Tag: kerala

  • ಅದೃಷ್ಟ ಅನ್ನೋದು ರೇಪ್‍ನಂತೆ, ಬಂದಾಗ ಆನಂದಿಸಲು ಪ್ರಯತ್ನಿಸಿ: ಸಂಸದನ ಪತ್ನಿ

    ಅದೃಷ್ಟ ಅನ್ನೋದು ರೇಪ್‍ನಂತೆ, ಬಂದಾಗ ಆನಂದಿಸಲು ಪ್ರಯತ್ನಿಸಿ: ಸಂಸದನ ಪತ್ನಿ

    ತಿರುವನಂತಪುರ: ಕೇರಳದ ಕಾಂಗ್ರೆಸ್ ಸಂಸದ ಹಿಬಿ ಇಡನ್ ಪತ್ನಿ ಅನ್ನಾ ಲಿಂಡಾ ಹೇಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.

    ಫೇಸ್‍ಬುಕ್ ಪೋಸ್ಟ್: ಅದೃಷ್ಟ ಅನ್ನೋದಿ ರೇಪ್ ತರಹ. ಈ ಅದೃಷ್ಟವನ್ನ ವಿರೋಧಿಸಲು ಸಾಧ್ಯವಾಗದಿದ್ದರೆ, ಆನಂದಿಸಲು ಪ್ರಯತ್ನಿಸಬೇಕು ಎಂಬ ಸಾಲುಗಳನ್ನು ಬರೆದುಕೊಂಡಡು ಪ್ರವಾಹ ಪರಿಸ್ಥಿತಿ ಮತ್ತು ಐಸ್ ಕ್ರೀಂ ತಿನ್ನುವ ಫೋಟೋ ಪೋಸ್ಟ್ ಮಾಡಿದ್ದರು. ಪೋಸ್ಟ್ ಗೆ ಆಕ್ರೋಶ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿದ್ದಾರೆ.

    ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟೀವ್ ಆಗಿರುವ ಲಿಂಡಾ ಸದಾ ಪೋಸ್ಟ್ ಮಾಡುತ್ತಿರುತ್ತಾರೆ. ಹಿಬಿ ಇಡನ್ ಪತ್ನಿ ಲಿಂಡಾ ಇಡನ್ ಫೇಸ್‍ಬುಕ್ ಪೋಸ್ಟ್ ಸದ್ಯ ಚರ್ಚೆಗೆ ಕಾರಣವಾಗಿದೆ. ಲಿಂಡಾರ ಪೋಸ್ಟಿಗೆ ಆಕ್ರೋಶ ವ್ಯಕ್ತವಾಗಿದ್ದು, ಕ್ಷಮೆ ಕೇಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಲೋಕಸಭಾ ಚುನಾವಣೆ ವೇಳೆ ಹಿಬಿ ಇಡನ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹಿಬಿ ಇಡನ್ ಅವರ ಎರ್ನಾಕುಲಂ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಪೋಸ್ಟ್ ಡಿಲೀಟ್ ಮಾಡಿದ ಬಳಿಕ ಲಿಂಡಾ ಇದೂವರೆಗೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

  • ಕಾರ್ ಡಿಕ್ಕಿ ರಭಸಕ್ಕೆ ಕೆಟಿಎಂ ಬೈಕ್ ಪೀಸ್ ಪೀಸ್- ಸ್ಥಳದಲ್ಲೇ ಸವಾರ ಸಾವು

    ಕಾರ್ ಡಿಕ್ಕಿ ರಭಸಕ್ಕೆ ಕೆಟಿಎಂ ಬೈಕ್ ಪೀಸ್ ಪೀಸ್- ಸ್ಥಳದಲ್ಲೇ ಸವಾರ ಸಾವು

    ಚಾಮರಾಜನಗರ: ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕೇರಳಾ ಮೂಲದ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದ ಬಳಿ ನಡೆದಿದೆ.

    ಸುಲ್ತಾನ್ ಬತ್ತೇರಿ ನಿವಾಸಿ ತುಷಾರ್ (21) ಮೃತ ದುರ್ದೈವಿ. ಕಾರು ಹಾಗೂ ಬೈಕ್ ವೇಗವಾಗಿದ್ದರಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಕೆಟಿಎಂ ಬೈಕ್ ಸ್ಕಿಡ್ ಆಗಿ ಬಿದ್ದ ಸವಾರರ ಮೇಲೆ ಹರಿದ ಐರಾವತ ಬಸ್

    ತುಷಾರ್ ಕೆಟಿಎಂ ಬೈಕ್‍ನಲ್ಲಿ ಸುಲ್ತಾನ್ ಬತ್ತೇರಿಗೆ ಹೋಗುತ್ತಿದ್ದರು. ಇದೇ ವೇಳೆ ಕೆಂಪು ಬಣ್ಣದ ಕಾರು ಚಾಲಕ ವೇಗವಾಗಿ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದರು. ಆದರೆ ಬಸವಾಪುರ ಗ್ರಾಮದ ಬಳಿ ಇಬ್ಬರೂ ನಿಯಂತ್ರಣ ತಪ್ಪಿದ ಪರಿಣಾಮ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಅಪಘಾತದ ರಭಸಕ್ಕೆ ಬೈಕ್ ನುಚ್ಚು ನೂರಾಗಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ತುಷಾರ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿ, ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.

  • ದೇಶದಲ್ಲೇ ಮೊದಲ ಬಾರಿಗೆ ಖಾಸಗಿ ಶಾಲಾ ಶಿಕ್ಷಕಿಯರಿಗೂ ಸಿಕ್ತು ವೇತನ ಸಹಿತ ಪ್ರಸೂತಿ ರಜೆ

    ದೇಶದಲ್ಲೇ ಮೊದಲ ಬಾರಿಗೆ ಖಾಸಗಿ ಶಾಲಾ ಶಿಕ್ಷಕಿಯರಿಗೂ ಸಿಕ್ತು ವೇತನ ಸಹಿತ ಪ್ರಸೂತಿ ರಜೆ

    ತಿರುವನಂತಪುರಂ: ಕೇರಳ ರಾಜ್ಯವು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ನಿರ್ಮಿಸಿದೆ. ಈ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಖಾಸಗಿ ಶಾಲಾ ಶಿಕ್ಷಕಿಯರಿಗೂ ವೇತನ ಸಹಿತ ಪ್ರಸೂತಿ ರಜೆಯನ್ನು ಕೇರಳ ಸರ್ಕಾರ ಕಲ್ಪಿಸಿದೆ.

    ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕಿಯರಿಗೆ 26 ವಾರಗಳ ಕಾಲ ಮಾತ್ರ ವೇತನ ಸಹಿತ ರಜೆ ಸಿಗುತ್ತಿತ್ತು. ಆದರೆ ಈ ಸೌಲಭ್ಯ ಕೇರಳದ ಖಾಸಗಿ ಶಾಲಾ ಶಿಕ್ಷಕಿಯರಿಗೂ ಅನ್ವಯವಾಗಲಿದೆ. ಕೇರಳ ಸರ್ಕಾರದ ಈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

    1961ರ ‘ಮಾತೃತ್ವ ಸೌಲಭ್ಯ ಕಾಯಿದೆ’ ಅಡಿ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರು ಪ್ರಸೂತಿ ರಜೆ ನೀಡಬೇಕೆಂದು ದೀರ್ಘಕಾಲದಿಂದ ಒತ್ತಾಯಿಸಿದ್ದರು. ಈ ವಿಚಾರವಾಗಿ ಕೇರಳ ಸರ್ಕಾರವು ಕೇಂದ್ರ ಸರ್ಕಾರದಿಂದ ಅನುಮತಿ ಕೋರಿತ್ತು. ಸದ್ಯ ಕೇಂದ್ರ ಸರ್ಕಾರವು ಇದಕ್ಕೆ ಅನುಮೋದನೆ ನೀಡಿದೆ.

    ಹೊಸ ಕಾಯ್ದೆ ಪ್ರಕಾರ, ಖಾಸಗಿ ಶಿಕ್ಷಣ ಸಂಸ್ಥೆಗಳ ಸಾವಿರಾರು ಶಿಕ್ಷಕಿಯರು, ಮಹಿಳಾ ಉದ್ಯೋಗಿಗಳು ಈಗಿನಿಂದ ಸರ್ಕಾರಿ ಶಾಲಾ ಶಿಕ್ಷಕಿಯರು ಹಾಗೂ ಮಹಿಳಾ ಉದ್ಯೋಗಿಗಳಂತೆ 26 ವಾರಗಳ ಮಾತೃತ್ವ ರಜೆ ತೆಗೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಶಿಕ್ಷಣ ಸಂಸ್ಥೆಯು ಉದ್ಯೋಗಿಗೆ ತಿಂಗಳಿಗೆ 1,000 ರೂ.ಗಳ ವೈದ್ಯಕೀಯ ಭತ್ಯೆಯನ್ನು ಸಹ ಪಾವತಿಸಬೇಕಾಗುತ್ತದೆ.

    ಭಾರತದಲ್ಲಿ 1961ರ ‘ಮಾತೃತ್ವ ಸೌಲಭ್ಯ ಕಾಯಿದೆ’ಯು ಉದ್ಯೋಗದಲ್ಲಿರುವ ತಾಯಂದಿರಿಗೆ ಹೆರಿಗೆ ರಜೆ ಮತ್ತು ಇತರೆ ಸೌಲಭ್ಯ ಕಲ್ಪಿಸಿಕೊಟ್ಟಿತು. ಆದರೆ ಅಗತ್ಯದಷ್ಟು ರಜೆ, ಶಿಶುವಿಗೆ ಹಾಲುಣಿಸಲು ಬಿಡವು, ಕುಂದು ಕೊರತೆಗಳನ್ನಾಲಿಸಲು ಸೌಲಭ್ಯಗಳಿಲ್ಲದೆಯೇ ಕಾನೂನು ಅಪೂರ್ಣವಾಗಿತ್ತು. ಇದರಿಂದಾಗಿ 2017ರಲ್ಲಿ ಈ ಕಾನೂನಿಗೆ ತಿದ್ದುಪಡಿ ತಂದು, 26 ವಾರಗಳ (ಆರು ತಿಂಗಳು) ಹೆರಿಗೆ ರಜೆಯನ್ನು ಮೊದಲ ಎರಡು ಹೆರಿಗೆಗೆ ನೀಡಲಾಗಿದೆ.

    ಇದರ ಜೊತೆಗೆ ಅನುದಾನಿತ ಶಿಕ್ಷಣ ಸಂಸ್ಥೆಗಳ ಉದ್ಯೋಗಿಗಳಿಗೆ ಕನಿಷ್ಠ ವೇತನ ಪ್ರಮಾಣವನ್ನು ನಿಗದಿಪಡಿಸುವತ್ತ ಕೇರಳ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಆಗಸ್ಟ್ 29ರಂದು ಕರೆದಿದ್ದ ಕ್ಯಾಬಿನೆಟ್ ಸಭೆಯಲ್ಲಿ ಈ ಸಂಬಂಧ ಚರ್ಚೆಯಾಗಿದೆ. ಈ ಮೂಲಕ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ. ಕಾರ್ಮಿಕರ ಪ್ರಸ್ತುತ ನಿಗದಿತ ವೇತನ ಭತ್ಯೆಯನ್ನು ದಿನಕ್ಕೆ 150 ರೂ.ಗಳಿಂದ 600 ರೂ.ಗೆ ಹೆಚ್ಚಿಸಲು ಕೇರಳ ಸರ್ಕಾರ ಒತ್ತಾಯಿಸಿದೆ.

  • ಕಾರ್ಮಿಕನ ಕುತ್ತಿಗೆಗೆ ಸುತ್ತಿಕೊಂಡ 10 ಅಡಿ ಹೆಬ್ಬಾವು – ಸ್ಥಳೀಯರಿಂದ ರಕ್ಷಣೆ

    ಕಾರ್ಮಿಕನ ಕುತ್ತಿಗೆಗೆ ಸುತ್ತಿಕೊಂಡ 10 ಅಡಿ ಹೆಬ್ಬಾವು – ಸ್ಥಳೀಯರಿಂದ ರಕ್ಷಣೆ

    ತಿರುವನಂತಪುರಂ: ಕೆಲಸ ಮಾಡುತ್ತಿದ್ದ ಕಾರ್ಮಿಕನ ಕುತ್ತಿಗೆಗೆ 10 ಅಡಿ ಹೆಬ್ಬಾವು ಸುತ್ತಿಕೊಂಡ ಘಟನೆ ತಿರುವನಂತಪುರಂನ ಕಾಲೇಜು ಆವರಣದಲ್ಲಿ ನಡೆದಿದೆ.

    ಕಾಲೇಜು ಆವರಣದಲ್ಲಿ ಬೆಳೆದಿದ್ದ ಪೊದೆಯನ್ನು ತೆರವುಗೊಳಿಸುತ್ತಿದ್ದ 58 ವರ್ಷದ ಭುವಚಂದ್ರನ್ ನಾಯರ್ ಅವರ ಕುತ್ತಿಗೆಗೆ ಹಾವು ಸುತ್ತಿಕೊಂಡಿದೆ. ಈ ವೇಳೆ ಕುತ್ತಿಗೆಗೆ ಹೆಬ್ಬಾವು ಗಟ್ಟಿಯಾಗಿ ಸುತ್ತಿಕೊಂಡು ಉಸಿರಾಟದ ತೊಂದರೆಯಿಂದ ನರಳುತ್ತಿದ್ದ ನಾಯರ್ ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

    ಕಾಲೇಜು ಆವರಣದಲ್ಲಿ ಪೊದೆ ತೆರವುಗೊಳಿಸುತ್ತಿದ್ದ ನಾಯರ್ ಅವರಿಗೆ ಪೊದೆಯೊಳಗೆ ಉದ್ದವಾದ ಬಟ್ಟೆಯ ರೀತಿಯ ವಸ್ತು ಕಂಡು ಬಂದಿದೆ. ನಂತರ ಹತ್ತಿರಕ್ಕೆ ಹೋಗಿ ನೋಡಿದಾಗ ಅದು ಹೆಬ್ಬಾವು ಎಂದು ಗೊತ್ತಾಗಿದೆ. ನಂತರ ಅವರು ತನ್ನ ಜೊತೆ ಕೆಲಸ ಮಾಡುತ್ತಿದ್ದ ಬೇರೆ ಕೆಲಸಗಾರರನ್ನು ಕರೆದು ಹಾವನ್ನು ಹಿಡಿದು ಚೀಲಗೆ ತುಂಬುವ ಸಮಯದಲ್ಲಿ ಕೈಯಿಂದ ಹೆಬ್ಬಾವು ತಪ್ಪಿಸಿಕೊಂಡಿದೆ. ಅದನ್ನು ಮತ್ತೆ ಹಿಡಿಯಲು ಹೋದ ನಾಯರ್ ಅವರ ಕುತ್ತಿಗೆಗೆ ಹಾವು ಸುತ್ತಿಕೊಂಡಿದೆ.

    https://www.youtube.com/watch?v=_UM_PMB6iVI#action=share

    ನಾಯರ್ ಅವರ ಕುತ್ತಿಗೆಗೆ ಹಾವು ಸುತ್ತಿಕೊಂಡಿದ್ದನ್ನು ನೋಡಿದ ಬೇರೆ ಕಾರ್ಮಿಕರು ಭಯಗೊಂಡು ನಾಯರ್ ಅವರ ರಕ್ಷಣೆ ಮಾಡದೇ ನಿಂತು ಬಿಟ್ಟಿದ್ದಾರೆ. ಆದರೆ ಅಲ್ಲಿದ್ದ ಕೆಲ ಸ್ಥಳೀಯರು ನಾಯರ್ ಅವರು ಉಸಿರುಗಟ್ಟಿರುವುದನ್ನು ಕಂಡು ಹಾವನ್ನು ಕುತ್ತಿಗೆಯಿಂದ ಬಿಡಿಸಿ ಅದನ್ನು ಚೀಲಕ್ಕೆ ಹಾಕಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೀಡಿದ್ದಾರೆ.

    ಅರಣ್ಯ ಅಧಿಕಾರಿಗಳು ಹಾವನ್ನು ಅರಣ್ಯಕ್ಕೆ ಬಿಟ್ಟಿದ್ದಾರೆ. ಹಾವು ಕುತ್ತಿಗೆಗೆ ಗಟ್ಟಿಯಾಗಿ ಸುತ್ತಿಕೊಂಡ ಕಾರಣ ಉಸಿರಾಟದ ತೊಂದರೆಯಿಂದ ಅಸ್ವಸ್ತಗೊಂಡಿದ್ದ ಭುವಚಂದ್ರನ್ ನಾಯರ್ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು, ಅವರ ಈಗ ಚೇತರಿಸಿಕೊಳ್ಳುತ್ತಿದ್ದಾರೆ.

  • ದ್ವಿಶತಕ ಸಿಡಿಸಿ ಸಚಿನ್, ಸೆಹ್ವಾಗ್ ಸಾಲಿಗೆ ಸೇರಿದ ಸಂಜು ಸ್ಯಾಮ್ಸನ್

    ದ್ವಿಶತಕ ಸಿಡಿಸಿ ಸಚಿನ್, ಸೆಹ್ವಾಗ್ ಸಾಲಿಗೆ ಸೇರಿದ ಸಂಜು ಸ್ಯಾಮ್ಸನ್

    ಪಣಜಿ: ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕೇರಳ ತಂಡದ ಯುವ ಆಟಗಾರ ಸಂಜು ಸ್ಯಾಮ್ಸನ್ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದು, ಟೂರ್ನಿಯಲ್ಲಿ ದಾಖಲಾದ ವೈಯಕ್ತಿಕ ಗರಿಷ್ಠ ಸ್ಕೋರ್ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಟೂರ್ನಿಯ ಗ್ರೂಪ್ ‘ಎ’ ನಲ್ಲಿ ಗೋವಾ ತಂಡದ ಎದುರು ಸಂಜು ಸ್ಯಾಮ್ಸನ್ 129 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 21 ಬೌಂಡರಿಗಳ ನೆರವಿನಿಂದ ಅಜೇಯ 212 ರನ್ ಗಳಿಸಿದ್ದಾರೆ. ಆ ಮೂಲಕ ಕಳೆದ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಉತ್ತರಖಂಡ ಆಟಗಾರ ಕರಣ್‍ವೀರ್ ಕೌಶಾಲ್ 202 ರನ್ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯಕ್ಕೂ ಮುನ್ನ ಲಿಸ್ಟ್ ‘ಎ’ ಕ್ರಿಕೆಟ್‍ನಲ್ಲಿ 1 ಶತಕವೂ ದಾಖಲಿಸಿದ ಸಂಜು ಇದಕ್ಕೂ ಮುನ್ನ ನಡೆದ ಟೂರ್ನಿಯಲ್ಲಿ ಏಕೈಕ ಅರ್ಧ ಶತಕ ಗಳಿಸಿದ್ದರು.

    ಇಂದಿನ ಪಂದ್ಯದಲ್ಲಿ ಕೇರಳ ತಂಡ ಮತ್ತೊಬ್ಬ ಆಟಗಾರ ಸಚಿನ್ ಬೇಬಿರೊಂದಿಗೆ ಸ್ಯಾಮ್ಸನ್ 338 ರನ್ ಗಳ ಜೊತೆಯಾಟ ನೀಡಿದ್ದು, ಪರಿಣಾಮ ಕೇರಳ ಪಂದ್ಯದಲ್ಲಿ ನಿಗದಿತ 50 ಓವರ್ ಗಳಲ್ಲಿ 377 ರನ್ ಪೇರಿಸಿತು. ಸಂಜುಗೆ ಸಾಥ್ ನೀಡಿದ ಸಚಿನ್ ಬೇಬಿ ಕೂಡ 135 ಎಸೆತಗಳಲ್ಲಿ 127 ರನ್ ಗಳಿಸಿದ್ದರು.

    ಲಿಸ್ಟ್ ‘ಎ’ ಕ್ರಿಕೆಟ್‍ನಲ್ಲಿ ಸಂಜು ಸಿಡಿಸಿದ ಮೊದಲ ದ್ವಿಶಕ ಇದಾಗಿದ್ದು, ಈ ಹಿಂದೆ ಸಚಿನ್, ಸೆಹ್ವಾಗ್, ರೋಹಿತ್ ಶರ್ಮಾ, ಶಿಖರ್ ಧವನ್, ಕರಣ್ ಕೌಶಾಲ್ ಬಳಿಕ ಸ್ಥಾನವನ್ನು ಸಂಜು ಸ್ಯಾಮ್ಸನ್ ಪಡೆದಿದ್ದಾರೆ.

  • ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನು ಸುಟ್ಟು ತಾನು ಹೆಣವಾದ

    ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನು ಸುಟ್ಟು ತಾನು ಹೆಣವಾದ

    ತಿರುವನಂತಪುರಂ: ಪ್ರೀತಿಸಿದ ಹುಡುಗಿ ತನ್ನನ್ನು ಮದುವೆಯಾಗಲು ಒಪ್ಪಲಿಲ್ಲ ಎಂದು ಮನನೊಂದ ಯುವಕನೊಬ್ಬ ಆಕೆಗೆ ಬೆಂಕಿ ಹಚ್ಚಿ ಸುಟ್ಟು, ಕೊನೆಗೆ ತಾನೂ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ.

    ಕೇರಳದ ಕೊಚ್ಚಿಯ 17 ವರ್ಷದ ಹುಡುಗಿಯನ್ನು ಮಿಥುನ್(24) ಪ್ರೀತಿಸುತ್ತಿದ್ದನು. ಮೃತ ಹುಡುಗಿ ಹಾಗೂ ಮಿಥುನ್ ಇಬ್ಬರೂ ಸಂಬಂಧಿಗಳು. ಅಲ್ಲದೆ ಅವರಿಬ್ಬರ ಮನೆ ಅಕ್ಕಪಕ್ಕದಲ್ಲೇ ಇತ್ತು. ಆದ್ದರಿಂದ ಆಗಾಗ ಮಿಥುನ್ ಆಕೆಯ ಮನೆಗೆ ಹೋಗುತ್ತಿದ್ದನು. ಹೀಗೆ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಹೇಗೋ ಇಬ್ಬರು ಪ್ರೀತಿಸುತ್ತಿದ್ದೇವೆ ಮದುವೆ ಆಗಿಬಿಡೋಣ ಎಂದು ಮಿಧುನ್ ಪೀಡಿಸುತ್ತಿದ್ದನು. ಆದರೆ ಮದುವೆಗೆ ಹುಡುಗಿ ಒಪ್ಪಿರಲಿಲ್ಲ. ನಾನಿನ್ನೂ ಓದಬೇಕು ಎಂದು ಹೇಳಿ ಮಿಥುನ್‍ನಿಂದ ಅಂತರ ಕಾಯ್ದುಕೊಂಡಿದ್ದಳು. ಇದನ್ನೂ ಓದಿ:ಪ್ರೀತಿ ನಿರಾಕರಿಸಿದ್ದಕ್ಕೆ ಗುಪ್ತಾಂಗಕ್ಕೆ ಸ್ಕ್ರೂ ಡ್ರೈವರ್‌ನಿಂದ ಇರಿತ – ಐಸಿಯುನಲ್ಲಿದ್ದ ಯುವತಿ ಸಾವು

    ಆದರೂ ಕೂಡ ಮಿಥುನ್ ಸದಾ ತನ್ನನ್ನು ಮದುವೆಯಾಗು ಎಂದು ಹುಡುಗಿಯನ್ನು ಪೀಡಿಸುತ್ತಲೇ ಇದ್ದನು. ಈ ಬಗ್ಗೆ ಹುಡುಗಿಯ ಮನೆಯವರಿಗೆ ತಿಳಿದು ಅ. 7ರಂದು ಅವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದರು. ಆ ಬಳಿಕ ಬುಧವಾರ ಪ್ರೇಯಸಿ ಟ್ಯೂಷನ್‍ಗೆ ಹೋಗಿದ್ದಾಗ ಮಿಥುನ್ ಆಕೆಯನ್ನು ಭೇಟಿಯಾಗಿದ್ದನು. ಈ ವೇಳೆ ಇಬ್ಬರ ನಡುವೆ ಜಗಳ ಕೂಡ ನಡೆದಿತ್ತು. ಬಳಿಕ ಇಬ್ಬರೂ ಅವರವರ ಮನೆಗೆ ತೆರಳಿದ್ದರು. ಇದನ್ನೂ ಓದಿ:ಯುವಕನ ಮುಂದೆ ಕೈ ಚಾಚಿ ಬೇಡಿಕೊಂಡೆ- ಪ್ರೇಮಿಯಿಂದ ಇರಿತಕ್ಕೊಳಗಾದ ಸ್ನೇಹಿತೆಯನ್ನು ನರ್ಸ್ ರಕ್ಷಿಸಿದ ಕಥೆ ಓದಿ

    ಮೊದಲೇ ಮದುವೆ ಆಗಲು ನಿರಾಕರಿಸಿದ್ದಕ್ಕೆ ಮಿಥುನ್‍ಗೆ ಹುಡುಗಿ ಮೇಲೆ ಕೋಪವಿತ್ತು. ಜೊತೆಗೆ ಆಕೆ ತನ್ನ ಬಳಿ ಜಗಳವಾಡಿದಕ್ಕೆ ಕೋಪ ಹೆಚ್ಚಾಗಿತ್ತು. ಜಗಳ ನಡೆದ ಬಳಿಕವೂ ರಾತ್ರಿ ಆಕೆಯನ್ನು ಭೇಟಿಯಾಗಲು ಮಿಥುನ್ ಪ್ರಯತ್ನಿಸಿದ್ದನು. ಆಗ ಆಕೆಯ ತಂದೆ ಆತನನ್ನು ತಡೆದು, ಬುದ್ಧಿ ಹೇಳಿದ್ದರು. ಅವರ ಮಾತು ಮಿಥುನ್ ಕೇಳದಿದ್ದಾಗ ಇಬ್ಬರ ನಡುವೆ ಗಲಾಟೆ ನಡೆದಿತ್ತು.

    ಒಂದೆಡೆ ತಾನು ಪ್ರೀತಿಸಿದವಳು ತನ್ನನ್ನು ಮದುವೆ ಆಗಲು ಒಪ್ಪಲಿಲ್ಲ, ಇನ್ನೊಂದೆಡೆ ಆಕೆಯಿಂದ ಇಷ್ಟೆಲ್ಲಾ ಗಲಾಟೆಯಾಯ್ತಲ್ಲ ಎನ್ನುವ ಕೋಪಕ್ಕೆ ಮಿಥುನ್, ಮನೆಯಿಂದ ಹೊರಗೆ ಬಂದು ಪೆಟ್ರೋಲ್ ತಂದು, ಪ್ರೇಯಸಿಯ ಮನೆಯಲ್ಲೇ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ನಂತರ ತಾನೂ ಬೆಂಕಿ ಹಚ್ಚಿಕೊಂಡಿದ್ದಾನೆ. ಬೆಂಕಿಯಲ್ಲಿ ಸುಡುತ್ತಾ ನರಳುತ್ತಿದ್ದ ಮಗಳನ್ನು ರಕ್ಷಿಸಲು ಹೋದ ಸಂತ್ರಸ್ತೆಯ ತಂದೆಗೂ ಸುಟ್ಟ ಗಾಯಗಳಾಗಿದ್ದು, ತಗುಲಿದ್ದ ಬೆಂಕಿ ಆರಿಸಿ, ಅವರನ್ನು ತಕ್ಷಣ ಎರ್ನಾಕುಲಂನ ಮೆಡಿಕಲ್ ಕಾಲೇಜಿಗೆ ಸೇರಿಸುವಷ್ಟರಲ್ಲಿ ಇಬ್ಬರೂ ಪ್ರಾಣಬಿಟ್ಟಿದ್ದಾರೆ.

  • ಹೆಣ್ಣು ಮಕ್ಕಳ ಮೇಲಿನ ದ್ವೇಷಕ್ಕೆ ಕುಟುಂಬವೇ ಬಲಿ – ತಪ್ಪೊಪ್ಪಿಕೊಂಡ ಕೇರಳ ಸೈನೈಡ್ ಕಿಲ್ಲರ್

    ಹೆಣ್ಣು ಮಕ್ಕಳ ಮೇಲಿನ ದ್ವೇಷಕ್ಕೆ ಕುಟುಂಬವೇ ಬಲಿ – ತಪ್ಪೊಪ್ಪಿಕೊಂಡ ಕೇರಳ ಸೈನೈಡ್ ಕಿಲ್ಲರ್

    – ಮೊದಲ ಪತಿಯ ಮಗಳಿಗೆ ವಿಷ ಹಾಕಿದ್ದ ಜ್ಯೂಲಿ
    – ಹೆಣ್ಣು ಮಗು ಇದೆ ಅನ್ನೋ ಕಾರಣಕ್ಕೆ 2 ಬಾರಿ ಗರ್ಭಪಾತ

    ತಿರುವನಂತಪುರಂ: ತನ್ನದೇ ಕುಟುಂಬಸ್ಥರನ್ನು ಹಂತ ಹಂತವಾಗಿ ಕೊಲ್ಲುತ್ತಾ ಆಸ್ತಿಯನ್ನು ಅನುಭವಿಸುವ ಪ್ಲಾನ್ ಮಾಡಿದ್ದ ಕೇರಳ ಸೈನೈಡ್ ಕಿಲ್ಲರ್ ಜ್ಯೂಲಿ ತನಿಖೆ ವೇಳೆ ಆಘಾತಕಾರಿ ವಿಷಯ ಬಿಚ್ಚಿಟ್ಟಿದ್ದಾಳೆ. ತನಗೆ ಹೆಣ್ಣು ಮಕ್ಕಳನ್ನು ಕಂಡರೆ ಆಗುತ್ತಿರಲಿಲ್ಲ ಎಂದು ಬಾಯ್ಬಿಟ್ಟಿದ್ದಾಳೆ.

    ಮಂಗಳವಾರ ವಿಶೇಷ ತನಿಖಾ ತಂಡ(ಎಸ್‍ಐಟಿ) ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾಗ, ಜ್ಯೂಲಿ ಹೆಣ್ಣು ಮಕ್ಕಳನ್ನು ದ್ವೇಷಿಸುತ್ತಾಳೆ ಎನ್ನುವ ಬಗ್ಗೆ ತಿಳಿದುಬಂದಿದೆ. ಜ್ಯೂಲಿ ಹೆಣ್ಣು ಮಕ್ಕಳ ಮೇಲೆ ಎಷ್ಟರ ಮಟ್ಟಿಗೆ ದ್ವೇಷ ಇಟ್ಟುಕೊಂಡಿದ್ದಳು ಎಂದರೆ, ತನ್ನ ಮೊದಲ ಪತಿಯ 2 ವರ್ಷದ ಹೆಣ್ಣು ಮಗುವನ್ನು ಜ್ಯೂಲಿ ವಿಷ ಹಾಕಿ ಕೊಲ್ಲಲು ಯತ್ನಿಸಿದ್ದಳು. ಅಲ್ಲದೆ ಆಕೆ ಗರ್ಭಿಣಿಯಾಗಿದ್ದಾಗ ತನ್ನ ಹೊಟ್ಟೆಯಲ್ಲಿ ಇರುವುದು ಹೆಣ್ಣು ಮಗು ಎಂದು ತಿಳಿದಾಗ, ಎರಡು ಬಾರಿ ಗರ್ಭಪಾತ ಕೂಡ ಮಾಡಿಸಿಕೊಂಡಿದ್ದಳು ಎಂದು ಎಸ್‍ಐಟಿ ಅಧಿಕಾರಿ ತಿಳಿಸಿದ್ದಾರೆ. ಈಗಾಗಲೇ ಜ್ಯೂಲಿಯ ಹೇಳಿಕೆಗಳನ್ನು ಎಸ್‍ಐಟಿ ಅಧಿಕಾರಿಗಳು ದಾಖಲಿಸಿಟ್ಟುಕೊಂಡಿದ್ದು, ಕ್ರೈಂ ಬ್ರಾಂಚ್ ಪೊಲೀಸರು ಈ ಸಂಬಂಧ ದೂರುದಾರರ ವಿಚಾರಣೆಯನ್ನು ಕೂಡ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.

    ಈ ಸೈನೈಡ್ ಕೊಲೆ ಪ್ರಕರಣ ವಿಚಾರಣೆ ನಡೆಸುತ್ತಿರುವ ಎಸ್‍ಐಟಿ ತನಿಖಾಧಿಕಾರಿಗಳು ಮೃತರ ಶವಗಳ ಪತ್ತೆಗಾಗಿ ದೇಶದಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯಗಳ ಸಹಾಯವನ್ನು ಕೋರಿದ್ದಾರೆ. ಜೊತೆಗೆ ಅಗತ್ಯವಿದ್ದರೆ ವಿದೇಶಿ ಪ್ರಯೋಗಾಲಯಗಳ ಸಹಾಯವನ್ನೂ ಕೂಡ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಕೇರಳದ ಕೊಜ್ಹಿಕೊಡೆ ಜಿಲ್ಲೆಯಲ್ಲಿ ಶನಿವಾರ ಪೊಲೀಸರು ಹಂತಕಿ ಜ್ಯೂಲಿಯ ಜೊತೆಗೆ 2ನೇ ಪತಿ ಹಾಗೂ ಮತ್ತೊಬ್ಬನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಹಂತಕಿ ಜ್ಯೂಲಿ ತನ್ನ ಕುಟುಂಬಸ್ಥರನ್ನು ಕೊಲ್ಲುವುದರ ಜೊತೆಗೆ ಸಂಬಂಧಿ ಮಹಿಳೆಯನ್ನು ಕೊಂದು ಆಕೆಯ ಪತಿಯನ್ನ ಮದುವೆ ಆಗಿದ್ದಳು. ಎರಡು ಕುಟುಂಬಗಳ ಆಸ್ತಿಯನ್ನು ಅನುಭವಿಸಲು ಹಂತಕಿ ಜ್ಯೂಲಿ ಮತ್ತು ಆಕೆಯ ಎರಡನೇ ಗಂಡ ಶಜು 2002 ರಿಂದ 2016ರ ಅವಧಿಯಲ್ಲಿ ಕ್ಯಾಥೋಲಿಕ್ ಕುಟುಂಬದ 6 ಮಂದಿಯನ್ನು ಬಲಿಪಡೆದಿದ್ದಾರೆ.

    ಹಂತ ಹಂತವಾಗಿ ಕೊಲೆ: 2002 ರಿಂದ 2016ರ ಅವಧಿಯಲ್ಲಿ ಕ್ಯಾಥೊಲಿಕ್ ಕುಟುಂಬದ 6 ಮಂದಿಯನ್ನು ಜ್ಯೂಲಿ ಕೊಲೆ ಮಾಡಿದ್ದಾಳೆ. ನಿವೃತ್ತ ಶಿಕ್ಷಕಿ ಅಣ್ಣಮ್ಮ ಥಾಮಸ್ (57) 2002ರಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಈ ವೇಳೆ ಅವರ ಸಾವನ್ನ ಸಹಜಸಾವು ಎಂದು ತಿಳಿದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದ್ದರು. 6 ವರ್ಷದ ಬಳಿಕ ಅಣ್ಣಮ್ಮ ಥಾಮಸ್ ಪತಿ ಟಾಮ್ ಥಾಮಸ್ (66) ಹೃದಯಘಾತದಿಂದ ಸಾವನ್ನಪ್ಪಿದ್ದರು. 2001 ರಲ್ಲಿ ದಂಪತಿಯ ಪುತ್ರ ರಾಯ್ ಥಾಮಸ್ (40) ಕೂಡ ಇದೇ ರೀತಿ ಮೃತ ಪಟ್ಟಿದ್ದರು. ಈ ವೇಳೆ ಅವರನ್ನು ವಿಷ ಉಣಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಆ ಬಳಿಕ ಅಣ್ಣಮ್ಮ ಸಹೋದರ ಮ್ಯಾಥ್ಯೂ ಮಂಜಡಿಯಿಲ್ (67) 2014 ರಲ್ಲಿ ಸಾವನ್ನಪ್ಪಿದ್ದರು. ಎಲ್ಲರನ್ನು ಒಂದೇ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು.

    ಎರಡರ ಕಂದಮ್ಮ ಬಲಿ: 2016 ರಲ್ಲಿ ಇದೇ ಕುಟುಂಬದ ಸಂಬಂಧಿಯ 2 ವರ್ಷದ ಮಗಳು ಅಲ್ಫೋನ್ಸ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಇದಾದ ಕೆಲ ತಿಂಗಳ ಅಂತರದಲ್ಲೇ ಅಲ್ಫೋನ್ಸ ತಾಯಿ 27 ವರ್ಷದ ಸಿಲಿ ಕೂಡ ಸಾವನ್ನಪ್ಪಿದ್ದರು. ಇತ್ತ ಪತಿ ಮರಣದ ಬಳಿಕ ಪತ್ನಿ ಜ್ಯೂಲಿ ಮೃತ ಸಿಲಿ ಪತಿಯನ್ನು ಮದುವೆಯಾಗಿ ಕುಟುಂಬ ಅಸ್ತಿ ತಮಗೆ ಸೇರಬೇಕು ಎಂದು ಕಾನೂನಿನ ಅನ್ವಯ ಮನವಿ ಸಲ್ಲಿಸಿದ್ದರು. ಆದರೆ ಅಮೆರಿಕದಲ್ಲಿ ನೆಲೆಸಿರುವ ಟಾಮ್ ಥಾಮಸ್ ಕಿರಿಯ ಪುತ್ರ ಮೆಜೊ ಆಕ್ಷೇಪಣೆ ಸಲ್ಲಿಸಿ ಕುಟುಂಬ ಸರಣಿ ಸಾವಿನ ಕುರಿತು ಕ್ರೈಂ ಬ್ರಾಂಚ್‍ಗೆ ದೂರು ನೀಡಿದ್ದರು.

    ಪ್ರಕರಣದ ದಾಖಲಿಸಿ ವಿಚಾರಣೆ ಆರಂಭಿಸಿದ ಅಪರಾಧದಳ ಪೊಲೀಸರಿಗೆ ವಿಚಾರಣೆ ವೇಳೆ ಶಾಕಿಂಗ್ ಅಂಶಗಳು ತಿಳಿದು ಬಂದಿದ್ದವು. ಈ ಪ್ರಕರಣ ಕೇರಳದಲ್ಲಿ ಸಂಚಲನವನ್ನು ಉಂಟು ಮಾಡಿತ್ತು. ಪ್ರತಿ ಬಾರಿ ಕುಟುಂಬ ಸದಸ್ಯರನ್ನು ಕೊಲೆ ಮಾಡುವ ವೇಳೆ ಜ್ಯೂಲಿ ಸೂಕ್ತ ಪ್ಲಾನ್ ಮಾಡಿ ಯಾರಿಗೂ ಅನುಮಾನಬಾರದಂತೆ ಕೃತ್ಯ ಎಸಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಾಗಿರುವ ಮೃತರ ವೈಜ್ಞಾನಿಕ ಪರೀಕ್ಷೆಗಳ ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ವಿಚಾರಣೆ ವೇಳೆ ಮೃತ 6 ಮಂದಿ ಸಾವಿನ ವೇಳೆ ಜ್ಯೂಲಿ ಸ್ಥಳದಲ್ಲಿ ಇರುವುದು ಖಚಿತವಾಗಿದೆ. ಈ ಪ್ರಕರಣ ತಮಗೆ ಹೆಚ್ಚು ಚಾಲೆಂಜಿಂಗ್ ಆಗಿತ್ತು ಎಂದು ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

    ಸಿಕ್ಕಿ ಬಿದ್ದಿದ್ದು ಹೇಗೆ?
    ಪ್ರಕರಣವನ್ನು ಬೇದಿಸಲು ಪೊಲೀಸರು ಜೂಲಿ ಹಾಗೂ ಆಕೆಯ 2ನೇ ಪತಿ ಶಾಜುನನ್ನು 8 ಬಾರಿ ತೀವ್ರ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದರು. ಎಂಟು ಬಾರಿ ವಿಚಾರಣೆಯಲ್ಲಿಯೂ ಇಬ್ಬರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಅಲ್ಲದೇ ಜೂಲಿಯ ಫೋನ್ ವಿವರ ಪಡೆದ ವೇಳೆ ಆಕೆ ಶಾಜುನೊಂದಿಗೆ ನಿರಂತರ ಸಂಪರ್ಕದಲ್ಲಿ ಇರುವುದು ತಿಳಿದು ಬಂದಿತ್ತು. ಅಂದಹಾಗೇ ಜೂಲಿ ವಾಣಿಜ್ಯ ಪದವೀಧರೆಯಾಗಿದ್ದು, ಇಂಜಿನಿಯರಿಂಗ್ ಪದವಿ ಪಡೆದಿದ್ದೇನೆ ಎಂದು ಹೇಳಿ ಕೆಲಸ ಪಡೆದಿದ್ದಳು.

    ಕೊಲೆಗೆ ಸೈನೈಡ್ ಬಳಕೆ: ಜೂಲಿ ತನ್ನ ಕುಟುಂಬದ 6 ಮಂದಿಯನ್ನು ಕೊಲೆ ಮಾಡಲು ನಿಧಾನವಾಗಿ ಸಾಯಿಸುವ ಸೈನೈಡನ್ನು ಬಳಕೆ ಮಾಡಿದ್ದಳು. ಮೃತ ದೇಹಗಳನ್ನು ಹೊರ ತೆಗೆದು ಪರೀಕ್ಷೆ ನಡೆಸಿದ ವೇಳೆ ಮೃತರ ದೇಹದಲ್ಲಿ ವಿಷ ಇರುವುದು ವೈಜ್ಞಾನಿಕ ಪರೀಕ್ಷೆಗಳಲ್ಲಿ ಖಚಿತವಾಗಿತ್ತು. ಜೂಲಿಗೆ ಸೈನೈಡ್ ಪೂರೈಕೆ ಮಾಡುತ್ತಿದ್ದ ಆರೋಪದ ಅಡಿ ಅಭರಣದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಜಿಕುಮಾರ್ ಹಾಗೂ ಎಂಎಸ್ ಮ್ಯಾಥ್ಯೂರನ್ನು ಬಂಧಿಸಿದ್ದಾರೆ.

  • ಊಟ ಮಾಡದ್ದಕ್ಕೆ 4ರ ಮಗಳನ್ನ ಸಾವನ್ನಪ್ಪುವಂತೆ ಥಳಿಸಿದ ತಾಯಿ

    ಊಟ ಮಾಡದ್ದಕ್ಕೆ 4ರ ಮಗಳನ್ನ ಸಾವನ್ನಪ್ಪುವಂತೆ ಥಳಿಸಿದ ತಾಯಿ

    ತಿರುವನಂತಪುರಂ: ಊಟ ಮಾಡಲು ನಿರಾಕರಿಸಿದ್ದಕ್ಕಾಗಿ ನಾಲ್ಕು ವರ್ಷದ ಮಗಳನ್ನು ತಾಯಿಯೇ ಸಾವನ್ನಪ್ಪುವಂತೆ ಥಳಿಸಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ.

    ದಿಯಾ ಸಾವನ್ನಪಿದ ಬಾಲಕಿಯಾಗಿದ್ದು, ದೀಪಕ್ ಹಾಗೂ ರಮ್ಯಾ ದಂಪತಿಯ ಮಗಳಾಗಿದ್ದಾಳೆ. ದಿಯಾಳ ದೇಹದಲ್ಲಿ ಹಲ್ಲೆ ಮಾಡಿದ ಗಾಯದ ಗುರುತುಗಳಿದ್ದು, ಬಾಲಕಿ ಅನಾರೋಗ್ಯದಿಂದ ಬಳಲುತ್ತಿದ್ದಳು ಎಂದು ವೈದ್ಯರು ದೃಢಪಡಿಸಿದ್ದಾರೆ.

    ಈ ಕುರಿತು ಪೊಲೀಸರು ದಿಯಾಳ ತಾಯಿಯನ್ನು ವಿಚಾರಣೆ ನಡೆಸುತ್ತಿದ್ದು, ರಮ್ಯಾ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚೆಂಗನ್ನುರ್ ಮೂಲದವರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಭಾನುವಾರ ಬೆಳಗ್ಗೆ ಊಟ ಮಾಡುವುದನ್ನು ನಿರಾಕರಿಸಿದ್ದಕ್ಕೆ ಕೋಲಿನಿಂದ ಹೊಡೆದೆ ಎಂದು ರಮ್ಯಾ ತಿಳಿಸಿದ್ದಾರೆ. ಆದರೆ ಬಾಲಕಿ ದೇಹದ ಮೇಲಿರುವ ಹಲ್ಲೆ ಮಾಡಿರುವ ಗುರುತುಗಳು ಎರಡು ದಿನದ ಹಿಂದಿನದಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

    ದಿಯಾ ಊಟ ಮಾಡದ್ದಕ್ಕೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವಳಿಗೆ ಅನಾರೋಗ್ಯ ಸಹ ಉಂಟಾಗಿತ್ತು. ದೇಹದ ಮೇಲಿನ ಗಾಯಗಳನ್ನು ನೋಡಿ ವೈದ್ಯರು ಮಗುವಿಗೆ ಹೊಡೆದಿರಾ ಎಂದು ಪ್ರಶ್ನಿಸಿದರು. ಆಗ ರಮ್ಯಾ ಹೌದು ಕೋಲಿನಿಂದ ಹೊಡೆದೆ ಎಂದು ಉತ್ತರಿಸಿದಳು ಎಂದು ದಿಯಾ ಚಿಕ್ಕಮ್ಮ ತಿಳಿಸಿದ್ದಾರೆ.

    ಭಾನುವಾರ ಬೆಳಗ್ಗೆ ಮಗುವನ್ನು ಪರಿಪ್ಪಳ್ಳಿ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲೇ ಬಾಲಕಿ ರಕ್ತ ವಾಂತಿ ಮಾಡಿಕೊಂಡಿದ್ದಾಳೆ. ಮಗುವಿನ ಸ್ಥಿತಿ ಗಂಭಿರವಾಗಿದ್ದರಿಂದ ತಿರುವನಂತಪುರಂನ ಆಸ್ಪತ್ರಗೆ ಕರೆದೊಯ್ಯವಂತೆ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಬಾಲಕಿಯ ಹೃದಯ ಬಡಿತ ನಿಂತಿದೆ. ಆಗ ದಾರಿ ಮಧ್ಯೆ ಇಎಸ್‍ಐ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲೇ ಬಾಲಕಿ ಸಾವನ್ನಪ್ಪಿದ್ದಾಳೆ.

    ಮಗುವಿನ ಕುಟುಂಬವು ಕೊಲ್ಲಂನ ಚಥನ್ನೂರ್‍ನಲ್ಲಿ ಒಂದು ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಿದೆ. ದಂಪತಿಗೆ 2 ವರ್ಷದ ಇನ್ನೊಬ್ಬ ಮಗಳಿದ್ದಾಳೆ. ದಿಯಾ ಮೊದಲು ದಾಖಲಾಗಿದ್ದ ಆಸ್ಪತ್ರೆಯ ಆಡಳಿತ ಮಂಡಳಿ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಝಕೂಟ್ಟಂನ ಸಿಎಸ್‍ಐ ಆಸ್ಪತ್ರೆಯಲ್ಲಿ ಮಗುವಿನ ದೇಹವನ್ನು ಇಡಲಾಗಿದೆ. ಮಗುವಿನ ತಂದೆಯನ್ನು ಸಹ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

  • 14 ವರ್ಷ 6 ಕೊಲೆ- ಸೈನೈಡ್ ಹಂತಕಿಯ ನಿಗೂಢ ಹೆಜ್ಜೆ ಪತ್ತೆ

    14 ವರ್ಷ 6 ಕೊಲೆ- ಸೈನೈಡ್ ಹಂತಕಿಯ ನಿಗೂಢ ಹೆಜ್ಜೆ ಪತ್ತೆ

    -ಕ್ರೂರಿಯ ಸಂಚಿಗೆ ಬಲಿಯಾದ ಅಮಾಯಕರು
    -ಒಬ್ಬೊಬ್ಬರನ್ನು ಹಂತ ಹಂತವಾಗಿ ಕೊಂದಿದ್ದಳು

    ತಿರುವನಂತಪುರಂ: ಕೇರಳ ಪೊಲೀಸರು ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನದೇ ಕುಟುಂಬಸ್ಥರನ್ನು ಹಂತ ಹಂತವಾಗಿ ಕೊಲ್ಲುತ್ತಾ ಆಸ್ತಿಯನ್ನು ಅನುಭವಿಸುವ ಪ್ಲಾನ್ ಮಾಡಿದ್ದ ಹಂತಕಿ ಜೂಲಿಯ ಕನಸಿಗೆ ಪೊಲೀಸರು ತಣ್ಣೀರು ಹಾಕಿದ್ದಾರೆ. ಸುದೀರ್ಘ ತನಿಖೆಯ ಬಳಿಕ ಪ್ರಕರಣಕ್ಕೆ ಪೊಲೀಸರು ಇತಿಶ್ರೀ ಹಾಡಿ, ಕೊಲೆಯ ಸುತ್ತ ಹುಟ್ಟಿಕೊಂಡಿದ್ದ ನಿಗೂಢ ಪ್ರಶ್ನೆಗಳಿಗೆ ಉತ್ತರ ಹುಡುಕಿಕೊಂಡಿದ್ದಾರೆ.

    ಹಂತಕಿ ಜೂಲಿ ತನ್ನ ಕುಟುಂಬಸ್ಥರನ್ನು ಕೊಲ್ಲುವದರ ಜೊತೆಗೆ ಸಂಬಂಧಿ ಮಹಿಳೆಯನ್ನು ಕೊಂದು ಆಕೆಯ ಪತಿಯನ್ನ ಮದುವೆ ಆಗಿದ್ದಳು. ಎರಡು ಕುಟುಂಬಗಳ ಆಸ್ತಿಯನ್ನು ಅನುಭವಿಸಲು ಹಂತಕಿ ಜೂಲಿ ಮತ್ತು ಆಕೆಯ ಎರಡನೇ ಗಂಡ ಶಜು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಈ ಇಬ್ಬರಿಗೆ ಸೈನೈಡ್ ಪೂರೈಸುತ್ತಿದ್ದ ಮತ್ತಿಬ್ಬರು ಸೆರೆಮನೆ ಸೇರಿಕೊಂಡಿದ್ದಾರೆ.

    ಕೇರಳದ ಕೊಜ್ಹಿಕೊಡೆ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಶನಿವಾರ ಪೊಲೀಸರು ಹಂತಕಿ ಜೂಲಿಯನ್ನು ಬಂಧಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಸಹಕಾರ ನೀಡಿದ್ದ ಜೂಲಿ 2ನೇ ಪತಿ ಹಾಗೂ ಮತ್ತೊಬ್ಬನನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

    ಹಂತ ಹಂತವಾಗಿ ಕೊಲೆ: 2002 ರಿಂದ 2016ರ ಅವಧಿಯಲ್ಲಿ ಕ್ಯಾಥೊಲಿಕ್ ಕುಟುಂಬದ 6 ಮಂದಿಯನ್ನು ಜೂಲಿ ಕೊಲೆ ಮಾಡಿದ್ದಾಳೆ. ನಿವೃತ್ತ ಶಿಕ್ಷಕಿ ಅಣ್ಣಮ್ಮ ಥಾಮಸ್ (57) 2002ರಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಈ ವೇಳೆ ಅವರ ಸಾವನ್ನ ಸಹಜಸಾವು ಎಂದು ತಿಳಿದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದ್ದರು. 6 ವರ್ಷದ ಬಳಿಕ ಅಣ್ಣಮ್ಮ ಥಾಮಸ್ ಪತಿ ಟಾಮ್ ಥಾಮಸ್ (66) ಹೃದಯಘಾತದಿಂದ ಸಾವನ್ನಪ್ಪಿದ್ದರು. 2001 ರಲ್ಲಿ ದಂಪತಿಯ ಪುತ್ರ ರಾಯ್ ಥಾಮಸ್ (40) ಕೂಡ ಇದೇ ರೀತಿ ಮೃತ ಪಟ್ಟಿದ್ದರು. ಈ ವೇಳೆ ಅವರನ್ನು ವಿಷ ಉಣಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಆ ಬಳಿಕ ಅಣ್ಣಮ್ಮ ಸಹೋದರ ಮ್ಯಾಥ್ಯೂ ಮಂಜಡಿಯಿಲ್ (67) 2014 ರಲ್ಲಿ ಸಾವನ್ನಪ್ಪಿದ್ದರು. ಎಲ್ಲರನ್ನು ಒಂದೇ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು.

    ಎರಡರ ಕಂದಮ್ಮ ಬಲಿ: 2016 ರಲ್ಲಿ ಇದೇ ಕುಟುಂಬದ ಸಂಬಂಧಿಯ 2 ವರ್ಷದ ಮಗಳು ಅಲ್ಫೋನ್ಸ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಇದಾದ ಕೆಲ ತಿಂಗಳ ಅಂತರದಲ್ಲೇ ಅಲ್ಫೋನ್ಸ ತಾಯಿ 27 ವರ್ಷದ ಸಿಲಿ ಕೂಡ ಸಾವನ್ನಪ್ಪಿದ್ದರು. ಇತ್ತ ಪತಿ ಮರಣದ ಬಳಿಕ ಪತ್ನಿ ಜೂಲಿ ಮೃತ ಸಿಲಿ ಪತಿಯನ್ನು ಮದುವೆಯಾಗಿ ಕುಟುಂಬ ಅಸ್ತಿ ತಮಗೆ ಸೇರಬೇಕು ಎಂದು ಕಾನೂನಿನ ಅನ್ವಯ ಮನವಿ ಸಲ್ಲಿಸಿದ್ದರು. ಆದರೆ ಟಾಮ್ ಥಾಮಸ್ ಕಿರಿಯ ಪುತ್ರನ ಮಗ ಯುಎಸ್ ಎನ್‍ಆರ್ ಐ ಆಗಿರುವ ಮೆಜೊ ಇದಕ್ಕೆ ಆಕ್ಷೇಪಣೆ ಸಲ್ಲಿಸಿ ಕುಟುಂಬ ಸರಣಿ ಸಾವಿನ ಕುರಿತು ಕ್ರೈಂ ಬ್ರಾಂಚ್‍ಗೆ ದೂರು ನೀಡಿದ್ದರು.

    ಪ್ರಕರಣದ ದಾಖಲಿಸಿ ವಿಚಾರಣೆ ಆರಂಭಿಸಿದ ಅಪರಾಧದಳ ಪೊಲೀಸರಿಗೆ ವಿಚಾರಣೆ ವೇಳೆ ಶಾಕಿಂಗ್ ಅಂಶಗಳು ತಿಳಿದು ಬಂದಿದ್ದವು. ಈ ಪ್ರಕರಣ ಕೇರಳದಲ್ಲಿ ಸಂಚಲನವನ್ನು ಉಂಟು ಮಾಡಿದೆ.

    ಪ್ರತಿ ಬಾರಿ ಕುಟುಂಬ ಸದಸ್ಯರನ್ನು ಕೊಲೆ ಮಾಡುವ ವೇಳೆ ಜೂಲಿ ಸೂಕ್ತ ಪ್ಲಾನ್ ಮಾಡಿ ಯಾರಿಗೂ ಅನುಮಾನಬಾರದಂತೆ ಕೃತ್ಯ ಎಸಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಾಗಿರುವ ಮೃತರ ವೈಜ್ಞಾನಿಕ ಪರೀಕ್ಷೆಗಳ ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ವಿಚಾರಣೆ ವೇಳೆ ಮೃತ 6 ಮಂದಿ ಸಾವಿನ ವೇಳೆ ಜೂಲಿ ಸ್ಥಳದಲ್ಲಿ ಇರುವುದು ಖಚಿತವಾಗಿದೆ. ಈ ಪ್ರಕರಣ ತಮಗೆ ಹೆಚ್ಚು ಚಾಲೆಂಜಿಂಗ್ ಆಗಿತ್ತು ಎಂದು ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಸಿಕ್ಕಿ ಬಿದ್ದಿದ್ದು ಹೇಗೆ?
    ಪ್ರಕರಣವನ್ನು ಬೇದಿಸಲು ಪೊಲೀಸರು ಜೂಲಿ ಹಾಗೂ ಆಕೆಯ 2ನೇ ಪತಿ ಶಾಜುನನ್ನು 8 ಬಾರಿ ತೀವ್ರ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದರು. ಎಂಟು ಬಾರಿ ವಿಚಾರಣೆಯಲ್ಲಿಯೂ ಇಬ್ಬರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಅಲ್ಲದೇ ಜೂಲಿಯ ಫೋನ್ ವಿವರ ಪಡೆದ ವೇಳೆ ಆಕೆ ಶಾಜುನೊಂದಿಗೆ ನಿರಂತರ ಸಂಪರ್ಕದಲ್ಲಿ ಇರುವುದು ತಿಳಿದು ಬಂದಿತ್ತು. ಅಂದಹಾಗೇ ಜೂಲಿ ವಾಣಿಜ್ಯ ಪದವೀಧರೆಯಾಗಿದ್ದು, ಇಂಜಿನಿಯರಿಂಗ್ ಪದವಿ ಪಡೆದಿದ್ದೇನೆ ಎಂದು ಹೇಳಿ ಕೆಲಸ ಪಡೆದಿದ್ದಳು.

    ಕೊಲೆಗೆ ಸೈನೈಡ್ ಬಳಕೆ: ಜೂಲಿ ತನ್ನ ಕುಟುಂಬದ 6 ಮಂದಿಯನ್ನು ಕೊಲೆ ಮಾಡಲು ನಿಧಾನವಾಗಿ ಸಾಯಿಸುವ ಸೈನೈಡನ್ನು ಬಳಕೆ ಮಾಡಿದ್ದಳು. ಮೃತ ದೇಹಗಳನ್ನು ಹೊರ ತೆಗೆದು ಪರೀಕ್ಷೆ ನಡೆಸಿದ ವೇಳೆ ಮೃತರ ದೇಹದಲ್ಲಿ ವಿಷ ಇರುವುದು ವೈಜ್ಞಾನಿಕ ಪರೀಕ್ಷೆಗಳಲ್ಲಿ ಖಚಿತವಾಗಿತ್ತು. ಜೂಲಿಗೆ ಸೈನೈಡ್ ಪೂರೈಕೆ ಮಾಡುತ್ತಿದ್ದ ಆರೋಪದ ಅಡಿ ಅಭರಣದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಜಿಕುಮಾರ್ ಹಾಗೂ ಎಂಎಸ್ ಮ್ಯಾಥ್ಯೂರನ್ನು ಬಂಧಿಸಿದ್ದಾರೆ.

  • ವಿಚಿತ್ರ ವಿಗ್ ಮೂಲಕವೇ ಸಿಕ್ಕಿಬಿದ್ದ ಕಳ್ಳ

    ವಿಚಿತ್ರ ವಿಗ್ ಮೂಲಕವೇ ಸಿಕ್ಕಿಬಿದ್ದ ಕಳ್ಳ

    ತಿರುವನಂತಪುರಂ: ಕಳ್ಳಸಾಗಾಣಿಕೆದಾರರು ವಿವಿಧ ರೀತಿಯಲ್ಲಿ ಚಿನ್ನ, ವಜ್ರ, ಡ್ರಗ್ ಸೇರಿದಂತೆ ಮುಂತಾದವುಗಳನ್ನು ಕಳವು ಮಾಡುತ್ತಾರೆ. ಆದರೆ ಕೇರಳದ ಮೂಲದ ವ್ಯಕ್ತಿಯೊಬ್ಬ ವಿಚಿತ್ರವಾಗಿ ತಲೆ ಕೂದನ್ನು ಕತ್ತರಿಸಿದಾಗೆ ಕಾಣುವಂತೆ ನೆತ್ತಿಯ ಮೇಲೆ ವಿಗ್ ಧರಿಸಿಕೊಂಡು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ್ದು, ಕೊನೆಗೆ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.

    ಆರೋಪಿಯನ್ನು ಮಲಪ್ಪುರಂನ ನೌಶಾದ್ ಎಂದು ಗುರುತಿಸಲಾಗಿದೆ. ಆರೋಪಿ ನೌಶಾದ್ ಯುಎಇಯ ಶಾರ್ಜಾದಿಂದ ವಿಮಾನ ನಿಲ್ದಾಣಕ್ಕೆ ಬಂದಿದ್ದನು. ಈತ ನೆತ್ತಿಯ ಮಧ್ಯದ ಸುತ್ತ ಕೂದಲನ್ನು ಬೋಳಿಸಿಕೊಂಡ ರೀತಿ, ತಲೆಯ ಮಧ್ಯ ಭಾಗದಲ್ಲಿ ವಿಗ್ ಅಡಿಯಲ್ಲಿ 1.13 ಕೆಜಿ ಚಿನ್ನವನ್ನು ಸಾಗಾಟ ಮಾಡಲು ಯತ್ನಿಸಿದ್ದನು.

    ಕೊಚ್ಚಿನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ (ಸಿಐಎಎಲ್)ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಆತನ ವಿಗ್ ನೋಡಿ ಅನುಮಾನಗೊಂಡು ಪರಿಶೀಲಿಸಿದ್ದಾರೆ. ನಂತರ ಆತನನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡಿದ್ದಾರೆ. ಆಗ ಆತನ ತಲೆ ಮೇಲಿದ್ದ ವಿಗ್ ಕೆಳಗೆ 1.13 ಕೆಜಿ ಚಿನ್ನ ಪತ್ತೆಯಾಗಿದೆ. ಚಿನ್ನವು ಪೇಸ್ಟ್ ರೀತಿಯಲ್ಲಿ ಪತ್ತೆಯಾಗಿದೆ. ತಕ್ಷಣ ಆತನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

    ಈ ಹಿಂದೆ ಕಳ್ಳಸಾಗಾಣಿಕೆದಾರರು ತಮ್ಮ ದೇಹದ ವಿವಿಧ ಭಾಗಗಳಲ್ಲಿ ಕಳ್ಳಸಾಗಾಣೆ ಮಾಡುತ್ತಿದ್ದರು. ಆದರೆ ಇದೇ ಮೊದಲ ಬಾರಿಗೆ ಈ ರೀತಿ ವಿಗ್‍ನಲ್ಲಿ ಚಿನ್ನವನ್ನು ಇಟ್ಟುಕೊಂಡು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯಕ್ಕೆ ಆರೋಪಿಯನ್ನು ಬಂಧಿಸಿ, ತನಿಖೆಯನ್ನು ಮುಂದುವರಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.