Tag: Kavya Maran

  • ಫೈನಲ್‌ನಲ್ಲಿ ಕೋಲ್ಕತ್ತಾ ವಿರುದ್ಧ ಹೈದರಾಬಾದ್‌ಗೆ ಸೋಲು; ದುಃಖ ತಡೆಯಲಾರದೇ ಕಣ್ಣೀರಿಟ್ಟ ಕಾವ್ಯ ಮಾರನ್‌

    ಫೈನಲ್‌ನಲ್ಲಿ ಕೋಲ್ಕತ್ತಾ ವಿರುದ್ಧ ಹೈದರಾಬಾದ್‌ಗೆ ಸೋಲು; ದುಃಖ ತಡೆಯಲಾರದೇ ಕಣ್ಣೀರಿಟ್ಟ ಕಾವ್ಯ ಮಾರನ್‌

    ಚೆನ್ನೈ: 2024ರ 17ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಫೈನಲ್‌ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ ಹೀನಾಯ ಸೋಲನುಭವಿಸಿತು. ತಂಡದ ಸೋಲಿನ ದುಃಖ ತಡೆಯಲಾರದೇ ಕಾವ್ಯ ಮಾರನ್‌ ಅವರು ಕಣ್ಣೀರಿಟ್ಟರು.

    ಚೆಪಕ್‌ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್‌ ಪಂದ್ಯದಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೆಕೆಆರ್‌ ಗೆಲುವು ದಾಖಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಕಳಪೆ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಪ್ರದರ್ಶನದಿಂದಾಗಿ ಪ್ಯಾಟ್‌ ಕಮಿನ್ಸ್‌ ನಾಯಕತ್ವದ ಎಸ್‌ಆರ್‌ಎಚ್‌ ಸೋಲೊಪ್ಪಿಕೊಂಡಿತು.‌ ಇದನ್ನೂ ಓದಿ: ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿ ಹೈದರಾಬಾದ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಯಾವೊಬ್ಬ ಬ್ಯಾಟರ್‌ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಬ್ಯಾಟರ್‌ಗಳು ಒಬ್ಬೊಬ್ಬರಾಗಿ ಪೆವಿಲಿಯನ್‌ ಪರೇಡ್‌ ನಡೆಸಿದರು. ಇದನ್ನು ಕಂಡು ಫ್ರಾಂಚೈಸಿ ಮಾಲೀಕರಾದ ಕಾವ್ಯ ಮಾರನ್‌ ಸಪ್ಪೆ ಮೋರೆ ಹಾಕಿಕೊಂಡು ಕೂತಿದ್ದರು. ಪಂದ್ಯದ ಆರಂಭದಿಂದ ಕೊನೆ ವರೆಗೂ ಅವರ ಮುಖದಲ್ಲಿ ಬೇಸರ ಆವರಿಸಿತ್ತು.

    ಕೊನೆ ಕ್ಷಣದಲ್ಲಿ ಹೈದರಾಬಾದ್‌ ಸೋಲು ಖಚಿತವಾಗುತ್ತಿದ್ದಂತೆ ಕಾವ್ಯ ಮಾರನ್‌ ಅವರ ಮನದಲ್ಲಿದ್ದ ದುಃಖದ ಕಟ್ಟೆಯೊಡೆಯಿತು. ಎಷ್ಟೇ ಪ್ರಯತ್ನಿಸಿದರೂ ಅಳು ತಡೆಯಲಾಗಲಿಲ್ಲ. ಕಣ್ಣಲ್ಲಿ ನೀರು ಹರಿಯಿತು. ಈ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಂಡ ಸೋತರೂ ರನ್ನರ್‌ ಅಪ್‌ ವರೆಗೂ ಉತ್ತಮ ಪ್ರದರ್ಶನ ನೀಡಿದ್ದಕ್ಕೆ ಚಪ್ಪಾಳೆ ತಟ್ಟುವ ಮೂಲಕ ಆಟಗಾರರನ್ನು ಅಭಿನಂದಿಸಿದರು. ಇದನ್ನೂ ಓದಿ: IPL 2024 Champions: 10 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌!

    2024ರ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ಎಸ್‌ಆರ್‌ಹೆಚ್‌ ವಿರುದ್ಧ ಅದ್ಧೂರಿ ಜಯ ಸಾಧಿಸುವ ಮೂಲಕ 17ನೇ ಆವೃತ್ತಿಯ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಇನ್ನೂ 3ನೇ ಬಾರಿಗೆ ಫೈನಲ್‌ ಪ್ರವೇಶಿಸಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 2ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ.

    2012 ಮತ್ತು 2014ರಲ್ಲಿ ಗೌತಮ್‌ ಗಂಭೀರ್‌ ನಾಯಕತ್ವದಲ್ಲಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 10 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ಅವರ ನಾಯಕತ್ವದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಅಲ್ಲದೇ ಹಿಂದೆ ತಂಡದ ನಾಯಕನಾಗಿ ಟ್ರೋಫಿ ಗೆದ್ದುಕೊಟ್ಟಿದ್ದ ಗೌತಮ್‌ ಗಂಭೀರ್‌ ಈ ಬಾರಿ ತಂಡದ ಕೋಚ್‌ ಆಗಿ ಟ್ರೋಫಿ ತಂದುಕೊಟ್ಟಿರುವುದು ವಿಶೇಷ. ಇದನ್ನೂ ಓದಿ: ಕೆಕೆಆರ್‌ ಬೌಲರ್‌ಗಳ ಅಬ್ಬರಕ್ಕೆ ಕರಗಿದ ಸನ್‌ ತಾಪ – 113ಕ್ಕೆ ಹೈದರಾಬಾದ್‌ ಆಲೌಟ್‌; ಕೋಲ್ಕತ್ತಾಗೆ 114 ರನ್‌ಗಳ ಗುರಿ!

  • ಕೋಟಿ ಕೋಟಿ ಸುರಿದು ಖರೀದಿಸಿದ ಆಟಗಾರರು ಬ್ಯಾಟಿಂಗ್‌ನಲ್ಲಿ ಫ್ಲಾಪ್‌ – ಮಾಲೀಕರಿಗೆ ನಿರಾಸೆ

    ಕೋಟಿ ಕೋಟಿ ಸುರಿದು ಖರೀದಿಸಿದ ಆಟಗಾರರು ಬ್ಯಾಟಿಂಗ್‌ನಲ್ಲಿ ಫ್ಲಾಪ್‌ – ಮಾಲೀಕರಿಗೆ ನಿರಾಸೆ

    ಲಕ್ನೋ: ಇಲ್ಲಿನ ಅಟಲ್‌ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ (Lacknow Super Gaints) ಹಾಗೂ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ನಡುವೆ ನಡೆದ ಪಂದ್ಯದಲ್ಲಿ ಲಕ್ನೋ ತಂಡ 5 ವಿಕೆಟ್‌ಗಳ ಜಯ ಸಾಧಿಸಿತು.

    121 ಅತ್ಯಲ್ಪ ರನ್‌ ಗಳಿಸಿದ್ದ ಹೈದರಾಬಾದ್‌ ತಂಡ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ ಹಾಗೂ ಬೌಲರ್‌ಗಳ ಕಳಪೆ ಪ್ರದರ್ಶನದಿಂದ 2ನೇ ಪಂದ್ಯದಲ್ಲೂ ಹೀನಾಯ ಸೋಲನುಭವಿಸಿತು. ಇದನ್ನೂ ಓದಿ: IPL 2023: ಬೌಲರ್‌ಗಳ ಬಿಗಿ ಹಿಡಿತದಲ್ಲಿ ಹೈದರಾಬಾದ್‌ ಒದ್ದಾಟ – ಲಕ್ನೋಗೆ 5 ವಿಕೆಟ್‌ಗಳ ಜಯ

    ಲಕ್ನೋ ಸೂಪರ್‌ ಜೈಂಟ್ಸ್ ತಂಡ ಚೇಸಿಂಗ್‌ ಆರಂಭಿಸುತ್ತಿದ್ದಂತೆ ಬೌಲಿಂಗ್‌ನಲ್ಲಿ ಉತ್ತಮ ಹಿಡಿತ ಸಾಧಿಸಿದ್ದ ಹೈದರಾಬಾದ್‌ ಪವರ್‌ ಪ್ಲೇ ನಂತರ ರನ್‌ ಬಿಟ್ಟುಕೊಟ್ಟಿತು. ಕಳೆದ ಎರಡೂ ಪಂದ್ಯಗಳಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ್ದ ಆರಂಭಿಕ ಕೇಲ್‌ ಮೇಯರ್ಸ್‌ 13 ರನ್‌ಗಳಿಗೆ ಔಟಾಗುತ್ತಿದ್ದಂತೆ ಹೈದರಾಬಾದ್‌ ತಂಡದ ಮಾಲೀಕರಾದ ಕಾವ್ಯ ಮಾರನ್‌ (Kavya Maran) ಹುಚ್ಚೆದ್ದು ಕುಣಿದಿದ್ದರು. ಕೊನೆಯಲ್ಲಿ ತಂಡದ ಸೋಲಿನಿಂದ ನಿರಾಸೆ ಅನುಭವಿಸಿದರು. ಈ ಕುರಿತ ಚಿತ್ರಗಳು ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

    ಕೈಕೋಟ್ಟ ದುಬಾರಿ ಆಟಗಾರರು: ಇನ್ನೂ ಐಪಿಎಲ್‌ ಹರಾಜಿನಲ್ಲಿ ಕೋಟಿ ಕೋಟಿ ಹಣ ಸುರಿದು ಬಿಕರಿ ಮಾಡಿದ ಹೈದರಾಬಾದ್‌ ತಂಡದ ಆಟಗಾರರು ಕಳೆದ 2 ಪಂದ್ಯಗಳಲ್ಲೂ ಬ್ಯಾಟಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ಇದನ್ನೂ ಓದಿ: ರಿಕ್ವೆಸ್ಟ್‌ ಮಾಡಿ ಕೊಹ್ಲಿ ಕೈಹಿಡಿದು ಡಾನ್ಸ್‌ ಮಾಡಿಸಿದ ಬಾದ್‌ ಷಾ – ಚಾಂಪಿಯನ್ಸ್‌ ಆಗೋಣ ಎಂದ ಜೂಹಿ ಚಾವ್ಲಾ

    ಇಂಗ್ಲೆಂಡ್‌ ತಂಡದಲ್ಲಿ ಟೆಸ್ಟ್‌, ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಸ್ಫೋಟಕ ಬ್ಯಾಟಿಂಗ್‌ ನಡೆಸುತ್ತಿದ್ದ ಹ್ಯಾರಿ ಬ್ರೂಕ್‌ (Harry Brook) ಅವರನ್ನ ಹೈದರಾಬಾದ್‌ ತಂಡ 13.25 ಕೋಟಿ ರೂ.ಗೆ ಖರೀದಿಸಿತ್ತು. ಅದೇ ರೀತಿ ರಣಜಿಯಲ್ಲಿ ಏಕಾಂಗಿ ಹೋರಾಟ ನಡೆಸಿ ಕರ್ನಾಟಕ ತಂಡವನ್ನ ಗೆಲುವಿನ ಹಾದಿಯಲ್ಲಿ ಮುನ್ನಡೆಸಿದ್ದ ಮಯಾಂಕ್‌ ಅಗರ್ವಾಲ್‌ (Mayank Agarwal) ಅವರನ್ನ 8.25 ಕೋಟಿ ರೂ. ನೀಡಿ ಖರೀದಿಸಿದೆ. ಟೀಂ ಇಂಡಿಯಾ ಆಟಗಾರರಾದ ರಾಹುಲ್‌ ತ್ರಿಪಾಠಿ (Rahul Tripathi) ಹಾಗೂ ವಾಷಿಂಗ್ಟನ್‌ ಸುಂದರ್‌ ಅವರನ್ನ ಕ್ರಮವಾಗಿ 8.50 ಕೋಟಿ ರೂ., 8.75 ಕೋಟಿ ರೂ. ನೀಡಿ ಖರೀದಿಸಿದೆ. ತಂಡಕ್ಕೆ ದುಬಾರಿ ಬೆಲೆಗೆ ಬಿಕರಿಯಾದ ಆಟಗಾರರ ಕಳಪೆ ಪ್ರದರ್ಶನದಿಂದ ತಂಡ ಸೋಲನುಭವಿಸಿದ್ದು, ಮಾಲೀಕರೂ ನಿರಾಸೆ ಹೊಂದಿದ್ದಾರೆ.

    ಕಳೆದ ಎರಡೂ ಪದ್ಯಗಳಲ್ಲೂ ಹೈದರಾಬಾದ್‌ ತಂಡ ಬೌಲಿಂಗ್‌ನಲ್ಲಿ ಸ್ವಲ್ಪ ಹಿಡಿತ ಸಾಧಿಸಿದರೂ, ಬ್ಯಾಟಿಂಗ್‌ನಲ್ಲಿ ಬೃಹತ್‌ ಮೊತ್ತ ಕಲೆಹಾಕುವಲ್ಲಿ ಎಡವಿದೆ. ಮೊದಲ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 131 ರನ್‌ ಗಳಿಸಿ 72 ರನ್‌ಗಳ ಅಂತರದಲ್ಲಿ ಸೋತರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 121ರನ್‌ ಗಳಿಸಿ 5 ವಿಕೆಟ್‌ಗಳ ಹೀನಾಯ ಸೋಲುಕಂಡಿದೆ. ಮುಂದಿನ ಪಂದ್ಯಗಳಲ್ಲಿ ತಂಡ ಗೆಲುವಿನ ತಂತ್ರ ಹೇಗೆ ರೂಪಿಸಲಿದೆ ಎಂಬುದನ್ನ ಕಾದು ನೋಡಬೇಕಿದೆ.

  • ಆರೆಂಜ್ ಜೆರ್ಸಿಯಲ್ಲಿ ರೈಸರ್ಸ್‍ಗೆ ಚೀಯರ್ ಮಾಡುತ್ತಿರುವ ಚೆಲುವೆ – ಯಾರೂ ಈ ಕಾವ್ಯ?

    ಆರೆಂಜ್ ಜೆರ್ಸಿಯಲ್ಲಿ ರೈಸರ್ಸ್‍ಗೆ ಚೀಯರ್ ಮಾಡುತ್ತಿರುವ ಚೆಲುವೆ – ಯಾರೂ ಈ ಕಾವ್ಯ?

    ಅಬುಧಾಬಿ: ಐಪಿಎಲ್ ಕ್ರಿಕೆಟ್ ಹಬ್ಬ ದಿನೇ ದಿನೇ ರಂಗೇರುತ್ತಿದೆ. ಈಗ ಸನ್ ರೈಸರ್ಸ್ ಹೈದರಾಬಾದ್ ತಂಡ ಫ್ಯಾನ್ ಸ್ಟ್ಯಾಂಡಿನಲ್ಲಿ ಓರ್ವ ಚೆಲುವೆ ಕಾಣಿಸಿಕೊಂಡಿದ್ದು, ಈಕೆ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.

    ಹೌದು ವಾರ್ನರ್ ಪಡೆಗೆ ಪ್ರತಿ ಪಂದ್ಯದಲ್ಲೂ ಚೀಯರ್ ಮಾಡಲು ಆರೆಂಜ್ ಜೆರ್ಸಿ, ಕಣ್ಣಿಗೆ ಕಪ್ಪು ಕನ್ನಡಕ ತೊಟ್ಟ ಯುವತಿಯೊಬ್ಬರು ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರು ಯಾರು ಎಂಬ ಚರ್ಚೆ ನಡೆಯುತ್ತಿದೆ. ಇದಕ್ಕೆ ಈಗ ಉತ್ತರ ಸಿಕ್ಕಿದ್ದು, ಅವರು ಹೈದರಾಬಾದ್ ತಂಡ ಮಾಲೀಕ ಕಲಾನಿಧಿ ಮಾರನ್ ಅವರ ಪುತ್ರಿ 28 ವರ್ಷದ ಕಾವ್ಯ ಮಾರನ್ ಎಂದು ತಿಳಿದು ಬಂದಿದೆ.

    ಕೊರೊನಾ ಕಾರಣದಿಂದ ಐಪಿಎಲ್ ಆರು ತಿಂಗಳು ತಡವಾಗಿ ಯುಎಇಯಲ್ಲಿ ಆರಂಭವಾಗಿದೆ. ಈ ಬಾರಿ ಯಾವುದೇ ಪ್ರೇಕ್ಷಕನಿಲ್ಲದೇ ಖಾಲಿ ಮೈದಾನದಲ್ಲಿ ಐಪಿಎಲ್ ಆರಂಭವಾಗಿದೆ. ತಂಡದ ಆಟಗಾರರು, ಸಿಬ್ಬಂದಿಗಳು ಬಿಟ್ಟರೆ ಕೇವಲ ತಂಡದ ಮಾಲೀಕರು ಮತ್ತು ಅವರ ಕುಟುಂಬದವರು ಮಾತ್ರ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂತೆಯೇ ಸನ್ ರೈಸರ್ಸ್ ಹೈದರಾಬಾದ್ ತಂಡದಿಂದ ಮಾಲೀಕ ಕಲಾನಿತಿ ಮಾರನ್ ಅವರ ಪುತ್ರಿ ಕಾವ್ಯ ಮಾರನ್ ಅವರು ಮೈದಾನದಲ್ಲಿ ಮಿಂಚುತ್ತಿದ್ದಾರೆ.

    ಕಾವ್ಯ ಮಾರನ್ ಅವರ ತಂದೆ ಕಲಾನಿಧಿ ಮಾರನ್ ಅವರು ಸನ್ ಟಿವಿ ನೆಟ್‍ವರ್ಕ್ ನ ಮಾಲೀಕರಾಗಿದ್ದು, 31 ಟಿವಿ ಚಾನೆಲ್ ಮತ್ತು 45 ಎಫ್‍ಎಂ ಚಾನೆಲ್ ಹೊಂದಿದ್ದಾರೆ. ಕಾವ್ಯ ಮಾರನ್ ಚೆನ್ನೈನ ಸ್ಟೆಲಿಯಾ ಮಾರಿಸ್ ಕಾಲೇಜಿನಲ್ಲಿ ಬಿಕಾಂ ಓದಿದ್ದಾರೆ. ನಂತರ ನ್ಯೂಯಾರ್ಕ್ ಯುನಿವರ್ಸಿಟಿಯಲ್ಲಿ ಎಂಬಿಎ ಓದಿ ಮುಗಿಸಿದ್ದಾರೆ. ಓದಿನ ನಂತರ ತಮ್ಮ ಸನ್ ಟಿವಿಯಲ್ಲೇ ಒಂದು ವರ್ಷ ಕೆಲಸ ಮಾಡಿ, ಕಳೆದ ವರ್ಷದಿಂದ ಸನ್ ಟಿವಿ ನೆಟ್‍ವರ್ಕ್ ಬೋರ್ಡಿನ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ 2019ರಲ್ಲಿ ನಡೆದ ಐಪಿಎಲ್ ಬೀಡಿಂಗ್ ಕಾರ್ಯಕ್ರಮದಲ್ಲಿ ಕೂಡ ಕಾವ್ಯ ಕಾಣಿಸಿಕೊಂಡಿದ್ದರು.

    ಓದಿನ ನಂತರ ಅಪ್ಪನ ಉದ್ಯಮದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿರುವ ಕಾವ್ಯ ಮಾರನ್ ಅವರು, ಸನ್ ಟಿವಿ ಗ್ರೂಪಿನ ಡಿಜಿಟೆಲ್ ಮಾರ್ಕೆಟಿಂಗ್‍ನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಸದ್ಯ ಕಾವ್ಯ ಸನ್ ಟಿವಿ ಗ್ರೂಪಿನ ಸನ್ ಎನ್‍ಎಕ್ಸ್‍ಟಿ ಎಂಬ ಒಟಿಟಿ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಇದರ ಜೊತೆಗೆ ತಮ್ಮ ಮಾಲೀಕತ್ವದ ಸನ್‍ರೈಸರ್ಸ್ ಹೈದರಾಬಾದ್ ತಂಡವನ್ನು ಹುರಿದುಂಬಿಸಲು ಪ್ರತಿ ಪಂದ್ಯಕ್ಕೂ ಮೈದಾನಕ್ಕೆ ಬಂದು ಚೀಯರ್ ಮಾಡುತ್ತಿದ್ದಾರೆ.

    ಹಲವಾರು ಉದ್ಯಮಿಗಳು ಮತ್ತು ಚಿತ್ರರಂಗದವರು ಐಪಿಎಲ್ ತಂಡವನ್ನು ಖರೀದಿ ಮಾಡಿದ್ದು, ತಮ್ಮ ತಂಡವನ್ನು ಪ್ರೋತ್ಸಾಹಿಸಲು ಮೈದಾನಕ್ಕೆ ಬರುತ್ತಿದ್ದಾರೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮಾಲೀಕ ಶಾರುಖ್ ಖಾನ್ ಮತ್ತು ಮಗಳು ಸುಹಾನ ಖಾನ್ ಮತ್ತು ಕುಟುಂಬದವರು ಬಂದಿದ್ದರು. ಜೊತೆಗೆ ತಮ್ಮ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಚೀಯರ್ ಮಾಡಲು ನಟಿ ಪ್ರೀತಿ ಜಿಂಟಾ ಬರುತ್ತಾರೆ. ಮುಂಬೈ ಇಂಡಿಯನ್ಸ್ ತಂಡ ಮಾಲೀಕ ಮುಖೇಶ್ ಅಂಬಾನಿಯವರ ಪುತ್ರ ಆಕಾಶ್ ಅಂಬಾನಿ ಕೂಡ ಐಪಿಎಲ್ ಪಂದ್ಯದ ವೇಲೆ ಕಾಣಿಸಿಕೊಳ್ಳುತ್ತಾರೆ.