Tag: kerala

  • ಕರ್ನಾಟಕ ವಿರುದ್ಧ ಕೇರಳ ಪ್ರತಿಭಟನೆ – ಸ್ಥಳಕ್ಕೆ ಭೇಟಿ ನೀಡಿ ರಾಹುಲ್ ಬೆಂಬಲ

    ಕರ್ನಾಟಕ ವಿರುದ್ಧ ಕೇರಳ ಪ್ರತಿಭಟನೆ – ಸ್ಥಳಕ್ಕೆ ಭೇಟಿ ನೀಡಿ ರಾಹುಲ್ ಬೆಂಬಲ

    ತಿರುವನಂತಪುರಂ: ಕರ್ನಾಟಕದ ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡಬೇಕೆಂಬ ಕೇರಳದ ವಯನಾಡಿನ ಜನತೆಯ ಹೋರಾಟಕ್ಕೆ ಸಂಸದ ರಾಹುಲ್ ಗಾಂಧಿ ಆಗಮಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.

    ರಾತ್ರಿ ವೇಳೆ ಅರಣ್ಯದಲ್ಲಿ ವಾಹನ ಸಂಚಾರ ಮಾಡುವುದರಿಂದ ಅಪಘಾತ ಸಂಭವಿಸಿ ಹೆಚ್ಚಿನ ಕಾಡು ಪ್ರಾಣಿಗಳು ಸಾವನ್ನಪ್ಪುತ್ತವೆ ಎಂದು ಕರ್ನಾಟಕ ಸರ್ಕಾರ  ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಅರಣ್ಯದಲ್ಲಿ ವಾಹನ ಸಂಚಾರವನ್ನು ನಿಷೇಧ ಮಾಡಿತ್ತು. ಇದನ್ನು ತೆಗೆದು ಹಾಕುವಂತೆ ಕೇರಳ ಜನತೆ ಪ್ರತಿಭಟನೆ ಮಾಡುತ್ತಿದ್ದಾರೆ.

    ಇಂದು ಈ ವಿಚಾರವಾಗಿ ಕೇರಳದ ಪ್ರತಿಭಟನೆ ನಡೆಯುತ್ತಿರುವ ಸುಲ್ತಾನ್ ಬತ್ತೇರಿ ಪಟ್ಟಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು, ನಿಷೇಧ ವಿರೋಧಿಸಿ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‍ಐ), ಯೂತ್ ಕಾಂಗ್ರೆಸ್ ಮತ್ತು ಯೂತ್ ಲೀಗ್‍ನ ಕಾರ್ಯಕರ್ತರು ಕಳೆದ ಹತ್ತು ದಿನದಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿರುವವರನ್ನು ರಾಹುಲ್ ಗಾಂಧಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಕೇರಳ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರಾತ್ರಿ ಸಂಚಾರ ನಿಷೇಧ ಮಾಡಿದ್ದನ್ನು ವಿರೋಧಿಸಿ ಕೇರಳ ಯುವಕರು ಮಾಡುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಲು ನಾನು ವಯನಾಡಿಗೆ ಬಂದಿದ್ದೇನೆ. ಇದಕ್ಕೂ ಮುಂಚೆ ಉಪವಾಸದಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರನ್ನು ನೋಡಿ ಆರೋಗ್ಯವನ್ನು ವಿಚಾರಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಬಂಡೀಪುರ ಅರಣ್ಯದಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂಚಾರವನ್ನು 9 ಗಂಟೆಗಳ ಕಾಲ ನಿಷೇಧ ಮಾಡಿದರೆ ಕೇರಳ ಮತ್ತು ಕರ್ನಾಟಕ ಜನರಿಗೆ ತೊಂದರೆ ಉಂಟಾಗುತ್ತದೆ. ಇದನ್ನು ವಿರೋಧಿಸಿ ಕೆಲ ಯುವಕರು ಸೆಪ್ಟಂಬರ್ 25 ರಿಂದ ಮಾಡುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ನಾನು ಬೆಂಬಲ ನೀಡುತ್ತೇನೆ ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

    ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿ ರಾಹುಲ್ ಗಾಂಧಿ ನಿಷೇಧ ಸಂಬಂಧ ಚರ್ಚೆ ಮಾಡಿದ್ದರು. ರಾಹುಲ್ ಗಾಂಧಿ ಬೆಂಬಲದಿಂದ ವಯನಾಡು ಕ್ಷೇತ್ರದ ಸ್ಥಳೀಯರು ಪ್ರತಿಭಟನೆ ಮಾಡಿದ್ದು, ಇದರಲ್ಲಿ ಒಂದು ಸಾವಿರಕ್ಕೂ ಅಧಿಕ ರೈತರು ಮತ್ತು ಸ್ಥಳೀಯರು ಭಾಗವಹಿಸಿದ್ದರು.

    ಏನಿದು ಪ್ರಕರಣ?
    ಹುಲಿ, ಆನೆ, ಕಾಡೆಮ್ಮೆ ಸೇರಿದಂತೆ ಅಳಿವಿನಂಚಿನಲ್ಲಿರುವ ಪ್ರಾಣಿಗಳು ಅಪಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ 2009ರಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 212 ಮತ್ತು 69 ರಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಚಾಮಾರಾಜನಗರ ಜಿಲ್ಲಾ ಆಡಳಿತ ಆದೇಶ ಹೊರಡಿಸಿತ್ತು. ವಾಹನಗಳ ಸಂಚಾರ ನಿಷೇಧವನ್ನು ರದ್ದುಪಡಿಸದಂತೆ ಕರ್ನಾಟಕ ಹೈಕೋರ್ಟ್ 2010ರಲ್ಲಿ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೇರಳ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ನಡೆಯುತ್ತಿದೆ. ಕೇರಳ ಸರ್ಕಾರ ಈ ಹಿಂದೆ ಸಾಕಷ್ಟು ಬಾರಿ ನಿಷೇಧ ತೆರವುಗೊಳಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿಕೊಂಡಿತ್ತು. ಕೇರಳದ ಲಾಬಿಗೆ ರಾಜ್ಯ ಸರ್ಕಾರ ಮಣಿದಿರಲಿಲ್ಲ.

    ಪರಿಸ್ಥಿತಿಯನ್ನು ಅಧ್ಯಯನ ನಡೆಸಲು ಸುಪ್ರೀಂ ಕೋರ್ಟ್ ಕೇಂದ್ರ ಸಾರಿಗೆ ಸಚಿವಾಲಯದ ಮುಖ್ಯ ಕಾರ್ಯದರ್ಶಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳ ಜೊತೆ ಕರ್ನಾಟಕ, ತಮಿಳುನಾಡು, ಕೇರಳದ ಸಾರಿಗೆ ಸಚಿವಾಲಯದ ಅಧಿಕಾರಿಗಳನ್ನು ಹೊಂದಿದ್ದ ಸಮಿತಿಯನ್ನು ರಚಿಸುವಂತೆ ಸೂಚಿಸಿತ್ತು. ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಹಿಂದಿದ್ದ ನಾಲ್ಕೂ ಸರ್ಕಾರಗಳು ಸಮ್ಮತಿ ಸೂಚಿಸಿರಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡಿರಲಿಲ್ಲ. ಸಿಎಂ ಕುಮಾರಸ್ವಾಮಿ ಸರ್ಕಾರದ ಜೊತೆಗೂ ಕೇರಳ ಮಾತುಕತೆ ನಡೆಸಿತ್ತು.

    ಬಲಿಯಾದ ಪ್ರಾಣಿಗಳ ಸಂಖ್ಯೆ ಎಷ್ಟು?
    ರಾತ್ರಿ ಸಂಚಾರ ನಿಷೇಧಕ್ಕೂ ಮುನ್ನ ಅಂದ್ರೆ 2004-09ರ ಅವಧಿಯಲ್ಲಿ ಬಂಡಿಪುರ ಅರಣ್ಯ ಪ್ರದೇಶದಲ್ಲಿ 86 ಪ್ರಾಣಿಗಳು ಅಪಘಾತಕ್ಕೆ ಬಲಿಯಾಗಿವೆ. ರಾತ್ರಿ ಸಂಚಾರ ನಿಷೇಧ ಬಳಿಕ 2010-18ರ ಅವಧಿಯಲ್ಲಿ 17 ಪ್ರಾಣಿ ಮೃತಪಟ್ಟಿವೆ. ಒಟ್ಟಿನಲ್ಲಿ ರಾತ್ರಿ ವಾಹನ ಸಂಚಾರ ನಿಷೇಧದ ಬಳಿಕ ಅಪಘಾತದಲ್ಲಿ ಸತ್ತ ಪ್ರಾಣಿಗಳ ಸಂಖ್ಯೆ ಇಳಿಕೆಯಾಗಿತ್ತು. ಇದೀಗ ಮತ್ತೆ ಸಂಚಾರ ಮುಕ್ತ ಮಾಡಿದ್ರೆ ಮತ್ತೆ ಪ್ರಾಣಿಗಳು ಬಲಿಯಾಗುತ್ತವೆ ಅಂತ ಪ್ರಾಣಿಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ.

    ಯಾವ ವರ್ಷದಲ್ಲಿ ಎಷ್ಟು ಪ್ರಾಣಿಗಳು ಪ್ರಾಣ ಕಳೆದುಕೋಂಡಿವೆ ಎಂಬ ವಿವರ ಈ ಕೆಳಗಿನಂತಿದೆ:
    2004-32, 200 -7, 2007-41, 2008-2, 2009-2, 2010-3, 2011-7, 2012-10, 2013-6, 2014-1, 2015-2, 2016-1, 2017-2, 2018- 2 ಪ್ರಾಣಿಗಳು ಮೃತಪಟ್ಟಿವೆ.

  • ಮೊದಲು ನಕ್ಸಲನಾಗಿದ್ದೆ ಮತ್ತೆ ನಕ್ಸಲನನ್ನಾಗಿ ಮಾಡಬೇಡಿ – ಅಧಿಕಾರಿಗಳ ವಿರುದ್ಧ ಗಡ್ಕರಿ ಕಿಡಿ

    ಮೊದಲು ನಕ್ಸಲನಾಗಿದ್ದೆ ಮತ್ತೆ ನಕ್ಸಲನನ್ನಾಗಿ ಮಾಡಬೇಡಿ – ಅಧಿಕಾರಿಗಳ ವಿರುದ್ಧ ಗಡ್ಕರಿ ಕಿಡಿ

    ನವದೆಹಲಿ: ನನ್ನನ್ನು ಮತ್ತೆ ನಕ್ಸಲನನ್ನಾಗಿ ಮಾಡಬೇಡಿ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ಕೇರಳದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ವಿಚಾರದಲ್ಲಿ ಸರಿಯಾದ ರೀತಿ ಕೆಲಸ ಮಾಡದ ಅಧಿಕಾರಿಗಳನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಮ್ಮಖದಲ್ಲೆ ತರಾಟೆಗೆ ತೆಗೆದುಕೊಂಡಿರುವ ಅವರು ನನ್ನನ್ನು ಮತ್ತೆ ನಕ್ಸಲನನ್ನಾಗಿ ಮಾಡಬೇಡಿ ಎಂದು ಅವಾಜ್ ಹಾಕಿದ್ದಾರೆ.

    ನಾನು ಮೊದಲು ನಕ್ಸಲನಾಗಿದ್ದೆ. ನಂತರ ನಾನು ಆರ್‍ಎಸ್‍ಎಸ್ ಸೇರಿಕೊಂಡಿದ್ದು, ನೀವು ಮತ್ತೆ ನನ್ನ ನಕ್ಸಲನನ್ನಾಗಿ ಮಾಡಬೇಡಿ. ಇದೇ ವಿಚಾರಕ್ಕೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು ಐದು ಬಾರಿ ನನ್ನ ಬಳಿ ಬಂದಿದ್ದಾರೆ. ನೀವು ಮಾಡಿದ ಕೆಲಸಕ್ಕೆ ನನಗೆ ನಾಚಿಕೆಯಾಗುತ್ತಿದೆ. ಈ ವಿಚಾರದಲ್ಲಿ ನಿಮಗೆ ತೊಂದರೆ ಕೊಡುವವರು ಯಾರು ಎಂದು ನನಗೆ ಗೊತ್ತಿದೆ. ಈ ಇಲಾಖೆಗೆ ನಾನು ಮುಖ್ಯಸ್ಥ. ಇಂದು ಸಂಜೆಯೊಳಗೆ ಆ ಕೆಲಸ ಆಗಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

    ನಿತಿನ್ ಗಡ್ಕರಿಯವರು ಈ ಸೂಚನೆ ನೀಡಿದ ತಕ್ಷಣ ಕೇರಳದ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಭೂಸ್ವಾಧೀನಕ್ಕೆ ಇದ್ದ ಅಡೆತಡೆಗಳನ್ನು ತೆಗೆದುಹಾಕಲಾಗಿದೆ. ಹೆದ್ದಾರಿ ಅಭಿವೃದ್ಧಿ ಯೋಚನೆಗೆ ಕೇರಳದ ರಾಜ್ಯ ಸರ್ಕಾರ ಶೇ.25 ರಷ್ಟು ವೆಚ್ಚವನ್ನು ಭರಿಸುವುದಾಗಿ ಹೇಳಿದ್ದರಿಂದ ಆರ್ಥಿಕ ಕಡತವನ್ನು ಕೇಂದ್ರ ಸರ್ಕಾರ ಮಂಗಳವಾರ ಸಂಜೆ ಬಿಡುಗಡೆ ಮಾಡಿದೆ.

    ಈ ಹಿಂದೆ ಕೇರಳದಲ್ಲಿ ಹೆದ್ದಾರಿ ಅಭಿವೃದ್ಧಿ ಮಾಡುವುದಕ್ಕೆ ವಿಳಂಬವಾಗುತ್ತಿದೆ. ಇದಕ್ಕೆ ಸಂಘ ಪರಿಹಾರವೇ ಕಾರಣ ಎಂದು ಪಿಣರಾಯಿ ವಿಜಯನ್ ವಾಗ್ದಾಳಿ ಮಾಡಿದ್ದರು. ಕೇರಳದಲ್ಲಿ ನಮ್ಮ ಪಕ್ಷವನ್ನು ನಾಶ ಮಾಡುವ ನಿಟ್ಟಿನಲ್ಲಿ ಸಂಘ ಪರಿವಾರ ಕೆಲಸ ಮಾಡುತ್ತಿದೆ. ಈ ಕಾರಣದಿಂದ ನಮ್ಮ ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಯೋಜನೆಗಳನ್ನು ತಡೆಹಿಡಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

    ಕೇರಳ ಬಿಜೆಪಿಯ ರಾಜ್ಯಾಧ್ಯಕ್ಷರಾದ ಶ್ರೀಧರನ್ ಪಿಳ್ಳೈ ಅವರು ಕೇಂದ್ರ ಹೆದ್ದಾರಿ ಅಭಿವೃದ್ಧಿ ನಿಗಮಕ್ಕೆ ರಹಸ್ಯ ಪತ್ರ ಬರೆದಿದ್ದು, ನಮ್ಮ ರಾಜ್ಯಕ್ಕೆ ಬರುವ ಅಭಿವೃದ್ಧಿ ಯೋಜನೆಗಳನ್ನು ತಡೆಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪಿಣರಾಯಿ ವಿಜಯನ್ ಆರೋಪ ಮಾಡಿದ್ದರು. ನಮ್ಮ ರಾಜ್ಯದ ಜನರು ಟ್ರಾಫಿಕ್ ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಳ್ಳಬೇಕು ಎಂದು ಬಯಸುವವರು ವಿಕೃತ ಮನಸ್ಥಿತಿ ಇರುವವರು ಎಂದು ಹೇಳಿದ್ದರು.

  • ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ, ರಾಹುಲ್ ಗಾಂಧಿ ಕೇರಳಕ್ಕೆ ಬೆಂಬಲ ಕೊಡಬಾರದು- ವಾಟಾಳ್

    ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ, ರಾಹುಲ್ ಗಾಂಧಿ ಕೇರಳಕ್ಕೆ ಬೆಂಬಲ ಕೊಡಬಾರದು- ವಾಟಾಳ್

    ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಹೇಳಿದ್ದು ಖಂಡನೀಯ. ಯಾವುದೇ ಕಾರಣಕ್ಕೂ ಕೇರಳಕ್ಕೆ ಬೆಂಬಲ ಕೊಡಬಾರದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

    ಕೇರಳದ ಹೋರಾಟವನ್ನು ಖಂಡಿಸಿ ಬಂಡೀಪುರ ಅಭಯಾರಣ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಮಲಗುವ ಮೂಲಕ ಹೋರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿ ಹುಲಿ, ಆನೆ, ಚಿರತೆ ಸೇರಿದಂತೆ ವಿವಿಧ ಪ್ರಾಣಿ ಸಂಕುಲಗಳಿವೆ. ನಮ್ಮಲ್ಲಿ ಆನೆ, ಹುಲಿ, ಚಿರತೆಗಳು ಹೆಚ್ಚಿವೆ. ವಾಹನಗಳ ಸಂಚಾರಕ್ಕೆ ಅನುಮತಿ ನೀಡುವುದರಿಂದ ಪ್ರಾಣಿ ಸಂಕುಲ ಅಪಘಾತಕ್ಕೆ ಬಲಿಯಾಗುತ್ತವೆ. ಹೀಗಾಗಿ ಯಾವುದೇ ಕಾರಣಕ್ಕೂ ರಾತ್ರಿ ಸಂಚಾರಕ್ಕೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ – ಕೇರಳ ಹೋರಾಟಕ್ಕೆ ರಾಹುಲ್ ಬೆಂಬಲ

    ಪರಿಸ್ಥಿತಿಯನ್ನು ರಾಹುಲ್ ಗಾಂಧಿಯವರು ಅರ್ಥ ಮಾಡಿಕೊಳ್ಳಬೇಕು. ಇಲ್ಲಿ ಹೊಸ ರಸ್ತೆಯೂ ಬೇಡ, ಇದರಿಂದ ವಾಹನಗಳು ಇನ್ನೂ ಹೆಚ್ಚು ಸಂಚರಿಸುತ್ತವೆ. ಮೇಲ್ಸೇತುವೆಯೂ ಬೇಡ, ಇದರಿಂದ ಲೈಟ್ ಬೆಳಕು ಬಿದ್ದು ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಮಾತ್ರವಲ್ಲದೆ, ಅಂಡರ್ ಬ್ರಿಡ್ಜ್ ಮಾಡುತ್ತೇವೆ ಎಂದರೂ ಬೇಡ. ಯಾವುದೇ ಕಾರಣಕ್ಕೂ ರಾತ್ರಿ ನಿಷೇಧವನ್ನು ತೆರವುಗೊಳಿಸಬಾರದು. ರಾಹುಲ್ ಗಾಂಧಿಯವರು ಕೇರಳಕ್ಕೆ ಬೆಂಬಲ ಕೊಡಬಾರದು ಎಂದು ಕಿಡಿಕಾರಿದರು.

    ಇದರಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ರಸ್ತೆಯಲ್ಲೇ ಮಲಗಿ ಪ್ರತಿಭಟಿಸಿದ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಬಂಡೀಪುರದ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇದ ತೆರವುಗೊಳಿಸಿದರೆ ವನ್ಯಜೀವಿಗಳಿಗೆ ಕಂಟಕವಾಗಲಿದೆ. ಅಲ್ಲದೆ ಈ ಮಾರ್ಗದಲ್ಲಿ ಸ್ಮಗ್ಲಿಂಗ್‍ನಂತಹ ಅಕ್ರಮ ಚಟುವಟಿಕೆಗಳಿಗೆ ಅವಕಾಶವಾಗಲಿದೆ. ಆದ್ದರಿಂದ ರಾಜ್ಯ ಸರ್ಕಾರ ಯಾವುದೇ ಒತ್ತಡಕ್ಕೂ ಮಣಿಯಬಾರದು ಹಾಗು ಯಾವುದೇ ಕಾರಣಕ್ಕೂ ನಿಷೇಧ ತೆರವುಗೊಳಿಸಬಾರದು ಎಂದು ಆಗ್ರಹಿಸಿದರು.

  • ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ – ಕೇರಳ ಹೋರಾಟಕ್ಕೆ ರಾಹುಲ್ ಬೆಂಬಲ

    ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ – ಕೇರಳ ಹೋರಾಟಕ್ಕೆ ರಾಹುಲ್ ಬೆಂಬಲ

    ಬೆಂಗಳೂರು: ರಾಜ್ಯ ಸರ್ಕಾರ ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಹೇರಿರುವ ನಿಷೇಧ ತೆರವುಗೊಳಿಸುವಂತೆ ಒತ್ತಾಯಿಸಿ ವಯನಾಡ್‍ನಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ಸೂಚಿಸಿದ್ದಾರೆ.

    ಗುಂಡುಪೇಟೆ ತಾಲೂಕಿನ ಬಂಡೀಪುರ ಮೂಲಕ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲಾಗಿದ್ದು, ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ರಾಹುಲ್ ಗಾಂಧಿ ಟ್ವೀಟ್ ಮಾಡಿ ಬೆಂಬಲ ಸೂಚಿಸಿದ್ದಾರೆ.

    ಬಂಡೀಪುರ-ಕೇರಳ ಮಾರ್ಗದ ರಾಷ್ಟ್ರಿಯ ಹೆದ್ದಾರಿ 766 ರಲ್ಲಿ ರಾತ್ರಿ ವೇಳೆ ಸಂಚಾರ ನಿಷೇಧಿಸಿದ್ದರಿಂದ ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಕ್ರಮ ವಿರೋಧಿಸಿ ಸೆ.25ರಿಂದ ವಯನಾಡ್‍ನಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನನ್ನ ಬೆಂಬಲವಿದೆ. ಯುವಕರೊಂದಿಗೆ ನಾನು ನಿಲ್ಲುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

    ರಾಹುಲ್ ಗಾಂಧಿ ಟ್ವೀಟ್ ಮಾಡಿರುವ ಕುರಿತು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರತಿಕ್ರಿಯಿಸಿದ್ದು, ತಮ್ಮ ಕ್ಷೇತ್ರದ ಜನರ ಭಾವನೆಗಳಿಗೆ ಸ್ಪಂದಿಸಿ ರಾಹುಲ್ ಟ್ವೀಟ್ ಮಾಡಿದ್ದಾರೆ. ಅಂತಿಮವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು. ರಾತ್ರಿ ವೇಳೆ ಸಂಚಾರ ನಿಲ್ಲಿಸಲು ವೈಜ್ಞಾನಿಕ ಕಾರಣಗಳೇನು? ವನ್ಯಜೀವಿಗಳಿಗೆ ತೊಂದರೆಯಾಗುತ್ತದೆ ಎನ್ನುವುದಾದರೆ ಹಗಲು ಹೊತ್ತು ತೊಂದರೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ವೈಜ್ಞಾನಿಕ ಕಾರಣಗಳೇನು ಎನ್ನುವುದನ್ನು ಸರ್ಕಾರ ಹೇಳಲಿ, ವಾಹನ ಸಂಚಾರ ತೆರವುಗೊಳಿಸಬೇಕೋ ಬೇಡವೋ ಎನ್ನುವ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಸ್ಪಷ್ಟಪಡಿಸಿದ್ದಾರೆ.

    ಏನಿದು ಪ್ರಕರಣ?
    ಹುಲಿ, ಆನೆ, ಕಾಡೆಮ್ಮೆ ಸೇರಿದಂತೆ ಅಳಿವಿನಂಚಿನಲ್ಲಿರುವ ಪ್ರಾಣಿಗಳು ಅಪಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ 2009ರಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 212 ಮತ್ತು 69 ರಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಚಾಮಾರಾಜನಗರ ಜಿಲ್ಲಾ ಆಡಳಿತ ಆದೇಶ ಹೊರಡಿಸಿತ್ತು. ವಾಹನಗಳ ಸಂಚಾರ ನಿಷೇಧವನ್ನು ರದ್ದುಪಡಿಸದಂತೆ ಕರ್ನಾಟಕ ಹೈಕೋರ್ಟ್ 2010ರಲ್ಲಿ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೇರಳ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ನಡೆಯುತ್ತಿದೆ. ಕೇರಳ ಸರ್ಕಾರ ಈ ಹಿಂದೆ ಸಾಕಷ್ಟು ಬಾರಿ ನಿಷೇಧ ತೆರವುಗೊಳಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿಕೊಂಡಿತ್ತು. ಕೇರಳದ ಲಾಬಿಗೆ ರಾಜ್ಯ ಸರ್ಕಾರ ಮಣಿದಿರಲಿಲ್ಲ.

    ಪರಿಸ್ಥಿತಿಯನ್ನು ಅಧ್ಯಯನ ನಡೆಸಲು ಸುಪ್ರೀಂ ಕೋರ್ಟ್ ಕೇಂದ್ರ ಸಾರಿಗೆ ಸಚಿವಾಲಯದ ಮುಖ್ಯ ಕಾರ್ಯದರ್ಶಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳ ಜೊತೆ ಕರ್ನಾಟಕ, ತಮಿಳುನಾಡು, ಕೇರಳದ ಸಾರಿಗೆ ಸಚಿವಾಲಯದ ಅಧಿಕಾರಿಗಳನ್ನು ಹೊಂದಿದ್ದ ಸಮಿತಿಯನ್ನು ರಚಿಸುವಂತೆ ಸೂಚಿಸಿತ್ತು.

    ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಹಿಂದಿದ್ದ ನಾಲ್ಕೂ ಸರ್ಕಾರಗಳು ಸಮ್ಮತಿ ಸೂಚಿಸಿರಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡಿರಲಿಲ್ಲ. ಸಿಎಂ ಕುಮಾರಸ್ವಾಮಿ ಸರ್ಕಾರದ ಜೊತೆಗೂ ಕೇರಳ ಮಾತುಕತೆ ನಡೆಸಿತ್ತು. ಅವರೂ ಇದಕ್ಕೆ ಅವಕಾಶ ನೀಡಿರಲಿಲ್ಲ.

    ಬಲಿಯಾದ ಪ್ರಾಣಿಗಳ ಸಂಖ್ಯೆ ಎಷ್ಟು?
    ರಾತ್ರಿ ಸಂಚಾರ ನಿಷೇಧಕ್ಕೂ ಮುನ್ನ ಅಂದ್ರೆ 2004-09ರ ಅವಧಿಯಲ್ಲಿ ಬಂಡಿಪುರ ಅರಣ್ಯ ಪ್ರದೇಶದಲ್ಲಿ 86 ಪ್ರಾಣಿಗಳು ಅಪಘಾತಕ್ಕೆ ಬಲಿಯಾಗಿವೆ. ರಾತ್ರಿ ಸಂಚಾರ ನಿಷೇಧ ಬಳಿಕ 2010-18ರ ಅವಧಿಯಲ್ಲಿ 17 ಪ್ರಾಣಿ ಮೃತಪಟ್ಟಿವೆ. ಒಟ್ಟಿನಲ್ಲಿ ರಾತ್ರಿ ವಾಹನ ಸಂಚಾರ ನಿಷೇಧದ ಬಳಿಕ ಅಪಘಾತದಲ್ಲಿ ಸತ್ತ ಪ್ರಾಣಿಗಳ ಸಂಖ್ಯೆ ಇಳಿಕೆಯಾಗಿತ್ತು. ಇದೀಗ ಮತ್ತೆ ಸಂಚಾರ ಮುಕ್ತ ಮಾಡಿದ್ರೆ ಮತ್ತೆ ಪ್ರಾಣಿಗಳು ಬಲಿಯಾಗುತ್ತವೆ ಅಂತ ಪ್ರಾಣಿಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ.

    ಯಾವ ವರ್ಷದಲ್ಲಿ ಎಷ್ಟು ಪ್ರಾಣಿಗಳು ಪ್ರಾಣ ಕಳೆದುಕೋಂಡಿವೆ ಎಂಬ ವಿವರ ಈ ಕೆಳಗಿನಂತಿದೆ:
    2004 – 32, 2005 – 7, 2007 – 41, 2008 – 2, 2009 – 2, 2010 – 3, 2011 – 7, 2012 – 10, 2013 – 6, 2014 – 1, 2015 – 2, 2016 – 1, 2017 – 2, 2018 – 2 ಪ್ರಾಣಿಗಳು ಮೃತಪಟ್ಟಿವೆ.

  • 12 ವರ್ಷದ ಬಾಲಕಿ ಮೇಲೆ 2 ವರ್ಷದಿಂದ 30 ಮಂದಿ ರೇಪ್- ತಂದೆ ಅರೆಸ್ಟ್

    12 ವರ್ಷದ ಬಾಲಕಿ ಮೇಲೆ 2 ವರ್ಷದಿಂದ 30 ಮಂದಿ ರೇಪ್- ತಂದೆ ಅರೆಸ್ಟ್

    ತಿರುವನಂತಪುರಂ: 12 ವರ್ಷದ ಬಾಲಕಿ ಮೇಲೆ 2 ವರ್ಷದಿಂದ 30 ಮಂದಿ ಅತ್ಯಾಚಾರಗೈದ ಪ್ರಕರಣವೊಂದು ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಸದ್ಯ ಬಾಲಕಿಯನ್ನು ಆಶ್ರಯ ಮನೆಗೆ ಕಳುಹಿಸಲಾಗಿದೆ. ಹಣಕ್ಕಾಗಿ ಮನೆಯವರೇ ಆಕೆಯ ಮೇಲೆ ಅತ್ಯಾಚಾರ ಮಾಡಿಸಿರುವುದಾಗಿ ತಿಳಿದುಬಂದಿದೆ.

    ಬೆಳಕಿಗೆ ಬಂದಿದ್ದು ಹೇಗೆ?
    ಶಾಲೆಯಲ್ಲಿ ಕೌನ್ಸಿಲಿಂಗ್ ನಡೆದ ವೇಳೆ ಬಾಲಕಿಯ ಮೇಲೆ ನಡೆದ ಕೃತ್ಯ ಬಯಲಾಗಿದೆ. ಮನೆಯಲ್ಲಿ ಏನು ಮಾಡುತ್ತೀಯಾ ಎಂದು ಕೇಳಿದಾಗ ಬಾಲಕಿ ತನ್ನ ಮೇಲೆ ಅತ್ಯಾಚಾರವಾದ ಘಟನೆಯನ್ನು ವಿವರಿಸಿದ್ದಾಳೆ. ಬಾಲಕಿಯ ಮಾತುಗಳನ್ನು ಕೇಳುತ್ತಿದ್ದ ಕೌನ್ಸಿಲರ್ ಗಳೇ ಒಂದು ಬಾರಿ ದಂಗಾಗಿದ್ದಾರೆ. ತನ್ನ ಕುಟುಂಬವನ್ನು ನಿಭಾಯಿಸಲು ಬಾಲಕಿ ಇಷ್ಟು ಚಿಕ್ಕ ವಯಸ್ಸಿನಲ್ಲಿ ಇಂತಹ ಕೆಲಸ ಮಾಡಿರುವುದು ಕೌನ್ಸಿಲರ್ ಗಳಿಗೇ ಅಚ್ಚರಿ ಮೂಡಿಸಿದೆ.

    ಆಕೆಯ ಕುಟುಂಬಕ್ಕೆ ಹಣದ ಅವಶ್ಯಕತೆ ಇತ್ತು. ಹೀಗಾಗಿ ಆಕೆ ಮೊದಲು ತನ್ನ ತಂದೆಯ ಗೆಳೆಯನಿಂದಲೇ ಅತ್ಯಾಚಾರಕ್ಕೆ ಒಳಗಾದಳು. ಆತ ಆಕೆಯ ಮೇಲೆ ಅತ್ಯಾಚಾರ ಮಾಡಿ ನಂತರ ಬಾಲಕಿಯ ತಂದೆಗೆ ಹಣದ ಅವಶ್ಯಕತೆ ಇದ್ದಾಗ ಹಣ ಕೊಡುತ್ತಿದ್ದನು. ಇಷ್ಟು ಮಾತ್ರವಲ್ಲದೇ ಬಾಲಕಿಯ ತಾಯಿಯನ್ನು ಕೂಡ ತಂದೆ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದನು.

    ಸದ್ಯ ಬಾಲಕಿಯ ಹೇಳಿಕೆಗಳನ್ನು ಕೌನ್ಸಿಲರ್ಸ್ ರೆಕಾರ್ಡ್ ಮಾಡಿಕೊಂಡಿದ್ದು, ರೇಪ್ ಮಾಡಿರುವುದು ನಿಜನಾ ಎಂದು ತಿಳಿಯಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

    ಪ್ರಕರಣ ಸಂಬಂಧ ಐಪಿಸಿ ಮತ್ತು ಪೋಕ್ಸೋ ಆ್ಯಕ್ಟ್ 354(ಮಾನ ಭಂಗ ಆರೋಪ) ಹಾಗೂ 376(ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತಂದೆ ಸೇರಿ ಮೂವರನ್ನು ಬಂಧಿಸಿದ್ದಾರೆ. ಉಳಿದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆದರೆ ಬಾಲಕಿಯ ತಾಯಿ ಮಾತ್ರ ಇವೆಲ್ಲವನ್ನೂ ಅಲ್ಲಗೆಳೆದಿದ್ದು, ನಮ್ಮ ವಿರುದ್ಧ ಪಿತೂರಿ ಮಾಡಲಾಗುತ್ತಿದೆ. ಹೀಗಾಗಹಿ ಮಗಳನ್ನು ನಮಗೆ ವಾಪಸ್ ಕೊಡಿ ಎಂದು ಹೇಳಿದ್ದಾರೆ.

  • ‘ನಾನ್ ಸೈಡ್ ಬಿಡಲ್ಲ’- ರಸ್ತೆಯ ಮಧ್ಯೆ ಸ್ಕೂಟಿ ನಿಲ್ಲಿಸಿ ಬಸ್ ಚಾಲಕನಿಗೆ ಪಾಠ ಕಲಿಸಿದ ಮಹಿಳೆ

    ‘ನಾನ್ ಸೈಡ್ ಬಿಡಲ್ಲ’- ರಸ್ತೆಯ ಮಧ್ಯೆ ಸ್ಕೂಟಿ ನಿಲ್ಲಿಸಿ ಬಸ್ ಚಾಲಕನಿಗೆ ಪಾಠ ಕಲಿಸಿದ ಮಹಿಳೆ

    ತಿರುವನಂತಪುರಂ: ಕೇರಳದಲ್ಲಿ ಮಹಿಳೆಯೊಬ್ಬರು ಬಸ್‍ಗೆ ಸ್ಕೂಟಿಯನ್ನು ಅಡ್ಡಲಾಗಿ ನಿಲ್ಲಿಸುವ ಮೂಲಕ ಚಾಲಕನಿಗೆ ಬುದ್ಧಿ ಕಲಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾತಾಣಗಳಲ್ಲಿ ವೈರಲ್ ಆಗಿದ್ದು,

    ವೈರಲ್ ಆದ ವಿಡಿಯೋದಲ್ಲಿ ಬಸ್ ಚಾಲಕ ಬಲ ಭಾಗದಲ್ಲಿ ಸಂಚರಿಸಿದ್ದು, ಇದನ್ನು ಕಂಡ ಮಹಿಳೆ ಕೆಂಡಾಮಂಡಲವಾಗಿ ತಾನೂ ಸಹ ತನ್ನ ಸ್ಕೂಟಿಯನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿಕೊಂಡು ನಿಂತಿದ್ದಾರೆ. ಬಸ್ ಸಣ್ಣ ಜಾಗದಲ್ಲೇ ನುಗ್ಗಲು ಯತ್ನಿಸಿದ್ದು, ಆಗ ಮಹಿಳಾ ರೈಡರ್ ತನ್ನ ಸ್ಕೂಟಿಯನ್ನು ರಸ್ತೆಯ ಬಲಭಾಗದಲ್ಲಿ ನಿಲ್ಲಿಸುತ್ತಾರೆ.

    ಬಸ್ ಮುಂದೆ ಸ್ಕೂಟಿ ಸಿಕ್ಕದಾಗಿ ಕಾಣುತ್ತದೆ, ಇನ್ನೊಂದೆಡೆ ಬಸ್ ಡ್ರೈವರ್ ಮಹಿಳೆಯನ್ನು ಹೆದರಿಸಲು ನೋಡುತ್ತಾನೆ. ಆದರೆ ಮಹಿಳೆ ಮಾತ್ರ ಅವರ ಸ್ಥಾನ ಬಿಟ್ಟು ಕದಲುವುದಿಲ್ಲ. ನಂತರ ಚಾಲಕನೇ ಬಸ್ಸನ್ನು ಮಹಿಳೆಯ ಬಲಕ್ಕೆ ಅಂದರೆ, ರಸ್ತೆಯ ಎಡಕ್ಕೆ ಸಂಚಾರಿ ನಿಯಮದಂತೆ ಚಲಿಸುತ್ತಾನೆ.

    ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೆಚ್ಚು ಜನ ಶೇರ್ ಮಾಡಿ ಮಹಿಳೆಯ ಧೈರ್ಯವನ್ನು ಮೆಚ್ಚಿದ್ದಾರೆ. ಕಮೆಂಟ್ ಮಾಡುತ್ತಿದ್ದಾರೆ.

    ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡ ನಂತರ ನೆಟ್ಟಿಗರು ಮಹಿಳೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸ್ ರಾಂಗ್ ರೂಟ್‍ನಲ್ಲಿ ಕಿರಿದಾದ ರಸ್ತೆಯಲ್ಲಿ ಚಲಿಸಲು ಯತ್ನಿಸಿದರೂ ಮಹಿಳೆ ಕದಲದೆ ನಿಂತಿರುವುದಕ್ಕೆ ಶಹಬ್ಬಾಶ್ ಎಂದಿದ್ದಾರೆ.

    ಕೆಲವು ಉತ್ತರ ಭಾರತೀಯರು ಇದಕ್ಕೆ ಪ್ರತಿಕ್ರಿಯಿಸಿ, ಇದೇ ಘಟನೆ ಉತ್ತರ ಭಾರತದಲ್ಲಿ ನಡೆದಿದ್ದರೆ ಡ್ರೈವರ್ ಬಸ್ಸನ್ನು ನಿಲ್ಲಿಸುತ್ತಿರಲಿಲ್ಲ. ಇದೊಂದು ಅವಿವೇಕಿಗಳ ತಾಣವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ಕೇರಳ, ಕರ್ನಾಟಕ ವಾಹನ ಸಂಚಾರ ಬಂದ್ – ಬಂಡೀಪುರ ಚೆಕ್‍ಪೋಸ್ಟ್ ನಲ್ಲಿ ಸಾಲುಗಟ್ಟಿ ನಿಂತ ವಾಹನಗಳು

    ಕೇರಳ, ಕರ್ನಾಟಕ ವಾಹನ ಸಂಚಾರ ಬಂದ್ – ಬಂಡೀಪುರ ಚೆಕ್‍ಪೋಸ್ಟ್ ನಲ್ಲಿ ಸಾಲುಗಟ್ಟಿ ನಿಂತ ವಾಹನಗಳು

    ಚಾಮರಾಜನಗರ: ಕರ್ನಾಟಕ ಸರ್ಕಾರ ಬಂಡೀಪುರ ಅರಣ್ಯದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಹೇರಿರುವ ನಿಷೇಧವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ವಯನಾಡ್ ಕ್ಷೇತ್ರದಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಸ್ವಯಂಪ್ರೇರಿತ ಬಂದ್ ಮಾಡಲಾಗಿದೆ.

    ಗುಂಡುಪೇಟೆ ತಾಲೂಕಿನ ಬಂಡೀಪುರ ಮೂಲಕ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಪ್ರತಿನಿಧಿಸಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲಾಗಿದೆ.

    ಬಂದ್ ಹಿನ್ನೆಲೆಯಲ್ಲಿ ರಾ.ಹೆ.766 ರಲ್ಲಿ ವಾಹನ ಸಂಚಾರ ಸ್ಥಗಿತವಾಗಿದ್ದು, ಬಂಡೀಪುರದ ಮದ್ದೂರು ಚೆಕ್ ಪೋಸ್ಟ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ. ರಾತ್ರಿ ವಾಹನ ಸಂಚಾರದಿಂದ ಕಾಡು ಪ್ರಾಣಿಗಳು ಅಪಘಾತಕ್ಕೀಡಾಗುತ್ತವೆ ಎಂಬ ಕಾರಣಕ್ಕೆ ಸಂಚಾರವನ್ನು ನಿಷೇಧ ಮಾಡಲಾಗಿತ್ತು.

    ಏನಿದು ಪ್ರಕರಣ?
    ಹುಲಿ, ಆನೆ, ಕಾಡೆಮ್ಮೆ ಸೇರಿದಂತೆ ಅಳಿವಿನಂಚಿನಲ್ಲಿರುವ ಪ್ರಾಣಿಗಳು ಅಪಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ 2009ರಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 212 ಮತ್ತು 69 ರಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಚಾಮಾರಾಜನಗರ ಜಿಲ್ಲಾ ಆಡಳಿತ ಆದೇಶ ಹೊರಡಿಸಿತ್ತು. ವಾಹನಗಳ ಸಂಚಾರ ನಿಷೇಧವನ್ನು ರದ್ದುಪಡಿಸದಂತೆ ಕರ್ನಾಟಕ ಹೈಕೋರ್ಟ್ 2010ರಲ್ಲಿ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೇರಳ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ನಡೆಯುತ್ತಿದೆ. ಕೇರಳ ಸರ್ಕಾರ ಈ ಹಿಂದೆ ಸಾಕಷ್ಟು ಬಾರಿ ನಿಷೇಧ ತೆರವುಗೊಳಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿಕೊಂಡಿತ್ತು. ಕೇರಳದ ಲಾಬಿಗೆ ರಾಜ್ಯ ಸರ್ಕಾರ ಮಣಿದಿರಲಿಲ್ಲ.

    ಪರಿಸ್ಥಿತಿಯನ್ನು ಅಧ್ಯಯನ ನಡೆಸಲು ಸುಪ್ರೀಂ ಕೋರ್ಟ್ ಕೇಂದ್ರ ಸಾರಿಗೆ ಸಚಿವಾಲಯದ ಮುಖ್ಯ ಕಾರ್ಯದರ್ಶಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳ ಜೊತೆ ಕರ್ನಾಟಕ, ತಮಿಳುನಾಡು, ಕೇರಳದ ಸಾರಿಗೆ ಸಚಿವಾಲಯದ ಅಧಿಕಾರಿಗಳನ್ನು ಹೊಂದಿದ್ದ ಸಮಿತಿಯನ್ನು ರಚಿಸುವಂತೆ ಸೂಚಿಸಿತ್ತು.

    ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಹಿಂದಿದ್ದ ನಾಲ್ಕೂ ಸರ್ಕಾರಗಳು ಸಮ್ಮತಿ ಸೂಚಿಸಿರಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡಿರಲಿಲ್ಲ. ಸಿಎಂ ಕುಮಾರಸ್ವಾಮಿ ಸರ್ಕಾರದ ಜೊತೆಗೂ ಕೇರಳ ಮಾತುಕತೆ ನಡೆಸಿತ್ತು.

    ಬಲಿಯಾದ ಪ್ರಾಣಿಗಳ ಸಂಖ್ಯೆ ಎಷ್ಟು?
    ರಾತ್ರಿ ಸಂಚಾರ ನಿಷೇಧಕ್ಕೂ ಮುನ್ನ ಅಂದ್ರೆ 2004-09ರ ಅವಧಿಯಲ್ಲಿ ಬಂಡಿಪುರ ಅರಣ್ಯ ಪ್ರದೇಶದಲ್ಲಿ 86 ಪ್ರಾಣಿಗಳು ಅಪಘಾತಕ್ಕೆ ಬಲಿಯಾಗಿವೆ. ರಾತ್ರಿ ಸಂಚಾರ ನಿಷೇಧ ಬಳಿಕ 2010-18ರ ಅವಧಿಯಲ್ಲಿ 17 ಪ್ರಾಣಿ ಮೃತಪಟ್ಟಿವೆ. ಒಟ್ಟಿನಲ್ಲಿ ರಾತ್ರಿ ವಾಹನ ಸಂಚಾರ ನಿಷೇಧದ ಬಳಿಕ ಅಪಘಾತದಲ್ಲಿ ಸತ್ತ ಪ್ರಾಣಿಗಳ ಸಂಖ್ಯೆ ಇಳಿಕೆಯಾಗಿತ್ತು. ಇದೀಗ ಮತ್ತೆ ಸಂಚಾರ ಮುಕ್ತ ಮಾಡಿದ್ರೆ ಮತ್ತೆ ಪ್ರಾಣಿಗಳು ಬಲಿಯಾಗುತ್ತವೆ ಅಂತ ಪ್ರಾಣಿಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ.

    ಯಾವ ವರ್ಷದಲ್ಲಿ ಎಷ್ಟು ಪ್ರಾಣಿಗಳು ಪ್ರಾಣ ಕಳೆದುಕೋಂಡಿವೆ ಎಂಬ ವಿವರ ಈ ಕೆಳಗಿನಂತಿದೆ:
    2004 – 32, 2005 – 7, 2007 – 41, 2008 – 2, 2009 – 2, 2010 – 3, 2011 – 7, 2012 – 10, 2013 – 6, 2014 – 1, 2015 – 2, 2016 – 1, 2017 – 2, 2018 – 2 ಪ್ರಾಣಿಗಳು ಮೃತಪಟ್ಟಿವೆ.

  • ತಲೆಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ ಮಹಿಳಾ ಪೊಲೀಸ್

    ತಲೆಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ ಮಹಿಳಾ ಪೊಲೀಸ್

    ತಿರುವನಂತಪುರಂ: ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ತಲೆಕೂದಲನ್ನು ದಾನ ಮಾಡಿ ಮಾದರಿಯಾಗಿದ್ದಾರೆ.

    44 ವರ್ಷದ ಪೊಲೀಸ್ ಅಧಿಕಾರಿ ಅಪರ್ಣಾ ಲವಕುಮಾರ್ ಅವರು ತಮ್ಮ ಉದ್ದನೆಯ ಕೂದಲನ್ನು ದಾನ ಮಾಡಿದ್ದು, ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಪೊಲೀಸ್ ಠಾಣೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಾರೆ.

    ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಅವರು ತಮ್ಮ ಉದ್ದನೆಯ ಕೂದಲಿಗೆ ಹೆಚ್ಚು ಖ್ಯಾತರಾಗಿದ್ದರು. ಆದರೆ ದಿಢೀರ್ ಎಂದು ಅವರು ಕೂದಲು ಕತ್ತರಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಈ ಬಗ್ಗೆ ಮಾತನಾಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರ ಹಾಗೂ ಪೊಲೀಸರ ನಡುವಿನ ಅಂತರ ಕಡಿಮೆಯಾಗುತ್ತಿದ್ದು, ಇದನ್ನು ಮತ್ತಷ್ಟು ಸುಧಾರಣೆ ಮಾಡುವ ಅಗತ್ಯವಿದೆ. ನನಗೆ ಸೌಂದರ್ಯ ಮುಖ್ಯವಲ್ಲ. ಈ ಹಿಂದೆ ಕ್ಯಾನ್ಸರ್ ರೋಗಿಗಳಿಗೆ ಅರ್ಧ ಕೂದಲನ್ನು ದಾನ ಮಾಡಿದ್ದೆ. ಆದರೆ ಈ ಬಾರಿ ಪೂರ್ತಿ ಕೂದಲನ್ನು ದಾನ ಮಾಡಿದ್ದೇನೆ ಎಂದರು.

    ಅಪರ್ಣಾ ಅವರ ಈ ಕಾರ್ಯಕ್ಕೆ ಇಲಾಖೆ ಕೂಡ ಸಾಥ್ ನೀಡಿದ್ದು, ಮೇಲಾಧಿಕಾರಿಗಳು ಇದಕ್ಕೆ ಅನುಮತಿಯನ್ನು ನೀಡಿದ್ದಾರೆ. ಕೇವಲ ಕೂದಲಷ್ಟೇ ಅಲ್ಲದೇ 2008 ರಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರೋಗಿಯೊಬ್ಬರು ಆಸ್ಪತ್ರೆಯ ಬಿಲ್ ನೀಡಲು ವಿಫಲವಾದ ಸಂದರ್ಭದಲ್ಲಿ ಅಪರ್ಣಾ ಅವರು ತಮ್ಮ ಕೈಲಿದ್ದ ಬಂಗಾರದ ಬಳೆಯನ್ನು ನೀಡಿ ಆರ್ಥಿಕ ಸಹಾಯವನ್ನು ಮಾಡಿದ್ದರು. ಇತ್ತೀಚೆಗಷ್ಟೇ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ 5ನೇ ತರಗತಿಯ ಬಾಲಕಿ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸುತ್ತಿದ್ದನ್ನು ಕಂಡು ಕೂಡಲು ದಾನ ಮಾಡುವ ನಿರ್ಧಾರ ಮಾಡಿದ್ದರು.

  • 12ರ ಬಾಲಕಿ ಮೇಲೆ 30 ಮಂದಿ ಅತ್ಯಾಚಾರ – ನೀಚಕೃತ್ಯಕ್ಕೆ ತಂದೆಯ ಸಾಥ್

    12ರ ಬಾಲಕಿ ಮೇಲೆ 30 ಮಂದಿ ಅತ್ಯಾಚಾರ – ನೀಚಕೃತ್ಯಕ್ಕೆ ತಂದೆಯ ಸಾಥ್

    ತಿರುವನಂತಪುರಂ: ತಂದೆಯ ಸಹಕಾರದಿಂದ 30 ಮಂದಿ ಕಾಮುಕರು, 12 ವರ್ಷದ ಬಾಲಕಿ ಮೇಲೆ ಸತತ ಎರಡು ವರ್ಷದಿಂದ ಅತ್ಯಾಚಾರ ಎಸಗುತ್ತಿರುವ ಆಘಾತಕಾರಿ ಪ್ರಕರಣವೊಂದು ದೇವರ ನಾಡು ಕೇರಳದಲ್ಲಿ ಬೆಳಕಿಗೆ ಬಂದಿದೆ.

    ಮಲಪ್ಪುರಂನ ಚೆಲರಿ ಪ್ರದೇಶದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪದೇ ಪದೇ ಆಕೆ ಶಾಲೆಗೆ ಗೈರಾಗುತ್ತಿದ್ದಳು. ಇದನ್ನು ಗಮನಿಸಿದ ಶಿಕ್ಷಕರು ಶನಿವಾರ ಬಾಲಕಿ ಶಾಲೆಗೆ ಬಂದಾಗ ಪ್ರಶ್ನಿಸಿದಾಗ ಸತ್ಯಾಂಶ ಹೊರಬಿದ್ದಿದೆ. ತಂದೆಯೇ ಆಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಆರೋಪಿಗಳಿಗೆ ಕುಮ್ಮಕ್ಕು ನೀಡುತ್ತಿದ್ದರು ಎಂದು ಬಾಲಕಿ ಹೇಳಿದ್ದಾಳೆ. ಅಲ್ಲದೆ ಸತತ 2 ವರ್ಷಗಳಿಂದ 30 ಮಂದಿ ಬಾಲಕಿಯ ಮೇಲೆ ಅತ್ಯಾಚಾರವೆಸೆಗಿದ್ದಾರೆ ಎಂಬ ನಿಜಾಂಶವನ್ನು ಬಾಲಕಿ ಶಿಕ್ಷಕರ ಬಳಿ ಬಿಚ್ಚಿಟ್ಟಿದ್ದಾಳೆ.

     

    ಸಂತ್ರಸ್ತೆ ಅವರ ಕುಟುಂಬದಲ್ಲಿದ್ದ ಏಕೈಕ ಹೆಣ್ಣು ಮಗಳಾಗಿದ್ದು, ಕುಟುಂಬಸ್ಥರೊಂದಿಗೆ ಆಕೆ ಬಾಡಿಗೆಯ ಮನೆಯಲ್ಲಿ ವಾಸವಾಗಿದ್ದಳು. ಕಳೆದ ಎರಡು ವರ್ಷಗಳಿಂದ ತಂದೆಯ ಸ್ನೇಹಿತರು ಆಗಾಗ ಮನೆಗೆ ಬರುತ್ತಿದ್ದರು. ಅವರು ನನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದರು. ಇದಕ್ಕೆ ತಂದೆ ಕೂಡ ಬೆಂಬಲ ನೀಡುತ್ತಿದ್ದರು. ಸ್ನೇಹಿತರು ಮನೆಗೆ ಬಂದಾಗಲೆಲ್ಲಾ ತಂದೆ ನನಗೆ ಶಾಲೆಗೆ ಹೋಗಬೇಡ ಎಂದು ತಡೆಯುತ್ತಿದ್ದರು ಎಂದು ಬಾಲಕಿ ಹೇಳಿರುವುದಾಗಿ ಮಕ್ಕಳ ಅಧಿಕಾರಿ ತಿಳಿಸಿದ್ದಾರೆ.

    ಬಾಲಕಿಯನ್ನು ಮಲಪ್ಪುರಂನ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ ಬಳಿಕ ಅಲ್ಲಿಂದ ಆಕೆಯನ್ನು ಆಶ್ರಯ ನಿವಾಸಕ್ಕೆ ಕರೆದೊಯ್ಯಲಾಯಿತು. ಈ ಸಂಬಂಧ ತಿರುರಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯ ತಂದೆ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳ ಮೇಲೆ ಪೋಸ್ಕೋ ಕಾಯ್ದೆ ಅಡಿಯಲ್ಲಿ ಹಲವು ಕೇಸ್‍ಗಳನ್ನು ದಾಖಲಿಸಲಾಗಿದೆ. ಅಲ್ಲದೆ ಉಳಿದ ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

  • ಬಸ್ ಅಡಿ ಸಿಲುಕಿದ್ದ ಸವಾರ ಪವಾಡ ರೀತಿ ಬದುಕುಳಿದ: ವಿಡಿಯೋ

    ಬಸ್ ಅಡಿ ಸಿಲುಕಿದ್ದ ಸವಾರ ಪವಾಡ ರೀತಿ ಬದುಕುಳಿದ: ವಿಡಿಯೋ

    ತಿರುವನಂತಪುರಂ: ಬಸ್ ಅಡಿ ಸಿಲುಕಿದ್ದ ಸ್ಕೂಟಿ ಸವಾರ ಪವಾಡ ರೀತಿ ಬದುಕುಳಿದ ಘಟನೆ ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ನಡೆದಿದೆ.

    ಕೋಝಿಕೋಡ್ ಜಿಲ್ಲೆಯ ಎಂಗಾಪುಝ ಪಟ್ಟಣದಲ್ಲಿ ಸೋಮವಾರ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದು, ಅನೇಕ ಬೈಕ್‍ಗಳು ಜಖಂಗೊಂಡಿವೆ. ಈ ದೃಶ್ಯವು ಸ್ಥಳದಲ್ಲಿದ್ದ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಹ್ಯಾಪಿ ಟಾಪ್ ಎಂಬ ಹೆಸರಿನ ಖಾಸಗಿ ಬಸ್ ಎಂಗಾಪುಝ ಪಟ್ಟಣದ ಬಸ್ ನಿಲ್ದಾಣದಿಂದ ರಾಷ್ಟ್ರೀಯ ಹೆದ್ದಾರಿ ಕಡೆಗೆ ಹೊರಟಿತ್ತು. ಈ ವೇಳೆ ಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಗೆ ನಿಂದಿದ್ದ ಬೈಕ್‍ಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಸ್ಕೂಟಿಗೆ ಗುದ್ದಿದ ಪರಿಣಾಮ ಸವಾರ ಬಸ್‍ನ ಅಡಿ ಸಿಲುಕಿ, ಸಾವು ಬದುಕಿನ ಮಧ್ಯೆ ಹೋರಾಡುತ್ತಾ ಸ್ವಲ್ಪದ ದೂರವರೆಗೆ ಬಂದಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಬಸ್ ನಿಲ್ಲಿಸುವಂತೆ ಚಾಲಕನಿಗೆ ತಿಳಿಸಿದ್ದಾರೆ. ಬಸ್ ನಿಲ್ಲುತ್ತಿದ್ದಂತೆ ಸವಾರನನ್ನು ರಕ್ಷಣೆ ಮಾಡಿದ್ದಾರೆ.

    ಅದೃಷ್ಟವಶಾತ್ ಬಸ್ ಅಡಿ ಸಿಲುಕಿದ್ದ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಘಟನೆಯಿಂದಾಗಿ ಭಯಗೊಂಡಿದ್ದ ಅವರು ಸ್ಕೂಟಿಯನ್ನು ರಸ್ತೆಯಲ್ಲಿ ಬಿಟ್ಟು ಅಂಗಡಿಯೊಂದರ ಮುಂದೆ ಬಂದು ನಿಂತರು. ಈ ದೃಶ್ಯವು ಸ್ಥಳದಲ್ಲಿದ್ದ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.