Tag: keerthi suresh

  • ಕಲ್ಕಿ ಬುಜ್ಜಿಗೆ ಧ್ವನಿಯಾಗಿದ್ದಾರೆ ನಟಿ ಕೀರ್ತಿ ಸುರೇಶ್

    ಕಲ್ಕಿ ಬುಜ್ಜಿಗೆ ಧ್ವನಿಯಾಗಿದ್ದಾರೆ ನಟಿ ಕೀರ್ತಿ ಸುರೇಶ್

    ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾದಲ್ಲಿ ಬುಜ್ಜಿಗೆ ಸಾಕಷ್ಟು ಮಹತ್ವವನ್ನು ನೀಡಲಾಗಿದೆ.  ಬುಜ್ಜಿಗಾಗಿಯೇ ಮೊನ್ನೆಯಷ್ಟೇ ವಿಶೇಷ ಕಾರ್ಯಕ್ರವನ್ನೂ ಆಯೋಜನೆ ಮಾಡಿತ್ತು ಚಿತ್ರತಂಡ. ಈಗ ಆ ಬುಜ್ಜಿಗೆ ಧ್ವನಿದಾನ ಮಾಡಿದ್ದಾರಂತೆ ನಟಿ ಕೀರ್ತಿ ಸುರೇಶ್ (Keerthi Suresh). ಬುಜ್ಜಿ ಕೂಡ ಪಾತ್ರದಂತೆ ಚಿತ್ರದುದ್ದಕ್ಕೂ ಇರಲಿದೆಯಂತೆ.

    ಟಾಲಿವುಡ್‌ ಮಾತ್ರವಲ್ಲದೆ, ಇಡೀ ಭಾರತ ಕಲ್ಕಿ (Kalki)  2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬರುತ್ತಿದೆ. ಈಗ ಇದೇ ಸಿನಿಮಾದಿಂದ ಮತ್ತೊಂದು ವಿಶೇಷವನ್ನು ಅನಾವರಣಗೊಳಿಸಿದೆ ಚಿತ್ರತಂಡ. ಹೌದು, ಪ್ಯಾನ್‍ ಇಂಡಿಯಾ ಸೂಪರ್‍ ಸ್ಟಾರ್‍ ಪ್ರಭಾಸ್‍ (Prabhas,) ಅಭಿನಯದ ಕಲ್ಕಿ 2898 AD ಬಿಡುಗಡೆಗೆ ಹೆಚ್ಚು ದಿನಗಳು ಉಳಿದಿಲ್ಲ. ಹೀಗಿರುವಾಗಲೇ ಇದೇ ಕಲ್ಕಿ ಚಿತ್ರದ ಐದನೇ ಸೂಪರ್‍ ಸ್ಟಾರ್ ಯಾರು ಎಂಬುದನ್ನು ಕಿರು ವಿಡಿಯೋ ಮೂಲಕ ಅನಾವರಣ ಮಾಡಿದೆ ಚಿತ್ರತಂಡ.

    ಆ ಐದನೇ ಸೂಪರ್‌ಸ್ಟಾರ್‌ ಬೇರಾರು ಅಲ್ಲ, ಬುಜ್ಜಿ ಹೆಸರಿನ ಆಪ್ತ ಸ್ನೇಹಿತ. ಅಂದರೆ, ಬುಜ್ಜಿಯನ್ನು ಭವಿಷ್ಯದ ವಾಹನ ಎಂದೇ ಚಿತ್ರತಂಡ ಹೇಳಿಕೊಂಡು, ಅದರ ಕಿರು ಝಲಕ್‌ಅನ್ನು ಮೇ 22ರಂದು ಅನಾವರಣ ಮಾಡಿದೆ. ನಿರ್ದೇಶಕ ನಾಗ್ ಅಶ್ವಿನ್, ನಿರ್ಮಾಪಕರಾದ ಸಿ. ಅಶ್ವಿನಿ ದತ್, ಸ್ವಪ್ನಾ ದತ್ ಚಲಸಾನಿ, ಪ್ರಿಯಾಂಕಾ ದತ್ ಚಲಸಾನಿ ಸೇರಿ ಸುಮಾರು ಇಪ್ಪತ್ತು ಸಾವಿರ ಪ್ರೇಕ್ಷಕರು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬುಜ್ಜಿಯನ್ನು ಪರಿಚಯಿಸಿದ್ದಾರೆ.

    ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿದೆ. ವಿಡಿಯೋದಲ್ಲಿ ಬುಜ್ಜಿ ಹೇಗೆಲ್ಲ ಕೆಲಸ ಮಾಡುತ್ತೆ, ಭವಿಷ್ಯದ ಆಪ್ತ ಸ್ನೇಹಿತ ಎಂದು ಏಕೆ ಕರೆಯಲಾಗುತ್ತದೆ ಎಂಬುದು ಗೋಚರವಾಗುತ್ತದೆ.

     

    ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

  • ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಮಹಾನಟಿ ಕೀರ್ತಿ ಸುರೇಶ್

    ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಮಹಾನಟಿ ಕೀರ್ತಿ ಸುರೇಶ್

    ಹಾನಟಿ (Mahanati) ಸಿನಿಮಾ ಮೂಲಕ ಸಖತ್ ಫೇಮಸ್ ಆಗಿರುವ ಕೀರ್ತಿ ಸುರೇಶ್ (Keerthi Suresh) , ವಾರಕ್ಕೊಂದು ಸಲ ಬೇರೆ ಬೇರೆ ಕಾರಣಗಳಿಗಾಗಿ ಸುದ್ದಿ ಆಗುತ್ತಿದ್ದಾರೆ. ಈ ಹಿಂದೆ ಅವರ ಮದುವೆ ವಿಚಾರವಾಗಿ ಸಾಕಷ್ಟು ಸದ್ದು ಮಾಡಿದ್ದರು. ಈ ಕುರಿತು ಸ್ವತಃ ಅವರ ತಂದೆಯೇ ಮಾಧ್ಯಮಗಳ ಮುಂದೆ ಬಂದು ಸ್ಪಷ್ಟನೆ ನೀಡಬೇಕಾಯಿತು.

    ಈ ಹಿಂದೆ ಡೇಟಿಂಗ್ ವಿಚಾರವಾಗಿಯೂ ಕೀರ್ತಿ ಸುರೇಶ್ ಗಾಸಿಪ್ ಖಾಲಂನಲ್ಲಿ ಕಾಣಿಸಿಕೊಂಡಿದ್ದರು. ದಳಪತಿ ವಿಜಯ್ ಜೊತೆ ಕೀರ್ತಿ ಡೇಟಿಂಗ್ ಮಾಡುತ್ತಿದ್ದು, ವಿಜಯ್ ಅವರ ಸಂಸಾರ ಹಾಳಾಗಿದೆ ಎಂದು ವರದಿಯಾಗಿತ್ತು. ಈ ವಿಚಾರವಾಗಿ ಕೀರ್ತಿ ಮಾತನಾಡಿ, ಅಂಥದ್ದೇನೂ ಇಲ್ಲ. ನಾವಿಬ್ಬರೂ ಡೇಟಿಂಗ್ ಮಾಡುತ್ತಿಲ್ಲ ಎನ್ನುವ ವಿಚಾರವನ್ನು ಹಂಚಿಕೊಂಡಿದ್ದರು. ಅಲ್ಲಿಗೆ ಆ ಗಾಸಿಪ್ ಗೆ ಫುಲ್ ಸ್ಟಾಪ್ ಇಡುವ ಪ್ರಯತ್ನ ಮಾಡಿದ್ದರು. ಇದನ್ನೂ ಓದಿ:‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು

    ಇದೀಗ ಮತ್ತೊಂದು ಕಾರಣಕ್ಕಾಗಿ ಕೀರ್ತಿ ಸುರೇಶ್ ಸುದ್ದಿಗೆ ಸಿಕ್ಕಿದ್ದಾರೆ. ಮಹಾನಟಿ ಸದ್ಯದಲ್ಲೇ ರಾಜಕಾರಣ (Politics) ಪ್ರವೇಶ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಅವರು ಉದಯನಿಧಿ ಸ್ಟಾಲಿನ್ ಜೊತೆ ಮಾಮನನ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ರಾಜಕೀಯ ಹಿನ್ನೆಲೆಯನ್ನು ಕಥೆಯನ್ನು ಹೊಂದಿದೆ. ಸೆಲ್ವರಾಜ್ ನಿರ್ದೇಶನದಲ್ಲಿ ಮೂಡಿ ಬಂದಿದೆ. ಈ ಸಿನಿಮಾದ ಪ್ರಚಾರದಲ್ಲಿ ಕೇಳಿ ಬಂದ ಪ್ರಶ್ನೆಗೆ ಕೀರ್ತಿ ನೀಡಿದ ಉತ್ತರವೇ ಅವರ ರಾಜಕೀಯ ಕುರಿತಾದ ಸುದ್ದಿಗೆ ಕಾರಣವಾಗಿದೆ.

    ನಿಮಗೇನಾದರೂ ರಾಜಕಾರಣಕ್ಕೆ ಬರುವ ಆಲೋಚನೆ ಇದೆಯಾ? ಎಂದು ಕೇಳಿದ ಪ್ರಶ್ನೆಗೆ, ‘ಆ ವಿಚಾರದ ಬಗ್ಗೆ ಆಲೋಚಿಸಬೇಕಿದೆ’ ಎಂದು ಹೇಳಿದ ಉತ್ತರವೇ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಹೇಳಿ ಕೇಳಿ ಈ ಸಿನಿಮಾದ ನಟ ಉದಯನಿಧಿ (Udayanidhi Stalin) ರಾಜಕಾರಣಿ. ತಮಿಳು ನಾಡು ಸರಕಾರದ ಸಚಿವ ಕೂಡ. ಹಾಗಾಗಿ ಮುಂದಿನ ದಿನಗಳಲ್ಲಿ ಪ್ರಚಾರಕ್ಕಾದರೂ ಕೀರ್ತಿ ಸುರೇಶ್ ಬರುತ್ತಾರೆ ಎನ್ನುವ ನಂಬಿಕೆ ಅವರ ಅಭಿಮಾನಿಗಳದ್ದು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಬಾಯ್ ಫ್ರೆಂಡ್ ಬಗ್ಗೆ ಮೌನ ಮುರಿದ ಕೀರ್ತಿ ಸುರೇಶ್

    ಬಾಯ್ ಫ್ರೆಂಡ್ ಬಗ್ಗೆ ಮೌನ ಮುರಿದ ಕೀರ್ತಿ ಸುರೇಶ್

    ಕೆಲ ದಿನಗಳ ಹಿಂದೆಯಷ್ಟೇ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ (Keerthi Suresh) ಅವರು ಯುವ ಉದ್ಯಮಿಯೊಬ್ಬರ ಜೊತೆಗಿನ ಫೋಟೋ ಹಂಚಿಕೊಂಡಿದ್ದರು. ಇಬ್ಬರೂ ಒಂದೇ ಕಲರ್ ಬಟ್ಟೆ ಹಾಕುವುದರ ಜೊತೆಗೆ ತುಂಬಾ ಆತ್ಮೀಯವಾಗಿ ಫೋಟೋಗೆ ಪೋಸ್ ನೀಡಿದ್ದರು. ಹಾಗಾಗಿ ಯುವ ಉದ್ಯಮಿಯನ್ನು ಕೀರ್ತಿ ಮದುವೆಯಾಗಲಿದ್ದಾರಾ ಎನ್ನುವ ಅನುಮಾನ ಮೂಡಿತ್ತು. ಹಲವು ಈ ರೀತಿಯ ಪ್ರಶ್ನೆಗಳನ್ನು ಅವರಿಗೆ ಕೇಳಿದ್ದರು. ಇದೀಗ ನಟಿ ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ.

    ಕೀರ್ತಿ ಸುರೇಶ್ (Keerthy Suresh) ಮಹಾನಟಿಯಾಗಿ ಸಕ್ಸಸ್ ಕಂಡಿರುವ ನಟಿ. ಸೌತ್ ಸಿನಿಮಾರಂಗದಲ್ಲಿ ಗಟ್ಟಿ ನಾಯಕಿಯಾಗಿ ನೆಲೆ ಗಿಟ್ಟಿಸಿಕೊಂಡಿದ್ದಾರೆ. ಹಾಗಾಗಿ ಅವರ ಮದುವೆ (Wedding) ವಿಷ್ಯವಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೆ ಮದುವೆ ವಿಚಾರ ಚಾಲ್ತಿಯಲ್ಲಿತ್ತು. ಕಾರಣ ಯುವ ಉದ್ಯಮಿಯ ಜೊತೆಗಿನ ಫೋಟೋ ವೈರಲ್ ಆಗಿತ್ತು.

    ದಳಪತಿ ವಿಜಯ್ (Thalapathy Vijay) ಜೊತೆ ಕೀರ್ತಿ ಸುರೇಶ್ ಮದುವೆ ಎಂದು ಹೇಳಲಾಗಿತ್ತು. ಈ ಎಲ್ಲಾ ಊಹಾಪೋಹಗಳಿಗೂ ಕೀರ್ತಿ ತಾಯಿ ಬ್ರೇಕ್ ಹಾಕಿದ್ದರು. ಇತ್ತೀಚೆಗಷ್ಟೇ ಉದ್ಯಮಿಯೊಬ್ಬರ ಜೊತೆ ಕೀರ್ತಿ ಸುರೇಶ್ ಇರುವ ಫೋಟೋ ಎಲ್ಲೆಡೆ ಸದ್ದು ಮಾಡಿತ್ತು. ಬಾಯ್‌ಫ್ರೆಂಡ್‌ನ ಪರಿಚಯಿಸಿದ್ರಾ? ಎಂಬ ಅನುಮಾನ ಅಭಿಮಾನಿಗಳಿಗೆ ಕಾಡಿತ್ತು. ಇದನ್ನೂ ಓದಿ:ಕನ್ನಡದ ‘ಅಮೃತವರ್ಷಿಣಿ’ ಖ್ಯಾತಿಯ ನಟ ಶರತ್ ಬಾಬು ನಿಧನ

    ಕೀರ್ತಿ ಸುರೇಶ್ ಪ್ರೀತಿಲಿ ಬಿದ್ದಿದ್ದಾರೆ ಅನ್ನುವ ಸುದ್ದಿ ವೈರಲ್ ಆಗಿತ್ತು. ಆದರೆ, ಆತ ತನ್ನ ಸ್ನೇಹಿತನೆಂದು ಕೀರ್ತಿ ಹೇಳಿಕೊಂಡಿದ್ದಾರೆ. ಈ ವಿಚಾರದಲ್ಲಿ ಸ್ನೇಹಿತರನ್ನು (Friends) ಎಳೆತರಬೇಡಿ ಎಂದು ಮನವಿ ಮಾಡಿದ್ದಾರೆ.  ಸ್ನೇಹಿತನ ಬರ್ತ್‌ಡೇ ಪಾರ್ಟಿಯಲ್ಲಿ ಆತನೊಟ್ಟಿಗೆ ಇರುವ ಫೋಟೊಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾಗಿ ತಿಳಿಸಿದ್ದಾರೆ. ಅಂದಹಾಗೆ ಆತನ ಹೆಸರು ಫರ್ಹಾನ್ ಬಿನ್ ಲೈತ್ (Farhan Bin Laith). ರಿಯಲ್ ಎಸ್ಟೇಟ್ ಉದ್ಯಮಿ. ರೆಸ್ಟೋರೆಂಟ್ ಒಡೆಯ.

  • ನೂರು ಕೋಟಿ ಕ್ಲಬ್ ಸೇರಿದ ‘ದಸರಾ’: ತಂಡಕ್ಕೆ ಕಾರು, ಚಿನ್ನ ಗಿಫ್ಟ್

    ನೂರು ಕೋಟಿ ಕ್ಲಬ್ ಸೇರಿದ ‘ದಸರಾ’: ತಂಡಕ್ಕೆ ಕಾರು, ಚಿನ್ನ ಗಿಫ್ಟ್

    ನ್ಯಾಚುರಲ್ ಸ್ಟಾರ್ ನಾನಿ (Nani) ದಸರಾ (Dasara) ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಕೇವಲ ಆರು ದಿನದಲ್ಲಿಯೇ ಶತ ಕೋಟಿ ಬಾಚಿಕೊಂಡಿದೆ. ಶ್ರೀರಾಮ ನವಮಿ ಪ್ರಯುಕ್ತ ವಿಶ್ವಾದ್ಯಂತ ತೆರೆಕಂಡ ದಸರಾ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ನೂರು ಕೋಟಿ ಕ್ಲಬ್ ಸೇರಿದ ನಾನಿ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

    ನಾನಿಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ದಸರಾಗೆ ಯುವ ಪ್ರತಿಭೆ ಶ್ರೀಕಾಂತ್ ಒಡೆಲಾ (Srikanth Odela) ಆಕ್ಷನ್ ಕಟ್ ಹೇಳಿದ್ದರು. ಕಲ್ಲಿದ್ದಲು ಗಣಿಯ ಸುತ್ತ ನಡೆಯುವ ಗ್ರಾಮೀಣ ಸೊಗಡಿನ ಕತೆಯಲ್ಲಿ ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ (Keerthi Suresh) ನಾಯಕಿಯಾಗಿ ನಟಿಸಿದ್ದರು. ವಿಶ್ವಾದ್ಯಂತ ಅದ್ಭುತ ಪ್ರದರ್ಶನ ಕಾಣ್ತಿರುವ ದಸರಾ ಚಿತ್ರವನ್ನು ಎಸ್ ಎಸ್ ರಾಜಮೌಳಿ, ಮಹೇಶ್ ಬಾಬು ಹಾಗೂ ಪ್ರಭಾಸ್ ಮೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ: ‘ಕಿರಿಕ್ ಪಾರ್ಟಿ’ ರಶ್ಮಿಕಾ ಮಂದಣ್ಣಗೆ ಶುಭಕೋರಿದ ರಕ್ಷಿತ್ ಶೆಟ್ಟಿ ಒಡೆತನದ ನಿರ್ಮಾಣ ಸಂಸ್ಥೆ

    ಎಸ್ ಎಲ್ ವಿ ಕ್ರಿಯೇಷನ್ ನಡಿ ಸುಧಾಕರ್ ಚೆರುಕೂರಿ ಅದ್ಧೂರಿಯಾಗಿ ದಸರಾ ಸಿನಿಮಾ ನಿರ್ಮಿಸಿದ್ದರು. ಚಿತ್ರ ಅಭೂತಪೂರ್ವ ಯಶಸ್ಸು ಕಂಡಿರುವ ಖುಷಿಯಲ್ಲಿರುವ ನಿರ್ಮಾಪಕರು‌ ಹೈದ್ರಾಬಾದ್ ಕರಿಮಾನಗರದಲ್ಲಿ ಸಕ್ಸಸ್ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಶ್ರೀಕಾಂತ್ ಒಡೆಲಾಗೆ ದುಬಾರಿ ಮೊತ್ತದ ಬಿಎಂಡಬ್ಲ್ಯೂ ಕಾರು ಗಿಫ್ಟ್ ನೀಡಿದ್ದು, ದಸರಾಗೆ ಕೆಲಸ ಮಾಡಿದ ಇಡೀ ತಂಡಕ್ಕೆ ತಲಾ 10 ಗ್ರಾಂ ಚಿನ್ನದ ನಾಣ್ಯವನ್ನು ನೀಡಿದ್ದಾರೆ.

  • ನಟ ವಿಜಯ್ ಜೊತೆಗಿನ ಮದುವೆ ಬಗ್ಗೆ ಕೀರ್ತಿ ಸುರೇಶ್ ತಾಯಿ ಸ್ಪಷ್ಟನೆ

    ನಟ ವಿಜಯ್ ಜೊತೆಗಿನ ಮದುವೆ ಬಗ್ಗೆ ಕೀರ್ತಿ ಸುರೇಶ್ ತಾಯಿ ಸ್ಪಷ್ಟನೆ

    ಸೌತ್ ನಟಿ ಕೀರ್ತಿ ಸುರೇಶ್ (Keerthy Suresh), ದಳಪತಿ ವಿಜಯ್ (Thalapathy Vijay) ಜೊತೆಗಿನ ಮದುವೆ ವಿಚಾರವಾಗಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಈ ಬೆನ್ನಲ್ಲೇ ಕೀರ್ತಿ ಸುರೇಶ್, ತಾಯಿ ಮೇನಕಾ (Menaka) ಮಗಳ ಮದುವೆ ಸುದ್ದಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

    ತಮಿಳಿನ ಸಾಕಷ್ಟು ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ಕೀರ್ತಿ ಅವರು ಸಿನಿಮಾಗಿಂತ ತಮ್ಮ ವೈಯಕ್ತಿಕ ಬದುಕಿನ ವಿಷ್ಯವಾಗಿ ಸುದ್ದಿಯಲ್ಲಿದ್ದಾರೆ. ಕಳೆದ ಕೆಲ ದಿನಗಳಿಂದ ದಳಪತಿ ವಿಜಯ್ ಜೊತೆ ನಟಿ ಕೀರ್ತಿ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾರು ಈ ಬಗ್ಗೆ ಸ್ಪಷ್ಟನೆ ನೀಡಿರಲಿಲ್ಲ. ಆದರೆ ಈಗ ಕೀರ್ತಿ ಅವರ ತಾಯಿ ಸ್ಪಷ್ಟನೆ ನೀಡಿದ್ದಾರೆ.

    ಭೈರವ, ಸರ್ಕಾರ್ ಸಿನಿಮಾಗಳಲ್ಲಿ ಜೋಡಿಯಾಗಿ ವಿಜಯ್- ಕೀರ್ತಿ ನಟಿಸಿದ್ದರು. ಹಾಗಾಗಿ ಈ ಮದುವೆ ಸುದ್ದಿ ಹಬ್ಬಿತ್ತು. ಈ ಕಡೆ ಪತ್ನಿ ಸಂಗೀತಾಗೆ ವಿಜಯ್ ಡಿವೋರ್ಸ್ ಕೊಡುತ್ತಾರೆ ಎಂಬ ಸುದ್ದಿ ವೈರಲ್ ಆಗ್ತಿದ್ದಂತೆ ಕೀರ್ತಿ ಜೊತೆ 2ನೇ ಮದುವೆ ವಿಚಾರ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿತ್ತು.

    ಒಂದು ಕಡೆ ನಟ ವಿಜಯ್ ಜೊತೆಗಿನ ಮದುವೆ ಸುದ್ದಿ, ಇನ್ನೊಂದು ಕಡೆ ನಟಿಯ ಹೈಸ್ಕೂಲ್ ಸ್ನೇಹಿತನ ಮದುವೆ ಎಂದು ಕೂಡ ಸುದ್ದಿ ಹಬ್ಬಿತ್ತು ಅದಕ್ಕೆಲ್ಲಾ ಇದೀಗ ಉತ್ತರ ಸಿಕ್ಕಿದೆ. ಇದನ್ನೂ ಓದಿ: ದೈವ ದರ್ಶನ ಪಡೆದ ನಿರೂಪಕಿ ಅನುಶ್ರೀ

    ಕೆಲವು ದಿನಗಳಿಂದ ಓಡಾಡುತ್ತಿರುವ ಸುದ್ದಿಯಲ್ಲಿ ಹುರುಳಿಲ್ಲ. ಇದು ಕೇವಲ ಪ್ರಚಾರಕಷ್ಟೇ. ಇದೆಲ್ಲಾ ಕೇವಲ ಗಾಳಿ ಸುದ್ದಿ ಅಷ್ಟೇ ಎಂದು ಕೀರ್ತಿ ಅವರ ತಾಯಿ ಮೇನಕಾ ಸುರೇಶ್ ಮದುವೆಯ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಮಗಳ ಮದುವೆ ಬಗ್ಗೆ ಯಾವುದೇ ರೀತಿಯ ಪ್ಲ್ಯಾನ್‌ ಮಾಡಿಲ್ಲ ಎಂಬುದನ್ನ ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಥೈಲ್ಯಾಂಡ್‌ನಲ್ಲಿ ʻಮಹಾನಟಿʼ ಕೀರ್ತಿ ಸುರೇಶ್ ಮಿಂಚಿಂಗ್

    ಥೈಲ್ಯಾಂಡ್‌ನಲ್ಲಿ ʻಮಹಾನಟಿʼ ಕೀರ್ತಿ ಸುರೇಶ್ ಮಿಂಚಿಂಗ್

    ಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ (Keerthi Suresh) ಇತ್ತಿಚೆಗಷ್ಟೇ ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದಲ್ಲಿ ಹೊಸ ಚಿತ್ರ ಅನೌನ್ಸ್ ಆಗಿತ್ತು. ಈ ಬೆನ್ನಲ್ಲೇ ಸಿನಿಮಾ ಶೂಟಿಂಗ್‌ಗೆ ಬ್ರೇಕ್ ಹಾಕಿ, ಕೀರ್ತಿ ಥೈಲ್ಯಾಂಡ್‌ಗೆ (Thailand) ಹಾರಿದ್ದಾರೆ.

    ಮಹೇಶ್ ಬಾಬು (Mahesh Babu) ಜೊತೆ ಡ್ಯುಯೆಟ್ ಹಾಡಿದ ಮೇಲೆ ಹೊಂಬಾಳೆ ಸಂಸ್ಥೆ (Hombale Films) ನಿರ್ಮಾಣದ ಸಿನಿಮಾಗೆ ಮಹಾನಟಿ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಈ ಚಿತ್ರದಲ್ಲಿ ಲೇಡಿ ಸೂಪರ್ ಸ್ಟಾರ್ ಮಿಂಚಲು ಕೀರ್ತಿ ಸುರೇಶ್ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಸಿನಿಮಾ ಕೆಲಸಕ್ಕೆ ನಟಿ ಬ್ರೇಕ್ ಹಾಕಿದ್ದಾರೆ.

    ಕೂಲಿಂಗ್ ಗ್ಲಾಸ್ ಹಾಕಿ, ಹಾಟ್ ಆಗಿ ಕೀರ್ತಿ ಕ್ಯಾಮರಾ ಕಣ್ಣಿಗೆ ಪೋಸ್ ಕೊಟ್ಟಿದ್ದಾರೆ. ಸಮುದ್ರ ತೀರದಲ್ಲಿ ಕೀರ್ತಿ ಎಂಜಾಯ್ ಮಾಡ್ತಿದ್ದಾರೆ. ಥೈಲ್ಯಾಂಡ್‌ನ ಸುಂದರ ಪ್ರದೇಶಗಳಿಗೆ ಭೇಟಿ ನೀಡಿರುವ ಕೀರ್ತಿ ಸುರೇಶ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಈ ವಾರ ಪರಭಾಷಾ ಚಿತ್ರಗಳದ್ದೇ ಹಾವಳಿ

    `ಸರ್ಕಾರು ವಾರಿ ಪಾಟ’ ಚಿತ್ರದ ಸಕ್ಸಸ್ ನಂತರ ಚಿತ್ರದ ಆಯ್ಕೆಯಲ್ಲಿ ನಟಿ ಮತ್ತಷ್ಟು ಸೆಲೆಕ್ಟಿವ್ ಆಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

    ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

    ಪ್ಯಾನ್ ಇಂಡಿಯಾ ಮಟ್ಟದಲ್ಲಿ `ಕೆಜಿಎಫ್ 2′ (Kgf 2) ಮತ್ತು `ಕಾಂತಾರ’ (Kantara)  ಎಂಬ ಎರಡು ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಸಂಸ್ಥೆಯು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದೆ. ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್(Hombale Films) ರೂವಾರಿ ವಿಜಯ್ ಕಿರಗಂದೂರು, ಇದೇ ಮೊದಲ ಬಾರಿಗೆ ತಮಿಳು ಚಿತ್ರವೊಂದನ್ನು (Tamil Films) ನಿರ್ಮಿಸುತ್ತಿದ್ದಾರೆ.

    ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಮೊದಲ ತಮಿಳು ಚಿತ್ರದ ಹೆಸರು `ರಘುತಥಾ’. ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವ ಕೀರ್ತಿ ಸುರೇಶ್ ಈ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರದ ಮೊದಲ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಈ ಹಿಂದೆ, `ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʻರಘುತಥಾʼ ಒಂದು ಮಹಿಳಾಪ್ರಧಾನ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಗುರುತನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ತಿಸಲಾಗಿದೆ. ಇದನ್ನೂ ಓದಿ: ದೊಡ್ಮನೆ ಯುವರಾಜನಿಗೆ ನಾಯಕಿ ಯಾರು? ಕೊನೆಗೂ ಸಿಕ್ತು ಅಪ್‌ಡೇಟ್

     

    View this post on Instagram

     

    A post shared by Hombale Films (@hombalefilms)

    ಈ ಚಿತ್ರದ ಕುರಿತು ಮಾತನಾಡುವ ಹೊಂಬಾಳೆ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು, ಇದೊಂದು ಕಾಮಿಡಿ ಡ್ರಾಮಾ ಚಿತ್ರವಾಗಿದ್ದು, ಸಮಾಜದ ವಿರುದ್ದ ಸವಾಲೆಸೆಯುವ ಒಬ್ಬ ಗಟ್ಟಿಗಿತ್ತಿ ಯುವತಿಯ ಸುತ್ತ ಸುತ್ತುತ್ತದೆ. ತನ್ನ ಸಿದ್ಧಾಂತಗಳನ್ನು ಎತ್ತಿಹಿಡಿಯುವುದರ ಜೊತೆಗೆ, ಸಮಾಜದ ವಿರುದ್ಧ ಹೋರಾಡುತ್ತಲೇ, ಆಕೆ ಹೇಗೆ ಎಲ್ಲರಿಗೂ ಸ್ಫೂರ್ತಿಯಾಗುತ್ತಾಳೆ ಎಂಬುದು ಚಿತ್ರದ ಕಥೆ. ಇಂಥದ್ದೊಂದು ಕಥೆ ಮತ್ತು ಪಾತ್ರಕ್ಕೆ ಕೀರ್ತಿ ಸುರೇಶ್ ಅವರು ಅದ್ಭುತವಾದ ಆಯ್ಕೆಯಾಗಿದ್ದು, ಅವರೊಂದಿಗೆ ಕೆಲಸ ಮಾಡಲು ಹೊಂಬಾಳೆ ಸಂಸ್ಥೆ ಹೆಮ್ಮೆ ಪಡುತ್ತದೆ. ಇದೊಂದು ಕಾಮಿಡಿ ಚಿತ್ರವಾಗಿದ್ದು, ಜನ ನಗುತ್ತಲೇ ತಮ್ಮ ಆತ್ಮಾವಲೋಕನ ಮಾಡಿಕೊಳ್ಳುವ ವಿಭಿನ್ನ ಪ್ರಯತ್ನ ಇದಾಗಲಿದೆ ಎಂದು ಹೇಳಿದ್ದಾರೆ.

    ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಜತೆಗೆ ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ʻಜೈ ಭೀಮ್ʼ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. `ರಘುತಥಾ’ (Raghuthatha) ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, 2023ರ ಬೇಸಿಗೆ ರಜೆಯ ಸಂದರ್ಭದಲ್ಲಿ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ‘ದಸರಾ’ ಸಿನಿಮಾದಲ್ಲಿ ಹಳ್ಳಿ ಹುಡುಗಿಯಾಗಿ ಮಿಂಚಿದ ಮಹಾ ನಟಿ ಕೀರ್ತಿ ಸುರೇಶ್

    ‘ದಸರಾ’ ಸಿನಿಮಾದಲ್ಲಿ ಹಳ್ಳಿ ಹುಡುಗಿಯಾಗಿ ಮಿಂಚಿದ ಮಹಾ ನಟಿ ಕೀರ್ತಿ ಸುರೇಶ್

    ನ್ಯಾಚುರಲ್ ಸ್ಟಾರ್ ನಾನಿ (Nani) ಅಭಿನಯದ ಮೆಗಾ ಪ್ರಾಜೆಕ್ಟ್ ‘ದಸರಾ’ (Dasara) ಸಿನಿಮಾ ಈಗಾಗಲೇ ಸಿನಿ ಪ್ರಿಯರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಮೂಲಕ ನಾನಿ ಪ್ಯಾನ್ ಇಂಡಿಯಾ ಪ್ರೇಕ್ಷಕರನ್ನು ತಲುಪಲಿದ್ದು, ಮಾಸ್ ಅವತಾರದಲ್ಲಿ ರಂಜಿಸಲಿದ್ದಾರೆ. ಖಡಕ್ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ನಾನಿಗೆ ರಾಷ್ಟ್ರ ಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ನಾಯಕ ನಟಿಯಾಗಿ ಅಭಿನಯಿಸುತ್ತಿದ್ದಾರೆ.

    ಮಾಸ್ ಸಿನಿಮಾ ‘ದಸರಾ’ದಲ್ಲಿ ಕೀರ್ತಿ ಸುರೇಶ್ (Keerthi Suresh) ಯಾವ ರೀತಿ ಕಾಣಸಿಗುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿ ಬಳಗದಲ್ಲಿತ್ತು. ಆ ಕುತೂಹಲವನ್ನು ಹಾಗೆ ಕಾಪಾಡಿಕೊಂಡು ಬಂದಿದ್ದ ಚಿತ್ರತಂಡ ಕೀರ್ತಿ ಸುರೇಶ್ ಹುಟ್ಟುಹಬ್ಬದ ಪ್ರಯುಕ್ತ ಫಸ್ಟ್ ಲುಕ್ ರಿವೀಲ್ ಮಾಡಿದೆ. ನಾನಿ ಹೊಸ ಅವತಾರ ಖಡಕ್ ಲುಕ್ ಕಂಡು ಫಿದಾ ಆಗಿದ್ದ ಸಿನಿರಸಿಕರಿಗೆ, ಕೀರ್ತಿ ಸುರೇಶ್ ಲುಕ್ ಕೂಡ ಅಷ್ಟೇ ಮನಸೆಳೆದಿದೆ. ಚಿತ್ರದಲ್ಲಿ ವೆನ್ನಲ ಪಾತ್ರವನ್ನು ನಿಭಾಯಿಸುತ್ತಿದ್ದು, ಹಳ್ಳಿ ಹುಡುಗಿಯಾಗಿ ಹಳದಿ ಸೀರೆಯಲ್ಲಿ ಮಿಂಚುತ್ತಿರುವ ಕೀರ್ತಿ ಅವತಾರಕ್ಕೆ ಎಲ್ಲರೂ ಕ್ಲೀನ್ ಬೋಲ್ಡ್ ಆಗಿದ್ದಾರೆ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಈಗಾಗಲೇ ಬಿಡುಗಡೆಯಾಗಿರುವ ನಾನಿ ಫಸ್ಟ್ ಲುಕ್, ಧೂಮ್ ದಾಮ್ ದೊಸ್ತಾನ ಹಾಡು ಸಿನಿ ಪ್ರಿಯರಿಂದ ಅದ್ಭುತ ರೆಸ್ಪಾನ್ ಪಡೆದುಕೊಂಡಿದೆ. ಇದೀಗ ಕೀರ್ತಿ ಸುರೇಶ್ ಲುಕ್ ಕೂಡ ಎಲ್ಲರ ಗಮನ ಸೆಳೆದಿದೆ. ಇವೆಲ್ಲವೂ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.  ಶ್ರೀಕಾಂತ್ ಒಡೆಲಾ ನಿರ್ದೇಶಿಸುತ್ತಿರುವ ಈ ಚಿತ್ರ ಮಾಸ್ ಅಂಡ್ ಆಕ್ಷನ್ ಕಥಾಹಂದರ ಒಳಗೊಂಡಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಸಮುದ್ರಕನಿ, ಸಾಯಿಕುಮಾರ್ (Sai Kumar), ಜರೀನಾ ವಹಾಬ್  ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ. 2023 ಮಾರ್ಚ್ 30ರಂದು ಸಿನಿಮಾ ಬಿಡುಗಡೆಯಾಗಲಿದೆ.

    ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ, ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ದುಬಾರಿ ಕಾರು ಖರೀದಿಸಿದ ನಟಿ ಕೀರ್ತಿ ಸುರೇಶ್

    ದುಬಾರಿ ಕಾರು ಖರೀದಿಸಿದ ನಟಿ ಕೀರ್ತಿ ಸುರೇಶ್

    ಟಾಲಿವುಡ್ (Tollywood) ನಟಿ ಕೀರ್ತಿ ಸುರೇಶ್ (Keerthi Suresh) ಮತ್ತೆ ಸುದ್ದಿಯಲ್ಲಿದ್ದಾರೆ. ಸಿನಿಮಾಗಳಿಂದ ಸದ್ದು ಮಾಡುತ್ತಿದ್ದ ನಟಿ ಕೀರ್ತಿ, ತಮ್ಮ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ದಸರಾ ಹಬ್ಬದಂದು ಮನೆಗೆ ಹೊಸ ಅತಿಥಿಯನ್ನ ಬರಮಾಡಿಕೊಂಡಿದ್ದಾರೆ. ದುಬಾರಿ ಕಾರು ಖರೀದಿಸುವ ಮೂಲಕ ಮಹಾನಟಿ ಸುದ್ದಿಯಲ್ಲಿದ್ದಾರೆ.

    `ಸರ್ಕಾರು ವಾರಿ ಪಾಟ’ ಚಿತ್ರದ ಸಕ್ಸಸ್ ನಂತರ ಕೊಂಚ ಸೈಲೆಂಟ್ ಆಗಿರುವ ನಟಿ ಕೀರ್ತಿ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್‌ಗಳಿವೆ. ಸೈಲೆಂಟ್ ಆಗಿ ಒಂದೊಂದೇ ಸಿನಿಮಾಗಳನ್ನ ಕಂಪ್ಲೀಟ್ ಮಾಡಿ ಕೊಡುತ್ತಿದ್ದಾರೆ. ಇದೀಗ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಟಿ, ಮನೆಗೆ ಹೊಸ ಅತಿಥಿಯನ್ನ ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಪೈಲ್ವಾನ್‌ಗಳು: ಎನು ಇದು ಹೊಸ ಟ್ವಿಸ್ಟ್

    ದಸರಾ ಹಬ್ಬದ(Dasara Festival) ವೇಳೆ ಕೀರ್ತಿ ಗ್ಯಾರೇಜ್ ಹೊಸ ಕಾರು ಸೇರ್ಪಡೆಯಾಗಿದೆ. BMW*7 ಮನೆಗೆ ಎಂಟ್ರಿ ಕೊಟ್ಟಿದೆ. 1.78 ಕೋಟಿ ಬೆಲೆ ಹೊಸ ಕಾರಿಗೆ ಪೂಜೆ ಮಾಡಿ, ಬಳಿಕ 7 ಆಸನಗಳ ಐಷಾರಾಮಿ ಕಾರಿನಲ್ಲಿ ಎಂದಿನಂತೆ ತಮ್ಮ ಮುದ್ದಿನ ಶ್ವಾನದ ಜೊತೆ ಕಾರು ರೈಡ್ ಹೋಗಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ನಟಿ ಕೀರ್ತಿ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ.

    ಇನ್ನೂ ಕೀರ್ತಿ ಸುರೇಶ್ ನಾನಿ ಹೊಸ ಸಿನಿಮಾ ದಸರಾಗೆ ನಾಯಕಿಯಾಗಿ ನಟಿಸಿದ್ದಾರೆ. ಸದ್ಯದಲ್ಲೇ ಸಿನಿಮಾ ತೆರೆಗೆ ಅಬ್ಬರಿಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಹೊಂಬಾಳೆ ಬ್ಯಾನರ್ ಮುಂದಿನ ಚಿತ್ರಕ್ಕೆ `ಮಹಾನಟಿ’ ಕೀರ್ತಿ ಸುರೇಶ್ ನಾಯಕಿ

    ಹೊಂಬಾಳೆ ಬ್ಯಾನರ್ ಮುಂದಿನ ಚಿತ್ರಕ್ಕೆ `ಮಹಾನಟಿ’ ಕೀರ್ತಿ ಸುರೇಶ್ ನಾಯಕಿ

    ಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ `ಸರ್ಕಾರಿ ವಾರಿ ಪಾಟ’ ಚಿತ್ರದ ಸಕ್ಸಸ್ ನಂತರ ಪ್ರತಿಷ್ಠಿತ ಬ್ಯಾನರ್ ಹೊಂಬಾಳೆ ಬ್ಯಾನರ್‌ಗೆ ಕೀರ್ತಿ ಸುರೇಶ್ ಸಾಥ್ ನೀಡಿದ್ದಾರೆ. ಜತೆಗೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಿರ್ದೇಶಕಿಯ ಡೈರೆಕ್ಷನ್‌ನಲ್ಲಿ ಕೀರ್ತಿ ಸುರೇಶ್ ಕಾಣಿಸಿಕೊಳ್ತಿದ್ದಾರೆ.

    ಸೌತ್ ಸಿನಿರಂಗದಲ್ಲಿ ಟಾಪ್ ನಟಿಮಣಿಯರಲ್ಲಿ ಒಬ್ಬರಾಗಿರುವ ಕೀರ್ತಿ ಸುರೇಶ್ ಸತತ ಸೋಲಿನಿಂದ ಕಂಗೆಟ್ಟಿದ್ದರು. ಈಗ `ಸರ್ಕಾರಿ ವಾರಿ ಪಾಟ’ ಚಿತ್ರದ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ಇದೀಗ ಚಿತ್ರದ ಆಯ್ಕೆಯಲ್ಲೂ ಚ್ಯೂಸಿಯಾಗಿರುವ ಕೀರ್ತಿ ಸುರೇಶ್ ಸದ್ಯ ಹೊಂಬಾಳೆ ಬ್ಯಾನರ್ ನಿರ್ಮಾಣ ಹೊಸ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ. ಇದನ್ನೂ ಓದಿ:ಸೋನು ಶ್ರೀನಿವಾಸ್ ಗೌಡಗೆ ಟ್ರೋಲ್ ಆಗಿ ಫೇಮಸ್ ಆಗುವ ಆಸೆ: ಉದಯ್ ಸೂರ್ಯ

    ರಾಷ್ಟ್ರ ವಿಜೇತೆ ಸುಧಾ ಕೊಂಗರ ನಿರ್ದೇಶನದ ಹೊಸ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಟಿಟೌನ್‌ನಲ್ಲಿ ಸದ್ದು ಮಾಡುತ್ತಿದೆ. ನಾಯಕ ಯಾರು ಎಂಬುದು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. `ಸೂರರೈ ಪೋಟ್ರು’ ಖ್ಯಾತಿಯ ನಿರ್ದೇಶಕಿ ಸುಧಾ ಕೊಂಗರ ಡೈರೆಕ್ಷನ್ ಕೀರ್ತಿ ಸುರೇಶ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]