Tag: Karnataka Former Speaker

  • ರೈತನಾಗಿ ಹೊಸ ವ್ಯಾಪಾರ ಆರಂಭಿಸಿದ ರಮೇಶ್ ಕುಮಾರ್

    ರೈತನಾಗಿ ಹೊಸ ವ್ಯಾಪಾರ ಆರಂಭಿಸಿದ ರಮೇಶ್ ಕುಮಾರ್

    – ಆಂಧ್ರ ಪ್ರದೇಶದ ಕುರಿ ಸಂತೆಗೆ ಮಾಜಿ ಸ್ಪೀಕರ್ ಭೇಟಿ

    ಕೋಲಾರ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ಹಾಗೂ 17 ಶಾಸಕರನ್ನು ಅನರ್ಹಗೊಳಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ರೈತನಾಗಿ ಹೊಸ ವ್ಯಾಪಾರ ಶುರು ಮಾಡಿದ್ದಾರೆ.

    ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಕೆ.ಆರ್.ರಮೇಶ್ ಕುಮಾರ್ ಅವರು ಕೊಂಚ ರಾಜಕೀಯದಿಂದ ರಿಲ್ಯಾಕ್ಸ್ ಆಗಿದ್ದಾರೆ. ರಾಜಕೀಯದಿಂದ ಅಂತರ ಕಾಯ್ದುಕೊಂಡಿರುವ ಅವರು ಕುರಿ ಸಾಕಾಣಿಕೆ ಸೇರಿದಂತೆ ವ್ಯವಸಾಯದ ಕಡೆ ಗಮನ ಕೊಡಲು ಮುಂದಾಗಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ ತಾಲೂಕಿನ ಅಂಗಾಲ ಕುರಿ ಸಂತೆಯಲ್ಲಿ ವ್ಯಾಪಾರ ಮಾಡುವ ಮೂಲಕ ರೈತರಾಗಿದ್ದಾರೆ.

    ರಮೇಶ್ ಕುಮಾರ್ ಅವರು ಸಂತೆಯಲ್ಲಿನ ಓಡಾಟ, ವ್ಯಾಪರದ ದೃಶ್ಯವನ್ನು ಬೆರೆ ಬೆಂಬಲಿಗರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರೈತರ ಗೆಟಪ್‍ನಲ್ಲಿ ರಮೇಶ್ ಕುಮಾರ್ ಅವರು ತಲೆಗೆ ಟವೆಲ್ ಸುತ್ತಿಕೊಂಡು ಸಾಮಾನ್ಯರಂತೆ ಸಂತೆಯಲ್ಲಿ ಕುರಿ ಖರೀದಿಸುವಲ್ಲಿ ಬ್ಯುಸಿಯಾಗಿರುವ ವಿಡಿಯೋ ಹಾಗೂ ಫೋಟೊಗಳು ವೈರಲ್ ಆಗುತ್ತಿವೆ.

    ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಹಿಂದಿನಿಂದಲೂ ಕುರಿ, ಕೋಳಿ ಸಾಕಾಣಿಕೆ ಸೇರಿದಂತೆ ವ್ಯವಸಾಯದಲ್ಲಿ ಹೆಚ್ವು ಆಸಕ್ತಿ ತೋರುತ್ತಾ ಬಂದಿದ್ದಾರೆ. ಹೀಗಾಗಿ ಚಿತ್ತೂರು ಜಿಲ್ಲೆಯ ಮದನಪಲ್ಲಿ ತಾಲೂಕಿನ ಅಂಗಾಲ ಶನಿವಾರ ಸಂತೆಯಲ್ಲಿ ಕುರಿ ವ್ಯಾಪಾರದಲ್ಲಿ ಬಿಸಿಯಾಗಿದ್ದರು.