Tag: kasargod

  • ಮಧೂರು ದೇಗುಲದಲ್ಲಿ ಅನುಷ್ಕಾ ಶೆಟ್ಟಿಯಿಂದ ಅಷ್ಟ ದ್ರವ್ಯ ಮಹಾಗಣಪತಿ ಯಾಗ

    ಮಧೂರು ದೇಗುಲದಲ್ಲಿ ಅನುಷ್ಕಾ ಶೆಟ್ಟಿಯಿಂದ ಅಷ್ಟ ದ್ರವ್ಯ ಮಹಾಗಣಪತಿ ಯಾಗ

    ನ್ನಡತಿ ಅನುಷ್ಕಾ ಶೆಟ್ಟಿ (Anushka Shetty) ಅವರು ಕಾಸರಗೋಡಿನ ಮಧೂರು ಮದನಂತೇಶ್ವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅಷ್ಟ ದ್ರವ್ಯ ಮಹಾಗಣಪತಿ ನೆರವೇರಿಸಿದ್ದಾರೆ. ಇದನ್ನೂ ಓದಿ:ಜಗತ್ತಿನೆಲ್ಲೆಡೆ ನಿನಗೆ ಶತ್ರುಗಳಿದ್ದಾರೆ, 5 ತಿಂಗಳಲ್ಲಿ ಪರಿಹಾರ: ರಿಷಬ್‌ಗೆ ಪಂಜುರ್ಲಿ ಅಭಯ

    ಕಾಸರಗೋಡಿನ ಮಧೂರು ಮದನಂತೇಶ್ವರ ಶ್ರೀ ಸಿದ್ಧಿವಿನಾಯಕ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಈ ಹಿನ್ನೆಲೆ ಸಿದ್ಧಿವಿನಾಯಕನಿಗೆ ಅನುಷ್ಕಾ ಶೆಟ್ಟಿ ಅವರು ಅಷ್ಟ ದ್ರವ್ಯ ಮಹಾಗಣಪತಿ ಯಾಗ ನೆರವೇರಿಸಿದ್ದಾರೆ. ಕಾರಣಾಂತರಗಳಿಂದ ಪೂಜೆಗೆ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆ ಅನುಷ್ಕಾ ತಮ್ಮ ಹೆಸರಿನಲ್ಲಿ 128 ತೆಂಗಿನಕಾಯಿ ಅಷ್ಟ ದ್ರವ್ಯ ಮಹಾಗಣಪತಿ ಯಾಗ ನೆರವೇರಿಸಿದ್ದಾರೆ. ಇದನ್ನೂ ಓದಿ:ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಗಿಣಿ ದ್ವಿವೇದಿ

    ಅಂದಹಾಗೆ, ಅನುಷ್ಕಾ ನಟನೆಯ ಘಾಟಿ ಮತ್ತು ಮಲಯಾಳಂ ಸಿನಿಮಾವೊಂದರಲ್ಲಿ ಬ್ಯುಸಿಯಾಗಿದ್ದಾರೆ.

  • ಕಾಸರಗೋಡು | ನೀಲೇಶ್ವರ ದೇವಸ್ಥಾನ ಉತ್ಸವದ ವೇಳೆ ಪಟಾಕಿ ದುರಂತ – 150ಕ್ಕೂ ಹೆಚ್ಚು ಮಂದಿ ಗಾಯ, 8 ಮಂದಿ ಗಂಭೀರ

    ಕಾಸರಗೋಡು | ನೀಲೇಶ್ವರ ದೇವಸ್ಥಾನ ಉತ್ಸವದ ವೇಳೆ ಪಟಾಕಿ ದುರಂತ – 150ಕ್ಕೂ ಹೆಚ್ಚು ಮಂದಿ ಗಾಯ, 8 ಮಂದಿ ಗಂಭೀರ

    ಕಾಸರಗೋಡು: ನೀಲೇಶ್ವರಂ ಬಳಿ ದೇವಸ್ಥಾನದ (Neeleswaram Temple) ಉತ್ಸವದ ವೇಳೆ ಪಟಾಕಿ (Fireworks) ದುರಂತ ಸಂಭವಿಸಿದ್ದು 150 ಮಂದಿ ಗಾಯಗೊಂಡಿದ್ದು 8 ಮಂದಿಯ ಸ್ಥಿತಿ ಗಂಭೀರವಾಗಿದೆ.

    ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ಮಧ್ಯರಾತ್ರಿ 12:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಇದನ್ನೂ ಓದಿ: ವಿಜಯಪುರ ಆಯ್ತು ಈಗ ಯಾದಗಿರಿಯ 1440 ರೈತರಿಗೆ ವಕ್ಫ್‌ ಬಿಗ್ ಶಾಕ್!

    ದೇವಸ್ಥಾನದ ಅಧಿಕಾರಿಗಳು ಪಟಾಕಿ ಸಿಡಿಸಲು ಅನುಮತಿ ಪಡೆದಿದರಲಿಲ್ಲ. ಪೊಲೀಸರು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ತನಿಖೆ ಈಗಾಗಲೇ ಆರಂಭವಾಗಿದೆ ಎಂದು ಕಾಸರಗೋಡು ಜಿಲ್ಲಾಧಿಕಾರಿ ಕೆ ಇಂಬಶೇಖರ್‌ ಹೇಳಿದ್ದಾರೆ.

    ದೇವಾಲಯದ ಗೋಡೆಗೆ ಹೊಂದಿಕೊಂಡಂತೆ ನಿರ್ಮಿಸಲಾದ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಈ ದುರಂತ ಸಂಭವಿಸಿದೆ. ಇದನ್ನೂ ಓದಿ: ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಅಗಲಿದ ಫ್ಯಾಂಟಮ್‌ – ಸೇನೆಯಿಂದ ಕಣ್ಣೀರ ವಿದಾಯ

    ಪಟಾಕಿ ಸಿಡಿದು ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಕಟ್ಟಡದ ಮೇಲೆ ಬಿದ್ದಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ. ತೆಯ್ಯಂ ಪ್ರದರ್ಶನವನ್ನು ವೀಕ್ಷಿಸಲು ಬಂದಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ.

     

  • ಪಬ್ಲಿಕ್ ಟಿವಿಯ ಬದ್ರುದ್ದೀನ್‌ಗೆ ಒಲಿದ ಕಾಸರಗೋಡು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ

    ಪಬ್ಲಿಕ್ ಟಿವಿಯ ಬದ್ರುದ್ದೀನ್‌ಗೆ ಒಲಿದ ಕಾಸರಗೋಡು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ

    ಬೆಂಗಳೂರು: ಕಾಸರಗೋಡು (Kasargod) ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ (Endowment) ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಕೇರಳದ (Kerala) ಕೊಚ್ಚಿಯಲ್ಲಿ ಭಾನುವಾರ ನಡೆಯಿತು.

    ಈ ವೇಳೆ ಪಬ್ಲಿಕ್ ಟಿವಿಯ (Public TV) ಹಿರಿಯ ಪತ್ರಕರ್ತ ಬದ್ರುದ್ದೀನ್ ಮಾಣಿ (Badruddin Mani) ಅವರಿಗೆ ಕೆ.ವಿ.ಆರ್.ಠ್ಯಾಗೋರ್ ಸ್ಮರಣಾರ್ಥ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಹಾಗೂ ಡಾ.ವೆಂಕಟೇಶ್ ತುಪ್ಪಿಲ್ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಪ್ರಧಾನಿ ಮೋದಿ ನಾಲಾಯಕ್‌: ಪ್ರಿಯಾಂಕ್‌ ಖರ್ಗೆ ಮೂದಲಿಕೆ

    ಬದ್ರುದ್ದೀನ್ ಮಾಣಿ ಅವರು 2014ರಿಂದ ಪಬ್ಲಿಕ್ ಟಿವಿಯಲ್ಲಿ ರಾಜಕೀಯ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದು, ಮಾಧ್ಯಮದಲ್ಲಿ (Media) ಸರಿ ಸುಮಾರು 3 ದಶಕಗಳ ಕಾಲ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ ನಟಿ ರಮ್ಯಾ

    ಮಾರ್ಚ್ 21ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆಯವರು ಪ್ರಶಸ್ತಿಗಳನ್ನು ಘೋಷಿಸಿದ್ದರು. ದತ್ತಿನಿಧಿ ಪ್ರಶಸ್ತಿಗೆ 12 ಮಂದಿ ಪತ್ರಕರ್ತರು ಭಾಜನರಾಗಿದ್ದರು. ಈ ಕಾರ್ಯಕ್ರಮವು ಕೇರಳದ ಕೊಚ್ಚಿಯಲ್ಲಿ ನಡೆದಿದ್ದು, ತಲಾ 10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

  • ಕಾಬೂಲ್ ಗುರುದ್ವಾರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಕಾಸರಗೋಡಿನ ಸೂಸೈಡ್ ಬಾಂಬರ್

    ಕಾಬೂಲ್ ಗುರುದ್ವಾರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಕಾಸರಗೋಡಿನ ಸೂಸೈಡ್ ಬಾಂಬರ್

    – ಕಾಸರಗೋಡಿನಲ್ಲಿ ಅಂಗಡಿ ಇಟ್ಟುಕೊಂಡಿದ್ದ ಉಗ್ರ

    ನವದೆಹಲಿ: ಇತ್ತೀಚೆಗೆ ಕಾಬೂಲ್‍ನಲ್ಲಿ ನಡೆದ ಸಿಖ್‍ರ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಭಯೋತ್ಪಾದಕರಲ್ಲಿ ಓರ್ವ ಕೇರಳದ ಕಾಸರಗೋಡಿನ ಯುವಕನಿದ್ದ ಎಂದು ವರದಿಯಾಗಿದೆ.

    ಮಾರ್ಚ್ 25ರಂದು ಕಾಬೂಲ್‍ನ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದ ಸಿಖ್‍ರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ಮಾಡಲಾಗಿತ್ತು. ಈ ದಾಳಿಯಲ್ಲಿ ನಾಲ್ಕು ಜನ ಸೂಸೈಡ್ ಬಾಂಬರ್ ಗಳು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿತ್ತು. ಈಗ ಇದರಲ್ಲಿ ಓರ್ವ ಭಾರತದ ಮೂಲದವನಾಗಿದ್ದು, ಕೇರಳದಿಂದ 4 ವರ್ಷದ ಹಿಂದೆ 14 ಜನರೊಂದಿಗೆ ಕಾಣೆಯಾಗಿದ್ದನು.

    ಕಳೆದ ಬುಧವಾರ ಕಾಬೂಲ್‍ನ ಸಿಖ್ ದೇಗುಲದ ಮೇಲೆ ದಾಳಿ ನಡೆಸಿದ ನಾಲ್ಕು ಸದಸ್ಯರ ತಂಡದ ಭಾಗವಾಗಿದ್ದ ಆತ್ಮಾಹುತಿ ದಾಳಿಕೋರ ಅಬು ಖಾಲಿದ್ ಅಲ್-ಹಿಂದಿ ಫೋಟೋವನ್ನು ಇಸ್ಲಾಮಿಕ್ ಸ್ಟೇಟ್ ಶುಕ್ರವಾರ ಪ್ರಕಟಿಸಿದೆ. ಉನ್ನತ ಮೂಲಗಳ ಪ್ರಕಾರ ಈತ ಕೇರಳದ ಕಾಸರಗೋಡಿನ ಪಾಡ್ನೆ ಪ್ರದೇಶದಲ್ಲಿ ಅಂಗಡಿ ಇಟ್ಟುಕೊಂಡಿದ್ದ ಮೊಹಮ್ಮದ್ ಸಾಜಿದ್ ಕುಥಿರುಮಾಲ್ ಎಂದು ತಿಳಿದು ಬಂದಿದೆ. 2016ರ ಎನ್‍ಐಎ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿತ್ತು ಮತ್ತು ಆತನ ವಿರುದ್ಧ ಇಂಟರ್‍ಪೋಲ್ ರೆಡ್ ನೋಟಿಸ್ ಜಾರಿಗೊಳಿಸಿತ್ತು.

    2016ರ ಜುಲೈನಲ್ಲಿ ಕೇರಳದ ಕಾಸರಗೋಡಿನ ಪೋಷಕರು, 30 ವರ್ಷದ ತಮ್ಮ ಮಗ ಅಬ್ದುಲ್ ರಶೀದ್ ಮತ್ತು ಆತನ ಪತ್ನಿ ಆಯಿಷಾ (ಸೋನಿಯಾ ಸೆಬಾಸ್ಟಿಯನ್) ಮತ್ತು ಮಗುವಿನೊಂದಿಗೆ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದರು. ಇವರ ಜೊತೆ 14 ಜನರೊಂದಿಗೆ ಮೊಹಮ್ಮದ್ ಸಾಜಿದ್ ಕೂಡ ಕಾಣೆಯಾಗಿದ್ದಾನೆ ಎಂದು ಅದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ವೇಳೆ ಕೇರಳದ ಸುತ್ತಲಿನ ಪ್ರದೇಶದ 14 ಯುವಕರು ಕಾಣೆಯಾಗಿದ್ದರು.

    ಇದಾದ ನಂತರ ಮೊಹಮ್ಮದ್ ಸಾಜಿದ್, ಅಬ್ದುಲ್ ರಶೀದ್ ಎಂಬಾತನ ಸಹಾಯ ಪಡೆದು, ನಿಷೇಧಿತ ಇಸ್ಲಾಮಿಸ್ಟ್ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ(ಐಸಿಸ್)ಗೆ ತನ್ನ 14 ಜನ ಸ್ನೇಹಿತರೊಂದಿಗೆ ಸೇರಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು. ತಂದೆ ಮತ್ತು ಸಹೋದರನ ಜೊತೆ ಮಲೇಷ್ಯಾಗೆ ಹೋಗಿದ್ದ ಈತ ಅಲ್ಲಿ ಉಗ್ರರ ಜೊತೆ ನಂಟು ಹೊಂದಿದ್ದ ಎಂದು ಹೇಳಲಾಗಿತ್ತು.

    ಬಿಸಿನೆಸ್ ವಿಚಾರವಾಗಿ ಮಲೇಷ್ಯಾಗೆ ತಂದೆ ಮತ್ತು ಸಹೋದರನ ಜೊತೆ ಹೋಗಿದ್ದ ಸಾಜಿದ್ ಮತ್ತೆ ಅವರ ಜೊತೆ ವಾಪಸ್ ಬಂದಿರಲಿಲ್ಲ. ಆತ ಅಲ್ಲಿಂದ ಸೌದಿ ಅರೆಬೀಯಾಗೆ ಹೋಗಿದ್ದ. ಸೌದಿಯಿಂದ ದುಬೈಗೆ ಹೋಗಿ ಅಲ್ಲಿ ಪಾಕಿಸ್ತಾನದ ಐಸಿಸ್ ಏಜೆಂಟ್ ಜೊತೆ ಸಂಪರ್ಕ ಹೊಂದಿದ್ದ. ನಂತರ ಭಾರತಕ್ಕೆ ಬಂದಿದ್ದ ಆತ ತನ್ನೊಂದಿಗೆ 14 ಜನ ಕರೆದುಕೊಂಡು ಅಬ್ದುಲ್ ರಶೀದ್ ಸಹಾಯ ಪಡೆದು ಅಪ್ಘಾನಿಸ್ತಾಕ್ಕೆ ಹೋಗಿ ಉಗ್ರ ಸಂಘಟನೆ ಸೇರಿಕೊಂಡಿದ್ದ.

    ಭಾರತದಿಂದ ಪರಾರಿಯಾದ ನಂತರ ಸುಮಾರು 6 ತಿಂಗಳವರೆಗೆ ಸಾಜಿದ್ ಅವರು ತಾಯಿ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದ. ಆದರೆ ಕಳೆದ ಕೆಲ ತಿಂಗಳಿನಿಂದ ಸಾಜಿದ್ ತನ್ನ ತಾಯಿ ಜೊತೆ ಸಂಪರ್ಕ ಕಳೆದುಕೊಂಡಿದ್ದ. ಇದಾದ ಕೆಲವೇ ದಿನಗಳಲ್ಲಿ ಸಾಜಿದ್ ಕಾಬೂಲ್‍ನಲ್ಲಿ ನಡೆದ ಉಗ್ರ ದಾಳಿಯಲ್ಲಿ ಪ್ರಮುಖ ಸೂಸೈಡ್ ಬಾಂಬರ್ ಆಗಿದ್ದ ಎಂದು ಸಾಜಿದ್ ಅವನ ಫೋಟೋ ಐಸಿಸ್ ಬಿಡುಗಡೆ ಮಾಡಿದೆ.

    ಕಳೆದ ಮಾರ್ಚ್ 25 ರಂದು ಕಾಬೂಲ್‍ನ ಶೋರ್ ಬಜಾರ್ ಪ್ರದೇಶದಲ್ಲಿನ ಗುರುದ್ವಾರದಲ್ಲಿ 150 ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಆದರ ಭಯೋತ್ಪಾದಕರು ದಾಳಿ ನಡೆದಿತ್ತು. ಈ ದಾಳಿಯಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ದಾಳಿಯ ಸಮಯದಲ್ಲಿ ಗುರುದ್ವಾರಕ್ಕೆ ಭೇಟಿ ನೀಡಿದ ಭಾರತೀಯ ರಾಜತಾಂತ್ರಿಕರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿತ್ತು ಎಂದು ವರದಿಗಳು ತಿಳಿಸಿವೆ.

  • 4 ರನ್‍ಗೆ ಆಲೌಟ್ – ಶೂನ್ಯ ಸುತ್ತಿದ ತಂಡದ 11 ಆಟಗಾರ್ತಿಯರು

    4 ರನ್‍ಗೆ ಆಲೌಟ್ – ಶೂನ್ಯ ಸುತ್ತಿದ ತಂಡದ 11 ಆಟಗಾರ್ತಿಯರು

    ಕೊಚ್ಚಿ: ಅಂತರ ಜಿಲ್ಲಾ ಕ್ರಿಕೆಟ್ ಟೂರ್ನಿಯಲ್ಲಿ ಕಾಸರಗೋಡು ಮಹಿಳಾ ಅಂಡರ್ 19 ತಂಡ ಕೇವಲ 4 ರನ್ ಗಳಿಗೆ ಆಲೌಟ್ ಆಗಿದೆ. ವಿಶೇಷವೆಂದರೆ ಎಲ್ಲಾ ಆಟಗಾರ್ತಿಯರು ಪಂದ್ಯದಲ್ಲಿ ಶೂನ್ಯ ರನ್ ಹೊಡೆದಿದ್ದಾರೆ.

    ಕೇರಳದ ಮಲಪ್ಪುರಂ ಜಿಲ್ಲೆಯ ಪೆರಿಂದಲ್‍ಮಣ್ಣ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವಯನಾಡು ಹಾಗೂ ಕಾಸರಗೋಡು ಅಂಡರ್ ತಂಡಗಳು ಮುಖಾಮುಖಿ ಆಗಿದ್ದವು. ಆದರೆ ಪಂದ್ಯದಲ್ಲಿ ಕಾಸರಗೋಡು ತಂಡ ಕೆಟ್ಟ ಪ್ರದರ್ಶನವನ್ನು ತೋರಿದ್ದು, ತಂಡದ ಯಾವುದೇ ಆಟಗಾರ್ತಿ ಸಿಂಗಲ್ ಡಿಜಿಟ್ ನಂಬರ್ ರನ್ ಕೂಡ ಗಳಿಸಲು ಸಾಧ್ಯವಾಗಲಿಲ್ಲ.

    ಇನ್ನಿಂಗ್ಸ್ ಅಂತ್ಯದ ವೇಳೆಗೆ ಕಾಸರಗೋಡು ತಂಡದ ಆಟಗಾರ್ತಿಯರ ಸ್ಕೋರ್ ಕಾರ್ಡ್ 0,0,0,0,0,0,0,0,0,0,0 ಕಾಸರಗೋಡು ತಂಡದ ಪರ ಅಂತಿಮ ಆಟಗಾರ್ತಿ ಯಾವುದೇ ರನ್ ಗಳಿಸದೆ ಅಜೇಯರಾಗಿ ಉಳಿದಿದ್ದರು. ವಿಶೇಷವೆಂದರೆ ತಂಡದ ಎಲ್ಲಾ ಆಟಗಾರ್ತಿಯರು ಕೂಡ ಬೌಲ್ಡ್ ಆಗುವ ಮೂಲಕ ಔಟಾಗಿದ್ದರು. ಇತರೇ ರೂಪದಲ್ಲಿ 4 ರನ್ ಬಂದಿದ್ದ ಕಾರಣ ಗೆಲ್ಲಲು 5 ರನ್ ಗುರಿ ಪಡೆದ ವಯನಾಡು ತಂಡ ಒಂದು ಓವರಿನಲ್ಲಿ ಗುರಿ ತಲುಪಿ 10 ವಿಕೆಟ್ ಗಳ ಜಯ ಪಡೆಯಿತು.

    ಕಾಸರಗೋಡು ತಂಡ ನಾಯಕಿ ಎಸ್. ಅಕ್ಷತಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದರು. ತಂಡದ ಪರ ಆರಂಭಿಕರಾಗಿ ಕಣಕ್ಕೆ ಇಳಿದಿದ್ದ ಕೆ.ವೀಕ್ಷತ ಹಾಗೂ ಎಸ್.ಚೈತ್ರ ಮೊದಲ 2 ಓವರಿನಲ್ಲಿ ಒಂದು ರನ್ ಕೂಡ ಗಳಿಸಲು ವಿಫಲರಾಗಿದ್ದರು. ವಯನಾಡು ತಂಡದ ನಾಯಕಿ ನಿತ್ಯಾ 3ನೇ ಓವರಿನಲ್ಲಿ 3 ವಿಕೆಟ್ ಪಡೆಯುವ ಮೂಲಕ ಎದುರಾಳಿ ತಂಡಕ್ಕೆ ಶಾಕ್ ನೀಡಿದ್ದರು.

  • ಇನ್ಫೆಕ್ಷನ್ ಎರಡನೇ ಹಂತ ಪ್ರಾರಂಭ

    ಇನ್ಫೆಕ್ಷನ್ ಎರಡನೇ ಹಂತ ಪ್ರಾರಂಭ

    ಬೆಂಗಳೂರು: ಇನ್ಫೆಕ್ಷನ್ ಚಿತ್ರ ಮೊದಲ ಹಂತದ 15 ದಿವಸಗಳ ಚಿತ್ರೀಕರಣವನ್ನು ಮುಗಿಸಿಕೊಂಡಿದೆ. ಕಾಸರಗೋಡು, ಬೇಕಲಕೋಟೆ ಸುತ್ತ ಮುತ್ತ ಚಿತ್ರೀಕರಣ ನಡೆಸಿಕೊಂಡಿರುವ ಚಿತ್ರ ತಂಡ ಇದೀಗ ಮೈಸೂರು ಹಾಗೂ ಬೆಂಗಳೂರು ಸುತ್ತ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ.

    ಸಮಾಜದಲ್ಲಿ ಆಗುವ ಇನ್ಫೆಕ್ಷನ್ ಅನ್ನು ಹೇಗೆ ಬೇರು ಸಮೇತ ನಿವಾರಿಸಬೇಕೋ ಹಾಗೆ ಈ ಚಿತ್ರದಲ್ಲಿ ನಾಯಕ ಅನೇಕ ಇನ್ಫೆಕ್ಷನ್‍ಗಳನ್ನು ನಿವಾರಣೆ ಮಾಡಲು ಸಜ್ಜಾಗುತ್ತಾನೆ. ಅಮೋಘ್ ಎಂಟರ್ ಪ್ರೈಸಸ್ ಅಡಿಯಲ್ಲಿ ಈ ಹಿಂದೆ ಸಂಚಾರಿ ಹಾಗೂ ಜಟಾಯು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಪ್ರಭಾಕರ್ ಹಾಗೂ ಕಿರಣ್ ಈ ಇನ್ಫೆಕ್ಷನ್ ಚಿತ್ರಕ್ಕೆ ಹಣ ಹೂಡಿದ್ದಾರೆ. ಉಪೇಂದ್ರ, ಸಂತು ಹಾಗೂ ಮುರಳಿ ಮೋಹನ್ ಅವರ ಬಳಿ ಸಹಾಯಕರಾಗಿ ಕೆಲಸ ಮಾಡಿದ ಅಶ್ವಿನಿ ಸ್ವತಂತ್ರವಾಗಿ ನಿರ್ದೇಶಕರಾಗುತ್ತಿದ್ದಾರೆ.

    ಈ ಚಿತ್ರದ ಕಥಾ ನಾಯಕ ರಾಜ್ ಸೂರ್ಯ. ಇವರ ಎರಡು ಚಿತ್ರಗಳು ಸಂಚಾರಿ ಹಾಗೂ ಜಟಾಯು ಪಾತ್ರಕ್ಕೆ ವಿರುದ್ಧವಾದ ಪಾತ್ರವನ್ನು ಈ ಚಿತ್ರದಲ್ಲಿ ನಿರ್ವಹಿಸುತ್ತಿದ್ದಾರೆ. ನಾಯಕಿಯಾಗಿ ದೆಹಲಿಯಿಂದ ಆಕರ್ಷಿಕ ಆಯ್ಕೆ ಆಗಿದ್ದಾರೆ.

  • ಈ ವರ್ಷದ ಮಳೆಗಾಲ ಶುರು – ಕೇರಳಕ್ಕೆ ಮುಂಗಾರು ಪ್ರವೇಶ, ಮಂಗ್ಳೂರಲ್ಲಿ ಭಾರೀ ಮಳೆ!

    ಈ ವರ್ಷದ ಮಳೆಗಾಲ ಶುರು – ಕೇರಳಕ್ಕೆ ಮುಂಗಾರು ಪ್ರವೇಶ, ಮಂಗ್ಳೂರಲ್ಲಿ ಭಾರೀ ಮಳೆ!

    ಬೆಂಗಳೂರು/ಮಂಗಳೂರು/ಉಡುಪಿ: ಈ ಬಾರಿಯ ಮಳೆಗಾಲ ಅಧಿಕೃತವಾಗಿ ಶುರುವಾಗಿದೆ. ಕೇರಳದಲ್ಲಿ ಮುಂಗಾರು ಮಳೆ ಶುರುವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ದೃಢೀಕರಿಸಿದೆ. ದೇಶಕ್ಕೆ ನೈಋತ್ಯ ಮುಂಗಾರು ಮಳೆ ಆಗಮನವಾಗಿದೆ. 3 ದಿನ ಮೊದಲೇ ಕೇರಳಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ವಿಜ್ಞಾನಿ ಗವಾಸ್ಕರ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ ಸಾಧ್ಯತೆಯಿದೆ. ಕೇರಳ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡಿದೆ. ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಭಾರಿ ಮಳೆಯಾಗುವ ಸಂಭವಿದೆ ಎಂದು ಗವಾಸ್ಕರ್ ಹೇಳಿದ್ದಾರೆ. ಮುಂಗಾರು ಮೇ 29ಕ್ಕೆ ಆಗಮಿಸಲಿದೆ. ಈ ಬಾರಿ ಸಾಮಾನ್ಯ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮನ್ಸೂಚನೆ ನೀಡಿತ್ತು. ಸಾಮಾನ್ಯವಾಗಿ ಜೂನ್ 1ರಂದು ಕೇರಳ ಮೂಲಕ ಮುಂಗಾರು ಪ್ರವೇಶವಾಗುತ್ತಿತ್ತು.

    ಅರಬಿ ಸಮುದ್ರ, ಮಾಲ್ಡೀವ್ಸ್, ಲಕ್ಷದ್ವೀಪ, ಕೇರಳದ ಬಹುತೇಕ ಭಾಗಕ್ಕೆ ನೈಋತ್ಯ ಮುಂಗಾರು ಇಂದು ಪ್ರವೇಶಿಸಿದೆ. ತಮಿಳುನಾಡಿನ ಕೆಲವು ಭಾಗ, ಬಂಗಾಳ ಕೊಲ್ಲಿಯ ಹಲವೆಡೆ ಮಳೆ ಶುರುವಾಗಿದೆ. ಸಾಮಾನ್ಯ ಮಳೆಗಾಲಕ್ಕಿಂತ ಈ ಬಾರಿ 3 ದಿನ ಮುಂಚಿತವಾಗಿ ಮುಂಗಾರು ಪ್ರವೇಶವಾಗಿದೆ ಎಂದು ಹವಾಮಾನ ಇಲಾಖೆ ತನ್ನ ಅಧಿಕೃತ ಪ್ರಕಟಣೆಯಲ್ಲಿ ಹೇಳಿದೆ. ಮುಂದಿನ 48 ಗಂಟೆಗಳಲ್ಲಿ ಮುಂಗಾರು ಇನ್ನಷ್ಟು ಬಲಗೊಳ್ಳಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

    ಕಳೆದೆರಡು ದಿನಗಳಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳೂರಿನ ಅತ್ತಾವರ ಕೆಎಂಸಿ ಆಸ್ಪತ್ರೆಗೆ ನೀರು ನುಗ್ಗಿದ್ದು, ರೋಗಿಗಳನ್ನು ಆಸ್ಪತ್ರೆಯಿಂದ ಬೇರೆ ಕಡೆಗೆ ಸ್ಥಳಾಂತರ ಮಾಡುತ್ತಿದ್ದಾರೆ. ಸುರತ್ಕಲ್, ಕುಂಠಿಕಾನ, ಕೊಟ್ಟಾರದಲ್ಲಿ ಹಲವು ಪ್ರದೇಶಗಳು ಜಲಾವೃತವಾಗಿವೆ. ಇಂದು ಬೆಳಗ್ಗೆ 10 ಗಂಟೆಗೆ ಸುರಿಯಲಾರಂಭಿಸಿದ ಮಳೆ ಸತತ 3 ಗಂಟೆಗಳಿಂದ ಎಡೆಬಿಡದೇ ಸುರಿಯುತ್ತಿದೆ. ಸಂಜೆವರೆಗೆ ಇದೇ ರೀತಿ ಮಳೆ ಸುರಿದರೆ ಜನರು ಬಾರೀ ಸಂಕಷ್ಟ ಎದುರಿಸಬೇಕಾದೀತು. ಮೆಕುನು ಚಂಡಮಾರುತದ ಪ್ರಭಾವವೇ ರಾಜ್ಯದ ಕರಾವಳಿಯಲ್ಲಿ ಮಳೆಗ ಪ್ರಮುಖ ಕಾರಣ ಎನ್ನಲಾಗಿದೆ. ಕಾಸರಗೋಡು ಸೇರಿದಂತೆ ಕೇರಳದ ಹಲವೆಡೆ ಭಾರೀ ಮಳೆಯಾಗುತ್ತಿದೆ.

  • ಗಮನಿಸಿ, ಶಿವಮೊಗ್ಗ ಜಿಲ್ಲೆಯ ಯುವಕನಿಗೆ ನಿಪಾ ಸೋಂಕು ಇಲ್ಲ

    ಗಮನಿಸಿ, ಶಿವಮೊಗ್ಗ ಜಿಲ್ಲೆಯ ಯುವಕನಿಗೆ ನಿಪಾ ಸೋಂಕು ಇಲ್ಲ

    ಶಿವಮೊಗ್ಗ: ಜಿಲ್ಲೆಯ ಸಾಗರದ ತಾಲೂಕಿನ ಯುವಕನ ರಕ್ತದ ಮಾದರಿಯಲ್ಲಿ ನಿಪಾ ವೈರಸ್ ಸೋಂಕು ಪತ್ತೆಯಾಗಿಲ್ಲ ಎಂದು ಡಿಹೆಚ್‍ಒ ಡಾ. ವೆಂಕಟೇಶ್ ಹೇಳಿದ್ದಾರೆ.

    ನಿಪಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪುಣೆಯ ಲ್ಯಾಬ್ ನಿಂದ ರಕ್ತದ ಮಾದರಿಯ ಪರೀಕ್ಷೆಯ ಫಲಿತಾಂಶ ಬಂದಿದ್ದು, ಅದರಲ್ಲಿ ನೆಗೆಟಿವ್ ಬಂದ ಕಾರಣ ಜಿಲ್ಲೆಯಲ್ಲಿ ಯಾರು ಭಯ ಪಡುವ ಅಗತ್ಯವಿಲ್ಲ ಎಂದು ಡಿಹೆಚ್‍ಒ ಡಾ. ವೆಂಕಟೇಶ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.  ಇದನ್ನು ಓದಿ: ಮಲೆನಾಡಿಗೂ ಕಾಲಿಟ್ಟಿತೇ ನಿಪಾ ಸೋಂಕು?

    ಕೇರಳದ ಕಾಸರಗೋಡಿನಲ್ಲಿ ಕೆಲಸ ಮಾಡುತ್ತಿದ್ದ ಶಿರವಂತೆಯ ಮಿಥುನ್ ನಿಪಾ ವೈರಸ್ ಹಾವಳಿ ಜೋರಾಗಿದ್ದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಮರಳಿದ್ದರು. ಈ ವೇಳೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಸಾಗರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೇರಳದಲ್ಲಿ ಈ ಸೋಂಕಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಆಗಮಿಸಿದ್ದ ಮಿಥುನ್‍ಗೂ ನಿಫಾ ಸೊಂಕು ತಗುಲಿದೆ ಎನ್ನುವ ಶಂಕೆ ಉಂಟಾಗಿತ್ತು.

  • ಎಂಜಿನಿಯರ್ ಜೊತೆ ಎಂಗೇಜ್ಮೆಂಟ್ ಮಾಡ್ಕೊಂಡ ಲೇಡಿ ಡಾಕ್ಟರ್ ಬಸ್ ಕಂಡಕ್ಟರನ್ನ ಮದುವೆಯಾದ್ಳು!

    ಎಂಜಿನಿಯರ್ ಜೊತೆ ಎಂಗೇಜ್ಮೆಂಟ್ ಮಾಡ್ಕೊಂಡ ಲೇಡಿ ಡಾಕ್ಟರ್ ಬಸ್ ಕಂಡಕ್ಟರನ್ನ ಮದುವೆಯಾದ್ಳು!

    ಕಾಸರಗೋಡು: ಪ್ರೀತಿ ಮಾಯೆ ಹುಷಾರು.. ಪ್ರೀತಿಗೆ ಕಣ್ಣಿಲ್ಲ ಅಂತೆಲ್ಲಾ ಹೇಳ್ತಾರೆ. ಅಂಥದ್ದೇ ಒಂದು ಕಥೆ ಇದು. ಈ ಘಟನೆ ನಡೆದಿದ್ದು ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ.

    ನೀಲೇಶ್ವರ ಎಂಬಲ್ಲಿಯ ಈ ಯುವತಿ ಹೋಮಿಯೋಪತಿ ಡಾಕ್ಟರ್ ಆಗಿದ್ದು ಆಕೆಗೆ ಎಂಜಿನಿಯರ್ ಒಬ್ಬನ ಜೊತೆ 2 ತಿಂಗಳ ಹಿಂದೆ ಆಡಂಬರಯುತ, ಅದ್ಧೂರಿ ವಿವಾಹ ನಿಶ್ಚಿತಾರ್ಥ ನಡೆದಿತ್ತು. ನೀಲೇಶ್ವರದಲ್ಲಿರುವ ಪ್ರಮುಖ ಹೋಟೆಲೊಂದರಲ್ಲಿ ಈ ಶುಭ ಕಾರ್ಯ ನಡೆದಿತ್ತು. ಆದರೆ ಎಂಗೇಜ್ಮೆಂಟ್ ಆಗಿ ಕೆಲವೇ ದಿನಗಳಲ್ಲಿ ಈ ಡಾಕ್ಟರ್ ಎಂಜಿನಿಯರ್ ನನಗೆ ಬೇಡ ಎಂದು ಮದುವೆಗೆ ಹಿಂದೇಟು ಹಾಕಿದ್ದಾಳೆ.

    ಲವ್ವಿ ಡವ್ವಿ ಬಸ್ಸಲ್ಲೇ ನಡೆದಿತ್ತು!: ಕೇರಳದ ಇರಿಟ್ಟಿ ಎಂಬಲ್ಲಿ ವೈದ್ಯೆಯಾಗಿರುವ ಆಕೆ ನಿತ್ಯ ಕೆಲಸಕ್ಕೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಳು. ಈ ವೇಳೆ ಈಕೆಗೆ ಬಸ್ ನಲ್ಲಿ ಕಂಡಕ್ಟರ್ ಪರಿಚಯವಾಗಿದೆ. ಪರಿಚಯ ಮತ್ತೂ ಮುಂದುವರಿದು ಪ್ರೇಮಾಂಕುರವಾಗಿದೆ. ಈತನ ಜೊತೆಯೇ ನನಗೆ ಮದುವೆ ಮಾಡಿಕೊಡಿ ಎಂದು ಆಕೆ ಅಂಗಾಲಾಚಿದರೂ ಸಂಬಂಧಿಕರು ಹಾಗೂ ಪೋಷಕರು ಕೇಳಲೇ ಇಲ್ಲ. ಇದಾದ ಬಳಿಕ ದಿಢೀರ್ ಆಗಿ ವೈದ್ಯೆ ನಾಪತ್ತೆಯಾಗಿದ್ದಳು. ಸುಮಾರು ದಿನ ಕಳೆದರೂ ಯಾವುದೇ ಸುಳಿವೂ ಸಿಕ್ಕಿರಲಿಲ್ಲ. ಜೊತೆಗೆ ಆಕೆಯ ಮೊಬೈಲ್ ಫೋನ್ ಗೆ ಕರೆ ಮಾಡಿದರೆ ಅದು ಕೂಡಾ ಸ್ವಿಚ್ ಆಫ್ ಆಗಿತ್ತು.

    ಆದರೆ ಎರಡು ದಿನಗಳ ಹಿಂದೆ ವೈದ್ಯೆ ಹಾಗೂ ಬಸ್ ಕಂಡಕ್ಟರ್ ದೇವಸ್ಥಾನವೊಂದರಲ್ಲಿ ಮದುವೆಯಾಗಿರುವ ಫೋಟೋಗಳು ವಾಟ್ಸಪ್ ಮೂಲಕ ಸಂಬಂಧಿಕರಿಗೆ ತಲುಪಿದೆ. ಈ ಮೂಲಕ ಇಬ್ಬರ ಕಂಡಕ್ಟರ್ ಡಾಕ್ಟರನ್ನು ಸೇರಿದ ವಿಚಾರ ಎಲ್ಲರಿಗೂ ಗೊತ್ತಾಗಿದೆ.

     

  • ಹೈವೇಯಲ್ಲಿದ್ದ ಬಾರ್ ಕ್ಲೋಸ್ ಆದ್ರೇನು ಮೆಡಿಕಲ್ ಶಾಪಲ್ಲಿ ಮದ್ಯ ಸಿಗ್ತಿತ್ತು!

    ಹೈವೇಯಲ್ಲಿದ್ದ ಬಾರ್ ಕ್ಲೋಸ್ ಆದ್ರೇನು ಮೆಡಿಕಲ್ ಶಾಪಲ್ಲಿ ಮದ್ಯ ಸಿಗ್ತಿತ್ತು!

    ಕಾಸರಗೋಡು: ಸುಪ್ರೀಂ ಕೋರ್ಟ್ ಆದೇಶದ ಅನ್ವಯ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ. ಆದ್ರೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕೇರಳದಲ್ಲಿ ಮೆಡಿಕಲ್ ಶಾಪ್‍ನಲ್ಲಿ ಮದ್ಯವನ್ನು ಮಾರಾಟ ಮಾಡುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು. ಕಾಸರಗೋಡು ಜಿಲ್ಲೆಯ ಬಂದ್ಯೋಡ್ ಎಂಬಲ್ಲಿರುವ ಮೆಡಿಕಲ್ ಶಾಪ್‍ನಲ್ಲಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಅಬಕಾರಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

    ಬೆಸ್ಟ್ ಮೆಡಿಕಲ್ ಶಾಪ್‍ನಲ್ಲಿ ಮದ್ಯ ಮಾರಾಟ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿಯನ್ನು ಆಧರಿಸಿ ಅಬಕಾರಿ ಪೊಲೀಸರು ಮಾರುವೇಷದಲ್ಲಿ ಬೆಸ್ಟ್ ಮೆಡಿಕಲ್ ಶಾಪ್‍ಗೆ ತೆರಳಿ ಮದ್ಯ ಕೇಳಿದ್ದಾರೆ. ಈ ವೇಳೆ ಪೊಲೀಸರಿಗೆ ಮದ್ಯ ಸಿಕ್ಕಿದ್ದು, ಕೂಡಲೇ ಮೆಡಿಕಲ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೂರಂಬೈಲ್ ಉದಯ್ ಎಂಬಾತನನ್ನು ಬಂಧಿಸಿದ್ದಾರೆ.

    ಇನ್ಸ್ ಪೆಕ್ಟರ್ ಪಿಜಿ ರಾಬಿನ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು ಅಬಕಾರಿ ಪೊಲೀಸರು ಕರ್ನಾಟಕದಲ್ಲಿ ತಯಾರಾಗಿರುವ 49 ಬಾಟಲ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

    ಸುಪ್ರೀಂ ಹೇಳಿದ್ದು ಏನು?
    ಮದ್ಯಪಾನದಿಂದಾಗಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 2017ರ ಏಪ್ರಿಲ್ 1ರ ಒಳಗಡೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಎರಡೂ ಬದಿಯ 500 ಮೀಟರ್ ವ್ಯಾಪ್ತಿಯಲ್ಲಿನ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಿತ್ತು. ಅಷ್ಟೇ ಅಲ್ಲದೇ ಈ ಮದ್ಯದ ಅಂಗಡಿಗಳ ಪರಾವನಗಿಗಳನ್ನು ಮಾರ್ಚ್ 31ರ ಬಳಿಕ ನವೀಕರಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರ ನೇತೃತ್ವದ ಪೀಠ ಹೇಳಿತ್ತು.

      ಫೋಟೋ ಕೃಪೆ: ಕಾಸರಗೋಡುವಾರ್ತಾ.ಕಾಂ