Tag: karnataka elections

  • ವಿಶ್ವಕ್ಕೆ ಗುರು ಭಾರತ, ಪ್ರಜೆಯಾಗಿ ಮತದಾನ ಮಾಡಿದ್ದೇನೆ: ನಟ ಉಪೇಂದ್ರ

    ವಿಶ್ವಕ್ಕೆ ಗುರು ಭಾರತ, ಪ್ರಜೆಯಾಗಿ ಮತದಾನ ಮಾಡಿದ್ದೇನೆ: ನಟ ಉಪೇಂದ್ರ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಭರ್ಜರಿಯಿಂದ ಸಾಗುತ್ತಿದೆ. ಒಟ್ಟು 222 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಮೇ 15ಕ್ಕೆ ಮತ ಎಣಿಕೆ ನಡೆಯಲಿದೆ.

    ಹಿರಿಯರು, ಮಹಿಳೆಯರು, ಯುವಕರು ಹಾಗೂ ಸಿನಿಮಾ ನಟ-ನಟಿಯರು ಮತದಾನ ಮಾಡುತ್ತಿದ್ದು, ನಟ, ನಿರ್ದೇಶಕ ಉಪೇಂದ್ರ ಮತದಾನ ಮಾಡಿದ್ದಾರೆ. ಮತದಾನ ಮಾಡಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ಪಕ್ಷ ಮಾಡುವಾಗಲೂ ಪ್ರಜೆಯಾಗಿ ಮಾಡಿದ್ದೇನೆ. ನಾಯಕನಾಗಿ ಅಲ್ಲ. ಪ್ರಜೆಗಳಿಗೂ ನಾನು ಇದೇ ಹೇಳಿದ್ದಾನೆ.

    ಇವತ್ತು ಒಂದು ದಿನ ನಾನು ಪ್ರಜೆ. ಪ್ರತಿ 5 ವರ್ಷಗೊಮ್ಮೆ ಮತದಾನ ಮಾಡಲು ಅವಕಾಶ ಬರುತ್ತದೆ. ಆದ್ದರಿಂದ ನನಗೆ ಇಂದು ವೋಟ್ ಮಾಡಲು ತುಂಬಾ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ. ಇನ್ನು ರಾಜಕೀಯದ ಬಗ್ಗೆ ಮಾತನಾಡಿದ ಅವರು, ನಮ್ಮ ರಾಜ್ಯ ರಾಜಕೀಯದ ಬಗ್ಗೆ ಪ್ರಜೆಗಳಿಗೆ ತಿಳಿದಿದ್ದರು. ಇಂದು 60% ಜನರು ಮತದಾನ ಮಾಡುತ್ತಾರೆ ಎಂದರೆ ಅದು ನಿಜವಾಗಿಯೂ ಗ್ರೇಟ್ ಆಗಿದೆ.

    ಈ ದೇಶದವರು ತಮ್ಮ ಭರವಸೆಯನ್ನು ಕಳೆದುಕೊಂಡಿಲ್ಲ. ಈ ದೇಶ ಗ್ರೇಟೆಸ್ಟ್ ಆಗಿದೆ. ಇಲ್ಲಿ ಎಲ್ಲಾ ವಿಚಾರಗಳಿಗೂ ಆಧರಣೆ ಇದೆ. ಆದ್ದರಿಂದ ವಿಶ್ವದ ಗುರು ಈ ದೇಶ. ಇದೊಂದು ಭರವಸೆಯ ದೇಶವಾಗಿದೆ. ಈ ದೇಶದಲ್ಲಿ ಎಷ್ಟೇ ಬಡತನ, ಕಷ್ಟ ಇದ್ದರೂ ಬೇರೆ ಶ್ರೀಮಂತ ದೇಶಕ್ಕೆ ಹೋಗಿ ಬಂದಾಗ ಬೇಸರವಾಗುತ್ತದೆ. ಆದ್ದರಿಂದ ನಿಜವಾಗಿಯೂ ಭಾರತದವರು ತುಂಬಾ ಖುಷಿಯಾಗಿದ್ದಾರೆ ಎನ್ನಿಸುತ್ತದೆ ಎಂದ್ರು.

    ರಾಜ್ಯ ವಿಧಾನಸಭೆಯ 224 ಕ್ಷೇತ್ರಗಳ ಪೈಕಿ ಜಯನಗರ, ರಾಜರಾಜೇಶ್ವರಿನಗರ ಹೊರತು ಪಡಿಸಿ 222 ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮೂರು ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಎರಡೂವರೆ ಸಾವಿರ ಅಭ್ಯರ್ಥಿಗಳ ರಾಜಕೀಯ ಹಣೆಬರಹವನ್ನ ಮತದಾರರು ಇಂದು ನಿರ್ಧರಿಸಲಿದ್ದಾರೆ.

  • ಬಸ್‍ಗಳಿಲ್ಲದೆ ಟಾಪ್ ನಲ್ಲೇ ಕುಳಿತು ಪ್ರಯಾಣಿಸ್ತಿರೋ ಮತದಾರರು!

    ಬಸ್‍ಗಳಿಲ್ಲದೆ ಟಾಪ್ ನಲ್ಲೇ ಕುಳಿತು ಪ್ರಯಾಣಿಸ್ತಿರೋ ಮತದಾರರು!

    ಬೆಂಗಳೂರು: ಇಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ನಗರದಲ್ಲಿ ನೆಲೆಸಿರುವ ಮತದಾರರು, ಮತದಾನ ಮಾಡುವುದಕ್ಕೆ ಊರಿಗೆ ತೆರಳಲು ಬಸ್ ಇಲ್ಲದೆ ಪರದಾಡುತ್ತಿದ್ದಾರೆ.

    ಸಾರಿಗೆ ಬಸ್‍ಗಳನ್ನು ಚುನಾವಣೆ ಕೆಲಸಕ್ಕಾಗಿ ಬಳಸಿಕೊಳ್ಳಲಾಗಿದೆ. ಹೀಗಾಗಿ ಸಾರಿಗೆ ಬಸ್‍ಗಳಿಲ್ಲದ ಮತದಾರರು ಖಾಸಗಿ ವಾಹನಗಳ ಮೊರೆ ಹೋಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆಯಿಂದಲೇ ನೆಲಮಂಗಲದ ಟೋಲ್ ಗೇಟ್ ಬಳಿ ಸಖತ್ ಟ್ರಾಫಿಕ್ ಜಾಮ್ ಉಂಟಾಗಿದೆ. ಕ್ಕಿಕಿರಿದು ತುಂಬಿರುವ ಬಸ್‍ಗಳಲ್ಲಿ ಪ್ರಯಾಣಿಸಲು ಸಾಧ್ಯವಾಗದೇ ಮಹಿಳೆಯರು, ವೃದ್ಧರು ಪರದಾಡುತ್ತಿದ್ದಾರೆ.

    ರಾತ್ರಿಯಿಂದಲೇ ಊರಿಗೆ ತೆರಳಲು ಸಜ್ಜಾಗಿದ್ದ ಪ್ರಯಾಣಿಕರು ಸಂಜೆಯಿಂದ ಕಾದು ಕುಳಿತ್ರೂ, ಬಸ್ ವ್ಯವಸ್ಥೆ ಇಲ್ಲ ಪರಿಣಾಮವಾಗಿ ಪ್ರಯಾಣಿಕರು ಮೆಜೆಸ್ಟಿಕ್‍ನ ಡಿಪೋದ ಮುಂದೆ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ದಾರೆ.

    ಅಷ್ಟೇ ಅಲ್ಲದೇ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಂಚರಿಸುತ್ತಿದ್ದ ಬಸ್‍ಗಳನ್ನ ತಡೆಯಲು ಮುಂದಾಗಿದ್ದಾರೆ. ಒಂದು ತಿಂಗಳು ಮುಂಚಿತವಾಗಿ ಬಸ್‍ಗಾಗಿ ಟಿಕೆಟ್ ಬುಕ್ ಮಾಡಿದರೂ ಬಸ್ ವ್ಯವಸ್ಥೆ ಇರಲಿಲ್ಲ. ಸರ್ಕಾರ ರಚನೆ ಮಾಡುವುದಕ್ಕೆ ನಮ್ಮ ವೋಟ್ ಬೇಕು. ಜನರ ಸಮಸ್ಯೆ ಪರಿಹರಿಸುವುದಕ್ಕೆ ಯಾವ ಅಧಿಕಾರಿಯೂ ಬರಲ್ಲ. ಇಂತಹವರಿಗೆ ನಾವು ಮತದಾನ ಮಾಡಬೇಕು ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಮತದಾನದ ಬಿಸಿ- ಮೆಜೆಸ್ಟಿಕ್ ನಲ್ಲಿ ಬಸ್‍ ಗಾಗಿ ಪ್ರಯಾಣಿಕರು ಗರಂ

    ಮತದಾನದ ಬಿಸಿ- ಮೆಜೆಸ್ಟಿಕ್ ನಲ್ಲಿ ಬಸ್‍ ಗಾಗಿ ಪ್ರಯಾಣಿಕರು ಗರಂ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ಆದರೆ ಪ್ರಯಾಣಿಕರು ಕೆಎಸ್‍ಆರ್ ಟಿಸಿ ಮತ್ತು ಬಿಎಂಟಿಸಿಗೆ ಹಿಡಿಶಾಪ ಹಾಕುತ್ತಿದ್ದಾರೆ.

    ಮತದಾನ ಮಾಡುವುದಕ್ಕೆ ಊರಿಗೆ ತೆರಳಲು ಬಸ್ ಇಲ್ಲದೆ ಪ್ರಯಾಣಿಕರು ಪರದಾಡಿದ ಸ್ಥಿತಿ ನಗರದ ಮೆಜೆಸ್ಟಿಕ್ ನಲ್ಲಿ ಕಂಡು ಬಂದಿದೆ. ರಾತ್ರಿಯಿಂದಲೇ ಊರಿಗೆ ತೆರಳಲು ಸಜ್ಜಾಗಿದ್ದ ಪ್ರಯಾಣಿಕರು ಸಂಜೆಯಿಂದ ಕಾದು ಕುಳಿತ್ರೂ, ಬಸ್ ವ್ಯವಸ್ಥೆ ಇಲ್ಲ ಪರಿಣಾಮವಾಗಿ ಪ್ರಯಾಣಿಕರು ಮೆಜೆಸ್ಟಿಕ್‍ ನ ಡಿಪೋದ ಮುಂದೆ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ದಾರೆ.

    ಅಷ್ಟೇ ಅಲ್ಲದೇ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಂಚರಿಸುತ್ತಿದ್ದ ಬಸ್‍ ಗಳನ್ನ ತಡೆಯಲು ಮುಂದಾಗಿದ್ದಾರೆ. ಒಂದು ತಿಂಗಳು ಮುಂಚಿತವಾಗಿ ಬಸ್‍ಗಾಗಿ ಟಿಕೆಟ್ ಬುಕ್ ಮಾಡಿದರೂ ಬಸ್ ವ್ಯವಸ್ಥೆ ಇರಲಿಲ್ಲ.

    ಸರ್ಕಾರ ರಚನೆ ಮಾಡುವುದಕ್ಕೆ ನಮ್ಮ ವೋಟ್ ಬೇಕು. ಜನರ ಸಮಸ್ಯೆ ಪರಿಹರಿಸುವುದಕ್ಕೆ ಯಾವ ಅಧಿಕಾರಿಯೂ ಬರಲ್ಲ. ಇಂತಹವರಿಗೆ ನಾವು ಮತದಾನ ಮಾಡಬೇಕು ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ರಾಜ್ಯಾದ್ಯಂತ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ

    ರಾಜ್ಯಾದ್ಯಂತ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ

    ಬೆಂಗಳೂರು: ಕಳೆದ ಎರಡು ದಿನಗಳಿಂದ ಸಂಜೆ ನಗರ ಸೇರಿದಂತೆ ರಾಜ್ಯದ ಹಲವೆಡೆ ವರುಣಾ ಅಬ್ಬರಿಸುತ್ತಿದ್ದಾನೆ. ಇಂದೂ ಕೂಡ ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆಗಳಿವೆ.

    ಶುಕ್ರವಾರ ಸಂಜೆ ಯಶವಂತಪುರ, ರಾಜಾಜಿನಗರ, ಮೆಜೆಸ್ಟಿಕ್, ಜಾಲಹಳಿ, ನೆಲಮಂಗಲ ಸೇರಿದಂತೆ ಹಲವೆಡೆ ಮಳೆಯಾಗಿದೆ. ಬಾಗಲಕೋಟೆಯ ಜಿಲ್ಲಾ ಕ್ರೀಡಾಂಗಣದ ಸ್ಟೇಜ್‍ಗೆ ಹಾಕಲಾಗಿದ್ದ ತಗಡುಗಳು ಹಾರಿಹೋಗಿದ್ದು, ಪ್ಯಾಲೇಸ್ ಬಳಿ ಆಲದ ಮರವೊಂದು ನೆಲಕ್ಕುರುಳಿದೆ.

    ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ರಿಂದ ವಾಹನ ಸವಾರರು ತೀವ್ರ ಪ್ರಯಾಸಪಟ್ರು. ಚಿಕ್ಕೋಡಿಯ ಹಾರೂಗೇರಿಯಲ್ಲಿ ಆಲಿಕಲ್ಲು ಸಹಿತ ಭಾರೀ ಗಾಳಿ ಮಳೆಯಿಂದ 122ರ ಪಿಂಕ್ ಮತಗಟ್ಟೆ ಬ್ಯಾನರ್ ನಾಶವಾಗಿದೆ.

    ಮಂಗಳೂರು, ಉಡುಪಿಯಲ್ಲೂ ಗಾಳಿ ಸಹಿತ ಭಾರೀ ಮಳೆಯಾಗಿದ್ರಿಂದ, ಜನ ಕತ್ತಲಲ್ಲಿ ಕಳೆಯಬೇಕಾಯ್ತು. ಮಂಡ್ಯ ತಾಲೂಕಿನಲ್ಲಿ ರಾತ್ರಿ ಮಳೆಯಾಗಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಹಾಗಾಗಿ ಇಂದು ಚಿಕ್ಕ ಮಂಡ್ಯ ಗ್ರಾಮದಲ್ಲಿ ಬೆಳಗ್ಗೆ ಅಧಿಕಾರಿಗಳು ಮೇಣದ ಬತ್ತಿ ಬೆಳಕಿನಲ್ಲಿ ಮತಯಂತ್ರಗಳನ್ನು ಸಿದ್ಧಪಡಿಸಿಕೊಂಡರು.

  • ರಾತ್ರಿ ಸುರಿದ ಭಾರೀ ಮಳೆಗೆ ಮತಗಟ್ಟೆ ತುಂಬಾ ನೀರು

    ರಾತ್ರಿ ಸುರಿದ ಭಾರೀ ಮಳೆಗೆ ಮತಗಟ್ಟೆ ತುಂಬಾ ನೀರು

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದೆ. ಆದರೆ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಜನರು ಅಸ್ತವ್ಯಸ್ಥಗೊಂಡಿದ್ದು, ರಾತ್ರಿ ಸುರಿದ ಮಳೆಯಿಂದಾಗಿ ಇಂದು ಮತದಾನಕ್ಕೂ ಅಡ್ಡಿ ಉಂಟು ಮಾಡಿದೆ.

    ಒಟ್ಟು 222 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಮೇ 15ಕ್ಕೆ ಮತ ಎಣಿಕೆ ನಡೆಯಲಿದೆ. ರಾತ್ರಿ ಸುರಿದ ಮಳೆಯ ಪರಿಣಾಮ ಸಿ.ವಿ.ರಾಮನ್ ನಗರದ ಬೂತ್ ನಂಬರ್ 122 ರ ಮತಗಟ್ಟೆ ತುಂಬ ನೀರು ತುಂಬಿದೆ. ಇದರಿಂದ ಚುನಾವಣಾ ಸಿಬ್ಬಂದಿ ನೀರು ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಮತದಾನ ಮಾಡಲು ಬರುವ ಮತದಾರರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂದು ಮಧ್ಯಾಹ್ನದ ಬಳಿಕ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಬೆಳಗಿನ ಅವಧಿಯಲ್ಲೇ ಬಿರುಸಿನ ಮತದಾನ ನಡೆಯುವ ಸಾಧ್ಯತೆಯಿದೆ.

    ಇನ್ನು ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಲಕ್ಷದ್ವೀಪ ಮತ್ತು ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣ ಹಾಗೂ ಉತ್ತರ ಕರ್ನಾಟಕದಿಂದ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಟ್ರಫ್ (ಮೋಡಗಳ ಸಾಲು) ನಿರ್ಮಾಣ ವಾಗಿರುವ ಹಿನ್ನೆಲೆಯಲ್ಲಿ ಮಳೆಯಾಗುತ್ತಿದೆ. ಇನ್ನೂ ಬೆಂಗಳೂರು ನಗರ ಸೇರಿ ದಕ್ಷಿಣ ಒಳನಾಡಿನ ಭಾಗ ಮತ್ತು ಉತ್ತರ ಕರ್ನಾಟಕದಲ್ಲಿ ಕೂಡ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

  • ಮಹಿಳಾ ಸ್ನೇಹಿ ಪಿಂಕ್ ಬೂತ್ – ಮುಕ್ತ ಮತದಾನಕ್ಕೆ ಪೂರ್ವ ಸಿದ್ಧತೆ ಪೂರ್ಣ

    ಮಹಿಳಾ ಸ್ನೇಹಿ ಪಿಂಕ್ ಬೂತ್ – ಮುಕ್ತ ಮತದಾನಕ್ಕೆ ಪೂರ್ವ ಸಿದ್ಧತೆ ಪೂರ್ಣ

    ಕಲಬುರಗಿ/ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿಯಿದ್ದು, ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

    ಈ ಬಾರಿಯ ಚುನಾವಣೆಯ ವಿಶೇಷವಾಗಿ ಆಯೋಗ ಸಂಪೂರ್ಣ ಮಹಿಳೆಯರಿಂದ ನಿರ್ವಹಣೆ ಮಾಡುವ ಪಿಂಕ್ ಬೂತ್ ಮತಕೇಂದ್ರಗಳನ್ನು ಸ್ಥಾಪಿಸಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಪಿಂಕ್ ಬೂತ್ ಸ್ಥಾಪನೆಯಾಗುತ್ತಿರುವುದು ಈ ಚುನಾವಣೆಯ ವಿಶೇಷ.

    ರಾಜ್ಯದ 224 ಮತ ಕ್ಷೇತ್ರದಲ್ಲೂ ಹೆಚ್ಚಿನ ಮಹಿಳಾ ಮತದಾರರು ಇರುವ ಮತಗಟ್ಟೆಗಳನ್ನು ಗುರುತಿಸಿ ಈ ಪಿಂಕ್ ಮತಕೇಂದ್ರ ಸ್ಥಾಪಿಸಿದೆ. ಇವುಗಳನ್ನೂ ಸಂಪೂರ್ಣವಾಗಿ ಮಹಿಳೆಯರೇ ನಿರ್ವಹಿಸಲಿದ್ದು, ಮಹಿಳಾ ಪೊಲೀಸರು ನಿಯೋಜನೆ ಮಾಡಲಾಗಿದೆ.

    ಕುರಿತು ಮಾಹಿತಿ ನೀಡಿರುವ ಕಲಬುರಗಿ ಜಿಲ್ಲಾಧಿಕಾರಿ ಆರ್ ವೆಂಕಟೇಶ್, ಈ ಬಾರಿ ಮಹಿಳಾ ಮತದಾರರು ಹೆಚ್ಚಿರುವ ಬೂತ್ ಗಳನ್ನ ಗುರುತಿಸಿ ಮೊದಲ ಬಾರಿಗೆ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಒಂದರಂತೆ ಜಿಲ್ಲೆಯಲ್ಲಿ 9 ಪಿಂಕ್ ಪೋಲಿಂಗ್ ಬೂತ್ ಸ್ಥಾಪನೆ ಮಾಡಲಾಗಿದೆ. ಈ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಂದು ಮತದಾನ ಮಾಡಲು ಹೊಸ ತಂತ್ರವನ್ನು ಪ್ರಯೋಗ ಮಾಡಿದ್ದಾಗಿ ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಎಲ್ಲರೂ ಬಂದು ಮತ ಚಲಾವಣೆ ಮಾಡಿ ಎಂದು ಮನವಿ ಮಾಡಿದ್ದಾರೆ.

    ಜಿಲ್ಲೆಯಲ್ಲಿ 2370 ಮತಗಟ್ಟೆ ಕೇಂದ್ರಗಳನ್ನ ಸ್ಥಾಪಿಸಲಾಗಿದ್ದು, 21 ಲಕ್ಷ 17 ಸಾವಿರ 248 ಮತದಾರರು ತಮ್ಮ ಮತದಾನದ ಹಕ್ಕನ್ನ ಚಲಾಯಿಸಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5890 ಸಿಬ್ಬಂದಿಗಳನ್ನ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಭದ್ರತೆಗಾಗಿ ಸುಮಾರು 14 ಸಾವಿರ ಸಿಬ್ಬಂದಿಗಳನ್ನ ನೇಮಕಮಾಡಿದ್ದಾಗಿ ತಿಳಿಸಿದ್ದಾರೆ.

    ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 2127 ಮತಗಟ್ಟೆಗಳಿದ್ದರೇ ಈ ಪೈಕಿ 17 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ 9,54,559 ಪುರುಷರು ಹಾಗೂ 9,56,770 ಮಹಿಳಾ ಮತದಾರದಿದ್ದಾರೆ.

  • ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ

    ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ

    ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು, ಬಿರುಗಾಳಿ ಸಹಿತ ಮಳೆ ಸುರಿದಿದ್ದು ಬಿಸಿಲಿನ ಝಳಕ್ಕೆ ತತ್ತರಿಸಿದ್ದ ಜನರಿಗೆ ವರುಣಾ ತಂಪೆರೆದಿದ್ದಾನೆ.

    ಲಕ್ಷ ದ್ವೀಪ ಮತ್ತು ತಮಿಳುನಾಡಿನ ಮೇಲ್ಮೆ ಸುಳಿಗಾಳಿ ನಿರ್ಮಾಣ ಹಿನ್ನೆಲೆಯಲ್ಲಿ ಮಳೆಯಾಗುತ್ತಿದ್ದು, ನಗರದ ನೆಲಮಂಗಲ, ಬ್ಯಾಟರಾಯನಪುರ, ದಾಸರಹಳ್ಳಿ, ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ, ಗೊರಗುಂಟೆಪಾಳ್ಯ, ಶೇಷಾದ್ರಿಪುರಂ, ಮೆಜೆಸ್ಟಿಕ್ ಸುತ್ತಮುತ್ತ ಮಳೆಯಾಗಿದ್ದು, ವಾಹನ ಸವಾರರು ಪರಾದಾಡುವಂತಾಗಿತ್ತು. ಸತತ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ಇದರಿಂದಾಗಿ ಹಲವು ಭಾಗಗಳಲ್ಲಿ ಕೆಲ ಕಾಲ ವಿದ್ಯುತ್ ಸಂಪರ್ಕ ಕಡಿತವಾದ ಕುರಿತು ವರದಿಯಾಗಿದೆ.

    ರಾಜ್ಯದ ಬೆಳಗಾವಿ ಜಿಲ್ಲೆಯ ಅಥಣಿ, ತುಮಕೂರು, ಗದಗ, ಮೈಸೂರು, ಹುಬ್ಬಳ್ಳಿ, ಮಡಿಕೇರಿ, ಹಾಸನ ಕೆಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಇದೇ ವೇಳೆ ಭಾರೀ ಗಾಳಿ ಮಳೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಬಳಿಯ ಚೆಕ್ ಪೋಸ್ಟ್ ಮೇಲ್ಛಾವಣಿ ಹಾರಿಹೋಗಿದ್ದು, ರಸ್ತೆ ಮಧ್ಯೆ ಹಾಕಲಾಗಿದ್ದ ಬ್ಯಾರಿಕೇಡ್ ಉರುಳಿ ಬಿದ್ದಿದೆ. ಮಹಾರಾಷ್ಟ್ರ-ಕರ್ನಾಟಕ ರಾಜ್ಯದ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿತ್ತು. ಚೆಕ್ ಪೋಸ್ಟ್ ತಗಡು ಹಾರಿ ಹೋದ ಕಾರಣದಿಂದ ಕೆಲ ಕಾಲ ಸಿಬ್ಬಂದಿ ಕಂಗಾಲಾಗಿದ್ದರು. ಇನ್ನು ಆಕಾಲಿಕ ಮಳೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಿಗೂ ಹಾನಿಯಾಗಿದೆ.

    ಮೂರು ದಿನ ಮಳೆ ಸಾಧ್ಯತೆ: ನಾಳೆಯಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಲಕ್ಷದ್ವೀಪ ಮತ್ತು ತಮಿಳುನಾಡಿನಲ್ಲಿ ಭಾಗದಲ್ಲಿ ಮೇಲ್ಮೆ ಸುಳಿಗಾಳಿ ನಿರ್ಮಾಣ ಹಾಗೂ ಉತ್ತರ ಕರ್ನಾಟಕದಿಂದ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಟ್ರಫ್ ನಿರ್ಮಾಣದಿಂದ ಮಳೆಯಾಗುವುದಾಗಿ ತಿಳಿಸಿದ್ದಾರೆ. ಇನ್ನೂ ಬೆಂಗಳೂರು ನಗರ ಸೇರಿ ದಕ್ಷಿಣ ಒಳನಾಡಿನ ಭಾಗ ಮತ್ತು ಉತ್ತರ ಕರ್ನಾಟಕದ ಹಾಗೂ ಮಲೆನಾಡು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ.

    ಮತದಾನಕ್ಕೆ ವರುಣನ ಅಡ್ಡಿ ಸಾಧ್ಯತೆ..?
    ರಾಜ್ಯದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಬಿರುಗಾಳಿ, ಗುಡುಗು ಸಿಡಿಲು ಸಹಿತ ಮಳೆಯಾಗುವ ಸಂಭವಿರುವುದರಿಂದ ಶನಿವಾರ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಮಳೆ ಅಡ್ಡಿಯಗುವ ಸಂಭವಿದೆ.

  • ಹೆಚ್ಚು ದಿನ ಬದುಕಲ್ಲ, ನಾನು ಬದುಕಬೇಕಂದ್ರೆ ನನ್ನನ್ನು ಗೆಲ್ಲಿಸಿ: ಹೆಚ್‍ಡಿಕೆ ಭಾವನಾತ್ಮಕ ಮಾತು

    ಹೆಚ್ಚು ದಿನ ಬದುಕಲ್ಲ, ನಾನು ಬದುಕಬೇಕಂದ್ರೆ ನನ್ನನ್ನು ಗೆಲ್ಲಿಸಿ: ಹೆಚ್‍ಡಿಕೆ ಭಾವನಾತ್ಮಕ ಮಾತು

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಕೊನೆ ಹಂತದ ಪ್ರಚಾರದಲ್ಲಿ ಎಲ್ಲ ಪಕ್ಷದ ನಾಯಕರು ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಬಹಿರಂಗ ಪ್ರಚಾರದ ಕೊನೆ ಕ್ಷಣದಲ್ಲಿ ಭಾವನಾತ್ಮಕ ಮಾತನಾಡಿದ್ದಾರೆ.

    ನಗರದ ಲಗ್ಗೆರೆಯಲ್ಲಿ ಇಂದು ತಮ್ಮ ಪಕ್ಷದ ಅಭ್ಯರ್ಥಿ ರಾಮಚಂದ್ರ ಪರ ಪ್ರಚಾರದಲ್ಲಿ ತೊಡಗಿದ್ದ ಕುಮಾರಸ್ವಾಮಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಆರೋಗ್ಯದ ಸಮಸ್ಯೆ ಇದ್ದರೂ ಇವತ್ತು ಕೊನೆಯ ಹಂತದಲ್ಲೂ ನಾನು 113 ಸ್ಥಾನಗಳನ್ನು ಗೆಲ್ಲಬೇಕು ಎಂದು ಹೋರಾಟ ಮಾಡುತ್ತಿದ್ದೇನೆ. ಬಹುಶಃ ನಾಡಿನ ಜನತೆಗೆ ನನ್ನ ಬಗ್ಗೆ ಅನುಕಂಪ ವ್ಯಕ್ತಪಡಿಸುತ್ತಿರುವುದನ್ನು ನಾನು ಕಾಣುತ್ತಿದ್ದೇನೆ. ಜನತೆಯ ಆರ್ಶೀವಾದ ಇವತ್ತು ಜೆಡಿಎಸ್ ಪಕ್ಷದ ಪರವಾಗಿದ್ದು ಒಂದು ನಿಜವಾದ ಜನತಾ ಸರ್ಕಾರವನ್ನು ಆಡಳಿತಕ್ಕ ತರಲಿಕ್ಕೆ ಎಲ್ಲರೂ ಸಹಕಾರ ಕೊಡುತ್ತಾರೆ ಎಂದು ನಂಬಿದ್ದೇನೆ ಎಂದು ಹೇಳಿದರು.

    ಈ ನಿಮ್ಮ ಕುಮಾರಸ್ವಾಮಿ ಬದುಕಿರಬೇಕು ಅಂದರೆ ಈ ಬಾರಿ ಜೆಡಿಎಸ್ ಗೆಲ್ಲಿಸಿ. ನನ್ನನ್ನು ಗೆಲ್ಲಿಸಿ ಬದುಕಿಸಿದರೆ ನಿಮ್ಮನ್ನು ನಾನು ಉಳಿಸುತ್ತೇನೆ. ನನ್ನನ್ನು ಬದುಕಿಸುವ ಶಕ್ತಿ ನಿಮ್ಮಲ್ಲಿ ಮಾತ್ರ ಇದೆ. ನಿಮಗಾಗಿ ಕೆಲಸ ಮಾಡಕ್ಕೆ ಸಿದ್ದ ಇದ್ದೇನೆ. ನನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿ. ನನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ನಾನು ಗೆದ್ದಂತೆ. ಅಭ್ಯರ್ಥಿಗಳು ದುಡ್ಡು ದುಡ್ಡು ಅಂತ ಬಂದು ಕುಳಿತಿದ್ದಾರೆ. ನಾನು ಚಂದಾ ಎತ್ತಿ ಅವರಿಗೆಲ್ಲಾ ದುಡ್ಡು ಕೊಡಬೇಕಾಗಿದೆ. ನಾನೆಲ್ಲಿಂದ ತರಲಿ ಎಂದು ಪ್ರಶ್ನಿಸಿ ಕುಮಾರಸ್ವಾಮಿ ಭಾವನಾತ್ಮಕವಾಗಿ ಮಾತನಾಡಿದರು.

    ಇಂದು ಕುಮಾರಸ್ವಾಮಿ ಮಾಧ್ಯಮಗಳ ಜೊತೆ ಸಂವಾದ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ರದ್ದಾಗಿದೆ.

  • ನಟಿ ಶೃತಿ ಪ್ರಚಾರದ ವೇಳೆ ಆತಂಕದ ವಾತಾವರಣ ನಿರ್ಮಾಣ

    ನಟಿ ಶೃತಿ ಪ್ರಚಾರದ ವೇಳೆ ಆತಂಕದ ವಾತಾವರಣ ನಿರ್ಮಾಣ

    ಧಾರವಾಡ: ನಟಿ ಹಾಗು ಬಿಜೆಪಿ ವಕ್ತಾರೆ ಶೃತಿ ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ವೇಳೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

    ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಎದುರುಗೊಂಡಾಗ ಒಬ್ಬರ ಮೇಲೋಬ್ಬರಂತೆ ಕಾರ್ಯಕರ್ತರು ಪಕ್ಷದ ಪರ ಘೋಷಣೆಗಳನ್ನು ಕೂಗಲು ಆರಂಭಿಸಿದ್ರು. ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಎರಡು ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಿ ಕಳುಹಿಸಿದ್ರು.

    ಶೃತಿ ಅವರ ಪ್ರಚಾರದ ಸಮಯದಲ್ಲಿಯೇ ಸಚಿವ ವಿನಯ್ ಕುಲಕರ್ಣಿ ಪ್ರಚಾರದ ವೇಳೆ ನಿಗದಿ ಆಗಿತ್ತು. ಈ ಹಿನ್ನೆಲೆಯಲ್ಲಿ ಮುಖಾಮುಖಿಯಾದ ಎರಡು ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿರತು.

  • ಇಂದು ಸಂಜೆಯಿಂದ ಎರಡು ದಿನ ರಾಜ್ಯಾದ್ಯಂತ ಮದ್ಯದಂಗಡಿ ಬಂದ್

    ಇಂದು ಸಂಜೆಯಿಂದ ಎರಡು ದಿನ ರಾಜ್ಯಾದ್ಯಂತ ಮದ್ಯದಂಗಡಿ ಬಂದ್

    ಬೆಂಗಳೂರು: ತಿಂಗಳ ಆರಂಭ ಮತ್ತು ವೀಕೆಂಡ್ ಅಂತಾ ಪಾರ್ಟಿ ಮೂಡ್‍ನಲ್ಲಿರುವ ಮದ್ಯಪ್ರಿಯರಿಗೆ ಚುನಾವಣಾ ಆಯೋಗ ಶಾಕ್ ನೀಡಿದೆ.

    ಶನಿವಾರ ರಾಜ್ಯಾದ್ಯಂತ ಮತದಾನ ನಡೆಯಲಿದ್ದು, ಇಂದು ಸಂಜೆ 5 ಗಂಟೆಯಿಂದ ಮದ್ಯದಂಗಡಿಗಳು ಬಂದ್ ಆಗಲಿವೆ. ಇಂದು ಸಂಜೆ 5 ಗಂಟೆಯಿಂದ ಮೇ 12ರ ಮಧ್ಯರಾತ್ರಿವರೆಗೆ ರಾಜ್ಯದ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಚುನಾವಣಾ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

    ವಿಧಾನಸಬಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಚುನಾವಣಾ ಆಯೋಗ ಎಲ್ಲ ರೀತಿಯಿಂದಲೂ ಮುನ್ನೇಚ್ಚರಿಕಾ ಕ್ರಮಗಳನ್ನು ಅನುಸರಿಸುತ್ತಿದೆ. ಇದೇ ಶನಿವಾರ ಮೇ 12ರಂದು ಮತದಾನ ನಡೆದರೆ, ಮೇ 15ರಂದು ಫಲಿತಾಂಶ ಹೊರಬರಲಿದೆ.