Tag: KAS

  • KPSC ಪೂರ್ವಭಾವಿ ಪರೀಕ್ಷೆ ಮುಂದೂಡಿ- ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ

    KPSC ಪೂರ್ವಭಾವಿ ಪರೀಕ್ಷೆ ಮುಂದೂಡಿ- ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಇದೇ ತಿಂಗಳು 27ರಂದು ನಡೆಸುತ್ತಿರುವ ಪರೀಕ್ಷೆಯನ್ನ (KPSC KAS Prelims Exam) ಮುಂದೂಡುವಂತೆ ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್ ಮಾಡಿರುವ ಅವರು, ಸ್ವಾರ್ಥಕ್ಕಾಗಿ ತಾರತುರಿಯಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿದ್ದಾರೆ. ಈ ಪರೀಕ್ಷೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಪರೀಕ್ಷೆ ಬರೆಯುವ ಪ್ರಾಮಾಣಿಕ ಅಭ್ಯರ್ಥಿಗಳಿಗೆ ತೊಂದರೆ ಕೊಡುವ ಹುನ್ನಾರ ಇದರಲ್ಲಿದೆ. ಪೂರ್ವಭಾವಿ ಪರೀಕ್ಷೆ ನಿಗದಿ ಮಾಡಿರುವುದು ಸರಿಯಷ್ಟೆ. ಕೆಲವರ ಸ್ವಾರ್ಥಕ್ಕಾಗಿ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿರುವ ಆರೋಪವಿದ್ದು, ಪರೀಕ್ಷೆ ಬರೆಯಲು ಅನೇಕ ದಿನಗಳಿಂದ ಪ್ರಾಮಾಣಿಕವಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ, ಅದರಲ್ಲಿಯೂ ವಿಕಲಚೇತನ ಅಭ್ಯರ್ಥಿಗಳಿಗೆ ತೊಂದರೆ ಕೊಡುವ ಹುನ್ನಾರ ಇದರಲ್ಲಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ತಿಳಿಸಿ; ಇಲ್ಲವಾದ್ರೆ ಇದು ಹಿಟ್&ರನ್ ಆಗುತ್ತೆ: ಆರ್.ಅಶೋಕ್

    ರಜೆ ದಿನ ಹೊರತುಪಡಿಸಿ ಇತರೆ ದಿನಗಳಲ್ಲಿ ಪರೀಕ್ಷೆ ನಡೆಸಿದರೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳಿಗೂ ಸಮಸ್ಯೆ ಆಗುತ್ತದೆ. ಈ ಬಗ್ಗೆ ಅಭ್ಯರ್ಥಿಗಳು ಹಲವು ದಿನಗಳಿಂದ ಪರೀಕ್ಷೆ ಮುಂದೂಡುವಂತೆ ಮನವಿ ಮಾಡುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ KPSC ಪರೀಕ್ಷೆ ನಡೆಸಲೇಬೇಕು ಎಂದು ಪಟ್ಟು ಹಿಡಿದಿರುವುದು ಅನುಮಾನಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರವು ಅವರ ಕಾಳಜಿಯನ್ನು ನಿರ್ಲಕ್ಷಿಸಿದೆ ಮತ್ತು ಅವರ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಹೊರಟಿರುವುದು ಅಕ್ಷಮ್ಯ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೂಡಲೇ ಕ್ರಮ ವಹಿಸಿ ಎಲ್ಲಾ ಅಭ್ಯರ್ಥಿಗಳಿಗೆ ಅನುಕೂಲವಾಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಗೃಹ ಸಚಿವರೇ ನಿಮ್ಮದು ಯಾವ ನ್ಯಾಯ? ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಏಕೆ?- ಸಾರ್ವಜನಿಕರಿಂದ ತರಾಟೆ

  • ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ, ಧರ್ಮ ಕಲಹದಲ್ಲಿ ತೊಡಗಿಕೊಳ್ಳದಂತೆ ಸಿಎಂ ಸಲಹೆ

    ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ, ಧರ್ಮ ಕಲಹದಲ್ಲಿ ತೊಡಗಿಕೊಳ್ಳದಂತೆ ಸಿಎಂ ಸಲಹೆ

    ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ ಮತ್ತು ಧರ್ಮ ಕಲಹದಲ್ಲಿ ತೊಡಗಿಕೊಳ್ಳಬಾರದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

    ವಿಧಾನಸೌಧದಲ್ಲಿ ನಡೆದ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರಿಗೆ ಪ್ರಾಮಾಣಿಕತೆಯ ಪಾಠ ಮಾಡಿದ್ದಾರೆ. ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳು ಪ್ರಜಾಪ್ರಭುತ್ವದ ಕಣ್ಣು ಮತ್ತು ಕಿವಿ ಇದ್ದಂತೆ. ಸಮಾಜವನ್ನ ಬದಲಾವಣೆ ಮತ್ತು ಸುಧಾರಣೆ ಮಾಡುವ ಜವಾಬ್ದಾರಿ ನಮ್ಮ ಮೇಲೆ ಇದೆ. ನಮ್ಮ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಬಾಂಬ್ ಸ್ಫೋಟದ ಬೆದರಿಕೆ, ಪ್ರಧಾನಿ ಕೊಲ್ಲುವುದಾಗಿ ಕಾಮೆಂಟ್: ಆರೋಪಿಗಾಗಿ ತೀವ್ರ ಶೋಧ

    ಜನರು ಮತ್ತು ಸರ್ಕಾರದ ನಡುವೆ ಸೇತುವೆ ಆಗಿ ಕೆಲಸ ಮಾಡುವವರು ಅಧಿಕಾರಿಗಳು. ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಬೇಕು. ಜನಪರ ಕೆಲಸ ಮಾಡಿ ಸರ್ಕಾರಕ್ಕೂ ಒಳ್ಳೆಯ ಹೆಸರು ಬರಲಿದೆ. ಅನೇಕ ಜನ ಒಳ್ಳೆಯ ಅಧಿಕಾರಿಗಳು ಇದ್ದಾರೆ. ಆದರೆ ಕೆಲವರು ಸರ್ಕಾರದ ನಿರೀಕ್ಷೆಯಂತೆ ಕೆಲಸ ಮಾಡದೇ ಇರುವವರು ಇದ್ದಾರೆ. ಅಂತಹ ಕೆಲವು ಅಧಿಕಾರಿಗಳ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸಂವಿಧಾನವನ್ನು ರಕ್ಷಣೆ ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸಂವಿಧಾನದ ಧ್ಯೇಯೋದ್ದೇಶ ಅರ್ಥ ಮಾಡಿಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

    ಬಡವರಿಗಾಗಿ ನಾವು 5 ಗ್ಯಾರಂಟಿ ಜಾರಿ ಘೋಷಣೆ ಮಾಡಿದ್ದೇವೆ. ಈಗಾಗಲೇ 3 ಗ್ಯಾರಂಟಿಗಳು ಜಾರಿ ಆಗಿವೆ. 4 ನೇ ಗ್ಯಾರಂಟಿ ಆ.20ಕ್ಕೆ ಜಾರಿ ಆಗಲಿದೆ. 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿಯಲ್ಲಿ ಅನುಷ್ಠಾನ ಆಗಲಿದೆ. ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳ ಪಾತ್ರ ಮುಖ್ಯ ಎಂದಿದ್ದಾರೆ.

    ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್, ಸಚಿವ ಕೃಷ್ಣಭೈರೇಗೌಡ ಸೇರಿ ಸಂಘದ ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಕೆಎಎಸ್ ಅಧಿಕಾರಿಗಳನ್ನ ಸಿಇಒ, ಡಿಸಿ ಪೋಸ್ಟ್‌ಗೆ  ನೇಮಕ ಮಾಡಬೇಕು. ಕೆಎಎಸ್ ಅಧಿಕಾರಿಗಳನ್ನು ಐಎಎಸ್ ಆಗಿ ಪದೋನ್ನತಿ ಮಾಡುವ ಪ್ರಮಾಣವನ್ನ 50% ಹೆಚ್ಚಳ ಮಾಡಬೇಕು ಎಂದು ಸಿಎಂಗೆ ಕೆಎಎಸ್ ಅಧಿಕಾರಿಗಳ ಸಂಘದ ವತಿಯಿಂದ ಮನವಿ ಮಾಡಲಾಯಿತು. ಇದನ್ನೂ ಓದಿ: ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿದ ಸ್ಪಂದನಾ ಅಂತ್ಯಸಂಸ್ಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿಯಲ್ಲಿ ನೇಣು ಬಿಗಿದುಕೊಂಡು KAS ಅಧಿಕಾರಿ ಪತಿ ಆತ್ಮಹತ್ಯೆ

    ಬೆಳಗಾವಿಯಲ್ಲಿ ನೇಣು ಬಿಗಿದುಕೊಂಡು KAS ಅಧಿಕಾರಿ ಪತಿ ಆತ್ಮಹತ್ಯೆ

    ಬೆಳಗಾವಿ: ಕೆಎಎಸ್ (KAS) ಅಧಿಕಾರಿ ರೇಷ್ಮಾ ತಾಳಿಕೋಟಿ ಪತಿಯೊಬ್ಬರು‌ (Husband) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಜಂ ನಗರದಲ್ಲಿ ನಡೆದಿದೆ.

    ಜಾಫರ್ ಫೀರ್ಜಾದೆ (39) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇಂದು (ಸೋಮವಾರ) ಮಧ್ಯಾಹ್ನ ಅಜಂ ನಗರದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೀಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಾಫರ್ ಫೀರ್ಜಾದೆ ಮೃತದೇಹ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ: ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಫೈನ್ ಡಿಸ್ಕೌಂಟ್ ಸಮಯ ವಿಸ್ತರಣೆ

    crime

    ಡಿಟಿಐ‌ನಲ್ಲಿ ಎಫ್‌ಡಿಎ ತರಬೇತಿಯಲ್ಲಿದ್ದ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ ಕಾರ್ಯ ನಿಮಿತ್ತ ಬೆಂಗಳೂರಿಗೆ (Bengaluru) ತೆರಳಿದ್ದ ಪತ್ನಿ ರೇಷ್ಮಾ ತಾಳಿಕೋಟಿ ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬಿಜೆಪಿ ಗೆಲ್ಲಿಸುವ ಸುಪಾರಿ ಸಿದ್ದರಾಮಯ್ಯ ಪಡೆದಿದ್ರು: ಹೆಚ್‌ಡಿಕೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 10ನೇ ತರಗತಿಯಲ್ಲೇ ದೃಷ್ಟಿ ಕಳೆದುಕೊಂಡ ಯುವತಿ ಈಗ UPSC ಟಾಪರ್

    10ನೇ ತರಗತಿಯಲ್ಲೇ ದೃಷ್ಟಿ ಕಳೆದುಕೊಂಡ ಯುವತಿ ಈಗ UPSC ಟಾಪರ್

    ಮೈಸೂರು: ಸಾಧನೆ ಮಾಡುವ ಛಲವೊಂದಿದ್ದರೆ ಸಾಕು ಯಾವುದೇ ಸಮಸ್ಯೆ ಅಡ್ಡಿಯಾಗುವುದಿಲ್ಲ ಎನ್ನುವುದಕ್ಕೆ ಮೈಸೂರು ಜಿಲ್ಲೆಯ ಯುವತಿಯೊಬ್ಬರು ಸಾಕ್ಷಿಯಾಗಿದ್ದಾರೆ.

    10ನೇ ತರಗತಿಯಲ್ಲೇ ಶೇ.70 ರಷ್ಟು ದೃಷ್ಟಿ ಕಳೆದುಕೊಂಡರೂ ಸಮಸ್ಯೆಗಳನ್ನು ಮೆಟ್ಟಿನಿಂತು ಸಾಧನೆ ಮಾಡಿದ್ದಾರೆ. ಯುಪಿಎಸ್‌ಸಿನಲ್ಲಿ ಟಾಪ್ ರ‍್ಯಾಂಕ್ ಪಡೆಯುವ ಮೂಲಕ ಸಾಂಸ್ಕೃತಿಕ ನಗರಿಯ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ

    ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕುಡುಕೂರು ಗ್ರಾಮದ ಯುವತಿ ಕೆ.ಟಿ.ಮೇಘನಾ ಯುಪಿಎಸ್‌ಯಲ್ಲಿ 425ನೇ ರ‍್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಮಗನ ಕಾಯಿಲೆ ಗುಣಪಡಿಸ್ತೀನೆಂದು ಮಹಿಳೆ ಮೇಲೆ ಸ್ವಯಂಘೋಷಿತ ದೇವಮಾನವ ರೇಪ್

    ಕುಡುಕೂರಿನ ತಾಂಡವಮೂರ್ತಿ ಹಾಗೂ ನವನೀತ ದಂಪತಿಯ ಪುತ್ರಿ ಮೇಘನಾ ಸದ್ಯ ಬೆಂಗಳೂರಿನ ಕೆಂಗೇರಿಯಲ್ಲಿ ವಾಸಿಸುತ್ತಿದ್ದಾರೆ. 10ನೇ ತರಗತಿಯಲ್ಲಿದ್ದಾಗ ರೆಟಿನಾ ಸಮಸ್ಯೆಯಿಂದಾಗಿ ಶೇ.70 ರಷ್ಟು ದೃಷ್ಟಿಯನ್ನು ಕಳೆದುಕೊಳ್ಳಬೇಕಾಯಿತು. ಆದರೂ ಅದನ್ನು ವೈಫಲ್ಯವೆಂದು ಭಾವಿಸದೇ ತನ್ನ ಗುರಿಯತ್ತ ಮುಂದುವರಿದ ಮೇಘನಾ ಇದೀಗ ಯುಪಿಎಸ್‌ಸಿಯಲ್ಲಿ ಟಾಪ್ ರ‍್ಯಾಂಕರ್ ಗರಿ ಪಡೆದಿದ್ದಾರೆ.

    ಮೇಘನಾ 2020ರಲ್ಲೂ ಯುಪಿಎಸ್‌ಸಿಯಲ್ಲಿ 465ನೇ ರ‍್ಯಾಂಕ್ ಪಡೆದಿದ್ದರು. 2015 ರಲ್ಲಿ ಕೆಎಎಸ್ ನಲ್ಲಿ 11ನೇ ರ‍್ಯಾಂಕ್ ಪಡೆದು ವಾಣಿಜ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಳಿಕ ಖಜಾನೆ ಇಲಾಖೆಯಲ್ಲೂ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಿದ್ದಾರೆ.

  • ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಜಿಮ್‌ ಉದ್ಘಾಟನೆ

    ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಜಿಮ್‌ ಉದ್ಘಾಟನೆ

    ಬೆಂಗಳೂರು: ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ 2021ನೇ ದಿನಚರಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಡುಗಡೆ ಮಾಡಿ ಶತಮಾನೋತ್ಸವ ಭವನಕ್ಕೆ ಶಂಕುಸ್ಥಾಪನೆ ಹಾಗೂ ಜಿಮ್ ಉದ್ಘಾಟನೆ ನೆರವೇರಿಸಿದರು.

    ಈ ವೇಳೆ ಮಾತನಾಡಿದ ಅವರು, ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ವತಿಯಿಂದ ಶತಮಾನೋತ್ಸವ ಭವನದ ಶಂಕುಸ್ಥಾಪನೆ, ಜಿಮ್ ಉದ್ಘಾಟನೆಯನ್ನು ಅತ್ಯಂತ ಸಂತೋಷದಿಂದ ನೆರವೇರಿಸಿದ್ದೇನೆ. ಕರ್ನಾಟಕ ಆಡಳಿತ ಸೇವೆ ಪ್ರಾರಂಭವಾಗಿ 100 ವರ್ಷಗಳು ಸಂದಿರುವ ಸಂದರ್ಭದಲ್ಲಿ ಸಂಘದ ವತಿಯಿಂದ ಶತಮಾನೋತ್ಸವ ಭವನದ ನಿರ್ಮಾಣಕ್ಕೆ ಮುಂದಾಗಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ ಎಂದರು.

    ರಾಜ್ಯದ ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ಕೆಎಎಸ್ ಅಧಿಕಾರಿಗಳು ತಮ್ಮ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ. ಸರ್ಕಾರದ ಆಡಳಿತ ಯಂತ್ರವು ಸುಗಮವಾಗಿ ನಿರ್ವಹಿಸಲು ಹಾಗೂ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಲ್ಲಿ ಅಧಿಕಾರಿಗಳು ಮಹತ್ವದ ಪಾತ್ರವನ್ನು ವಹಿಸುತ್ತಾರೆ ಎಂದು ಹೇಳಿದರು.

    ‘Sound Body Carries Sound Mind’ ಎಂಬ ಉಕ್ತಿಯಂತೆ ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜೀ ಯವರು ಫಿಟ್‌ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿರುವುದು ನಮಗೆಲ್ಲ ತಿಳಿದಿರುವ ವಿಷಯವಾಗಿದೆ. ಒತ್ತಡ ನಿವಾರಣೆ, ದೈಹಿಕ ಕ್ಷಮತೆ ಕಾಯ್ದುಕೊಳ್ಳಲು ಹಾಗೂ ಆರೋಗ್ಯ ವೃದ್ಧಿಗೆ ಇಂದು ಉದ್ಘಾಟನೆಗೊಂಡಿರುವ ಜಿಮ್ ಸಹಕಾರಿಯಾಗಲಿದೆ. ಸರ್ಕಾರದ ಜನಪರ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನವನ್ನು ಅಧಿಕಾರಿಗಳು ಮಾಡಬೇಕು ಎಂದರು.

    ಜನರು ತಮ್ಮ ದೂರು, ಸಂಕಷ್ಟಗಳನ್ನು ಹೊತ್ತು ಬಂದಾಗ ಸಕಾಲದಲ್ಲಿ ಸ್ಪಂದಿಸಿ ಪರಿಹಾರ ಸೂಚಿಸಿದರೆ, ಸರ್ಕಾರ ಜನಪರವಾಗಿದೆ ಎಂಬ ಸದಭಿಪ್ರಾಯ ಮೂಡುತ್ತದೆ. ಆ ಜವಾಬ್ದಾರಿ ನಿಮ್ಮ ಮೇಲಿದೆ. ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ರೀತಿಯ ತೊಡಕು ಎದುರಾದರೂ ನಿಮ್ಮ ಬೆಂಬಲಕ್ಕೆ ಸರ್ಕಾರ ಇರುತ್ತದೆ. ನಿಮ್ಮ ಕರ್ತವ್ಯವನ್ನು ನಿರ್ವಂಚನೆಯಿಂದ ನಿಷ್ಠೆಯಿಂದ ನಿರ್ವಹಿಸಿ ಎಂದು ತಿಳಿಸಿದರು.

    ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ದಿಸೆಯಲ್ಲಿ ತಾವೆಲ್ಲರೂ ಕಾರ್ಯೋನ್ಮುಖರಾಗಿ. ನೂತನವಾಗಿ ನೇಮಕಗೊಂಡಿರುವ ಕೆಎಎಸ್ ಅಧಿಕಾರಿಗಳು, ನಿಷ್ಠೆ, ಜವಾಬ್ದಾರಿ ಹಾಗೂ ದಕ್ಷ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿ ರಾಜ್ಯಕ್ಕೆ ಕೀರ್ತಿ ತನ್ನಿ ಎಂದು ಹಾರೈಸುತ್ತೇನೆ. 2021ರ ವರ್ಷ ಎಲ್ಲರಿಗೂ ಶುಭಪ್ರದವಾಗಿರಲಿ ಹಾಗೂ ಶತಮಾನೋತ್ಸವ ಆಚರಣೆ ಅರ್ಥಪೂರ್ಣವಾಗಿರಲಿ ಎಂದು ಆಶಿಸುತ್ತೇನೆ ಎಂದು ಶುಭ ಹಾರೈಸಿದರು.

    ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ , ಸಿ.ಆ.ಸು.ಇ ಕಾರ್ಯದರ್ಶಿ ಪಿ.ಹೇಮಲತಾ, ಕೆ.ಎ. ಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಬಿ.ಎನ್.ವರಪ್ರಸಾದ್ ರೆಡ್ಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಕೆಎಎಸ್ ಅಧಿಕಾರಿ ಸುಧಾ ಪುರಾಣ – ಕಮೋಡ್‍ನಲ್ಲಿ ಕೀ ಬಿಸಾಡಿರೋ ಶಂಕೆ

    ಕೆಎಎಸ್ ಅಧಿಕಾರಿ ಸುಧಾ ಪುರಾಣ – ಕಮೋಡ್‍ನಲ್ಲಿ ಕೀ ಬಿಸಾಡಿರೋ ಶಂಕೆ

    ಬೆಂಗಳೂರು: ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು ಮನೆಯಲ್ಲಿ ಲಾಕರ್ ತೆರೆಯಲು ಹರಸಾಹಸ ಪಡುತ್ತಿದ್ದು, ಲಾಕರ್ ಕೀ ಗಳನ್ನು ಕಮೋಡ್ ನಲ್ಲಿ ಬಿಸಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

    ಎಸಿಬಿ ಅಧಿಕಾರಿಗಳು ಬಂದ 20 ನಿಮಿಷ ಬಾಗಿಲು ತೆರಯದೇ ಇದ್ದ ಸುಧಾ, ರಂಪಾಟ ಮಾಡಿದ್ದರು. ಸ್ಥಳೀಯ ಪೊಲೀಸರನ್ನು ಕರೆಸುತ್ತೇವೆ, ಈ ವೇಳೆ ನಿಮಗೆ ಅವಮಾನ ಆಗುತ್ತೆ. ಆಗ ಇನ್ನೂ ದೊಡ್ಡ ಕಷ್ಟ ಎದುರಾಗುತ್ತೆ ಎಂದು ಅಧಿಕಾರಿಗಳು ಹೇಳಿದ ಬಳಿಕ ಸುಧಾ ಬಾಗಿಲು ತೆರೆದರು. ಇದಕ್ಕೂ ಮೊದಲು ಕೆಲವೊಂದು ಕೀ ಗಳನ್ನು ಕಮೋಡ್ ಅಲ್ಲಿ ಬಿಸಾಕಿರುವ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

    ಇಂದು ಬೆಳ್ಳಂಬೆಳಗ್ಗೆ ಕೊಡಿಗೇಹಳ್ಳಿಯ ಡಾ, ಸುಧಾ ನಿವಾಸಕ್ಕೆ ದಾಳಿ ಮಾಡಿ ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಶಾಕ್ ಆಗಿದೆ. ಸುಧಾ ಮನೆಯಲ್ಲಿ ಕೆ.ಜಿಗಟ್ಟಲೆ ಚಿನ್ನ ಹಾಗೂ ನಗದು ನೋಡಿ ಅಧಿಕಾರಿಗಳೇ ದಂಗಾಗಿದ್ದಾರೆ. ಪತ್ತೆಯಾಗಿರುವ ಚಿನ್ನಾಭರಣ ಎಷ್ಟು ಪ್ರಮಾಣದಲ್ಲಿದೆ ಎಂದು ಅಂದಾಜಿಸುವ ಸಲುವಾಗಿ ಅಕ್ಕಸಾಲಿಗರು ಸುಧಾ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇತ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುವುದನ್ನು ಮುಂದುವರಿಸಿದ್ದಾರೆ.

    ಸುಧಾ ಕ್ರಿಯೇಷನ್ ಹೆಸರಲ್ಲಿ ಸುಧಾ ಪತಿ ಸಿನಿಮಾ ಮತ್ತು ಸಿರಿಯಲ್ ನಿರ್ಮಾಣ ಮಾಡುತ್ತಿದ್ದರು. ಪತ್ನಿಯ ಜೊತೆ ಪತಿಯದ್ದು ಹೈ ಪ್ರೊಪೈಲ್ ಜೀವನ ನಡೆಸುತ್ತಿದ್ದು, ಇತ್ತೀಚೆಗೆ ಪತಿ ಮಗನಿಗಾಗಿ ಸಿನಿಮಾ ಪ್ರೊಡ್ಯೂಸ್ ಮಾಡಿದ್ದರು. ಅಲ್ಲದೆ ಮಗ ಅರೂನ್ ನನ್ನು ಇಂಡಸ್ಟ್ರಿಗೆ ಪರಿಚಯಸಿದ್ದರು. ಬಾರ್ಕೂರಿನಲ್ಲಿ ಸುಧಾ ಪತಿಗೆ ಸೇರಿದ ಹಾರ್ಡ್ ವೇರ್ ಶಾಪ್ ಕೂಡ ಇದೆ. ಸುಧಾ ಅವರು 2017-2018 ರಲ್ಲಿ ಬಿಡಿಎ ಭೂಸ್ವಾದೀನ ಅಧಿಕಾರಿಯಾಗಿ ನೇಮಕವಾಗಿದ್ದರು. ಕಳೆದ ಎರಡು ವರ್ಷಗಳಲ್ಲಿ ದಾಖಲೆ ಮಟ್ಟದಲ್ಲಿ ಆಸ್ತಿ ಹೆಚ್ಚಾಗಿದ್ದು, ವಿಲ್ಲಾ ಕೂಡ ಖರೀದಿ ಮಾಡಿದ್ದಾರೆ. ಅಲ್ಲದೆ ಐಷಾರಾಮಿ ಕಾರುಗಳನ್ನ ಖರೀದಿ ಮಾಡಿದ್ದಾರೆ.

    ಈ ಹಿಂದೆ ಡೈಮಂಡ್ ನಕ್ಲೆಸ್ಸ್ ಹಾಕಿಕೊಂಡಿದ್ದಕ್ಕೆ ದೊಡ್ದ ರಂಪಾಟ ನಡೆದಿತ್ತು. ಬಿಡಿಎ ಭೂ ಸ್ವಾಧೀನ ಅಧಿಕಾರಿಯಾಗಿದ್ದಾಗ ಮಾರಾಮಾರಿ ಮಾಡಿಕೊಂಡಿದ್ದರು. ನೀವು ಭ್ರಷ್ಟರಾಗಿ ಡೈಮಂಡ್ಸ್ ಹಾಕ್ಕೊಂಡು ಬಂದ್ರೆ ನಮ್ಮನ್ನೂ ಭ್ರಷ್ಟರು ಅಂತಾರೆ ಎಂದು ವೆಂಕಟೇಶ್ ಎಂಬ ಅಧಿಕಾರಿ ಆಕ್ಷೇಪ ವ್ಯಕ್ತಪಡಿಸಿದ್ದರು. ಜನರ ಎದುರು ನಾವು ನಿಮ್ಮಂತೆ ಆಗುತ್ತೆ ಎಂದು ವೆಂಕಟೇಶ್ ಗಲಾಟೆ ಮಾಡಿದ್ದರು. ಈ ಸಂಬಂಧ ಇಬ್ಬರ ನಡುವೆಯೂ ಬಿಡಿಎ ಅಲ್ಲಿ ಮಾರಾಮಾರಿಯಾಗಿತ್ತು.

    ಡಾ.ಸುಧಾ ಸರ್ಕಾರಿ ನೌಕರರಾಗಿ ಸೇವೆಗೆ ಸೇರಿದ್ದು 06-06-2007ರಂದು. ಅಂದಿನಿಂದ ಆರಂಭವಾಗಿ ಖಾಸಗಿ ದೂರು ದಾಖಲಿಸುವ ಸಮಯದವರೆಗೆ ಅವರ ಗಳಿಕೆ ಒಟ್ಟು ಸುಮಾರು 1,55,37,600 ರೂ. ಆಗುತ್ತದೆ. ಆದರೆ ಇವರ ಹೆಸರಿನಲ್ಲಿರುವ ಆಸ್ತಿಗಳ ದಾಖಲಾತಿಗಳಲ್ಲಿ ತೋರಿಸಿಕೊಂಡಿರುವಂತೆ ಅವರ ಒಟ್ಟು ಆಸ್ತಿ ಮೌಲ್ಯವೇ 1,83,24,456 ರೂ. ಸದರಿ ಆಸ್ತಿಗಳ ಖರೀದಿ ಸಂದರ್ಭದಲ್ಲಿ ಖರೀದಿ ಪತ್ರದಲ್ಲಿ ತೋರಿಸದೇ ಇರುವ ಮೌಲ್ಯವು ಅಂದರೆ ಕಪ್ಪು ಹಣವು 9,31,10,544 ರೂ. ಆಗಿರುತ್ತದೆ. ಜೊತೆಗೆ ಡಾ.ಸುಧಾರವರು ಅಕ್ರಮ ಬಡ್ಡಿದಂಧೆಯಲ್ಲಿ ತೊಡಗಿಸಿರುವಂತಹ ಹಣದ ಒಟ್ಟು ಮೌಲ್ಯ 1,44,50,000 ರೂ. ಎಂಬುದನ್ನು ದಾಖಲೆ ಸಮೇತ ಲೋಕಾಯುಕ್ತ ನ್ಯಾಯಾಲಯಕ್ಕೆ ಅಬ್ರಹಾಂ ದೂರು ಸಲ್ಲಿಸಿದ್ದರು. ಸುಧಾ ಪತಿ ಕೂಡ ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಅವರು ದಲ್ಲಾಳಿಯಂತೆ ವರ್ತಿಸುತ್ತಿದ್ದಾರೆ ಅಂತ ಈ ಹಿಂದೆ ದೂರು ನೀಡಲಾಗಿತ್ತು.

  • ಚಿಕ್ಕಬಳ್ಳಾಪುರ ಜಿಲ್ಲೆಯ 12 ಮಂದಿ ಕೆಎಎಸ್ ಅಧಿಕಾರಿಗಳಾಗಿ ಆಯ್ಕೆ

    ಚಿಕ್ಕಬಳ್ಳಾಪುರ ಜಿಲ್ಲೆಯ 12 ಮಂದಿ ಕೆಎಎಸ್ ಅಧಿಕಾರಿಗಳಾಗಿ ಆಯ್ಕೆ

    ಚಿಕ್ಕಬಳ್ಳಾಪುರ: ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಜಿಲ್ಲೆಯ 12 ಮಂದಿ ಕೆಎಎಸ್ ಅಧಿಕಾರಿಗಳಾಗಿ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

    ಕೆಪಿಎಸ್‍ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಉಪವಿಭಾಗಾಧಿಕಾರಿ, ತಹಸೀಲ್ದಾರ್ ಹಾಗೂ ವಿವಿಧ ಜಿಲ್ಲಾ ಮಟ್ಟದ ಹುದ್ದೆಗಳಿಗೆ ಜಿಲ್ಲೆಯ 12 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಬಾಗೇಪಲ್ಲಿ ತಾಲೂಕು ಪಾತಪಾಳ್ಯ ಹೋಬಳಿ ಸೋಮನಾಥಪುರದ ರಾಚವಾರಪಲ್ಲಿಯ ಎಂ.ಕೆ.ಶೃತಿ ಅವರು ಒಟ್ಟು 1,185 ಅಂಕ ಪಡೆದಿದ್ದು, 10 ನೇ ರ‌್ಯಾಂಕ್ ಪಡೆದು ಉಪವಿಭಾಗಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.

    ಚಿಂತಾಮಣಿ ತಾಲೂಕು ಬುರುಡಗುಂಟೆ ಅಂಚೆ ಉಲಿಬೆಲೆ ಗ್ರಾಮದ ಕೃಪಾಲಿನಿ ಅವರು 1,176 ಅಂಕಗಳನ್ನು ಗಳಿಸಿ ಉಪವಿಭಾಗಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ. ಬಾಗೇಪಲ್ಲಿ ತಾಲೂಕು ಚಂಚರಾಯನಪಲ್ಲಿ ಅಂಚೆ ಬ್ರಾಹ್ಮಣರಹಳ್ಳಿಯ ಬಿ.ಆರತಿ ಕೋಂ ಶಂಕರ ಎಂಬುವವರು 1,096 ಅಂಕಗಳನ್ನು ಪಡೆದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಗೌರಿಬಿದನೂರು ಪಟ್ಟಣದ ವಿಜಯನಗರದ ಶ್ವೇತಭವನ ನಿವಾಸಿ ಜಿ.ಎಸ್.ಸ್ಮೀತಾ ಅವರು 1,138 ಅಂಕ ಪಡೆದು ಕಮರ್ಷಿಯಲ್ ಟ್ಯಾಕ್ಸ್ ನ ಅಸಿಸ್ಟೆಂಟ್ ಕಮೀಷಿನರಾಗಿ ಆಯ್ಕೆಯಾಗಿದ್ದು, ಅದೇ ರೀತಿ ಗೌರಿಬಿದನೂರು ತಾಲೂಕು ಪುರ ಗ್ರಾಮದ ಪಿ.ಎಸ್.ರಾಜೇಶ್ವರಿ ಅವರು 1,085 ಅಂಕಗಳನ್ನು ಪಡೆದು ಗ್ರೇಡ್-2 ತಹಸೀಲ್ದಾರ್ ಆಗಿ ನೇಮಕಗೊಂಡಿದ್ದಾರೆ.

    ಚಿಂತಾಮಣಿ ತಾಲೂಕು ಏನಿಗದೆಲೆ ಅಂಚೆ ಗುಂಡ್ಲಹಳ್ಳಿ ಗ್ರಾಮದ ಜಿ.ಕೆ.ನಾಗೇಂದ್ರ (1,103 ಅಂಕ), ಕೋಟಗಲ್ ಅಂಚೆ ಕೆ.ರಾಗುಟ್ಟಹಳ್ಳಿ ಗ್ರಾಮದ ಆರ್.ಜಿ.ಸುಬ್ರಮಣಿ (1,058 ಅಂಕ), ಬಾಗೇಪಲ್ಲಿ ತಾಲೂಕು ಕೊತ್ತಕೋಟೆ ಅಂಚೆ ಮುಮ್ಮಡಿವಾರಿಪಲ್ಲಿಯ ಆರ್.ನಾಗೇಂದ್ರ (1,049 ಅಂಕ), ಗೌರಿಬಿದನೂರು ಪಟ್ಟಣದ ಪುಷ್ಪಾಂಜಲಿ ಚಿತ್ರಮಂದಿರ ಹಿಂಭಾಗದ ಗೌರಿರಾಮನಿಲಯದ ಎಸ್.ರಾಘವೇಂದ್ರ (892 ಅಂಕ) ಅವರು ಕಮರ್ಷಿಯಲ್ ಟ್ಯಾಕ್ಸ್ ಆಫೀಸರ್ ಗಳಾಗಿ ಆಯ್ಕೆಯಾಗಿದ್ದರೆ.

    ಉಳಿದಂತೆ ಶಿಡ್ಲಘಟ್ಟ ನಗರದ ಕೋಟೆ ಸರ್ಕಲ್‍ನ ಟಿ.ಬಿ.ರಸ್ತೆಯಲ್ಲಿರುವ ಸಿ.ಕೆ.ಮಹಾಲಕ್ಷಿ ಕೋಂ ಬಿ.ಆರ್.ಆಂಜನೇಯಲು ಅವರು 1,059 ಅಂಕ ಮತ್ತು ಭಕ್ತರಹಳ್ಳಿಯ ಬಿ.ವಿ.ಗಂಗಾಧರ ಅವರು 1,048 ಅಂಕ ಪಡೆದು ಕೋ ಆಪರೇಟಿವ್ ಸೋಸೈಟಿಯ ಅಸಿಸ್ಟೆಂಟ್ ರಿಜಿಸ್ಟರ್ ಹುದ್ದೆಗಳಿಗೆ ನೇಮಕಗೊಂಡಿದ್ದಾರೆ. ಒಟ್ಟಾರೆ ಜಿಲ್ಲೆಯಿಂದ ಕೆಎಎಸ್ ಅಧಿಕಾರಿಗಳಾಗಿ ಆಯ್ಕೆಯಾದ 12 ಮಂದಿ ನೂತನ ಅಧಿಕಾರಿಗಳಿಗೆ ಜಿಲ್ಲೆಯ ನಾಗರೀಕರಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

  • ಸರ್ಕಾರದ ವಿರುದ್ಧ ಕೆಎಎಸ್ ಅಧಿಕಾರಿ ಕೆ. ಮಥಾಯಿ ಸೈಕಲ್ ಪ್ರೊಟೆಸ್ಟ್

    ಸರ್ಕಾರದ ವಿರುದ್ಧ ಕೆಎಎಸ್ ಅಧಿಕಾರಿ ಕೆ. ಮಥಾಯಿ ಸೈಕಲ್ ಪ್ರೊಟೆಸ್ಟ್

    ಬೆಂಗಳೂರು: ಸರ್ಕಾರಿ ವಾಹನ ಕೊಡದಿದ್ದಕ್ಕೆ ಕೆಎಎಸ್ ಅಧಿಕಾರಿ ಮಥಾಯಿ ಸೈಕಲ್ ಪ್ರತಿಭಟನೆ ನಡೆಸುವ ಮೂಲಕ ಗಾಂಧಿಗಿರಿ ಮೆರೆಯುತ್ತಿದ್ದಾರೆ.

    ಬೆಂಗಳೂರಿನ ರಾಜನಕುಂಟೆಯ ನಿವಾಸದಿಂದ ಎಂಎಸ್ ಬಿಲ್ಡಿಂಗ್‍ನಲ್ಲಿರುವ ಕಚೇರಿವರೆಗೂ ಮಥಾಯಿ ಸೈಕಲ್‍ನಲ್ಲೇ ಬರ್ತಿದ್ದಾರೆ. ಸದ್ಯ ಸಕಾಲದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಥಾಯಿ, ಈ ಹಿಂದೆ ಐಎಎಸ್ ಅಧಿಕಾರಿಗಳಿಂದ ಕಿರುಳವಾಗ್ತಿರೋದಾಗಿ ಲೋಕಯುಕ್ತರಿಗೆ ದೂರು ನೀಡಿದ್ದರು.

    ಈ ಬಗ್ಗೆ ಮಾತನಾಡಿದ ಮಥಾಯಿ, ಬಿಬಿಎಂಪಿ ಜಾಹೀರಾತು ವಿಭಾಗದಲ್ಲಿ ಕೆಲಸ ಮಾಡುವಾಗ ಅಂದಿನ ಕಮಿಷನರ್ ಲಕ್ಷ್ಮಿನಾರಾಯಣ್ ಅಕ್ರಮದ ಬಗ್ಗೆ ನಾನು ವರದಿ ನೀಡಿದೆ. ಆ ಹಿನ್ನೆಲೆಯಲ್ಲಿ ನಾಲ್ವರು ಐಎಎಸ್ ಅಧಿಕಾರಿಗಳು ಕರ್ತವ್ಯದಲ್ಲಿ ನನಗೆ ತೊಂದರೆ ನೀಡ್ತಿದ್ದಾರೆ. 11 ತಿಂಗಳಿಂದ ನನಗೆ ಸರ್ಕಾರಿ ವಾಹನ ನೀಡಿಲ್ಲ. ನಮ್ಮ ಮನೆಯಿಂದ ವಿಧಾನಸೌಧಕ್ಕೆ 35 ಕಿಲೋಮೀಟರ್ ಆಗುತ್ತೆ. ಬಿಬಿಎಂಪಿ ಜಾಹೀರಾತು ಹಗರಣದಲ್ಲಿ ವರದಿ ಮಾಡಿದ್ದು ತಪ್ಪಾ? ಅಂತ ಪ್ರಶ್ನಿಸಿದ್ದಾರೆ.

    ಸಕಾಲ ಇಲಾಖೆಯಲ್ಲಿ ನಾನು ಕರ್ತವ್ಯಕ್ಕೆ ಸೇರ್ಪಡೆಯಾದಾಗ ಐಎಎಸ್ ಅಧಿಕಾರಿ ಕಲ್ಪನ ನಿಮಗೆ ತುಂಬಾ ಜನ ಶತ್ರುಗಳಿದ್ದಾರೆ ಅಂದಿದ್ರು. ಆದ್ರೆ ಇವಾಗ ಅವರೇ ನನಗೆ ತೊಂದರೆ ಕೊಡ್ತಿದ್ದಾರೆ. ನಾನು ಬರುವ ಮುಂಚೆ ನನ್ನ ಪೋಸ್ಟ್ ಗೆ ಸಕಾಲದಲ್ಲಿ ವಾಹನ ವ್ಯವಸ್ಥೆ ಇತ್ತು. ಅದನ್ನು ಕಟ್ ಮಾಡಿದ್ರು ಎಂದು ಮಥಾಯಿ ಹೇಳಿದ್ದಾರೆ.

  • ಭಿಕ್ಷಾಟನೆ ಮಾಡಿ ಮಕ್ಕಳನ್ನ ಸಾಕ್ತಿರೋ ತಂದೆ, ಸ್ಲಮ್‍ನಲ್ಲಿದ್ರೂ ಕೆಎಎಸ್ ಮಾಡ್ಬೇಕೆಂಬ ಬಿಕಾಂ ವಿದ್ಯಾರ್ಥಿಗೆ ಬೇಕಿದೆ ಸಹಾಯ

    ಭಿಕ್ಷಾಟನೆ ಮಾಡಿ ಮಕ್ಕಳನ್ನ ಸಾಕ್ತಿರೋ ತಂದೆ, ಸ್ಲಮ್‍ನಲ್ಲಿದ್ರೂ ಕೆಎಎಸ್ ಮಾಡ್ಬೇಕೆಂಬ ಬಿಕಾಂ ವಿದ್ಯಾರ್ಥಿಗೆ ಬೇಕಿದೆ ಸಹಾಯ

    ಬೆಳಗಾವಿ: ಜಿಲ್ಲೆಯ ಸ್ಲಂವೊಂದರ ಯುವಕ ಕೆಎಎಸ್ ಅಧಿಕಾರಿ ಆಗಬೇಕೆಂಬ ಗುರಿ ಹೊಂದಿದ್ದಾರೆ. ಆದರೂ ಕಿತ್ತು ತಿನ್ನುವ ಬಡತನ ವಿದ್ಯಾಭ್ಯಾಸಕ್ಕೆ ಅಡ್ಡಗಾಲು ಹಾಕುತ್ತಿದೆ.

    ಬಿಕಾಂ ವಿದ್ಯಾರ್ಥಿಯಾದ ಗಣೇಶ್ ವಿಭೂತಿ ಬೆಳಗಾವಿ ಮಹಾನಗರದ ಕಣಬರ್ಗಿ ಸ್ಲಂನಲ್ಲಿ ಹರಿದು ಹೋದ ಗುಡಿಸಲಿನಲ್ಲಿ ವಾಸವಿದ್ದಾರೆ. ಇವರ ತಂದೆ ಮನೆ ಮನೆಗೆ ತೆರಳಿ ಹಾಡು ಹೇಳಿ ಭಿಕ್ಷೆ ಬೇಡಿ ಬಂದ ಹಣದಿಂದ 5 ಮಕ್ಕಳನ್ನು ಸಾಕುತ್ತಿದ್ದಾರೆ. ತಾಯಿ ಬೇರೆಯವರ ಮನೆಗೆಲಸ, ಪಾತ್ರೆ ತೊಳೆಯುವ ಕೆಲಸ ಮಾಡುವುದರ ಜೊತೆಗೆ ಪೊರಕೆ ಮಾರಲು ಹೋಗುತ್ತಾರೆ. ಕಿತ್ತು ತಿನ್ನುವ ಬಡತನ, ಓದಲು ಆಸಕ್ತಿಯಿದ್ದರೂ ಹಣದ ಕೊರತೆ ಗಣೇಶ್‍ರನ್ನು ಕಾಡುತ್ತಿದೆ. ಆದರೂ ಛಲ ಬಿಡದ ತ್ರಿವಿಕ್ರಮನಂತೆ ಅವರಿವರ ಸಹಾಯ ಪಡೆದು ಬಿಕಾಂ ಓದುತ್ತಿದ್ದಾರೆ.

    ಐದು ಮಕ್ಕಳಿಗೂ ಊಟ ಕೊಡಿಸುವುದೇ ದೊಡ್ಡ ಸವಾಲಾಗಿರುವಾಗ ನಿನಗೆ ಓದಲು ಹಣ ಎಲ್ಲಿಂದ ತರಲಿ ಎಂದು ಪಾಲಕರು ಅಸಹಾಯಕರಾಗಿದ್ದಾರೆ. ಆದರೆ ನಾನು ಕಷ್ಟಪಟ್ಟು ಓದಿ ಮುಂದೆ ಬರಬೇಕು ಎಂದು ಗಣೇಶ್ ತನ್ನ ಕೆಎಎಸ್ ಗುರಿ ಬಗ್ಗೆ ಹೇಳಿಕೊಳ್ಳುತ್ತಾರೆ.

    ನಮ್ಮ ತಂದೆ ನಮಗೆ ವಿದ್ಯಾಭ್ಯಾಸ ನೀಡಲಿಲ್ಲ. ಅದರ ಬದಲು ತಬಲಾ ,ಹಾರ್ಮೊನಿಯಂ ನೀಡಿದರು. ಆದರೆ ಮಗ ಗಣೇಶ್ ಓದುವಲ್ಲಿ ಆಸಕ್ತಿ ತೋರಿದ್ದಾನೆ ಎಂದು ಗಣೇಶ್ ಅವರ ತಂದೆ ಹೇಳುತ್ತಾರೆ. ಕಂದೀಲು ಬೆಳಕಿನಲ್ಲಿ ಓದಿದ ಗಣೇಶ್ ಹಠ ಮಾತ್ರ ಬಿಟ್ಟಿಲ್ಲ. ಕೆಎಎಸ್ ಮಾಡಿ ತಮ್ಮ ಜನರ ಬದುಕಿಗೆ ಆಸರೆಯಾಗಬೇಕೆಂಬುದೇ ಗಣೇಶ್ ಅವರ ಜೀವನದ ಮುಖ್ಯ ಗುರಿ.

    https://www.youtube.com/watch?v=QMEWBdErnLE