Tag: kerala

  • ಚಲಿಸುತ್ತಿದ್ದ ಜೀಪ್‍ನಿಂದ ಬಿದ್ದರೂ ಪವಾಡ ರೀತಿ ಬದಕುಳಿತು ಮಗು: ವಿಡಿಯೋ

    ಚಲಿಸುತ್ತಿದ್ದ ಜೀಪ್‍ನಿಂದ ಬಿದ್ದರೂ ಪವಾಡ ರೀತಿ ಬದಕುಳಿತು ಮಗು: ವಿಡಿಯೋ

    ತಿರುವನಂತಪುರಂ: ಚಲಿಸುತ್ತಿದ್ದ ಜೀಪ್‍ನಿಂದ ಕೆಳಗೆ ಬಿದ್ದ ಮಗುವೊಂದು ಪವಾಡ ರೀತಿ ಬದುಕುಳಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್‍ನಲ್ಲಿ ನಡೆದಿದೆ.

    ಮುನ್ನಾರ್ ಅರಣ್ಯ ಪ್ರದೇಶದಲ್ಲಿ ಭಾನುವಾರ ರಾತ್ರಿ ರಸ್ತೆ ಮೇಲೆ ತೆರಳುತ್ತಿದ್ದ ಜೀಪ್‍ನಿಂದ ಏಕಾಏಕಿ ಒಂದು ವರ್ಷದ ಹೆಣ್ಣು ಮಗುವೊಂದು ಕೆಳಗೆ ಬಿದ್ದಿದೆ. ಆದರೆ ಪೋಷಕರು ಇದನ್ನು ಗಮನಿಸದೆ ಮುಂದೆ ಸಾಗಿದ್ದಾರೆ. ರಸ್ತೆಯ ಮೇಲೆ ಬಿದ್ದಿದ್ದ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಗಾಬರಿಯಿಂದ ಅಂಬೆಗಾಲಿಡುತ್ತಾ ರಸ್ತೆ ಪಕ್ಕದಲ್ಲಿ ಬಂದು ಕುಳಿತಿತ್ತು.

    ಈ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ಸಹಾಯದಿಂದ ಮಗು ಮತ್ತೆ ಪೋಷಕರ ಮಡಿಲು ಸೇರಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಬ್ ಇನ್ಸ್‍ಸ್ಪೆಕ್ಟರ್ ಸಂತೋಷ್ ಕೆಎಂ ಅವರು, ಮಗು ಹಾಗೂ ಕುಟುಂಬಸ್ಥರು ತಮಿಳುನಾಡಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಕಲು ಹೋಗಿದ್ದರು. ಅಲ್ಲಿಂದ ಜೀಪ್‍ನಲ್ಲಿ ವಾಪಸ್ ಆಗುವಾಗ ಮಗು ಕಾಣಿಸಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ಠಾಣೆಗೆ ಬಂದು ಮಗು ಕಾಣೆಯಾಗಿದೆ ಅಂತ ದೂರು ನೀಡಿದ್ದರು. ಅಷ್ಟೋತ್ತಿಗಾಗಲೇ ಮಗು ಬಿದ್ದಿದ್ದ ಮಾರ್ಗವಾಗಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವನ್ನು ಕಂಡು ಮಾಹಿತಿ ನೀಡಿದ್ದರು. ಈ ಮೂಲಕ ಮಗು ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದೆ ಎಂದು ತಿಳಿಸಿದ್ದಾರೆ.

    ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಮಗು ರಸ್ತೆಯ ಮೇಲೆ ಬಿದ್ದು, ಅಂಬೆಗಾಲಿಡುತ್ತಾ ರಸ್ತೆ ದಾಟಿರುವುದು ಕಂಡು ಬಂದಿದೆ. ಅದೃಷ್ಟವಶಾತ್ ಚಲಿಸುತ್ತಿದ್ದ ಜೀಪ್‍ನಿಂದ ಮಗು ಬಿದ್ದಿದ್ದರೂ ಪ್ರಾಣಾಪಾಯದಿಂದ ಪಾರಾಗಿದೆ. ಆದರೆ ತಲೆ ಹಾಗೂ ದೇಹದ ಮೇಲೆ ಸಣ್ಣಪುಟ್ಟು ಗಾಯಗಳಾಗಿವೆ ಎಂದು ಸಂತೋಷ್ ಎಂಕೆ ಹೇಳಿದ್ದಾರೆ.

  • ಸಮುದ್ರದಡದಲ್ಲಿ ‘ಗಬ್ಬರ್ ಸಿಂಗ್’ ವೇಣುಗಾನ – ಅಭಿಮಾನಿಗಳು ಫಿದಾ

    ಸಮುದ್ರದಡದಲ್ಲಿ ‘ಗಬ್ಬರ್ ಸಿಂಗ್’ ವೇಣುಗಾನ – ಅಭಿಮಾನಿಗಳು ಫಿದಾ

    ತಿರುವನಂತಪುರಂ: ಟೀಂ ಇಂಡಿಯಾ ಸ್ಫೋಟಕ ಆಟಗಾರ ಶಿಖರ್ ಧವನ್ ಸಮುದ್ರದ ಬಳಿಯ ಎತ್ತರದ ಸ್ಥಳದಲ್ಲಿ ನಿಂತು ಕೊಳಲನ್ನು ನುಡಿಸುತ್ತಿರುವ ವಿಡಿಯೋವನ್ನು ತಮ್ಮ ಇನ್‍ಸ್ಟಾದಲ್ಲಿ ಪೋಸ್ಟ್ ಮಾಡಿದ್ದು, ‘ಗಬ್ಬರ್ ಸಿಂಗ್’ ಈ ವಿಡಿಯೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಶಿಖರ್ ಧವನ್‍ರ ವೇಣುಗಾನದಿಂದ ಅವರಲ್ಲಿನ ಹೊಸ ಪ್ರತಿಭೆ ಕೂಡ ತಿಳಿದು ಬಂದಿದ್ದು, ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದ ಸಮುದ್ರ ತೀರದಲ್ಲಿ ತನ್ಮಯತೆಯಿಂದ ಧವನ್ ಕೊಳಲನ್ನು ನುಡಿಸಿದ್ದಾರೆ. ತಮ್ಮ ಗುರು ವೇಣುಗೋಪಾಲ ಸ್ವಾಮಿ ಅವರ ಬಳಿ ಕಳೆದ ಮೂರು ವರ್ಷಗಳಿಂದ ತಾವು ಕೊಳಲು ನುಡಿಸುತ್ತಿರುವುದನ್ನು ಕಲಿಯುತ್ತಿರುವುದಾಗಿ ಧವನ್ ಟ್ವಿಟ್ಟರ್ ಪೋಸ್ಟಿನಲ್ಲಿ ಈ ಹಿಂದೆ ತಿಳಿಸಿದ್ದರು.

    ‘ಹೊಸ ಆರಂಭ, ಶುದ್ಧ ಗಾಳಿ, ಪಕ್ಕದಲ್ಲೇ ಸಮುದ್ರ. ಸ್ವಲ್ಪ ಸಂಗೀತ, ಮತ್ತು ಸ್ವಲ್ಪ ಆನಂದ’ ಎಂದು ಧವನ್ ತಿಳಿಸಿದ್ದಾರೆ. ಇತ್ತ ಧವನ್‍ರ ವೇಣುಗಾನಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಲ್ಲದೇ ‘ನಿಜವಾಗಲು ಇದು ನೀವೇನಾ?’ ಎಂದು ಪ್ರಶ್ನಿಸಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

    ಇತ್ತೀಚೆಗೆ ನಡೆದ ವೆಸ್ಟ್ ಇಂಡೀಸ್ ಟೂರ್ನಿಯ ಟಿ20 ಹಾಗೂ ಏಕದಿನ ಸರಣಿಯಲ್ಲಿ ಧವನ್ ಕಳಪೆ ಪ್ರದರ್ಶನ ನೀಡಿದ್ದರು. ಪರಿಣಾಮ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿತ್ತು. ಸದ್ಯ ಅವರು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಅನಧಿಕೃತ ಏಕದಿನ ಸರಣಿಯ ಅಂತಿಮ 2 ಪಂದ್ಯಗಳಿಗೆ ಟೀಂ ಇಂಡಿಯಾ ‘ಎ’ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಗಾಯದ ಸಮಸ್ಯೆಯಿಂದ ವಿಶ್ವಕಪ್‍ನಿಂದ ಹೊರ ಬಿದ್ದಿದ್ದ ಧವನ್ ಆ ಬಳಿಕ ವೆಸ್ಟ್ ಇಂಡೀಸ್ ಟೂರ್ನಿಯಲ್ಲಿ 5 ಪಂದ್ಯಗಳನ್ನ ಆಡಿದ್ದರು. 2 ಏಕದಿನ ಪಂದ್ಯದಲ್ಲಿ 38 ರನ್, 3 ಟಿ20 ಪಂದ್ಯಗಳಲ್ಲಿ 27 ರನ್ ಗಳಿಸಿದ್ದರು. ಟೀಂ ಇಂಡಿಯಾ ‘ಎ’ ತಂಡದಲ್ಲಿ ಧವನ್ ಸ್ಥಾನ ಪಡೆದಿರುವುದರಿಂದ ಉತ್ತಮ ಪ್ರದರ್ಶನ ನೀಡಿ ಮತ್ತೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗುವ ಅವಕಾಶವನ್ನು ಧವನ್ ಪಡೆದಿದ್ದಾರೆ.

    https://www.instagram.com/p/B177Yg7nVQX/

  • ಗುರುವಾಯೂರ್‌ಗೆ ನೀವು ಬಂದು ಹೋದ್ಮೇಲೆ ಕೇರಳದಲ್ಲಿ ಪ್ರವಾಹ ಬಂತು: ಮೋದಿಗೆ ರಾಹುಲ್ ಟಾಂಗ್

    ಗುರುವಾಯೂರ್‌ಗೆ ನೀವು ಬಂದು ಹೋದ್ಮೇಲೆ ಕೇರಳದಲ್ಲಿ ಪ್ರವಾಹ ಬಂತು: ಮೋದಿಗೆ ರಾಹುಲ್ ಟಾಂಗ್

    ನವದೆಹಲಿ: ನೀವು ಗುರುವಾಯೂರ್‌ಗೆ ಬಂದು ಹೋದ ಮೇಲೆಯೇ ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ಬಂತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಟ್ವೀಟಿಗೆ ಟಾಂಗ್ ಕೊಟ್ಟಿದ್ದಾರೆ.

    ಗುರುವಾಯೂರ್ ದೇವಸ್ಥಾನಕ್ಕೆ ಭೇಟಿ ಕೊಟ್ಟ ನೆನಪನ್ನು ಮೆಲುಕು ಹಾಕಿದ ಮೋದಿ ಅವರಿಗೆ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಮಾನ್ಯ ಮೋದಿ ಅವರೇ, ನೀವು ಗುರುವಾಯೂರ್ ಮಂದಿರಕ್ಕೆ ಹೋಗಿ ಬಂದ ಬಳಿಕವೇ ಕೇರಳ ಪ್ರವಾಹಕ್ಕೆ ತುತ್ತಾಯಿತು ಎಂದು ಲೇವಡಿ ಮಾಡಿದ್ದಾರೆ. ಮೋದಿ ಅವರು ಟ್ವೀಟ್ ಮಾಡಿ, ವೈಯಕ್ತಿಕವಾಗಿ ಕೇರಳ ನನಗೆ ವಿಶೇಷವಾಗಿದೆ. ಕೇರಳಕ್ಕೆ ಭೇಟಿ ನೀಡಲು ನನಗೆ ಹಲವಾರು ಅವಕಾಶಗಳು ಸಿಗುತ್ತಿದೆ. ಜನರು ಮತ್ತೊಮ್ಮೆ ನನ್ನನ್ನು ಆರಿಸಿ ನನಗೆ ದೊಡ್ಡ ಜವಾಬ್ದಾರಿಯನ್ನು ಕೊಟ್ಟು ಆಶೀರ್ವದಿಸಿದ ಬಳಿಕ ನಾನು ಮಾಡಿದ ಮೊದಲ ಕೆಲಸವೇ ಗುರುವಾಯೂರ್‌ನ ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಎಂದು ಬರೆದುಕೊಂಡು ನೆನಪನ್ನು ಮೆಲುಕು ಹಾಕಿದ್ದರು.

    2019ರ ಲೋಕಸಭಾ ಚುನಾವಣೆಯ ಭರ್ಜರಿ ಗೆಲುವು ಸಾಧಿಸಿ 2ನೇ ಬಾರಿಗೆ ಮೋದಿಯವರು ಪ್ರಧಾನಿಯಾದ ಬಳಿಕ ಕೇರಳಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಪ್ರಸಿದ್ಧ ಗುರುವಾಯೂರ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಜೊತೆಗೆ ತಾವರೆ ಹೂವುಗಳಿಂದ ತುಲಾಭಾರ ಕೂಡ ಮಾಡಿಸಿದ್ದರು.

    ಮೋದಿಯವರ ಟ್ವೀಟ್‍ಗೆ ರಾಹುಲ್ ಗಾಂಧಿ ರೀ- ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಆತ್ಮೀಯ ಮೋದಿಯವರೇ, ನೀವು ಗುರುವಾಯೂರ್‍ಗೆ ಭೇಟಿ ಕೊಟ್ಟ ನಂತರವೇ ಕೇರಳ ಒಂದು ದೊಡ್ಡ ಪ್ರವಾಹಕ್ಕೆ ತುತ್ತಾಯ್ತು. ಈಗ ಕೇರಳಕ್ಕೆ ಭೇಟಿ ಕೊಡಿ ಆಗ ಮೆಚ್ಚುತ್ತೇವೆ. ಅಲ್ಲಿ ಹಲವಾರು ಸಾವು-ನೋವುಗಳು ಸಂಭವಿಸಿವೆ. ಪ್ರವಾಹ ಪೀಡಿತ ಇತರೆ ರಾಜ್ಯಗಳಿಗೆ ಪರಿಹಾರ ನೀಡಿದಂತೆ ಕೇರಳವೂ ಈಗ ಕೇಂದ್ರದ ಪರಿಹಾರಕ್ಕಾಗಿ ಕಾಯುತ್ತಿದೆ. ಇದು ಅನ್ಯಾಯ ಎಂದು ಬರೆದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈಗಾಗಲೇ ಕೇರಳದಲ್ಲಿ ಪ್ರವಾಹದಿಂದ 125 ಮಂದಿ ಸಾವನ್ನಪ್ಪಿದ್ದಾರೆ. ಮಲಪ್ಪುರಂನಲ್ಲಿ 60, ವಯನಾಡುನಲ್ಲಿ 14 ಮಂದಿ ಬಲಿಯಾಗಿದ್ದಾರೆ. ಇದೇ ವಾರ ರಾಹುಲ್ ಅವರು ಮೂರು ದಿನಗಳ ಕಾಲ ವಯನಾಡುವಿನಲ್ಲಿ ಪ್ರವಾಸ ಕೈಗೊಂಡು, ಪ್ರವಾಹ ಎನ್ನೆಲ್ಲಾ ಹಾನಿ ಉಂಟು ಮಾಡಿದೆ ಎನ್ನುವ ಮಾಹಿತಿ ಹಾಗೂ ಜನರ ಸಂಕಷ್ಟಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೆ ಪ್ರವಾಹ ಪೀಡಿತ ಸಂತ್ರಸ್ತರಿಗೆ ಆದಷ್ಟು ಬೇಗ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

  • ಕೈಕುಲುಕಿ ರಾಹುಲ್ ಗಾಂಧಿಗೆ ಯುವಕ ಕಿಸ್- ವಿಡಿಯೋ

    ಕೈಕುಲುಕಿ ರಾಹುಲ್ ಗಾಂಧಿಗೆ ಯುವಕ ಕಿಸ್- ವಿಡಿಯೋ

    ತಿರುವನಂತಪುರಂ: ಸಂಸದ ರಾಹುಲ್ ಗಾಂಧಿಯವರು ಇಂದು ತಮ್ಮ ಕ್ಷೇತ್ರ ವಯನಾಡಿಗೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿ ಯುವಕನೊಬ್ಬ ಕೈಕುಲುಕಿ ಮುತ್ತು ಕೊಟ್ಟ ಪ್ರಸಂಗ ನಡೆದಿದೆ.

    ಹೌದು. ಕೇರಳದ ವಯನಾಡು ಸಂಸದರಾಗಿರುವ ರಾಹುಲ್ ಗಾಂಧಿಯವರು ಇತ್ತೀಚೆಗೆ ಪ್ರವಾಹಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಲು ತೆರಳಿದ್ದಾರೆ. ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಯುವಕನೊಬ್ಬ ಕಿಸ್ ಮಾಡಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ವಿಡಿಯೋದಲ್ಲೇನಿದೆ?
    ಪ್ರವಾಹಕ್ಕೀಡಾದ ಪ್ರದೇಶಗಳ ವೀಕ್ಷಣೆಗೆಂದು ರಾಹುಲ್ ಗಾಂಧಿಯವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದವರು ರಾಹುಲ್ ಗಾಂಧಿಯವರ ಕೈಕುಲುಕಿ ಸ್ವಾಗತ ಮಾಡುತ್ತಿದ್ದರು. ಇದೇ ವೇಳೆ ಬಂದ ಯುವಕ ಕೈ ಕುಲುಕಿ, ಕೂಡಲೇ ಕಾರೊಳಗಿದ್ದ ರಾಹುಲ್ ಅವರನ್ನು ಎಳೆದುಕೊಂಡು ಕೆನ್ನೆಗೆ ಕಿಸ್ ಮಾಡಿದ್ದಾನೆ. ಆದರೆ ಈ ವೇಳೆ ರಾಹುಲ್ ಗಾಂಧಿಯವರು ಯುವಕನನ್ನು ದೂರ ತಳ್ಳದೆ ನಕ್ಕಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದಾಗಿದೆ.

    ಅತೀ ಹೆಚ್ಚು ಭದ್ರತೆಯನ್ನು ಹೊಂದಿರುವ ದೇಶದ ರಾಜಕಾರಣಿಗಳ ಪೈಕಿ ರಾಹುಲ್ ಗಾಂಧಿ ಕೂಡ ಒಬ್ಬರಾಗಿದ್ದಾರೆ. ರಾಹುಲ್ ಗಾಂಧಿ ಜೊತೆ ಯಾವತ್ತೂ ಎಸ್‍ಪಿಜಿ(ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ಕಮಾಂಡೋಗಳು ಇದ್ದೇ ಇರುತ್ತಾರೆ. ರಾಹುಲ್ ಗಾಂಧಿಯವರು ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುವಾಗ ಹಾಗೂ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನಗಳ ಮಧ್ಯೆಯೇ ಇರುತ್ತಿದ್ದರು. ಇದರಿಂದ ಕಮಾಂಡೋಗಳಿಗೆ ರಾಹುಲ್ ಗೆ ರಕ್ಷಣೆ ಕೊಡಲು ಕಷ್ಟವಾಗುತಿತ್ತು.

    ಕಳೆದ ಫೆಬ್ರವರಿ ತಿಂಗಳಲ್ಲಿ ಗುಜರಾತಿನನ ವಲ್ಸದ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಹಿಳೆಯೊಬ್ಬರು ವೇದಿಕೆಯಲ್ಲೇ ರಾಹುಲ್ ಗಾಂಧಿಗೆ ಕಿಸ್ ಕೊಟ್ಟಿದ್ದರು. ಏಕಾಏಕಿ ವೇದಿಕೆ ಏರಿದ ಮಹಿಳೆ ರಾಹುಲ್ ಅವರಿಗೆ ಮುತ್ತಿಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.

  • ಅಂಗವೈಕಲ್ಯವನ್ನು ಹಿಮ್ಮೆಟ್ಟಿ ಸಾಧನೆಯ ಮೆಟ್ಟಿಲೇರಿದ ನೂರ್ ಜಲೀಲಾ

    ಅಂಗವೈಕಲ್ಯವನ್ನು ಹಿಮ್ಮೆಟ್ಟಿ ಸಾಧನೆಯ ಮೆಟ್ಟಿಲೇರಿದ ನೂರ್ ಜಲೀಲಾ

    ತಿರುವನಂತಪುರಂ: ಸಾಧನೆ ಮಾಡಲು ಮನಸ್ಸು ಇದ್ದರೆ ಸಾಕು ಯಾವುದೇ ಅಡ್ಡಿಗಳನ್ನು ಹಿಮ್ಮೆಟ್ಟಿ ಗುರಿ ತಲುಪಬಹುದು ಎನ್ನುವುದಕ್ಕೆ ಕೇರಳದ ಕೋಝಿಕೋಡ್ ಮೂಲದ 17 ವರ್ಷದ ಯುವತಿ ಉದಾಹರಣೆಯಾಗಿದ್ದಾರೆ. ಅಂಗವೈಕಲ್ಯವಿದ್ದರು ತನ್ನ ಪ್ರತಿಭೆ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.

    ಕೋಝಿಕೋಡ್ ಮೂಲದವರಾದ ನೂರ್ ಜಲೀಲಾ ಅಂಗವಿಕಲೆಯಾಗಿ ಜನಿಸಿದ್ದರೂ, ತನ್ನ ಹಾದಿಗೆ ಅಂಗವೈಕಲ್ಯ ಯಾವತ್ತೂ ಕೂಡ ಅಡ್ಡಿಯಾಗಲೇ ಇಲ್ಲ ಅನ್ನೋದಕ್ಕೆ ಸ್ಪಷ್ಟ ನಿದರ್ಶನವಾಗಿದ್ದಾರೆ.

    ಹುಟ್ಟಿನಿಂದಲೂ ಜಲೀಲಾಗೆ ಮುಂದೋಳು, ಕಾಲುಗಳು ಇಲ್ಲ. ಆದರೆ ಮೈಕ್ ಹಿಡಿದು ಮಾತಿಗೆ ನಿಂತರೆ ಸಭೆಯಲ್ಲಿ ಇದ್ದವರು ಮಂತ್ರಮುಗ್ಧವಾಗುವಂತೆ ವಾಕ್ಚಾತುರ್ಯ ಹೊಂದಿದ್ದಾರೆ. ಸಾಮಾಜಿಕ ಹೋರಾಟಗಾರ್ತಿಯಾಗಿ ಸಾಮಾಜ ಸೇವೆ ಜೊತೆಗೆ ಪ್ರೇರಣಾ ಭಾಷಣಗಳನ್ನು ಮಾಡಿ, ಹಲವರಿಗೆ ಸ್ಪೂರ್ತಿ ಆಗಿದ್ದಾರೆ. ವಯೊಲಿನ್ ಹಿಡಿದು ನುಡಿಸಲು ನಿಂತರೆ ಕೇಳುಗರನ್ನು ಸಂಗೀತ ಸುಧೆಯಲ್ಲಿ ತೇಲುವಂತೆ ಮಾಡುತ್ತಾರೆ. ಹಾಡು, ಚಿತ್ರಕಲೆ, ಭಾಷಣ ಮಾಡುವುದು ಹೀಗೆ ಬಹುಮುಖ ಪ್ರತಿಭೆಯನ್ನು ಜಲೀಲಾ ಹೊಂದಿದ್ದಾರೆ.

    ಚಿಕ್ಕ ವಯಸ್ಸಿನಲ್ಲಿದ್ದಾಗ ಒಂದು ದಿನ ಜಲೀಲಾ ಪುಸ್ತಕದಲ್ಲಿ ಬಣ್ಣ ಹಚ್ಚುತ್ತಿದ್ದರು. ಇದನ್ನು ನೋಡಿದ ಪೋಷಕರು ಮಗಳಿಗೆ ಪ್ರೋತ್ಸಾಹಿಸಿದರು. ಆಕೆಗೆ ಕಲೆಯನ್ನು ಮುಂದುವರಿಸಲು ಸಹಕರಿಸಿದರು. ಬಳಿಕ 7ನೇ ತರಗತಿಯಲ್ಲಿದ್ದಾಗ ವಯೊಲಿನ್ ನುಡಿಸುವುದನ್ನು ಕಲಿತು, ಚಿತ್ರಕಲೆ ಜೊತೆಗೆ ಸಂಗೀತವನ್ನು ಕರಗತ ಮಾಡಿಕೊಂಡು ಹಲವಾರು ಸ್ಪರ್ಧೆಗಳಲ್ಲಿ ಗೆದ್ದು ಜಲೀಲಾ ಕೀರ್ತಿ ಗಳಿಸಿದ್ದಾರೆ.

    ಸದ್ಯ ಎನ್‍ಜಿಓ ಜೊತೆಗೆ ಕೈಜೋಡಿಸಿರುವ ಜಲೀಲಾ, ತಮ್ಮಂತೆ ಅಂಗವಿಕಲರಾಗಿರುವ ಮಕ್ಕಳಿಗೆ ಸಹಾಯ ಮಾಡುತ್ತಿದ್ದಾರೆ. ಜಲೀಲಾರ ಈ ಹುಮ್ಮಸ್ಸು, ಪ್ರತಿಭೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ ಅಮೆರಿಕದ ನಾಸಾಗೆ ಭೇಟಿ ನೀಡಬೇಕು, ಮೌಂಟ್ ಎವರೆಸ್ಟ್ ಹತ್ತುಬೇಕು ಎಂಬುದು ನನ್ನ ಕನಸು ಎಂದು ಜಲೀಲಾ ಹೇಳಿಕೊಂಡಿದ್ದಾರೆ.

    ಎಲ್ಲಾ ಸರಿಯಿದ್ದರೂ ಕೂಡ ಕೆಲವರು ನಮ್ಮ ಕೈಯಲ್ಲಿ ಏನೂ ಆಗಲ್ಲ ಎಂದು ತಮ್ಮ ಕನಸಿಗೆ ಬೀಗ ಹಾಕಿಟ್ಟುಕೊಂಡು ಸುಮ್ಮನಾಗಿ ಬಿಡುತ್ತಾರೆ. ಆದರೆ ಮುಂದೋಳು, ಕಾಲುಗಳು ಇಲ್ಲದಿದ್ದರೂ ಜೀವನದಲ್ಲಿ ಹತಾಶರಾಗದೆ ತಮ್ಮಗಿದ್ದ ಸಮಸ್ಯೆಯನ್ನು ಹಿಮ್ಮೆಟ್ಟಿ ಅನೇಕರಿಗೆ ಜಲೀಲಾ ಸ್ಪೂರ್ತಿಯಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಸಾಧಕರ ಪಟ್ಟಿಗೆ ಸೇರಿದ್ದಾರೆ.

  • 7ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಶಿಕ್ಷಕ

    7ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಶಿಕ್ಷಕ

    ತಿರುವನಂತಪುರಂ: 12 ವರ್ಷದ ಬಾಲಕಿ ಮೇಲೆ ಶಿಕ್ಷಕನೇ ಅತ್ಯಾಚಾರ ಎಸಗಿದ್ದು, 7ನೇ ತರಗತಿ ವಿದ್ಯಾರ್ಥಿನಿ ಇದೀಗ ಗರ್ಭಿಣಿಯಾಗಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.

    ಕುಟುಂಬಸ್ಥರು ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋದಾಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಅತ್ಯಾಚಾರ ಎಸಗಿದ 30 ವರ್ಷದ ಶಾಲಾ ಶಿಕ್ಷಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದಾರೆ.

    ವಿದ್ಯಾರ್ಥಿನಿ ಮೇಲೆ ಸತತ ಎರಡು ತಿಂಗಳಿಂದ ಅತ್ಯಾಚಾರ ಮಾಡಲಾಗಿದ್ದು, ಈ ಕುರಿತು ಕುಟುಂಬಸ್ಥರಿಗೆ ತಿಳಿದಿಲ್ಲ. ತಪಾಸಣೆಗಾಗಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ನಂತರ ಕುಟುಂಬಸ್ಥರಿಗೆ ಹಾಗೂ ಪೊಲೀಸರಿಗೆ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಕುರಿತು ತಿಳಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತು ವಿದ್ಯಾರ್ಥಿನಿಯ ಹೇಳಿಕೆ ಪಡೆದಿದ್ದು, ತನ್ನ ಶಿಕ್ಷಕನೇ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾಳೆ. ನಾಪತ್ತೆಯಾದ ಶಿಕ್ಷಕನ ಮೇಲೆ ಅತ್ಯಾಚಾರ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

  • ಶ್ರೀಶಾಂತ್ ಮನೆಯಲ್ಲಿ ಅಗ್ನಿ ಅವಘಡ

    ಶ್ರೀಶಾಂತ್ ಮನೆಯಲ್ಲಿ ಅಗ್ನಿ ಅವಘಡ

    ತಿರುವನಂತಪುರಂ: ಭಾರತದ ತಂಡದ ಕ್ರಿಕೆಟಿಗ ಮತ್ತು ನಟ ಶ್ರೀಶಾಂತ್ ಮನೆಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.

    ಶ್ರೀಶಾಂತ್ ಅವರ ಕೇರಳದ ಕೊಚ್ಚಿಯ ಎಡಪಲ್ಲಿ ಪ್ರದೇಶದಲ್ಲಿರುವ ಮನೆಗೆ ಇಂದು ಮುಂಜಾನೆ 2 ಗಂಟೆಯ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ಹೇಳಿದ್ದಾರೆ.

    ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚರಗೊಂಡ ಅಕ್ಕಪಕ್ಕದ ಮನೆಯವರು ಅಗ್ನಿಶಾಮಕದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ನಂತರ ತಕ್ಷಣ ಸ್ಥಳಕ್ಕೆ ಬಂದ ಅಧಿಕಾರಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು ಮತ್ತು ಮನೆಯ ಗಾಜಿನ ವೆಂಟಿಲೇಟರ್ ಒಡೆದು ಮನೆಯಲ್ಲಿ ಇದ್ದವರನ್ನು ಸ್ಥಳಾಂತರ ಮಾಡಿದ್ದಾರೆ.

    ಈ ಘಟನೆಯ ಬಗ್ಗೆ ಮಾತನಾಡಿರುವ ಶ್ರೀಶಾಂತ್, ನನ್ನ ಪತ್ನಿ ಮತ್ತು ಮಕ್ಕಳು ಮೊದಲನೇ ಮಹಡಿಯಲ್ಲಿ ಇದ್ದರು. ಅ ಸಮಯದಲ್ಲಿ ನೆಲಮಹಡಿಯಲ್ಲಿ ಇರುವ ಡ್ರಾಯಿಂಗ್ ರೂಮ್‍ನಲ್ಲಿ ಸೀಲಿಂಗ್ ಫ್ಯಾನ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ. ನಾನು ಅ ಸಮಯದಲ್ಲಿ ಮನೆಯಲ್ಲಿ ಇರಲಿಲ್ಲ. ಶೂಟಿಂಗ್ ಇದ್ದ ಕಾರಣ ಮುಂಬೈಗೆ ಹೋಗಿದ್ದೆ ಎಂದು ತಿಳಿಸಿದ್ದಾರೆ.

    ಭಾರತದ ಪರ ಶ್ರೀಶಾಂತ್ 27 ಟೆಸ್ಟ್ ಮತ್ತು 53 ಏಕದಿನ ಪಂದ್ಯಗಳನ್ನು ಆಡಿ ಟೆಸ್ಟ್ ನಲ್ಲಿ 87 ಹಾಗೂ ಏಕದಿನದಲ್ಲಿ 75 ವಿಕೆಟ್ ಪಡೆದಿದ್ದಾರೆ. ಎರಡು ವಿಶ್ವಕಪ್ ವಿಜೇತ ಭಾರತ ತಂಡಗಳ ಭಾಗವಾಗಿರುವ ಶ್ರೀಶಾಂತ್ ಅವರನ್ನು 2013 ರ ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೀವಾವಧಿ ನಿಷೇಧ ಮಾಡಿತ್ತು.

    ಈ ವಾರದ ಆರಂಭದಲ್ಲಿ, ಬಿಸಿಸಿಐ ನ್ಯಾಯಮೂರ್ತಿ (ನಿವೃತ್ತ) ಡಿಕೆ ಜೈನ್ ಅವರು ಶ್ರೀಶಾಂತ್ ಅವರ ಜೀವಾವಧಿ ನಿಷೇಧವನ್ನು ಕಡಿಮೆ ಮಾಡಿ 7 ವರ್ಷಕ್ಕೆ ಇಳಿಸಿದರು. ಈ ಮೂಲಕ ಸೆಪ್ಟೆಂಬರ್ 12, 2020 ರಂದು ಶ್ರೀಶಾಂತ್ ಅವರ ಅಮಾನತು ಕೊನೆಗೊಳ್ಳಲಿದೆ.

  • ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನಟ ಕಾರ್ತಿ, ಸೂರ್ಯರಿಂದ 10 ಲಕ್ಷ ರೂ. ದೇಣಿಗೆ

    ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನಟ ಕಾರ್ತಿ, ಸೂರ್ಯರಿಂದ 10 ಲಕ್ಷ ರೂ. ದೇಣಿಗೆ

    ಚೆನ್ನೈ: ತಮಿಳು ನಟ ಸೂರ್ಯ ಹಾಗೂ ಅವರು ಸಹೋದರ ಕಾರ್ತಿ ಅವರು ಕೇರಳ ಹಾಗೂ ಕರ್ನಾಟಕ ಪ್ರವಾಹ ಸಂತ್ರಸ್ತರಿಗಾಗಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

    ಈ ವರ್ಷ ಕರ್ನಾಟಕ ಹಾಗೂ ಕೇರಳದಲ್ಲಿ ಪ್ರವಾಹ ಎದುರಾಗಿದ್ದು, ದೇಶ್ಯಾದ್ಯಂತ ಹಲವು ಜನರು ಪ್ರವಾಹ ಸಂತ್ರಸ್ತರ ನೆರವಿಗೆ ಬಂದಿದ್ದಾರೆ. ಈಗ ನಟರಾದ ಸೂರ್ಯ ಹಾಗೂ ಕಾರ್ತಿ ಪ್ರವಾಹ ಸಂತ್ರಸ್ತರಿಗಾಗಿ 10 ಲಕ್ಷ ರೂ. ಸಹಾಯಧನ ನೀಡಿದ್ದಾರೆ. ಸೂರ್ಯ ಹಾಗೂ ಕಾರ್ತಿ ಹಲವು ಚಾರಿಟಿ ಕೆಲಸಗಳನ್ನು ಮಾಡುತ್ತಿದ್ದಾರೆ. ಅಲ್ಲದೆ ಕಷ್ಟದಲ್ಲಿ ಇರುವವರಿಗೆ ಸಹಾಯಧನ ನೀಡುತ್ತಾರೆ. ಕಳೆದ ವರ್ಷ ಕೇರಳದಲ್ಲಿ ಆದ ಪ್ರವಾಹಕ್ಕೆ ಕಾರ್ತಿ ಸ್ವತಃ ಸಿಎಂ ಅವರನ್ನು ಭೇಟಿ ಮಾಡಿ 25 ಲಕ್ಷ ರೂ. ಚೆಕ್ ನೀಡಿದ್ದರು.

    ಇತ್ತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಗುರುವಾರ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದರು. ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಅವರು ಸಂತ್ರಸ್ತರಿಗಾಗಿ 5 ಲಕ್ಷ ರೂ. ಚೆಕ್ ನೀಡಿದ್ದರು.

    ರಿಯಲ್ ಸ್ಟಾರ್ ಉಪೇಂದ್ರ ಅವರು ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ಸಹಾಯಧನ ನೀಡಿದ್ದರು. ಈ ಬಗ್ಗೆ ಉಪೇಂದ್ರ ಅವರು ತಮ್ಮ ಟ್ವಿಟ್ಟರಿನಲ್ಲಿ, “ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದರು.

  • ಸಂತ್ರಸ್ತರಿಗೆ ಗೋಡಾನಿನಲ್ಲಿದ್ದ ಬಟ್ಟೆಗಳನ್ನು ಕಳುಹಿಸಿದ ವ್ಯಾಪಾರಿ

    ಸಂತ್ರಸ್ತರಿಗೆ ಗೋಡಾನಿನಲ್ಲಿದ್ದ ಬಟ್ಟೆಗಳನ್ನು ಕಳುಹಿಸಿದ ವ್ಯಾಪಾರಿ

    ತಿರುವನಂತಪುರಂ: ಮಹಾಮಳೆಗೆ ದೇವರನಾಡು ಕೇರಳ ತತ್ತರಿಸಿ ಹೋಗಿದೆ. ಈಗಾಗಲೇ ನೂರಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಬಲಿಯಾಗಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಎಡಬಿಡದೆ ಭೂಕುಸಿತ ಸಂಭವಿಸುತ್ತಿದ್ದು. ಜನರು ಕಂಗಾಲಾಗಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಪ್ರವಾಹ ಸಂತ್ರಸ್ತರಿಗೆ ಗಾರ್ಮೆಂಟ್ಸ್ ವ್ಯಾಪಾರಿಯೊಬ್ಬರು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

    ಪ್ರವಾಹದಿಂದ ಉಂಟಾಗಿರುವ ಅನಾಹುತಗಳಿಂದ ಸಾಕಷ್ಟು ಮಂದಿ ಮನೆಮಠ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಸಂತ್ರಸ್ತರ ನೆರವಿಗಾಗಿ ಮತ್ತು ಅವರಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರ ಶಕ್ತಿಮೀರಿ ಪ್ರಯತ್ನ ನಡೆಸುತ್ತಿದೆ. ಇದರ ಜೊತೆಗೆ ಸಾವಿರಾರು ಜನರು ಸ್ವಯಂಪ್ರೇರಿತರಾಗಿ ಪರಿಹಾರ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ. ಅವರಲ್ಲಿ ಎರ್ನಾಕುಲಂನಲ್ಲಿ ಗಾರ್ಮೆಂಟ್ ವ್ಯಾಪಾರಿಯಾಗಿರುವ ನೌಶಾದ್ ಕೂಡ ಒಬ್ಬರಾಗಿದ್ದಾರೆ. ಇವರು ತಮ್ಮ ಅಂಗಡಿಗೆ ಬಂದ ಮಹಿಳೆಯರು ಮತ್ತು ಮಕ್ಕಳ ಸಿದ್ಧ ಉಡುಪುಗಳನ್ನು ನೇರವಾಗಿ ಕೇರಳ ಪ್ರವಾಹ ಸಂತ್ರಸ್ತರಿಗೆ ಕಳುಹಿಸಿಕೊಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.

    ನೌಶಾದ್ ಅವರು ತಮ್ಮ ಗಾರ್ಮೆಂಟ್ ಗೋಡಾನಿನಲ್ಲಿದ್ದ ಬಟ್ಟೆಗಳನ್ನು ಸಂತ್ರಸ್ತರಿಗೆ ಕಳುಹಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಎಲ್ಲರ ಮನ ಗೆದ್ದಿದೆ. ನಾವು ಸತ್ತಾಗ ಈ ಜಗತ್ತಿನಿಂದ ಏನನ್ನೂ ಕೊಂಡೊಯ್ಯುವುದಿಲ್ಲ. ನನ್ನ ವ್ಯಾಪಾರದಲ್ಲಿ ಬಂದ ಲಾಭವನ್ನು ಅಗತ್ಯ ಇರುವವರಿಗೆ ನೀಡುತ್ತಿದ್ದೇನೆ. ಇದರಿಂದ ನನಗೆ ನಷ್ಟವಿಲ್ಲ. ಅಗತ್ಯ ಇರುವವರಿಗೆ ಬಟ್ಟೆಗಳನ್ನು ನೀಡುವ ಮೂಲಕ ಬಕ್ರಿದ್ ಹಬ್ಬವನ್ನು ಆಚರಣೆ ಮಾಡುತ್ತಿದ್ದೇನೆ ಎಂದು ನೌಶಾದ್ ವಿಡಿಯೋದಲ್ಲಿ ತಿಳಿಸಿದ್ದಾರೆ.

    ವಿಡಿಯೋದಲ್ಲಿ, ನೌಶಾದ್ ಅವರು ಗಾರ್ಮೆಂಟ್ ಗೋಡಾನಿನಲ್ಲಿದ್ದ ಹೊಸ ಬಟ್ಟೆಗಳನ್ನು ದೊಡ್ಡ ದೊಡ್ಡ ಚೀಲಗಳಲ್ಲಿ ತುಂಬಿ ಪ್ರವಾಹ ಸಂತ್ರಸ್ತರಿಗೆ ಕಳುಹಿಸುವ ತಯಾರಿ ಮಾಡುತ್ತಿರುವ ದೃಶ್ಯಗಳು ಸೆರೆಯಾಗಿದೆ.

    ವ್ಯಾಪಾರಿಯ ಈ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಮಲಯಾಳಂ ನಟ ಮಮ್ಮುಟ್ಟಿ, ಜಯಸೂರ್ಯ ನೌಶಾದ್ ಸೇವೆಗೆ ಶ್ಲಾಘಿಸಿದ್ದಾರೆ. ಮತ್ತೊಂದೆಡೆ ಕಲಾವಿದ ಡಾವಿನ್ಸೀ ಸುರೇಶ್ ಅವರು ಕೇವಲ ಬಟ್ಟೆಗಳಿಂದಲೇ ನೌಶಾದ್ ಅವರ ಪೋಟ್ರೇಟ್ ಚಿತ್ರವನ್ನು ರಚಿಸಿ ಗೌರವ ಸಲ್ಲಿಸಿದ್ದಾರೆ.

    https://www.facebook.com/rajesh.sharma.3720/videos/2467443179987522/

  • ಸಹೋದರಿ ನಿಶ್ಚಿತಾರ್ಥಕ್ಕೆ ಬಂದಿದ್ದ ಯೋಧ ಭೂಕುಸಿತಕ್ಕೆ ಬಲಿ

    ಸಹೋದರಿ ನಿಶ್ಚಿತಾರ್ಥಕ್ಕೆ ಬಂದಿದ್ದ ಯೋಧ ಭೂಕುಸಿತಕ್ಕೆ ಬಲಿ

    ತಿರುವನಂತಪುರ: ಸಹೋದರಿಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಊರಿಗೆ ಬಂದಿದ್ದ ಯೋಧರೊಬ್ಬರು ಭೂಕುಸಿತಕ್ಕೆ ಬಲಿಯಾದ ಘಟನೆ ಕೇರಳದಲ್ಲಿ ನಡೆದಿದೆ.

    ವಿಷ್ಣು ವಿಜಯನ್ ಮೃತ ದುರ್ದೈವಿ ಯೋಧ. ಇವರು ಪಶ್ಚಿಮಬಂಗಾಳದ ಬೆಂಗಾಲ್ ಸ್ಯಾಪರ್ಸ್ ರೆಜಿಮೆಂಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೆಲ ದಿನಗಳ ರಜೆಯ ಮೇಲೆ ಊರಿಗೆ ವಾಪಸ್ಸಾಗಿದ್ದರು.

    ಕಳೆದ ವಾರದಲ್ಲಿ ವಿಷ್ಣು ಸಹೋದರಿಯ ನಿಶ್ಚಿತಾರ್ಥ ಕಾರ್ಯಕ್ರಮವಿತ್ತು. ಆದರೆ ಕಳೆದ ಗುರುವಾರ ರಾತ್ರಿ ಮಲಪ್ಪುರಂ ಜಿಲ್ಲೆಯ ಕವಲಪ್ಪರ ಗ್ರಾಮದಲ್ಲಿ ಭಾರೀ ಗಾತ್ರದಲ್ಲಿ ಭೂಕುಸಿತ ಉಂಟಾಗಿದೆ. ಈ ದುರ್ಘಟನೆಯಲ್ಲಿ ವಿಷ್ಣು ಹಾಗೂ ಕುಟುಂಬ ಸೇರಿ ಸರಿಸುಮಾರು 60 ಮಂದಿ ಮಣ್ಣಿನಡಿ ಸಿಲುಕಿದ್ದಾರೆ.

    ವಿಷ್ಣು, ತಂದೆ ವಿಜಯನ್, ತಾಯಿ, ಸಹೋದರಿ ಜಿಶ್ನಾ ಹಾಗೂ ಇತರ ಇಬ್ಬರು ಸಂಬಂಧಿಕರು ಮನೆಯೊಳಗಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸದ್ಯ ಇವರ ಮೃತದೇಹಕ್ಕಾಗಿ ಸತತ 4 ದಿನಗಳಿಂದ ಕಾರ್ಯಾಚರಣೆ ನಡೆದಿದ್ದು, ನಿನ್ನೆ ಮನೆಯ ಅವಶೇಷಗಳು ದೊರೆತಿವೆ. ಹೀಗಾಗಿ 6 ಮಂದಿ ಮೃತಪಟ್ಟಿರುವ ಸಾಧ್ಯತೆಗಳಿವೆ ಎಂಬುದಾಗಿ ವರದಿಯಾಗಿದೆ. ಘಟನೆಯಲ್ಲಿ ವಿಷ್ಣು ಸಹೋದರ ಜಿಷ್ಣು ಭಾರೀ ಅವಘಡದಿಂದ ಪಾರಾಗಿದ್ದಾರೆ.

    ಜಿಷ್ಣು ತನ್ನ ಗೆಳಯರೊಂದಿಗೆ ಮತ್ತೊಂದೆಡೆ ಭೂಕುಸಿತ ಉಂಟಾದ ಪ್ರದೇಶದಲ್ಲಿ ಅಲ್ಲಿನ ಜನರಿಗೆ ಸಹಾಯ ಮಾಡಲು ತೆರಳಿದ್ದರು. ಹೀಗಾಗಿ ಅವರು ಬಚಾವ್ ಆಗಿದ್ದಾರೆ. ಹೀಗೆ ಸಹಾಯ ಮಾಡಿ ತನ್ನ ಮನೆಯ ಕಡೆ ಜಿಷ್ಣು ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಭಾರೀ ಗಾತ್ರದಲ್ಲಿ ಮತ್ತೆ ಭೂ ಕುಸಿತವಾಗಿದೆ. ಪರಿಣಾಮ ಜಿಷ್ಣು ಕುಟುಂಬ ಅದರಲ್ಲಿ ಸಿಲುಕಿಕೊಂಡಿದ್ದು, ಜಿಷ್ಣು ತಮ್ಮ ಕುಟುಂಬಸ್ಥರಿಗಾಗಿ ಕಣ್ಣೀರಿಡುತ್ತಾ ಹುಡುಕಾಟ ನಡೆಸಿದ್ದಾರೆ.

    ಕೂಡಲೇ ಜಿಷ್ಣು ಗೆಳೆಯ ಎನ್‍ಡಿಆರ್‍ಎಫ್ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ತಂಡಕ್ಕೆ ಮನೆಗಳಿರುವ ಪ್ರದೇಶಗಳನ್ನು ರಾಜೇಶ್ ತೋರಿಸಿಕೊಟ್ಟರು.

    ಸೋಮವಾರ ನಾವು ವಿಷ್ಣು ಮನೆಯನ್ನು ಗುರುತಿಸಿದ್ದೇವೆ. ಮನೆಯ ಮೇಲೆ ಸಾಕಷ್ಟು ಅಡಿ ಮಣ್ಣು ಬಿದ್ದಿದೆ. ಹೀಗಾಗಿ ಮಂಗಳವಾರ ಮಣ್ಣನ್ನು ಸ್ಲ್ಯಾಬ್ ಗಳ ರೀತಿಯಲ್ಲಿ ಕಟ್ ಮಾಡಿ ಶೋಧ ಕಾರ್ಯ ಮುಂದುವರಿಸುತ್ತೇವೆ. ಇಂದು ಮೃತದೇಹಗಳನ್ನು ಹೊರತೆಗೆಯುವುದಾಗಿ ರಾಜೇಶ್ ಭರವಸೆ ನೀಡಿದ್ದಾರೆ.

    ಸದ್ಯ ಕವಲಪ್ಪರ ಪ್ರದೇಶದಲ್ಲಿ ಸೋಮವಾರ ಸುಮಾರು 19 ಮೃತದೇಹಗಳನ್ನು ಮಣ್ಣಿನಡಿಯಿಂದ ಹೊರತೆಗೆದಿದ್ದಾರೆ.