Tag: kaveri River

  • ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು

    ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು

    ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ (KRS Dam) ತಮಿಳುನಾಡಿಗೆ (Tamil Nadu) ಬಿಡುಗಡೆಯಾಗುವ ನೀರಿನ ಪ್ರಮಾಣ ದಿನೇ ದಿನೇ ಹೆಚ್ಚಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ (Supreme Court) ಆದೇಶಕ್ಕೂ ಮುನ್ನ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದಾರೆ.

    ಭಾನುವಾರ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 5,238 ಕ್ಯೂಸೆಕ್ ನೀರು ಬಿಡುಗಡೆಯಾದರೆ, ಸೋಮವಾರ 5,243 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಮಂಗಳವಾರ 8,590 ಕ್ಯೂಸೆಕ್ ನೀರು ಹಾಗೂ ಇಂದು ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 9,136 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದೆ.

    ಕೆಆರ್‌ಎಸ್‌ನಿಂದ ರಾಜ್ಯಕ್ಕೆ ನೀರು ಬಿಡುಗಡೆಗಾಗಿ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಆದರೆ ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ದಿನೇ ದಿನೇ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದನ್ನೂ ಓದಿ: ಸಚಿವ ಸಂಪುಟದ ದೋಸ್ತಿಗಳ ನಡುವೆ ಮಹಾ ಬಿರುಕಿದೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಶಾಸಕ

    ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ:
    ಗರಿಷ್ಠ ಮಟ್ಟ – 124.80 ಅಡಿ
    ಇಂದಿನ ಮಟ್ಟ – 111.08 ಅಡಿ
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇAದಿನ ಸಾಂದ್ರತೆ – 32.820 ಟಿಎಂಸಿ
    ಒಳಹರಿವು – 3,078 ಕ್ಯೂಸೆಕ್
    ಹೊರಹರಿವು – 11,602 ಕ್ಯೂಸೆಕ್ ಇದನ್ನೂ ಓದಿ: ಸೇತುವೆ ನಿರ್ಮಿಸಿಕೊಡಿ ಪ್ಲೀಸ್: ಪ್ರಧಾನಿ ಮೋದಿಗೆ ಮಕ್ಕಳ ಪತ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಮಹತ್ವದ ಕಾವೇರಿ ನೀರಾವರಿ ಸಲಹಾ ಸಭೆ

    ಇಂದು ಮಹತ್ವದ ಕಾವೇರಿ ನೀರಾವರಿ ಸಲಹಾ ಸಭೆ

    ಮಂಡ್ಯ: ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂ (KRS Dam) ಭರ್ತಿಯಾಗಿಲ್ಲ. ಇದರ ನಡುವೆ ತಮಿಳುನಾಡಿಗೆ (Tamil Nadu) ಡ್ಯಾಂನಿಂದ ನೀರು ಬಿಡಲಾಗುತ್ತಿದೆ. ಇತ್ತ ರೈತರ ಬೆಳೆಗೆ ನೀರು ಬಿಡಬೇಕಾ ಬಿಡಬಾರದಾ ಎಂಬುದರ ಕುರಿತು ಸೋಮವಾರ ಮಹತ್ವದ ಸಭೆ ನಡೆಯಲಿದೆ.

    ರೈತನ ಬದುಕು ಮಾನ್ಸೂನ್‌ನೊಂದಿಗಿನ ಜೂಜಾಟ ಎಂಬ ಮಾತು ಇದೆ. ಈ ಮಾತಿನಂತೆ ಮಂಡ್ಯ ಜಿಲ್ಲೆಯ ರೈತರ ಕೃಷಿಯ ಬದುಕು ಸದ್ಯ ಜೂಜಾಟದ ರೀತಿಯೇ ಇದೆ. ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಕಾರಣ ಹಳೆ ಮೈಸೂರು ಭಾಗದ ಜೀವನಾಡಿ ಎಂದೇ ಕರೆಯಲ್ಪಡುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಒಡಲು ಇನ್ನೂ ಭರ್ತಿಯಾಗಿಲ್ಲ.

    ಕಳೆದ ವರ್ಷ ಇಷ್ಟೋತ್ತಿಗೆ ಉತ್ತಮ ಮಳೆ ಬಿದ್ದು ಕೆಆರ್‌ಎಸ್ ಡ್ಯಾಂ ಭರ್ತಿಯಾಗುವ ಮೂಲಕ ರೈತರ ಮುಖದಲ್ಲಿ ಮಂದಹಾಸ ಮೂಡುವುದರ ಜೊತೆಗೆ ತಮಿಳುನಾಡಿನ ನೀರಿನ ವ್ಯಾಜ್ಯವು ತಲೆದೋರಿರಲಿಲ್ಲ. ಆದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬೀಳದ ಕಾರಣ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ 35 ಟಿಎಂಸಿ ನೀರು ಮಾತ್ರ ಇದೆ. ಈ ಹೊತ್ತಿನಲ್ಲಿಯೇ ತಮಿಳುನಾಡು ನಮಗೆ ಬಿಡಬೇಕಾದ ನೀರನ್ನು ಬಿಡಿ ಎಂದು ಕೇಂದ್ರದ ಮೊರೆ ಹೋಗಿದೆ. ಈ ಬೆನ್ನಲ್ಲೇ ಕಳೆದ 3 ದಿನಗಳಿಂದ ತಮಿಳುನಾಡಿಗೆ ನಿತ್ಯ 5 ಸಾವಿರಕ್ಕೂ ಅಧಿಕ ಟಿಎಂಸಿ ನೀರು ಹೋಗ್ತಾ ಇದೆ. ಇತ್ತ ನಾಲೆಗಳಿಗೆ ಬಿಟ್ಟಿದ್ದ ನೀರನ್ನು ನಿಲ್ಲಿಸಲಾಗಿದೆ. ಹೀಗಾಗಿ ಮಂಡ್ಯದ ರೈತರು ಆಕ್ರೋಶಿತರಾಗಿದ್ದು, ಬೆಳೆಗಳಿಗೆ ನೀರಿಗಾಗಿ ಆಗ್ರಹ ಮಾಡುತ್ತಾ ಇದ್ದಾರೆ.

    ಮಂಡ್ಯದ (Mandya) ರೈತರ ಎಚ್ಚರಿಕೆಯ ಬೆನ್ನಲ್ಲೇ ಸರ್ಕಾರ ಇದೀಗ ಅಲರ್ಟ್ ಆದ ಹಾಗೆ ಕಾಣುತ್ತಿದೆ. ಇಂದು ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಕೆಆರ್‌ಎಸ್‌ನಲ್ಲಿ ಮಹತ್ವದ ಸಭೆಯೊಂದು ನಡೆಯಲಿದೆ. ಸಭೆಯಲ್ಲಿ ಶಾಸಕರು, ಜಿಲ್ಲಾಧಿಕಾರಿ, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು, ಇತರ ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ನೀರಾವರಿ ಸಲಹಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ರೈತರ ಬೆಳೆಗಳಿಗೆ ನೀರನ್ನು ಬಿಡಬೇಕಾ ಇಲ್ಲವಾ ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಇದನ್ನೂ ಓದಿ: ಟೊಮೆಟೋ ಬೆಲೆಯಲ್ಲಿ ಕೊಂಚ ಇಳಿಕೆ- ನಿಟ್ಟುಸಿರು ಬಿಟ್ಟ ಗ್ರಾಹಕರು

    ಒಂದು ವೇಳೆ ಬೆಳೆಗಳಿಗೆ ನೀರು ಕೊಟ್ಟರೆ ಎಷ್ಟು ಹಂತದಲ್ಲಿ ಎಷ್ಟು ಪ್ರಮಾಣದ ನೀರನ್ನು ಬಿಡಬೇಕು ಎಂಬುದನ್ನು ಚರ್ಚೆ ಮಾಡಲಾಗುತ್ತದೆ. ಸದ್ಯ ತಮಿಳುನಾಡಿಗೆ ಸಂದಿಗ್ಧ ಪರಿಸ್ಥಿತಿಯಲ್ಲಿ ಸಂಕಷ್ಟದ ಸೂತ್ರದ ಅಡಿ ತಮಿಳುನಾಡಿಗೆ ನೀರು ಬಿಡಬೇಕಾಗಿರುವುದು ಅನಿವಾರ್ಯ. ಅಲ್ಲದೇ ಈ ತಿಂಗಳು ಮಳೆ ಬೀಳದೆ ಇದ್ದರೆ ಕುಡಿಯುವ ನೀರನ್ನು ಶೇಖರಣೆ ಮಾಡಿಕೊಳ್ಳಬೇಕಾಗಿರುವುದು ಸರ್ಕಾರದ ಜವಾಬ್ದಾರಿ ಇದೆ. ಇದೆಲ್ಲವನ್ನು ನೋಡಿಕೊಂಡು ಬೆಳೆಗಳಿಗೆ ನೀರು ಕೊಡಬೇಕಾ ಕೊಡಬಾರದ ಎಂದು ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ.

    ಒಟ್ಟಾರೆ ಒಂದು ಕಡೆ ಮಳೆ ಬೀಳದೆ ರೈತರು ಕಂಗಾಲಾಗಿದ್ದರೆ ಇನ್ನೊಂದೆಡೆ ಕೆಆರ್‌ಎಸ್ ಅಣೆಕಟ್ಟೆಯಿಂದ ನೀರು ಬಿಡುತ್ತಾರೋ ಇಲ್ಲವೋ ಎಂಬ ಆತಂಕದಲ್ಲಿ ಮಂಡ್ಯ ರೈತರು ಇದ್ದಾರೆ. ಒಂದು ವೇಳೆ ನಾಲೆಗಳಿಗೆ ನೀರು ಬಿಡುವುದಿಲ್ಲ ಎಂದರೆ ರೈತರು ಆಕ್ರೋಶ ವ್ಯಕ್ತಪಡಿಸುವುದು ಕಟ್ಟಿಟ್ಟ ಬುತ್ತಿಯಾಗಿದೆ. ಇದನ್ನೂ ಓದಿ: ವಿರೋಧದ ನಡುವೆ ಅಂತರ್ಜಾತಿ ವಿವಾಹ- ಠಾಣೆ ಮೆಟ್ಟಿಲೇರಿದ ಜೋಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್ ಡ್ಯಾಂಗೆ ಹರಿದು ಬಂದ 4 ಟಿಎಂಸಿ ನೀರು – 104 ಅಡಿಗೆ ಏರಿಕೆ

    ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್ ಡ್ಯಾಂಗೆ ಹರಿದು ಬಂದ 4 ಟಿಎಂಸಿ ನೀರು – 104 ಅಡಿಗೆ ಏರಿಕೆ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಡ್ಯಾಂಗೆ (KRS Dam) ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಳವಾಗಿದೆ.

    ಕಳೆದ ಕೇವಲ 24 ಗಂಟೆಗಳಲ್ಲಿ ಕೆಆರ್‌ಎಸ್ ಡ್ಯಾಂಗೆ 4 ಟಿಎಂಸಿ ನೀರು ಹರಿದು ಬಂದಿದೆ. ಡ್ಯಾಂನಲ್ಲಿ ಸದ್ಯ 26.811 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಕದ್ದು ತಂದಿದ್ದ ಜೆಸಿಬಿ ಬಳಸಿ ATM ಕಳ್ಳತನಕ್ಕೆ ಯತ್ನ

    ಮಂಗಳವಾರ ಕೆಆರ್‌ಎಸ್ ಡ್ಯಾಂನಲ್ಲಿ 22.809 ಟಿಎಂಸಿ ನೀರು ಸಂಗ್ರಹವಿತ್ತು. ಇದೀಗ ಕೆಆರ್‌ಎಸ್‌ನ ನೀರಿನ ಮಟ್ಟ 104.80 ಅಡಿಗೆ ಹೆಚ್ಚಳವಾಗಿದೆ. ಡ್ಯಾಂಗೆ 51,508 ಕ್ಯೂಸೆಕ್ ಒಳ ಹರಿವು ಇದ್ದು, ಡ್ಯಾಂನಿAದ 5,156 ಕ್ಯೂಸೆಕ್‌ನಷ್ಟು ಹೊರಹರಿವು ಇದೆ. ಇದನ್ನೂ ಓದಿ: ವಾಹನ ತೆರಿಗೆ ಪರಿಷ್ಕರಣೆ – ಯಾವುದು ಎಷ್ಟು ಏರಿಕೆ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRS ನಲ್ಲಿ ನೀರಿನ ಕೊರತೆ – ಕುಡಿಯುವ ನೀರಿಗೆ ಶುರುವಾಯ್ತು ಆತಂಕ!

    KRS ನಲ್ಲಿ ನೀರಿನ ಕೊರತೆ – ಕುಡಿಯುವ ನೀರಿಗೆ ಶುರುವಾಯ್ತು ಆತಂಕ!

    ಮಂಡ್ಯ: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಬಳಿಕ ಇದೀಗ ಮೈಸೂರು (Mysuru) ಜನತೆಗೂ ಕುಡಿಯುವ ನೀರಿಗೆ (Drinking Water) ಕ್ಷಾಮ ಉಂಟಾಗುವ ಭೀತಿ ಶುರುವಾಗಿದೆ.

    ಈ ಬಾರಿ ಮುಂಗಾರು ಕೈಕೊಟ್ಟಿದ್ದು, ಕೆಆರ್‌ಎಸ್ (KRS) ಜಲಾಶಯದ ಒಡಲು ಬರಿದಾಗಿದೆ. ಇದರಿಂದ ಮಂಡ್ಯ ಜಿಲ್ಲೆಯ ರೈತರು (Mandya Farmers) ಬೆಳೆ ಬೆಳೆಯೋದಕ್ಕೂ ನೀರಿಲ್ಲದೇ ಆತಂಕಗೊಂಡಿದ್ದಾರೆ. ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಆರಂಭ- ಮೊದಲ ದಿನವೇ ಕೈಕೊಟ್ಟ ಸ್ಕ್ಯಾನರ್

    ಕಳೆದ ವರ್ಷ ಜುಲೈ ತಿಂಗಳ ವೇಳೆಗೆಲ್ಲಾ ರೈತರು ಕಬ್ಬು, ಭತ್ತ ಬಿತ್ತನೆ ಕಾರ್ಯದಲ್ಲಿ ತೊಡಗುತ್ತಿದ್ದರು. ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆ ಗರಿಗೆದರುತ್ತಿತ್ತು. ಆದ್ರೆ ಈ ಬಾರಿ ಬಿತ್ತನೆ ಕಾರ್ಯವೂ ಇಲ್ಲದೇ, ಕುಡಿಯುವ ನೀರಿಗೂ ಸಮಸ್ಯೆಯಾಗುವ ಪರಿಸ್ಥಿತಿ ಬಂದೊದಗಿದೆ. ಇದನ್ನೂ ಓದಿ: ಬೆಂ-ಮೈ ಹೆದ್ದಾರಿ ಪರಿಶೀಲನೆ – ಇನ್ನು ಮುಂದೆ ಟೋಲ್ ಬಳಿ ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ: ಅಲೋಕ್ ಕುಮಾರ್

    ಬಿತ್ತನೆ ಕಾರ್ಯಕ್ಕೆ ಮುಂದಾಗದಂತೆ ಅಧಿಕಾರಿಗಳಿಂದಲೂ ಸೂಚನೆ ನೀಡಲಾಗಿದೆ. ಕಾವೇರಿ ನೀರಾವರಿ ನಿಗಮದ ಸೂಪರ್ಡೆಂಟ್ ಇಂಜಿನಿಯರ್ ಆನಂದ್ ಬಿತ್ತನೆ ಕಾರ್ಯದಲ್ಲಿ ತೊಡಗದಂತೆ ಮನವಿ ರೈತರಿಗೆ ಮನವಿ ಮಾಡಿದ್ದಾರೆ. ಮುಂದೆ ಮಳೆ ನೋಡಿಕೊಂಡು ಬಿತ್ತನೆ ಕಾರ್ಯ ಶುರು ಮಾಡಿ, ಈಗಿನ ಪರಿಸ್ಥಿತಿಯಲ್ಲಿ ಬೆಳೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ ಎಂದು ಮನವರಿಕೆ ಮಾಡಿದ್ದಾರೆ.

    ಮೈಸೂರು ಜನ ಕುಡಿಯುವ ನೀರಿಗಾಗಿ ಕೆಆರ್‌ಎಸ್ ಜೊತೆಗೆ ಕಬಿನಿ ಜಲಾಶಯದ ನೀರನ್ನ ಅವಲಂಬಿಸಿದ್ದಾರೆ. ಮೈಸೂರು ನಗರ ಪ್ರದೇಶಗಳಿಗೆ ನಿತ್ಯ ಕುಡಿಯಲು ಬರೋಬ್ಬರಿ 305 ಎಂಎಲ್‌ಡಿ ನೀರು ಬೇಕು. ಆದ್ರೆ ಜಲಾಶಯದಲ್ಲಿ ನೀರಿನ ಕೊರತೆ ಭಾರೀ ಪ್ರಮಾಣದಲ್ಲಿ ಉಂಟಾಗಿದ್ದು, ಸದ್ಯದಲ್ಲೇ ಮಳೆಯಾಗದಿದ್ದರೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 20 ದಿನ ನೋ ಪ್ರಾಬ್ಲಂ – ಮಳೆ ಬಾರದೆ ಇದ್ರೆ ಮೈಸೂರಿಗೆ ಕುಡಿಯುವ ನೀರಿಗೆ ಹಾಹಾಕಾರ ನಿಶ್ಚಿತ!

    20 ದಿನ ನೋ ಪ್ರಾಬ್ಲಂ – ಮಳೆ ಬಾರದೆ ಇದ್ರೆ ಮೈಸೂರಿಗೆ ಕುಡಿಯುವ ನೀರಿಗೆ ಹಾಹಾಕಾರ ನಿಶ್ಚಿತ!

    – ಕಳೆದ ವರ್ಷ ಸೌಂದರ್ಯ ರಾಶಿಯಾಗಿದ್ದ ಕೆಆರ್‌ಎಸ್ ಈಗ ಖಾಲಿ

    ಮೈಸೂರು/ಮಂಡ್ಯ: ರಾಜ್ಯ ರಾಜಧಾನಿ ನಂತರ ಮೈಸೂರು (Mysuru) ಜಿಲ್ಲೆಗೂ ಈಗ ಕುಡಿಯುವ ನೀರಿನ ಕ್ಷಾಮ ಉಂಟಾಗೋ ಭೀತಿ ಉಂಟಾಗಿದೆ. ಕಾವೇರಿ ಕೊಳ್ಳದಲ್ಲಿ ನಿರೀಕ್ಷಿತ ಮಟ್ಟಕ್ಕೆ ಬಾರದ ಮುಂಗಾರು ಮಳೆಯ ಪರಿಣಾಮ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗುವ ದಿನಗಳು ಹತ್ತಿರದಲ್ಲೆ ಇವೆ. ಹೀಗಾಗಿ ರೈತರ ಜೊತೆಗೆ ನಗರ ವಾಸಿಗಳಲ್ಲೂ ಆತಂಕ ಹೆಚ್ಚಾಗಿದೆ.

    ಕುಡಿಯುವ ನೀರಿಗಾಗಿ ಕೆಆರ್‌ಎಸ್ (KRS) ಜೊತೆಗೆ ಕಬಿನಿ ಜಲಾಶಯದ ನೀರನ್ನು ಮೈಸೂರಿಗರು ಅವಲಂಬಿಸಿದ್ದಾರೆ. ಮೈಸೂರು ನಗರ ಪ್ರದೇಶಗಳಲ್ಲಿ ನಿತ್ಯ ಕುಡಿಯಲು ಬರೋಬ್ಬರಿ 305 ಎಂಎಲ್‌ಡಿ ನೀರು ಬೇಕು. ಸದ್ಯ ನಗರಕ್ಕೆ ಅಗತ್ಯದಷ್ಟು ಕುಡಿಯುವ ನೀರು ಸರಬರಾಜು ಆಗುತ್ತಿದೆ. ಈಗ ಜಲಾಶಯದಲ್ಲಿ ಇರುವ ನೀರಿನಲ್ಲಿ 20 ದಿನಕ್ಕೆ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ.

    ಮೈಸೂರು ಜನರು ಕಬಿನಿ ಜಲಾಶಯಕ್ಕಿಂತ ಕಾವೇರಿ ಜಲಾಶಯದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಕೆಆರ್‌ಎಸ್ ಅಣೆಕಟ್ಟಿನಿಂದ ಮೈಸೂರಿಗೆ ನಿತ್ಯ ಬರೋಬ್ಬರಿ 245 ಎಂಎಲ್‌ಡಿ ನೀರು ಪೂರೈಕೆ ಆಗುತ್ತಿದೆ. ಕಬಿನಿ ಅಣೆಕಟ್ಟಿನಿಂದ 60 ಎಂಎಲ್‌ಡಿ ನೀರು ಪೂರೈಕೆ ಆಗುತ್ತಿದೆ.

    ಕೆಆರ್‌ಎಸ್ ಈಗ ಖಾಲಿ ಖಾಲಿ:
    ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂ ನೀರು ಹಾಗೂ ಹಸಿರಿನ ಸೌಂದರ್ಯದಿಂದ ಕಳೆದ ವರ್ಷ ಸರ್ಗಕ್ಕೆ ಕಿಚ್ಚು ಹಚ್ಚುವಂತೆ ಇತ್ತು. ಆದರೆ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕಾವೇರಿ ತಾಯಿಯ ಸೌಂದರ್ಯ ಅಕ್ಷರಶಃ ಕಳೆಗುಂದಿದೆ.

    ಕಳೆದ ವರ್ಷ ಇದೇ ದಿನದ ಆಸುಪಾಸಿನಲ್ಲಿ ಕೆಆರ್‌ಎಸ್ ಡ್ಯಾಂ ದೃಶ್ಯ ನೋಡಿದ್ರೆ ಕಣ್ಣಾಯಿಸಿದ ದೂರವೆಲ್ಲಾ ನೀರು, ಅದರ ಸುತ್ತೇಲ್ಲಾ ಹಸಿರಿನ ರಾಶಿ. ಈ ನೀರು ಮತ್ತು ಹಸಿರು ಎಂಬ ಎರಡು ಆಭರಣಗಳನ್ನು ಧರಿಸಿ ಕಾವೇರಿ ಮಾತೆ ಸೌಂದರ್ಯದ ದೇವತೆಯ ರೀತಿ ಕಂಗೊಳಿಸುತ್ತಾ ಇದ್ದಳು. ಇದನ್ನೂ ಓದಿ: ಧಾರವಾಡ-ಬೆಂಗಳೂರು ನಡುವೆ ಸಂಚರಿಸೋ ವಂದೇ ಭಾರತ್ ರೈಲಿಗೆ ಇಂದು ಮೋದಿ ಚಾಲನೆ

    ಆದ್ರೆ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ದಿನೇ ದಿನೇ ಕುಸಿತ ಕಾಣುತ್ತಿದೆ. ಇದರಿಂದ ನೀರಿನ ಸಮಸ್ಯೆ ಎದುರಾಗಬಹುದು ಎಂಬ ಆತಂಕ ಒಂದು ಕಡೆ ಇದ್ರೆ, ಇನ್ನೊಂದೆಡೆ ಸೌಂದರ್ಯ ದೇವತೆ ರೀತಿಯಲ್ಲಿ ಕಂಗೊಳಿಸುತ್ತಿದ್ದ ಕಾವೇರಿ ಮಾತೆ ಕಳೆಗುಂದಿದ್ದಾಳೆ. ಇದನ್ನೂ ಓದಿ: PSI scam – ಇಂದು ಹೈಕೋರ್ಟ್‍ನಲ್ಲಿ ಮರುಪರೀಕ್ಷೆ ಅರ್ಜಿ ವಿಚಾರಣೆ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • 80 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ

    80 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ

    ಮಂಡ್ಯ: ಜೂನ್ 3ನೇ ವಾರಕ್ಕೆ ಬಂದರೂ ಸಹ ಕಾವೇರಿ ಜಲಾನಯನ (Kaveri River) ಪ್ರದೇಶದಲ್ಲಿ ಇನ್ನೂ ಮಳೆಯಾಗಿಲ್ಲ. ಇದರ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂನ (KRS) ನೀರಿನ ಮಟ್ಟ 80 ಅಡಿಗೆ ಕುಸಿದಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಳೆಯಾಗದೇ (Rain) ಇದ್ದರೆ ಕಾವೇರಿ ನೀರನ್ನು ಅವಲಂಬಿಸಿರುವ ಜನರು ಕುಡಿಯುವ ನೀರಿಗೂ ಸಮಸ್ಯೆ ಎದುರಿಸಬೇಕಾದ ದಿನಗಳು ಬರಲಿವೆ.

    ಈಗಾಗಲೇ ಡ್ಯಾಂನ ಗೇಟ್‍ನ ಬಳಿ ನೀರಿಲ್ಲ. ಇಂತಹ ಪರಿಸ್ಥಿತಿ ಬಂದರೆ ಇರುವ ನೀರನ್ನು ಬಳಕೆ ಮಾಡಿಕೊಳ್ಳಲು, ಮುನ್ನೆಚ್ಚರಿಕೆಯಾಗಿ ಡ್ಯಾಂ ನಿರ್ಮಾಣದ ವೇಳೆಯೇ ಮಾಡಿರುವ ಒಳಭಾಗದ ನಾಲೆಯಿಂದ ಈಗ ಕುಡಿಯಲು ನೀರು ಬಿಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆಯಾಗದೇ ಇದ್ದರೆ ಈ ನಾಲೆಯಿಂದಲೂ ನೀರು ಬಿಡಲು ಸಾಧ್ಯವಿಲ್ಲ. ಇದನ್ನೂ ಓದಿ: ಮಾವಿನ ಹಣ್ಣಿಗಾಗಿ ನಡೆದ ಗಲಾಟೆ- ಸಹೋದರರನ್ನು ಬಡಿದು ಕೊಂದ ದುಷ್ಕರ್ಮಿಗಳು

    ಈಗ ಡ್ಯಾಂನಲ್ಲಿ 10.811 ಟಿಎಂಸಿ ನೀರಿದೆ. ಈ ಪೈಕಿ 3.811 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಬಹುದು. ಉಳಿದ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಇದನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಬರುವ ದಿನಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಭಾಗದ ಜನರಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ. ಇದನ್ನೂ ಓದಿ: ಭಾರೀ ಮಳೆಯಿಂದ ಭೂಕುಸಿತ – ಸಿಕ್ಕಿಂನಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ರಕ್ಷಿಸಿದ ಸೇನೆ

    ಕೆಆರ್‌ಎಸ್ ಇಂದಿನ ನೀರಿನ ಮಟ್ಟ
    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 80.06 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ -10.811 ಟಿಎಂಸಿ
    ಒಳ ಹರಿವು – 289 ಕ್ಯೂಸೆಕ್
    ಹೊರ ಹರಿವು – 3,109

  • ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕುಸಿತ – 5 ವರ್ಷದ ಬಳಿಕ ಶತಮಾನದ ಹಿಂದಿನ ದೇವಾಲಯ ಗೋಚರ

    ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕುಸಿತ – 5 ವರ್ಷದ ಬಳಿಕ ಶತಮಾನದ ಹಿಂದಿನ ದೇವಾಲಯ ಗೋಚರ

    ಮಂಡ್ಯ: ಕೆಆರ್‌ಎಸ್ (KRS Dam) ಆಣೆಕಟ್ಟಿನಲ್ಲಿ ನೀರು ದಾಖಲೆ ಪ್ರಮಾಣದಲ್ಲಿ ಕುಸಿದಿದ್ದು, ಮುಳುಗಡೆಯಾಗಿದ್ದ ಶತಮಾನದ ಹಿಂದಿನ ನಾರಾಯಣಸ್ವಾಮಿ ದೇವಾಲಯ (Narayanaswami Temple) ಐದು ವರ್ಷಗಳ ಬಳಿಕ ಗೋಚರವಾಗುತ್ತಿದೆ.

    ಕಾವೇರಿ ಜಲಾನಯನ (Kaveri River) ಪ್ರದೇಶದಲ್ಲಿ ಇನ್ನೂ ಮುಂಗಾರು ಮಳೆ ಆರಂಭವಾಗದ ಹಿನ್ನೆಲೆ ಕೆಆರ್‌ಎಸ್ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಒಂದೆಡೆ ನೀರಿನ ಕೊರತೆ ಎದುರಾಗುವ ಆತಂಕವಿದೆ. ಮತ್ತೊಂದೆಡೆ ಐದು ವರ್ಷಗಳ ಬಳಿಕ ಅಣೆಕಟ್ಟೆಯಲ್ಲಿ ಮುಳುಡೆಯಾದ ವೈಶಿಷ್ಟ್ಯಗಳು ಬೆಳಿಕಿಗೆ ಬರುತ್ತಿವೆ. ಇದನ್ನೂ ಓದಿ: ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ

    ಡ್ಯಾಂನಲ್ಲಿ 110 ಅಡಿಗೂ ಹೆಚ್ಚು ನೀರು ಸಂಗ್ರಹವಾದರೆ ದೇವಾಲಯ ಸಂಪೂರ್ಣ ಮುಳುಗಡೆಯಾಗುತ್ತದೆ. ಈಗ ಡ್ಯಾಂನಲ್ಲಿ 81 ಅಡಿ ನೀರು ಸಂಗ್ರಹವಾಗಿದೆ. ಇದರಿಂದಾಗಿ ದೇವಾಲಯ ಹಾಗೂ ಶತಮಾನದ ವೀರಗಲ್ಲುಗಳು ಕಾಣಲು ಸಿಗುತ್ತಿವೆ.

    ಕೆಆರ್‌ಎಸ್ ಹಿನ್ನೀರಿನ ಬೋರೆ ಆನಂದೂರು ಗ್ರಾಮದ ಬಳಿಯ ಹಿನ್ನೀರಿನಲ್ಲಿ ಈ ಪುರಾತನ ಕಾಲದ ದೇವಸ್ಥಾನವಿದೆ. ಡ್ಯಾಂ ನಿರ್ಮಾಣ ಆಗುವುದಕ್ಕೂ ಮುನ್ನ ಇಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರಿಂದ ಪೂಜೆ ಮಾಡಲಾಗುತ್ತಿತ್ತು. ಡ್ಯಾಂ ನಿರ್ಮಾಣದ ಬಳಿಕ ದೇವಾಲಯ ಹಾಗೂ ಹಲವು ಹಳ್ಳಿಗಳು ನೀರಿನಲ್ಲಿ ಮುಳುಗಡೆಯಾದವು. ಈಗ ಮೂಲ ವಿಗ್ರಹವನ್ನು ಮಜ್ಜಿಗೆಪುರ ಗ್ರಾಮದ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದೆ. ಇದನ್ನೂ ಓದಿ: ಬೈಕ್ ಅಪಘಾತದಲ್ಲಿ ಕಾಫಿನಾಡಿನ ಎನ್‌ಎಸ್‌ಜಿ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಸಾವು 

  • ಮೀನು ಹಿಡಿಯಲು ತೆರಳಿದ್ದ ಅಣ್ಣ, ತಮ್ಮ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

    ಮೀನು ಹಿಡಿಯಲು ತೆರಳಿದ್ದ ಅಣ್ಣ, ತಮ್ಮ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

    ಮಡಿಕೇರಿ: ಮೀನು (Fish) ಹಿಡಿಯಲು ತೆರಳಿದ್ದ ಬಾಲಕರು ಕಾವೇರಿ ನದಿಯಲ್ಲಿ (Kaveri River) ಮುಳುಗಿ ಮೃತಪಟ್ಟ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.

    ಪೃಥ್ವಿ (7), ಪ್ರಜ್ವಲ್ (4) ಮೃತ ಬಾಲಕರು. ಮೃತ ದುರ್ವೈವಿಗಳು ಇಂದು (ಭಾನುವಾರ) ಬೆಳಗ್ಗೆ ಕೂಡ್ಲುರು ಗ್ರಾಮದ ಬಳಿ ಮಾವಿನತೋಪು ಸಮೀಪ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಕೂಡ್ಲುರು ನಿವಾಸಿ ಕೂಲಿ ಕಾರ್ಮಿಕ ನಾಗರಾಜ್ ಎಂಬವರ ಪುತ್ರ ಪೃಥ್ವಿ, ಆಟೋ ಚಾಲಕ ಸತೀಶ್ ಎಂಬವರ ಪುತ್ರ ಪ್ರಜ್ವಲ್ ಇಬ್ಬರು ಸಂಬಂಧದಲ್ಲಿ ಸಹೋದರರಾಗಿದ್ದರು. ಇದನ್ನೂ ಓದಿ: ವಿದ್ಯಾರ್ಥಿ ಮೇಲೆ ಆವಾಹನೆಯಾಯ್ತು ಪಂಜುರ್ಲಿ ದೈವ!

    ಮನೆಯ ಸಮೀಪ ಜಮೀನಿಗೆ ಹೊಂದಿಕೊಂಡಂತೆ ಇದ್ದ ಕಾವೇರಿ ನದಿಯಲ್ಲಿ ಭಾನುವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಕುಶಾಲನಗರ ಪೊಲೀಸರು ಭೇಟಿ ನೀಡಿ ಕಾವೇರಿಯಲ್ಲಿ ಮುಳುಗಿದ್ದ ಮೃತ ಬಾಲಕರ ದೇಹವನ್ನು ನದಿ ಹೊರತೆಗೆದಿದ್ದಾರೆ. ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಮೃತ ದೇಹಗಳನ್ನು ರವಾನೆ ಮಾಡಲಾಗಿದೆ. ಘಟನೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ – ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ನಾಲ್ಕೂವರೆ ಪಟ್ಟು ಅಧಿಕ ನೀರು ಬಿಡುಗಡೆ

    ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ – ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ನಾಲ್ಕೂವರೆ ಪಟ್ಟು ಅಧಿಕ ನೀರು ಬಿಡುಗಡೆ

    ಚಾಮರಾಜನಗರ: ರಾಜ್ಯದ ಕಾವೇರಿ ಕಣಿವೆಯಲ್ಲಿ (Kaveri River) ಭರ್ಜರಿ ಮಳೆಯಾಗಿರುವ (Rain) ಹಿನ್ನೆಲೆ ತಮಿಳುನಾಡಿಗೆ (Tamil Nadu) ನಿಗಧಿತ ಪ್ರಮಾಣಕ್ಕಿಂತ ನಾಲ್ಕೂವರೆ ಪಟ್ಟು ಅಧಿಕ ನೀರು ಬಿಡುಗಡೆಯಾಗಿದೆ. ಸುಪ್ರೀಂ ಕೋರ್ಟ್ (Supreme Court) ಆದೇಶದ ಪ್ರಕಾರ ಪ್ರಸಕ್ತ ಜಲವರ್ಷ ಜೂನ್‌ನಿಂದ ಸೆಪ್ಟೆಂಬರ್ ವರೆಗೆ 101 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಆದರೆ ಈ ಅವಧಿಯಲ್ಲಿ 452.5 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ.

    1974ರ ನಂತರ ಇದೇ ಮೊದಲ ಬಾರಿಗೆ ಅತ್ಯಧಿಕ ಪ್ರಮಾಣದಲ್ಲಿ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ. ಬಿಳಿಗುಂಡ್ಲು ಜಲಮಾಪನ ಕೇಂದ್ರದಲ್ಲಿ ನೀರಿನ ಪ್ರಮಾಣ ದಾಖಲಾಗಿದೆ. ಜೂನ್‌ನಲ್ಲಿ 16.46 ಟಿಎಂಸಿ, ಜುಲೈ ತಿಂಗಳಿನಲ್ಲಿ 106.93 ಟಿಎಂಸಿ, ಆಗಸ್ಟ್ 223.57 ಟಿಎಂಸಿ ಹಾಗೂ ಸೆಪ್ಟೆಂಬರ್‌ನಲ್ಲಿ 105.52 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಅಗ್ನಿಶಾಮಕ ದಳಕ್ಕೆ ಸೇರ್ಪಡೆಯಾಯ್ತು 90 ಮೀಟರ್ ಏರುವ ಏರಿಯಲ್ ಲ್ಯಾಡರ್ ವಾಹನ

    ಕಳೆದ 4 ವರ್ಷಗಳಿಂದಲೂ ತಮಿಳುನಾಡಿಗೆ ನಿಗದಿಂತ ಅಧಿಕ ಪ್ರಮಾಣದ ನೀರು ಹರಿದು ಹೋಗಿದೆ. 2018-19 ರ ಜಲವರ್ಷದಲ್ಲಿ ನಿಗಧಿತ ಪ್ರಮಾಣಕ್ಕಿಂತ 228 ಟಿಎಂಸಿ, 2019-20 ರಲ್ಲಿ 97 ಟಿಎಂಸಿ, 2020-21 ರಲ್ಲಿ 34 ಟಿಎಂಸಿ, 2021-22 ರಲ್ಲಿ 103 ಟಿಎಂಸಿ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. ಆದರೆ ಈ ವರ್ಷ ಜಲವಿವಾದಕ್ಕೆ ವರುಣ ಅವಕಾಶ ನೀಡಿಲ್ಲ. ಇದನ್ನೂ ಓದಿ: ಅಗ್ನಿ ದುರಂತಗಳಿಂದ ಜನರನ್ನು ರಕ್ಷಿಸುವ ಸಾಮರ್ಥ್ಯ ಹೆಚ್ಚಳ: ಬೊಮ್ಮಾಯಿ

    ಮೆಟ್ಟೂರು ಜಲಾಶಯದಿಂದ ನದಿ ಮೂಲಕ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದ್ದು, ಹೆಚ್ಚುವರಿ ನೀರನ್ನು ಸಂಗ್ರಹಿಸಲು ಮೇಕೆದಾಟು ಯೋಜನೆ ಸಹಕಾರಿಯಾಗಿದೆ. ಮೇಕೆದಾಟು ಯೋಜನೆ ಜಾರಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ.

    Live Tv

    [brid partner=56869869 player=32851 video=960834 autoplay=true]

  • KRS ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಕಾವೇರಿಕೊಳ್ಳದ ಜನರಿಗೆ ಪ್ರವಾಹ ಭೀತಿ

    KRS ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಕಾವೇರಿಕೊಳ್ಳದ ಜನರಿಗೆ ಪ್ರವಾಹ ಭೀತಿ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.

    ಕೆಆರ್‌ಎಸ್ ಜಲಾಶಯದ ನೀರಿನ ಗರಿಷ್ಠ ಮಟ್ಟ 124.80 ಅಡಿಗಳಿದ್ದು, ಇಂದಿನ ನೀರಿನ ಮಟ್ಟ 124.76 ಅಡಿಗಳಷ್ಟಿದೆ. ಇಂದಿನ ಒಳಹರಿವಿನ ಪ್ರಮಾಣ 67,712 ಕ್ಯೂಸೆಕ್ ಹಾಗೂ ಹೊರ ಹರಿವಿನ ಪ್ರಮಾಣ 81,112 ಕ್ಯೂಸೆಕ್‌ನಷ್ಟಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 49.452 ಟಿಎಂಸಿ ಅಷ್ಟಿದ್ದು, ಇಂದಿನ ಸಂಗ್ರಹ 49.396 ಟಿಎಂಸಿ ಗಳಷ್ಟಿದೆ. ಇದನ್ನೂ ಓದಿ: ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಕಾಲಿಗೆ ಗಂಭೀರ ಪೆಟ್ಟು: ಯಶಸ್ವಿ ಶಸ್ತ್ರ ಚಿಕಿತ್ಸೆ

    ಕೆಆರ್‌ಎಸ್ ಜಲಾಶಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ 81 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದ್ದು, ನಿಮಿಷಾಂಭ ದೇವಸ್ಥಾನದ ಸ್ನಾನ ಘಟ್ಟ ಹಾಗೂ ಅಕ್ಕ-ಪಕ್ಕದ ತೋಟಗಳು, ಮನೆಗಳು ಮುಳುಗಡೆಯಾಗಿವೆ. ಕಾವೇರಿ ನದಿಗೆ ಇಳಿಯದಂತೆ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆ.

    Live Tv
    [brid partner=56869869 player=32851 video=960834 autoplay=true]