Tag: Karnataka High Court

  • ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು – ಮೈಸೂರು, ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು

    ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು – ಮೈಸೂರು, ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು

    ಬೆಂಗಳೂರು: ಕೆ.ಆರ್‌. ನಗರ ಮಹಿಳೆ ಅಪಹರಣ ಪ್ರಕರಣದ ಆರೋಪ ಎದುರಿಸುತ್ತಿದ್ದ ಭವಾನಿ ರೇವಣ್ಣಗೆ (Bhavani Revanna) ಕೊನೆಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಪೀಠವು, ಭವಾನಿ ಅವರು ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿದೆ. ಇದನ್ನೂ ಓದಿ: ಇಂದು ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿ ಅಂತ್ಯ – ಕೋರ್ಟ್‌ ಮುಂದೆ ಹಾಜರು

    85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

    ಅಕ್ಕ ಬಟ್ಟೆ, ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ಪೀಠವು ಇದೇ ಸಂದರ್ಭದಲ್ಲಿ ಉಲ್ಲೇಖಿಸಿತು. ಇದನ್ನೂ ಓದಿ: ದರ್ಶನ್‌ ಮನೆ ತೂಗುದೀಪ ನಿವಾಸಕ್ಕೂ ಸಂಚಕಾರ

  • ಎಸ್‌ಪಿಪಿ ವಾದದಲ್ಲಿ ಸ್ಪಷ್ಟತೆಯಿರಲಿಲ್ಲ, ಎಲ್ಲ ಆರೋಪ ದರ್ಶನ್‌ ಮೇಲೆ ಹೊರಿಸಲು ಸಾಧ್ಯವಿಲ್ಲ: ದರ್ಶನ್‌ ಪರ ವಕೀಲ

    ಎಸ್‌ಪಿಪಿ ವಾದದಲ್ಲಿ ಸ್ಪಷ್ಟತೆಯಿರಲಿಲ್ಲ, ಎಲ್ಲ ಆರೋಪ ದರ್ಶನ್‌ ಮೇಲೆ ಹೊರಿಸಲು ಸಾಧ್ಯವಿಲ್ಲ: ದರ್ಶನ್‌ ಪರ ವಕೀಲ

    ಬೆಂಗಳೂರು: ಸರ್ಕಾರದ ವಿಶೇಷ ಅಭಿಯೋಜಕರ (SPP) ರಿಮ್ಯಾಂಡ್‌ ಅರ್ಜಿಯಲ್ಲಿ ಸ್ಪಷ್ಟತೆಯಿರಲಿಲ್ಲ. ಅಲ್ಲದೇ ಅಭಿಯೋಜಕರು ಮಂಡಿಸಿದ ವಾದದಲ್ಲಿ ಯಾವುದೂ ಎ2 ಆರೋಪಿಗೆ ಸಂಬಂಧಿಸಿದ್ದಲ್ಲ. ಹಾಗಾಗಿ ಎಲ್ಲ ಆರೋಪಗಳನ್ನು ದರ್ಶನ್‌ (Darshan) ಮೇಲೆ ಹೊರಿಸಲು ಸಾಧ್ಯವಿಲ್ಲ ಎಂದು ದರ್ಶನ್‌ ಪರ ವಕೀಲ ಅನಿಲ್‌ ಬಾಬು ತಿಳಿಸಿದರು.

    ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಎ2 ಆರೋಪಿ ದರ್ಶನ್‌ (Accused Darshan) ಪರ ವಕೀಲರು ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದರು. ಸರ್ಕಾರದ ವಿಶೇಷ ಅಭಿಯೋಜಕರ ರಿಮ್ಯಾಂಡ್‌ ಅರ್ಜಿಯಲ್ಲಿ ಸ್ಪಷ್ಟತೆಯಿರಲಿಲ್ಲ. ಅಲ್ಲದೇ ಅಭಿಯೋಜಕರು ಮಂಡಿಸಿದ ವಾದದಲ್ಲಿ ಯಾವುದೂ ಎ2 ಆರೋಪಿಗೆ ಸಂಬಂಧಿಸಿದ್ದಲ್ಲ. ಆದ ಕಾರಣ ಎಲ್ಲ ಆರೋಪಗಳನ್ನು ದರ್ಶನ್‌ ಅವರ ಮೇಲೆ ಹೊರಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ತಲಕಾವೇರಿ, ಭಾಗಮಂಡಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಂಸದ ಯದುವೀರ್

    ಆರೋಪಿಗಳ ಮೊಬೈಲ್‌ ಡೇಟಾಗಳನ್ನ ರಿಟ್ರೀವ್‌ (Mobile Data Retrieve) ಮಾಡಬೇಕು. ಮೃತದೇಹ ಪತ್ತೆಯಾದ ಸ್ಥಳದಲ್ಲಿದ್ದ ಆರೋಪಿಗಳ ಬಟ್ಟೆ, ಇತರ ವಸ್ತುಗಳನ್ನು ವಶಪಡಿಸಿಕೊಳ್ಳಬೇಕು. ಜೊತೆಗೆ ರೇಣುಕಾಸ್ವಾಮಿ ಹತ್ಯೆಗೆ ಎಲೆಕ್ಟ್ರಿಕ್‌ ಶಾಕಿಂಗ್‌ ಮಿಷಿನ್‌ ಬಳಸಿದ್ದಾರೆ. ಅದನ್ನು ವಶಪಡಿಸಿಕೊಳ್ಳಬೇಕು. ಜೊತೆಗೆ ಆರೋಪಿಗಳ ವಾಟ್ಸಪ್‌ ಚಾಟ್‌ ಡಿಟೇಲ್ಸ್‌ ರಿಟ್ರೀವ್‌ ಮಾಡಬೇಕು. ಅದಕ್ಕಾಗಿ ಆರೋಪಿಗಳು ಪಾಸ್‌ವರ್ಡ್‌ ನೀಡಬೇಕು ಎಂಬುದು ಅಭಿಯೋಜಕರ ಮುಖ್ಯವಾದವಾಗಿತ್ತು. ಅದಕ್ಕಾಗಿ 9 ದಿನಗಳ ಕಾಲ ವಿಚಾರಣೆಗೆ ಅವಕಾಶ ಮಾಡಿಕೊಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು ಎಂದು ವಿವರಿಸಿದರು. ಇದನ್ನೂ ಓದಿ: ನಟ ದರ್ಶನ್‌, ಪವಿತ್ರಾ ಗೌಡ ಸೇರಿ 12 ಆರೋಪಿಗಳು ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ

    ಅಲ್ಲದೇ ವಿಶೇಷ ಅಭಿಯೋಜಕರ ರಿಮ್ಯಾಂಡ್‌ ಅರ್ಜಿಯಲ್ಲಿ ಸ್ಪಷ್ಟತೆ ಇರಲಿಲ್ಲ. ಯಾವ ಆರೋಪಿಗಳಿಂದ ಏನು ವಸ್ತು? ವಾಟ್ಸಪ್‌ ಚಾಟ್‌? ಬಟ್ಟೆ ವಶಪಡಿಸಿಕೊಳ್ಳಬೇಕು? ಎಲೆಕ್ಟ್ರಿಕ್‌ ಮಿಷನ್‌ ಯಾರಿಂದ ವಶಕ್ಕೆ ಪಡೆಯಬೇಕು ಎನ್ನುವ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಆದ್ದರಿಂದ ಅಭಿಯೋಜಕರ ವಾದಕ್ಕೆ ನಮ್ಮ ತಕರಾರು ಇತ್ತು. ಯಾವುದೇ ಆರೋಪಿಗಳಿಂದ ಬಲವಂತವಾಗಿ ಮೊಬೈಲ್‌ ಪಾಸ್‌ವರ್ಡ್‌ಗಳನ್ನು ಪಡೆದು ಡೇಟಾ ರಿಟ್ರೀವ್‌ ಮಾಡೋದಕ್ಕೆ ಅವಕಾಶ ಇಲ್ಲ. ಅದಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕೋರ್ಟ್‌ ನೀಡಿದ್ದ ಆದೇಶಗಳನ್ನು ಉಲ್ಲೇಖಿಸಿ ತಕರಾರು ಮಂಡಿಸಿದೆವು. ನಮ್ಮ ವಾದವನ್ನು ನ್ಯಾಯಾಲಯ ಮಾನ್ಯಮಾಡಿತು. ಹಾಗಾಗಿ 9 ದಿನಗಳ ಬದಲಿಗೆ 5 ದಿನ ಮಾತ್ರ ವಿಚಾರಣೆಗೆ ಅವಕಾಶ ಮಾಡಿಕೊಟ್ಟಿತು ಎಂದು ತಿಳಿಸಿದರು.

    ಇನ್ನೂ ಎ6 ಆರೋಪಿ ಜಗ್ಗ, ಎ7 ಆರೋಪಿ ಅನುಕುಮಾರ್‌ ಪರ ವಕೀಲ ಹೆಚ್‌.ಬಿ ಶಿವರಾಜು ಮಾತನಾಡಿ, ಆರೋಪಿಯ ತಂದೆ ಅಂತ್ಯಕ್ರಿಯೆಗೆ ಕೋರ್ಟ್‌ ಅನುಮತಿ ನೀಡಿದೆ. ಈ ಪ್ರಕರಣದಲ್ಲಿ ಆರೋಪಿಗಳ ಪಾತ್ರ ಏನೂ ಇಲ್ಲ ಅನ್ನೋದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೇ ಕಸ್ಟಡಿಯಲ್ಲಿರುವಾಗ ಅವರ ಭೇಟಿಗೆ ಕೋರ್ಟ್‌ ಅವಕಾಶ ಮಾಡಿಕೊಟ್ಟಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಬಿಜೆಪಿಗೆ ಮತ ಹಾಕಿದ್ದಕ್ಕೆ‌ ಕಾಂಗ್ರೆಸ್‌ ಸರ್ಕಾರ ಸೇಡು ತೀರಿಸಿಕೊಳ್ತಿದೆ – ಅಶೋಕ್‌

  • ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋದ ಭವಾನಿ ರೇವಣ್ಣ

    ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋದ ಭವಾನಿ ರೇವಣ್ಣ

    ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ (Bhavani Revanna) ಅವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

    ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ ಆರೋಪವನ್ನು ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಹೊತ್ತಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ. ಆದರೆ ಭವಾನಿ ಅವರು ತಲೆಮರೆಸಿಕೊಂಡಿದ್ದಾರೆ. ಅವರಿಗೆ ಎಸ್‌ಐಟಿ ತಂಡ ಹುಡುಕಾಟ ನಡೆಸುತ್ತಿದೆ. ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ; ಭವಾನಿ ರೇವಣ್ಣಗೆ ಬಂಧನ ಭೀತಿ

    ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಪರ ವಕೀಲರು ಜನಪ್ರತಿನಿಧಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಶುಕ್ರವಾರ ಅರ್ಜಿ ವಜಾಗೊಂಡಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪ್ರಜ್ವಲ್‌ ತಾಯಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

  • ಉಗ್ರರನ್ನು ಬಂಧಿಸಿದ್ರೂ ಠಾಣೆಗೆ ನುಗ್ತೀರಾ?- ಹರೀಶ್ ಪೂಂಜಾಗೆ ಚಾಟಿ ಬೀಸಿದ ಹೈಕೋರ್ಟ್

    ಉಗ್ರರನ್ನು ಬಂಧಿಸಿದ್ರೂ ಠಾಣೆಗೆ ನುಗ್ತೀರಾ?- ಹರೀಶ್ ಪೂಂಜಾಗೆ ಚಾಟಿ ಬೀಸಿದ ಹೈಕೋರ್ಟ್

    ಬೆಂಗಳೂರು: ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಪೊಲೀಸ್ ಠಾಣೆಗೆ ನುಗ್ತೀರಾ ಎಂದು ಬೆಳ್ತಂಗಡಿ (Belthangady) ಶಾಸಕ ಹರೀಶ್ ಪೂಂಜಾ (Harish Poonja) ಅವರನ್ನು ಹೈಕೋರ್ಟ್ (Karnataka High Court) ತೀವ್ರ ತರಾಟೆಗೆ ತೆಗೆದುಕೊಂಡಿದೆ.

    ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ದಾಖಲಾದ ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದೆ. ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ಹೋಗಿ ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ. ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕುಳಿತರೆ ಹೇಗೆ? ಆಗ ಏನು ಮಾಡುವುದು ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಖಾರವಾಗಿ ಪ್ರಶ್ನಿಸಿದೆ.

    ಶಾಸಕರು ಇರೋದು ಶಾಸನ ರೂಪಿಸಲು. ಅದರಂತೆ ಶಾಸನ ರಚನೆ ಮಾಡುವುದಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಅದುಬಿಟ್ಟು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ ಎಂದು ಪೀಠ ಹೇಳಿದೆ. ನಂತರ ಅರ್ಜಿಯಲ್ಲಿ ಪ್ರತಿವಾದಿಯಾದ ಬೆಳ್ತಗಂಡಿ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

    ಏನಿದು ಪ್ರಕರಣ?: ಪರವಾನಗಿ ಪಡೆಯದೇ ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಕ್ರಮ ಆಕ್ಷೇಪಿಸಿ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಹಾಗೂ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ರದ್ದುಗೊಳಿಸುವಂತೆ ಶಾಸಕ ಹೈಕೋರ್ಟ್ ಮೆಟ್ಟಿಲೇರಿದ್ದರು.

  • 5,8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ – ಎಕ್ಸಾಂ ಮುಂದೂಡಿದ ಶಿಕ್ಷಣ ಇಲಾಖೆ

    5,8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ – ಎಕ್ಸಾಂ ಮುಂದೂಡಿದ ಶಿಕ್ಷಣ ಇಲಾಖೆ

    ನವದೆಹಲಿ: 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ (Board Exam) ಸುಪ್ರೀಂ ಕೋರ್ಟ್ (Supreme Court) ತಡೆಯಾಜ್ಞೆ ನೀಡಿದ್ದು ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.

    5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ (Karnataka High Court) ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬೋರ್ಡ್ ಪರೀಕ್ಷೆ ನಡೆಸದಂತೆ ತಡೆ ನೀಡಿದೆ.

    ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ 5,8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದೂಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.

    ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ಮಾರ್ಚ್ 6 ರಂದು ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು.

    ರಾಜ್ಯಾದ್ಯಂತ 45,000 ಶಾಲೆಗಳ 28 ಲಕ್ಷ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುತ್ತಿದ್ದು, ಇದೀಗ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. 11ನೇ ತರಗತಿ ಪರೀಕ್ಷೆಗಳು ಈಗಾಗಲೇ ಫೆಬ್ರವರಿ 28 ರಂದೇ ಮುಕ್ತಾಯಗೊಂಡಿವೆ. 5,8 ಮತ್ತು 9ನೇ ತರಗತಿಗಳಿಗೆ ಮಾ.11 ರಿಂದ ಪರೀಕ್ಷೆಗಳು ಆರಂಭವಾಗಿತ್ತು.

  • ಮಾರ್ಚ್‌ ತಿಂಗಳಲ್ಲಿ ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಒಡವೆ ಹಸ್ತಾಂತರ: ಕೋರ್ಟ್‌ನಿಂದ ದಿನಾಂಕ ನಿಗದಿ

    ಮಾರ್ಚ್‌ ತಿಂಗಳಲ್ಲಿ ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಒಡವೆ ಹಸ್ತಾಂತರ: ಕೋರ್ಟ್‌ನಿಂದ ದಿನಾಂಕ ನಿಗದಿ

    ಬೆಂಗಳೂರು: ಜಪ್ತಿಯಾದ ಜಯಲಲಿತಾ (Jayalalitha) ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಕರ್ನಾಟಕ ಹೈಕೋರ್ಟ್‌ (Karnataka High Court) ದಿನಾಂಕ ನಿಗದಿ ಮಾಡಿದೆ.

    ತಮಿಳುನಾಡು (Tamil Nadu) ಮಾಜಿ ಸಿಎಂ ದಿ. ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ಆದೇಶ ಹೊರಡಿಸಿದೆ. ಮಾರ್ಚ್ 6 ಮತ್ತು 7 ರಂದು ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ‌ ಹಸ್ತಾಂತರಿಸಬೇಕು ಎಂದು ನ್ಯಾ. ಮೋಹನ್‌ ಸೂಚಿಸಿದ್ದಾರೆ. ಇದನ್ನೂ ಓದಿ: ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ರೈತರು – ‘ದೆಹಲಿ ಚಲೋ’ ಮುಂದುವರಿಸುವುದಾಗಿ ಘೋಷಣೆ

    ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕವಾಗಬೇಕು. ತಮಿಳುನಾಡು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಐಜಿಪಿ ವಿಜಿಲೆನ್ಸ್ ಹಾಜರಿರಬೇಕು ಎಂದು ಹೈಕೋರ್ಟ್‌ ಸೂಚಿಸಿದೆ.‌

    ಕರ್ನಾಟಕಕ್ಕೆ ಕೊಡಬೇಕಾದ‌ 5 ಕೋಟಿ ರೂ. ವ್ಯಾಜ್ಯ ಶುಲ್ಕ ಇನ್ನೂ ಪಾವತಿಯಾಗಿಲ್ಲ ಎಂದು ಕೋರ್ಟ್‌ಗೆ ಎಸ್‌ಪಿಪಿ ಕಿರಣ್ ಜವಳಿ ಮಾಹಿತಿ ನೀಡಿದರು. ಮುಂದಿನ‌ ವಿಚಾರಣೆಯನ್ನು ಹೈಕೋರ್ಟ್‌ ಮಾ.6 ಕ್ಕೆ ನಿಗದಿಪಡಿಸಿದೆ. ಇದನ್ನೂ ಓದಿ: ಕೇರಳದಲ್ಲಿ ಆನೆ ತುಳಿತಕ್ಕೆ ವ್ಯಕ್ತಿ ಬಲಿ; ಕರ್ನಾಟಕ ಸರ್ಕಾರದಿಂದ ಪರಿಹಾರ – ಈಶ್ವರ್‌ ಖಂಡ್ರೆ ಹೇಳಿದ್ದೇನು?

  • ರಾಕ್‌ಲೈನ್‌ ಮಾಲ್‌ಗೆ ಹಾಕಿರುವ ಸೀಲ್‌ ಕೂಡಲೇ ತೆಗೆಯಿರಿ: ಬಿಬಿಎಂಪಿಗೆ ಹೈಕೋರ್ಟ್‌ ಸೂಚನೆ

    ರಾಕ್‌ಲೈನ್‌ ಮಾಲ್‌ಗೆ ಹಾಕಿರುವ ಸೀಲ್‌ ಕೂಡಲೇ ತೆಗೆಯಿರಿ: ಬಿಬಿಎಂಪಿಗೆ ಹೈಕೋರ್ಟ್‌ ಸೂಚನೆ

    ಬೆಂಗಳೂರು: ರಾಕ್‌ಲೈನ್‌ ಮಾಲ್‌ಗೆ (Rockline Mall) ಬಿಬಿಎಂಪಿ ಹಾಕಿರುವ ಸೀಲ್‌ ಓಪನ್‌ ಮಾಡುವಂತೆ ಕರ್ನಾಟಕ ಹೈಕೋರ್ಟ್‌ (Karnataka High Court) ಆದೇಶ ಹೊರಡಿಸಿದೆ.

    ಮಾಲ್‌ಗೆ ಬಿಬಿಎಂಪಿ ಬೀಗ ಹಾಕಿದ್ದ ಕ್ರಮವನ್ನು ಪ್ರಶ್ನಿಸಿ ರಾಕ್‌ಲೈನ್‌ ಮಾಲ್‌ ಆಡಳಿತ ಮಂಡಳಿ ಹೈಕೋರ್ಟ್‌ಗೆ ಮನವಿ ಮಾಡಿತ್ತು. ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರ ಪೀಠವು ಈ ಆದೇಶ ಹೊರಡಿಸಿದೆ. ಇದನ್ನೂ ಓದಿ: ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ- ಖಾದರ್ ಘೋಷಣೆ

    ಕಳೆದ ಬುಧವಾರ ಬಿಬಿಎಂಪಿ ಜಾಲಹಳ್ಳಿ ಕ್ರಾಸ್ ಬಳಿ ಇರೋ ರಾಕ್‌ಲೈನ್ ಮಾಲ್ ಸೀಜ್ ಮಾಡಲಾಗಿತ್ತು. ಸೀಜ್ ಮಾಡಿದ್ದನ್ನ ಪ್ರಶ್ನಿಸಿ ರಾಕ್‌ಲೈನ್‌ ಮಾಲ್‌ ಆಡಳಿತ ಮಂಡಳಿ ಕೋರ್ಟ್ ಮೆಟ್ಟಿಲೇರಿತ್ತು. ಇಂದು (ಸೋಮವಾರ) ಹೈಕೋರ್ಟ್‌ ಸೀಲ್ ತೆರವಿಗೆ ಸೂಚನೆ ನೀಡಿದೆ.

    ತಕ್ಷಣವೇ ಸೀಲ್ ಓಪನ್ ಮಾಡಬೇಕು. ವ್ಯಾಪಾರಕ್ಕೆ ಯಾವುದೇ ತೊಂದರೆಗಳನ್ನು ಮಾಡಬಾರದು. ತೆರಿಗೆ ಹಣದ ವಿಚಾರವಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಎಂದು ಬಿಬಿಎಂಪಿಗೆ ಕೋರ್ಟ್‌ ಸೂಚಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರಿಗೆ ಸುಪ್ರೀಂನಿಂದ ತಾತ್ಕಾಲಿಕ ರಿಲೀಫ್

    ಹೈಕೋರ್ಟ್‌ ಆದೇಶ ಕುರಿತು ಮಾತನಾಡಿರುವ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಬೀಗ ಯಾಕೆ ಹಾಕಿದರು, ಏನು ಉದ್ದೇಶ ಇತ್ತು ಗೊತ್ತಿಲ್ಲ. ಟ್ಯಾಕ್ಸ್ ಕಟ್ಟಿಕೊಂಡು ಬರ್ತಾ ಇದ್ರು. ಒಬ್ಬರು ಬಂದು ಅಬ್ ನಾರ್ಮಲ್ ಆಗಿ ಬಂದು ಟ್ಯಾಕ್ಸ್ ಕಟ್ಟಿ ಅಂತಾ ಹೇಳಿದ್ರು. ಏಳು ಪ್ಲೋರ್ ಇದೇ ಅಂತಾ ಕೇಳಿದ್ರು. ಅಲ್ಲಿ ಗ್ರೌಂಡ್ ಪ್ಲೋರ್ ಅಷ್ಟೇ ಇದ್ದಿದ್ದು 40 ಥಿಯೇಟರ್ ಕಟ್ಟಡ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

    ನಾನು ಸರಿಯಾಗಿ ಇದ್ದೀನಿ, ನಾನೇನು ತಪ್ಪು ಮಾಡಿಲ್ಲ. ತಪ್ಪು ಮಾಡಿದ್ದೀನಿ ಅಂತಾ ತೋರಿಸಿ, ನಾನು ಬಹಿರಂಗವಾಗಿ ಕ್ಷಮೆ ಕೇಳ್ತೀನಿ. ಕತ್ತಲಲ್ಲಿ ಬಂದು ನೋಟಿಸ್ ಕೊಡೋದು ಏನಿದೆ? ಕತ್ತಲಲ್ಲಿ ಬಂದು ನೋಟಿಸ್ ಕೊಡೋದು ಯಾರು ಹೇಳಿ? ಇರೋದೆ 4 ಪ್ಲೋರ್. ಆದರೆ ಅವರು 7 ಪ್ಲೋರ್ ಅಂತಾ ಹೇಳಿದ್ರು. ಜಂಟಿ ಸರ್ವೆ ಮಾಡಿದ್ರು. ಆದ ಮೇಲೂ ನಾವೇ ತೆರಿಗೆ ಕಟ್ಟುತ್ತೇವೆ ಅಂದರೂ ಕಟ್ಟಿಸಿಕೊಳ್ಳಲಿಲ್ಲ. ಒಮ್ಮೆ ಬರೀ ಖಾಲಿ ಪೇಪರ್ ಕೊಟ್ಟಿದ್ರು. ಬರೀ ಎನ್‌ವಲಪ್ ಕೊಟ್ಟಿದ್ರು, ನೋಟಿಸ್ ಏನಿರಲಿಲ್ಲ. ಇವತ್ತು ಕೋರ್ಟ್ ಸೀಲ್ ಓಪನ್‌ ಮಾಡಿ ಅಂತಾ ಹೇಳಿದೆ. ವ್ಯಾಪಾರಕ್ಕೆ ಅಡ್ಡಿ ಪಡಿಸಬೇಡಿ ಅಂತಾ ಹೇಳಿದೆ ಎಂದು ಖುಷಿ ವ್ಯಕ್ತಪಡಿಸಿದರು. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ: ಸರ್ಕಾರದ ಮುಟ್ಟಾಳತನ: ಜೋಶಿ ಆಕ್ರೋಶ

  • ಡಿ.ಕೆ.ಸುರೇಶ್‌ ಗುಂಡಿಕ್ಕಿ ಕೊಲ್ಲಬೇಕು ವಿವಾದಾತ್ಮಕ ಹೇಳಿಕೆ; ಈಶ್ವರಪ್ಪ ವಿರುದ್ಧದ FIRಗೆ ತಡೆ

    ಡಿ.ಕೆ.ಸುರೇಶ್‌ ಗುಂಡಿಕ್ಕಿ ಕೊಲ್ಲಬೇಕು ವಿವಾದಾತ್ಮಕ ಹೇಳಿಕೆ; ಈಶ್ವರಪ್ಪ ವಿರುದ್ಧದ FIRಗೆ ತಡೆ

    ಬೆಂಗಳೂರು: ಸಂಸದ ಡಿ.ಕೆ.ಸುರೇಶ್‌ ಗುಂಡಿಕ್ಕಿ ಕೊಲ್ಲಬೇಕು ಎಂಬ ವಿವಾದಾತ್ಮಕ ಹೇಳಿಕೆಗೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ.

    ದಾವಣಗೆರೆ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್‌ ನೀಡಿದ್ದರು. ಪ್ರಕರಣ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ. ನ್ಯಾ. ಕೃಷ್ಣದೀಕ್ಷಿತ್‌ ಪೀಠವು ಈ ಆದೇಶ ಹೊರಡಿಸಿದೆ.

    ಆದರೂ, ಈಶ್ವರಪ್ಪ ಹೇಳಿಕೆಗೆ ಹೈಕೋರ್ಟ್‌ ಅಸಮಾಧಾನ ಹೊರಹಾಕಿದೆ. ನಮ್ಮದು ಬಹು ಭಾಷಾ, ಧರ್ಮ ಇರುವ ದೇಶ. ಎಷ್ಟೋ ಕಡೆ ಸ್ವಲ್ಪ ಹೆಚ್ಚು ಕಡಿಮೆ ಮಾತನಾಡಿದ್ರೆ ಗಲಭೆ ಆಗುವ ಸನ್ನಿವೇಶ ಇದೆ. ಹೀಗುರುವಾಗ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಕೋರ್ಟ್‌ ಸಲಹೆ ನೀಡಿದೆ.

    ನಮ್ಮ ರಾಜಕೀಯ ನಾಯಕರು ಭಾಷೆಯ ಮೇಲೆ ದೌರ್ಜನ್ಯ ಮಾಡ್ತಾ ಇದ್ದಾರೆ. ನಾಯಕರ ಮಾತುಗಳನ್ನು ಮಕ್ಕಳು ನೋಡುತ್ತಾ ಇರ್ತಾರೆ. ಇದರಿಂದ ಮಕ್ಕಳು ಏನನ್ನು ಕಲಿಯುತ್ತಾರೆ? ಸಂಸ್ಕೃತಿ ಬಿಂಬಿಸುವಂತೆ ಮಾತನಾಡಲು ಹೇಳಿ. ನಿಮ್ಮ ಕಕ್ಷಿದಾರರಿಗೆ ನೀವೆ ಸಲಹೆ ನೀಡಿ ಎಂದು ಕೋರ್ಟ್‌ ಕಿವಿಮಾತು ಹೇಳಿದೆ.

  • ಮಾಜಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪಗೆ ರಿಲೀಫ್‌ – ಲಂಚ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

    ಮಾಜಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪಗೆ ರಿಲೀಫ್‌ – ಲಂಚ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

    ಬೆಂಗಳೂರು: ಬಿಜೆಪಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರ ವಿರುದ್ಧದ ಲೋಕಾಯುಕ್ತ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ.

    ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮಾಡುವಾಗ ಸಭಾಧ್ಯಕ್ಷರ ಅನುಮತಿಯನ್ನು ಪಡೆದುಕೊಂಡಿಲ್ಲ. ಕೆಲವೊಂದು ತಾಂತ್ರಿಕ ಅಂಶಗಳನ್ನು ಪ್ರಕರಣದ ತನಿಖೆಯಲ್ಲಿ ಪಾಲನೆಯನ್ನು ಮಾಡಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಇದನ್ನೂ ಓದಿ: ಪ್ರಿಯಾಂಕಾ ಖರ್ಗೆ ಧರ್ಮ ದ್ರೋಹಿ, ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಗೌರವ ಇದೆ: ಈಶ್ವರಪ್ಪ

    ಸುದೀರ್ಘವಾದ ವಿಚಾರಣೆ ಬಳಿಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಟೆಂಡರ್‌ಗಾಗಿ ಲಂಚ ಪಡೆದ ಆರೋಪ ಹೊರಿಸಿದ್ದ ಪ್ರಕರಣವನ್ನು ರದ್ದು ಮಾಡಿ ಆದೇಶ ನೀಡಿದೆ.

    ಮಾಜಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರು ಏಪ್ರಿಲ್ 1 ರಿಂದ 15 ರವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದರು. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠವು ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ. ಇದನ್ನೂ ಓದಿ: ಸೂರಜ್ ರೇವಣ್ಣಗೆ ಬಿಗ್ ರಿಲೀಫ್ – ಎಂಎಲ್‌ಸಿ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

    ಮಾಡಾಳ್‌ ಅವರ ಪುತ್ರ ಪ್ರಶಾಂತ್‌ ಮಾಡಾಳ್‌ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಬಳಿಕ ಶಾಸಕರ ಕಚೇರಿ ಮತ್ತು ಮನೆಯಲ್ಲಿ 8 ಕೋಟಿ ರೂಪಾಯಿಗೂ ಹೆಚ್ಚು ನಗದು ಪತ್ತೆಯಾಗಿತ್ತು.

  • ಡಿ.ಕೆ.ಶಿವಕುಮಾರ್‌ಗೆ ರಿಲೀಫ್;‌ ಮೇಲ್ಮನವಿ ಹಿಂಪಡೆದ ಮನವಿ ಪರಿಗಣಿಸಿದ ಹೈಕೋರ್ಟ್

    ಡಿ.ಕೆ.ಶಿವಕುಮಾರ್‌ಗೆ ರಿಲೀಫ್;‌ ಮೇಲ್ಮನವಿ ಹಿಂಪಡೆದ ಮನವಿ ಪರಿಗಣಿಸಿದ ಹೈಕೋರ್ಟ್

    ಬೆಂಗಳೂರು: ಡಿ.ಕೆ.ಶಿವಕುಮಾರ್‌ ವಿರುದ್ಧದ ಪ್ರಕರಣವನ್ನು ಸಿಬಿಐ (CBI) ತನಿಖೆ ವಹಿಸಿ ಹೊರಡಿಸಿದ್ದ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಆ ಮೂಲಕ ಡಿ.ಕೆ.ಶಿವಕುಮಾರ್‌ಗೆ (D.K.Shivakumar) ಬಿಗ್‌ ರಿಲೀಫ್‌ ಸಿಕ್ಕಿದೆ.

    ಬುಧವಾರ ಹೈಕೋರ್ಟ್‌ನಲ್ಲಿ (Karnataka High Court) ಡಿಸಿಎಂ ಡಿ.ಕೆ.ಶಿವಕುಮಾರ್‌ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ವಿಚಾರಣೆ ನಡೆಯಿತು. ಸಿಜೆ ಪಿ.ಬಿ.ವರಾಲೆ, ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಾಯಿತು. ಇದನ್ನೂ ಓದಿ: ಮೊದಲ ಬಾರಿಗೆ ಶಾಸಕರಾದವರಿಗೆ ನಿಗಮ-ಮಂಡಳಿ ಸ್ಥಾನ ಇಲ್ಲ: ಡಿಕೆಶಿ

    ವಿಚಾರಣೆ ವೇಳೆ ಸರ್ಕಾರದ ಆದೇಶವನ್ನು ಎಜಿ ಶಶಿಕಿರಣ್‌ ಶೆಟ್ಟಿ ಅವರು ಹೈಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ಸಿಬಿಐ ಪರ ಪ್ರಸನ್ನ ಕುಮಾರ್‌ ಹಾಗೂ ಡಿ.ಕೆ.ಶಿವಕುಮಾರ್‌ ಪರವಾಗಿ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಹಾಜರಿದ್ದರು.

    ಸಿಬಿಐಗೆ ಅನುಮತಿ ನೀಡಿರುವ ಅನುಮೋದನೆ ಹಿಂಪಡೆಯಲಾಗಿದೆ ಎಂದು ಮನು ಸಿಂಘ್ವಿ ಕೋರ್ಟ್‌ ಗಮನಕ್ಕೆ ತಂದರು. ಸರ್ಕಾರದ ಆದೇಶ ಪ್ರತಿಯನ್ನು ಓದಿದ ಹೈಕೋರ್ಟ್‌, ನೀವು ಈಗ ಹೊಸ ತೀರ್ಮಾನ ತೆಗೆದುಕೊಂಡು ಬಂದಿದ್ದೀರಿ. ಇದು ಕಾನೂನುಬದ್ಧವಾಗಿದ್ಯಾ ಎಂದು ಸಿಜೆ ಪ್ರಶ್ನಿಸಿದರು. ಈ ಹಿಂದೆ ರಾಜ್ಯ ಸರ್ಕಾರದ ಅನುಮತಿ ಇರಲಿಲ್ಲ. ರಾಜ್ಯ ಸರ್ಕಾರ ಕೆಲವೊಂದು ನಿಯಮ ಉಲ್ಲಂಘನೆ ಮಾಡಿದೆ ಎಂದು ಶಶಿಕಿರಣ್‌ ಶೆಟ್ಟಿ ಜೊತೆ ಬಂದಿದ್ದ ಕಪಿಲ್‌ ಸಿಬಲ್‌ ವಾದಿಸಿದರು.

    ಒಂದು ಪಕ್ಷ ಅಧಿಕಾರ ಹೊಂದಿರಬಹುದು. ‘ಬಿ’ ಪಕ್ಷ ಅಧಿಕಾರಕ್ಕೆ ಬರಬಹುದು. ಈ ರೀತಿ ಪದೇ ಪದೆ ಆದರೆ, ಇದು ಆಡಳಿತಕ್ಕೆ ಅಡ್ಡಿ ಉಂಟು ಮಾಡುವುದಿಲ್ಲವೇ? ಪ್ರತಿ ಪಕ್ಷ ಬದಲಾದಾಗ ಈ ರೀತಿ ಆದೇಶ ಮಾಡಿದರೆ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲವೇ ಎಂದು ಹೈಕೋರ್ಟ್‌ ಪ್ರಶ್ನಿಸಿತು. ಇದನ್ನೂ ಓದಿ: ಡಿಕೆಶಿ ಕೇಸ್ ವಾಪಸ್; ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

    ಸರ್ಕಾರ ಕಾನೂನುಬದ್ಧವಾಗಿ ಈ ಪ್ರಕರಣ ವಾಪಸ್‌ ಪಡೆದುಕೊಂಡಿದೆ ಎಂದು ಕಪಿಲ್‌ ಸಿಬಲ್‌ ವಾದ ಮಂಡಿಸಿದರು. ಆದರೆ ಸಿಬಿಐ ಪರ ವಕೀಲರು ಸರ್ಕಾರದ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸರ್ಕಾರದ ಆದೇಶ ಈ ಹಂತದಲ್ಲಿ ಅಸಮಂಜಸ ಎಂದು ಸಿಬಿಐ ಪರ ವಕೀಲರು ಹೇಳಿದರು.

    ಈಗಾಗಲೇ ಸರ್ಕಾರ ಪ್ರಕರಣ ವಾಪಸ್‌ ಪಡೆದಿದೆ. ಈ ಪ್ರಕರಣದಲ್ಲಿ ಹೈಕೋರ್ಟ್‌ ಅರ್ಜಿ ವಿಚಾರಣೆ ಅನೂರ್ಜಿತ. ಈ ಸಂದರ್ಭದಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬೇಕಿಲ್ಲ ಎಂದು ಡಿಕೆಶಿ ಪರ ವಕೀಲರು ವಾದಿಸಿದರು. ಈ ವೇಳೆ ಹೈಕೋರ್ಟ್‌, ಸಂಪುಟದಲ್ಲಿ ಅಂತಿಮ ತೀರ್ಮಾನ ಆಗಿದೆಯಾ? ಸಂಪುಟದ ತೀರ್ಮಾನ ಸಿಬಿಐ ಪ್ರಶ್ನೆ ಮಾಡುತ್ತಿದೆಯಾ ಎಂದು ಕೇಳಿತು. ಆಗ ಡಿಕೆ ಪರ ವಕೀಲ, ಇಲ್ಲ ಸಿಬಿಐ ಇದುವರೆಗೂ ಸರ್ಕಾರದ ಆದೇಶ ಪ್ರಶ್ನಿಸಿಲ್ಲ. ಸಿಬಿಐ ಪೂರ್ವಾನುಮತಿ ಹಿಂಪಡೆದಿದೆ. ನಾವು ವಾದ ಮಾಡುವ ಅವಶ್ಯಕತೆ ಇಲ್ಲ. ನಾವು ಮೇಲ್ಮನವಿ ಹಿಂಪಡೆಯುತ್ತೇವೆ ಎಂದು ತಿಳಿಸಿದರು.

    ಈಗಾಗಲೇ ತನಿಖೆ ಪೂರ್ಣ ಆಗುವ ಹಂತದಲ್ಲಿ ಇದೆ. ಸಿಬಿಐ ಎಫ್‌ಐಆರ್‌ ದಾಖಲಿಸಿದ ಮೇಲೆ ಅನುಮೋದನೆ ನೀಡಿರುವುದನ್ನು ಹಿಂಪಡೆಯಬಹುದೇ ಎಂಬ ಪ್ರಶ್ನೆಯೂ ಇದೆ. ಈ ಬಗ್ಗೆ ಸಾಕಷ್ಟು ಪ್ರಶ್ನೆಗಳು ಇದ್ದಾವೆ ಎಂದು ಸಿಬಿಐ ಪರ ವಕೀಲರು ಹೇಳಿದರು. ಇದಕ್ಕೆ ಹೈಕೋರ್ಟ್‌, ದಿನಪತ್ರಿಕೆ ಸುದ್ದಿಯ ಮೇಲೆ ವಿಚಾರಣೆ ಮಾಡಲು ಸಾಧ್ಯವಿಲ್ಲ. ಕಾನೂನು ಏನು ಹೇಳುತ್ತೆ ಎಂಬುದರ ಮೇಲೆ ವಿಚಾರಣೆ ನಡೆಯಲಿದೆ ಎಂದು ತಿಳಿಸಿತು. ಇದನ್ನೂ ಓದಿ: ಡಿಕೆಶಿಯಂತೆ ನಾಗೇಂದ್ರ ಮೇಲಿನ ಕೇಸ್‌ ಹಿಂಪಡೆಯಲಿ – ಸರ್ಕಾರಕ್ಕೆ ರೆಡ್ಡಿ ಆಗ್ರಹ

    ಈಗಾಗಲೇ ಬೇರೆ ಪ್ರಕರಣದಲ್ಲಿ ಅನುಮತಿ ವಾಪಸ್‌ ಪಡೆದು ಕೋರ್ಟ್‌ ಮಧ್ಯ ಪ್ರವೇಶ ಮಾಡಿದೆ. ಹಳೆಯ ಆದೇಶದ ಪ್ರಕಾರ ಸಿಬಿಐ ಕೊಟ್ಟ ಅನುಮತಿ ವಾಪಸ್‌ ಪಡೆಯಲು ಸಾಧ್ಯವಿಲ್ಲ ಎಂದು ವಾದಿಸಿದ ಸಿಬಿಐ ಪರ ವಕೀಲರು, 1994 ರಲ್ಲಿ ಸುಪ್ರೀಂ ನೀಡಿದ್ದ ಕಾಜಿ ಡೋರ್ಜಿ ಪ್ರಕರಣ ತೀರ್ಪು ಓದಿದರು. ಈ ಪ್ರಕರಣದಲ್ಲಿ ಒಮ್ಮೆ ನೀಡಿದ ಅನುಮತಿ ವಾಪಸ್‌ ಪಡೆಯಲು ಸಾಧ್ಯವಿಲ್ಲ ಎಂದು ವಾದಿಸಿದರು.

    ಎಲ್ಲ ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್‌ ಕೆಲ ನಿಮಿಷಗಳ ಕಾಲ ವಿಚಾರಣೆಯನ್ನು ಮುಂದೂಡಿತು. ಮತ್ತೆ ವಿಚಾರಣೆ ಆರಂಭಿಸಿ ಹೈಕೋರ್ಟ್‌ ತೀರ್ಪು ಪ್ರಕಟಿಸಿತು. ಮೇಲ್ಮನವಿ ಹಿಂಪಡೆದ ಮನವಿಯನ್ನು ಹೈಕೋರ್ಟ್‌ ಪರಿಗಣಿಸಿತು. ಅಲ್ಲದೇ, ರಾಜ್ಯ ಸರ್ಕಾರದ ಆದೇಶವನ್ನು ಈವರೆಗೂ ಯಾರೂ ಪ್ರಶ್ನಿಸಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ತೀರ್ಪಿನಲ್ಲಿ ತಿಳಿಸಿತು. ಈ ವೇಳೆ, ಕಾಜಿ ಡೋರ್ಜಿ ಪ್ರಕರಣ ಉಲ್ಲೇಖಿಸಿ ಸಿಬಿಐ ಪರ ವಕೀಲರು ವಾದಿಸಿದ್ದನ್ನು ಹೈಕೋರ್ಟ್‌ ಪರಿಗಣಿಸಲಿಲ್ಲ. ಹೈಕೋರ್ಟ್‌ ತೀರ್ಪಿನಿಂದ ಡಿ.ಕೆ.ಶಿವಕುಮಾರ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ.

    ಹೈಕೋರ್ಟ್‌ನಲ್ಲಿ ಬಾಕಿ ಇದ್ದ ರಿಟ್‌ ಅರ್ಜಿ ಮತ್ತು ಈ ಸಂಬಂಧದ ಮೇಲ್ಮನವಿಯನ್ನು ಡಿಸಿಎಂ ಡಿಕೆಶಿ ಹಿಂಪಡೆದಿದ್ದಾರೆ. ವಿಚಾರಣೆ ವೇಳೆ ಸರ್ಕಾರದ ಪರ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಕಪಿಲ್‌ ಸಿಬಲ್‌ ಹಾಜರಾಗಿದ್ದರು. ಸರ್ಕಾರದ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಮೆಮೊ ಮೂಲಕ ಸಲ್ಲಿಸಿದರು. ಅಂತೆಯೇ, ರಿಟ್‌ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯುವುದಾಗಿಯೂ ಶಿವಕುಮಾರ್‌ ಪರ ವಕೀಲರು ನ್ಯಾಯಪೀಠಕ್ಕೆ ಲಿಖಿತ ಮೆಮೊ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮೆಮೊ ಪರಿಗಣಿಸಿ ಅರ್ಜಿ ಹಿಂಪಡೆಯುವ ನಿರ್ಧಾರಕ್ಕೆ ಅಸ್ತು ಎಂದು ಆದೇಶಿಸಿತು.