Tag: katera film

  • ದರ್ಶನ್- ನಿರ್ದೇಶಕ ತರುಣ್ ನನ್ನ ಮಗಳಿಗೆ ನಟನೆ ಹೇಳಿ ಕೊಟ್ಟರು- ಮಾಲಾಶ್ರೀ

    ದರ್ಶನ್- ನಿರ್ದೇಶಕ ತರುಣ್ ನನ್ನ ಮಗಳಿಗೆ ನಟನೆ ಹೇಳಿ ಕೊಟ್ಟರು- ಮಾಲಾಶ್ರೀ

    ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾ ಇಂದು ಕೊನೆಯ ಹಂತದ ಶೂಟಿಂಗ್ ಮುಕ್ತಾಯವಾಗಿದೆ. ಚಿತ್ರತಂಡದ ಕಡೆಯಿಂದ ಇಂದು (ಸೆ.11) ಸುದ್ದಿಗೋಷ್ಠಿ ಆಯೋಜಿಸಿದೆ. ಈ ಚಿತ್ರದ ಮೂಲಕ ನಾಯಕಿಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ವೇಳೆ ದರ್ಶನ್ ಜೊತೆ ಪುತ್ರಿ ಆರಾಧನಾ (Aradhana Ram) ನಟಿಸಿದ್ದರ ಬಗ್ಗೆ ಕನಸಿನ ರಾಣಿ ಮಾಲಾಶ್ರೀ ಸಂತಸ ವ್ಯಕ್ತಪಡಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾಲಾಶ್ರೀ ಮಾತನಾಡಿ, ನನ್ನ ಮಗಳು ಫಸ್ಟ್ ಟೈಮ್ ಕಾಟೇರ ಸಿನಿಮಾದಲ್ಲಿ ಆಕ್ಟ್ ಮಾಡಿ ಪ್ರೆಸ್‌ಮೀಟ್‌ನಲ್ಲಿ ಕುಳಿತಿದ್ದಾರೆ. ಈ ಸಂದರ್ಭದಲ್ಲಿ ನಾನು ಇದ್ದೀನಿ ಅನ್ನೋದಕ್ಕೆ ಖುಷಿಯಾಗುತ್ತಿದೆ. ಈ ಚಿತ್ರದ ಓಪನಿಂಗ್ ಸಮಯದಲ್ಲಿ ರಾಧನಾ ರಾಮ್ ಆಗಿ ಪರಿಚಯ ಆಗಿದ್ದರು. ಆದರೆ ಈಗ ಆರಾಧನಾ ರಾಮ್ ಪರಿಚಯ ಆಗುತ್ತಿದ್ದಾರೆ, ಇನ್ಮುಂದೆ ಕೂಡ. ಅವಳ ಮೇಲೆ ನಿಮ್ಮೆಲ್ಲರ ಹಾರೈಕೆ ಹೀಗೆ ಇರಲಿ ಅಂತಾ ಕೇಳಿಕೊಳ್ಳುತ್ತಿದ್ದೀನಿ.

    ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ ಸಿನಿಮಾದಲ್ಲಿ ನನ್ನ ಮಗಳು ಲಾಂಚ್ ಆಗುತ್ತಿರೋದು ಖುಷಿ ಕೊಟ್ಟಿದೆ. ಮೊದಲ ಸಿನಿಮಾನೇ ನನ್ನ ಮಗಳು ಈಸಿ ಆಗಿ ಆಕ್ಟ್ ಮಾಡಿದ್ದಳು. ಅದಕ್ಕೆ ಕಾರಣ ದರ್ಶನ್ ಅವರು, ನಟಿಸಲು ಆರಾಧನಾಗೆ ಕಂಫರ್ಟ್ ಜೋನ್ ಕೊಟ್ಟರು. ದರ್ಶನ್- ಡೃರೆಕ್ಟರ್ ತರುಣ್ ಸುಧೀರ್ ನನ್ನ ಮಗಳಿಗೆ ನಟನೆ ಹೇಳಿ ಕೊಟ್ಟರು. ಇಂತಹ ಒಳ್ಳೆಯ ಕಲಾವಿದರು ಇರುವ ಸಿನಿಮಾದಲ್ಲಿ ನನ್ನ ಮಗಳಿಗೆ ನಟಿಸಲು ಚಾನ್ಸ್ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ನಟಿ ಮಾತನಾಡಿದ್ದಾರೆ. ಸ್ಕ್ರೀನ್‌ ಮೇಲೆ ನನ್ನ ಮಗಳನ್ನು ಇನ್ನೂ ಮುದ್ದಾಗಿ ತೋರಿಸಿದ್ದಾರೆ ಎಂದು ಮಾಲಾಶ್ರೀ (Malashree) ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ:ರಕ್ಷಿತಾರಂತೆಯೇ ಆರಾಧನಾ ಒನ್ ಟೇಕ್ ಆರ್ಟಿಸ್ಟ್ ಎಂದು ಹೊಗಳಿದ ದರ್ಶನ್

    ಚಾಲೆಂಜಿಂಗ್ ಸ್ಟಾರ್ ದರ್ಶನ್-ಆರಾಧನಾ ರಾಮ್ ನಟನೆಯ ‘ಕಾಟೇರ’ ಸಿನಿಮಾಗೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದು, ರಾಕ್‌ಲೈನ್ ವೆಂಕಟೇಶ್ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಕ್ಷಿತಾರಂತೆಯೇ ಆರಾಧನಾ ಒನ್ ಟೇಕ್ ಆರ್ಟಿಸ್ಟ್ ಎಂದು ಹೊಗಳಿದ ದರ್ಶನ್

    ರಕ್ಷಿತಾರಂತೆಯೇ ಆರಾಧನಾ ಒನ್ ಟೇಕ್ ಆರ್ಟಿಸ್ಟ್ ಎಂದು ಹೊಗಳಿದ ದರ್ಶನ್

    ಸ್ಯಾಂಡಲ್‌ವುಡ್ (Sandalwood) ಡಿಬಾಸ್ ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾ ಕೊನೆಯ ಹಂತದ ಚಿತ್ರೀಕರಣ ಮುಗಿಸಿದೆ. ಇದೇ ಖುಷಿಯಲ್ಲಿ ಸಿನಿಮಾ ಬಗ್ಗೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಈ ವೇಳೆ ಮಾಲಾಶ್ರೀ ಪುತ್ರಿ, ಸಿನಿಮಾದ ನಾಯಕಿ ಆರಾಧನಾ(Aradhana Ram) ಬಗ್ಗೆ ದರ್ಶನ್ ಹಾಡಿ ಹೊಗಳಿದ್ದಾರೆ.

    ದೊಡ್ಡ ಪ್ರೋಡಕ್ಷನ್ ಅನ್ನೋದಕ್ಕಿಂತ, ನನಗೆ ಸಿನಿಮಾ ದೊಡ್ಡದು. ಇಡೀ ಸಿನಿಮಾ ಎಲ್ಲರನ್ನೂ ಕರೆದುಕೊಂಡು ಹೋಗುತ್ತದೆ. ಇವತ್ತು ಕ್ಲೈಮ್ಯಾಕ್ಸ್ ಶೂಟ್ ನಡೆದಿದೆ. ಇನ್ನೂ 3 ಸಾಂಗ್ ಶೂಟ್ ಬಾಕಿಯಿದೆ. ಸಿನಿಮಾ ಶೂಟಿಂಗ್‌ಗೆ ಇಂದು 100ನೇ ದಿನ, ಆದರೆ ನನ್ನ ಡೇಟ್ಸ್ 85 ದಿನ ಅಷ್ಟೇ. ನನಗೆ ಇಂದು 71ನೇ ದಿನದ ಶೂಟಿಂಗ್‌ ದಿನ ಎಂದು ಚಿತ್ರದ ನಟ ದರ್ಶನ್ ಮಾಹಿತಿ ನೀಡಿದ್ದರು.‌ ಇದನ್ನೂ ಓದಿ:‘ಮ್ಯಾಟ್ನಿ’ ಚಿತ್ರದ ಎಣ್ಣೆ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ನೀನಾಸಂ ಸತೀಶ್

    ಮೋಹನ್ ಆಳ್ವಾ ಜೊತೆ ನನಗೆ ನಟಿಸಲು ಮೊದಲ ಸಿನಿಮಾ ಆಗಿದ್ದು, ಈ ಹಿಂದೆ ಅವರ ಸಿನಿಮಾದಲ್ಲಿ ನಾನು ಲೈಟ್ ಬಾಯ್ ಆಗಿ ಕೆಲಸ ಮಾಡಿದ್ದೆ ಎಂದು ಹಳೆಯ ದಿನಗಳನ್ನ ನಟ ಬಿಚ್ಚಿಟ್ಟರು. ಇನ್ನೂ ನಟ ಜಗಪತಿ ಬಾಬು ಅವರು ರಾಬರ್ಟ್ ಆಗಲಿ, ಈ ಸಿನಿಮಾ ಆಗಲಿ ಅವರು ಮನೆಯಿಂದಲೇ ಅಡುಗೆ ಮಾಡಿಸಿ ತರುತ್ತಿದ್ದರು. ಕ್ಯಾರ್‌ವ್ಯಾನ್‌ಗೆ ಹೋಗದೇ ಅಲ್ಲೇ ಚೇರ್ ಹಾಕಿ ಕೂತಿದ್ವಿ. ಎಲ್ಲರ ಮಧ್ಯೆ ಒಳ್ಳೆಯ ಭಾವನೆ ಇತ್ತು ಎಂದು ದರ್ಶನ್ ಮುಕ್ತವಾಗಿ ಮಾತನಾಡಿದ್ದರು.

    ರಕ್ಷಿತಾ (Rakshitha) ಅವರ ಸಾಲಿಗೆ ಆರಾಧನಾ ನಿಲ್ಲುತ್ತಾರೆ. ಅವರು ಒನ್ ಟೇಕ್ ಆರ್ಟಿಸ್ಟ್ ಎಂದು ಸಹನಟಿ ಬಗ್ಗೆ ದರ್ಶನ್ ಮೆಚ್ಚುಗೆ ಸೂಚಿಸಿದ್ದರು. ಮಾಲಾಶ್ರೀ ಅವರ ಬಗ್ಗೆ ನಾವು ಮಾತನಾಡೋಕೆ ಆಗುತ್ತಾ? ಅವರ ಮುಂದೆ ಯಾರೇ ನಿಂತರೂ ಬಡಿದು ಬಾಯಿಗೆ ಹಾಕಿ ಕೊಳ್ಳುತ್ತಾ ಇದ್ರು. ಇದನ್ನೂ ಓದಿ:Gadar 2 ಸಕ್ಸಸ್, ರಾಜಕೀಯಕ್ಕೆ ವಿದಾಯ ಹೇಳ್ತಾರಾ ಸನ್ನಿ ಡಿಯೋಲ್?

    ‘ಕಾಟೇರ’ ಸಿನಿಮಾದಲ್ಲಿ ಮೊದಲಿನಿಂದ ಕಡೆ ತನಕ ಅಶ್ಲೀಲತೆ ಇಲ್ಲ. ಸಭ್ಯವಾದ ಸಂಭಾಷನೆ ಇದೆ. ಚಿತ್ರಕ್ಕೆ ಏನೂ ಬೇಕೋ ನಿರ್ಮಾಪಕರು ಒದಗಿಸಿದ್ದಾರೆ. ಇದು ಒಬ್ಬರ ಸಿನಿಮಾ ಅಲ್ಲ, ಪ್ಲೇಟ್ ತೊಳೆಯೋನಿಂದ ಹಿಡಿದು ಎಲ್ಲರಿಗೂ ಈ ಸಿನಿಮಾ ಸೇರಲಿದೆ ಎಂದು ನಟ ಮಾತನಾಡಿದ್ದರು.

    ಚಾಲೆಂಜಿಂಗ್ ಸ್ಟಾರ್ ದರ್ಶನ್-ಆರಾಧನಾ ರಾಮ್ ನಟನೆಯ ‘ಕಾಟೇರ’ ಸಿನಿಮಾಗೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದು, ರಾಕ್‌ಲೈನ್ ವೆಂಕಟೇಶ್ (Rockline Venkatesh) ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ರಿಲೀಸ್ ಆಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]