Tag: karnataka elections

  • ಕೋಲಾರ ಜಿಲ್ಲೆಯ ವಿಶೇಷತೆ ಏನು? ಅಖಾಡದಲ್ಲಿ ಯಾರಿದ್ದಾರೆ?

    ಕೋಲಾರ ಜಿಲ್ಲೆಯ ವಿಶೇಷತೆ ಏನು? ಅಖಾಡದಲ್ಲಿ ಯಾರಿದ್ದಾರೆ?

    ಕೋಲಾರ: ಹೆಸರು ಕೇಳಿದ ತಕ್ಷಣ ನೆನಪಾಗುವುದು ಚಿನ್ನದ ಗಣಿಗಳು. ಈ ಚಿನ್ನದ ಗಣಿಗಾರಿಕೆಗೆ ಕೋಲಾರ ಜಿಲ್ಲೆ ಪ್ರಸಿದ್ಧವಾಗಿದ್ದು, ಈ ಹಿಂದೆ ಕೋಲಾರವನ್ನು ಕುವಲಾಲಪುರ ಎಂದು ಕರೆಯುತ್ತಿದ್ದರು.

    ಪ್ರಮುಖ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಕೋಲಾರ ಗಂಗರ ಆಳ್ವಿಕೆಯಲ್ಲಿ ರಾಜಧಾನಿಯಾಗಿತ್ತು. ನಂತರ ಚೋಳರ ಆಳ್ವಿಕೆಗೆ ಒಳಪಟ್ಟಿತ್ತು. 4 ರಿಂದ 19ನೇ ಶತಮಾನದವರೆಗೆ ಕದಂಬ, ಗಂಗ, ಪಲ್ಲವ, ಚೋಳ, ಚಾಲುಕ್ಯ, ಹೊಯ್ಸಳ, ರಾಷ್ಟ್ರಕೂಟ ಅರಸರು, ಮೈಸೂರಿನ ಅರಸರು, ಪಾಳೇಗಾರರು, ಹೈದರಾಲಿ ಹಾಗೂ ಟಿಪ್ಪು ಸುಲ್ತಾನರ ಆಳ್ವಿಕೆಗೆ ಒಳಪಟ್ಟಿತ್ತು. ಗಂಗರ ಕಾಲದಲ್ಲಿ ನಿರ್ಮಾಣವಾದ ಹಲವು ದೇವಾಲಯಗಳು ಇಂದಿಗೂ ಪ್ರಸಿದ್ಧಿ ಪಡೆದಿದೆ. ಮುಖ್ಯವಾಗಿ ಕೋಲಾರ ನಗರದ ಹೃದಯ ಭಾಗದಲ್ಲಿರುವ ಕೋಲಾರಮ್ಮ ದೇವಾಲಯ ಹಾಗೂ ಸೋಮನಾಥ ದೇವಾಲಯ ಪ್ರಮುಖವಾದದ್ದು. ಉಳಿದಂತೆ ಅಂತರಗಂಗೆ ಬೆಟ್ಟ, ಕೋಟಿ ಲಿಂಗ, ಮುಳಬಾಗಿಲು ಅಂಜನೇಯಸ್ವಾಮಿ ದೇವಾಲಯ, ಚಿಕ್ಕ ತಿರುಪತಿ, ಬಂಗಾರ ತಿರುಪತಿ ಸ್ಥಳಗಳು ಪ್ರಮುಖ ಧಾರ್ಮಿಕ ಕ್ಷೇತ್ರಗಳಾಗಿದೆ.

    ರಾಜಕೀಯವಾಗಿ ರಾಜ್ಯಕ್ಕೆ ಮೊದಲ ಸಿಎಂ ಕೆ ಚಂಗಲರಾಯರೆಡ್ಡಿ ಕೋಲಾರದವರು ಎಂಬ ಹೆಗ್ಗಳಿಯೂ ಪಡೆದಿದೆ. ಇನ್ನು 2008ರಲ್ಲಿ ಕೋಲಾರದಿಂದ ಚಿಕ್ಕಬಳ್ಳಾಪುರವನ್ನು ವಿಭಜನೆ ಮಾಡಿ ಸ್ವತಂತ್ರ್ಯ ಜಿಲ್ಲೆಯಾಗಿ ಘೋಷಿಸಲಾಯಿತು. 2011 ರ ಜನಗಣತಿ ಪ್ರಕಾರ ಕೋಲಾರ ಜಿಲ್ಲೆ 1,536,401 ಜನಸಂಖ್ಯೆ ಹೊಂದಿದೆ.

    ಜಿಲ್ಲೆಯ ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು, ಶ್ರೀನಿವಾಸಪುರ, ಮಾಲೂರು, ಕೋಲಾರ ತಾಲೂಕು ಕೇಂದ್ರಗಳಾಗಿವೆ. ಜಿಲ್ಲೆಯಲ್ಲಿ ಕುರುಬ, ಒಕ್ಕಲಿಗ, ಪರಿಶಿಷ್ಟ ಜಾತಿ ಸೇರಿದಂತೆ ಮುಸ್ಲಿಂ ಮತಗಳು ಇಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಡಿಕೆ ರವಿ ಆತ್ಮಹತ್ಯೆ ಪ್ರಕರಣ ಹಾಗೂ ಶಾಶ್ವತ ನೀರಾವರಿ ಯೋಜನೆ ಜಾರಿ ಪ್ರಮುಖ ಚರ್ಚೆಯ ವಿಷಯಗಳಾಗಿದೆ.

    ಕೋಲಾರ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಪ್ರಮುಖ ಕೇಂದ್ರವಾಗಿದ್ದು, ಕಳೆದ ಬಾರಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ವರ್ತೂರ್ ಪ್ರಕಾಶ್ ಜಯಗಳಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದರು. ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳಲ್ಲಿ ವರ್ತೂರ್ ಪ್ರಕಾಶ್ ಸ್ವತಃ `ನಮ್ಮ ಕಾಂಗ್ರೆಸ್’ ಪಕ್ಷ ಸ್ಥಾಪಿಸಿ ಕಣಕ್ಕೆ ಇಳಿದಿದ್ದಾರೆ.

    ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ನಿಂದ ನಿವೃತ್ತ ಐಎಎಸ್ ಅಧಿಕಾರಿ ಸೈಯದ್ ಜಮೀರ್ ಪಾಷ ಕಣಕ್ಕೆ ಇಳಿದಿದ್ದಾರೆ. ಆದರೆ ಅಭ್ಯರ್ಥಿ ಆಯ್ಕೆಗೆ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಸುದರ್ಶನ್ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ ಜೆಡಿಎಸ್ ನಿಂದ ಕೆ ಶ್ರೀನಿವಾಸ್ ಗೌಡ ಅವರು ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಬಿಜೆಪಿ ಯಿಂದ ಓಂ ಶಕ್ತಿ ಚಲಪತಿ ಕಣ್ಣಕ್ಕೆ ಇಳಿದಿದ್ದಾರೆ. 2013 ಚುನಾವಣೆಯಲ್ಲಿ ವರ್ತೂರ್ ಪ್ರಕಾಶ್ 62,957 ಮತ ಹಾಗೂ ಜೆಡಿಎಸ್ ನ ಕೆ ಶ್ರೀನಿವಾಸ ಗೌಡ 50,366 ಮತ ಪಡೆದಿದ್ದರು.

    ಕ್ಷೇತ್ರದಲ್ಲಿ ಈ ಬಾರಿ ಕೋಲಾರ ಜಿಲ್ಲೆಯಲ್ಲಿ ಡಿಸಿ ಆಗಿ ಕಾರ್ಯನಿರ್ವಹಿಸಿದ್ದ ಡಿಕೆ ರವಿ ಅವರ ತಾಯಿ ಗೌರಮ್ಮ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಸದ್ಯ ಕ್ಷೇತ್ರದ ಹಾಲಿ ಶಾಸಕರಾಗಿರುವ ವರ್ತೂರ್ಪ್ರಕಾಶ್ ಅವರಿಗೆ ಜೆಡಿಎಸ್ ನ ಶ್ರೀನಿವಾಸಗೌಡ ಪ್ರಬಲ ಪೈಪೋಟಿ ಜೊತೆಗೆ ಟಾಂಗ್ ನೀಡಲು ಮುಂದಾಗಿದ್ದಾರೆ. ಡಿ.ಕೆ.ರವಿ ತಾಯಿ ಗೌರಮ್ಮ ಅವರು ಪರೀಕ್ಷೆ ಗಿಳಿದಿದ್ದಾರೆ.

    ಬಂಗಾರಪೇಟೆ ಕ್ಷೇತ್ರವು ಬೆಂಗಳೂರು ನಗರ ಸೇರಿದಂತೆ ಇತರೇ ಪ್ರದೇಶಗಳಿಗೆ ಹೊಂದಿರುವ ರೈಲ್ವೇ ಸಂಪರ್ಕದ ಹಿನ್ನೆಲೆ ಹೆಚ್ಚು ಹೆಸರು ಪಡೆದಿದೆ. ಆದರೆ ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದ್ದ ಬಂಗಾರಪೇಟೆ ಡಿ.ಕೆ.ರವಿ ಅವರ ಸಾವಿನ ಬಳಿಕ ಹೆಚ್ಚು ಚರ್ಚೆಗೆ ಕಾರಣವಾಗಿದೆ. ಅಲ್ಲದೇ ಕ್ಷೇತ್ರದ ಅಭಿವೃದ್ಧಿಯೂ ಪ್ರಮುಖ ಚುನಾವಣಾ ವಿಷಯವಾಗಿದೆ. ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯ ಪಡೆದಿದ್ದ ಎಸ್‍.ಎನ್ ನಾರಾಯಣಸ್ವಾಮಿ 71,570 ಮತ ಪಡೆದಿದ್ದರು. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಇಎಂ ನಾರಾಯಣಸ್ವಾಮಿ 43,193 ಮತ ಪಡೆದಿದ್ದರು. 2011 ರಲ್ಲಿ ನಡೆದ ಉಪಚುನಾವಣೆಯಲ್ಲಿ ಇಎಂ ನಾರಾಯಣಸ್ವಾಮಿ ಜಯ ಗಳಿಸಿದ್ದರು. ಸದ್ಯ ಈ ಬಾರಿ ಎಂ. ನಾರಾಯಣಸ್ವಾಮಿಗೆ ಟಿಕೇಟ್ ಸಿಗದ ಹಿನ್ನೆಲೆ ಬಿಜೆಪಿ ತೊರೆದು ಜೆಡಿಎಸ್ ಬೆಂಬಲ ಸೂಚಿಸಿದ್ದಾರೆ. ಸಧ್ಯ ಜೆಡಿಎಸ್ ನ ಮಲ್ಲೇಶ್ ಬಾಬು ಹಾಗೂ ಬಿಜೆಪಿ ಬಿ.ಪಿ.ವೆಂಕಟಮುನಿಯಪ್ಪ ನಡುವೆ ಎರಡನೇ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ.

    ಪಕ್ಷಕ್ಕಿಂತ ವ್ಯಕ್ತಿ ಪ್ರತಿಷ್ಠೆಯ ಕಣವಾಗಿರುವ ಶ್ರೀನಿವಾಸಪುರ ಕ್ಷೇತ್ರ ಪ್ರತಿ ಬಾರಿ ಚುನಾವಣೆಯಲ್ಲಿ ಹಾಲಿ ಶಾಸಕರನ್ನು ಸೋಲಿಸಿ ಎದುರಾಳಿ ಅಭ್ಯರ್ಥಿಗೆ ಜಯ ನೀಡುತ್ತ ಬಂದಿದೆ. ಸದ್ಯ ಹಾಲಿ ಶಾಸಕರಾಗಿರುವ ಹಾಗೂ ಆರೋಗ್ಯ ಸಚಿವರಾದ ರಮೇಶ್ ಕುಮಾರ್ ಅವರಿಗೆ ಜೆಡಿಎಸ್ ನ ಜಿ.ಕೆ.ವೆಂಕಟಶಿವಾ ರೆಡ್ಡಿ ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ಒಬ್ಬರು ರಮೇಶ್ ಕುಮಾರ್ ಅವರು ಸ್ವಾಮಿ ಎಂದು ಹೆಸರು ಪಡೆದಿದ್ದರೆ, ವೆಂಕಟಶಿವಾ ರೆಡ್ಡಿ ಅವರು ರೆಡ್ಡಿ ಎಂದೇ ಪರಿಚಿತರು.

    ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಪ್ರಮುಖ ಚರ್ಚೆಯ ವಿಷಯವಾಗಿ ಕಾಣುತ್ತಿದೆ. ಕೋಲಾರ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯಾದ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರುವ ಬದಲಾಗಿ ಕೆಸಿ ವ್ಯಾಲಿ ನೀರು ನೀಡುವ ನಿರ್ಧಾರವು ಪ್ರಮುಖ ವಿಷಯವಾಗಿದೆ. ಕ್ಷೇತ್ರದಲ್ಲಿ ರೆಡ್ಡಿ ಹಾಗೂ ಒಕ್ಕಲಿಗ ಮತಗಳ ಹೆಚ್ಚು ನಿರ್ಣಾಯವಾಗಿದೆ. ಕಳೆದ ಬಾರಿ ರಮೇಶ್ ಕುಮಾರ್ 83,426 ಮತ ಪಡೆದಿದ್ದರೆ, ವೆಂಕಟಶಿವಾ ರೆಡ್ಡಿ 79,533 ಮತ ಪಡೆದಿದ್ದರು. ಇಬ್ಬರೆ ವ್ಯಕ್ತಿಗಳಾದ್ರು ಇಬ್ಬರ ಜಯಕ್ಕೆ ಕೆಲವೆ ಕೆಲ ಮತಗಳ ಅಂತರವಷ್ಟೆ ಕಾಯ್ದುಕೊಂಡೆ ಬಂದಿರುವುದು 40 ವರ್ಷಗಳ ತಾಜಕಾರಣಕ್ಕೆ ಸಾಕ್ಷಿ.

    ಬೆಂಗಳೂರಿಗೆ ಹೊಂದಿಕೊಂಡಿರುವ ಮಾಲೂರು ಕ್ಷೇತ್ರದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಉತ್ತಮ ಬೆಳವಣಿಗೆ ಪಡೆಯುತ್ತಿದೆ. ಸದ್ಯ ಕ್ಷೇತ್ರದಲ್ಲಿ ಜೆಡಿಎಸ್ ನ ಮಂಜುನಾಥ ಗೌಡರು ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿರುವ ಕೃಷ್ಣಯ್ಯ ಶೆಟ್ಟಿ ಅವರು ಉಚಿತ ಧಾನ, ಧರ್ಮಗಳ ಹಾಗೂ ಧಾರ್ಮಿಕ ಕಾರ್ಯಗಳ ಮೂಲಕ ಹೆಚ್ಚು ಪ್ರಸಿದ್ಧಿ ಪಡೆದಿದ್ದಾರೆ. ಕಳೆದ ಬಾರಿ ಮಂಜುನಾಥ್ ಅವರು 57,645 ಮತ ಪಡೆದಿದ್ದಾರೆ, ಕೃಷ್ಣಯ್ಯ ಶೆಟ್ಟಿ ಪಕ್ಷೇತರ ರಾಗಿ ಸ್ಪರ್ಧೆ ಮಾಡಿ 38,876 ಮತ ಪಡೆದು ಸೋಲುಂಡಿದ್ದರು. ಈ ಬಾರಿಯೂ ಇಬ್ಬರ ನಡುವೆ ನಾನೇನೂ ಕಡಿಮೆ ಇಲ್ಲವೆಂಬಂತೆ ಪೈಪೋಟಿ ಕಾಂಗ್ರೇಸ್ ನ ಅಭ್ಯರ್ಥಿ ಕೆ.ವೈ.ನಂಜೇಗೌಡ ಕಣದಲ್ಲಿದ್ದು, ಮೂವರ ನಡುವೆ ತೀವ್ರ ಪೈಪೋಟಿ ಮುಂದುವರಿದಿದೆ.

    ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬೀಗಿ ಹಿಡಿತ ಹೊಂದಿರುವ ಏಕೈಕ ಕ್ಷೇತ್ರ ಕೆಜಿಎಫ್ ಎಂದರೆ ತಪ್ಪಾಗಲಾರದು. ಸಂಪಂಗಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೆ ಅವರ ತಾಯಿ ರಾಮಕ್ಕ ಗೆಲ್ಲಿಸಿಕೊಂಡ ಬಿಜೆಪಿ ಸಂಪಂಗಿ ಅವರಿಗೆ ಹೆಚ್ಚು ಪ್ರಭಾವ ಹೊಂದಿದ್ದು, ಕಳೆದ ಬಾರಿ ಅವರ ತಾಯಿ ರಾಮಕ್ಕ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಪಡೆದಿದ್ದರು. ಆದರೆ ಈ ಬಾರಿಯೂ ಟಿಕೇಟ್ ಕೈತಪ್ಪಿದ ಬೆನ್ನಲ್ಲೆ ಸಂಪಂಗಿ ಮಗಳು ಆಶ್ವಿನಿ ಎನ್ ಬಿಜೆಪಿ ಯಿಂದ ಸ್ಪರ್ಧೆ ಮಾಡುತ್ತಿದ್ದಾರೆ.

    ಬೆಂಗಳೂರಿಗೆ ಉತ್ತಮ ರೈಲ್ವೇ ಸಂಪರ್ಕ ಹೊಂದಿರುವುದರಿಂದ, ಚಿನ್ನದ ಗಣಿ ಮುಚ್ಚಿದ ನಂತರ ಕ್ಷೇತ್ರ 25 ಸಾವಿರಕ್ಕೂ ಹೆಚ್ಚು ಜನರು ಉದ್ಯೋಗಕ್ಕಾಗಿ ರಾಜಧಾನಿಯನ್ನೇ ಮೆಚ್ಚಿಕೊಂಡಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಕೆಜಿಎಫ್ ಗಣಿಗಳ ಪುನರ್ ಆರಂಭವೂ ಚರ್ಚೆಯ ವಿಷಯವಾಗಿದೆ. ಕ್ಷೇತ್ರದ ತಮಿಳು ಭಾಷೆ ಮಾತನಾಡುವ ಮತದಾರರು ಮುಖ್ಯ ಪಾತ್ರವಹಿಸುತ್ತಾರೆ. ಕ್ಷೇತ್ರದಲ್ಲಿ ಹೆಚ್ಚು ಪೈಪೋಟಿ ನೀಡುತ್ತಿರುವ ಜೆಡಿಎಸ್ ಅಭ್ಯರ್ಥಿ ಭಕ್ತವತ್ಸಲಂ ಈ ಬಾರಿಯೂ ಕಣದಲ್ಲಿ ಮುಂದುವರೆದಿದ್ದಾರೆ. ಉಳಿದಂತೆ ಕಾಂಗ್ರೆಸ್ ನಿಂದ ಸಂಸದ ಮುನಿಯಪ್ಪ ಪುತ್ರಿ ರೂಪಕಲಾ ಬಿಜೆಪಿ ಗೆ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ, ಆರ್ ಪಿ ಐ ನಿಂದ ಮಾಜಿ ಶಾಸಕ ರಾಜೇಂದ್ರನ್, ಸಿಪಿಎಂ ನಿಂದ ತಂಗರಾಜ್ ಕಣದಲ್ಲಿದ್ದಾರೆ. ಕಳೆದ ಬಾರಿ ಹಾಲಿ ಶಾಸಕಿ ರಾಮಕ್ಕ 55,014 ಮತ ಹಾಗೂ ಜೆಡಿಎಸ್ ನಿಂದ ಭಕ್ತವತ್ಸಲಂ 28,992 ಮತ ಪಡೆದಿದ್ದರು.

    ಚುನಾವಣೆಗೂ ಮುನ್ನವೆ ಕಾಂಗ್ರೇಸ್ ಅಭ್ಯರ್ಥಿ ನಾಮಪತ್ರ ತಿರಸ್ಕಾರ ಆಗುವ ಮೂಲಕ ಕಾಂಗ್ರೇಸ್ ಗೆ ಮರ್ಮಾಗತ ಉಂಟಾಗಿತ್ತು, ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆಯೇ ರಾಜ್ಯ ಗಮನ ಸೆಳೆದಿದ್ದ ಮುಳಬಾಗಿಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ. ಮೀಸಲು ಕ್ಷೇತ್ರವಾಗಿರುವುದರಿಂದ ಕಳೆದ ಬಾರಿ ಜಯಗಳಿಸಿದ್ದ ಕೊತ್ತೂರು ಮಂಜುನಾಥ್ ನಕಲಿ ಜಾತಿ ಪ್ರಮಾಣ ಪತ್ರ ನೀಡಿರುವ ಆರೋಪದಲ್ಲಿ ಈ ಬಾರಿ ಸ್ಪರ್ಧೆ ಮಾಡುವ ಹಕ್ಕನ್ನೇ ಕಳೆದುಕೊಂಡಿದ್ದಾರೆ.

    ಆರ್ಥಿಕವಾಗಿ ಬಹಳ ಹಿಂದುಳಿದಿರುವ ಈ ಕ್ಷೇತ್ರವೂ ಅಭಿವೃದ್ಧಿಯ ವಿಚಾರದಲ್ಲಿಯೂ ಹಿಂದುಳಿದಿದೆ. ಕ್ಷೇತ್ರದಲ್ಲಿ ರೆಡ್ಡಿ, ಒಕ್ಕಲಿಗ ಮತದಾರರು ಜೊತೆ ಮುಸ್ಲಿಂ ಮತಗಳು ಹೆಚ್ಚು ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಬಾರಿ ಬಿಜೆಪಿಯಿಂದ ಅಮರೇಶ್ ಸ್ಪರ್ಧೆ ನಡೆಸಿದ್ದರೆ, ಜೆಡಿಎಸ್ ನಿಂದ ಸಮೃದ್ದಿ ಮಂಜುನಾಥ್ ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಕೋಲಾರ ಎಂಪಿ ಕೆ.ಎಚ್ ಮುನಿಯಪ್ಪ ಅವರ ದ್ವಿತೀಯ ಪುತ್ರಿ ಕೊನೆ ಗಳಿಗೆಯಲ್ಲಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಯಾಗಲು ರಾಜಕೀಯ ಕುತಂತ್ರವೆ ನಡೆದಿತ್ತು. ಬಳಿಕ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಹಿಂಪಡೆದಿದ್ದರು. 2013 ರ ಚುನಾವಣೆಯಲ್ಲಿ ಮಂಜುನಾಥ್ 73,146 ಮತ ಹಾಗೂ ಜೆಡಿಎಸ್ ಮುನಿ ಆಂಜನಪ್ಪ ಅವರು 39,412 ಮತ ಪಡೆದಿದ್ದರು. ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲದ ಕಾರಣ ಸ್ವತಂತ್ರವಾಗಿ ನಾಮಪತ್ರ ಸಲ್ಲಿಸಿರುವ ಪವರ್ ಮಿನಿಸ್ಟರ್ ಡಿಕೆಶಿ ಹಾಗೂ ಪರಮೇಶ್ವರ ಅವರ ಆಪ್ತ ಎಚ್.ವೆಂಕಟೇಶ್ ಗೆ ಕಾಂಗ್ರೆಸ್ ಬೆಂಬಲ ನೀಡಲು ನಿರ್ಧರಿಸಿದೆ.

    ಒಟ್ಟಿನಲ್ಲಿ ಜಿಲ್ಲೆಯ 6 ವಿಧಾನಸಭೆ ಕ್ಷೇತ್ರಗಳ ಪೈಕಿ ಜೆಡಿಎಸ್ ಮೊದಲ ಸ್ಥಾನ 3 ಅಥವಾ 4 ಸ್ಥಾನ, ಕಾಂಗ್ರೇಸ್ ಎರಡನೆ ಸ್ಥಾನ 2 ಅಥವಾ 3 ಹಾಗೂ ಬಿಜೆಪಿ ಮೂರನೆ ಸ್ಥಾನಕ್ಕೆ ಅಂದರೆ 1 ಸ್ಥಾನಕ್ಕೆ ತೃಪ್ತಿ ಪಡಬೇಕಿದೆ. ಈ ಮಧ್ಯೆ ಒಂದು ಪಕ್ಷೇತರ ಅಥವಾ ನಮ್ಮ ಕಾಂಗ್ರೇಸ್ ಗೆದ್ದರೆ ಅಚ್ಚರಿ ಏನಿಲ್ಲ.

  • ಕಾಂಗ್ರೆಸ್ `C Six’ ರೋಗದಿಂದ ರಾಜ್ಯವನ್ನು ರಕ್ಷಿಸಿ: ಪ್ರಧಾನಿ ಮೋದಿ

    ಕಾಂಗ್ರೆಸ್ `C Six’ ರೋಗದಿಂದ ರಾಜ್ಯವನ್ನು ರಕ್ಷಿಸಿ: ಪ್ರಧಾನಿ ಮೋದಿ

    ಬೆಳಗಾವಿ/ಕೋಲಾರ/ಚಿಕ್ಕಮಗಳೂರು: ರಾಜ್ಯದ ಮುಂದಿನ 5 ವರ್ಷಗಳ ಭವಿಷ್ಯ ನಿರ್ಧಾರವಾಗುವ ದಿನಕ್ಕೆ ಇರುವುದು ಕೇವಲ ಮೂರು ದಿನ ಮಾತ್ರ. ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಒಂದು ದಿನ ಮೊದಲು ರಾಜ್ಯದ ಎಲ್ಲೆಡೆ ಪ್ರಚಾರದ ಕಾವು ಹೆಚ್ಚಾಗಿತ್ತು.

    ಇಂದು ಪ್ರಧಾನಿ ಮೋದಿ ನಾಲ್ಕು ಕಡೆ ಬಿರುಸಿನ ಪ್ರಚಾರ ನಡೆಸುವ ಮೂಲಕ ಕೇತ್ರಗಳಲ್ಲಿ ಮತದಾರರ ಮನ ಗೆಲ್ಲಲು ಯತ್ನಿಸಿದರು. ತಮ್ಮ ನಾಲ್ಕು ಪ್ರಚಾರ ಸಮಾವೇಶಗಳಲ್ಲಿ ಕಾಂಗ್ರೆಸ್ ಟಾರ್ಗೆಟ್ ಮಾಡಿದ್ದ ಮೋದಿ ಆರೋಪಗಳ ಸುರಿಮಳೆಗೈದರು.

    ಚಿಕ್ಕಮಗಳೂರಿನ ಸಮಾವೇಶದಲ್ಲಿ ಬೆಂಗಳೂರಿನ ಜಾಲಹಳ್ಳಿ ಅಪಾರ್ಟ್‍ಮೆಂಟ್‍ನಲ್ಲಿ ದೊರೆತ ರಾಶಿ ರಾಶಿ ವೋಟರ್ ಐಡಿ ವಿಷಯವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷ ಆಕ್ರಮ ಮತದಾನ ಮಾಡಲು ಪ್ಲಾನ್ ಮಾಡಿದೆ ಎಂದು ಆರೋಪಿಸಿದರು. ಅಲ್ಲದೇ ರಾಜ್ಯದಲ್ಲಿ ನಡೆಯುತ್ತಿರುವ ಐಟಿ ದಾಳಿ ಬಗ್ಗೆಯೂ ಪ್ರಸ್ತಾಪಿಸಿದ ಮೋದಿ ಬದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹಣ ಹೊಳೆ ಹರಿಸುತ್ತಿದೆ ಎಂದು ಆರೋಪಿಸಿದರು.

    ಇದಕ್ಕೂ ಮುನ್ನ ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ `ಸಿ ಸಿಕ್ಸ್’ ವೈರಸ್ ದಾಳಿ ಮಾಡಿದೆ. ಸಿ ಸಿಕ್ಸ್ ಅಂದರೆ ಕಾಂಗ್ರೆಸ್, ಕಮ್ಯುನಲ್, ಕ್ಯಾಸ್ಟಿಸಮ್, ಕರಪ್ಶನ್, ಕ್ರೈಂ, ಕಂಟ್ರಾಕ್ಟ್ ರೋಗಗಳಿಂದ ರಾಜ್ಯದ ವ್ಯವಸ್ಥೆ ಹಾಳಾಗಿದೆ. ಕಾಂಗ್ರೆಸ್ ಸಂವಿಧಾನದ ರೀತಿ ನೀತಿಗಳನ್ನೇ ಹಾಳುಮಾಡಿದೆ, ಇವೆಲ್ಲವೂ ಕರ್ನಾಟಕದ ಭವಿಷ್ಯವನ್ನೇ ಹಾಳು ಮಾಡುತ್ತಿದೆ. ಮೈತ್ರಿ ಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳದೇ ನಾನೇ ಮುಂದಿನ ಪ್ರಧಾನಿ ಎಂದು ಹೇಳುವ ಮೂಲಕ ರಾಹುಲ್ ಅಹಂಕಾರ ತೋರಿದ್ದಾರೆ. ಕಾಂಗ್ರೆಸ್ ಡೀಲ್ ಪಾರ್ಟಿ. ಇದನ್ನು ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರದ ಮೊಯ್ಲಿ ಅವರು ಹೇಳಿದ್ದಾರೆ ಎಂದರು.

    ಬೆಳಗಾವಿಯ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಭಾವಚಿತ್ರವೊಂದಿರುವ ಕುಕ್ಕರ್ ವಶಕ್ಕೆ ಪಡೆದ ವಿಚಾರವನ್ನು ಪ್ರಸ್ತಾಪಿಸಿದ ಅವರು, ಇದು ಪವಿತ್ರ ಚುನಾವಣೆಯೇ, ಇದು ಶೇ.10 ರಷ್ಟು ಪಡೆದ ಹಣವೇ ಎಂದು ಪ್ರಶ್ನಿಸಿದರು. ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಆಯ್ಕೆ ಮಾಡಲಾಗಿದೆ. ಮೊದಲ ಹಂತದಲ್ಲಿಯೇ ಬೆಳಗಾವಿ ನಗರ ಆಯ್ಕೆ ಆಗಿತ್ತು. ಆದರೇ ಕರ್ನಾಟಕದಲ್ಲಿ ನಿದ್ರೆ ಮಾಡುವ ಸರ್ಕಾರವಿದೆ. ಸ್ಮಾಟ್ ಸಿಟಿ ನಿರ್ಮಾಣ ಮಾಡಲು ನೀಡಲಾಗಿದ್ದ 836 ಕೋಟಿ ರೂ. ಗಳಲ್ಲಿ ಕೇವಲ 12 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಆರೋಪಿಸಿದರು.

    ಇದಕ್ಕೂ ಮುನ್ನ ತಮ್ಮ ಭಾಷಣದಲ್ಲಿ ಜಿಲ್ಲೆಯಲ್ಲಿ ಹರಿಯುವ ಐದು ನದಿಗಳನ್ನು ಪ್ರಸ್ತಾಪಿಸಿದ ಅವರು, ಬೆಳಗಾವಿಯಲ್ಲಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯ ಕೇಶಿ, ಮಾರ್ಖಂಡೇಯ ಪ್ರಮುಖ ಐದು 5 ನದಿ ಹರಿಯುತ್ತಿವೆ. ಆದ್ರು ಈ ಭಾಗದಲ್ಲಿ ನೀರಿನ ಸಮಸ್ಯೆ ಇದೇ. ಇದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದರು.

    https://www.youtube.com/watch?v=xNBtimUAH3s

    https://www.youtube.com/watch?v=VWX-Sv-6dpo

     

  • ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – 80 ಕೆಜಿ ಚಿಕನ್, 10 ಲಕ್ಷ ಹಣ ಜಪ್ತಿ

    ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – 80 ಕೆಜಿ ಚಿಕನ್, 10 ಲಕ್ಷ ಹಣ ಜಪ್ತಿ

    ಬೀದರ್/ಚಿಕ್ಕಬಳ್ಳಾಪುರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಚುನಾವಣಾ ಅಧಿಕಾರಿಗಳ ಕಾರ್ಯಾಚರಣೆ ಭರ್ಜರಿಯಾಗಿ ನಡೆಯುತ್ತಿದ್ದು, ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಹಣ ಮತ್ತು ಚಿಕನ್ ನನ್ನು ವಶಪಡಿಸಿಕೊಂಡಿದ್ದಾರೆ.

    ಬೀದರ್ ನ ಗಾಂಧಿಗಂಜನ್ ನಲ್ಲಿ ಮತದಾರರಿಗೆ ಹಂಚುತ್ತಿದ್ದ ಬರೋಬ್ಬರಿ 10 ಲಕ್ಷ 50 ಸಾವಿರ ಹಣವನ್ನು ಚುನಾವಣಾ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಗಾಂಧಿಗಂಜ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ಹಿಡಿದಿದ್ದು, ಒಬ್ಬ ಆರೋಪಿಯಾದ ಅಬ್ದುಲ್ ಸಮ್ಮದ್ ನನ್ನು ಬಂಧಿಸಿದ್ದಾರೆ. ಆದರೆ ಒಬ್ಬ ಆರೋಪಿ ಪರಾರಿಯಾಗಿದ್ದಾರೆ.

    ಜಪ್ತಿಯಾದ ಹಣ ಕಾಂಗ್ರೆಸ್ ಅಭ್ಯರ್ಥಿ ರಹೀಂ ಖಾನ್‍ ಗೆ ಸೇರಿದ್ದು ಎನ್ನಲಾಗಿದೆ. ಈ ಘಟನೆ ಸಂಬಂಧ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಇನ್ನು ಚಿಕ್ಕಬಳ್ಳಾಪುರದಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಚಿಕನ್ ನನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಚಿಂತಾಮಣಿ ತಾಲೂಕು ಜೀಡರಹಳ್ಳಿ ಗ್ರಾಮದ ಬಳಿ ಮಾರುತಿ ಓಮ್ನಿ ಕೆಎ-40 ಎಂ-4588 ಕಾರಿನಲ್ಲಿ ಚಿಕನ್ ಸಾಗಾಟ ಮಾಡುತ್ತಿದ್ದರು.

    ಈ ವೇಳೆ ಚುನಾವಣಾಧಿಕಾರಿಗಳು ಖಚಿತ ಮಾಹಿತಿ ತಿಳಿದು ದಾಳಿ ನಡೆಸಿದ್ದಾರೆ. ಆಗ ತಲಾ ಒಂದು ಕೆಜಿಯ 80 ಕೆಜಿ ಚಿಕನ್ ಪಾಕೆಟ್ ಪತ್ತೆಯಾಗಿದ್ದು, ಅಧಿಕಾರಿಗಳು ಕಾರು ಸಮೇತ ಚಿಕನ್ ಜಪ್ತಿ ಮಾಡಿದ್ದಾರೆ. ದಾಳಿಯ ವೇಳೆ ಚಾಲಕ ಹಾಗೂ ಮತ್ತೋರ್ವ ಕಾರು ಬಿಟ್ಟು ಪರಾರಿಯಾಗಿದ್ದಾರೆ.

  • ಕೊನೆ ಕ್ಷಣದಲ್ಲಿ ಪ್ರಚಾರದ ಅಖಾಡಕ್ಕೆ ಧುಮುಕಿದ ಪದ್ಮಾವತಿ

    ಕೊನೆ ಕ್ಷಣದಲ್ಲಿ ಪ್ರಚಾರದ ಅಖಾಡಕ್ಕೆ ಧುಮುಕಿದ ಪದ್ಮಾವತಿ

    ನವದೆಹಲಿ: ಎಐಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥೆ, ಮಂಡ್ಯ ಮಾಜಿ ಸಂಸದೆ ರಮ್ಯಾ ಕೊನೆಗೂ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಪ್ರವೇಶ ಮಾಡಿದ್ದು, ಮೊಳಕಾಲ್ಮುರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಯೋಗೇಶ್ ಬಾಬು ಪರ ಆನ್ ಲೈನ್ ಪ್ರಚಾರ ನಡೆಸಿದ್ದಾರೆ.

    ಈ ಕುರಿತು ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ದೇಶದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ದೇಣಿಗೆ ಪಡೆಯವ ಪ್ರಕ್ರಿಯೆಯನ್ನು ಆನ್‍ಲೈನ್ ಮೂಲಕ ಜಾರಿಗೆ ತರುತ್ತಿದೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆ ಹಣದ ಕುರಿತು ಪರದರ್ಶಕತೆಯನ್ನು ತರಲು ಯತ್ನಿಸುತ್ತಿದೆ. ಅದ್ದರಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಯೋಗೇಶ್ ಬಾಬು ಅವರಿಗೆ ದೇಣಿಗೆ ನೀಡಿ ಎಂದು ಮನವಿ ಮಾಡಿದ್ದಾರೆ.

    ಶ್ರೀ ರಾಮುಲುಗೆ ಟಾಂಗ್: ಪ್ರಚಾರದ ವಿಡಿಯೋದಲ್ಲಿ ರಮ್ಯಾ ಸಂಸದ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೂ ಟಾಂಗ್ ನೀಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಡಾ. ಯೋಗೇಶ್ ಬಾಬು ಶ್ರೀ ರಾಮುಲು ಅವರ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಶ್ರೀ ರಾಮುಲು ಬಳ್ಳಾರಿ ಗಣಿ ಲೂಟಿ ಪ್ರಕಣದಲ್ಲಿ ಸಿಲುಕಿರುವ ಮಾಡಿರುವ ರೆಡ್ಡಿ ಸಹೋದರರ ಸ್ನೇಹಿತರು. ಗಣಿ ಅಕ್ರಮದ ರೂವಾರಿ ಶ್ರೀರಾಮುಲು ಸೋಲಿಸಿ, ನಮ್ಮ ಅಭ್ಯರ್ಥಿ ಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.

  • 56 ಇಂಚಿನ ಎದೆ ಮೋದಿಗೆ ಮಾತ್ರವಲ್ಲ, ಬಾಡಿ ಬಿಲ್ಡರ್, ಪೈಲ್ವಾನರಿಗೂ ಇರುತ್ತೆ: ಸಿದ್ದರಾಮಯ್ಯ

    56 ಇಂಚಿನ ಎದೆ ಮೋದಿಗೆ ಮಾತ್ರವಲ್ಲ, ಬಾಡಿ ಬಿಲ್ಡರ್, ಪೈಲ್ವಾನರಿಗೂ ಇರುತ್ತೆ: ಸಿದ್ದರಾಮಯ್ಯ

    ಮೈಸೂರು: ಆ ಮೋದಿ ಮುಧೋಳ ನಾಯಿಯಿಂದ ಕಾಂಗ್ರೆಸ್ ನಿಯತ್ತು ಕಲಿಬೇಕು ಅಂತಾನೆ, ಅವನಿಗೇ ನಿಯತ್ತಿಲ್ಲ. ಬೆಳೆಸಿದ ಅಡ್ವಾಣಿಯನ್ನೇ ಮೂಲೆ ಗುಂಪು ಮಾಡಿದ್ದಾನೆ ಎಂದು ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

    ಮೈಸೂರಿನ ಚಾಮರಾಜ ಕ್ಷೇತ್ರದ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಕಾಂಗ್ರೆಸ್ ಪಕ್ಷದ ಅಲೆಯನ್ನ ನರೇಂದ್ರ ಮೋದಿಯಾಗಲಿ, ಅಮಿತ್ ಶಾ ಆಗಲಿ ಬದಲಾವಣೆ ಮಾಡೋಕಾಗೋಲ್ಲ. ಮೋದಿ ಕರ್ನಾಟಕಕ್ಕೆ ಕೊಡುಗೆ ಏನು ನೀಡಿದ್ದಾರೆ. ಮನ್ ಕಿ ಬಾತ್ ನೀಡಿದ್ದಾರೆ. ಅದರಿಂದ ಹೊಟ್ಟೆ ತುಂಬುತ್ತಾ ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.

    ಬಡವರಿಗೆ ಹೊಟ್ಟೆ ತುಂಬಿಸುವಂತಹ, ರೈತರ ಸಮಸ್ಯೆಗಳನ್ನು ಮತ್ತು ನಿರುದ್ಯೋಗಿಗಳ ಕಷ್ಟವನ್ನು ಪರಿಹರಿಸುವಂತಹ ಕಾರ್ಯಕ್ರಮವನ್ನು ಮಾಡಬೇಕು. ನನಗೆ 56 ಇಂಚಿನ ಎದೆ ಎಂದು ಹೇಳುತ್ತಾರೆ. ಅವರಿಗೆ 56 ಇಂಚಿನ ಎದೆ. ಆದರೆ ಒಳಗೆ ಬಡವರ ಪರವಾದ ಹೃದಯ, ಅವರಿಗಾಗಿ ಸ್ಪಂದಿಸುವ ಮನಸ್ಸು ಇದಿಯಾ ಎಂಬುದು ಬಹಳ ಮುಖ್ಯ ಎಂದು ಹೇಳಿ ತರಾಟಗೆ ತೆಗೆದುಕೊಂಡರು.

    ಬಾಡಿ ಬಿಲ್ಡರ್ ಗಳಿಗೂ ದೊಡ್ಡ ದೊಡ್ಡ ಎದೆ ಇರುತ್ತೆ. ದೊಡ್ಡ ಪೈಲ್ವಾನ್ ಗಳಿಗೂ ಇರುತ್ತದೆ. ಏನು 56 ಇಂಚಿನ ಎದೆ ನರೇಂದ್ರ ಮೋದಿ ಒಬ್ಬರಿಗೆ ಮಾತ್ರ ಇರೋದಾ ಎಂದು ಪ್ರಶ್ನಿಸಿ ಸಮಾವೇಶದ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯ ದೇಹದ ಬಗ್ಗೆ ವ್ಯಂಗ್ಯ ಮಾಡಿದರು.

    ಇದೇ ವೇಳೆ ಚಿತ್ರ ನಟ ಸುದೀಪ್ ಚಾಮುಂಡೇಶ್ವರಿ ಪ್ರಚಾರದಿಂದ ದೂರ ಉಳಿದ ವಿಚಾರವಾಗಿ ಪ್ರತಿಕ್ರಿಯಿಸಿ, ಸುದೀಪ್ ಪ್ರಚಾರಕ್ಕೆ ಬರಬೇಕಿತ್ತು ಅವರಿಗೆ ಬೇರೆ ಏನೇನೋ ಕೆಲಸ ಇದ್ದ ಕಾರಣಕ್ಕೆ ಪ್ರಚಾರಕ್ಕೆ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದರು.

  • ಇದು ನನ್ನ ಜೀವನದ ಶ್ರೇಷ್ಠ ಸಾಧನೆ : ಮೋದಿ ಹೊಗಳಿಕೆಗೆ  ಕರಣ್ ಆಚಾರ್ಯ ಪ್ರತಿಕ್ರಿಯೆ

    ಇದು ನನ್ನ ಜೀವನದ ಶ್ರೇಷ್ಠ ಸಾಧನೆ : ಮೋದಿ ಹೊಗಳಿಕೆಗೆ ಕರಣ್ ಆಚಾರ್ಯ ಪ್ರತಿಕ್ರಿಯೆ

    ಬೆಂಗಳೂರು: ವಾಹನಗಳ ಮೇಲೆ ಹೆಚ್ಚು ರಾರಾಜಿಸುತ್ತಿರುವ ಹನುಮಾನ್ ಚಿತ್ರವನ್ನು ರಚಿಸಿರುವ ಕರಣ್ ಆಚಾರ್ಯ ಪ್ರಧಾನಿ ನರೇಂದ್ರ ಮೋದಿ ಹೊಗಳಿಕೆಗೆ ಧನ್ಯವಾದ ತಿಳಿಸಿ, ಇದು ತನ್ನ ಜೀವನದ ಶ್ರೇಷ್ಠ ಸಾಧನೆ ಎಂದು ಹೇಳಿದ್ದಾರೆ.

    ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನ ಪ್ರಚಾರ ಭಾಷಣದಲ್ಲಿ ಹನುಮಾನ್ ಚಿತ್ರ ರಚಿಸಿದ್ದ ಕರಣ್ ಆಚಾರ್ಯ ಅವರ ಹೆಸರನ್ನು ಪ್ರಸ್ತಾಪಿಸಿ ಹೊಗಳಿದ್ದರು. ಮಂಗಳೂರಿನ ಯುವಕನ ಈ ಸಾಧನೆಗೆ ದೇಶದ ಹಲವು ಮಾಧ್ಯಮಗಳು ಸಂದರ್ಶನಕ್ಕಾಗಿ ಕಾದು ನಿಂತಿದ್ದರು. ಇದು ಪ್ರಶಂಸನಿಯ ಸಾಧನೆ ಎಂದು ತಿಳಿಸಿದ್ದರು. ಅಲ್ಲದೇ ಟ್ವಿಟ್ಟರ್ ನಲ್ಲಿ ಹನುಮಾನ್ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದರು.

    ಈ ವಿಡಿಯೋವನ್ನು ನೋಡಿದ ಕರಣ್, ಪ್ರಧಾನಿ ಮೋದಿ ಅವರು ನನ್ನ ಹೆಸರನ್ನು ಹೇಳಿ ಪ್ರಶಂಸೆ ವ್ಯಕ್ತಪಡಿಸಿರುವುದು ಸಂತಸ ಉಂಟು ಮಾಡಿದೆ ಎಂದು ಹೇಳಿದ್ದಾರೆ.

    ಮೂಲತಃ ಕಾಸಗೋಡು ಜಿಲ್ಲೆಯ ಕರಣ್ ಮಾಧ್ಯಮವೊಂದರ ಜೊತೆ ಮಾತನಾಡಿ ಹರ್ಷವ್ಯಕ್ತ ಪಡಿಸಿದ್ದಾರೆ. ನನ್ನ ಸ್ನೇಹಿತರು ಅಂದು ಪದೇ ಪದೇ ಕರೆ ಮಾಡುತ್ತಿದ್ದರು. ಈ ವೇಳೆ ತನಗೆ ವಿಷಯ ತಿಳಿದಿರಲಿಲ್ಲ. ಬಳಿಕ ವಿಡಿಯೋ ನೋಡಿ ಮೇಲೆ ತನಗೆ ಈ ಬಗ್ಗೆ ತಿಳಿಯಿತು. ಇದು ನನ್ನ ಜೀವನದ ಶ್ರೇಷ್ಠ ಸಾಧನೆ ಎಂದು ತಿಳಿಸಿದ್ದಾರೆ.

    ಅಲ್ಲದೇ ಹನುಮಾನ್ ಚಿತ್ರ ರಚನೆ ಮಾಡಿದ್ದ ಕುರಿತ ಸ್ವಾರಸ್ಯಕರ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ನನ್ನ ಗೆಳೆಯರು ಗಣೇಶ್ ಚರ್ತುಥಿಯ ಅಂಗವಾಗಿ ಧ್ವಜದ ಚಿತ್ರ ಬಿಡಿಸುವಂತೆ ಕೋರಿದ್ದರು. ಅದು ಇದುವರೆಗಿನ ಎಲ್ಲಾ ಧ್ವಜಗಳಿಗಿಂತ ಭಿನ್ನವಾಗಿರುವಂತೆ ರಚಿಸಲು ಒತ್ತಡ ಹಾಕಿದ್ದರು. ಎಲ್ಲರಿಗಿಂತ ಭಿನ್ನವಾದ ಚಿತ್ರ ಬಿಡಿಸಲು ನಿರ್ಧರಿಸಿದ ವೇಳೆ ನಾನು ಹನುಮಾನ್ ಚಿತ್ರ ಬಿಡಿಸಲು ಪ್ರಾರಂಭಿಸಿದೆ. ಗೂಗಲ್ ನಲ್ಲಿ ಹಲವು ಆಂಜನೇಯನ ಚಿತ್ರಗಳನನ್ನು ನೋಡಿದ ಬಳಿಕ ಹೊಸ ಚಿತ್ರದ ರಚನೆ ಮಾಡಿದೆ. ಅದ್ದರಿಂದ ತಾನು ಕೇಸರಿ ಬಣ್ಣವನ್ನು ಮಾತ್ರ ಬಳಕೆ ಮಾಡಿದೆ. ಈ ಚಿತ್ರ ಕೇವಲ ಅರ್ಧ ಗಂಟೆಯಲ್ಲೇ ರಚನೆ ಮಾಡಿದೆ ಎಂದು ವಿವರಿಸಿದರು.

    ಕೇಸರಿ ಬಣ್ಣವನ್ನು ನಾನು ದೇವರ ಸಂಕೇತವಾಗಿ ಬಳಕೆ ಮಾಡಿದ್ದೇನೆ, ಹೊರತು ಯಾವುದೇ ರಾಜಕೀಯ ಪಕ್ಷಕ್ಕೆ ಬೆಂಬಲವಾಗಿ ರಚನೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಈ ಚಿತ್ರವನ್ನು ರಚನೆ ಮಾಡಿ ಮೂರು ವರ್ಷ ಕಳೆದಿದ್ದು ಎಲ್ಲೆಡೆ ವೈರಲ್ ಆಗಿದೆ. ಇದಕ್ಕಿಂತ ಹೆಚ್ಚಿನ ಕೊಡುಗೆ ಚಿತ್ರಕಾರನಿಗೆ ಸಿಗಲು ಸಾಧ್ಯವಿಲ್ಲ. ಯಾವುದೇ ಕಾರಿನ ಹಿಂಭಾಗ ನೋಡಿದರೂ ಈ ಚಿತ್ರ ಅತೀ ಹೆಚ್ಚು ಕಾಣಿಸಿಕೊಳ್ಳುತ್ತದೆ. ತನ್ನ ಈ ಸಾಧನೆಗೆ ಪೋಷಕರು ನೀಡಿದ ಬೆಂಬಲವೇ ಪ್ರಮುಖ ಕಾರಣ ಎಂದು ತಿಳಿಸಿದರು.  ಇದನ್ನು ಓದಿ: ಆಂಜನೇಯನ ಭಾವಚಿತ್ರ ಹಾಕಿಕೊಂಡ ಕ್ಯಾಬ್‍ನವರು ರೇಪಿಸ್ಟ್ ಗಳು, ಅವುಗಳಲ್ಲಿ ಪ್ರಯಾಣಿಸಬೇಡಿ : ರಶ್ಮಿ ನಾಯರ್

  • ಬೆಂಗ್ಳೂರಲ್ಲಿ ಸಿಕ್ಕ ರಾಶಿ ರಾಶಿ ವೋಟರ್ ಐಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್

    ಬೆಂಗ್ಳೂರಲ್ಲಿ ಸಿಕ್ಕ ರಾಶಿ ರಾಶಿ ವೋಟರ್ ಐಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್

    ಬೆಂಗಳೂರು: ನಗರದ ಜಾಲಹಳ್ಳಿ ಎಸ್.ಎಲ್.ವಿ ಅಪಾರ್ಟ್ ಮೆಂಟ್ ನಲ್ಲಿ ಮಂಗಳವಾರ ರಾಶಿ ರಾಶಿ ಅಸಲಿ ಮತ್ತು ನಕಲಿ ಮತದಾರರ ಫೋಟೋಗಳು ಪತ್ತೆಯಾಗಿದ್ದವು. ಸದ್ಯ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಕಾಂಗ್ರೆಸ್‍ನವರು ಕೇಸ್‍ಗೆ ಸಂಬಂಧಿಸಿದಂತೆ ಕೆಲವು ಫೋಟೋಗಳನ್ನು ಬಿಡುಗಡೆಗೊಳಿಸಿದ್ದಾರೆ.

    ವೋಟರ್ ಐಡಿಗಳು ಕಾಂಗ್ರೆಸ್‍ನ ಮಂಜುಳಾ ನಂಜಮರಿ ಅವರ ಹೆಸರಿನ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿದ್ದವು. ಮಂಜುಳಾ ನಂಜಮರಿ ಈ ಹಿಂದೆ ಬಿಜೆಪಿಯಿಂದ ಒಂದು ಬಾರಿ ಕಾರ್ಪೋರೇಟರ್ ಆಗಿದ್ದರು. ಆದ್ರೆ 2013ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕರ ಬೆಂಬಲದಿಂದ ಮಂಜುಳಾ ಈ ಕೆಲಸ ಮಾಡ್ತಿದ್ರು ಅಂತಾ ಬಿಜೆಪಿ ನೇರವಾಗಿ ಆರೋಪಿಸಿತ್ತು. ಇದನ್ನೂ ಓದಿ: ಬೆಂಗ್ಳೂರಲ್ಲಿ ಬೃಹತ್ ಮತಚೀಟಿ ಹಗರಣ ಸ್ಫೋಟ

    ಈ ಸಂಬಂಧ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮಂಜುಳಾ ನಂಜಮರಿ ಅವರ ಅಪಾರ್ಟ್ ಮೆಂಟ್‍ನ್ನು ಮಗ ರಾಕೇಶ್ ಬಾಡಿಗೆ ಪಡೆದುಕೊಂಡಿದ್ದರು. ರಾಕೇಶ್ ಆರ್.ಆರ್.ನಗರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ಕೆಲ ಫೋಟೋಗಳನ್ನು ಬಿಡುಗಡೆ ಮಾಡಿದೆ. ಹಾಗಾಗಿ ಈ ಸಂಬಂಧ ಸೂಕ್ತ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸರು 7 ಜನರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಸ್ಥಳಕ್ಕಾಗಮಿಸಿರುವ ಚುನಾವಣಾ ಅಧಿಕಾರಿಗಳು ಪ್ಲಾಟ್ ನಲ್ಲಿ ಸಿಕ್ಕ ಟ್ರಂಕ್ ಸಮೇತ ವೋಟರ್ ಐಡಿಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

  • ರಾಜಕೀಯಕ್ಕೆ ಬರುವ ಮುನ್ಸೂಚನೆ ನೀಡಿದ ನಟ ರಾಕಿಂಗ್ ಸ್ಟಾರ್ ಯಶ್

    ರಾಜಕೀಯಕ್ಕೆ ಬರುವ ಮುನ್ಸೂಚನೆ ನೀಡಿದ ನಟ ರಾಕಿಂಗ್ ಸ್ಟಾರ್ ಯಶ್

    ಬೆಂಗಳೂರು: ರಾಜ್ಯದ ಯಾವುದೇ ಮೂಲೆಯಲ್ಲಿ ಸ್ಪರ್ಧೆ ಮಾಡಿದ್ರೂ ಗೆಲ್ತೀನಿ ಎಂದು ರಾಜಕೀಯಕ್ಕೆ ಬರುವ ಮುನ್ಸೂಚನೆಯನ್ನ ನಟ ರಾಕಿಂಗ್ ಸ್ಟಾರ್ ಯಶ್ ನೀಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ವಿ ನಾಗರಾಜು ಪರ ರೋಡ್ ಶೋ ಮಾಡುವ ಮೂಲಕ ಮತಯಾಚನೆ ಮಾಡಿದ್ದಾರೆ. ಪಟ್ಟಣದ ವೀವರ್ಸ್ ಕಾಲೋನಿಯಿಂದ ಆರಂಭಗೊಂಡ ರೋಡ್ ಶೋ ಸರ್ಕಾರಿ ಬಸ್ ನಿಲ್ದಾಣದ, ಮುಖ್ಯ ಸರ್ಕಲ್‍ ವರೆಗೂ ಸಾಗಿತು. ಇದನ್ನೂ ಓದಿ: ನಟರನ್ನು ಬಚ್ಚಾ ಎಂದಿದ್ದ ಶಾಸಕ ತಿಪ್ಪೇಸ್ವಾಮಿಗೆ ಯಶ್ ತಿರುಗೇಟು

    ಈ ವೇಳೆ ಮಾತನಾಡಿದ ನಟ ಯಶ್, ನೆಲಮಂಗಲ ತಾಲೂಕಿನಲ್ಲಿರುವ 56 ಕೆರೆಗಳನ್ನು ಹೂಳೆತ್ತಿ ಅಭಿವೃದ್ಧಿ ಮಾಡಿ ಮತ್ತೆ ಕೆರೆಗಳನ್ನು ತುಂಬಿಸುತ್ತೇನೆ ಎಂಬ ಉತ್ಸಾಹದಲ್ಲಿ ಮಾಜಿ ಶಾಸಕ ನಾಗರಾಜು ಅವರಿದ್ದಾರೆ. ಹೀಗಾಗಿ ನಾನು ನಾಗರಾಜ್ ಪರ ಮತಯಾಚನೆ ಮಾಡಲು ಬಂದಿದ್ದೇನೆ ಎಂದರು.

    ಒಂದು ವೇಳೆ ನಾಗರಾಜ್ ಗೆದ್ದ ಮೇಲೆ ಕೆರೆಗಳನ್ನು ಅಭಿವೃದ್ಧಿ ಮಾಡದೇ ಇದ್ದರೆ, ನಾನೇ ಖುದ್ದು ಜನರ ಮಧ್ಯೆ ಕೂತು ಪ್ರತಿಭಟನೆ ಮಾಡುತ್ತೇನೆ ಎಂದು ಮತದಾರರಿಗೆ ಭರವಸೆ ನೀಡಿದರು.

    ಇದೇ ವೇಳೆ ಯಶ್ ರಾಜಕೀಯ ಪ್ರವೇಶ ಕುರಿತ ಹೇಳಿಕೆಯನ್ನು ತಮ್ಮ ಸಿನಿಮಾ ಡೈಲಾಗ್ ಮೂಲಕವೇ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಎಂಎಲ್‍ಎ, ಎಂಪಿ ಮಿನಿಸ್ಟರ್ ಆಗಬೇಕಾದರೆ ನಾನು ತಲೆಕೆಡಿಸಿಕೊಳ್ಳಬೇಕಿಲ್ಲ. ಕರ್ನಾಟಕ ಯಾವುದೇ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡಿದರೂ ಚುನಾವಣೆಯಲ್ಲಿ ಜನ ನನ್ನನ್ನು ಗೆಲ್ಲಿಸುತ್ತಾರೆ. ಜನರು ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವಷ್ಟು ಅಭಿಮಾನ ಇಟ್ಟಿದ್ದಾರೆ. ಈ ಅಭಿಮಾನವೇ ಚುನಾವಣೆಯಲ್ಲಿ ಗೆಲ್ಲಿಸುತ್ತೆ ಅಂತ ಪರೋಕ್ಷವಾಗಿ ರಾಜಕೀಯ ಪ್ರವೇಶದ ಬಗ್ಗೆ ತಮ್ಮ ಮನದಾಳದ ಇಂಗಿತವನ್ನು ವ್ಯಕ್ತಪಡಿಸಿದರು.

    ಬಿಜೆಪಿ ಅಭ್ಯರ್ಥಿ ನಾಗರಾಜು ಮಾತನಾಡಿ ಯಶ್ ಬಂದ ಮೇಲೆ ನನಗೆ ಆನೆ ಬಲ ಬಂದಂತಾಗಿದೆ ಎಂದ್ರು.

  • ಬೆಂಗ್ಳೂರಲ್ಲಿ ಬೃಹತ್ ಮತಚೀಟಿ ಹಗರಣ ಸ್ಫೋಟ – ರಾಜಕಾರಣದಲ್ಲಿ ಮಿಡ್‍ನೈಟ್ ಹೈಡ್ರಾಮ

    ಬೆಂಗ್ಳೂರಲ್ಲಿ ಬೃಹತ್ ಮತಚೀಟಿ ಹಗರಣ ಸ್ಫೋಟ – ರಾಜಕಾರಣದಲ್ಲಿ ಮಿಡ್‍ನೈಟ್ ಹೈಡ್ರಾಮ

    ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೂರು ದಿನ ಬಾಕಿ ಇರುವಂತೆ ರಾಜ್ಯ ರಾಜಕಾರಣ ಹೊಸ ಆಯಾಮಕ್ಕೆ ತಿರುಗಿದೆ.

    ಬೆಂಗಳೂರಿನ ಜಾಲಹಳ್ಳಿಯ ಅಪಾರ್ಟ್ ಮೆಂಟ್‍ನಲ್ಲಿ ಸಿಕ್ಕ ರಾಶಿರಾಶಿ ವೋಟರ್ ಐಡಿ, ಮಿಡ್‍ನೈಟ್ ರಾಜಕಾರಣಕ್ಕೆ ಸಾಕ್ಷಿಯಾಯ್ತು. ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಎಸ್‍ಎಲ್ ವಿ ಅಪಾರ್ಟ್ ಮೆಂಟ್‍ಗೆ ಲಗ್ಗೆ ಇಟ್ಟಿದ್ದ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಬರೋಬ್ಬರಿ 9,746 ವೋಟರ್ ಐಡಿ ಪತ್ತೆಯಾಗಿತ್ತು.

    ಈ ವಿಷಯ ತಿಳಿಯುತ್ತಿದ್ದಂತೆ ಅಪಾರ್ಟ್ ಮೆಂಟ್ ಬಳಿ ಜಮಾಯಿಸಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಹಣದ ಆಮಿಷವೊಡ್ಡಿ ಮತದಾರರಿಂದ ವೋಟರ್ ಐಡಿಗಳನ್ನು ಸಂಗ್ರಹ ಮಾಡಿಕೊಳ್ಳಲಾಗ್ತಿದೆ ಅಂತ ಆರೋಪಿಸಿ ಪ್ರತಿಭಟನೆ ನಡೆಸಿದ್ರು. ಬಳಿಕ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಕೂಡ ಭೇಟಿ ನೀಡಿದ್ರು. ಈ ಬೆನ್ನಲ್ಲೇ ಚುನಾವಣಾ ಆಯೋಗ ರಾತ್ರಿ 11.30ರ ಸುಮಾರಿಗೆ ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳೋದಾಗಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ರು.


    ಅಪಾರ್ಟ್‍ಮೆಂಟ್‍ನಲ್ಲಿ ಸಿಕ್ಕಿದ್ದೇನು..?
    * 9,746 ವೋಟರ್ ಐಡಿ
    * 5 ಲ್ಯಾಪ್‍ಟಾಪ್
    * 2 ಸ್ಟೀಲ್ ಟ್ರಂಕ್
    * ವೋಟರ್ ಐಡಿ ಹೆಸರು ಸೇರ್ಪಡೆ ಮಾಡಿಕೊಳ್ಳು ಫಾರ್ಮ್ 6 ಅರ್ಜಿ

     

  • ನರೇಂದ್ರಸ್ವಾಮಿ ಬದಲು ನರೇಂದ್ರ ಮೋದಿಗೆ ವೋಟ್ ಹಾಕಿ ಎಂದ ಸಿಎಂ- ವಿಡಿಯೋ ನೋಡಿ

    ನರೇಂದ್ರಸ್ವಾಮಿ ಬದಲು ನರೇಂದ್ರ ಮೋದಿಗೆ ವೋಟ್ ಹಾಕಿ ಎಂದ ಸಿಎಂ- ವಿಡಿಯೋ ನೋಡಿ

    ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನರೇಂದ್ರ ಮೋದಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ.

    ಮಳವಳ್ಳಿ ಪಟ್ಟಣದಲ್ಲಿ ತಮ್ಮ ಅಭ್ಯರ್ಥಿ ನರೇಂದ್ರಸ್ವಾಮಿ ಪರ ಪ್ರಚಾರ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ನರೇಂದ್ರಮೋದಿಗೆ ವೋಟ್ ಹಾಕಿ ಎಂದು ಹೇಳಿದ್ದಾರೆ. ಈ ವೇಳೆ ಅಲ್ಲಿದ್ದ ಜನ ಜೋರಾಗಿ ಕಿರುಚಿದಾಗ ಸಿಎಂಗೆ ಎಡವಟ್ಟಾದ ವಿಚಾರ ಗೊತ್ತಾಗಿದೆ. ನಂತರ ನಂತರ ನರೇಂದ್ರ ಸ್ವಾಮಿಗೆ ಮತ ನೀಡಿ ಎಂದು ಹೇಳಿದ್ದಾರೆ.

    ಭಾಷಣದುದ್ದಕ್ಕೂ ನಾಲ್ಕು ಬಾರಿ ನರೇಂದ್ರಸ್ವಾಮಿ ಎನ್ನುವ ಬದಲು ನರೇಂದ್ರ ಮೋದಿ ಎಂದಿದ್ದಾರೆ. ನರೇಂದ್ರ ಎನ್ನುವುದು ಮುಖ್ಯವಾಗಿದೆ. ನರೇಂದ್ರ ಮೋದಿ ನಿತ್ಯ, ನರೇಂದ್ರ ಸ್ವಾಮಿ ಸತ್ಯ. ಮೊದಲು ನರೇಂದ್ರ ಮೋದಿಗೆ ನೀಡುವ ವೋಟ್ ನನಗೆ ನೀಡಿದಂತೆ ಎಂದು ಹೇಳಿದ್ದಾರೆ. ನಂತರ ಮತದಾರರು ಘೋಷಣೆ ಹಾಕಿದ್ದಾರೆ. ಬಳಿಕ ನರೇಂದ್ರ ಸ್ವಾಮಿಗೆ ವೋಟ್ ಮಾಡಿದರೆ ಸಿದ್ದರಾಮಯ್ಯಗೆ ವೋಟ್ ಮಾಡಿದಂತೆ ಎಂದು ಹೇಳಿ ಎಡವಟ್ಟನ್ನು ಸರಿಪಡಿಸುವ ಪ್ರಯತ್ನ ಮಾಡಿದ್ದಾರೆ.

    ಇದೇ ವೇಳೆ ಮಳವಳ್ಳಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿದ್ದರಾಮಯ್ಯ, ನಾನು ಹೋದ ಕಡೆಗಳಲ್ಲಿ, ಉಳಿದುಕೊಂಡ ಕಡೆಗಳಲ್ಲಿ ದಾಳಿ ಮಾಡಲಿ. ಬಿಜೆಪಿ ಅವರು ಅದೇ ಕೆಲಸ ಮಾಡಲಿ. ಅವರಿಗೆ ಇನ್ನೇನು ಕೆಲಸ ಇದೆ. ಪ್ರಧಾನಿ ಮೋದಿ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ, ರಾಜ್ಯಾಧ್ಯಕ್ಷ ಯಡಿಯೂರಪ್ಪ ಉಳಿದುಕೊಂಡಿದ್ದ ಮನೆ, ಹೋಟೆಲ್ ರೇಡ್ ಮಾಡಿದ್ದಾರಾ?. ಆದಾಯ ತೆರಿಗೆ ಇಲಾಖೆಯವರು ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ದಾಳಿ ಮಾಡುತ್ತಿದ್ದಾರೆ ಎಂದ್ರು.

    ಕಾಂಗ್ರಸ್ ನವರನ್ನ ಎದುರಿಸಲು, ಭಯದ ವಾತಾವರಣ ನಿರ್ಮಿಸಲು ಈ ರೀತಿ ಮಾಡುತ್ತಿದ್ದಾರೆ. ನಾನು 12 ಚುನಾವಣೆ ಮಾಡಿದ್ದೇನೆ ಆದರೆ ಚುನಾವಣೆ ವೇಳೆಯಲ್ಲೇ ಐಟಿ ದಾಳಿ ಮಾಡುತ್ತಿರುವುದನ್ನ ನಾನೆಂದು ಕಂಡಿಲ್ಲ. ಇದೇ ಮೊದಲ ಬಾರಿಗೆ ನಡೆದಿದೆ ಎಂದು ಹೇಳಿ ಕಿಡಿಕಾರಿದರು.