Tag: Karnataka Government

  • MLC Nomination | ಮೇಲ್ಮನೆ ಸದಸ್ಯರಾಗಿ ರಮೇಶ್‌ಬಾಬು, ಆರತಿ ಕೃಷ್ಣ ಸೇರಿ ನಾಲ್ವರು ನಾಮನಿರ್ದೇಶನ

    MLC Nomination | ಮೇಲ್ಮನೆ ಸದಸ್ಯರಾಗಿ ರಮೇಶ್‌ಬಾಬು, ಆರತಿ ಕೃಷ್ಣ ಸೇರಿ ನಾಲ್ವರು ನಾಮನಿರ್ದೇಶನ

    ಬೆಂಗಳೂರು: ವಿಧಾನ ಪರಿಷತ್‌ನಲ್ಲಿ (Legislative Council) ಹಲವು ತಿಂಗಳಿಂದ ಖಾಲಿ ಇದ್ದ ಸ್ಥಾನಗಳಿಗೆ ನಾಲ್ವರನ್ನು ನಾಮನಿರ್ದೇಶನ (MLC Nomination) ಮಾಡಿ ರಾಜ್ಯ ಸರ್ಕಾರ ಭಾನುವಾರ (ಇಂದು) ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ಎಂಎಲ್‌ಸಿ ಸ್ಥಾನಗಳ ನಾಮನಿರ್ದೇಶನ ಅನುಮೋದಿಸಿ ರಾಜ್ಯಪಾಲರು (Governor) ಅಂಕಿತ ಹಾಕಿದ್ದಾರೆ.

    ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು (Ramesh Babu), ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ (Aarthi Krishna), ಹಿರಿಯ ಪತ್ರಕರ್ತ ಕೆ.ಶಿವಕುಮಾರ್‌ (K Shivakumar) ಮತ್ತು ದಲಿತ ಮುಖಂಡ ಎಫ್‌.ಹೆಚ್‌ ಜಕ್ಕಪ್ಪನವರ್ ಅವರನ್ನ ನಾಮ ನಿರ್ದೇಶನ ಮಾಡಲಾಗಿದೆ. ಇದನ್ನೂ ಓದಿ: ರೋಹಿತ್‌ ಬಳಿಕ 25 ವರ್ಷದ ಗಿಲ್‌ ಟೀಂ ಇಂಡಿಯಾಕ್ಕೆ ಕ್ಯಾಪ್ಟನ್‌?

    ಮೂವರು 6 ವರ್ಷಗಳ ಅವಧಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆದ್ರೆ ರಮೇಶ್‌ ಬಾಬು ಅವರ ಅಧಿಕಾರ ಅವಧಿ 2026ರ ಜುಲೈ 21ರ ವರೆಗೆ ಮಾತ್ರ ಇರಲಿದೆ. ಇದನ್ನೂ ಓದಿ: ಪ್ರತಾಪ್ ಸಿಂಹನನ್ನ ಬಿಜೆಪಿ ಕಿತ್ತು ಬಿಸಾಕಿದೆ, ಬದುಕಿದ್ದೀನಿ ಅಂತ ತೋರಿಸಿಕೊಳ್ಳೋಕೆ ಪ್ರಯತ್ನ: ಡಿಕೆಶಿ ಟಾಂಗ್

    ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಕಾಂಗ್ರೆಸ್‌ ಯು.ಬಿ. ವೆಂಕಟೇಶ್ ಮತ್ತು ಪ್ರಕಾಶ್ ಕೆ. ರಾಥೋಡ್ ಅವರ ಅವಧಿ 2024ರ ಅಕ್ಟೋಬರ್‌ನಲ್ಲಿ ಮತ್ತು ಜೆಡಿಎಸ್‌ನ ಕೆ.ಎ ತಿಪ್ಪೇಸ್ವಾಮಿ ಅವರ ಅವಧಿ 2025ರ ಜನವರಿ ವೇಳೆಗೆ ಮುಕ್ತಾಯಗೊಂಡಿತ್ತು. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಸಿ.ಪಿ. ಯೋಗೇಶ್ವ‌ರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸ್ಥಾನಗಳು ಖಾಲಿಯಾಗಿದ್ದವು. 7 ತಿಂಗಳ ಹಗ್ಗ ಜಗ್ಗಾಟದ ಬಳಿಕ ಸರ್ಕಾರ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಇದನ್ನೂ ಓದಿ: ಬ್ಯಾಲೆಟ್ ಪೇಪರ್ = ಬೋಗಸ್ ವೋಟಿಂಗ್; ಬ್ಯಾಲೆಟ್ ಪೇಪರ್ = ಬೂತ್ ಕ್ಯಾಪ್ಚರಿಂಗ್: ಅಶೋಕ್ ಟೀಕೆ

  • ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ – ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

    ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ – ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

    ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ರಸಗೊಬ್ಬರ (Fertilizer) ಅಭಾವ ವಿರುದ್ಧ ಸೋಮವಾರ (ಜು.28) ರಾಜ್ಯಾದ್ಯಂತ ಬಿಜೆಪಿ ಹೋರಾಟ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸರ್ಕಾರದ ವಿರುದ್ಧ ಹೋರಾಟ ಮಾಡೋದಾಗಿ ಘೋಷಿಸಿದರು.

    ಬೆಂಗಳೂರು (Bengaluru) ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರೈತ ಮೋರ್ಚಾ ವತಿಯಿಂದ ಬಿಜೆಪಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ದಾಸ್ತಾನು ಇಡ್ತಿದ್ರು, ಅದಕ್ಕೆ ಅನುದಾನವೂ ಇಡ್ತಿದ್ರು. ಈ ಸರ್ಕಾರ ಕಾಪು ದಾಸ್ತಾನು ಅನುದಾನಕ್ಕೂ ಕಡಿತ ಮಾಡಿದೆ. ಸಾವಿರ ಕೋಟಿ ದಾಸ್ತಾನು ಅನುದಾನ 400 ಕೋಟಿಗೆ ಇಳಿಸಿದೆ ಎಂದು ಅಸಮಾಧಾನ ಹೊರಹಾಕಿದ್ರು. ಇದನ್ನೂ ಓದಿ: ಕೇಂದ್ರದಿಂದ 1.50 ಲಕ್ಷ ಟನ್‌ ರಸಗೊಬ್ಬರ ಕೊರತೆಯಾಗಿದೆ – ಸಚಿವ ಚಲುವರಾಯಸ್ವಾಮಿ

    ಮುಂಗಾರು ಶೀಘ್ರ ಆರಂಭವಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಮುಂಚೆಯೇ ಸಿದ್ಧತೆ ಮಾಡಿಕೊಂಡಿಲ್ಲ, ಮುಂಚೆಯೇ ಕೇಂದ್ರಕ್ಕೆ ಪತ್ರ ಬರೆಯಬೇಕಿತ್ತು. ಈಗ ಪತ್ರ ಬರೆಯೋದಲ್ಲ. ರೈತರನ್ನು (Farmers) ಈ ಸರ್ಕಾರ ಬೀದಿಗೆ ತಂದಿದೆ ಎಂದು ವಿಜಯೇಂದ್ರ ಕಿಡಿ ಕಾರಿದರು.  ಇದನ್ನೂ ಓದಿ: ಕರ್ಮ ಯಾರ ಮನೆ ಬಾಗಿಲನ್ನು ಬಿಡಲ್ಲ, ನಂದೇನಾದ್ರೂ ತಪ್ಪಿದ್ರೆ ದೇವ್ರು ನೋಡಿಕೊಳ್ಳಲಿ – ರಕ್ಷಕ್ ಬುಲೆಟ್

    ಕೇಂದ್ರದಿಂದ 8 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಂದಿದೆ, ಏನಾಯ್ತು? ರಾಜ್ಯದಲ್ಲಿ ರಸಗೊಬ್ಬರ ಕಳ್ಳ ದಂಧೆ ನಡೆಯುತ್ತಿದೆ. ರಸಗೊಬ್ಬರ ಅಭಾವ, ನಕಲಿ ಕೃಷಿ ಬೀಜಗಳಿಗೆ ಸರ್ಕಾರವೇ ಹೊಣೆ. ನಕಲಿ ಬಿತ್ತನೆ ಬೀಜ, ರಸಗೊಬ್ಬರ ಅಭಾವ, ಯಾರು ಕಳ್ಳಸಾಗಣೆ ಮಾಡ್ತಿದ್ದಾರೆ? ಇದನ್ನು ಪತ್ತೆ ಹಚ್ಚಿ ಸರ್ಕಾರ ಕ್ರಮ ತಗೋಬೇಕು. ರಸಗೊಬ್ಬರ ಕಳ್ಳದಂಧೆಗೆ ಬ್ರೋಕರ್‌ಗಳು ಕಾರಣ. ಬ್ರೋಕರ್‌ಗಳಿಗೆ ಸಹಕಾರ ಕೊಡುವ ಕೆಲಸ ಸರ್ಕಾರದಲ್ಲಿ ಆಗ್ತಿದೆ ಎಂದು ಇದೇ ವೇಳೆ ವಿಜಯೇಂದ್ರ ಆರೋಪಿಸಿದರು.  ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ರಾಜ್ಯದ ಜನ ಬಲಿಯಾಗುತ್ತಿದ್ದಾರೆ: ನಿಖಿಲ್

  • ಜನತೆಗೆ ಮತ್ತೊಂದು ಶಾಕ್‌; ರಾಜ್ಯದ ಎಲ್ಲಾ ಬಹುಮಹಡಿ, ಎತ್ತರದ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಕ್ಯಾಬಿನೆಟ್ ಅಸ್ತು

    ಜನತೆಗೆ ಮತ್ತೊಂದು ಶಾಕ್‌; ರಾಜ್ಯದ ಎಲ್ಲಾ ಬಹುಮಹಡಿ, ಎತ್ತರದ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಕ್ಯಾಬಿನೆಟ್ ಅಸ್ತು

    – ಸನ್ನಡತೆ ಆಧಾರದಲ್ಲಿ ಜೀವಾವಧಿ ಶಿಕ್ಷೆ ಖೈದಿಗಳಿಗೆ ಬಿಡುಗಡೆ ಭಾಗ್ಯಕ್ಕೂ ಒಪ್ಪಿಗೆ

    ಬೆಂಗಳೂರು: ಮೆಟ್ರೋ, ಬಸ್‌ ಟಿಕೆಟ್‌ ದರ, ಹಾಲಿನ ದರ ಏರಿಕೆ ಬಳಿಕ ಜಿಎಸ್‌ಟಿಯಿಂದ ತತ್ತರಿಸಿರುವ ಜನತೆ ರಾಜ್ಯ ಸರ್ಕಾರ ಮತ್ತೊಂದು ಶಾಕ್‌ ಕೊಟ್ಟಿದೆ. ಹೊಸದಾಗಿ ನಿರ್ಮಾಣ ಆಗುವ ರಾಜ್ಯದ ಎಲ್ಲಾ ರಾಜ್ಯದ ಎಲ್ಲ ಬಹುಮಹಡಿ ಮತ್ತು ಎತ್ತರದ ಕಟ್ಟಡಗಳಿಗೆ 1% ಸೆಸ್ (Cess) ವಿಧಿಸಲು ಇಂದಿನ ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ.

    ಅಗ್ನಿಶಾಮಕ ದಳದ ಕಾಯ್ದೆ (Fire Service Ac) ಅನ್ವಯ ಆಗುವ ವಾಣಿಜ್ಯ ಕಟ್ಟಡಗಳು, ಕೈಗಾರಿಕಾಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು, ಅಪಾರ್ಟ್ಮೆಂಟ್ ಗಳು ಸೇರಿ ಎತ್ತರದ ಬಹುಮಹಡಿ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಸರ್ಕಾರ ನಿರ್ಧರಿಸಿದೆ. ಇದರೊಂದಿಗೆ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

    ಸಂಪುಟ ಸಭೆ ನಿರ್ಣಯಗಳು
    * ಬೆಂಗಳೂರಿನ ಸ್ಪೇಸ್ ಟೆಕ್ ನಲ್ಲಿ ಉತ್ಕೃಷ್ಟತಾ ಕೇಂದ್ರ (ಸೆಂಟರ್ ಆಫ್ ಎಕ್ಸಲೆನ್ಸ್) ಸ್ಥಾಪನೆಗೆ ಸಂಪುಟ ಅನುಮೋದನೆ
    * ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆ, 50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ
    * ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸುವುದು. ಜೊತೆಗೆ ಆರ್‌ಸಿಬಿ, ಕೆಎಸ್‌ಸಿಎ ವಿರುದ್ಧ ಕ್ರಿಮಿನಲ್ ಕೇಸ್‌ಗೆ ಅಧಿಕೃತ ಒಪ್ಪಿಗೆ.
    * ಕುನ್ಹಾ ವರದಿ ಶಿಫಾರಸ್ಸು ಜಾರಿಗೆ ಕ್ಯಾಬಿನೆಟ್ ಒಪ್ಪಿಗೆ – ಡಿಎನ್‌ಎ ಈವೆಂಟ್‌ ಮ್ಯಾನೆಜ್‌ಮೆಂಟ್‌ ಸಂಸ್ಥೆ ವಿರುದ್ಧವೂ ಕ್ರಿಮಿನಲ್ ಕೇಸ್
    * ಇದರೊಂದಿಗೆ ಸನ್ನಡತೆ ಆಧಾರದಲ್ಲಿ ಜೀವಾವಧಿ ಶಿಕ್ಷೆ ಖೈದಿಗಳಿಗೆ ಬಿಡುಗಡೆ ಭಾಗ್ಯ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
    * ಜೊತೆಗೆ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 46 ಜೀವಾವಧಿ ಶಿಕ್ಷಾ ಬಂಧಿಗಳ ಬಿಡುಗಡೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ.

  • ಆನ್‌ಲೈನ್ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ಅಂಕುಶಕ್ಕೆ ಮುಂದಾದ ಸರ್ಕಾರ – ಹೊಸ ತಿದ್ದುಪಡಿ ಮಸೂದೆ ಮಂಡನೆಗೆ ತಯಾರಿ

    ಆನ್‌ಲೈನ್ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ಅಂಕುಶಕ್ಕೆ ಮುಂದಾದ ಸರ್ಕಾರ – ಹೊಸ ತಿದ್ದುಪಡಿ ಮಸೂದೆ ಮಂಡನೆಗೆ ತಯಾರಿ

    – ನಿಯಮ ಉಲ್ಲಂಘಿಸಿದ್ರೆ 3 ವರ್ಷ ಜೈಲು, 5 ಲಕ್ಷ ರೂ. ದಂಡ

    ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ (Online Betting) ಹಾಗೂ ಗ್ಯಾಂಬ್ಲಿಂಗ್‌ಗೆ (Gambling) ಅಂಕುಶ ಹಾಕಲು ಸರ್ಕಾರ ಮುಂದಾಗಿದೆ. ಸರ್ಕಾರದಿಂದ ಹೊಸ ತಿದ್ದುಪಡಿ ಮಸೂದೆ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಲಾಗಿದೆ.

    ಮುಂಬರುವ ಅಧಿವೇಶನದಲ್ಲಿ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪ್ರಸ್ತಾಪಿತ ಕಾನೂನು ಪ್ರಕಾರ ಗೇಮ್ ಆಫ್ ಚಾನ್ಸ್ ಅಂದ್ರೆ ಯಾವುದೇ ಆಟ, ಸ್ಪರ್ಧೆಯ ಫಲಿತಾಂಶಗಳು ಅದೃಷ್ಟದಿಂದ ಅವಲಂಬಿತವಾಗಿರುವ, ಅನಿಶ್ಚಿತತೆಗಳಿಂದ ಕೂಡಿರುವ ಆನ್‌ಲೈನ್ ಗ್ಯಾಂಬ್ಲಿಂಗ್‌, ಬೆಟ್ಟಿಂಗ್ ಅಥವಾ ಪಂತ ಕಟ್ಟುವ ಚಟುವಟಿಕೆಗಳು ನಿಷಿದ್ಧ. ಪಂಥ ಕಟ್ಟುವುದು, ಹಣ ಇಡುವುದು, ಟೋಕನ್, ವರ್ಚುವಲ್ ಕರೆನ್ಸಿ ಅಥವಾ ಇ-ಫಂಡುಗಳನ್ನು ಇಟ್ಟು ಅಂತರ್ಜಾಲ, ಮೊಬೈಲ್ ಆಪ್ ಅಥವಾ ಇತರೆ ಡಿಜಿಟಲ್ ವೇದಿಕೆಗಳ ಮೂಲಕ ಆಡುವ ಆಟಗಳ ನಿಷೇಧ. ನೋಂದಾಯಿತವಲ್ಲದ ವೇದಿಕೆಗಳ ಮೂಲಕ ಇಂಥ ಆನ್ ಲೈನ್ ಬೆಟ್ಟಿಂಗ್, ಗ್ಯಾಮ್ಲಿಂಗ್ ಸೇವೆ ಕೊಡುವುದು ಸಹ ನಿಷೇಧಿಸಲು ಅವಕಾಶ ಇದೆ. ಇದನ್ನೂ ಓದಿ: ಕೆಡಿ ಟೀಸರ್ ಡೇಟ್ ಘೋಷಣೆ – ಪ್ರಚಾರದ ವೈಖರಿಯಲ್ಲಿದೆ ಮಿಸ್ಟರಿ!

    ಮಸೂದೆಯಲ್ಲಿ ಕರ್ನಾಟಕ ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ನಿಯಂತ್ರಣ ಪ್ರಾಧಿಕಾರ ರಚನೆಗೆ ಅವಕಾಶ ಇದೆ. ಈ ಪ್ರಾಧಿಕಾರ ಹೊಸ ಕಾನೂನಿನಂತೆ ನಿಯಮಗಳ ಜಾರಿ, ಅನುಪಾಲನೆ, ಆನ್ ಲೈನ್ ಗೇಮಿಂಗ್ ಹಾಗೂ ಗ್ಯಾಂಬ್ಲಿಂಗ್‌ ನಿಯಂತ್ರಣದ ಮೇಲೆ ನಿಗಾ ಇಡಲಿದೆ. ಇದನ್ನೂ ಓದಿ: Heart Attack | ರಾಜ್ಯದಲ್ಲಿಂದು ಐವರು ಬಲಿ – ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ರಾಜಣ್ಣ ಸೂಚನೆ

    ಈ ಪ್ರಾಧಿಕಾರಕ್ಕೆ ಕಾನೂನು, ಸಾರ್ವಜನಿಕ ಆಡಳಿತ, ತಂತ್ರಜ್ಞಾನದ ಅನುಭವ ಹೊಂದಿರುವವರನ್ನು ರಾಜ್ಯ ಸರ್ಕಾರ ಅಧ್ಯಕ್ಷರಾಗಿ ನೇಮಿಸಲು ಅವಕಾಶ ಇದೆ. ಜೊತೆಗೆ ಮೂವರು ಸದಸ್ಯರನ್ನು ನೇಮಕ ಮಾಡಲಾಗುತ್ತದೆ. ಇನ್ನೂ ಹೊಸ ಮಸೂದೆ ಪ್ರಕಾರ ನಿಯಮ ಉಲ್ಲಂಘಿಸಿದ್ರೆ 3 ವರ್ಷ ಜೈಲು, 5 ಲಕ್ಷ ದಂಡದ ಶಿಕ್ಷೆ ಗೊಳಪಡಿಸಬಹುದಾಗಿದೆ. ಇದನ್ನೂ ಓದಿ: ಹಾವಿನ ದ್ವೇಷ 12 ವರುಷ – ಹಾಗೇ ಪ್ರೀತಿಯೂ ಪುರಾಣದಿಂದಲೇ ಹುಟ್ಟಿದ್ದಾ?

  • ಕೋವಿಡ್‌ ಲಸಿಕೆಯಿಂದ ಹೃದಯಾಘಾತ ಸಂಭವಿಸಿಲ್ಲ – ಸರ್ಕಾರಕ್ಕೆ ಸಲ್ಲಿಸಲು ತಜ್ಞರ ವರದಿ ಸಿದ್ಧ

    ಕೋವಿಡ್‌ ಲಸಿಕೆಯಿಂದ ಹೃದಯಾಘಾತ ಸಂಭವಿಸಿಲ್ಲ – ಸರ್ಕಾರಕ್ಕೆ ಸಲ್ಲಿಸಲು ತಜ್ಞರ ವರದಿ ಸಿದ್ಧ

    – 251 ಜನರ ಪೈಕಿ 87 ಮಂದಿಗೆ ಶುಗರ್‌

    ಬೆಂಗಳೂರು: ಕೋವಿಡ್ ಲಸಿಕೆಯಿಂದ ಹೃದಯಾಘಾತ (Heart Attack) ಸಂಭವಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡುವ ತಜ್ಞರ ಸಮಿತಿಯ (Experts Committee Studies) ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ಸಿದ್ಧವಾಗಿದೆ.

    ಇಂದು ಇಲಾಖೆ ಪ್ರಧಾನ ಕಾರ್ಯದರ್ಶಿಯವರ ಜೊತೆ ವರ್ಚುವಲ್ ಮೀಟಿಂಗ್ ನಡೆಸಿದ ನಂತರ ಸೋಮವಾರ ವರದಿ ಸಲ್ಲಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ಯಶಸ್ಸಿನ ಬೆನ್ನಲ್ಲೇ 1 ಲಕ್ಷ ಕೋಟಿ ಮೊತ್ತದ ರಕ್ಷಣಾ ಯೋಜನೆಗಳಿಗೆ ಮೋದಿ ಸರ್ಕಾರ ಅಸ್ತು

    ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ, ಸರ್ಕಾರ ತಜ್ಞರ ಸಮಿತಿಗೆ ಅಧ್ಯಯನ ನಡೆಸುವಂತೆ ಸೂಚನೆ ನೀಡಿತ್ತು. ಬೆಂಗಳೂರಿನ ಜಯದೇವ ಹೃದ್ರೋಗ (Heart Related Issues) ಸಂಸ್ಥೆಯ ನಿರ್ದೇಶಕರ ನೇತೃತ್ವದಲ್ಲಿ 12 ಸದಸ್ಯರ ತಜ್ಞರ ತಂಡ ಈ ಅಧ್ಯಯನ ನಡೆಸಿದ್ದು, ಕೋವಿಡ್ ಲಸಿಕೆ ಪಡೆದ 250 ಮಂದಿಯ ಮೇಲೆ ಅಧ್ಯಯನ ನಡೆಸಲಾಗಿದೆ. 30 ವರ್ಷದೊಳಗಿನ 12 ಜನ, 31 ರಿಂದ 40ರ ಒಳಗಿನ 60 ಜನ, 41 ರಿಂದ 45ರ ಒಳಗಿನ 172 ಜನರನ್ನ ತನಿಖೆಗೆ ಒಳಪಡಿಸಲಾಗಿತ್ತು. ಕೊವೀಡ್‌ಗೂ ಮುನ್ನ ಮತ್ತು ಕೋವಿಡ್ ನಂತರ ಪರಿಸ್ಥಿತಿಯ ಬಗ್ಗೆ ತನಿಖೆ ಮಾಡಿ ವರದಿ ಸಿದ್ಧಪಡಿಸಲಾಗಿದೆ.

    ವರದಿಯಲ್ಲಿ ಕೊವಿಡ್ ಗಿಂತ ಮುಂಚೆ 13.9% ನಷ್ಟಿದ್ದ ಡಯಾಬಿಟಿಸ್, ಕೊವೀಡ್ (Covid) ನಂತರ 20.5%ಗೆ ಏರಿಕೆಯಾಗಿದೆ. ಕೊವೀಡ್‌ಗೂ ಮುನ್ನ ಹೈಪರ್ ಟೆನ್ಷನ್ 13.9% ಇದ್ದದ್ದು ಕೊವೀಡ್ ನಂತರ 17.6%ಗೆ ಏರಿಕೆಯಾಗಿದೆ. ಕೊಲೆಸ್ಟ್ರಾಲ್ 34.8% ಇದ್ದದ್ದು, ಕೊವೀಡ್ ನಂತರ 44.1% ಏರಿಕೆಯಾಗಿರೋದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಅಧಿಕಾರದ ಮದದಿಂದ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಅಂತಿದ್ದಾರೆ: ಯಡಿಯೂರಪ್ಪ ಕಿಡಿ

    ವರದಿ ಸಾರಾಂಶವೇನು?
    * ಕರ್ನಾಟಕ ಸರ್ಕಾರವು ರಚಿಸಿದ ತಜ್ಞರ ಸಮಿತಿ ಯುವ ವಯಸ್ಕರಲ್ಲಿ ಹಠಾತ್ ಹೃದಯ ಸಂಬಂಧಿ ಘಟನೆಗಳ ಹೆಚ್ಚಳದಿಂದ ಉಂಟಾಗುವ ಹೆಚ್ಚುತ್ತಿರುವ ಸಾರ್ವಜನಿಕ ಆರೋಗ್ಯ ಸವಾಲನ್ನು ಎತ್ತಿ ತೋರಿಸುತ್ತದೆ.

    * ಅಧಿಕ ರಕ್ತದೊತ್ತಡ, ಮಧುಮೇಹ, ಡಿಸ್ಲಿಪಿಡೆಮಿಯಾ ಮತ್ತು ಧೂಮಪಾನದಂತಹ ಸಾಂಪ್ರದಾಯಿಕ ಅಪಾಯಕಾರಿ ಅಂಶಗಳು
    ಬಹುಪಾಲು ರೋಗಿಗಳಲ್ಲಿ ಪ್ರಚಲಿತವಾಗಿದ್ದರೂ, ಗಮನಾರ್ಹ ಅಲ್ಪಸಂಖ್ಯಾತ ರೋಗಿಗಳು ಇವುಗಳಲ್ಲಿ ಯಾವುದನ್ನೂ ಹೊಂದಿಲ್ಲ.

    * ಜಯದೇವ ಆಸ್ಪತ್ರೆಯಲ್ಲಿ ನಡೆಸಿದ ವೀಕ್ಷಣಾ ಅಧ್ಯಯನವು ಅಕಾಲಿಕ ಹೃದಯ ಸಂಬಂಧಿ ಕಾಯಿಲೆ ಮತ್ತು ಕೋವಿಡ್ 19 ಸೋಂಕು ಅಥವಾ ಕೋವಿಡ್ ವ್ಯಾಕ್ಸಿನೇಷನ್‌ನ ಹಿಂದಿನ ಇತಿಹಾಸದ ನಡುವೆ ಯಾವುದೇ ಸಂಬಂಧವನ್ನು ಕಂಡುಕೊಂಡಿಲ್ಲ

    * ವಿಶ್ವದ ಉಳಿದ ಭಾಗಗಳಲ್ಲಿ ಪ್ರಕಟವಾದ ಹೆಚ್ಚಿನ ಅಧ್ಯಯನಗಳು/ವರದಿಗಳು ಕೋವಿಡ್ ವ್ಯಾಕ್ಸಿನೇಷನ್ ಮತ್ತು ಹಠಾತ್ ಹೃದಯ ಸಂಬಂಧಿ ಘಟನೆಗಳ ನಡುವೆ ಯಾವುದೇ ಸಾಂದರ್ಭಿಕ ಸಂಬಂಧವನ್ನು ಕಂಡುಕೊಂಡಿಲ್ಲ.ಇದಕ್ಕೆ ವಿರುದ್ಧವಾಗಿ, ಕೋವಿಡ್ ವ್ಯಾಕ್ಸಿನೇಷನ್ ದೀರ್ಘಾವಧಿಯಲ್ಲಿ ಹೃದಯ ಸಂಬಂಧಿ ಘಟನೆಗಳ ವಿರುದ್ಧ ರಕ್ಷಣಾತ್ಮಕವಾಗಿದೆ ಎಂದು ತೋರಿಸಲಾಗಿದೆ.

    * ಹಠಾತ್ ಸಾವುಗಳ ಹೆಚ್ಚಳಕ್ಕೆ ಒಂದೇ ಕಾರಣವಿಲ್ಲ. ಬದಲಾಗಿ, ಇದು ವರ್ತನೆಯ, ಆನುವಂಶಿಕ ಮತ್ತು ಪರಿಸರ ಅಪಾಯಗಳೊಂದಿಗೆ ಬಹು-ಅಂಶಗಳ ಸಮಸ್ಯೆಯಾಗಿ ಕಂಡುಬರುತ್ತದೆ.

    * ಸಾಂಕ್ರಾಮಿಕ ರೋಗವು ಕೊನೆಗೊಂಡು ಮೂರು ವರ್ಷಗಳು ಕಳೆದಿವೆ. ಯುವಜನರಲ್ಲಿ ಹಠಾತ್ ಹೃದಯರಕ್ತನಾಳದ ಘಟನೆಗಳ ಹೆಚ್ಚಳಕ್ಕೆ “ದೀರ್ಘಕಾಲದ ಕೋವಿಡ್” ಕಾರಣವಾಗಿದೆ ಎಂಬ ನಂಬಿಕೆಯನ್ನು ಪ್ರಸ್ತುತ ದತ್ತಾಂಶವು ಬೆಂಬಲಿಸುವುದಿಲ್ಲ. ಬದಲಾಗಿ, ಸಿವಿಡಿಗೆ ಕಾರಣವಾಗುವ ಸಾಮಾನ್ಯ ಅಪಾಯಕಾರಿ ಅಂಶಗಳ (ಉದಾ: ಹೆಚ್‌ಡಿ, ಡಿಎಂ, ಧೂಮಪಾನ, ಡಿಸ್ಲಿಪಿಡೆಮಿಯಾ) ಹರಡುವಿಕೆಯ ಹೆಚ್ಚಳವು ಹಠಾತ್ ಹೃದಯರಕ್ತನಾಳದ ಘಟನೆಗಳ ಹೆಚ್ಚಳಕ್ಕೆ ಉತ್ತಮ ವಿವರಣೆಯಾಗಿದೆ.

    ಈ ಸಂಶೋಧನೆಗಳ ಬೆಳಕಿನಲ್ಲಿ, ಬಹುಮುಖಿ ಸಾರ್ವಜನಿಕ ಆರೋಗ್ಯ ಕಾರ್ಯತಂತ್ರವು ಅತ್ಯಗತ್ಯ. ಇದರಲ್ಲಿ ಹಠಾತ್ ಹೃದಯ ಸಾವುಗಳಿಗೆ, ವಿಶೇಷವಾಗಿ ಯುವ ವಯಸ್ಕರಲ್ಲಿ, ದೃಢವಾದ ಕಣ್ಗಾವಲು ವ್ಯವಸ್ಥೆ ಸ್ಥಾಪಿಸುವುದು, ಶವಪರೀಕ್ಷೆ ಆಧಾರಿತ ನೋಂದಣಿ ಕಾರ್ಯಗತಗೊಳಿಸುವುದು ಮತ್ತು ಶಾಲಾ ಮಟ್ಟದಲ್ಲಿ ಆರಂಭಿಕ ಹೃದಯರಕ್ತನಾಳದ ತಪಾಸಣೆ ಸಂಯೋಜಿಸುವುದು ಸೇರಿವೆ. ಮುಖ್ಯವಾಗಿ ಕೋವಿಡ್‌ 19 ಸೋಂಕು ಮತ್ತು ವ್ಯಾಕ್ಸಿನೇಷನ್ ಎರಡರ ದೀರ್ಘಕಾಲೀನ ಹೃದಯ ರಕ್ತನಾಳದ ಪರಿಣಾಮಗಳನ್ನು ಉತ್ತಮವಾಗಿ ವಿವರಿಸಲು ದೊಡ್ಡ ಪ್ರಮಾಣದ, ನಿರೀಕ್ಷಿತ, ಬಹುಕೇಂದ್ರಿತ ಅಧ್ಯಯನಗಳು ಅಗತ್ಯವಿದೆ. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ರಾಜಕೀಯ ಬೇಡ, ಹೆಚ್‌ಡಿಕೆ ಸಹಕಾರ ಕೊಡಲಿ: ಎಂ.ಬಿ.ಪಾಟೀಲ್  

  • ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ

    ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ

    ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಬಗ್ಗೆ ಅವಹೇಳನಕಾರಿ ಮಾತಾಡಿರೋ ಬಿಜೆಪಿ MLC ರವಿಕುಮಾರ್ ವಿರುದ್ಧ ಕ್ರಮಕ್ಕೆ ಪ್ರದೇಶ ಕಾಂಗ್ರೆಸ್ ಕಮಿಟಿಯಿಂದ ದೂರು ಬಂದಿದೆ ಅಂತ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ (Congress) ನನಗೆ ದೂರು ಕೊಟ್ಟಿದ್ದಾರೆ. ರವಿಕುಮಾರ್ (N Ravikumar) ಅವರು ಸಿಎಸ್‌ಗೆ ಅಸಂಬದ್ಧ ಪದ ಬಳಕೆ ಮಾಡಿದ್ದಾರೆ. ಅವರ ಮೇಲೆ ಕ್ರಮಕ್ಕೆ ಮನವಿ ಮಾಡಿದ್ದಾರೆ. MLC ಸ್ಥಾನದಿಂದ ಅಮಾನತು ಮಾಡಬೇಕು ಅಂತ ಕೇಳಿದ್ದಾರೆ. ರವಿಕುಮಾರ್‌ಗೆ ನಾನು ಪತ್ರ ಬರೆದಿದ್ದೇನೆ. ಹೀಗೆ ದೂರು ಬಂದಿದೆ. ನಿಮ್ಮ ಅಭಿಪ್ರಾಯ ‌ಕೊಡಿ ಅಂತ ಕೇಳಿದ್ದೀನಿ. ಅವರು ಅಭಿಪ್ರಾಯ ಕೊಟ್ಟ ಮೇಲೆ ಮುಂದಿನ ತೀರ್ಮಾನ ಮಾಡ್ತೀನಿ ಎಂದಿದ್ದಾರೆ. ಇದನ್ನೂ ಓದಿ: ಸಿಎಸ್‌ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ – ನಾಳೆ ಜೋಷಿಗೆ ಸ್ಪಷ್ಟನೆ

    ರವಿಕುಮಾರ್ ಅವರ ಸದಸ್ಯತ್ವ ರದ್ದು ಮಾಡೋ ಅಧಿಕಾರ ನನಗೆ ಇಲ್ಲ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ವಿಧಾನ ಪರಿಷತ್ ನಿಯಮದ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ತೀವಿ. ರವಿಕುಮಾರ್ ಅಭಿಪ್ರಾಯ ಪಡೆಯದೇ ನಾನೇನು ಕ್ರಮ ತೆಗೆದುಕೊಳ್ಳಲು ಆಗಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್

    ಇದು ವಿಧಾನಸೌಧದ ಪರಿಮಿತಿಯಲ್ಲಿ ನಡೆದಿದೆ. ಅದಕ್ಕೆ ನಾನು ರವಿಕುಮಾರ್‌ಗೆ ಪತ್ರ ಬರೆದಿದ್ದೇನೆ. ಪತ್ರಕ್ಕೆ ಅವರ ಅಭಿಪ್ರಾಯ ಬರಲಿ, ರಾಜ್ಯಸಭೆ ಸೆಕ್ರೆಟರಿ ಜನರಲ್ ಅವರ ಅಭಿಪ್ರಾಯ ಪಡೆಯುತ್ತೇನೆ. ಪೊಲೀಸ್ ಕೇಸ್ ಬಗ್ಗೆ ನನಗೆ ಗೊತ್ತಿಲ್ಲ. ಶಾಸಕರನ್ನ ಅರೆಸ್ಟ್ ಮಾಡಿದ್ರೆ ನಮಗೆ ಮಾಹಿತಿ ಕೊಡಬೇಕು ಅಷ್ಟೆ. ನಾವು ರವಿಕುಮಾರ್ ಅಭಿಪ್ರಾಯ ಪಡೆದು ನಿಯಮದ ಪ್ರಕಾರ ಕ್ರಮ ತೆಗೆದುಕೊಳ್ತೀನಿ ಅಂತ ತಿಳಿಸಿದ್ದಾರೆ. ಇದನ್ನೂ ಓದಿ:  SKSSF ಅಬುಧಾಬಿ ಕರ್ನಾಟಕ & ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ ಆಶ್ರಯದಲ್ಲಿ 4ನೇ ಯಶಸ್ವಿ ರಕ್ತದಾನ ಶಿಬಿರ

  • ಸುಳ್ಳು ಮಾಹಿತಿ ನೀಡಿ ಪಿಂಚಣಿ ಪಡೆಯೋರಿಗೆ ಶಾಕ್ – 23 ಲಕ್ಷ ಪಿಂಚಣಿದಾರರ ಮೇಲೆ ಕಂದಾಯ ಇಲಾಖೆ ಅನುಮಾನ

    ಸುಳ್ಳು ಮಾಹಿತಿ ನೀಡಿ ಪಿಂಚಣಿ ಪಡೆಯೋರಿಗೆ ಶಾಕ್ – 23 ಲಕ್ಷ ಪಿಂಚಣಿದಾರರ ಮೇಲೆ ಕಂದಾಯ ಇಲಾಖೆ ಅನುಮಾನ

    ಬೆಂಗಳೂರು: ಅರ್ಹರಿಗೆ ಗ್ಯಾರಂಟಿ ಯೋಜನೆಗಳು (Guarantee Scheme) ಸಿಗಬೇಕು ಅನರ್ಹರಿಗೆ ಅಲ್ಲ ಅನ್ನೋದನ್ನ ಗಮನದಲ್ಲಿಟ್ಟುಕೊಂಡು ಸರ್ಕಾರ ಅನರ್ಹರಿಗೆ ಶಾಕ್ ಕೊಡಲು ಮುಂದಾಗಿದೆ. ಅದರ ಭಾಗವಾಗಿ ಸುಳ್ಳು ಹೇಳಿ ಪಿಂಚಣಿ ಪಡೆಯುತ್ತಿರುವವರ ಮೇಲೆ ಕಂದಾಯ ಇಲಾಖೆ ಕಣ್ಣಿಟ್ಟಿದೆ.

    ವಯಸ್ಸಿನ ಮಿತಿ ತಪ್ಪು ಮಾಹಿತಿ ನೀಡಿ ಸರ್ಕಾರಿ ನೌಕರರು ಆದಾಯ ತೆರಿಗೆ ಪಾವತಿ ಮಾಡ್ತಾ ಇರುವವರು ಪಿಂಚಣಿ (Pension) ಪಡೆಯುತ್ತಿದ್ದಾರೆ ಅಂತಾ 23 ಲಕ್ಷ ಪಿಂಚಣಿದಾರರ ಮೇಲೆ ಕಂದಾಯ ಇಲಾಖೆ (Revenue Department) ಕಣ್ಣಿಟ್ಟಿದೆ. ಹೀಗಾಗಿ 23 ಲಕ್ಷ ಪಿಂಚಣಿದಾರರನ್ನ ಬಗ್ಗೆ ಪರಿಶೀಲಿಸುವಂತೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ – ಗೋಕಾಕ್ ಜಲಪಾತಕ್ಕೆ ಜೀವಕಳೆ

    ಅಂಕಿ-ಅಂಶ
    ವೃದ್ಧಾಪ್ಯ ವೇತನ ಫಲಾನುಭವಿಗಳು – 21.87 ಲಕ್ಷ
    ವೃದ್ಧಾಪ್ಯ ವೇತನ ಅನರ್ಹ ಫಲಾನುಭವಿಗಳು – 9.04 ಲಕ್ಷ
    ಸಂಧ್ಯಾ ಸುರಕ್ಷಾ ಫಲಾನುಭವಿಗಳು – 31.33 ಲಕ್ಷ ಜನ
    ಸಂಧ್ಯಾ ಸುರಕ್ಷಾ ಅನರ್ಹ ಫಲಾನುಭವಿಗಳು – 14.15 ಲಕ್ಷ

    ಹೀಗೆ 23 ಲಕ್ಷ ಅನರ್ಹ ಪಿಂಚಣಿದಾರರಿಗೆ ಕಡಿವಾಣ ಹಾಕಲು ಕಂದಾಯ ಇಲಾಖೆ ಮುಂದಾಗಿದೆ. ಇನ್ನೂ 23 ಲಕ್ಷ ಪಿಂಚಣಿದಾರರು ಅನರ್ಹರು ಅಂತಾ ಹೇಳ್ತಿಲ್ಲ. ಅವರ ಬಗ್ಗೆ ಅನುಮಾನ ಇದೆ. ಆಧಾರ್ ಕಾರ್ಡ್‌ನಲ್ಲಿ 40 ವರ್ಷ ಇರುವವರು ಕೂಡ ಪಿಂಚಣಿ ಪಡೆಯುತ್ತಿದ್ದಾರೆ. ಈ ರೀತಿ ಮಾಡೋದು ಫ್ರಾಡ್. ಕೂಡಲೇ ಪರಿಶೀಲನೆ ಮಾಡ್ತೇವೆ. ಅನರ್ಹರನ್ನು ಕೂಡಲೇ ರದ್ದು ಮಾಡ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಇದನ್ನೂ ಓದಿ: Chikkamagaluru | ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

  • ಸಿದ್ದರಾಮಯ್ಯನವರೇ ತಪ್ಪಿಯೂ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ, ಮಾರಿಕೊಂಡು ಹೋಗ್ತಾರೆ – ಯತ್ನಾಳ್

    ಸಿದ್ದರಾಮಯ್ಯನವರೇ ತಪ್ಪಿಯೂ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ, ಮಾರಿಕೊಂಡು ಹೋಗ್ತಾರೆ – ಯತ್ನಾಳ್

    ವಿಜಯಪುರ: ಸಿದ್ದರಾಮಯ್ಯನವರೇ (Siddaramaiah) ನಿಮಗೆ ನಿಭಾಯಿಸಲು ಸಾಧ್ಯವಾಗದಿದ್ದರೆ, ವಿಧಾನಸಭೆ ವಿಸರ್ಜನೆ ಮಾಡಿ. ತಪ್ಪಿಯೂ ಕರ್ನಾಟಕವನ್ನ ಡಿಕೆಶಿ (DK Shivakumar) ಕೈಗೆ ಕೊಡಬೇಡಿ. ಮಾರಿಕೊಂಡು ಹೋಗ್ತಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಯತ್ನಾಳ್ ತಿಳಿಸಿದರು.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಎಲ್ಲ ಶಾಸಕರು ರೊಚ್ಚಿಗೆದ್ದಿದ್ದಾರೆ. ಸದ್ಯ ರಾಜ್ಯದ ಮಂತ್ರಿಗಳು ಲೂಟಿಗೆ ಇಳಿದಿದ್ದಾರೆ. ಸಿಎಂ ಡೀಲಿಂಗ್‌ನ್ನು ಅವರ ಮಗ ಮಾಡ್ತಿದ್ದಾನೆ, ಬೈರತಿ ಸುರೇಶ್ (Byrathi Suresh) ಅವರು ಡೀಲಿಂಗ್ ಮಾಡುತ್ತಾರೆ. ಡಿಕೆಶಿ ಇಬ್ಬರು ಅಣ್ಣ, ತಮ್ಮ ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ. ಸರ್ಕಾರ ಯಾವಾಗ ಹೋಗುತ್ತೆ ಗೊತ್ತಿಲ್ಲ, ಅಷ್ಟರಲ್ಲಿ ನಾವು ಹಣ ಮಾಡಿಕೊಂಡು ಪಾರಾಗಬೇಕು ಎಂದು ಎಲ್ಲ ಮಂತ್ರಿಗಳಿಗೂ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ: ರೋಡ್ ರೇಜ್ ಕೇಸ್ – ಮಾಜಿ ಎಂಪಿ ಅನಂತಕುಮಾರ್ ಹೆಗಡೆ ಗನ್‌ಮ್ಯಾನ್, ಡ್ರೈವರ್‌ಗೆ ಜಾಮೀನು

    ಇನ್ನು ಗ್ಯಾರಂಟಿಗಳ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಬಾದಾಮಿಯಲ್ಲಿ, ನಾವು ಬಾದಾಮಿಯ ಸಂಪೂರ್ಣ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಯಾಕೆಂದರೆ ನಮ್ಮ ಹತ್ತಿರ ದುಡ್ಡಿಲ್ಲ, ಅದಕ್ಕೆ ನರೇಂದ್ರ ಮೋದಿ ಅವರು ಕೊಡಬೇಕು ಎಂದಿದ್ದಾರೆ. ಕಾಂಗ್ರೆಸ್‌ನವರು ಗ್ಯಾರಂಟಿ ಹೆಸರಲ್ಲಿ ಪುಕ್ಕಟೆ ಹಂಚುತ್ತಾ ಹೋಗುತ್ತಾರೆ. ಗ್ಯಾರಂಟಿ ಒಂದು ನೆಪ ಅಷ್ಟೇ, ಇವರು ಲೂಟಿ ಮಾಡುತ್ತಿದ್ದಾರೆ. ಬಡವರಿಗೆ ಅಷ್ಟು ಕೊಟ್ಟಿದ್ದೇವೆ, ಇಷ್ಟು ಕೊಟ್ಟಿದ್ದೇವೆ ಎಂದು ಹೇಳುತ್ತಾರೆ. ಗ್ಯಾರಂಟಿ ಬಿಟ್ಟು ಅಭಿವೃದ್ಧಿ ಮಾಡಬಹುದು. ಕರ್ನಾಟಕದಲ್ಲಿ ಸಾಕಷ್ಟು ಸಂಪನ್ಮೂಲ ಇದೆ. ಬಡವರಿಗೆ ಕೊಡುವುದನ್ನು ಕೊಟ್ಟು, ಬಳಿಕ ಬೇರೆ ಅಭಿವೃದ್ಧಿ ಕೆಲಸ ಮಾಡಬಹುದು ಎಂದರು.

    ಇನ್ನೂ ಸಿದ್ದರಾಮಯ್ಯ ಅವರಿಗೆ ಗುರಿ ಇಲ್ಲ, ದಿನೇ ದಿನೇ ಕಾಂಗ್ರೆಸ್‌ನ ಶಾಸಕರು ಜಾಗೃತರಾಗುತ್ತಿದ್ದಾರೆ. ಎಲ್ಲವನ್ನು ಅಲ್ಪಸಂಖ್ಯಾತರಿಗೆ ಕೊಟ್ಟರೆ ಹೇಗೆ ಎನ್ನುತ್ತಿದ್ದಾರೆ. ಇದರಿಂದ ಸಿಎಂಗೆ ತಲೆನೋವಾಗಿದೆ. ನಿಮಗೆ ನಿಭಾಯಿಸಲು ಸಾಧ್ಯವಾಗದಿದ್ದರೆ, ವಿಧಾನಸಭೆ ವಿಸರ್ಜನೆ ಮಾಡಿ. ತಪ್ಪಿಯೂ ಕರ್ನಾಟಕವನ್ನ ಡಿಕೆಶಿ ಕೈಗೆ ಕೊಡಬೇಡಿ. ನೀವು ಸ್ವಲ್ಪ ಲೂಟಿ ಮಾಡಿದ್ದೀರಾ, ಡಿಕೆಶಿ ಕೈಯಲ್ಲಿ ಕೊಟ್ರೆ ಇಡೀ ಕರ್ನಾಟಕವನ್ನೇ ಮಾರಾಟ ಮಾಡಿಕೊಂಡು ಹೋಗುತ್ತಾರೆ. ಹೀಗಾಗಿ ರಾಜ್ಯ ಸರ್ಕಾರ ವಿಸರ್ಜನೆಯಾಗಬೇಕು, ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಹೃದಯಾಘಾತ – ವಿದ್ಯಾರ್ಥಿನಿ ಸಾವು

  • ಶೀಘ್ರದಲ್ಲೇ 8,000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ – ಜಿ.ಪರಮೇಶ್ವರ್

    ಶೀಘ್ರದಲ್ಲೇ 8,000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ – ಜಿ.ಪರಮೇಶ್ವರ್

    -ಈ ವರ್ಷ ನೀರಾವರಿಗೆ 22 ಸಾವಿರ ಕೋಟಿ ರೂ. ಮೀಸಲು

    ಕೊಪ್ಪಳ: ರಾಜ್ಯಾದ್ಯಂತ ಕಳೆದ 5 ವರ್ಷದಲ್ಲಿ 8 ಸಾವಿರ ಪೊಲೀಸ್ ಪೇದೆ ಹುದ್ದೆ ಖಾಲಿ ಆಗಿದ್ದು, ಶೀಘ್ರದಲ್ಲೇ ಭರ್ತಿ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (G Parameshwar) ಹೇಳಿದರು.

    ಕೊಪ್ಪಳದ ಜಿಲ್ಲಾ ಕಾಂಗ್ರೆಸ್ (Congress) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರ ಯಾವುದೇ ನೇಮಕಾತಿ ಮಾಡಿಲ್ಲ. ಹೀಗಾಗಿ ಒಂದಷ್ಟು ಕಡೆ ಸಿಬ್ಬಂದಿ ಕೊರತೆಯಿರುವ ಬಗ್ಗೆ ಮಾಹಿತಿ ಇದೆ. ಈ ಹಿಂದಿನ ಸರ್ಕಾರವಿದ್ದಾಗ ನಡೆದ ಪಿಎಸ್‌ಐ ಹಗರಣದಿಂದ ಯಾವುದೇ ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ನಡೆಯಲಿಲ್ಲ. ನಮ್ಮ ಸರ್ಕಾರ ಎಲ್ಲವನ್ನೂ ಸರಿಪಡಿಸಿ, ಈಗಾಗಲೇ 500 ಪಿಎಸ್‌ಐ (PSI) ಹುದ್ದೆಗೆ ನೇಮಕಾತಿ ಮಾಡಿದೆ. ಇನ್ನೂ 500 ಪಿಎಸ್‌ಐ ಹುದ್ದೆಗೆ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಭರವಸೆ ನೀಡಿದರು.ಇದನ್ನೂ ಓದಿ: ಇದೇ ವಾರ ಮುಗಿಯಲಿದೆ ದರ್ಶನ್ ಡೆವಿಲ್ ಶೂಟಿಂಗ್ !

    ಜಿಲ್ಲಾ ನ್ಯಾಯಾಧೀಶರು ಕೊಪ್ಪಳ ಗಾಜಾಪಟ್ಟಿ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರು ಏನಾದರೂ ಹೇಳಿಕೊಳ್ಳಲಿ. ಅಕ್ರಮ ತಡೆಗೆ ಸರ್ಕಾರದಿಂದ ಎಲ್ಲ ರೀತಿಯ ಸೂಚನೆ ನೀಡಿದ್ದೇವೆ. ರಾಜ್ಯಕ್ಕೆ ಪ್ರತಿದಿನ ಕೋಟ್ಯಂತರ ರೂ. ಡ್ರಗ್ಸ್ ಬರುತ್ತಿದೆ. ಕರ್ನಾಟಕ ಡ್ರಗ್ಸ್ ಮುಕ್ತ ಮಾಡಲು ಸರ್ಕಾರ ಮುಂದಾಗಿದೆ. ಆನೆಗೊಂದಿ ಭಾಗದಲ್ಲಿ ಡ್ರಗ್ಸ್ ತಡೆಯುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ ಆನೆಗೊಂದಿ ಭಾಗದಲ್ಲಿ ಪ್ರವಾಸಿ ಪೊಲೀಸ್ ಠಾಣೆ ಮಾಡುತ್ತೇವೆ. ರಾಯರೆಡ್ಡಿ ಅವರು ಆನೆಗೊಂದಿ ಕರ್ನಾಟಕದ ಡ್ರಗ್ಸ್ ಹಬ್ ಆಗಿದೆ ಎಂಬ ಸಲಹೆ ಹಾಗೂ ದೂರಿನ ಹಿನ್ನೆಲೆ ತಡೆಗೆ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಮುಕ್ತವಾಗಿ ಕೆಲಸ ಮಾಡಲು ಸೂಚಿಸಿದ್ದೇವೆ ಎಂದರು.

    ರಾಜ್ಯ ಸರ್ಕಾರ ಚುನಾವಣೆ ಪೂರ್ವ ನೀಡಿದ ಭರವಸೆ ಈಡೇರಿಸಿದೆ. ಐದೂ ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. ಇದರಿಂದ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿನ ಜನರು ಮಧ್ಯಮ ವರ್ಗಕ್ಕೆ ಸೇರಿದ್ದಾರೆ. ಇದಕ್ಕೆ ಗ್ಯಾರಂಟಿ ಯೋಜನೆ ಕಾರಣ. ಚುನಾವಣೆ ವೇಳೆ ನಾವು ಕಣ್ಣು ಮುಚ್ಚಿ ಗ್ಯಾರಂಟಿ ಜಾರಿ ಮಾಡಿಲ್ಲ. ಎಲ್ಲ ಪೂರ್ವ ನಿಯೋಜಿತ ಲೆಕ್ಕಾಚಾರದಿಂದಲೇ ಗ್ಯಾರಂಟಿ ಕೊಡಲಾಗಿದೆ. ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಗ್ಯಾರಂಟಿ ಯೋಜನೆ ತಲುಪುತ್ತಿವೆ ಎಂದರು.

    ಅಭಿವೃದ್ಧಿ ಆಗುತ್ತಿಲ್ಲ ಎಂಬ ಟೀಕೆ ಸರಿಯಲ್ಲ. ಈ ವರ್ಷ ನೀರಾವರಿಗೆ 22 ಸಾವಿರ ಕೋಟಿ ರೂ. ಮೀಸಲು ಇಟ್ಟಿದ್ದೇವೆ. ಅಭಿವೃದ್ಧಿ ಜೊತೆಗೆ ಗ್ಯಾರಂಟಿ ನೀಡುತ್ತಿದ್ದೇವೆ. ಕೃಷಿಗೆ ಎಲ್ಲ ಅಗತ್ಯ ಕೃಷಿ ಉಪಕರಣಗಳನ್ನು ನೀಡುತ್ತಿದ್ದೇವೆ. ಯಾವುದೇ ಅಭಿವೃದ್ಧಿ ಕೆಲಸ ನಿಲ್ಲಿಸಿಲ್ಲ. ಮುಂದಿನ 2027ಕ್ಕೆ ಎತ್ತಿನ ಹೊಳೆ ಯೋಜನೆ ಪೂರ್ಣಗೊಳಿಸಲು ಸಿಎಂ ಘೋಷಿಸಿದ್ದಾರೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ಪೆರ್ಡೂರು ಅನಂತಪದ್ಮನಾಭನಿಗೆ ಮುಷ್ಟಿ ಕಾಣಿಕೆ ಅರ್ಪಿಸಿದ ರಕ್ಷಿತ್ ಶೆಟ್ಟಿ

  • ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಲಾ 5 ಕೋಟಿ ಪರಿಹಾರ ಕೊಡ್ಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

    ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಲಾ 5 ಕೋಟಿ ಪರಿಹಾರ ಕೊಡ್ಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

    ಬೆಂಗಳೂರು: ಕಾಲ್ತುಳಿತದಲ್ಲಿ (Stampede) ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ತಲಾ 5 ಕೋಟಿ ಪರಿಹಾರ ಕೊಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ (Vatal Nagaraj) ಆಗ್ರಹಿಸಿದ್ದಾರೆ.

    ಬೆಂಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI), ಕರ್ನಾಟಕ ಕ್ರಿಕೆಟ್‌ ಅಸೋಸಿಯೇಷನ್‌, ಆರ್‌ಸಿಬಿ (RCB) ಫ್ರಾಂಚೈಸಿ ಹಾಗೂ ಕರ್ನಾಟಕ ಸರ್ಕಾರ (Karnataka Government) ಸೇರಿ ಒಬ್ಬೊಬ್ಬ ಸಂತ್ರಸ್ತರ ಕುಟುಂಬಗಳಿಗೆ ತಲಾ ಐದು ಕೋಟಿ ರೂ ಪರಿಹಾರ ಜಾರಿಗೊಳಿಸಬೇಕು. ಜೊತೆಗೆ ಗಾಯಗೊಂಡವರ ಜೀವನದ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

    Chinnaswamy Stampede

    ನಮ್ಮ ರಾಜ್ಯದಲ್ಲಿ ಮಾನವ ಹಕ್ಕುಗಳ ಆಯೋಗ ಅಂತ ಇದೆ, ಅದು ಈಗ ʻಮಾನವ ವಿರೋಧಿಗಳ ಆಯೋಗʼ ಆಗಿದೆ. ಈ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಒತ್ತಾಯಿಸಿದರಲ್ಲದೇ, ದಯಾನಂದ್‌ ಅವರನ್ನ ಅಮಾನತ್ತಿನಲ್ಲಿಟ್ಟಿರುವುದು ನಾಡಿನ ಜನತೆಗೆ ಹಾಗೂ ಇಡೀ ಪೊಲೀಸ್‌ ಇಲಾಖೆಗೆ ಮಾಡಿದ ಅಪಮಾನ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಿಗೆ ಬಿಗ್‌ ಶಾಕ್‌ – ಆರ್‌ಸಿಬಿ ಸೇಲ್‌..?

    ಏನಾಗಿತ್ತು?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿತು. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿತು. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿತು. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ದೀಪಾವಳಿಯಂಥಹ ಸಂಭ್ರಮ ಇತ್ತು. ಆವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

    ಮರುದಿನ ಅಂದ್ರೆ ಜೂ.4ರಂದು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಅಭಿಮಾನಿಗಳ ಸಾಗರವೇ ಹರಿದುಬಂದಿತ್ತು. ಚಿನ್ನಸ್ವಾಮಿ ಸ್ಟೇಡಿಯಂ ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು. ಆ ಬಳಿಕ ರಾಜ್ಯ ಸರ್ಕಾರ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹಾಗೂ ಆರ್‌ಸಿಬಿ ಫ್ರಾಂಚೈಸಿ ತಲಾ 10 ಲಕ್ಷ ರೂ. ಕೆಎಸ್‌ಸಿಎ ತಲಾ 5 ಲಕ್ಷ ಪರಿಹಾರ ಘೋಷಿಸಿತ್ತು. ನಂತರ ಕರ್ನಾಟಕ ಸರ್ಕಾರ ಪರಿಹಾರದ ಮೊತ್ತವನ್ನು 25 ಲಕ್ಷ ರೂ.ಗಳಿಗೆ ಹೆಚ್ಚಿಸಿತು.