Tag: kerala

  • ಶಾಲೆಯ ಆವರಣದಲ್ಲಿ ಬಾಲಕನಿಗೆ ಕಚ್ಚಿತು ಹಾವು – ಐಸಿಯುನಲ್ಲಿ ವಿದ್ಯಾರ್ಥಿ

    ಶಾಲೆಯ ಆವರಣದಲ್ಲಿ ಬಾಲಕನಿಗೆ ಕಚ್ಚಿತು ಹಾವು – ಐಸಿಯುನಲ್ಲಿ ವಿದ್ಯಾರ್ಥಿ

    – 30 ದಿನದ ಒಳಗಡೆ 2ನೇ ಕೇಸ್
    – ಕೇರಳದ ವಯನಾಡ್ ಸುಲ್ತಾನ್‍ಬತ್ತೇರಿಯಲ್ಲಿ ಘಟನೆ

    ತಿರುವನಂತಪುರ: ಕೆಲವೇ ದಿನಗಳ ಹಿಂದೆ ಶಾಲೆಯ ಕೊಠಡಿಯಲ್ಲೇ ವಿದ್ಯಾರ್ಥಿನಿಗೆ ಹಾವು ಕಚ್ಚಿ ಸಾವನ್ನಪ್ಪಿದ್ದ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಪ್ರಕರಣ ನಡೆದಿದೆ.

    ಕೇರಳದ ವಯನಾಡ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗೆ ಹಾವು ಕಚ್ಚಿದೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿಗೆ ಹಾವು ಕಚ್ಚಿರುವುದು ನಿಜ. ಆದರೆ ತರಗತಿ ಕೊಠಡಿಯಲ್ಲಿ ಹಾವು ಕಚ್ಚಿಲ್ಲ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

    ಸಂತ್ರಸ್ತ ವಿದ್ಯಾರ್ಥಿಯನ್ನು 2ನೇ ತರಗತಿಯ ಮೊಹಮ್ಮದ್ ರೆಹಾನ್ ಎಂದು ಗುರುತಿಸಲಾಗಿದ್ದು, ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿಯ ಬೀನಾಚಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಪರಿಸ್ಥಿತಿ ಗಂಭೀರವಾಗಿದೆ.

    ರೆಹಾನ್‍ಗೆ ಆಂಟಿವೆನಿನ್ ನೀಡಲಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಮಧ್ಯವಾರ್ಷಿಕ ಪರೀಕ್ಷೆ ನಂತರ ವಿದ್ಯಾರ್ಥಿ ಶಾಲೆಯಿಂದ ಮನೆಗೆ ಬರುವಾಗ ಹಾವು ಕಚ್ಚಿದೆ. ಮನೆಗೆ ಬಂದ ತಕ್ಷಣ ವಿದ್ಯಾರ್ಥಿ ಘಟನೆ ಕುರಿತು ನಮಗೆ ತಿಳಿಸಿದ. ನಂತರ ನಾವು ಹತ್ತಿರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದೆವು. ಅವರು ಪ್ರಥಮ ಚಿಕಿತ್ಸೆ ನೀಡಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿದ್ಯಾರ್ಥಿಯ ಪೋಷಕರು ಮಾಹಿತಿ ನೀಡಿದ್ದಾರೆ.

    ಶಾಲೆ ಆವರಣದಲ್ಲಿ ಕಸ ಬೆಳೆದಿದ್ದರಿಂದ ಬಾಲಕನಿಗೆ ಹಾವನ್ನು ಗುರುತಿಸಲು ಸಾಧ್ಯವಾಗಿಲ್ಲ. ಹೀಗಾಗಿ ಕೂಡಲೇ ಶಾಲಾ ಆವರಣವನ್ನು ಸ್ವಚ್ಛಗೊಳಿಸಿ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಶಾಲಾ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ.

    ಕಳೆದ ತಿಂಗಳು ಸರ್ಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಯನ್ನು ತರಗತಿಯಲ್ಲೇ ಹಾವು ಕಚ್ಚಿದ್ದ ಘಟನೆ ಸುಲ್ತಾನ್ ಬತ್ತೇರಿಯ ಶೆಹಲಾ ಶೆರಿನ್ ನಲ್ಲಿ ನಡೆದಿತ್ತು. ಹಾವು ಕಚ್ಚಿದ ಕುರಿತು ವಿದ್ಯಾರ್ಥಿನಿ ಶಿಕ್ಷಕಿಗೆ ತಿಳಿಸಿದರೂ ಬಾಲಕಿಯನ್ನು ಗದರಿಸಿ ಸುಮ್ಮನಿರಿಸಿದ್ದರು. ಹೀಗಾಗಿ ಹಾವು ಕಚ್ಚಿದ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದಳು. ತರಗತಿ ಕೊಠಡಿಯಲ್ಲಿ ಉಂಟಾಗಿದ್ದ ಸಣ್ಣ ಕಿಂಡಿಯಿಂದ ಹಾವು ನುಸುಳಿತ್ತು. ಈ ಕಿಂಡಿಯ ಪಕ್ಕದಲ್ಲೇ ಕುಳಿತಿದ್ದ ವಿದ್ಯಾರ್ಥಿನಿಯನ್ನು ಹಾವು ಕಚ್ಚಿತ್ತು. ಘಟನೆ ನಂತರ ಶಾಲಾ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತೀವ್ರ ಪ್ರತಿಭಟನೆ ನಡೆಸಲಾಗಿತ್ತು.

  • ಕಳ್ಳನೆಂದು ಶಂಕಿಸಿ ನಡು ರಸ್ತೆಯಲ್ಲಿ ವ್ಯಕ್ತಿಯ ಮರ್ಮಾಂಗ ಸುಟ್ಟು ಕೊಂದ ದುಷ್ಕರ್ಮಿಗಳು – ವಿಡಿಯೋ ವೈರಲ್

    ಕಳ್ಳನೆಂದು ಶಂಕಿಸಿ ನಡು ರಸ್ತೆಯಲ್ಲಿ ವ್ಯಕ್ತಿಯ ಮರ್ಮಾಂಗ ಸುಟ್ಟು ಕೊಂದ ದುಷ್ಕರ್ಮಿಗಳು – ವಿಡಿಯೋ ವೈರಲ್

    ತಿರುವನಂತಪುರಂ: ಕಳ್ಳತನದ ಆರೋಪ ಮಾಡಿ ವ್ಯಕ್ತಿಯೋರ್ವನನ್ನು ಏಳು ಮಂದಿಯ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿ, ಆತನ ಮರ್ಮಾಂಗವನ್ನೇ ಸುಟ್ಟು ಕೊಲೆಗೈದ ಅಮಾನುಷ ಘಟನೆ ಕೇರಳದಲ್ಲಿ ನಡೆದಿದೆ.

    ತಿರುವಲ್ಲಂ ಜಿಲ್ಲೆಯ ನಿವಾಸಿ ಅಜೀಶ್ ಮೃತ ದುರ್ದೈವಿ. ತಂಪನೂರು ಪ್ರದೇಶದ ಸೆಂಟ್ರಲ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಮಲಗಿದ್ದ ವೇಳೆ ಆತನ ಪರ್ಸ್ ಕಳವು ಮಾಡಲಾಗಿತ್ತು. ಆದರೆ ಆ ಪರ್ಸನ್ನು ಅಜೀಶ್ ಕದ್ದಿದ್ದಾನೆ ಎಂದು ಆರೋಪಿಸಿ, ಸ್ಥಳದಲ್ಲಿದ್ದ ಗುಂಪೊಂದು ಆತನನ್ನು ಥಳಿಸಿ, ಆತನ ಮರ್ಮಾಂಗವನ್ನು ಸುಟ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಪರಿಣಾಮ ಅಜೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಅಲ್ಲದೆ ಜನರು ಅಜೀಶ್‍ನನ್ನು ಹೊಡೆಯುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್‍ನಲ್ಲಿ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದನ್ನು ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ಸಂತ್ರಸ್ತನಿಗೆ ಚಿತ್ರಹಿಂಸೆ ಕೊಟ್ಟು ಕೊಂದ ಜನರ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

    ಈ ವಿಡಿಯೋ ಪೊಲೀಸರ ಕೈತಲುಪಿದ್ದು, ಇದರ ಮೂಲಕವೇ ಸಂತ್ರಸ್ತನನ್ನು ಕೊಂದ ಐವರು ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ, ಬಂಧಿಸಿದ್ದಾರೆ. ಅಲ್ಲದೆ ಉಳಿದ ಇಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ಬಂಧಿತ ಆರೋಪಿಗಳನ್ನು ನಾಸೀರ್, ದಿನೇಶ್ ವರ್ಗಿಸ್, ಅರ್ಜುನ್, ಸಜನ್ ಮತ್ತು ರಾಬಿನ್‍ಸನ್ ಎಂದು ಗುರುತಿಸಲಾಗಿದೆ. ಈಗಾಗಲೇ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

    ಮೃತ ವ್ಯಕ್ತಿಯ ಮರ್ಮಾಂಗದ ಶೇ.40ರಷ್ಟು ಭಾಗ ಸುಟ್ಟು ಹೋಗಿದೆ. ಅದ್ದರಿಂದಲೇ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಈ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಸಲಿಂಗಿಗಳ ರೊಮ್ಯಾಂಟಿಕ್ ಪ್ರಿ-ವೆಡ್ಡಿಂಗ್ ಫೋಟೋಶೂಟ್ ವೈರಲ್

    ಸಲಿಂಗಿಗಳ ರೊಮ್ಯಾಂಟಿಕ್ ಪ್ರಿ-ವೆಡ್ಡಿಂಗ್ ಫೋಟೋಶೂಟ್ ವೈರಲ್

    ತಿರುವನಂತಪುರಂ: ಇತ್ತೀಚೆಗೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಸಖತ್ ಟ್ರೆಂಡ್ ಆಗಿದ್ದು, ಮದುವೆಗೆ ಮುನ್ನ ಫೋಟೋಶೂಟ್ ಮಾಡಿಸಿಕೊಳ್ಳಲು ಅನೇಕ ಜೋಡಿಗಳು ಖುಷಿಪಡುತ್ತಾರೆ. ಹಾಗೆಯೇ ಇತ್ತೀಚೆಗೆ ಕೇರಳದ ಸಲಿಂಗಿ ಜೋಡಿಯೊಂದು ಮಾಡಿಸಿರುವ ರೊಮ್ಯಾಂಟಿಕ್ ಪ್ರಿ-ವೆಡ್ಡಿಂಗ್ ಫೋಟೋಶೂಟ್ ಎಲ್ಲೆಡೆ ವೈರಲ್ ಆಗಿದೆ.

    ಕೇರಳ ಮೂಲದ ಸಲಿಂಗ ಜೋಡಿ ಅಬ್ದುಲ್ ರೆಹಿಮ್ ಮತ್ತು ನೆವಿದ್ ಆಂಟೋನಿ ಚುಲ್ಲಿಕಾಲ್ ಪ್ರಿ-ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಜೋಡಿ ನೀಡಿರುವ ರೊಮ್ಯಾಂಟಿಕ್ ಪೋಸ್‍ಗಳು ನೆಟ್ಟಿಗರು ಹುಬ್ಬೇರಿಸುವಂತೆ ಮಾಡಿದೆ. ಸಾಮಾನ್ಯವಾಗಿ ಎಲ್ಲರು ಪ್ರಿ-ವೆಡ್ಡಿಂಗ್ ಶೂಟ್ ಮಾಡಿಸುತ್ತಾರೆ. ನಮಗೂ ಎಲ್ಲರಂತೆ ಖುಷಿ ಖುಷಿಯಾಗಿ ಮದುವೆ ಆಗಬೇಕು ಎನ್ನುವ ಆಸೆ ಇದೆ. ಅದಕ್ಕೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಮಾಡಿಕೊಂಡಿದ್ದೇವೆ ಎಂದು ಸಲಿಂಗಿಗಳು ಹೇಳಿದ್ದಾರೆ. ಇದನ್ನೂ ಓದಿ: ಪ್ರಿ-ವೆಡ್ಡಿಂಗ್ ಶೂಟ್‍ನಲ್ಲಿ ಕಿಸ್ ಮಾಡೋವಾಗ ಮಗುಚಿದ ದೋಣಿ – ವಿಡಿಯೋ ನೋಡಿ

    ತಮ್ಮ ರೊಮ್ಯಾಂಟಿಕ್ ಪ್ರಿ-ವೆಡ್ಡಿಂಗ್ ಫೋಟೋಗಳನ್ನು ಈ ಜೋಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇವರ ಫೋಟೋಗಳನ್ನು ನೋಡಿ ನೆಟ್ಟಿಗರು ಕೂಡ ಖುಷಿಪಟ್ಟಿದ್ದು, ಜೋಡಿಗೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಕೆಸರಿನಲ್ಲಿ ಜೋಡಿಯ ವೆಡ್ಡಿಂಗ್ ಫೋಟೋಶೂಟ್

    ಈ ಸಲಿಂಗ ಜೋಡಿ ತಮ್ಮ ಸಾಕು ನಾಯಿಗಳ ಜೊತೆ ಕೂಡ ಫೋಟೋಶೂಟ್ ಮಾಡಿಕೊಂಡಿದ್ದಾರೆ. ಅಲ್ಲದೆ ಎಲ್ಲಾ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಈ ವಿಶೇಷ ಫೋಟೋಶೂಟ್‍ಗೆ ನೆಟ್ಟಿಗರು ಮನಸೋತಿದ್ದಾರೆ.

    ಕಳೆದ 5 ವರ್ಷಗಳಿಂದ ಈ ಜೋಡಿ ಡೇಟಿಂಗ್ ಮಾಡುತ್ತಿದ್ದರಂತೆ. ಆದರೆ 2018ರಲ್ಲಿ ಸುಪ್ರೀಂ ಕೋರ್ಟ್ ಸಲಿಂಗ ಕಾಮ ಅಪರಾಧವಲ್ಲ ಎಂದು 377 ವಿಧಿಯನ್ನು ರದ್ದುಗೊಳಿಸಿದ ಬಳಿಕ ಇಬ್ಬರೂ ಮದುವೆಯಾಗಲು ಇಚ್ಛಿಸಿದ್ದಾರೆ. ಈ ಮದುವೆಗೆ ಮನೆಯವರ ಒಪ್ಪಿಗೆ ಇಲ್ಲದಿದ್ದರೂ ಅಬ್ದುಲ್ ಮತ್ತು ನೆವಿದ್ ವಿವಾಹವಾಗುತ್ತಿದ್ದಾರೆ.

    ಈ ಸಲಿಂಗ ಜೋಡಿ ಸದ್ಯದಲ್ಲೇ ಬೆಂಗಳೂರಿನಲ್ಲಿ ಮದುವೆಯಾಗಲು ನಿರ್ಧರಿಸಿದ್ದಾರೆ, ಆದರೆ ಮದುವೆ ದಿನಾಂಕವನ್ನು ನಿಗದಿಗೊಳಿಸಿಲ್ಲ.

  • 2017ರಲ್ಲಿ ರೇಪ್ – ಈಗ ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ ಜನ

    2017ರಲ್ಲಿ ರೇಪ್ – ಈಗ ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ ಜನ

    ತಿರುವನಂತಪುರಂ: ಕೇರಳದಲ್ಲಿ 2017 ರಲ್ಲಿ ನಡೆದಿದ್ದ ವಲಯರ್ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಕೆಲ ಜನರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೇರಳದ ಪಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ.

    ಇಂದು ಬೆಳಗ್ಗೆ ವಲಯರ್ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಧು ಎಂಬವನ ಮೇಲೆ ಐದು ಜನರ ಗುಂಪೊಂದು ದಾಳಿ ಮಾಡಿ ಆತನನ್ನು ಚೆನ್ನಾಗಿ ಥಳಿಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಆರೋಪಿಯು ಪಲಕ್ಕಾಡ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ವಲಯರ್ ಪೊಲೀಸ್ ಠಾಣೆಯ ಅಧಿಕಾರಿಗಳು, ಮೊದಲಿಗೆ ಐದು ಜನರ ಗುಂಪೊಂದು ಆರೋಪಿ ಮಧುವಿನ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ನಂತರ ಆರೋಪಿಯನ್ನು ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಐದು ಮಂದಿಯಲ್ಲಿ ಮೂವರನ್ನು ನಾವು ವಶಕ್ಕೆ ಪಡೆದಿದ್ದೇವೆ. ಆಸ್ಪತ್ರೆಗೆ ಹೋಗಿ ಹಲ್ಲೆಗೊಳಾಗದ ಆರೋಪಿಯ ಬಳಿ ಹೇಳಿಕೆಯನ್ನು ಪಡೆದು ಬಂದಿದ್ದೇವೆ ಎಂದು ಹೇಳಿದ್ದಾರೆ.

    ಏನಿದು ವಲಯರ್ ಅತ್ಯಾಚಾರ ಪ್ರಕರಣ?
    2017 ರಲ್ಲಿ ಕೇರಳದ ಪಲಕ್ಕಾಡ್ ಜಿಲ್ಲೆಯ ವಲಯರ್ ಪ್ರದೇಶದ ಹಳೆಯ ಮನೆಯೊಂದರಲ್ಲಿ 13 ವರ್ಷದ ಅಪ್ರಾಪ್ತೆಯೋರ್ವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆದರೆ ಮೃತಪಡುವುದಕ್ಕೂ ಮುನ್ನ ಆಕೆಯನ್ನು ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ತನಿಖೆ ವೇಳೆ ತಿಳಿದು ಬಂದಿತ್ತು. ಈ ಸಾವಿನ ಪ್ರಕರಣದಲ್ಲಿ ಸಂತ್ರಸ್ತೆಯ 9 ವರ್ಷದ ತಂಗಿ ಅಕ್ಕ ಸಾವನ್ನಪ್ಪಿದ ದಿನ ನಮ್ಮ ಮನೆ ಬಳಿ ಇಬ್ಬರು ಅನುಮಾಸ್ಪದವಾಗಿ ಓಡಾಡುತ್ತಿದ್ದರು ಎಂದು ಸಾಕ್ಷಿ ಹೇಳಿದ್ದಳು.

    ಈ ಘಟನೆಯಾದ ಎರಡು ತಿಂಗಳ ಬಳಿಕ 9 ವರ್ಷದ ತಂಗಿಯೂ ಸಹ ಅದೇ ಜಗದಲ್ಲಿ ಅದೇ ರೀತಿಯಾಗಿ ಕೊಲೆಯಾಗಿದ್ದಳು. ಆಕೆಯ ಮರಣೋತ್ತರ ಪರೀಕ್ಷೆಯ ನಂತರ ಸಂತ್ರಸ್ತೆಯನ್ನು ಅತ್ಯಾಚಾರ ಮಾಡಲಾಗಿದೆ ಎಂದು ವರದಿ ಬಂದಿತ್ತು. ಈ ಸಹೋದರಿಯರ ಪ್ರಕರಣವು ಕೇರಳದಲ್ಲಿ ಕೋಲಾಹಲನ್ನು ಸೃಷ್ಟಿಸಿತ್ತು. ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹಾಕಲಾಗಿತ್ತು.

    ಸಾರ್ವಜನಿಕರ ಒತ್ತಡಕ್ಕೆ ಮಣಿದ ಪೊಲೀಸ್ ಸಂತ್ರಸ್ತ ಸಹೋದರಿಯರ ಮನೆಗೆ ಸದಾ ಬರುತ್ತಿದ್ದ ಮೂವರನ್ನು ಈ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದರು. ಆದರೆ ಸ್ಥಳೀಯ ನ್ಯಾಯಾಲಯವು ಈ ಪ್ರಕರಣದ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಈ ವಿಚಾರವಾಗಿ ಹೈಕೋರ್ಟಿನಲ್ಲಿ ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

  • ಭಾರತ ವಿಶ್ವದ ಅತ್ಯಾಚಾರಗಳ ರಾಜಧಾನಿ: ರಾಹುಲ್ ಗಾಂಧಿ

    ಭಾರತ ವಿಶ್ವದ ಅತ್ಯಾಚಾರಗಳ ರಾಜಧಾನಿ: ರಾಹುಲ್ ಗಾಂಧಿ

    ತಿರುವನಂತಪರುಂ: ಭಾರತವನ್ನು ವಿಶ್ವದ ಅತ್ಯಾಚಾರಗಳ ರಾಜಧಾನಿ ಎನ್ನಲಾಗುತ್ತಿದೆ ಎಂದು ಎಐಸಿಸಿ ಮಾಜಿ ಅದ್ಯಕ್ಷ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಕೇರಳದ ವಯನಾಡಿನಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವದ ಅತ್ಯಾಚಾರಗಳ ರಾಜಧಾನಿ ಎಂದು ಕರೆಯಲಾಗುತ್ತಿದೆ. ತನ್ನ ನೆಲದ ಹೆಣ್ಣುಮಕ್ಕಳು ನೋಡಿಕೊಳ್ಳಲು ಭಾರತಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆಯನ್ನು ವಿದೇಶಿ ರಾಷ್ಟ್ರಗಳು ಕೇಳುತ್ತಿವೆ. ಉತ್ತರ ಪ್ರದೇಶ ಬಿಜೆಪಿಯ ಶಾಸಕರೊಬ್ಬರು ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ ಎಂದು ಗುಡುಗಿದ್ದಾರೆ.

    ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಹಿಂಸಾಚಾರ, ದ್ವೇಷ ಹರಡುತ್ತಿದೆ. ದಲಿತರ ಮೇಲಿನ ದೌರ್ಜನ್ಯ, ಅವರನ್ನು ಥಳಿಸುವುದು, ಧ್ವನಿಯನ್ನು ಹತ್ತಿಕ್ಕುವ ಬೆಳವಣಿಗೆ ದೇಶದಲ್ಲಿ ಉಂಟಾಗಿದೆ. ಬುಡಕಟ್ಟು ಜನಾಂಗದವರ ಮೇಲೆ ದೌರ್ಜನ್ಯ ಎಸಗಿ ಅವರ ಭೂಮಿಯನ್ನು ಕಸಿದುಕೊಳ್ಳಲಾಗುತ್ತದೆ. ಹಿಂಸಾಚಾರದಲ್ಲಿ ಈ ನಾಟಕೀಯ ಪ್ರವೃತ್ತಿ ಹೆಚ್ಚುವುದಕ್ಕೆ ಒಂದು ಬಲವಾದ ಕಾರಣವಿದೆ ಎಂದು ರಾಹುಲ್ ಗಾಂಧಿ, ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.

    ಸಾಮಾನ್ಯ ಜನರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ಈ ದೇಶವನ್ನು ನಡೆಸುತ್ತಿರುವ ವ್ಯಕ್ತಿ ಹಿಂಸೆ ಮತ್ತು ವಿವೇಚನೆಯಿಲ್ಲದ ಶಕ್ತಿಯನ್ನು ನಂಬುತ್ತಿರುವುದೇ ಇದಕ್ಕೆ ಕಾರಣ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ಗುಡುಗಿದರು.

    ಉನ್ನಾವೋ ರೇಪ್ ಪ್ರಕರಣ:
    ಉತ್ತರ ಪ್ರದೇಶದಲ್ಲಿ ಬಿಜೆಪಿಯ ಶಾಸಕನಾಗಿದ್ದ ಕುಲದೀಪ್ ಸಿಂಗ್ ಸೆಂಗರ್ 2017ರಲ್ಲಿ 17 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ದೂರು ನೀಡಲು ತೆರಳಿದ್ದ ಸಂತ್ರಸ್ತ ಬಾಲಕಿಯ ತಂದೆಯನ್ನು ಪೊಲೀಸರು ಬೇರೊಂದು ಪ್ರಕರಣದಲ್ಲಿ ಬಂಧಿಸಿದ್ದರು. ಅವರು ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೇ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಕುಲದೀಪ್ ಸಿಂಗ್ ಸೆಂಗರ್ ಬೆಂಬಲಿಗರು, ಸಂಬಂಧಿಕರು ಸಂತ್ರಸ್ತೆಯ ಚಿಕ್ಕಪ್ಪನನ್ನು ಕೊಲೆ ಮಾಡಿದ್ದರು. ಈ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದ್ದು, ಸುಪ್ರೀಂ ಕೋರ್ಟ್‍ನ ಮೇಲ್ವಿಚಾರಣೆಯಲ್ಲಿ ದೆಹಲಿಯ ಜಿಲ್ಲಾ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸುತ್ತಿದೆ.

  • ಕರ್ನಾಟಕದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ – ಕೇಂದ್ರದಿಂದ ಆಘಾತಕಾರಿ ಮಾಹಿತಿ ಬಹಿರಂಗ

    ಕರ್ನಾಟಕದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ – ಕೇಂದ್ರದಿಂದ ಆಘಾತಕಾರಿ ಮಾಹಿತಿ ಬಹಿರಂಗ

    ನವದೆಹಲಿ: ದೇಶದಲ್ಲೇ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿರುವ ಆಘಾತಕಾರಿ ಅಂಶ ಪ್ರಕಟವಾಗಿದೆ.

    2019ರಲ್ಲಿ ದಕ್ಷಿಣದ ಆರು ರಾಜ್ಯಗಳಲ್ಲಿ ಒಟ್ಟು 35 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು, 14 ಸಾವಿರ ಕೇಸ್ ದಾಖಲಾಗುವ ಮೂಲಕ ಕರ್ನಾಟಕ ಅಗ್ರ ಸ್ಥಾನದಲ್ಲಿದೆ.

    ಲೋಕಸಭೆಯ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಕೇಂದ್ರ ಸರ್ಕಾರ ಉತ್ತರಿಸಿದ್ದು, ಇದರಲ್ಲಿ ಮಾಹಿತಿ ಬಹಿರಂಗವಾಗಿದೆ. ದಕ್ಷಿಣ ಭಾರತ ಆರು ರಾಜ್ಯಗಳಲ್ಲಿ ಶೇ.50ರಷ್ಟು ಪ್ರಕರಣಗಳು ದಾಖಲಾಗಿದ್ದು, ಕರ್ನಾಟಕ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳ ಹಾಗೂ ಆಂಧ್ರ ಪ್ರದೇಶಗಳಲ್ಲಿ ಒಟ್ಟು 36 ಜನ ಈ ಮಹಾಮಾರಿಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಡೆಂಗ್ಯೂ ಜ್ವರಕ್ಕೆ ಮನೆ ಮದ್ದು

    ಅಕ್ಟೋಬರ್ ವರೆಗೆ ದೇಶದಲ್ಲಿ ಒಟ್ಟು 91 ಸಾವಿರ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ನವೆಂಬರ್ ಹಾಗೂ ಡಿಸೆಂಬರ್ ಅಂಕಿ ಅಂಶಗಳನ್ನೂ ಸೇರಿಸಿದರೆ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದು ಹೇಳಿದೆ.

    ಮಹಾರಾಷ್ಟ್ರ ಹಾಗೂ ಗೋವಾಗಳಲ್ಲಿ ಅನುಕ್ರಮವಾಗಿ 9,899 ಹಾಗೂ 908 ಕೇಸ್ ದಾಖಲಾಗಿವೆ. ಡೆಂಗ್ಯೂ ಮಹಾಮಾರಿಯನ್ನು ನಿಯಂತ್ರಿಸಲು ಕರ್ನಾಟಕದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯ ಕಲ್ಪಿಸಿದರೂ ಸಹ ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ.

    ಕಳೆದ ವರ್ಷ ರಾಜ್ಯದಲ್ಲಿ 4 ಸಾವಿರ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ ಶೇ.70ರಷ್ಟು ಬೆಂಗಳೂರಿನಲ್ಲಿಯೇ ದಾಖಲಾಗಿದ್ದವು. ಅಲ್ಲದೆ ಡೆಂಗ್ಯೂ ಮಹಾಮಾರಿಗೆ ದಕ್ಷಿಣದ ರಾಜ್ಯಗಳಲ್ಲಿ ಹಲವರು ಮೃತಪಟ್ಟಿದ್ದರು. ದೇಶಾದ್ಯಂತ ಒಟ್ಟು 82 ಜನ ಸಾವನ್ನಪ್ಪಿದ್ದರು. ಕರ್ನಾಟಕ, ಕೇರಳಗಳಲ್ಲಿ 13 ಹಾಗೂ 16 ಜನ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

    ದಕ್ಷಿಣ ರಾಜ್ಯಗಳಲ್ಲೇ ಹೆಚ್ಚೇಕೆ?
    ಅಧಿಕಾರಿಗಳ ನಿರಾಸಕ್ತಿ ಹಾಗೂ ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಇಲ್ಲದಿರುವುದೇ ಡೆಂಗ್ಯೂ ಪ್ರಕರಣಗಳು ಹೆಚ್ಚಲು ಕಾರಣ. ಈ ಕುರಿತು ಹೆಚ್ಚು ಜಾಗೃತಿ ಮೂಡಿಸುವ ಅಗತ್ಯವಿದೆ. ಆಶಾ ಕಾರ್ಯಕರ್ತೆಯರ ಮೂಲಕ ರಾಜ್ಯಾದ್ಯಂತ ಬೃಹತ್ ಜಾಗೃತಿ ಅಭಿಯಾನವನ್ನು ನಾವು ಕೈಗೊಂಡಿದ್ದೇವೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಿ.ಕೆ.ಪಾಂಡೆ ತಿಳಿಸಿದ್ದಾರೆ.

  • ತಡರಾತ್ರಿಯಲ್ಲಿ ವಿದ್ಯಾರ್ಥಿನಿಗಾಗಿ ನಿಲ್ದಾಣದಲ್ಲಿ ಕಾದು ಕುಳಿತ ಬಸ್ ಡ್ರೈವರ್, ಕಂಡಕ್ಟರ್

    ತಡರಾತ್ರಿಯಲ್ಲಿ ವಿದ್ಯಾರ್ಥಿನಿಗಾಗಿ ನಿಲ್ದಾಣದಲ್ಲಿ ಕಾದು ಕುಳಿತ ಬಸ್ ಡ್ರೈವರ್, ಕಂಡಕ್ಟರ್

    ತಿರುವನಂತಪುರಂ: ತಡರಾತ್ರಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಸುರಕ್ಷತೆಗಾಗಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿಕೊಂಡು ಕಾದು ಕುಳಿತ ಬಸ್ ಕಂಡಕ್ಟರ್ ಮತ್ತು ಡ್ರೈವರ್‍ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಇತ್ತೀಚಿಗೆ ದೇಶಾದ್ಯಂತ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಮನೆ ಮಾಡಿದೆ. ಇದರ ಬೆನ್ನಲ್ಲೇ ಕೇರಳ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಸ್ ಕಂಡಕ್ಟರ್ ಪಿ.ಶಜುದ್ದೀನ್ ಮತ್ತು ಡ್ರೈವರ್ ಡೆನ್ನಿಸ್ ಕ್ಸೇವಿಯರ್ ಓರ್ವ ವಿದ್ಯಾರ್ಥಿನಿಗೆ ಮಾಡಿರುವ ಸಹಾಯಕ್ಕೆ ಎಲ್ಲರೂ ಮೆಚ್ಚಿಕೊಂಡಾಡಿದ್ದಾರೆ.

    ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಎಂಫಿಲ್ ಓದುತ್ತಿರುವ ಕೇರಳದ ಕಣ್ಣೂರಿನ ವಿದ್ಯಾರ್ಥಿ ಎಲ್ಸಿನಾ ತನ್ನ ಸಂಶೋಧನೆ ಕೆಲಸದ ನಿಮಿತ್ತ ಕಳೆದ ಮಂಗಳವಾರ ಸರ್ಕಾರಿ ಬಸ್ ನಲ್ಲಿ ಕೊಟ್ಟಾಯಂ ಜಿಲ್ಲೆಯ ಪೊಡಿಮಟ್ಟಂಗೆ ತೆರಳಿದ್ದಾಳೆ. ಈ ವೇಳೆ ಅವಳು ಪೊಡಿಮಟ್ಟಂ ಹತ್ತಿರದ ಕಂಜರಪಲ್ಲಿ ಬಸ್ ನಿಲ್ದಾಣಕ್ಕೆ ಬರುವುದರೊಳಗೆ ರಾತ್ರಿ 11 ಗಂಟೆಯಾಗಿದೆ. ಆ ದಿನ ಅಂದು ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದರಿಂದ ನಿಲ್ದಾಣದ ಬಳಿಯಿದ್ದ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.

    ಈ ವೇಳೆ ಅಲ್ಲಿ ಎಲ್ಸಿನಾ ಒಬ್ಬಳೇ ಆ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಜನರೇ ಇಲ್ಲದ ಸ್ಥಳದಲ್ಲಿ ಒಬ್ಬಳೇ ಹೆಣ್ಣುಮಗಳನ್ನು ಕೆಳಗಿಳಿಸಬಾರದು ಎಂದು ಡ್ರೈವರ್ ಮತ್ತು ಕಂಡಕ್ಟರ್ ಅದೇ ನಿಲ್ದಾಣದಲ್ಲಿ ಬಸ್ ಸಿಲ್ಲಿಸಿಕೊಂಡು ಎಲ್ಸಿನಾಳನ್ನು ಕರೆದುಕೊಂಡು ಹೋಗಲು ಅವಳ ಸಂಬಂಧಿ ಬರುವವರೆಗೂ ಕಾಯ್ದಿದ್ದಾರೆ. ಇದಕ್ಕೆ ಬಸ್‍ನಲ್ಲಿ ಇದ್ದ ಸಹ ಪ್ರಯಾಣಿಕರು ಸಹ ಸಾಥ್ ನೀಡಿದ್ದಾರೆ. ಕೆಲ ಸಮಯದ ನಂತರ ಎಲ್ಸಿನಾ ಸಂಬಂಧಿಯೊಬ್ಬರು ಸ್ಥಳಕ್ಕೆ ಬಂದು ಅವಳನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

    ಬಸ್ ಕಂಡಕ್ಟರ್ ಪಿ.ಶಜುದ್ದೀನ್ ಮತ್ತು ಡೆನ್ನಿಸ್ ಕ್ಸೇವಿಯರ್ ಅವರು ರಾತ್ರಿ ವೇಳೆ ವಿದ್ಯಾರ್ಥಿನಿಯ ಭದ್ರತೆಯ ಬಗ್ಗೆ ತೋರಿದ ಕಾಳಜಿಗೆ ಮತ್ತು ಸಹ ಪ್ರಯಾಣಿಕರ ತಾಳ್ಮೆಗೆ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಕೊಟ್ಟಾಯಂ ಜಿಲ್ಲೆಯ ಪುಂಜಾರ್ ತಾಲೂಕಿನ ಶಾಸಕರಾದ ಪಿ.ಸಿ. ಜಾರ್ಜ್ ಅವರು ಶಜುದ್ದೀನ್ ಮತ್ತು ಕ್ಸೇವಿಯರ್ ಅವರನ್ನು ಅಭಿನಂದಿಸಿದ್ದಾರೆ.

  • ಕೇರಳ ನರ್ಸ್ ಲಿನಿಗೆ ಫ್ಲೋರೆನ್ಸ್ ನೈಟಿಂಗೇಲ್ ಪ್ರಶಸ್ತಿ

    ಕೇರಳ ನರ್ಸ್ ಲಿನಿಗೆ ಫ್ಲೋರೆನ್ಸ್ ನೈಟಿಂಗೇಲ್ ಪ್ರಶಸ್ತಿ

    ನವದೆಹಲಿ: ನಿಫಾ ವೈರಸ್ ಸೋಂಕು ತಗುಲಿ ಮೃತಪಟ್ಟಿದ್ದ ಕೇರಳದ ನರ್ಸ್ ಲಿನಿ ಅವರಿಗೆ ಮರಣೋತ್ತರ ‘ಫ್ಲೋರೆನ್ಸ್ ನೈಟಿಂಗೇಲ್ ಪ್ರಶಸ್ತಿ’ ನೀಡಲಾಗಿದೆ.

    ನವದೆಹಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಲಿನಿ ಅವರ ಪತಿ ರಾಜೇಶ್ ಪುತೂರ್ ಅವರಿಗೆ ಇಂದು ಪ್ರಶಸ್ತಿ ನೀಡಿದ್ದಾರೆ. ಇದೇ ವೇಳೆ 18 ಜನ ನರ್ಸ್ ಗಳಿಗೂ ‘ಫ್ಲೋರೆನ್ಸ್ ನೈಟಿಂಗೇಲ್ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ನಾನು ಸಾಯ್ತೀನಿ, ಮಕ್ಕಳನ್ನು ಚೆನ್ನಾಗಿ ನೋಡ್ಕೊಳ್ಳಿ- ಪತಿಗೆ ನಿಫಾ ವೈರಸ್‍ಗೆ ಬಲಿಯಾದ ಕೇರಳ ನರ್ಸ್ ಪತ್ರ

    ಭಾರತ ಸರ್ಕಾರವು 1973ರಿಂದ ಫ್ಲೋರೆನ್ಸ್ ನೈಟಿಂಗೇಲ್ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ಮೂಲಕ ನರ್ಸಿಂಗ್ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆಯನ್ನು ಮಾಡಿದ ನರ್ಸ್ ಹಾಗೂ ನರ್ಸಿಂಗ್ ಕ್ಷೇತ್ರದ ಪ್ರಾಧ್ಯಾಪಕರನ್ನು ಗೌರವಿಸಲಾಗುತ್ತಿದೆ.

    ಬಾವಲಿಗಳ ಮೂಲಕ ಹರಡುವ ನಿಪಾ ವೈರಸ್ ಗೆ ಬಲಿಯಾಗುವುದಕ್ಕೂ ಮುನ್ನ ಪತಿಗೆ ಕೇರಳದ ನರ್ಸ್ ಒಬ್ಬರು ಭಾವನಾತ್ಮಕ ಪತ್ರ ಬರೆದಿದ್ದರು. ಪತ್ರದಲ್ಲಿ ತಾನು ಸಾಯುವುದು ಖಚಿತವಾಗಿದ್ದು, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ತಿಳಿಸಿದ್ದರು.

    ಕೇರಳದ ಪೇರಾಂಬ್ರ ಆಸ್ಪತ್ರೆಯಲ್ಲಿ ದಾಖಲಾದ ಮೊದಲ ನಿಫಾ ವೈರಸ್ ಸೋಂಕು ತಗುಲಿದ್ದ ರೋಗಿಗೆ ಚಿಕಿತ್ಸೆ ನೀಡಿದ್ದರು. ಈ ವೇಳೆ ಅವರಿಗೂ ಸೋಂಕು ಹರಡಿತ್ತು. ತಮಗೆ ಸೋಂಕು ಹರಡಿರುವುದು ಖಚಿತವಾಗುತ್ತಿದ್ದಂತೆ ಪತಿಗೆ ಪತ್ರ ಬರೆದಿದ್ದ ಅವರು ನಾನು ಬಹುತೇಕ ಸಾಯುವುದು ಖಚಿತವಾಗಿದ್ದು, ನಿಮ್ಮನ್ನು ಮತ್ತೆ ನೋಡುತ್ತೇನೆ ಎಂದು ಅನ್ನಿಸುತ್ತಿಲ್ಲ. ನಮ್ಮ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ಅವರನ್ನು ನಿಮ್ಮೊಂದಿಗೆ ಗಲ್ಫ್ ಗೆ ಕರೆದುಕೊಂಡು ಹೋಗಿ. ನನ್ನ ತಂದೆಯಂತೆ ಅವರನ್ನು ಇಲ್ಲಿ ಏಕಾಂಗಿಯಾಗಿ ಬಿಡಬೇಡಿ. ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದರು.

    ಲಿನಿ ಅವರ ಮೃತ ದೇಹವನ್ನು ಕೊನೆಯ ಬಾರಿಗೆ ನೋಡಲು ಯಾರಿಗೂ ಅವಕಾಶ ನೀಡದೇ ಅಂತಿಮ ಸಂಸ್ಕಾರ ನಡೆಸಲಾಗಿದೆ. ಸೋಂಕು ಇತರೇ ವ್ಯಕ್ತಿಗಳಿಗೂ ಹರಡುವ ಕಾರಣದಿಂದ ಆರೋಗ್ಯ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್, ಲಿನಿ ಅವರ ನಿಸ್ವಾರ್ಥ ಸೇವೆಯನ್ನು ಕೇರಳ ಸ್ಮರಿಸುತ್ತದೆ ಎಂದು ತಿಳಿಸಿದ್ದರು.

  • ಸೈಕಲ್ ರಿಪೇರಿ ತಡವಾಗಿದೆ ಎಂದು ಪತ್ರ ಬರೆದ ಮಕ್ಕಳು – ಸಹಾಯಕ್ಕೆ ಬಂದ ಪೊಲೀಸ್

    ಸೈಕಲ್ ರಿಪೇರಿ ತಡವಾಗಿದೆ ಎಂದು ಪತ್ರ ಬರೆದ ಮಕ್ಕಳು – ಸಹಾಯಕ್ಕೆ ಬಂದ ಪೊಲೀಸ್

    ತಿರುವನಂತಪುರಂ: ಸೈಕಲ್ ರಿಪೇರಿ ಮಾಡಿಕೊಡಲು ತಡಮಾಡುತ್ತಿದ್ದಾರೆ ಎಂದು ಪುಟ್ಟ ಸಹೋದರರು ಬರೆದ ಪತ್ರಕ್ಕೆ ಸ್ಪಂದಿಸಿದ ಕೇರಳ ಪೊಲೀಸರಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತದೆ.

    ಕೇರಳದ ಕೋಜಿಕೋಡ್‍ನ ಐದನೇ ತರಗತಿ ಓದುತ್ತಿರುವ ಅಬಿನ್ ಪೊಲೀಸರಿಗೆ ಪತ್ರ ಬರೆದಿದ್ದು, ಈ ಪತ್ರದಲ್ಲಿ ನಾನು ಮತ್ತು ನನ್ನ ಸಹೋದರನ ಸೈಕಲ್ ಅನ್ನು ಎರಡು ತಿಂಗಳ ಹಿಂದೆ ರಿಪೇರಿಗೆ ಕೊಟ್ಟಿದ್ದೆವು. ಆದರೆ ಅವರು ನಮಗೆ ಸೈಕಲ್ ವಾಪಸ್ ಮಾಡುತ್ತಿಲ್ಲ ನಮಗೆ ಸಹಾಯ ಮಾಡಿ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾನೆ.

    https://www.facebook.com/keralapolice/photos/a.135262556569242/2504084799686994/?type=3

    ಇದೇ ತಿಂಗಳ 25 ರಂದು ಮಲಯಾಳಂ ಭಾಷೆಯಲ್ಲಿ ಬರೆದಿರುವ ಪತ್ರದಲ್ಲಿ, ನಾನು ಮತ್ತು ನನ್ನ ಸಹೋದರನ ಸೈಕಲ್ ಅನ್ನು ರಿಪೇರಿ ಮಾಡಿಸಲು ಶಾಪ್‍ಗೆ ನೀಡಿದ್ದೇವೆ. ಆದರೆ ನಾವು ಶಾಪ್ ಬಳಿ ಹೋಗಿ ಅನೇಕ ಬಾರಿ ಸೈಕಲ್ ಕೇಳಿದರೆ ಮಾಲೀಕರು ನೀಡುತ್ತಿಲ್ಲ. ಇನ್ನೂ ನಿಮ್ಮ ಸೈಕಲ್ ಸರಿಯಾಗಿಲ್ಲ ಎನ್ನುತ್ತಿದ್ದಾರೆ. ಈ ವಿಚಾರವಾಗಿ ನಮ್ಮ ಮನೆಯವರು ನಮಗೆ ಸಹಾಯ ಮಾಡುತ್ತಿಲ್ಲ ಎಂದು ಪತ್ರ ಬರೆದಿದ್ದಾರೆ.

    ಪತ್ರ ಬಂದು ತಲುಪಿದ ನಂತರ ಈ ಪತ್ರವನ್ನು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಶೇರ್ ಮಾಡಿರುವ ಕೇರಳ ಪೊಲೀಸರು, ನಾವು ದೂರನ್ನು ದಾಖಲಿಸಿಕೊಂಡಿದ್ದೇವೆ. ನಮ್ಮ ಪೊಲೀಸ್ ಅಧಿಕಾರಿ ರಾಧಿಕಾ ಎನ್‍ಪಿ ಸೈಕಲ್ ಶಾಪ್‍ಗೆ ಹೋಗಿ ವಿಚಾರಣೆ ಮಾಡಿದ್ದಾರೆ. ಮಾಲೀಕರು ಅನಾರೋಗ್ಯ ಮತ್ತು ಅವರ ಮಗನ ಮದುವೆಯಲ್ಲಿ ಬ್ಯುಸಿ ಇದ್ದ ಕಾರಣ ರಿಪೇರಿ ಮಾಡಲು ಆಗಿಲ್ಲ. ಆದರೆ ಅದಷ್ಟೂ ಬೇಗ ಸೈಕಲ್ ಗಳನ್ನು ರೆಡಿ ಮಾಡಿಕೊಡುವುದಾಗಿ ಹೇಳಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    https://www.facebook.com/keralapolice/photos/p.2504086796353461/2504086796353461/?type=3

    ಇದಾದ ನಂತರ ಇನ್ನೊಂದು ಫೇಸ್ ಬುಕ್ ಪೋಸ್ಟ್ ಹಾಕಿರುವ ಕೇರಳ ಪೊಲೀಸರು, ಈ ಇಬ್ಬರು ಪುಟ್ಟ ಸಹೋದರರ ಸೈಕಲ್ಸ್ ವಾಪಸ್ ಬಂದಿವೆ ಎಂದು ಬರೆದುಕೊಂಡು, ಅಬಿನ್ ಮತ್ತು ಆತನ ಸಹೋದರ ಸೈಕಲ್ ಬಳಿ ನಿಂತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ.

    ಪೊಲೀಸರ ಈ ಸಹಾಯಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದು, ಈ ಪೋಸ್ಟ್ ಅನ್ನು 70 ಸಾವಿರ ಜನ ಲೈಕ್ ಮಾಡಿದ್ದರೆ ಮತ್ತು 4 ಸಾವಿರ ಜನ ಶೇರ್ ಮಾಡಿದ್ದಾರೆ. ಪೊಲೀಸರು ಈ ಕೆಲಸವನ್ನು ಶ್ಲಾಘಿಸಿ ಸಾವಿರಕ್ಕೂ ಹೆಚ್ಚು ಜನರು ಕಮೆಂಟ್ ಮಾಡಿದ್ದು, ಪುಟ್ಟು ಸಹೋದರರಿಗೆ ಸಹಾಯ ಮಾಡಿದ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ.

  • ಕೆಸರಿನಲ್ಲಿ ಜೋಡಿಯ ವೆಡ್ಡಿಂಗ್ ಫೋಟೋಶೂಟ್

    ಕೆಸರಿನಲ್ಲಿ ಜೋಡಿಯ ವೆಡ್ಡಿಂಗ್ ಫೋಟೋಶೂಟ್

    ತಿರುವನಂತಪುರಂ: ಇತ್ತೀಚೆಗೆ ವೆಡ್ಡಿಂಗ್ ಫೋಟೋಶೂಟ್ ಮಾಡಿಸುವುದು ಟ್ರೆಂಡ್ ಆಗಿದೆ. ಪ್ರತಿಯೊಂದು ಜೋಡಿಯೂ ತಮ್ಮ ಫೋಟೋಶೂಟ್ ಇಂತಹ ಸ್ಥಳದಲ್ಲಿ, ಹೀಗೆಯೇ ಆಗಬೇಕೆಂಬ ಕನಸು ಕಂಡಿರುತ್ತಾರೆ. ಅದರಲ್ಲೂ ಸುಂದರವಾದ ಸ್ಥಳಗಳಲ್ಲಿ, ನದಿಯ ಮಧ್ಯೆ, ವಿಧವಿಧವಾದ ಕಾಸ್ಟ್ಯೂಮ್ಸ್ ಧರಿಸಿಕೊಂಡು ವಿಭಿನ್ನವಾಗಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸುತ್ತಾರೆ. ಆದರೆ ಇಲ್ಲೊಂದು ಜೋಡಿ ಯಾವುದೇ ಮೇಕಪ್ ಇಲ್ಲದೇ ಪ್ರಕೃತಿಯ ನಡುವೆ, ಕೆಸರಿನ ಮಣ್ಣಿನ ಮಧ್ಯೆ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದಾರೆ.

    ಇದೀಗ ಈ ಜೋಡಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕೇರಳ ಮೂಲದ ಜೋಸ್ ಮತ್ತು ಅನಿಷಾ ಜೋಡಿ ಈ ರೀತಿಯ ಕೆಸರಿನ ಮಣ್ಣಿನಲ್ಲಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳು ಟ್ವಿಟ್ಟರ್ ಮತ್ತು ಫೇಸ್‍ಬುಕ್ ಪೇಜಿನಲ್ಲಿ ಹರಿದಾಡುತ್ತಿವೆ.

    ಈ ಜೋಡಿ ಪ್ರಕೃತಿಯ ಮಧ್ಯೆ ಒಂದು ಕೆಸರಿನ ಗದ್ದೆಯಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸರಳವಾದ ಉಡುಪು ಧರಿಸಿಕೊಂಡು ಕೆಸರಿನಲ್ಲಿ ಉರುಳಾಡಿ ಫೋಟೋಶೂಟ್ ಮಾಡಿಸಿದ್ದಾರೆ. ಅದರಲ್ಲೂ ಮುಖಕ್ಕೂ ಕೆಸರು ಹಾಕಿಕೊಂಡು ವಿಭಿನ್ನವಾಗಿ ಕ್ಯಾಮೆರಾಗೆ ಪೋಸ್ ಕೊಡುವ ಮೂಲಕ ಡಿಫರೆಂಟ್ ಆಗಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದಾರೆ.

    ಈ ಜೋಡಿಯ ವೆಡ್ಡಿಂಗ್ ಫೋಟೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಮೇಕಪ್, ಆಡಂಬರವಿಲ್ಲದೇ ಸರಳವಾಗಿ ಫೋಟೋಶೂಟ್ ಮಾಡಿಸಿದ್ದಾರೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.