Tag: Kerala Rain

  • ಕೇರಳದಲ್ಲಿ ಭಾರೀ ಮಳೆಗೆ 5 ಸಾವು – 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

    ಕೇರಳದಲ್ಲಿ ಭಾರೀ ಮಳೆಗೆ 5 ಸಾವು – 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

    – ಕಣ್ಣೂರು, ಎರ್ನಾಕುಳಂ, ಕಾಸರಗೋಡು ಜಿಲ್ಲೆಗಳಲ್ಲಿ ಮಳೆಗೆ ಭಾರೀ ಹಾನಿ
    – ಮಧುವಾಹಿನಿ ಅಬ್ಬರಕ್ಕೆ ಮಧೂರು ದೇಗುಲ ಮುಳುಗಡೆ

    ತಿರುವನಂತಪುರಂ: ಕೇರಳದಲ್ಲಿ ( ಶುಕ್ರವಾರ ಸುರಿದ ಭಾರಿ ಮಳೆಗೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿ ಮತ್ತು ಉಬ್ಬರವಿಳಿತದಿಂದಾಗಿ ಮನೆಗಳಿಗೆ ವ್ಯಾಪಕ ಹಾನಿಯಾಗಿದೆ.

    ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಎಂಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಉಳಿದ ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿತ್ತು. ಶನಿವಾರ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಜೂನ್ 5 ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಮುಂದುವರಿಯಲಿದೆ. ಕೇರಳದಲ್ಲಿ ಮುಂದಿನ ಐದು ದಿನಗಳವರೆಗೆ ಪಶ್ಚಿಮ ದಿಕ್ಕಿನ ಗಾಳಿ ಬೀಸುವ ನಿರೀಕ್ಷೆಯಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಮತ್ತು ನದಿ ದಂಡೆಯ ಬಳಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೆ. ರಾಜನ್ ತಿಳಿಸಿದ್ದಾರೆ.

    ಕೊಟ್ಟಾಯಂ ಜಿಲ್ಲೆಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದರೆ, ತಿರುವನಂತಪುರಂ ಬಳಿಯ ಸಮುದ್ರದಲ್ಲಿ ಮೀನುಗಾರಿಕೆ ದೋಣಿ ಮಗುಚಿ ಬಿದ್ದು ಮೀನುಗಾರನೊಬ್ಬ ಸಾವನ್ನಪ್ಪಿದ್ದಾನೆ. ಕೊಚ್ಚಿಯಲ್ಲಿ ಮರ ಬಿದ್ದು 85 ವರ್ಷದ ಎಂಜಿಎನ್‌ಆರ್‌ಇಜಿಎ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಯೊಬ್ಬ ಕೊಚ್ಚಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಬಹುತೇಕ ಎಲ್ಲಾ ಜಿಲ್ಲೆಗಳ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಡಿಂಗಿ ದೋಣಿಗಳ ಮೂಲಕ ಕುಟುಂಬಗಳನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಯಿತು. ನದಿಗಳ ಬಳಿ ವಾಸಿಸುವ ಜನರನ್ನು ಸಹ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಯಿತು. ರಾಜ್ಯಾದ್ಯಂತ 2,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಯಿತು.

    ರಾಜ್ಯಾದ್ಯಂತ ಭಾರೀ ಮಳೆಗೆ ಮರಗಳು ಉರುಳಿಬಿದ್ದ ಪರಿಣಾಮ ಮನೆಗಳಿಗೆ ಹಾನಿಯಾಗಿದೆ. ರಾಜ್ಯದಾದ್ಯಂತ ಕರಾವಳಿ ಪ್ರದೇಶಗಳಲ್ಲಿನ ಅನೇಕ ಮನೆಗಳು ಉಬ್ಬರವಿಳಿತದ ಪರಿಣಾಮವಾಗಿ ನಾಶವಾದವು. ಮಳೆಯಿಂದಾಗಿ ರಾಜ್ಯಾದ್ಯಂತ ವ್ಯಾಪಕ ಬೆಳೆ ನಷ್ಟವಾಗಿದೆ.

  • ವಯನಾಡಿನಲ್ಲಿ ಮಳೆ – ಕಬಿನಿ ಜಲಾಶಯಕ್ಕೆ 13,000 ಕ್ಯೂಸೆಕ್ ಒಳಹರಿವು

    ವಯನಾಡಿನಲ್ಲಿ ಮಳೆ – ಕಬಿನಿ ಜಲಾಶಯಕ್ಕೆ 13,000 ಕ್ಯೂಸೆಕ್ ಒಳಹರಿವು

    ಮೈಸೂರು: ಕೇರಳದ (Kerala) ವಯನಾಡಿನಲ್ಲಿ (Wayanad) ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಕಬಿನಿ  ಜಲಾಶಯಕ್ಕೆ (Kabini Reservoir) 13,000 ಕ್ಯೂಸೆಕ್ ಒಳಹರಿವು ಹೆಚ್ಚಾಗಿದೆ.

    ಹೆಚ್.ಡಿ ಕೋಟೆ (H D Kote) ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯವಿದು. 84 ಅಡಿ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ಸದ್ಯ 63.52 ಅಡಿ ನೀರು ಸಂಗ್ರಹವಿದೆ. 19.52 ಟಿಎಂಸಿ ನೀರನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಕಬಿನಿ ಜಲಾಶಯದಲ್ಲಿ ಈಗ 8.72 ಟಿಎಂಸಿ ನೀರಿದೆ. ಇದನ್ನೂ ಓದಿ: ಗಾಜಾದಲ್ಲಿ ಕದನವಿರಾಮ ಘೋಷಿಸಲು ಅಮೆರಿಕ ಪ್ರಸ್ತಾವನೆಗೆ ಹಮಾಸ್ ಒಪ್ಪಿಗೆ

    ವರ್ಷಕ್ಕೆ 2 ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯ ಈ ಕಬಿನಿ ಜಲಾಶಯ. ಮೈಸೂರು, ಬೆಂಗಳೂರು, ಚಾಮರಾಜನಗರ ಜಿಲ್ಲೆಗೆ ನೀರನ್ನು ಇದೇ ಜಲಾಶಯದಿಂದ ಪೊರೈಸಲಾಗುತ್ತದೆ. ಇದನ್ನೂ ಓದಿ: ಸರಣಿ ಮನೆಗಳ್ಳತನ ಮಾಡ್ತಿದ್ದ ಖದೀಮ ಅಂದರ್ – 6 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

    ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಭಾನುವಾರದಿಂದ ಮುಂಗಾರು ಮಳೆ (Mansoon Rain) ಅಬ್ಬರಿಸುತ್ತಿರುವ ಹಿನ್ನೆಲೆ ಹಳೆ ಮೈಸೂರು (Mysuru) ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬೀಳದ ಪರಿಣಾಮ ಕೆಆರ್‌ಎಸ್ ಡ್ಯಾಂನಲ್ಲಿ ಕೇವಲ 15 ಟಿಎಂಸಿ ನೀರು ಇತ್ತು. ಇದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಭಾನುವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದ ಡ್ಯಾಂ ಭರ್ತಿಯಾಗುತ್ತದೆ ಎಂಬ ಆಶಾ ಭಾವನೆ ಜನರಲ್ಲಿ ಮೂಡಿದೆ. ಇದನ್ನೂ ಓದಿ: ಕಲಬುರಗಿ ಗುತ್ತಿಗೆದಾರನಿಗೆ ಸರ್ಕಾರದ ವರ್ಕ್ ಆರ್ಡರ್ ಕೊಡಿಸುವುದಾಗಿ ಆಮಿಷ – 1.21 ಕೋಟಿ ವಂಚನೆ ಆರೋಪ

    ಇದೀಗ ಕೆಆರ್‌ಎಸ್ ಡ್ಯಾಂಗೆ 2,053 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಂಗಳವಾರಕ್ಕೆ ನೀರಿನ ಪ್ರಮಾಣವು 5,000 ಕ್ಯೂಸೆಕ್‌ಗೆ ಹೆಚ್ಚುವ ಸಾಧ್ಯತೆ ಇದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ 89.35 ಅಡಿ ನೀರು ಇದೆ. ಇನ್ನೂ 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಈಗ 15.555 ಟಿಎಂಸಿ ನೀರಿದೆ. ಹೊರ ಹರಿವಿನ ಪ್ರಮಾಣ 347 ಕ್ಯೂಸೆಕ್ ಇದೆ.

  • ಕೇರಳದಲ್ಲಿ ಇಂದು ಭಾರೀ ಮಳೆ ಸಾಧ್ಯತೆ – 6 ಜಿಲ್ಲೆಯಲ್ಲಿ ರೆಡ್ ಅಲರ್ಟ್

    ಕೇರಳದಲ್ಲಿ ಇಂದು ಭಾರೀ ಮಳೆ ಸಾಧ್ಯತೆ – 6 ಜಿಲ್ಲೆಯಲ್ಲಿ ರೆಡ್ ಅಲರ್ಟ್

    ತಿರುವನಂತಪುರ: ಕೇರಳದ ಈಶಾನ್ಯ ಭಾಗದಲ್ಲಿ ಮುಂಗಾರಿನ ಚುರುಕುಗೊಂಡಿದ್ದು, ನವೆಂಬರ್ 13 ಮತ್ತು 14ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕೇರಳದ ಆರು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ ಇಡುಕ್ಕಿ ಮತ್ತು ಎರ್ನಾಕುಲಂ ಮತ್ತು ಇಡುಕ್ಕಿಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

    ಭಾನುವಾರ ಕೂಡ ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಎಂಬ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆ ಮುಂದುವರಿದರೆ ಇಡುಕ್ಕಿ ಜಲಾಶಯದ ಚೆರುಥೋನಿ ಅಣೆಕಟ್ಟಿನ ಶೆಟರ್‌ಗಳನ್ನು ಶನಿವಾರ ಅಥವಾ ಭಾನುವಾರ ತೆರೆಯಲಾಗುವುದು ಎಂದು ಇಡುಕ್ಕಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ 13 ನೊರೊವೈರಸ್ ಪ್ರಕರಣ ಪತ್ತೆ – ನೀರಿನಿಂದ ಹರಡುವ ಹೊಸ ಕಾಯಿಲೆ

    ಇಡುಕ್ಕಿ ಅಣೆಕಟ್ಟಿನ ಕೆಳಭಾಗ ಮತ್ತು ಪೆರಿಯಾರ್ ನದಿಯ ದಡದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಅಕ್ಟೋಬರ್ 1ರಿಂದ 12ರವರೆಗೂ ಕೇರಳದಲ್ಲಿ ಶೇಕಡಾ 86 ರಷ್ಟು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವೆಬ್ ಸೈಟ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಮದುವೆಗೆ ಆಗಮಿಸಿದ ಅತಿಥಿಗಳಿಗೆ ಊಟದ ಬಿಲ್ ಕೇಳಿದ ವಧು

  • ಭಾರೀ ಮಳೆ ಹಿನ್ನೆಲೆ – ಶಬರಿಮಲೆ ಭಕ್ತರಿಗೆ ಪಂಪಾ ನದಿಗೆ ಇಳಿಯದಂತೆ ಎಚ್ಚರಿಕೆ

    ಭಾರೀ ಮಳೆ ಹಿನ್ನೆಲೆ – ಶಬರಿಮಲೆ ಭಕ್ತರಿಗೆ ಪಂಪಾ ನದಿಗೆ ಇಳಿಯದಂತೆ ಎಚ್ಚರಿಕೆ

    ಪತ್ತನಂತಿಟ್ಟ: ಶಬರಿಮಲೆ ದರ್ಶನಕ್ಕೆ ಅಯ್ಯಪ್ಪ ಭಕ್ತರು ಪಂಪಾ ನದಿಗಿಳಿಯದಂತೆ ಪತ್ತನಂತಿಟ್ಟ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು (Pampa River), ಈ ಹಿನ್ನೆಲೆಯಲ್ಲಿ ಪಂಪಾ ನದಿಯಲ್ಲಿ (Kerala Rain) ನೀರಿನ ಹರಿವು ಹೆಚ್ಚಾಗಿದೆ. ತುಲಾ ಮಾಸ ಪೂಜೆಗಾಗಿ ಇಂದು ಸಂಜೆ 5 ಗಂಟೆಗೆ ಶಬರಿಮಲೆ ದೇವಸ್ಥಾನವನ್ನು ತೆರೆಯಲಾಗಿದೆ. ಭಾನುವಾರ ಬೆಳಗ್ಗೆ 5ರಿಂದ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

    ಪಂಪಾ ನದಿಯಲ್ಲಿ ಸದ್ಯ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಯಾತ್ರಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ. ಅಲ್ಲದೆ ಈ ದಾರಿಯಲ್ಲಿ ಸಾಧ್ಯವಾದಷ್ಟು ರಾತ್ರಿ ಸಂಚಾರ ಮಾಡಬೇಡಿ ಎಂದು ಜಲಸಂಪನ್ಮೂಲ ಸಚಿವ ರೋಷಿ ಅಗಸ್ಟಿನ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಪ್ರವಾಹ- ಮೂವರು ಬಲಿ, 10 ಮಂದಿ ನಾಪತ್ತೆ

    ಮಳೆಯಿಂದ ಉಂಟಾಗಬಹುದಾದ ಹಾನಿ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿರುವ ಜನರನ್ನು ಸ್ಥಳಾಂತರಿಸುವ ಕೆಲಸ ಪ್ರಗತಿಯಲ್ಲಿದೆ ಎಂದೂ ಅವರು ಇದೇ ವೇಳೆ ಹೇಳಿದರು. ಇದನ್ನೂ ಓದಿ: ಜಯಲಲಿತಾ ಸಮಾಧಿಗೆ ತೆರಳಿದ ಚಿನ್ನಮ್ಮ- ಮತ್ತೆ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ?

    ಸದ್ಯ ಪತ್ತನಂತಿಟ್ಟ ಜಿಲ್ಲೆಯ ಆನತ್ತೋಡ್ ಡ್ಯಾಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಆಲೆಪ್ಪಿ, ಕೊಟ್ಟಾಯಂ, ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಳಂ ಹಾಗೂ ತ್ರಿಶ್ಶೂರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಘಂಟೆಗೆ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇದನ್ನೂ ಓದಿ: ಲಸಿಕೆ ನೀಡಲು ಬಂದ ಸಿಬ್ಬಂದಿಗೆ ಹಾವು ತೋರಿಸಿ ಬೆದರಿಕೆ ಹಾಕಿದ ಮಹಿಳೆ