Tag: Karnataka Examination Authority

  • BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ – ಕೆಇಎ

    BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ – ಕೆಇಎ

    ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಲ್ಲಿನ 2,500 ನಿರ್ವಾಹಕ ಹುದ್ದೆಗಳಿಗೆ ಭಾನುವಾರ (ಸೆ.1) ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಸಕಲ ಸಿದ್ಧತೆ ಮಾಡಿಕೊಂಡಿದೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ (H Prasanna), ಹೈದರಾಬಾದ್ ಕರ್ನಾಟಕದವರಿಗಾಗಿ (Hyderabad Karnataka) ಜು.14 ರಂದು ಪರೀಕ್ಷೆ ನಡೆಸಲಾಗಿತ್ತು. ಹೈದರಾಬಾದ್ ಕರ್ನಾಟಕವಲ್ಲದ ಇತರರಿಗೆ ಭಾನುವಾರ ಸೆ.1 ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಈ ಪರೀಕ್ಷೆಯಲ್ಲಿ ಹೈದರಾಬಾದ್ ಕರ್ನಾಟಕದವರೂ ಬರೆಯಬಹುದು ಎಂದು ಹೇಳಿದ್ದಾರೆ.ಇದನ್ನೂ ಓದಿ: ಗೌರವ ಡಾಕ್ಟರೇಟ್ ನಿರಾಕರಿಸಿದ್ದು ಯಾಕೆ ಎಂದು ಹೇಳಿ ಮ್ಯಾಕ್ಸ್ ಬಗ್ಗೆ ಅಪ್‌ಡೇಟ್ ಕೊಟ್ಟ ಸುದೀಪ್

    ಈ ಪರೀಕ್ಷೆಗೆ 23,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ (Dress Code) ಇದ್ದು, ಆ ಪ್ರಕಾರವೇ ಎಲ್ಲರೂ ಪರೀಕ್ಷೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

     ಬೆಂಗಳೂರು, ಬಳ್ಳಾರಿ, ಧಾರವಾಡ, ಕಲಬುರಗಿ, ದಾವಣಗೆರೆ, ಮಂಡ್ಯ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಪತ್ರಿಕೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ತ್ವರಿತ ತೀರ್ಪಿನ ಅಗತ್ಯವಿದೆ: ಮೋದಿ

  • ಸಿಇಟಿ ಫಲಿತಾಂಶ ದಿಢೀರ್‌ ಪ್ರಕಟ: ಸ್ಪಷ್ಟನೆ ನೀಡಿದ ಕೆಇಎ

    ಸಿಇಟಿ ಫಲಿತಾಂಶ ದಿಢೀರ್‌ ಪ್ರಕಟ: ಸ್ಪಷ್ಟನೆ ನೀಡಿದ ಕೆಇಎ

    – ಸಿಇಟಿ ಫಲಿತಾಂಶದಲ್ಲಿ ಬೆಂಗಳೂರಿಗೆ ಹೆಚ್ಚು ರ‍್ಯಾಂಕ್
    – ರ‍್ಯಾಂಕ್ ವಿಚಾರವಾಗಿ ಯಾರೂ ಗೊಂದಲ ಪಡಬೇಕಾಗಿಲ್ಲ: ಹೆಚ್‌.ಪ್ರಸನ್ನ

    ಬೆಂಗಳೂರು: 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET 2024) ಫಲಿತಾಂಶವನ್ನು ಶನಿವಾರ ಏಕಾಏಕಿ ಪ್ರಕಟಿಸಿದ ಬಗ್ಗೆ ಇಂದು (ಭಾನುವಾರ) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.

    ನಿನ್ನೆ ಯುಜಿಸಿಇಟಿ -2024 ಫಲಿತಾಂಶ ಪ್ರಕಟಿಸಲಾಗಿತ್ತು. ಪಠ್ಯದಲ್ಲಿ ಇಲ್ಲದ ವಿಷಯಗಳ ಬಗ್ಗೆ ಸಾಕಷ್ಟು ಗೊಂದಲ, ಗದ್ದಲ ಎದುರಾಗಿತ್ತು. ಇದೇ ಕಾರಣಕ್ಕೆ ಕೆಇಎ ಕಾರ್ಯನಿರ್ವಾಹಕಿ ರಮ್ಯಾ ಅವರನ್ನು ವರ್ಗಾವಣೆ ಮಾಡಲಾಗಿತ್ತು. ನಿನ್ನೆ ದಿಢೀರ್ ಆಗಿ ಸಿಇಟಿ ಫಲಿತಾಂಶ ಪ್ರಕಟಿಸಿ ಕೆಇಎ ಮತ್ತೆ ಎಡವಟ್ಟು ಮಾಡಿತ್ತು. ಸುದ್ದಿಗೋಷ್ಠಿ ಕರೆಯದೆ ಪತ್ರಿಕಾ ಪ್ರಕಟಣೆ ಹೊರಡಿಸಿ ಫಲಿತಾಂಶ ಘೋಷಿಸಲಾಗಿತ್ತು. ಕೆಇಎ ಯ ಕಾರ್ಯವೈಖರಿ ಬಗ್ಗೆ ಸಾಕಷ್ಟು ಆಕ್ರೋಶ ಹೆಚ್ಚಾದ ಹಿನ್ನೆಲೆ ಇಂದು ಪತ್ರಿಕಾಗೋಷ್ಠಿ ಆಯೋಜನೆ ಮಾಡಿತ್ತು. ಇದನ್ನೂ ಓದಿ: ಬೆಂ. ಗ್ರಾಮಾಂತರದಲ್ಲಿ ಹೆಚ್ಚಿನ ಭದ್ರತೆ ಒದಗಿಸಿ: ಆಯೋಗಕ್ಕೆ ಡಾ.ಮಂಜುನಾಥ್ ಪತ್ರ

    ಈ ಬಾರಿ ಸಿಇಟಿ ಫಲಿತಾಂಶದಲ್ಲಿ ಬೆಂಗಳೂರಿಗೆ ಹೆಚ್ಚು ರ‍್ಯಾಂಕ್ ಬಂದಿದೆ. ಇಂಜಿನಿಯರಿಂಗ್ ವಿಭಾಗದ ಮೊದಲ ಐದು ರ‍್ಯಾಂಕ್ ಬೆಂಗಳೂರಿನ ವಿದ್ಯಾರ್ಥಿಗಳ ತೆಕ್ಕೆಗೆ ಸಿಕ್ಕಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಸಹಕಾರ ನಗರದ ನಾರಾಯಣ ಒಲಪಿಂಯಾರ್ಡ್ ಶಾಲೆ ಹರ್ಷ ಕಾರ್ತಿಕೇಯ ರಾಜ್ಯಕ್ಕೆ ಮೊದಲ ರ‍್ಯಾಂಕ್ ಬಂದಿದ್ದಾರೆ. 3,49,653 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು. 3,10,314 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು 737 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

    ಮಲೇಶ್ವರಂ ಕೆಇಎ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾತನಾಡಿ, ನೀತಿ ಸಂಹಿತೆ ಜಾರಿಯಲ್ಲಿದೆ. ಆದ್ದರಿಂದ ನಿನ್ನೆ ಫಲಿತಾಂಶ ಪ್ರಕಟ ಮಾಡಿದ್ವಿ. ಪತ್ರಿಕಾಗೋಷ್ಠಿ ಮಾಡದೇ ಫಲಿತಾಂಶ ಪ್ರಕಟ ಮಾಡಲಾಗಿತ್ತು. ಫಲಿತಾಂಶ ವಿಚಾರವಾಗಿ ಸಾಕಷ್ಟು ಒತ್ತಡವಿತ್ತು. ಈ ಹಿನ್ನೆಲೆ ನಿನ್ನೆ ಫಲಿತಾಂಶ ಪ್ರಕಟಿಸಲಾಗಿತ್ತು. ನಂತರದಲ್ಲಿ ಸಾಕಷ್ಟು ಗೊಂದಲ ಆಗಿದೆ ಎಂದು ನಮಗೆ ಅರಿವಾಯ್ತು. ಇನ್ಮುಂದೆ ಸರಿಯಾಗಿ ನಿಯಮಗಳನ್ನು ಪಾಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭವಾನಿ ರೇವಣ್ಣ ಬಂಧನಕ್ಕೆ ಪೊಲೀಸರು ಹುಡುಕುತ್ತಿದ್ದಾರೆ: ಪರಮೇಶ್ವರ್

    ಪಿಯು ಬೋರ್ಡ್‌ನಿಂದ ನಮಗೆ ಡಾಟಾ ಕೊಡಲಾಗುತ್ತೆ. ಸಾಫ್ಟ್‌ವೇರ್‌ನಲ್ಲಿ ಎರಡು ಅಂಕಗಳನ್ನ ಮ್ಯಾಚ್ ಮಾಡುವ ಸಂದರ್ಭದಲ್ಲಿ ಅಂಕಗಳು ಮ್ಯಾಚ್ ಆಗೊಲ್ಲ. ಯಾರಿಗೆಲ್ಲಾ ಸಮ್ಯಸೆ ಆಗಿದಿಯೋ, ಅವರು ಗಾಬರಿ ಪಡುವ ಅವಶ್ಯಕತೆ ಇಲ್ಲ. ನಾಳೆ ಮಾರ್ಕ್ಸ್ ಸೇರಿಸಲು ಅವಕಾಶ ನೀಡಲಾಗುತ್ತೆ. ನಂತರದಲ್ಲಿ ಅವರಿಗೆ ರ‍್ಯಾಂಕ್ ನೀಡಲಾಗುತ್ತೆ. ಮೆಡಿಕಲ್ ಇಂಜಿನಿಯರ್ ಸೀಟ್‌ಗಳಿಗೆ ಕಂಬೈನ್ಡ್ ಆಗಿ ಸೀಟ್ ಆಲಾಟ್ಮೆಂಟ್ ಆಗುತ್ತೆ. ನೀಟ್ ಪರೀಕ್ಷೆ ಫಲಿತಾಂಶ ಇನ್ನೂ ಬಂದಿಲ್ಲ. ಸೀಟ್ ಮ್ಯಾಟ್ರಿಕ್ಸ್ ಕುರಿತು ಶಿಕ್ಷಣ ಇಲಾಖೆ ಅದನ್ನ ಪಬ್ಲಿಶ್ ಮಾಡಲಾಗುತ್ತೆ. ನೀಟ್ ರಿಲಸ್ಟ್ ಬಂದ ಬಳಿಕ ನಾವು ಸೀಟು ಹಂಚಿಕೆ ಮಾಡ್ತೀವಿ. ಪೋಷಕರು ಆತುರದಲ್ಲಿ ಗಾಬರಿ ಪಡುವ ಅಗತ್ಯವಿಲ್ಲ. ಸರ್ಕಾರದಿಂದ ನಿಗದಿಯಾಗುವ ಸೀಟುಗಳಿಗೆ ಯಾವುದೇ ಕಾಲೇಜು ಶುಲ್ಕ ಪಡೆಯಲು ಅವಶ್ಯಕತೆ ಇಲ್ಲ. ರ‍್ಯಾಂಕ್ ಆಧಾರದ ಮೇಲೆ ನಿಮಗೆ ಸೀಟು ಸಿಕ್ಕೇ ಸಿಗುತ್ತೆ. ರ‍್ಯಾಂಕ್ ವಿಚಾರವಾಗಿ ಕೂಡ ಗೊಂದಲ ಪಡಬೇಕಾಗಿಲ್ಲ ಎಂದು ಹೇಳಿದರು. ಅಭ್ಯರ್ಥಿಗಳು ತಮ್ಮ CET ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ cetonline.karnataka.gov.in. ಪರಿಶೀಲಿಸಬಹುದು.

    ಇಂಜಿನಿಯರಿಂಗ್ ವಿಭಾಗದ ಟಾಪರ್ಸ್
    ಮೊದಲ ರ‍್ಯಾಂಕ್: ಹರ್ಷ ಕಾರ್ತಿಕೇಯಾ ವುತುಕುರಿ, ನಾರಾಯಣ ಓಲಂಪಿಯಾಡ್ ಶಾಲೆ, ಸಹಕಾರ ನಗರ
    ಎರಡನೇ ರ‍್ಯಾಂಕ್: ಮನೋಜ್ ಸೋಹನ್ ಗಾಜುಲ, ಶ್ರೀ ಚೈತನ್ಯ ಟೆಕ್ನೋ ಶಾಲೆ, ಮಾರತಹಳ್ಳಿ
    ಮೂರನೇ ರ‍್ಯಾಂಕ್: ಅಭಿನವ್ ಪಿ.ಜೆ, ನೆಹರೂ ಸ್ಮಾರಕ ವಿದ್ಯಾಲಯ, ಜಯನಗರ
    ನಾಲ್ಕನೇ ರ‍್ಯಾಂಕ್: ಸನ್ನಾ ತಬಸ್ಸುಮ್, ನಾರಾಯಣ ಪಿಯು ಕಾಲೇಜು ಎಎಂಸಿಓ ಲೇಔಟ್ ಸಹಕಾರ ನಗರ

    (ಬಿಎನ್‌ವೈಎಸ್) ನ್ಯಾಚರೋಪತಿ, ಯೋಗ ವಿಜ್ಞಾನದ ಟಾಪರ್ಸ್
    ಮೊದಲ ರ‍್ಯಾಂಕ್: ನಿಹಾರ್ ಎಸ್.ಆರ್, ಎಕ್ಸ್‌ಪರ್ಟ್‌ ಪ್ರೀ ಯೂನಿವರ್ಸಿಟಿ ಸೈನ್ಸ್ ಕಾಲೇಜು, ಮಂಗಳೂರು
    ಎರಡನೇ ರ‍್ಯಾಂಕ್: ಸಂಜನಾ ಸಂತೋಷ್ ಕಟ್ಟಿ, ಎಕ್ಸ್‌ಪರ್ಟ್‌ ಕಾಲೇಜ್ ಅರುಕುಲ, ಮಂಗಳೂರು
    ಮೂರನೇ ರ‍್ಯಾಂಕ್: ಪ್ರೀತಮ್ ರವಲಪ್ಪ ಪನಧಾಕರ್, ಶೇಷಾದ್ರಿಪುರಂ ಪಿಯು ಕಾಲೇಜ್, ಬೆಂಗಳೂರು

    ಬಿಎಸ್ಸಿ ನರ್ಸಿಂಗ್ ವಿಭಾಗ
    ಮೊದಲ ರ‍್ಯಾಂಕ್: ನಿಹಾರ್ ಎಸ್.ಆರ್, ಎಕ್ಸ್‌ಪರ್ಟ್‌ ಪ್ರೀ ಯೂನಿವರ್ಸಿಟಿ ಸೈನ್ಸ್ ಕಾಲೇಜ್, ಮಂಗಳೂರು
    ಎರಡನೇ ರ‍್ಯಾಂಕ್: ಮಿಹಿರ್ ಗಿರೀಶ್ ಕಾಮತ್, ಎಕ್ಸ್‌ಪರ್ಟ್‌ ಪ್ರೀ ಯೂನಿವರ್ಸಿಟಿ ಸೈನ್ಸ್ ಕಾಲೇಜ್, ಮಂಗಳೂರು
    ಮೂರನೇ ರ‍್ಯಾಂಕ್: ಅನಿಮೇಷನ್ ಸಿಂಗ್ ರಾಥೋರ್, ಶ್ರೀ ಚೈತನ್ಯ ಟೆಕ್ನೋ ಶಾಲೆ ಜಂಬು ಸವಾರಿ ದಿನ್ನೆ, ಜೆಪಿ ನಗರ

    ವೆಟರ್ನರಿ ವಿಭಾಗ
    ಮೊದಲ ರ‍್ಯಾಂಕ್: ಕಲ್ಯಾಣ್ ವಿ, ಶ್ರೀ ಚೈತನ್ಯ ಟೆಕ್ನೊ ಶಾಲೆ, ಮಾರತಹಳ್ಳಿ
    ಎರಡನೇ ರ‍್ಯಾಂಕ್: ಡಿ.ಎನ್.ನಿತೀನ್, ನಾರಾಯಣ ಈ ಟೆಕ್ನೋ ಶಾಲೆ ಯಲಹಂಕ ನ್ಯೂ ಟೌನ್
    ಮೂರನೇ ರ‍್ಯಾಂಕ್: ನಿಹಾರ್ ಎಸ್.ಆರ್, ಎಕ್ಸ್‌ಪರ್ಟ್‌ ಪ್ರಿ ಯೂನಿವರ್ಸಿಟಿ ಸೈನ್ಸ್ ಕಾಲೇಜ್, ಮಂಗಳೂರು

    ಬಿ ಫಾರ್ಮಾ ವಿಭಾಗ
    ಮೊದಲನೇ ರ‍್ಯಾಂಕ್: ಕಲ್ಯಾಣ್ ವಿ, ಶ್ರೀ ಚೈತನ್ಯ ಟೆಕ್ನೊ ಶಾಲೆ, ಮಾರತಹಳ್ಳಿ
    ಎರಡನೇ ರ‍್ಯಾಂಕ್: ಹರ್ಷ ಕಾರ್ತಿಕೇಯಾ, ನಾರಾಯಣ ಒಲಂಪಿಯಾಡ್ ಶಾಲೆ, ಸಹಕಾರ ನಗರ
    ಮೂರನೇ ರ‍್ಯಾಂಕ್: ಡಿ.ಎನ್.ನಿತಿನ್, ನಾರಾಯಣ ಇ ಟೆಕ್ನೊ ಶಾಲೆ, ಯಲಹಂಕ ನ್ಯೂ ಟೌನ್

    ಡಿ ಫಾರ್ಮಾ ವಿಭಾಗ
    ಮೊದಲ ರ‍್ಯಾಂಕ್: ಕಲ್ಯಾಣ್ ವಿ, ಶ್ರೀ ಚೈತನ್ಯ ಟೆಕ್ನೊ ಶಾಲೆ, ಮಾರತಹಳ್ಳಿ
    ಎರಡನೇ ರ‍್ಯಾಂಕ್: ಹರ್ಷ ಕಾರ್ತಿಕೇಯಾ, ನಾರಾಯಣ್ ಓಲಂಪಿಯಾಡ್ ಶಾಲೆ, ಸಹಕಾರ ನಗರ
    ಮೂರನೇ ರ‍್ಯಾಂಕ್: ಡಿ.ಎನ್.ನಿತೀನ್, ನಾರಾಯಣ ಇ ಟೆಕ್ನೊ ಶಾಲೆ, ಯಲಹಂಕ ನ್ಯೂ ಟೌನ್

    ಬಿಎಸ್ಸಿ ನರ್ಸಿಂಗ್ ವಿಭಾಗ
    ಮೊದಲ ರ‍್ಯಾಂಕ್: ಕಲ್ಯಾಣ್ ವಿ, ಶ್ರೀ ಚೈತನ್ಯ ಟೆಕ್ನೊ ಶಾಲೆ ಮಾರತಹಳ್ಳಿ
    ಎರಡನೇ ರ‍್ಯಾಂಕ್: ಡಿ.ಎನ್.ನಿತಿನ್, ನಾರಾಯಣ ಇ ಟೆಕ್ನೊ ಶಾಲೆ, ಯಲಹಂಕ ನ್ಯೂಟೌನ್
    ಮೂರನೇ ರ‍್ಯಾಂಕ್: ನಿಹಾರ್, ಎಕ್ಸ್‌ಪರ್ಟ್‌ ಪ್ರಿ ಯೂನಿವರ್ಸಿಟಿ ಸೈನ್ಸ್ ಕಾಲೇಜ್, ಮಂಗಳೂರು

  • KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವರ್ಗಾವಣೆ – CET ಪ್ರಶ್ನೆ ಪತ್ರಿಕೆ ಗೊಂದಲ ಕಾರಣ ಎತ್ತಂಗಡಿ?

    KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವರ್ಗಾವಣೆ – CET ಪ್ರಶ್ನೆ ಪತ್ರಿಕೆ ಗೊಂದಲ ಕಾರಣ ಎತ್ತಂಗಡಿ?

    ಬೆಂಗಳೂರು: ಸಿಇಟಿ ಪ್ರಶ್ನೆ ಪತ್ರಿಕೆ ಗೊಂದಲ ಹಿನ್ನೆಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದೆ.

    ಕೆಇಎ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ IAS ಅಧಿಕಾರಿ ಪ್ರಸನ್ನ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಇಎ ಇಡಿಯಾಗಿ ಪ್ರಸನ್ನ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ – ಮೇ ತಿಂಗಳಲ್ಲೇ 172 ಕೇಸ್‌ ದಾಖಲು!

    ಈ ವರ್ಷದ CET ಪರೀಕ್ಷೆಯಲ್ಲಿ 50 ಕ್ಕೂ ಹೆಚ್ಚು ಪ್ರಶ್ನೆ ಔಟ್‌ ಆಫ್ ಸಿಲಬಸ್‌ನಿಂದ ಕೇಳಲಾಗಿತ್ತು. ಕೆಇಎ ಎಡವಟ್ಟಿನಿಂದ ವಿದ್ಯಾರ್ಥಿಗಳಿಗೆ ದೊಡ್ಡ ಸಮಸ್ಯೆ ಆಗಿತ್ತು. ಜೊತೆಗೆ ಸರ್ಕಾರಕ್ಕೂ ಮುಜುಗರ ಆಗಿತ್ತು. ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಿ ಔಟ್ ಆಫ್ ಸಿಲಬಸ್ ಪ್ರಶ್ನೆ ಬಿಟ್ಟು ಮೌಲ್ಯಮಾಪನ ಮಾಡಲು ಉನ್ನತ ಶಿಕ್ಷಣ ಇಲಾಖೆ ಆದೇಶ ಮಾಡಿತ್ತು.

    CET ಪ್ರಶ್ನೆ ಪತ್ರಿಕೆ ಲೋಪ ಹಿನ್ನೆಲೆ ರಮ್ಯಾ ಅವರ ವಿರುದ್ಧ ಕ್ರಮಕ್ಕೆ ಎಬಿವಿಪಿ ಸಂಘಟನೆ ಸೇರಿ ಹಲವು ಸಂಘಟನೆಗಳು, ಪೋಷಕರ ಸಮೂಹಗಳು ಆಗ್ರಹಿಸಿದ್ದವು. ಈ ಹಿನ್ನೆಲೆಯಲ್ಲಿ KAEಯಿಂದ ರಮ್ಯಾರನ್ನು ಸರ್ಕಾರ ವರ್ಗಾವಣೆ ಮಾಡಿದೆ. ರಮ್ಯಾ ಅವರ ಬದಲಿಗೆ IAS ಅಧಿಕಾರಿ ಪ್ರಸನ್ನ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು

  • KEAನಿಂದ ವಿವಿಧ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ – ಪ್ರವೇಶಪತ್ರ ಡೌನ್‌ಲೋಡ್‌ಗೆ ಅವಕಾಶ

    KEAನಿಂದ ವಿವಿಧ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ – ಪ್ರವೇಶಪತ್ರ ಡೌನ್‌ಲೋಡ್‌ಗೆ ಅವಕಾಶ

    ಬೆಂಗಳೂರು: ಹಿಂದುಳಿದ ವರ್ಗಗಳ ಇಲಾಖೆ/ಸಮಾಜ ಕಲ್ಯಾಣ ಇಲಾಖೆ ಐಎಎಸ್, ಕೆಎಎಸ್, ಬ್ಯಾಂಕಿಂಗ್‌ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority) ಫೆ.18ರಂದು ಪರೀಕ್ಷೆ ನಡೆಸಲಿದೆ.

    ಸಾಂದರ್ಭಿಕ ಚಿತ್ರ

    ಅರ್ಹ ಅಭ್ಯರ್ಥಿಗಳು ಹೆಸರು, ಜನ್ಮ ದಿನಾಂಕ, ಅರ್ಜಿ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ಬಳಸಿ ಪ್ರಾಧಿಕಾರದ ವೆಬ್‌ಸೈಟಿನಿಂದ (http://kea.kar.nic.in) ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ಕಾರ್ಯ ನಿರ್ವಾಹಕ ನಿರ್ದೇಶಕರಾದ ಎಸ್.ರಮ್ಯಾ ತಿಳಿಸಿದ್ದಾರೆ. ಇದನ್ನೂ ಓದಿ: ಕೊಡಗಲ್ಲಿ ಹಿಂದೂ ಒಬ್ಬ ಮುಸ್ಲಿಂನ್ನು ಹತ್ಯೆಗೈದಾಗ ಗಲಾಟೆ ಆಗ್ಲಿಲ್ಲ, ಹಿಂದೂವೇ ಹತ್ಯೆಯಾಗಿದ್ರೆ ಬೆಂಕಿ ಹಚ್ಚಿರೋರು: ದಿನೇಶ್ ಗುಂಡೂರಾವ್

    ಜೊತೆಗೆ ಪ್ರಾಧಿಕಾರವು ಕೆಪಿಸಿಎಲ್ ಸಂಸ್ಥೆಯ ನೇಮಕಾತಿ ಸಂಬಂಧ ಫೆ.18ರಂದು ಮರುಪರೀಕ್ಷೆ ಮತ್ತು 19ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಿದೆ. ಹಾಗೆಯೇ ಕರ್ನಾಟಕ ರಾಜ್ಯ ಹಣಕಾಸು ನಿಗಮದ (KSFC) ಖಾಲಿ ಹುದ್ದೆಗಳಿಗೂ ನೇಮಕಾತಿಗಾಗಿ ಫೆ.17ರಂದು ಪರೀಕ್ಷೆ ನಡೆಯಲಿದೆ. ಇದನ್ನೂ ಓದಿ: ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸತ್ಯ – ನಾನು ಹೇಳಿದ್ದು ಸುಳ್ಳಾದ್ರೆ ರಾಜಕೀಯ ಬಿಡ್ತೀನಿ: ಸಿಎಂ

    ಈ ಪರೀಕ್ಷೆಗಳಿಗೆ ಕೂಡ ಅರ್ಹ ಅಭ್ಯರ್ಥಿಗಳು ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಹೆಚ್ಚುವರಿ ಮಾಹಿತಿಗಳ ಅವಶ್ಯಕತೆಯಿದ್ದರೆ keauthority-ka@nic.inಗೆ ಇ-ಮೇಲ್ ಕಳುಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದ ಬಿಜೆಪಿ ಮುಖಂಡರು‌, ಕಾರ್ಯಕರ್ತರಿಗೆ ತಿರುಪತಿ ಯಾತ್ರೆ ಭಾಗ್ಯ

  • ಪೂರ್ಣ ತೋಳಿನ ಅಂಗಿ, ಶೂ ಧರಿಸುವುದು ನಿಷೇಧ – PSI ಪರೀಕ್ಷಾ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ

    ಪೂರ್ಣ ತೋಳಿನ ಅಂಗಿ, ಶೂ ಧರಿಸುವುದು ನಿಷೇಧ – PSI ಪರೀಕ್ಷಾ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ

    – ಜನವರಿ 23ರಂದು ಪಿಎಸ್‌ಐ ಪರೀಕ್ಷೆ
    – ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರು: ಇದೇ ಜನವರಿ 23ರಂದು ಪಿಎಸ್‌ಐ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಮಾರ್ಗಸೂಚಿ ಬಿಡುಗಡೆ ಮಾಡಿದೆ.

    ಹಾಲ್‌ಟಿಕೆಟ್, ಗುರುತಿನ ಚೀಟಿ ಹೊರತುಪಡಿಸಿ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರಗಳನ್ನು ತರುವಂತಿಲ್ಲ ಎಂದು ಸೂಚನೆಯಲ್ಲಿ ತಿಳಿಸಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು (Guidelines) ಹೊರಡಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ- ಹುಬ್ಬಳ್ಳಿಯ ಕರಸೇವಕರ ಸಂಭ್ರಮ

    ಪುರುಷ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಏನು?
    * ಪೂರ್ಣ ತೋಳಿನ ಅಂಗಿಗಳನ್ನ ಧರಿಸುವಂತಿಲ್ಲ
    * ಕಾಲರ್ ರಹಿತ ಶರ್ಟ್ ಹಾಗೂ ಜೇಬುಗಳು ಕಮ್ಮಿ ಇರುವ ಪ್ಯಾಂಟ್ ಧರಿಸಿರಬೇಕು
    * ಕುರ್ತಾ ಪೈಜಾಮು, ಜೀನ್ಸ್ ಪ್ಯಾಂಟ್‌ಗಳಿಗೆ ಅನುಮತಿ ಇಲ್ಲ
    * ಶರ್ಟ್ ಅಥವಾ ಪ್ಯಾಂಟ್‌ಗಳಿಗೆ ಜಿಪ್ ಪ್ಯಾಕೆಟ್‌ಗಳು, ದೊಡ್ಡ ದೊಡ್ಡ ಗುಂಡಿಗಳು, ಹೆಚ್ಚುವರಿ ಡಿಸೈನ್ ಇರಬಾರದು
    * ಪರೀಕ್ಷಾ ಹಾಲ್‌ಗೆ ಶೂಗಳು ಕಟ್ಟು ನಿಟ್ಟಾಗಿ ನಿಷೇಧ
    * ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ
    * ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸುವುದು ನಿಷೇಧ

    ಮಹಿಳಾ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಏನು?
    * ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ
    * ಪೂರ್ಣ ತೋಳಿನ ಬಟ್ಟೆ ಬಳಸದಂತೆ ಸೂಚನೆ
    * ಮುಜುಗರವಾಗದಂತೆ ಅರ್ಧ ತೋಳಿನ ಬಟ್ಟೆ ಬಳಸಬೇಕು
    * ಇನ್ನೊಬ್ಬರಿಗೆ ಮುಜುಗರವಾಗದ ಟಾಪ್‌ಗಳು ಬಳಸಲು ಸೂಚನೆ
    * ಹೈ ಹೀಲ್ಸ್ ಚಪ್ಪಲಿ-ಶೂಗಳನ್ನ ಧರಿಸದಂತೆ ಸೂಚನೆ
    * ಮಹಿಳಾ ಅಭ್ಯರ್ಥಿಗಳಿಗೂ ಕೂಡ ಯಾವುದೇ ರೀತಿಯ ಲೋಹ, ಚೈನ್ ಬಳಸದಂತೆ ಸೂಚನೆ
    * ಮಂಗಳ ಸೂತ್ರ, ಕಾಲುಂಗುರ ಬಳಸಲು ಅನುಮತಿ

    ಪರೀಕ್ಷಾ ಕೊಠಡಿಗೆ ಈ ಪತ್ರಗಳು ಕಡ್ಡಾಯ:
    * ಪ್ರವೇಶ ಪತ್ರ ಕಡ್ಡಾಯವಾಗಿ ತರಬೇಕು
    * ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯವಾಗಿರಬೇಕು.

    ಎಲ್ಲರೂ ಈ ಸೂಚನೆ ಪಾಲಿಸಬೇಕು:
    ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲರೂ ಪಾಲಿಸುವ ಕೆಲವು ಸೂಚನೆಗಳನ್ನು ನೀಡಲಾಗಿದೆ. ಅಲ್ಲದೇ ಎಲ್ಲಾ ಅಭ್ಯರ್ಥಿಗಳಿಗೂ ಈ ಕೆಳಗಿನ ವಸ್ತುಗಳು ಬಳಸದಂತೆ ಸೂಚನೆ ನೀಡಲಾಗಿದೆ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್‌ಡ್ರೈವ್‌, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರಗಳನ್ನು ಪರೀಕ್ಷಾ ಹಾಲ್‌ಗೆ ಕೊಂಡೊಯ್ಯುವಂತಿಲ್ಲ. ಇದನ್ನೂ ಓದಿ: ನಿಮ್ಮ ತಲೆಯನ್ನೇ ತೆಗೆಯುವ ಸಂತಾನದವರು ನಾವು: ಅನಂತ್‌ ಕುಮಾರ್ ಹೆಗಡೆ ಮತ್ತೆ ಕಿಡಿ

    ಯಾವುದೇ ರೀತಿಯ ಆಹಾರ, ನೀರಿನ ಬಾಟಲಿಗೆ ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ನೀರು ಕುಡಿಯಲು ವ್ಯವಸ್ಥೆ ಇರುತ್ತೆ. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್‌ಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧವಿರಲಿದೆ. ಯಾವುದೇ ಅಭ್ಯರ್ಥಿ ಟೋಪಿ ಧರಿಸುವಂತಿಲ್ಲ. ಕೊನೆಯ ಬೆಲ್ ಹೊಡೆಯೋವರೆಗೂ ಪರೀಕ್ಷಾ ಹಾಲ್‌ನಿಂದ ಅಭ್ಯರ್ಥಿಗಳು ಹೊರ ಹೋಗುವಂತಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಟೀಂ ಇಂಡಿಯಾ vs ಅಫ್ಘಾನಿಸ್ತಾನ ಮೂರನೇ ಟಿ20 – ಧೋನಿ ದಾಖಲೆ ಮುರಿತಾರಾ ರೋಹಿತ್?

  • ಎಂಜಿನಿಯರಿಂಗ್, ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಕೋರ್ಸುಗಳಿಗೆ ಪ್ರವೇಶಾತಿ ಅಕ್ಟೋಬರ್ 30ಕ್ಕೆ ವಿಶೇಷ ಸುತ್ತು: KEA

    ಎಂಜಿನಿಯರಿಂಗ್, ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಕೋರ್ಸುಗಳಿಗೆ ಪ್ರವೇಶಾತಿ ಅಕ್ಟೋಬರ್ 30ಕ್ಕೆ ವಿಶೇಷ ಸುತ್ತು: KEA

    ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಲಭ್ಯವಿರುವ ಎಂಜಿನಿಯರಿಂಗ್ ಸೀಟುಗಳ ಜೊತೆಗೆ 2ನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ನಂತರ ರದ್ದುಪಡಿಸಿಕೊಂಡಿರುವ ಪ್ರವೇಶ ಪಡೆಯದಿರುವ ಕಾರಣಕ್ಕೆ ಖಾಲಿ ಸೀಟುಗಳು ಎಂದು ಗುರುತಿಸಲಾಗಿರುವ ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಸೀಟುಗಳ ಹಂಚಿಕೆ ಅಕ್ಟೋಬರ್ 30ರಂದು ನಡೆಯಲಿದೆ. ಈ ಕುರಿತು ಮಾಧ್ಯಮ ಹೇಳಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಬಿಡುಗಡೆ ಮಾಡಿದೆ.

    ಅಕ್ಟೋಬರ್ 27ರ ಮಧ್ಯಾಹ್ನ 1:00 ರಿಂದ ಇಚ್ಚೆ ಆಯ್ಕೆಗಳನ್ನು ದಾಖಲಿಸಲು ಆನ್‌ಲೈನ್ ಪೋರ್ಟಲ್ ಸಕ್ರಿಯಗೊಳಿಸಲಾಗುವುದು. 2023ನೇ ಸಾಲಿನಲ್ಲಿ ಯಾವುದೇ ಕೋರ್ಸಿಗೆ ಸೀಟು ಹಂಚಿಕೆ ಮಾಡಿಕೊಳ್ಳದಿರುವವರಿಗೆ ಮಾತ್ರ ಇದು ಅನ್ವಯವಾಗುತ್ತದೆ. ಇಚ್ಚೆ ಆಯ್ಕೆಗಳನ್ನು ದಾಖಲಿಸಲು ಅಕ್ಟೋಬರ್ 29ರ ಬೆಳಗ್ಗೆ 10 ರವರೆಗೆ ಕಾಲಾವಕಾಶವಿರುತ್ತದೆ. ಇಲ್ಲಿಯವರೆಗೆ 2023ನೇ ಸಾಲಿನಲ್ಲಿ ಯಾವುದೇ ಸೀಟನ್ನು ಪ್ರಾಧಿಕಾರದ ಮೂಲಕ ಹಂಚಿಕೆ ಮಾಡಿಕೊಳ್ಳದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಪೋರ್ಟಲ್‌ನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಹಾಗೂ ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಸೀಟುಗಳ ಲಭ್ಯತೆಯನ್ನು ಗಮನಿಸಿ, ನಂತರ ತಮ್ಮ ಇಚ್ಛೆ ಆಯ್ಕೆಗಳನ್ನು ಆದ್ಯತೆಯ ಮೇರೆಗೆ ದಾಖಲಿಸಬಹುದು. ಇದನ್ನೂ ಓದಿ: ಭಾರತದ ಕಾನೂನು ಬದಲಿಸುವ ಮೂರು ಮಸೂದೆಗಳು ಶೀಘ್ರದಲ್ಲಿ ಅಂಗೀಕಾರ: ಅಮಿತ್ ಶಾ

    ವಿಶೇಷ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಅಕ್ಟೋಬರ್ 29ರ ಸಂಜೆ 6 ಗಂಟೆಯ ನಂತರ ಪ್ರಕಟಿಸಲಾಗುವುದು. ವಿಶೇಷ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಅಕ್ಟೋಬರ್ 30ರಂದು ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಿ, ಪ್ರವೇಶ ಆದೇಶ ಡೌನ್‌ಲೋಡಿ ಮಾಡಿಕೊಂಡು ಅದೇ ದಿನವೇ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು (Deemed Admission). ಉಳಿದಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಸೀಟುಗಳ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ಎಂಜಿನಿಯರಿಂಗ್ ಕಾಲೇಜುಗಳನ್ನು ನೇರವಾಗಿ ಸಂಪರ್ಕಿಸಿ ಸರ್ಕಾರಿ ಕೋಟಾ ಶುಲ್ಕ ಪಾವತಿಸಿ ಎಂಜಿನಿಯರಿಂಗ್ ಸೀಟನ್ನು ಅಕ್ಟೋಬರ್ 30ರ ಸಂಜೆ 5:30 ರೊಳಗೆ ಪಡೆಯಬಹುದಾಗಿದೆ. ಇದನ್ನೂ ಓದಿ: 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]