Tag: Karunanidhi

  • 2018ರಲ್ಲಿ ನಮ್ಮನ್ನ ಅಗಲಿದ ಗಣ್ಯರು

    2018ರಲ್ಲಿ ನಮ್ಮನ್ನ ಅಗಲಿದ ಗಣ್ಯರು

    ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ, ತಮಿಳುನಾಡಿನ ಡಿಎಂಕೆ ನಾಯಕ ಕರುಣಾನಿಧಿ, ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ, ಸಚಿವ ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಈ ವರ್ಷ ವಿಧವಶರಾಗಿದ್ದಾರೆ. ಅಷ್ಟೇ ಅಲ್ಲದೆ ವರ್ಷ ಆರಂಭವಾದ ಕೆಲ ದಿನಗಳಲ್ಲಿಯೇ ಕಾಶಿನಾಥ್ ಅವರನ್ನು ಕಳೆದುಕೊಂಡಿದ್ದ ಸ್ಯಾಂಡ್‍ವುಲ್ ವರ್ಷಾಂತ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಕಳೆದುಕೊಂಡಿತು.

    ರಾಧಾ ವಿಶ್ವನಾಥ್:
    ಎಂ.ಎಸ್. ಸುಬ್ಬಲಕ್ಷ್ಮಿ ಅವರ ಪುತ್ರಿ ಹಾಗೂ ಖ್ಯಾತ ಗಾಯಕಿಯಾಗಿದ್ದ ರಾಧಾ ವಿಶ್ವನಾಥ್ ಅವರು ಜನವರಿ 2ರಂದು ನಿಧನರಾದರು.

    ಕಾಶಿನಾಥ್:
    ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ, ಸಂಭಾಷಣೆಕಾರ ಕಾಶಿನಾಥ್(67) ಅವರು ಜನವರಿ 18ರಂದು ನಿಧನರಾದರು. ಅಂದು ಚಾಮರಾಜಪೇಟೆಯ ಟಿಆರ್ ಮಿಲ್‍ನ ರುದ್ರಭೂಮಿಯಲ್ಲಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

    ಶ್ರೀದೇವಿ:
    ಬಾಲಿವುಡ್‍ನ ಹಿರಿಯ ನಟಿ ಶ್ರೀದೇವಿ (54) ಹೃದಯಾಘಾತದಿಂದ ದುಬೈಯಲ್ಲಿ ಫೆಬ್ರವರಿ 24ರಂದು ರಾತ್ರಿ ಮೃತಪಟ್ಟಿದ್ದರು. ನಟಿ ಶ್ರೀದೇವಿ ಸಾವು ಭಾರೀ ಚರ್ಚೆಗೆ ಕಾರಣವಾಗಿತ್ತು. ದುಬೈನಿಂದ ಮೃತದೇಹವನ್ನು ಮುಂಬೈಗೆ ತಂದು ಫೆಬ್ರವರಿ 27ರಂದು ವಿಲೆ ಪಾರ್ಲೆ ಸೇವಾ ಸಮಾಜದ ಶವಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ತಮಿಳುನಾಡಿನ ಶಿವಕಾಶಿಯಲ್ಲಿ 1963ರ ಆಗಸ್ಟ್ 13ರಂದು ಜನಿಸಿದ್ದ ಶ್ರೀದೇವಿ 4ನೇ ವಯಸ್ಸಿನಲ್ಲಿಯೇ ತಮಿಳಿನ `ತುನೈವಾನ್’ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು.

    ಕರುಣಾನಿಧಿ:
    ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕಲೈನರ್ ಕರುಣಾನಿಧಿ(94) ಆಗಸ್ಟ್ 7ರಂದು ವಿಧಿವಶರಾದರು. ಮರಿನಾ ಬೀಚ್‍ನಲ್ಲಿ ಅಂತ್ಯಸಂಸ್ಕಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ ಜಾಗದ ಸಮಸ್ಯೆಯನ್ನು ಆಲಿಸಿದ ಕೋರ್ಟ್ ಆಗಸ್ಟ್ 8ರಂದು ರಾತ್ರಿಯೇ ವಿಚಾರಣೆ ನಡೆಸಿ, ಮರಿನಾ ಬೀಚ್‍ನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ಕಲ್ಪಿಸಿತು. ಇದರಿಂದಾಗಿ ಎಐಎಡಿಎಂಕೆ ಸಂಸ್ಥಾಪಕ ಎಂ.ಜಿ.ರಾಮಚಂದ್ರನ್, ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಮತ್ತು ಡಿಎಂಕೆ ಸ್ಥಾಪಕ ಅಣ್ಣಾದೊರೈ ಅವರ ಅಂತ್ಯಸಂಸ್ಕಾರ ನೆರವೇರಿದ ಮರಿನಾ ಬೀಚ್‍ನಲ್ಲಿಯೇ ಕರುಣಾನಿಧಿ ಅವರಿಗೂ ಜಾಗ ಸಿಕ್ಕಂತಾಯಿತು.

    ಸೋಮನಾಥ ಚಟರ್ಜಿ:
    ಮಾಜಿ ಲೋಕಸಭಾ ಸ್ಪೀಕರ್ ಸೋಮನಾಥ್ ಚಟರ್ಜಿ(89) ಆಗಸ್ಟ್ 13ರಂದು ಕೋಲ್ಕತಾದ ಆಸ್ಪತ್ರೆಯಲ್ಲಿ ನಿಧನರಾದರು. ಚಟರ್ಜಿ ಅವರು 10 ಬಾರಿ ಲೋಕಸಭಾ ಸದಸ್ಯರಾಗಿದ್ದರು ಮತ್ತು ಸಿಪಿಐ(ಎಂ) ನ ಕೇಂದ್ರ ಸಮಿತಿ ಸದಸ್ಯರಾಗಿದ್ದರು. 2004 ರಿಂದ 2009ರವರೆಗೆ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.

    ಅಟಲ್ ಬಿಹಾರಿ ವಾಜಪೇಯಿ:
    ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ(93) ಅವರು ಆಗಸ್ಟ್ 16ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾದರು. ಅನೇಕ ರಾಜಕೀಯ ನಾಯಕರು ಪಕ್ಷಭೇದ ಮರೆತು ದೇಶದ ಮೂಲೆ ಮೂಲೆಯಿಂದ ಬಂದು ಅಟಲ್ ಜೀ ಅವರ ಅಂತಿಮ ದರ್ಶನ ಪಡೆದರು. ಬ್ರಾಹ್ಮಣ ಸಂಪ್ರದಾಯದಂತೆ ವಾಜಪೇಯಿ ಅವರ ಅಂತ್ಯಸಂಸ್ಕಾರವು ಆಗಸ್ಟ್ 17ರಂದು ದೆಹಲಿಯ ಸ್ಮೃತಿ ಸ್ಥಳದಲ್ಲಿ ನೆರವೇರಿತು.

    ಅನಂತ್ ಕುಮಾರ್:
    ದೆಹಲಿಯ ಕನ್ನಡ ಧ್ವನಿ ಎಂದೇ ಗುರುತಿಸಿಕೊಂಡಿದ್ದ ರಾಸಾಯನಿಕ ಮತ್ತು ರಸಗೊಬ್ಬರ, ಸಂಸದೀಯ ಸಚಿವ ಅನಂತ್ ಕುಮಾರ್ (59) ಅವರು ನವೆಂಬರ್ 12ರಂದು ನಿಧನರಾದರು. ಬೆಂಗಳೂರಿನ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅನಂತ್ ಕುಮಾರ್ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

    ರೆಬಲ್ ಸ್ಟಾರ್ ಅಂಬರೀಶ್:
    ಮಾಜಿ ಸಚಿವ, ಸ್ಯಾಂಡಲ್‍ವುಡ್ ಟ್ರಬಲ್ ಶೂಟರ್, ರೆಬೆಲ್ ಸ್ಟಾರ್ ಅಂಬರೀಶ್ ಅವರು ನವೆಂಬರ್ 24ರಂದು ರಾತ್ರಿ ವಿಧಿವಶರಾದರು. ಕಂಠೀರವ ಸ್ಟೇಡಿಯಂನಲ್ಲಿ ಅಂಬರೀಶ್ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಬಳಿಕ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಹೆಲಿಕಾಪ್ಟರ್ ಮೂಲಕ ಸಾಗಿಸಿ ಅಲ್ಲಿನ ಜನತೆಗೆ ದರ್ಶನ ಕಲ್ಪಿಸುವ ಕೆಲಸವನ್ನು ಸರ್ಕಾರ ಮಾಡಿತು. ಅಂಬರೀಶ್ ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಪುತ್ರ ಅಭಿಷೇಕ್ ಅಗ್ನಿ ಸ್ಪರ್ಶ ನೆರವೇರಿಸಿದರು.

    ಜಾಫರ್ ಶರೀಫ್:
    ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜಾಫರ್ ಷರೀಫ್(85) ಅವರು ನವೆಂಬರ್ 25ರಂದು ನಿಧನರಾದರು. ನವೆಂಬರ್ 3, 1933 ರಂದು ಜನಿಸಿದ್ದ ಷರೀಫ್ 1991-95ರ ಅವಧಿಯಲ್ಲಿ ಕೇಂದ್ರ ರೈಲ್ವೇ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಆಪ್ತರಾಗಿದ್ದ ಜಾಫರ್ ಪಿ.ವಿ.ನರಸಿಂಹರಾವ್ ಸರ್ಕಾರದಲ್ಲಿ ರೈಲ್ವೇ ಸಚಿವರಾಗಿದ್ದರು. ಬೆಂಗಳೂರಿನ ಖಬರಸ್ತಾನ ಸ್ಮಶಾನದಲ್ಲಿ ನವೆಂಬರ್ 26ರಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.

    ಮಧುಕರ್ ಶೆಟ್ಟಿ:
    ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ(47) ಅವರು ಹೈದ್ರಬಾದ್‍ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಡಿಸೆಂಬರ್ 28ರಂದು ವಿಧಿವಶರಾದರು. ಉಡುಪಿ ಮೂಲದ ಮಧುಕರ್ ಶೆಟ್ಟಿ ಅವರು, ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿಯವರ ಪುತ್ರ. 1999ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ, ರಾಮನಗರ ಚನ್ನಪಟ್ಟಣದಿಂದ ವೃತ್ತಿ ಜೀವನ ಆರಂಭಿಸಿದ್ದರು. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಯಡಾಡಿಯ ಮನೆಯ ಅಡಿಕೆ ತೋಟದಲ್ಲಿ ಡಿಸೆಂಬರ್ 30ರಂದು ಅಂತ್ಯಕ್ರಿಯೆ ನೆರವೇರಿತು.

    ಸೂಲಗಿತ್ತಿ ನರಸಮ್ಮ:
    ದೇಶದ ಉನ್ನತ ನಾಗರಿಕ ಪದ್ಮ ಪ್ರಶಸ್ತಿ ಪುರಸ್ಕೃತ ಕನ್ನಡತಿ ಸೂಲಗಿತ್ತಿ(98) ನರಸಮ್ಮ ಅವರು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಡಿಸೆಂಬರ್ 25ರಂದು ನಿಧನರಾದರು. ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಕೃಷ್ಣಾಪುರದ ಮೂಲದವರಾದ ಸೂಲಗಿತ್ತಿ ನರಸಮ್ಮ ಆಸ್ಪತ್ರೆ, ವೈದ್ಯರಿಲ್ಲದ ಕಾಲದಲ್ಲಿ ಆಧುನಿಕ ಕಾಲದ ಹೆರಿಗೆ ತಜ್ಞೆಯಂತೆ 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದರು. ಸೂಲಗಿತ್ತಿ ನರಸಮ್ಮ ಅವರ ಅಂತ್ಯ ಸಂಸ್ಕಾರ ಡಿಸೆಂಬರ್ 26ರಂದು ನಗರದ ಗಂಗಸಂದ್ರ ಸರ್ಕಾರಿ ಜಮೀನಿನಲ್ಲಿ ನೆರವೇರಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕರುಣಾನಿಧಿ ಮನೆಗೆ ಪುನೀತ್ ಭೇಟಿ!

    ಕರುಣಾನಿಧಿ ಮನೆಗೆ ಪುನೀತ್ ಭೇಟಿ!

    ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಕರುಣಾನಿಧಿ ಅವರ ಮನೆಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

    ಪುನೀತ್ ರಾಜ್‍ಕುಮಾರ್ ಚೆನ್ನೈನ ಗೋಪಾಲಪುರಂನಲ್ಲಿರುವ ಕರುಣಾನಿಧಿ ಅವರ ಮನೆಗೆ ಭೇಟಿ ನೀಡಿ ಅವರ ಮಗ ಸ್ಟಾಲಿನ್ ಹಾಗೂ ಕುಟುಂಬಸ್ಥರ ಜೊತೆ ಮಾತನಾಡಿ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

    ಕರುಣಾನಿಧಿ ಅವರ ಮನೆಗೆ ಭೇಟಿ ನೀಡಿದ ಬಳಿಕ ಪುನೀತ್ ಮಾಧ್ಯಮಗಳ ಜೊತೆ ಮಾತನಾಡಿ, “ಕರುಣಾನಿಧಿ ದಿಗ್ಗಜ ನಾಯಕ. ಅವರ ನಿಧನಕ್ಕೆ ಸಂತಾಪ ಸೂಚಿಸಬೇಕಾಗಿರುವುದು ನಮ್ಮ ಕರ್ತವ್ಯ. ಹಾಗಾಗಿ ಅವರ ಮನೆಗೆ ಬಂದಿದ್ದೇನೆ. ನಮ್ಮ ತಂದೆ ರಾಜ್‍ಕುಮಾರ್ ಕಿಡ್ನಾಪ್ ಆಗಿದ್ದ ವೇಳೆ ಕರುಣಾನಿಧಿ ನಮಗೆ ತುಂಬಾ ಸಹಾಯ ಮಾಡಿದ್ದರು. ಅಂದಿನಿಂದ ಕರುಣಾನಿಧಿ ಅವರ ಕುಟುಂಬದ ಜೊತೆ ನಮ್ಮ ಕುಟುಂಬದ ಒಳ್ಳೆಯ ನಂಟು ಹೊಂದಿದೆ. ನಾನು ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಲು ಬಂದೆ ಎಂದು ಪುನೀತ್ ಹೇಳಿದರು.

    ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಮಂಗಳವಾರ (7.8.2018) ವಿಧಿವಶರಾಗಿದ್ದರು. ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ 6.10ಕ್ಕೆ ಕೊನೆಯುಸಿರೆಳೆದಿದ್ದಾರೆ.

    ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ’94’ ಕರುಣಾ ಕಥೆ

    ’94’ ಕರುಣಾ ಕಥೆ

    https://www.youtube.com/watch?v=GY-peQGWAK8

  • ಬಿಗ್ ಬುಲೆಟಿನ್ | 08-08-2018

    ಬಿಗ್ ಬುಲೆಟಿನ್ | 08-08-2018

    https://www.youtube.com/watch?v=v95r9qsPqko

  • ಇನ್ನು ನೆನಪು ಮಾತ್ರ – ಕರುಣಾನಿಧಿಯನ್ನು ಹೂಳಿದ್ದು ಯಾಕೆ? ಶವ ಪೆಟ್ಟಿಗೆಯ ವಿಶೇಷತೆ ಏನು?

    ಇನ್ನು ನೆನಪು ಮಾತ್ರ – ಕರುಣಾನಿಧಿಯನ್ನು ಹೂಳಿದ್ದು ಯಾಕೆ? ಶವ ಪೆಟ್ಟಿಗೆಯ ವಿಶೇಷತೆ ಏನು?

    ಚೆನ್ನೈ: ಚಳುವಳಿ, ಜನಸೇವೆ, ರಾಜಕೀಯ ಎಂದು ಹೇಳಿ 80 ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ 94 ವರ್ಷದ ಮುತ್ತುವೇಲು ಕರುಣಾನಿಧಿ ಇನ್ನು ನೆನಪು ಮಾತ್ರ.

    ಮಂಗಳವಾರ ಸಂಜೆ 6.10ಕ್ಕೆ ಕಾವೇರಿ ಆಸ್ಪತ್ರೆಯಲ್ಲಿ ನಿಧನರಾದ ತಮಿಳುನಾಡಿನ ಸೂರ್ಯ ಕರುಣಾನಿಧಿ ಅವರನ್ನು ಇವತ್ತು ಸಂಜೆ 7 ಗಂಟೆಯ ವೇಳೆಗೆ 21 ಸುತ್ತು ಕುಶಾಲುತೋಪು ಸಿಡಿಸಿ, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯ್ತು.

    ರಾಜಕೀಯ ಗುರು ಅಣ್ಣಾದೊರೆ ಹಾಗೂ ರಾಜಕೀಯ ಶತ್ರು ಜಯಲಲಿತಾ ಇಬ್ಬರ ನಡುವೆ ಕರುಣಾನಿಧಿಯನ್ನು ಕಣ್ಣಡಕ ಸಮೇತ ಮಣ್ಣು ಮಾಡಲಾಯ್ತು. ತಂದೆಯ ಅಂತ್ಯಸಂಸ್ಕಾರದ ವೇಳೆ ಇಡೀ ಕುಟುಂಬ ವರ್ಗ ಕಣ್ಣೀರಲ್ಲಿ ಮುಳುಗಿತ್ತು. ಉತ್ತರಾಧಿಕಾರಿ ಸ್ಟಾಲಿನ್ ವಿಚಲಿತರಾಗಿದ್ದು, ದುಃಖದ ಮಡುವಿನಲ್ಲಿದ್ದರು.

    ಸರ್ಕಾರದ ಪ್ರತಿನಿಧಿಯಾಗಿ ಸಚಿವ ಜಯಕುಮಾರ್ ಮಾತ್ರ ಭಾಗಿಯಾಗಿದ್ದರು. ಮಾಜಿ ಪ್ರಧಾನಿ ದೇವೇಗೌಡ್ರು ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ಅಶುತರ್ಪಣ ಅರ್ಪಿಸಿದರು ಈ ಮೂಲಕ, 1924ರಲ್ಲಿ ಜನಿಸಿದ್ದ ದ್ರಾವಿಡರ ಧೀಮಂತ ನಾಯಕ ಇತಿಹಾಸದ ಪುಟಗಳಲ್ಲಿ ಸೇರಿದರು. ಸಾವಿರಾರು ಮಂದಿ ಅಭಿಮಾನಿಗಳು, ಕಾರ್ಯಕರ್ತರ ಆಕ್ರಂದನ ಮುಗಿಲು ಮುಟ್ಟಿತ್ತು. ಕಲೈನರ್ ಅವರ ಸ್ಮಾರಕ ಸಹ ನಿರ್ಮಾಣವಾಗಲಿದೆ.

    ರಾಜಾಜಿಹಾಲ್‍ನಲ್ಲಿ ಸಾರ್ವಜನಿಕ ದರ್ಶನ ಮುಗಿದ ಬಳಿಕ ಮಧ್ಯಾಹ್ನ 4.30ರ ಹೊತ್ತಿಗೆ ಪುಷ್ಪಾಂಲಕೃತ ವಾಹನದಲ್ಲಿ ಕರುಣಾನಿಧಿ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಯ್ತು. ರಾಜಾಜಿಹಾಲ್‍ನಿಂದ ಮರೀನಾಬೀಚ್‍ಗೆ 3 ಕಿ.ಮೀ ಇರೋ ದೂರವನ್ನ ಸುಮಾರು 2 ತಾಸು ಸಾಗಬೇಕಾಯ್ತು. ಅಷ್ಟರ ಮಟ್ಟಿಗೆ ಜನಸಮೂಹ ಸೇರಿತ್ತು. ಮೂರು ಕಿ.ಮೀ. ಹಾದಿಯುದ್ದಕ್ಕೂ ರಸ್ತೆಯ ಎರಡೂ ಇಕ್ಕೆಲಗಳಲ್ಲಿ ಕಿಕ್ಕಿರಿದು ಜನ ಸೇರಿತ್ತು. ಮಾರ್ಗದುದ್ದಕ್ಕೂ ಅಭಿಮಾನಿಗಳು ಭಾವಚಿತ್ರ ಸೇರಿದಂತೆ ವಿವಿಧ ರೀತಿಯಲ್ಲಿ ತಮ್ಮ ಅಭಿಮಾನ ತೋರ್ಪಡಿಸಿದರು. ಮಹಿಳೆಯರಂತೂ ಕಣ್ಣೀರ ಕೋಡಿಯನ್ನೇ ಹರಿಸಿದರು.

    ಶವದ ಪೆಟ್ಟಿಗೆಯಲ್ಲಿ ಇಟ್ಟು ಅಂತ್ಯಕ್ರಿಯೆ:
    ಹಿಂದೂ ಸಂಸ್ಕೃತಿಯಲ್ಲಿ ಶವವನ್ನು ಸುಡಲಾಗುತ್ತದೆ. ಆದರೆ ಕರುಣಾನಿಧಿ ಹಿಂದೂವಾಗಿ ಹುಟ್ಟಿದ್ದರೂ ಶವದ ಪೆಟ್ಟಿಗೆಯಲ್ಲಿ ಇಟ್ಟು ದ್ರಾವಿಡ ಪದ್ಧತಿಯಂತೆ ಅಂತ್ಯಕ್ರಿಯೆ ಮಾಡಲಾಯಿತು. ಕರುಣಾನಿಧಿ ಅನೇಕ ಬಾರಿ ನಾನು ನಾಸ್ತಿಕ ಎಂದು ಹೇಳಿಕೊಂಡಿದ್ದರು.

    ದ್ರಾವಿಡ ಸಂಸ್ಕೃತಿಯ ಪ್ರಕಾರ, ಮೃತದೇಹವನ್ನು ಹೂಳಲಾಗುತ್ತದೆ. ಈ ಕಾರಣಕ್ಕಾಗಿ ಶ್ರೀಂಗಂಧದಿಂದ ವಿಶೇಷವಾದ ಶವಪೆಟ್ಟಿಗೆಯನ್ನು ನಿರ್ಮಿಸಲಾಗಿತ್ತು. ಕರುಣಾನಿಧಿ ಅವರ ಅಂತ್ಯಕ್ರಿಯೆಗೆ ಸಿದ್ಧವಾಗಿರುವ ಶವದ ಪೆಟ್ಟಿ ಅನೇಕ ವಿಶೇಷತೆಗಳಿಂದ ಕೂಡಿತ್ತು. ಜೊತೆಗೆ ಅದರ ಮೇಲೆ ‘ಬಿಡುವಿಲ್ಲದೇ ದುಡಿದವ ಇದರಲ್ಲಿ ವಿಶ್ರಮಿಸುತ್ತಿದ್ದಾನೆ’ ಎಂದು ತಮಿಳು ಭಾಷೆಯಲ್ಲಿ ಬರೆಯಲಾಗಿತ್ತು. ಶವಪೆಟ್ಟಿಗೆಯ ಒಳಗಡೆ ಸಂಪೂರ್ಣವಾಗಿ ಬಿಳಿ ರೇಷ್ಮೆಯಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ರೇಷ್ಮೆಯಿಂದಲೇ ಮಲಗುವ ಜಾಗದಲ್ಲಿ ಮೆತ್ತನೆಯ ಹಾಸಿಗೆ ಹಾಗೂ ತಲೆ ದಿಂಬು ಇಡಲಾಗಿತ್ತು. ಪೆಟ್ಟಿಗೆಯ ಅಂಚಿನಲ್ಲಿ ಕೆಂಪು ರೇಷ್ಮೆ ಏಳೆಯಿಂದ ಅಲಂಕಾರ ಮಾಡಲಾಗಿತ್ತು.

    ಗಣ್ಯರಿಂದ ಕಂಬನಿ:
    ಸಂಜೆ 4 ಗಂಟೆವರೆಗೆ ಕರುಣಾನಿಧಿಯ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕ ದರ್ಶನಕ್ಕಿಟ್ಟಿದ್ದ ರಾಜಾಜಿಹಾಲ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಪಳನಿಸ್ವಾಮಿ, ಡಿಸಿಎಂ ಪನ್ನೀರ್‍ಸೆಲ್ವಂ, ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೇರಳ ಸಿಎಂ ಪಿಣರಾಯಿ ವಿಜಯನ್, ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್ ಮುಖಂಡ ಗುಲಾಂ ನಬೀ ಆಜಾದ್, ಸಂಸದ ವೀರಪ್ಪ ಮೊಯ್ಲಿ, ಎಸ್‍ಪಿ ನಾಯಕ ಅಖಿಲೇಶ್ ಯಾದವ್ ಅಂತಿಮ ನಮನ ಸಲ್ಲಿಸಿದ್ರು.

    ನಟರಾದ ರಜನಿಕಾಂತ್, ಕಮಲ್ ಹಾಸನ್ ಸಹ ಶ್ರದ್ಧಾಂಜಲಿ ಅರ್ಪಿಸಿದ್ರು. ಬೆಳಗ್ಗೆಯೇ ಸಂತಾಪ ಸೂಚಿಸಿ ಸಂಸತ್ ಕಲಾಪವನ್ನು ನಾಳೆಗೆ ಮುಂದೂಡಲಾಯ್ತು. ನನಗೂ ಅಪ್ಪನ ಸ್ಥಾನದಲ್ಲಿದ್ದರು ಅಂತ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ರು. ಇತ್ತ, ರಾಜ್ಯದಲ್ಲಿ ವಿಧಾನಸೌಧ, ಹೈಕೋರ್ಟ್ ಮೇಲಿರೋ ತ್ರಿವರ್ಣ ಧ್ವಜ ಅರ್ಧಕ್ಕೆ ಇಳಿಸಿ ಗೌರವ ಸೂಚಿಸಲಾಯಿತು. ಈ ಮಧ್ಯೆ, ಕರುಣಾನಿಧಿ ನಿಧನಕ್ಕೆ ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ಪ್ರಧಾನಿ ವಿಕ್ರಮಸಿಂಘೆ, ಮಾಜಿ ಅಧ್ಯಕ್ಷ ರಾಜಪಕ್ಸ ಸಹ ಕಂಬನಿ ಮಿಡಿದಿದ್ದಾರೆ.

  • ಫ್ಲಾಪ್ ಆದ್ರೆ ಚಿತ್ರಕ್ಕೆ ಹೂಡಿದ ಹಣ ವಾಪಸ್ ನೀಡ್ತೀನಿ: ನಿರ್ಮಾಪಕರಿಗೆ ಚಾಲೆಂಜ್ ಹಾಕಿದ್ದ ಕರುಣಾನಿಧಿ

    ಫ್ಲಾಪ್ ಆದ್ರೆ ಚಿತ್ರಕ್ಕೆ ಹೂಡಿದ ಹಣ ವಾಪಸ್ ನೀಡ್ತೀನಿ: ನಿರ್ಮಾಪಕರಿಗೆ ಚಾಲೆಂಜ್ ಹಾಕಿದ್ದ ಕರುಣಾನಿಧಿ

    – ಸಿನಿ ಬದುಕಿನ ಬಗ್ಗೆ ಹಿರಿಯ ನಟ ರಾಜೇಶ್ ಮಾತು

    ಮೈಸೂರು: ತಮಿಳುನಾಡಿನ ಮಾಜಿ ಸಿಎಂ ಡಿಎಂಕೆ ನಾಯಕ ಕರುಣಾನಿಧಿ ಅವರ ಬಗ್ಗೆ ಹಿರಿಯ ನಟ ರಾಜೇಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ ಕಂಬನಿ ಮಿಡಿದಿದ್ದಾರೆ.

    ಹಿರಿಯ ನಟ ರಾಜೇಶ್ ನೆನಪಿಸಿದ್ದು ಹೀಗೆ:
    ನಾನು ಕರುಣಾನಿಧಿ ಅವರನ್ನು 70- 75 ವರ್ಷದಿಂದ ನೋಡಿದ್ದೇನೆ. ಅವರು 20ನೇ ಶತಮಾನದ 50ನೇ ದಶಕದಲ್ಲಿ ಅವರು ಚಿತ್ರ ಸಾಹಿತಿಯಾಗಿ ಬಹಳ ಪ್ರಖ್ಯಾತಿ ಪಡೆದಿದ್ದರು. ‘ಪರಾಶಕ್ತಿ’ ಚಿತ್ರದ ಮೂಲಕ ಶಿವಾಜಿ ಗಣೇಶನ್‍ರನ್ನು ಕರುಣಾನಿಧಿ ಅವರೇ ತಮಿಳು ಚಿತ್ರರಂಗಕ್ಕೆ ಪರಿಚಯಿಸಿದ್ದರು. ಆಗ ನಿರ್ಮಾಪಕರು ಈತ ಬೇಡ ಎಂದು ಹೇಳಿದ್ದರು. ಆಗ ಕರುಣಾನಿಧಿ, ಇವರು ಬಹಳ ಶ್ರೇಷ್ಟ ನಟ ಎಂದು ಹೇಳಿದ್ದರು.

    ಕರುಣಾನಿಧಿ ಮಾತನ್ನು ಕೇಳದ ನಿರ್ಮಾಪಕ ನನಗೆ ಈತ ಬೇಡ, ಈತನಿಗೆ ಪರ್ಸನಾಲಿಟಿ ಕೂಡ ಇಲ್ಲ, ಈತ ನನ್ನ ಚಿತ್ರದಲ್ಲಿ ನಟಿಸಿದ್ದರೆ ನನ್ನ ಚಿತ್ರ ಫ್ಲಾಪ್ ಆಗುತ್ತೆ ಎಂದು ಹೇಳಿದ್ದರು. ಆಗ ಕರುಣಾನಿಧಿ ನಿನ್ನ ಚಿತ್ರ ಫ್ಲಾಪ್ ಆದರೆ ನಾನು ನಿನ್ನ ಚಿತ್ರದ ಹಣ ನೀಡುವೆ ಎಂದು ಚಾಲೆಂಜ್ ಹಾಕಿದ್ದರು. ಚಾಲೆಂಜ್ ಹಾಕಿದ ನಂತರ ಪರಾಶಕ್ತಿ ಸಿನಿಮಾ ಬಿಡುಗಡೆಯಾಗಿ ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಬಹಳ ಯಶಸ್ಸು ಕಂಡಿತ್ತು.

    ತಮಿಳು ಭಾಷೆ, ತಮಿಳು ಸಾಹಿತ್ಯ ಹಾಗೂ ತಮಿಳು ಸಿನಿಮಾ ಡೈಲಾಗ್ ಬರೆಯುತ್ತಿದ್ದ ಕರುಣಾನಿಧಿ ಅವರಿಗೆ ಸಾಕಷ್ಟು ಯಶಸ್ಸು ದೊರೆಯಿತು. ಅವರ ಗುರು ಅಣ್ಣಾದೊರೈ ಇಬ್ಬರು ತಮಿಳು ಭಾಷೆಗಾಗಿ ಚಾರಿತ್ರಿಕವಾಗಿ ದುಡಿದ್ದು, ಯಶಸ್ಸನ್ನು ಸಂಪಾದನೆ ಮಾಡಿದ್ದರು. ಅಣ್ಣಾದೊರೈ ಹಾಗೂ ಕರುಣಾನಿಧಿ ಸಿನಿಮಾದಲ್ಲಿ ಬೆಳೆದರು. ನಂತರ ಕರುಣಾನಿಧಿ ರಾಜಕೀಯದತ್ತ ಮುಖ ಮಾಡಿದ್ದರು.

    ಕರುಣಾನಿಧಿಗೆ ರಾಜಕೀಯದಲ್ಲಿ ಒಂದು ನೆಲೆ ಸಿಕ್ತು. ಹೀಗಾಗಿ ಅವರು ನೆಲ ಕಂಡುಕಂಡ ಮೇಲೆ ರಾಜಕೀಯದಲ್ಲಿ ಪ್ರಭುತ್ವವನ್ನು ಸಾಧಿಸುತ್ತಾ ಹೋದರು. ಬಳಿಕ ಜನರು ಡಿಎಂಕೆ ಪಕ್ಷವನ್ನು ಕಟ್ಟಿದ್ದರು. ಜನರು ಸಹಾಯ ಮಾಡಿ ಡಿಎಂಕೆ ಅಭ್ಯರ್ಥಿಗಳನ್ನು ಗೆಲ್ಲಿಸಿ, ಡಿಎಂಕೆ ಸ್ಥಾನಮಾನ ಕಂಡುಕೊಟ್ಟರು. ಬಳಿಕ ಅಣ್ಣಾದೊರೈ ಮುಖ್ಯಮಂತ್ರಿಯಾಗಿ ರಾಜ್ಯದ ಜನರಿಗೆ ಹಾಗೂ ಸಿನಿಮಾ ಚಿತ್ರರಂಗಕ್ಕೆ ಸಹಾಯ ಮಾಡುತ್ತಿದ್ದರು. ಹೀಗಿರುವಾಗ ಅಣ್ಣಾದೊರೈ ಗಂಟಲ ಬೇನೆಯಾಗಿ ಆಪರೇಶನ್ ಯಶಸ್ಸು ಕಾಣದೇ ಅಲೇ ನಿಧನರಾದರು. ಬಳಿಕ ಅಣ್ಣಾದೊರೈ ಮೃತದೇಹವನ್ನು ತಮಿಳುನಾಡಿಗೆ ಕರೆತಂದು ಅದ್ಭುತ ಗೌರವದಿಂದ ಅವರ ಅಂತ್ಯಕ್ರಿಯೆ ಮಾಡಿದ್ದರು. ಅಣ್ಣದೊರೈ ನಿಧನ ಹೊಂದಿನ ಬಳಿಕ ಸ್ಥಾನಕ್ಕೆ ಕರುಣಾನಿಧಿ ಬಂದರು. ಕರುಣಾನಿಧಿ ಡಿಎಂಕೆ ಕಟ್ಟಿ ಪ್ರಚಂಡ ಯಶಸ್ಸು ಕಂಡು ಮುಖ್ಯಮಂತ್ರಿಯಾದರು. ಕರುಣಾನಿಧಿ ಮುಖ್ಯಮಂತ್ರಿ ಆದ ಬಳಿಕವೂ ಒಳ್ಳೆಯ ಕೆಲಸ ಮಾಡಿದ್ದಾರೆ.

  • ಮುಜರಾಯಿ ಇಲಾಖೆಯಲ್ಲಿನ ನಿಯಮ ಬದಲಾವಣೆಗೆ ಸ್ಫೂರ್ತಿಯಾಗಿದ್ದ ಕರುಣಾನಿಧಿ!

    ಮುಜರಾಯಿ ಇಲಾಖೆಯಲ್ಲಿನ ನಿಯಮ ಬದಲಾವಣೆಗೆ ಸ್ಫೂರ್ತಿಯಾಗಿದ್ದ ಕರುಣಾನಿಧಿ!

    ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆಯಲ್ಲಿನ ನಿಯಮ ಬದಲಾವಣೆಗೆ ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ಸ್ಫೂರ್ತಿಯಾಗಿದ್ದಾರೆ.

    ಹೌದು. ಸಿದ್ದರಾಮಯ್ಯನವರು ಕರ್ನಾಟಕದ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇಗುಲದಲ್ಲಿ ಎಲ್ಲಾ ಜಾತಿಯವರು ಅರ್ಚಕರಾಗಲು ಅವಕಾಶ ಕಲ್ಪಿಸಿ, ಆಗಮ ಶಾಲೆಯನ್ನು ತೆರೆಯಲು ಆದೇಶ ನೀಡಿದ್ದರ ಹಿಂದೆ ಕರುಣಾನಿಧಿಯವರ ಪ್ರೇರಕ ಶಕ್ತಿ ಕೆಲಸ ಮಾಡಿತ್ತು.

    ಕರುಣಾನಿಧಿಯವರು ಬ್ರಾಹ್ಮಣೇತರರಿಗೂ ದೇಗುಲದ ಅರ್ಚಕರಾಗಲು ಅವಕಾಶ ಕಲ್ಪಿಸಲು 47 ವರ್ಷದ ಹಿಂದೆಯೇ ತಮಿಳುನಾಡಲ್ಲಿ ಬಾರೀ ಹೋರಾಟ ನಡೆಸಿದ್ದರು. ಅಲ್ಲದೇ ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಯಾರು ಬೇಕಾದರೂ ದೇಗುಲದ ಅರ್ಚಕರಾಗಬಹುದು ಎಂದು ಕಾಯ್ದೆಯನ್ನು ಜಾರಿಗೆ ತಂದಿದ್ದರು.

    ಈ ಕಾಯ್ದೆಯನ್ನು ವಿರೋಧಿಸಿ ತಮಿಳುನಾಡಿನಲ್ಲಿ ಭಾರೀ ಹೋರಾಟವೇ ನಡೆದಿತ್ತು. 2006 ರಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಮೇಲೆ ಈ ಕಾಯ್ದೆಯನ್ನು ಜಾರಿಗೊಳಿಸಿಯೇ ಬಿಟ್ಟರು. ಕರುಣಾನಿಧಿಯವರು ದಲಿತರು ಸೇರಿದಂತೆ ಎಲ್ಲರಿಗೂ ಅರ್ಚಕರಾಗೋದಕ್ಕೆ ಆಗಮ ಶಾಲೆಯನ್ನು ಸಹ ಪ್ರಾರಂಭಿಸಿದ್ದರು.

    ಕರುಣಾನಿಧಿಯವರ ಪ್ರೇರಣೆಯಿಂದ ತಮಿಳುನಾಡಿನಲ್ಲಿ ತಂದ ಬದಲಾವಣೆಗಳನ್ನು ಕರ್ನಾಟಕದಲ್ಲೂ ಜಾರಿಗೆ ತರಲು ಸಿದ್ದರಾಮಯ್ಯ ಮುಂದಾದರು. ದಲಿತ ಅರ್ಚಕರನ್ನು ನಾವು ಯಾಕೆ ಮುಜರಾಯಿ ದೇವಾಲಯದಲ್ಲಿ ನೇಮಿಸಬಾರದು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಹೀಗಾಗಿ ಈಗ ಕರ್ನಾಟಕದಲ್ಲೂ ದಲಿತರು ಸಂಸ್ಕೃತದಲ್ಲಿ ಆಗಮ ಶಾಸ್ತ್ರಗಳನ್ನು ಕಲಿಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • 3 ಟನ್ ಹೂವಿನ ಅಲಂಕಾರ: ಕರುಣಾನಿಧಿಗೆ ಅಭಿಮಾನಿಗಳಿಂದ ಶ್ರದ್ಧಾಂಜಲಿ

    3 ಟನ್ ಹೂವಿನ ಅಲಂಕಾರ: ಕರುಣಾನಿಧಿಗೆ ಅಭಿಮಾನಿಗಳಿಂದ ಶ್ರದ್ಧಾಂಜಲಿ

    ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ವಿಧಿವಶರಾದ ಹಿನ್ನೆಲೆ ತಮಿಳುನಾಡು ಸಂಪೂರ್ಣ ಬಂದ್ ಆಗಿದ್ದು ಅಭಿಮಾನಿಗಳು ನೆಚ್ಚಿನ ನಾಯಕನಿಗೆ ಮೂರು ಟನ್ ಹೂವನ್ನು ಅರ್ಪಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.

    ಆನೇಕಲ್ ಗಡಿಭಾಗವಾದ ಹೊಸೂರಿನಲ್ಲಿ ಇರುವಂತಹ ಹೂವಿನ ಮಾರುಕಟ್ಟೆಯ ವ್ಯಾಪಾರಿಗಳು ಮೂರು ಟನ್ ವಿಧವಿಧವಾದ ಹೂವನ್ನು ಕರುಣಾನಿಧಿ ಅವರ ಭಾವಚಿತ್ರಕ್ಕೆ ಅರ್ಪಿಸುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿರುವುದಾಗಿ ವ್ಯಾಪಾರಿ ಚಂದ್ರಶೇಖರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಹೂವಿನ ಮಾರುಕಟ್ಟೆಯನ್ನು ಈವರೆಗೂ ಎಂದೂ ಬಂದ್ ಮಾಡಿಲ್ಲ. ಆದ್ರೆ ಇಂದು ಮಾರುಕಟ್ಟೆಯನ್ನು ಬಂದ್ ಮಾಡಲಾಗಿದೆ. ಹೀಗಾಗಿ ಸುಮಾರು 3ರಿಂದ 4 ಟನ್ ಹೂವುಗಳಿಂದ ಕರುಣಾನಿಧಿ ಅವರ ಫೋಟೋಗೆ ಅಲಂಕಾರ ಮಾಡಿ ಶ್ರದ್ಧಾಂಜಲಿ ಕೋರುತ್ತಾ ಇದ್ದೇವೆ. ಯಾಕಂದ್ರೆ 80 ವರ್ಷ ಜನಕ್ಕೋಸ್ಕರ ಹೋರಾಡಿದ ವ್ಯಕ್ತಿ ಅವರಾಗಿದ್ದಾರೆ. ಹಾಗೆಯೇ 50 ವರ್ಷ ಬರೀ ರಾಜಕೀಯದಲ್ಲೇ ಕಾಲ ಕಳೆದ ವ್ಯಕ್ತಿಯೂ ಆಗಿದ್ದಾರೆ. 25 ವರ್ಷ ಮುಖ್ಯಮಂತ್ರಿಯಾಗಿದ್ದು, ಜನಗಳಿಗೆ ಬೇಕಾದಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಅವರ ಈ ಕಾರ್ಯದಿಂದ ಇಂದು ಎಲ್ಲೆಲ್ಲಿ ತಮಿಳಿಗರು ಇದ್ದಾರೆಯೋ ಅವರೆಲ್ಲರೂ ಕರುಣಾನಿಧಿಗೆ ಸಂತಾಪ ಸೂಚಿಸುತ್ತಿದ್ದಾರೆ ಅಂದ್ರು.

    ಕರ್ನಾಟಕ ತಮಿಳುನಾಡು ಗಡಿಭಾಗವಾದ ಅತ್ತಿಬೆಲೆಯಲ್ಲಿ ನೆನ್ನೆಯಿಂದಲೇ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹೊಸೂರಿನಾದ್ಯಂತ ಸರ್ಕಾರಿ ಹಾಗು ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಕರ್ನಾಟಕದ ಯಾವುದೇ ವಾಹನಗಳನ್ನು ತಮಿಳುನಾಡಿಗೆ ಹೋಗದಂತೆ ನಿರ್ಬಂಧ ಹೇರಿದ್ದು ಗಡಿಭಾಗದಿಂದಲ್ಲೇ ಎಲ್ಲಾ ಕರ್ನಾಟಕ ವಾಹನಗಳನ್ನು ತಡೆಯೊಡ್ಡಿ ಹಿಂದಿರುಗಿಸಿ ಕಳುಹಿಸುತ್ತಿದ್ದಾರೆ. ಇನ್ನು ಕರುಣಾನಿಧಿ ಅವರ ಸಾವಿನ ವಿಷಯ ತಿಳಿಯುತ್ತಿದ್ದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಮುಚ್ಚಿ ಅಗಲಿದ ನೆಚ್ಚಿನ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

    ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಅವರು ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ವಿಧಿವಶರಾದ್ರು.

    ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

  • ತಮಿಳುನಾಡಿಗೆ ಹೋಗೋ ಎಲ್ಲ ವಾಹನಗಳ ಸಂಚಾರ ಬಂದ್!

    ತಮಿಳುನಾಡಿಗೆ ಹೋಗೋ ಎಲ್ಲ ವಾಹನಗಳ ಸಂಚಾರ ಬಂದ್!

    ಚಾಮರಾಜನಗರ/ಆನೇಕಲ್: ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಿಂದ ತಮಿಳುನಾಡಿಗೆ ಹೋಗುವ ಎಲ್ಲಾ ವಾಹನಗಳನ್ನು ಪೊಲೀಸರು ಸೋಮವಾರಪೇಟೆ ಹಾಗೂ ಅತ್ತಿಬೆಲೆಯ  ಬಳಿ ತಡೆಹಿಡಿದಿದ್ದಾರೆ.

    ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ನಿಧನದ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ಮುಂಜಾಗ್ರತ ಕ್ರಮವಾಗಿ ರಾಜ್ಯದಿಂದ ತಮಿಳುನಾಡಿಗೆ ಹೋಗುತ್ತಿದ್ದ ವಾಹನಗಳನ್ನು ತಡೆಹಿಡಿದಿದ್ದಾರೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಡಿ ಭಾಗದಲ್ಲಿ ಭದ್ರತೆಯನ್ನು ಸಹ ಹೆಚ್ಚಿಸಿದ್ದಾರೆ.

    ಕರುಣಾನಿಧಿಯವರ ನಿಧನದಿಂದಾಗಿ ಅಭಿಮಾನಿಗಳು ತಮಿಳುನಾಡಿನ ಹಲವು ಕಡೆ ದಾಳಿ ನಡೆಸುತ್ತಿದ್ದು, ಬಸ್ ಗಳ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಪೊಲೀಸ್ ಇಲಾಖೆ ತಮಿಳುನಾಡಿಗೆ ತೆರಳುತ್ತಿದ್ದ ಎಲ್ಲಾ ವಾಹನಗಳನ್ನು ತಾತ್ಕಾಲಿಕವಾಗಿ ತಡೆಹಿಡಿದ್ದಾರೆ.

    ಗಡಿಭಾಗವಾದ ಅತ್ತಿಬೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಗಡಿಯಲ್ಲಿ ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗಿದೆ. ತಮಿಳುನಾಡಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಬಂದ್ ಆಗಿದ್ದು, ಕರ್ನಾಟಕ ವಾಹನಗಳು ತಮಿಳುನಾಡಿಗೆ ಹೋಗದಂತೆ ಹಾಗೂ ತಮಿಳುನಾಡಿನ ವಾಹನಗಳು ಕರ್ನಾಟಕಕ್ಕೆ ಬರದಂತೆ ನಿರ್ಬಂಧ ಪಡಿಸಿ ಗಡಿಭಾಗದಿಂದ ವಾಹನಗಳನ್ನು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ.

    ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಅವರು ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಂಜೆ ವಿಧಿವಶರಾದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಕ್ರಿಕೆಟ್ ಅಭಿಮಾನಿ ಕರುಣಾನಿಧಿ: ಮೊಮ್ಮಕ್ಕಳ ಜೊತೆ ಆಡುತ್ತಿರುವ ವಿಡಿಯೋ ನೋಡಿ

    ಕ್ರಿಕೆಟ್ ಅಭಿಮಾನಿ ಕರುಣಾನಿಧಿ: ಮೊಮ್ಮಕ್ಕಳ ಜೊತೆ ಆಡುತ್ತಿರುವ ವಿಡಿಯೋ ನೋಡಿ

    ಬೆಂಗಳೂರು: ಚಿತ್ರ ಸಾಹಿತಿ, ಪತ್ರಕರ್ತ, ರಾಜಕಾರಣಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಕ್ರಿಕೆಟ್ ಅಭಿಮಾನಿಯಾಗಿದ್ದರು. ಇನ್ನು ವಿಶೇಷ ಏನೆಂದರೆ ಭಾರತ ತಂಡದ ಮಹತ್ವದ ಪಂದ್ಯ ಇದ್ದಾಗ ಸಭೆಗಳನ್ನು ರದ್ದು ಮಾಡಿ ಕ್ರಿಕೆಟ್ ವೀಕ್ಷಿಸುತ್ತಿದ್ದರು.

    2011 ರಲ್ಲಿ ಭಾರತ ತಂಡ ವಿಶ್ವಕಪ್ ಗೆದ್ದಾಗ ಮುಖ್ಯಮಂತ್ರಿಯಾಗಿದ್ದ ಅವರು 3 ಲಕ್ಷ ರೂ. ನಗದು ಬಹುಮಾನವನ್ನು ಪ್ರಕಟಿಸಿದ್ದರು. ಈ ವೇಳೆ ತಂಡದಲ್ಲಿದ್ದ ಏಕೈಕ ತಮಿಳಿಗ ಆರ್ ಅಶ್ವಿನ್ ಅವರಿಗೆ 1 ಕೋಟಿ ರೂ. ಬಹುಮಾನವನ್ನು ನೀಡಿದ್ದರು.

    2013ರಲ್ಲಿ ಕರುಣಾನಿಧಿ ಕಪಿಲ್ ದೇವ್ ಮತ್ತು ಧೋನಿ ನನ್ನ ಫೇವರೇಟ್ ಕ್ರಿಕೆಟ್ ಆಟಗಾರರು ಎಂದು ಟ್ವೀಟ್ ಮಾಡಿದ್ದರು. ಸಚಿನ್ ತೆಂಡೂಲ್ಕರ್ ಅವರ `ಫ್ಲೈಯಿಂಗ್ ಇಟ್ ಮೈ ವೇ’ ಆತ್ಮಚರಿತ್ರೆಯನ್ನು ಕರುಣಾನಿಧಿ ಓದಿದ್ದರು.

    ಕೆಲವು ಸಂದರ್ಭದಲ್ಲಿ ಸ್ಟೇಡಿಯಂ ಹೋಗಿ ಕ್ರಿಕೆಟ್ ವೀಕ್ಷಿಸುತ್ತಿದ್ದ ಕರುಣಾನಿಧಿ ಬಿಡುವಿನ ಸಮಯದಲ್ಲಿ ಮೊಮ್ಮಕ್ಕಳ ಜೊತೆ ಕ್ರಿಕೆಟ್ ಆಡುತ್ತಿದ್ದರು. ಈಗ ಮೊಮ್ಮಕಳ ಜೊತೆ ಕ್ರಿಕೆಟ್ ಆಡುತ್ತಿದ್ದ ವಿಡಿಯೋ ವೈರಲ್ ಆಗಿದೆ.