Tag: kerala

  • ಮತ್ತೆ ಅಯ್ಯಪ್ಪನ ದರ್ಶನಕ್ಕೆ ಬಂದ್ರು ಇಬ್ಬರು ಮಹಿಳೆಯರು- ಬೆಳ್ಳಂಬೆಳಗ್ಗೆ ಪ್ರತಿಭಟನೆ ಶುರು

    ಮತ್ತೆ ಅಯ್ಯಪ್ಪನ ದರ್ಶನಕ್ಕೆ ಬಂದ್ರು ಇಬ್ಬರು ಮಹಿಳೆಯರು- ಬೆಳ್ಳಂಬೆಳಗ್ಗೆ ಪ್ರತಿಭಟನೆ ಶುರು

    ತಿರುವನಂತಪುರ: ಇಂದು ಬೆಳ್ಳಂಬೆಳಗ್ಗೆ ಮತ್ತೆ ಶಬರಿಮಲೆ ಪ್ರವೇಶಿಸಲು ಮುಂದಾದ ಇಬ್ಬರು ಮಹಿಳೆಯರನ್ನು ಭಕ್ತಾಧಿಗಳು ತಡೆದು ಶಬರಿಮಲೆ ದೇವಾಲಯದ ಬಳಿ ಭಾರಿ ಪ್ರತಿಭಟನೆ ನಡೆಸಿದ್ದಾರೆ.

    ಬೆಳಗ್ಗೆ ಪಂಪಾ ಬೇಸ್ ಕ್ಯಾಂಪ್ ದಾಟಿಕೊಂಡು ಸಾಗುತ್ತಿದ್ದ ಮಹಿಳೆಯರನ್ನ ಪ್ರತಿಭಟನಾಕಾರರು ಸುತ್ತುವರೆದು, ಅಯ್ಯಪ್ಪ ದೇವಾಲಯಕ್ಕೆ ಪ್ರವೇಶಿಸದಂತೆ ತಡೆದಿದ್ದಾರೆ. ಒಟ್ಟು 9 ಮಹಿಳೆಯರ ಗುಂಪು ಶಬರಿಮಲೆ ದೇವಾಲಯ ಪ್ರವೇಶಿಸಲು ಬಂದಿದ್ದರು. ಇವರಲ್ಲಿ 30 ವರ್ಷ ವಯಸ್ಸಿನ ಈ ಇಬ್ಬರು ಮಹಿಳೆಯರು ಕೂಡ ಗುಂಪಿನಲ್ಲಿದ್ದರು ಎಂದು ವರದಿಯಾಗಿದೆ.

    ಮೊದಲು ಈ ಇಬ್ಬರು ಮಹಿಳೆಯರನ್ನು 6-7 ಪ್ರತಿಭಟನಾಕಾರರು ಬೇಸ್ ಕ್ಯಾಂಪ್ ಬಳಿ ತಡೆದಿದ್ದಾರೆ. ಬಳಿಕ ಈ ವಿಷಯ ಎಲ್ಲೆಡೆ ಹರಡುತ್ತಿದ್ದಂತೆ ಸುಮಾರು 2 ಸಾವಿರ ಪ್ರತಿಭಟನಾಕಾರರು ಶಬರಿಮಲೆ ಬೆಟ್ಟದ ಮೇಲೆ ಒಟ್ಟಾಗಿ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಅವರನ್ನು ತಡೆಯಲು ಬಂದ ಪೊಲೀಸರ ಬಳಿಯೂ ಪ್ರತಿಭಟನಾಕಾರರು ಜಗಳ ಮಾಡಿದ್ದಾರೆ. ಸದ್ಯ ಇಬ್ಬರು ಮಹಿಳೆಯರಿಗೆ ಪೊಲೀಸರು ಭದ್ರತೆ ಒದಗಿಸಿ ಪೊಲೀಸ್ ವಾಹನದಲ್ಲಿಯೇ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

    ಈ ಕುರಿತು ಕೇರಳ ಮೂಲದ ಓರ್ವ ಮಹಿಳೆ ಮಾತನಾಡಿ, ನನಗೆ ಹಲವರು ಜೀವಬೆದರಿಕೆಗಳನ್ನು ಹಾಕಿದ್ದಾರೆ. ಅವರು ನನ್ನನ್ನು ಭಯಪಡಿಸಿದರು ನಾನು ಖಂಡಿತ ವಾಪಸ್ ಹೋಗುವುದಿಲ್ಲ. ಅಲ್ಲಿ ಅಯ್ಯಪ್ಪ ಸ್ವಾಮಿ ಇದ್ದಾನೆ. ಮಹಿಳೆಯರು ದೇವಾಲಯ ಪ್ರವೇಶಿಸಲು ಅಯ್ಯಪ್ಪನಿಗೇ ಆಕ್ಷೇಪವಿಲ್ಲ. ಆದ್ರೆ ಈ ಜನರು ಯಾಕೆ ಮಹಿಳೆಯರ ವಿರುದ್ಧ ಪ್ರತಿಭಟನೆ ಮಾಡ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

    ಅಷ್ಟೇ ಅಲ್ಲದೆ ಕಳೆದ ತಿಂಗಳು ಭಾರಿ ಸುದ್ದಿಯಾಗಿದ್ದ ಶಬರಿಮಲೆ ಪ್ರವೇಶಿಸಿದ ಇಬ್ಬರು ಮಹಿಳೆಯರ ಪೈಕಿ ಒಬ್ಬರಾದ ಕನಕದುರ್ಗ ಎಂಬ ಮಹಿಳೆ ಎರಡು ವಾರದ ಬಳಿಕ ಮನೆಗೆ ವಾಪಾಸ್ ತೆರಳಿದ್ದರು. ಸೋಮವಾರದಂದು ಮನೆಗೆ ತೆರೆಳಿದ್ದ ಕನಕದುರ್ಗ ಅವರು ಶಬರಿಮಲೆ ಪ್ರವೇಶಿಸಿದಕ್ಕೆ ಅವರ ಗಂಡನ ಮನೆಯವರು ಆಕೆಯ ಮೇಲೆ ಹಲ್ಲೆ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗ ಮೇಲೆ ಅತ್ತೆಯಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

    ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗ ಮೇಲೆ ಅತ್ತೆಯಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಮೇಲೆ ಕುಟುಂಬಸ್ಥರು ಹಲ್ಲೆ ಮಾಡಿದ್ದು, ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮಹಿಳೆಯರಾದ ಬಿಂದು ಮತ್ತು ಕನಕದುರ್ಗ ಜನವರಿ 2 ರಂದು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿದ್ದರು. ದೇವಾಲಯದ ಸಂಪ್ರದಾಯವನ್ನು ಮುರಿದ ಇಬ್ಬರ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿತ್ತು. ಅಷ್ಟೇ ಅಲ್ಲದೇ ಜೀವಬೆದರಿಕೆ ಬಂದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಇಬ್ಬರನ್ನು ಕೊಚ್ಚಿ ಬಳಿಯ ಅಜ್ಞಾತ ಸ್ಥಳದಲ್ಲಿ ಇರಿಸಿದ್ದರು.

    ಕೇರಳದ ನಾಯರ್ ಸಮುದಾಯದ 39 ವರ್ಷದ ಕನಕದುರ್ಗ ಅಜ್ಞಾತ ಸ್ಥಳದಿಂದ ಮಂಗಳವಾರ ಬೆಳಗ್ಗೆ ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ. ಮನೆಗೆ ಬಂದಕೂಡಲೇ ಅತ್ತೆ ಕನಕದುರ್ಗ ತಲೆಗೆ ಹೊಡೆದಿದ್ದಾರೆ ಎನ್ನಲಾಗಿದ್ದು ಈಗ ಮಲಪ್ಪುರಂ ಜಿಲ್ಲೆಯ ಪೆರಿಂಥಲ್ಮಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮನೆಗೆ ಕನಕದುರ್ಗ ಬಂದ ಕೂಡಲೇ ಅತ್ತೆ ಮತ್ತು ಸೊಸೆ ನಡುವೆ ಜಟಾಪಟಿ ನಡೆದು, ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದು, ಅತ್ತೆ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ. ತನ್ನ ಮೇಲೆ ಸೊಸೆ ಕನಕದುರ್ಗ ಹಲ್ಲೆ ಮಾಡಿದ್ದಾಳೆ ಎಂದು ಅತ್ತೆ ಆರೋಪಿಸಿದ್ದಾರೆ.

    ದೇವಾಲಯ ಪ್ರವೇಶಿಸಿ ದೇಶವ್ಯಾಪಿ ಸುದ್ದಿಯಾಗಿದ್ದ ಕನಕದುರ್ಗ ಅವರ ಪತಿ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದರು. ಕನಕದುರ್ಗ ಮತ್ತು ನಮಗೂ ಯಾವುದೇ ಸಂಬಂಧ ಇಲ್ಲ ಎಂದು  ಕುಟುಂಬದ ಸದಸ್ಯರು ಪ್ರತಿಕ್ರಿಯಿಸಿದ್ದರು.

    ಬಿಂದು ಮತ್ತು ಕನಕದುರ್ಗ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ, ವಿಐಪಿ ಮತ್ತು ಮಾಧ್ಯಮಗಳ ಪ್ರವೇಶಕ್ಕೆ ಇರುವ ದ್ವಾರದ ಮೂಲಕ ಜ.2ರ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

    44 ವರ್ಷ ಬಿಂದು ತಲಶೇರಿಯಲ್ಲಿ ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

    ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

    ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಸೋಮವಾರ ಸಂಜೆ 6.38ರ ಸುಮಾರಿಗೆ ಕಾಣಿಸಿಕೊಂಡಿತು.

    ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯ ದರ್ಶನವಾಗುತ್ತಿದ್ದಂತೆ ಗಟ್ಟಿ ಸ್ವರದಲ್ಲಿ “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂದು ಹೇಳಿ ಜಯಘೋಷ ಮಾಡಿದರು.

    ಪ್ರತಿ ವರ್ಷ ಜನವರಿ 14 ರ ಸಂಜೆ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿ ದರ್ಶನವಾಗುತ್ತದೆ. ದೇಶದ ವಿವಿಧ ಭಾಗಗಳಿಂದ ಜಾತಿ, ಧರ್ಮ ಬೇದಭಾವವಿಲ್ಲದೆ ಆಗಮಿಸುವ ಭಕ್ತರು, ಅಯ್ಯಪ್ಪ ಸನ್ನಿಧಾನದಲ್ಲಿ ಜ್ಯೋತಿಯ ದರ್ಶನ ಪಡೆಯಲು ಎರಡು ಮೂರು ದಿನಗಳ ಮುಂಚೆಯೇ ಆಗಮಿಸುತ್ತಾರೆ.

    ಐತಿಹಾಸಿಕ ಸಾಂಪ್ರದಾಯದಂತೆ ಪಂದಳದಿಂದ ಘೋಷಯಾತ್ರೆಯ ಮೂಲಕ ತಂದ ತಿರುವಾಭರಣಗಳನ್ನು ಅಯ್ಯಪ್ಪನಿಗೆ ತೊಡಿಸಿ ದೀಪಾರಾಧನೆ ನಡೆಸಿದ ಬಳಿಕ ಮಹಾ ಮಂಗಳರಾತಿಯನ್ನು ಮಾಡಲಾಗುತ್ತದೆ. ಮಹಾ ಮಂಗಳಾರತಿ ನಡೆದ ಬಳಿಕ ಪೊನ್ನಂಬಲಮೇಡು ಬೆಟ್ಟದಲ್ಲಿ ಮೂರು ಬಾರಿ ಜ್ಯೋತಿ ಕಾಣಿಸುತ್ತದೆ.

  • ವೆಡ್ಡಿಂಗ್ ಫೋಟೋಶೂಟ್ ವೇಳೆ ಬೋಟ್ ಪಲ್ಟಿ – ವೀಡಿಯೋ ವೈರಲಾಯ್ತು!

    ವೆಡ್ಡಿಂಗ್ ಫೋಟೋಶೂಟ್ ವೇಳೆ ಬೋಟ್ ಪಲ್ಟಿ – ವೀಡಿಯೋ ವೈರಲಾಯ್ತು!

    ಕುಟ್ಟನಾಡು (ಕೇರಳ): ವೆಡ್ಡಿಂಗ್ ಫೋಟೋಶೂಟ್ ಅನ್ನೋದು ಇತ್ತೀಚಿನ ಕೆಲ ವರ್ಷಗಳಿಂದ ಟ್ರೆಂಡ್ ಆಗಿ ಬಿಟ್ಟಿದೆ. ಇದೇ ಫೋಟೋಶೂಟ್ ಮಾಡಿಸಿಕೊಳ್ಳಲು ಹೊರಟ ಕೇರಳದ ದಂಪತಿ ಬೋಟ್‍ನಿಂದ ನೀರಿಗೆ ಬಿದ್ದಿರೋ ವೀಡಿಯೋ ಈಗ ವೈರಲ್ ಆಗಿದೆ. ಆಲೆಪ್ಪಿಯ ಎಡತ್ವಾ ನಿವಾಸಿ ಡೆನ್ನಿ ಹಾಗೂ ತ್ರಿಶೂರ್ ಒಲ್ಲೂರ್ ನಿವಾಸಿ ಪ್ರಿಯಾ ರೋಸ್ ಕೆಲದಿನಗಳ ಹಿಂದಷ್ಟೇ ವಿವಾಹಿತರಾಗಿದ್ದರು.

    ಸರೋವರಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಕೇರಳದ ಕುಟ್ಟನಾಡಿಗೆ ಪೋಸ್ಟ್ ವೆಡ್ಡಿಂಗ್ ಶೂಟ್‍ಗೆಂದು ದಂಪತಿ ಬಂದಿದ್ದಾರೆ. ಕೇರಳದಲ್ಲಿ ಬೋಟ್‍ಗಳೆಂದರೆ ಭಾರೀ ಫೇಮಸ್. ಅದರಲ್ಲಿ ಸವಾರಿ ಮಾಡೋದೇ ಒಂದು ಖುಷಿ. ಅಂತಹ ಒಂದು ಪುಟ್ಟ ದೋಣಿಯಲ್ಲಿ ಪತಿ ಪತ್ನಿಯರಿಬ್ಬರು ಜಾಲಿ ರೈಡ್ ಹೊರಟಿದ್ದಾರೆ. ಜೊತೆಯಲ್ಲಿದ್ದ ಕ್ಯಾಮರಾಮೆನ್‍ಗಳು ಫೋಟೋಶೂಟ್ ಶುರು ಮಾಡಿದ್ದಾರೆ.

    ಫೋಟೋಗ್ರಾಫರ್ ಎಂದರೆ ಕೇಳಬೇಕಾ… ತನಗೆ ಇಷ್ಟವಾದ ಫೋಟೋ ಸಿಗಲು ‘ಏನೂ ಆಗಲ್ಲ, ಸ್ಮೈಲ್ ಮಾಡಿ, ಬ್ಯೂಟಿಫುಲ್, ಕೂಲ್ ಕೂಲ್, ನೈಸ್.. ನೈಸ್… ಮೇಲೆ ನೋಡಿ… ಚೆನ್ನಾಗಿದೆ’ ಎಂದೆಲ್ಲಾ ಹೇಳಿದ್ದಾರೆ.

    ಬಳಿಕ ಕ್ಯಾಮರಾಮೆನ್ ದಂಪತಿಗೆ ಬ್ಯೂಟಿಫುಲ್ ಪೋಸ್ ಎಂದು ಹೇಳಿದ್ದಾರೆ. ಕೈಯಲ್ಲಿದ್ದ ತಾವರೆ ಹೂವನ್ನು ನೀರಲ್ಲಿ ಮುಳುಗಿಸಿ ನೀರನ್ನು ಚಿಮ್ಮಿಸುವಂತೆ ಸೂಚಿಸಿದ್ದಾರೆ. ಹಾಗಾಗಿ ಪ್ರಿಯಾ ರೋಸ್ ಹೂವನ್ನು ನೀರಿನಲ್ಲಿ ಮುಳುಗಿಸುತ್ತಾರೆ. ಅಷ್ಟರಲ್ಲಾಗಲೇ ಬೋಟ್ ಸಮತೋಲನ ತಪ್ಪಿದೆ. ಪ್ರಿಯಾ ರೋಸ್ ಭಯದಿಂದ ಓ ದೇವರೇ…. ಎಂದು ಕೂಗುತ್ತಾರೆ. ಇದಾದ ಕ್ಷಣ ಮಾತ್ರದಲ್ಲಿ ಬೋಟ್ ಬಲಕ್ಕೆ ಮಗುಚಿ ಬೀಳುತ್ತದೆ. ದಂಪತಿಯಿಬ್ಬರೂ ನೀರಲ್ಲಿ ಮುಳುಗುತ್ತಾರೆ. ತಕ್ಷಣ ಪಕ್ಕಕ್ಕೆ ಬಂದ ಡೆನ್ನಿ ಪ್ರಿಯಾರನ್ನು ಎತ್ತಿ ದಡ ಹತ್ತಿಸುತ್ತಾರೆ. ಈ ದೃಶ್ಯಗಳೆಲ್ಲಾ ಕ್ಯಾಮರಾಮೆನ್ ಜಿಬಿನ್ ದೇವ್ ಅವರ ಕ್ಯಾಮರಾದಲ್ಲಿ ದೃಶ್ಯರೂಪದಲ್ಲಿ ಸೆರೆಯಾಗಿವೆ. ಅದನ್ನೀಗ ಅವರು ಯೂಟ್ಯೂಬ್‍ನಲ್ಲಿ ಅಪ್ಲೋಡ್ ಮಾಡಿದ್ದಾರೆ

    ನದಿಯ ದಂಡೆಯಲ್ಲೇ ಬೋಟ್ ಮಗುಚಿದ್ದರಿಂದ ಇಬ್ಬರೂ ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ. ಫೋಟೋ ಶೂಟ್‍ಗೆ ಹೋಗಿ ನೀರಿನಲ್ಲಿ ಮುಳುಗಿದ್ದ ದಂಪತಿ ಘಟನೆ ನಡೆದ ಬಳಿಕ ನಗುತ್ತಾ ನಿಂತಿರೋ ಫೋಟೋವೂ ಇದೆ. ಒಟ್ಟಾರೆ ಫೋಟೋಶೂಟ್ ಅವಾಂತರ ಈ ದಂಪತಿಯ ಪಾಲಿಗೆ ಪ್ರಾಣಭಯ ತಂದಿದ್ದಂತೂ ಸುಳ್ಳಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಗಡಿ ಬಂದ್ ಮಾಡಿಸಲು ಬಂದವರಿಗೆ ಮೋದಿ ಬೆಂಬಲಿಗನಿಂದ ಸಖತ್ ಕ್ಲಾಸ್!

    ಅಂಗಡಿ ಬಂದ್ ಮಾಡಿಸಲು ಬಂದವರಿಗೆ ಮೋದಿ ಬೆಂಬಲಿಗನಿಂದ ಸಖತ್ ಕ್ಲಾಸ್!

    – ಅಂಗಡಿ ಮಾಲೀಕನ ಬೈಗುಳದಿಂದ ಕಾಲ್ಕಿತ್ತ ಪ್ರತಿಭಟನಾಕಾರರು

    ಉಡುಪಿ: ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಬಂದ್‍ಗೆ ಕರೆ ಕೊಟ್ಟಿದ್ದು, ಹೀಗಾಗಿ ಮೊದಲ ದಿನವಾದ ಇಂದು ಅಂಗಡಿ ಬಂದ್ ಮಾಡಿಸಲು ಬಂದವರಿಗೆ ಮೋದಿ ಬೆಂಬಲಿಗರೊಬ್ಬರು ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.

    ಈ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ತಾಲೂಕು ಗುಜ್ಜಾಡಿಯಲ್ಲಿ ನಡೆದಿದೆ. ಅಂಗಡಿ ಮಾಲೀಕನ ಬೈಗುಳ ಕೇಳಿದ ಪ್ರತಿಭಟನಾಕಾರರು ಸ್ಥಳದಿಂದಲೇ ಕಾಲ್ಕಿತ್ತಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಅಂಗಡಿ ಮಾಲೀಕ ಏನ್ ಹೇಳಿದ್ರು..?
    ನಾನು ಮೋದಿ ಬೆಂಬಲಿಗ ಮಾತ್ರವಲ್ಲದೇ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಹೀಗಾಗಿ ನಾನು ಯಾವುದೇ ಕಾರಣಕ್ಕೂ ಬಂದ್ ಮಾಡಲ್ಲ. ಕಮ್ಯೂನಿಷ್ಟರಿಗೆ ನಾವು ಸಪೋರ್ಟ್ ಮಾಡಲ್ಲ. ನೀವು ಒಳ್ಳೆಯ ಹೋರಾಟಗಳನ್ನು ಮಾಡುತ್ತೀರಾ. ಮಾಡುವುದಿದ್ದರೆ ಶಬರಿಮಲೆಗಾಗಿ ಹೋರಾಟ ಮಾಡಿ. ಸಾವಿರ ವರ್ಷದಿಂದ ಶಬರಿಮಲೆಯಲ್ಲಿ ಪುಣ್ಯದ ಕೆಲಸ ನಡೆಯುತ್ತಿತ್ತು. ಮುಖ್ಯಮಂತ್ರಿಗಳು ಮಾಂಸ ತಿಂದು ದೇವಸ್ಥಾನಕ್ಕೆ ಹೋದಾಗ ಕಮ್ಯುನಿಸ್ಟರು ಬಂದ್ ಮಾಡಲ್ಲ. ಆದ್ರೆ ಒಳ್ಳೆಯ ಪ್ರಧಾನಿ ನಮ್ಮ ದೇಶದಲ್ಲಿದ್ದರೆ ನೀವು ಪ್ರತಿಭಟನೆಗಳನ್ನು ಮಾಡುತ್ತಿದ್ದೀರಾ ಅಂತ ಅಂಗಡಿ ಮಾಲೀಕ ಕೆಂಡಾಮಂಡಲರಾಗಿದ್ದಾರೆ.

    ಈ ವೇಳೆ ಪ್ರತಿಭಟನಾಕಾರರು ನಾವು ಮಾನವೀಯತೆಯ ದೃಷ್ಟಿಯಿಂದ ಅಂಗಡಿ ಬಂದ್ ಮಾಡಲು ಹೇಳುತ್ತಿದ್ದೇವೆ ಅಂತ ಹೇಳಿದ್ರು. ಇದರಿಂದ ಮತ್ತಷ್ಟು ಕೋಪಗೊಂಡ ಅಂಗಡಿ ಮಾಲೀಕ, ಯಾವುದು ಮಾನವೀಯತೆ..? ದೇಶದ ಬಗ್ಗೆ ಚಿಂತೆ ಮಾಡಿ. ಅದು ಮಾನವೀಯತೆ. ನರೇಂದ್ರ ಮೋದಿ ಸರ್ಕಾರ ಇಷ್ಟು ಸವಲತ್ತು ನಿಮಗೆ ಕೊಟ್ಟಿದೆ. ಬೆಲೆಯೇರಿಕೆ 2014ರಲ್ಲಿ ಎಷ್ಟು, 2019ರಲ್ಲಿ ಎಷ್ಟು ಎನ್ನುವುದನ್ನು ತಾಕತ್ತಿದ್ದರೆ ಬಂದು ಟ್ಯಾಲಿ ಮಾಡಿ ತಂದು ತೋರಿಸಿ ಅಂತ ಸವಾಲೆಸೆದರು.

    ನಮ್ಮ ದೇಶಕ್ಕೆ ಇಂತಹ ಪ್ರಧಾನಿ ಸಿಗುವುದೇ ನಮ್ಮ ಪುಣ್ಯ. ಕೇರಳಕ್ಕೆ ಹೋಗಿ ಪ್ರತಿಭಟನೆ ಮಾಡಿ. ಶಬರಿಮಲೆಗೆ ಮಾಂಸ ತಿಂದು ಹೋಗಿದ್ದಾರಲ್ವ ಅವರ ವಿರುದ್ಧ ಪ್ರತಿಭಟನೆ ಮಾಡಲು ಇವರಿಗೆ ಜೀವ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಅಂಗಡಿ ಮಾಲೀಕನ ಬೈಗುಳದಿಂದ ಪ್ರತಿಭಟನಾಕಾರರು ಸ್ಥಳದಿಂದಲೇ ಕಾಲ್ಕಿತ್ತಿದ್ದಾರೆ.

    https://www.youtube.com/watch?v=SS8oTtm00f4

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಯ್ಯಪ್ಪ ಸನ್ನಿಧಿಯ 18 ಮೆಟ್ಟಿಲುಗಳ ಎದುರಿನ ಅಶ್ವತ್ಥ ವೃಕ್ಷದಲ್ಲಿ ಆಕಸ್ಮಿಕ ಬೆಂಕಿ

    ಅಯ್ಯಪ್ಪ ಸನ್ನಿಧಿಯ 18 ಮೆಟ್ಟಿಲುಗಳ ಎದುರಿನ ಅಶ್ವತ್ಥ ವೃಕ್ಷದಲ್ಲಿ ಆಕಸ್ಮಿಕ ಬೆಂಕಿ

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿವಾದ ದೇಶಾದ್ಯಂತ ಹಲವರ ಆಕ್ರೋಶಕ್ಕೆ ಕಾರಣವಾಗಿದ್ದರೆ, ಇತ್ತ ಅಯ್ಯಪ್ಪ ಸನ್ನಿಧಿಯ 18 ಮೆಟ್ಟಿಲುಗಳ ಎದುರಿನ ಅಶ್ವತ್ಥ ವೃಕ್ಷದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

    ಅಯ್ಯಪ್ಪ ಸನ್ನಿಧಿಗೆ ಭಕ್ತರು ತೆರಳುವ ಮುನ್ನ ಇರುವ 18 ಮೆಟ್ಟಲ ಬಳಿಯ ಬೃಹತ್ ಅಶ್ವತ್ಥ ಮರಕ್ಕೂ ಭಕ್ತರು ನಮಿಸಿ ಮುಂದೇ ಸಾಗುತ್ತಾರೆ. ಆದರೆ ಇಂದು ಬೆಳಗ್ಗೆ 11.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ.

    ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಪಡೆದ ಆಗ್ನಿ ಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ಪರಿಣಾಮ ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದ ಭಕ್ತರನ್ನು ವಾಲಿಯ ನಡಪಂಥಲ್ ಬಳಿ ಕೆಲ ಸಮಯ ತಡೆಯಲಾಯಿತು. ಬೆಂಕಿ ನಂದಿಸಿದ ಬಳಿಕ ಮತ್ತೆ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

    ಮರದ ಪಕ್ಕದಲ್ಲೇ ಅಗ್ನಿ ಕುಂಡವಿದ್ದು, ಹಲವು ಶತಮಾನಗಳಿಂದ ಅಗ್ನಿ ಕುಂಡದಲ್ಲಿ ಭಕ್ತರು ಸಮರ್ಪಿಸಿದ ತುಪ್ಪ ಕಾಯಿ ಅರ್ಪಿಸುತ್ತಿದ್ದರು ಯಾವುದೇ ಅವಘಡ ನಡೆದ ಬಗ್ಗೆ ಮಾಹಿತಿ ಇಲ್ಲ. ಅಗ್ನಿ ಕುಂಡದ ಮೇಲೆ ಕೊಂಬೆಗಳು ಚಾಚಿಕೊಂಡಿದ್ದರು ಇದುವರೆಗೂ ಬೆಂಕಿಯ ತಾಪದಿಂದ ಮರಕ್ಕೆ ಯಾವುದೇ ಹಾನಿ ಆಗಿರಲಿಲ್ಲ. ಇಂತಹ ಘಟನೆ ಇದೇ ಮೊದಲ ಬಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ.

    ಶತಮಾನಗಳಿಂದ ಮಹಿಳೆಯರ ಪ್ರವೇಶಕ್ಕೆ ನಿಷೇಧವಿದ್ದ ಅಯ್ಯಪ್ಪ ಸನ್ನಿಧಿಗೆ ಜನವರಿ 1 ರಂದು ಮಹಿಳೆಯರ ಪ್ರವೇಶ ನಡೆದಿತ್ತು. ಇದಕ್ಕೆ ಕೇರಳ ಸರ್ಕಾರ ಸಂಪೂರ್ಣ ಬೆಂಬಲ ನೀಡಿತ್ತು. ಸದ್ಯ ಮರದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅಪಾಯದ ಮುನ್ಸೂಚನೆಯೇ ಎಂಬ ಆತಂಕ ಭಕ್ತರಲ್ಲಿ ಮೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಬರಿಮಲೆಗೆ ಮಹಿಳೆಯರ ಪ್ರವೇಶ: ಇಂದು ಕೇರಳ ಬಂದ್, ಘರ್ಷಣೆಗೆ 1 ಬಲಿ

    ಶಬರಿಮಲೆಗೆ ಮಹಿಳೆಯರ ಪ್ರವೇಶ: ಇಂದು ಕೇರಳ ಬಂದ್, ಘರ್ಷಣೆಗೆ 1 ಬಲಿ

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ಖಂಡಿಸಿ ಇಂದು ಕೇರಳ ಬಂದ್‍ಗೆ ಕರೆ ನೀಡಲಾಗಿದೆ. ಶಬರಿಮಲೆ ಕರ್ಮ ಸಮಿತಿ ಬಂದ್ ಗೆ ಕರೆ ನೀಡಿದ್ದು, ಬಿಜೆಪಿ, ಹಿಂದೂಪರ ಸಂಘಟನೆಗಳು, ಯುಡಿಎಫ್ ಈ ಬಂದ್‍ಗೆ ಬೆಂಬಲ ನೀಡಿದೆ.

    ಬುಧವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಲ್ಲುತೂರಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಹಿಳೆಯರ ಪ್ರವೇಶವನ್ನು ಖಂಡಿಸಿ ಶಬರಿಮಲೆ ಕರ್ಮ ಸಮಿತಿ ಕಾರ್ಯಕರ್ತ ಚಂದ್ರನ್ ಎಂಬವರು ಬುಧವಾರ ಪಂದಳಂನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಿಪಿಎಂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಪರಿಣಾಮ ಚಂದ್ರನ್ ಮೃತಪಟ್ಟಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಕೇರಳ ಸರ್ಕಾರ ತನಿಖೆಗೆ ಆದೇಶಿಸಿದೆ.

    ಕೇರಳದ ಹಲವು ಪ್ರದೇಶಗಳಲ್ಲಿ ರಸ್ತೆಯನ್ನು ತಡೆದು ಟೈರ್ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡದಲ್ಲಿ ಗಡಿಯಲ್ಲಿರುವ ಕಾಸರಗೋಡಿನಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಇಂದಿನ ಬಂದ್‍ಗೆ ಯುಡಿಎಫ್ ಸಹ ಬೆಂಬಲ ನೀಡಿದೆ.

    ಕರ್ನಾಟಕದಿಂದ ಬಸ್ ಇಲ್ಲ: ಕೇರಳದಲ್ಲಿ ಪ್ರತಿಭಟನೆಗಳು ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಕೇರಳಕ್ಕೆ ತೆರಳುವ ಎಲ್ಲ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

    ಬಿಜೆಪಿ ರಾಜ್ಯಾದ್ಯಂತ ಎರಡು ದಿನ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಪ್ರತಿಭಟನೆ ಜೋರಾಗುತ್ತಿದ್ದಂತೆ ಕೇರಳದ ವಿವಿಧ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಂದೂಡಲ್ಪಟ್ಟಿದೆ. ಕೇರಳ ಸಚಿವರ ಕಾರುಗಳಿಗೆ ಕಪ್ಪು ಬಾವುಟವನ್ನು ತೋರಿಸಿ ಪ್ರತಿಭಟಿಸಲಾಗುತ್ತಿದೆ.

    ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ, ವಿಐಪಿ ಮತ್ತು ಮಾಧ್ಯಮಗಳ ಪ್ರವೇಶಕ್ಕೆ ಇರುವ ದ್ವಾರದ ಮೂಲಕ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

    44 ವರ್ಷ ಬಿಂದು ತಲಶೇರಿಯಲ್ಲಿ ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.

    ಬೆಳಗ್ಗೆ 9 ಗಂಟೆಯ ವೇಳೆಗೆ ಮಹಿಳೆಯರಿಬ್ಬರು ದೇವಾಲಯವನ್ನು ಪ್ರವೇಶಿಸಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸಿದವು. ಇದರ ಬೆನ್ನಲ್ಲೇ ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಪ್ರತಿಕ್ರಿಯಿಸಿದ್ದರು.

    ಸಿಎಂ ಅಧಿಕೃತವಾಗಿ ಪ್ರಕಟಿಸುತ್ತಿದ್ದಂತೆ ಶಬರಿಮಲೆಯ ದೇವಾಲಯದ ಪ್ರಧಾನ ಅರ್ಚಕರು ತಾತ್ಕಾಲಿಕವಾಗಿ ಮುಚ್ಚುವ ತೀರ್ಮಾನವನ್ನು ತೆಗೆದುಕೊಂಡರು. ಅದರಂತೆ ಬೆಳಗ್ಗೆ 10.30ರ ವೇಳೆಗೆ ವೇಳೆಗೆ ದೇವಾಲಯದ ಬಾಗಿಲನ್ನು ಮುಚ್ಚಲಾಯಿತು. ಒಂದು ಗಂಟೆಯ ಕಲಶ ಶುದ್ಧಿಯ ಬಳಿಕ ದೇವಾಲಯದ ಬಾಗಿಲನ್ನು ಭಕ್ತರಿಗಾಗಿ ಮತ್ತೆ ತೆರೆಯಲಾಯಿತು.

    ಮಹಿಳೆಯರ ಪ್ರವೇಶದಿಂದ ದೇವಾಲಯ ಅಪವಿತ್ರಗೊಂಡಿದೆ. ಹೀಗಾಗಿ ಕಲಶ ಶುದ್ಧಿಗಾಗಿ ಬಂದ್ ಮಾಡಿದ್ದೇವೆ ಎಂದು ಪ್ರಧಾನ ಅರ್ಚಕರು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • #BlackDayforHindus – ಕೇರಳ ಸರ್ಕಾರದ ವಿರುದ್ಧ ಬಿಎಲ್ ಸಂತೋಷ್ ಕಿಡಿ

    #BlackDayforHindus – ಕೇರಳ ಸರ್ಕಾರದ ವಿರುದ್ಧ ಬಿಎಲ್ ಸಂತೋಷ್ ಕಿಡಿ

    ಬೆಂಗಳೂರು: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಿರುವ ಘಟನೆ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ಇದೇ ವೇಳೆ ದೇವಾಲಯದ ಪ್ರವೇಶಿಸಿದ ಮಹಿಳೆಯರ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಕಿಡಿಕಾರಿದ್ದಾರೆ.

    ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಸಂತೋಷ್ ಅವರು, ದೇವಾಲಯ ಪ್ರವೇಶಿಸಿರುವ ಮಹಿಳೆಯರು, ನಿಜವಾದ ಅಯ್ಯಪ್ಪ ಭಕ್ತರಲ್ಲ. ಹಿಂದೂ ಪರಂಪರೆ ಹಾಗೂ ಧರ್ಮ ಒಪ್ಪುವವರು ಅಲ್ಲ. ಅಲ್ಲದೇ ಮಹಿಳೆಯರ ಪರ ಪ್ರಾಮಾಣಿಕವಾಗಿ ವಾದವನ್ನು ಮಂಡಿಸುವವರು ಅಲ್ಲ ಎಂದು ತಿಳಿಸಿದ್ದಾರೆ.

    ದೇವಾಲಯ ಪ್ರವೇಶ ಮಾಡಿರುವ ಮಹಿಳೆಯರು ಮಾವೋವಾದಿಗಳಾಗಿದ್ದು, ಭಾರತದ ವೈವಿಧ್ಯತೆಯ ವಿರೋಧಿಗಳು ಹಾಗೂ ಧರ್ಮವನ್ನು ಅಫೀಮು ಎನ್ನುವವರಾಗಿದ್ದಾರೆ. ಅಲ್ಲದೇ ಭಾರತವನ್ನು ಒಡೆಯುವವರು ಮತ್ತು ಸರ್ವಾಧಿಕಾರಿ ಪ್ರಿಯರು ಎಂದು ಪ್ರಶ್ನೋತ್ತರ ಮಾದರಿಯಲ್ಲಿ ಟ್ವೀಟ್ ಮಾಡಿದ್ದಾರೆ.

    ಮತ್ತೊಂದು ಟ್ವೀಟ್ ನಲ್ಲಿ ಶಬರಿಮಲೆ ದೇವಾಲಯದ ಒಳಗೆ ಸಿಪಿಐ(ಎಂ) ಕಾರ್ಯಕರ್ತರು ಪ್ರವೇಶ ಮಾಡಲು ಕೇರಳ ಸರ್ಕಾರ ಬೆಂಬಲ ನೀಡಿದೆ ಎಂದು ಆರೋಪಿಸಿ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಶಬರಿಮಲೆಗೆ ಮಹಿಳೆಯರ ಪ್ರವೇಶವನ್ನು ಐತಿಹಾಸಿಕ ಎಂಬಂತೆ ಬಿಂಬಿಸಿರುವ ಮಾಧ್ಯಮಗಳ ವಿರುದ್ಧವೂ ಸಂತೋಷ್ ಅವರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನು ಓದಿ: ಕೊನೆಗೂ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಎಂಟ್ರಿ!

    ಅಲ್ಲದೇ ದೇವಾಲಯ ಪ್ರವೇಶ ಮಾಡಿರುವ ಮಹಿಳೆಯರಿಗೆ ಭ್ರದತೆ ನೀಡುವ ದೃಷ್ಟಿಯಿಂದ ಕೇರಳ ಪೊಲೀಸರು ಬೇರೆ ಅವರನ್ನು ಕರೆದ್ಯೊಯುತ್ತಿರುವ ವಿಡಿಯೋ ಟ್ವೀಟ್ ಮಾಡಿ, ಇದು ಮಹಿಳೆಯರಿಗೆ ನೀಡಿರುವ ಹಕ್ಕು ಮತ್ತು ಸಮಾನತೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ದೇವಾಲಯ ಪ್ರವೇಶಿಸಿದ ಮಹಿಳೆಯರು ಸಿಪಿಎಂ ಕಾರ್ಯಕರ್ತೆಯರಾಗಿದ್ದಾರೆ ಎಂದು ಹೇಳಿ #SaveSabarimala, #BlackDayforHindus ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ ಕೇರಳ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನು ಓದಿ:  ಮಹಿಳೆಯರ ಪ್ರವೇಶದಿಂದ ಮುಚ್ಚಲಾಗಿದ್ದ ಶಬರಿಮಲೆ ದೇವಾಲಯ ಮತ್ತೆ ಓಪನ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 14 ಜನರ ಪ್ರಾಣ ರಕ್ಷಿಸಿದ ಚಾಲಕ

    14 ಜನರ ಪ್ರಾಣ ರಕ್ಷಿಸಿದ ಚಾಲಕ

    – ಸುಟ್ಟು ಕರಕಲಾಯ್ತು ಟಿ.ಟಿ.ವ್ಯಾನ್

    ಮಡಿಕೇರಿ: ಕೇರಳದಿಂದ ಪ್ರವಾಸಿಗರನ್ನು ಹೊತ್ತು ಸಾಗುತ್ತಿದ್ದ ಟಿ.ಟಿ.ವ್ಯಾನ್ ಬೆಂಕಿಗೆ ಆಹುತಿಯಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದಲ್ಲಿ ನಡೆದಿದ್ದು, ಅದೃಷ್ಟವಶಾತ್ ಚಾಲಕನ ಮುಂಜಾಗ್ರತೆಯಿಂದಾಗಿ ಭಾರೀ ಅನಾಹುತ ಕೈತಪ್ಪಿದೆ.

    ಈ ಅನಾಹುತದಿಂದ ವ್ಯಾನ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದರಲ್ಲಿದ್ದ 14 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳವು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ. ಇದನ್ನು ಓದಿ: ಬಸ್ಸನ್ನು ನಿರಂತರವಾಗಿ ತನ್ನ ಲಾರಿಗೆ ಗುದ್ದಿಸಿಕೊಂಡು 70 ಜನರ ಪ್ರಾಣ ಉಳಿಸಿದ ಚಾಣಾಕ್ಷ ಚಾಲಕ

    ಆಗಿದ್ದೇನು?:
    ಕೇರಳ ನೋಂದಣಿ ಹೊಂದಿರುವ ಟಿ.ಟಿ.ವ್ಯಾನ್ ಕಾಸರಗೋಡಿನಿಂದ ಮಡಿಕೇರಿಗೆ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೊರಟಿತ್ತು. ಈ ವೇಳೆ ಜೋಡುಪಾಲ ಸಮೀಪದ ಮದೆನಾಡು ಗ್ರಾಮಕ್ಕೆ ಬರುತ್ತಿದ್ದಂತೆ ವ್ಯಾನ್‍ನ ಬಾನೆಟ್‍ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತುಕೊಂಡ ಚಾಲಕ ವ್ಯಾನ್ ಅನ್ನು ರಸ್ತೆ ಬದಿ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಬಳಿಕ ಬಾನೆಟ್ ತೆರೆದು ರಿಪೇರಿ ಮಾಡಲು ಮುಂದಾಗುತ್ತಿದ್ದಂತೆ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು, ವ್ಯಾನ್ ಹೊತ್ತಿ ಉರಿಯಲು ಆರಂಭಿಸಿದೆ.

    ಒಂದು ವೇಳೆ ಚಾಲಕ ಹೊಗೆಯನ್ನು ಗಮನಿಸದೇ ವ್ಯಾನ್ ಚಾಲನೆ ಮಾಡಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ವ್ಯಾನ್ ಗೆ ಬೆಂಕಿ ಕಾಣಿಸಿಕೊಂಡ ಕುರಿತು ಮಾಹಿತಿ ಪಡೆದ ಮಡಿಕೇರಿ ಅಗ್ನಿಶಾಮಕ ದಳವು ಎರಡು ವಾಹನ ತಂದು ಬೆಂಕಿ ನಂದಿಸಿದೆ. ವ್ಯಾನ್ ಸಂಪೂರ್ಣ ಸುಟ್ಟು ಕರಕಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv