Tag: karthik subbaraju

  • ಹೊಸ ಸಿನಿಮಾ ಘೋಷಣೆ ಮಾಡಿದ ಸೂರ್ಯ: ಕಾರ್ತಿಕ್ ಸುಬ್ಬರಾಜು ನಿರ್ದೇಶಕ

    ಹೊಸ ಸಿನಿಮಾ ಘೋಷಣೆ ಮಾಡಿದ ಸೂರ್ಯ: ಕಾರ್ತಿಕ್ ಸುಬ್ಬರಾಜು ನಿರ್ದೇಶಕ

    ಮಿಳಿನ ಹೆಸರಾಂತ ನಟ ಸೂರ್ಯ, ಇದೀಗ ಮತ್ತೊಂದು ಹೊಸ ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಇದು ಇವರ 44ನೇ ಚಿತ್ರವಾಗಿದ್ದು, ಹೆಸರಾಂತ ನಟರ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರುವ ಸ್ಟಾರ್ ಡೈರೆಕ್ಟರ್ ಕಾರ್ತಿಕ್ ಸುಬ್ಬರಾಜು (Karthik Subbaraju) ಈ ಸಿನಿಮಾದ ನಿರ್ದೇಶಕರು. ಸೂರ್ಯ ಅವರ ಕಂಗುವ ಸಿನಿಮಾ ರಿಲೀಸ್ ಮುನ್ನವೇ ಈ ಹೊಸ ಚಿತ್ರವನ್ನು ಸೂರ್ಯ ಸೋಷಿಯಲ್ ಮೀಡಿಯಾ ಮೂಲಕ ಘೋಷಣೆ ಮಾಡಿದ್ದಾರೆ.

    ಕಂಗುವ ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಮೊನ್ನೆಯಷ್ಟೇ ‘ಕಂಗುವ’ (Kanguva) ಸಿನಿಮಾದ ಟೀಸರ್ (Teaser) ಬಿಡುಗಡೆ ಆಗಿದ್ದು ಅದ್ಧೂರಿ ತನದ ಮೇಕಿಂಗ್, ಕಲಾವಿದ ಆರ್ಭಟ. ದೃಶ್ಯ ವೈಭವ ಹಾಗೂ ಹಿನ್ನೆಲೆ ಸಂಗೀತದಿಂದಾಗಿ ಟೀಸರ್ ಮತ್ತೊಮ್ಮೆ ನೋಡಬೇಕು ಅನಿಸುತ್ತಿದೆ. ಹೊಡೆದಾಟ, ರಕ್ತದೋಕುಳಿ, ಹೊಸ ಬಗೆಯ ಆಯುಧ, ರಾಕ್ಷಸರು ಹೀಗೆ ನಾನಾ ರೀತಿಯ ದೃಶ್ಯಗಳನ್ನು ಜೋಡಿಸಿಕೊಂಡು ಈ ಟೀಸರ್ ಕಟ್ಟಲಾಗಿದೆ. ಟೀಸರ್ ಕುರಿತಂತೆ ಅಕ್ಷರಗಳಲ್ಲಿ ಓದುವುದಕ್ಕಿಂತ ನೋಡುವುದೇ ಒಂದು ಅನುಭವ.

    ಇತ್ತೀಚೆಗಷ್ಟೇ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿತ್ತು. ಈ ಪೋಸ್ಟರ್ ನಲ್ಲಿ ಸೂರ್ಯ ಸಖತ್ ಮಿಂಚಿದ್ದರು. ಪೋಸ್ಟರ್ ಕಂಡು ಅಭಿಮಾನಿಗಳು ಫಿದಾ ಆಗಿದ್ದರು.  ಜೊತೆಗೆ ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಸಿನಮಾ ಬಿಡುಗಡೆಗೂ ಮುನ್ನವೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ.  ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

    ಮೂಲಗಳ ಪ್ರಕಾರ ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ (OTT) ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ.  ಈ ಮಾಹಿತಿಯನ್ನು ಚಿತ್ರತಂಡವೇ ಬಹಿರಂಗ ಪಡಿಸಿದೆ ಎಂದು ಕೆಲ ಮಾಧ್ಯಮಗಳ ವರದಿ ಮಾಡಿವೆ.

    ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ (Shiva) ನಿರ್ದೇಶಿಸುತ್ತಿರುವ ಈ ಚಿತ್ರವು ಪ್ರಾರಂಭವಾದಾಗಿನಿಂದ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಬಹುಕೋಟಿ ವೆಚ್ಚದ ಈ ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಠಾಣಿ (Disha Pathani) ಅಭಿನಯಿಸುತ್ತಿದ್ದು, ಯೋಗಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

     

    ‘ಕಂಗುವ’ ಚಿತ್ರವು ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.

  • ಶೂಟಿಂಗ್‍ಗಾಗಿ ರಾಜಮಂಡ್ರಿಗೆ ಬಂದಿಳಿದ ರಾಮ್ ಚರಣ್ – ಅಭಿಮಾನಿಗಳಿಂದ ನೂಕು ನುಗ್ಗಲು

    ಶೂಟಿಂಗ್‍ಗಾಗಿ ರಾಜಮಂಡ್ರಿಗೆ ಬಂದಿಳಿದ ರಾಮ್ ಚರಣ್ – ಅಭಿಮಾನಿಗಳಿಂದ ನೂಕು ನುಗ್ಗಲು

    ಹೈದರಾಬಾದ್: ಆರ್‌ಸಿ 15 ಚಿತ್ರೀಕರಣಕ್ಕಾಗಿ ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರು ಆಂಧ್ರಪ್ರದೇಶದ ರಾಜಮಂಡ್ರಿಯ ರಾಜಾಜಿನಗರಕ್ಕೆ ಬಂದಿಳಿದ ತಕ್ಷಣ ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ ಹೊರಗೆ ಜಮಾಯಿಸಿ ಚರಣ್ ಅವರನ್ನು ಕಾಣಲು ಮುಗಿಬಿದ್ದಿದ್ದಾರೆ.

    ರಾಮ್ ಚರಣ್ ತಮ್ಮ ಮುಂಬರುವ ಚಿತ್ರ ಆರ್‍ಆರ್‍ಆರ್ ಬಿಡುಗಡೆಗಾಗಿ ಈಗಾಗಲೇ ಕಾತುರದಿಂದ ಕಾಯುತ್ತಿದ್ದಾರೆ. ಎಸ್ ಎಸ್ ರಾಜಮೌಳಿ ನಿರ್ದೇಶನದ ಈ ಚಿತ್ರವು ಮಾರ್ಚ್ 25 ರಂದು ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ತೆಲುಗು ಅಲ್ಲದೆ, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲೂ ಸಹ ಚಿತ್ರವು ಬಿಡುಗಡೆಯಾಗಲಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಗುಡ್‍ಬೈ ಹೇಳಿದ ಬಾಲಿವುಡ್ ನಟಿ ರಾಖಿ ಸಾವಂತ್

     

    View this post on Instagram

     

    A post shared by Kamlesh Nand (work) (@artistrybuzz_)

    ಫೆಬ್ರವರಿ 13 ರಂದು, ರಾಮ್ ಚರಣ್ ಮತ್ತು ಅವರ ತಂಡವು ಆರ್‌ಸಿ 15 ರ ಶೂಟಿಂಗ್‍ಗಾಗಿ ರಾಜಮಂಡ್ರಿ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದನ್ನೂ ಗಮನಿಸಿದ ಅಭಿಮಾನಿಗಳು ಚರಣ್ ಅವರ ದರ್ಶನ ಪಡೆಯಲು ವಿಮಾನ ನಿಲ್ದಾಣದ ಹೊರಗೆ ಕಾಯುತ್ತಿದ್ದರು.

    ವಿಮಾನ ನಿಲ್ದಾಣದಿಂದ ಅವರು ರಾಜಮಂಡ್ರಿಯ ಪ್ರತಿಷ್ಠಿತ ಹೋಟೆಲ್‍ವೊಂದಕ್ಕೆ ತೆರಳುತ್ತಿದ್ದಾಗ ಅಭಿಮಾನಿಗಳು ರಸ್ತೆಯ ಎರಡೂ ಬದಿಯಲ್ಲಿ ಸಾಲುಗಟ್ಟಿ ನಿಂತು ಚರಣ್‍ಗೆ ಆತ್ಮೀಯ ಸ್ವಾಗತ ಕೋರಿದ್ದಾರೆ. ಈ ಸಂದರ್ಭದಲ್ಲಿ ರಾಮ್ ಚರಣ್ ಬೌನ್ಸರ್‌ಗಳು ಅಭಿಮಾನಿಗಳನ್ನು ಚದುರಿಸಲು ಹರ ಸಾಹಸ ಪಟ್ಟಿದ್ದಾರೆ. ಇದನ್ನೂ ಓದಿ: ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ

    ಆರ್‌ಸಿ 15 ರಾಜಕೀಯಕ್ಕೆ ಸಂಬಂಧಪಟ್ಟ ಚಿತ್ರವಾಗಿದೆ. ಈ ಚಿತ್ರವನ್ನು ಶಂಕರ್ ಅವರು ನಿರ್ದೇಶಿಸಿದ್ದು, ಚಿತ್ರಕ್ಕೆ ಕಾರ್ತಿಕ್ ಸುಬ್ಬರಾಜ್ ಕಥೆ ಬರೆದಿದ್ದಾರೆ.

    ಇತ್ತೀಚಿನ ಸಂದರ್ಶನವೊಂದರಲ್ಲಿ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರು ಚಿತ್ರವನ್ನು ಉದ್ದೇಶಿಸಿ ಮಾತನಾಡಿದ್ದು, ನಾನು ಈ ರಾಜಕೀಯ ಕಥೆಯನ್ನು ಹಲವು ವರ್ಷಗಳ ಹಿಂದೆ ಬರೆದಿದ್ದೇನೆ. ನನಗೆ ಬಹಳ ಹಿಂದೆಯೇ ಶಂಕರ್ ಸರ್ ಈ ಚಿತ್ರವನ್ನು ನಿರ್ದೇಶಿಸಿದರೆ ಉತ್ತಮವಾಗಿರುತ್ತದೆ ಅಂತ ಅನಿಸಿತ್ತು. ಹೀಗಾಗಿ ನಾನು ಈ ಕಥೆಯನ್ನು ಅವರಿಗೆ ನೀಡಿದಾಗ ಅವರು ಅದನ್ನು ಇಷ್ಟಪಟ್ಟರು. ಅವರು ಈಗಾಗಲೇ ಈ ಕಥೆಯನ್ನು ನಿರ್ದೇಶಿಸಲು ಒಪ್ಪಿಕೊಂಡಿದ್ದಾರೆ. ನಾನು ಅವರೊಂದಿಗೆ ಈ ಚಿತ್ರದಲ್ಲಿ ಕೆಲಸ ಮಾಡಲು ಅತ್ಯಂತ ಸಂತೋಷ ಮತ್ತು ಹೆಮ್ಮೆಯೆನಿಸುತ್ತದೆ.

    ರಾಮ್ ಚರಣ್ ಹೊರತಾಗಿ, ಆರ್‌ಸಿ 15 ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ಅಂಜಲಿ, ಜಯರಾಮ್, ಸುನಿಲ್, ಶ್ರೀಕಾಂತ್ ಮತ್ತು ನವೀನ್ ಚಂದ್ರ ನಟಿಸಿದ್ದಾರೆ. ಛಾಯಾಗ್ರಾಹಕ ತಿರುರು, ಸಂಕಲನಕಾರ ಶಮೀರ್ ಮುಹಮ್ಮದ್ ಮತ್ತು ಸಂಗೀತ ಸಂಯೋಜಕ ಎಸ್ ಥಮನ್ ತಾಂತ್ರಿಕ ತಂಡದ ಭಾಗವಾಗಿದ್ದಾರೆ.