– ಎಲ್ಒಸಿಯಲ್ಲಿ ಭಯೋತ್ಪಾದಕರ ಲಾಂಚ್ ಪ್ಯಾಡ್ಗಳು ಸಕ್ರಿಯ; ಗುಪ್ತಚರ ವರದಿ
ಶ್ರೀನಗರ: ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್ಒಸಿಯಲ್ಲಿ (LoC ಗಡಿ ನಿಯಂತ್ರಣ ರೇಖೆ) ಉಗ್ರ ಲಾಂಚ್ಪ್ಯಾಡ್ಗಳು ಸಕ್ರಿಯಗೊಂಡಿರುವ ಹಿನ್ನೆಲೆ ಗಡಿಯುದ್ದಕ್ಕೂ BSF (ಗಡಿ ಭದ್ರತಾ ಪಡೆ) ಕಟ್ಟೆಚ್ಚರ ವಹಿಸಿದೆ.
ಹೌದು. ಗುಪ್ತಚರ ವರದಿಗಳ ಪ್ರಕಾರ, ಎಲ್ಒಸಿ ಗಡಿಯುದ್ಧಕ್ಕೂ ಹಲವಾರು ಲಾಂಚ್ ಪ್ಯಾಡ್ಗಳಲ್ಲಿ ಭಯೋತ್ಪಾದಕರು (Terrorists) ಕಣಿವೆಯೊಳಗೆ ನುಸುಳಲು ಕಾಯುತ್ತಿದ್ದಾರೆ. ಚಳಿಗಾಲದ ಸಂದರ್ಭದಲ್ಲಿ ಇದು ನಡೆಯುತ್ತಿರುತ್ತದೆ. ಹಾಗಾಗಿ ಚಳಿಗಾಲಕ್ಕೂ ಮುನ್ನವೇ ಕಟ್ಟೆಚ್ಚರ ವಹಿಸಲಾಗಿದೆ ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಡೆದ ʻವುಲರ್ 2.0ʼ ಮ್ಯಾರಥಾನ್ ವೇಳೆ ಈ ಕುರಿತು ಬಿಎಸ್ಎಫ್ ಹೆಚ್ಚುವರಿ ಮಹಾನಿರ್ದೇಶಕ (ADG) ಸತೀಶ್ ಎಸ್. ಖಂಡ್ರೆ ಮಾತನಾಡಿದರು.
ಚಳಿಗಾಲ ಶುರುವಾಗುತ್ತಿದ್ದಂತೆ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವು ಸಾಮಾನ್ಯವಾಗಿ ಹೆಚ್ಚಾಗುತ್ತದೆ. ಹಾಗಾಗಿ ಗಡಿಯಲ್ಲಿ ಕಣ್ಗಾವಲು ಬಲಪಡಿಸಿದ್ದೇವೆ. ನಮ್ಮ ಸೈನಿಕರು, ಅಧಿಕಾರಿಗಳನ್ನ ಅಲರ್ಟ್ ಮಾಡಿದ್ದೇವೆ. ಗುಪ್ತಚರ ಮಾಹಿತಿಯ ಪ್ರಕಾರ, ಈಗಾಗಲೇ ಗಡಿಯಲ್ಲಿ ಹಲವಾರು ಭಯೋತ್ಪಾದಕ ಲಾಂಚ್ ಪ್ಯಾಡ್ಗಳನ್ನ ಸಕ್ರಿಯಗೊಳಿಸಿದೆ. ಅಲ್ಲಿಂದ ಭಯೋತ್ಪಾದಕರು ಒಳನುಸುಳಲು ತಯಾರಿ ನಡೆಸುತ್ತಿದ್ದಾರೆ. ಸದ್ಯಕ್ಕೆ ಎಷ್ಟು ಉಗ್ರರು ಇದ್ದಾರೆ ಅನ್ನೋದು ಅಂದಾಜು ಮಾಡುವುದು ಕಷ್ಟ. ಆದ್ರೆ ಕೆಲ ಚಟುವಟಿಕೆಗಳು ಸಕ್ರಿಯಗೊಂಡಿರುವ ಬಗ್ಗೆ ವರದಿ ಬಂದಿದೆ. ಹಾಗಾಗಿ ನಾವು ಗಡಿಯ ಎಲ್ಲಾ ಭಾಗದಲ್ಲು ಸಕ್ರಿಯವಾಗಿದ್ದೇವೆ ಎಂದು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸೇನೆ, ಬಿಎಸ್ಎಫ್ ಜಂಟಿ ಕಣ್ಗಾವಲು
ಗುಪ್ತಚರ ವರದಿ ಬೆನ್ನಲ್ಲೇ ಗಡಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಬಿಎಸ್ಎಫ್ ಹಾಗೂ ಭಾರತೀಯ ಸೇನೆ ಸಂಪೂರ್ಣ ಸಿದ್ಧವಾಗಿದ್ದು, ಜಂಟಿಯಾಗಿ ಕಣ್ಗಾವಲು ನಿಯೋಜಿಸಲಾಗಿದೆ. ನಮ್ಮ ಸೈನಿಕರ ಕಣ್ತಪ್ಪಿಸಿ ಬರಲು ಯಾರಿಂದಲೂ ಸಾಧ್ಯವಿಲ್ಲ ಎಂದಿದೆ ಬಿಎಸ್ಎಪ್.
ಚಳಿಗಾಲದಲ್ಲಿ ಏಕೆ ನುಸುಳುವಿಕೆ ಹೆಚ್ಚಳ?
ಚಳಿಗಾಲದಲ್ಲಿ ಹಿಮಪಾತದಿಂದಾಗಿ ಕಾಶ್ಮೀರ ಕಣಿವೆಯಲ್ಲಿ ಅನೇಕ ಮಾರ್ಗಗಳು ಮುಚ್ಚಿಕೊಳ್ಳುತ್ತವೆ. ಇದರ ಉಪಯೋಗ ಪಡೆದುಕೊಳ್ಳುವ ಭಯೋತ್ಪಾದಕರು ಒಳಗೆ ನುಸುಳಲು ಯತ್ನಿಸುತ್ತಾರೆ. ಹೀಗಾಗಿ ಬಿಎಸ್ಎಫ್ ಹಗಲು ಮತ್ತು ರಾತ್ರಿ ಕಣ್ಗಾವಲು ಇರಿಸಿದೆ. ಡ್ರೋನ್ಗಳನ್ನು ಸಹ ನಿಯೋಜನೆ ಮಾಡಲಾಗಿದೆ.
ನವದೆಹಲಿ: ಭಾರತ (India) ಮತ್ತು ಪಾಕಿಸ್ತಾನದ (Pakistan) ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಇದರ ನಡುವೆ ಕಾಶ್ಮೀರದಲ್ಲಿ (Kashmir) ಸಿಲುಕಿರುವ 13 ಕನ್ನಡಿಗ ವಿದ್ಯಾರ್ಥಿಗಳನ್ನು ವಾಪಸ್ ರಾಜ್ಯಕ್ಕೆ ಕರೆತರಲು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ನೆರವಾಗಿದ್ದಾರೆ.
ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ರಾಜ್ಯದ 13 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಪಾಕ್ನ (Pakistan) ಡ್ರೋನ್ ದಾಳಿ ಭೀತಿಯಿಂದಾಗಿ ಪರದಾಡುತ್ತಿದ್ದರು. ಇದರಿಂದಾಗಿ ತಗಚಗೆರೆ ಗ್ರಾಮದ ಜೆಡಿಎಸ್ ಮುಖಂಡರೊಬ್ಬರು ತಮ್ಮ ಪುತ್ರ ಹರ್ಷಿತ್ ಕಾಶ್ಮೀರದಲ್ಲಿ ಓದುತ್ತಿದ್ದು, ಯುದ್ಧ ಭೀತಿಯಿರುವ ಕಾರಣ ಅವರನ್ನು ಕರ್ನಾಟಕಕ್ಕೆ ಹಿಂತಿರುಗಿಸಲು ಸಹಾಯ ಕೋರಿ, ಹೆಚ್ಡಿ ಕುಮಾರಸ್ವಾಮಿಯವರಿಗೆ ಮನವಿ ಮಾಡಿಕೊಂಡಿದ್ದರು.ಇದನ್ನೂ ಓದಿ: ಫೈರ್ ಬ್ರ್ಯಾಂಡ್ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
ಇದೇ ವೇಳೆ ಕರ್ನಾಟಕದ ಹಲವು ವಿದ್ಯಾರ್ಥಿಗಳು ಅಲ್ಲಿ ಓದುತ್ತಿರುವ ಮಾಹಿತಿ ಸಿಕ್ಕಿದೆ. ಕೂಡಲೇ ಸ್ಪಂದಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳ ರಕ್ಷಣೆಗಾಗಿ ತಮ್ಮ ಸಚಿವಾಲಯದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಸದ್ಯ ವಿದ್ಯಾರ್ಥಿಗಳನ್ನು ದೆಹಲಿಯ ಕರ್ನಾಟಕ ಭವನಕ್ಕೆ ಕರೆತರಲಾಗಿದ್ದು, ಸದ್ಯ ಎಲ್ಲರೂ ಸುರಕ್ಷಿತರಾಗಿದ್ದಾರೆ.
ಇಸ್ಲಾಮಾಬಾದ್: ಉಗ್ರ ತಾಣಗಳ ಮೇಲೆ ಭಾರತ ನಡೆಸಿದ ದಾಳಿಯಿಂದ ಪಾಕ್ಗೆ ನಡುಕ ಹುಟ್ಟಿರುವುದು ಮತ್ತೆ ಸ್ಪಷ್ಟವಾದಂತೆ ಕಾಣ್ತಿದೆ. ಹೀಗಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ (Shahbaz Sharif) ಭಾರತದ ವಿರುದ್ಧ ಕಟು ಹೇಳಿಕೆಗಳನ್ನ ನೀಡಿದ್ದಾರೆ.
ಬುಧವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಷರೀಫ್, ಭಾರತ (India) ತೀವ್ರ ಪರಿಣಾಮಗಳನ್ನ ಎದುರಿಸಬೇಕಾಗುತ್ತದೆ, ಅವರು ಮಾಡಿದ ತಪ್ಪಿಗೆ ಭಾರೀ ಬೆಲೆ ತೆರಬೇಕಾಗುತ್ತದೆ. ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ ಎಂದರಲ್ಲದೇ ನಾವು ದೇಶವನ್ನು ರಕ್ಷಿಸಲು ನಮ್ಮ ಕೊನೆಯುಸಿರು ಇರುವವರೆಗೂ ಹೋರಾಡುತ್ತೇವೆ ಎಂದಿದ್ದಾರೆ.
ದಾಳಿ ಒಪ್ಪಿಕೊಳ್ಳದ ಪಾಕ್:
ಅಲ್ಲದೇ ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿ ಕುರಿತು ಮತ್ತೆ ಪ್ರಸ್ತಾಪಿಸಿದ ಷರೀಫ್, ಪಹಲ್ಗಾಮ್ ದಾಳಿ (Pahalgam Terrorist Attack Attack) ನಡೆದಾಗ ನಾನು ಟರ್ಕಿಗೆ ಭೇಟಿ ನೀಡಿದ್ದೆ. ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಆಗಲೇ ನಾವು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ, ತನಿಖೆಗೆ ಸಹಕರಿಸಲೂ ಸಿದ್ಧರಿದ್ದೇವೆ ಎಂದು ಹೇಳಿದ್ದೆವು. ಆದ್ರೆ ಭಾರತ ನಮ್ಮ ಸ್ಪಷ್ಟನೆಯನ್ನು ಸ್ವೀಕರಿಸದೇ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಮಾತನಾಡುತ್ತಾ, ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ. ಭಾರತದ ದಾಳಿ ಅಚ್ಚರಿ ಮೂಡಿಸಿತು. ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಭಾರತೀಯ ವಿಮಾನಗಳು ತಮ್ಮ ದೇಶವನ್ನು ಪ್ರವೇಶಿಸಿದರೆ ಸಮುದ್ರಕ್ಕೆ ಎಸೆಯಲು ಪಾಕಿಸ್ತಾನ ವಾಯುಪಡೆ ಸಿದ್ಧವಾಗಿದೆ ಮತ್ತು ಅದಕ್ಕಾಗಿ ಕಾಯುತ್ತಿದೆ. ಪಾಕಿಸ್ತಾನವು 5 ರಫೇಲ್ ಜೆಟ್ಗಳು ಮತ್ತು 2 ಡ್ರೋನ್ಗಳನ್ನು ಹೊಡೆದುರುಳಿಸಿದೆ ಎಂದು ಹಸಿಹಸಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದರು.
ಏನಿದು ʻಆಪರೇಷನ್ ಸಿಂಧೂರʼ?
ಕಳೆದ ಏಪ್ರಿಲ್ 22ರಂದು ಕಾಶ್ಮೀರದ ಪೆಹಲ್ಗಾಮ್ನ ಬೈಸರನ್ ಕಣಿವೆ ಪ್ರದೇಶದಲ್ಲಿ ನಾಲ್ವರು ಉಗ್ರರು ಓರ್ವ ವಿದೇಶಿ ಪ್ರಜೆ ಸೇರಿದಂತೆ 26 ಪ್ರವಾಸಿಗರನ್ನ ಗುಂಡಿಕ್ಕಿ ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಣ ತೊಟ್ಟಿದ್ದ ಭಾರತ ಮಂಗಳವಾರ ತಡರಾತ್ರಿ 1:44 ಗಂಟೆ ಸುಮಾರಿಗೆ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಪಾಕ್ ಸೇನೆಯಾಗಲಿ ಅಥವಾ ನಾಗರಿಕರ ಮೇಲಾಗಲಿ ದಾಳಿ ಮಾಡದೇ ಉಗ್ರರ ನೆಲೆಗಳನ್ನು ಮಾತ್ರವೇ ಗುರಿಯಾಗಿಸಿ ದಾಳಿ ನಡೆಸಿದೆ.
ಮೋಸ್ಟ್ವಾಂಟೆಡ್ಗಳನ್ನ ತಯಾರು ಮಾಡ್ತಿದ್ದ ನೆಲೆಗಳು ಧ್ವಂಸ:
ಭಾರತ ಧ್ವಂಸ ಮಾಡಿರುವ ಈ ಉಗ್ರರ ನೆಲೆಗಳು ಮೋಸ್ಟ್ ಡೇಂಜರಸ್ ತಾಣಗಳು ಎಂದೇ ಗುರುತಿಸಿಕೊಂಡಿದ್ದು, ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜೊತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.
ಮಡಿಕೇರಿ: ಮಕ್ಕಳಿಗೆ ಈಗಾಗಲೇ ಬೇಸಿಗೆ ರಜೆ ಅರಂಭವಾಗಿದ್ದು, ಸಾವಿರಾರು ಸಂಖ್ಯೆಯ ಜನರು ತಮ್ಮ ಮಕ್ಕಳನ್ನು ಕರೆದುಕೊಂಡು ದೂರದ ಕಾಶ್ಮೀರಕ್ಕೆ ಹೋಗಬಹುದು ಎಂದು ಪ್ಲ್ಯಾನ್ ಮಾಡಿದ್ರು. ಅದರೆ, ಕಳೆದ ಕೆಲವು ದಿನಗಳ ಹಿಂದೆ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಅಟ್ಟಹಾಸದಿಂದ ದೇಶದ ಜನರು ಭಯ ಭೀತರಾಗಿದ್ದಾರೆ. ಇದರಿಂದ ತಮ್ಮ ಮಕ್ಕಳನ್ನು ಕರೆದುಕೊಂಡು ಸಾವಿರಾರು ಪ್ರವಾಸಿಗರು ಕರ್ನಾಟಕದ ಕಾಶ್ಮೀರದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ.
ಕಾಶ್ಮೀರದಲ್ಲಿರುವ ನೀಲಂ ಕಣಿವೆಗಳ ಸಾಲುಗಳನ್ನು ವಿಕ್ಷಣೆ ಮಾಡಲು ಪ್ರತಿ ಬೇಸಿಗೆಯಲ್ಲಿ ಸುಮಾರು ಮೂರು ಲಕ್ಷ ಪ್ರವಾಸಿಗರು ತೆರಳುತ್ತಾರೆ. ಕಾಶ್ಮೀರದ ನೈಸರ್ಗಿಕ ಸೌಂದರ್ಯವನ್ನು ಸವಿಯುತ್ತಾರೆ. ಆದರೆ ಭಾರತ ಪಾಕ್ ಹಾಗೂ ಪಿಒಕೆ ಮೇಲೆ ದಾಳಿ ನಡೆಸುವ ಭೀತಿಯಿಂದಾಗಿ ಅಲ್ಲಿಂದ ಪ್ರವಾಸಿಗರು ದಿನ ನಿತ್ಯ ಜಾಗ ಖಾಲಿ ಮಾಡುತ್ತಿದ್ದಾರೆ. ಈ ನಡುವೆ ದೇಶ ವಿದೇಶದ ಜನರು ಕರ್ನಾಟಕದ ಕಾಶ್ಮೀರ ಕೊಡಗಿನತ್ತ ಹೆಜ್ಜೆ ಹಾಕುತ್ತಿದ್ದಾರೆ. ಇದರಿಂದ ಮಂಜಿನ ನಗರಿ ಮಡಿಕೇರಿಯ ವಿಶಾಲವಾದ ರಾಜಾಸೀಟ್ ಉದ್ಯಾನವನದ ತುಂಬೆಲ್ಲಾ ಜನ ತುಂಬಿ ತುಳುಕುತ್ತಿದ್ದಾರೆ.
ಸಾಗರೋಪಾದಿಯಲ್ಲಿ ಪ್ರವಾಸಿಗರು ಆಗಮಿಸಿದ್ದರಿಂದ ಮಡಿಕೇರಿಯ ರಸ್ತೆಗಳೆಲ್ಲಾ ವಾಹನ ದಟ್ಟಣೆಯಿಂದ ಗಿಜಿಗುಡುತ್ತಿವೆ. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಾಳಾದ ತಲಕಾವೇರಿ, ಭಾಗಮಂಡಲ, ದುಬಾರೆ, ಅಬ್ಬಿಫಾಲ್ಸ್ ಹೀಗೆ ಎಲ್ಲಾ ಪ್ರವಾಸಿತಾಣಗಳು ಸಂಪೂರ್ಣವಾಗಿ ತುಂಬಿಹೋಗಿವೆ.
ಪ್ರವಾಸಿಗರೊಬ್ಬರು ಮಾತಾನಾಡಿ ಕಾಶ್ಮೀರಕ್ಕೆ ಹೋಗುವ ಹಂಬಲ ಈ ಬಾರಿ ಇತ್ತು ಅದರೆ ಭಯೋತ್ಪಾದಕರ ಚಟುವಟಿಕೆಯಿಂದ ಸಾಕಷ್ಟು ಭಯದ ವಾತಾವರಣ ಇತ್ತು. ಇದರಿಂದ ನಮ್ಮ ಕರ್ನಾಟಕದ ಕಾಶ್ಮೀರ ನೋಡಲು ಅಗಮಿಸಿದ್ದೇವೆ. ಕೊಡಗಿನ ಪರ್ವತ ಶ್ರೇಣಿಗಳು ತುಂಬಾ ಸುಂದರವಾಗಿವೆ. ಈ ವರ್ಷ ಕಾಶ್ಮೀರಕ್ಕೆ ಹೋಗದೇ ಇದ್ದರೂ ಮುಂದಿನ ವರ್ಷ ನಾವುಗಳು ಕಾಶ್ಮೀರಕ್ಕೆ ಹೋಗುತ್ತೇವೆ ಎಂದಿದ್ದಾರೆ.
ಶ್ರೀನಗರ: ಕಳೆದ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ (Pahalgam Terrorist Attack) ಬಳಿಕ ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ (Omar Abdullah) ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿದ್ದಾರೆ.
ದೆಹಲಿಯ (Delhi) ಪ್ರಧಾನಿ ನಿವಾಸದಲ್ಲಿಂದು ಮೋದಿ ಭೇಟಿಯಾದ ಒಮರ್ ಅಬ್ಲುಲ್ಲಾ ಅವರು ಉಗ್ರರ ದಾಳಿ ಹಾಗೂ ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯ ಕುರಿತು ಚರ್ಚಿಸಿದ್ದಾರೆ. ಅಲ್ಲದೇ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಹಾಗೂ ದೇಶದ ಭದ್ರತೆಗೆ ಸಂಬಂಧಿಸಿದ ವಿಷಯಗಳ ಕುರಿತು ಕೇಂದ್ರ ಸರ್ಕಾರ (Central Government) ಯಾವುದೇ ನಿರ್ಧಾರ ತೆಗೆದುಕೊಂಡರೂ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜಲ ಮಾರ್ಗ ಬಂದ್ – ಪಾಕ್ಗೆ ಹೋಗುವ, ಬರುವ ಹಡಗುಗಳ ಸಂಚಾರಕ್ಕೆ ಬ್ರೇಕ್ ಹಾಕಿದ ಭಾರತ
ಜನರು ಒಗ್ಗಟ್ಟಿನಿಂದ ಇರಬೇಕು: ಫಾರೂಕ್
ಇದಕ್ಕೂ ಮುನ್ನ ಜೆ&ಕೆ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ದಾಳಿಯನ್ನು ಖಂಡಿಸಿದರು. ಭಯೋತ್ಪಾದನೆಯ ವಿರುದ್ಧ ದೇಶದ ಜನ ಒಗ್ಗಟ್ಟಿನಿಂದ ನಿಲ್ಲುವಂತೆ ಮನವಿ ಮಾಡಿದರು. ದಾಳಿಯಲ್ಲಿ ಭಾಗಿಯಾಗಿರುವವರು ಮಾನವೀಯತೆಯ ಶತ್ರುಗಳು, ಅವರು ನರಕದಲ್ಲಿ ಕೊಳೆಯುತ್ತಾರೆ. ಪಾಕ್ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸಿಂಧೂ ನದಿ ನೀರು ಒಪ್ಪಂದವನ್ನು ಪುನರುಚ್ಚರಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಎಲ್ಲಾ ಹಿಂದೂಗಳನ್ನು ಸಾಲಾಗಿ ನಿಲ್ಲುವಂತೆ ಹೇಳಿದ್ರು: ಪಹಲ್ಗಾಮ್ ಭೀಕರತೆ ಬಿಚ್ಚಿಟ್ಟ ಸುಬೋಧ್
ಏ.22ರಂದು ನಡೆದಿತ್ತು ನರಮೇಧ
ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಜನಪ್ರಿಯ ಪ್ರವಾಸಿತಾಣ ಪಹಲ್ಗಾಮ್ನಲ್ಲಿ ಕಳೆದ ಏ.22ರಂದು ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು ಸೇರಿ 26 ಮಂದಿ ಬಲಿಯಾಗಿದ್ದಾರೆ. 2019ರಲ್ಲಿ 40 ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿಯ ಬಳಿಕ ಉಗ್ರರು ಕಣಿವೆಯಲ್ಲಿ ನಡೆಸಿದ ಭೀಕರ ದಾಳಿ ಇದಾಗಿದೆ. ಇದುವರೆಗೂ ಭದ್ರತಾಪಡೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದ ಉಗ್ರರು, ಇದೇ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ಅಮಾಯಕ ಪ್ರವಾಸಿಗರನ್ನು ಟಾರ್ಗೆಟ್ ಮಾಡಿ ಹತ್ಯೆ ಗೈದಿದ್ದರು. ಈ ಘಟನೆ ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ತಂದೊಡ್ಡಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸವು (Pahalgam Terrorist Attack) ಭಯೋತ್ಪಾದನೆ ಮತ್ತು ಭಯೋತ್ಪಾದಕರ ವಿರುದ್ಧ ಇಡೀ ದೇಶವೇ ಒಗ್ಗೂಡುವಂತೆ ಮಾಡಿದೆ. ಈ ಕೃತ್ಯಕ್ಕೆ ಕಾರಣರಾದವರನ್ನ ಶಿಕ್ಷಿಸಲು ಸರ್ಕಾರ ಮಾಡುವ ಎಲ್ಲ ಪ್ರಯತ್ನಗಳಿಗೆ ಇಡೀ ದೇಶ ಬೆಂಬಲವಾಗಿ ನಿಂತಿದೆ. ದೇಶದ ಜನ, ಸಾಮಾಜಿಕ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಬಲವಾದ ಸಂದೇಶ ರವಾನಿಸಿವೆ.
ಭಾರತ ಸರ್ಕಾರ ಪಾಕಿಸ್ತಾನದ (Pakistan) ವಿರುದ್ಧ ಹೆಜ್ಜೆ ಹೆಜ್ಜೆಗೂ ಕ್ರಮ ಕೈಗೊಳ್ಳುತ್ತಿದೆ. ಇದರಿಂದ ಇಡೀ ಪಾಕಿಸ್ತಾನದಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ. ಉಭಯ ದೇಶಗಳ ನಡುವೆ ಯಾವುದೇ ಸಂದರ್ಭದಲ್ಲೂ ಯುದ್ಧ ಘೋಷಣೆಯಾಗುವ ಸಾಧ್ಯತೆಗಳು ಮುನ್ನೆಲೆಗೆ ಬಂದಿವೆ. ಹೀಗಾಗಿ ಮೂರು ಸೇನಾ ಪಡೆಗಳಿಂದ ಭರ್ಜರಿ ಸಿದ್ಧತೆ ನಡೆಯುತ್ತಿದೆ, ವಾಯುಸೇನೆ ನೌಕಾಸೇನೆಗಳು ಈಗಾಗಲೇ ತಮ್ಮ ವ್ಯಾಪ್ತಿಯಲ್ಲಿ ತಾಲೀಮು ಪ್ರಾರಂಭಿಸಿ ಶತ್ರು ರಾಷ್ಟ್ರವನ್ನು ಬಗ್ಗು ಬಡಿಯಲು ಸಿದ್ಧರಿದ್ದೇವೆ ಎಂಬ ಸಂದೇಶ ರವಾನಿಸಿವೆ. ಮತ್ತೊಂದೆಡೆ ಗಡಿಯಲ್ಲಿ ಜನ ಬಂಕರ್ಗಳನ್ನು ಸ್ವಯಂಪ್ರೇರಿತವಾಗಿ ಶುಚಿಗೊಳಿಸುತ್ತಿದ್ದಾರೆ. ಇಷ್ಟೆಲ್ಲ ಉದ್ವಿಗ್ನತೆಗೆ ಕಾರಣವಾದ ʻಟಿಆರ್ಎಫ್ʼ (ದಿ ರೆಸಿಸ್ಟೆಂಟ್ ಫ್ರಂಟ್ – TRF) ಫಾಲ್ಕನ್ ಸ್ಕ್ವಾಡ್ ಹೇಗೆ ಕೆಲಸ ಮಾಡುತ್ತೆ? ಯುವಕರಿಗೆ ಹೇಗೆ ಬ್ರೈನ್ ವಾಶ್ ಮಾಡಿ ಸಂಘಟನೆಗೆ ಸೇರಿಸಿಕೊಳ್ಳುತ್ತೆ? ಇದರ ಮಾಸ್ಟರ್ ಮೈಂಡ್ ಯಾರು? ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಯಾವೆಲ್ಲ ಸಂಘಟನೆಗಳು ಈಗಲೂ ಸಕ್ರೀಯವಾಗಿವೆ ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…
ಜಮ್ಮುವಿನಿಂದ ಪಥ ಬದಲಿಸಿದ ಉಗ್ರರು
2014 ರಿಂದ 2018ರ ಅವಧಿ ಜಮ್ಮು ಮತ್ತು ಕಾಶ್ಮೀರ ಸ್ಥಳಗಳು ಉಗ್ರರ ಸ್ವರ್ಗವಾಗಿತ್ತು. 2014ರಿಂದ 2018ರ ವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 1,708 ಉಗ್ರರ ದಾಳಿಗಳು ನಡೆದಿದ್ದವು, 2018ರಿಂದ 2022ರ ವರೆಗೆ 761 ಉಗ್ರರ ದಾಳಿಗಳು ನಡೆದು 174 ಮಂದಿ ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿದಾಳಿ ನಡೆಸಿದ್ದ ಸೇನೆ (Indian Army) 626 ಉಗ್ರರನ್ನು ಬಲಿ ಪಡೆದಿತ್ತು. 2023ರಲ್ಲಿ ಜಮ್ಮು ಪ್ರದೇಶದಲ್ಲಿ ಮಾತ್ರವೇ ಸುಮಾರು 40 ಭಯೋತ್ಪಾದಕ ದಾಳಿಗಳು ನಡೆದಿರುವುದಾಗಿ ಸೇನೆ ಹೇಳಿದೆ. ಆದ್ರೆ 2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಭಯೋತ್ಪಾದಕರು ತಮ್ಮ ಕಾರ್ಯತಂತ್ರ ಬದಲಿಸಿದ್ದರು. ಆಗ ಕಾಶ್ಮೀರವನ್ನು ಬಿಟ್ಟು ಜಮ್ಮುವಿನಲ್ಲಿ ದಾಳಿಗಳನ್ನು ನಡೆಸತೊಡಗಿದರು. 2021ರಿಂದ ಜುಲೈ 2024ರ ವರೆಗೆ ಜಮ್ಮುವಿನ ವಿವಿಧ ಭಾಗಗಳಲ್ಲಿ 33 ಉಗ್ರ ದಾಳಿಗಳು ನಡೆದಿದ್ದವು. 2024ರ ಮಧ್ಯಭಾಗದವರೆಗೆ ಜಮ್ಮುವಿನಲ್ಲಿ 8 ದಾಳಿಗಳು ನಡೆದು, 11 ಮಂದಿ ಸಾವಿಗೀಡಾಗಿದ್ದರು; ವರ್ಷದ ಮೊದಲ ಆರು ತಿಂಗಳಲ್ಲಿ ನಡೆದ ದಾಳಿಗಳಿಂದ 12 ಮಂದಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ಕೆಲವು ಸೈನಿಕರನ್ನು ಚೀನಾದ ಗಡಿಗೆ ಕಳಿಸಿದ್ದು ಕೂಡ ಇಲ್ಲಿ ಉಗ್ರ ಚಟುವಟಿಕೆಗಳ ಹೆಚ್ಚಳಕ್ಕೆ ಕಾರಣ ಎನ್ನಲಾಗಿತ್ತು.
ಭದ್ರತಾ ಪಡೆಗಳನ್ನು ತಪ್ಪು ದಾರಿಗೆಳೆಯುವುದು, ಗುಪ್ತಚರ ಅಧಿಕಾರಿಗಳ ದಿಕ್ಕುತಪ್ಪಿಸುವುದು ಸೇರಿದಂತೆ ಉಗ್ರರ ಹಲವು ತಂತ್ರಗಾರಿಕೆ ಇದರ ಹಿಂದಿತ್ತು. ಕಾಶ್ಮೀರಕ್ಕೆ ಹೋಲಿಸಿದರೆ, ಜಮ್ಮುವಿನಲ್ಲಿ ಕಡಿಮೆ ಸೇನಾ ನಿಯೋಜನೆ ಇದ್ದದ್ದು ಕೂಡ ಅಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾಗಲು ಕಾರಣವಾಗಿತ್ತು. ಹಾಗಾಗಿ ಜಮ್ಮುವಿನ ಕಥುವಾ ಸೇರಿದಂತೆ ಅನೇಕ ಪ್ರದೇಶಗಳನ್ನೇ ಉಗ್ರರು ಟಾರ್ಗೆಟ್ ಮಾಡಿದ್ದರು. ಆದರೆ, 2019ರ ಬಳಿಕ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ನಡೆದಿರುವ ಭೀಕರ ದಾಳಿಯು, ಉಗ್ರರು ಮತ್ತೆ ಕಾಶ್ಮೀರದತ್ತ ದೃಷ್ಟಿ ನೆಟ್ಟಿರಬಹುದೇ ಎನ್ನುವ ಅನುಮಾನ ಮೂಡಿಸಿದೆ.
ಇದೇ ಏ.17ರಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸೀಮ್ ಮುನೀರ್ ದ್ವಿರಾಷ್ಟ್ರ ಸಿದ್ಧಾಂತದ ಬಗ್ಗೆ ಮಾತನಾಡುತ್ತಾ, ಹಿಂದೂ ಹಾಗೂ ಮುಸ್ಲಿಂ ಧರ್ಮಗಳು ಹೇಗೆ ಭಿನ್ನ ಎಂದು ವಿವರಿಸಿದ್ದರು. ಕಾಶ್ಮೀರ ಎಂದೆಂದಿಗೂ ಪಾಕಿಸ್ತಾನದ ʻಕಂಠನಾಳ’ ಎಂದಿದ್ದರು. ಆದರೀಗ ಅವರ ಈ ಮಾತುಗಳಿಗೂ ಪಹಲ್ಲಾಮ್ ದಾಳಿಗೂ ನಂಟು ಇದೆ ಎನ್ನಲಾಗುತ್ತಿದೆ. ಪಾಕಿಸ್ತಾನವು ಆಂತರಿಕ ಸಂಘರ್ಷ ಮತ್ತು ಆರ್ಥಿಕ ಕುಸಿತದಂತಹ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದೆ. ಅಲ್ಲಿನ ಜನರ ವಿಶ್ವಾಸ ಗಳಿಸುವ ಸಲುವಾಗಿ ಸೇನೆ ಮತ್ತು ರಾಜಕಾರಣಿಗಳು ಕಾಶ್ಮೀರ ವಿವಾದವನ್ನು ಜೀವಂತವಾಗಿಡಲು ಬಯಸುತ್ತಿದ್ದು, ಅದರ ಭಾಗವಾಗಿಯೇ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ ಎನ್ನುವುದು ತಜ್ಞರ ವಿಶ್ಲೇಷಣೆ.
ಯಾವ್ಯಾವ ಉಗ್ರ ಸಂಘಟನೆಗಳು ಸಕ್ರೀಯ?
ಜಮ್ಮುವಿನ ವಿಸ್ತಾರ ಪ್ರದೇಶವನ್ನು ಪಾಕ್ ಮೂಲದ ಉಗ್ರರು ಈ ಹಿಂದೆಯೂ ಭಯೋತ್ಪಾದನಾ ಕೃತ್ಯಗಳಿಗೆ ಬಳಸಿದ್ದಾರೆ. ಸುರಂಗಗಳ ಮೂಲಕ ಉಗ್ರರು ದೇಶಕ್ಕೆ ನುಸುಳುತ್ತಿದ್ದು, ಡ್ರೋನ್ ಮೂಲಕ ಶಸ್ತ್ರಾಸ್ತ್ರಗಳನ್ನೂ ಸರಬರಾಜು ಮಾಡಿಕೊಳ್ಳುತ್ತಿದ್ದರು. ಅಲ್ಲದೇ ದೇಶದ ಗಡಿ ಭಾಗದಲ್ಲಿ ಹಿಂಸಾಚಾರ ಹೆಚ್ಚಿಸಲು ನಿಗೂಢ ಹತ್ಯೆ ಮಾಡುತ್ತಿದ್ದರು. ಈಗಲೂ ಅನೇಕ ಭಯೋತ್ಪಾದಕ ಗುಂಪುಗಳು ಗಡಿಯಾಚೆಗೆ ಸಕ್ರೀಯವಾಗಿವೆ. ಅದರಲ್ಲಿ ಟಿಆರ್ಎಫ್ ಪ್ರಮುಖವಾಗಿದೆ, ಇದನ್ನ ಜೈಶ್-ಎ-ಮೊಹಮ್ಮದ್ನ ಪ್ರಾಕ್ಸಿ ಎಂದು ಕರೆಯಲಾಗುತ್ತದೆ. ಇದರ ಹೊರತಾಗಿ ಜಮ್ಮು ಮತ್ತು ಕಾಶ್ಮೀರ ಘಜ್ವಾನಿ ಫೋರ್ಸ್, ಕಾಶ್ಮೀರ ಟೈಗರ್ಸ್ ಮತ್ತು ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ ಉಗ್ರ ಸಂಘಟನೆಗಳು ಸಕ್ರೀಯವಾಗಿವೆ. ಇವು ಆರ್ಟಿಕಲ್ 370 ರದ್ದಾದ ಬಳಿಕ ಅಸ್ತಿತ್ವಕ್ಕೆ ಬಂದಿವೆ.
ಟಿಆರ್ಎಫ್ ಕೆಲಸ ಹೇಗೆ?
ಕಾಶ್ಮೀರದಲ್ಲಿ ಸಕ್ರೀಯವಾಗಿರುವ ʻದಿ ರೆಸಿಸ್ಟಂಟ್ ಫ್ರಂಟ್ʼ ಆಧುನಿಕ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವುದು ತಿಂಗಳಾನುಗಟ್ಟಲೆ ಕಠಿಣ ತರಬೇತಿ ನೀಡುವುದು, ಬಳಿಕ ಕಣಿವೆ ಪ್ರದೇಶಗಳಲ್ಲಿ ದಾಳಿ ನಡೆಸುವುದು ಇದರ ಕಾರ್ಯತಂತ್ರ. ಒಂದು ವೇಳೆ ದಾಳಿಕೋರರು ಭಾರತೀಯ ಸೇನೆಗೆ ಸಿಕ್ಕಿಬಿದ್ದರೆ ಆತ್ಮಾಹುತಿ ಬಾಂಬ್ ಸ್ಫೋಟಿಕೊಳ್ಳುವುದಕ್ಕೂ ತರಬೇತಿ ನೀಡಲಾಗುತ್ತದೆ. ಅದಕ್ಕಾಗಿ ಕಟ್ಟುಮಸ್ತಾದ ಯುವಕರ ತಲೆಗೆ ಮತಾಂಧತೆ ಚಿಂತನೆಗಳನ್ನ ತುಂಬುತ್ತಾರೆ. ಬ್ರೈನ್ ವಾಶ್ ಮಾಡಿ ತಮ್ಮ ಸಂಘಟನೆಗಳಿಗೆ ಸೇರಿಸಿಕೊಳ್ಳುತ್ತದೆ. ನಿರುದ್ಯೋಗಿಗಳು, ತೀರಾ ಬಡತನ ಕುಟುಂಬದ ಯುವಕರಿಗೆ ಹಣದ ಆಮಿಷ ತೋರಿಸಿ, ನೀನೊಂದು ನಿರ್ದಿಷ್ಟ ಗುರಿ ಸಾಧಿಸಲು ಈ ಭೂಮಿಮೇಲೆ ಹುಟ್ಟಿದ್ದೀಯಾ ಎಂದು ಬ್ರೈನ್ ವಾಶ್ ಮಾಡುವುದು, ಬಳಿಕ ಅವರಿಗೆ ತರಬೇತಿ ನೀಡಿ ಭಾರತದ ವಿರುದ್ಧವೇ ದಾಳಿಗೆ ನಿಯೋಜಿಸುವುದು ಟಿಆರ್ಎಫ್ನ ಕೆಲಸ. ಆದ್ರೆ ಇತ್ತೀಚಿನ ದಿನಗಳಲ್ಲಿ ಟಿಆರ್ಎಫ್ ಆಧುನಿಕ ಶಸ್ತ್ರಾಸ್ತ್ರಗಳನ್ನು ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿದ್ದು, ಭದ್ರತಾ ಪಡೆಗಳು ಹಾಗೂ ಸಾಮಾನ್ಯ ಜನರ ಮೇಲಿನ ದಾಳಿಗಾಗಿ ಬಸಳಸುತ್ತಿದೆ. ಇತ್ತೀಚಿನ ಪಹಲ್ಗಾಮ್ ದಾಳಿಗೂ ಸಹ ಎಕೆ-47 ಮತ್ತು M4 ರೈಫಲ್ಗಳನ್ನ ಬಳಸಲಾಗಿತ್ತು ಅನ್ನೋದು ಗಮನಾರ್ಹ.
ಹಣಕಾಸಿನ ನೆರವು ಹೇಗೆ?
ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಸಂಘಟನೆಗಳು ಜೈಶ್ ಎ ಮೊಹಮ್ಮದ್ನಿಂದ ಹಣಕಾಸಿನ ನೆರವನ್ನು ಪಡೆಯುತ್ತಿವೆ. ಜೊತೆಗೆ ಭಾರತದ ಮೇಲೆ ಯಾವ ಯಾವ ರೀತಿ ದಾಳಿಗಳನ್ನ ನಡೆಸಬೇಕು ಅನ್ನೋ ರೂಪುರೇಷೆಯೂ ಈ ಸಂಘಟನೆ ಸಿದ್ಧಮಾಡಿಕೊಡುತ್ತದೆ. ಹಿಂದೆಲ್ಲಾ ಗಡಿ ನಿಯಂತ್ರಣ ರೇಖೆ ದಾಟಿ ಬರುತ್ತಿದ್ದ ಉಗ್ರರು, ಗೆರಿಲ್ಲಾ ಯುದ್ಧ ತಂತ್ರಗಳನ್ನು ಬಳಸುತ್ತಿದ್ದರು, ದಾಳಿ ಮಾಡಿ ದಟ್ಟ ಕಾಡುಗಳಲ್ಲಿ ಕಣ್ಮರೆಯಾಗುತ್ತಿದ್ದರು. ಆದ್ರೆ ಉಗ್ರರು ಹೈಬ್ರಿಡ್ ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ಜೊತೆಗೆ ಚೀನಾ ನಿರ್ಮಿತ ಆಪ್ಗಳನ್ನ ಬಳಸಿಕೊಂಡು ದಾಳಿಯ ರೂಪುರೇಷೆಗಳನ್ನು ಚರ್ಚಿಸಲಾಗುತ್ತದೆ ಎನ್ನುವ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಆಪ್ಗಳ ಟ್ರ್ಯಾಕಿಂಗ್ ಮಾಡೋದು ಕಷ್ಟವಾಗಿರುವುದರಿಂದ ಭಾರತೀಯ ಸೇನೆಗೂ ಇದು ಸವಾಲಾಗಿದೆ.
ಭಾರತೀಯ ಸೇನೆಗೆ ಸವಾಲಾಗಿರುವುದು ಏಕೆ?
ಇತ್ತೀಚೆಗೆ ಜಮ್ಮುವಿನಲ್ಲಿ ನಡೆಯುತ್ತಿರುವ ಭಯೋತ್ಪಾದಕ ದಾಳಿಯಲ್ಲಿ ಸೈನಿಕರು ಉಗ್ರರನ್ನು ಮಟ್ಟಹಾಕಲು ಹರಸಾಹಸ ಪಡುತ್ತಿದ್ದಾರೆ, ಇದಕ್ಕೆ ಕಾರಣವೂ ಇದೆ. ಇತ್ತೀಚೆಗೆ ಈ ಸಂಘಟನೆಗಳು ಅತ್ಯುನ್ನತ ತರಬೇತಿ ಪಡೆದ ಭಯೋತ್ಪಾದಕರನ್ನ ಉಗ್ರ ಕೃತ್ಯಗಳಿಗೆ ನಿಯೋಜಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಪರ್ವತ ಪ್ರದೇಶಗಳಲ್ಲಿ ತರಬೇತಿ ಪಡೆದ ಉಗ್ರರನ್ನು ಇಲ್ಲಿಗೆ ಕಳಿಸಲಾಗುತ್ತಿದೆ. ಅಲ್ಲದೇ ಅಮೆರಿಕ ನಿರ್ಮಿತ ಎಂ4 ಅತ್ಯಾಧುನಿಕ ರೈಫಲ್ ಅನ್ನು ಕೃತ್ಯಕ್ಕೆ ಬಳಸುತ್ತಿದ್ದಾರೆ.
ಕೃತ್ಯದ ಮಾಸ್ಟರ್ ಮೈಂಡ್ ಯಾರು?
ಈ ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ. ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಆಗಿರುವ ಸೈಫುಲ್ಲಾ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಈ ಕೃತ್ಯದ ಮಾಸ್ಟರ್ ಮೈಂಡ್ ಆಗಿದ್ದಾನೆಂದು ತಿಳಿದುಬಂದಿದೆ. ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ (Mumbai Attack) ಸೂತ್ರಧಾರ ಹಫೀಜ್ ಸಯೀದ್ ಆಪ್ತ ವ್ಯಕ್ತಿಯಾಗಿದ್ದಾನೆ. ಯಾವಾಗಲೂ ಐಷಾರಾಮಿ ಕಾರುಗಳಲ್ಲಿ ಪ್ರಯಾಣಿಸುವ ಈತನಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದಿರುವ ಲಷ್ಕರ್ ಉಗ್ರರು ಭದ್ರತೆ ನೀಡುತ್ತಾರೆ.
ಯಾವಾಗಲೂ ಭಾರತದ ವಿರುದ್ಧವೇ ಕೆಲಸ ಮಾಡುವುದರಿಂದ ಸೇನಾ ಅಧಿಕಾರಿಗಳ (Pakistan Army) ಜೊತೆಗೂ ಈತ ಉತ್ತಮ ಸಂಬಂಧ ಹೊಂದಿದ್ದಾನೆ. ಎರಡು ತಿಂಗಳ ಹಿಂದೆ ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಪಂಜಾಬ್ನ ಕಂಗನ್ಪುರಕ್ಕೆ ಭೇಟಿ ನೀಡಿದ್ದ. ಕಂಗನ್ಪುರದಲ್ಲಿ ಪಾಕ್ ಸೇನೆಯ ದೊಡ್ಡ ಬೆಟಾಲಿಯನ್ ನೆಲೆಗೊಂಡಿದೆ. ಪಾಕಿಸ್ತಾನ ಸೇನೆಯ ಕರ್ನಲ್ ಜಾಹಿದ್ ಜರೀನ್ ಭಾರತದ ವಿರುದ್ಧ ಜಿಹಾದಿ ಭಾಷಣ ಮಾಡಲು ಈತನನ್ನು ಕರೆಸಿದ್ದ.ಭಾಷಣದಲ್ಲಿ ಪಾಕಿಸ್ತಾನ ಸೇನೆಯನ್ನು ಭಾರತದ ವಿರುದ್ಧದ ಕೃತ್ಯಕ್ಕೆ ಪ್ರಚೋದಿಸಿದ್ದ. ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಭಾರತದ ವಿರುದ್ಧ ವಿಷಕಾರಿದ್ದ. ಇಂದು ಫೆಬ್ರವರಿ 2, 2025. ಕಾಶ್ಮೀರವನ್ನು ವಶಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಮುಂಬರುವ ದಿನಗಳಲ್ಲಿ ನಮ್ಮ ಮುಜಾಹಿದ್ದೀನ್ ದಾಳಿ ತೀವ್ರಗೊಳ್ಳಲಿದೆ. ಫೆಬ್ರವರಿ 2, 2026 ರೊಳಗೆ ಕಾಶ್ಮೀರ ಸ್ವತಂತ್ರವಾಗಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಭರವಸೆ ನೀಡಿದ್ದ ಅನ್ನೋದು ಗಮನಾರ್ಹ.
– ಹಿಂದೂಗಳನ್ನ ಹುಡುಕಿ ಕೊಂದ್ರು ಅಂತ ಬಿಜೆಪಿ ರಾಜಕಾರಣ ಮಾಡ್ತಿದೆ ಎಂದು ಸಚಿವ ಅಸಮಾಧಾನ
ಬೆಳಗಾವಿ: ಪಹಲ್ಗಾಮ್ ದಾಳಿ (Pahalgam Terrorist Attack) ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಹಿಂದೂಗಳನ್ನ ಹುಡುಕಿ ಕೊಂದರು ಅಂತ ರಾಜಕಾರಣ ಮಾಡುತ್ತಿದೆ ಎಂದು ಸಚಿವ ಆರ್.ಬಿ ತಿಮ್ಮಾಪೂರ (RB Timmapur) ಹೇಳಿದ್ದಾರೆ.
ಬೆಳಗಾವಿಯಲ್ಲಿ ʻಪಬ್ಲಿಕ್ ಟಿವಿʼ (Public TV) ಜೊತೆಗೆ ಮಾತನಾಡಿದ ಅವರು, ಪ್ಯಾಂಟ್ ಬಿಚ್ಚಿಸಿದ್ರು ಅಂತ ಮೃತರ ಪತ್ನಿಯೇ ಹೇಳಿದ್ದಾರೆ, ಇದಕ್ಕೆ ನೀವೇನು ಹೇಳ್ತೀರಿ ಅನ್ನೋ ಪ್ರಶ್ನೆಗೆ ಉತ್ತರಿಸಿ, ಪ್ಯಾಂಟ್ ಬಿಚ್ಚಿಸಿದರು ಮತ್ತೊಂದು ಬಿಚ್ಚಿಸಿದರು ಎಂಬುದು ನನಗೆ ಗೊತ್ತಿಲ್ಲ. ಆದ್ರೆ ರಾಜಕಾರಣದಲ್ಲಿ ಧರ್ಮ ಬೆರೆಸದೇ ರಕ್ಷಣೆ ಕಡೆ ಗಮನ ಕೊಡಲಿ ಎಂದು ಹೇಳಿದರು. ಇದನ್ನೂ ಓದಿ: ಉಗ್ರರು ನಿಮ್ಮ ಚಡ್ಡಿ ಬಿಚ್ಚಿಸಿ ಚೆಕ್ ಮಾಡಿದ್ರೆ ಏನ್ ಮಾಡ್ತೀರಿ – ತಿಮ್ಮಾಪೂರ್ ವಿರುದ್ಧ ಸೂರ್ಯ ಆಕ್ರೋಶ
ಇಂತಹ ಕೃತ್ಯವನ್ನು ನಾವೆಲ್ಲರೂ ಖಂಡಿಸುತ್ತೇವೆ. ಅಂತಹವರ ಮೇಲೆ ತುರ್ತು ಕ್ರಮ ಕೈಗೊಳ್ಳಬೇಕು. ಉಗ್ರರು ಬಂದು ನನ್ನ ದೇಶದ ಪ್ರಜೆಯನ್ನ ಹೊಡೆದಾಗ ಕೆಲವರು ಧರ್ಮ ಕೇಳಿ ಮಾಡಿದ್ದಾರೆ ಅಂತ ಮಾಧ್ಯಮಗಳಲ್ಲಿ ಗಮನಿಸಿದೆ. ಇಂತಹ ಕೃತ್ಯಕ್ಕೆ ಸಪೋರ್ಟ್ ಮಾಡುವವರ ವಿರುದ್ಧವೂ ಕ್ರಮ ಆಗಬೇಕು. ಅವರನ್ನ ಸದೆಬಡಿಯುವ ಕಡೆ ಗಮನಕೊಡಬೇಕು. ಬೇಹುಗಾರಿಕೆ ಗಟ್ಟಿಗೊಳಿಸಿದ್ರೆ, ಈ ಸ್ಥಿತಿ ಬರುತ್ತಿರಲಿಲ್ಲ. ಯುದ್ಧಕ್ಕೆ ಹೊರಟಿದ್ದೀವಿ ಅನ್ನೋ ಮಾತೇ ಬರುತ್ತಿರಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: Pahalgam Terror Attack – ಮೃತ ಭರತ್ ಭೂಷಣ್ ಪತ್ನಿ ಹೇಳಿಕೆ ದಾಖಲಿಸಿಕೊಂಡ ಎನ್ಐಎ
ಶ್ರೀನಗರ: ಪಹಲ್ಗಾಮ್ನಲ್ಲಿ ರಕ್ತದೋಕುಳಿ ಹರಿಸಿದ (Pahalgam Terrorist Attack) ಉಗ್ರರ ಬಗ್ಗೆ ಮತ್ತಷ್ಟು ರೋಚಕ ಸಂಗತಿಗಳು ಹೊರಬೀಳುತ್ತಿವೆ. ಇದೀಗ ಶಸ್ತ್ರಸಜ್ಜಿತ ಉಗ್ರರು ದಾಳಿ ನಡೆಸುವುದಕ್ಕಾಗಿಯೇ AK-47 ಮತ್ತು M4 ರೈಫಲ್ಗಳನ್ನ ಹೊತ್ತು ದಟ್ಟ ಕಾಡುಗಳ ಮಧ್ಯೆ 22 ಗಂಟೆಗಳ ಕಾಲ ನಡೆದು ಪಹಲ್ಗಾಮ್ (Pahalgam) ತಲುಪಿದ್ದರು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.
ಆಧುನಿಕ ಶಸ್ತ್ರಾಸ್ತ್ರಗಳ ಬಳಕೆ
ಉಗ್ರ ಕೃತ್ಯಕ್ಕೆ ಭಯೋತ್ಪಾದಕರು ಆಧುನಿಕ AK-47 ಮತ್ತು M4 ಅಸಾಲ್ಟ್ ರೈಫಲ್ಗಳನ್ನು ಬಳಸಿದ್ದಾರೆ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ತಂಡ ದೃಢಪಡಿಸಿದೆ. ಜೊತೆಗೆ ಘಟನಾ ಸ್ಥಳದಲ್ಲಿ ಕಾಟ್ರಿಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಪಾಕ್ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಿದೆ: ಸಿದ್ದರಾಮಯ್ಯ
2 ಮೊಬೈಲ್ ಕಸಿದ ಉಗ್ರರು
ಇನ್ನೂ ದಾಳಿ ಸಂದರ್ಭದಲ್ಲಿ ರಕ್ತದೋಕುಳಿ ಹರಿಸಿದ ಉಗ್ರರು ಸ್ಥಳದಲ್ಲಿದ್ದ ಓರ್ವ ಪ್ರವಾಸಿಗರು ಹಾಗೂ ಸ್ಥಳೀಯ ನಿವಾಸಿಯೊಬ್ಬರ ಮೊಬೈಲ್ ಫೋನುಗಳನ್ನು ಕಸಿದುಕೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇನ್ನೂ ಈ ಉಗ್ರ ಕೃತ್ಯದಲ್ಲಿ ಮೂವರು ಪಾಕಿಸ್ತಾನಿಯರು ಹಾಗೂ ಓರ್ವ ಸ್ಥಳೀಯ ಭಾಗಿಯಾಗಿದ್ದಾನೆಂದು ತಿಳಿದುಬಂದಿದೆ. ಸ್ಥಳೀಯ ಭಯೋತ್ಪಾದಕನನ್ನು ಆದಿಲ್ ಥೋಕರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಪಟಾಕಿ ಸಿಡಿದರೂ, ಪಾಕಿಸ್ತಾನವನ್ನೇ ದೂಷಿಸುತ್ತಾರೆ: ಶಾಹಿದ್ ಅಫ್ರಿದಿ
ಮರದ ಮೇಲೆ ಕುಳಿತು ಇಡೀ ಕೃತ್ಯ ಸೆರೆ
ಸದ್ಯ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ಮಳೆಗರೆಯುತ್ತಿದ್ದಂತೆ ಭಯಕ್ಕೆ ಮರ ಏರಿದ್ದ ರೀಲ್ಸ್ ವಿಡಿಯೋ ಗ್ರಾಫರ್ ಇಡೀ ಕೃತ್ಯವನ್ನು ಮರದ ಮೇಲೆ ಕುಳಿತುಕೊಂಡೆ ಸೆರೆ ಹಿಡಿಯುತ್ತಿದ್ದರು. ಇದೀಗ ಎನ್ಐಎಗೆ ಆ ವಿಡಿಯೋ ಗ್ರಾಫರ್ (Reels Videographer) ಪ್ರಮುಖ ಸಾಕ್ಷಿಯಾಗಿದ್ದಾರೆ. ಲಭ್ಯವಾಗಿರುವ ವಿಡಿಯೋ ಪ್ರಕಾರ, ನಾಲ್ವರು ಉಗ್ರರು ಎರಡು ಗುಂಪುಗಳಾಗಿ ಬೇರ್ಪಟ್ಟಿದ್ದರು. ಇಬ್ಬರು ಹುಲ್ಲುಗಾವಲು ಪ್ರದೇಶದ ಎರಡೂ ಬದಿ ಅವಿತುಕೊಂಡಿದ್ದರೆ, ಮತ್ತಿಬ್ಬರು ಅಲ್ಲೇ ಇದ್ದ ತಿಂಡಿ ಅಂಗಡಿ ಬಳಿ ಅವಿತಿದ್ದರು. ಮಧ್ಯಾಹ್ನ 2.30ರ ಸುಮಾರಿಗೆ, ಅಂಗಡಿಗಳ ಹಿಂದೆ ಅಡಗಿಕೊಂಡಿದ್ದ ಇಬ್ಬರು ಭಯೋತ್ಪಾದಕರು ಹೊರಬಂದರು. ಆಗ ಅಲ್ಲಿ ತಿಂಡಿ ತಿನ್ನುತ್ತಿದ್ದ ಸ್ಥಳೀಯರಲ್ಲದವರನ್ನ ಧರ್ಮದ ಬಗ್ಗೆ ಕೇಳುತ್ತಾ ಬಂದವರು. ಕೆಲವರು ತಪ್ಪಿಸಿಕೊಳ್ಳು ತಾನು ಮುಸ್ಲಿಂ ಎಂದು ಹೇಳಿದಾಗ ಕಲಿಮಾ ಪಠಿಸಲು ಹೇಳಲಾಯಿತು. ಬಳಿಕ ಕಲಿಮಾ ಪಠಿಸಲು ಸಾಧ್ಯವಾಗದವರನ್ನ ಪಾಯಿಂಟ್ ಬ್ಲಾಕ್ನಲ್ಲಿ ಶೂಟ್ ಮಾಡುತ್ತಾ ಬಂದರು. ಗುಂಡು ಹಾರಿಸುತ್ತಿದ್ದಂತೆ ಇಡೀ ಪ್ರದೇಶದಲ್ಲಿ ಭೀತಿ ಉಂಟಾಗಿ ಕೆಲವರು ದಿಕ್ಕಾಪಾಲಾಗಿ ಓಡಿದರು. ಈ ಸಂದರ್ಭದಲ್ಲಿ ಹುಲ್ಲುಗಾವಲಿನ ಜಿಪ್ಲೈನ್ನಲ್ಲಿ ಅವಿತಿದ್ದವರೂ ಗುಂಡು ಹಾರಿಸಲು ಶುರು ಮಾಡಿದ್ರು. ಈ ಎಲ್ಲಾ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terrorist Attack) ಕುರಿತು ತನಿಖೆ ಶುರು ಮಾಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಪ್ರಮುಖ ಸಾಕ್ಷಿ ಸಿಕ್ಕಿದೆ. ದಾಳಿ ನಡೆಯುವ ವೇಳೆ ಬೈಸರನ್ನಲ್ಲಿ (Baisaran) ಪ್ರವಾಸಿಗರಿಗಾಗಿ ರೀಲ್ಸ್ ಚಿತ್ರೀಕರಿಸುತ್ತಿದ್ದ ಸ್ಥಳೀಯ ವಿಡಿಯೋ ಗ್ರಾಫರ್ ಪ್ರಮುಖ ಸಾಕ್ಷಿದಾರನಾಗಿ ಮುಂದೆ ಬಂದಿದ್ದಾರೆ ಎಂದು ವರದಿಗಳು ತಿಳಿಸಿವೆ.
ಹೌದು. ಕೇಂದ್ರ ಗೃಹಸಚಿವಾಲಯ ನೀಡಿದ ನಿರ್ದೇಶದ ಮೇರೆಗೆ ಏ.22ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಯನ್ನು ಎನ್ಐಎ ವಹಿಸಿಕೊಂಡಿದೆ. ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ತಂಡದೊಂದಿಗೆ ಘಟನಾ ಸ್ಥಳದಲ್ಲೇ ಬೀಡುಬಿಟ್ಟಿರುವ ಎನ್ಐಎ ಸಾಕ್ಷ್ಯ ಹುಡುಕಾಟವನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಮುಖ ಸಾಕ್ಷಿಯೊಂದು ಎನ್ಐಎಗೆ ಸಿಕ್ಕಿದೆ. ಇದನ್ನೂ ಓದಿ: ಭಾರತದಲ್ಲಿ ಪಟಾಕಿ ಸಿಡಿದರೂ, ಪಾಕಿಸ್ತಾನವನ್ನೇ ದೂಷಿಸುತ್ತಾರೆ: ಶಾಹಿದ್ ಅಫ್ರಿದಿ
ಮರದ ಮೇಲೆ ಕುಳಿತು ಇಡೀ ಕೃತ್ಯ ಸೆರೆ:
ಸದ್ಯ ಲಭ್ಯವಾಗಿರುವ ವಿಡಿಯೋ ಪ್ರಕಾರ, ನಾಲ್ವರು ಉಗ್ರರು ಎರಡು ಗುಂಪುಗಳಾಗಿ ಬೇರ್ಪಟ್ಟಿದ್ದರು. ಇಬ್ಬರು ಹುಲ್ಲುಗಾವಲು ಪ್ರದೇಶದ ಎರಡೂ ಬದಿ ಅವಿತುಕೊಂಡಿದ್ದರೆ, ಮತ್ತಿಬ್ಬರು ಅಲ್ಲೇ ಇದ್ದ ತಿಂಡಿ ಅಂಗಡಿ ಬಳಿ ಅವಿತಿದ್ದರು. ಮಧ್ಯಾಹ್ನ 2.30ರ ಸುಮಾರಿಗೆ, ಅಂಗಡಿಗಳ ಹಿಂದೆ ಅಡಗಿಕೊಂಡಿದ್ದ ಇಬ್ಬರು ಭಯೋತ್ಪಾದಕರು ಹೊರಬಂದರು. ಆಗ ಅಲ್ಲಿ ತಿಂಡಿ ತಿನ್ನುತ್ತಿದ್ದ ಸ್ಥಳೀಯರಲ್ಲದವರನ್ನ ಧರ್ಮದ ಬಗ್ಗೆ ಕೇಳುತ್ತಾ ಬಂದವರು. ಕೆಲವರು ತಪ್ಪಿಸಿಕೊಳ್ಳು ತಾನು ಮುಸ್ಲಿಂ ಎಂದು ಹೇಳಿದಾಗ ಕಲಿಮಾ ಪಠಿಸಲು ಹೇಳಲಾಯಿತು. ಬಳಿಕ ಕಲಿಮಾ ಪಠಿಸಲು ಸಾಧ್ಯವಾಗದವರನ್ನ ಪಾಯಿಂಟ್ ಬ್ಲಾಕ್ನಲ್ಲಿ ಶೂಟ್ ಮಾಡುತ್ತಾ ಬಂದರು. ಗುಂಡು ಹಾರಿಸುತ್ತಿದ್ದಂತೆ ಇಡೀ ಪ್ರದೇಶದಲ್ಲಿ ಭೀತಿ ಉಂಟಾಗಿ ಕೆಲವರು ದಿಕ್ಕಾಪಾಲಾಗಿ ಓಡಿದರು. ಈ ಸಂದರ್ಭದಲ್ಲಿ ಹುಲ್ಲುಗಾವಲಿನ ಜಿಪ್ಲೈನ್ನಲ್ಲಿ ಅವಿತಿದ್ದವರೂ ಗುಂಡು ಹಾರಿಸಲು ಶುರು ಮಾಡಿದ್ರು. ಈ ಎಲ್ಲಾ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಪ್ರತ್ಯಕ್ಷದರ್ಶಿಗಳ ವಿಚಾರಣೆ
ಸದ್ಯ ಸ್ಥಳದಲ್ಲಿ ಬೀಡುಬಿಟ್ಟಿರುವ ಎನ್ಐಎ ತಂಡ ಘಟನೆಯನ್ನು ಕಣ್ಣಾರೆ ಕಂಡ ಪ್ರತ್ಯಕ್ಷದರ್ಶಿಗಳ ವಿಚಾರಣೆ ನಡೆಸುತ್ತಿದೆ. ಜೊತೆಗೆ ಉಗ್ರರ ಕ್ರಿಯಾಯೋಜನೆಯ ಬಗ್ಗೆ ಸುಳಿವು ಪಡೆಯಲು ಎಂಟ್ರಿ, ಎಕ್ಸಿಟ್ ಸ್ಥಳಗಳನ್ನ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಶಿಫ್ಟ್ ಆಗೋದು ಒಳ್ಳೆದು: ಜಗದೀಶ್ ಶೆಟ್ಟರ್
ಮೂಲಗಳ ಪ್ರಕಾರ, ತನಿಖೆಗೆ ನಿಯೋಜಿಲ್ಪಟ್ಟ ಎನ್ಐಎ ತಂಡ ಈಗಾಗಲೇ ಪಹಲ್ಗಾಮ್ ತಲುಪಿದೆ, ದಾಳಿ ನಡೆದ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಜೊತೆಗೆ ತನಿಖಾ ಏಜೆನ್ಸಿಯ ವಿಧಿವಿಜ್ಞಾನ ಪ್ರಯೋಗಾಲಯ ತಂಡವು ಸ್ಥಳದಲ್ಲಿದ್ದು ಸಾಕ್ಷ್ಯಗಳನ್ನು ಸಂಗ್ರಹಿಸುವಲ್ಲಿ ನಿರತವಾಗಿದೆ. ಮತ್ತೊಂದೆಡೆ ಸ್ಥಳೀಯ ಪೊಲೀಸರಿಂದ ಪ್ರಕರಣದ ಡೈರಿ, ಎಫ್ಐಆರ್ ಮತ್ತು ಈ ವಿಷಯಕ್ಕೆ ಸಂಬಂಧಿಸಿದ ಇತರ ಪ್ರಮುಖ ದಾಖಲೆಗಳನ್ನ ಸುಪರ್ಧಿಗೆ ಪಡೆದುಕೊಳ್ಳಲು NIA ಮುಂದಾಗಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ಘೋಷಣೆ
ಉಗ್ರರ ದಾಳಿಗೆ 26 ಮಂದಿ ಬಲಿ
ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಜನಪ್ರಿಯ ಪ್ರವಾಸಿತಾಣ ಪಹಲ್ಗಾಮ್ನಲ್ಲಿ ಏ.22ರಂದು ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು, ವಿದೇಶಿಯರು ಸೇರಿ 26 ಮಂದಿ ಬಲಿಯಾಗಿದ್ದಾರೆ. 2019ರಲ್ಲಿ 40 ಮಂದಿ ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿಯ ಬಳಿಕ ಉಗ್ರರು ಕಣಿವೆಯಲ್ಲಿನಡೆಸಿದ ಭೀಕರ ದಾಳಿ ಇದಾಗಿದೆ. ಇದನ್ನೂ ಓದಿ: ಭಾರತದ ವಿರುದ್ಧ ಯುದ್ಧಕ್ಕೆ ಸಿದ್ಧ – ಬುಸುಗುಟ್ಟಿದ ಪಾಕ್ ಗೃಹ ಸಚಿವ