Tag: kempegowda jayanthi

  • ಪರಮೇಶ್ವರ್ ಭಾಷಣದ ವೇಳೆ ಜೈ ಶ್ರೀರಾಮ್ ಘೋಷಣೆ

    ಪರಮೇಶ್ವರ್ ಭಾಷಣದ ವೇಳೆ ಜೈ ಶ್ರೀರಾಮ್ ಘೋಷಣೆ

    ಬೆಂಗಳೂರು: ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರ ಭಾಷಣದ ವೇಳೆಯೂ ವ್ಯಕ್ತಿಯೊಬ್ಬ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾನೆ.

    ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮಾತನಾಡುತ್ತಿದ್ದಾಗ ವ್ಯಕ್ತಿಯೊಬ್ಬ ಜೈ ಶ್ರೀರಾಮ್ ಎಂದು ಕೂಗಿದ್ದಾನೆ. ಇವತ್ತು ಗಾಂಧಿ ಎಂದರೆ ಯಾರು? ಶ್ರೀರಾಮ ಅಂದರೆ ಯಾರು ಎಂದು ಕೇಳುವ ಸನ್ನಿವೇಶ ಇದೆ ಎಂದು ಪರಮೇಶ್ವರ್ ಹೇಳುತ್ತಿದ್ದಂತೆ ಸಭಿಕರ ಮಧ್ಯದಿಂದ ವ್ಯಕ್ತಿಯೋರ್ವ ಜೈ ಶ್ರೀರಾಮ್ ಎಂದು ಕೂಗಿದ್ದಾನೆ. ತಕ್ಷಣ ಪ್ರತಿಕ್ರಯಿಸಿದ ಡಿಸಿಎಂ,”ಇಷ್ಟೊತ್ತು ಚೆನ್ನಾಗಿದ್ದೆಯಲ್ಲಪ್ಪ, ಏನಾಯ್ತು ನಿನಗೆ” ಎಂದು ಪ್ರಶ್ನಿಸಿದ್ದಾರೆ. ಪರಮೇಶ್ವರ್ ಮಾತಿಗೆ ಜನ ನಗೆಗಡಲಲ್ಲಿ ತೇಲಿದರು.

    ಹೆಚ್ಚು ಜನರಿಗೆ ಪ್ರಶಸ್ತಿ: ಮುಂದಿನ ತಿಂಗಳು ನಮ್ಮ ಮೇಯರ್ ಜಯಂತಿ ಆಚರಿಸುತ್ತಾರೆ. ಬಹುದೊಡ್ಡ ಜಯಂತಿ ಆಚರಣೆ ಮಾಡುತ್ತಾರೆ. ಅದ್ಧೂರಿ ಜಯಂತಿ ಆಚರಿಸಿ 500 ಪ್ರಶಸ್ತಿ ನೀಡುತ್ತಾರೆ. ಸಾಧಕರಿರುತ್ತಾರೆ, ಆದರೆ ಅಷ್ಟು ಮಂದಿಗೆ ಕೆಂಪೇಗೌಡ ಪ್ರಶಸ್ತಿ ನೀಡುವುದು ಸರಿಯೇ. ಈ ಬಾರಿ ಕಡಿಮೆ ಮಾಡಲು ಸೂಚಿಸಿದ್ದೇನೆ. ಏನು ಮಾಡುತ್ತಾರೋ ನೋಡೋಣ ಎಂದು ಹೇಳಿದರು.

    ಕೆಂಪೇಗೌಡರ ಹೆಸರಿಡಿ: ಪಟ್ಟನಾಯಕನಹಳ್ಳಿ ನಂಜಾವಧೂತ ಸ್ವಾಮೀಜಿ ಮಾತನಾಡಿ, ನಾವು ಪ್ರತಿ ಬಾರಿಯ ಜಯಂತಿಯ ವೇಳೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಡುತ್ತೇವೆ. ಆದರೆ, ಆ ಬೇಡಿಕೆಗಳು ಹಾಗೇ ಉಳಿಯುತ್ತವೆ ಈ ಬಾರಿ ಹಾಗಾಗಬಾರದು, ನಮ್ಮ ಮೆಟ್ರೋಗೆ ಕೆಂಪೇಗೌಡ ಹೆಸರಿಡಬೇಕು ಎಂದು ಮನವಿ ಮಾಡಿದರು.

    ಕುಮಾರಸ್ವಾಮಿ ಮೆಟ್ರೋ ಯೋಜನೆ ತಂದವರು, ನಮ್ಮ ಮೆಟ್ರೋಗೆ ಕೆಂಪೇಗೌಡ ಹೆಸರಿಡಬೇಕು. ಈ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಪಠ್ಯ ಪುಸ್ತಕದಲ್ಲಿ ಕೆಂಪೇಗೌಡರ ಪಠ್ಯ ಅಳವಡಿಸಬೇಕು. ನಗರದಲ್ಲಿ ವಿಶ್ವವೇ ತಿರುಗಿನೋಡುವಂತಹ ಕೆಂಪೇಗೌಡರ ಬೃಹತ್ ಪ್ರತಿಮೆ ನಿರ್ಮಾಣ ಮಾಡಬೇಕು. ಎಷ್ಟೇ ನೋವು ಬಂದರೂ ಮುಖ್ಯಮಂತ್ರಿಗಳು ಕಾಳಜಿವಹಿಸಬೇಕು. ಡಿಕೆ ಶಿವಕುಮಾರ್ ಅವರು ಸಿಎಂ ಆರೋಗ್ಯದ ಕಾಳಜಿವಹಿಸಬೇಕು. ಕುಮಾರಸ್ವಾಮಿ ಅವರು ಹೃದಯ ವೈಶಾಲ್ಯತೆ ಇರುವ ವ್ಯಕ್ತಿ ಎಂದರು.

    ಇದೇ ವೇಳೆ, ಆಡಳಿತ ನಡೆಸುವವರ ಭಾಷೆ ಹುಷಾರಾಗಿರಬೇಕು, ಮತ್ತೊಬ್ಬರನ್ನು ನೋಯಿಸುವ ಭಾಷೆಯಾಗಬಾರದು, ಯಾವುದನ್ನೂ ಬಯಸದೆ ಕೆಲಸ ಮಾಡಬೇಕು ಎಂದು ಸಿಎಂ ಕುಮಾರಸ್ವಾಮಿಗೂ ಶ್ರೀಗಳು ಸಲಹೆ ನೀಡಿದರು.

  • 10 ಕೋಟಿ ವೆಚ್ಚದಲ್ಲಿ ಚಾರ್ಟರ್ಡ್ ಫ್ಲೈಟ್ ಹತ್ತಲು 150 ರಾಜಕಾರಣಿಗಳು ರೆಡಿ..!

    10 ಕೋಟಿ ವೆಚ್ಚದಲ್ಲಿ ಚಾರ್ಟರ್ಡ್ ಫ್ಲೈಟ್ ಹತ್ತಲು 150 ರಾಜಕಾರಣಿಗಳು ರೆಡಿ..!

    ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ 40 ಯೋಧರನ್ನು ಕಳೆದುಕೊಂಡ ದುಃಖ ಇನ್ನೂ ಮಾಸಿಲ್ಲ. ದೇಶದ ಜನತೆ ಇನನೂ ಆ ನೋವಿನಿಂದ ಹೊರಬಂದಿಲ್ಲ. ಆದ್ರೆ ಈ ಮಧ್ಯೆ 10 ಕೋಟಿ ವೆಚ್ಚದಲ್ಲಿ ಚಾರ್ಟರ್ಡ್ ಫ್ಲೈಟ್ ಹತ್ತಲು 150 ರಾಜಕಾರಣಿಗಳು ರೆಡಿಯಾಗಿದ್ದಾರೆ.

    ಹೌದು. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ರಾಜಕಾರಣಿಗಳು ಟ್ರಿಪ್ ಹೋಗಲಿದ್ದಾರೆ. ಕೆಂಪೇಗೌಡ ಜಯಂತಿ ಪ್ರಯುಕ್ತ ದೋಸ್ತಿ ಪಡೆ ವಿದೇಶಕ್ಕೆ ಹೊರಟಿದ್ದು, ಕಾರ್ಯಕ್ರಮದ ಹೆಸರಲ್ಲಿ 3 ದಿನ 10 ಕೋಟಿ ವಚ್ಚದಲ್ಲಿ ಮಜಾ ಮಾಡಲಿದ್ದಾರೆ. ಸಿಂಗಾಪುರದಲ್ಲಿ ಫೆಬ್ರವರಿ 23ರಂದು ಕೆಂಪೇಗೌಡ ಜಯಂತಿ ನಡೆಯಲಿದೆ.

    ಆದ್ರೆ ಇದೀಗ ಯೋಧರನ್ನು ಕಳೆದುಕೊಂಡ ನೋವು ಒಂದೆಡೆಯಾದ್ರೆ, ರೈತರ ಸಾಲ ಮನ್ನಾ ಕೂಡ ಸಂಪೂರ್ಣವಾಗಿ ಆಗಿಲ್ಲ. ಈ ಮಧ್ಯೆ ಇದ್ಯಾವುದರ ಟೆನ್ಶನ್ ಇಲ್ಲವೆಂಬಂತೆ ಇಷ್ಟೊಂದು ಮಂದಿ ಹೋಗೋದು ಸರೀನಾ ಎಂದು ಸಾರ್ವಜನಿಕರು ಮುಖ್ಯಮಂತ್ರಿಗಳನ್ನು ಪ್ರಶ್ನಿಸುತ್ತಿದ್ದಾರೆ.

    ಎರಡೂ ಪಕ್ಷದ ಶಾಸಕರು ಹಾಗೂ ಸಂಸದರು ಹೋಗುತ್ತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗ ಹಾಗೂ ಬಿಬಿಎಂಪಿ ಕೂಡ ಇದಕ್ಕೆ ಸಹಯೋಗ ನೀಡುತ್ತಿದೆ. ಜನಪ್ರತಿನಿಧಿಗಳಿಗೆ ಉಳಿದುಕೊಳ್ಳಲು ಐಷಾರಾಮಿ ಹೊಟೇಲ್ ಗಳನ್ನು ಕೂಡ ಬುಕ್ ಮಾಡಿಕೊಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿಗೆ ಎಚ್ಚರಿಕೆ, ಮುಖ್ಯಮಂತ್ರಿ ಪರ ನಂಜಾವಧೂತ ಶ್ರೀ ಬ್ಯಾಟಿಂಗ್

    ಪ್ರಧಾನಿ ಮೋದಿಗೆ ಎಚ್ಚರಿಕೆ, ಮುಖ್ಯಮಂತ್ರಿ ಪರ ನಂಜಾವಧೂತ ಶ್ರೀ ಬ್ಯಾಟಿಂಗ್

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಲ್ಲದಿದ್ದರೇ ಒಕ್ಕಲಿಗ ಸಮುದಾಯ ಪ್ರಧಾನಿಗಳ ವಿರುದ್ಧ ನಿಲ್ಲುತ್ತದೆ ಎಂದು ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.

    ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಮುಖ್ಯಮಂತ್ರಿ ಸ್ಥಾನದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇಳಿಸುವುದಕ್ಕೆ ಪ್ರಯತ್ನ ಸಲ್ಲದು. ಸಿಎಂ ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಕಾರ ನೀಡಬೇಕು ಎಂದು ಸ್ವಾಮೀಜಿ ಹೇಳಿದರು.

    ಮಾಜಿ ಸಿಎಂ ಸದಾನಂದ ಗೌಡ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದಕ್ಕೆ ನಂತರದ ಚುನಾವಣೆಯಲ್ಲಿ ಬಿಜೆಪಿ ಸೋಲಬೇಕಾಯಿತು. ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದರು. ಕೊಟ್ಟ ಭರವಸೆಯಂತೆ ಡಿ.ಕೆ.ಶಿವಕುಮಾರ್ ಅವರು ನಡೆದುಕೊಂಡಿದ್ದಾರೆ ಎಂದು ಶ್ರೀಗಳು ಹೇಳಿದರು.

    ನಂಜಾವಧೂತ ಸ್ವಾಮೀಜಿ ಅಷ್ಟೇ ಅಲ್ಲದೇ ಕಾರ್ಯಕ್ರಮದಲ್ಲಿ ಹಾಜರಿದ್ದ ಚಂದ್ರಶೇಖರ ಸ್ವಾಮೀಜಿ ಕೂಡ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಪರ ಬ್ಯಾಟ್ ಬೀಸಿದರು.

    https://youtu.be/40QtfNpVLEY

  • ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆಯಿಂದ ಆಂಬುಲೆನ್ಸ್ ಗೆ ದಾರಿ ಸಿಗದೆ ಪರದಾಟ

    ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆಯಿಂದ ಆಂಬುಲೆನ್ಸ್ ಗೆ ದಾರಿ ಸಿಗದೆ ಪರದಾಟ

    – ಕೈ ಕೈ ಮಿಲಾಯಿಸಿದ ಜೆಡಿಎಸ್- ಕಾಂಗ್ರೆಸ್ ಕಾರ್ಯಕರ್ತರು

    ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯ ಬಳಿ ಕೆಂಪೇಗೌಡ ಜಯಂತಿಯ ಮೆರವಣಿಗೆಯಿಂದಾಗಿ ಆಸ್ಪತ್ರೆಗೆ ಹೋಗಬೇಕಾಗಿದ್ದ ಆಂಬುಲೆನ್ಸ್ ಕೆಲಕಾಲ ದಾರಿ ಸಿಗದೆ ಪರದಾಡುವಂತಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

    ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾಗವಹಿಸಿದ್ದ ಮೆರವಣಿಗೆಯಲ್ಲಿ ಸಾವಿರಾರು ಜನರು ಹಾಗೂ ಟ್ರ್ಯಾಕ್ಟರ್‍ಗಳು ಇದ್ದ ಕಾರಣ ಆಂಬುಲೆನ್ಸ್‍ಗೆ ದಾರಿ ಸುಲಭವಾಗಲಿಲ್ಲ. ಆಂಬುಲೆನ್ಸ್ ನಲ್ಲಿ ತಾಯಿ ಮಗು ಆಸ್ಪತ್ರೆಗೆ ಹೋಗಲು ರಸ್ತೆಯಲ್ಲಿ ಕೆಲಕಾಲ ಪರದಾಡುವಂತಾಯಿತು. ನಂತರ ಪೋಲಿಸರು ಆಂಬುಲೆನ್ಸ್ ಗೆ ದಾರಿ ಮಾಡಿಕೊಡಲು ಸಾಕಷ್ಟು ಹರಸಾಹಸಪಟ್ಟರು.

    ಜೆಡಿಎಸ್-ಕಾಂಗ್ರೆಸ್ ಗಲಾಟೆ: ಕೇಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡ ಘಟನೆಯೂ ನಡೆದಿದೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಜಯಂತಿ ವೇಳೆ ವೇದಿಕೆ ಮುಂಭಾಗದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ತಳ್ಳಾಟ ನೂಕಾಟ ನಡೆಸಿ ಗಲಾಟೆ ನಡೆಸಿದ್ದಾರೆ.

    ಚಿಕ್ಕಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಡಾ.ಕೆ.ಸುಧಾಕರ್ ಗನ್‍ಮ್ಯಾನ್ ತಿಮ್ಮಯ್ಯ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ ಅಂತ ಆರೋಪಿಸಿ, ಜೆಡಿಎಸ್ ಕಾರ್ಯಕರ್ತರು ಗನ್ ಮ್ಯಾನ್ ಜೊತೆ ವಾಗ್ವಾದಕ್ಕಿಳಿದಾಗ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ತಕ್ಷಣ ಪೊಲೀಸರ ಮಧ್ಯಪ್ರವೇಶದಿಂದಾಗಿ ಪರಿಸ್ಥಿತಿ ತಿಳಿಗೊಂಡಿತು.