Tag: KCF

  • ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಖಲಿಸ್ತಾನಿ ಕಮಾಂಡೋ ಹತ್ಯೆ

    ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಖಲಿಸ್ತಾನಿ ಕಮಾಂಡೋ ಹತ್ಯೆ

    ಇಸ್ಲಾಮಾಬಾದ್: ಖಲಿಸ್ತಾನ್ ಸಂಘಟನೆಯ ಕಮಾಂಡೋ ಫೋರ್ಸ್ (Khalistan Commando Force) ಮುಖ್ಯಸ್ಥ ಪರಮ್‍ಜಿತ್ ಸಿಂಗ್ ಪಂಜ್ವಾರ್ ಅಕಾ ಮಲಿಕ್ ಸರ್ದಾರ್ ಸಿಂಗ್‍ನನ್ನು ಶನಿವಾರ ಪಾಕಿಸ್ತಾನದ (Pakistan) ಲಾಹೋರ್‌ನ (Lahore) ಜೋಹರ್ ಟೌನ್‍ನಲ್ಲಿ ಇಬ್ಬರು ಅಪರಿಚಿತರು ಗುಂಡು ಹಾರಿಸಿ ಕೊಂದಿದ್ದಾರೆ.

    ಜೋಹರ್ ಟೌನ್‍ನಲ್ಲಿರುವ ಸೂರ್ಯಕಾಂತಿ ಸೊಸೈಟಿಯಲ್ಲಿರುವ ಅವರ ನಿವಾಸದ ಬಳಿ ಮುಂಜಾನೆ ಬೈಕಿನಲ್ಲಿ ಆಗಮಿಸಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಸಿಂಗ್ ಹಾಗೂ ಅವರ ಅಂಗರಕ್ಷಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಪರಮ್‍ಜಿತ್ ಗುಂಡೇಟಿನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಅಂಗರಕ್ಷಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

    ಭಾರತದ ಪಂಜಾಬ್‍ಗೆ (Punjab) ಡ್ರೋನ್‍ಗಳನ್ನು ಬಳಸಿಕೊಂಡು ಮಾದಕವಸ್ತು ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ತೊಡಗಿದ್ದ ಪರಮ್‍ಜಿತ್, ತರನ್ ಬಳಿಯ ಪಂಜ್ವಾರ್ ಕುಗ್ರಾಮದಲ್ಲಿ ಜನಿಸಿದ್ದ. 1986 ರಲ್ಲಿ ಅವನ ಸೋದರ ಸಂಬಂಧಿ ಲಾಭ್ ಸಿಂಗ್‍ನಿಂದ ತೀವ್ರಗಾಮಿಯಾದ, ನಂತರ ಕೆಸಿಎಫ್‍ಗೆ (KCF) ಸೇರಿದ್ದ. ಅದಕ್ಕೂ ಮೊದಲು ಸೋಹಾಲ್‍ನ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ ಕೆಲಸ ಮಾಡಿದ್ದ.

    1990ರ ದಶಕದಲ್ಲಿ ಭಾರತೀಯ ಭದ್ರತಾ ಪಡೆಗಳಿಂದ (Indian security forces) ಲಾಭ್ ಸಿಂಗ್ ಹತ್ಯೆಯ ನಂತರ, ಪಂಜ್ವಾರ್ ಕೆಸಿಎಫ್‍ನ ಕಮಾಂಡೋ ಸ್ಥಾನ ವಹಿಸಿಕೊಂಡಿದ್ದ. ನಂತರ ಪಾಕಿಸ್ತಾನಕ್ಕೆ ಪಲಾಯನ ಮಾಡಿ, ಪಾಕಿಸ್ತಾನದ ಮೋಸ್ಟ್ ವಾಂಟೆಡ್ ಭಯೋತ್ಪಾದಕರ (Wanted Terrorists) ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ. ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆ ಮತ್ತು ಹೆರಾಯಿನ್ ಕಳ್ಳಸಾಗಣೆ ಮೂಲಕ ಹಣಕಾಸು ಪಡೆಯುವ ಮೂಲಕ ಕೆಸಿಎಫ್‍ನನ್ನು ಅಸ್ತಿತ್ವದಲ್ಲಿ ಇಟ್ಟುಕೊಂಡಿದ್ದ.

    1999ರ ಜೂ. 30 ರಂದು ಚಂಡೀಗಢದ (Chandigarh) ಪಾಸ್‌ಪೋರ್ಟ್ ಕಚೇರಿ ಬಳಿ ನಡೆದ ಬಾಂಬ್ ಸ್ಫೋಟ ನಡೆಸಿದ್ದ. ಈ ಸ್ಫೋಟದಲ್ಲಿ 4 ಮಂದಿ ಗಾಯಗೊಂಡಿದ್ದು, ಹಲವು ವಾಹನಗಳಿಗೂ ಹಾನಿಯಾಗಿತ್ತು. ಇದನ್ನೂ ಓದಿ: ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ – ಓರ್ವ ಅರೆಸ್ಟ್

  • ಯುಕೆ ಲಂಡನ್ ಕೆಸಿಎಫ್ 2021-22 ಸಾಲಿನ ನವ ಸಾರಥಿಗಳ ಘೋಷಣೆ

    ಯುಕೆ ಲಂಡನ್ ಕೆಸಿಎಫ್ 2021-22 ಸಾಲಿನ ನವ ಸಾರಥಿಗಳ ಘೋಷಣೆ

    ರ್ನಾಟಕ ಕಲ್ಚರಲ್ ಫೌಂಡೇಶನ್, ಮಧ್ಯಪ್ರಾಚ್ಯ, ಮಲೇಷ್ಯಾ, ಯುರೋಪ್ ಮತ್ತು ಬ್ರಿಟನ್‍ನ ಕನ್ನಡಿಗರ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆ ಮತ್ತು ವಿವಿಧ ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾರ್ಥಿವೇತನ, ಅಗತ್ಯವಿರುವವರಿಗೆ ವೈದ್ಯಕೀಯ ನೆರವು, ಸಾರ್ವಜನಿಕ ಆಂಬುಲೆನ್ಸ್ ಸೇವೆ, ಆಹಾರ ಕಿಟ್, ವಸತಿ ಯೋಜನೆ, ಬಡ ಹೆಣ್ಣು ಮಕ್ಕಳ ಕಲ್ಯಾಣ ಯೋಜನೆ ಮುಂತಾದ ಸಾಮಾಜಿಕ ಶೈಕ್ಷಣಿಕ ಸೇವೆಗಳ ಮೂಲಕ ಕೆಸಿಎಫ್ ಗುರುತಿಸಿಕೊಂಡಿದೆ.

    ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಸಂಕಷ್ಟಕ್ಕೊಳಗಾದ ಗರ್ಭಿಣಿಯರನ್ನು, ಸಂದರ್ಶನ ವೀಸಾವಧಿ ಮುಗಿದ ಪ್ರವಾಸಿಗರನ್ನು, ಚಿಕಿತ್ಸೆ ಅನಿವಾರ್ಯವಿರುವ ರೋಗಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ಸೇರಿ ಎರಡು ಸಾವಿರದಷ್ಟು ಕನ್ನಡಿಗರನ್ನು ಚಾರ್ಟರ್ ವಿಮಾನಗಳ ಮೂಲಕ ಜಿಸಿಸಿಯಿಂದ ತಾಯ್ನಾಡಿಗೆ ತಲುಪಿಸಿಕೊಟ್ಟಿದೆ.

    ಯುಕೆ ಲಂಡನ್ ಕೆಸಿಎಫ್ 2021-22 ಯುಕೆ ಸಮಿತಿಯ ನವ ಸಾರಥಿಗಳ ಘೋಷಣೆಯಾಗಿದ್ದು ಈ ಕೆಳಗಿನಂತೆ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ರಫೀಕ್ ಹಳೆಯಂಗಡಿ, ಉಪಾಧ್ಯಕ್ಷರಾಗಿ ರಹೀಮ್ ಬೈಕಂಪಾಡಿ ಮತ್ತು ಅಬ್ಬಾಸ್ ಮಕ್ಯಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸದಕತುಲ್ಲಾಹ್ ಮತ್ತು ಜೊತೆ ಕಾರ್ಯದರ್ಶಿಯಾಗಿ ಇರ್ಫಾನ್, ಫೈರೋಜ್, ಕೋಶಾಧಿಕಾರಿಯಾಗಿ ಆಸಿಫ್ ಬಜ್ಪೆಯವರನ್ನು ಆಯ್ಕೆ ಮಾಡಲಾಗಿದೆ.

    ಕೆಸಿಎಫ್ ವಿದ್ಯಾರ್ಥಿ ವಿಂಗ್ ರಚನೆ ಮಾಡಿದ್ದು ಅಧ್ಯಕ್ಷರಾಗಿ ಹಫೀಜ್ ಅಹ್ಮದ್, ಉಪಾಧ್ಯಕ್ಷರಾಗಿ ಫೈಝಲ್, ಪ್ರಧಾನ ಕಾರ್ಯದರ್ಶಿಯಾಗಿ ಬದ್ರುದ್ದೀನ್ ಅವರನ್ನು ಆಯ್ಕೆ ಮಾಡಿ ಘೋಷಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಅಶ್ರಫ್ ಅಮಾನಿ ಲಂಡನ್, ಅರ್ಶಕ್ ನೂರಾನಿ ಲಂಡನ್ ಮತ್ತು ರಹೀಮ್ ಸಆದಿ ಉಪಸ್ಥಿತರಿದ್ದರು.

  • ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿ ರೇಷನ್ ಕಾರ್ಡ್ ಪಡೆಯಬಹುದು: ಯು.ಟಿ.ಖಾದರ್

    ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿ ರೇಷನ್ ಕಾರ್ಡ್ ಪಡೆಯಬಹುದು: ಯು.ಟಿ.ಖಾದರ್

    ಸೌದಿ ಅರೇಬಿಯಾ: ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿಕೊಂಡು ತಮ್ಮ ರೇಷನ್ ಕಾರ್ಡನ್ನು ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

    ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ಮದೀನಾ ಸೆಕ್ಟರ್ ವತಿಯಿಂದ ಸೌದಿ ಅರೇಬಿಯಾದ ಮದೀನಾದಲ್ಲಿರುವ ಕೆ.ಸಿ.ಎಫ್ ಭವನದಲ್ಲಿ ಸೋಮವಾರ ನಡೆದ ಅಸುಪ್ಫಾ 2ನೇ ಆವೃತ್ತಿಯ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟಿಸಿ ಮಾತನಾಡಿದರು.

    ಅನಿವಾಸಿಗಳಾದ ನೀವು ವಿದೇಶದಲ್ಲಿದ್ದುಕೊಂಡೇ ಅರ್ಜಿ ಸಲ್ಲಿಸಿ, ತಿಂಗಳೊಳಗೆ ರೇಷನ್ ಕಾರ್ಡ್ ನಿಮ್ಮ ಕೈ ಸೇರಲಿದೆ ಎಂದರು. ಕಲಿಕೆ ಸಮಯದಲ್ಲಿ ಬಡತನದಿಂದಾಗಿ ಇಂಗ್ಲಿಷ್ ಭಾಷೆ ಕಲಿಯಲು ಸಾಧ್ಯವಾಗದ ಮಂದಿಗೆ ವಿದೇಶದಲ್ಲಿದ್ದುಕೊಂಡು ಕೆ.ಸಿ.ಎಫ್ ಆಧಾರ ಸ್ತಂಭವಾಗಿ ಇಂಗ್ಲಿಷ್ ಭಾಷೆ ಕಲಿಸಲು ಹೆಜ್ಜೆ ಇಟ್ಟಿರುವುದು ಶ್ಲಾಘನೀಯ ಎಂದರು.

    ಇದೇ ಸಂದರ್ಭ ಕೆ.ಸಿ.ಎಫ್ ಕಾರ್ಯಕರ್ತರು ಸಚಿವ ಯು.ಟಿ.ಖಾದರ್ ಹಾಗೂ ಇಹ್ಸಾನ್ ಮುಖ್ಯಸ್ಥ ಇಬ್ರಾಹಿಂ ಸಖಾಫಿ ದಾವಣಗೆರೆ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಕೆ.ಎಸಿ.ಎಫ್ ರಾಷ್ಟ್ರೀಯ ಸಮಿತಿ ಆಯೋಜಿಸಿದ ಅಸುಫ್ಫಾ ಪರೀಕ್ಷೆಯಲ್ಲಿ ಪ್ರಥಮ ಪಡೆದ ಉಮ್ಮರ್ ಗೇರುಕಟ್ಟೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಈ ವೇಳೆ ಐ.ಸಿ.ಎಫ್.ನ ಯೂಸುಫ್ ಸಅದಿ, ಮೊಹಿಯುದ್ದೀನ್ ಸಖಾಫಿ, ಡಿ.ಕೆ.ಎಸ್.ಸಿಯ ಮಹಮೂದ್ ಮುಸ್ಲಿಯಾರ್ ಉದ್ದಬೆಟ್ಟು, ಕೆಸಿಎಫ್ ಮದೀನಾ ವಲಯ ಅಧ್ಯಕ್ಷ ಫಾರೂಕ್ ನಈಮಿ, ಕೆಸಿಎಫ್ ಮದೀನಾ ಸೆಕ್ಟರ್, ಅಧ್ಯಕ್ಷ ಅಶ್ರಫ್ ಸಖಾಫಿ ನೂಜಿ, ಕೆಸಿಎಫ್ ಮದೀನಾ ಝೋನಲ್ ರಿಲೀಫ್ ಚೇರ್ಮನ್ ತಾಜುದ್ದೀನ್ ಸುಳ್ಯ, ರಝಾಕ್ ಅಳಕೆ ಮಜಲ್, ಡಾ.ರಫೀಕ್ ಉಪ್ಪಳ, ವಹಾಬ್ ಕುದ್ರೋಳಿ ಮತ್ತಿತರರು ಉಪಸ್ಥಿತರಿದ್ದರು.