Tag: Kerala Governor

  • ಮುಸ್ಲಿಮರು ಶಿಕ್ಷಣದಲ್ಲಿ ಹಿಂದುಳಿದರೆ ದೇಶಕ್ಕೇ ತೊಂದರೆ- ಆರಿಫ್ ಮೊಹಮ್ಮದ್ ಖಾನ್

    ಮುಸ್ಲಿಮರು ಶಿಕ್ಷಣದಲ್ಲಿ ಹಿಂದುಳಿದರೆ ದೇಶಕ್ಕೇ ತೊಂದರೆ- ಆರಿಫ್ ಮೊಹಮ್ಮದ್ ಖಾನ್

    ನವದೆಹಲಿ: ಮುಸ್ಲಿಮರು ಶಿಕ್ಷಣದಲ್ಲಿ (Muslim Education) ಹಿಂದುಳಿದರೆ ದೇಶಕ್ಕೇ ತೊಂದರೆಯಾಗುತ್ತದೆ ಎಂದು ಕೇರಳ (Kerala) ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಎಚ್ಚರಿಸಿದ್ದಾರೆ.

    ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಮ್ಮ ಹಿನ್ನಡೆಗೆ ನಾವೇ (ಮುಸ್ಲಿಮರೇ) ಕಾರಣ. ಏಕೆಂದರೆ ನಾವು ನಮ್ಮ ಮೇಲಿನ ಆರೋಪವನ್ನು ಮತ್ತೊಬ್ಬರ ಮೇಲೆ ಹೊರಿಸಲು ಪ್ರಯತ್ನಿಸುವುದಿಲ್ಲ. ಅದಕ್ಕಾಗಿ ಹಿಂದುಳಿದಿದ್ದೇವೆ. ಮುಸ್ಲಿಮರು ಶಿಕ್ಷಣದಲ್ಲಿ (Muslim Education) ಹಿಂದುಳಿದರೆ ಇಡೀ ದೇಶಕ್ಕೆ ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನೋವಾ, ಆಟೋ ಡಿಕ್ಕಿ- ಬಾಲಕ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

    ಆಧುನಿಕ ಶಿಕ್ಷಣ ಇಸ್ಲಾಂಗೆ ವಿರುದ್ಧವಾಗಿ ಪರಿಗಣಿಸಲಾಗಿದೆ. ಆದ್ದರಿಂದ ಮುಸ್ಲಿಮರು ಶಿಕ್ಷಣ ಮುಂದುವರಿಸದೇ ನಿಷೇಧಿಸಲು ನಿರ್ಧರಿಸುತ್ತಿದ್ದಾರೆ. ಹೊರತಾಗಿ ಕಳಿಸಿದ್ರೆ ಅಂಥರವ ವಿರುದ್ಧ ಅವರೇ ಕ್ರಮ ತೆಗೆದುಕೊಳ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 16 ವರ್ಷಗಳ ಹಿಂದೆ ಪತಿ, ಈಗ ಪತ್ನಿ – ದಂಪತಿ ಜೀವನ ವಿಮಾನ ದುರಂತದಲ್ಲಿ ಅಂತ್ಯ

    ಧಾರ್ಮಿಕ ಕಾರಣಗಳಿಗಾಗಿ `ಫತ್ವಾ’ಗಳನ್ನ ಎಂದಿಗೂ ಬಳಸಲಾಗುವುದಿಲ್ಲ. ಕುರಾನ್‌ನಲ್ಲಿ 200 ನಿದರ್ಶನಗಳಿವೆ. ಆ ಪ್ರಕಾರ ಯಾರು ಸರಿ, ಯಾರು ತಪ್ಪು ಎಂದು ಯಾರೊಬ್ಬರೂ ನಿರ್ಧಿರಿಸಲು ಸಾಧ್ಯವಿಲ್ಲ. ಆದ್ರೆ ಈಗ `ಫತ್ವಾ’ಗಳನ್ನ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುಸ್ಲಿಂ ಕಾನೂನುಗಳು ಕುರಾನ್‌ಗೆ ವಿರುದ್ಧವಾಗಿವೆ – ರಶ್ದಿ ಮೇಲಿನ ದಾಳಿ ಬಗ್ಗೆ ಕೇರಳ ರಾಜ್ಯಪಾಲ ಹೇಳಿದ್ದಿಷ್ಟು

    ಮುಸ್ಲಿಂ ಕಾನೂನುಗಳು ಕುರಾನ್‌ಗೆ ವಿರುದ್ಧವಾಗಿವೆ – ರಶ್ದಿ ಮೇಲಿನ ದಾಳಿ ಬಗ್ಗೆ ಕೇರಳ ರಾಜ್ಯಪಾಲ ಹೇಳಿದ್ದಿಷ್ಟು

    ತಿರುವನಂತಪುರಂ: ಲೇಖಕ, ಖ್ಯಾತ ಕಾದಂಬರಿಕಾರರೂ ಆಗಿರುವ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಬಗ್ಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಈ ಕೃತ್ಯಗಳಿಗೆ ಇಸ್ಲಾಮಿಕ್ ಹಣೆಪಟ್ಟಿ ಕಟ್ಟುವುದು ಸೂಕ್ತವಲ್ಲ. ಏಕೆಂದರೆ ಮುಸ್ಲಿಂ ಬಹುತೇಕ ಕಾನೂನುಗಳು ಕುರಾನ್ ಆಧರಿತವಾಗಿಲ್ಲ, ವಿರುದ್ಧವಾಗಿಯೇ ಇವೆ ಎಂದು ಹೇಳಿದ್ದಾರೆ.

    ಖ್ಯಾತ ಕಾದಂಬರಿಕಾರ ಸಲ್ಮಾನ್ ರಶ್ದಿ ಮೇಲಿನ ಮಾರಣಾಂತಿಕ ದಾಳಿ ಕುರಾನ್‌ನ ಬೋಧನೆಗಳಿಗೆ ವಿರುದ್ಧವಾಗಿದೆ. ಆದರೆ ಇಂತಹ ದಾಳಿಗಳಿಗೆ ಅವಕಾಶ ನೀಡುವ ಕಾನೂನುಗಳಿಗೆ ಮುಸ್ಲಿಂ ಕಾನೂನಿನ ಹಣೆಪಟ್ಟಿ ಕಟ್ಟಲಾಗಿದೆ. ದಿಯೋಬಂದ್ ಹಾಗೂ ನದ್ವಾತುಲ್ ಉಲೇಮಾದಂತಹ ಪ್ರಮುಖ ಮದರಸಾಗಳಲ್ಲಿನ ಪಠ್ಯ ಕ್ರಮದ ಭಾಗವಾಗಿವೆ ಎಂದು ಆರೀಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. ಇದನ್ನೂ ಓದಿ: ರಶ್ದಿ ಆರೋಗ್ಯದಲ್ಲಿ ಚೇತರಿಕೆ – ವೆಂಟಿಲೇಟರ್‌ನಿಂದ ಬಿಡುಗಡೆ

    ಇಸ್ಲಾಂ ಹೆಸರಿನಲ್ಲಿ ಏನೇ ನಡೆದರೂ ಅದಕ್ಕೆ ಪುಸ್ತಕದ ಅನುಮೋದನೆ ಇರಬೇಕು. ಆದ್ರೆ ಈಗ ಮುಸ್ಲಿಂ ಸಾಮ್ರಾಜ್ಯದ ಅವಧಿಯಲ್ಲಿ ಬಂದಂತಹ ಕಾನೂನಿಗೆ ಅನುಗುಣವಾಗಿ ನಡೆಯುತ್ತಿದೆ. ಇವೆಲ್ಲಾ ದೇವ ವಿಶ್ವಾಸಿಗಳಿಗೆ ವ್ಯರ್ಥ ಹಾಗೂ ನೋಯಿಸುವ ಅಂಶಗಳಿಂದ ದೂರ ಇರುವಂತೆ ಹೇಳುವ ಕುರಾನ್ ಬೋಧನೆಗಳಿಗೆ ವಿರುದ್ಧವಾಗಿಯೇ ಇದೆ. ಇಂತಹ ಕೃತ್ಯಗಳನ್ನು ಇಸ್ಲಾಮಿಕ್ ಎಂದು ಹೇಳುವುದು ಸೂಕ್ತವಲ್ಲ ಎಂಬುದು ನನ್ನ ಭಾವನೆ ಎಂದಿದ್ದಾರೆ. ಇದನ್ನೂ ಓದಿ: ಟಾಯ್ಲೆಟ್‍ನಲ್ಲಿ ಬ್ಯಾಂಕ್ ಸಿಬ್ಬಂದಿಯನ್ನು ಕೂಡಿ ಹಾಕಿ ಕೆಜಿಗಟ್ಟಲೆ ಚಿನ್ನ ಹೊತ್ತೊಯ್ದರು

    ರಶ್ದಿ ಮೇಲಿನ ದಾಳಿಯಂತಹ ಕೃತ್ಯಗಳಿಗೆ ಅನುಮೋದನೆ ನೀಡುವ ಕಾನೂನನ್ನು ಮುಸ್ಲಿಂ ಕಾನೂನು ಎಂಬ ಹಣೆಪಟ್ಟಿ ಕಟ್ಟಲಾಗಿದೆ. ಸಮಸ್ಯೆ ಏನಾಗಿದೆ ಎಂದರೆ ಮುಸ್ಲಿಂ ಕಾನೂನು ಎಂದು ಹೇಳುತ್ತಿರುವುದು ಬಹುತೇಕ ಕುರಾನ್ ಆಧರಿತವಾಗಿಲ್ಲ. ಅಂದಿನ ಸರ್ಕಾರಗಳಲ್ಲಿದ್ದ ವ್ಯಕ್ತಿಗಳು ನಿರ್ಮಿಸಿರುವಂತಹ ನಿಬಂಧನೆಗಳಾಗಿವೆ ಎಂದು ರಾಜ್ಯಪಾಲರು ಸ್ಪಷ್ಟನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]