Tag: Kerala border

  • ಕರ್ನಾಟಕದ ಗಡಿ ಬಂದ್ ಮಾಡಿ ಕೇರಳ ಸರ್ಕಾರ ಉದ್ಧಟತನ

    ಕರ್ನಾಟಕದ ಗಡಿ ಬಂದ್ ಮಾಡಿ ಕೇರಳ ಸರ್ಕಾರ ಉದ್ಧಟತನ

    – ಬ್ಯಾರಿಕೇಡ್ ಕಿತ್ತೆಸೆದ ಬಿಜೆಪಿ ಕಾರ್ಯಕರ್ತರು

    ಮಂಗಳೂರು: ದೇಶದ ಎಲ್ಲಾ ರಾಜ್ಯದ ಗಡಿಗಳನ್ನು ಓಪನ್ ಮಾಡಿ ಅಂತರ್ ರಾಜ್ಯ ಸಂಪರ್ಕಕ್ಕೆ ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ.

    ಮಂಗಳೂರಿನ ತಲಪಾಡಿಯಲ್ಲಿರುವ ಕೇರಳ ಗಡಿ ಚೆಕ್ ಪೋಸ್ಟ್ ನಲ್ಲಿ ಕೇರಳಕ್ಕೆ ಪ್ರವೇಶಿಸದಂತೆ ಕೇರಳ ಪೊಲೀಸರು ತಡೆಯುತ್ತಿದ್ದಾರೆ. ಕೇರಳದ ಸಿಪಿಎಂ ಸರ್ಕಾರದ ಈ ನಡೆಯಿಂದ ಗಡಿನಾಡ ಕನ್ನಡಿಗರು ಅತಂತ್ರರಾಗಿದ್ದಾರೆ. ತಕ್ಷಣ ಗಡಿಯನ್ನು ಓಪನ್ ಮಾಡಬೇಕೆಂದು ಆಗ್ರಹಿಸಿ ಕಾಸರಗೋಡು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಈ ವೇಳೆ ಕಾಸರಗೋಡು ಬಿಜೆಪಿ ಕಾರ್ಯಕರ್ತರು ಹಾಗೂ ಕೇರಳ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರು ಬ್ಯಾರಿಕೇಡ್ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದ ಗಡಿ ಸಂಪೂರ್ಣ ತೆರೆದಿದ್ದು, ಕೇರಳದಿಂದ ಮಂಗಳೂರಿಗೆ ಪ್ರವೇಶಿಸಲು ಅನುಮತಿ ಇದೆ. ಆದರೆ ಕೇರಳಕ್ಕೆ ಪ್ರವೇಶಿಸಲು ಪೊಲೀಸರು ತಡೆಯೊಡ್ಡುತ್ತಿದ್ದಾರೆ. ಕೇರಳ ಸರ್ಕಾರ ತಕ್ಷಣ ಎಲ್ಲಾ ಗಡಿಯನ್ನು ತೆರೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

  • ಕೇರಳ ಗಡಿ ದಾಟಲು ಯತ್ನ- ತಡೆದ ಪೊಲೀಸರ ಮೇಲೆ ಕಲ್ಲು ತೂರಾಟ

    ಕೇರಳ ಗಡಿ ದಾಟಲು ಯತ್ನ- ತಡೆದ ಪೊಲೀಸರ ಮೇಲೆ ಕಲ್ಲು ತೂರಾಟ

    ಮಂಗಳೂರು: ಕೊರೊನಾ ಮುನ್ನೆಚ್ಚರಿಕೆ ಸಲುವಾಗಿ ವಾಹನಗಳ ತಪಾಸಣೆ ಮಾಡುತ್ತಿದ್ದ ಕರ್ತವ್ಯ ನಿರತ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಿಕೊಂಡ ಆರೋಪಿಯನ್ನು ಬಂಧಿಸಿ, ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪರಪ್ಪೆಯ ಸಿನಾನ್ ಬಂಧಿತ ಆರೋಪಿಯಾಗಿದ್ದಾನೆ. ಎ.ಎಸ್.ಐ. ಭಾಸ್ಕರ್ ಪ್ರಸಾದ್ ಹಾಗೂ ಹೆಡ್ ಕಾನ್ಸ್ ಟೇಬಲ್ ರಾಮನಾಯ್ಕ ಅವರು ಜನ ಹಾಗೂ ವಾಹನಗಳ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸಿನಾನ್ ಮುರೂರು ಗಡಿಭಾಗಕ್ಕೆ ಬಂದು ಪೊಲೀಸರ ಮಾತನ್ನು ಕೇಳದೇ ಗಡಿ ದಾಟಲು ಯತ್ನಿಸಿದ್ದಾನೆ.

    ಗಡಿ ದಾಟದಂತೆ ಪೊಲೀಸರು ಮನವಿ ಮಾಡುತ್ತಿದ್ದಂತೆ ಏಕಾಏಕಿ ಪೋಲೀಸರ ಮೇಲೆ ಕಲ್ಲು ಬಿಸಾಡಲು ಆರಂಭಿಸಿದ್ದಾನೆ. ಪರಿಣಾಮ ಕರ್ತವ್ಯದಲ್ಲಿದ್ದ ಎ.ಎಸ್.ಐ. ಭಾಸ್ಕರ್ ಪ್ರಸಾದ್ ಹಾಗೂ ಪೋಲಿಸ್ ಸಿಬ್ಬಂದಿ ರಾಮನಾಯ್ಕ ಅವರಿಗೆ ಗಾಯಗಳಾಗಿದೆ. ಮಾತ್ರವಲ್ಲದೆ ಈತ ಸ್ಧಳದಲ್ಲಿದ್ದ ಹೈವೇ ಪಟ್ರೋಲ್ ವಾಹನಕ್ಕೂ ಕಲ್ಲು ಬಿಸಾಡಲು ಆರಂಭಿಸಿದ್ದಾನೆ.

    ಕೂಡಲೇ ವಿಷಯ ತಿಳಿದು ಸುಳ್ಯ ಎಸ್.ಐ. ಹರೀಶ್ ಕೂಡ ಮುರೂರಿಗೆ ಆಗಮಿಸಿದ್ದು, ಗಾಯಾಳು ಪೊಲೀಸರಿಗೆ ಚಿಕಿತ್ಸೆ ನೀಡಲಾಗಿದೆ. ಕಲ್ಲು ಹೊಡೆದ ಬಳಿಕ ಆರೋಪಿ ತಪ್ಪಿಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿ ಬಂಧಿಸಿದ್ದಾರೆ.

    ಬಂಧಿತ ಸಿನಾನ್ ಮಾನಸಿಕ ಅಸ್ವಸ್ಥನಾಗಿರುವ ಕಾರಣದಿಂದ ಪ್ರಕರಣ ದಾಖಲಿಸಿಕೊಂಡು ಮಂಗಳೂರಿನ ಆಸ್ಪತ್ರೆಗೆ ಸೇರಿಸಿದ್ದಾರೆ.