Tag: Karnataka HighCourt

  • ಕೇವಲ ಧರ್ಮಾಧಾರಿತ ಅಲ್ಲ, ಇದು ಲಿಂಗಾಧಾರಿತ ತಾರತಮ್ಯ – ಹಿಜಬ್‌ಗೆ ಅನುಮತಿ ನೀಡಿ

    ಕೇವಲ ಧರ್ಮಾಧಾರಿತ ಅಲ್ಲ, ಇದು ಲಿಂಗಾಧಾರಿತ ತಾರತಮ್ಯ – ಹಿಜಬ್‌ಗೆ ಅನುಮತಿ ನೀಡಿ

    ನವದೆಹಲಿ: ಶಾಲಾ – ಕಾಲೇಜು (School College) ತರಗತಿಗಳಲ್ಲಿ ಹಿಜಬ್ ನಿರ್ಬಂಧಿಸಿರುವುದು ಲಿಂಗ ಮತ್ತು ಧರ್ಮದ ತಾರತಮ್ಯವಾಗಿದೆ, ಇಂದಿನ ಶಿಕ್ಷಣದಲ್ಲಿ ಧಾರ್ಮಿಕ ಸಹಿಷ್ಣುತೆ ಬಗ್ಗೆ ತಿಳಿಸಿಕೊಡಬೇಕಿದೆ. ಆದರೆ ರಾಜ್ಯ ಸರ್ಕಾರದ (Karnataka Government) ಆದೇಶ ಅದಕ್ಕೆ ವಿರುದ್ಧವಾಗಿದೆ ಎಂದು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ವಾದಿಸಿದ್ದಾರೆ.

    ಶಾಲೆ ಮತ್ತು ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್(High Court) ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್(Supreme Court) ವಿಚಾರಣೆಗೆ ನಡೆಸುತ್ತಿದೆ. 6ನೇ ದಿನದ ವಿಚಾರಣೆ ವೇಳೆ ಮೀನಾಕ್ಷಿ ಅರೋರಾ ಮಕ್ಕಳ ಹಕ್ಕುಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಭಾರತವು CEDAW ನಿರ್ಣಯಗಳನ್ನು ಒಪ್ಪಿಕೊಂಡಿದೆ. CEDAW ಮಕ್ಕಳು ತಮ್ಮ ಧರ್ಮವನ್ನು ಆಚರಿಸಲು ಮತ್ತು ಅವರ ನಡುವಿನ ತಾರತಮ್ಯದ ವಿರುದ್ಧ ರಕ್ಷಿಸುತ್ತದೆ. ನಾರ್ವೆ ಕ್ರಿಶ್ಚಿಯನ್ ದೇಶವಾಗಿರುವುದರಿಂದ ತಮ್ಮ ಮಕ್ಕಳಿಗೆ ಕ್ರಿಶ್ಚಿಯನ್ ಮೌಲ್ಯಗಳನ್ನು ಮಾತ್ರ ಕಲಿಸಲು ಆಯ್ಕೆ ಮಾಡಿಕೊಂಡಿದೆ. ಆದರೆ CEDAW ಇದನ್ನು ಒಪ್ಪಿಕೊಂಡಿಲ್ಲ, ನೀವು ಮಕ್ಕಳಿಗೆ ಅವರ ಸ್ವಂತ ನಂಬಿಕೆಯನ್ನು ಅನುಸರಿಸಲು ಅನುಮತಿಸಬೇಕು ಎಂದು ಹೇಳಿದೆ‌. ಶಿಕ್ಷಣದಲ್ಲಿ ಸಂಪೂರ್ಣ ಧಾರ್ಮಿಕ ಸಹಿಷ್ಣುತೆ ತರುವುದು ಇದರ ಉದ್ದೇಶವಾಗಿದೆ. ಆದರೆ ನಾವು ನಮ್ಮ ಮಕ್ಕಳಿಗೆ ಧಾರ್ಮಿಕ ಸಹಿಷ್ಣುತೆ ಕಲಿಸುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ಸಾರ್ವಜನಿಕ ಸುವ್ಯವಸ್ಥೆ ಹಾಗೂ ನೈತಿಕತೆಗೆ ವಿರುದ್ಧವಲ್ಲದ ಧಾರ್ಮಿಕ ಅಭಿವ್ಯಕ್ತಿಯ ಒಂದು ಅಂಶವನ್ನು ನಾವು ನಿಷೇಧಿಸಲು ಪ್ರಾರಂಭಿಸಿದರೆ ಹೇಗೆ? ಹಿಜಬ್ ನಿಷೇಧಿಸುವುದು ಸಂಪ್ರದಾಯವನ್ನು ಉಲ್ಲಂಘಿಸುತ್ತದೆ ಎಂದು ಯುಎನ್ ಸಮಿತಿಯು ಕಂಡುಕೊಂಡಿದೆ. ಡ್ರೆಸ್ ಕೋಡ್ ವಿದ್ಯಾರ್ಥಿಗಳು (Student Dress Code) ಶಾಲೆಗೆ ಬರುವುದನ್ನು ನಿಲ್ಲಿಸುವ ಬದಲು ಅವರ ಭಾಗವಹಿಸುವಿಕೆಯನ್ನು ಉತ್ತೇಜಿಸಬೇಕು ಎಂದು ಯುಎನ್ ಹೇಳುತ್ತದೆ. ಹಿಜಬ್ ಯಾವ ರೀತಿಯಲ್ಲಿ ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆಗೆ ಧಕ್ಕೆ ತರುತ್ತದೆ? ಯುಎನ್ (UN) ನಿರ್ಣಯಕ್ಕೆ ವ್ಯತಿರಿಕ್ತವಾಗಿ ಮಕ್ಕಳನ್ನು ಶಾಲೆಯಿಂದ ಹೊರಗಿಡಲಾಗುತ್ತಿದೆ. ಕೇಂದ್ರ ಸರ್ಕಾರ ಶಾಸನದ ವಿರುದ್ಧ ಸರ್ಕಾರಿ ಆದೇಶ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ, ಕೇಂದ್ರೀಯ ವಿದ್ಯಾಲಯಗಳಲ್ಲಿ (Central Universities) ಹಿಜಬ್ ಅನ್ನು ಅನುಮತಿಸುವಾಗ ರಾಜ್ಯ ಸರ್ಕಾರ ಇದನ್ನು ಹೇಗೆ ನಿರ್ಬಂಧಿಸುತ್ತದೆ? ಎಂದು ಪ್ರಶ್ನಿದ್ದಾರೆ.

    HIJAB

    ಇಸ್ಲಾಂ ಪ್ರಪಂಚದಾದ್ಯಂತ ಆಚರಿಸಲಾಗುವ 2ನೇ ಅತಿದೊಡ್ಡ ಧರ್ಮವಾಗಿದೆ. ವಿಶ್ವದಲ್ಲಿ ಇಸ್ಲಾಂ ಧರ್ಮವನ್ನು ಅಭ್ಯಾಸ ಮಾಡುವ ಹೆಚ್ಚಿನ ಜನರು ಹಿಜಬ್ ಧರಿಸುವುದನ್ನು ಸಾಂಸ್ಕೃತಿಕ ಅಭ್ಯಾಸವೆಂದು ಗುರುತಿಸುತ್ತಾರೆ. ಪ್ರಪಂಚದಾದ್ಯಂತದ ನ್ಯಾಯಾಲಯಗಳು ಮತ್ತು ಜನಸಂಖ್ಯೆಯ ದೊಡ್ಡ ಭಾಗವು ಹಿಜಬ್ (Hijab) ಅನ್ನು ಅತ್ಯಗತ್ಯವೆಂದು ಗುರುತಿಸುತ್ತದೆ. ಇದನ್ನು ಪರಾಮರ್ಶಿಸಲು ನಾವು ಯಾರು? ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವಂತೆ, ನಾವು ಬೇರೆಡೆ ಅಲ್ಪಸಂಖ್ಯಾತರಾಗಿದ್ದೇವೆ‌. ನಾವು ನಮ್ಮ ಸಂಸ್ಕೃತಿಯನ್ನು ಪಾಲಿಸಲು ಪ್ರಯತ್ನಿಸುತ್ತೇವೆ. ಅದಕ್ಕಾಗಿ ಕಾನೂನು ಹೋರಾಟ ಮಾಡಿದ ಹಲವು ಉದಾಹರಣೆಗಳೂ ಇವೆ. ಮೂಗುತಿಗಾಗಿ, ಸಿಖ್ಖರು ಖಡಗಕ್ಕಾಗಿ ಕಾನೂನು ಹೋರಾಟ ಮಾಡಿದ್ದಾರೆ. ದಯವಿಟ್ಟು ಇದೆಲ್ಲವನ್ನು ಸೂಕ್ಷ್ಮವಾಗಿ ಗಮನಿಸುವಂತೆ ಮನವಿ ಮಾಡಿದ್ದಾರೆ.

    ಬಳಿಕ ಸಂವಿಧಾನ 15(1) ಉಲ್ಲೇಖಿಸಿ ವಾದ ಮಂಡಿಸಿದ ವಕೀಲೆ ಜಯನಾ ಕೊಠಾರಿ, ಸಂವಿಧಾನದ 15ನೇ ವಿಧಿಯ ಪ್ರಕಾರ ಧರ್ಮ, ಜನಾಂಗ, ಜಾತಿ, ಲಿಂಗ ಅಥವಾ ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡುವಂತಿಲ್ಲ, ಇಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ವಿಚಾರದಲ್ಲಿ ತಾರತಮ್ಯ ನಡೆಯುತ್ತಿದೆ. ಹಿಜಬ್ ಧಾರ್ಮಿಕ ಅಗತ್ಯ, ಅನಗತ್ಯವೂ ಪ್ರತ್ಯೇಕ ವಿಚಾರ, ಆದರೆ ಹಿಜಬ್ ಧರಿಸುವ ಕಾರಣ ವಿದ್ಯಾರ್ಥಿನಿಯರಲ್ಲಿ ತಾರತಮ್ಯ ಮಾಡುತ್ತಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ‌. ಇದು ಕೇವಲ ಧರ್ಮಾಧಾರಿತ ತಾರತಮ್ಯವಲ್ಲ, ಇದು ಲಿಂಗಾಧಾರಿತ ತಾರತಮ್ಯವೂ ಆಗಿದೆ. ಹಾಗಾಗಿ ಲಿಂಗ ಮತ್ತು ಧರ್ಮವನ್ನು ಅನ್ನು ನಾವು ಈ ಸಂದರ್ಭದಲ್ಲಿ ವಿಶ್ಲೇಷಿಸಬೇಕಾಗಿದೆ ಎಂದು ವಾದ ಮಂಡಿಸಿದ್ದಾರೆ.

    ಹಿಜಬ್ ಗುರುತಿನ ವಿಷಯವಾಗಿದೆ, ಸಾರ್ವಜನಿಕ ದೃಷ್ಟಿಯಿಂದ ತನ್ನ ದೇಹವನ್ನು ಮುಚ್ಚಿಟ್ಟುಕೊಳ್ಳುವುದು ಅವಳ ವೈಯಕ್ತಿಕ ಆಯ್ಕೆಯಾಗಿದೆ ಎಂದು ವಕೀಲ ಶೋಬ್ ಆಲಂ ವಾದಿಸಿದರು. ನಾವೀಲ್ಲಿ ಗೌಪ್ಯತೆ ಹಾಗೂ ಖಾಸಗಿತನಕ್ಕೂ ಆದ್ಯತೆ ನೀಡಬೇಕಾಗುತ್ತದೆ.‌ ಹಿಜಬ್ ಧಾರ್ಮಿಕ ಅಗತ್ಯವೋ ಅಲ್ಲವೋ ಬಳಿಕ‌ ಚಿಂತಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ. ಮತ್ತೊರ್ವ ವಕೀಲ ಧಾರ್ ವಾದ ಮಂಡಿಸಿ, ಇಸ್ಲಾಂ ಪ್ರಕಾರ ಹಿಜಬ್ ಕಡ್ಡಾಯವಾಗಿದೆ ಎಂದು ಪೂರಕ ಅಂಶಗಳನ್ನು ಕೋರ್ಟ್ ಮುಂದಿಟ್ಟರು.

    ಪ್ರಶಾಂತ ಭೂಷಣ್, ಕಪಿಲ್ ಸಿಬಲ್ ವಾದ ಆಲಿಸಿದ ಬಳಿಕ ದುಷ್ಯಂತ್ ದವೆಗೆ ವಾದ ಮಂಡಿಸಲು ಸಮಯ ಎಷ್ಟು ಬೇಕು? ಎಂದು ಪ್ರಶ್ನಿಸಿದರು. ದವೆ 4 ಗಂಟೆಗಳ ಸಮಯ ಕೇಳಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರಿದ್ದ ಪೀಠ ಸೋಮವಾರ ಮಧ್ಯಾಹ್ನ 2 ಗಂಟೆಗೆ ವಿಚಾರಣೆ ಮುಂದೂಡಿತು.

    Live Tv
    [brid partner=56869869 player=32851 video=960834 autoplay=true]

  • BBMP ಎಲೆಕ್ಷನ್‌ಗೆ ಕರಡು ಪಟ್ಟಿ ಸಿದ್ಧ – 6 ಲಕ್ಷಕ್ಕೂ ಅಧಿಕ ಮತದಾರರ ಸಂಖ್ಯೆ ಹೆಚ್ಚಳ

    BBMP ಎಲೆಕ್ಷನ್‌ಗೆ ಕರಡು ಪಟ್ಟಿ ಸಿದ್ಧ – 6 ಲಕ್ಷಕ್ಕೂ ಅಧಿಕ ಮತದಾರರ ಸಂಖ್ಯೆ ಹೆಚ್ಚಳ

    ಬೆಂಗಳೂರು: ಬಿಬಿಎಂಪಿ ಚುನಾವಣಾ ತಯಾರಿ ಶುರುವಾಗಿದೆ. ಬೆಂಗಳೂರಿನಲ್ಲಿ ಮತದಾರರ ಸಂಖ್ಯೆ 6.33 ಲಕ್ಷ ಹೆಚ್ಚಾಗಿದೆ.

    ಕಳೆದ ಬಾರಿ 71,22,169 ಮತದಾರರಿದ್ದರು. ಸಧ್ಯ 2022ರ ಜುಲೈ 31ರ ವರೆಗಿನ ವಿಧಾನಸಭಾ ಕ್ಷೇತ್ರವಾರು ಮತದಾರರ ಮಾಹಿತಿಯನ್ನು ವಾರ್ಡ್‌ವಾರು ಪುನರ್ ವಿಂಗಡಿಸಿ ಪಾಲಿಕೆಯ ಮತದಾರರ ಪಟ್ಟಿ ಸಿದ್ಧಗೊಳಿಸಲಾಗಿದೆ. ಈ ಬಾರಿ 79, 86 ಸಾವಿರದ 229 ಮಂದಿ ಇದ್ದಾರೆ. 41,09,496 ಪುರುಷರು, 37,97,497 ಮಹಿಳೆಯರು ಹಾಗೂ 1,401 ಇತರೆ ಮತದಾರರಿದ್ದಾರೆ. 243 ವಾರ್ಡ್‌ಗಳಲ್ಲಿ ಕನಿಷ್ಠ 18,604 ಮತ್ತು ಗರಿಷ್ಠ 51,653 ಮತದಾರರಿದ್ದಾರೆ ಅಂತಾ ಚುನಾವಣಾ ಆಯೋಗ ಹೇಳಿದೆ.

    VOTEಸಾಂದರ್ಭಿಕ ಚಿತ್ರ

    ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಆಯುಕ್ತ ಬಸವರಾಜು ಮಾತನಾಡಿ, ಬೆಂಗಳೂರು ವ್ಯಾಪ್ತಿಯ ಮತದಾರರು ಹೆಸರು ಬಿಟ್ಟು ಹೋಗಿದ್ದರೆ, ಬದಲಾವಣೆ ಆಗಿದ್ದರೆ ಈಗಲೇ ಸರಿಮಾಡಿಕೊಳ್ಳಿ. ವೋಟರ್ ಹೆಲ್ಪ್‌ಲೈನ್‌ ಆಪ್ ಮೂಲಕ ವಿಧಾನಸಭಾ ಕ್ಷೇತ್ರವಾರು ನೋಂದಣಿ ಪರಿಶೀಲಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರರ ಸಂಘ, ಕೆಂಪಣ್ಣ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ: ಮುನಿರತ್ನ

    ಸಾಂದರ್ಭಿಕ ಚಿತ್ರ

    ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತಾಡಿ, ಮತದಾರರ ಪಟ್ಟಿ ಆಕ್ಷೇಪಣೆಗೆ 7 ದಿನ ಕಾಲವಕಾಶ ಇದೆ. ಕಾಲವಕಾಶ ಕಡಿಮೆ ಇದ್ದು, ಮತದಾರರ ಕರಡು ಪ್ರಕಟ ಆದ ಮೇಲೆ ಚುನಾವಣೆ ದಿನಾಂಕ ನಿಗದಿಯಾಗಬೇಕಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಒಪ್ಪಿಗೆಯಿಲ್ಲದೇ ಅಪ್ರಾಪ್ತೆಯೊಂದಿಗೆ ಸೆಕ್ಸ್ ನಡೆಸಿದ ವ್ಯಕ್ತಿಗೆ 100 ವರ್ಷ ಜೈಲು!

    ಬಿಬಿಎಂಪಿ ವಾರ್ಡ್ ಮೀಸಲಾತಿ ಸಂಬಂಧ ಸಲ್ಲಿಕೆ ಆಗಿದ್ದ ರಿರ್ಟ್ ಅರ್ಜಿಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿರೋ ಹೈಕೋರ್ಟ್, ಸರ್ಕಾರ, ಬಿಬಿಎಂಪಿ, ಚುನಾವಣಾ ಆಯೋಗಕ್ಕೆ ನೋಟಿಸ್ ಕೊಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕಿಲ್ಲ ಅವಕಾಶ – ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕಿಲ್ಲ ಅವಕಾಶ – ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲಿಕತ್ವದ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು. ಈದ್ಗಾ ಮೈದಾನದಲ್ಲಿ ಈ ಬಾರಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದೆ.

    ಈದ್ಗಾ ಮೈದಾನವನ್ನು ಆಟದ ಮೈದಾನವಾಗಿ ಮಾತ್ರವೇ ಬಳಸಬೇಕು, ರಂಜಾನ್, ಬಕ್ರೀದ್ ವೇಳೆ ಮಾತ್ರ ಪ್ರಾರ್ಥನೆ ಸಲ್ಲಿಸಬೇಕು. ಆದರೆ ಶುಕ್ರವಾರದ ಪ್ರಾರ್ಥನೆ ಸಲ್ಲಿಸಲು ಅವಾಶಕ ಇರುವುದಿಲ್ಲ ಎಂದು ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರಿದ್ದ ಪೀಠ ಆದೇಶಿಸಿದೆ. ಸೆ.23ಕ್ಕೆ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: ರಾಕೆಟ್ರಿ’ ಸಿನಿಮಾದಲ್ಲಿ ಇಸ್ರೊಗೆ ಕಳಂಕ ತರುವಂತಹ ಸುಳ್ಳುಗಳನ್ನು ಹೇಳಲಾಗಿದೆ: ಮಾಜಿ ವಿಜ್ಞಾನಿಗಳ ಆರೋಪ

    ರಂಜಾನ್ ಹಾಗೂ ಬಕ್ರೀದ್ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಇದೆ. ಆದರೆ ಶುಕ್ರವಾರದ ಪ್ರಾರ್ಥನೆಗೆ ಅವಕಾಶವಿಲ್ಲ. ಜೊತೆಗೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಯಾವುದೇ ಅನುಮತಿ ಬೇಕಿಲ್ಲ ಎಂದು ಹೇಳಿರುವ ಪೀಠವು ಇದನ್ನು ಹುಬ್ಬಳ್ಳಿ ಈದ್ಗಾ ಮೈದಾನದ (ವಿವಾದ) ರೀತಿಯಲ್ಲಿ ಮಾಡಬೇಡಿ. ಯಾವುದೇ ವಿವಾದಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಿ ಎಂದು ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದೆ. ಇದನ್ನೂ ಓದಿ: ಉರಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಈ ಸಂಬಂಧ ಮಾತನಾಡಿದ ಹಿರಿಯ ವಕೀಲರಾದ ಪ್ರಮೀಳಾ ನೇಸರ್ಗಿ, ನಾನು ಶಾಸಕಿ ಆಗಿದ್ದಾಗ ಗಣೇಶ ಉತ್ಸವ, ದಸರಾ ಕನ್ನೆ ರಾಜೋತ್ಸವ ಮಾಡಬಹುದು ಅಂತಾ ಹೇಳಿದ್ದೆವು. ಆದರೆ ಈ ಬಾರಿ ಕೋರ್ಟ್ ಯಥಾಸ್ಥಿತಿ ಕಾಪಾಡಿ ಎಂದು ಹೇಳಿದೆ.

    ನಾನು, ಶಾಸಕ ಜಮೀರ್ ಸಾಹೇಬ್ರು ಇದ್ದಾಗ ಈ ಮೈದಾನದಲ್ಲಿ ಗಣೇಶ ಉತ್ಸವ, ರಂಜಾನ್, ದಸರಾ ಉತ್ಸವ ಎಲ್ಲವೂ ಆಗ್ಬೇಕು ಅಂತಾ ಮಾತಾಡಿಕೊಂಡಿದ್ವಿ. ಅದು ಯಥಾಸ್ಥಿತಿ ಅಂತಾ ನಾವು ಅಂದ್ಕೊಂಡಿದ್ವಿ. ಈಗ ಹೈಕೋರ್ಟ್ ಯಥಾಸ್ಥಿತಿ ಅಂತಾ ಆದೇಶ ನೀಡಿದೆ. ಆದೇಶದಲ್ಲಿ ಇದೊಂದು ಮೈದಾನ ಇಲ್ಲಿ ಆಟ ಆಡಬಹುದು ಎಂದಿದೆ. ಈ ಜಾಗ ಸಾರ್ವಜನಿಕರ ಜಾಗವೇ ಹೊರತು ವಕ್ಫ್ ಬೋರ್ಡ್ ಜಾಗ ಅಲ್ಲ. ಕಾರ್ಪೊರೇಷನ್ ಅವ್ರ ಜಾಗವೂ ಅಲ್ಲ ಎಂದು ಹೇಳಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕೋರ್ಟ್ ಆದೇಶದಲ್ಲಿ ವರ್ಷದಲ್ಲಿ 2 ಬಾರಿ ಮಾತ್ರ ಪ್ರಾರ್ಥನೆ ಮಾಡೋದಕ್ಕೆ ಅವಕಾಶ ಇದೆ. ಕೋರ್ಟ್ ಮಕ್ಕಳು ಆಟ ಆಡಬಹುದು, ರಂಜಾನ್, ಬಕ್ರೀದ್‌ಗೆ ಪ್ರಾರ್ಥನೆ ಸಲ್ಲಿಸಬಹುದು ಎಂದು ಹೇಳಿದೆಯೇ ಹೊರತು ಬೇರೆ ಆಚರಣೆ ಮಾಡಬೇಡಿ ಎಂದು ಹೇಳಿಲ್ಲ. ಹಾಗಾಗಿ ನಾವು ಗಣೇಶ ಹಬ್ಬ ಮಾಡೇ ಮಾಡ್ತೀವಿ. ಅದು ಸಾರ್ವಜನಿಕ ಆಸ್ತಿ ಅದರಲ್ಲಿ ನಮಗೂ ಸಮಾನ ಹಕ್ಕಿದೆ. ನಾವು ಗಣೇಶ ಹಬ್ಬ ಆಚರಣೆ ಮಾಡೇ ಮಾಡ್ತೀವಿ ಎಂದು ಪಟ್ಟು ಹಿಡಿದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿ ರದ್ದು – ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಮರುಜೀವ

    ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿ ರದ್ದು – ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಮರುಜೀವ

    ಬೆಂಗಳೂರು/ನವದೆಹಲಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಭ್ರಷ್ಟ್ರಾಚಾರ ಪ್ರಕರಣಗಳ ತನಿಖೆಗಾಗಿ ರಚಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ಇಂದು ಕರ್ನಾಟಕ ಹೈಕೋರ್ಟ್ ರದ್ದುಪಡಿಸುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ. ಅಲ್ಲದೇ ಎಸಿಬಿ ಮುಂದಿದ್ದ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಸೂಚಿಸಿದೆ.

    ಬೆಂಗಳೂರು ವಕೀಲರ ಸಂಘ, ಸಮಾಜ ಪರಿವರ್ತನ ಸಮುದಾಯ ಮತ್ತು ವಕೀಲ ಬಿ.ಜಿ.ಚಿದಾನಂದ ಅರಸ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ಎಚ್.ಎಸ್.ಹೇಮಲೇಖಾ ಅವರಿದ್ದ ದ್ವೀಸದಸ್ಯ ಪೀಠವು ಎತ್ತಿ ಹಿಡಿದಿದೆ. ಇದನ್ನೂ ಓದಿ: ಬಡವರಿಗೆ ತೆರಿಗೆ ಹೊರೆ; ಶ್ರೀಮಂತರಿಗೆ ಮಾತ್ರ ವಿನಾಯಿತಿ – ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

    2016ರ ಮಾರ್ಚ್ 14ರಂದು ಎಸಿಬಿ ರಚಿಸಲು ಮಾಡಿರುವ ಕಾರ್ಯಾದೇಶವನ್ನು ರಾಜ್ಯ ಸರ್ಕಾರ ಸರಿಯಾಗಿ ಮಾಡಿಲ್ಲ. ಅಲ್ಲದೆ ಲೋಕಾಯುಕ್ತ ತನಿಖೆಗೆ ಸಂಬಂಧಿಸಿದ ಅಧಿಕಾರವನ್ನು ಲೋಕಾಯುಕ್ತ ಪೊಲೀಸರಿಂದ ಹಿಂಪಡೆದಿರುವ ಸೂಚನೆಯ ಬಗ್ಗೆಯೂ ಸರಿಯಾದ ಕ್ರಮವಿಲ್ಲ. ಹಾಗಾಗಿ ಹಿಂದಿನ ಅಧಿಸೂಚನೆಗಳನ್ನು ಸೂಪರ್ ಸೀಡ್ ಮಾಡಿ ಹೊರಡಿಸಿರುವ ಎಸಿಬಿಯನ್ನು ವಜಾ ಮಾಡಲಾಗಿದೆ ಎಂದು ಪೀಠವು ಆದೇಶದಲ್ಲಿ ಹೇಳಿದೆ. ಇದನ್ನೂ ಓದಿ: ಅದ್ಧೂರಿ ಬರ್ತ್‌ಡೇ ಸೆಲಬ್ರೇಷನ್‌ಗೆ ನೋ ಅಂದ ಅಪ್ಪ, ಅಮ್ಮ – 21ರ ಯುವಕ ಆತ್ಮಹತ್ಯೆ

    ರಾಜ್ಯ ಸರ್ಕಾರದ ಆಕ್ಷೇಪಾರ್ಹ ಆದೇಶಗಳನ್ನು ವಜಾ ಮಾಡಿರುವ ಹಿನ್ನೆಲೆಯಲ್ಲಿ ಎಸಿಬಿ ರದ್ದಾಗಿದೆ. ಆದರೆ ಎಸಿಬಿ ಮುಂದೆ ಬಾಕಿ ಇರುವ ತನಿಖೆ, ವಿಚಾರಣೆ, ಶಿಸ್ತುಕ್ರಮ ಪ್ರಕ್ರಿಯೆಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಲಿವೆ. ಹೀಗಾಗಿ ಎಸಿಬಿ ಮುಂದಿರುವ ಎಲ್ಲಾ ಪ್ರಕರಣಗಳು ಲೋಕಾಯುಕ್ತಕ್ಕೆ ವರ್ಗವಣೆಯಾಗಿರುವುದರಿಂದ ಆರೋಪಿಗಳು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದೂ ಹೇಳಿದೆ.

    ಅಲ್ಲದೇ, 1991ರ ಫೆಬ್ರವರಿ 6, 2002ರ ಫೆಬ್ರವರಿ 8, 2002ರ ಮೇ 8, 2002ರ ಡಿಸೆಂಬರ್ 5ರಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವ ಸಂಬಂಧ ಹೊರಡಿಸಿದ್ದ ಆದೇಶಗಳನ್ನು ಪುನರ್ ಸ್ಥಾಪಿಸಲಾಗಿದೆ ನ್ಯಾಯಪೀಠ ಸ್ಪಷ್ಟವಾಗಿ ಉಲ್ಲೇಖಿಸಿದೆ. ಇದನ್ನೂ ಓದಿ: ಭೇಟಿಗೆಂದು ಕಬ್ಬನ್ ಪಾರ್ಕ್‍ಗೆ ಕರೆಸಿ ಸಂಬಂಧಿ ಯುವತಿ ಮೇಲೆ ಅತ್ಯಾಚಾರ!

    court order law

    ಚಾರಿತ್ರ್ಯವಂತರನ್ನು ನೇಮಿಸಿ- ಖಡಕ್ ಸೂಚನೆ: ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಲೋಕಾಯುಕ್ತ ಕಾಯ್ದೆಗಳನ್ನು ಗಮನದಲ್ಲಿಟ್ಟುಕೊಂಡು ಸೆಕ್ಷನ್ 3(2)ಎ ಮತ್ತು 3(2)ಬಿ ಅಡಿ ಸಮರ್ಥರನ್ನು ನೇಮಕ ಮಾಡಬೇಕು. ಸಾರ್ವಜನಿಕ ಬದುಕಿನಲ್ಲಿಯೂ ಉತ್ತಮ ಹಿನ್ನೆಲೆಯುಳ್ಳವರು, ಪ್ರಾಮಾಣಿಕರು ಹಾಗೂ ನ್ಯಾಯಯುತವಾಗಿ ನಡೆದುಕೊಳ್ಳುವವರನ್ನು ಲೋಕಾಯುಕ್ತ ಹಾಗೂ ಉಪ ಲೋಕಾಯುಕ್ತರ ಹುದ್ದೆಗೆ ನೇಮಕ ಮಾಡಲು ಶಿಫಾರಸು ಮಾಡಬೇಕು ಎಂದು ಸಾಂವಿಧಾನಿಕ ಪ್ರಾಧಿಕಾರಗಳಿಗೆ ಮನವಿ ಮಾಡುತ್ತೇವೆ ಎಂದು ಆದೇಶದಲ್ಲಿ ತಿಳಿಸಿದೆ.

    ರಾಜ್ಯ ಸರ್ಕಾರಕ್ಕೆ ಪೀಠದ ಶಿಫಾರಸ್ಸು:

    • ಕರ್ನಾಟಕ ಲೋಕಾಯುಕ್ತ ಕಾಯ್ದೆ ಸೆಕ್ಷನ್ 12(4)ಕ್ಕೆ ತುರ್ತಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ.
    • ಉತ್ತಮ ಹಿನ್ನೆಲೆ ಹೊಂದಿರುವ ಪೊಲೀಸ್ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸ್ ದಳಕ್ಕೆ ನೇಮಕ ಮಾಡುವ ಮೂಲಕ ಅದನ್ನು ಸದೃಢಗೊಳಿಸಬೇಕು.
    • ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ನಿಯೋಜಿಸಿರುವ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸ್ ದಳಕ್ಕೆ ವರ್ಗಾಯಿಸಬೇಕು. ಎಸಿಬಿಯಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯು ಲೋಕಾಯುಕ್ತದ ಆಡಳಿತಕ್ಕೆ ಒಳಪಡಲಿದ್ದಾರೆ.
    • ಲೋಕಾಯುಕ್ತ ಮತ್ತು ಉಪಲೋಕಾಯುಕ್ತರ ಅನುಮತಿ ಪಡೆಯದೇ ಕನಿಷ್ಠ 3 ವರ್ಷ ಸೇವಾವಧಿ ಪೂರ್ಣಗೊಳಿಸದ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಲೋಕಾಯುಕ್ತದಿಂದ ವರ್ಗಾಯಿಸುವಂತಿಲ್ಲ.
    • ಒಂದು ಸಾರಿ ತನಿಖೆ ಆರಂಭಿಸಿದ ಬಳಿಕ ನಿರ್ದಿಷ್ಟ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ನ್ಯಾಯಾಲಯದ ಮುಂದಿರುವ ಪ್ರಕರಣಗಳನ್ನು ತುರ್ತಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

    ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

    ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಅದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಮಾಡಿದ್ದ ಆರೋಪಗಳಿಗೆ ಇಂದು ಸುಪ್ರೀಂಕೋರ್ಟ್ ತಡೆ ನೀಡಿದೆ.

    karnataka highcourt

    ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತು ಜೆ.ಮಂಜುನಾಥ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ವಿಶೇಷ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರಿದ್ದ ತ್ರಿಸದಸ್ಯ ಪೀಠವು ನಡೆಸಿತು. ಇದನ್ನೂ ಓದಿ: L- ಬೋರ್ಡ್‌ ಕಾರಿಗೆ ಲಾರಿ ಡಿಕ್ಕಿ : ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

    ವಿಚಾರಣೆ ವೇಳೆ ನ್ಯಾಯಾಧೀಶರ ಅಭಿಪ್ರಾಯಕ್ಕೂ ಹಾಗೂ ಅವರು ವಿಚಾರಣೆ ಮಾಡುತ್ತಿರುವ ಪ್ರಕರಣಕ್ಕೂ ಸಂಬಂಧವಿಲ್ಲ. ಇಲ್ಲಿ ಅಪ್ರಸ್ತುತ ಅವಲೋಕನಗಳನ್ನು ಮಾಡಿದ್ದಾರೆ ಹಾಗೂ ಜಾಮೀನು ಅರ್ಜಿಯ ವ್ಯಾಪ್ತಿಯನ್ನೂ ಮೀರಿದ್ದಾರೆ ಎಂದು ಹೇಳಿದೆ.

    supreme court 12

    ಜಾಮೀನು ಅರ್ಜಿ ಪ್ರಕರಣವೊಂದರ ವಿಚಾರಣೆ ಮಾಡುತ್ತಿದ್ದ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಎಸಿಬಿ ವಿರುದ್ಧ ಖಂಡತುಂಡ ಟೀಕೆ ಮಾಡಿದ್ದರು. ಎಸಿಬಿ ಮುಖ್ಯಸ್ಥ ಸೀಮಂತ್ ಕುಮಾರ್ ಸಿಂಗ್ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸೀಮಂತ್ ಕುಮಾರ್ ಸಿಂಗ್ ಬಳಿ ತಮ್ಮ ಸರ್ಕಾರಿ ಸೇವೆಗಳ ವರದಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿತ್ತು. ಸುಪ್ರೀಂ ಕೋರ್ಟ್ ಇದಕ್ಕೂ ತಡೆ ನೀಡಿದೆ. ಇದನ್ನೂ ಓದಿ: ಯಾವುದೇ ಧರ್ಮ, ಜಾತಿಯವರಿಗೆ ಸಿಎಂ ಸ್ಥಾನ ಮೀಸಲು ಅಲ್ಲ: ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    court order law

    ಜೆ.ಮಂಜುನಾಥ್ ಐಎಎಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ನಾಗಮುತ್ತು ಅವರು, ಈ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಬದಲು ಬೇರೊಂದು ನ್ಯಾಯಪೀಠಕ್ಕೆ ವರ್ಗಾವಣೆ ಮಾಡುವಂತೆ ಕೋರಿದ್ದರು. ಇದಕ್ಕೆ ಅಸಮ್ಮತಿಸಿದ (ಸಮ್ಮತಿಯಿಲ್ಲದ) ನ್ಯಾಯಪೀಠ ವಿಚಾರಣೆಯನ್ನು ನ್ಯಾಯಾಧೀಶರೇ ಮುಂದುವರಿಸುತ್ತಾರೆ. ಆದರೆ ಪ್ರಕರಣಕ್ಕೆ ಸಂಬಂಧಪಡದ ವಿಚಾರಗಳಿಗೆ ನಾವು ತಡೆ ನೀಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿತು.

    ಕಳೆದ ವಿಚಾರಣೆಯಲ್ಲೂ ಜಾಮೀನು ಮನವಿಯ ವಿಚಾರಣೆಯನ್ನು ಮೂರು ದಿನಗಳ ಕಾಲ ಮುಂದೂಡುವಂತೆ ಸುಪ್ರೀಂ ಕೋರ್ಟ್ಗೆ ಹೈಕೋರ್ಟ್ ಹೇಳಿತ್ತು.

    ಏನಿದು ಪ್ರಕರಣ?
    ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಜಾಮೀನು ಕೋರಿ ಉಪ ತಹಸೀಲ್ದಾರ್ ಪಿ.ಎಸ್.ಮಹೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಪ್ರಕರಣದಲ್ಲಿ ಸಮರ್ಪಕ ತನಿಖೆ ನಡೆದಿಲ್ಲ ಎಂದು ಎಸಿಬಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಇದೇ ಕಾರಣಕ್ಕೆ ತಮಗೆ ವರ್ಗಾವಣೆಯ ಬೆದರಿಕೆ ಒಡ್ಡಲಾಗಿದೆ ಎಂಬ ಸ್ಫೋಟಕ ವಿಚಾರವನ್ನು ನ್ಯಾಯಮೂರ್ತಿಗಳು ಮುಕ್ತ ನ್ಯಾಯಾಲಯದಲ್ಲಿ ಬಹಿರಂಗಪಡಿಸಿದ್ದರು. ಅಲ್ಲದೆ, ಬೆದರಿಕೆಯ ವಿಚಾರವನ್ನು ಜು.11ರಂದು ಲಿಖಿತ ಆದೇಶದಲ್ಲಿ ದಾಖಲಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಅಧಿಕಾರಿಗಳಿಂದಲೇ ದುರ್ಬಳಕೆ- ಕರ್ನಾಟಕ ಹೈಕೋರ್ಟ್ ಮೊರೆಹೋದ ಟ್ವಿಟ್ಟರ್

    ಅಧಿಕಾರಿಗಳಿಂದಲೇ ದುರ್ಬಳಕೆ- ಕರ್ನಾಟಕ ಹೈಕೋರ್ಟ್ ಮೊರೆಹೋದ ಟ್ವಿಟ್ಟರ್

    ನವದೆಹಲಿ: ಕೇಂದ್ರ ಸರ್ಕಾರವು ಸಾಮಾಜಿಕ ಮಾಧ್ಯಮವಾದ ಟ್ವಿಟ್ಟರ್‌ನಲ್ಲಿನ ಕೆಲವು ಅಂಶಗಳನ್ನು ತೆಗದುಹಾಕುವಂತೆ ನೀಡಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಟ್ವಿಟ್ಟರ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ.

    24 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಲ ದಿನಗಳಿಂದ ಈಚೆಗೆ ಕಾನೂನು ಸಮರ ನಡೆಯುತ್ತಿದೆ. ಈ ನಡುವೆ ಅಧಿಕಾರಿಗಳಿಂದಲೇ ಟ್ವಿಟ್ಟರ್ ದುಬಳಕೆಯಾಗುತ್ತಿರುವುದಾಗಿ ಟ್ವಿಟ್ಟರ್ ಆರೋಪಿಸಿದೆ. ಕೇಂದ್ರ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ರಾಜ್ಯ ಹೈಕೋರ್ಟ್‌ಗೆ ಮನವಿ ಮಾಡಿದೆ. ಇದನ್ನೂ ಓದಿ: ಬಂಡಿ ಎಳೆಯುವವನಿಗೆ ಹೊಸ ಚಪ್ಪಲಿ ಗಿಫ್ಟ್ ಕೊಟ್ಟ ಪೊಲೀಸ್ – ವೀಡಿಯೋ ನೋಡಿ ನೆಟ್ಟಿಗರು ಫುಲ್ ಖುಷ್

    karnataka highcourt

    ನ್ಯಾಯಾಂಗ ಪರಾಮರ್ಶೆಯ ಮೂಲಕ ಟ್ವಿಟ್ಟರ್ ನೆರವು ಪಡೆಯಲು ಅಮೆರಿಕ ಮೂಲದ ಸಾಮಾಜಿಕ ಮಾಧ್ಯಮ ಕಂಪೆನಿ ಪ್ರಯತ್ನ ನಡೆಸುತ್ತಿದೆ. ಸರ್ಕಾರದ ಆದೇಶಗಳ ಕಾನೂನು ಮಾನ್ಯತೆಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ. ಇದನ್ನೂ ಓದಿ: ಗೆಳತಿಯೊಂದಿಗೆ ಸೆಕ್ಸ್ ಮಾಡ್ತಿದ್ದಾಗಲೇ ಹೃದಯಾಘಾತ – ಹಸೆಮಣೆ ಏರಬೇಕಿದ್ದ 28ರ ಯುವಕ ಸಾವು!

    ಕೇಂದ್ರಸರ್ಕಾರವು ಸ್ವತಂತ್ರ ಸಿಖ್ ದೇಶವನ್ನು ಬೆಂಬಲಿಸುವ ಖಾತೆಗಳು, ರೈತರ ಪ್ರತಿಭಟನೆ ಕುರಿತಾಗಿ ಸುಳ್ಳು ಮಾಹಿತಿ ಹರಡುವ ಪೋಸ್ಟ್‌ಗಳು ಹಾಗೂ ಕೋವಿಡ್ 19 ಸಾಂಕ್ರಾಮಿಕವನ್ನು ಸರ್ಕಾರ ನಿರ್ವಹಣೆ ಮಾಡಿರುವ ರೀತಿಯನ್ನು ಟೀಕಿಸುವ ಟ್ವೀಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಳೆದ ಒಂದು ವರ್ಷದಿಂದ ಒತ್ತಡ ಹೇರುತ್ತಲೇ ಇದೆ. ಕೇಂದ್ರ ಸರ್ಕಾರದ ಆದೇಶದಿಂದ ವಿನಾಯಿತಿ ಪಡೆಯಲು ಟ್ವಿಟ್ಟರ್ ಕೋರ್ಟ್ ಮೊರೆ ಹೋಗಿದೆ.

    ಸಾಂದರ್ಭಿಕ ಚಿತ್ರ

    ಐಟಿ ಸಚಿವಾಲಯವು ಕೆಲವು ಆದೇಶಗಳನ್ನು ಸರಿಯಾಗಿ ಪಾಲಿಸದೆ ಇದ್ದರೆ ಕ್ರಿಮಿನಲ್ ಪ್ರಕ್ರಿಯೆ ಎದುರಿಸಬೇಕಾಗುತ್ತದೆ ಎಂದು ಕಳೆದ ತಿಂಗಳು ಟ್ವಿಟ್ಟರ್‌ಗೆ ಎಚ್ಚರಿಕೆ ನೀಡಿತ್ತು. ಆದರೆ ಭಾರತದ ಐಟಿ ಕಾಯ್ದೆಯ ಪ್ರಕ್ರಿಯಾ ಅಗತ್ಯಗಳಿಗೆ ಒಳಪಡದ ಕಾರಣ ಕೆಲವು ಆದೇಶಗಳು ನ್ಯಾಯಾಂಗದ ಪರಾಮರ್ಶೆಗೆ ಒಳಪಡಬೇಕು ಎಂದು ಟ್ವಿಟ್ಟರ್ ವಾದಿಸಿತು. ಅಲ್ಲದೆ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿ ಹಾಗೂ ಇತರೆ ಕಾರಣಗಳಿಂದ ಕೆಲವು ಅಂಶಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕನ್ನು ಸರ್ಕಾರಕ್ಕೆ ಐಟಿ ಕಾಯ್ದೆ ಒದಗಿಸಿದೆ. ಕೆಲವು ಆದೇಶಗಳು ಆ ಬರಹದ ಬರಹಗಾರರಿಗೆ ನೋಟಿಸ್‌ಗಳನ್ನು ನೀಡಲು ವಿಫಲವಾಗಿವೆ ಎಂದು ಟ್ವಿಟ್ಟರ್ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ.

    ದೇಶದಲ್ಲಿ 24 ಮಿಲಿಯನ್ ಟ್ವಿಟ್ಟರ್ ಬಳಕೆದಾರರಿದ್ದಾರೆ. ಕೆಲವು ರಾಜಕೀಯ ವಿಷಯಗಳು ರಾಜಕೀಯ ಪಕ್ಷಗಳ ಅಧಿಕೃತ ಖಾತೆಗಳಿಂದ ಪೋಸ್ಟ್ ಆಗಿರುವುದಕ್ಕೆ ಸಂಬಂಧಿಸಿವೆ. ಇವುಗಳನ್ನು ಬ್ಲಾಕ್ ಮಾಡುವುದು ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಉಲ್ಲಂಘಿಸಿದಂತೆ ಆಗುತ್ತದೆ ಎಂದು ಟ್ವಿಟ್ಟರ್ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಪೈಥಾನ್ ಬಳಸಿ ಗುಂಡಿ ಮುಚ್ಚದ ಬಿಬಿಎಂಪಿಗೆ ಹೈಕೋರ್ಟ್ ಫುಲ್ ಕ್ಲಾಸ್

    ಪೈಥಾನ್ ಬಳಸಿ ಗುಂಡಿ ಮುಚ್ಚದ ಬಿಬಿಎಂಪಿಗೆ ಹೈಕೋರ್ಟ್ ಫುಲ್ ಕ್ಲಾಸ್

    ಬೆಂಗಳೂರು: ಪೈಥಾನ್ ಯಂತ್ರ ಬಳಸಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರದಲ್ಲಿ ಕಾಮಗಾರಿ ನಡೆಸಲು ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಹೈಕೋರ್ಟ್ ಚಾಟಿ ಬೀಸಿದೆ.

    ಕಾಮಗಾರಿ ನಡೆಸಲು ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳದೇ ಈವರೆಗೂ ಕಾರ್ಯಾದೇಶ ಹೊರಡಿಸದ ಬಿಬಿಎಂಪಿಯನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆದುಕೊಂಡಿದೆ. ಇದನ್ನೂ ಓದಿ: ಬರ್ತ್‍ಡೇ ಪಾರ್ಟಿ ಹಣಕ್ಕೆ ಕಿತ್ತಾಟ – 3ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿಗಳು, ಓರ್ವ ಸಾವು

    ಸಾಕಷ್ಟು ಸಮಯಾವಕಾಶ ನೀಡಿದ್ದರೂ ಯಾವುದೇ ಕೆಲಸವಾಗಿಲ್ಲ. ಎಲ್ಲದಕ್ಕೂ ಮಿತಿ ಇರುತ್ತದೆ. ಇನ್ನು ಸಹಿಸಲು ಸಾಧ್ಯವಿಲ್ಲ. ರಸ್ತೆ ನಿರ್ವಹಣೆಯ ಕೆಲಸವನ್ನು ಮಿಲಿಟರಿ ಏಜೆನ್ಸಿ ಅಥವಾ ಬೇರೆ ಯಾವುದಾದರೂ ಸಂಸ್ಥೆಗೆ ವಹಿಸುತ್ತೇವೆ. ಇದರೊಂದಿಗೆ ಪಾಲಿಕೆ ಮುಖ್ಯ ಆಯುಕ್ತರು, ಅಧಿಕಾರಿಗಳ ಅಮಾನತಿಗೆ ಸರ್ಕಾರಕ್ಕೆ ಆದೇಶಿಸುತ್ತೇವೆ ಎಂದು ಮುಖ್ಯ ಕೋರ್ಟ್ ಬಿಸಿ ಮುಟ್ಟಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೆ: ಬಿಜೆಪಿ ವ್ಯಂಗ್ಯ

    ಅಂತಿಮವಾಗಿ ಒಂದು ದಿನ ಕಾಲಾವಕಾಶ ನೀಡುತ್ತೇವೆ. ಅಷ್ಟರೊಳಗೆ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು, ಕಾರ್ಯಾದೇಶ ಹೊರಡಿಸಿ ಕೋರ್ಟ್‌ಗೆ ದಾಖಲೆಗಳನ್ನು ಸಲ್ಲಿಸಬೇಕು. ಇಲ್ಲವಾದರೆ ಬಿಬಿಎಂಪಿ ವಿರುದ್ಧ ಕಠಿಣ ಆದೇಶ ಹೊರಡಿಸಲು ನ್ಯಾಯಾಲಯ ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಲಾಗಿದೆ.

    Live Tv