Tag: Karnool

  • ಡ್ರೈವರ್‌, ಕಂಡಕ್ಟರ್ ಬೆಂಕಿ ನಂದಿಸ್ತಿದ್ದರು, 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡ್ವಿ – ಪ್ರಾಣಾಪಾಯದಿಂದ ಪಾರಾದ ಆಕಾಶ್ ಮಾತು

    ಡ್ರೈವರ್‌, ಕಂಡಕ್ಟರ್ ಬೆಂಕಿ ನಂದಿಸ್ತಿದ್ದರು, 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡ್ವಿ – ಪ್ರಾಣಾಪಾಯದಿಂದ ಪಾರಾದ ಆಕಾಶ್ ಮಾತು

    ಬಳ್ಳಾರಿ: ಡ್ರೈವರ್‌, ಕಂಡಕ್ಟರ್ ಬೆಂಕಿ ನಂದಿಸುತ್ತಿದ್ದರು, ನಾವು 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡೆವು ಎಂದು ಕರ್ನೂಲ್ ಬಸ್ ಅಪಘಾತದಲ್ಲಿ (Karnool Bus Fire) ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕ ಆಕಾಶ್ ಭಯಾನಕ ದೃಶ್ಯವನ್ನು ಬಿಚ್ಚಿಟ್ಟಿದ್ದಾರೆ.

    `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಾನು ಗುರುವಾರ (ಅ.23) ರಾತ್ರಿ 10:30ಕ್ಕೆ ಹೈದರಾಬಾದ್‌ನಲ್ಲಿ ಬಸ್ ಹತ್ತಿ, ಬೆಂಗಳೂರಿಗೆ ಹೊರಟಿದ್ದೆವು. ಮಧ್ಯರಾತ್ರಿ 2:35ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾವೆಲ್ಲ ಮಲಗಿಕೊಂಡಿದ್ದೆವು. ಆಗ ಬೈಕ್ ಡಿಕ್ಕಿ ಹೊಡೆದ ಶಬ್ದವೊಂದು ಕೇಳಿಸಿತು. ಆ ಶಬ್ದಕ್ಕೆ ಪಕ್ಕದಲ್ಲಿದ್ದ ಅಂಕಲ್ ಒಬ್ಬರು ನಮ್ಮನ್ನು ಎಬ್ಬಿಸಿದ್ದರು. ಎದ್ದು ನೋಡಿದಾಗ ಬಸ್ಸಿನ ಎಡಗಡೆ ಭಾಗ ಹಾಗೂ ರಸ್ತೆಯ ಮೇಲೆ ಬೆಂಕಿ ಹೊತ್ತಿಕೊಂಡಿತ್ತು. ಡೀಸೆಲ್ ಚೆಲ್ಲಿತ್ತಾ? ಪೆಟ್ರೋಲ್ ಚೆಲ್ಲಿತ್ತಾ? ಗೊತ್ತಿಲ್ಲ. ನಮಗೆ ಹೊರಬರೋಕೆ ಕೇವಲ 5 ಸೆಕೆಂಡ್ ಮಾತ್ರ ಇತ್ತು. ಆ ಸಮಯದಲ್ಲಿ ಡ್ರೈವರ್‌ ಹಾಗೂ ಕಂಡಕ್ಟರ್ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದರು. ಅವರೇನಾದರೂ ಎಬ್ಬಿಸಿದ್ರೆ ಹೆಚ್ಚಿನ ಜನ ಆಚೆ ಬರಬಹುದಿತ್ತು ಎಂದು ಹೇಳಿದರು.ಇದನ್ನೂ ಓದಿ: Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ

    ನಮ್ಮನ್ನು ಎಬ್ಬಿಸಿದ ಅಂಕಲ್ ಡ್ರೈವರ್‌ ಸೀಟಿನ ಪಕ್ಕದ ಕಿಟಿಕಿಯಿಂದ ಆಚೆ ಹೋದರು. ನಾನು ಆ ಕಿಟಕಿಯನ್ನು ಕೈಯಿಂದ ಒಡೆದು, ಕಾಲಿಂದ ಒದ್ದು ಗಾಜು ಬಿಳಿಸಿ ಆಚೆ ಬಂದೆ. ನನ್ನ ಜೊತೆ ಮೂವರು ಆಚೆ ಬಂದರು. ಹೊರಗಡೆ ಬಂದ 5 ರಿಂದ 10 ಸೆಕೆಂಡ್‌ನಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಯಿತು. ಆ ಸಮಯದಲ್ಲಿ ನಾವು ಯಾರಿಗೂ ಸಹಾಯ ಮಾಡುವ ಸ್ಥಿತಿಯಲ್ಲಿರಲಿಲ್ಲ. ಇದನ್ನೆಲ್ಲ ನೋಡಿದರೆ ನಮಗೆ ಪುನರ್ಜನ್ಮ ಸಿಕ್ಕಿದಂತಾಗಿದೆ ಎಂದರು.

    ಏನಿದು ಅವಘಡ?
    ಆಂಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅವಘಡ ಸಂಭವಸಿದೆ. ದುರಂತದಲ್ಲಿ 23 ಮಂದಿ ಪ್ರಯಾಣಿಕರು ಪಾರಾದರೂ 19 ಮಂದಿ ಜೀವಂತವಾಗಿ ಸುಟ್ಟು ಹೋಗಿದ್ದಾರೆ. ಪ್ರಯಾಣಿಕರನ್ನು ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಪ್ರಯಾಣಿಕರು ಹೈದರಾಬಾದ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ

    ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿದವು. ರಕ್ಷಣಾ ತಂಡಗಳು ಸ್ಥಳಕ್ಕೆ ಬರುವಷ್ಟರಲ್ಲಿ ಬಸ್ಸು ಬಹುತೇಕ ಸುಟ್ಟುಹೋಗಿತ್ತು. ಈಗ ಅಧಿಕಾರಿಗಳು ಮೃತ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವ ಕೆಲಸ ಆರಂಭಿಸಿದ್ದಾರೆ. ಸ್ಲೀಪರ್ ಕೋಚ್ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

  • ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು

    ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು

    -ಹನಿಮೂನ್ ಹತ್ಯೆಯಂತೆ ಕೊಲ್ಲಲು ನಿರ್ಧರಿಸಿದ್ದ ಆರೋಪಿ ಐಶ್ವರ್ಯ
    -ಕೊಲೆ ಬಳಿಕ 20 ಲಕ್ಷ ಸಾಲ ಪಡೆದು ಲಡಾಖ್, ಅಂಡಮಾನ್ ಹೋಗುವ ಪ್ಲ್ಯಾನ್‌ ಮಾಡಿದ್ದ ಜೋಡಿ

    ಹೈದರಾಬಾದ್: ಮದುವೆಯಾದ ಒಂದು ತಿಂಗಳ ಬಳಿಕ ಪತ್ನಿ, ಆಕೆಯ ಪ್ರಿಯಕರ ಹಾಗೂ ಪತ್ನಿಯ ತಾಯಿ ಸೇರಿಕೊಂಡು ಗಂಡನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ಸಂಗತಿಗಳು ಬಯಲಾಗುತ್ತಿವೆ.

    ಹೌದು, ಕೊಲೆಗೂ ಮುನ್ನ ಆರೋಪಿ ಐಶ್ವರ್ಯ ಹಾಗೂ ಆಕೆಯ ಪ್ರಿಯಕರ ತಿರುಮಲ್ ರಾವ್ (Tirumal Rao) ಸೇರಿಕೊಂಡು ಮೇಘಾಲಯ ಹನಿಮೂನ್ ಹತ್ಯೆಯ ಕುರಿತು ಚರ್ಚಿಸಿದ್ದರು. ಈ ಕುರಿತು ತನಿಖೆ ವೇಳೆ ಆರೋಪಿಗಳಿಬ್ಬರು ಮಾಹಿತಿ ಬಿಚ್ಚಿಟ್ಟಿದ್ದು, ಪ್ರಾರಂಭದಲ್ಲಿ ಮೇಘಾಲಯದ (Meghalaya) ರಾಜಾ ರಘುವಂಶಿಯ (Raja Raghuvanshi) ಕೊಲೆ ನಡೆದ ರೀತಿಯಲ್ಲಿ ತೇಜೇಶ್ವರ್‌ನ್ನು ಕೊಲ್ಲಲು ನಿರ್ಧರಿಸಿದ್ದರು ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆ – ಬ್ಯಾಂಕ್ ಉದ್ಯೋಗಿ ಜೊತೆಗಿನ ಅಫೇರ್ ಕಾರಣ; ರಹಸ್ಯ ಬಯಲು

    ಪ್ಲ್ಯಾನ್‌ ಏನಿತ್ತು?
    ಮೊದಲಿಗೆ ಐಶ್ವರ್ಯ ಹಾಗೂ ತೇಜೇಶ್ವರ್ ಇಬ್ಬರು ಸೇರಿಕೊಂಡು ಬೈಕ್‌ನಲ್ಲಿ ತೆರಳುತ್ತಾರೆ. ಮಾರ್ಗಮಧ್ಯೆ ಹಂತಕರು ಅವರಿಬ್ಬರನ್ನು ಅಡ್ಡಗಟ್ಟಿ, ತೇಜೇಶ್ವರ್‌ನನ್ನು ಕೊಲೆ ಮಾಡುತ್ತಾರೆ. ಬಳಿಕ ಐಶ್ವರ್ಯ ಪ್ರಿಯಕರ ತಿರುಮಲ್ ರಾವ್ ಜೊತೆ ಅಲ್ಲಿಂದ ಪರಾರಿಯಾಗುತ್ತಾಳೆ. ಇದರಿಂದ ಪೊಲೀಸರು ಗೊಂದಲಕ್ಕೊಳಗಾಗಿ, ಯಾರೋ ಕೊಲೆ ಮಾಡಿ, ಐಶ್ವರ್ಯಳನ್ನು ಕಿಡ್ನ್ಯಾಪ್‌ ಮಾಡಿದ್ದಾರೆ ಎಂದುಕೊಳ್ಳುತ್ತಾರೆ ಎಂದು ಪ್ಲ್ಯಾನ್‌ ಮಾಡಿದ್ದರು. ಇವರಿಬ್ಬರು ಪ್ಲ್ಯಾನ್‌ ಮಾಡಿದಂತೆಯೇ ಮೇಘಾಲಯದಲ್ಲಿ ರಾಜಾ ರಘುವಂಶಿಯ ಕೊಲೆ ನಡೆದಿತ್ತು. ಆದರೆ ಮೇಘಾಲಯ ಪೊಲೀಸರ ತನಿಖೆ ವೇಳೆ ಸೋನಮ್ ಸಿಕ್ಕಿಬಿದ್ದಳು, ಕೊನೆಗೆ ಪೊಲೀಸರ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಳು. ಹೀಗಾಗಿ ತಮ್ಮ ಕೇಸ್‌ಲ್ಲಿ ಕೊನೆಗೆ ಹೀಗಾಗಬಹುದು ಎಂಬ ಭಯದಿಂದ ಈ ಪ್ಲ್ಯಾನ್‌ ಅನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.

    ಅದಲ್ಲದೇ ಐಶ್ವರ್ಯ ತನ್ನ ಪತಿಯ ಚಲನವಲನಗಳನ್ನು ಪತ್ತೆಹಚ್ಚಲು ಆತನ ಬೈಕ್‌ನಲ್ಲಿ ಜಿಪಿಎಸ್‌ನ್ನು ಅಳವಡಿಸಿದ್ದಳು. ಜೊತೆಗೆ ಇದೆಲ್ಲವನ್ನು ನೋಡಿಕೊಳ್ಳಲು ರಾಜೇಶ್ ಎಂಬಾತನನ್ನು ನೇಮಿಸಿದ್ದಳು. ಕೊಲೆ ಬಳಿಕ 20 ಲಕ್ಷ ಸಾಲ ಪಡೆದು ಐಶ್ವರ್ಯ ಹಾಗೂ ರಾವ್ ಇಬ್ಬರು ಸೇರಿಕೊಂಡು ಲಡಾಖ್‌ಗೆ ಹೋಗುವ ಪ್ಲ್ಯಾನ್‌ ಮಾಡಿದ್ದರು. ಜೊತೆಗೆ ಟಿಕೆಟ್ ಕೂಡ ಬುಕ್ ಮಾಡಿದ್ದರು. ಜೊತೆಗೆ ಅಂಡಮಾನ್‌ಗೆ ಹೋಗುವ ಯೋಜನೆಯೂ ಇತ್ತು ಎಂದು ತಿಳಿದುಬಂದಿದೆ.

    ಒಟ್ಟು ತೇಜೇಶ್ವರ್‌ನ್ನು ಕೊಲೆ ಮಾಡಲು ಐದು ಬಾರಿ ಯತ್ನಿಸಲಾಗಿತ್ತು ಎಂದು ತಿಳಿದುಬಂದಿದೆ. ಸದ್ಯ ಪ್ರಕರಣ ಸಂಬಂಧ 8 ಜನರನ್ನು ಬಂಧಿಸಲಾಗಿದ್ದು, ಪತ್ನಿ ಐಶ್ವರ್ಯ, ಆಕೆಯ ಪ್ರಿಯಕರ ತಿರುಮಲ್ ರಾವ್, ಆಕೆಯ ತಾಯಿ ಸುಜಾತಾ, ತಿರುಮಲ್ ರಾವ್ ತಂದೆ, ಮಾಜಿ ಹೆಡ್ ಕಾನ್‌ಸ್ಟೆಬಲ್, ಹಂತಕರಾದ ನಾಗೇಶ್, ಪರಶುರಾಮ್ ಮತ್ತು ರಾಜೇಶ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: 10 ದಿನದಲ್ಲಿ ಪ್ರೀತಿ, ಪ್ರಣಯ – ಇನ್ಸ್ಟಾದಲ್ಲಿ ಪರಿಚಯವಾದ ವಿವಾಹಿತ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯ!

    ತಾಯಿ-ಮಗಳ ತ್ರಿಕೋನ ಪ್ರೇಮ:
    ಆರೋಪಿ ಐಶ್ವರ್ಯ ತಾಯಿ ಸುಜಾತಾ ಬ್ಯಾಂಕ್‌ನಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಐಶ್ವರ್ಯ ತಾಯಿಗೆ ತಿರುಮಲ್ ರಾವ್ ಎಂಬ ಅಧಿಕಾರಿಯ ಪರಿಚಯವಾಗಿತ್ತು. ಬಳಿಕ 2016ರಲ್ಲಿ ಅವರಿಬ್ಬರ ನಡುವೆ ಸಂಬಂಧ ಬೆಳೆಯಿತು. ಅದಾದ ನಂತರ ಒಂದು ಬಾರಿ ಸುಜಾತಾ ರಜೆಗೆಂದು ಹೋದಾಗ ಐಶ್ವರ್ಯ ಹಾಗೂ ತಿರುಮಲ್ ರಾವ್ ನಡುವೆ ಸಂಬಂಧ ಬೆಳೆಯಿತು. ಬಳಿಕ 2019ರಲ್ಲಿ ತಿರುಮಲ್ ರಾವ್‌ಗೆ ಬೇರೆಯೊಬ್ಬರ ಜೊತೆ ಮದುವೆಯಾಯಿತು. ಆತನು ಕೂಡ ತನ್ನ ಹೆಂಡತಿಯನ್ನು ಕೊಲ್ಲಲು ಪ್ರಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ತನ್ನ ಮಗಳು ತಿರುಮಲ್ ರಾವ್ ಜೊತೆ ಸಂಬಂಧ ಹೊಂದಿದ್ದಾಳೆಂದು ಸುಜಾತಾಗೆ ಗೊತ್ತಾದಾಗ ಆ ಸಂಬಂಧವನ್ನು ಕೊನೆಗೊಳಿಸುವಂತೆ ತಿಳಿಸಿದ್ದಳು. ಬಳಿಕ ತೇಜೇಶ್ವರ್‌ನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಳು. ಅದಾದ ನಂತರ ಫೆಬ್ರವರಿಯಲ್ಲಿ ಮದುವೆ ನಿಶ್ಚಯಿಸಲಾಗಿತ್ತು. ಆದರೆ ಅದೇ ವೇಳೆ ಐಶ್ವರ್ಯ ಕಾಣೆಯಾದಳು. ಓಡಿಹೋಗಿರಬಹುದು ಅಂದುಕೊಂಡಿದ್ದೆವು, ಆದರೆ ಸ್ವಲ್ಪ ದಿನಗಳ ನಂತರ ಮನೆಗೆ ಮರಳಿದ ಐಶ್ವರ್ಯ, ನನ್ನ ಸ್ನೇಹಿತೆಯೊಬ್ಬಳು ವರದಕ್ಷಿಣೆ ಕಿರುಕುಳದಿಂದ ಬಳಲುತ್ತಿದ್ದಳು. ಆಕೆಯನ್ನು ಭೇಟಿಯಾಗಲು ಹೋಗಿದ್ದೆ ಅಂತ ಹೇಳಿದ್ದಳು. ಬಳಿಕ ನಾನು ತೇಜೇಶ್ವರ್‌ನ್ನನ್ನ ಪ್ರೀತಿಸುತ್ತಿದ್ದೇನೆ ಅವನನ್ನೇ ಮದುವೆಯಾಗುತ್ತೇನೆ ಎಂದಿದ್ದಳು. ಆದರೆ ಕುಟುಂಬಸ್ಥರ ಮಾಹಿತಿ ಪ್ರಕಾರ, ತೇಜೇಶ್ವರ್‌ಗೆ ಆಕೆಯೊಂದಿಗೆ ಮದ್ವೆ ಬೇಡ ಅಂತಲೇ ಹೇಳಿದ್ದೆವು. ಆದ್ರೆ ಮಗ ನಮ್ಮ ಮಾತು ಕೇಳದಿದ್ದರಿಂದ ಮೇ ತಿಂಗಳಲ್ಲಿ ಮದುವೆ ನಿಶ್ಚಯಿಸಲಾಯಿತು ಎಂದರು. ಅವನು ಕಾಣೆಯಾದ ಬಳಿಕ ಅವಳು ಅಳುತ್ತಿರಲಿಲ್ಲ, ದುಃಖ ಪಡಲಿಲ್ಲ. ಇದೆಲ್ಲವನ್ನು ಗಮನಿಸಿ ನಮಗೆ ಆಕೆಯ ಮೇಲೆ ಅನುಮಾನ ಉಂಟಾಗಿತ್ತು. ಹೀಗಾಗಿ ನಾವು ಆಕೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದೆವು ಎಂದು ತಿಳಿಸಿದ್ದಾರೆ.

    ಘಟನೆ ಏನು?
    ಮೇ 18ರಂದು ಮೃತ ತೇಜೇಶ್ವರ್ ಹಾಗೂ ಐಶ್ವರ್ಯ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಜೂ.17ರಂದು ತೇಜೇಶ್ವರ್ ನಾಪತ್ತೆಯಾಗಿರುವುದಾಗಿ ದೂರು ದಾಖಲಾಗಿತ್ತು. ದೂರಿನ ಆಧಾರದ ಮೇಲೆ ತನಿಖೆಗಿಳಿದ ಪೊಲೀಸರು, ಕರ್ನೂಲ್ ನಗರದ ಸುಮಾರು 30-40 ಕಿ.ಮೀ ದೂರದಲ್ಲಿರುವ ಪಣ್ಯಂ ಮಂಡಲದ ಸುಗಲಿಮೆಟ್ಟುವಿನಲ್ಲಿ ಆತನ ಮೃತದೇಹವನ್ನು ಪತ್ತೆಹಚ್ಚಿದ್ದರು. ಆತನ ಮುಂಗೈಯಲ್ಲಿ ತೆಲುಗುವಿನಲ್ಲಿ ಅಮ್ಮ ಎಂದು ಬರೆಯಲಾಗಿತ್ತು. ದೇಹದ ಮೇಲೆ ಚಾಕುವಿನಿಂದಾದ ಗಾಯದ ಗುರುತು, ಕುತ್ತಿಗೆ ಸೀಳಿದ ಗಾಯಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ:Honeymoon Murder | ಕೊನೆಗೂ ತಮ್ಮಿಬ್ಬರ ಸಂಬಂಧ ಒಪ್ಪಿಕೊಂಡ ಸೋನಂ ರಘುವಂಶಿ – ರಾಜ್

  • ಮದ್ವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆ – ಬ್ಯಾಂಕ್ ಉದ್ಯೋಗಿ ಜೊತೆಗಿನ ಅಫೇರ್ ಕಾರಣ; ರಹಸ್ಯ ಬಯಲು

    ಮದ್ವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆ – ಬ್ಯಾಂಕ್ ಉದ್ಯೋಗಿ ಜೊತೆಗಿನ ಅಫೇರ್ ಕಾರಣ; ರಹಸ್ಯ ಬಯಲು

    – ಒಬ್ಬನ ಜೊತೆಗೆ ತಾಯಿ ಮಗಳ ಕಳ್ಳಸಂಬಂಧ; ಮೃತನ ಪತ್ನಿ, ಅತ್ತೆ ಪೊಲೀಸ್ ವಶಕ್ಕೆ
    – ಪ್ರಿಯಕರನಿಗೆ 2,000ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದ ಪತ್ನಿ

    ಅಮರಾವತಿ: ದೇಶ್ಯಾದ್ಯಂತ ಸುದ್ದಿಯಲ್ಲಿದ್ದ ಮೇಘಾಲಯ ಹನಿಮೂನ್ ಹತ್ಯೆ (Honeymoon Murder) ಘಟನೆ ಮಾಸುವ ಮುನ್ನವೇ ಆಂಧ್ರಪ್ರದೇಶದ (Andhra Pradesh) ಕರ್ನೂಲ್ (Karnool) ಜಿಲ್ಲೆಯಲ್ಲಿ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

    ಮದುವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆಯಾಗಿದ್ದು, ಪತ್ನಿ ಹಾಗೂ ಆಕೆಯ ತಾಯಿ ಸಂಚುರೂಪಿಸಿ ಕೊಲೆ ಮಾಡಿರುವುದಾಗಿ ತನಿಖೆಯಲ್ಲಿ ಬಯಲಾಗಿದೆ. ತೆಲಂಗಾಣದ (Telangana) ಜೋಗುಳಂಬ ಗಡ್ವಾಲ್ ಜಿಲ್ಲೆಯ ನಿವಾಸಿ ತೇಜೇಶ್ವರ್ (32) ಮೃತ ಪತಿ, ಖಾಸಗಿ ಕಂಪನಿಯೊಂದರಲ್ಲಿ ಭೂಮಾಪನಾಧಿಕಾರಿಯಾಗಿ ಹಾಗೂ ನೃತ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಐಶ್ವರ್ಯ ಹಂತಕಿ ಪತ್ನಿ ಹಾಗೂ ಆಕೆಯ ತಾಯಿಯನ್ನು ಸುಜಾತಾ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕದನ ಭೂಮಿಯಿಂದ ಓಡಿಹೋಗಲ್ಲ, ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ: ಬಿಆರ್ ಪಾಟೀಲ್

    ಮೇ 18ರಂದು ಮೃತ ತೇಜೇಶ್ವರ್ ಹಾಗೂ ಐಶ್ವರ್ಯ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಜೂ.17ರಂದು ತೇಜೇಶ್ವರ್ ನಾಪತ್ತೆಯಾಗಿರುವುದಾಗಿ ದೂರು ದಾಖಲಾಗಿತ್ತು. ದೂರಿನ ಆಧಾರದ ಮೇಲೆ ತನಿಖೆಗಿಳಿದ ಪೊಲೀಸರು, ಕರ್ನೂಲ್ ನಗರದ ಸುಮಾರು 30-40 ಕಿ.ಮೀ ದೂರದಲ್ಲಿರುವ ಪಣ್ಯಂ ಮಂಡಲದ ಸುಗಲಿಮೆಟ್ಟುವಿನಲ್ಲಿ ಆತನ ಮೃತದೇಹವನ್ನು ಪತ್ತೆಹಚ್ಚಿದ್ದರು. ದೇಹದ ಮೇಲೆ ಚಾಕುವಿನಿಂದಾದ ಗಾಯದ ಗುರುತು, ಕುತ್ತಿಗೆ ಸೀಳಿದ ಗಾಯಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

    ಮೃತ ತೇಜೇಶ್ವರ್ ಕುಟುಂಬಸ್ಥರ ಮಾಹಿತಿ ಪ್ರಕಾರ, ಐಶ್ವರ್ಯ ತಾಯಿ ಕರ್ನೂಲ್‌ನ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅದೇ ಬ್ಯಾಂಕ್‌ನ ಓರ್ವ ಸಿಬ್ಬಂದಿಯೊಂದಿಗೆ ಐಶ್ವರ್ಯ ಅಕ್ರಮ ಸಂಬಂಧ ಹೊಂದಿದ್ದಳು. ಅದೇ ಸಮಯದಲ್ಲಿ ಆಕೆ ತೇಜೇಶ್ವರ್ ಜೊತೆಗೂ ಸಂಬಂಧ ಹೊಂದಿದ್ದಳು. ಬಳಿಕ ಎರಡು ಕುಟುಂಬಗಳ ಒಪ್ಪಿಗೆಯ ನಂತರ ಕಳೆದ ಫೆಬ್ರವರಿಯಲ್ಲಿ ಮದುವೆ ನಿಶ್ಚಯಿಸಲಾಗಿತ್ತು. ಆದರೆ ಅದೇ ವೇಳೆ ಐಶ್ವರ್ಯ ಕಾಣೆಯಾದಳು. ಓಡಿಹೋಗಿರಬಹುದು ಅಂದುಕೊಂಡಿದ್ದೆವು, ಆದರೆ ಸ್ವಲ್ಪ ದಿನಗಳ ನಂತರ ಮನೆಗೆ ಮರಳಿದ ಐಶ್ವರ್ಯ, ನನ್ನ ಸ್ನೇಹಿತೆಯೊಬ್ಬಳು ವರದಕ್ಷಿಣೆ ಕಿರುಕುಳದಿಂದ ಬಳಲುತ್ತಿದ್ದಳು. ಆಕೆಯನ್ನು ಭೇಟಿಯಾಗಲು ಹೋಗಿದ್ದೆ ಅಂತ ಹೇಳಿದ್ದಳು. ಬಳಿಕ ನಾನು ತೇಜೇಶ್ವರ್‌ನ್ನನ್ನ ಪ್ರೀತಿಸುತ್ತಿದ್ದೇನೆ ಅವನನ್ನೇ ಮದುವೆಯಾಗುತ್ತೇನೆ ಎಂದಿದ್ದಳು. ನಾವು ತೇಜೇಶ್ವರ್‌ಗೆ ಆಕೆಯೊಂದಿಗೆ ಮದ್ವೆ ಬೇಡ ಅಂತಲೇ ಹೇಳಿದ್ದೆವು. ಆದ್ರೆ ಮಗ ನಮ್ಮ ಮಾತು ಕೇಳದಿದ್ದರಿಂದ ಮೇ ತಿಂಗಳಲ್ಲಿ ಮದುವೆ ನಿಶ್ಚಯಿಸಲಾಯಿತು ಎಂದರು.

    ಮದುವೆಯಾದ ಬಳಿಕ ತೇಜೇಶ್ವರ್‌ಗೆ ತನ್ನ ಪತ್ನಿಯ ಮೇಲೆ ಹಲವು ಬಾರಿ ಅನುಮಾನ ಉಂಟಾಗಿತ್ತು. ಆಕೆ ಪದೇ ಪದೇ ಫೋನ್‌ನಲ್ಲಿ ಮಾತಾಡುತ್ತಿರುವುದನ್ನು ಆತ ಗಮನಿಸಿದ್ದ ಎಂದು ತಿಳಿಸಿದ್ದಾರೆ. ಕುಟುಂಬಸ್ಥರ ಆರೋಪದ ಆಧಾರದ ಮೇಲೆ ಹಂತಕಿ ಐಶ್ವರ್ಯ ಹಾಗೂ ಆಕೆಯ ತಾಯಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

    ತನಿಖೆ ವೇಳೆ, ಬ್ಯಾಂಕ್‌ನ ಓರ್ವ ಸಿಬ್ಬಂದಿಯೊಂದಿಗೆ ತಾಯಿ ಹಾಗೂ ಮಗಳು ಇಬ್ಬರೂ ಕೂಡ ಸಂಬಂಧ ಹೊಂದಿದ್ದರು. ಕಾಲ್ ಹಿಸ್ಟರಿ ತೆಗೆಸಿದಾಗ ಬ್ಯಾಂಕ್ ಸಿಬ್ಬಂದಿಗೆ ಐಶ್ವರ್ಯ 2,000ಕ್ಕೂ ಹೆಚ್ಚು ಬಾರಿ ಕರೆ ಮಾಡಿರುವುದಾಗಿ ಬೆಳಕಿಗೆ ಬಂದಿದೆ. ಜೊತೆಗೆ ಆತನೇ ತೇಜೇಶ್ವರ್‌ನನ್ನು ಕೊಲೆ ಮಾಡಲು ಬಾಡಿಗೆ ಹಂತಕರನ್ನು ನಿಯೋಜಿಸಿದ್ದ. ಅಷ್ಟೇ ಅಲ್ಲದೇ ಕಾರನ್ನು ಕಳುಹಿಸಿ, 10 ಎಕರೆ ಭೂಮಿಯ ಸಮೀಕ್ಷೆ ನಡೆಸಬೇಕು ಎಂದು ನಂಬಿಸಿ, ಕರೆದೊಯ್ದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

    ತಾಯಿ ಹಾಗೂ ಮಗಳು ಇಬ್ಬರು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಸದ್ಯ ಈ ಕೃತ್ಯದಲ್ಲಿ ಭಾಗಿಯಾಗಿರುವ ಬ್ಯಾಂಕ್ ಸಿಬ್ಬಂದಿ ಹಾಗೂ ಇತರ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಬೆಳಕಿಗೆ ಬರಲಿದೆ.

    ಇದಕ್ಕೂ ಮುನ್ನ ಮೇಘಾಯಲಕ್ಕೆ ಹನಿಮೂನ್‌ಗೆ ಹೋಗಿದ್ದಾಗ ಪತ್ನಿ ಸೋನಮ್ ರಘುವಂಶಿ ಪ್ರಿಯಕರನೊಂದಿಗೆ ಸೇರಿ ತನ್ನ ಪತಿ ರಾಜಾ ರಘುವಂಶಿಯನ್ನು ಕೊಲೆ ಮಾಡಿದ್ದಳು.ಇದನ್ನೂ ಓದಿ: ಆನೇಕಲ್‌ | ಹಾಡಹಗಲೇ ಮೈಕೈ ಮುಟ್ಟಿ ಯುವತಿಗೆ ಲೈಂಗಿಕ ಕಿರುಕುಳ – ಐವರ ವಿರುದ್ಧ ದೂರು

  • ಮಾಜಿ ಪ್ರಿಯಕರನ ಮೇಲೆ ಯುವತಿಯಿಂದ ಆ್ಯಸಿಡ್ ದಾಳಿ

    ಮಾಜಿ ಪ್ರಿಯಕರನ ಮೇಲೆ ಯುವತಿಯಿಂದ ಆ್ಯಸಿಡ್ ದಾಳಿ

    -ಪೋಷಕರು ತೋರಿಸಿದ ಹುಡ್ಗಿ ಜೊತೆ ಮದ್ವೆ
    -ಮೂರು ವರ್ಷ ರಿಲೇಶನ್‍ಶಿಪ್

    ಹೈದರಾಬಾದ್: ತನಗೆ ಮೋಸ ಮಾಡಿ ಮದುವೆಯಾಗಿದ್ದ ಮಾಜಿ ಪ್ರಿಯಕರ ಮೇಲೆ ಯುವತಿ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

    ನಾಗೇಂದ್ರ ಆ್ಯಸಿಡ್ ದಾಳಿಗೆ ಒಳಗಾದ ಯುವಕ. ನಾಗೇಂದ್ರ ಮತ್ತು ನಾನು ಕಳೆದ ಮೂರು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದೇವು. ಮದುವೆ ಮಾಡಿಕೊಳ್ಳಲು ನಿರ್ಧರಿಲಾಗದ್ದರಿಂದ ಅವನ ಜೊತೆ ರಿಲೇಶನ್‍ಶಿಪ್ ನಲ್ಲಿದ್ದೆ. ಇಬ್ಬರ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹಾಗಾಗಿ ನಾಗೇಂದ್ರ ಕಳೆದ ತಿಂಗಳು ಲಕ್ಷ್ಮಿ ಎಂಬಾಕೆ ಜೊತೆ ಮದುವೆಯಾಗಿದ್ದಾನೆ ಎಂದು ಯುವತಿ ಹೇಳಿದ್ದಾಳೆ.

    ನಾಗೇಂದ್ರ ನನ್ನನ್ನು ಪ್ರೀತಿಸಿ, ಬೇರೊಬ್ಬರನ್ನ ಮದ್ವೆಯಾಗಿದ್ದರಿಂದ ಅವನ ಮೇಲೆ ಆ್ಯಸಿಡ್ ಎರೆಚಿದೆ. ಇನ್ನು ನಾಗೇಂದ್ರನನ್ನ ನಂದ ದಯಾಳ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರ ಮುಂದೆ ಹೇಳಿಕೆ ದಾಖಲಿಸಿರುವ ನಾಗೇಂದ್ರ, ಆಕೆಯ ಬಳಿ ಚರ್ಚಿಸಿ ನಾನು ಲಕ್ಷ್ಮಿಯನ್ನ ಮದುವೆಯಾಗಿರೋದಾಗಿ ತಿಳಿಸಿದ್ದಾನೆ.

    ಇಬ್ಬರು ಪರಸ್ಪರ ಮಾತನಾಡಿ ಬ್ರೇಕಪ್ ಮಾಡಿಕೊಳ್ಳಲಾಗಿತ್ತು. ಬ್ರೇಕಪ್ ಮಾಡಿಕೊಂಡಿದ್ದರಿಂದ ಆಕೆ ನನ್ನಿಂದ ಹಣ ಸಹ ಪಡೆದುಕೊಂಡಿದ್ದಾಳೆ. ಇದು ನನ್ನ ಮೇಲೆ ಎರಡನೇ ಬಾರಿ ಆ್ಯಸಿಡ್ ದಾಳಿ ನಡೆಯುತ್ತಿರೋದು ನಾಗೇಂದ್ರ ಆರೋಪಿಸಿದ್ದಾನೆ.