Tag: karnataka elections

  • ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ನಿಜವೋ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಅಷ್ಟೇ ಸತ್ಯ: ಸಿಎಂ

    ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ನಿಜವೋ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಅಷ್ಟೇ ಸತ್ಯ: ಸಿಎಂ

    ಬೆಳಗಾವಿ: ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ನಿಜವೋ, ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಅಷ್ಟೇ ಸತ್ಯ ಅಂತಾ ಸಿಎಂ ಸಿದ್ದರಾಮಯ್ಯ ಹುಕ್ಕೇರಿಯಲ್ಲಿ ನಡೆದ ಸಮಾವೇಶದಲ್ಲಿ ಹೇಳಿದ್ದಾರೆ.

    ಹುಕ್ಕೇರಿಯ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಎ.ಬಿ.ಪಾಟೀಲ್ ಅವರನ್ನು ಬೆಂಬಲಿಸಬೇಕು. ಹಾಲಿ ಶಾಸಕರಾಗಿರುವ ಉಮೇಶ್ ಕತ್ತಿ ಅವ್ರಿಗೆ ಬಡವರ ಕಾಳಜಿ ಇಲ್ಲ. ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಹಲವು ಕಾರ್ಯಕ್ರಮಗಳನ್ನು ಮಾಡಿದೆ. ಇಂತಹ ಜನಪರ ಕಾರ್ಯಕ್ರಮಗಳು ಮುಂದುವರೆಯ ಬೇಕಾದ್ರೆ, ಕಾಂಗ್ರೆಸ್‍ಗೆ ಬೆಂಬಲ ನೀಡಿ ಅಂತಾ ಜನರಲ್ಲಿ ಸಿಎಂ ಮನವಿ ಮಾಡಿಕೊಂಡರು. ಇದನ್ನೂ ಓದಿ: ಸೂರ್ಯ, ಚಂದ್ರ ಇರುವರೆಗೂ ಗುಂಡ್ಲುಪೇಟೆಯಲ್ಲಿ ಕುಟುಂಬ ರಾಜಕಾರಣ ಇರುತ್ತೆ: ಗೀತಾ ಮಹದೇವ ಪ್ರಸಾದ್

    ನಿಪ್ಪಾಣಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ನನಗೆ ಮರಾಠಿ ಭಾಷೆ ಬರಲ್ಲ ಕ್ಷಮಿಸಬೇಕು ಎಂದು ಕೇಳಿದ್ರು. ಯಾವಗಲೂ ನಾನು ಕನ್ನಡಿಗ ಅಂತಾ ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದ ಸಿಎಂ ವೋಟ್ ಗಾಗಿ ಮರಾಠಿಗರಲ್ಲಿ ಕ್ಷಮೆ ಕೇಳಿದ್ದಾರೆ ಅಂತಾ ವಿರೋಧ ಪಕ್ಷದ ನಾಯಕರು ಟೀಕಿಸುತ್ತಿದ್ದಾರೆ.

  • ಮೋದಿಯವರೇ ಗಂಡಸ್ತನ ಇದ್ದರೆ ಸಿದ್ದರಾಮಯ್ಯರ ಭ್ರಷ್ಟಾಚಾರ ಆರೋಪ ಸಾಬೀತುಪಡಿಸಿ: ಸಿ.ಎಂ.ಇಬ್ರಾಹಿಂ

    ಮೋದಿಯವರೇ ಗಂಡಸ್ತನ ಇದ್ದರೆ ಸಿದ್ದರಾಮಯ್ಯರ ಭ್ರಷ್ಟಾಚಾರ ಆರೋಪ ಸಾಬೀತುಪಡಿಸಿ: ಸಿ.ಎಂ.ಇಬ್ರಾಹಿಂ

    ಬೆಳಗಾವಿ: ಕರ್ನಾಟಕದಲ್ಲಿ ಬಿಜೆಪಿ ನಾಯಕರು ಭ್ರಷ್ಟ ಸರ್ಕಾರ, ಭ್ರಷ್ಟ ಸರ್ಕಾರ ಅಂತ ಬರೀ ಭಾಷಣ ಮಾಡ್ತಾರೆ. ಚುನಾವಣೆಗೆ ಇನ್ನೂ 15 ದಿನಗಳ ಕಾಲವಿದ್ದು, ಮೋದಿಯವರೇ ಗಂಡಸ್ತನ ಇದ್ದರೆ ಸಿಎಂ ಸಿದ್ದರಾಮಯ್ಯರ ವಿರುದ್ಧ ಮಾಡುವ ಒಂದಾದ್ರೂ ಭ್ರಷ್ಟಾಚಾರದ ಆರೋಪವನ್ನು ಸಾಬೀತು ಮಾಡಿ ತೋರಿಸಿ ಅಂತಾ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಬಹಿರಂಗ ಸವಾಲು ಹಾಕಿದ್ದಾರೆ.

    ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಬೇಡಿಕಿಹಾಳ ಗ್ರಾಮದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಒಂದು ವೇಳೆ ಮೋದಿ ಅವರು ಸಿದ್ದರಾಮಯ್ಯರ ಭ್ರಷ್ಟಾಚಾರದ ಆರೋಪವನ್ನು ಸಾಬೀತು ಮಾಡಿದ್ದಲ್ಲಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಅಂತಾ ಶಪಥ ಮಾಡಿದ್ರು.

    ಹತ್ತು ಪೆರ್ಸೆಂಟ್ ಆರೋಪ ನಿಮಗೆ ಶೋಭೆ ತರಲ್ಲ. ಪೆಟ್ರೋಲ್ ಬೆಲೆ ಗಗನಕ್ಕೆ ಏರಿದ್ದು, 400 ರೂಪಾಯಿ ಇದ್ದ ಸಿಲಿಂಡರ್ ಬೆಲೆ 800 ರೂ. ಆಗಿದೆ. ಬದಾಮಿಯಲ್ಲಿ ಸಿಎಂ ಗೆಲುವು ನಿಶ್ಚಿತವಾಗಿದೆ. 5 ವರ್ಷ ಕೂಲಿ ಮಾಡಿದ್ದೇವೆ ನಮಗೆ ಆಶೀರ್ವಾದ ಮಾಡಿ, ಮುಂದೆ ರಾಹುಲ್ ಗಾಂಧಿ ಪ್ರಧಾನಿ ಆಗುವುದು ಸಹ ನಿಶ್ಚಿತ. ಮೋದಿ ಅವರ ಮನೆಯಲ್ಲಿ ಯಾರಾದರೂ ದೇಶಕ್ಕಾಗಿ ಸತ್ತಿದ್ದಾರಾ? ಆದರೆ ಗಾಂಧೀ ಕುಟುಂಬದವರು ದೇಶಕ್ಕಾಗಿ ಸಾವನ್ನಪ್ಪಿದ್ದಾರೆ. ಬಿಜೆಪಿ ಅವರು ಯಾರಾದರೂ ದೇಶಕ್ಕಾಗಿ ಸಾವನ್ನಪ್ಪಿದ್ದಾರಾ ಎಂದು ಪ್ರಶ್ನಿಸಿದ್ರು.

  • ಕೊನೆಗೂ ಪ್ರಚಾರಕ್ಕಿಳಿದ ಕುರುಕ್ಷೇತ್ರದ ಅಭಿಮನ್ಯು- ತಂದೆಯ ಹಾದಿಯಲ್ಲಿಯೇ ಹೆಜ್ಜೆ ಇಡುತ್ತೇನೆ ಅಂದ್ರು ನಿಖಿಲ್

    ಕೊನೆಗೂ ಪ್ರಚಾರಕ್ಕಿಳಿದ ಕುರುಕ್ಷೇತ್ರದ ಅಭಿಮನ್ಯು- ತಂದೆಯ ಹಾದಿಯಲ್ಲಿಯೇ ಹೆಜ್ಜೆ ಇಡುತ್ತೇನೆ ಅಂದ್ರು ನಿಖಿಲ್

    ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನ ಸ್ಟಾರ್ ಕ್ಯಾಂಪೇನರ್ ಹಾಗೂ ಎಚ್.ಡಿ ಕುಮಾರಸ್ವಾಮಿ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ತಮ್ಮ ತಂದೆ ಪರ ಮತಯಾಚನೆ ನಡೆಸಿದ್ದಾರೆ.

    ರಾಮನಗರ ತಾಲೂಕಿನ ಮಾಯಗಾನಹಳ್ಳಿಯಿಂದ ಪ್ರಚಾರ ಆರಂಭಿಸಿರುವ ನಿಖಿಲ್, ತಮ್ಮ ತಂದೆಯ ಪರ ಮತಯಾಚನೆ ಮಾಡಿದ್ದಾರೆ. ಪ್ರತಿ ಗ್ರಾಮಗಳಿಗೆ ತೆರಳಿದ ನಿಖಿಲ್‍ಗೆ ಅಭೂತಪೂರ್ವ ಸ್ವಾಗತ ಸಹ ಸಿಕ್ಕಿದ್ದು, ಅವರಿಗೆ ಆರತಿ ಎತ್ತಿ ಮಹಿಳೆಯರು ಸ್ವಾಗತ ಮಾಡಿದ್ದಾರೆ.

    ಇದೇ ವೇಳೆ ಮಾತನಾಡಿದ ಅವರು, ಸಮಯದ ಅಭಾವದಿಂದ ತಮ್ಮ ತಂದೆಯವರು ಬರಲಾಗುತ್ತಿಲ್ಲ. ನಾನು ಕೂಡಾ ಸಾಮಾನ್ಯ ಕಾರ್ಯಕರ್ತನಂತೆ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕೂಡ ತಂದೆಯವರ ಪರ ಪ್ರಚಾರ ನಡೆಸಿ ಮತಯಾಚನೆ ನಡೆಸುತ್ತೇನೆ. ಎರಡೂ ಕ್ಷೇತ್ರಗಳಲ್ಲಿ ತಂದೆಯವರು ಗೆಲುವು ಸಾಧಿಸಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿಯವರು ತಿಳಿಸಿದ್ದಾರೆ.

    ನಮ್ಮದು ರಾಜಕೀಯ ಕುಟುಂಬ, ರಾಜಕೀಯ ವಾತಾವರಣದಲ್ಲೇ ಬೆಳೆದವನು. ನನಗೆ ನಮ್ಮ ತಂದೆಯೇ ಮೊದಲ ಸ್ಪೂರ್ತಿಯಾಗಿದ್ದು, ಅವರ ಹಾದಿಯಲ್ಲಿಯೇ ನಡೆಯಲಿದ್ದೇನೆ. ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಆಲೋಚನೆ ಇಲ್ಲವೆಂದು ತಿಳಿಸಿದ್ದಾರೆ.

  • ರಕ್ತ ನಿಧಿಗಳಿಗೂ ತಟ್ಟಿದೆ ವಿಧಾನಸಭಾ ಚುನಾವಣೆಯ ಎಫೆಕ್ಟ್

    ರಕ್ತ ನಿಧಿಗಳಿಗೂ ತಟ್ಟಿದೆ ವಿಧಾನಸಭಾ ಚುನಾವಣೆಯ ಎಫೆಕ್ಟ್

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಎಲ್ಲಾ ಕಡೆ ಅದರ ಬಿಸಿ ತಟ್ಟಿದೆ. ಈಗ ಈ ಚುನಾವಣೆಯ ಪರಿಣಾಮ ರಕ್ತ ನಿಧಿಗಳಿಗೂ ತಟ್ಟಿದೆ.

    ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಪರಿಣಾಮದಿಂದಾಗಿ ರಕ್ತದ ಕೊರತೆ ಉಂಟಾಗಿದ್ದು, ರಾಜ್ಯದಲ್ಲಿ ರಕ್ತ ನಿಧಿಗಳಲ್ಲಿ ರಕ್ತವೇ ಸಿಗುತ್ತಿಲ್ಲ. ಇದರಿಂದ ರಾಜ್ಯಾದ್ಯಂತ ಶೇಕಡಾ 80% ಜನ ರಕ್ತದ ಸಿಗದೇ ವಾಪಸ್ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಚುನಾವಣೆಯಿಂದ ರಾಜಕೀಯ ನಾಯಕರು, ಗಣ್ಯರು, ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ ಗಣ್ಯರು ತಮ್ಮ ಹುಟ್ಟುಹಬ್ಬದ ಹೆಸರಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡುತ್ತಿದ್ದರು. ಈಗ ಈ ನೀತಿ ಸಂಹಿತೆಯಿಂದ ಗಣ್ಯರ ಹುಟ್ಟು ಹಬ್ಬಕ್ಕೂ ತಡೆಬಿದ್ದಿದ್ದು, ರಕ್ತದಾನ ಶಿಬಿರ ಆಯೋಜನೆಗೆ ನೀತಿ ಸಂಹಿತೆ ಅಡ್ಡಿ ಪಡಿಸಿದೆ. ಇದರಿಂದ ರೋಗಿಗಳು ರಕ್ತ ಸಿಗದೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಇನ್ನು ಸಿನಿಮಾ ನಟ-ನಟಿಯರು ಕೂಡ ಚುನಾವಣಾ ಪ್ರಚಾರಕ್ಕಾಗಿ ತೊಡಗಿದ್ದಾರೆ. ಅಷ್ಟೇ ಅಲ್ಲದೇ ಸಂಘ ಸಂಸ್ಥೆಗಳು ಹಾಗೂ ಕಾರ್ಯಕರ್ತರು ಕೂಡ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಆದ್ದರಿಂದ ರಕ್ತದಾನ ಶಿಬಿರ ಆಯೋಜನೆಯಾಗುತ್ತಿಲ್ಲ. ರಾಷ್ಟ್ರೋತ್ಥಾನ ರಕ್ತ ನಿಧಿಯಲ್ಲಿ ತಿಂಗಳಿಗೆ ಸರಾಸರಿ 7 ಸಾವಿರಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು. ಆದರೆ ಏಪ್ರಿಲ್‍ನಲ್ಲಿ ಕೇವಲ 2 ಸಾವಿರ ಯೂನಿಟ್ ರಕ್ತ ಸಂಗ್ರಹವಾಗಿದೆ.

  • ಬಿಜೆಪಿಯವರದ್ದು ಸಾವಿನ ರಾಜಕಾರಣ- ಟ್ವಿಟ್ಟರ್ ನಲ್ಲಿ ಸಿಎಂ ಕೆಂಡಾಮಂಡಲ

    ಬಿಜೆಪಿಯವರದ್ದು ಸಾವಿನ ರಾಜಕಾರಣ- ಟ್ವಿಟ್ಟರ್ ನಲ್ಲಿ ಸಿಎಂ ಕೆಂಡಾಮಂಡಲ

    ಬೆಂಗಳೂರು: ಬಿಜೆಪಿ ನಾಯಕರಿಗೆ ಜನ ನೆಮ್ಮದಿಯಿಂದ ಬದುಕುವುದು ಬೇಕಿಲ್ಲ. ಅವರಿಗೆ ಜನ ಹೊಡೆಯಬೇಕು, ಕಡಿಯಬೇಕು, ಬೆಂಕಿ ಇಡಬೇಕು, ಅಮಾಯಕರು ಸಾಯುವ ಬೆಂಕಿಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಕು. ಇದು ಸಾವಿನ ರಾಜಕಾರಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ, ಜಾತ್ಯಾತೀತರು ನಮ್ಮಲ್ಲಿ ಬಹುಸಂಖ್ಯೆಯಲ್ಲಿದ್ದಾರೆ. ಕೋಮುವಾದಿಗಳ ಸಂಖ್ಯೆ ಸಣ್ಣದು. ಕೋಮುವಾದದ ಹುಟ್ಟಡಗಿಸಬೇಕಾದರೆ ಜಾತ್ಯಾತೀತವಾದಿಗಳು ಸಂಘಟಿತರಾಗಿ ದನಿ ಎತ್ತಬೇಕು. ಒಡೆಯುವ ಪ್ರಯತ್ನ ನಡೆದಾಗ ಕಟ್ಟುವ ಕೈಗಳೆಲ್ಲ ಒಂದಾಗಬೇಕು. ಮನುಷ್ಯಪರವಾದ ಸಮಾಜವನ್ನು ಕಟ್ಟಲು ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.

    ಕಳೆದ ಲೋಕಸಭಾ ಚುನಾವಣೆಯಲ್ಲಿ ಕರಾವಳಿಯ ಮೂರು ಕ್ಷೇತ್ರಗಳಲ್ಲಿ ಸಂವಿಧಾನ ವಿರೋಧಿಗಳು ಮಾತ್ರವಲ್ಲ, ಮನುಷ್ಯ ವಿರೋಧಿಯಾಗಿರುವ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ ಜನ ತಪ್ಪು ಮಾಡಿಬಿಟ್ಟರು. ಈ ಬಾರಿ ಮೈಮರೆತು ತಪ್ಪುಮಾಡಬೇಡಿ. ಬಿಜೆಪಿನಾಯಕರಿಗೆ ಜನ ನೆಮ್ಮದಿಯಿಂದ ಬದುಕುವುದು ಬೇಕಿಲ್ಲ. ಅವರಿಗೆ ಜನ ಹೊಡೆಯಬೇಕು, ಕಡಿಯಬೇಕು, ಬೆಂಕಿ ಇಡಬೇಕು, ಅಮಾಯಕರು ಸಾಯುವ ಬೆಂಕಿಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಕು, ಇದು ಸಾವಿನ ರಾಜಕಾರಣ  ಅಂತಾ ಟಾಂಗ್ ಕೊಟ್ಟಿದ್ದಾರೆ.

    ದಕ್ಷಿಣ ಕನ್ನಡದ ಏಳು ಕಾಂಗ್ರೆಸ್ ಶಾಸಕರಲ್ಲಿ ಇಬ್ಬರು ಮುಸ್ಲಿಮರು, ಒಬ್ಬರು ಕ್ರಿಶ್ಚಿಯನ್ ಮತ್ತು ಒಬ್ಬರು ಜೈನ, ನಾಲ್ವರೂ ಅಲ್ಪಸಂಖ್ಯಾತ ಸಮುದಾಯದವರು. ಬಹುಸಂಖ್ಯಾತ ಹಿಂದೂಗಳು ಕೋಮುವಾದಿಗಳಾಗಿದ್ದರೆ ಇದು ಸಾಧ್ಯವಿತ್ತೇ? ಎಂದು ಪ್ರಶ್ನಿಸಿದ್ದಾರೆ. `ಕರಾವಳಿಯಲ್ಲಿ ಉಗ್ರಗಾಮಿಗಳಿದ್ದಾರೆ’ `ಜೆಹಾದಿಗಳಿದ್ದಾರೆ’ ಎಂದು ಬಿಜೆಪಿ ನಾಯಕರು ತಮ್ಮದೇ ಊರಿನ, ರಾಜ್ಯದ ಮಾನ ಕಳೆಯುತ್ತಿದ್ದಾರೆ. ಇದು ಊರಿಗೆ, ಜನತೆಗೆ ಮಾಡುವ ಅವಮಾನ. ಜನ ಸೌಹಾರ್ದಪ್ರಿಯರು ಜಾತ್ಯತೀತರು ಮತ್ತು ದೇಶಪ್ರೇಮಿಗಳು. ಇಲ್ಲಿ ಇಂದು ಕಾಂಗ್ರೆಸ್, ಮುಂದೆಯೂ ಕಾಂಗ್ರೆಸ್ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

    ಕಳೆದ ಚುನಾವಣಾ ಪ್ರಚಾರದ ಕಾಲದಲ್ಲಿ ನರೇಂದ್ರ ಮೋದಿಯವರೇ ಕರಾವಳಿ ಭಾಗಕ್ಕೆ ಬಂದು ಕೋಮುಭಾವನೆಯ ಬೆಂಕಿ ಉಗುಳುವ ಭಾಷಣ ಮಾಡಿ ಹೋಗಿದ್ದರು. ಆದರೆ ಮೂರೂ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷ ಗೆದ್ದಿರುವುದು ಕೇವಲ ನಾಲ್ಕು ಸ್ಥಾನ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯ 19 ಕ್ಷೇತ್ರಗಳಲ್ಲಿ 13 ರಲ್ಲಿ ಕಾಂಗ್ರೆಸ್ ಗೆದ್ದಿದೆ. ದಕ್ಷಿಣಕನ್ನಡದಲ್ಲಿ 7(8), ಉಡುಪಿಯಲ್ಲಿ 3(5) ಮತ್ತು ಉತ್ತರಕನ್ನಡದಲ್ಲಿ 3(6). ಉ.ಕನ್ನಡದ ಇಬ್ಬರು ಪಕ್ಷೇತರ ಶಾಸಕರು ಈಗ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಕರಾವಳಿ ಜಾತ್ಯಾತೀತರ ನೆಲೆ. ಮತ್ತೊಮ್ಮೆ ಕಾಂಗ್ರೆಸ್ ಎಂದಿದ್ದಾರೆ.

  • ಕಾಲಿನ ಮೂಲಕವೇ ವೋಟ್ ಮಾಡೋ `ಪಬ್ಲಿಕ್ ಹೀರೋ’ ಇದೀಗ ಚುನಾವಣೆಯ ಅಂಬಾಸಿಡರ್!

    ಕಾಲಿನ ಮೂಲಕವೇ ವೋಟ್ ಮಾಡೋ `ಪಬ್ಲಿಕ್ ಹೀರೋ’ ಇದೀಗ ಚುನಾವಣೆಯ ಅಂಬಾಸಿಡರ್!

    ಬಳ್ಳಾರಿ: ಪಬ್ಲಿಕ್ ಟಿವಿಯ ಬಿಗ್ ಬುಲೆಟಿನ್ ನಲ್ಲಿ ಪ್ರಸಾರ ಮಾಡುವ ಪಬ್ಲಿಕ್ ಹೀರೋ ಒಬ್ಬರು ಇದೀಗ ಚುನಾವಣೆಯ ಅಂಬಾಸಿಡರ್ ಆಗಿ ಆಯ್ಕೆ ಆಗಿದ್ದಾರೆ.

    ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚು ಮಾಡಲು ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ರಾಯಭಾರಿಯನ್ನಾಗಿ ಮಾಡಿರುವಂತೆ ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಇದೀಗ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡಮುಣುಗು ಗ್ರಾಮದ ಎರಡು ಕೈಗಳಿಲ್ಲದ ದಿವ್ಯಾಂಗದ ಅತಿಥಿ ಶಿಕ್ಷಕಿ ಎನ್. ಲಕ್ಷ್ಮೀದೇವಿ ಅವರನ್ನು ಚುನಾವಣಾ ಆಯೋಗ ರಾಯಭಾರಿಯನ್ನಾಗಿ ಮಾಡಿದೆ.

    ಲಕ್ಷ್ಮೀದೇವಿ ಇಂದು ತಮಗೆ ಎರಡು ಕೈಗಳಿಲ್ಲದಿದ್ದರೂ ಯಾರ ಸಹಾಯವಿಲ್ಲದೆ ತಮ್ಮ ಕಾಲಿನಿಂದಲೇ ಓಟು ಮಾಡುವ ಪ್ರಾತ್ಯಕ್ಷಿಕೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀದೇವಿ, ನಾನು ಕಳೆದ ಎಂಟು ವರ್ಷಗಳಿಂದ ಕಾಲಿನಿಂದಲೇ ಮತದಾನ ಮಾಡುತ್ತಿದ್ದೇನೆ. ಇದು ನನಗೆ ಸಂತಸ ತಂದಿದೆ. ನನ್ನ ಮತದಾನದ ಹಕ್ಕನ್ನು ನಾನು ಚಲಾಯಿಸುತ್ತಿದ್ದು, ಎಲ್ಲಾ ವಿಶೇಷ ಚೇತನರೂ ಇದೇ ರೀತಿ ಯಾರ ಸಹಾಯವಿಲ್ಲದೆ ಮತಗಟ್ಟೆಗೆ ಬಂದು ಮತದಾನ ಮಾಡಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಎಂದರು.

    https://www.youtube.com/watch?v=alu2Mb7d-AI&feature=youtu.be

  • ವಿಶೇಷ ಕಾರಣದಿಂದ ವಿಜಯೇಂದ್ರಗೆ ಟಿಕೆಟ್ ತಪ್ಪಿದೆ: ಬಿಎಸ್‍ವೈ

    ವಿಶೇಷ ಕಾರಣದಿಂದ ವಿಜಯೇಂದ್ರಗೆ ಟಿಕೆಟ್ ತಪ್ಪಿದೆ: ಬಿಎಸ್‍ವೈ

    ಶಿವಮೊಗ್ಗ: ವರುಣಾ ಕ್ಷೇತ್ರದಿಂದ ಪುತ್ರ ವಿಜಯೇಂದ್ರ ಟಿಕೆಟ್ ತಪ್ಪಿಕ್ಕೆ ವಿಶೇಷ ಕಾರಣವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ಶಿವಮೊಗ್ಗ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ವಿಜಯೇಂದ್ರ ಕೂಡ ಸಂತೋಷದಿಂದ ಕೆಲಸ ಮಾಡುತ್ತಿದ್ದಾರೆ. ಅಲ್ಲಿ ವಿಶೇಷ ಕಾರಣದಿಂದ ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿದೆ ಅಷ್ಟೇ. ಸದ್ಯಕ್ಕೆ ಪ್ರಧಾನಿ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಅಭ್ಯರ್ಥಿಗಳ ಜೊತೆ ಮಾತನಾಡುತ್ತಿದ್ದಾರೆ. ಚುನಾವಣೆ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಯುದ್ಧ ಕಾಲದಲ್ಲಿ ಮಾಜಿ ಸಿಎಂ ಸೈಲೆಂಟ್-ಪ್ರಚಾರಕ್ಕೂ ಹೋಗದೇ ಮನೆಯಲ್ಲಿ ಕುಳಿತ ಬಿಎಸ್‍ವೈ

    ಈ ವೇಳೆ ಮೋದಿ ಕುರಿತು ರಾಹುಲ್ ಗಾಂಧಿ ಮಾಡಿದ್ದ ಟ್ವೀಟ್ ಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಒಬ್ಬ ತಲೆತಿರುಕ. ಆತನ ಮಾತಿಗೆ ಒತ್ತು ನೀಡುವ ಅಗತ್ಯವಿಲ್ಲ. ರಾಹುಲ್ ಗೆ ಯಾರ ಬಗ್ಗೆ ಏನು ಮಾತನಾಡಬೇಕು ಎಂಬ ಜ್ಞಾನವಿಲ್ಲ. ತನ್ನ ಸುತ್ತಮುತ್ತ ರಾಜ್ಯ ಹಾಳು ಮಾಡಿದವರನ್ನು ಇಟ್ಟುಕೊಂಡು ಓಡಾಡುತ್ತಿದ್ದಾರೆ. ತಾನು ಏನು ಎಂದು ತಿಳಿಯದೆ ಮಾತನಾಡುವುದು ಸರಿಯಲ್ಲ. ಇನ್ನೊಬ್ಬರ ಬಗ್ಗೆ ಮಾತಾಡುವುದಕ್ಕೆ ಅವರಿಗೆ ನೈತಿಕತೆ ಇಲ್ಲ. ರಾಹುಲ್ ಹಾಗೂ ಸಿದ್ದರಾಮಯ್ಯ ಅವರಿಗೆ ಜನ ಚುನಾವಣೆಯಲ್ಲಿ ಬುದ್ಧಿ ಕಲಿಸಲಿದ್ದಾರೆ. ವರುಣಾದಲ್ಲಿ ನೋಟಾ ಕೈಬಿಟ್ಟು ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕೋರಿದ್ದೇನೆ ಎಂದ್ರು.

    ಈಗಾಗಲೇ ಯಡಿಯೂರಪ್ಪ 224 ಕ್ಷೇತ್ರದಲ್ಲಿ ಪರಿವರ್ತನಾ ಯಾತ್ರೆ ಮಾಡಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದು, ಕೇವಲ ಆಪ್ತರ 100 ಕ್ಷೇತ್ರಗಳಲ್ಲಿ ಪ್ರಚಾರ ಮಾಡಲು ಪ್ಲಾನ್ ರೂಪಿಸಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

  • ಕರ್ನಾಟಕದ ಅಭಿವೃದ್ಧಿಯೇ ಬಿಜೆಪಿ ಅಜೆಂಡಾ -ಅಭ್ಯರ್ಥಿಗಳಿಗೆ ಮೋದಿ ಪ್ರಚಾರ ಪಾಠ

    ಕರ್ನಾಟಕದ ಅಭಿವೃದ್ಧಿಯೇ ಬಿಜೆಪಿ ಅಜೆಂಡಾ -ಅಭ್ಯರ್ಥಿಗಳಿಗೆ ಮೋದಿ ಪ್ರಚಾರ ಪಾಠ

    -ಕಾಂಗ್ರೆಸ್‍ ಸಂಸ್ಕೃತಿಯನ್ನು ಹೊಡೆದುರುಳಿಸಿ

    ಬೆಂಗಳೂರು: ಮೇ 12ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಎಲ್ಲ ಪಕ್ಷಗಳು ಪ್ರಚಾರ ಕಾರ್ಯಗಳಲ್ಲಿ ತೊಡಗಿಕೊಂಡಿವೆ. ಇನ್ನು ಪಕ್ಷದ ಹಿರಿಯ ನಾಯಕರು ತಮ್ಮ ಕಾರ್ಯಕರ್ತರಿಗೆ ಯಾವ ರೀತಿ ಪ್ರಚಾರದಲ್ಲಿ ಭಾಗಿಯಾಗಬೇಕೆಂಬುದರ ಬಗ್ಗೆ ತರಬೇತಿಯನ್ನು ನೀಡುತ್ತಿವೆ.

    ಪ್ರಧಾನಿ ನರೇಂದ್ರ ಮೋದಿ ಸಹ ಇಂದು ನಮೋ ಆಪ್ ಮೂಲಕ ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಜೊತೆ ಸಂವಾದ ನಡೆಸಿದ್ರು. ಇಂದು ಬೆಳಗ್ಗೆ 9 ಗಂಟೆಗೆ ಪಕ್ಷದ ಸಂಸದರು, ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದರು.

    ಸಂವಾದದ ಪ್ರಮುಖ 10 ಅಂಶಗಳು:
    1. ಸಂವಾದದ ಆರಂಭದಲ್ಲಿಯೇ ಪ್ರಧಾನಿ ಮೋದಿ ಕರ್ನಾಟಕದ ಅಭಿವೃದ್ಧಿಯೇ ನಮ್ಮ ಪಕ್ಷದ ಅಜೆಂಡಾ ಅಂದ್ರು.
    2. ಬಿಜೆಪಿ ರಾಜಕೀಯಕ್ಕಿಂತೂ ಅಭಿವೃದ್ಧಿಗೆ ಮೊದಲ ಆದ್ಯತೆಯನ್ನು ನೀಡುತ್ತದೆ.
    3. ವಿಧಾನಸಭಾ ಕ್ಷೇತ್ರ ಗೆಲ್ಲೋದು ನಮ್ಮ ಗುರಿ ಅಲ್ಲ. ಪ್ರತಿಯೊಂದು ಬೂತ್ ಗಳನ್ನು ಗೆಲ್ಲುವುದರ ಜೊತೆಗೆ ಅಲ್ಲಿಯ ಜನರೊಂದಿಗೆ ಬೆರೆಯಬೇಕು. ಎಷ್ಟು ಪುರುಷ ಕಾರ್ಯಕರ್ತರಿದ್ದಾರೋ, ಅಷ್ಟೇ ಮಹಿಳಾ ಕಾರ್ಯಕರ್ತರು ಇರಬೇಕು.
    4. ಕರ್ನಾಟಕದ ಚುನಾವಣೆಯನ್ನು ನಮ್ಮ ಶಕ್ತಿಯ ಆಧಾರದ ಮೇಲೆ ಜಯಿಸಬೇಕು.
    5. ಇತ್ತೀಚಿನ ಕೆಲವು ಚುನಾವಣೆಗಳನ್ನು ಗಮನಿಸಿದಾಗ ಕೆಲವೊಂದು ಪಕ್ಷಗಳು ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿವೆ. ಇದ್ರಿಂದ ಜನರು ಧರ್ಮ ಮತ್ತು ರಾಜಕಾರಣದಲ್ಲಿ ಸಿಲುಕಿದ್ದಾರೆ.
    6. ಕಾಂಗ್ರೆಸ್ 4 ವರ್ಷಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಕೇವಲ 380 ಕೋಟಿ ರೂ. ಬಳಸಿದೆ. ಆದ್ರೆ 1600 ಕೋಟಿಯನ್ನು ಮೂಲ ಸೌಕರ್ಯ ಅಭಿವೃದ್ಧಿಗಾಗಿ ಬಳಸಿದ್ದೇವೆ.
    7. ಚುನಾವಣಾ ಪ್ರಚಾರದ ಕೆಲಸವನ್ನು ವಿದೇಶಿ ಏಜೆಂಟ್‍ಗಳನ್ನು ನೇಮಿಸುವ ಜನರನ್ನು ಕಾಂಗ್ರೆಸ್ ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿದೆ.
    8. ಬಿಜೆಪಿ ಕಾರ್ಯಕರ್ತರು ಮತದಾರರೊಂದಿಗೆ ಉತ್ತಮ ಬಾಂಧವ್ಯನ್ನು ಹೊಂದಬೇಕು.
    9. ಕೇಂದ್ರ ಸರ್ಕಾರ ಕರ್ನಾಟಕದ ರಸ್ತೆ ಅಭಿವೃದ್ಧಿಗಾಗಿ 14,000 ಕೋಟಿ ರೂ. ಹಣವನ್ನು ಮೀಸಲಿರಿಸಿದೆ. ಕೇವಲ 4 ವರ್ಷಗಳಲ್ಲಿ 1,750 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣ, ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಸಬ್ ಅರ್ಬನ್ ರೈಲುಗಳನ್ನು ಘೋಷಣೆ ಮಾಡಲಾಗಿದೆ.
    10. ಇದೇ ವೇಳೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದ ಅಪಘಾತಕ್ಕೆ ಸಂತಾಪ ಸೂಚಿಸಿದ್ರು. ಘಟನೆ ಸಂಬಂಧ ರೈಲ್ವೆ ಇಲಾಖೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಅಂತಾ ಅಂದ್ರು.

    ಭಾರತೀಯ ರಾಜಕೀಯ ದೋಷಗಳ ಮೂಲ ಕಾಂಗ್ರೆಸ್. ಹಾಗಾಗಿ ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸ್ಕೃತಿಯನ್ನು ತೆಗೆದು ಹಾಕಿದ್ರೆ ಮಾತ್ರ ರಾಜಕೀಯ ವ್ಯವಸ್ಥೆಯನ್ನು ಶುದ್ಧಿಕರಿಸಲು ಸಾಧ್ಯ ಅಂತಾ ತಿಳಿಸಿದರು.