Tag: Karnataka High Court

  • ಜಮ್ಮಾ ಹಿಡುವಳಿದಾರರು ಕೋವಿ ಹೊಂದುವುದು ಸಂವಿಧಾನಬದ್ಧ ಹಕ್ಕು – ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

    ಜಮ್ಮಾ ಹಿಡುವಳಿದಾರರು ಕೋವಿ ಹೊಂದುವುದು ಸಂವಿಧಾನಬದ್ಧ ಹಕ್ಕು – ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

    – ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ಕೊಡಗಿನ ಜನತೆ
    – ಕ್ಯಾ.ಚೇತನ್ ಸಲ್ಲಿಸಿದ್ದ ಪಿಐಎಲ್ ವಜಾ

    ಮಡಿಕೇರಿ: ಜುಮ್ಮಾ ಹಿಡುವಳಿದಾರರಿಗೆ ಸರ್ಕಾರ ನೀಡಿರುವ ಕೋವಿಯ ವಿಶೇಷ ಹಕ್ಕನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

    ಕೊಡಗಿನಲ್ಲಿ ಜಮ್ಮಾ ಹಿಡುವಳಿದಾರರು ಕೋವಿ ಹೊಂದುವುದು ವಿಶೇಷವಾದ ಹಕ್ಕು. ಆದರೆ ಆದರೆ ಜಮ್ಮಾ ಹಿಡುವಳಿದಾರರಿಗೆ ಸರ್ಕಾರ ನೀಡಿರುವ ಈ ವಿಶೇಷ ಹಕ್ಕನ್ನು ಪ್ರಶ್ನಿಸಿ ಕೊಡಗಿನವರೇ ಆದ ಕ್ಯಾಪ್ಟನ್ ಚೇತನ್ ಅವರು ಪಿಐಎಲ್ ಸಲ್ಲಿಸಿದ್ದರು. ಇದನ್ನೂ ಓದಿ: ಫೋಟೋ ಪಾಲಿಟಿಕ್ಸ್-ಮೋದಿ ಭಾವಚಿತ್ರ ಅಳವಡಿಕೆಗೆ ಜೆಡಿಎಸ್ ವಿರೋಧ

    ಈ ಹಕ್ಕಿನ ಪರವಾಗಿ ಎ. ಎಸ್ ಪೊನ್ನಣ್ಣ, ಸಜನ್ ಪೂವಯ್ಯ ವಾದ ಮಂಡಿಸಿ, ಕೋವಿ ಕೊಡಗಿನವರ ಆಯುಧ ಅಷ್ಟೇ ಅಲ್ಲ. ಅದೊಂದು ಭಾವನಾತ್ಮಕ ವಿಷಯ ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದರು. ಇದನ್ನೂ ಓದಿ: ಮಾರಾಟವಾಗಿದ್ದ 2 ತಿಂಗಳ ಗಂಡು ಮಗು ಪತ್ತೆ- 6 ಸಾವಿರಕ್ಕೆ ತಾಯಿಯಿಂದಲೇ ಕಂದಮ್ಮನ ಮಾರಾಟ

    ಸ್ವತಂತ್ರ ಪೂರ್ವದಿಂದಲೂ ಕೊಡಗಿನವರ ಬಳಿ ಕೋವಿ ಇದ್ದರೂ ಅದನ್ನು ಇದುವರೆಗೆ ಎಂತಹದ್ದೇ ಸಂದರ್ಭದಲ್ಲೂ ದುರ್ಬಳಕೆ ಮಾಡಿಲ್ಲ ಎಂಬ ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಎರಡು ಕಡೆಯ ವಾದ ಆಲಿಸಿದ ನ್ಯಾಯಾಲಯ ಪಿಐಎಲ್ ವಜಾಗೊಳಿಸಿ ಜಮ್ಮಾ ಹಿಡುವಳಿದಾರರಿಗೆ ಕೋವಿ ಹೊಂದುವುದು ಸಂವಿಧಾನಬ್ಧವಾಗಿದೆ ಎಂದು ಹೇಳಿ ಈ ವಿಶೇಷ ಹಕ್ಕನ್ನು ಮುಂದುವರೆಸುವಂತೆ ಮಹತ್ವದ ಆದೇಶ ಪ್ರಕಟಿಸಿದೆ.

    ಈ ತೀರ್ಪು ನೀಡುತ್ತಿದ್ದಂತೆ ಕೊಡಗಿನ ಹಲವೆಡೆ ಜಮ್ಮಾ ಹಿಡುವಳಿದಾರರು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ್ದಾರೆ. ಕ್ಯಾಪ್ಟನ್ ಚೇತನ್ ಅವರು ಕೂಡ ಲೈಸೆನ್ಸ್ ಪಡೆದು ಕೋವಿ ಹೊಂದಬಹುದು. ಆದರೆ ತನಗೆ ಕೋವಿ ಹಕ್ಕಿನ ವಿನಾಯ್ತಿ ಇಲ್ಲವೆಂದು ಕೋರ್ಟ್ ಮೆಟ್ಟಿಲೇರಿರುವುದು ಸರಿಯಲ್ಲ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    1959 ರ ಸಶಸ್ತ್ರ ಕಾಯ್ದೆ ಸೆಕ್ಷನ್ 3 ಮತ್ತು 4 ರ ಅನ್ವಯ ಕೂರ್ಗ್ ಬೈರೇಸ್ ಮತ್ತು ಜಮ್ಮಾ ಹಿಡುವಳಿದಾರರಿಗೆ ಕೋವಿ ಹೊಂದುವುದಕ್ಕೆ ದೇಶದ ಸಂವಿಧಾನದಲ್ಲೇ ವಿನಾಯ್ತಿ ನೀಡಲಾಗಿದೆ. ಈ ಹಕ್ಕನ್ನು ಯಥವತ್ತಾಗಿ ಮುಂದುವರೆಸಬಹುದು ಎಂದು 1963 ರಲ್ಲಿ ಕೇಂದ್ರ ಸರ್ಕಾರ ಹೇಳಿತ್ತು.

    ಕೊಡಗಿನಲ್ಲಿ ಕೋವಿ ಅಂದರೆ ಅದೊಂದು ಬರೀ ಆಯುಧವಲ್ಲ. ಬದಲಾಗಿ ಅದಕ್ಕೆ ಮಹತ್ವದ ಮತ್ತು ಪೂಜನೀಯ ಸ್ಥಾನವಿದೆ. ಇಲ್ಲಿ ಗಂಡುಮಗುವೊಂದು ಹುಟ್ಟಿದರೆ ಯಾರಾದರೂ ಸತ್ತರು ಗಾಳಿಯಲ್ಲಿ ಗುಂಡು ಹಾರಿಸಲಾಗುತ್ತದೆ. ಅಷ್ಟೇ ಯಾಕೆ ಕೊಡಗಿನ ಸುಗ್ಗಿ ಹಬ್ಬವಾಗಿರುವ ಪುತ್ತರಿಯಲ್ಲೂ ಧಾನ್ಯ ಲಕ್ಷ್ಮಿಯನ್ನು ಮನೆ ತುಂಬಿಸಿಕೊಳ್ಳುವಾಗಲೂ ಗುಂಡು ಹಾರಿಸಿ, ಧಾನ್ಯ ಲಕ್ಷ್ಮಿಗೆ ಗೌರವ ಸಲ್ಲಿಸಿ, ಬಳಿಕ ಮೆರವಣಿಗೆ ಮೂಲಕ ತಂದು ಮನೆ ತುಂಬಿಸಿಕೊಳ್ಳಲಾಗುತ್ತದೆ.

     

  • ಟ್ವಿಟರ್ ಇಂಡಿಯಾ ಎಂಡಿಗೆ ರಿಲೀಫ್ – ಯುಪಿ ಪೊಲೀಸರ ನೋಟಿಸ್ ರದ್ದುಗೊಳಿಸಿದ ಕರ್ನಾಟಕ ಹೈ ಕೋರ್ಟ್

    ಟ್ವಿಟರ್ ಇಂಡಿಯಾ ಎಂಡಿಗೆ ರಿಲೀಫ್ – ಯುಪಿ ಪೊಲೀಸರ ನೋಟಿಸ್ ರದ್ದುಗೊಳಿಸಿದ ಕರ್ನಾಟಕ ಹೈ ಕೋರ್ಟ್

    ಬೆಂಗಳೂರು: ಗಾಜಿಯಾಬಾದ್ ವೃದ್ಧನೋರ್ವನ ವೀಡಿಯೋಗೆ ಸಂಬಂಧಿಸಿದಂತೆ ಟ್ವಟರ್ ಇಂಡಿಯಾ ಎಂಡಿ ಮನೀಷ್ ಮಹೇಶ್ವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಇಂದು ಕರ್ನಾಟಕದ ಹೈಕೋರ್ಟ್ ಉತ್ತರ ಪ್ರದೇಶದ ಪೊಲೀಸರು ನೀಡಿದ ನೋಟಿಸ್ ನ್ನು ವಜಾಗೊಳಿಸಿ ಆದೇಶಿಸಿದ್ದು, ಮನೀಷ್ ಮಹೇಶ್ವರಿಗೆ ತನಿಖೆಗೆ ಸಹಕರಿಸುವಂತೆ ನ್ಯಾಯಮೂರ್ತಿ ಜಿ ನರೇಂದರ್ ನೇತೃತ್ವದ ಏಕಸದಸ್ಯ ಪೀಠ ಸೂಚನೆ ಸಹ ನೀಡಿದೆ.

    ವೃದ್ಧನ ವೀಡಿಯೋಗೆ ಸಂಬಂಧಿಸಿದಂತೆ ಮನೀಷ್ ಮಹೇಶ್ವರಿ ಸೇರಿದಂತೆ ಹಲವರನ್ನು ಉತ್ತರ ಪ್ರದೇಶದ ಪೊಲೀಸರು ಆರೋಪಿ ಸ್ಥಾನದಲ್ಲಿರಿಸಿತ್ತು. ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಪೊಲೀಸರು ವರ್ಚುವಲ್ ಮಾಧ್ಯಮ ಅಥವಾ ನೇರವಾಗಿ ಬಂದು ಹೇಳಿಕೆ ದಾಖಲಿಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.

    ವೃದ್ಧನೋರ್ವ ವೀಡಿಯೋ ವೈರಲ್ ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಪೊಲೀಸರು ಮನೀಷ್ ಮಹೇಶ್ವರಿ ಅವರಿಗೆ ಠಾಣೆಗೆ ಬಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಈ ಸಂಬಂಧ ಮನೀಷ್ ಮಹೇಶ್ವರಿ ಕರ್ನಾಟಕದ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದರು. ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್-21ನೇ ಕ್ರಮಾಂಕದಲ್ಲಿ ಧ್ವಜ ಹಿಡಿದು ಆಗಮಿಸಿದ ಭಾರತ ತಂಡ

    ಮೊದಲಿಗೆ ಸಿಆರ್‍ಪಿಸಿ ಸೆಕ್ಷನ್ 160ರ ಅಡಿ ನೋಟಿಸ್ ನೀಡಲಾಗಿತ್ತು. ಆದ್ರೆ ಮನೀಷ್ ಮಹೇಶ್ವರಿ ಪ್ರತಿಕ್ರಿಯಿಸದ ಹಿನ್ನೆಲೆ ಸೆಕ್ಷನ್ 41ಎ ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ. ಶಾಸನಬದ್ಧ ನಿಬಂಧನೆಗಳನ್ನು ಬೆದರಿಕೆ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಅನುಮತಿ ನೀಡಲಾಗುವುದು. ಉತ್ತರ ಪ್ರದೇಶದ ಪೊಲೀಸರು ಅರ್ಜಿದಾರರು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ನ್ಯಾಯಾಲಯ ಹೇಳಿದೆ.

  • ಭರವಸೆ ಮೂಡಿಸಿದ ಹೈಕೋರ್ಟ್ ತೀರ್ಪು: ಸುರೇಶ್ ಕುಮಾರ್

    ಭರವಸೆ ಮೂಡಿಸಿದ ಹೈಕೋರ್ಟ್ ತೀರ್ಪು: ಸುರೇಶ್ ಕುಮಾರ್

    ಬೆಂಗಳೂರು: ಈ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

    ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆ ರೂಪಿಸಿದ ಎಸ್ ಒ ಪಿ ಪಾಲನೆಗಳಂತಹ ಉಪಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಪುರಸ್ಕರಿಸಿ, ಇದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಉಪಕ್ರಮವಾಗಿದೆ ಎಂದಿರುವ ಹೈಕೋರ್ಟ್ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವುದನ್ನು ತುಂಬು ಮನಸ್ಸಿನಿಂದ ಶ್ಲಾಘಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇದು ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದ್ದು, ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

    ಕಳೆದ ವರ್ಷವೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂಬಂಧದಲ್ಲಿ ಇದೇ ರೀತಿಯಲ್ಲಿ ಹೈಕೋರ್ಟ್ ತೀರ್ಪು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರ ಸಲ್ಲಿಸಿದ್ದ ಎಸ್‍ಎಲ್‍ಪಿ. ಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯದ ಕ್ರಮವನ್ನು ಪುರಸ್ಕರಿಸಿತ್ತು ಎಂದು ಅವರು ನೆನಪಿಸಿಕೊಂಡರು. ಇದನ್ನೂ ಓದಿ: ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ – ಗುಡುಗಿದ ದರ್ಶನ್

  • ನ್ಯಾಯಾಲಯದ ಸಂಕೀರ್ಣ ಲೋಕಾರ್ಪಣೆ ಮಾಡಿದ ಅಟೆಂಡರ್

    ನ್ಯಾಯಾಲಯದ ಸಂಕೀರ್ಣ ಲೋಕಾರ್ಪಣೆ ಮಾಡಿದ ಅಟೆಂಡರ್

    – ಸರಳತೆ ಮೆರೆದ ಮುಖ್ಯನ್ಯಾಯಮೂರ್ತಿ

    ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಿರುವ ನೂತನ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣವನ್ನು ಅಟೆಂಡರ್ ಮೂಲಕ ಲೋಕಾರ್ಪಣೆ ಮಾಡಿಸಿ  ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಸರಳತೆ ಮೆರೆದಿದ್ದಾರೆ.

    ನಿಗದಿತ ಕಾರ್ಯಕ್ರಮದಂತೆ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ಕಟ್ಟಡದ ಟೇಪ್ ಕಟ್ ಮಾಡುವ ಮೂಲಕ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಲೋಕಾರ್ಪಣೆಗೊಳಿಸಬೇಕಿತ್ತು. ಆದರೆ ನ್ಯಾಯಾಲಯದ ಹಿರಿಯ ಅಟೆಂಡರ್ ಜಯರಾಜ ತ್ರಿಮೋತಿಯವರ ಕೈಯಲ್ಲಿ ಟೇಪ್ ಕಟ್ ಮಾಡಿಸಿ ಲೋಕಾರ್ಪಣೆ ಮಾಡಿಸಿದರು.

    ಈ ಕಾರ್ಯಕ್ರಮದಲ್ಲಿ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇತರೆ ನ್ಯಾಯಾಧೀಶರು, ಜಿಲ್ಲಾಧಿಕಾರಿ ಸಹ ಭಾಗವಹಿಸಿದ್ದರು. ನ್ಯಾಯಾಲಯದಲ್ಲೇ ಕೆಲಸ ಮಾಡುತ್ತಿದ್ದ ಹಿರಿಯ ಅಟೆಂಡರ್ ಆಗಿರುವ ಜಯರಾಜ್ ತ್ರಿಮೋತಿಯವರ ಕೈಯಲ್ಲಿ ಟೇಪ್ ಕಟ್ ಮಾಡಿಸಿ ಮುಖ್ಯ ನ್ಯಾಯಮೂರ್ತಿ ಸರಳತೆ ಮೆರೆದರು. ಅಲ್ಲದೆ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಅಭಯ್ ಶ್ರೀನಿವಾಸ್ ಓಕಾ ಅವರು ಪೊಲೀಸರ ಗೌರವ ವಂದನೆಯನ್ನು ಸಹ ಬೇಡವೆಂದು ಮೊದಲೇ ತಿಳಿಸಿದ್ದರು. ಮತ್ತೊಂದೆಡೆ ನ್ಯಾಯಾಲಯಗಳ ಸಂಕೀರ್ಣದ ಕಟ್ಟಡ ಉದ್ಘಾಟನೆ ವೇಳೆ ಆಡಂಬರ ಪ್ರದರ್ಶನ ಮಾಡಿ ದುಂದುವೆಚ್ಚ ಮಾಡಿ, ಸರ್ಕಾರದ ಹಣ ಪೋಲು ಮಾಡದಂತೆಯೂ ಸೂಚಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಮುಖ್ಯ ನ್ಯಾಯಮೂರ್ತಿಗಳು ಇತರರಿಗೆ ಮಾದರಿಯಾಗಿದ್ದಾರೆ.

    ಸುಮಾರು 11.50 ಕೋಟಿ ರೂ. ವೆಚ್ಚದಲ್ಲಿ ಮೂರು ಅಂತಸ್ಥಿನ ನ್ಯಾಯಾಲಯಗಳ ಸಂಕೀರ್ಣ ನಿರ್ಮಿಸಲಾಗಿದ್ದು, ಇಂದು ಲೋಕಾರ್ಪಣೆಗೊಳಿಸಲಾಯಿತು.

  • ರಾಜ್ಯ ಹೈಕೋರ್ಟಿಗೆ ಐವರು ಖಾಯಂ ನ್ಯಾಯಾಧೀಶರ ನೇಮಕ

    ರಾಜ್ಯ ಹೈಕೋರ್ಟಿಗೆ ಐವರು ಖಾಯಂ ನ್ಯಾಯಾಧೀಶರ ನೇಮಕ

    ನವದೆಹಲಿ: ಕರ್ನಾಟಕ ಹೈಕೋರ್ಟಿಗೆ ಖಾಯಂ ನ್ಯಾಯಾಧೀಶರ ನೇಮಕ ಮಾಡಲಾಗಿದೆ. ಹೆಚ್ಚುವರಿ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿರುವ ಐದು ಮಂದಿ ನ್ಯಾಯಾಧೀಶರನ್ನು ಖಾಯಂಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

    ನ್ಯಾ. ದೀಕ್ಷಿತ್ ಕೃಷ್ಣ ಶ್ರೀ ಪಾದ, ನ್ಯಾ. ಶಂಕರ್ ಗಣಪತಿ ಪಂಡಿತ್, ನ್ಯಾ.ರಾಮಕೃಷ್ಣ ದೇವದಾಸ್, ನ್ಯಾ. ಸಿದ್ದಪ್ಪ ಸುನೀಲ್ ದತ್ ಯಾದವ್, ನ್ಯಾ.ಬಿ. ಮಲ್ಲಿಕಾರ್ಜುನ ಶ್ಯಾಮ್ ಪ್ರಸಾದ್ ನೇಮಕ ಗೊಂಡಿರುವ ಖಾಯಂ ನ್ಯಾಯಾಧೀಶರು.

    ಖಾಯಂ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಕರ್ನಾಟಕದ ಹೈಕೋರ್ಟಿನಿಂದ ಸುಪ್ರೀಂಕೋರ್ಟ್ ಕೊಲಿಜಿಯಂ ಮನವಿ ಮಾಡಲಾಗಿತ್ತು. ಮನವಿ ಹಿನ್ನೆಲೆಯಲ್ಲಿ ಮಂಗಳವಾರ ಸಭೆ ನಡೆಸಿದ್ದ ಸುಪ್ರೀಂಕೋರ್ಟ್ ಕೊಲಿಜಿಯಂ ಹೆಚ್ಚುವರಿ ನ್ಯಾಯಧಿಶರನ್ನು ಖಾಯಂ ಮಾಡಿ ಆದೇಶ ಹೊರಡಿಸಿದೆ.

  • ಹೈಕೋರ್ಟಿನಲ್ಲಿ ಡಿಕೆಶಿ ಅರ್ಜಿ: ಬಿವಿ ಆಚಾರ್ಯರ ವಾದ ಹೀಗಿತ್ತು

    ಹೈಕೋರ್ಟಿನಲ್ಲಿ ಡಿಕೆಶಿ ಅರ್ಜಿ: ಬಿವಿ ಆಚಾರ್ಯರ ವಾದ ಹೀಗಿತ್ತು

    ಬೆಂಗಳೂರು: ವಿಚಾರಣೆಗೆ ಹೋದರೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸುತ್ತಾರೆ ಎಂಬ ಭಯ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಎದುರಾಗಿತ್ತು. ಹೀಗಾಗಿ ಮಧ್ಯಂತರ ರಕ್ಷಣೆ ಕೋರಿ ಹೈಕೋರ್ಟ್ ಪೀಠದಲ್ಲೂ ಅರ್ಜಿ ಸಲ್ಲಿಸಿದ್ದರು.

    ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್, ಗುರುವಾರ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿಯಿತು. ಡಿ.ಕೆ. ಶಿವಕುಮಾರ್ ಅವರ ಪರವಾಗಿ ಹಿರಿಯ ವಕೀಲ ಬಿ.ವಿ.ಆಚಾರ್ಯ ವಾದ ಮಂಡಿಸಿದರು. ಆದರೆ ಮಾಜಿ ಸಚಿವರ ಪರ ವಕೀಲರ ವಾದವನ್ನು ಹೈಕೋರ್ಟ್ ಪುರಸ್ಕರಿಸಲಿಲ್ಲ.

    ಕೋರ್ಟಿನಲ್ಲಿ ನಡೆದಿದ್ದೇನು?:
    ಡಿ.ಕೆ.ಶಿವಕುಮಾರ್ ಅವರ ಪರ ಮೊದಲು ವಾದ ಮಂಡಿಸಿದ ಬಿವಿ ಆಚಾರ್ಯ ಅವರು, ನಾವು ನಿರೀಕ್ಷಣಾ ಜಾಮೀನನ್ನು ಕೇಳುತ್ತಿಲ್ಲ. ಇ.ಡಿ ನೀಡಿದ್ದ ಸಮನ್ಸ್ ಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಇದನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ. ಅಲ್ಲಿಯವರೆಗೂ ಮಾಜಿ ಸಚಿವರನ್ನು ಬಂಧಿಸದಂತೆ ಇ.ಡಿಗೆ ಆದೇಶಿಸಿ ಎಂದು ಕೋರ್ಟ್ ಗೆ ಮನವಿ ಸಲ್ಲಿಸಿದರು.

    ಆದರೆ ಇಡಿ ಪರ ವಕೀಲರು, ಕಳೆದ 9 ತಿಂಗಳಿಂದ ಇದೇ ನಡೆಯುತ್ತಿದೆ. ವಿಚಾರಣೆ ಅಂದ ಮಾತ್ರಕ್ಕೆ ಬಂಧಿಸುತ್ತಾರೆ ಎಂದಲ್ಲ. ಬಂಧಿಸುವುದು ಬಿಡುವುದು ಅಧಿಕಾರಿಗಳಿಗೆ ಬಿಟ್ಟ ವಿಚಾರ ಎಂದು ಪ್ರತಿಯಾಗಿ ಮಂಡಿಸಿದರು. ಆಗ ಬಿವಿ ಆಚಾರ್ಯ ಅವರು, ನಮ್ಮ ಕಕ್ಷಿದಾರ ಡಿ.ಕೆ.ಶಿವಕುಮಾರ್ ಅವರಿಗೆ ಶನಿವಾರ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಸೆಪ್ಟೆಂಬರ್ 5 ಅಥವಾ 6 ರಂದು ದಿನಾಂಕ ನಿಗದಿ ಮಾಡುವಂತೆ ನಿರ್ದೇಶಿಸಿ ಎಂದು ಕೋರ್ಟಿಗೆ ಕೋರಿಕೊಂಡರು.

    ಮಧ್ಯ ಪ್ರವೇಶಿಸಿದ ನ್ಯಾಯಾಧೀಶರು, ಇಂದೇ ಮೇಲ್ಮನವಿ ಅರ್ಜಿ ಸಲ್ಲಿಸಬಹುದಲ್ಲ. ನಾಳೆ(ಶನಿವಾರ)ಯವರೆಗೂ ಕಾಯುವ ಅಗತ್ಯವೇನು. ನಾಳೆ ವಿಚಾರಣೆಗೆ ಹಾಜರಾಗುತ್ತೀರಾ ಎಂದು ಪಶ್ರಿಸಿದರು. ಆಗ ಬಿವಿ ಆಚಾರ್ಯ ಅವರು, ನಮಗಿನ್ನೂ ಆದೇಶದ ಪ್ರತಿ ಸಿಕ್ಕಿಲ್ಲ. ಇವತ್ತೇ ಮೇಲ್ಮನವಿ ಸಲ್ಲಿಸುವುದು ಕಷ್ಟ ಎಂದು ನ್ಯಾಯಾಧೀಶರಿಗೆ ತಿಳಿಸಿದರು.

    ಇದನ್ನು ಆಲಿಸಿದ ನ್ಯಾಯಾಧೀಶರು, ಆದೇಶ ಪ್ರತಿ ವೆಬ್‍ಸೈಟ್‍ನಲ್ಲಿ ಸಿಗುತ್ತೆ ಅಲ್ವಾ? ಅದನ್ನು ಇಂದೇ ಮೇಲ್ಮನವಿ ಸಲ್ಲಿಸಬಹುದು ಎಂದು ಮನವರಿಕೆ ಮಾಡಿಕೊಟ್ಟರು. ಇದರಿಂದಾಗಿ ಬಿವಿ ಆಚಾರ್ಯ ಅವರು, ಇಡಿ ಅಧಿಕಾರಿಗಳು ಬಂಧಿಸದಿದ್ದರೆ ಡಿಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗುತ್ತಾರೆ ಎಂದು ಕೋರ್ಟ್ ಗಮನಕ್ಕೆ ತಂದರು.

    ಸಮನ್ಸ್ ಗೆ ಸಂಬಂಧಿಸಿದಂತೆ ಗುರುವಾರ ಆದೇಶದಲ್ಲಿಯೇ ಸ್ಪಷ್ಟವಾಗಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ ಆದೇಶ ತಿದ್ದುಪಡಿ ಮಾಡಲು ಸಾಧ್ಯವಿಲ್ಲ. ಮಧ್ಯಂತರ ರಕ್ಷಣೆ ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದರು.

    ಏನಿದು ಪ್ರಕರಣ?
    2017ರ ಆಗಸ್ಟ್ 2 ರಂದು ದೆಹಲಿಯ ಡಿಕೆ ಶಿವಕುಮಾರ್ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ದಾಖಲೆ ಇಲ್ಲದ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ವಿಚಾರಣೆ ವೇಳೆ ಡಿಕೆಶಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಐಟಿ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಅಪಾರ್ಟ್ ಮೆಂಟ್‍ನಲ್ಲಿ ಪತ್ತೆ ಹಣದ ಜತೆಗೆ ಹವಾಲಾ ಮೂಲಕ ಏಜೆಂಟ್‍ಗಳ ಸಹಾಯದಿಂದ ಡಿಕೆ ಶಿವಕುಮಾರ್ ಕೋಟ್ಯಂತರ ರೂ.ಗಳನ್ನು ಕಾಂಗ್ರೆಸ್ ಹೈಕಮಾಂಡ್‍ಗೆ ನೀಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.ನೋಟು ನಿಷೇಧಗೊಂಡ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಸಾವಿರಾರು ಕೋಟಿ ರೂ.ಗಳನ್ನು ಬದಲಾಯಿಸಿದ್ದಾರೆ. ಆಪ್ತರ ಮೂಲಕ ಕಪ್ಪುಹಣವನ್ನು ಬಿಳಿಯಾಗಿ ಪರಿವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ವಿದೇಶದಲ್ಲೂ ಡಿಕೆಶಿ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.

    ಇಡಿ ಸಮನ್ಸ್ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಸೇರಿದಂತೆ ಗೆಳೆಯರಾದ ಆಂಜನೇಯ, ರಾಜೇಂದ್ರ, ಹನುಮಂತಯ್ಯ ಸಲ್ಲಿಸಿದ್ದ ತಕಾರರು ಅರ್ಜಿಯನ್ನು ಹೈಕೋರ್ಟ್ ನ್ಯಾ. ಅರವಿಂದ್ ಕುಮಾರ್ ಗುರುವಾರ ವಜಾಗೊಳಿಸಿ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿದ್ದರು. ಅರ್ಜಿ ವಜಾಗೊಂಡ ಬೆನ್ನಲ್ಲೇ ಗುರುವಾರ ರಾತ್ರಿ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿ ಶುಕ್ರವಾರ ಮಧ್ಯಾಹ್ನ 1 ಗಂಟೆಯ ವೇಳೆಗೆ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ಜಾರಿ ಮಾಡಿದ್ದರು.