Tag: Kerala flood

  • ಗ್ರಹಣದ ಎಫೆಕ್ಟ್ – ಎರಡು ದಿನ ಕೇರಳದಲ್ಲಿ ಸಿಎಂ ವಿಶೇಷ ಪೂಜೆ

    ಗ್ರಹಣದ ಎಫೆಕ್ಟ್ – ಎರಡು ದಿನ ಕೇರಳದಲ್ಲಿ ಸಿಎಂ ವಿಶೇಷ ಪೂಜೆ

    ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ನಾಳೆ ಬೆಳಗ್ಗೆ ಕೇರಳಕ್ಕೆ ತೆರಳಲಿದ್ದು, ಮುಂದಿನ 2 ದಿನಗಳ ಕಾಲ ಅವರು ಕೇರಳದ ವಿಶೇಷ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

    ಪ್ರತಿ ವರ್ಷವೂ ಸಿಎಂ ಈ ಸಮಯದಲ್ಲಿ ಕೇರಳದ ಆನಂತಪದ್ಮನಾಭ ದೇವಾಯಲಕ್ಕೆ ಭೇಟಿ ನೀಡುತ್ತಾರೆ. ಇತ್ತಿಚೇಗಷ್ಟೇ ಸಿಎಂ ನಿವಾಸದಲ್ಲಿ ಹೋಮ ಹವನ ನಡೆಸಲಾಗಿತ್ತು. ಸಿಎಂ ಬಿಎಸ್‍ವೈ ಅವರ ಕುಟುಂಬಕ್ಕೆ ಆಪ್ತರಾಗಿರುವ ಅರ್ಚಕರ ಸಲಹೆ ಮೇರೆಗೆ ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ಡಿ.26 ರಂದು ಅಮಾವಾಸ್ಯೆ ಇದ್ದು, ಈ ಬಾರಿ ವೃಶ್ಚಿಕ ರಾಶಿ ಅವರು ಗ್ರಹಣ ದೋಷ ನಿವಾರಣೆಗೆ ವಿಶೇಷ ಹೋಮ ಹವನ ನಡೆಸುವ ಅನಿವಾರ್ಯತೆ ಇದೆ ಎನ್ನಲಾಗಿದೆ.

    ಸಿಎಂ ಅವರದ್ದು ವೃಶ್ಚಿಕ ರಾಶಿ ಆಗಿದ್ದು, ಕೆಲ ದಿನಗಳ ಹಿಂದೆ ನಿವಾಸದಲ್ಲಿ ಸುದರ್ಶನ ನರಸಿಂಹಯಾಗವನ್ನು ಮಾಡಿದ್ದರು. ಕೇರಳದಲ್ಲಿ ಮಾಡಲಿರುವ ವಿಶೇಷ ಪೂಜೆ, ಹೋಮಗಳ ಇದರ ಮುಂದುವರಿದ ಭಾಗ ಎನ್ನಲಾಗಿದೆ. 26ರ ನಂತರ ಗ್ರಹಣ ದೋಷ ಇರುವುದರಿಂದಲೂ ಸಿಎಂ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎನ್ನಲಾಗಿದೆ.

    ವಿಶೇಷ ಸಂದರ್ಭದಲ್ಲಿ ಶತ್ರು ಸಂಹಾರಕ್ಕಾಗಿ ಸುದರ್ಶನ ನರಸಿಂಹ ಹೋಮವನ್ನು ಮಾಡಲಾಗುತ್ತದೆ. ಮುಂದಿನ 3 ವರ್ಷಗಳ ಕಾಲ ಸರ್ಕಾರ ಸುಸ್ಥಿರವಾಗಿ ನಡೆದುಕೊಂಡು ಹೋಗುವ ಉದ್ದೇಶದಿಂದ ಈ ವಿಶೇಷ ಪೂಜೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ. ಈ ಪ್ರವಾಸದ ಸಂದರ್ಭದಲ್ಲಿ ಸಿಎಂ ಕುಟುಂಬ ಸದಸ್ಯರು ಹಾಗೂ ಆಪ್ತರಷ್ಟೇ ಸಾಥ್ ನೀಡಲಿದ್ದಾರೆ.

    ಸಾಮಾನ್ಯವಾಗಿ ಗ್ರಹಣ ಸಂದರ್ಭದಲ್ಲಿ ಉಂಟಾಗಬಹುದಾದ ದೋಷವನ್ನು ನಿವಾರಿಸಲು ಈ ವಿಶೇಷ ಪೂಜೆ ನಡೆಯಲಿದೆ. ಕೇರಳ ರಾಜರಾಜೇಶ್ವರ ದೇವಾಲಯ ಸೇರಿದಂತೆ ಪ್ರಮುಖ 4 ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ. ಈ ಹಿಂದೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಆನೆಯನ್ನು ದಾನ ಮಾಡಿದ್ದರು. ಬಿಎಸ್‍ವೈ ಅವರು ಸಿಎಂ ಆಗುವ ಮುನ್ನವೂ ಈ ದೇವಾಲಯಗಳಿಗೆ ಭೇಟಿ ನೀಡಿ ರಾತ್ರಿ ಇಡೀ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭವನ್ನು ನೆನೆಯಬಹುದಾಗಿದೆ.

  • ನೆರೆ ವೇಳೆ 8 ದಿನಗಳ ಕಾಲ ಪರಿಚಯ ತಿಳಿಸದೇ ಸ್ವಯಂಸೇವಕರಂತೆ ಕೆಲ್ಸ ಮಾಡಿದ್ರು ಐಎಎಸ್ ಅಧಿಕಾರಿ!

    ನೆರೆ ವೇಳೆ 8 ದಿನಗಳ ಕಾಲ ಪರಿಚಯ ತಿಳಿಸದೇ ಸ್ವಯಂಸೇವಕರಂತೆ ಕೆಲ್ಸ ಮಾಡಿದ್ರು ಐಎಎಸ್ ಅಧಿಕಾರಿ!

    ತಿರುವನಂತಪುರಂ: ನೆರೆಯಿಂದ ಸಂತ್ರಸ್ತಗೊಂಡಿರುವ ಕೇರಳದಲ್ಲಿ 8 ದಿನಗಳ ಕಾಲ ಐಎಎಸ್ ಅಧಿಕಾರಿಯೊಬ್ಬರು ತನ್ನ ಹೆಸರನ್ನು ಎಲ್ಲೂ ಹೇಳದೇ ಸ್ವಯಂಸೇವಕರಂತೆ ಕೆಲಸ ಮಾಡಿದ್ದಾರೆ.

    2012ರ ಬ್ಯಾಚ್ ಅಧಿಕಾರಿ ಪ್ರಸ್ತುತ ದಾದ್ರಾ ಮತ್ತು ನಗರ್ ಹವೇಲಿಯ ಜಿಲ್ಲಾಧಿಕಾರಿಯಾಗಿರುವ ಕಣ್ಣನ್ ಗೋಪಿನಾಥನ್ ಸ್ವಯಂಸೇವಕರ ಜೊತೆಯೇ ಕೆಲಸ ಮಾಡಿ ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    8ನೇ ದಿನ ಕೇರಳ ಬುಕ್ ಮತ್ತು ಪಬ್ಲಿಕೇಶನ್ ಕೇಂದ್ರದಲ್ಲಿ ವಸ್ತುಗಳನ್ನು ಲೋಡಿಂಗ್ ಮಾಡುವ ವೇಳೆ ಎರ್ನಾಕುಲಂ ಜಿಲ್ಲಾಧಿಕಾರಿ ಮೊಹಮ್ಮದ್ ಸಫ್ರುಲ್ಲಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸಫ್ರುಲ್ಲಾ ಅವರಿಗೆ ಮೊದಲೇ ಗೋಪಿನಾಥನ್ ಅವರ ಪರಿಚಯ ಇತ್ತು. ಈ ವೇಳೆ ಇಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿ ಐಎಎಸ್ ಅಧಿಕಾರಿ ಎಂದು ಪರಿಚಯಿಸಿದಾಗ ಗೋಪಿನಾಥನ್ ಅವರ ವ್ಯಕ್ತಿತ್ವ ಅಲ್ಲಿದ್ದವರಿಗೆ ಗೊತ್ತಾಗಿದೆ.

    ದಾದ್ರಾ ಮತ್ತು ನಗರ್‍ಹವೇಲಿಯ 1 ಕೋಟಿ ರೂ. ನೆರವು ನೀಡಲು ಗೋಪಿನಾಥ್ ಕೇರಳಕ್ಕೆ ಆಗಮಿಸಿದ್ದರು. ಆಗಸ್ಟ್ 26 ರಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಚೆಕ್ ನೀಡಿದ ಬಳಿಕ ಅವರು ತಿರುವನಂತಪುರಂನಿಂದ ನೇರವಾಗಿ ಸರ್ಕಾರಿ ಬಸ್ಸು ಹತ್ತಿದ್ದು ಚೆಂಗನ್ನೂರಿಗೆ. ಕೇರಳದಲ್ಲಿ ನೆರೆಯಿಂದ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶದಲ್ಲಿ ಒಂದಾಗಿರುವ ಚೆಂಗನ್ನೂರಿನಲ್ಲಿ ಇಳಿದ ಇವರು ಸ್ವಯಂಸೇವಕರಂತೆ ಕೆಲಸ ಮಾಡತೊಡಗಿದರು.

    ಜನ ಗೋಪಿನಾಥನ್ ಅವರನ್ನು ಯಾರು ನೀವು ಪ್ರಶ್ನಿಸಿದಾಗ, ನಾನು ಸರ್ಕಾರೇತರ ಸಂಸ್ಥೆಯೊಂದರ ಸ್ವಯಂಸೇವಕ ಎಂದು ಹೇಳಿಕೊಂಡಿದ್ದರು. ಪುನರ್ವಸತಿ ಕೇಂದ್ರದಲ್ಲಿ ಕೆಲಸ ಮಾಡುವ ಜೊತೆ ಅವರು ಭಾಷಾಂತರ ಮಾಡುತ್ತಿದ್ದರು.  ಐಎಎಸ್ ಅಧಿಕಾರಿಗಳಿಗೆ ಗೋಪಿನಾಥ್ ಕೇರಳದಲ್ಲಿ ಕೆಲಸ ಮಾಡುತ್ತಿರುವ ವಿಚಾರ ಗೊತ್ತಿತ್ತು.  ಕೆಲ ಐಎಎಸ್ ಸಹಪಾಠಿಗಳಿಗೆ ಮಾತ್ರ ಗೋಪಿನಾಥನ್ ಸ್ವಯಂ ಸೇವಕರಂತೆ ಕೆಲಸ ಮಾಡುತ್ತಿದ್ದಾರೆ ಎನ್ನುವ ವಿಚಾರ ತಿಳಿದಿತ್ತು.

    ತನ್ನ ಕೆಲಸದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಏನು ದೊಡ್ಡ ಕೆಲಸ ಮಾಡಿಲ್ಲ. ನಾನೊಬ್ಬ ಸಾಮಾನ್ಯ ವ್ಯಕ್ತಿಯಂತೆ ಕೆಲಸ ಮಾಡಿದ್ದೇನೆ ಅಷ್ಟೇ ಎಂದು ತಿಳಿಸಿದರು.

    ಕೊನೆಗೆ ನನ್ನ ಪರಿಚಯ ತಿಳಿದಾಗ ಜನ ನನ್ನ ಜೊತೆ ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದರು. ಇದರಿಂದ ನನಗೆ ಬಹಳ ಮುಜುಗರವಾಯಿತು. ಈ ವೇಳೆ ಅಧಿಕಾರಿಗಳಿಗೆ ನಾನು ಐಎಎಸ್ ಅಧಿಕಾರಿ ಎನ್ನುವ ವಿಚಾರ ಗೊತ್ತಾದ ಬಳಿಕ ಅವರು ಕೆಲಸದ ವೇಳೆ ನಾವು ಏನಾದರೂ ನಿಮಗೆ ಬೈದಿದ್ದರೆ ಅದಕ್ಕೆ ಕ್ಷಮೆಯಾಚಿಸುತ್ತೇವೆ ಎಂದಿದ್ದರು. ನೀವು ನನ್ನನ್ನು ಹೀರೋನಂತೆ ಬಿಂಬಿಸಬೇಡಿ. ತಳ ಮಟ್ಟದಲ್ಲಿ ಬಹಳಷ್ಟು ಜನ ಕಷ್ಟಪಟ್ಟು ಸಹಾಯ ಮಾಡುತ್ತಿದ್ದಾರೆ. ಅವರೇ ನಿಜವಾದ ಹೀರೋಗಳು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

    ಕೇರಳದ ಪುದುಪ್ಪಲ್ಲಿಯವರಾದ ಗೋಪಿನಾಥನ್ ಕೇರಳದಿಂದ ತೆರಳಿದ ಬಳಿಕ ಸಾಂದರ್ಭಿಕ ರಜೆಯನ್ನು ಹಾಕಿದ್ದರೂ ದಾದ್ರಾ ಮತ್ತು ನಗರ್ ಹವೇಲಿ ಆಡಳಿತ ಸರ್ಕಾರಿ ಕೆಲಸದ ನಿಮಿತ್ತ ಪ್ರವಾಸ ಕೈಗೊಂಡಿದ್ದಾರೆ ಎಂದು ದಾಖಲು ಮಾಡಿಕೊಂಡಿದೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇವರನಾಡಲ್ಲಿ ಇನ್ನೈದು ದಿನ ಸಾಧಾರಣ ಮಳೆ- ಕೇರಳಕ್ಕೆ KSRTC ಬಸ್ ಸಂಚಾರ ಆರಂಭ

    ದೇವರನಾಡಲ್ಲಿ ಇನ್ನೈದು ದಿನ ಸಾಧಾರಣ ಮಳೆ- ಕೇರಳಕ್ಕೆ KSRTC ಬಸ್ ಸಂಚಾರ ಆರಂಭ

    ತಿರುವನಂತಪುರ: ಕೇರಳದಲ್ಲಿ ಇನ್ನೈದು ದಿನ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿ ಮೃಂತ್ಯಜಯ್ ತಿಳಿಸಿದ್ದಾರೆ. ಕೇರಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಮತ್ತೆ ಆರಂಭವಾಗಿದೆ.

    ಹವಾಮಾನ ಇಲಾಖೆ ಕೇರಳದ 14 ಜಿಲ್ಲೆಗಳಲ್ಲಿ ಘೋಷಿಸಿದ್ದ ‘ರೆಡ್ ಅಲರ್ಟ್’ ಹಿಂದಕ್ಕೆ ಪಡೆದುಕೊಂಡಿದ್ದು, ಕೇರಳಿಗರು ಕೊಂಚ ನಿರಾಳರಾಗುವಂತೆ ಮಾಡಿದೆ. ಕಳೆದ ಎರಡು ವಾರಗಳಿಂದ ಕೇರಳದಲ್ಲಿ ಭಾರೀ ಮಳೆಯಾಗಿದ್ದು, ಮಳೆಯ ಪ್ರಮಾಣ ಕಡಿಮೆ ಆಗಿದೆ. ಆದ್ರೆ ಮುಂದಿನ ಐದು ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ನದಿಗಳಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣ ಇಳಿಕೆಯಾಗುತ್ತಿದೆ. ಸಾಮಾನ್ಯವಾಗಿ ಅತಿ ಹೆಚ್ಚು ಮಳೆಯಾಗುವ ಪ್ರದೇಶಗಳನ್ನು ಹೊರತು ಪಡಿಸಿ ಎಲ್ಲ ಕಡೆಯೂ ಸಾಧಾರಣ ಮಳೆಯಾಗಲಿದೆ.

    ಆರೆಂಜ್ ಅಲರ್ಟ್ (ಅಪಾಯ ಸಂಭವಿಸುವ ಸಾಧ್ಯತೆಗಳಿದ್ದು ತಯಾರಾಗಿರಿ) ನ್ನು ರಾಜ್ಯದಿಂದ ಹಿಂದಕ್ಕೆ ಪಡೆಯಲಾಗಿದೆ. ಇಡುಕ್ಕಿ, ಕೋಜಿಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಇನ್ನು ಯೆಲ್ಲೋ ಅಲರ್ಟ್ (ಪ್ರವಾಹ ಪರಿಸ್ಥಿತಿ ನಿಮಗೆ ತಿಳಿದಿರಲಿ) ಘೋಷಿಸಲಾಗಿದೆ.

    ಕೇರಳದ ರಕ್ಷಣಾ ಕಾರ್ಯಚರಣೆ ಇಂದು ಅಂತಿಮ ಹಂತವನ್ನು ತಲುಪಿದ್ದು, 5,500 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಪರಿಹಾರ ಕೇಂದ್ರಗಳಲ್ಲಿ 7 ಲಕ್ಷಕ್ಕೂ ಅಧಿಕ ಜನರು ಆಶ್ರಯ ಪಡೆದಿದ್ದು, ಎಲ್ಲ ನಿರಾಶ್ರಿತರಿಗೆ ಮೂಲಭೂತ ಸೌಲಭ್ಯ ಮತ್ತು ಆಹಾರ ನೀಡುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

    ಕಾಂಗ್ರೆಸ್ ನ ಎಲ್ಲ ಸಂಸದರು ಮತ್ತು ಶಾಸಕರು ತಮ್ಮ ಒಂದು ತಿಂಗಳ ಸಂಬಳವನ್ನು ಕೇರಳ ಪರಿಹಾರ ನಿಧಿಗೆ ನೀಡಿದ್ದಾರೆ. ಇತ್ತ ಶಿವಸೇನೆ ಪಕ್ಷದ ಎಲ್ಲ ಸಂಸದರು ಮತ್ತು ಶಾಸಕರು ಸಹ ತಮ್ಮ ಒಂದು ತಿಂಗಳ ಸಂಬಳವನ್ನು ಕೇರಳ ಪರಿಹಾರ ನಿಧಿಗೆ ನೀಡಲು ಮುಂದಾಗಿದ್ದಾರೆ. ಕೇರಳದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ 500 ಕೋಟಿ ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರವಾಹದಲ್ಲಿ ಮೃತ ಕುಟುಂಬಸ್ಥರಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ತಿಳಿಸಿದ್ದಾರೆ.

    ತ್ರಿಶೂರ್, ತಿರುವನಂತಪುರಂ, ಕ್ಯಾಲಿಕಟ್, ಕಣ್ಣೂರು, ಪಾಲ್ಗಾಟ್, ಕೊಟ್ಟಾಯಂಗಳಿಗೆ ಒಟ್ಟು 12 ರಿಂದ 13 ಬಸ್ಸುಗಳು ಭಾನುವಾರ ರಾತ್ರಿ ಸಂಚಾರ ಆರಂಭಿಸಿದೆ. ಮಡಿಕೇರಿ ಹಾಗೂ ಕುಶಾಲನಗರಕ್ಕೂ ಬಸ್ಸುಗಳನ್ನು ಬಿಡಲಾಗಿದೆ. ಮಂಗಳೂರು ಕಡೆಗೆ ಚಾರ್ಮಾಡಿ ಘಾಟ್ ಕಡೆಯಿಂದ ಸಾಮಾನ್ಯ ಬಸ್ಸುಗಳನ್ನು ಮಾತ್ರ ಬಿಡಲಾಗುತ್ತಿದೆ. ಆದರೆ, ಕಾಸರಗೋಡಿಗೆ ಯಾವುದೇ ಬಸ್ಸುಗಳನ್ನು ರಸ್ತೆಗಿಳಿಸಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇರಳದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ – 500 ಕೋಟಿ ಪರಿಹಾರ ಘೋಷಣೆ

    ಕೇರಳದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ – 500 ಕೋಟಿ ಪರಿಹಾರ ಘೋಷಣೆ

    ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ರಾಜ್ಯಕ್ಕೆ 500 ಕೋಟಿ ಪರಿಹಾರ ಘೋಷಣೆ ಮಾಡಿದ್ದಾರೆ.

    ಪ್ರವಾಹದಲ್ಲಿ ಮೃತ ಕುಟುಂಬಸ್ಥರಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಪಿ. ಸತಾಶಿವಂ ಹಾಗು ಕೇಂದ್ರ ಪ್ರವಾಸ ಮಂತ್ರಿ ಕೆ.ಜೆ.ಆಲ್ಫೋನ್ಸ್ ರಿಂದ ನೆರೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.

    ಶುಕ್ರವಾರ ಸಂಜೆಯೇ ತಿರುವನಂತಪುರಕ್ಕೆ ಬಂದಿಳಿದಿದ್ದ ಪ್ರಧಾನಿಗಳನ್ನು ಸಿಎಂ ಸ್ವಾಗತಿಸಿಕೊಂಡಿದ್ದರು. ವೈಮಾನಿಕ ಸಮೀಕ್ಷೆಗೂ ಮುನ್ನ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಪ್ರಧಾನಿ ಸಭೆ ನಡೆಸಿದ್ದರು. ಇಂದು ಕೊಚ್ಚಿನ್ ನಿಂದ ವೈಮಾನಿಕ ಸಮೀಕ್ಷೆ ನಡೆಸಿದರು.

    ಅತಿವೃಷ್ಟಿಯಿಂದಾಗಿ ಅಂದಾಜು 19,512 ಕೋಟಿ ರೂ.ನಷ್ಟವಾಗಿದ್ದು, ಪ್ರಧಾನ ಮಂತ್ರಿಗಳು ಕೂಡಲೇ 2 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿಕೊಳ್ಳಲಾಗಿತ್ತು. ಪ್ರಧಾನಿಗಳು ರಾಜ್ಯಕ್ಕೆ 500 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಇದಕ್ಕೂ ಮುನ್ನ ಕೇಂದ್ರ ಸರ್ಕಾರ ರಾಜ್ಯಕ್ಕೆ 100 ಕೋಟಿ ರೂ. ನೀಡಿತ್ತು. ರಾಜ್ಯದ ನೆರವಿಗೆ ಧಾವಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹ ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಕೋಟಿ ರೂ. ಹಣವನ್ನು ವರ್ಗಾವಣೆ ಮಾಡಿದೆ. ಪರಿಹಾರ ನಿಧಿಗೆ ಹಣ ವರ್ಗಾವಣೆಗೊಳಿಸುವ ಎಲ್ಲ ಬ್ಯಾಂಕಿನ ಶುಲ್ಕಗಳನ್ನು ಕಡಿತಗೊಳಿಸಲಾಗಿದೆ ಎಂದು ಎಸ್‍ಬಿಐ ತಿಳಿಸಿದೆ.

    ಶನಿವಾರ ಕಾಸರಗೋಡು ಎರ್ನಾಕುಲಂ ಮತ್ತು ಇಡುಕ್ಕಿ ಒಳಗೊಂಡಂತೆ ಇತರ 13 ಜಿಲ್ಲೆಗಳಿಗೂ ಎಚ್ಚರಿಕೆಯನ್ನು ಸೂಚಿಸಲಾಗಿದೆ. ಶುಕ್ರವಾರ ಬೆಳಗ್ಗೆ 5 ಘಟಕದ ರಾಷ್ಟ್ರೀಯ ವಿಪತ್ತು ಪಡೆ ತಿರುವನಂತಪುರಂ ತಲುಪಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದೆ. ಇಂದು ಕೂಡ 35 ಸದಸ್ಯರ ತಂಡ ತಲುಪುವ ನೀರಿಕ್ಷೆ ಇದೆ. ಇದೀಗ ಐಸಿಜಿ ಪಡೆಯನ್ನು ವಂಡಿಪೆರಿಯರ್ ನಿಂದ ಮಂಜುಮಾಲಾ ಹಳ್ಳಿಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ 16 ಮಂದಿಯನ್ನು ರಕ್ಷಿಸಲಾಗಿದೆ. ಹಾಗೂ ಅವರಿಗೆ ಸೇವಿಸಲು ಆಹಾರ ಪದಾರ್ಥಗಳನ್ನು ನೀಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗಳ ನಿಶ್ಚಿತಾರ್ಥ ನಿಲ್ಲಿಸಿ ಪ್ರವಾಹ ಪೀಡಿತರಿಗೆ ಹಣ ನೀಡಿದ ಪತ್ರಕರ್ತ

    ಮಗಳ ನಿಶ್ಚಿತಾರ್ಥ ನಿಲ್ಲಿಸಿ ಪ್ರವಾಹ ಪೀಡಿತರಿಗೆ ಹಣ ನೀಡಿದ ಪತ್ರಕರ್ತ

    ತಿರುವನಂತಪುರ: ಕಳೆದ 15 ದಿನಗಳಿಂದ ಕೇರಳದಲ್ಲಿ ಅತಿವೃಷ್ಟಿಯಿಂದಾಗಿ ಜನಜೀವನ ನರಕದಂತಾಗಿದ್ದು, ದೇಶಾದ್ಯಂತ ಕೇರಳದ ಸಹಾಯಕಕ್ಕೆ ಮುಂದಾಗುತ್ತಿದ್ದಾರೆ. ಕೇರಳದಲ್ಲಿ ಖಾಸಗಿ ಪತ್ರಿಕೆಯ ಪತ್ರಕರ್ತರೊಬ್ಬರು ತಮ್ಮ ಮಗಳ ನಿಶ್ಚಿತಾರ್ಥವನ್ನು ನಿಲ್ಲಿಸಿ, ಕಾರ್ಯಕ್ರಮಕ್ಕೆ ಖರ್ಚು ಮಾಡಲು ಇರಿಸಿದ್ದ ಎಲ್ಲ ಹಣವನ್ನು ಕೇರಳದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಮನೋಜ್ ಎಂಬವರೇ ಮಗಳ ನಿಶ್ಚಿತಾರ್ಥ ನಿಲ್ಲಿಸಿದ ಪತ್ರಕರ್ತ. ಇದೇ ಭಾನುವಾರ ಕನ್ನೂರಿನಲ್ಲಿ ಮಗಳು ದೇವಿ ಮತ್ತು ಗೋಕುಲ್ ಜೊತೆ ನಿಶ್ಚಿ ತಾರ್ಥವನ್ನು ಗುರು ಹಿರಿಯರ ಸಮ್ಮುಖದಲ್ಲಿ ನಿಶ್ಚಯಿಸಲಾಗಿತ್ತು. ಹಲವು ದಿನಗಳಿಂದ ನಮ್ಮ ರಾಜ್ಯದಲ್ಲಿಯೇ ಪ್ರವಾಹ ಉಂಟಾಗಿ ಜನರು ತೊಂದರೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ನಾವು ಸಂತೋಷದಿಂದ ಕಾರ್ಯಕ್ರಮ ಮಾಡೋದು ಸರಿ ಅಲ್ಲ. ಹಾಗಾಗಿ ಅಳಿಯನ ಕುಟುಂಬಸ್ಥರ ಜೊತೆ ಮಾತನಾಡಿ ಅದ್ಧೂರಿ ನಿಶ್ಚಿತಾರ್ಥವನ್ನು ಕ್ಯಾನ್ಸಲ್ ಮಾಡಿದ್ದೇವೆ. ಭಾನುವಾರ ಕೇವಲ ಉಂಗುರವನ್ನು ಬದಲಾಯಿಸಲಾಗುವುದು ಎಂದು ಮನೋಜ್ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

    ಎರಡು ಕುಟುಂಬಸ್ಥರು ಚರ್ಚಿಸಿ ಈ ನಿರ್ಣಯ ತೆಗೆದುಕೊಂಡಿದ್ದು, ನಿಶ್ಚಿತಾರ್ಥಕ್ಕೆ ಮೀಸಲಿರಿಸಿದ್ದ ಹಣವನ್ನ ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಿದ್ದೇವೆ ಎಂದು ಮಂಜು ಸ್ಪಷ್ಟಪಡಿಸಿದ್ದಾರೆ.

    ಕೇರಳ ದುರಂತ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈಗಾಗಲೇ ಮೃತಪಟ್ಟವರ ಸಂಖ್ಯೆ 167 ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಪರಿಸ್ಥಿತಿಯನ್ನು ಸುಧಾರಿಸಲು ಭಾರತೀಯ ಕೋಸ್ಟ್ ಗಾರ್ಡ್ ನ ನಾಲ್ಕು ಹಡಗುಗಳನ್ನು ಕೊಚ್ಚಿನ್ ಗೆ ಕಳುಹಿಸಲಾಗಿದ್ದು, ಈಗಾಗಲೇ ಪ್ರವಾಹ ಪೀಡಿತ ಹಳ್ಳಿಗಳಿಗೆ 24 ತಂಡಗಳು ಕಾರ್ಯಚರಣೆ ಮಾಡುತ್ತಿವೆ. ಐಸಿಜಿ 1,764 ಜನರನ್ನು ರಕ್ಷಿಸಿದ್ದು, 4,688 ಜನರಿಗೆ ಸುರಕ್ಷಿತ ಸ್ಥಳಕ್ಕೆ ತಲುಪಿಸಿದೆ.

    ಶನಿವಾರ ಕಾಸರಗೋಡು ಎರ್ನಾಕುಲಂ ಮತ್ತು ಇಡುಕ್ಕಿ ಒಳಗೊಂಡಂತೆ ಇತರ 13 ಜಿಲ್ಲೆಗಳಿಗೂ ಎಚ್ಚರಿಕೆಯನ್ನು ಸೂಚಿಸಲಾಗಿದೆ. ಶುಕ್ರವಾರ ಬೆಳಗ್ಗೆ 5 ಘಟಕದ ರಾಷ್ಟ್ರೀಯ ವಿಪತ್ತು ಪಡೆ ತಿರುವನಂತಪುರಂ ತಲುಪಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದೆ. ಇಂದು ಕೂಡ 35 ಸದಸ್ಯರ ತಂಡ ತಲುಪುವ ನೀರಿಕ್ಷೆ ಇದೆ. ಇದೀಗ ಐಸಿಜಿ ಪಡೆಯನ್ನು ವಂಡಿಪೆರಿಯರ್ ನಿಂದ ಮಂಜುಮಾಲಾ ಹಳ್ಳಿಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ 16 ಮಂದಿಯನ್ನು ರಕ್ಷಿಸಲಾಗಿದೆ. ಹಾಗೂ ಅವರಿಗೆ ಸೇವಿಸಲು ಆಹಾರ ಪದಾರ್ಥಗಳನ್ನು ನೀಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv