Tag: Kaveri House

  • ಕೊನೆಗೂ ಡಿಕೆಶಿಗೆ ಸಿಕ್ತು ಅದೃಷ್ಟದ ಮನೆ – ಕಾವೇರಿ ನಿವಾಸಕ್ಕೆ ಸಿಎಂ ಶಿಫ್ಟ್ – ಯಾರಿಗೆ ಯಾವ ಮನೆ?

    ಕೊನೆಗೂ ಡಿಕೆಶಿಗೆ ಸಿಕ್ತು ಅದೃಷ್ಟದ ಮನೆ – ಕಾವೇರಿ ನಿವಾಸಕ್ಕೆ ಸಿಎಂ ಶಿಫ್ಟ್ – ಯಾರಿಗೆ ಯಾವ ಮನೆ?

    ಬೆಂಗಳೂರು: ಇಷ್ಟು ದಿನ ಸಿದ್ದರಾಮಯ್ಯ (siddaramaiah) ಅವರು ವಾಸವಿದ್ದ ಸರ್ಕಾರಿ ಬಂಗಲೆ ಕುಮಾರಕೃಪಾ (Kumarakrupa Guest House) ಅದೃಷ್ಟದ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಶಿಫ್ಟ್ ಆಗಲಿದ್ದಾರೆ.

    ಸಿದ್ದರಾಮಯ್ಯ ಅವರು ಕಾವೇರಿ ನಿವಾಸಕ್ಕೆ (Kaveri House) ಶಿಫ್ಟ್ ಆದ ನಂತರ ಡಿಕೆ ಶಿವಕುಮಾರ್ ಇಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ಬೊಮ್ಮಾಯಿ ಅವರಿದ್ದ ಮನೆಯನ್ನು ಎಂ.ಬಿ ಪಾಟೀಲ್‌ಗೆ ನಿಗದಿ ಮಾಡಲಾಗಿದ್ದು, ಸ್ಪೀಕರ್ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿದ್ದ ವಸತಿ ಗೃಹವನ್ನ ನೂತನ ಸಚಿವ ಪ್ರಿಯಾಂಕ್ ಖರ್ಗೆಗೆ ನಿಗದಿ ಮಾಡಲಾಗಿದೆ. ಇದನ್ನೂ ಓದಿ: 6 ತಿಂಗಳಲ್ಲಿ ಏನು ಮಾಡಿದ್ದೀರಿ- ಅಧಿಕಾರಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ

    ಸಿದ್ದರಾಮಯ್ಯ ಅವರ ಅದೃಷ್ಟದ ನಿವಾಸ ಕುಮಾರಕೃಪಾ ತನಗೆ ಬೇಕೆಂಬ ಬೇಡಿಕೆಯನ್ನ ಡಿ.ಕೆ ಶಿವಕುಮಾರ್ ಇಟ್ಟಿದ್ದರು. ಅಂದುಕೊಂಡಂತೆ ನೂತನ ಡಿಕೆಶಿ ಅವರಿಗೆ ಸಿದ್ದರಾಮಯ್ಯ ಅವರಿದ್ದ ಅದೃಷ್ಟದ ಮನೆ ಸಿಕ್ಕಿದೆ. ಇದನ್ನೂ ಓದಿ: Exclusive: ಸಿದ್ದು ಅದೃಷ್ಟದ ಮನೆಗೆ ಬೇಡಿಕೆ ಇರಿಸಿದ ಡಿಕೆಶಿ

    ಸಿದ್ದರಾಮಯ್ಯ ಅವರು ಇದ್ದ ನಿವಾಸ ಅದೃಷ್ಟದ ಮನೆ ಎಂದು ಹೇಳಲಾಗಿತ್ತು. ಈ ಹಿಂದೆ ಸಿಎಂ ಆಗಿದ್ದಾಗಲೂ ಸಿದ್ದರಾಮಯ್ಯ ಅವರು ಇದೇ ನಿವಾಸದಲ್ಲಿದ್ದರು. 5 ವರ್ಷ ಆಡಳಿತ ಯಶಸ್ವಿಯಾಗಿ ಪೂರೈಸಿದ್ದರು. ಇದೀಗ ಅದೃಷ್ಟದ ಮನೆಯನ್ನ ಡಿ.ಕೆ ಶಿವಕುಮಾರ್ ಅವರಿಗೆ ನಿಗದಿ ಮಾಡಲಾಗಿದೆ.

    ಯಾರಿಗೆ – ಯಾವ ಮನೆ?

    • ಡಿ.ಕೆ ಶಿವಕುಮಾರ್ – ನಂ.1 ಕುಮಾರ ಕೃಪಾ ಈಸ್ಟ್, ಗಾಂಧಿಭವನ ರಸ್ತೆ
    • ಎಂ.ಬಿ ಪಾಟೀಲ್ – ನಂ.1, ರೇಸ್ ವ್ಯೂ ಕಾಟೇಜ್, ರೇಸ್ ಕೋರ್ಸ್ ರಸ್ತೆ
    • ಕೆ.ಜೆ ಜಾರ್ಜ್ – ನಂ.2, ರೇಸ್ ವ್ಯೂ ಕಾಟೇಜ್, ರೇಸ್ ಕೋರ್ಸ್ ರಸ್ತೆ
    • ಜಿ. ಪರಮೇಶ್ವರ್ – ನಂ.94/ಎ, 9ನೇ ಕ್ರಾಸ್, ಸದಾಶಿವನಗರ, ಆರ್‌ಎಂವಿ ಬಡಾವಣೆ
    • ಪ್ರಿಯಾಂಕ್ ಖರ್ಗೆ – ನಂ.4, ರೇಸ್ ವ್ಯೂ ಕಾಟೇಜ್, ರೇಸ್ ಕೋರ್ಸ್ ರಸ್ತೆ
  • Exclusive: ಸಿದ್ದು ಅದೃಷ್ಟದ ಮನೆಗೆ ಬೇಡಿಕೆ ಇರಿಸಿದ ಡಿಕೆಶಿ

    Exclusive: ಸಿದ್ದು ಅದೃಷ್ಟದ ಮನೆಗೆ ಬೇಡಿಕೆ ಇರಿಸಿದ ಡಿಕೆಶಿ

    ಬೆಂಗಳೂರು: ರಾಜ್ಯದ ನೂತನ ಡಿಸಿಎಂ ಆಗಿರುವ ಡಿ.ಕೆ ಶಿವಕುಮಾರ್ (DK Sivakumar) ಇದೀಗ ಸಿದ್ದರಾಮಯ್ಯ (Siddaramaiah) ಅವರ ಅದೃಷ್ಟದ ನಿವಾಸ ಮೇಲೆ ಕಣ್ಣಿಟ್ಟಿದ್ದಾರೆ.

    ಸಿದ್ದರಾಮಯ್ಯ ಅವರ ಅದೃಷ್ಟದ ನಿವಾಸ ಡಿ.ಕೆ ಶಿವಕುಮಾರ್ ತನಗೆ ಬೇಕೆಂಬ ಬೇಡಿಕೆಯಿಟ್ಟಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: `ಗ್ಯಾರಂಟಿ’ ಕಾಂಗ್ರೆಸ್ ಜನರಿಗೆ ಮೋಸ ಮಾಡಿದೆ, 40% ಕಮಿಷನ್ ಆರೋಪ ತನಿಖೆಯಾಗಲಿ – ಬೊಮ್ಮಾಯಿ

    ಸಿದ್ದರಾಮಯ್ಯ ಹಾಲಿ ಇರುವ ಕುಮಾರಕೃಪಾ (Kumarakrupa GuestHouse) ಅವರ ಅದೃಷ್ಟದ ನಿವಾಸವಾಗಿದೆ. ಈ ಹಿಂದೆ ಸಿಎಂ ಆಗಿದ್ದಾಗಲೂ ಸಿದ್ದರಾಮಯ್ಯ ಇದೇ ನಿವಾಸದಲ್ಲಿದ್ದರು, 5 ವರ್ಷ ಯಶಸ್ವಿಯಾಗಿ ಅಧಿಕಾರ ಪೂರೈಸಿದರು. ಈಗಲೂ ಅದೇ ಮನೆಯಲ್ಲಿದ್ದಾರೆ. ಆದರೀಗ ಕಾವೇರಿ ನಿವಾಸಕ್ಕೆ (Kaveri Guest House) ತೆರಳುತ್ತಿರುವ ಹಿನ್ನೆಲೆಯಲ್ಲಿ ಡಿಕೆಶಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ ಎನ್ನಲಾಗಿದೆ. ಆಪ್ತರನ್ನ ಕಳುಹಿಸಿ ಸರ್ಕಾರಿ ಬಂಗಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಭಾರೀ ಮಳೆಗೆ ಪ್ರವಾಹದಂತಾದ ಜ್ಯುವೆಲ್ಲರಿ ಶಾಪ್ – ಕೊಚ್ಚಿ ಹೋಯ್ತು 2.5 ಕೋಟಿಯ ಆಭರಣ

    ಸಿದ್ದರಾಮಯ್ಯ ಅವರಿಗೆ ಅದೃಷ್ಟ ತಂದ ನಿವಾಸ ನನಗೂ ಅದೃಷ್ಟ ತರುತ್ತೆ ಎಂಬ ನಂಬಿಕೆಯಲ್ಲಿ ಇದ್ದಾರೆ. ಆದರೆ ಇದಕ್ಕೆ ಸಿದ್ದರಾಮಯ್ಯ ಅವರು ಒಪ್ಪುತ್ತಾರಾ? ಅದೃಷ್ಟದ ಮನೆ ಬಿಟ್ಟು ಕಾವೇರಿ ನಿವಾಸಕ್ಕೆ ಹೋಗ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.