ಸ್ಯಾಂಡಲ್ವುಡ್ ಡಿಬಾಸ್ (Darshan) ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ ಡಿಬಾಸ್ ಅಭಿಮಾನಿಗಳ (Darshan Fans) ಸಂಘದಿಂದ 1800 ಮಕ್ಕಳಿಗೆ ಪರೀಕ್ಷಾ ಸಾಮಗ್ರಿಗಳನ್ನು ವಿತರಣೆ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ದರ್ಶನ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಣೆಯನ್ನು ಮಾಡಿದ್ದಾರೆ.
ಡಿಬಾಸ್ ಅಭಿಮಾನಿಗಳ ಸಂಘದ ಅಧ್ಯಕ್ಷ ಮಂಜುನಾಥ್ ಹಾಗೂ ಸಂಗಡಿಗರ ಸಹಕಾರದಿಂದ ಅತ್ತಿಬೆಲೆಯ ಶಿಡ್ಲಬಸಪ್ಪ ಕಲ್ಯಾಣ ಮಂಟಪದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಪೆನ್ನು ಬುಕ್ಸ್ ಜೊತೆ ದರ್ಶನ್ ಫೋಟೋ ಇರುವ ಪರೀಕ್ಷೆ ಪ್ಯಾಡ್ ಸೇರಿದಂತೆ ಕಲಿಕಾ ಸಾಮಗ್ರಿಗಳನ್ನು ನೀಡಲಾಯಿತು. ಇದನ್ನೂ ಓದಿ:ಡಿಬಾಸ್ ಹುಟ್ಟುಹಬ್ಬಕ್ಕೆ ಶುಭಕೋರಿದ ಸ್ಯಾಂಡಲ್ವುಡ್ ತಾರೆಯರು

ಮಕ್ಕಳೊಂದಿಗೆ ಡಿಬಾಸ್ ಹೆಸರಿನ ಕೇಕ್ ಕಟ್ ಮಾಡಿ ದರ್ಶನ್ ಅಭಿನಯದ ಸಾಂಗ್ಗಳನ್ನು ಹಾಕಿ ನೃತ್ಯ ಮಾಡಿ ಎಂಜಾಯ್ ಮಾಡಿದ್ದರು. ಅಲ್ಲದೇ ಕಲ್ಯಾಣ ಮಂಟಪ ಸುತ್ತಲೂ ದರ್ಶನ್ ಚಿತ್ರಗಳನ್ನು ಮತ್ತು ಕಟೌಟ್ಗಳನ್ನು ಹಾಕಿ ಸಂಭ್ರಮಾಚರಣೆಯನ್ನು ಮಾಡಲಾಯಿತು. ಸುಮಾರು 2000ಕ್ಕೆ ಹೆಚ್ಚು ಮಕ್ಕಳಿಗೆ ಊಟದ ವ್ಯವಸ್ಥೆ ಸಹ ಮಾಡಲಾಗಿತ್ತು. ಜೊತೆಗೆ ಮಧ್ಯಾಹ್ನ 3 ಗಂಟೆ ನಂತರ ಅತ್ತಿಬೆಲೆ ಸರ್ಕಲ್ನಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಜನರಿಗೆ ಅತ್ತಿಬೆಲೆ ಫ್ಲೈ ಓವರ್ ಕೆಳಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ಪ್ರತಿ ವರ್ಷ ಡಿಬಾಸ್ ಹೆಸರಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಸೇವೆ ಮಾಡಬೇಕಂತ ಆಶಯ ಕೂಡ ಇದೆ ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ದರ್ಶನ್ ಅವರಿಗೆ ಆರೋಗ್ಯ ಸಿಗಲಿ ಇನ್ನು ಎತ್ತರಕ್ಕೆ ಬೆಳೆಯಲಿ ಅಂತ ಫ್ಯಾನ್ಸ್ ಶುಭಕೋರಿದರು.


ರಾಕ್ಲೈನ್ ವೆಂಕಟೇಶ್ ನಿರ್ಮಾಣದ ‘ಕಾಟೇರ’ ಸಿನಿಮಾ ಸಕ್ಸಸ್ ಕಂಡಿರೋ ಬೆನ್ನಲ್ಲೇ ಮಾಧ್ಯಮದ ಜೊತೆ ದರ್ಶನ್ ಮಾತನಾಡಿದ್ದಾರೆ. ಜಾತಿ ಒಳಗೊಂಡಂತೆ ಸಿನಿಮಾದ ಒಳಗೆ ಮತ್ತಷ್ಟು ಭಿನ್ನ ಕಥೆ ಇದೆ. ಕಥೆ ಸೆಲೆಕ್ಷನ್ ಹೇಗೆ ಮಾಡಿದ್ರಿ ಎಂದು ದರ್ಶನ್ಗೆ (Darshan) ಕೇಳಲಾಯಿತು.

ಚಿತ್ರದ ನಾಯಕಿ ಆರಾಧನಾ ರಾಮ್ (Aradhanaa Ram) ಚೊಚ್ಚಲ ಸಿನಿಮಾಗೆ ಬೆಸ್ಟ್ ವಿಶ್ಸ್ ದರ್ಶನ್ ಪತ್ನಿ ತಿಳಿಸಿದ್ದಾರೆ. ದರ್ಶನ್ (Darshan) ಸಹೋದರಿ ಮಗ ಚಂದ್ರ ಕುಮಾರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ. ಕುಟುಂಬದ ಆಪ್ತ ಸೂರಜ್ಗೆ ಶುಭಕೋರಿದ್ದಾರೆ. ಇದನ್ನೂ ಓದಿ:



ಇತ್ತೀಚೆಗೆ ದೊಡ್ಡ ಮಗಳು ಮೋನಿಕಾ ಸಿನಿಮಾರಂಗಕ್ಕೆ ಬರೋದಾಗಿ ದುನಿಯಾ ವಿಜಯ್ ಅನೌನ್ಸ್ ಮಾಡಿದ್ದರು. ಅದರಂತೆ ಇದೀಗ ಮೋನಿಕಾ ವಿಜಯ್ ಚೊಚ್ಚಲ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ದರ್ಶನ್ ನಟನೆಯ ‘ಕಾಟೇರ’ (Katera) ಚಿತ್ರದ ರೈಟರ್ ಜಡೇಶ್ ಕುಮಾರ್ (Jadesh Kumar) ಅವರ ನಿರ್ದೇಶನದಲ್ಲಿ ದುನಿಯಾ ವಿಜಯ್-ಮೋನಿಕಾ ಜೊತೆಯಾಗಿ ನಟಿಸುತ್ತಿದ್ದಾರೆ.




ಎಲ್ಲರೂ ಯಾರನ್ನೋ ಮೆಚ್ಚಿಸೋಕೆ ಮಾತಾಡಿಲ್ಲ. ಪ್ರತಿಯೊಬ್ಬರು ಪ್ರೀತಿಯಿಂದ ಟೀಮ್ ವರ್ಕ್ನಿಂದ ಸಿನಿಮಾ ಮಾಡಿದ್ವಿ. ಈ ಥರ ಸ್ಟ್ರೈಟ್ ಸಬ್ಜೆಕ್ಟ್ ಮಾಡೋದೇ ರಿಸ್ಕ್ ಎಂದಿದ್ದಾರೆ. ಸಿನಿಮಾ ಬಗ್ಗೆ ನಮ್ಮ ನಿರ್ಮಾಪಕರಿಗೆ ಫ್ಯಾಷನ್ ಇದೆ. ಕಥೆ ಕೂಡಲೇ ಇಷ್ಟವಾಯ್ತು ಎಂದು ದರ್ಶನ್ ಮಾಹಿತಿ ಬಿಚ್ಚಿಟ್ಟರು. ಎಲ್ಲರಿಗೂ ಸಿನಿಮಾ ಮೇಲಿನ ಪ್ರೀತಿ ಇಲ್ಲಿಗೆ ಕರೆದುಕೊಂಡು ಬಂದಿದೆ. ಬೀರಾದಾರ್ ಸರ್ ಪಾತ್ರ ತುಂಬಾ ಚೆನ್ನಾಗಿದೆ ಎಂದು ದರ್ಶನ್ ಹೊಗಳಿದ್ದಾರೆ.

ತರುಣ್ ಸುಧೀರ್ ನಿರ್ದೇಶನದಲ್ಲಿ 70 ದಶಕದ ಕಥೆ ಮೂಡಿ ಬಂದಿದ್ದು, ದರ್ಶನ್ಗೆ ನಾಯಕಿಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ನಟಿಸಿದ್ದಾರೆ. ಸಿನಿಮಾ ರಿಲೀಸ್ ಮುನ್ನವೇ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:
ನಟಿ ಮಾಲಾಶ್ರೀ ಪಡ್ಡೆಹುಡುಗರ ಕನಸಿನ ರಾಣಿಯಾಗಿ ಮರೆದವರು. ಇಂದಿಗೂ ಸಿನಿಮಾಗಳಲ್ಲಿ ನಟಿಸುತ್ತಾ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇದೀಗ ಜ್ಯೂ.ಮಾಲಾಶ್ರೀ ಆರಾಧಾನಾ (Aradhana Ram) ಕೂಡ ಸಿನಿಮಾಗೆ ಎಂಟ್ರಿ ಕೊಡ್ತಿದ್ದಾರೆ. ಈ ಬೆನ್ನಲ್ಲೇ ದೇವರ ಸನ್ನಿಧಿಗೆ ಮಾಲಾಶ್ರೀ-ಆರಾಧಾನಾ ಭೇಟಿ ನೀಡಿದ್ದಾರೆ. 5ಕ್ಕೂ ಹೆಚ್ಚು ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.


