Tag: kashmir

  • ಜಮ್ಮು-ಕಾಶ್ಮೀರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

    ಜಮ್ಮು-ಕಾಶ್ಮೀರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu – Kashmir) ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಒಮರ್ ಅಬ್ದುಲ್ಲಾ (Omar Abdullah) ಪ್ರಮಾಣವಚನ ಸ್ವೀಕರಿಸಿದ್ದಾರೆ. ಹತ್ತು ವರ್ಷಗಳ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆಯಾಗಿದ್ದು, ಕೇಂದ್ರಾಡಳಿತ ಪ್ರದೇಶವಾಗಿ ಮಾರ್ಪಾಡದ ಬಳಿಕ ಆಯ್ಕೆಯಾದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.

    ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ಕೆಐಸಿಸಿ)ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಮಾಣವಚನ ಬೋಧಿಸಿದರು. ಒಮರ್ ಅಬ್ದುಲ್ಲಾ ಜೊತೆಗೆ ಶಾಸಕರಾದ ಸತೀಶ್ ಶರ್ಮಾ (ಸ್ವತಂತ್ರ), ಸಕಿನಾ ಇಟೂ, ಜಾವಿದ್ ದಾರ್, ಸುನ್ರಿಂದರ್ ಚೌಧರಿ ಮತ್ತು ಜಾವಿದ್ ರಾಣಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇದನ್ನೂ ಓದಿ: ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವು

    ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಸೇರಿ ಇಂಡಿಯಾ ಒಕ್ಕೂಟದ ಪ್ರಮುಖ ನಾಯಕರು ಭಾಗಿಯಾಗಿದ್ದರು. ಇದನ್ನೂ ಓದಿ: ಎಷ್ಟೇ ಮಳೆ ಬಂದರೂ ಅರ್ಧಗಂಟೆಯಲ್ಲಿ ಸರಿ ಮಾಡ್ತೀವಿ – ಡಿಕೆಶಿ

    ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ (Congress), ಎನ್‌ಸಿ ಸರ್ಕಾರವನ್ನು ಸೇರದೇ ಬಾಹ್ಯ ಬೆಂಬಲವನ್ನು ನೀಡಿದೆ. ಈ ಬಗ್ಗೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ, ಜಮ್ಮು ಕಾಶ್ಮೀರಕ್ಕೆ ರಾಜ್ಯತ್ವ ಮರುಸ್ಥಾಪನೆವರೆಗೂ ನಾವು ಸರ್ಕಾರದ ಭಾಗವಾಗುತ್ತಿಲ್ಲ, ನಾವು ಅತೃಪ್ತಗೊಂಡಿದ್ದೇವೆ. ನಾವು ಯಾವುದೇ ಸಚಿವ ಸ್ಥಾನ ಪಡೆಯುತ್ತಿಲ್ಲ, ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಒಮರ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯವನ್ನು ತಾರಿಕ್ ಹಮೀದ್ ಕರ್ರಾ ಇದೇ ವೇಳೆ ತಳ್ಳಿಹಾಕಿದರು. ಇದನ್ನೂ ಓದಿ: ವಿರೋಧ ಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿಕೆಶಿ

    ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು 90 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದಿದೆ. ನ್ಯಾಷನಲ್ ಕಾನ್ಫರೆನ್ಸ್ 42 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು ಮತ್ತು ಕಾಂಗ್ರೆಸ್ 6 ಸ್ಥಾನಗಳನ್ನು ಪಡೆದುಕೊಂಡಿದೆ. ಇದನ್ನೂ ಓದಿ: 14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ- ಮೂವರು ಸಾವು

  • ಜಮ್ಮು-ಕಾಶ್ಮೀರದಲ್ಲಿ ಭೂ ಕುಸಿತ; ಇಬ್ಬರು ವೈಷ್ಣೋದೇವಿ ಯಾತ್ರಿಕರ ಸಾವು

    ಜಮ್ಮು-ಕಾಶ್ಮೀರದಲ್ಲಿ ಭೂ ಕುಸಿತ; ಇಬ್ಬರು ವೈಷ್ಣೋದೇವಿ ಯಾತ್ರಿಕರ ಸಾವು

    ಕತ್ರಾ/ಜಮ್ಮು: ಜಮ್ಮು (Jammu) ಮತ್ತು ಕಾಶ್ಮೀರದಲ್ಲಿ (Kashmir) ಭೂಕುಸಿತ ಸಂಭವಿಸಿದ್ದು, ಇಬ್ಬರು ವೈಷ್ಣೋದೇವಿ (Vaishnodevi) ಯಾತ್ರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಇಲ್ಲಿನ ರಿಯಾಸಿ (Reasi) ಜಿಲ್ಲೆಯ ವೈಷ್ಣೋದೇವಿ ದೇಗುಲದ ಹೊಸ ಟ್ರ್ಯಾಕ್‌ ನಲ್ಲಿ ಈ ಘಟನೆ ಸಂಭವಿಸಿದ್ದು, ಇಬ್ಬರು ಯಾತ್ರಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

    ಭವನದಿಂದ ಮೂರು ಕಿಮೀ ದೂರದಲ್ಲಿ ಮಧ್ಯಾಹ್ನ 2:30 ಸುಮಾರಿಗೆ ಭೂಕುಸಿತ ಸಂಭವಿಸಿದ್ದು, ಓವರ್‌ಹೆಡ್ ಟ್ಯಾಂಕ್‌ನ ಕಬ್ಬಿಣದ ರಚನೆಯ ಒಂದು ಭಾಗ ಹಾನಿಯಾಗಿದ್ದು, ಅದರ ಕೆಳಗೆ ಯಾತ್ರಿಕರು ಸಿಲುಕಿಕೊಂಡಿದ್ದರು ಎಂದು ಹೇಳಿದರು.

    ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಓರ್ವ ಬಾಲಕಿಗೆ ತೀವ್ರ ಗಾಯಗಳಾಗಿವೆ ಎಂದು ರಿಯಾಸಿಯ ಉಪ ಆಯುಕ್ತ ವಿಶೇಷ್ ಪೌಲ್ ಮಹಾಜನ್ ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: MUDA Scam | ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ರಿಲೀಫ್ –‌ ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ!

    ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ನಾಗರೀಕ ಆಡಳಿತ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಟ್ರ್ಯಾಕಿನಿಂದ ಯಾತ್ರಿಕರ ಯಾತ್ರೆ ಸ್ಥಗಿತಗೊಳಿಸಿದ ಕೂಡಲೇ ರಕ್ಷಣಾ ಕಾರ್ಯ ಪ್ರಾರಂಭಿಸಲಾಗಿದೆ. ಘಟನೆಯ ಬಗ್ಗೆ ಸದ್ಯದಲ್ಲೇ ಹೆಚ್ಚಿನ ವಿವರಗಳನ್ನು ತಿಳಿಸುತ್ತೇವೆ ಎಂದು ಹೇಳಿದ್ದಾರೆ.

    2022ರ ಹೊಸ ವರ್ಷದಲ್ಲಿ ಇದೇ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ 12 ಮಂದಿ ಸಾವನ್ನಪ್ಪಿದ್ದು 16 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು

  • ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ

    ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ

    – ದಾಲ್ ಸರೋವರ, ಶ್ರೀ ಶಂಕರಾಚಾರ್ಯ ದೇಗುಲಕ್ಕೆ ಭೇಟಿ

    ಶ್ರೀನಗರ: ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (H.D.Deve Gowda) ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು.

    ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ, ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೈಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು. ಇದನ್ನೂ ಓದಿ: ರೇಪ್ ಹೇಗಾಗುತ್ತೆ ಎಂದು ಕಂಗನಾಗೆ ಕೇಳಿ, ಆಕೆಗೆ ರೇಪ್ ಅನುಭವ ಇದೆ: ಪಂಜಾಬ್ ಮಾಜಿ ಸಂಸದನ ವಿವಾದಿತ ಹೇಳಿಕೆ

    ಬಾರಾಮುಲ್ಲಾದಿಂದ ಉರಿಗೆ ತೆರಳಿದ ಅವರು, ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್ ಉತ್ಪಾದನಾ ಘಟಕ (National Hydroelectric Power Corporation Private Limited- NHPC) ಕ್ಕೆ ಭೇಟಿ ಕೊಟ್ಟರು. 480 ಮೆಗಾವ್ಯಾಟ್ ಸಾಮರ್ಥ್ಯದ ಈ ವಿದ್ಯುತ್ ಘಟಕವೂ ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು. ಈ ವಿದ್ಯುತ್ ಉತ್ಪಾದನಾ ಘಟಕವೂ ಉರಿಯ ಝಿಲಂ ನದಿ ದಂಡೆಯಲ್ಲಿ, ಭಾರತ – ಪಾಕಿಸ್ತಾನದ ನಡುವಿನ ನಿಯಂತ್ರಣ ರೇಖೆಗೆ (LOC) ಅತಿ ಸಮೀಪದಲ್ಲಿದೆ.

    ವಿದ್ಯುತ್ ಸ್ಥಾವರದ ಉದ್ದಗಲಕ್ಕೂ ತೆರಳಿದ ಮಾಜಿ ಪ್ರಧಾನಿಗಳು, ತಾವು ಘಟಕಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಸ್ಮರಣೆ ಮಾಡಿಕೊಂಡರಲ್ಲದೆ, ಅಲ್ಲಿನ ಸಿಬ್ಬಂದಿ, ಅಧಿಕಾರಿಗಳ ಜತೆ ಅಂದಿನ ಸಂದರ್ಭವನ್ನು ಸೇನೆಯ ಎಚ್ಚರಿಕೆಯನ್ನು ಲೆಕ್ಕಿಸದೆ ಘಟಕದ ಸುರಂಗಕ್ಕೆ ಭೇಟಿ ಕೊಟ್ಟಿದ್ದನ್ನು ನೆನಪು ಮಾಡಿಕೊಂಡರು. ಇದನ್ನೂ ಓದಿ: ಬಿಜೆಪಿಯವರ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ: ಡಿಕೆಶಿ

    ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು, ನಾನು ಪ್ರಧಾನಿ ಸ್ಥಾನದಿಂದ ಕೆಳಗಿಳಿದ 28 ವರ್ಷಗಳ ನಂತರ ನಾನು ಕಾಶ್ಮೀರಕ್ಕೆ ಭೇಟಿ ನೀಡಿದ್ದೇನೆ. ಅಂದಿನ ಕಾಶ್ಮೀರಕ್ಕೂ ಇಂದಿನ ಕಾಶ್ಮೀರಕ್ಕೂ ಬಹಳಷ್ಟು ವ್ಯತ್ಯಾಸ ಕಾಣುತ್ತಿದೆ. ನಾನು ಪ್ರಧಾನಿ ಆಗಿದ್ದಾಗ 13 ಫೆಬ್ರವರಿ 1997ರಂದು ಈ ಘಟಕವನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದೆ. ನಿರ್ಮಾಣ ಹಂತದಲ್ಲಿದ್ದ ಈ ಘಟಕಕ್ಕೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆ. ಆ ಭೇಟಿಗಳು ನನ್ನ ಪಾಲಿಗೆ ರೋಚಕ ಅನುಭವ ಎಂದು ಹೇಳಬಹುದು. ಈ ವಿದ್ಯುತ್ ಘಟಕಕ್ಕೆ ಭೇಟಿ ನೀಡಿದ್ದು ಬಹಳ ಸಂತೋಷ ಉಂಟು ಮಾಡಿದೆ ಎಂದು ಹೇಳಿದರು.

    ಇದೇ ವೇಳೆ ಮಾಜಿ ಪ್ರಧಾನಿಗಳು ಈ ವಿದ್ಯುತ್ ಘಟಕದ ಉದ್ಘಾಟನಾ ಫಲಕದ ಮುಂದೆ ನಿಂತು ಬಹಳ ಸಂತೋಷದಿಂದ ಫೋಟೋ ತೆಗೆಸಿಕೊಂಡರು. ಅಂದಿನ ಕಾರ್ಯಕ್ರಮದ ಕ್ಷಣಗಳನ್ನು ಅಧಿಕಾರಿಗಳ ಜತೆ ಹಂಚಿಕೊಂಡರು. ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಮನಸೋತರು.

    ರೈಲು ಪ್ರಯಾಣದ ಬಗ್ಗೆ ಸಂತಸ:
    ಶ್ರೀನಗರ – ಬಾರಮುಲ್ಲಾ ನಡುವಿನ ರೈಲು ಪ್ರಯಾಣದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ತಾವು ಪ್ರಧಾನಿಯಾಗಿದ್ದಾಗ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಈ ರೈಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ ಸಂದರ್ಭವನ್ನು ಮೆಲುಕು ಹಾಕಿದರು. ಇದನ್ನೂ ಓದಿ: Kolkata Horror | ಕಿರಿಯ ವೈದ್ಯರಿಗೆ ನಾನು ಎಂದಿಗೂ ಬೆದರಿಕೆ ಹಾಕಿಲ್ಲ: ಮಮತಾ ಬ್ಯಾನರ್ಜಿ

    1996, 1997ರ ಸಂದರ್ಭದಲ್ಲಿ ಕಾಶ್ಮೀರದ ಜನರು ಸಂಪರ್ಕ ಜಾಲದಿಂದ ವಂಚಿತರಾಗಿದ್ದರು. ಭಯೋತ್ಪಾದಕ ಚಟುವಟಿಕೆಗಳಿಂದ ಜರ್ಜರಿತರಾಗಿದ್ದರು. ಆ ಸಂದರ್ಭದಲ್ಲಿ ಬಾರಾಮುಲ್ಲಾ ಮತ್ತು ಶ್ರೀನಗರ ನಡುವೆ ರೈಲ್ವೆ ಮಾರ್ಗ ನಿರ್ಮಿಸುವ ಯೋಜನೆಗೆ ನಾನು ಮಂಜೂರಾತಿ ಕೊಟ್ಟೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದೆ. ಇವತ್ತು ಅದೇ ರೈಲು ಮಾರ್ಗದ ರೈಲಿನಲ್ಲಿ ಪ್ರಯಾಣ ಮಾಡಿದ್ದು ನನಗೆ ಮರೆಯಲಾಗದ ಅವಿಸ್ಮರಣೀಯ ಕ್ಷಣ ಎಂದು ಭಾವುಕರಾದರು.

    ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳನ್ನು ರೈಲ್ವೆ ಅಧಿಕಾರಿಗಳು ಆತ್ಮೀಯವಾಗಿ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ರೈಲ್ವೆ ಮಾರ್ಗದ ಬಗ್ಗೆ, ಜತೆಗೆ ಆಗುತ್ತಿರುವ ಉಪಯೋಗದ ಬಗ್ಗೆ ಮಾಜಿ ಪ್ರಧಾನಿಗಳು ಮಾಹಿತಿ ಪಡೆದುಕೊಂಡರು. ಬೆಳಗ್ಗೆ 11:30ಕ್ಕೆ ಶ್ರೀನಗರದಲ್ಲಿ ರೈಲು ಹಿಡಿದ ಮಾಜಿ ಪ್ರಧಾನಿಗಳು, 12:30 ಗಂಟೆಗೆ ಬಾರಮುಲ್ಲಾ ತಲುಪಿದರು.

    ತಾವು ಪ್ರಧಾನಿಯಾಗಿದ್ದಾಗ ಕಾಶ್ಮೀರದ ರೈತರಿಗಾಗಿ ಒಟ್ಟು 200 ಕೋಟಿ ರೂ. ಸಾಲ ಮನ್ನಾ ಮಾಡಿದೆ. ಕಣಿವೆ ರಾಜ್ಯದ ಪ್ರತಿ ರೈತರ 50,000 ರೂ. ಸಾಲ ಮನ್ನಾ ಮಾಡಲಾಯಿತು. ಅಂದು ಪ್ರಧಾನಿಯಾಗಿ ರೈತರನ್ನು ಭೇಟಿಯಾಗಿ ಅವರ ಸಂಕಷ್ಟವನ್ನು ಆಲಿಸಿದ್ದೆ. ಅವರಿಗೆ ನೆರವಾಗುವ ಉದ್ದೇಶದಿಂದ ಸಾಲ ಮನ್ನಾ ಮಾಡಲಾಯಿತು ಎಂದು ಮಾಜಿ ಪ್ರಧಾನಿಗಳು ಸುದ್ದಿಗಾರರ ಜತೆ ಮಾತಾಡುತ್ತಾ ಹೇಳಿದರು. ಇಂದು ಮಾಜಿ ಪ್ರಧಾನಿಗಳು ಶ್ರೀನಗರದ ದಾಲ್ ಸರೋವರ ಹಾಗೂ ಶ್ರೀ ಶಂಕರಾಚಾರ್ಯ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.

  • ದೇಶದ ಅತ್ಯದ್ಭುತ ʻನಾಗʼತಾಣಗಳ ಬಗ್ಗೆ ನಿಮಗೆ ಗೊತ್ತೇ? ಇಲ್ಲಿ ನಂಬಿಕೆ ಸುಳ್ಳಾಗಿಲ್ಲ ಅಂತಾರೆ ಭಕ್ತರು!

    ದೇಶದ ಅತ್ಯದ್ಭುತ ʻನಾಗʼತಾಣಗಳ ಬಗ್ಗೆ ನಿಮಗೆ ಗೊತ್ತೇ? ಇಲ್ಲಿ ನಂಬಿಕೆ ಸುಳ್ಳಾಗಿಲ್ಲ ಅಂತಾರೆ ಭಕ್ತರು!

    ಶ್ರಾವಣ ಮಾಸದ ಶುಕ್ಲಪಕ್ಷದ 5ನೇ ಇಡೀ ಭಾರತದಾದ್ಯಂತ ನಾನಾ ಕಡೆ ನಾನಾ ರೀತಿಯಲ್ಲಿ ನಾಗರ ಪಂಚಮಿಯ (Naga Panchami) ಮನೆ ಮಾಡಿರುತ್ತದೆ. ಈ ದಿನ ಮನೆಮಂದಿ ಮುಂಜಾನೆ ನಾಗನ ಗುಡಿಗೆ ಹೋಗಿ ನಾಗದೇವತೆಗೆ ಪೂಜೆ ಸಲ್ಲಿಸುತ್ತಾರೆ, ನಾಗದೇವರ ಕಲ್ಲಿಗೆ ಹಾಲೆರೆಯುತ್ತಾರೆ. ನಾಗಪೂಜೆಯ ದಿನ ಅನಂತ, ವಾಸುಕಿ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಎಂಬ ಒಂಬತ್ತು ನಾಗದೇವತೆಗಳನ್ನು ಆರಾಧಿಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಆಚರಣೆ ಸಂಭ್ರಮದಿಂದಲೇ ಕೂಡಿರುತ್ತದೆ. ಬೆಳ್ಳಂ ಬೆಳಗ್ಗೆ ಜನ ಹುತ್ತಕ್ಕೆ ತನಿ ಎರೆಯುವ ಮೂಲಕ ಆಚರಣೆ ಮಾಡುತ್ತಾರೆ.

    ಹೌದು. ಭಾರತೀಯ ಪುರಾಣಗಳಲ್ಲಿ ನಾಗಗಳಿಗೆ ದೈವಿಕ ಸ್ಥಾನ ಇದೆ. ಬ್ರಹ್ಮನ ಮಗ ಕಶ್ಯಪ ದಕ್ಷ ಪ್ರಜಾಪತಿಯ ಹದಿನಾರು ಹೆಣ್ಣು ಮಕ್ಕಳನ್ನು ಮದುವೆಯಾಗಿದ್ದ. ಇವರಲ್ಲಿ ಅದಿತಿಯ ಮಕ್ಕಳು ದೇವತೆಗಳು, ದಿತಿಯ ಮಕ್ಕಳು ದೈತ್ಯರು ಮತ್ತು ಕದ್ರುವಿಗೆ ಜನಿಸಿದ್ದ ಸಾವಿರ ಮಕ್ಕಳು ನಾಗಗಳು. ಹೀಗಾಗಿ ನಾಗಗಳು ದೇವತೆಗಳ ಸಂಬಂಧಿಗಳಾಗಿದ್ದಾರೆ ಎಂದು ಜನರ ನಂಬಿಕೆ. ಪುರಾಣಗಳ ಪ್ರಕಾರ, ನಾಗಕುಲದವರು ಪಾತಾಳ ಲೋಕವನ್ನು ಆಳುತ್ತಿದ್ದರು. ಶೇಷ, ತಕ್ಷಕ, ವಾಸುಕಿ, ಅನಂತ, ಪದ್ಮ, ಕಂಬಲ, ಕಾರ್ಕೋಟ, ಅಶ್ವತ್ಥ, ಧೃತರಾಷ್ಟ್ರ, ಶಂಖಪಾಲ, ಕಾಲಿಯಾ, ಪಿಂಗಳ ಎಂಬ 12 ನಾಗಗಳ ಉಲ್ಲೇಖ ಪುರಾಣಗಳಲ್ಲಿ ಬರುತ್ತದೆ. ಮಹಾಭಾರತದ ಪ್ರಕಾರ ರಾಜ ಪರೀಕ್ಷಿತನನ್ನು ನಾಗರಾಜ ತಕ್ಷಕ ಕಚ್ಚಿ ಕೊಂದಿದ್ದ. ಇದಕ್ಕೆ ಪ್ರತಿಕಾರವಾಗಿ ಪರೀಕ್ಷಿತನ ಮಗ ಜನಮೇಜಯ ಸರ್ಪಗಳ ಸಂತಾನವನ್ನೇ ನಿರ್ಮೂಲ ಮಾಡಲು ಮಹಾ ಸರ್ಪಯಜ್ಞವನ್ನೇ ನಡೆಸಿದ್ದ. ನಾಗಕುಲವೇ ನಾಶವಾಗುತ್ತದೆ ಎನ್ನುವಾಗ ಆಸ್ತಿಕ ಎಂಬ ಋಷಿ ಯಾಗಶಾಲೆಗೆ ಬಂದು ಈ ಯಜ್ಞವನ್ನು ತಡೆದಿದ್ದ. ಆಸ್ತಿಕ ನಾಗಯಜ್ಞ ನಿಲ್ಲಿಸಿದ ದಿನವನ್ನೇ ನಾಗರ ಪಂಚಮಿಯಾಗಿ ಆಚರಿಸಲಾಗುತ್ತದೆ ಎಂದು ಪ್ರತೀತಿ.

    ಅದಕ್ಕಾಗಿಯೇ ಈ ದಿನ ಭಾರತದಂತಹ ದೇಶದಲ್ಲಿ ಹಳ್ಳಿ ಹಳ್ಳಿಗಳಲ್ಲೂ ನಾಗರ ಕಲ್ಲುಗಳು, ನಾಗದೇವರ ಗುಡಿಗಳು, ಶಿವ ಮತ್ತು ವಿಷ್ಣುವಿನ ದೇವಾಲಗಳಲ್ಲೂ ನಾಗದೇವರಿಗಾಗಿ ಗುಡಿಗಳು ಕಾಣುತ್ತೇವೆ. ಅಲ್ಲದೇ ಕೆಲ ದೇವಾಲಯಗಳಲ್ಲಿ ಕಾಲಸರ್ಪ ಬಾಧೆ, ಸರ್ಪದೋಷ ಪರಿಹಾರಕ್ಕಾಗಿ ಪೂಜಾ ವಿಧಿವಿಧಾನಗಳನ್ನೂ ನೆರವೇರಿಸಲಾಗುತ್ತದೆ. ಕರ್ನಾಟಕದಲ್ಲಿ ನಾಗದೈವಾರಾಧನೆ ಹೆಚ್ಚಾಗಿಯೇ ಇದೆ. ಇನ್ನೂ ಕರ್ನಾಟಕ ಹೊರತುಪಡಿಸಿ ನೋಡುವುದಾದರೇ ದೇಶದ ವಿವಿಧ ಭಾಗಗಳಲ್ಲಿ ಜನರಿಂದ ಅಗಾಧ ನಂಬಿಕೆ ಗಳಿಸಿರುವ ದೇವಾಲಯಗಳು ಇವೆ. ಅವುಗಳ ವಿಶೇಷತೆ ಏನೆಂದು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ.

    ಕಾಶ್ಮೀರದ ಶೇಷನಾಗ ದೇವಾಲಯ
    ಕಾಶ್ಮೀರದಲ್ಲಿ ಹಿಂದಿನ ಕಾಲದಲ್ಲಿ 700ಕ್ಕೂ ಹೆಚ್ಚು ನಾಗಾರಾಧನೆಯ ಕೇಂದ್ರಗಳಿದ್ದವು. ಇಂದಿಗೂ ಸಹ ಇಲ್ಲಿನ ಮನ್ಸಾರ್ ಸರೋವರದ ಪರಿಸರದಲ್ಲಿ ಶೇಷನಾಗಿಗಳು ಎಂಬ ಅಲೆಮಾರಿ ಜನರಿದ್ದಾರೆ. ಇವರು ನಾಗಪೂಜಕರು, ಮನ್ಸಾರ್ ಸರೋವರದ ಪೂರ್ವ ತೀರದ ಸಮೀಪದಲ್ಲಿ ಒಂದು ಸುಪ್ರಸಿದ್ಧ ಶೇಷನಾಗ ದೇವಾಲಯ (Sheshnag Temple) ಇದೆ. ಈ ದೇವಾಲಯ 5 ಶತಮಾನಗಳಷ್ಟು ಪುರಾತನ ಎಂದು ಇಲ್ಲಿನ ಜನ ಹೇಳುತ್ತಾರೆ.

    ಈ ದೇವಾಲಯ ನೆಲದಿಂದ ಸುಮಾರು 200 ಅಡಿ ಎತ್ತರದಲ್ಲಿದೆ. ಈ ದೇವಾಲಯದಲ್ಲಿ 6 ತಲೆಗಳ ಶೇಷನಾಗನ ವಿಗ್ರಹ ಇದೆ. ಇವನ ಸುತ್ತ ಹಲವಾರು ಚಿಕ್ಕ ನಾಗಗಳಿವೆ. ವಧು-ವರರು ಇಲ್ಲಿ ಪೂಜೆ ಸಲ್ಲಿಸಿದರೇ ಅವರಿಗೆ ನಾಗರಾಜನ ಆಶೀರ್ವಾದ ಸಿಗುತ್ತದೆ, ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ ಎಂದು ಇಲ್ಲಿನವರ ನಂಬಿಕೆ. ಹೀಗಾಗಿ ಕಾಶ್ಮೀರದ ದೂರ ದೂರದ ಭಾಗಗಳಿಂದ ನವವಿವಾಹಿತರು ಶೇಷನಾಗನ ದರ್ಶನಕ್ಕಾಗಿ ಇಲ್ಲಿಗೆ ಬರುತ್ತಾರೆ.

    ಈ ಸ್ಥಳದ ಇತಿಹಾಸದ ಪ್ರಕಾರ ಮನ್ಸಾರ್ ಸರೋವರವನ್ನು ನಾಗದೇವ ಶೇಷನಾಗ ಸ್ವತಃ ನಿರ್ಮಿಸಿದ್ದ. ವಿಶಾಲ ಮನ್ಸಾರ್ ಕೆರೆಯ ನಡುವೆ ಹಲವಾರು ದ್ವೀಪಗಳಿವೆ. ಇವುಗಳಲ್ಲಿ ಶೇಷನಾಗ ದ್ವೀಪವೂ ಒಂದಾಗಿದೆ. ಪ್ರವಾಸಿಗಳು ಇಲ್ಲಿಗೆ ದೋಣಿಗಳಲ್ಲಿ ಹೋಗಬಹುದು. ಈ ದ್ವೀಪದಲ್ಲಿ 14ನೇ ಶತಮಾನದ ಶೇಷನಾಗದೇವಿಯ ದೇವಾಲಯ ಇದೆ. ಜಮ್ಮು ವಿಮಾನ ನಿಲ್ದಾಣದಿಂದ ಮನ್ಸಾರ್ ಕೆರೆಗೆ 69 ಕಿಮೀ ದೂರವಿದ್ದು, ಉಧಮ್‌ಪುರದಿಂದ 25 ಕಿಮೀ ದೂರ. ಸಾಂಬಾ ಪಟ್ಟಣದಿಂದ ಇಲ್ಲಿಗೆ ನಡೆದುಕೊಂಡು ಹೋಗಬಹುದು.

    ಉಜ್ಜಯಿನಿ ನಾಗಚಂದ್ರೇಶ್ವರ ದೇವಾಲಯ
    ಉಜ್ಜಯಿನಿ ಬಾಬಾ ಮಹಾಕಾಲೇಶ್ವರನ ಪವಿತ್ರ ಸ್ಥಾನ. ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಪ್ರಧಾನಕ್ಷೇತ್ರ ಇದು. ಇಲ್ಲಿರುವ ಮಹಾಕಾಲ ಶಿವಲಿಂಗವನ್ನು ಸ್ವಯಂಭು ಎಂದು ಕರೆಯಲಾಗುತ್ತದೆ. ಉಜ್ಜಯಿನಿಯ ಭವ್ಯ ಮಹಾಕಾಲೇಶ್ವರ ದೇವಾಲಯವನ್ನು ಪರ್ಮಾರ್ ಮನೆತನದ ರಾಜಾ ಭೋಜ 1050ರ ಸುಮಾರಿಗೆ ನಿರ್ಮಿಸಿದ್ದ. ಈ ದೇವಾಲಯದಲ್ಲಿ ಐದು ಅಂತಸ್ತುಗಳಿವೆ. ಎಲ್ಲಕ್ಕಿಂತ ಕೆಳಗೆ ನೆಲಮಾಳಿಗೆ. ಅದರ ಮೇಲಿನ ಅಂತಸ್ತಿನಲ್ಲಿ ಮಹಾಕಾಲೇಶ್ವರ ಲಿಂಗ. ಮಧ್ಯದ ಅಂತಸ್ತಿನಲ್ಲಿರುವುದು ಓಂಕಾರೇಶ್ವರ. 3ನೇ ಮಾಳಿಗೆಯಲ್ಲಿ ನಾಗಚಂದ್ರೇಶ್ವರ (Nagchandreshwar Mandir) ಲಿಂಗವಿದೆ. ಇಲ್ಲಿ 10 ತಲೆಯ ನಾಗನ ಮೇಲೆ ಕುಳಿತಿರುವ ಶಿವನ ವಿಗ್ರಹ ಇದೆ.

    ನಾಗನ ಮೇಲೆ ವಿಷ್ಣುವಿನ ಬದಲು ಶಿವನನ್ನು ತೋರಿಸುವ ಏಕಮಾತ್ರ ದೇವಾಲಯ ಇದು. ಈ ಏಕಶಿಲಾ ಮೂರ್ತಿಯಲ್ಲಿ ಶಿವ, ಪಾರ್ವತಿ ಗಣೇಶ, ಭೈರವ ಮತ್ತು ನಂದಿಯನ್ನೂ ಕಾಣಬಹುದು. ಈ ವಿಗ್ರಹವನ್ನು ಶತಮಾನಗಳ ಹಿಂದೆ ನೇಪಾಳದಿಂದ ತರಲಾಗಿತ್ತು ಎನ್ನುತ್ತದೆ ಪುರಾಣ. ದೇವಾಲಯದ ಬಾಗಿಲನ್ನು ವರ್ಷಕ್ಕೆ ಒಮ್ಮೆ ನಾಗರ ಪಂಚಮಿಯ ದಿನ ಮಾತ್ರ ತೆರೆಯಲಾಗುತ್ತದೆ. ಆ ದಿನ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ನಾಗಚಂದ್ರೇಶ್ವರ ದೇವಾಲಯದಲ್ಲಿ ಸರ್ಪಶಯನ ಶಿವನನ್ನು ಆರಾಧಿಸುವುದರಿಂದ ಎಲ್ಲ ಸರ್ಪದೋಷಗಳು ನಿವಾರಣೆಯಾಗುತ್ತವೆ ಎಂದು ಭಕ್ತರು ನಂಬಿದ್ದಾರೆ. ಈ ದಿನ ಸ್ವಯಂ ನಾಗರಾಜ ತಕ್ಷಕನೇ ಇಲ್ಲಿಗೆ ಬಂದು ಭಕ್ತರ ಪೂಜೆ ಸ್ವೀಕರಿಸುತ್ತಾನೆ, ನಮ್ಮನ್ನು ಆಶೀರ್ವಧಿಸುತ್ತಾನೆ ಎಂಬುದು ಸಹ ಭಕ್ತರ ನಂಬಿಕೆ.

    ಗುಜರಾತ್‌ನ ಭುಜಂಗ ನಾಗ ದೇವಾಲಯ:
    ಗುಜರಾತ್‌ನ ಕಛ್‌ ಜಿಲ್ಲೆಯಲ್ಲಿರುವ ಭುಜ್ ಪಟ್ಟಣದ ಹೊರಗೆ ಭುಜಿಯಾ ಡುಂಗರ್ ಎಂಬ ಬೆಟ್ಟ ಇದೆ. ಈ ಬೆಟ್ಟದ ಮೇಲೆ ಒಂದು ಪ್ರಾಚೀನ ಕೋಟೆ ಇದೆ. ಸುಪ್ರಸಿದ್ದ ಭುಜಂಗ ನಾಗ ದೇವಾಲಯ (Bhujang Naga Temple) ಇರುವುದು ಇಲ್ಲಿಯೇ. ಪುರಾಣದ ಪ್ರಕಾರ ಹಿಂದೆ ಕಛ್‌ ಪ್ರಾಂತ್ಯವನ್ನು ದೈತ್ಯವಂಶದ ರಾಕ್ಷಸರು ಆಳುತ್ತಿದ್ದರು. ಕಾಠೇವಾಡದಿಂದ ಬಂದಿದ್ದ ಭುಜಂಗ ನಾಗ ಎಂಬ ರಾಜ ಜನರನ್ನು ರಾಕ್ಷಸರ ಆಳ್ವಿಕೆಯಿಂದ ಬಿಡುಗಡೆ ಮಾಡಿ ತನ್ನ ರಾಜ್ಯ ಸ್ಥಾಪಿಸಿದ್ದ.

    ಭುಜಂಗನನ್ನು ಜನರು ನಾಗರಾಜ ಎಂದು ಪೂಜಿಸಲು ಆರಂಭಿಸಿದರು. ಈತನನ್ನು ಶೇಷನಾಗನ ಸಹೋದರ ಎಂದು ನಂಬಲಾಯಿತು. ಅವನ ಪೂಜೆಗಾಗಿ ಭುಜಂಗ ದೇವಾಲಯವನ್ನು ನಿರ್ಮಿಸಲಾಗಿತ್ತು. 1715ರಲ್ಲಿ ಜಡೇಜಾ ಮನೆತನದ ರಾಜರು ಇಲ್ಲಿ ಭುಜಿಯಾ ಕೋಟೆಯನ್ನು ನಿರ್ಮಿಸಿದ್ದರು. ಈ ಕೋಟೆಯ ನಡುವೆ ಭುಜಂಗ ನಾಗ ದೇವಾಲಯ ಇದೆ. ನಾಗಾ ಸಾಧುಗಳು ಈ ದೇವಾಲಯದಲ್ಲಿ ನಾಗದೇವತೆಯನ್ನು ಆರಾಧಿಸುತ್ತಿದ್ದರು. ದೇಶಾಲ್ಜೀ ಎಂಬ ರಾಜ 1723ರಲ್ಲಿ ಈ ದೇವಾಲಯದ ಮೇಲೆ ಮಂಟಪ ನಿರ್ಮಿಸಿದ್ದ. ಅಂದಿನಿಂದ ಇಲ್ಲಿ ಶ್ರಾವಣ ಮಾಸದಲ್ಲಿ ನಾಗರಪಂಚಮಿಯ ಉತ್ಸವ ಸಂಭ್ರಮದಿಂದ ಆಚರಿಸಲಾಗುತ್ತದೆ.

  • ಕಾಶ್ಮೀರದ ಆಸ್ಪತ್ರೆ ಮುಂದೆ ನಟಿ ಶ್ರದ್ಧಾ ಶ್ರೀನಾಥ್

    ಕಾಶ್ಮೀರದ ಆಸ್ಪತ್ರೆ ಮುಂದೆ ನಟಿ ಶ್ರದ್ಧಾ ಶ್ರೀನಾಥ್

    ಕಾಶ್ಮೀರದ (Kashmir) ಉದಮ್ ಪುರನಲ್ಲಿನ (Udampur) ಕಮಾಂಡ್ ಆಸ್ಪತ್ರೆಯ ಮುಂದೆ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ (Shraddha Srinath). ಈ ಆಸ್ಪತ್ರೆಗೆ (Hospital() ಭೇಟಿ ನೀಡುವುದಕ್ಕೆ ಅವರು ಕೊಟ್ಟ ಕಾರಣ ನಿಜಕ್ಕೂ ಥ್ರಿಲ್ ಆಗಿದೆ. ಯೂಟರ್ನ್ ಸುಂದರಿಯ ಹುಟ್ಟಿನ ರಹಸ್ಯ ಬಯಲಾಗಿದೆ.

    ಹೌದು, ಕನ್ನಡತಿ ಶ್ರದ್ಧಾ ಶ್ರೀನಾಥ್ ಹುಟ್ಟಿದ್ದ ಕಾಶ್ಮೀರದ ಉದಮ್ ಪುರದಲ್ಲಿರುವ ಕಮಾಂಡ್ ಆಸ್ಪತ್ರೆಯಲ್ಲಿ ಎನ್ನುವ ವಿಚಾರವನ್ನು ಅವರೇ ಬಯಲು ಮಾಡಿದ್ದಾರೆ. ಜೊತೆಗೆ ಬಾಲ್ಯದಲ್ಲಿ ಬೆಳೆದ ಮನೆಗೂ ಅವರು ಭೇಟಿ ನೀಡಿ, ಹಳೆಯ ನೆನಪುಗಳನ್ನು ಕೆದಕಿದ್ದಾರೆ. ಮತ್ತೆ ಹಳೆಯ ದಿನಗಳಿಗೆ ಮರಳಿದ್ದಾರೆ.

     

    ನಾನು ಹುಟ್ಟಿದ ಈ ಸ್ಥಳಕ್ಕೆ ಭೇಟಿ ಕೊಡಬೇಕು ಎನ್ನುವುದು ಹಲವು ವರ್ಷಗಳ ಆಸೆಯಾಗಿತ್ತು. ಅದು ಈಗ ಈಡೇರಿದೆ. ಸಾಕಷ್ಟು ನೆನಪುಗಳನ್ನು ಈ ಪ್ರದೇಶ ಮತ್ತೆ ನನಗೆ ಮರುಕಳಿಸಿತು ಎಂದು ಶ್ರದ್ಧಾ ಶ್ರೀನಾಥ್ ಬರೆದುಕೊಂಡಿದ್ದಾರೆ.

  • ಆರ್ಟಿಕಲ್ 370 ಟ್ರೈಲರ್ ನಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ

    ಆರ್ಟಿಕಲ್ 370 ಟ್ರೈಲರ್ ನಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ

    ಬಾಲಿವುಡ್ ನಲ್ಲಿ ಮತ್ತೊಂದು ಭರವಸೆಯ ಸಿನಿಮಾ ಮೂಡಿ ಬಂದಿದೆ. ಕನ್ನಡತಿ ಪ್ರಿಯಾ ಮಣಿ ಹಾಗೂ ಬಾಲಿವುಡ್ ಹೆಸರಾಂತ ನಟಿ ಯಾಮಿನಿ ಗೌತಮ್ ಕಾಂಬಿನೇಷನ್ ನ ‘ಆರ್ಟಿಕಲ್ 370’ (Article 370)ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ನೋಡುಗರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಟ್ರೈಲರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಾತ್ರಗಳು ಇವೆ.

    ರಿಲೀಸ್ ಆದ ಟ್ರೈಲರ್ (Trailer)ನಲ್ಲಿ ‘ಪೂರಾ ಕಾ ಪೂರಾ ಕಾಶ್ಮೀರ್ (Kashmir), ಭಾರತ್ ದೇಶ್ ಕಾ ಹಿಸ್ಸಾ ಥಾ. ಹೇ ಔರ್ ರೆಹೇಗಾ’ ಎನ್ನುವ ಮಾತು ಮತ್ತೆ ಮತ್ತೆ ಪ್ರೇರೇಪಿಸುತ್ತಿದೆ. ಅಂದಹಾಗೆ ಜಮ್ಮು ಕಾಶ್ಮೀರದ ವಿಶೇಷಾಧಿಕಾರವಾದ ಆರ್ಟಿಕಲ್ 370 ಅನ್ನು ತೆಗೆದು ಹಾಕಲಾದ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ. ಫೆಬ್ರವರಿ 23 ರಂದು ಈ ಸಿನಿಮಾ ತೆರೆಗೆ ಬರಲಿದ್ದು, ಯಾಮಿ ಗೌತಮ್ ಖಡಕ್ ಎನ್.ಐ.ಎ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

    ಟ್ರೈಲರ್ ನಲ್ಲಿ ಕಾಶ್ಮೀರ ಭಯೋತ್ಪಾದನೆ, ಸೇನಾಧಿಕಾರಿಗಳ ಹೋರಾಟ, ಆರ್ಟಿಕಲ್ 370 ತೆಗೆದರೆ ಏನೆಲ್ಲ ಆಗಲಿದೆ ಎನ್ನುವ ಚರ್ಚೆ. ಭಯೋತ್ಪಾದಕರ ಕುತಂತ್ರ ಹೀಗೆ ಸಾಕಷ್ಟು ವಿಷಯಗಳನ್ನು 2 ನಿಮಿಷ 40 ಸೆಕೆಂಡ್ ನ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಶಾಶ್ವತ್ ಸಚ್ ದೇವ್ ಅವರ ಹಿನ್ನೆಲೆ ಸಂಗೀತ ಸೂಪರ್.

     

    ಕಾಶ್ಮೀರ ಕುರಿತಂತೆ ಈವರೆಗೂ ಬಂದಿರುವ ಯಾವುದೇ ಸಿನಿಮಾ ಸೋತಿಲ್ಲ. ಬಾಕ್ಸ್ ಆಫೀಸಿನಲ್ಲಿ ಕೋಟಿ ಕೋಟಿ ಹಣ ಬಾಚಿವೆ. ಜೊತೆಗೆ ಅತ್ಯುತ್ತಮ ಪ್ರತಿಕ್ರಿಯೆಯನ್ನೂ ನೋಡುಗರು ಕೊಟ್ಟಿದ್ದಾರೆ. ಆರ್ಟಿಕಲ್ 370 ಚಿತ್ರದ ಕುರಿತು ಈಗಾಗಲೇ ನಿರೀಕ್ಷೆ ಹೆಚ್ಚಿವೆ. ಅದರಲ್ಲೂ ಟ್ರೈಲರ್ ರಿಲೀಸ್ ನಂತರ ಈ ಕಾಯುವಿಕೆ ಇಮ್ಮಡಿಯಾಗಿದೆ.

  • ಪಾಕಿಸ್ತಾನದ ಜೊತೆ ಭಾರತ ಸಂಬಂಧವನ್ನು ಸುಧಾರಿಸದೇ ಇದ್ದಲ್ಲಿ ಕಾಶ್ಮೀರಕ್ಕೆ ಗಾಜಾ ಪರಿಸ್ಥಿತಿ ಬರಬಹುದು: ಫಾರೂಖ್ ಅಬ್ದುಲ್ಲಾ

    ಪಾಕಿಸ್ತಾನದ ಜೊತೆ ಭಾರತ ಸಂಬಂಧವನ್ನು ಸುಧಾರಿಸದೇ ಇದ್ದಲ್ಲಿ ಕಾಶ್ಮೀರಕ್ಕೆ ಗಾಜಾ ಪರಿಸ್ಥಿತಿ ಬರಬಹುದು: ಫಾರೂಖ್ ಅಬ್ದುಲ್ಲಾ

    ಶ್ರೀನಗರ: ಗಾಜಾ (Gaza) ಮೇಲೆ ಇಸ್ರೇಲ್ (Israel) ಪಡೆಗಳು ದಾಳಿಗಳನ್ನು ಮುಂದುವರೆಸಿದ್ದು, ಅಲ್ಲಿನ ಪರಿಸ್ಥಿತಿ ಅತ್ಯಂತ ದಾರುಣವಾಗಿದೆ. ಇದೇ ಹೊತ್ತಲ್ಲಿ ಕಾಶ್ಮೀರವನ್ನು (Kashmir) ಗಾಜಾಗೆ ಸಮೀಕರಿಸಿ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ (Farooq Abdullah) ಹೇಳಿಕೆ ನೀಡಿದ್ದಾರೆ.

    ನೆರೆಯ ಪಾಕಿಸ್ತಾನದ (Pakistan) ಜೊತೆ ಭಾರತ (India) ತನ್ನ ಸಂಬಂಧವನ್ನು ಸುಧಾರಿಸಿಕೊಳ್ಳದೇ ಇದ್ದಲ್ಲಿ ಮುಂದೊಂದು ದಿನ ಕಾಶ್ಮೀರಕ್ಕೆ ಗಾಜಾ ಪರಿಸ್ಥಿತಿ ಬರಬಹುದು. ಅಲ್ಲದೇ ಬಾಂಬ್‌ಗಳು ಸದ್ದು ಮಾಡಬಹುದು ಎಂಬ ಎಚ್ಚರಿಕೆಯನ್ನು ಫಾರೂಖ್ ಅಬ್ದುಲ್ಲಾ ನೀಡಿದ್ದಾರೆ. ನೆರೆ ಹೊರೆ ದೇಶಗಳ ಜೊತೆ ಸುಮಧುರ ಬಾಂಧವ್ಯ ಹೊಂದಿದರೆ ಎರಡೂ ದೇಶಗಳು ಅಭಿವೃದ್ಧಿ ಹೊಂದುತ್ತವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

    ಇದೇ ಮಾತನ್ನು ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು. ಈಗ ಪ್ರಧಾನಿ ಮೋದಿ ಕೂಡ ಯುದ್ಧ ಆಯ್ಕೆಯಲ್ಲ ಎಂದಿದ್ದಾರೆ. ಪಾಕ್ ವಿಚಾರಕ್ಕೂ ಇದನ್ನು ಅನ್ವಯಿಸಬಹುದು. ನವಾಜ್ ಷರೀಫ್ ಅವರು ಪಾಕಿಸ್ತಾನದ ಪ್ರಧಾನಿಯಾಗಲಿದ್ದಾರೆ. ಅವರು ಭಾರತದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳುತ್ತಿದ್ದಾರೆ. ಆದರೆ ನಾವು ಏಕೆ ಮಾತನಾಡಲು ಸಿದ್ಧರಿಲ್ಲ? ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳದಿದ್ದರೆ ಇಸ್ರೇಲ್‌ನಿಂದ ಬಾಂಬ್ ದಾಳಿಗೊಳಗಾಗುತ್ತಿರುವ ಗಾಜಾ ಮತ್ತು ಪ್ಯಾಲೆಸ್ತೀನ್ ಪರಿಸ್ಥಿತಿಯನ್ನು ನಾವೂ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸದ್ಯ ಫಾರೂಖ್ ಮಾತುಗಳು ಭಾರೀ ಚರ್ಚೆಗೆ ಗ್ರಾಸವಾಗಿವೆ. ಇದನ್ನೂ ಓದಿ: ರಾಮ ನನ್ನ ಹೃದಯದಲ್ಲಿದ್ದಾನೆ, ಅದನ್ನು ತೋರಿಸಿಕೊಳ್ಳುವ ಅಗತ್ಯವಿಲ್ಲ: ಕಪಿಲ್ ಸಿಬಲ್

  • ಭಾರತದ ಸೇನೆಗೆ AI ತಂತ್ರಜ್ಞಾನದ ಬಲ – ಏನಿದರ ಮಹತ್ವ?

    ಭಾರತದ ಸೇನೆಗೆ AI ತಂತ್ರಜ್ಞಾನದ ಬಲ – ಏನಿದರ ಮಹತ್ವ?

    ಭಾರತ ಯಾವಾಗಲೂ ಭಯೋತ್ಪಾದನೆಯ ವಿರುದ್ಧವಾಗಿ ಒಂದು ಹೆಜ್ಜೆ ಮುಂದಿದೆ. ಇದೇ ನಿಟ್ಟಿನಲ್ಲಿ ಭಾರತ ಸೇನೆ (Indian Army) ಭಯೋತ್ಪಾದನೆಯ ನಿಗ್ರಹಕ್ಕೆ ಹಾಗೂ ಶತ್ರು ರಾಷ್ಟ್ರಗಳಿಂದ ರಕ್ಷಣೆಗಾಗಿ ತನ್ನ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಎಐ (Artificial Intelligence) ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾಗಿದೆ.  

    ಭಾರತಕ್ಕೆ ಶತ್ರು ರಾಷ್ಟ್ರಗಳಾಗಿ ಕಾಡುತ್ತಿರುವ ಪಾಕಿಸ್ತಾನ (Pakistan) ಮತ್ತು ಚೀನಾದ (China) ಗಡಿಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆಗೆ ಸೇನೆ ಮುಂದಾಗಿದೆ. ಈ ಮೂಲಕ ದೇಶದ ಗಡಿಯೊಳಗೆ ನುಗ್ಗಲು ಭಯೋತ್ಪಾದಕರಿಗೆ ಉತ್ತೇಜಿಸುವ ಪಾಕಿಸ್ತಾನಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಲ್ಲದೇ ಪದೇ ಪದೇ ಗಡಿಯಲ್ಲಿ ಸಮಸ್ಯೆ ಹುಟ್ಟು ಹಾಕಿ ಕಾಲು ಕೆದರಿ ಜಗಳಕ್ಕೆ ನಿಲ್ಲುವ ಚೀನಾ ತಂಟೆಯನ್ನೂ ಬಂದ್ ಮಾಡಲು ರಕ್ಷಣಾ ಇಲಾಖೆ ಮುಂದಾಗಿದೆ.  

    ಗಡಿಯಲ್ಲಿ ಎಐ ಹೇಗೆ ಶತ್ರುಗಳ ಮೇಲೆ ಕಣ್ಣಿಡಲಿದೆ?

    ರಕ್ಷಣೆಗೆ ಬಳಸುವ ಎಐ ತಂತ್ರಜ್ಞಾನದಲ್ಲಿ ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಕ್ಯಾಮೆರಾಗಳು, ಮಾನವರಹಿತ ವಿಮಾನಗಳು ಮತ್ತು ರೆಡಾರ್‌ಗಳನ್ನು ಒಳಗೊಂಡಿವೆ. ಇವುಗಳು ನೈಜ ಸಮಯದಲ್ಲಿ ಮಾನಿಟರಿಂಗ್ ಮಾಡುವ ಸಾಫ್ಟ್‌ವೇರ್‌ಗಳನ್ನು ಸಹ ಹೊಂದಿವೆ. ಈ ಮೂಲಕ ಗಡಿಯಲ್ಲಿ ಶತ್ರುಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗುತ್ತದೆ. 

    ಗಡಿಗಳಲ್ಲಿ ಗಸ್ತು ತಿರುಗಲು ಸಹ ಎಐ ಚಾಲಿತ ಡ್ರೋನ್‍ಗಳು ಮತ್ತು ರೋಬೋಟ್‍ಗಳನ್ನು ಬಳಸಲು ನಿರ್ಧರಿಸಲಾಗಿದ್ದು, ಮಾನವ ಹಸ್ತಕ್ಷೇಪ ಹಾಗೂ ಅಪಾಯಗಳ ಪ್ರಮಾಣವನ್ನು ತಗ್ಗಿಸಲಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 75 ಹೊಸದಾಗಿ ಅಭಿವೃದ್ಧಿಪಡಿಸಿದ ಎಐ ತಂತ್ರಜ್ಞಾನಗಳನ್ನು ಕಳೆದ ಜುಲೈನಲ್ಲಿ `ಎಐ ಇನ್ ಡಿಫೆನ್ಸ್’ ವಿಚಾರ ಸಂಕಿರಣದಲ್ಲಿ ಮೊದಲ ಬಾರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಅಲ್ಲಿ ರೋಬೋಟಿಕ್ಸ್, ಕಣ್ಗಾವಲು ಕ್ಯಾಮೆರಾಗಳನ್ನು ಪ್ರದರ್ಶಿಸಲಾಗಿತ್ತು. 

    ಈ ವರ್ಷದ ಆರಂಭದಲ್ಲಿ ನಡೆದ ಏಷ್ಯಾದ ಅತಿದೊಡ್ಡ ಏರ್ ಶೋಗಳಲ್ಲಿ ಒಂದಾದ ಏರೋ ಇಂಡಿಯಾದಲ್ಲಿ ಎಐ ಆಧಾರಿತ ಕಣ್ಗಾವಲು ಸಾಫ್ಟ್‌ವೇರ್‌ನ್ನು ರಕ್ಷಣಾ ಕ್ಷೇತ್ರದಲ್ಲಿ ಬಳಸುವ ವಿಧಾನವನ್ನು ಪರಿಚಯಿಸಲಾಗಿತ್ತು. ಈ ಬಗ್ಗೆ ಸೇನೆಗೆ ತರಬೇತಿಯನ್ನು ಸಹ ನೀಡಲಾಗಿದೆ. ಹೆಚ್ಚಿನ ತರಬೇತಿಗಾಗಿ ಅಮೆರಿಕದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ.

    ರಕ್ಷಣೆಯಲ್ಲಿ ಎಐ ತಂತ್ರಜ್ಞಾನ ಹೇಗೆ ಸಹಾಯ ಮಾಡುತ್ತದೆ?

    ಈಗಾಗಲೇ ಸಾಫ್ಟ್‌ವೇರ್ ಆಧಾರಿತ ಕ್ಯಾಮೆರಾಗಳನ್ನು ಪೂರ್ವ ಲಡಾಖ್ ಸೆಕ್ಟರ್‌ನಲ್ಲಿ ಇರಿಸಲಾಗಿದೆ. ಇದು ಚೀನಾಕ್ಕೆ ನಿಕಟವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.  ಇದರೊಂದಿಗೆ ಅಪಾಯದ ಸ್ಥಳಗಳಾದ ಕಾಶ್ಮೀರದಿಂದ (Kashmir) ಸಿಕ್ಕಿಂವರೆಗೆ ಭಾರತದ ಸೂಕ್ಷ್ಮ ಗಡಿಗಳಲ್ಲಿ ಎಐ ತಂತ್ರಜ್ಞಾನ ವರದಾನವಾಗಿದೆ. ಈ ಸಾಫ್ಟ್‌ವೇರ್ ಯಾವುದೇ ಚಲನೆ, ಶಸ್ತ್ರಾಸ್ತ್ರಗಳು, ವಾಹನಗಳು, ಟ್ಯಾಂಕರ್‌ಗಳು ಅಥವಾ ಕ್ಷಿಪಣಿಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಲೈವ್ ಮತ್ತು ರೆಕಾರ್ಡ್ ಮಾಡುತ್ತದೆ. ಅಲ್ಲದೇ ಅದರ ಸಂಪೂರ್ಣ ಮಾಹಿತಿಯನ್ನು ಸೇನೆಗೆ ರವಾನಿಸುತ್ತದೆ.

    ಎಐ ತಂತ್ರಜ್ಞಾಕ್ಕೆ ರಕ್ಷಣಾ ಇಲಾಖೆ ಬಜೆಟ್ ಎಷ್ಟು?

    ಭಾರತೀಯ ಸೇನೆಯು ಪ್ರತಿ ವರ್ಷ ಎಐ ತಂತ್ರಜ್ಞಾನಕ್ಕಾಗಿ ಸರಿಸುಮಾರು 400 ಕೋಟಿ ರೂ.ಗಳನ್ನು ವಿನಿಯೋಗಿಸಲಿದೆ. ಈ ವಿಚಾರದಲ್ಲಿ ಅಮೆರಿಕ ಹಾಗೂ ಚೀನಾ ಮುಂದಿದ್ದರೂ ಅವುಗಳಿಗೆ ಸರಿಯಾಗಿ ನಿಲ್ಲಲು ಭಾರತ ಸಮರ್ಥವಾಗಿದೆ.

    ಇಸ್ರೇಲ್ ಬಳಿ ಇದೆ ಸಂಪೂರ್ಣ ಪ್ಯಾಲೆಸ್ತೇನಿಯನ್ ಸೇನಾ ಮಾಹಿತಿ!

    ಇಸ್ರೇಲ್‍ನಲ್ಲಿ ಪ್ಯಾಲೆಸ್ತೇನಿಯನ್ ಮಿಲಿಟರಿಗೆ ಸಂಬಂಧಿಸಿದ ವ್ಯಕ್ತಿಗಳನ್ನು ಕಂಡು ಹಿಡಿಯಲು ಮತ್ತು ಅವರ ಮೇಲೆ ನಿಗಾ ಇಡಲು ಎಐ ಬಳಕೆ ಮಾಡಲಾಗುತ್ತಿದೆ. ಈ ತಂತ್ರಜ್ಞಾನವು ಸೇನಾ ಸಿಬ್ಬಂದಿಯ ಹಾಗೂ ಅವರೊಂದಿಗೆ ಸಂಪರ್ಕದಲ್ಲಿರುವವರ ಮೊಬೈಲ್‍ಗಳನ್ನು ಅನ್‍ಲಾಕ್ ಮಾಡುವ ಮೂಲಕ ಅವರ ಮಾಹಿತಿ ಕಲೆಹಾಕುತ್ತದೆ. ಅವರ ಮೇಲೆ ಈ ಮೂಲಕ ನಿಗಾ ವಹಿಸುತ್ತದೆ.

  • ಶೃಂಗೇರಿಯಿಂದ ಪಂಚಲೋಹ ಮೂರ್ತಿ ರವಾನೆ – 75 ವರ್ಷಗಳ ಬಳಿಕ ಕಾಶ್ಮೀರದ ಶಾರದಾಂಬೆ ದೇಗುಲದಲ್ಲಿ ಪೂಜೆ

    ಶೃಂಗೇರಿಯಿಂದ ಪಂಚಲೋಹ ಮೂರ್ತಿ ರವಾನೆ – 75 ವರ್ಷಗಳ ಬಳಿಕ ಕಾಶ್ಮೀರದ ಶಾರದಾಂಬೆ ದೇಗುಲದಲ್ಲಿ ಪೂಜೆ

    ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಶಾರದಾಂಬೆ ದೇಗುಲದ (Sringeri Sharadamba Temple) ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಶ್ರೀಗಳು ಕಾಶ್ಮೀರದ (Kashmir) ತಿತ್ವಾಲ್‌ಗೆ (Titwal) ಭೇಟಿ ನೀಡಿದ್ದಾರೆ.

    ಶತಮಾನಗಳ ಹಿಂದೆ ಶಂಕರಾಚಾರ್ಯರು ಕಾಶ್ಮೀರದ ತಿತ್ವಾಲ್‌ನಲ್ಲಿ ಸ್ಥಾಪಿಸಿದ್ದ ಶಾರದಾಂಬೆ ದೇಗುಲ 1948ರಲ್ಲಿ ಸಂಪೂರ್ಣ ಹಾಳಾಗಿತ್ತು. ಕಾಶ್ಮೀರಿ ಪಂಡಿತರು 2-3 ಬಾರಿ ಶೃಂಗೇರಿಗೆ ಭೇಟಿ ನೀಡಿ, ಕಾಶ್ಮೀರದ ದೇಗುಲವನ್ನು ಪುನರ್ ಪ್ರತಿಷ್ಠಾಪಿಸಲು ಸಹಕಾರ ನೀಡುವಂತೆ ಮನವಿ ಮಾಡಿದ್ದರು. ಕಾಶ್ಮೀರಿ ಪಂಡಿತರ ಮನವಿಯಂತೆ ಶೃಂಗೇರಿ ಜಗದ್ಗುರುಗಳು ತಿತ್ವಾಲ್‌ನಲ್ಲಿ ಶೃಂಗೇರಿ ಶಾರದಾಂಬೆಯ ದೇಗುಲವನ್ನು ಪುನರ್ ಪ್ರತಿಷ್ಠಾಪಿಸಲು ಸಹಕಾರ ನೀಡಿದ್ದರು. ಅದರಂತೆ ಶೃಂಗೇರಿಯಿಂದಲೇ ಪಂಚಲೋಹದ ಶಾರದಾಂಬೆ ಮೂರ್ತಿ ನಿರ್ಮಾಣಗೊಂಡು ಕಾಶ್ಮೀರ ತಲುಪಿದೆ.

    ಇದೇ ಜನವರಿ 24ರಂದು ಶೃಂಗೇರಿಯಿಂದ ಹೊರಟ ಶಾರದಾಂಬೆ ವಿಗ್ರಹದ ರಥಯಾತ್ರೆಗೆ ಚಾಲನೆ ನೀಡಿದ್ದರು. 4,000 ಕಿ.ಮೀ ದೂರದ ತಿತ್ವಾಲ್‌ನಲ್ಲಿನ ಶೃಂಗೇರಿ ಶಾರದಾಂಬೆಗೆ ಸೋಮವಾರ ಶೃಂಗೇರಿಯ ಕಿರಿಯ ಶ್ರೀಗಳಾದ ವಿಧುಶೇಖರ ಶ್ರೀಗಳು ಪೂಜೆ ಸಲ್ಲಿಸಲಿದ್ದಾರೆ.

    ವಿಶೇಷ ವಿಮಾನದ ಮೂಲಕ ಕಾಶ್ಮೀರಕ್ಕೆ ಭೇಟಿ ನೀಡಿರುವ ವಿಧುಶೇಖರ ಶ್ರೀಗಳು ಅಲ್ಲಿಂದ ಕಾರಿನ ಮೂಲಕ ತಿತ್ವಾಲ್‌ನಲ್ಲಿನ ಶಾರದಾಂಬೆ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಇಂದು ವಿಧುಶೇಖರ ಶ್ರೀಗಳು ಶಾರದಾಂಬೆ ಮೂರ್ತಿಗೆ ಪೂಜೆ ಸಲ್ಲಿಸಲಿದ್ದಾರೆ. ವಿಧುಶೇಖರ ಶ್ರೀಗಳನ್ನು ಕಾಶ್ಮೀರಿ ಪಂಡಿತರಾದ ರವೀಂದ್ರ ಪಂಡಿತ್, ಪುರೋಹಿತ ಮೋಕಾಶಿ, ರವೀಂದ್ರ ಟಿಕ್ಕು ಮೋತಿಲಾಲ್ ಪೂರ್ಣಕುಂಭದ ಮೂಲಕ ಬರಮಾಡಿಕೊಂಡರು. ಇದನ್ನೂ ಓದಿ: ಗ್ಯಾರಂಟಿ ಜಾರಿಗೆ ಇಂದೇ ಗೈಡ್‍ಲೈನ್ಸ್- ಉಚಿತ ವಿದ್ಯುತ್ ಗ್ಯಾರಂಟಿ ಬಗ್ಗೆ ಮಾರ್ಗಸೂಚಿ?

    ಶಾರದಾಂಬೆ ವಿಗ್ರಹದ ಪುನರ್ ಪ್ರತಿಷ್ಠಾಪನೆಗೆ ಶೃಂಗೇರಿ ಮಠದಿಂದಲೇ ಋತ್ವಿಜರ ತಂಡವನ್ನು ಕಳಿಸಲಾಗಿದೆ. ವಾಸ್ತುಹೋಮ, ಕಲಾ ಹೋಮ ಸೇರಿದಂತೆ ತಿತ್ವಾಲ್‌ನ ಶಾರದಾಂಬೆ ದೇಗುಲದಲ್ಲಿ ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಗಣಹೋಮದೊಂದಿಗೆ ಕಾರ್ಯಕ್ರಮ ಆರಂಭಗೊಂಡು ವಿಧುಶೇಖರ ಶ್ರೀಗಳ ಸಮ್ಮುಖದಲ್ಲಿ ಶಾರದಾಂಬೆ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ಕುಂಭಾಭಿಷೇಕ ಹಾಗೂ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

    ದೇಶದ ತುದಿ ಹಾಗೂ ಗಡಿಯಲ್ಲಿ 75 ವರ್ಷಗಳ ಬಳಿಕ ಶಾರದಾಂಬೆ ದೇಗುಲ ಪುನರ್ ಪ್ರತಿಷ್ಠಾಪನೆಯಾಗಿರುವುದು ಐತಿಹಾಸಿಕ ಘಟನೆ ಎಂದು ಶಾರದಾಂಬೆ ಭಕ್ತರು ಹಾಗೂ ಹಿಂದೂ ಸಮುದಾಯ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಅಭಿಷೇಕ್ ಮದುವೆಗೆ ಬಂದು ಶುಭ ಹಾರೈಸಿದ ರಜನಿಕಾಂತ್

  • ಭಾರತ – ಪಾಕಿಸ್ತಾನ ಕಾಶ್ಮೀರದ ವಿವಾದವನ್ನು ವಿಶ್ವಸಂಸ್ಥೆ ನಿರ್ಣಯದಂತೆ ಬಗೆಹರಿಸಬೇಕು: ಚೀನಾ

    ಇಸ್ಲಾಮಾಬಾದ್: ಭಾರತ (India) ಹಾಗೂ ಪಾಕಿಸ್ತಾನದ (Pakistan) ನಡುವೆ ಇರುವ ಕಾಶ್ಮೀರದ (Kashmir) ವಿವಾದವನ್ನು ವಿಶ್ವಸಂಸ್ಥೆಯ (UN) ನಿರ್ಣಯಗಳ ಪ್ರಕಾರ ಪರಿಹರಿಸಬೇಕೆಂದು ಚೀನಾ (China) ಶನಿವಾರ ಹೇಳಿದೆ.

    ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ 2 ದಿನಗಳ ಭೇಟಿಗೆ ಪಾಕಿಸ್ತಾನಕ್ಕೆ ತೆರಳಿದ್ದಾರೆ. ಇದು ಪಾಕಿಸ್ತಾನಕ್ಕೆ ಅವರ ಮೊದಲ ಪ್ರವಾಸವಾಗಿದೆ. ಅವರು ಶನಿವಾರ ತಮ್ಮ ಪಾಕಿಸ್ತಾನದ ಸಹವರ್ತಿ ಬಿಲಾವಲ್ ಭುಟ್ಟೋ ಜರ್ದಾರಿ ಅವರೊಂದಿ ಸಭೆ ನಡೆಸಿದ್ದಾರೆ.

    ವರದಿಗಳ ಪ್ರಕಾರ ಸಭೆಯಲ್ಲಿ ರಾಜಕೀಯ, ಕಾರ್ಯತಂತ್ರ, ಆರ್ಥಿಕ, ರಕ್ಷಣಾ ಭದ್ರತೆ, ಶಿಕ್ಷಣ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳು ಹಾಗೂ ಸಹಕಾರಗಳ ಬಗ್ಗೆ ಚರ್ಚಿಸಲಾಗಿದೆ. ಉಭಯ ದೇಶಗಳ ಪರಸ್ಪರ ಹಿತಾಸಕ್ತಿ, ಪ್ರದೇಶಿಕ ಹಾಗೂ ಜಾಗತಿಕ ವಿಷಗಳ ಬಗೆಯೂ ಮಾತುಕತೆ ನಡೆದಿದೆ. ದಕ್ಷಿಣ ಏಷ್ಯಾ ಭಾಗದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡಿಕೊಳ್ಳುವ ಪ್ರಾಮುಖ್ಯತೆಯನ್ನು ಎರಡೂ ಕಡೆಯವರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಅಜ್ಜಿ ಗೆದ್ದಿದ್ದ ತೆಲಂಗಾಣದ ಮೇದಕ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಲೋಕಸಭೆಗೆ ಸ್ಪರ್ಧೆ?

    ಕಾಶ್ಮೀರದ ವಿವಾದ ಭಾರತ ಮತ್ತು ಪಾಕಿಸ್ತಾನದ ನಡುವೆ ಅನೇಕ ವರ್ಷಗಳಿಂದಲೇ ಉಳಿದುಕೊಂಡಿದೆ. ಇದನ್ನು ವಿಶ್ವಸಂಸ್ಥೆಯ ಚಾರ್ಟರ್, ಸಂಬಂಧಿತ ಭದ್ರತಾ ಮಂಡಳಿಯ ನಿರ್ಣಯಗಳು ಹಾಗೂ ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಗುಣವಾಗಿ ಸರಿಯಾಗಿ ಹಾಗೂ ಶಾಂತಿಯುತವಾಗಿ ಪರಿಹರಿಸಬೇಕು ಎಂದು ಚೀನಾದ ವಿದೇಶಾಂಗ ಸಚಿವರು ಹೇಳಿದ್ದಾರೆ. ಆದರೆ ಅಸ್ಥಿರ ಪರಿಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸುವ ಏಕಪಕ್ಷೀಯ ಕ್ರಮಗಳನ್ನು ಎರಡೂ ಕಡೆಯವರು ವಿರೋಧಿಸಿದ್ದಾರೆ.

    ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಅನಗತ್ಯ ಉಲ್ಲೇಖಗಳಿಗೆ ಭಾರತ ಈ ಹಿಂದೆಯೂ ಚೀನಾ ಹಾಗೂ ಪಾಕಿಸ್ತಾನವನ್ನು ಟೀಕಿಸಿದೆ. ನಾವು ಅಂತಹ ನಿರ್ಣಯಗಳನ್ನು ಯಾವಾಗಲೂ ತಿರಸ್ಕರಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳು ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದ್ದು, ಬೇರ್ಪಡಿಸಲಾಗದ ಭಾಗಗಳಾಗಿವೆ ಎಂದು ಭಾರತ ಹೇಳಿಕೊಂಡೇ ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್‌ ಶೋ – ಬಿಜೆಪಿ ಲೆಕ್ಕಾಚಾರ ಏನು?