕ ಎಸ್.ತಿಪ್ಪೇಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಎರಡು ದಿನಗಳ ಹಿಂದೆ ಬಿಜೆಪಿ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಇಂದು ಮೊಳಕಾಲ್ಮೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಶಾಸಕ ತಿಪ್ಪೇಸ್ವಾಮಿ, ಈ ಹಿಂದೆ ಪರಿವರ್ತನಾ ಯಾತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ನನ್ನ ಬಳಿ ಹಣ ಕೇಳಿದ್ದಕ್ಕೆ, 25 ಲಕ್ಷ ರೂ. ನೀಡಿದ್ದೆ. ಮೋದಿ, ಅಮಿತ್ ಶಾ ಸಮಾವೇಶಗಳಿಗಾಗಿ ಇಲ್ಲಿಂದ ನನ್ನ ಖರ್ಚಿನಲ್ಲಿ ಬಸ್‍ಗಳನ್ನು ಕಳುಹಿಸಲಾಗಿತ್ತು. ಬಿಜೆಪಿ ನಾಯಕರೆಲ್ಲಾ ಪಕ್ಷ ಸಂಘಟನೆಗಾಗಿ ನನ್ನಿಂದ 4-5 ಕೋಟಿ ರೂ. ಖರ್ಚು ಮಾಡಿಸಿದ್ದಾರೆ ಅಂತಾ ಗಂಭೀರವಾದ ಆರೋಪವೊಂದನ್ನು ಮಾಡಿದ್ದಾರೆ.

    ನನ್ನಿಂದ ಹಣ ಪಡೆದುಕೊಂಡ ಬಳಿಕ ಕೊನೆ ಗಳಿಗೆಯಲ್ಲಿ ನನಗೆ ಉದ್ದೇಶಪೂರ್ವಕವಾಗಿ ಟಿಕೆಟ್ ತಪ್ಪಿಸಲಾಯಿತು. ದೊಡ್ಡ ಲೀಡರ್ ಎಂದು ಹೇಳಿಕೊಂಡು ಮತ ಕೇಳಲು ಬರುವವರನ್ನು ಎಷ್ಟು ಮನೆಯ ದೀಪ ತೆಗೆದಿದ್ದೀರಿ ಎಂದು ಪ್ರಶ್ನಿಸಿ ಅಂತಾ ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ರು.

  • ISI ನೆರವು ಕೋರಲು ಸಿಎಂ, ಜಮೀರ್ ಸೈಲೆಂಟಾಗಿ ಪಾಕಿಸ್ತಾನಕ್ಕೆ ಹೋಗಿದ್ರಾ?- ಇಲ್ಲಿದೆ ಅಸಲಿಯತ್ತು ಮಾಹಿತಿ

    ISI ನೆರವು ಕೋರಲು ಸಿಎಂ, ಜಮೀರ್ ಸೈಲೆಂಟಾಗಿ ಪಾಕಿಸ್ತಾನಕ್ಕೆ ಹೋಗಿದ್ರಾ?- ಇಲ್ಲಿದೆ ಅಸಲಿಯತ್ತು ಮಾಹಿತಿ

    ಬೆಂಗಳೂರು: ಕರ್ನಾಟಕ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ನಾಯಕರುಗಳು ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿರುತ್ತಾರೆ. ಆದ್ರೆ ಈ ಎಲ್ಲದರ ನಡುವೆ ಕಳೆದ ಎರಡ್ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಫೇಕ್ ನ್ಯೂಸ್ ಗಳು ಹರಿದಾಡುತ್ತಿವೆ.

    ಇತ್ತೀಚೆಗೆ ಏಪ್ರಿಲ್ ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಜಮೀರ್ ಅಹಮದ್ ಪಾಕಿಸ್ತಾನಕ್ಕೆ ಸೈಲೆಂಟಾಗಿ ಒನ್ ಡೇ ಟ್ರಿಪ್ ಹೋಗಿದ್ರಂತೆ. ಎಲೆಕ್ಷನ್‍ನಲ್ಲಿ ಕಾಂಗ್ರೆಸ್ ಗೆಲ್ಲಲು ಐಎಸ್‍ಐ ನೆರವು ಕೂಡ ಕೋರಿದ್ರಂತೆ. ಇದಕ್ಕೆ ಪೂರಕವಾಗಿ ಮುಂಬೈನಿಂದ ಕರಾಚಿಗೆ ಹೋಗಿ ಬಂದ್ರಂತೆ. ಈ ವಿಚಾರದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ವಿಎಸ್‍ಆರ್ ಏವಿಯೇಷನ್‍ನ ನಕಲಿ ಲೆಟರ್ ಕೂಡ ಹರಿಬಿಡಲಾಗಿದೆ. ಕೆಲವರು ಇದನ್ನು ನಿಜ ಅಂತಾ ತಿಳಿದು ವಾಟ್ಸಪ್, ಫೇಸ್‍ಬುಕ್‍ಗಳಲ್ಲಿ ಫೋಟೋಗಳನ್ನು ಅಪ್ಲೋಡ್ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ಕಿಡಿಕಾರಿದುಂಟು.

    ನಕಲಿ ಲೆಟರ್ ಹರಿದಾಡುತ್ತಲೇ ವಿಎಸ್‍ಆರ್ ಏವಿಯೇಷನ್ ಕಂಪೆನಿ ಇದೆಲ್ಲಾ ಫೇಕ್ ಅಂತಾ ಸ್ಪಷ್ಟೀಕರಣ ನೀಡಿದೆ. ಸಿಎಂ ಕಚೇರಿ ಕೂಡ ಇದೆಲ್ಲಾ ಸುಳ್ಳು, ಬಿಜೆಪಿಯ ಅಪಪ್ರಚಾರ ಎಂದು ಕಾಂಗ್ರೆಸ್ ಆರೋಪಿಸಿದೆ.

    https://twitter.com/brijeshkalappa/status/990876107653177345

    ಆ ಫೇಕ್ ಲೆಟರ್  ನಲ್ಲಿ ಏನಿದೆ?
    * ವಿಎಸ್‍ಆರ್ ಏವಿಯೇಷನ್ ಅಕಾಡೆಮಿಯ ನಕಲಿ ಲೆಟರ್ ಹೆಡ್ ಸೃಷ್ಟಿ
    * ಏಪ್ರಿಲ್ 13ರಂದು ಸಂಜೆ 5ಕ್ಕೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಕರಾಚಿಗೆ ಸಿಎಂ ಮತ್ತು ಜಮೀರ್
    * ಸಿಎಂ ಮತ್ತು ಜಮೀರ್ ಹೊತ್ತ ವಿಮಾನ ಕರೆಕ್ಟಾಗಿ 6.15ಕ್ಕೆ ಕರಾಚಿಯಲ್ಲಿ ಲ್ಯಾಂಡ್
    * ಏಪ್ರಿಲ್ 13ರ ಸಂಜೆ 7ಕ್ಕೆ ಹೊರಟು ರಾತ್ರಿ 9.10ಕ್ಕೆ ದೆಹಲಿಗೆ ಸಿದ್ದರಾಮಯ್ಯ ಮತ್ತು ಜಮೀರ್ ವಾಪಸ್
    * ದೆಹಲಿಯಿಂದ ರಾತ್ರಿ 11.45ಕ್ಕೆ ಹೊರಟು ಏ.14ರ ನಸುಕಿನಜಾವ 2 ಗಂಟೆಗೆ ಬೆಂಗಳೂರಿಗೆ ವಾಪಸ್
    * ಮುಕ್ಕಾಲು ಗಂಟೆ ಅವಧಿಯಲ್ಲಿ ಐಎಸ್‍ಐ ನಾಯಕರ ಜೊತೆ ಸಿಎಂ ಮತ್ತು ಜಮೀರ್ ಸಭೆ
    * ಹೇಗಾದ್ರೂ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ವಿನ್ ಮಾಡಿಸಿಕೊಡಿ ಅಂತಾ ಐಎಸ್‍ಐಗೆ ಮನವಿ
    * ಕೋಟಿಗಟ್ಟಲೆ ದುಡ್ಡು ಕೊಟ್ಟು, ಎಲೆಕ್ಷನ್‍ನಲ್ಲಿ ಹರಿಸಲು ನಕಲಿ ನೋಟು ತರ್ತಾರಂತೆ ಸಿಎಂ

    ಏಪ್ರಿಲ್ 13ರಂದು ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿದ್ರು. ಏಪ್ರಿಲ್ 14ರ ನಸುಕಿನ ಜಾವ 2 ಗಂಟೆಗೆ ಬೆಂಗಳೂರಿಗೆ ಹಿಂತಿರುಗಿದ್ದರು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

  • ಜಾತಿಗಣತಿಯ ಪೂರ್ಣ ಮಾಹಿತಿ ಪಡೆದೇ ಬದಾಮಿಯಲ್ಲಿ ಸಿಎಂ ಸ್ಪರ್ಧೆ- ಹಿರಿಯ ನಾಯಕರ ಬಳಿಯಿದೆ ಪಕ್ಕಾ ಲೆಕ್ಕ!

    ಜಾತಿಗಣತಿಯ ಪೂರ್ಣ ಮಾಹಿತಿ ಪಡೆದೇ ಬದಾಮಿಯಲ್ಲಿ ಸಿಎಂ ಸ್ಪರ್ಧೆ- ಹಿರಿಯ ನಾಯಕರ ಬಳಿಯಿದೆ ಪಕ್ಕಾ ಲೆಕ್ಕ!

    ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಬಾಗಲಕೋಟೆ ಜಿಲ್ಲೆಯ ಬದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಇತ್ತ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದಲೂ ಸಿಎಂ ಕಣಕ್ಕಿಳಿದಿದ್ದಾರೆ.

    ಸಿಎಂ ಬದಾಮಿಯಲ್ಲಿ ಕಣಕ್ಕಿಳಿಯಲು ಜಾತಿ ಲೆಕ್ಕಾಚಾರವೇ ಮೂಲ ಕಾರಣ ಎನ್ನಲಾಗಿದೆ. ಆದ್ರೆ ಜಾತಿ ಸಮೀಕ್ಷೆ ನಡೆಸಿದ ಕಾಂಗ್ರೆಸ್ ಸರ್ಕಾರ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿಲ್ಲ. ಬದಾಮಿ ಕ್ಷೇತ್ರದ ಹಿರಿಯ ನಾಯಕರಲ್ಲಿ ಜಾತಿ ಲೆಕ್ಕಾಚಾರದ ಪೂರ್ಣ ಮಾಹಿತಿ ಲಭ್ಯವಿದೆ ಅಂತಾ ಹೇಳಲಾಗ್ತಿದ್ದು, ಈ ಅಂಕಿ ಅಂಶಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಹೊಸ ಜಾತಿ ಲೆಕ್ಕಾಚಾರ ಈ ಕೆಳಗಿನಂತಿದೆ ಎಂದು ಹೇಳಲಾಗ್ತಿದೆ:
    ಕುರುಬ-49,600, ಲಿಂಗಾಯತ-20,299, ಎಸ್‍ಸಿ-29,900, ವಾಲ್ಮೀಕಿ-19,500, ಮುಸ್ಲಿಂ-19,000, ದೇವಾಂಗ(ನೇಕಾರ)-15,500, ಗಾಣಿಗ-10,500, ಕ್ಷತ್ರೀಯ ಮರಾಠ-5,700, ವಿಶ್ವಕರ್ಮ-4,600, ರೆಡ್ಡಿ-3,800, ಉಪ್ಪಾರ-2,700, ಕಬ್ಬಲಿಗ-2,650, ಗೊಲ್ಲ-2,250, ಕ್ರಿಶ್ಚಿಯನ್-1450 ಮತ್ತು ಇತರೆ-27,000.

    ಕುರುಬ ಸಮುದಾಯದ ಅತಿ ಹೆಚ್ಚು ಮತಗಳನ್ನು ಹೊಂದಿರುವ ಬದಾಮಿ ಕ್ಷೇತ್ರದಲ್ಲಿ ಸರಳವಾಗಿ ಜಯ ಸಾಧಿಸಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರ. ಇದೇ ಆಧಾರದ ಮೇಲೆಯೇ ಬಿಜೆಪಿ ಸಹ ದಲಿತ ನಾಯಕ, ಸಂಸದ ಶ್ರೀರಾಮುಲು ಅವರನ್ನು ಕಣಕ್ಕಿಳಿಸಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಎಸ್‍ಸಿ, ಲಿಂಗಾಯತ ಮತ್ತು ವಾಲ್ಮೀಕಿ ಸಮುದಾಯದ ಮತಗಳ ಕ್ರೂಡಿಕರಣವಾದ್ರೆ ಶ್ರೀರಾಮುಲು ಸರಳ ಬಹುಮತದಿಂದ ಗೆಲುವು ಸಾಧಿಸ್ತಾರೆ ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ.

    ಈ ಹಿಂದೆ ಹೇಳಲಾಗ್ತಿದ್ದ 2011ರ ಜನಗಣತಿಯ ಆಧಾರದಲ್ಲಿ ದಾಖಲಾಗಿರುವ ಮಾಹಿತಿ ಹೀಗಿತ್ತು.

    ಮತದಾರರ ಸಂಖ್ಯೆ ಎಷ್ಟಿದೆ?
    ಕ್ಷೇತ್ರದ ಒಟ್ಟು ಮತದಾರರು- 2,12,184
    ಪುರುಷ ಮತದಾರರು -1,07,074
    ಮಹಿಳಾ ಮತದಾರರು – 1,05,110

    ಬದಾಮಿ ಕ್ಷೇತ್ರದ ಜಾತಿವಾರು ಲೆಕ್ಕಾಚಾರ
    ಕುರುಬ – 46 ಸಾವಿರ
    ಗಾಣಿಗ – 26 ಸಾವಿರ
    ಲಿಂಗಾಯತ – 32 ಸಾವಿರ (ಪಂಚಮಸಾಲಿ. ಬಣಜಿಗ)
    ನೇಕಾರ – 17 ಸಾವಿರ
    ಪ. ಜಾತಿ ಪಂಗಡ – 25 ಸಾವಿರ
    ಅಲ್ಪ ಸಂಖ್ಯಾತರು – 12 ಸಾವಿರ
    ಮರಾಠಾ ಕ್ಷತ್ರೀಯ – 9 ಸಾವಿರ
    ವಾಲ್ಮೀಕಿ – 13 ಸಾವಿರ
    ಬಂಜಾರ – 6 ಸಾವಿರ
    ರೆಡ್ಡಿ – 10 ಸಾವಿರ
    ಇತರರು – 16 ಸಾವಿರ

    2013ರ ಫಲಿತಾಂಶ ಏನಿತ್ತು?
    2013ರ ಚುನಾವಣೆಯಲ್ಲಿ ಬಿಬಿ ಚಿಮ್ಮನಕಟ್ಟಿ 15,113 ಮತಗಳ ಅಂತರದಿಂದ ಜಯಗಳಿಸಿದ್ದರು. ಚಿಮ್ಮನಕಟ್ಟಿ 57,446(41.3%) ಮತಗಳನ್ನು ಪಡೆದಿದ್ದರೆ ಜೆಡಿಎಸ್ ನ ಮಹಾಂತೇಶ್ ಗುರುಪಾದಪ್ಪ ಅವರು 42,333(30.4%) ಮತಗಳನ್ನು ಪಡೆದಿದ್ದರು. ಕಲ್ಲಪ್ಪ ಪಟ್ಟಣಶೆಟ್ಟಿ ಅವರು 30,310(21.8%) ಮತಗಳನ್ನು ಗಳಿಸಿದ್ದರು.

  • ಎಲೆಕ್ಷನ್ ಎಫೆಕ್ಟ್ – ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಆಫರ್

    ಎಲೆಕ್ಷನ್ ಎಫೆಕ್ಟ್ – ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಆಫರ್

    ಬೆಂಗಳೂರು: ಪ್ರತಿ ವರ್ಷ ವೋಟ್ ಮಾಡುವವರ ಸಂಖ್ಯೆಯನ್ನ ಅಧಿಕ ಮಾಡಲು ಚುನಾವಣಾ ಆಯೋಗ ನಾನಾ ರೀತಿಯ ಕಸರತ್ತು ಮಾಡುತ್ತಾ ಇದೆ. ಆದರೆ ಸಂಖ್ಯೆ ಮಾತ್ರ ವೃದ್ದಿಸುತ್ತಿಲ್ಲ. ಅದಕ್ಕಾಗಿ ಇಲ್ಲೊಬ್ಬರು ಸಮಾಜ ಸೇವಕ ಜೆರಾಕ್ಸ್ ಅಂಗಡಿ ಇಟ್ಟು ಮೊದಲ ಬಾರಿ ವೋಟ್ ಮಾಡುವ ಕಾಲೇಜು ವಿಧ್ಯಾರ್ಥಿಗಳಿಗೆ ವಿಶೇಷ ಆಫರ್ ನೀಡಿದ್ದಾರೆ.

    ಈ ಬಾರಿಯ ಚುನಾವಾಣೆ ನಾನಾ ಕಾರಣಗಳಿಗೆ ತೀವ್ರ ಕುತೂಹಲ ಕೆರಳಿಸಿದೆ. ಹಾಗಾಗಿ ಪ್ರತಿಯೊಬ್ಬರು ವೋಟ್ ಮಾಡಿ ನಮಗೆ ಸೂಕ್ತವೆನಿಸುವ ಜನ ಪ್ರತಿನಿಧಿಯನ್ನು ಆಯ್ಕೆ ಮಾಡಿ ಅನ್ನೋ ಘೋಷಣೆಗಳು ಎಲ್ಲೆಡೆ ಕೇಳಿ ಬರುತ್ತಿದೆ. ಈ ಘೋಷಣೆಗಳ ಮಧ್ಯೆ ವಿಶ್ವೇಶ್ವರ ಅವರು ತುಂಬ ವಿಭಿನ್ನವಾಗಿಯೇ ಚುನಾವಣೆ ಪ್ರಚಾರ ಮಾಡಿದ್ದಾರೆ.

    ನಾನು ವೋಟ್ ಮಾಡಿ ಅಂತ ಜನಜಾಗೃತಿ ಮೂಡಿಸುವ ಜೊತೆಗೆ ಮೊದಲ ಬಾರಿಗೆ ವೋಟ್ ಮಾಡುವ ಕಾಲೇಜು ವಿದ್ಯಾರ್ಥಿಗಳಿಗೆ ಕೇವಲ 25 ಪೈಸೆಗೆ ಜೆರಾಕ್ಸ್ ಮಾಡಿಕೊಡುವುದಾಗಿ ಘೋಷಣೆ ಮಾಡಿದ್ದೇನೆ. ಅಷ್ಟೇ ಅಲ್ಲದೇ ತನ್ನ ಅಂಗಡಿ ಮುಂದೆ ದೊಡ್ಡ ಬೋರ್ಡ್ ಹಾಕಿದ್ದು, ನನ್ನ ಶಾಪಿಗೆ ಬರುವ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಸಹ ಮಾಡುತ್ತಿದ್ದೇನೆ ಎಂದು ಸಮಾಜ ಸೇವಕ ವಿಶ್ವೇಶ್ವರ ಹೇಳಿದ್ದಾರೆ. ಇದನ್ನೂ ಓದಿ: ಮತ ಹಾಕಿದ್ರೆ 5 ವರ್ಷ ಡಿಸ್ಕೌಂಟ್ – ಗ್ರಾಹಕರಿಗೆ ಮೆಡಿಕಲ್ ಶಾಪ್ ಓನರ್ ಆಫರ್

    ಈ ಆಫರ್ 1 ತಿಂಗಳ ಕಾಲ ಜಾರಿಯಲ್ಲಿರಲಿದ್ದು, ವೋಟ್ ಹಾಕಿದವರು ಕಾಲೇಜು ಐಡಿ ಮತ್ತು ಮತದಾನದ ಗುರುತಿನೊಂದಿಗೆ ಅಂಗಡಿಗೆ ಬಂದರೆ ಸಾಕು ಈ ಆಫರ್ ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೇ ಪ್ರಾಜೆಕ್ಟ್ ವರ್ಕ್ ಮಾಡುವ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಇಂಟರ್ ನೆಟ್ ಸೌಲಭ್ಯವನ್ನು ಸಹ ನೀಡಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಹೇಳಿದ್ದಾರೆ.