Tag: Karur

  • ಕರೂರು ಕಾಲ್ತುಳಿತ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ ಸುಪ್ರೀಂ ಕೋರ್ಟ್ ಸಮಿತಿ

    ಕರೂರು ಕಾಲ್ತುಳಿತ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ ಸುಪ್ರೀಂ ಕೋರ್ಟ್ ಸಮಿತಿ

    ನವದೆಹಲಿ/ಚೆನ್ನೈ: ಕರೂರು ಕಾಲ್ತುಳಿತ (Karur Stampede) ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ (Supreme Court) ನೇಮಿಸಿದ ಸಮಿತಿಯು ಅಗತ್ಯವಿದ್ದರೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.

    ತಮಿಳುನಾಡಿನ (Tamilnadu) ಕರೂರಿನಲ್ಲಿ ಟಿವಿಕೆ ನಾಯಕ (TVK Vijay) ವಿಜಯ್ ಅವರ ರ‍್ಯಾಲಿ ಸಂದರ್ಭದಲ್ಲಿ 41 ಜನರು ಸಾವನ್ನಪ್ಪಿದ್ದರು. ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ವತಂತ್ರ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಎಸ್‌ಐಟಿಯಲ್ಲಿ ತಮಿಳುನಾಡಿನ ಪೊಲೀಸರೇ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿತ್ತು. ಅರ್ಜಿ ವಿಚಾರಣೆ ಬಳಿಕ ಕರೂರು ಕಾಲ್ತುಳಿತ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಅಲ್ಲದೇ ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್ ರಚಿಸಿತ್ತು.ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ಸದ್ಯ ಸುಪ್ರೀಂಕೋರ್ಟ್ ರಚಿಸಿದ ಸಮಿತಿಯು ಸಿಬಿಐ ನಿರ್ದೇಶಕರ ಬಳಿ ಕೆಲವು ದಾಖಲೆಗಳನ್ನು ಕೋರಿದ್ದು, ತನಿಖೆಯ ಭಾಗವಾಗಿ ಘಟನಾ ಸ್ಥಳಕ್ಕೆ ಸುಪ್ರೀಂಕೋರ್ಟ್ ನೇಮಿಸಿದ ಸಮಿತಿಯು ಭೇಟಿ ನೀಡಲಿದೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ರಚಿಸಿರುವ ಈ ಸಮಿತಿಯಲ್ಲಿ ತಮಿಳುನಾಡು ಕೇಡರ್‌ನ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಸುಮಿತ್ ಸರನ್ ಮತ್ತು ಸೋನಲ್ ವಿ ಮಿಶ್ರಾ ಕೂಡ ಇದ್ದಾರೆ.

    ಸೆಪ್ಟೆಂಬರ್ 27ರಂದು ನಟ, ಟಿವಿಕೆ ಮುಖ್ಯಸ್ಥ ವಿಜಯ್ ತಮಿಳುನಾಡಿನ ಕರೂರಿನಲ್ಲಿ ರ‍್ಯಾಲಿ ಹಮ್ಮಿಕೊಂಡಿದ್ದರು. ಈ ವೇಳೆ ವಿಜಯ್ ಅನ್ನು ನೋಡಲು ಲಕ್ಷಾಂತರ ಜನರು ಆಗಮಿಸಿದ್ದರು. ಜೊತೆಗೆ ಆ ದಿನ ವಿಜಯ್ ಕರೂರಿಗೆ 7 ಗಂಟೆ ತಡವಾಗಿ ಆಗಮಿಸಿದ್ದರು. ಇದರಿಂದ ಜನಸಂದಣಿ ಹೆಚ್ಚಾಗಿ, ಕಾಲ್ತುಳಿತ ಸಂಭವಿಸಿತ್ತು. ಪರಿಣಾಮ 41 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಸುಪ್ರೀಂ ಆದೇಶ

  • ಕರೂರಿನಲ್ಲಿ ಭೇಟಿಯಾಗದ್ದಕ್ಕೆ ಕ್ಷಮಿಸಿ – ಮೃತರ ಕುಟುಂಬಸ್ಥರನ್ನ ಭೇಟಿಯಾಗಿ 7.8 ಕೋಟಿ ಪರಿಹಾರ ವಿತರಿಸಿದ ವಿಜಯ್

    ಕರೂರಿನಲ್ಲಿ ಭೇಟಿಯಾಗದ್ದಕ್ಕೆ ಕ್ಷಮಿಸಿ – ಮೃತರ ಕುಟುಂಬಸ್ಥರನ್ನ ಭೇಟಿಯಾಗಿ 7.8 ಕೋಟಿ ಪರಿಹಾರ ವಿತರಿಸಿದ ವಿಜಯ್

    – ಘಟನೆ ನಡೆದ ಬರೋಬ್ಬರಿ ಒಂದು ತಿಂಗಳಿಗೆ ಭೇಟಿ

    ಚೆನ್ನೈ: ಕರೂರಿನಲ್ಲಿ (Karur) ಭೇಟಿಯಾಗದಿರೋದಕ್ಕೆ ಕ್ಷಮಿಸಿ ಎಂದು ನಟ, ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ (TVK Vijay) ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿಯಾಗಿ, 7.8 ಕೋಟಿ ರೂ. ಪರಿಹಾರ ನೀಡಿ, ಸಾಂತ್ವನ ಹೇಳಿದ್ದಾರೆ.

    ತಮಿಳುನಾಡಿನಲ್ಲಿ (Tamilnadu) ಕರೂರು ಭೀಕರ ಕಾಲ್ತುಳಿತ ದುರಂತ ಸಂಭವಿಸಿ ಇಂದಿಗೆ 1 ತಿಂಗಳು. ಸೆ.27ರಂದು ಟಿವಿಕೆ ವಿಜಯ್ ಅವರ ರ‍್ಯಾಲಿಯಲ್ಲಿ 41 ಜನ ಪ್ರಾಣ ಕಳೆದುಕೊಂಡಿದ್ದರು. ಘಟನೆ ನಡೆದು ಬರೋಬ್ಬರಿ ಒಂದು ತಿಂಗಳಿಗೆ ವಿಜಯ್ ಮೃತರ ಕುಟುಂಬಸ್ಥರನ್ನ ಭೇಟಿ ಮಾಡಿ, ಕರೂರಿನಲ್ಲಿ ಭೇಟಿಯಾಗದಿರೋದಕ್ಕೆ ಕ್ಷಮೆಯಾಚಿಸಿದ್ದಾರೆ.ಇದನ್ನೂ ಓದಿ: ಕಾಲ್ತುಳಿತಕ್ಕೆ 41 ಜನ ಸಾವು ಕೇಸ್‌ – ಅ.27ಕ್ಕೆ ಮೃತರ ಕುಟುಂಬಸ್ಥರ ಭೇಟಿಯಾಗಲಿರೋ ವಿಜಯ್‌

    ಮೃತಪಟ್ಟವರ ಕುಟುಂಬಸ್ಥರನ್ನು ಚೆನ್ನೈ ಬಳಿಯ ಮಹಾಬಲಿಪುರಂನಲ್ಲಿರುವ ರೆಸಾರ್ಟ್‌ನಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಕರೂರಿನಿಂದ ಒಟ್ಟು 37 ಕುಟುಂಬಗಳನ್ನು ರೆಸಾರ್ಟ್‌ಗೆ ಕರೆತರಲಾಗಿತ್ತು. ಅವರಿಗಾಗಿ ಟಿವಿಕೆ ಪಕ್ಷ, ರೆಸಾರ್ಟ್‌ನ ಸುಮಾರು 50 ಕೊಠಡಿಗಳನ್ನು ಕಾಯ್ದಿರಿಸಿತ್ತು. ಟಿವಿಕೆ ನಾಯಕ ಸಂತ್ರಸ್ತ ಕುಟುಂಬಸ್ಥರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿ, ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 2 ಲಕ್ಷ ರೂ.ಯಂತೆ ಒಟ್ಟು 7.8 ಕೋಟಿ ರೂ. ಪರಿಹಾರ ವಿತರಣೆ ಮಾಡಿದ್ದಾರೆ.

    ಇನ್ನೂ ಇದೇ ವೇಳೆ ಸಂತ್ರಸ್ತ ಕುಟುಂಬಗಳಿಗೆ ಶಿಕ್ಷಣದ ಜೊತೆಗೆ ಆರ್ಥಿಕ ಸಹಾಯ, ಉದ್ಯೋಗದ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಮಧ್ಯೆ, ರಾಜಕೀಯ ಸಮಾವೇಶ, ರೋಡ್‌ಶೋ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮ ಆಯೋಜನೆಗೆ 10 ದಿನಗಳ ಒಳಗೆ ಎಸ್‌ಓಪಿ ರಚಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ.ಇದನ್ನೂ ಓದಿ:

  • ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

    ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

    – ಬೇರೆ ಎಲ್ಲೂ ನಡೆಯದ ದುರಂತ ಕರೂರಿನಲ್ಲಿ ಮಾತ್ರ ಯಾಕಾಯ್ತು?
    – ಕಾಲ್ತುಳಿತದ ಹಿಂದಿನ ಸತ್ಯ ಶೀಘ್ರ ಬಹಿರಂಗಗೊಳ್ಳುತ್ತೆ

    ಚೆನ್ನೈ: ಕರೂರು ಕಾಲ್ತುಳಿತ (Karur Stampede) ದುರಂತ ಸಂಭವಿಸಿದ ಮೂರು ದಿನಗಳ ಬಳಿಕ ನಟ, ಟಿವಿಕೆ ಮುಖ್ಯಸ್ಥ ವಿಜಯ್ (Actor Vijay) ವಿಡಿಯೋವೊಂದನ್ನು ಹಂಚಿಕೊಂಡಿದ್ದು, ದುರಂತದ ಹಿಂದಿನ ಸತ್ಯ ಶೀಘ್ರದಲ್ಲೇ ಬಹಿರಂಗಗೊಳ್ಳುತ್ತದೆ ಎಂದಿದ್ದಾರೆ.

    ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಮೂಲಕ ಸಂದೇಶವನ್ನು ಹಂಚಿಕೊಂಡಿರುವ ಅವರು, ನನ್ನ ಜೀವನದಲ್ಲೇ ಇಂತಹ ನೋವಿನ ದಿನಗಳನ್ನು ನಾನು ಅನುಭವಿಸಿಲ್ಲ. ನಿಜಕ್ಕೂ ಈ ಸಂಗತಿಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ, ಬರೀ ನೋವೇ ತುಂಬಿಕೊಂಡಂತಾಗಿದೆ. ಜನರು ನನ್ನ ಮೇಲಿನ ಪ್ರೀತಿಯಿಂದಾಗಿ ನನ್ನನ್ನು ನೋಡಲು ಬರುತ್ತಾರೆ. ಅವರ ಪ್ರೀತಿ, ವಿಶ್ವಾಸಕ್ಕೆ ನಾನು ಯಾವಾಗಲೂ ಚಿರಋಣಿ. ಆದರೆ ಆ ಎಲ್ಲದಕ್ಕೂ ಮಿಗಿಲಾಗಿ ಜನರ ರಕ್ಷಣೆಯೇ ನನ್ನ ಮೊದಲ ಆದ್ಯತೆ. ನಾನು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ಕೊಡುತ್ತೇನೆ. ಶೀಘ್ರದಲ್ಲಿಯೇ ಈ ಘಟನೆ ಹಿಂದಿನ ಸತ್ಯ ಬಹಿರಂಗವಾಗುತ್ತದೆ ಎಂದು ಪ್ರತಿಜ್ಞೆ ಮಾಡಿದ್ದಾರೆ.ಇದನ್ನೂ ಓದಿ: ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಕೇಸ್‌ – ಟಿವಿಕೆ ನಾಯಕ ಅರೆಸ್ಟ್‌

    ಈ ಘಟನೆಗೂ ಮುನ್ನ ನಾನು ರಾಜಕೀಯವನ್ನು ಬದಿಗಿಟ್ಟು ಜನರ ಸುರಕ್ಷತೆಗಾಗಿ ಸೂಕ್ತವಾದ ಸ್ಥಳವನ್ನು ಆರಿಸಿ, ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದೆ. ಆದರೆ ಏನಾಗಬಾರದು ಎಂದುಕೊಂಡಿದ್ದೆ, ಅದೇ ನಡೆದು ಹೋಗಿದೆ. ನಾನು ಒಬ್ಬ ಮನುಷ್ಯ. ಘಟನೆಯಲ್ಲಿ ಇಷ್ಟೊಂದು ಜನರಿಗೆ ತೊಂದರೆಯಾದಾಗ ನಾನು ಅಲ್ಲಿಯೇ ಇರಬಹುದಿತ್ತು. ಆದರೆ ನಾನಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು ಎಂದು ತಿಳಿದು ಅಲ್ಲಿಂದ ಹೊರಟು ಹೋದೆ ಎಂದಿದ್ದಾರೆ.

    ಇದಕ್ಕೂ ಮುನ್ನ ನಾವು ಐದು ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದೇವೆ, ಆದರೆ ಕರೂರಿನಲ್ಲಿ ಯಾಕೆ ಹೀಗಾಯ್ತು? ಹೇಗಾಯ್ತು? ಜನರಿಗೆ ಎಲ್ಲ ಗೊತ್ತಿದೆ. ಅವರೆಲ್ಲವನ್ನೂ ನೋಡುತ್ತಿದ್ದಾರೆ. ಶೀಘ್ರವೇ ಎಲ್ಲ ಸತ್ಯ ಬಹಿರಂಗಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಮನವಿ ಮಾಡಿಕೊಂಡಿದ್ದು, ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ. ಆದರೆ ನನ್ನ ಬೆಂಬಲಿಗರಿಗೆ ಏನು ಮಾಡಬೇಡಿ. ನಾನು ಮನೆಯಲ್ಲಿ ಅಥವಾ ಕಚೇರಿಯಲ್ಲಿ ಇರುತ್ತೇನೆ. ನೀವು ನನ್ನ ಮೇಲೆ ಯಾವ ರೀತಿ ಬೇಕಾದರೂ ಕ್ರಮ ಕೈಗೊಳ್ಳಬಹುದು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

    ಏನಿದು ಘಟನೆ?
    ಸೆ.27ರಂದು ತಮಿಳುನಾಡಿನ ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ರ‍್ಯಾಲಿ ಹಮ್ಮಿಕೊಂಡಿದ್ದರು. ಅಂದು ಕರೂರಿಗೆ ಮಧ್ಯಾಹ್ನ ತಲುಪಬೇಕಿದ್ದ ವಿಜಯ್ ಏಳು ಗಂಟೆ ತಡವಾಗಿ ಆಗಮಿಸಿದ್ದರು. ಹೀಗಾಗಿ ಜನಸಂದಣಿ ಹೆಚ್ಚಾಗಿ, ಕಾಲ್ತುಳಿತ ಸಂಭವಿಸಿತ್ತು. ಪರಿಣಾಮ 41 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

  • ಕರೂರು ಕಾಲ್ತುಳಿತ – 39 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

    ಕರೂರು ಕಾಲ್ತುಳಿತ – 39 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

    ಚೆನ್ನೈ: ಕರೂರು ಕಾಲ್ತುಳಿತ ದುರಂತದಲ್ಲಿ (Karur Stampede) ಮೃತಪಟ್ಟ 39 ಮಂದಿಯ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಿಂದ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

    ಸರ್ಕಾರದ ವತಿಯಿಂದ ಅಂಬುಲೆನ್ಸ್ ವ್ಯವಸ್ಥೆ ಮಾಡಿ ಮೃತದೇಹಗಳನ್ನು ರವಾನಿಸಲಾಗಿದೆ. ಕುಟುಂಬಸ್ಥರು ಮೃತದೇಹಗಳನ್ನು ಅವರವರ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಸದ್ಯ ಗಾಯಾಳುಗಳು ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಿಳುನಾಡಿನ ಹಲವು ರಾಜಕೀಯ ಪಕ್ಷದ ಮುಖಂಡರುಗಳು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇನ್ನು ಆಸ್ಪತ್ರೆಗೆ ಡಿಸಿಎಂ ಉದಯನಿಧಿ ಭೇಟಿ ನೀಡಿ ಗಾಯಾಳುಗಳನ್ನು ಮಾತನಾಡಿಸಿ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಗಮನಿಸಿ – ದಸರಾ ಪ್ರಯುಕ್ತ ಮೈಸೂರು KSRTC ಬಸ್‌ ಟಿಕೆಟ್‌ ದರ ಏರಿಕೆ

    ತಮಿಳುನಾಡು ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ದಳಪತಿ (Vijay Thalapathy) ಆಯೋಜಿಸಿದ್ದ ಚುನಾವಣಾ ಪ್ರಚಾರದ ರ‍್ಯಾಲಿ ವೇಳೆ ಕಾಲ್ತುಳಿತ ದುರಂತ ನಡೆದಿದೆ. ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದು, 48 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸರ ಲಾಠಿಚಾರ್ಜ್‌ ಕಾರಣ: ಟಿವಿಕೆ ಆರೋಪ

    ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಇನ್ನು ಇದೇ ವೇಳೆ 9 ವರ್ಷದ ಬಾಲಕಿ ಕಳೆದು ಹೋಗಿರ್ತಾಳೆ. ಆಗ ವಿಜಯ್ ಮೈಕ್ ಮೂಲಕ ಪೊಲೀಸರಿಗೆ ಮನವಿ ಮಾಡ್ತಾರೆ. ಮೈಕ್‌ನಲ್ಲಿ ಅನೌನ್ಸ್ ಮಾಡುತ್ತಲೇ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಂದ್ಹಾಗೆ ರ‍್ಯಾಲಿ ತಡವಾಗಿ ಸಂಜೆ ಆರಂಭವಾಗಿತ್ತು. ಹೀಗಾಗಿ ವಿಜಯ್ ನೋಡಲು ಫ್ಯಾನ್ಸ್ ಮುಗಿ ಬಿದ್ದಿದ್ರು. ಅಲ್ಲದೇ ರ‍್ಯಾಲಿ ವೇಳೆ ಕರೆಂಟ್ ತೆಗೆದಿದ್ದರಿಂದ ದುರಂತ ಸಂಭವಿಸಿದೆ. ಇದನ್ನೂ ಓದಿ: RSS ಸ್ವಯಂಸೇವಕರ ಪ್ರತಿಯೊಂದು ಕೆಲಸವೂ ದೇಶ ಮೊದಲು ಅನ್ನೋದನ್ನ ಕಲಿಸುತ್ತೆ – ಮೋದಿ ಮನದ ಮಾತು

    ಇನ್ನು ಮೃತರ ಕುಟುಂಬಸ್ಥರಿಗೆ ವಿಜಯ್ ದಳಪತಿ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇನ್ನೂ ಘಟನೆ ಸಂಬಂಧ ಟಿವಿಕೆ ಸ್ಥಳೀಯ ಕಾರ್ಯದರ್ಶಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.  ಇದನ್ನೂ ಓದಿ: Bannerghatta | ಸಫಾರಿಗೆ ತೆರಳಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

  • ಕರೂರು ಕಾಲ್ತುಳಿತ ದುರಂತ – ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

    ಕರೂರು ಕಾಲ್ತುಳಿತ ದುರಂತ – ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

    – ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

    ಚೆನ್ನೈ: ತಮಿಳುನಾಡಿನ (Tamil Nadu) ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ (Karur Stampede) ಮೃತಪಟ್ಟವರ ಕುಟುಂಬಕ್ಕೆ ನಟ, ರಾಜಕಾರಣಿ ವಿಜಯ್ ದಳಪತಿ (Thalapathy Vijay) ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದ್ದು, ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

    ತಮಿಳುನಾಡು ಕರೂರಿನಲ್ಲಿ ವಿಜಯ್ ದಳಪತಿ ಆಯೋಜಿಸಿದ್ದ ಚುನಾವಣಾ ಪ್ರಚಾರದ ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 39 ಮಂದಿ ಸಾವನ್ನಪ್ಪಿದ್ದು, 48 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ವಿಜಯ್ ದಳಪತಿ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದು, ಘಟನೆಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಿಸಿದ್ದಾರೆ.

    ಎಕ್ಸ್‌ನಲ್ಲಿ ಏನಿದೆ?
    ನನ್ನ ಹೃದಯದಲ್ಲಿ ನೆಲೆಸಿರುವ ಎಲ್ಲರಿಗೂ ನಮಸ್ಕಾರಗಳು. ಶನಿವಾರ ಕರೂರಿನಲ್ಲಿ ನಡೆದ ದುರಂತದಿಂದ ನನ್ನ ಹೃದಯ ಮತ್ತು ಮನಸ್ಸು ಭಾರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖಿಸುತ್ತಿರುವ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತಾ, ಈ ದುಃಖವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಇದು ನಿಜಕ್ಕೂ ನಮಗೆ ತುಂಬಲಾರದ ನಷ್ಟ. ಘಟನೆಯಿಂದ ನನ್ನ ಹೃದಯ ಅನುಭವಿಸುತ್ತಿರುವ ನೋವನ್ನು ವ್ಯಕ್ತಪಡಿಸಲು ಪದಗಳೇ ಸಿಗುತ್ತಿಲ್ಲ. ಯಾರೇ ಸಾಂತ್ವನದ ಮಾತುಗಳನ್ನು ಹೇಳಿದರೂ, ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಭರಿಸಲು ಸಾಧ್ಯವಿಲ್ಲ. ಆದರೂ, ನಿಮ್ಮ ಕುಟುಂಬದ ಸದಸ್ಯನಾಗಿ, ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ 20 ಲಕ್ಷ ರೂ. ಮತ್ತು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 2 ಲಕ್ಷ ರೂ. ನೀಡಲು ನಾನು ಉದ್ದೇಶಿಸಿದ್ದೇನೆ. ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಸಂದರ್ಭದಲ್ಲಿ ಈ ಮೊತ್ತವು ಗಮನಾರ್ಹವಾಗಿಲ್ಲ. ಆದರೂ, ಈ ಕ್ಷಣದಲ್ಲಿ, ನಿಮ್ಮ ಕುಟುಂಬಕ್ಕೆ ಸೇರಿದವನಾಗಿ, ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯ.

    ಅದೇ ರೀತಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ನಮ್ಮೆಲ್ಲರ ಪ್ರೀತಿಪಾತ್ರರು ಬೇಗನೆ ಚೇತರಿಸಿಕೊಂಡು ಮನೆಗೆ ಮರಳಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ನಮ್ಮ ಪ್ರೀತಿಪಾತ್ರರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನಮ್ಮ ತಮಿಳಗ ವೆಟ್ರಿ ಕಳಗಂ ಪಕ್ಷ ನೀಡುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

    ಘಟನೆ ಏನು?
    ಕಾಲಿವುಡ್ ಸೂಪರ್ ಸ್ಟಾರ್ ಕಮ್ ರಾಜಕಾರಣಿ ದಳಪತಿ ವಿಜಯ್ ತಮಿಳುನಾಡಿನ ರಾಜಕೀಯದಲ್ಲಿ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ. ಅದಕ್ಕಾಗಿ 2026ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಕರೂರಿನಲ್ಲಿ ತಮ್ಮ ತಮಿಳಿಗ ವೆಟ್ರಿ ಕಳಗಂ ಪಕ್ಷದ ರ‍್ಯಾಲಿ ಹಮ್ಮಿಕೊಂಡಿದ್ದರು. ವಿಜಯ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿನಮಾನಿಗಳು, ಬೆಂಬಲಿಗರು ಸೇರಿದ್ದರು. ತಮ್ಮ ನಾಯಕನಿಗಾಗಿ ಸುಮಾರು ಆರು ಗಂಟೆಗಳಿಗೂ ಹೆಚ್ಚು ಕಾಲ ಕಾದು ಕುಳಿತಿದ್ದರು. ಆದ್ರೆ, ದಳಪತಿ ವಿಜಯ್ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದ್ದರು.

    ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಇನ್ನು ಇದೇ ವೇಳೆ 9 ವರ್ಷದ ಬಾಲಕಿ ಕಳೆದು ಹೋಗಿರ್ತಾಳೆ. ಆಗ ವಿಜಯ್ ಮೈಕ್ ಮೂಲಕ ಪೊಲೀಸರಿಗೆ ಮನವಿ ಮಾಡ್ತಾರೆ. ಮೈಕ್‌ನಲ್ಲಿ ಅನೌನ್ಸ್ ಮಾಡುತ್ತಲೇ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಂದ್ಹಾಗೆ ರ‍್ಯಾಲಿ ತಡವಾಗಿ ಸಂಜೆ ಆರಂಭವಾಗಿತ್ತು. ಹೀಗಾಗಿ ವಿಜಯ್ ನೋಡಲು ಫ್ಯಾನ್ಸ್ ಮುಗಿ ಬಿದ್ದಿದ್ರು. ಅಲ್ದೆ ರ‍್ಯಾಲಿ ವೇಳೆ ಕರೆಂಟ್ ತೆಗೆದಿದ್ದರಿಂದ ದುರಂತ ಸಂಭವಿಸಿದೆ.

    39 ಮಂದಿ ಸಾವು, 48 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
    ಸ್ಥಳಪರಿಶೀಲನೆ ನಡೆಸಿದ ಎಡಿಜಿಪಿ ಡೇವಿಡ್ ಸನ್ ಆಶಿರ್ವಾದ್ ಮಾತನಾಡಿ, 10,000 ಜನ ಸೇರುತ್ತಾರೆ ಅಂತ ಅನುಮತಿ ಪಡೆದಿದ್ದರು. ಹೀಗಾಗಿ 116 ಸ್ಥಳೀಯ ಪೊಲೀಸರು ಹೊರತುಪಡಿಸಿ ಹೆಚ್ಚುವರಿ 500 ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಈ ಹಿಂದೆಯೂ 15,000 ಜನಕ್ಕೆ 600 ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಆದ್ರೆ ಇಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ. 48 ಮಂದಿ ಆಸ್ಪತ್ರೆಯಲ್ಲಿ ಸಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಯಾವುದೇ ಲಾಠಿ ಚಾರ್ಜ್ ಮಾಡಿಲ್ಲ, ದುರಂತಕ್ಕೆ ಕಾರಣಗಳನ್ನ ಪಟ್ಟಿ ಮಾಡಿದ್ದೇವೆಂದು ತಿಳಿಸಿದ್ದಾರೆ.

  • ಅಮಾಯಕರ ಜೀವಹಾನಿ ಹೃದಯವನ್ನು ಕಲಕಿದೆ: ಕಾಲ್ತುಳಿತ ದುರಂತಕ್ಕೆ ರಜನಿಕಾಂತ್‌ ಕಂಬನಿ

    ಅಮಾಯಕರ ಜೀವಹಾನಿ ಹೃದಯವನ್ನು ಕಲಕಿದೆ: ಕಾಲ್ತುಳಿತ ದುರಂತಕ್ಕೆ ರಜನಿಕಾಂತ್‌ ಕಂಬನಿ

    – ದಳಪತಿ ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ 36 ಮಂದಿ ಬಲಿ

    ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ (Karur Stampede) ನಟ, ರಾಜಕಾರಣಿ ವಿಜಯ್‌ (Vijay) ಅವರ ರ‍್ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 34 ಮಂದಿ ಸಾವನ್ನಪ್ಪಿದ್ದು, ನಟ ರಜನಿಕಾಂತ್‌ (Rajinikanth) ಸಂತಾಪ ಸೂಚಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ರಜನಿಕಾಂತ್‌, ಕರೂರಿನಲ್ಲಿ ನಡೆದ ಘಟನೆಯಲ್ಲಿ ಅಮಾಯಕರ ಜೀವಹಾನಿಯ ಸುದ್ದಿ ಹೃದಯವನ್ನು ಕಲಕಿದೆ. ಅಪಾರ ದುಃಖವನ್ನುಂಟು ಮಾಡಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡವರು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಶನಿವಾರ ಸಂಜೆ ಕರೂರಿನಲ್ಲಿ ಟಿವಿಕೆ ನಾಯಕ ವಿಜಯ್ ರ‍್ಯಾಲಿ ವೇಳೆ ಈ ದುರಂತ ಸಂಭವಿಸಿದೆ. ಮೃತರಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಘಟನೆಯ ನಂತರ 50 ಕ್ಕೂ ಹೆಚ್ಚು ಜನರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.

    ದುರಂತದ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಕಾಲ್ತುಳಿತ ಅವಘಡ ಕಳವಳಕಾರಿ ಎಂದಿದ್ದಾರೆ. ಸಂತ್ರಸ್ತರಿಗೆ ತಕ್ಷಣ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

  • ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

    ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

    -ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ
    -ಕಾಲ್ತುಳಿತ ತನಿಖೆಗೆ ಸರ್ಕಾರದಿಂದ ಆಯೋಗ ರಚನೆ

    ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಎಂಕೆ ಸ್ಟಾಲಿನ್‌  (MK Stalin) ಘೋಷಿಸಿದ್ದಾರೆ.

    ಈ ಕುರಿತು ಎಕ್ಸ್‌ (X) ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಕಾಲ್ತುಳಿತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೂ 10 ಲಕ್ಷ ರೂ. ಪರಿಹಾರ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬರಿಗೂ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಕಾಲ್ತುಳಿತದ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ಅವರ ನೇತೃತ್ವದಲ್ಲಿ ಆಯೋಗ ರಚಿಸಲಾಗುವುದು ಎಂದಿದ್ದಾರೆ.ಇದನ್ನೂ ಓದಿ: ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

    ಶನಿವಾರ (ಸೆ.27) ರಾತ್ರಿ ಕರೂರಿಗೆ ಭೇಟಿ ನೀಡಿ, ಸಂತ್ರಸ್ತರ ಕುಟುಂಬಗಳನ್ನು ಹಾಗೂ ಗಾಯಾಳುಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸುತ್ತೇನೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 8 ಮಕ್ಕಳು ಮತ್ತು 16 ಮಹಿಳೆಯರು ಸೇರಿದಂತೆ 36 ಜನರು ಸಾವನ್ನಪ್ಪಿದ್ದಾರೆ. ಸದ್ಯ ತಿರುಚಿ, ಸೇಲಂ ಮತ್ತು ದಿಂಡಿಗಲ್ ಜಿಲ್ಲಾಧಿಕಾರಿಗಳು ಕರೂರಿಗೆ ಹೋಗಿ ಪರಿಹಾರ ಕಾರ್ಯಗಳ ಬಗ್ಗೆ ಕ್ರಮವಹಿಸಿ ಎಂದು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

    ಕಾಲ್ತುಳಿತ ಸಂಭವಿಸಿದ್ದು ಹೇಗೆ?
    ನಟ ವಿಜಯ ಶನಿವಾರ (ಸೆ.27) ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.

    ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 40 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

  • ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

    ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

    ನವದೆಹಲಿ/ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಸಂಭವಿಸಿದ ಭೀಕರ ಕಾಲ್ತುಳಿತ (Stampede) ದುರಂತದ ಬಗ್ಗೆ ಪ್ರಧಾನಿ ಮೋದಿ (PM Modi) ಸಂತಾಪ ಸೂಚಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ತೀವ್ರ ನೋವನ್ನುಂಟು ಮಾಡಿದೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ದೇವರು ಅವರ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪಾರ್ಥಿಸುತ್ತೇನೆ. ಇನ್ನೂ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

    ಕಾಲ್ತುಳಿತ ಸಂಭವಿಸಿದ್ದು ಹೇಗೆ?
    ನಟ ವಿಜಯ ಶನಿವಾರ (ಸೆ.27) ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.

    ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 33 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ:

  • ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

    ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

    ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಶನಿವಾರ (ಸೆ.27) ನಡೆದ ತಮಿಳು ನಟ-ರಾಜಕಾರಣಿ ವಿಜಯ್ ದಳಪತಿಯವರ ರ‍್ಯಾಲಿಗಾಗಿ ಬರೋಬ್ಬರಿ 1 ಲಕ್ಷ ಮಂದಿ ಸತತ 7 ಗಂಟೆ ಕಾದಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

    ನಟ ವಿಜಯ ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 33 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

    ರಾಜ್ಯ ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಕರೂರಿಗೆ ಧಾವಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೂರ್ ಜಿಲ್ಲಾ ಕಾರ್ಯದರ್ಶಿ ವಿ. ಸೆಂಥಿಲ್‌ಬಾಲಾಜಿ ಅವರಿಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೇ ವೋಟ್‌ ಹಾಕಿದಂತೆ.. ನಾನು BJP ಜೊತೆ ಕೈಜೋಡಿಸಲ್ಲ: ನಟ ವಿಜಯ್‌

  • Tamil Nadu | ಪತಿಯೊಂದಿಗೆ ಜಗಳ – ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ಇರಿದು ಕೊಂದ ಗಂಡ

    Tamil Nadu | ಪತಿಯೊಂದಿಗೆ ಜಗಳ – ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ಇರಿದು ಕೊಂದ ಗಂಡ

    ಚೆನ್ನೈ: ಪತಿಯೊಂದಿಗೆ (Husband) ನಡೆದ ಜಗಳದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು (Wife) ಪತಿ ಇರಿದು ಕೊಂದ ಘಟನೆ ತಮಿಳುನಾಡಿನ (Tamil Nadu) ಕರೂರ್ (Karur) ಜಿಲ್ಲೆಯಲ್ಲಿ ನಡೆದಿದೆ.

    ಶ್ರುತಿ ಮೃತ ಪತ್ನಿ. ಶ್ರುತಿ ಪಟ್ಟವರ್ತಿಯ ವಿಶ್ರುತ್‌ನನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದರು. ಶನಿವಾರ ಶ್ರುತಿ ಗಂಡನೊಂದಿಗೆ ಜಗಳವಾಡಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದನ್ನೂ ಓದಿ: ನಾನು ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು.. ನನಗೆ ಪಾಪಪ್ರಜ್ಞೆ ಕಾಡುತ್ತಿದೆ: ದೂರುದಾರ ಹೇಳಿದ್ದೇನು?

    ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ಬಂದ ಪತಿ ವಿಶ್ರುತ್, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪತ್ನಿಗೆ ಮೂರು ಬಾರಿ ಇರಿದು ಹತ್ಯೆಮಾಡಿದ್ದಾನೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಘಟನೆ ಸಂಬಂಧ ಕುಳಿತಲೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕರೆಂಟ್ ಶಾಕ್ ನೀಡಿ ಮಾವನ ಕೊಲೆ – ಗಾಯ ಮರೆಮಾಚಲು ರೋಸ್ ವಾಟರ್, ಅರಶಿಣ ಪುಡಿ ಹಚ್ಚಿದ ಸೊಸೆ