Tag: Karnataka Electoral

  • ನಟರನ್ನು ಬಚ್ಚಾ ಎಂದಿದ್ದ ಶಾಸಕ ತಿಪ್ಪೇಸ್ವಾಮಿಗೆ ಯಶ್ ತಿರುಗೇಟು

    ನಟರನ್ನು ಬಚ್ಚಾ ಎಂದಿದ್ದ ಶಾಸಕ ತಿಪ್ಪೇಸ್ವಾಮಿಗೆ ಯಶ್ ತಿರುಗೇಟು

    ಬೆಂಗಳೂರು: ನಟ, ಸುದೀಪ್, ಯಶ್ ಇವರೆಲ್ಲ ನನ್ನ ಮುಂದೆ ಇನ್ನು ಬಚ್ಚಾಗಳು ಎಂದು ಹೇಳಿಕೆ ನೀಡಿದ್ದ ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿಗೆ ರಾಕಿಂಗ್ ಸ್ಟಾರ್ ತಿರುಗೇಟು ನೀಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಎಂ.ವಿ.ನಾಗರಾಜು ಪರ ನಟ ಯಶ್ ಮತಯಾಚನೆ ಮಾಡಿದ್ದಾರೆ. ನಂತರ ತಿಪ್ಪೇಸ್ವಾಮಿ ಯಶ್ ಬಚ್ಚಾ ಎನ್ನುವ ವಿಚಾರದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ರಾಜಕೀಯ ಒಂದು ಗೇಮ್. ಅದು ನಿಜ ಇರಬೇಕು. ಅವರ ವಯಸ್ಸೇನು, ಅವರು ತುಂಬಾ ಹಿರಿಯರು, ಅವರ ಮುಂದೆ ನಾನು ಬಚ್ಚಾನೆ. ಅದನ್ನ ಜನ ಡಿಸೈಡ್ ಮಾಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ಸುದೀಪ್, ಯಶ್ ಇವರೆಲ್ಲ ನನ್ನ ಮುಂದೆ ಇನ್ನು ಬಚ್ಚಾಗಳು: ತಿಪ್ಪೇಸ್ವಾಮಿ

    ರಾಜಕೀಯದಲ್ಲಿ ಒಬ್ಬ ಗೆಲ್ಲಬೇಕಾದರೆ ನಾಲ್ಕು ಜನ ಸೋಲಲೇಬೇಕು. ಶ್ರೀರಾಮುಲು ನನಗೆ ಪರಿಚಯ ಹೀಗಾಗಿ ಅವರ ಹಾಗೂ ನನ್ನ ಅಭಿಮಾನಿಗಳಿಗೋಸ್ಕರ ಪ್ರಚಾರ ಮಾಡಿದೆ. ಜನಕ್ಕೆ ಏನೂ ಮಾಡಬೇಕು ಅನ್ನೋದು ನನ್ನ ಬುದ್ಧಿವಂತಿಕೆ, ವ್ಯವಸ್ಥೆಯನ್ನು ಬದಲಾಯಿಸುವ ನಂಬಿಕೆ ನನ್ನಲ್ಲಿಲ್ಲ. ಶಕ್ತಿವಂತರು, ಬುದ್ಧಿವಂತರು, ಜನರ ಪ್ರೀತಿಗಳಿಸಲು ಪ್ರಯತ್ನ ಪಡುವವರಿಗೆ ನಾನು ಸಹಕಾರಿಯಾಗುತ್ತೇನೆ. ನಾನು ಪ್ರಚಾರ ಮಾಡುವ ಸ್ಥಳಗಳಲ್ಲಿ ವಿರೋಧಿಗಳಿಗೆ ಭಯ ಹುಟ್ಟಿರಬಹುದು ಎಂದು ತಿರುಗೇಟು ನೀಡಿದ್ರು.

    ನಾನು ಪ್ರಚಾರ ಮಾಡುತ್ತಿರುವ ಅಭ್ಯರ್ಥಿಗಳ ಗೆಲುವು ಸೋಲಿಗಿಂತ ಹೇಗೆ ಕೆಲಸ ಮಾಡುತ್ತಾರೆ ಎನ್ನುವುದು ಮುಖ್ಯ. ಕಲಾವಿದನಾಗಿ ಜನ ನನಗೆ ಪ್ರೀತಿ ತೋರಿಸುತ್ತಾ ಇದ್ದಾರೆ. ಅದಕ್ಕೆ ನಾನು ಏನು ಮಾಡಬೇಕು ಅಂತಾ ಅವರ ಪರವಾಗಿ ಯೋಚನೆ ಮಾಡುತ್ತಾ ಇದ್ದೇನೆ. ನನಗೆ ಒಳ್ಳೆಯವನು ಕೆಟ್ಟವನು ಅನ್ನಿಸಿಕೊಳ್ಳುವ ಬಗ್ಗೆ ಯೋಚನೆ ಇಲ್ಲ. ಎಸ್ಟೋ ಸಲ ಕೆಟ್ಟೋನು ಎಂದವರು ನಂತರ ಒಳ್ಳೆಯವನು ಅಂದಿದ್ದಾರೆ ಎಂದು ವಿರೋಧಿಗಳಿಗೆ ಯಶ್ ಟಾಂಗ್ ನೀಡಿದ್ದಾರೆ.

  • ಅಭಿಮಾನಿಗಳ ವಿರುದ್ಧ ರೇಗಾಡಿದ ಕುಮಾರಸ್ವಾಮಿ!

    ಅಭಿಮಾನಿಗಳ ವಿರುದ್ಧ ರೇಗಾಡಿದ ಕುಮಾರಸ್ವಾಮಿ!

    ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆಗೆಂದು ಪ್ರಚಾರಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಭಿಮಾನಿಗಳ ಮೇಲೆ ಕೋಪಗೊಂಡು ರೇಗಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಇಂದು ಕುಮಾರಸ್ವಾಮಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮಕ್ಕೆ ಪ್ರಚಾರಕ್ಕೆಂದು ಹೋಗಿದ್ದರು. ಆಗ ಅಭಿಮಾನಿಗಳು ಕುಮಾರಸ್ವಾಮಿ ಅವರಿಗೆ ಪದೇ ಪದೇ ಬಸ್ಸಿನಿಂದ ಕೆಳಗಿಳಿಯುವಂತೆ ಬೇಡಿಕೆಯಿಡುತ್ತಿದ್ದರು. ಈ ವೇಳೆ ಅಭಿಮಾನಿಗಳ ವಿರುದ್ಧ ಕುಮಾರಸ್ವಾಮಿ ರೇಗಾಡಿದ್ದು, ನನಗೆ ಸಮಯ ಇಲ್ಲ ಇನ್ನು ತುಂಬಾ ಗ್ರಾಮಗಳಿಗೆ ತೆರಳಬೇಕಿದೆ ಎಂದು ಹೇಳಿದ್ದಾರೆ.

    ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಪರವಾಗಿ ರೋಡ್ ಶೋ ಆರಂಭಿಸಿದಾಗ ಬಸ್‍ನಿಂದ ಕೆಳಗಿಳಿದು ಪ್ರಚಾರ ಮಾಡಿ. ಅಲ್ಲದೇ ವಾಹನದ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಅಭಿಮಾನಿಗಳು ಕೇಳಿಕೊಂಡಿದ್ದರು. ಈ ವೇಳೆ ಪ್ರಚಾರ ವಾಹನದ ಮೇಲಿದ್ದ ಕುಮಾರಸ್ವಾಮಿ ಕೆಳಗಿಳಿಯಲು ಆಗಲ್ಲ ನಾನಿನ್ನು ಸಾಕಷ್ಟು ಊರುಗಳಿಗೆ ಹೋಗಬೇಕಿದೆ. ನನ್ ಆರೋಗ್ಯದ ಗತಿ ಏನಾಗಬೇಕು. ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಕಾರ್ಯಕರ್ತರ ಮನವೊಲಿಸಿ ಮುಂದೆ ಹೋಗಿದ್ದಾರೆ.

  • ಸಿನಿಮಾ ನಟ-ನಟಿಯರಿಂದ ಕೈ ಅಭ್ಯರ್ಥಿಯ ಪರ ಪ್ರಚಾರ

    ಸಿನಿಮಾ ನಟ-ನಟಿಯರಿಂದ ಕೈ ಅಭ್ಯರ್ಥಿಯ ಪರ ಪ್ರಚಾರ

    ರಾಮನಗರ: ಕರ್ನಾಟಕ ವಿಧಾನ ಸಭಾ ಚುನಾವಣೆ ದಿನೆದಿನೇ ರಂಗೇರುತ್ತಿದ್ದು, ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ  ಸ್ಯಾಂಡಲ್‍ ವುಡ್‍ನ ನಟ-ನಟಿಯರು ಕಾಂಗ್ರೇಸ್ ಅಭ್ಯರ್ಥಿ ಎಚ್.ಎಂ ರೇವಣ್ಣ ಪರ ರೋಡ್ ಶೋ ನಡೆಸಿ ಮತಯಾಚನೆ ನಡೆಸಿದ್ದಾರೆ.

    ನಟರಾದ ಅನೂಪ್ ರೇವಣ್ಣ, ಬಿಗ್ ಬಾಸ್ ವಿನ್ನರ್ ಪ್ರಥಮ್, ಕೋಟೆ ಪ್ರಭಾಕರ್, ನಟಿಯರಾದ ಮಯೂರಿ, ರೂಪಿಕಾ ಹಾಗೂ ನಿರ್ದೇಶಕ ಆರ್. ಚಂದ್ರ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿ ರೇವಣ್ಣ ಪರ ಮತಯಾಚನೆ ನಡೆಸಿದ್ದಾರೆ.

    ನಗರದ ಮಂಗಳವಾರ ಪೇಟೆಯಿಂದ ಭೈರಾಪಟ್ಟಣದವರೆಗೆ ರೋಡ್ ಶೋ ನಡೆಸಿದ್ದು, ಇದೇ ವೇಳೆ ಮಾತನಾಡಿದ ಪ್ರಥಮ್, ಚನ್ನಪಟ್ಟಣದಲ್ಲಿ ಸತತವಾಗಿ 20 ವರ್ಷಗಳಿಂದ ಯೋಗೇಶ್ವರ್ ಆಯ್ಕೆಯಾಗುತ್ತಲೇ ಬಂದಿದ್ದಾರೆ. ಈ ಬಾರಿ ಅವರು ರಾಜಕೀಯದಿಂದ ವಿಶ್ರಾಂತಿ ಪಡೆಯಲಿ, ಇನ್ನೂ ಎಚ್.ಡಿ ಕುಮಾರಸ್ವಾಮಿಯವರು ಎರಡೂ ಕಡೆ ಸ್ಪರ್ಧಿಸಿರುವುದರಿಂದ ಹಣ ಪೋಲಾಗಲಿದೆ. ಈ ಬಾರಿ ಎಚ್.ಎಂ ರೇವಣ್ಣಗೆ ಒಂದು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

    ಇನ್ನು ಈ ಬಗ್ಗೆ ಮಾತನಾಡಿದ ನಟಿ ಮಯೂರಿ ಕೂಡಾ ರೇವಣ್ಣರನ್ನ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.