Tag: KCR

  • ತೆಲಂಗಾಣ | ಅಮಾನತು ಬೆನ್ನಲ್ಲೇ BRS ಪಕ್ಷ ತೊರೆದ ಕೆಸಿಆರ್‌ ಪುತ್ರಿ ಕವಿತಾ – MLC ಸ್ಥಾನಕ್ಕೂ ರಾಜೀನಾಮೆ

    ತೆಲಂಗಾಣ | ಅಮಾನತು ಬೆನ್ನಲ್ಲೇ BRS ಪಕ್ಷ ತೊರೆದ ಕೆಸಿಆರ್‌ ಪುತ್ರಿ ಕವಿತಾ – MLC ಸ್ಥಾನಕ್ಕೂ ರಾಜೀನಾಮೆ

    – ಸೋದರ ಸಂಬಂಧಿಗಳಿಂದ ಕುಟಂಬ ನಾಶಕ್ಕೆ ಯತ್ನ ಅಂತ ಕವಿತಾ ಆರೋಪ

    ಹೈದರಾಬಾದ್‌: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಅಮಾನತುಗೊಂಡ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕೆ. ಕವಿತಾ (K Kavitha) ಮರುದಿನವೇ ಬಿಆರ್‌ಎಸ್‌ ಪಕ್ಷ (BRS Party) ತೊರೆದಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್‌ನ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

    ಕೆಸಿಆರ್ ವಿರುದ್ಧದ ಫೆಡರಲ್ ತನಿಖೆಗೆ ತಮ್ಮ ಸೋದರಸಂಬಂಧಿ, ಹಿರಿಯ ಬಿಆರ್‌ಎಸ್ ನಾಯಕ ಟಿ.ಹರೀಶ್ ರಾವ್ ಅವರನ್ನು ಕವಿತಾ ಸಾರ್ವಜನಿಕವಾಗಿ ದೂಷಿಸಿದ್ದರು. ತೆಲಂಗಾಣದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಕಾಲೇಶ್ವರಂ ಯೋಜನೆಗೆ ಸಂಬಂಧಿಸಿದ ಅಕ್ರಮಗಳ ತನಿಖೆಯನ್ನು ಸಿಬಿಐಗೆ (CBI) ವಹಿಸಿದ ಬೆನ್ನಲ್ಲೇ ಈ ಆರೋಪ ಮಾಡಿದ್ದರು. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಅವರನ್ನ ಮಂಗಳವಾರ (ಸೆ.2) ಅಮಾನತುಗೊಳಿಸಲಾಗಿತ್ತು. ಇದನ್ನೂ ಓದಿ: 2024ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕ್‌, ಅಫ್ಘಾನ್‌, ಬಾಂಗ್ಲಾದಿಂದ ಬಂದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ

    ಬಹಳ ನೋವಾಗಿದೆ
    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆ. ಕವಿತಾ ಅವರು, ಬಿಆರ್‌ಎಸ್‌ ಪಕ್ಷದಿಂದ ನನ್ನನ್ನ ಇದ್ದಕ್ಕಿದ್ದಂತೆ ಅಮಾನತುಗೊಳಿಸಿರುವುದು ಬಹಳ ನೋವಿನ ಸಂಗತಿ. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವದ ಜೊತೆಗೆ ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆ ಪತ್ರವನ್ನು ಸ್ಪೀಕರ್‌ ಕೆ. ಚಂದ್ರಶೇಖರ್‌ ರಾವ್‌ ಅವರಿಗೆ ಕಳುಸುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಅಮೆರಿಕ ಒತ್ತಡದ ನಡುವೆ ಭಾರತಕ್ಕೆ ರಷ್ಯಾ ಗಿಫ್ಟ್‌; ಇನ್ನಷ್ಟು S-400 ವಾಯು ರಕ್ಷಣಾ ವ್ಯವಸ್ಥೆ ಪೂರೈಕೆಗೆ ನಿರ್ಧಾರ

    ಮುಂದುವರಿದು.. ನಾನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೆ, ಹಿಂದುಳಿದ ವರ್ಗಗಳಿಗೆ ಮೀಸಲಾತಿಗಾಗಿ ಕೆಲಸ ಮಾಡಿದೆ ಜೊತೆಗೆ ಬಿಆರ್‌ಎಸ್ ಧ್ವಜ ಧರಿಸಿ ಕಾಂಗ್ರೆಸ್ ವಿರುದ್ಧ ಹೋರಾಟದಲ್ಲೂ ಕೆಲಸ ಮಾಡಿದೆ. ಇದು ಹೇಗೆ ಪಕ್ಷ ವಿರೋಧಿ ಚಟುವಟಿಕೆ ಆಗುತ್ತೆ ಅಂತ ನನಗೆ ಅರ್ಥವಾಗುತ್ತಿಲ್ಲ. ನನಗೆ ಯಾವುದೇ ಯಾವುದೇ ಹುದ್ದೆ ಮೇಲೆ ದುರಾಸೆ ಇಲ್ಲ, ಬೇರೆ ಯಾವುದೇ ಪಕ್ಷದ ಜೊತೆಗೂ ಹೋಗುತ್ತಿಲ್ಲ. ತೆಲಂಗಾಣ ಜಾಗೃತಿ ಸದಸ್ಯರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

    ಇದೇ ವೇಳೆ ಸೋದರಸಂಬಂಧಿಯೂ ಆಗಿರುವ ಬಿಆರ್‌ಎಸ್‌ನ ಹಿರಿಯ ನಾಯಕ ಟಿ ಹರೀಶ್ ರಾವ್ ಅವರ ಮೇಲೆ ಇನ್ನಷ್ಟು ಆರೋಪ ಮಾಡಿದರು. ಕಾಂಗ್ರೆಸ್‌ ಸಿಎಂ ರೇವಂತ್‌ ರೆಡ್ಡಿ (Revanth Reddy) ಹಾಗೂ ಹರೀಶ್‌ ರಾವ್‌ರಿಂದ ಕೆಎಸ್‌ಆರ್‌ ಕುಟುಂಬ ನಾಶಪಡಿಸಲು ಯತ್ನಿಸಿದ್ದಾರೆ. ಅದಕ್ಕಾಗಿ ನನ್ನ ತಂದೆ ಕೆಸಿಆರ್ ಮತ್ತು ಅವರ ಸಹೋದರ ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಅವರನ್ನ ಗುರಿಯಾಗಿಸಲು ಸಂಚು ರೂಪಿಸಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಅತ್ಯಾಚಾರ ಆರೋಪದಲ್ಲಿ ಬಂಧನ; ಪೊಲೀಸರ ಮೇಲೆ ಗುಂಡು ಹಾರಿಸಿ ಆಪ್ ಶಾಸಕ ಪರಾರಿ

    ರೇವಂತ್‌ ರೆಡ್ಡಿ ಅವರು ನನ್ನ ಕುಟುಂಬದ ಕೆಟಿಆರ್ ಮತ್ತು ಕೆಸಿಆರ್ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿದ್ರು. ಆದರೆ ಹರೀಶ್ ರಾವ್ ವಿರುದ್ಧ ದಾಖಲಿಸಲಿಲ್ಲ. ಕಾಲೇಶ್ವರಂ (ನೀರಾವರಿ) ಯೋಜನೆ ಶುರುವಾದಾಗ ಹರೀಶ್ ರಾವ್ ನೀರಾವರಿ ಸಚಿವರಾಗಿದ್ದರು. ಆದ್ರೂ ರೇವಂತ್ ರೆಡ್ಡಿ ಅವರ ವಿರುದ್ಧ ಮಾತನಾಡಲಿಲ್ಲ, ಇದು ಸಂಚು ಅನ್ನೋದು ಸ್ಪಷ್ಟವಾಗಿ ತಿಳಿಯುತ್ತದೆ. ಹರೀಶ್ ರಾವ್ ಮತ್ತು ಸಂತೋಷ್ ರಾವ್ ನಮ್ಮ ಕುಟುಂಬ ಮತ್ತು ಪಕ್ಷವನ್ನ ನಾಶಮಾಡಲು ಸಂಚು ರೂಪಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

  • ತೆಲಂಗಾಣ ಮಾಜಿ ಸಿಎಂ KCR ದಿಢೀರ್‌ ಆಸ್ಪತ್ರೆಗೆ ದಾಖಲು – ಬೆಂಬಲಿಗರಲ್ಲಿ ಆತಂಕ

    ತೆಲಂಗಾಣ ಮಾಜಿ ಸಿಎಂ KCR ದಿಢೀರ್‌ ಆಸ್ಪತ್ರೆಗೆ ದಾಖಲು – ಬೆಂಬಲಿಗರಲ್ಲಿ ಆತಂಕ

    ಹೈದರಾಬಾದ್‌: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (K Chandrashekar Rao )ಅವರು ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಚಂದ್ರಶೇಖರ್‌ ರಾವ್‌ ಅವರಿಂದು (ಡಿ.8) ಮುಂಜಾನೆ 2 ಗಂಟೆ ಸುಮಾರಿಗೆ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು, ಸೊಂಟದ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಹೈದರಾಬಾದ್‌ನ ಯಶೋದಾ ಆಸ್ಪತ್ರೆಗೆ (Hyderabad Hospital) ದಾಖಲಿಸಲಾಗಿದೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಸೇರಿ ನಾಲ್ವರು ಕೇಂದ್ರ ಸಚಿವರಿಗೆ ಹೆಚ್ಚುವರಿ ಖಾತೆಗಳ ಉಸ್ತುವಾರಿ

    ಕೆ. ಚಂದ್ರಶೇಖರ್ ರಾವ್ ಅವರು ಕುಸಿದು ಬಿದ್ದ ನಂತರ ಸೊಂಟ ಮುರಿತಕ್ಕೆ ಒಳಗಾಗಿಗಿರಬಹುದು ಎಂದು ವೈದ್ಯರು (Doctor) ಶಂಕಿಸಿದ್ದಾರೆ. ಆರೋಗ್ಯ ತಪಾಸಣೆ (ಸ್ಕ್ಯಾನಿಂಗ್‌) ನಡೆಸಿದ ಬಳಿಕ ನಿಜಾಂಶ ತಿಳಿಯಲಿದೆ ಎಂದು ವೈದ್ಯರು ಹೇಳಿದ್ದಾರೆ. ಕೆಸಿಆರ್‌ (KCR) ಕಳೆದ ಮೂರು ದಿನಗಳಿಂದ ತಮ್ಮ ಮನೆಯಲ್ಲಿ ಜನರನ್ನು ಭೇಟಿಯಾಗುತ್ತಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

    ಕೆಸಿಆರ್ 2014 ರಿಂದ 2023ರ ವರೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆದ್ರೆ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (BRS) ಅನ್ನು ಕಾಂಗ್ರೆಸ್ ಸೋಲಿಸಿತು. ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ 11 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

  • Telangana Election 2023: ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಸ್ಟಾರ್ಸ್‌

    Telangana Election 2023: ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಸ್ಟಾರ್ಸ್‌

    ಹೈದರಾಬಾದ್‌: ಜಿದ್ದಾಜಿದ್ದಿ ಕಣವಾಗಿರುವ ತೆಲಂಗಾಣ ರಾಜ್ಯದಲ್ಲಿಂದು ಮತದಾನ (Telangana Assembly Election 2023) ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭಗೊಂಡಿದ್ದು, ಜನರು ತಮ್ಮ ಹಕ್ಕು ಚಲಾಯಿಸಲು ಉತ್ಸಾಹ ತೋರಿದ್ದಾರೆ.

    ಈ ನಡುವೆ ತೆಲುಗು ಚಿತ್ರರಂಗದ ಖ್ಯಾತ ನಟರಾದ ಅಲ್ಲು ಅರ್ಜುನ್‌ (Allu Arjun), ಜೂನಿಯರ್‌ ಎನ್‌ಟಿಆರ್‌ (Jr NTR) ಹಾಗೂ ಚಿರಂಜೀವಿ (Chiranjeevi) ಹೈದರಾಬಾದ್‌ನಲ್ಲಿ ತಮ್ಮ ಕುಟುಂಬಗಳೊಂದಿಗೆ ಬಂದು ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ್ದಾರೆ. ಇದನ್ನೂ ಓದಿ: Telangana Poll: ಜಿದ್ದಾಜಿದ್ದಿ ಕಣ ತೆಲಂಗಾಣದಲ್ಲಿಂದು ಮತದಾನ – ದಾಖಲೆಯ ಮತದಾನಕ್ಕೆ ಮೋದಿ ಕರೆ

    ಅಲ್ಲು ಅರ್ಜುನ್‌ ತಾವೊಬ್ಬರೇ ಮತಗಟ್ಟೆಗೆ ಬಂದು ವೋಟ್‌ ಮಾಡಿದರು. ಜೂನಿಯರ್‌ ಎನ್‌ಟಿಆರ್‌ ಲಕ್ಷ್ಮಿ ಪ್ರಣತಿ, ತಾಯಿ ಶಾಲಿನಿ ನಂದಮೂರಿ ಅವರೊಂದಿಗೆ ಬಂದು ವೋಟ್‌ ಮಾಡಿದ್ರು. ಇನ್ನೂ ಮೆಗಾಸ್ಟಾರ್‌ ಚಿರಂಜೀವಿ ಸಹ ತಮ್ಮ ಕುಟುಂಬ ಸಮೇತರಾಗಿ ಬಂದು ವೋಟ್‌ ಮಾಡಿ ತನ್ಮ ಹಕ್ಕು ಚಲಾಯಿಸಿದರು. ಜೊತೆಗೆ ಪ್ರತಿಯೊಬ್ಬರು ಬಂದು ವೋಟ್‌ ಮಾಡುವಂತೆ ಮನವಿ ಮಾಡಿದರು. ಸದ್ಯ ಸ್ಟಾರ್ಸ್‌ಗಳು ವೋಟ್‌ ಮಾಡಿರುವ ಫೋಟೋ ವೀಡಿಯೋ ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಇತಿಹಾಸದಲ್ಲೇ ಗರಿಷ್ಠ ಬೆಲೆಗೆ ತಲುಪಿದ ಚಿನ್ನ – ಬರೋಬ್ಬರಿ 65,000ಕ್ಕೆ ಏರಿಕೆ

    ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ಮಿಜೋರಾಂಗಳಲ್ಲಿ ಈಗಾಗಲೇ ನ.7ರಿಂದ ನವೆಂಬರ್ 25ರ ಒಳಗೆ ಮತದಾನ ಮುಕ್ತಾಯವಾಗಿದೆ. ತೆಲಂಗಾಣದಲ್ಲಿಂದು (ನ.30) 119 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇದನ್ನೂ ಓದಿ:  Bigg Boss Kannada- ದೊಡ್ಡಪ್ಪನ ಮಾತು ಕೇಳಿ ತಾಳಿ ಕಟ್ಟಿದ್ದೆ: ವರ್ತೂರು ಸಂತೋಷ್

  • Telangana Poll: ಜಿದ್ದಾಜಿದ್ದಿ ಕಣ ತೆಲಂಗಾಣದಲ್ಲಿಂದು ಮತದಾನ – ದಾಖಲೆಯ ಮತದಾನಕ್ಕೆ ಮೋದಿ ಕರೆ

    Telangana Poll: ಜಿದ್ದಾಜಿದ್ದಿ ಕಣ ತೆಲಂಗಾಣದಲ್ಲಿಂದು ಮತದಾನ – ದಾಖಲೆಯ ಮತದಾನಕ್ಕೆ ಮೋದಿ ಕರೆ

    ಹೈದರಾಬಾದ್‌: ಜಿದ್ದಾಜಿದ್ದಿ ಕಣವಾಗಿರುವ ತೆಲಂಗಾಣ ರಾಜ್ಯದಲ್ಲಿಂದು ಮತದಾನ (Telangana Assembly Election 2023) ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ ವರೆಗೆ ಮತದಾನಕ್ಕೆ ಅವಕಾಶ ಸಿಗಲಿದೆ. 119 ವಿಧಾನಸಭಾ ಕ್ಷೇತ್ರಗಳಲ್ಲಿರುವ 32.6 ದಶಲಕ್ಷ ಮತದಾರರು 2,290 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್‌ ಸೇರಿ ಹಲವು ಪ್ರಭಾವಿ ನಾಯಕರು ಅಬ್ಬರದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ಮಿಜೋರಾಂಗಳಲ್ಲಿ ಈಗಾಗಲೇ ನ.7ರಿಂದ ನವೆಂಬರ್ 25ರ ಒಳಗೆ ಮತದಾನ ಮುಕ್ತಾಯವಾಗಿದೆ. ತೆಲಂಗಾಣದಲ್ಲಿಂದು (ನ.30) ಮತದಾನ ನಡೆಯಲಿದ್ದು, ಈ ಮೂಲಕ ಪಂಚರಾಜ್ಯ ಚುನಾವಣೆಗೆ (Five State Election) ತೆರೆ ಬೀಳಲಿದೆ. ಡಿಸೆಂಬರ್‌ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

    ಈ ಸಂಬಂಧ ಮಾತನಾಡಿರುವ ತೆಲಂಗಾಣದ ಮುಖ್ಯ ಚುನಾವಣಾ ಅಧಿಕಾರಿ ವಿಕಾಸ್‌ ರಾಜ್, ರಾಜ್ಯದಲ್ಲಿ 106 ವಿಧಾನ ಸಭಾ ಕ್ಷೇತ್ರಗಳಲ್ಲಿಂದು (ನ.30) ಬೆಳಗ್ಗೆ 7 ರಿಂದ ಸಂಜೆ 5 ತನಕ ಮತ್ತು ನಕ್ಸಲ್ ಉಪಟಳ ಇರುವಂತಹ 13 ವಿಧಾನ ಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸುವುದಕ್ಕೆ 2.5 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

    ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ಎಸ್ ಎಲ್ಲ 119 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಬಿಜೆಪಿ 111 ಕ್ಷೇತ್ರಗಳಲ್ಲಿ, ಪವನ್ ಕಲ್ಯಾಣ್ ನೇತೃತ್ವದ ಜನಸೇನಾ 8 ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಪಕ್ಷ 118 ಮತ್ತು ಸಿಪಿಐ 1 ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿವೆ. ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ನಗರ ವ್ಯಾಪ್ತಿಯ 9 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

    ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳ ಪೈಕಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (ಕೆಸಿಆರ್‌), ಅವರ ಪುತ್ರ ಕೆಟಿ ರಾಮರಾವ್‌, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ ರೇವಂತ ರೆಡ್ಡಿ, ಬಿಜೆಪಿ ಶಾಸಕರಾದ ಬಂಡಿ ಸಂಜಯ್ ಕುಮಾರ್, ಡಿ.ಅರವಿಂದ್ ಮತ್ತು ಇತರರು ಇದ್ದಾರೆ.

  • ಕೆಸಿಆರ್‌ ರಿಮೋಟ್‌ ಕಂಟ್ರೋಲ್‌ ಮೋದಿ ಬಳಿಯಿದೆ: ರಾಹುಲ್‌ ಗಾಂಧಿ

    ಕೆಸಿಆರ್‌ ರಿಮೋಟ್‌ ಕಂಟ್ರೋಲ್‌ ಮೋದಿ ಬಳಿಯಿದೆ: ರಾಹುಲ್‌ ಗಾಂಧಿ

    ಹೈದರಾಬಾದ್‌: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (K Chandrashekar Rao) ಅವರ ರಿಮೋಟ್‌ ಕಂಟ್ರೋಲ್‌ ನರೇಂದ್ರ ಮೋದಿ (Narendra Modi) ಅವರ ಬಳಿಯಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ.

    ಖಮ್ಮಂನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ (BJP) ಬಿ ಟೀಂ ಆಡಳಿತ ನಡೆಸುತ್ತಿದೆ, ಬಿಎಆರ್‌ಎಸ್‌ ಅಂದರೆ ಬಿಜೆಪಿ ರಿಷ್ಟೇದಾರ್ ಸಮಿತಿ ಹೇಳುವ ಮೂಲಕ ವ್ಯಂಗ್ಯವಾಡಿದರು. ಇದನ್ನೂ ಓದಿ: ವಿದ್ಯುತ್ ಬಿಲ್ ಹಿಂಬಾಕಿ ಇದ್ದರೂ ಸಿಗಲಿದೆ ಗೃಹಜ್ಯೋತಿ ಪ್ರಯೋಜನ

    ಭ್ರಷ್ಟ ಮತ್ತು ಬಡವರ ವಿರೋಧಿ ಸರ್ಕಾರದ ವಿರುದ್ಧ ಕಾಂಗ್ರೆಸ್ (Congress) ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹೋರಾಡಿ ಜಯಗಳಿಸಿದೆ. ತೆಲಂಗಾಣದಲ್ಲಿ ಒಂದು ಬದಿ ರಾಜ್ಯದ ಶ್ರೀಮಂತರು, ಶಕ್ತಿಯುತರು ಇದ್ದರೆ, ಇನ್ನೊಂದು ಬದಿಯಲ್ಲಿ ನಮ್ಮೊಂದಿಗೆ ಬಡವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು, ರೈತರು ಮತ್ತು ಸಣ್ಣ ಅಂಗಡಿಯವರು ಇದ್ದಾರೆ. ಕರ್ನಾಟಕದ ಫಲಿತಾಂಶ, ತೆಲಂಗಾಣದಲ್ಲಿ ಪುನರಾವರ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿದರು.

     

    ತೆಲಂಗಾಣದಲ್ಲಿ ಬಿಜೆಪಿ ಅಸ್ತಿತ್ವದಲ್ಲಿಲ್ಲ. ಅವರ ಎಲ್ಲಾ ನಾಲ್ಕು ಟಯರ್‌ಗಳು ಪಂಕ್ಚರ್ ಆಗಿವೆ. ಈಗ ಇದು ಕಾಂಗ್ರೆಸ್ ಮತ್ತು ಬಿಜೆಪಿಯ ಬಿ-ಟೀಮ್ ನಡುವೆ ನಡೆಯುವ ಜಗಳವಾಗಿದೆ. ಕಾಂಗ್ರೆಸ್ ಟಿಆರ್‌ಎಸ್‌ನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ. ಟಿಆರ್‌ಎಸ್ ಸಭೆಯಲ್ಲಿ ಭಾಗವಹಿಸದಂತೆ ನಾವು ಇತರ ಪಕ್ಷಗಳ ನಾಯಕರಿಗೆ ಹೇಳಿದ್ದೇವೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಟ್ಟೆನೋವಿನಿಂದಾಗಿ ತೆಲಂಗಾಣದ ಸಿಎಂ ಕೆಸಿಆರ್ ಆಸ್ಪತ್ರೆ ದಾಖಲು

    ಹೊಟ್ಟೆನೋವಿನಿಂದಾಗಿ ತೆಲಂಗಾಣದ ಸಿಎಂ ಕೆಸಿಆರ್ ಆಸ್ಪತ್ರೆ ದಾಖಲು

    ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ (Telangana CM) ಕೆ ಚಂದ್ರಶೇಖರ್ ರಾವ್ (K Chandrashekar Rao) ಅವರು ಭಾನುವಾರ ಹೊಟ್ಟೆನೋವಿನ (Abdominal Pain) ಹಿನ್ನೆಲೆ ಹೈದರಾಬಾದ್‌ನ (Hyderabad) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದ ಮುಖ್ಯಸ್ಥ ಕೆಸಿಆರ್ ಅವರು ಹೊಟ್ಟೆನೋವಿನ ಹಿನ್ನೆಲೆ ನಗರದ ಎಐಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹೊಟ್ಟೆಯಲ್ಲಿ ಕಂಡುಬಂದಿರುವ ಹುಣ್ಣಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಇದನ್ನು ಹೊರತುಪಡಿಸಿ ಅವರು ಆರೋಗ್ಯವಾಗಿದ್ದಾರೆ. ಅವರಿಗೆ ಸೂಕ್ತವಾದ ಔಷಧಿ ನೀಡಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಉದ್ಯಮಿ ಪ್ರದೀಪ್ ಶೂಟೌಟ್ ಕೇಸ್- A3 ಆರೋಪಿ ಲಿಂಬಾವಳಿ ಹೇಳಿಕೆ ಕೂಡ ದಾಖಲು

    ಕೆಸಿಆರ್ (KCR) ಆಸ್ಪತ್ರೆ ದಾಖಲಾಗಿರುವ ಹಿನ್ನೆಲೆ ಟ್ವೀಟ್ ಮಾಡಿರುವ ತೆಲಂಗಾಣದ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್, ಕೆ ಚಂದ್ರಶೇಖರ್ ರಾವ್ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: RRR-ನಾಟು ನಾಟು ಹಾಡಿಗೆ ಆಸ್ಕರ್ : ಸಂತಸ ವ್ಯಕ್ತ ಪಡಿಸಿದ ಲಹರಿ ವೇಲು

  • ಮಾರ್ಚ್ 11ಕ್ಕೆ ಇಡಿ ಮುಂದೆ ಹಾಜರಾಗಲಿದ್ದಾರೆ KCR ಪುತ್ರಿ ಕವಿತಾ

    ಮಾರ್ಚ್ 11ಕ್ಕೆ ಇಡಿ ಮುಂದೆ ಹಾಜರಾಗಲಿದ್ದಾರೆ KCR ಪುತ್ರಿ ಕವಿತಾ

    ನವದೆಹಲಿ: ತೆಲಂಗಾಣದ ಮುಖ್ಯಮಂತ್ರಿ (Telangana CM) ಕೆ ಚಂದ್ರಶೇಖರ್ ರಾವ್ (KCR) ಅವರ ಪುತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ ಕವಿತಾ (K Kavitha) ಅವರು ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ (Delhi Excise Policy Case) ಸಂಬಂಧಿಸಿದಂತೆ ವಿಚಾರಣೆಗೆ ಮಾರ್ಚ್ 11 ರಂದು ಜಾರಿ ನಿರ್ದೇಶನಾಲಯದ (ED) ಮುಂದೆ ಹಾಜರಾಗುವುದಾಗಿ ಘೋಷಿಸಿದ್ದಾರೆ.

    ದೆಹಲಿ ಅಬಕಾರಿ ನೀತಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಮಾರ್ಚ್ 9 ರಂದು ದೆಹಲಿಯಲ್ಲಿ (Delhi) ಇಡಿ ಕಚೇರಿಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಆದರೆ ಕವಿತಾ ವಿಚಾರಣೆಗೆ ಹಾಜರಾಗಲು 1 ವಾರ ಅವಕಾಶ ಕೋರಿ ಇಡಿಗೆ ಮನವಿ ಸಲ್ಲಿಸಿದ್ದರು. ಆದರೆ ಇಡಿ ಈ ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಕವಿತಾ ಇಡಿಗೆ ಇನ್ನೊಂದು ಪತ್ರ ಬರೆದು ಮಾರ್ಚ್ 11ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

    ಬುಧವಾರ ತಡರಾತ್ರಿ ಕವಿತಾ ಅವರ ಕಚೇರಿಯಿಂದ ಈ ಕುರಿತು ಪ್ರಕಟಣೆಯೊಂದನ್ನು ಹೊರಡಿಸಲಾಗಿದೆ. ನಾನು ಜವಾಬ್ದಾರಿಯುತ ಭಾರತೀಯ ನಾಗರಿಕಳಾಗಿದ್ದೇನೆ. ಈ ರಾಷ್ಟ್ರದ ಮಹಿಳೆಯಾಗಿ ಕಾನೂನಿನ ಅಡಿಯಲ್ಲಿ ಒದಗಿಸಲಾದ ಹಕ್ಕುಗಳಿಗೆ ಅನುಗುಣವಾಗಿ ನಡೆದುಕೊಳ್ಳಲಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಪೋಷಕರೇ ಎಚ್ಚರ- ಮಕ್ಕಳಲ್ಲಿ ಹೆಚ್ಚಾಗ್ತಿದೆ ಆಡಿನೋ ವೈರಸ್..!

    ವಿಚಾರಣೆಗೆ ಹಾಜರಾಗಲು ಇಡಿ ಇಷ್ಟು ಕಡಿಮೆ ಸಮಯವನ್ನು ಏಕೆ ನೀಡಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇಡಿ ತನಿಖೆಯ ಹಿಂದೆ ರಾಜಕೀಯ ಉದ್ದೇಶಗಳು ಇರುವುದು ಇದರಲ್ಲಿ ಕಾಣಿಸುತ್ತಿದೆ. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಾನು ಮುಂದಿನ ವಾರದ ಕಾರ್ಯಕ್ರಮಗಳನ್ನು ಈಗಾಗಲೇ ನಿಗದಿಮಾಡಿಕೊಂಡಿದ್ದೇನೆ. ವಿಚಾರಣೆಗೆ ಕಾಲಾವಕಾಶ ಕೋರಿರುವುದನ್ನು ನಿರಾಕರಿಸುವುದರ ಹಿಂದೆ ರಾಜಕೀಯ ಪ್ರೇರಿತ ಕಾರಣಗಳಿವೆ ಎಂದು ಆರೋಪಿಸಿದ್ದಾರೆ.

    ಆದರೂ ಈ ದೇಶದ ಕಾನೂನು ಪಾಲಿಸುವ ಜವಾಬ್ದಾರಿಯುತ ಪ್ರಜೆಯಾಗಿ ನಾನು ಮಾರ್ಚ್ 11ರಂದು ಇಡಿ ಕಚೇರಿಗೆ ಹಾಜರಾಗಲಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ಹೇಳಿಕೆ ಬೆನ್ನಲ್ಲೇ ಆ್ಯಕ್ಟೀವ್ ಆದ ವಿ.ಸೋಮಣ್ಣ ಬೆಂಬಲಿಗರು

  • ಅಪ್ರಾಪ್ತ ಬಾಲಕಿಗೆ ಕಿರುಕುಳ – ಕೆಸಿಆರ್ ಪಕ್ಷದ ನಾಯಕ ಬಂಧನ

    ಅಪ್ರಾಪ್ತ ಬಾಲಕಿಗೆ ಕಿರುಕುಳ – ಕೆಸಿಆರ್ ಪಕ್ಷದ ನಾಯಕ ಬಂಧನ

    ಹೈದರಾಬಾದ್: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ಸಮಿತಿಯ (BRS) ಸ್ಥಳೀಯ ಮುಖಂಡನೊಬ್ಬನನ್ನು ಹೈದರಾಬಾದ್‌ನಲ್ಲಿ (Hyderabad) ಪೊಲೀಸರು ಬಂಧಿಸಿದ್ದಾರೆ.

    ತೆಲಂಗಾಣದ (Telangana) ಸಿಎಂ ಕೆ. ಚಂದ್ರಶೇಖರ್ ರಾವ್ (KCR) ಅವರ ಪಕ್ಷದ ನಾಯಕ, ಆರೋಪಿ ಅಖೀಲ್ ಅಹ್ಮದ್ 10 ವರ್ಷದ ಬಾಲಕಿಗೆ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸುನಿಲ್ ಕುಮಾರ್ ವಿರುದ್ಧ ಸಿಡಿದ ಹಿಂದೂ ಕಾರ್ಯಕರ್ತರು

    ವರದಿಗಳ ಪ್ರಕಾರ ಘಟನೆ ಭಾನುವಾರ ನಡೆದಿದೆ. 10 ವರ್ಷದ ಬಾಲಕಿ ಮೆಡಿಕಲ್ ಶಾಪ್‌ಗೆ ಹೋಗಿದ್ದಾಗ ಅಲ್ಲಿ ಅಖೀಲ್ ಅಹ್ಮದ್ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಬಳಿಕ ಬಾಲಕಿ ತನ್ನ ಮನೆಗೆ ಬಂದು ಪೋಷಕರಲ್ಲಿ ನಡೆದ ಘಟನೆ ತಿಳಿಸಿದ್ದಾಳೆ. ಬಾಲಕಿಯ ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಓದಿದ್ದು 8ನೇ ತರಗತಿ, ಆದ್ರೆ IPS ಅಧಿಕಾರಿ ಎಂದು ಮಹಿಳೆಯರನ್ನು ನಂಬಿಸಿ ಲಕ್ಷ ಲಕ್ಷ ಹಣ ದೋಚಿದ

    ದೂರನ್ನು ಪಡೆದ ಬಳಿಕ ನಾವು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಪವಾಸ ಸತ್ಯಾಗ್ರಹ ಮಾಡ್ತಿದ್ದ ಆಂಧ್ರ ಸಿಎಂ ಸಹೋದರಿ ಆಸ್ಪತ್ರೆಗೆ ದಾಖಲು

    ಉಪವಾಸ ಸತ್ಯಾಗ್ರಹ ಮಾಡ್ತಿದ್ದ ಆಂಧ್ರ ಸಿಎಂ ಸಹೋದರಿ ಆಸ್ಪತ್ರೆಗೆ ದಾಖಲು

    ಹೈದರಾಬಾದ್: ಕಳೆದೆರಡು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಅವರ ಸಹೋದರಿ ಶರ್ಮಿಳಾ (YS Sharmila) ಅವರನ್ನ ಪೊಲೀಸರು (Police) ಜುಬಿಲಿ ಹಿಲ್ಸ್‌ನಲ್ಲಿರುವ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಿಸಿದ್ದಾರೆ.

    ತಮ್ಮ ನೇತೃತ್ವದಲ್ಲಿ ನಡೆಯುತ್ತಿರುವ `ಪ್ರಜಾ ಸಂಸ್ಥಾನಂ’ ಪಾದಯಾತ್ರೆಗೆ ಅನುಮತಿ ನೀಡದ ತೆಲಂಗಾಣ ರಾಷ್ಟ್ರ ಸಮಿತಿ (TRS) ಸರ್ಕಾರ ವಿರುದ್ಧ ಶುಕ್ರವಾರ ಬೆಳಿಗ್ಗೆಯಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಇದೀಗ ಆಸ್ಪತ್ರೆಗೆ ದಾಖಲಿಸಿದ್ದು, ಶರ್ಮಿಳಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಇಶಾನ್ ಕಿಶನ್ ಒಂದೇ ದ್ವಿಶತಕಕ್ಕೆ ಹಲವು ದಾಖಲೆಗಳು ಉಡೀಸ್ – ಕೊಹ್ಲಿಗೆ ಥ್ಯಾಂಕ್ಸ್

    ಈ ಹಿಂದೆ ಶರ್ಮಿಳಾ ಅವರಿಗೆ ರಕ್ತದೊತ್ತಡ ಹಾಗೂ ಗ್ಲೂಕೋಸ್ ಮಟ್ಟವು ಕಡಿಮೆಯಾಗಿದೆ ಎಂದು ವೈದ್ಯರು ಹೇಳಿದ್ದರು. ಅಲ್ಲದೇ ನಿರ್ಜಲೀಕರಣ ಸಮಸ್ಯೆ ಇರುವ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದರು. ಇದು ಕಿಡ್ನಿ (ಮೂತ್ರಪಿಂಡ)ಗೆ ಸಾಕಷ್ಟು ಅಪಾಯ ಇರುವ ಲಕ್ಷಣವನ್ನು ಸೂಚಿಸಿತ್ತು ಎನ್ನಲಾಗಿತ್ತು. ಇದೀಗ ವೈದ್ಯರು ಆರೋಗ್ಯ ಸ್ಥಿರವಾಗಿದೆ ಎಂದು ಅಭಯ ನೀಡಿದ್ದಾರೆ.

    ಶರ್ಮಿಳಾ ಅವರು ನ್ಯಾಯಾಲಯದ ಅನುಮತಿಯಿದ್ದರೂ ಪೊಲೀಸರು ತನಗೆ ಪಾದಯಾತ್ರೆ ಮುಂದುವರಿಸಲು ಅವಕಾಶ ನೀಡುತ್ತಿಲ್ಲ. ತೆಲಂಗಾಣದಲ್ಲಿ ಪ್ರಜಾಪ್ರಭುತ್ವ ರಕ್ಷಿಸಬೇಕೆಂದು ಪಾದಯಾತ್ರೆ ಮುಂದುವರಿಸಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಶುಕ್ರವಾರ ಸತ್ಯಾಗ್ರಹಕ್ಕೆ ಕುಳಿತಿದ್ದರು. ಇದನ್ನೂ ಓದಿ: ಮೈಲಿಗೆ ಆಗುತ್ತೆ ಅಂತಾ ದತ್ತಪೀಠದಲ್ಲಿ ಮೌಲ್ವಿಗಳ ಪೂಜೆಗೆ ನಕಾರ – ಅರ್ಚಕರ ವಿರುದ್ಧ ಆರೋಪ

    ಇದೇ ಸಂದರ್ಭದಲ್ಲಿ ತೆಲಂಗಾಣ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಸಿಎಂ ಕೆ. ಚಂದ್ರಶೇಖರ್ ರಾವ್ (KCR) ನನ್ನ ಪಾದಯಾತ್ರೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ನನ್ನ ಬಸ್ಸೊಂದನ್ನ ಸುಟ್ಟುಹಾಕಿದರು. ನನ್ನ ಬೆಂಬಲಿತರನ್ನ ಥಳಿಸಿ ಹಿಂಸಾಚಾರ ಮಾಡಿದರು. ನಂತರ ನನ್ನನ್ನು ಬಂಧಿಸಿ ಕರೆದೊಯ್ದಿದ್ದರು. ಮರುದಿನ ನ್ಯಾಯಾಲಯ ನನ್ನ ಪಾದಯಾತ್ರೆ ಮುಂದುವರಿಸಲು ಅನುಮತಿ ನೀಡಿತ್ತು. ಆದಾಗ್ಯೂ ಪಾದಯಾತ್ರೆ ಮುಂದುವರಿಸಲು ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

    ನವೆಂಬರ್ 29 ರಂದು, ವೈ.ಎಸ್ ಶರ್ಮಿಳಾ ಅವರು ಎಸ್‌ಯುವಿ ಕಾರಿನೊಳಗೆ ಕುಳಿತಿದ್ದಾಗ ಪಂಜಗುಟ್ಟ ಪೊಲೀಸರು ಕಾರಿನ ಸಮೇತ ಅವರನ್ನು ಎಳೆದೊಯ್ದು ವಶಕ್ಕೆ ಪಡೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕೆಸಿಆರ್, ಕವಿತಾರ ಬಗ್ಗೆ ಮಾತಾಡಿದ್ರೆ ನಾಲಿಗೆ ಕತ್ತರಿಸುತ್ತೇನೆ – ಅರವಿಂದ್ ವಿರುದ್ಧ ಎಂಎಲ್‍ಸಿ ಶಂಬಿಪುರ ಕಿಡಿ

    ಕೆಸಿಆರ್, ಕವಿತಾರ ಬಗ್ಗೆ ಮಾತಾಡಿದ್ರೆ ನಾಲಿಗೆ ಕತ್ತರಿಸುತ್ತೇನೆ – ಅರವಿಂದ್ ವಿರುದ್ಧ ಎಂಎಲ್‍ಸಿ ಶಂಬಿಪುರ ಕಿಡಿ

    ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮತ್ತು ಅವರ ಪುತ್ರಿ ಕವಿತಾ ಕಲ್ವಕುಂಟ್ಲಾ ಅವರ ಬಗ್ಗೆ ಮಾತನಾಡಿದರೆ ನಾಲಿಗೆ ಕತ್ತರಿಸುತ್ತೇನೆ ಎಂದು ಬಿಜೆಪಿ ಸಂಸದ ಅರವಿಂದ್ ಧರಂಪುರಿ (Arvind Dharmapuri) ವಿರುದ್ಧ ಭಾರತ್ ರಾಷ್ಟ್ರ ಸಮಿತಿ (Bharat Rashtra Samithi) (ಬಿಆರ್‌ಎಸ್) ಎಂಎಲ್‍ಸಿ ಶಂಬಿಪುರ ರಾಜು (MLC Shambipur Raju) ಆಕ್ರೋಶ ಹೊರಹಾಕಿದ್ದಾರೆ.

    ಕವಿತಾ (MLC Kavitha) ಅವರನ್ನು ಸೆಳೆಯಲು ಬಿಜೆಪಿ (BJP) ಯತ್ನಿಸುತ್ತಿದೆ ಎಂದು ಸಿಎಂ ಹೇಳಿಕೆ ನೀಡಿದ ಬೆನ್ನಲ್ಲೇ ಅರವಿಂದ್ ಧರಂಪುರಿ ಅವರು, ಬಿಆರ್‌ಎಸ್ ಪಕ್ಷದಲ್ಲಿ ಎಂಎಲ್‍ಸಿ ಕವಿತಾ ಅವರು ಅತೃಪ್ತರಾಗಿದ್ದು, ಕಾಂಗ್ರೆಸ್ ಸೇರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ವೈಯಕ್ತಿಕ ಟೀಕೆ ಮಾಡುತ್ತಿದ್ರೆ ಚಪ್ಪಲಿಯಲ್ಲಿ ಹೊಡಿತೀನಿ – ಬಿಜೆಪಿ ಸಂಸದರಿಗೆ ಕವಿತಾ ವಾರ್ನ್

    ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಂಬಿಪುರ ರಾಜು ಅವರು, ರಾಜಕೀಯ ಮೌಲ್ಯ ಮರೆತು ಮುಖ್ಯಮಂತ್ರಿ ಕೆಸಿಆರ್ ವಿರುದ್ಧ ಅಗೌರವವಾಗಿ ಮಾತನಾಡಿದರೆ ಅರವಿಂದ್ ಧರ್ಮಪುರಿ ಅವರ ನಾಲಿಗೆ ಕತ್ತರಿಸುತ್ತೇನೆ ಎಂದು ಅರವಿಂದ್ ಧರ್ಮಪುರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಬಿಜೆಪಿ ಸಂಸದರ ಮನೆಗೆ ನುಗ್ಗಿ TRS ಕಾರ್ಯಕರ್ತರಿಂದ ದಾಳಿ

    ದೊಡ್ಡವರ ಬಗ್ಗೆ ಮಾತನಾಡುವುದರಿಂದ ತಾನೂ ದೊಡ್ಡವನಾಗುತ್ತೇನೆ ಎಂದುಕೊಂಡಿದ್ದಾರೆ. ಬಿಜೆಪಿ ನಾಯಕರಾಗಿರುವ ನೀವೇ, ಕವಿತಾ ಅವರಿಗೆ ಕರೆ ಮಾಡಿದ್ದಾರೆ ಎಂದು ಕಾಂಗ್ರೆಸ್‍ನಿಂದ ಯಾರೋ ಕರೆ ಮಾಡಿ ತಿಳಿಸಿದರು ಎನ್ನುತ್ತಿದ್ದೀರಾ. ನೀವು ಬಿಜೆಪಿಯಲ್ಲಿಯೇ ಇದ್ದುಕೊಂಡು ಈ ಬಗ್ಗೆ ಹೇಳುವುದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ? ಬಿಜೆಪಿಯವರಾಗಿರುವ ನೀವೇ ಇತರ ಪಕ್ಷದ ಸದಸ್ಯರೊಂದಿಗೆ ಸಂಪರ್ಕ ಹೊಂದಿರುವುದನ್ನು ಬಹಿರಂಗವಾಗಿ ಹೇಳುತ್ತಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

    ನೀವು ಮತ್ತು ನಿಮ್ಮ ತಂದೆ ಪಕ್ಷಗಳನ್ನು ಬದಲಾಯಿಸುತ್ತಲೇ ಇರುತ್ತೀರಿ, ಆದರೆ ನೀವು ಸಾರ್ವಜನಿಕರಿಗೆ ಏನಾದರೂ ಪ್ರಯೋಜವಾಗುವಂತಹದ್ದನ್ನು ಏನಾದರೂ ಮಾಡಿದ್ದೀರಾ? ನಾವು ನಿಮಗೆ ಎಚ್ಚರಿಕೆ ನೀಡುತ್ತಿದ್ದೇವೆ. ಇನ್ನೊಮ್ಮೆ ನೀವು ನಮ್ಮ ಸಿಎಂ ಕೆಸಿಆರ್ ಅಥವಾ ಎಂಎಲ್‍ಸಿ ಕವಿತಾ ವಿರುದ್ಧ ಅಗೌರವವಾಗಿ ಮಾತನಾಡಿದರೆ ನಿಮ್ಮ ನಾಲಿಗೆ ಕತ್ತರಿಸುತ್ತೇವೆ. ಎಚ್ಚರಿಕೆಯಿಂದಿರಿ ಎಂದು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]