Tag: Karnataka police

  • ಹ್ಯಾಕರ್ ಶ್ರೀಕಿ ಪೊಲೀಸರಿಗಿಂತ ಬಹಳ ಬುದ್ಧಿವಂತ: ಗೃಹ ಸಚಿವ

    ಹ್ಯಾಕರ್ ಶ್ರೀಕಿ ಪೊಲೀಸರಿಗಿಂತ ಬಹಳ ಬುದ್ಧಿವಂತ: ಗೃಹ ಸಚಿವ

    ಚಿಕ್ಕಬಳ್ಳಾಪುರ: ಬಿಟ್ ಕಾಯಿನ್ ಹಗರಣದಲ್ಲಿ ಆರೋಪಿತನಾಗಿದ್ದ ಹ್ಯಾಕರ್ ಶ್ರೀಕಿ ಪೊಲೀಸರಗಿಂತ ಬಹಳ ಬುದ್ಧಿವಂತ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಂತರ ಉತ್ತಮ ಕೆಲಸ ಮಾಡಿದ ಸಿಬ್ಬಂದಿಗೆ ಪ್ರಶಸ್ತಿ ಪ್ರದಾನ ಮಾಡುವ ವೇಳೆ ಮಾತನಾಡಿದ ಅವರು, ಶ್ರೀಕಿ ಅರೆಸ್ಟ್ ಆಗೋವರೆಗೂ ಅಂತ ತುಂಬಾ ಬುದ್ಧಿವಂತ ಎಂಬುದು ನಮಗೆ ಗೊತ್ತಿರಲಿಲ್ಲ. ಈ ವಿಚಾರ ಆತ ಆರೆಸ್ಟ್‌ ಆದ ನಂತರವೇ ತಿಳಿಯಿತು. ಆದರೆ ಬುದ್ಧಿವಂತಿಕೆಯಲ್ಲಿ ಆತನಿಗಿಂತ ನಮ್ಮ ಪೊಲೀಸರು ಮುಂದೆ ಇರಬೇಕು. ಅಂತಹ ತಂತ್ರಜ್ಞರು ಪೊಲೀಸ್ ಇಲಾಖೆಗೆ ಅಗತ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೋಕರ್ ವೆಬ್‍ಸೈಟ್ ಹ್ಯಾಕ್ – ಕೋಟ್ಯಂತರ ಹಣ ಮಾಡಿದ್ದ ಕುಖ್ಯಾತ ಹ್ಯಾಕರ್ ಅರೆಸ್ಟ್

    ಈ ವೇಳೆ ನಮ್ಮ ಇಲಾಖೆಯಲ್ಲಿ ಯಾರಾದರೂ ಅಂತಹವರು ಇದ್ದಾರಾ ಅಂತ ಕೇಂದ್ರ ವಲಯ ಐಜಿಪಿಯನ್ನು ಕೇಳಿದರು. ಅಂತಹವರು ಇಲಾಖೆಯಲ್ಲಿ ಇಲ್ಲ, ಹೊರಗೆ ಇದ್ದಾರೆ ಎಂದು ಐಜಿಪಿ ಉತ್ತರಿಸಿದರು. ನಂತರ ಮಾತನಾಡಿದ ಸಚಿವರು, ಪೊಲೀಸ್ ಇಲಾಖೆಯಲ್ಲಿ ಅಂತಹ ನಿಪುಣರ ಅವಶ್ಯಕತೆ ಇದೆ. ಅಂತಹವರನ್ನು ತಯಾರು ಮಾಡಬೇಕು ಎಂದು ತಿಳಿಸಿದ್ದಾರೆ.

    ಶ್ರೀಕೃಷ್ಣ (ಶ್ರೀಕಿ) ಬೆಂಗಳೂರಿನ ನಿವಾಸಿಯಾಗಿದ್ದು, 2014 ರಿಂದ 2017ರವರೆಗೆ ಈತ ನೆದರ್‌ಲ್ಯಾಂಡ್‌ ಆಮ್‌ಸ್ಟರ್‌ಡ್ಯಾಮ್ ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಎಸ್‍ಸಿ ಪದವಿ ಪಡೆದ ಬಳಿಕ ವೆಬ್‍ಸೈಟ್ ಹ್ಯಾಕ್ ಮಾಡಲು ಆರಂಭಿಸಿದ್ದ. ಆರಂಭದಲ್ಲಿ ಸಣ್ಣ ಪಟ್ಟ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಅನುಭವ ಪಡೆದ ಬಳಿಕ ದೊಡ್ಡ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಇದನ್ನೇ ಉದ್ಯೋಗ ಮಾಡಿಕೊಂಡಿದ್ದ. ಇದನ್ನೂ ಓದಿ: ಹ್ಯಾಕಿಂಗ್‌ ಮಾಡಲು ಏಕಾಗ್ರತೆ ಬೇಕು, ಅದಕ್ಕಾಗಿ ಭಗವದ್ಗೀತೆ ಓದುತ್ತೇನೆ – ಹ್ಯಾಕರ್‌ ಶ್ರೀಕಿ

    ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿದ ಬಳಿಕ ಆತ ಬಿಟ್‍ಕಾಯಿನ್ ಬಳಸಿ ಹಣವನ್ನು ಪಡೆಯುತ್ತಿದ್ದ. ಈ ಎಲ್ಲ ಕೆಲಸಕ್ಕೆ ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ. ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ ಕಾರಣ ಈತನ ಮಾಹಿತಿಗಳು ಸಿಗುತ್ತಿರಲಿಲ್ಲ. ಬಿಟ್ ಕಾಯಿನ್ ಮೂಲಕ ಡ್ರಗ್ಸ್ ತರಿಸಿಕೊಂಡು ಬೇಕಾದ ವ್ಯಕ್ತಿಗಳಿಗೆ ನೀಡುತ್ತಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

  • ಬೆಳಗಾವಿ ಬಂದ್‍ಗೆ MES ಕರೆ – ಬಂದ್‍ಗೆ ಅವಕಾಶ ಕೊಡಲ್ಲ ಎಂದ ಕರ್ನಾಟಕ ಪೊಲೀಸ್

    ಬೆಳಗಾವಿ ಬಂದ್‍ಗೆ MES ಕರೆ – ಬಂದ್‍ಗೆ ಅವಕಾಶ ಕೊಡಲ್ಲ ಎಂದ ಕರ್ನಾಟಕ ಪೊಲೀಸ್

    ಬೆಳಗಾವಿ: ಎಂಇಎಸ್ ಮುಖಂಡನ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದ ಹಿನ್ನೆಲೆಯಲ್ಲಿ ಮಂಗಳವಾರ  ಬೆಳಗಾವಿ ಬಂದ್‍ಗೆ ಎಂಇಎಸ್ ಕರೆ ನೀಡಿದೆ.

    ಎಂಇಎಸ್ ಮಾಜಿ ಶಾಸಕ ಮನೋಹರ್ ಕಿಣೇಕರ್ ಬಂದ್‍ಗೆ ಕರೆ ನೀಡಿದ್ದು, ಘಟನೆಯನ್ನು ಮಹಾರಾಷ್ಟ್ರ ನಾಯಕರ ಗಮನಕ್ಕೆ ತರಲು ನಿರ್ಧರಿಸಿದ್ದೇವೆ. ಈ ವಿಚಾರವನ್ನು ಶಿವಸೇನೆ, ಎನ್.ಸಿ.ಪಿ ಹಾಗೂ ಕಾಂಗ್ರೆಸ್ ನಾಯಕರ ಗಮನಕ್ಕೆ ತರಲು ನಿರ್ಧರಿಸಲಾಗಿದೆ ಎಂದರು. ಮಹಾಮೇಳಾವ್ ಮುಗಿದ ಬಳಿಕ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲು ಎಂಇಎಸ್ ಮುಖಂಡರು ನಿರ್ಧರಿಸಿದ್ದಾರೆ.

    ಅಲ್ಲದೆ ನಾಳೆಯ ಬಂದ್ ಯಶಸ್ವಿ ಮಾಡಲು ಕಾರ್ಯಕರ್ತರಿಗೆ ಕರೆ ನೀಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆ ಆಧಾರದ ಮೇಲೆ ಮಹಾಮೇಳಾವ್ ಆಚರಣೆ ಮಾಡುತ್ತಿದ್ದೇವೆ. ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ತಿರುಗೇಟು ನೀಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಕನ್ನಡ ಕಾರ್ಯಕರ್ತರಿಂದ MES ಮುಖಂಡನ ಮುಖಕ್ಕೆ ಮಸಿ

    ಬಂದ್‍ಗೆ ಅವಕಾಶ ನೀಡಲ್ಲ: ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ಎಂಇಎಸ್‍ನವರ ಮಹಾಮೇಳಾವ್ ಆಯೋಜನೆಗೆ ಅನುಮತಿ ನೀಡಿರಲಿಲ್ಲ ಎಂದರು.

    ಚಳಿಗಾಲದ ಅಧಿವೇಶನ ಇರುವ ಹಿನ್ನೆಲೆಯಲ್ಲಿ ನಾಳೆ ಬೆಳಗಾವಿ ಬಂದ್‍ಗೆ ನಾವು ಅವಕಾಶ ನೀಡಲ್ಲ. ಬಂದ್‍ಗೆ ಕರೆ ನೀಡಿದವರ ಜೊತೆ ಮಾತನಾಡಿ ಮನವೊಲಿಸುತ್ತೇವೆ. ನಮ್ಮಲ್ಲಿ ಸಿಬ್ಬಂದಿ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.  ಇದನ್ನೂ ಓದಿ: ತವರು ಜಿಲ್ಲೆಯ ಅಧಿವೇಶನಕ್ಕೂ ಬರಲಿಲ್ಲ ರಮೇಶ್ ಜಾರಕಿಹೊಳಿ!

    ಮಹಾನಗರ ಪಾಲಿಕೆ ಸಿಬ್ಬಂದಿಗೆ ಎಂಇಎಸ್ ಮುಖಂಡರ ಆವಾಜ್ ಹಾಕಿರುವ ಬಗ್ಗೆ ಮಹಾನಗರ ಪಾಲಿಕೆ ಸಿಬ್ಬಂದಿ ದೂರು ನೀಡಿದ್ರೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

  • ಗೋ ಕಳ್ಳರಿಗೆ ಸಹಾಯ ಮಾಡಿದ್ದ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ: ಆರಗ ಜ್ಞಾನೇಂದ್ರ

    ಗೋ ಕಳ್ಳರಿಗೆ ಸಹಾಯ ಮಾಡಿದ್ದ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ: ಆರಗ ಜ್ಞಾನೇಂದ್ರ

    ಬೆಂಗಳೂರು: ನಾನು ಎಲ್ಲಾ ಪೊಲೀಸರ ವಿರುದ್ಧ ಮಾತನಾಡಿಲ್ಲ. ಗೋ ಕಳ್ಳರಿಗೆ ಬೆಂಬಲ ನೀಡುವ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಬಗ್ಗೆ ನನಗೆ ಗೌರವ ಇದೆ. ಮೊನ್ನೆ ಗೋ ಕಳ್ಳರನ್ನು ಹಿಡಿಯಲು ಹೋದವರ ಮೇಲೆಯೇ ಕಾರು ಹತ್ತಿಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬದುಕುಳಿದಿರುವುದು ಪವಾಡ. ಈ ಘಟನೆಯಿಂದ ನನಗೆ ಬೇಸರವಾಗಿದೆ. ಪೊಲೀಸರ ಮೇಲೆ ನನಗೆ ಗೌರವ ಇದೆ. ಎಲ್ಲಾ ಪೊಲೀಸರು ಒಂದೇ ರೀತಿ ಇರುವುದಿಲ್ಲ. ಕರ್ನಾಟಕದಲ್ಲಿ ದಕ್ಷ ಪೊಲೀಸರೂ ಇದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಸುವಿನ ಹೊಟ್ಟೆಯಲ್ಲಿ ಸಿಕ್ತು ಐಸ್‍ಕ್ರೀಂ ಕಪ್, ಸ್ಪೂನ್ ಸೇರಿ 77 ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ!

    ಶಾಸಕ ಎಸ್.ಆರ್.ವಿಶ್ವನಾಥ್ ಕೊಲೆಗೆ ಸುಪಾರಿ ಪ್ರಕರಣ ಕುರಿತು ಮಾತನಾಡಿ, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಯಾವ ಶಾಸಕರಿಗೂ ಹಾಗೆ ಆಗಬಾರದು. ಮುಖವಾಡ ಕಳಚುವಂತೆ ಮಾಡುತ್ತೇವೆ. ಪೊಲೀಸ್‌ ಕಾಯಿದೆ ಪ್ರಕಾರ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಶಾಸಕ ವಿಶ್ವನಾಥ್ ಅವರಿಗೆ ಎಲ್ಲಾ ಭದ್ರತೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಸೇನೆ ಕೆಲಸಕ್ಕಾಗಿ ನಕಲಿ ದಾಖಲೆ- 9 ಜನರ ಬಂಧನ

    araga jnanendra

    ಓಮಿಕ್ರಾನ್‌ ಕುರಿತು ಮಾತನಾಡಿದ ಅವರು, ಹೊಸ ವೈರಸ್ ಬಗ್ಗೆ ಆಗುವುದು ಬೇಡ ಎಚ್ಚರಿಕೆ ಬೇಕು. ಗೈಡ್‌ಲೈನ್ ಏನ್ ಬರುತ್ತೋ, ಅದಕ್ಕೆ ನಮ್ಮ ಇಲಾಖೆ ಸಹಕಾರ ನೀಡುತ್ತದೆ. ಇದು ಸಾವು, ಬದುಕಿನ ಪ್ರಶ್ನೆ. ಪೊಲೀಸರು ಏನೆಲ್ಲಾ ಮಾಡಬೇಕು ಎಂದು ನಾವು ಸೂಚಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.

     

  • ಶ್ರೀಕಿ ವ್ಯಾಲೆಟ್‌ನಿಂದ ಬಿಟ್ ಕಾಯಿನ್ ನಾಪತ್ತೆಯಾಗಿಲ್ಲ – ಬೆಂಗಳೂರು ಪೊಲೀಸರಿಂದ ಸ್ಪಷ್ಟನೆ

    ಶ್ರೀಕಿ ವ್ಯಾಲೆಟ್‌ನಿಂದ ಬಿಟ್ ಕಾಯಿನ್ ನಾಪತ್ತೆಯಾಗಿಲ್ಲ – ಬೆಂಗಳೂರು ಪೊಲೀಸರಿಂದ ಸ್ಪಷ್ಟನೆ

    ಬೆಂಗಳೂರು: ಶ್ರೀಕಿ ಅಲಿಯಾಸ್‌ ಶ್ರೀಕೃಷ್ಣನ ವ್ಯಾಲೆಟ್‌ನಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ ಮತ್ತು ನಾಪತ್ತೆಯಾಗಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

    ಬಿಟ್‌ ಕಾಯಿನ್‌ ಹಗರಣ ಜೋರಾಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸರು ಈ ಸಂಬಂಧ ಸುದೀರ್ಘ ವಿವರಗಳಿರುವ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ.

    ಹೇಳಿಕೆಯಲ್ಲಿ ಏನಿದೆ?
    ಸಿಸಿಬಿ ನಿಷ್ಪಕ್ಷತವಾಗಿ ತನಿಖೆ ಮಾಡಿದ್ದು, ಸಿಸಿಬಿ ತನಿಖೆಯ ತಿರುಚಿದ ವರದಿಗಳು ಬಹಿರಂಗವಾಗುತ್ತಿದೆ. 2020ರ ಏಪ್ರಿಲ್‌ 11 ರಂದು ಡಾರ್ಕ್‌ನೆಟ್‌ ಮೂಲಕ ಸಂಗ್ರಹಿಸಲಾದ ಮಾಹಿತಿ ಪ್ರಕಾರ ಒಬ್ಬನನ್ನು ವಶಕ್ಕೆ ಪಡೆಯಲಾಗುತ್ತದೆ.

    ಆರೋಪಿಯಿಂದ 500 ಗ್ರಾಂ ಗಾಂಜಾ ವಶಕ್ಕೆ ಪಡೆದ ಬಳಿಕ ನಾರ್ಕೋಟಿಕ್ಸ್ ಡ್ರಗ್ಸ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್‌) ಕಾಯ್ದೆ ಅಡಿ ಕೆ.ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತದೆ. ನಂತರ ಹೆಚ್ಚಿನ ತನಿಖೆಯ ವೇಳೆ ಶ್ರೀಕಿ ಸೇರಿದಂತೆ 10 ಜನರ ಬಂಧನ ಮಾಡಲಾಯಿತು. ವಿಚಾರಣೆ ಸಂಬಂಧ ಕ್ರಿಪ್ಟೋ ಕರೆನ್ಸಿ ವೆಬ್ ಸೈಟ್ ಗಳನ್ನ ಹ್ಯಾಕ್ ಮಾಡಿದ್ದ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿರುತ್ತಾರೆ. ಇದೊಂದು ಗಂಭೀರ ಪ್ರಕರಣ ಎಂದು ಪರಿಗಣಿಸಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲು ಮಾಡಲಾಗುತ್ತದೆ. ಇದನ್ನೂ ಓದಿ: ಬಾರ್ ವಿರುದ್ಧ ರೊಚ್ಚಿಗೆದ್ದ ಮಹಿಳಾ ಮಣಿಗಳು – ಕುರ್ಚಿಗಳು ಪೀಸ್ ಪೀಸ್

    ಶ್ರೀಕಿ ವ್ಯಾಲೆಟ್‌ನಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ ಮತ್ತು ನಾಪತ್ತೆಯಾಗಿಲ್ಲ. ಕಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ ಖಾತೆ ತೆರೆಯುವ ಅಗತ್ಯ ಇದ್ದ ಕಾರಣ ಸರ್ಕಾರದ ಅನುಮತಿ ಪಡೆದು ಖಾತೆಯನ್ನು ತೆರಯಲಾಗಿತ್ತು. ಬಿಟ್ ಕಾಯಿನ್ ಗುರುತಿಸುವ ವಶಪಡಿಸಿಕೊಳ್ಳುವ ಪಕ್ರಿಯೆ ಸಂದರ್ಭದಲ್ಲಿ ಶ್ರೀಕಿ ಬಿಟ್ ಕಾಯಿನ್ ವ್ಯಾಲೆಟ್ ತೋರಿಸಿದ್ದು ಅದರಲ್ಲಿ 31.8 ಬಿಟ್ ಕಾಯಿನ್ ಇದ್ದವು. ಸೈಬರ್ ತಜ್ಞರು ಹಾಗೂ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲಿ ಪಂಚನಾಮೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ನನ್ನ ಕುಟುಂಬಕ್ಕೆ ಭದ್ರತೆ ಕೊಡಿ ಎಂದು ಮೋದಿಗೆ ಮನವಿ ಸಲ್ಲಿಸಿದ ಪಾಕ್ ಕ್ರಿಕೆಟಿಗನ ಪತ್ನಿ

    ಬಿಟ್ ಕಾಯಿನ್ ಗಳನ್ನು ಪೊಲೀಸ್ ಖಾತೆಗೆ ವರ್ಗ ಮಾಡಿಕೊಳ್ಳಲು ನ್ಯಾಯಾಲಯದ ಅನುಮತಿ ಪಡೆದುಕೊಳ್ಳಲಾಗಿದೆ. ಶ್ರೀಕಿಯ ತನ್ನಲ್ಲಿದ್ದ ಎಲ್ಲ ವ್ಯಾಲೆಟ್‌ ತೋರಿಸಿದಾಗ 186.811 ಬಿಟ್ ಕಾಯಿನ್ ಪತ್ತೆ ಆಗಿದೆ. ವಿಚಾರಣೆ ವೇಳೆಯಲ್ಲಿ ಆರೋಪಿ ಇದು ನನ್ನ ವೈಯಕ್ತಿಕ ಖಾತೆ ಎಂದು ತಪ್ಪೊಪ್ಪಿಕೊಂಡಿದ್ದ. ಶ್ರೀಕಿ ಬಳಿ ಖಾಸಗಿ ಪಾಸ್‍ವರ್ಡ್ ಇರಲಿಲ್ಲ ಎಂದು ಸೈಬರ್ ತಜ್ಞರ ಸ್ಪಷ್ಟನೆ ನೀಡಿದ್ದು ಎಲ್ಲಾ ದಾಖಲೆಗಳನ್ನು ರೆಕಾರ್ಡ್‌ ಮಾಡಲಾಗಿದೆ. ನುರಿತ ಅಧಿಕಾರಿಗಳಿಂದ ತನಿಖೆ ಮಾಡಲಾಗಿದ್ದು, ಗಂಭೀರ ಪ್ರಕರಣವಾದ ಹಿನ್ನೆಲೆಯಲ್ಲಿ ಮಾಹಿತಿಯನ್ನು ಸಿಬಿಐ, ಇಡಿಗೆ ಕಳಿಸಿಕೊಡಲಾಗಿದೆ. ವಿಚಾರಣೆ ಸಮಯದಲ್ಲಿ ಹಲವು ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡಿರುವುದಾಗಿ ಶ್ರೀಕಿ ಒಪ್ಪಿಕೊಂಡಿದ್ದಾನೆ. ಹೀಗಾಗಿ ಹೆಚ್ಚಿನ ತನಿಖೆಗೆಗಾಗಿ ಮಾಹಿತಿಯನ್ನು ಇಂಟರ್‌ಪೋಲ್‌ಗೆ ನೀಡಲಾಗಿದೆ.

    ಶ್ರೀಕಿಗೆ ಪೊಲೀಸ್ ಕಸ್ಟಡಿಯಲ್ಲಿ ಡ್ರಗ್ಸ್ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪವನ್ನು ತನಿಖಾಧಿಕಾರಿ ಅಲ್ಲಗೆಳೆದಿದ್ದರು. ಆದರೆ ನ್ಯಾಯಾಲಯ ಮೆಡಿಕಲ್ ಟೆಸ್ಟ್ ಮಾಡಿಸುವಂತೆ ಸೂಚನೆ ನೀಡಿತ್ತು. ವಿಕ್ಟೋರಿಯಾ ಕೋವಿಡ್ ಆಸ್ಪತ್ರೆಯಾಗಿದ್ದರಿಂದ ಅಲ್ಲಿ ಪರೀಕ್ಷೆ ಮಾಡಲು ಆಗಿರಲಿಲ್ಲ. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಯಿತು. ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‍ಎಸ್‍ಎಲ್‍) ಕಳುಹಿಸಲಾಗಿತ್ತು. ಎಫ್‍ಎಸ್‍ಎಲ್ ಡ್ರಗ್ಸ್‌ ಸೇವಿಸಿಲ್ಲ ಎಂದು ನೆಗೆಟಿವ್ ರಿಪೋರ್ಟ್ ನೀಡಿತ್ತು. ಅಲ್ಲದೇ ಹೆಬಿಯಸ್ ಕಾರ್ಪಸ್ ಹಾಕಿದ್ದವರ ಮೇಲೂ ನ್ಯಾಯಾಲಯ 5 ಸಾವಿರ ರೂ. ದಂಡ ವಿಧಿಸಿದೆ. ಸದ್ಯಕ್ಕೆ ಮೂರು ಕೇಸ್ ಗಳ ವಿಚಾರಣೆ ನಡೆದಿದ್ದು ಎಲ್ಲಾ ಕೇಸ್ ಗಳು ಪಾರದರ್ಶಕವಾಗಿದೆ. ಶ್ರೀಕಿ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂರು ಪ್ರಕರಣಗಳನ್ನು ಪಾರದರ್ಶಕವಾಗಿ ತನಿಖೆ ಮಾಡಲಾಗುತ್ತಿದೆ.

  • ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಬಂಧನ – ಪೊಲೀಸರಿಗೆ ಸುಧಾಕರ್ ಮೆಚ್ಚುಗೆ

    ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಬಂಧನ – ಪೊಲೀಸರಿಗೆ ಸುಧಾಕರ್ ಮೆಚ್ಚುಗೆ

    -ಗ್ಯಾಂಗ್ ರೇಪ್ ಪ್ರಕರಣ ನಡೆದಿದ್ದು ದುರದೃಷ್ಟಕರ

    ಚಿಕ್ಕಬಳ್ಳಾಪುರ: ಕರ್ನಾಟಕ ಒಳ್ಳೆಯ ರಾಜ್ಯ ಎಂಬುದಕ್ಕೆ ಹೆಸರು ವಾಸಿ ಇಂತಹ ರಾಜ್ಯದಲ್ಲಿ ಈ ಘಟನೆ ನಡೆದದ್ದು ದುರದೃಷ್ಟಕರ ಸಂಗತಿಯಾಗಿದೆ ಎಂದು ಹೇಳುವುದರ ಜೊತೆಗೆ, ಆರೋಪಿಗಳನ್ನು ಬಂಧಿಸಿದ ಕರ್ನಾಟಕ ಪೊಲೀಸರ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಸಂಬಂಧ ಸಿಎಂ ಹಾಗೂ ಹೋಂ ಮಿನಿಸ್ಟರ್ ಮಾತನಾಡಿದ್ದಾರೆ. ಬೇರೆಯವರು ಮಾತನಾಡಿ ಗೊಂದಲದ ಗೂಡಾಗೋದು ಬೇಡ. ದೇಶದಲ್ಲೇ ಕರ್ನಾಟಕ ಪೊಲೀಸರಿಗೆ ಒಳ್ಳೆಯ ಹೆಸರಿದೆ. ದಕ್ಷ ಹಾಗೂ ಪರಿಣಿತರು. ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಇನ್ನೂ ಮುಂದೆ ಇಂತಹ ಘಟನೆಗಳು ನಡೆಯದಂತೆ ನಮ್ಮ ಸರ್ಕಾರ ಗಟ್ಟಿ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.

    ಕೋಲಾರ-ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಿಗೆ ಯಾವ ಮೂಲೆಗಳಿಂದ ನೀರು ತರುತ್ತೀವಿ ಎನ್ನುವುದನ್ನು ಈಗಲೇ ಹೇಳಲ್ಲ ಕಾದು ನೋಡಿ. ಬಸವರಾಜ್ ಬೊಮ್ಮಾಯಿಯವರಿಗೆ ನೀರಾವರಿ ವಿಚಾರದಲ್ಲಿ ಆಳವಾದ ಜ್ಞಾನ ಇದೆ. ನಾನು ಈಗಾಗಲೇ ಎತ್ತಿನಹೊಳೆ ಸಂಬಂಧ ಅವರ ಜೊತೆ ಚರ್ಚೆ ಮಾಡಿದ್ದೇನೆ. ಆದ್ಯತೆಯ ಮೇರೆಗೆ ಈ ಜಿಲ್ಲೆಗಳಿಗೆ ಆದಷ್ಟು ಬೇಗ ನೀರು ತರುವ ಕೆಲಸ ಆಗಲಿದೆ ಎಂದು ಭರವಸೆಯ ಮಾತಗಳನ್ನಾಡಿದ್ದಾರೆ. ಇದನ್ನೂ ಓದಿ:ಅತ್ಯಾಚಾರ ಆರೋಪಿಗಳನ್ನು ಎನ್‍ಕೌಂಟರ್ ಮಾಡಬೇಕು: ಸಾ.ರಾ ಮಹೇಶ್

    ಬಸವರಾಜ್ ಬೊಮ್ಮಾಯಿಯವರು ಹಾಗೂ ನಾನು ದೆಹಲಿಗೆ ಹೋದಾಗ ಕೇಂದ್ರ ಆರೋಗ್ಯ ಸಚಿವರ ಜೊತೆ ಪ್ರತಿದಿನ ರಾಜ್ಯಕ್ಕೆ 5 ಲಕ್ಷ ಕೊರೊನಾ ಲಸಿಕೆ ಕೊಡಲು ಮಾತನಾಡಿಕೊಂಡು ಬಂದಿದ್ದೇವೆ. ರಾಜ್ಯದಲ್ಲಿ ಈಗಾಗಲೇ 4 ಕೋಟಿ ಕೊರೊನಾ ಲಸಿಕೆ ನೀಡಲಾಗಿದೆ. ಪ್ರತಿದಿನ ಕನಿಷ್ಠ 5 ಲಕ್ಷ ಕೊರೊನಾ ವ್ಯಾಕ್ಸಿನ್ ಹಾಕಿಕೊಳ್ಳಲಾಗಿದೆ. ಹೀಗೆ ಮಾಡಿದರೆ ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಲಸಿಕೆ ಹಾಕಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ 5 ಲಕ್ಷ ರೂ. ಬಹುಮಾನ

    ಇನ್ನು ಮುಂದೆ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಮಾಡಲಿದ್ದು, ಸಿಎಂ ಕೈಯಲ್ಲಿ ಉದ್ಘಾಟನೆ ಮಾಡಿಸಿಲಿದ್ದೇವೆ. ಅಂದು 15 ರಿಂದ 30 ಲಕ್ಷ ಕೊರೊನಾ ವ್ಯಾಕ್ಸಿನ್ ಹಾಕುವ ಗುರಿ ಇದೆ. ಬೆಂಗಳೂರಿನ ಸ್ಲಂಗಳಲ್ಲಿ ಇರುವವರಿಗೆ ಬಹಳ ಪ್ರಾಮುಖ್ಯತೆ ನೀಡಲಾಗುವುದು. ಶುಕ್ರವಾರ ಬೆಂಗಳೂರಿನಲ್ಲಿ ಒಂದು ಕೋಟಿ ಲಸಿಕೆ ತಲುಪಿದ್ದೇವೆ. ಎರಡು ಡೋಸ್ ಪಡೆದವರಲ್ಲಿ 2 ತಿಂಗಳಲ್ಲಿ ಬೆಂಗಳೂರು ನಗರ ದೇಶದಲ್ಲಿ ಮೊದಲ ಸ್ಥಾನ ಅಲಂಕರಿಸಲಿದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಆ ದೃಷ್ಟಿ, ಆ ದಾರಿಯಲ್ಲಿ, ಹೋಗುತ್ತಿದ್ದು, ಬೆಂಗಳೂರಿಗೆ ಹೆಚ್ಚಿನ ಪ್ರಾಮಖ್ಯತೆ ನೀಡಲು ಸಿಎಂ ಸೂಚನೆ ನೀಡಿದ್ದಾರೆ ಎಂದಿದ್ದಾರೆ.ಇದನ್ನೂ ಓದಿ:ವೇಷಧರಿಸಿ 72 ಲಕ್ಷ ರೂ. ದಾನ ಮಾಡಿದ್ದ ರವಿ ಕಟಪಾಡಿ ಈ ಬಾರಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಪ್ರತ್ಯಕ್ಷ

  • ಕರ್ನಾಟಕ ಪೊಲೀಸರ ಹೆಸರಿನಲ್ಲಿ ವ್ಯಕ್ತಿಯ ಅಪಹರಣಕ್ಕೆ ಯತ್ನ

    ಕರ್ನಾಟಕ ಪೊಲೀಸರ ಹೆಸರಿನಲ್ಲಿ ವ್ಯಕ್ತಿಯ ಅಪಹರಣಕ್ಕೆ ಯತ್ನ

    ಬೆಂಗಳೂರು: ಅನಂತಪುರ ಜಿಲ್ಲೆಯಲ್ಲಿ ಕರ್ನಾಟಕ ಪೊಲೀಸರೆಂದು ಹೇಳಿ ವ್ಯಕ್ತಿಯ ಅಪಹರಣಕ್ಕೆ ಯತ್ನಿಸಿರುವ ಘಟನೆ ನಡೆದಿದೆ.

    ಅನಂತಪುರ ಜಿಲ್ಲೆಯ ಬಿಂದೇಲ ಕಾಲೋನಿ ನಿವಾಸಿ ಸಿರಿವಲ್ಟಿ ವನ್ನೂರು ಎಂಬಾತನ ಅಪಹರಣಕ್ಕೆ ಯತ್ನ ನಡೆದಿದೆ. ಆದ್ರೆ ಸ್ಥಳೀಯರ ಸಹಾಯದಿಂದ ಅಪಹರಣ ಯತ್ನ ವಿಫಲವಾಗಿದೆ. ಅಪಹರಣಕ್ಕೆ ಕರ್ನಾಟಕದ ಇನ್ನೋವಾ ಕಾರು ಬಳಸಿರುವುದು ಪತ್ತೆಯಾಗಿದೆ.

    ಸತೀಶ್ ಹಾಗೂ ಶ್ರೀಧರ್ ಎಂಬುವರು ಕರ್ನಾಟಕ ಪೊಲೀಸರೆಂದು ಹೇಳಿಕೊಂಡು ಅಪಹರಣಕ್ಕೆ ಯತ್ನಿಸಿದ್ದಾರೆ. ಅಪಹರಣಕ್ಕೆ ಯತ್ನಿಸಿದ ವೇಳೆ ಆರೋಪಿಗಳ ಬಳಿ ಮೊಬೈಲ್ ಒಂದು ಸಿಕ್ಕಿದ್ದು, ಕರ್ನಾಟಕ ಪೊಲೀಸ್ ಎಂದು ಹೇಳಿರೋದು ರೆಕಾರ್ಡ್ ಆಗಿದೆ.

    ಕರ್ನಾಟಕ ಪೊಲೀಸರೆಂದು ಹೆಸರೇಳಿರುವ ವ್ಯಕ್ತಿಯ ನಕಲಿ ಗುರುತಿನ ಚೀಟಿ ಹಾಗೂ ಆತನ ಮೊಬೈಲ್‍ನಲ್ಲಿರುವ ಆಡಿಯೋ ನೀಡಿದ್ರೂ ಪೊಲೀಸರು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅನಂತಪುರ ಮಾಜಿ ಶಾಸಕ ಆರ್. ಪ್ರಭಾಕರ್ ಚೌಧರಿ ಕೂಡ ಆರೋಪಿಸಿದ್ದಾರೆ.

    ಅಪಹರಣದ ಹಿಂದೆ ಅನಂತಪುರ ಜಿಲ್ಲೆಯ ರೌಡಿಶೀಟರ್ ಶಿರಿಶಾಲ ಶ್ರೀನಿವಾಸುಲು ಅಲಿಯಾಸ್ ಬಿಂದಲ ಸೀನ ಎಂಬಾತನ ಕೈವಾಡವಿದೆ ಎಂದು ಅಪಹರಣ ಯತ್ನಕ್ಕೆ ಒಳಗಾಗಿದ್ದ ಸಿರಿವಲ್ಟಿ ವನ್ನೂರು ಆರೋಪಿಸಿದ್ದಾರೆ. ಬಿಂದಲ ಸೀನ ಅನಂತಪುರದಲ್ಲಷ್ಟೇ ಅಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಾಬಸ್‍ಪೇಟೆಯಲ್ಲಿ ಖೋಟಾನೋಟು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ.

  • ಬೆಂಗಳೂರಿಗೆ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ರವಿ ಪೂಜಾರಿ

    ಬೆಂಗಳೂರಿಗೆ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ರವಿ ಪೂಜಾರಿ

    -ಮಡಿವಾಳದಲ್ಲಿ ಸ್ಪೆಷಲ್ ಡ್ರಿಲ್

    ಬೆಂಗಳೂರು: ಕೊಲೆ, ಸುಲಿಗೆ, ಜೀವ ಬೆದರಿಕೆ ಪ್ರಕರಣಗಳಲ್ಲಿ ಕಳೆದ 30 ವರ್ಷಗಳಿಂದ ಪೊಲೀಸರಿಗೆ ಬೇಕಿದ್ದ ಭೂಗತ ಲೋಕದ ಪಾತಕಿ ರವಿ ಪೂಜಾರಿಯನ್ನು ಬೆಂಗಳೂರಿಗೆ ಕರೆ ತರಲಾಗಿದೆ.

    ಸೆನೆಗಲ್ ದೇಶದಲ್ಲಿ ಕಳೆದ ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದ ರವಿ ಪೂಜಾರಿಯನ್ನು ಭಾರತಕ್ಕೆ ಹಸ್ತಾಂತರ ಮಾಡಿಸಲು ಆಗಿನಿಂದಲೇ ಪ್ರಯತ್ನಗಳು ನಡೆದಿದ್ದವು. ಆದರೆ ಉಭಯ ದೇಶಗಳ ಮಧ್ಯೆ ಹಸ್ತಾಂತರ ಒಪ್ಪಂದ ಏರ್ಪಡದ ಹಿನ್ನೆಲೆಯಲ್ಲಿ ರವಿ ಪೂಜಾರಿ ಹಸ್ತಾಂತರ ವಿಳಂಬವಾಗಿತ್ತು. ಕಳೆದ ವಾರ ಹಸ್ತಾಂತರ ಪ್ರಕ್ರಿಯೆಗೆ ಇದ್ದ ತೊಡಕುಗಳು ನಿವಾರಣೆ ಆದ ಹಿನ್ನೆಲೆಯಲ್ಲಿ ಕೋರ್ಟ್ ಎರಡು ದಿನಗಳ ಹಿಂದಷ್ಟೇ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ರಾತ್ರಿ 12.40ರ ವಿಮಾನದಲ್ಲಿ ರವಿ ಪೂಜಾರಿಯನ್ನು ಕರೆ ತರಲಾಗಿದ್ದು, ಮಡಿವಾಳದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ.

    ಇಂದು ರವಿ ಪೂಜಾರಿಯನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಶಾಸಕರಾದ ತನ್ವೀರ್ ಸೇಠ್, ಹೆಚ್‍ಎಂ ರೇವಣ್ಣ, ಮಾಜಿ ಶಾಸಕ ಅನಿಲ್ ಲಾಡ್‍ಗೆ ಹಣಕ್ಕೆ ಬೆದರಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದ. ಮಲ್ಪೆ ಮೂಲದ ಈ ಗ್ಯಾಂಗ್‍ಸ್ಟರ್ ವಿರುದ್ಧ ಮಂಗಳೂರಿನಲ್ಲಿ 39, ಬೆಂಗಳೂರಿನಲ್ಲಿ 38 ಕೇಸ್ ಇವೆ.

    ಮಲ್ಪೆ ಮೂಲದ ರವಿ ಪೂಜಾರಿ ಮುಂಬೈನಲ್ಲಿಯೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದನು. ಬಾಲಾ ಜ್ವಾಲೆಯನ್ನು ಕೊಲೆ ಮಾಡಿದ್ದ ರವಿ ಪೂಜಾರಿ ಭೂಗತ ಲೋಕದಲ್ಲಿ ಪ್ರವರ್ಧಮಾನಕ್ಕೆ ಬಂದು, ಭೂಗತ ಪಾತಕಿ ಚೋಟಾ ರಾಜನ್ ತಂಡಕ್ಕೆ ಸೇರ್ಪಡೆಯಾಗಿದ್ದನು. 1990ರಲ್ಲಿ ದುಬೈಗೆ ಎಸ್ಕೇಪ್ ಆಗಿದ್ದ ರವಿ ಪೂಜಾರಿ ಅಲ್ಲಿಂದಲೇ ಬಾಲಿವುಡ್ ನಟರಾದ ಶಾರೂಖ್ ಖಾನ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ನಿರ್ದೇಶಕ ಕರಣ್ ಜೋಹಾರ್, ನಿರ್ಮಾಪಕ ರಾಕೇಶ್ ರೋಷನ್‍ಗೆ ಬೆದರಿಕೆ ಹಾಕಿದ್ದನು. ತನ್ನ ಹಿಂಬಾಲಕರ ಮೂಲಕ ಮುಂಬೈನಲ್ಲಿ ಓಂಪ್ರಕಾಶ್ ಕುಕ್ರೆಜಾ ಕೊಲೆ, ಬಿಲ್ಡರ್ಸ್ ಕೊಲೆಗೆ ಯತ್ನಿಸಿದ್ದನು.

  • 2005ರ ಬೆಂಗಳೂರು ಐಐಎಸ್‍ಸಿ ಉಗ್ರ ದಾಳಿ – ತ್ರಿಪುರದಲ್ಲಿ ಶಂಕಿತನ ಸೆರೆ

    2005ರ ಬೆಂಗಳೂರು ಐಐಎಸ್‍ಸಿ ಉಗ್ರ ದಾಳಿ – ತ್ರಿಪುರದಲ್ಲಿ ಶಂಕಿತನ ಸೆರೆ

    ಬೆಂಗಳೂರು/ತ್ರಿಪುರ: 2005ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಐಐಎಸ್ಸಿ ಉಗ್ರ ದಾಳಿಯ ಪ್ರಮುಖ ಆರೋಪಿಯನ್ನು ಕರ್ನಾಟಕ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

    ತ್ರಿಪುರದ ಅಗರ್ತಲ ನಗರ ಹೊರವಲಯದ ಜೋಗೇಂದ್ರ ನಗರದಲ್ಲಿ 37 ವರ್ಷದ ಹಬೀಬ್ ಮಿಯಾ ಎಂಬಾತನನ್ನು ಬಂಧಿಸಿರುವುದಾಗಿ ಕರ್ನಾಟಕ ಪೊಲೀಸರು ಖಚಿತಪಡಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ರಾಜ್ಯದ ಪೊಲೀಸರಿಗೆ ತ್ರಿಪುರ ಪೊಲೀಸರು ನೆರವು ನೀಡಿದ್ದಾರೆ.

    ಈ ವಿಚಾರವನ್ನು ಐಎಎನ್‍ಎಸ್ ಸುದ್ದಿ ಸಂಸ್ಥೆಗೆ ಖಚಿತ ಪಡಿಸಿರುವ ತ್ರಿಪುರ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಕರ್ನಾಟಕ ಪೊಲೀಸರು ತ್ರಿಪುರ ಪೊಲೀಸರ ನೆರವಿನೊಂದಿಗೆ ಶಂಕಿತ ಉಗ್ರ ಹಬೀಬ್ ಮಿಯಾನನ್ನು ಬಂಧಿಸಿದ್ದಾರೆ ಎಂದು ಖಚಿತಪಡಿಸಿದ್ದಾರೆ.

    ಹಬೀಬ್ ಮಿಯಾ 2015ರಲ್ಲಿ ಬೆಂಗಳೂರಿನ ಐಐಎಸ್‍ಸಿಯಲ್ಲಿ ನಡೆದ ದಾಳಿಯಲ್ಲಿ ಪೊಲೀಸರಿಗೆ ಬೇಕಾಗಿದ್ದ. ಈತನನ್ನು ಶನಿವಾರ ಇಲ್ಲಿನ ಸ್ಥಳೀಯ ಕೋರ್ಟ್‍ಗೆ ಹಾಜರುಪಡಿಸಿ ಬೆಂಗಳೂರಿಗೆ ಕರೆದೊಯ್ಯಲಿದ್ದಾರೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

    2005ರ ಡಿಸೆಂಬರ್ 28ರಂದು ನಡೆದ ಐಐಎಸ್‍ಸಿ ದಾಳಿಯಲ್ಲಿ ಮ್ಯಾಥ್ಸ್ ನಿವೃತ್ತ ಪ್ರೊಫೆಸರ್ ಮುನೀಷ್ ಚಂದ್ರ ಪುರಿ ಸಾವನ್ನಪ್ಪಿದ್ದರು. ಅಲ್ಲದೆ ಈ ಘಟನೆಯಲ್ಲಿ ಓರ್ವ ಮಹಿಳೆ ಸೇರಿ ನಾಲ್ವರು ಗಾಯಗೊಂಡಿದ್ದರು.