Tag: Katera

  • ಮೂರು ದಿನಕ್ಕೆ’ ಕಾಟೇರ’ ಗಳಿಸಿದ್ದೆಷ್ಟು?: ಗೆದ್ದ ಬಾಕ್ಸಾಫೀಸ್ ಸುಲ್ತಾನ್

    ಮೂರು ದಿನಕ್ಕೆ’ ಕಾಟೇರ’ ಗಳಿಸಿದ್ದೆಷ್ಟು?: ಗೆದ್ದ ಬಾಕ್ಸಾಫೀಸ್ ಸುಲ್ತಾನ್

    ಕಾಟೇರ ಸಿನಿಮಾದ ಅಬ್ಬರ ಮೂರನೇ ದಿನಕ್ಕೂ ಮುಂದುವರೆದಿದೆ. ಮೂರನೇ ದಿನದ ಕಲೆಕ್ಷನ್ ಬರೋಬ್ಬರಿ 20.94 ಕೋಟಿ ಎಂದು ಅಂದಾಜಿಸಲಾಗಿದೆ.  ವೀಕೆಂಡ್ ನಲ್ಲಿ ಕಾಟೇರ ದಾಖಲೆ ರೀತಿಯಲ್ಲಿ ಹಣ ಮಾಡಿದೆ. ಎರಡನೇ ದಿನದ ಕಲೆಕ್ಷನ್ 17.35 ಕೋಟಿ ರೂಪಾಯಿ ಆಗಿದ್ದರೆ. ಮೊದಲ ದಿನ ಮತ್ತು ಎರಡನೇ ದಿನ ಹಾಗೂ ಮೂರನೇ ದಿನದ ಸೇರಿ ಒಟ್ಟು ಮೂರು ದಿನಕ್ಕೆ 58.08 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ.

    ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿತ್ತು. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ಮೊನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್‌ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್‌ ಡಿಬಾಸ್‌ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.

    ಮೊದಲ ದಿನ ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.

     

    ದರ್ಶನ್‌ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್‌ ಗುರುವಾರ ಮಧ್ಯರಾತ್ರಿಯಿಂದಲೇ ಶುರುವಾಗಿದೆ. ಮೊದಲ ದಿನ ರಾಜ್ಯದ 21 ಕಡೆ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಿಸಲಾಗಿತ್ತು. 43 ಥಿಯೇಟರ್‌ಗಳಲ್ಲಿ ಮುಂಜಾನೆ 3 ಗಂಟೆಯಿಂದ, 77 ಥಿಯೇಟರ್‌ಗಳಲ್ಲಿ ಬೆಳಗ್ಗಿನ ಜಾವ 4 ಗಂಟೆಯಿಂದ ಶೋ ಆರಂಭವಾಗಿತ್ತು. ಸೂರ್ಯೋದಯವಾಗುವುದಕ್ಕೂ ಮುನ್ನವೇ ಕಾಟೇರ 335 ಶೋಗಳಲ್ಲಿ ಅಬ್ಬರಿಸಿದ್ದು ಅಭಿಮಾನಿಗಳ ಮನಗೆದ್ದಿದೆ. ಮೊದಲ ದಿನ 1,600 ಶೋಗಳ ಪ್ರದರ್ಶನಕ್ಕೆ ಸಜ್ಜಾಗಿತ್ತು.

  • ‘ಕಾಟೇರ’ ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

    ‘ಕಾಟೇರ’ ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

    ರ್ಶನ್ (Darshan) ನಟನೆಯ ಕಾಟೇರ (Katera) ಸಿನಿಮಾ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಅಲ್ಲದೇ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗುತ್ತಿದೆ. ಸಿನಿಮಾ ರಂಗದ ಅನೇಕ ಗಣ್ಯರಷ್ಟೇ ಅಲ್ಲ, ರಾಜಕಾರಣಿಗಳು ಕೂಡ ಸಿನಿಮಾ ವೀಕ್ಷಿಸಿ ಮೆಚ್ಚುಗೆಯನ್ನು ಸೂಚಿಸುತ್ತಿದ್ದಾರೆ. ಕಾಟೇರ ಸಿನಿಮಾ ವೀಕ್ಷಣೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Prahlad Joshi), ದರ್ಶನ್ ನಟನೆಗೆ ಫುಲ್ ಫಿದಾ ಆಗಿದ್ದಾರೆ.  ಚಿತ್ರತಂಡಕ್ಕೂ ಶುಭಾಶಯ ತಿಳಿಸಿದ್ದಾರೆ.

    ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಜೋಶಿ, ‘ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಕ್‌ಲೈನ್ ವೆಂಕಟೇಶ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಕಾಟೇರ ಚಲನಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು. ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ ಅಚ್ಚುಕಟ್ಟಾಗಿ ಅದ್ಭುತವಾಗಿ ತೋರಿಸಲಾಗಿದೆ. ದರ್ಶನ್ ಅವರ ಅದ್ಭುತ ನಟನೆ ಅಭಿಮಾನಿಗಳನ್ನು ಚಲನಚಿತ್ರ ಪ್ರಿಯರನ್ನು ಮತ್ತೊಮ್ಮೆ ರಂಜಿಸುವುದರ ಜೊತೆಗೆ ಹೊಸ ಸಂದೇಶವನ್ನು ಸಾರಿದ್ದಾರೆ. ಚಲನಚಿತ್ರ ಯಶಸ್ಸು ಕಾಣಲಿ ಎಂದು ಕಾಟೇರ ಚಲನಚಿತ್ರ ತಂಡಕ್ಕೆ ಶುಭ ಹಾರೈಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

    ಜೋಶಿ ಅವರು ಸಿನಿಮಾ ವೀಕ್ಷಿಸುವ ಸಮಯದಲ್ಲಿ ಶಾಸಕ ಮಹೇಶ್‌ ಟೆಂಗಿನಕಾಯಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ನಾಗರಾಜ್ ಛಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಂದಗೋಳಮಠ ಸೇರಿದಂತೆ ಹಲವರು ಹಾಜರಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ. ಈ ಹಿಂದೆಯೂ ಪ್ರಹ್ಲಾದ್ ಜೋಶಿ ಅವರು ಕಾಟೇರ ಸಿನಿಮಾಗೆ ಸಾಥ್ ನೀಡಿದ್ದರು. ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ್ದರು.

  • ಮುಂದುವರೆದ ‘ಕಾಟೇರ’ ಅಬ್ಬರ: 2ನೇ ದಿನದ ಕಲೆಕ್ಷನ್ ಜೋರು

    ಮುಂದುವರೆದ ‘ಕಾಟೇರ’ ಅಬ್ಬರ: 2ನೇ ದಿನದ ಕಲೆಕ್ಷನ್ ಜೋರು

    ರ್ಶನ್ ನಟನೆಯ ಕಾಟೇರ ಸಿನಿಮಾದ ಅಬ್ಬರ ಎರಡನೇ ವಾರಕ್ಕೂ ಮುಂದುವರೆದಿದೆ. ಎರಡನೇ ದಿನದ ಕಲೆಕ್ಷನ್ 17.35 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಮೊದಲ ದಿನ ಮತ್ತು ಎರಡನೇ ದಿನ ಸೇರಿ ಒಟ್ಟು ಎರಡು ದಿನಕ್ಕೆ 37.14 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ.

    ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿತ್ತು. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ಮೊನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್‌ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್‌ ಡಿಬಾಸ್‌ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.

    ಮೊದಲ ದಿನ ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.

     

    ದರ್ಶನ್‌ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್‌ ಗುರುವಾರ ಮಧ್ಯರಾತ್ರಿಯಿಂದಲೇ ಶುರುವಾಗಿದೆ. ಮೊದಲ ದಿನ ರಾಜ್ಯದ 21 ಕಡೆ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಿಸಲಾಗಿತ್ತು. 43 ಥಿಯೇಟರ್‌ಗಳಲ್ಲಿ ಮುಂಜಾನೆ 3 ಗಂಟೆಯಿಂದ, 77 ಥಿಯೇಟರ್‌ಗಳಲ್ಲಿ ಬೆಳಗ್ಗಿನ ಜಾವ 4 ಗಂಟೆಯಿಂದ ಶೋ ಆರಂಭವಾಗಿತ್ತು. ಸೂರ್ಯೋದಯವಾಗುವುದಕ್ಕೂ ಮುನ್ನವೇ ಕಾಟೇರ 335 ಶೋಗಳಲ್ಲಿ ಅಬ್ಬರಿಸಿದ್ದು ಅಭಿಮಾನಿಗಳ ಮನಗೆದ್ದಿದೆ. ಮೊದಲ ದಿನ 1,600 ಶೋಗಳ ಪ್ರದರ್ಶನಕ್ಕೆ ಸಜ್ಜಾಗಿತ್ತು.

  • ‘ಸೆಲೆಬ್ರಿಟಿಸ್’ಗೆ ಧನ್ಯವಾದ ತಿಳಿಸಿದ ದರ್ಶನ್

    ‘ಸೆಲೆಬ್ರಿಟಿಸ್’ಗೆ ಧನ್ಯವಾದ ತಿಳಿಸಿದ ದರ್ಶನ್

    ರಾಜ್ಯಾದ್ಯಂತ ಕಾಟೇರ ಸಿನಿಮಾದ ಅಬ್ಬರ ಜೋರಾಗಿದೆ. ಸಿನಿಮಾ, ನಟನೆ, ಸಂಭಾಷಣೆ, ನಿರ್ದೇಶನ ಹೀಗೆ ಎಲ್ಲದರಲ್ಲೂ ಸಿನಿಮಾ ಪಾಸ್ ಅನಿಸಿಕೊಂಡಿದೆ. ಅದರಲ್ಲೂ ದರ್ಶನ್ ಅಭಿಮಾನಿಗಳು ಚಿತ್ರವನ್ನು ತಲೆಮೇಲೆ ಹೊತ್ತುಕೊಂಡು ಮೆರೆಸುತ್ತಿದ್ದಾರೆ. ಹಾಗಾಗಿ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿಸ್ (Celebrities)ಎಂದು ಕರೆಯುವ ದರ್ಶನ್ ಸೋಷಿಯಲ್ ಮೀಡಿಯಾ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

    ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ ಆಶೀರ್ವಾದಕ್ಕೆ ಕೊನೆಯೆಲ್ಲಿ. ಧನೋಸ್ಮಿ ಸೆಲೆಬ್ರಿಟಿಸ್. ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ ಎಂದು ದರ್ಶನ್ ಬರೆದುಕೊಂಡಿದ್ದಾರೆ. ಜೊತೆಗೆ ಸಿನಿಮಾದ ಜೀವಾಳದಂತಿರುವ ಅವರ ಮತ್ತೊಂದು ಗೆಟಪ್ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಕೋಟಿ ಕೋಟಿ ಗಳಿಕೆ

    ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿದೆ. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ನಿನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್‌ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್‌ ಡಿಬಾಸ್‌ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.

    ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.

    ದರ್ಶನ್‌ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್‌ ನಿನ್ನೆ ಮಧ್ಯರಾತ್ರಿಯಿಂದಲೇ ಶುರುವಾಗಿದೆ. ಮೊದಲ ದಿನ ರಾಜ್ಯದ 21 ಕಡೆ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಿಸಲಾಗಿತ್ತು. 43 ಥಿಯೇಟರ್‌ಗಳಲ್ಲಿ ಮುಂಜಾನೆ 3 ಗಂಟೆಯಿಂದ, 77 ಥಿಯೇಟರ್‌ಗಳಲ್ಲಿ ಬೆಳಗಿನ ಜಾವ 4 ಗಂಟೆಯಿಂದ ಶೋ ಆರಂಭವಾಗಿತ್ತು. ಸೂರ್ಯೋದಯವಾಗುವುದಕ್ಕೂ ಮುನ್ನವೇ ಕಾಟೇರ 335 ಶೋಗಳಲ್ಲಿ ಅಬ್ಬರಿಸಿದ್ದು, ಅಭಿಮಾನಿಗಳ ಮನಗೆದ್ದಿದೆ. ಮೊದಲ ದಿನ 1,600 ಶೋಗಳ ಪ್ರದರ್ಶನಕ್ಕೆ ಸಜ್ಜಾಗಿತ್ತು.

     

    ‘ಕಾಟೇರ’ ಸಿನಿಮಾದ ಕಥೆ ನಡೆಯುವುದು 1974ರ ಕಾಲಘಟ್ಟದಲ್ಲಿ. ಭೀಮನಹಳ್ಳಿ ಎಂಬ ಊರಿನಲ್ಲಿ ಕುಲುಮೆ ಕೆಲಸ ಮಾಡುತ್ತಿರುವ ಯುವಕ ಕಾಟೇರ (ದರ್ಶನ್). ದುಡಿಮೆನೇ ದೇವ್ರು ಅಂತ ನಂಬಿರುವ ವ್ಯಕ್ತಿ. ಆದರೆ ಇದೇ ಊರಿನಲ್ಲಿ ಜಮಿನ್ದಾರನ ದಬ್ಬಾಳಿಕೆ ಇರುತ್ತದೆ, ಗೇಣಿದಾರರಿಗೆ ಅನ್ಯಾಯವಾಗುತ್ತಿರುತ್ತದೆ, ಭತ್ತ ಬೆಳೆಯುವ ರೈತನಿಗೆ ಬದುಕೋದೇ ಕಷ್ಟವಾಗಿರುತ್ತದೆ. ಅಷ್ಟಕ್ಕೂ ಆ ಊರಿನಲ್ಲಿ ಅಂಥದ್ದು ಏನಾಗುತ್ತಿರುತ್ತದೆ? ತನ್ನವರ ಮೇಲಿನ ದಬ್ಬಾಳಿಕೆಗೆ ಕಾಟೇರ ಯಾವ ರೀತಿ ಉತ್ತರ ಕೊಡುತ್ತಾನೆ ಎಂಬ ಕುತೂಹಲದೊಂದಿಗೆ ಸಿನಿಮಾ ಸಾಗುತ್ತದೆ.

  • ‘ಕಾಟೇರ’ ಮೊದಲ ದಿನದ ಗಳಿಕೆ 19.79 ಕೋಟಿ ರೂಪಾಯಿ

    ‘ಕಾಟೇರ’ ಮೊದಲ ದಿನದ ಗಳಿಕೆ 19.79 ಕೋಟಿ ರೂಪಾಯಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಖತ್ ಸುದ್ದಿ. ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿದೆ. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ನಿನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್‌ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್‌ ಡಿಬಾಸ್‌ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.

    ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.

    ದರ್ಶನ್‌ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್‌ ನಿನ್ನೆ ಮಧ್ಯರಾತ್ರಿಯಿಂದಲೇ ಶುರುವಾಗಿದೆ. ಮೊದಲ ದಿನ ರಾಜ್ಯದ 21 ಕಡೆ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಿಸಲಾಗಿತ್ತು. 43 ಥಿಯೇಟರ್‌ಗಳಲ್ಲಿ ಮುಂಜಾನೆ 3 ಗಂಟೆಯಿಂದ, 77 ಥಿಯೇಟರ್‌ಗಳಲ್ಲಿ ಬೆಳಗ್ಗಿನ ಜಾವ 4 ಗಂಟೆಯಿಂದ ಶೋ ಆರಂಭವಾಗಿತ್ತು. ಸೂರ್ಯೋದಯವಾಗುವುದಕ್ಕೂ ಮುನ್ನವೇ ಕಾಟೇರ 335 ಶೋಗಳಲ್ಲಿ ಅಬ್ಬರಿಸಿದ್ದು ಅಭಿಮಾನಿಗಳ ಮನಗೆದ್ದಿದೆ. ಮೊದಲ ದಿನ 1,600 ಶೋಗಳ ಪ್ರದರ್ಶನಕ್ಕೆ ಸಜ್ಜಾಗಿತ್ತು.

     

    ‘ಕಾಟೇರ’ ಸಿನಿಮಾದ ಕಥೆ ನಡೆಯುವುದು 1974ರ ಕಾಲಘಟ್ಟದಲ್ಲಿ. ಭೀಮನಹಳ್ಳಿ ಎಂಬ ಊರಿನಲ್ಲಿ ಕುಲುಮೆ ಕೆಲಸ ಮಾಡುತ್ತಿರುವ ಯುವಕ ಕಾಟೇರ (ದರ್ಶನ್). ದುಡಿಮೆನೇ ದೇವ್ರು ಅಂತ ನಂಬಿರುವ ವ್ಯಕ್ತಿ. ಆದರೆ ಇದೇ ಊರಿನಲ್ಲಿ ಜಮಿನ್ದಾರನ ದಬ್ಬಾಳಿಕೆ ಇರುತ್ತದೆ, ಗೇಣಿದಾರರಿಗೆ ಅನ್ಯಾಯವಾಗುತ್ತಿರುತ್ತದೆ, ಭತ್ತ ಬೆಳೆಯುವ ರೈತನಿಗೆ ಬದುಕೋದೇ ಕಷ್ಟವಾಗಿರುತ್ತದೆ. ಅಷ್ಟಕ್ಕೂ ಆ ಊರಿನಲ್ಲಿ ಅಂಥದ್ದು ಏನಾಗುತ್ತಿರುತ್ತದೆ? ತನ್ನವರ ಮೇಲಿನ ದಬ್ಬಾಳಿಕೆಗೆ ಕಾಟೇರ ಯಾವ ರೀತಿ ಉತ್ತರ ಕೊಡುತ್ತಾನೆ ಎಂಬ ಕುತೂಹಲದೊಂದಿಗೆ ಸಿನಿಮಾ ಸಾಗುತ್ತದೆ.

  • ‘ಕಾಟೇರ’ ವೀಕ್ಷಿಸಿ ಮಗಳಿಗೆ ಮುತ್ತಿಟ್ಟು ಮಾಲಾಶ್ರೀ ಕಣ್ಣೀರು

    ‘ಕಾಟೇರ’ ವೀಕ್ಷಿಸಿ ಮಗಳಿಗೆ ಮುತ್ತಿಟ್ಟು ಮಾಲಾಶ್ರೀ ಕಣ್ಣೀರು

    ನ್ನಡ ಚಿತ್ರರಂಗದ ಹಿರಿಯ ನಟಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ (Aradhanaa Ram) ನಟಿಸಿರೋ ‘ಕಾಟೇರ’ (Katera) ಸಿನಿಮಾ ಇಂದು (ಡಿ.29) ಬಿಡುಗಡೆಯಾಗಿದೆ. ದರ್ಶನ್‌ಗೆ (Darshan) ಜೋಡಿಯಾಗಿ ಪ್ರಭಾ ಪಾತ್ರಕ್ಕೆ ಜೀವ ತುಂಬಿರೋ ಮಗಳ ನಟನೆ ನೋಡಿ ಮಾಲಾಶ್ರೀ ಕಣ್ಣೀರಿಟ್ಟಿದ್ದಾರೆ.

    ‘ಕಾಟೇರ’ ಸಿನಿಮಾವನ್ನು ಮಗಳ ಜೊತೆಯೇ ಮಾಲಾಶ್ರೀ (Malashree) ವೀಕ್ಷಿಸಿ ಸಿನಿಮಾ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತುಂಬಾ ಖುಷಿ ಆಗಿದೆ ಮಗಳ ಆ್ಯಕ್ಟಿಂಗ್ ನೋಡಿ, ಏನು ಹೇಳಬೇಕು ಗೊತ್ತಾಗುತ್ತಿಲ್ಲ. ಒಂದೇ ಸಿನಿಮಾದಲ್ಲಿ ಎಲ್ಲಾ ತರಹ ನಟಿಸಿ ತೋರಿದ್ದಾಳೆ. ತುಂಬಾ ಖುಷಿ ಆಗ್ತಿದೆ. ಅವಳಿಗೆ ಸಿನಿಮಾರಂಗದಲ್ಲಿ ಫ್ಯೂಚರ್ ಇದೆ ಎಂದು ಮಾಲಾಶ್ರೀ ಭಾವುಕರಾಗಿದ್ದಾರೆ.

    ಅಮ್ಮನ ಹೊರತಾಗಿ ಪ್ರೇಕ್ಷಕಿಯಾಗಿ ಹೇಳಬೇಕು ಅಂದರೆ ಮಗಳ ನಟನೆಗೆ ನೂರಕ್ಕೆ ನೂರು ಮಾರ್ಕ್ಸ್ ಕೊಡುತ್ತೀನಿ. ಎಲ್ಲಾ ದೃಶ್ಯಕ್ಕೂ ಜೀವ ತುಂಬಿದ್ದಾಳೆ ಆರಾಧನಾ. ಹೆಮ್ಮೆ ಆಗುತ್ತಿದೆ ಎಂದು ಮಗಳಿಗೆ ಮಾಲಾಶ್ರೀ ಮುತ್ತಿಟ್ಟಿದ್ದಾರೆ.

    ಅಮ್ಮಾ ಅಳೋದು ನೋಡಿ ನನಗೂ ಅಳು ಬರುತ್ತಿದೆ. ಕಾಟೇರ ಬಿಗ್ ಪ್ರಾಜೆಕ್ಟ್‌ನಲ್ಲಿ ನನಗೆ ಅವಕಾಶ ಕೊಟ್ಟಿದ್ದಕ್ಕೆ ಇಡೀ ತಂಡಕ್ಕೆ ಧನ್ಯವಾದಗಳು. ಮೊದಲ ಸಿನಿಮಾದಲ್ಲಿಯೇ ಇಷ್ಟು ಒಳ್ಳೆಯ ಪಾತ್ರ ಸಿಕ್ಕಿದೆ ಇದರ ಬಗ್ಗೆ ಖುಷಿಯಿದೆ ಎಂದು ಕಾಟೇರ ನಟಿ ಆರಾಧನಾ ಭಾವುಕರಾಗಿದ್ದಾರೆ. ಇದನ್ನೂ ಓದಿ:ನಟ ವಿಜಯಕಾಂತ್ ದರ್ಶನಕ್ಕೆ ಬಂದಿದ್ದ ವಿಜಯ್ ಮೇಲೆ ಚಪ್ಪಲಿ ಎಸೆತ

    ದರ್ಶನ್ ನಟನೆಯ ‘ಕಾಟೇರ’ ಸಿನಿಮಾಗೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ದರ್ಶನ್-ಆರಾಧನಾ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡುತ್ತಿದೆ. ಸಿನಿಮಾ ಈ ವರ್ಷದ ಹಿಟ್ ಲಿಸ್ಟ್‌ಗೆ ಸೇರೋದು ಗ್ಯಾರಂಟಿ ಅಂತಿದ್ದಾರೆ ಅಭಿಮಾನಿಗಳು.

  • ಅಂಬಾರಿ ಆನೆ ‘ಅರ್ಜುನ’ಗೆ ಕಾಟೇರ ಸಿನಿಮಾ ಅರ್ಪಣೆ

    ಅಂಬಾರಿ ಆನೆ ‘ಅರ್ಜುನ’ಗೆ ಕಾಟೇರ ಸಿನಿಮಾ ಅರ್ಪಣೆ

    ಪ್ರಾಣಿಗಳ ಮೇಲಿನ ಪ್ರೀತಿಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ ನಟ ದರ್ಶನ್. ಸ್ವತಃ ಪ್ರಾಣಿ ಪ್ರಿಯರೂ ಆಗಿರುವ ದರ್ಶನ್, ಮೈಸೂರು ಮೃಗಾಲಯ ಸೇರಿದಂತೆ ನಾನಾ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಅವರು ದತ್ತು ಪಡೆದಿದ್ದಾರೆ. ಜೊತೆಗೆ ಮನೆಯಲ್ಲೂ ಹಲವು ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಅದರಲ್ಲೂ ಆನೆಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಕಾಟೇರ ಸಿನಿಮಾವನ್ನು ಹುತಾತ್ಮ ಆನೆ (Elephant) ಅರ್ಜುನ್ (Arjun) ಗೆ ಅರ್ಪಿಸಿದ್ದಾರೆ.

    ಸಿನಿಮಾ ಶುರುವಾಗುವ ಮುನ್ನ ‘ನಾಡ ದೇವಿ ಚಾಮುಂಡಿಯ ಅಂಬಾರಿಯನ್ನು ಹೊತ್ತು ದಸರೆಯ ವೈಭವವನ್ನು ಜಗತ್ತಿನಾದ್ಯಂತ ಕಣ್ತುಂಬಿಸಿ ಕಣ್ಮರೆಯಾದ ದೃತ್ಯ ಮತ್ತು ದೈವ ಜೀವ ಅರ್ಜುನ ಇದಕ್ಕೆ ನಮ್ಮ ಕಾಟೇರ ಚಿತ್ರ ಅರ್ಪಣೆ’ ಎಂದು ಬರೆಯಲಾಗಿದೆ. ಈ ಮೂಲಕ ಅರ್ಜುನ್ ಗೆ ಗೌರವ ನೀಡಲಾಗಿದೆ.

    ಇಂದಿನಿಂದ ಕಾಟೇರ ಅಬ್ಬರ

    ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಶುರುವಾಗಿದೆ. ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್‌ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್‌ ಡಿಬಾಸ್‌ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.

    ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.

    ದರ್ಶನ್‌ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್‌ ಮಧ್ಯರಾತ್ರಿಯಿಂದಲೇ ಶುರುವಾಗಿದೆ. ರಾಜ್ಯದ 21 ಕಡೆ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಿಸಲಾಗಿದೆ. 43 ಥಿಯೇಟರ್‌ಗಳಲ್ಲಿ ಮುಂಜಾನೆ 3 ಗಂಟೆಯಿಂದ, 77 ಥಿಯೇಟರ್‌ಗಳಲ್ಲಿ ಬೆಳಗ್ಗಿನ ಜಾವ 4 ಗಂಟೆಯಿಂದ ಶೋ ಆರಂಭವಾಗಿದೆ. ಸೂರ್ಯೋದಯವಾಗುವುದಕ್ಕೂ ಮುನ್ನವೇ ಕಾಟೇರ 335 ಶೋಗಳಲ್ಲಿ ಅಬ್ಬರಿಸಿದ್ದು ಅಭಿಮಾನಿಗಳ ಮನಗೆದ್ದಿದೆ. ಇಡೀ ದಿನ 1,600 ಶೋಗಳ ಪ್ರದರ್ಶನಕ್ಕೆ ಸಜ್ಜಾಗಿದೆ. ಒಟ್ಟಿನಲ್ಲಿ ಬಹುದಿನಗಳ ಬಳಿಕ ದರ್ಶನ್‌ ಮಾಸ್‌ ಲುಕ್‌ನಲ್ಲಿ ತೆರೆಯ ಮೇಲೆ ಕಾಲಿಟ್ಟಿರುವುದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

     

    ‘ಕಾಟೇರ’ ಸಿನಿಮಾದ ಕಥೆ ನಡೆಯುವುದು 1974ರ ಕಾಲಘಟ್ಟದಲ್ಲಿ. ಭೀಮನಹಳ್ಳಿ ಎಂಬ ಊರಿನಲ್ಲಿ ಕುಲುಮೆ ಕೆಲಸ ಮಾಡುತ್ತಿರುವ ಯುವಕ ಕಾಟೇರ (ದರ್ಶನ್). ದುಡಿಮೆನೇ ದೇವ್ರು ಅಂತ ನಂಬಿರುವ ವ್ಯಕ್ತಿ. ಆದರೆ ಇದೇ ಊರಿನಲ್ಲಿ ಜಮಿನ್ದಾರನ ದಬ್ಬಾಳಿಕೆ ಇರುತ್ತದೆ, ಗೇಣಿದಾರರಿಗೆ ಅನ್ಯಾಯವಾಗುತ್ತಿರುತ್ತದೆ, ಭತ್ತ ಬೆಳೆಯುವ ರೈತನಿಗೆ ಬದುಕೋದೇ ಕಷ್ಟವಾಗಿರುತ್ತದೆ. ಅಷ್ಟಕ್ಕೂ ಆ ಊರಿನಲ್ಲಿ ಅಂಥದ್ದು ಏನಾಗುತ್ತಿರುತ್ತದೆ? ತನ್ನವರ ಮೇಲಿನ ದಬ್ಬಾಳಿಕೆಗೆ ಕಾಟೇರ ಯಾವ ರೀತಿ ಉತ್ತರ ಕೊಡುತ್ತಾನೆ ಎಂಬ ಕುತೂಹಲದೊಂದಿಗೆ ಸಿನಿಮಾ ಸಾಗುತ್ತದೆ.

  • ‘ಕಾಟೇರ’ದಲ್ಲಿ ದರ್ಶನ್ ಡಬಲ್ ಶೇಡ್ ಪಾತ್ರ

    ‘ಕಾಟೇರ’ದಲ್ಲಿ ದರ್ಶನ್ ಡಬಲ್ ಶೇಡ್ ಪಾತ್ರ

    ನಾಳೆ ರಾಜ್ಯಾದ್ಯಂತ ಕಾಟೇರ ಸಿನಿಮಾ ಮುನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ಒಂದು ಲಕ್ಷ ಟಿಕೆಟ್ ಗಳು ಸೇಲ್ ಆಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಹಲವು ಕಡೆ ಪ್ರದರ್ಶನಕ್ಕೆ ಏರ್ಪಾಟು ಮಾಡಲಾಗಿದೆ. ಈ ಸಿನಿಮಾದಲ್ಲಿ ದರ್ಶನ್ (Darshan) ಡಬಲ್ ಶೇಡ್ (Double Shade) ಪಾತ್ರವನ್ನು ಮಾಡಿದ್ದಾರೆ.

    ಕಾಟೇರ (Katera) ಸಿನಿಮಾದ ಟ್ರೈಲರ್ ಈಗಾಗಲೇ ರಿಲೀಸ್ ಆಗಿದೆ. ಅದ್ಭುತ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.

    ಅದು 1974ರ ಕಾಲ. ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆ. ಆವಾಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಅಂತ ಯಾರಿಗೂ ಗೊತ್ತಿಲ್ಲ. ಆ ಕಹಿ ಘಟನೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ ಎಂದಿದ್ದಾರೆ ದರ್ಶನ್.

    ಟ್ರೈಲರ್, ಹಾಡುಗಳು ಅಭಿಮಾನಿಗಳ ಗಮನ ಸೆಳೆದಿವೆ. ಹಾಗಾಗಿ ಅಭಿಮಾನಿಗಳು ಫಸ್ಟ್ ಶೋ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಥಿಯೇಟರ್ ಗಳನ್ನು ಸಿಂಗಾರಗೊಳಿಸಿದ್ದಾರೆ.

  • ದರ್ಶನ್ ನಟನೆಯ ‘ಕಾಟೇರ’ ವಿದೇಶದಲ್ಲಿ ರಿಲೀಸ್ ಯಾವಾಗ?

    ದರ್ಶನ್ ನಟನೆಯ ‘ಕಾಟೇರ’ ವಿದೇಶದಲ್ಲಿ ರಿಲೀಸ್ ಯಾವಾಗ?

    ದೇ ಡಿಸೆಂಬರ್ 29 ರಂದು ರಾಜ್ಯಾದ್ಯಂತ ಕಾಟೇರ (Katera) ಸಿನಿಮಾ ಬಿಡುಗಡೆ ಆಗುತ್ತಿದೆ. ಈಗಾಗಲೇ ಸಿನಿಮಾವನ್ನು ಬರ ಮಾಡಿಕೊಳ್ಳಲು ದರ್ಶನ್ (Darshan) ಅಭಿಮಾನಿಗಳು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಈ ಮಧ್ಯ ವಿದೇಶದಲ್ಲೂ ಸಿನಿಮಾವನ್ನು ಬಿಡುಗಡೆ (Release) ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಕೆನಡಾ ಸೇರಿದಂತೆ ಹಲವು ಕಡೆ ಜನವರಿ 5 ರಿಂದ ಕಾಟೇರ ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

    ರಾಜ್ಯದಲ್ಲಿ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಈಗಾಗಲೇ ಬುಕ್ ಮೈ ಶೋನಲ್ಲಿ ಮುಂಗಡ ಟಿಕೆಟ್ ಅನ್ನು ಖರೀದಿಸಬಹುದಾಗಿದೆ. ಟಿಕೆಟ್ ಬುಕ್ಕಿಂಗ್ ಶುರುವಾಗಿ ಕೇವಲ 72 ಗಂಟೆಗಳಲ್ಲಿ ಬರೋಬ್ಬರಿ 50 ಸಾವಿರ ಟಿಕೆಟ್ ಸೇಲ್ ಆಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಶುರುವಾಗಿ 48 ಗಂಟೆಗಳಲ್ಲಿ ಒಂದು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

    ಒಂದು ಕಡೆ ಕಲೆಕ್ಷನ್ ನಿಂದಾಗಿ ಸಿನಿಮಾ ಸುದ್ದಿ ಮಾಡುತ್ತಿದ್ದರೆ, ಮತ್ತೊಂದು ಕಡೆ ಆಯ್ಕೆ ಮಾಡಿಕೊಂಡ ಕಥೆಯ ಕಾರಣದಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.

    ಅದು 1974ರ ಕಾಲ. ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆ. ಆವಾಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಅಂತ ಯಾರಿಗೂ ಗೊತ್ತಿಲ್ಲ. ಆ ಕಹಿ ಘಟನೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ ಎಂದಿದ್ದಾರೆ ದರ್ಶನ್.

     

    ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್‌ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ವಾಣಿಜ್ಯ ನಗರಿಯಲ್ಲಿ ಅದ್ಧೂರಿಯಾಗಿ ಟ್ರೈಲರ್ ಬಿಡುಗಡೆಗೊಳಿಸಲಾಗಿದೆ.

  • ಬಿಡುಗಡೆಗೂ ಮುನ್ನ ‘ಕಾಟೇರ’ ದಾಖಲೆ: 72 ಗಂಟೆಯಲ್ಲಿ 50 ಸಾವಿರ ಟಿಕೆಟ್ ಮಾರಾಟ

    ಬಿಡುಗಡೆಗೂ ಮುನ್ನ ‘ಕಾಟೇರ’ ದಾಖಲೆ: 72 ಗಂಟೆಯಲ್ಲಿ 50 ಸಾವಿರ ಟಿಕೆಟ್ ಮಾರಾಟ

    ರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾದ ಬಿಡುಗಡೆಗೆ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೇ ಡಿ.29ರಂದು ರಾಜ್ಯದಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದ್ದು, ಈಗಾಗಲೇ ಬುಕ್ ಮೈ ಶೋನಲ್ಲಿ ಮುಂಗಡ ಟಿಕೆಟ್ ಅನ್ನು ಖರೀದಿಸಬಹುದಾಗಿದೆ. ಟಿಕೆಟ್ ಬುಕ್ಕಿಂಗ್ ಶುರುವಾಗಿ ಕೇವಲ 72 ಗಂಟೆಗಳಲ್ಲಿ ಬರೋಬ್ಬರಿ 50 ಸಾವಿರ ಟಿಕೆಟ್ ಸೇಲ್ ಆಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಶುರುವಾಗಿ 48 ಗಂಟೆಗಳಲ್ಲಿ ಒಂದು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

    ಒಂದು ಕಡೆ ಕಲೆಕ್ಷನ್ ನಿಂದಾಗಿ ಸಿನಿಮಾ ಸುದ್ದಿ ಮಾಡುತ್ತಿದ್ದರೆ, ಮತ್ತೊಂದು ಕಡೆ ಆಯ್ಕೆ ಮಾಡಿಕೊಂಡ ಕಥೆಯ ಕಾರಣದಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.

    ಅದು 1974ರ ಕಾಲ. ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆ. ಆವಾಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಅಂತ ಯಾರಿಗೂ ಗೊತ್ತಿಲ್ಲ. ಆ ಕಹಿ ಘಟನೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ ಎಂದಿದ್ದಾರೆ ದರ್ಶನ್.

     

    ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಕಾಟೇರ ಚಿತ್ರ ಇದೇ ತಿಂಗಳು 29ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ನಟ ದರ್ಶನರ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್‌ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ವಾಣಿಜ್ಯ ನಗರಿಯಲ್ಲಿ ಅದ್ಧೂರಿಯಾಗಿ ಟ್ರೈಲರ್ ಬಿಡುಗಡೆಗೊಳಿಸಲಾಗಿದೆ.