Tag: kasaragodu

  • ಸ್ಕೋಡಾ ಎಸ್‌ಯುವಿಗೆ ಸಂಸ್ಕೃತದ ‘ಕೈಲಾಕ್’ ಹೆಸರಿಟ್ಟು ಕಾರು ಗೆದ್ದ ಕಾಸರಗೋಡಿನ ಕುರಾನ್ ಶಿಕ್ಷಕ

    ಸ್ಕೋಡಾ ಎಸ್‌ಯುವಿಗೆ ಸಂಸ್ಕೃತದ ‘ಕೈಲಾಕ್’ ಹೆಸರಿಟ್ಟು ಕಾರು ಗೆದ್ದ ಕಾಸರಗೋಡಿನ ಕುರಾನ್ ಶಿಕ್ಷಕ

    _ ಸ್ಕೋಡಾ ಎಸ್‌ಯುವಿನ ಮೊದಲ ಮಾಲೀಕನಾದ ಜಿಯಾದ್

    ಕಾಸರಗೋಡು: 2025 ರಲ್ಲಿ ಲಾಂಚ್ ಆಗುವ ಸ್ಕೋಡಾ ಯುಎಸ್‌ವಿ(Skoda SUV) ಕಾರಿಗೆ ಕೇರಳ ಮೂಲದ 24 ವರ್ಷದ ಮೊಹಮ್ಮದ್ ಜಿಯಾದ್ ಸೂಚಿಸಿದ ಕೈಲಾಕ್ ಎಂಬ ಹೆಸರನ್ನು ಆಯ್ಕೆ ಮಾಡಲಾಗಿದೆ. ಕೈಲಾಕ್ (Kylaq) ಎಂದರೆ ಸಂಸ್ಕೃತದಲ್ಲಿ ಸ್ಫಟಿಕ ಎಂಬ ಅರ್ಥ ಬರುತ್ತದೆ.

    ಸ್ಕೋಡಾ ಕಂಪನಿಯು ತಮ್ಮ ಹೊಸ ಕಾರ್‌ಗೆ ಹೊಸ ಹೆಸರನ್ನು ಸೂಚಿಸುವ ಸಲುವಾಗಿ ಒಂದು ಸ್ಪರ್ಧೆಯನ್ನು ಘೋಷಣೆ ಮಾಡಿತ್ತು. ಒಬ್ಬರಿಗೆ 5 ಹೆಸರನ್ನು ಸೂಚಿಸುವ ಅವಕಾಶ ನೀಡಿತ್ತು. ಇಂಗ್ಲಿಷ್ ನ ‘ಕೆ’ ಅಕ್ಷರದಿಂದ ಪ್ರಾರಂಭಗೊಂಡು ಕ್ಯು ಅಕ್ಷರದಲ್ಲಿ ಕೊನೆಗೊಳ್ಳುವ ಹೆಸರು ಸೂಚಿಸಬೇಕು ಎಂದು ನಿಯಮದಲ್ಲಿತ್ತು. ಅದರಂತೆ ಸಮಾರು 2 ಲಕ್ಷ ಜನ ಕಾರು ಪ್ರೇಮಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅದರಲ್ಲಿ ಕೇರಳ (Kerala) ಮೂಲದ ಜಿಯಾದ್ ಕಳುಹಿಸಿದ ಹೆಸರನ್ನು ಕಂಪನಿಯು ಆಯ್ಕೆ ಮಾಡಿದೆ. ಇದನ್ನೂ ಓದಿ: ಬಲಪಂಥೀಯರೇ ಗಾಂಧಿಯನ್ನ ಕೊಂದು ಹಾಕಿರೋದು: ಸಿಎಂ ಸಿದ್ದರಾಮಯ್

    ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸ್ಕೋಡಾ ಕಂಪನಿಯ ಈ ಸ್ಪರ್ಧೆಯ ಜಿಯಾದ್ ಕಾಸರಗೋಡು (Kasaragodu) ವಿಜೇತರಾಗಿದ್ದು ಹೊಸ ಸ್ಕೋಡಾ ಕೈಲಾಕ್ ಕಾರು ಗೆದ್ದಿದ್ದಾರೆ ಎಂದು ಅನೌನ್ಸ್ ಮಾಡಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರು ಈ ಕಾರಿನ ಮೊದಲ ಮಾಲೀಕರು ಎಂದು ಕಂಪನಿಯು ಮೊದಲೇ ಹೇಳಿತ್ತು. ಆದ್ದರಿಂದ ಜಿಯಾದ್ ಈ ಕಾರಿನ ಮೊದಲ ಮಾಲೀಕರಾಗಿದ್ದಾರೆ. ಇದನ್ನೂ ಓದಿ: ಯಶವಂತಪುರ ಫ್ಲೈ ಓವರ್ ಕೆಳಗೆ ಸಿಲುಕಿದ ಬೃಹತ್ ಟ್ರಕ್

    ಜಿಯಾದ್ ಕ್ಯಾಲಿಕಟ್ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್‌ನಲ್ಲಿ ಸ್ನಾತಕ್ಕೋತ್ತರ ಪದವಿ ಪಡೆದು ಕಳೆದ ಎರಡೂವರೆ ವರ್ಷದಿಂದ ಕಾಸರಗೋಡಿನ ನಜಾತ್ ಕುರಾನ್ ಅಕಾಡೆಮಿಯಲ್ಲಿ ಕುರಾನ್ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವ

    “ನನಗೆ ಕಾರಿನ ಮೇಲೆ ಅಷ್ಟೊಂದು ಕ್ರೇಜ್ ಇಲ್ಲ. ನನ್ನ ಮನೆಯವರನ್ನು ಕರೆದುಕೊಂಡು ಹೋಗುವುದಕ್ಕಾಗಿ ನನಗೆ ಸ್ವಂತ ಕಾರು ಬೇಕು” ಎಂದು ಜಿಯಾದ್ ಹೇಳಿದರು. ಇದನ್ನೂ ಓದಿ: ಭಾರತದ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ‘RHUMI-1’ ಯಶಸ್ವಿ ಉಡಾವಣೆ

    ಸ್ಕೋಡಾ ಇಂಡಿಯಾ ಕಂಪನಿಯು ಕ್ವಿಕ್, ಕೈಲಾಕ್, ಕೋಸ್ಮಿಕ್, ಕೈರೋಕ್, ಕಾರಿಕ್, ಕಾರ್ಮಿಕ್, ಕ್ಲಿಕ್, ಮತ್ತು ಕಯಾಕ್ 8 ಹೆಸರುಗಳನ್ನು ಕೊನೆಯ ವಾರದಲ್ಲಿ ವೋಟ್ ಗಾಗಿ ಹೊರ ಹಾಕಿತ್ತು. ಇದರಲ್ಲಿ ಕ್ವಿಕ್, ಕೈಲಾಕ್, ಕೋಸ್ಮಿಕ್, ಕ್ಲಿಕ್, ಮತ್ತು ಕಯಾಕ್ ಎಂಬ 5 ಹೆಸರುಗಳನ್ನು ಆಯ್ಕೆ ಮಾಡಲಾಗಿದ್ದು ಇದರಲ್ಲಿ ಸ್ಕೋಡಾ ಜಿಯಾದ್ ಸೂಚಿಸಿರುವ ‘ಕೈಲಾಕ್’ ಎಂಬ ಹೆಸರನ್ನು ಆಯ್ಕೆ ಮಾಡಿದೆ. ಇದನ್ನೂ ಓದಿ: ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ – ಅಸ್ಸಾಂ ಹತ್ಯಾಚಾರ ಆರೋಪಿ ಕೊಳಕ್ಕೆ ಬಿದ್ದು ಸಾವು

  • ಅಣಕು ಮತದಾನದಲ್ಲಿ ಬಿಜೆಪಿಗೆ ಅಧಿಕ ಮತ – ಇವಿಎಂ ಪರಿಶೀಲನೆಗೆ ಸುಪ್ರೀಂ ಸೂಚನೆ

    ಅಣಕು ಮತದಾನದಲ್ಲಿ ಬಿಜೆಪಿಗೆ ಅಧಿಕ ಮತ – ಇವಿಎಂ ಪರಿಶೀಲನೆಗೆ ಸುಪ್ರೀಂ ಸೂಚನೆ

    ನವದೆಹಲಿ: ಕೇರಳದ ಕಾಸರಗೋಡಿನಲ್ಲಿ (Kasaragodu) ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ (BJP) ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (Electronic Voting Machines) ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ (Supreme Court) ಭಾರತೀಯ ಚುನಾವಣಾ ಆಯೋಗಕ್ಕೆ (Election Commission of India) ಆದೇಶಿಸಿದೆ.

    ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ ನಂತರ ನ್ಯಾ.ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ದ್ವಿಸದಸ್ಯ ಪೀಠವು ಇವಿಎಂ ಸಮಸ್ಯೆಯನ್ನು ಪರಿಶೀಲಿಸುವಂತೆ ಇಸಿಐಗೆ ಸೂಚಿಸಿತು. ಇದನ್ನೂ ಓದಿ: ಬೆಂಗ್ಳೂರು ಕುದುರೆಗಳಿಗೆ ಗ್ಲಾಂಡರ್ಸ್‌ ರೋಗ ಕಂಟಕ; ಚಿತಾಗಾರದಲ್ಲಿ ರೋಗ ಪೀಡಿತ ಕುದುರೆ ಬರ್ನಿಂಗ್‌

    ಅಣಕು ಮತದಾನ ನಡೆದ ವೇಳೆ 4 ಇವಿಎಂಗಳು ಮತ್ತು ವಿವಿಪ್ಯಾಟ್‍ಗಳ (VVPAT) ಹೋಲಿಕೆಯಲ್ಲಿ ಬಿಜೆಪಿಗೆ ಒಂದು ಹೆಚ್ಚುವರಿ ಮತ ಬಂದಿದೆ. ಮಾಧ್ಯಮಗಳ ವರದಿ ಆಧರಿಸಿ ವಕೀಲ ಪ್ರಶಾಂತ್ ಭೂಷಣ್ ಕೋರ್ಟ್ ಮುಂದೆ ಈ ವಿಚಾರ ಪ್ರಸ್ತಾಪಿಸಿದರು. ಮನವಿಯನ್ನು ಆಲಿಸಿದ ಪೀಠ ಚುನಾವಣಾ ಆಯೋಗದ ಸಲಹೆಗಾರ ಮಣಿಂದರ್ ಸಿಂಗ್ ಅವರಿಗೆ ಸೂಚನೆ ನೀಡಿದೆ.

    ಪ್ರತಿ ಮತವನ್ನು ಚುನಾವಣಾ ಸಮಯದಲ್ಲಿ ವಿವಿಪ್ಯಾಟ್ ಸ್ಲಿಪ್‍ಗಳೊಂದಿಗೆ ತಾಳೆ ಮಾಡಲು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಅರ್ಜಿದಾರರಲ್ಲಿ ಒಬ್ಬರಾದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಅರುಣ್ ಕುಮಾರ್ ಅಗರ್ವಾಲ್ ಪ್ರತಿಯೊಂದು ಇವಿಎಂ ಮತವನ್ನು ವಿವಿಪ್ಯಾಟ್ ಸ್ಲಿಪ್‍ಗಳಿಗೆ ಹೋಲಿಸಿ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದರು.

    ಮತದಾರರ ಮತವನ್ನು ದಾಖಲಿಸಿದಂತೆ ಖಚಿತಪಡಿಸಿಕೊಳ್ಳಲು ಮತಪೆಟ್ಟಿಗೆಯಲ್ಲಿ ವಿವಿಪ್ಯಾಟ್ ಸ್ಲಿಪ್‍ಗಳನ್ನು ಭೌತಿಕವಾಗಿ ಬಿಡಲು ಮತದಾರರಿಗೆ ಅವಕಾಶ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಪ್ರಸ್ತುತ, ಪ್ರತಿ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆ ಮಾಡಿದ ಐದು ಇವಿಎಂಗಳಲ್ಲಿ ದಾಖಲಾದ ಮತಗಳಿಗೆ ಮಾತ್ರ ವಿವಿಪ್ಯಾಟ್ ಪರಿಶೀಲನೆಯನ್ನು ಮಾಡಲಾಗುತ್ತಿತ್ತು. ಇದನ್ನೂ ಓದಿ: ಮಸೀದಿಗಳ ಮುಂದೆ ಜೈ ಶ್ರೀರಾಮ್ ಘೋಷಣೆ ಕೂಗೋ ಪ್ರಕ್ರಿಯೆ ಶುರು ಮಾಡಬೇಕಾಗುತ್ತೆ ಹುಷಾರ್: ಮುತಾಲಿಕ್

  • ಬೆತ್ತಲೆಯಾಗಿದ್ದು ವೀಡಿಯೋ ಮಾಡುವಂತೆ ಒತ್ತಾಯ- ಪತಿಯ ವಿರುದ್ಧ ಪತ್ನಿ ದೂರು

    ಬೆತ್ತಲೆಯಾಗಿದ್ದು ವೀಡಿಯೋ ಮಾಡುವಂತೆ ಒತ್ತಾಯ- ಪತಿಯ ವಿರುದ್ಧ ಪತ್ನಿ ದೂರು

    ಕಾಸರಗೋಡು: ಪತಿಯ ವಿರುದ್ಧವೇ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಕೇರಳದ ಕಾಸರಗೋಡು (Kasaragodu) ಜಿಲ್ಲೆಯ ನೀಲೇಶ್ವರಂನಲ್ಲಿ ನಡೆದಿದೆ.

    ಪತಿ ವಿರುದ್ಧ ದೂರು ನೀಡಿದ ಪತ್ನಿಗೆ 20 ವರ್ಷ ವಯಸ್ಸು. ಈಕೆಯ ಪತಿ ಬಂಕಲಂ ಮೂಲದವನು. ಮದುವೆಯಾದ ಬಳಿಕ ದಂಪತಿ ಪಾಲಾದಲ್ಲಿ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದಾರೆ. ಆದರೆ ಇದೀಗ ಪತಿ ಹಾಗೂ ಪತ್ನಿಯ ನಡುವ ವೈಮನಸ್ಸು ಮೂಡಿದ್ದು, ಠಾಣೆವರೆಗೆ ತಲುಪಿದೆ. ಇದನ್ನೂ ಓದಿ: ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್‌ನ ಸ್ನೇಹಿತರಿಬ್ಬರು ದುರ್ಮರಣ

    ಪತ್ನಿಯ ದೂರಿನಲ್ಲೇನಿದೆ..?: ಪತಿ ಕೆಲ ವ್ಯಕ್ತಿಗಳಿಂದ ಹಣ ಪಡೆದಿದ್ದಾನೆ. ಅಂತೆಯೇ ಹಣ ಕೊಟ್ಟವರು ಪತಿ ಬೆನ್ನು ಬಿದ್ದಿದ್ದಾರೆ. ಅಲ್ಲದೆ ಅದರಲ್ಲಿ ಓರ್ವ, ಪತ್ನಿಯನ್ನು ನಗ್ನವಾಗಿ ಕಾಣಿಸಿಕೊಳ್ಳಲು ಮತ್ತು ವೀಡಿಯೋ ಕರೆ ಮಾಡಲು ಒತ್ತಾಯಿಸಿದ್ದಾನೆ. ಅಂತೆಯೇ ಪತಿಯು ನಗ್ನವಾಗಿ ಇರುವಾಗ ವೀಡಿಯೋ ಕರೆ ಮಾಡುವಂತೆ ಪೀಡಿಸಿದ್ದಾನೆ. ಬೆದರಿಕೆ ಹಾಕಿ ಹಲ್ಲೆ ಮಾಡಿರುವ ಆರೋಪವನ್ನೂ ಪತ್ನಿ ಮಾಡಿದ್ದಾರೆ.

    ಸದ್ಯ ನೀಲೇಶ್ವರಂ ಪೊಲೀಸರು ಮಹಿಳೆಯ ದೂರು ಸ್ವೀಕರಿಸಿದ್ದಾರೆ. ಅಲ್ಲದೆ ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದ ಬಿರಿಯಾನಿ ತಿಂದು ಕಾಸರಗೋಡು ಯುವತಿ ಸಾವು

    ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದ ಬಿರಿಯಾನಿ ತಿಂದು ಕಾಸರಗೋಡು ಯುವತಿ ಸಾವು

    ತಿರುವನಂತಪುರ: ಸ್ಥಳೀಯ ಹೋಟೆಲ್‌ನಿಂದ ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದ ಬಿರಿಯಾನಿ (Biriyani) ತಿಂದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ (Kerala) ನಡೆದಿದೆ.

    ಕಾಸರಗೋಡು (Kasaragodu) ಸಮೀಪದ ಪೆರುಂಬಳದ ಅಂಜು ಶ್ರೀಪಾರ್ವತಿ ಅವರು ರೆಸ್ಟೋರೆಂಟ್‌ನಿಂದ ಆನ್‌ಲೈನ್‌ನಲ್ಲಿ ಖರೀದಿಸಿದ ‘ಕುಜಿಮಂತಿ’ ಬಿರಿಯಾನಿಯನ್ನು ಸೇವಿಸಿದ್ದರು. ನಂತರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಶಂಕರ್ ಮಿಶ್ರಾ ಬೆಂಗಳೂರಲ್ಲಿ ಬಂಧನ

    ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಶನಿವಾರ ಮುಂಜಾನೆ ಬಾಲಕಿ ಸಾವನ್ನಪ್ಪಿದ್ದಾಳೆ. ವಿಧಿವಿಜ್ಞಾನ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಮೊದಲು ಆಕೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಕರ್ನಾಟಕದ ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಜೋಶಿಮಠದ ಬಳಿಕ ಕರ್ಣಪ್ರಯಾಗದಲ್ಲಿ ಭೂಮಿ, ಮನೆಯ ಗೋಡೆ ಬಿರುಕು – ಮುಳುಗಡೆ ಭೀತಿ, ಆತಂಕದಲ್ಲಿ ಜನ

    ಘಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಆಹಾರ ಸುರಕ್ಷತಾ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ಘಟನೆ ಮತ್ತು ಯುವತಿಗೆ ನೀಡಿದ ಚಿಕಿತ್ಸೆಯ ಬಗ್ಗೆಯೂ ಡಿಎಂಒ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

    ಕೆಲದಿನಗಳ ಹಿಂದೆಯಷ್ಟೇ ಇದೇ ರೀತಿ ಕೋಝಿಕ್ಕೋಡ್‌ನ ಉಪಾಹಾರ ಗೃಹದಲ್ಲಿ ತಯಾರಿಸಿದ್ದ ಆಹಾರ ಸೇವಿಸಿ ನರ್ಸ್‌ವೊಬ್ಬರು ಸಾವಿಗೀಡಾಗಿದ್ದರು. ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ‌ ಈ ನರ್ಸ್‌ ಕರ್ತವ್ಯ ನಿರ್ವಹಿಸುತ್ತಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಸರಗೋಡಿನ ದಂತ ವೈದ್ಯನ ಸಾವಿನ ಹಿಂದೆ ಲ್ಯಾಂಡ್ ಜಿಹಾದ್ ಸದ್ದು!

    ಕಾಸರಗೋಡಿನ ದಂತ ವೈದ್ಯನ ಸಾವಿನ ಹಿಂದೆ ಲ್ಯಾಂಡ್ ಜಿಹಾದ್ ಸದ್ದು!

    ಮಂಗಳೂರು: ಕಾಸರಗೋಡಿನ (Kasaragod) ವೈದ್ಯನ (Doctor) ಸಾವಿನ ಹಿಂದೆ ಅನೇಕ ಟ್ವಿಸ್ಟ್ ದೊರೆತಿದ್ದು, ಲ್ಯಾಂಡ್ ಜಿಹಾದ್‍ನಿಂದ ಅವರನ್ನು ಕೊಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬರುತ್ತಿದೆ.

    ನ.10ರಂದು ಉಡುಪಿ (Udupi) ಜಿಲ್ಲೆಯ ಕುಂದಾಪುರದ ಹಟ್ಟಿಯಂಗಡಿ ಬಳಿ ರೈಲ್ವೆ ಹಳಿಯಲ್ಲಿ ಅಪರಿಚಿತ ಶವ ಪತ್ತೆ ಆಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಆ ಮೃತ ದೇಹವನ್ನು ಕಾಸರಗೋಡಿನ ದಂತ ವೈದ್ಯ ಡಾ. ಕೃಷ್ಣಮೂರ್ತಿ ಎಂದು ಗುರುತಿಸಿದ್ದರು. ಈ ಬಗ್ಗೆ ಪ್ರಖ್ಯಾತ ದಂತ ವೈದ್ಯನ ಸಾವಿನ ಬಗ್ಗೆ ಕೊಲೆ ಮಾಡಲಾಗಿದೆ ಎಂದು ವಿಹೆಚ್‍ಪಿ ಗಂಭೀರ ಆರೋಪ ಮಾಡಿತ್ತು. ಈ ಹಿನ್ನೆಲೆಯಲ್ಲಿ ಹಾಗೂ ಕೃಷ್ಣಮೂರ್ತಿ ದೇಹದ ಮೇಲೆ ಆದ ಗಾಯವನ್ನು ನೋಡಿದ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ.

    ಕೃಷ್ಣಮೂರ್ತಿ ಅವರು ಸುಮಾರು 30 ವರ್ಷಗಳಿಂದ ಮಂಗಳೂರು ಗಡಿ ಭಾಗದ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಆರು ತಿಂಗಳಿನಿಂದ ಜಾಗದ ವಿಚಾರದಲ್ಲಿ ಡಾ.ಕೃಷ್ಣಮೂರ್ತಿ ಅವರು ಲ್ಯಾಂಡ್ ಮಾಫಿಯಾ ಬೆನ್ನು ಬಿದ್ದಿತ್ತು. ಜಾಗ ಖರೀದಿ ವಿಚಾರದಲ್ಲಿ ಡಾ.ಕೃಷ್ಣಮೂರ್ತಿಗೆ ಸ್ಥಳೀಯ ಕೆಲ ಮುಸ್ಲಿಮರು ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅದಾದ ಬಳಿಕ ನ. 8ರಂದು ಬದಿಯಡ್ಕದ ಡಾ.ಕೃಷ್ಣಮೂರ್ತಿ ಅವರ ಕ್ಲಿನಿಕ್‍ಗೆ ಮುಸ್ಲಿಂ ಯುವತಿಯೊಬ್ಬಳು ಬಂದಿದ್ದಳು. ಈ ವೇಳೆ ಕ್ಲಿನಿಕ್‍ಗೆ ಬಂದಿದ್ದ ಮುಸ್ಲಿಂ ಯುವತಿ ಜೊತೆ ಕೃಷ್ಣಮೂರ್ತಿ ಅವರು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

    ಈ ಹಿನ್ನೆಲೆಯಲ್ಲಿ ಯುವಕರ ತಂಡ ಕೃಷ್ಣಮೂರ್ತಿಗೆ ಬೆದರಿಕೆವೊಡ್ಡಿ ಹಲ್ಲೆಗೆ ಮುಂದಾಗಿದ್ದರು. ಆ ಘಟನೆ ಬಳಿಕ ಡಾ.ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಅದಾದ ಬಳಿಕ ಉಡುಪಿಯ ಕುಂದಾಪುರ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಶವವಾಗಿ ಪತ್ತೆ ಆಗಿದ್ದರು. ಇದನ್ನೂ ಓದಿ: ಗಾಂಜಾ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದ ಆರೋಪಿ ಸಾವು – ಸಿಐಡಿ ತನಿಖೆಗೆ ಶಿಫಾರಸು

    POLICE JEEP

    ಇದೀಗ ಈ ಸಾವಿಗೆ ಅನೇಕ ಟ್ವಿಸ್ಟ್ ದೊರೆತಿದ್ದು, ಮುಸ್ಲಿಂ ಯುವತಿ ಮೂಲಕ ವೈದ್ಯರನ್ನು ಬ್ಲ್ಯಾಕ್‌ಮೇಲ್ ಮಾಡಿದ್ರಾ? ಬ್ಲ್ಯಾಕ್ ಮೇಲ್‍ಗೆ ಬೆದರಿ ಆತ್ಮಹತ್ಯೆ ಮಾಡಿಕೊಂಡರಾ ಡಾ.ಕೃಷ್ಣಮೂರ್ತಿ? ಲಕ್ಷ ಲಕ್ಷ ಹಣಕ್ಕೆ ಯುವತಿ ಮುಂದಿಟ್ಟು ಬ್ಲ್ಯಾಕ್‌ಮೇಲ್? ಲ್ಯಾಂಡ್ ಜಿಹಾದ್‍ಗೆ ಬಗ್ಗದ ದಂತ ವೈದ್ಯನಿಗೆ ಯುವತಿ ಮುಂದಿಟ್ಟು ಬ್ಲ್ಯಾಕ್ ಮೇಲ್ ಮಾಡಿದ್ರಾ ಎಂಬ ಪ್ರಶ್ನೆ ಮೂಡುತ್ತಿದೆ. ಇದನ್ನೂ ಓದಿ: ಸಹೋದರ ಮೊಬೈಲ್ ಪಾಸ್‌ವರ್ಡ್ ಬದಲಾಯಿಸಿದ್ದಕ್ಕೆ ಯುವತಿ ಆತ್ಮಹತ್ಯೆ

    ಘಟನೆಗೆ ಸಂಬಂಧಿಸಿ ಮುಸ್ಲಿಂ ಲೀಗ್ ಮುಖಂಡ ಸೇರಿ ಐವರನ್ನು ಬದಿಯಡ್ಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಅಡಿಕೆ ವ್ಯಾಪಾರಿ ಹಾಗೂ ಮುಸ್ಲಿಂ ಲೀಗ್ ಕುಂಬ್ಡಾಜೆ ಪಂಚಾಯತ್ ಕಾರ್ಯದರ್ಶಿ ಅಲಿ ತುಪ್ಪಕಲ್ಲು, ಮುಸ್ಲಿಂ ಲೀಗ್ ಬದಿಯಡ್ಕ ಪಂಚಾಯತ್ ಪದಾಧಿಕಾರಿ ಮುಹಮ್ಮದ್ ಹನೀಫ್ ಯಾನೆ ಅನ್ವರ್, ಕುಂಬ್ಡಾಜೆ ನಿವಾಸಿ ಅಶ್ರಫ್, ಅನ್ನಡ್ಕ ನಿವಾಸಿ ಮುಹಮ್ಮದ್ ಶಿಯಾಬುದ್ದೀನ್, ವಿದ್ಯಾಗಿರಿ ನಿವಾಸಿ ಉಮರುಲ್ ಫಾರೂಕ್‍ನನ್ನು ವಶಪಡಿಸಿಕೊಳ್ಳಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಈ ಹಿಂದೆ ಹಾವಿನ ಮೊಟ್ಟೆ, ಇದೀಗ ಹಕ್ಕಿ ಗೂಡಿನಿಂದಾಗಿ ರಾ. ಹೆದ್ದಾರಿ ಕೆಲಸ ಸ್ಥಗಿತ!

    ಈ ಹಿಂದೆ ಹಾವಿನ ಮೊಟ್ಟೆ, ಇದೀಗ ಹಕ್ಕಿ ಗೂಡಿನಿಂದಾಗಿ ರಾ. ಹೆದ್ದಾರಿ ಕೆಲಸ ಸ್ಥಗಿತ!

    ಕಾಸರಗೋಡು: ಕೆಲೆ ತಿಂಗಳ ಹಿಂದೆ ಹಾವಿನ ಮೊಟ್ಟೆಗೆ ಕಾವು ನೀಡುವ ಕಾರಣ, ಇದೀಗ ಪಕ್ಷಿಗಳ ಗೂಡುಗಳನ್ನು ರಕ್ಷಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ (National Highway) ಕಾಮಗಾರಿಯನ್ನು ಸ್ಥಗಿತಗೊಳಿಸಲಾದ ಘಟನೆಯೊಂದು ನಡೆದಿದೆ.

    ಹೌದು. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಯೋಜನೆಯ ಅನ್ವಯ ತಲಪಾಡಿಯಿಂದ ಚೆರ್ಕಳವರೆಗಿನ ಮೊದಲ ರೀಚ್‍ನ ಕಾಮಗಾರಿ ಭರದಿಂದ ಸಾಗುತ್ತಿತ್ತು. ಅಂತೆಯೇ ಚೆರ್ಕಳ ಪೇಟೆಯ ಒಂದು ಭಾಗದ ರಸ್ತೆ ಬದಿಯಲ್ಲಿ ಮರಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಹಕ್ಕಿಗಳು(Birds) ಗೂಡು ಕಟ್ಟಿರುವುದು ಬೆಳಕಿಗೆ ಬಂದಿದೆ.

     

    ಚೆರ್ಕಳ ಜಂಕ್ಷನ್‍ನಲ್ಲಿರುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಬೃಹತ್ ಮರವೊಂದರಲ್ಲಿ ಸುಮಾರು 100ಕ್ಕೂ ಅಧಿಕ ನೀರು ಕಾಗೆಗಳು ಹಾಗೂ ಕೊಕ್ಕರೆಗಳು ಗೂಡು ಕಟ್ಟಿರುವುದು ಗೊತ್ತಾಗಿದೆ. ಹೀಗಾಗಿ ಇವುಗಳ ಸಂರಕ್ಷಣೆಗೆ 25 ದಿನ ರಸ್ತೆ ಕಾಮಗಾರಿಯನ್ನು ಸ್ಥಗಿತಗೊಳಿಸಲು ಗುತ್ತಿಗೆದಾರರ ಸೊಸೈಟಿ, ಅರಣ್ಯ ಇಲಾಖೆ ಹಾಗೂ ಪಕ್ಷಿ ತಜ್ಞರು ಸಮಾಲೋಚಿಸಿ ಈ ತೀರ್ಮಾನ ಕೈಗೊಂಡಿದ್ದಾರೆ. ಇದನ್ನೂ ಓದಿ: ಹೆದ್ದಾರಿಗಾಗಿ ಧರೆಗುರುಳಿದ ಬೃಹತ್ ಮರ- ನೂರಾರು ಹಕ್ಕಿಗಳ ಮಾರಣಹೋಮ

    ವಿದ್ಯುತ್ ತಂತಿ ಬದಲಾವಣೆ ಮಾಡುವ ಸಲುವಾಗಿ 12 ಮೀಟರ್ ಎತ್ತರದ ಮರದ ರೆಂಬೆ ಕಡಿಯಲು ವಿದ್ಯುತ್ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ತಪಾಸಣೆ ನಡೆಸಿದರು. ಆಗ ಪಕ್ಷಿಗಳ ಗೂಡು ಕಂಡುಬಂದಿತ್ತು. ಕೂಡಲೇ ಸಂಸ್ಥೆಯ ಜಿ.ಎಂ ಬಾಲಸುಬ್ರಹ್ಮಣ್ಯಂ, ಸಾಮಾಜಿಕ ಅರಣ್ಯ ಇಲಾಖೆ ಡೆಪ್ಯುಟಿ ಕನ್ಸರ್ವೇಟರ್ ಪಿ.ಧನೇಶ್ ಕುಮಾರ್, ಭಕ್ತಿ ನಿರೀಕ್ಷಕ ರಾಜು ಕಿದೂ ಸ್ಥಳಕ್ಕಾಗಮಿಸಿ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ

    ಮೇ ತಿಂಗಳಿಂದ ಅಕ್ಟೋಬರ್‍ವರೆಗೆ ಕಡಲು ಕಾಗೆ, ಕೊಕ್ಕರೆಗಳು ತಮ್ಮ ಸಂತಾನೋತ್ಪತ್ತಿಯಲ್ಲಿ ತೊಡಗಿಕೊಳ್ಳುತ್ತವೆ. ಈ ಸಮಯದಲ್ಲಿ ಅವುಗಳ ಗೂಡು ತೆರವು ಮಾಡಿದರೆ ಮರಿಗಳು ಸಾಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ 25 ದಿನ ಕಾದು ಆ ಹಕ್ಕಿಗಳು ತಾನಾಗಿ ಗೂಡಿನಿಂದ ಹಾರಿಹೋದ ನಂತರ ಕಾಮಗಾರಿ ಆರಂಭಿಸಲು ತೀರ್ಮಾನ ಮಾಡಲಾಗಿದೆ. ಈ ಹಿಂದೆಯೂ ಇದೇ ರಸ್ತೆ ಕಾಮಗಾರಿ ಸಂದರ್ಭ ಹಾವಿನ ಮೊಟ್ಟೆಗೆ ಕಾವು ನೀಡುವ ಕಾರಣಕ್ಕಾಗಿ ಮಂಜೇಶ್ವರ ಆಸು-ಪಾಸಿನಲ್ಲಿ ತಿಂಗಳ ಕಾಲ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಇದನ್ನೂ ಓದಿ: ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ಪರಿಶೀಲನೆ

    Live Tv
    [brid partner=56869869 player=32851 video=960834 autoplay=true]

  • ಶವರ್ಮ ತಿಂದು 16 ವರ್ಷದ ವಿದ್ಯಾರ್ಥಿನಿ ಸಾವು, 18 ಮಂದಿ ಅಸ್ವಸ್ಥ

    ಶವರ್ಮ ತಿಂದು 16 ವರ್ಷದ ವಿದ್ಯಾರ್ಥಿನಿ ಸಾವು, 18 ಮಂದಿ ಅಸ್ವಸ್ಥ

    ಕಾಸರಗೋಡು: ಕೇರಳದ ಕಾಸರಗೋಡಿನ ಉಪಾಹಾರ ಗೃಹದಲ್ಲಿ ಶವರ್ಮ ತಿಂದು 16 ವರ್ಷದ ಹುಡುಗಿಯೊಬ್ಬಳು ಮೃತಪಟ್ಟಿದ್ದು, 18 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.

    FOOD POISION

    ಕಾಸರಗೋಡು ಸಮೀಪದ ಕರಿವಲ್ಲೋರ್ ನಿವಾಸಿ ದೇವಾನಂದ ಕನಂಗಾಡ್ (16) ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದು, ವಿಷಪೂರಿತ ಉಪಾಹಾರ ಸೇವನೆ ಶಂಕೆ ವ್ಯಕ್ತಪಡಿಸಿದ್ದಾರೆ. ಉಪಾಹಾರ ಸೇವಿಸಿದ ಜ್ಯೂಸ್ ಅಂಗಡಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮಳಿಗೆಯನ್ನು ಬಂದ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜಾಗರಣೆ, ಡಿಜೆ ಸದ್ದು ಮಾಡುವಂತಿಲ್ಲ- ರಂಜಾನ್ ಆಚರಣೆಗೆ ಹಲವು ನಿರ್ಬಂಧ

    ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ವೈದ್ಯಾಧಿಕಾರಿ ಎ.ವಿ.ರಾಮದಾಸ್, ಅಸ್ವಸ್ಥಗೊಂಡ 18 ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎಂದು ಹೇಳಿದ್ದಾರೆ.

    SHAWARMA 03

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಸಚಿವ ಎಂ.ವಿ.ಗೋವಿಂದನ್, ರಾಜ್ಯದೆಲ್ಲೆಡೆ ಇರುವ ಹೊಟೇಲ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವಂತೆ ಸರ್ಕಾರ ಖಚಿತಪಡಿಸುತ್ತದೆ. ರೆಸ್ಟೋರೆಂಟ್‌ಗಳಲ್ಲಿ ನೀಡಲಾಗುವ ಆಹಾರವು ಉತ್ತಮ ಗುಣಮಟ್ಟದ್ದಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರವು ರಾಜ್ಯಾದ್ಯಂತ ತಪಾಸಣೆ ನಡೆಸುತ್ತದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಬಿಜೆಪಿ ವಿಶ್ವ ದಾಖಲೆ ಮಾಡುತ್ತಿದೆ: ಕೇಜ್ರಿವಾಲ್‌ ಟೀಕೆ

    ಮೂಲಗಳ ಪ್ರಕಾರ ವಿದ್ಯಾರ್ಥಿಗಳು ಟ್ಯೂಷನ್‌ಗೆ ಹೋಗಿದ್ದಾಗ ಉಪಾಹಾರ ಸೇವಿಸಿದ್ದಾರೆ. ಜ್ಯೂಸ್ ಅಂಗಡಿಯು ಟ್ಯೂಷನ್ ಕೇಂದ್ರದ ಪಕ್ಕದಲ್ಲೇ ಇದೆ ಎಂದು ಹೇಳಲಾಗಿದೆ.

  • ಕಾಸರಗೋಡು, ಕನ್ನಡ ಕುರಿತು ವಿಶ್ವಾದ್ಯಂತ ಜಾಗೃತಿ ಮೂಡಿಸಿದ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ

    ಕಾಸರಗೋಡು, ಕನ್ನಡ ಕುರಿತು ವಿಶ್ವಾದ್ಯಂತ ಜಾಗೃತಿ ಮೂಡಿಸಿದ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಕಾಸರಗೋಡು ನಿವಾಸಿಗಳ ಸಂಘಟನೆ ವಿಕಾಸ ಟ್ರಸ್ಟ್ (ರಿ.) ಕಳೆದ ಒಂದು ವರ್ಷದಿಂದ ಕೆಲವೊಂದು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

    ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮತ್ತು ರಾಜ್ಯೋತ್ಸವದ ಅಂಗವಾಗಿ ಕಾಸರಗೋಡು ಮತ್ತು ಕನ್ನಡ ಭಾಷೆಗೆ ಸಂಬಂಧಪಟ್ಟ ವ್ಯಕ್ತಿಗಳ, ಸಂಘ-ಸಂಸ್ಥೆಗಳ, ಪ್ರೇಕ್ಷಣೀಯ ಸ್ಥಳಗಳ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನವನ್ನು 1 ನವೆಂಬರ್ 2021 ರಿಂದ 14 ಜನವರಿ 2022 ರವರೆಗೆ ನಿರಂತರವಾಗಿ 75 ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿದೆ. ವಿಶ್ವದೆಲ್ಲೆಡೆಯ ಜನರನ್ನು ತಲುಪುದ ಉದ್ದೇಶದಿಂದ ತನ್ನ ವೆಬ್ ಸೈಟ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಈ ಅಭಿಯಾನವನ್ನು ನಡೆಸಿದೆ.

    ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ್ ಅವರು 1 ನವೆಂಬರ್ 2021 ರಂದು ಪ್ರಥಮ ದಿನದ ಮಾಹಿತಿ ಪತ್ರ ಬಿಡುಗಡೆಗೊಳಿಸುವ ಮೂಲಕ ಈ ಮಾಹಿತಿ ಅಭಿಯಾನವನ್ನು ಉದ್ಘಾಟಿಸಿದರು. ನಂತರದ ದಿನಗಳಲ್ಲಿ ಸಚಿವರುಗಳಾದ ಬಿ.ಸಿ. ನಾಗೇಶ್, ಹಾಲಪ್ಪ ಆಚಾರ್, ಶಶಿಕಲಾ ಜೊಲ್ಲೆ, ಗಣ್ಯರಾದ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು, ಸಿ.ಟಿ. ರವಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಮುಂತಾದವರು ವಿವಿಧ ದಿನಗಳ ಮಾಹಿತಿ ಪತ್ರ ಬಿಡುಗಡೆಗೊಳಿಸಿ ಕಾಸರಗೋಡು ಮತ್ತು ಕನ್ನಡ ಸಂಸ್ಕೃತಿ ಕುರಿತು ವಿವರಿಸುವ ಈ ಅಭಿಯಾನವನ್ನು ಶ್ಲಾಘಿಸಿದ್ದಾರೆ.

    ದಿನಗಳೆದಂತೆ ಈ ಅಭಿಯಾನವು ಕಾಸರಗೋಡಿನ ಕನ್ನಡಿಗರಲ್ಲಿ ವ್ಯಾಪಕ ಸ್ವೀಕಾರರ್ಹತೆ ಪಡೆಯಿತು ಮತ್ತು ಜನರು ತಮ್ಮ ಸಾಮಾಜಿಕ ಜಾಲತಾಣ, ವಾಟ್ಸಾಪ್ ಮೂಲಕ ದಿನವೂ ಮಾಹಿತಿ ಪತ್ರಗಳನ್ನು ಹಂಚಿಕೊಂಡು ಅಭಿಮಾನಪಟ್ಟರು. ಒಟ್ಟಿನಲ್ಲಿ ನಿರಂತರ 75 ದಿನಗಳ ಕಾಲ ನಡೆದ ಅಭಿಯಾನ ಕಾಸರಗೋಡಿನ ಕನ್ನಡಿಗರಲ್ಲಿ ಆತ್ಮಾಭಿಮಾನ ಹೆಚ್ಚಿಸುವಲ್ಲಿ ಹಾಗೂ ಕಾಸರಗೋಡು ಮತ್ತು ಕನ್ನಡ ಭಾಷೆಯ ಆಳವಾದ ಸಂಬಂಧ ಕುರಿತು ವಿಶ್ವದೆಲ್ಲೆಡೆಯ ಕನ್ನಡಿಗರ ಗಮನ ಸೆಳೆಯಲು ಯಶಸ್ವಿಯಾಯಿತು. ಇದನ್ನೂ ಓದಿ: ಈ ಬಾರಿಯ ಗಣರಾಜ್ಯೋತ್ಸವ ಹೇಗಿರುತ್ತೆ? – ಇಲ್ಲಿದೆ ಪೂರ್ಣ ವಿವರ

    ಅಭಿಯಾನದ ಸಮಾರೋಪ ದಿನ ಕ್ಲಬ್ ಹೌಸ್ ವೇದಿಕೆಯಲ್ಲಿ ನಡೆದ ಕಾಸರಗೋಡು ಕನ್ನಡಿಗರ ಕಥೆ-ವ್ಯಥೆ ಕಾರ್ಯಕ್ರಮ ಕಾಸರಗೋಡು ಕನ್ನಡಿಗರ ಹಿರಿಮೆ ಮತ್ತು ಸಮಸ್ಯೆಗಳನ್ನು ವಿಶ್ವದೆದುರು ತೆರೆದಿಡುವಲ್ಲಿ ಯಶಸ್ವಿಯಾಯಿತು. ಕಾರ್ಯರ್ಕಮದಲ್ಲಿ ಭಾಗವಹಿಸಿದ್ದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಕಾಸರಗೋಡಿಗೆ ಹಿರಿಯ ಪತ್ರಕರ್ತರನ್ನು ಒಳಗೊಂಡ ನಿಯೋಗವನ್ನು ಕರೆದೊಕೊಂಡು ಹೋಗಿ ಅಲ್ಲಿಯ ವಾಸ್ತವಾಂಶಗಳನ್ನು ಅಧ್ಯಯನ ಮಾಡುವ ನಿರ್ಧಾರ ಪ್ರಕಟಿಸಿದರು. ಒಟ್ಟಿನಲ್ಲಿ ಮಾಹಿತಿ ಅಭಿಯಾನ ಮತ್ತು ಕ್ಲಬ್ ಹೌಸ್ ಕಾರ್ಯಕ್ರಮದಿಂದಾಗಿ ಕಾಸರಗೋಡು ಕನ್ನಡಿಗರಲ್ಲಿ ಹೊಸ ನಿರೀಕ್ಷೆ ಚಿಗುರೊಡೆದಿದೆ. ಇದನ್ನೂ ಓದಿ: ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ ಪೋಸ್ಟರ್‌ ಬಿಡುಗಡೆ

    ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನಕ್ಕೆ ಬಹಳಷ್ಟು ಜನ ಸ್ಪಂದಿಸಿದ್ದಾರೆ. ಹಲವು ವಿದ್ವಾಂಸರು ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದ್ದಾರೆ. ಅಭಿಯಾನ ಫಲಪ್ರದವಾಗಿದ್ದು ಇದರಲ್ಲಿ ಯಾವುದೇ ಸಂಶಯವಿಲ್ಲ.
    -ಎಸ್.ವಿ.ಭಟ್, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ

    ಅಭಿಯಾನ ಜಾಗೃತಿ ಮೂಡಿಸುವಲ್ಲಿ ತುಂಬಾ ಯಶಸ್ವಿಯಾಗಿದೆ. ಕಾಸರಗೋಡಿನ ಅಸ್ವಿತ್ವ, ಪರಂಪರೆ, ವಿವಿಧ ಕ್ಷೇತ್ರಗಳಿಗೆ ಕೊಡುಗೆ ಈ ಎಲ್ಲ ವಿಷಯದ ಬಗ್ಗೆ ಅತಿಥಿಗಳು ಬಹಳ ಚೆನ್ನಾಗಿ ಮಾತನಾಡಿದ್ದಾರೆ. ಜೀವಂತವಾಗಿರುವ ಕನ್ನಡ ಸಂಸ್ಕೃತಿ ಗಟ್ಟಿಯಾಗಿ ಬಲಪಡಿಸಬೇಕಿದ್ದು, ಮುಂದೆ ವಿದ್ಯಾರ್ಥಿಗಳು, ಯುವ ಜನಾಂಗಕ್ಕೆ ಅರಿವು ಮೂಡಿಸಬೇಕು ಎನ್ನುವಷ್ಟರ ಮಟ್ಟಿಗೆ ಅಭಿಯಾನ ಉತ್ತಮ ಕೆಲಸ ಮಾಡಿದೆ.
    – ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಹಿರಿಯ ಸಾಹಿತಿಗಳು

    ಕಾಸರಗೋಡಿನ ಸಮಸ್ಯೆ ಉಂಟಾ ಎಂದು ಹಲವು ಮಂದಿ ಕೇಳುತ್ತಾರೆ. ಮಹಾಜನ್‌ ಆಯೋಗದ ವರದಿ ಸಂಸತ್ತಿಗೆ 1967ರಲ್ಲಿ ಸಲ್ಲಿಕೆಯಾಗಿದೆ. ಈ ವರದಿ ಇವತ್ತಿಗೂ ಸಂಸತ್ತಿನಲ್ಲಿ ಮಲಗಿದೆ. ಎಲ್ಲ ಪಕ್ಷಗಳ ಸದಸ್ಯರು ಸೇರಿದಂತೆ ಇವತ್ತಿನವರೆಗೂ ಸಂಸತ್‌ ಸದಸ್ಯರು ಇದರ ಬಗ್ಗೆ ಯಾಕೆ ಮಾತನಾಡುವುದಿಲ್ಲ? ಇಲ್ಲಿ ಮೂಲತ: ಸಮಸ್ಯೆ ಇರುವುದು ಸಂಸ್ಕೃತಿಯಲ್ಲಿ. ಇಲ್ಲಿ ತುಳು, ಹವ್ಯಕ, ಕೊಂಕಣಿ ಮಾತನಾಡುವವರು ಎಲ್ಲರೂ ಕನ್ನಡದ ಒಳಗಡೆ ಬಂದಿದ್ದಾರೆ. ಈ ಸಮಸ್ಯೆಯನ್ನು ದೊಡ್ಡ ಮಟ್ಟದಲ್ಲಿ ಎಲ್ಲರಿಗೂ ತಿಳಿಸಲು ಪೂರ್ವಗ್ರಹ ಇಲ್ಲದೇ ರವಿನಾರಾಯಣ ಅವರು ಈ ಕೆಲಸವನ್ನು ಮಾಡಿದ್ದಾರೆ. ಇದೊಂದು ಅಪೂರ್ವವಾದ ಪರಿಶ್ರಮ. ಇದು ಮೊದಲೇ ಆಗಬೇಕಿತ್ತು.
    – ಡಾ. ರಮಾನಂದ ಬನಾರಿ, ಹಿರಿಯ ಸಾಹಿತಿಗಳು

    ಗಡಿಯಲ್ಲಿರುವ ಕಾರಣ ನಮ್ಮವರ ಹಲವು ಕೆಲಸಗಳು ದಕ್ಷಿಣ ಕನ್ನಡದವರ ಜೊತೆ ನಡೆಯುತ್ತದೆ. ಆದರೆ ಕೊರೊನಾ ಸಮಯದಲ್ಲಿ ಗಡಿ ಜಿಲ್ಲೆಯ ಜನರು ಎಷ್ಟು ಕಷ್ಟಪಟ್ಟಿದ್ದಾರೆ ಎನ್ನುವುದು ಉಳಿದವರಿಗೂ ಗೊತ್ತಾಗಿದೆ. ಈ ವಿಚಾರ ಅಲ್ಲದೇ ಹಲವು ವಿಷಯದ ಬಗ್ಗೆ ಉಳಿದ ಜನರಿಗೂ ನಮ್ಮ ಸಮಸ್ಯೆಗಳ ಪರಿಚಯವಾಗಿದೆ. ಡಿಜಿಟಲ್‌ ಮತ್ತು ಸಾಮಾಜಿಕ ಜಾಲತಾಣದ ಮೂಲಕ ವಿಕಾಸ ಟ್ರಸ್ಟ್‌ ಅಭಿಯಾನ ಬಹಳ ಉತ್ತಮ ಕೆಲಸ ಮಾಡಿದೆ. ಈ ಅಭಿಯಾನಕ್ಕೆ ಹಲವು ಕಡೆಯಿಂದ ಸಕಾರತ್ಮಕ ಸ್ಪಂದನೆ ಸಿಕ್ಕಿದೆ.
    – ಸುರೇಶ ಕೃಷ್ಣ, ಮುಂಬೈನಲ್ಲಿ ವೃತ್ತಿಯಲ್ಲಿರುವ ಏತಡ್ಕ ನಿವಾಸಿ

    ಬೆಂಗಳೂರಿನಂತೆ ಹಲವು ನಗರಗಳಲ್ಲಿ ಉದ್ಯೋಗಾರ್ಥ ನೆಲೆಸಿರುವ ಕಾಸರಗೋಡಿನ ಜನರು ತಮ್ಮ ಹುಟ್ಟೂರಿಗೆ ಏನಾದರೂ ಕೊಡುಗೆ ನೀಡಬೇಕು, ಅಲ್ಲಿಯ ಅಭಿವೃದ್ಧಿಗೆ ದನಿಯಾಗಬೇಕು ಎಂಬ ಉದ್ದೇಶದಿಂದ ವಿಕಾಸ ಟ್ರಸ್ಟ್ ಆರಂಭಿಸಲಾಗಿದೆ. ಈ ಮಾಹಿತಿ ಅಭಿಯಾನದ ಮೂಲಕ ಕಾಸರಗೋಡಿನ ಸಂಸ್ಕೃತಿ ಮತ್ತು ಕೊಡುಗೆಯನ್ನು ವಿಶ್ವಕ್ಕೆ ಪರಿಚಯಿಸುವ ಪ್ರಯತ್ನ ಮಾಡಿದ್ದೇವೆ. ಜನರಿಂದ ಲಭಿಸಿದ ಉತ್ತಮ ಪ್ರತಿಕ್ರಿಯೆ, ಇನ್ನಷ್ಟು ಉತ್ತಮ ಕೆಲಸ ಮಾಡಲು ನಮ್ಮ ಬಳಗಕ್ಕೆ ಉತ್ತೇಜನ ನೀಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವಕರನ್ನು ಸೇರಿಸಿ ಇನ್ನೂ ಹೆಚ್ಚಿನ ಕೆಲಸ ಸಮಾಜಮುಖಿ ಕಾರ್ಯಗಳನ್ನು ಮಾಡುವ ಆಲೋಚನೆ ಇದೆ.
    – ರವಿನಾರಾಯಣ ಗುಣಾಜೆ, ಅಧ್ಯಕ್ಷ, ವಿಕಾಸ ಟ್ರಸ್ಟ್

  • ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ ಪೋಸ್ಟರ್‌ ಬಿಡುಗಡೆ

    ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ ಪೋಸ್ಟರ್‌ ಬಿಡುಗಡೆ

    ಬೆಂಗಳೂರು: ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮತ್ತು ರಾಜ್ಯೋತ್ಸವದ ಅಂಗವಾಗಿ ವಿಕಾಸ ಟ್ರಸ್ಟ್ “ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ”ವನ್ನು ಆರಂಭಿಸಿದೆ.

    ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಪ್ರಥಮ ದಿನದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಅಭಿಯಾನವನ್ನು ಉದ್ಘಾಟಿಸಿದರು. ಇದನ್ನೂ ಓದಿ: ಅನಂತಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಪ್ರವಚನದ ವೇಳೆ ಮೊಸಳೆ ಪ್ರತ್ಯಕ್ಷ

    ಈ ಸಂದರ್ಭದಲ್ಲಿ ವಿಕಾಸ ಟ್ರಸ್ಟ್ ಅಧ್ಯಕ್ಷರಾದ ರವಿನಾರಾಯಣ ಗುಣಾಜೆ, ಸದಸ್ಯರಾದ ಸುಖೇಶ್ ರೈ ಮತ್ತು ಧನ್ಯಶ್ರೀ ಮುಂತಾದವರು ಉಪಸ್ಥಿತರಿದ್ದರು. ಈ ಡಿಜಿಟಲ್ ಅಭಿಯಾನವು ನವೆಂಬರ್ 1 ರಿಂದ ಜನವರಿ 14 ರವರೆಗೆ 75 ದಿನಗಳ ಕಾಲ ನಡೆಯಲಿದೆ. ಇದನ್ನೂ ಓದಿ: ಪಾಕ್ ಪರ ಘೋಷಣೆ- ದೇಶದ್ರೋಹ ಪ್ರಕರಣ ದಾಖಲಿಸಿ ಯುವಕನ ಬಂಧನ

    ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗಿಲ್ಲ ಎಂದು ವಿಶ್ವಾಸದಿಂದ ಹೇಳಬಲ್ಲೆ. ಈ ಬಾರಿ ಪ್ರಶಸ್ತಿ ಸಾಧಕರನ್ನು ಹುಡುಕಿಕೊಂಡು ಬಂದಿದೆ. ಸಣ್ಣಪುಟ್ಟ ನಿಯಮಾವಳಿಗಳ ಬದಲಾವಣೆಯಾಗಬೇಕು ಅನಿಸುತ್ತಿದೆ. ಮುಂದಿನ ವರ್ಷ ರಾಜ್ಯಕ್ಕೆ ಏಕರೂಪ ನಿಯಮ ಜಾರಿ ಮಾಡತ್ತೇವೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

  • ಕನ್ನಡ ಹೆಸರಿನ ಗ್ರಾಮಗಳಿಗೆ ಮರುನಾಮಕರಣ ಮಾಡ್ಬೇಡಿ- ಕೇರಳ ಸಿಎಂಗೆ ಹೆಚ್‍ಡಿಕೆ ಪತ್ರ

    ಕನ್ನಡ ಹೆಸರಿನ ಗ್ರಾಮಗಳಿಗೆ ಮರುನಾಮಕರಣ ಮಾಡ್ಬೇಡಿ- ಕೇರಳ ಸಿಎಂಗೆ ಹೆಚ್‍ಡಿಕೆ ಪತ್ರ

    ಬೆಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯ ಗ್ರಾಮಗಳಿಗೆ ಕನ್ನಡ ಹೆಸರು ತೆಗೆದು ಮಲೆಯಾಳಂ ಹೆಸರು ಮರು ನಾಮಕರಣ ಮಾಡಿರುವ ಕೇರಳ ಸರ್ಕಾರದ ನಿರ್ಧಾರವನ್ನ ಹಿಂಪಡೆಯುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರನ್ನ ಬದಲಿಸದಂತೆ ಮನವಿ ಮಾಡಿದ್ದಾರೆ.

    ಕನ್ನಡ ಪರಿಮಳವನ್ನು ಹೊಂದಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಕೆಲವು ಗ್ರಾಮಗಳನ್ನು ಮಲಯಾಳಂ ಹೆಸರು ಮರುನಾಮಕರಣ ಮಾಡಲು ಕೇರಳ ಸರ್ಕಾರದ ನಿರ್ಧರಿಸಿರುವ ಬಗ್ಗೆ ಮಾಧ್ಯಮಗಳಿಂದ ತಿಳಿಯಿತು. ಇದು ಸರಿಯಿದ್ದರೂ, ಭಾಷಾ ಸಾಮರಸ್ಯದ ಹೆಸರಿನಲ್ಲಿ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ನಾನು ವಿನಂತಿಸುತ್ತೇನೆ. ಕರ್ನಾಟಕದೊಂದಿಗೆ ಈ ಭಾಗದ ಜನರಿಗೆ ದಶಕಗಳಿಂದ ಉತ್ತಮ ಭಾಂದವ್ಯವಿದೆ. ಮತ್ತು ಈ ಪ್ರದೇಶದ ಜನರು ಯಾವಾಗಲೂ ಪರಸ್ಪರರ ಭಾಷಾ ಪರಂಪರೆಗೆ ಅನುಗುಣವಾಗಿರುತ್ತಾರೆ. ಅದು ಸಾಂಸ್ಕೃತಿಕ ಸಹಬಾಳ್ವೆಯಾಗಿದೆ.

    ಈ ಸಂಪ್ರದಾಯವನ್ನು ಮುಂದುವರಿಸ ಬೇಕಾಗಿದೆ. ಹೆಸರು ಬದಲಾವಣೆಯು ಅರ್ಥದ ಮೇಲೆ ಪರಿಣಾಮ ಬೀರುವುದಿಲ್ಲ. ಆದರೆ ಹಳ್ಳಿಯ ಹೆಸರುಗಳು ಮೂಲ ಕನ್ನಡ ಪರಿಮಳವನ್ನು ಉಳಿಸಿಕೊಳ್ಳಲು ಅನುವು ಮಾಡಿಕೊಡುವುದು ಮೆಚ್ಚುಗೆಗೆ ಪಾತ್ರವಾಗಲಿದೆ ಎಂದು ಪತ್ರದ ಮೂಲಕ ಹೆಸರು ಮರುನಾಮಕರಣ ಮಾಡದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅಡುಗೆ ಮಾಡುವ ವರ ಬೇಕಾಗಿದ್ದಾನೆ- ಜಾಹೀರಾತು ವೈರಲ್